ಮರುಜನ್ಮ: ಪ್ರಶಸ್ತಿ ಪಿ.

ಊರಾಚೆಯ ಒಂದು ನಾಲೆ. ಚಿಕ್ಕಂದಿನಲ್ಲಿ ಈಜು ಬೀಳುತ್ತಿದ್ದ, ಬಟ್ಟೆ ತೊಳೆಯೊ, ಕೆಲವರ ಎಮ್ಮೆ ತೊಳೆಯೋ.. ಹೀಗೆ ಊರ ಎಲ್ಲಾ ಕೊಳೆಗಳ ತೊಳೆಯೋ ಪವಿತ್ರ ಸ್ಥಳವದು ! ಸಂಜೆಯ ಹೊತ್ತಾಗಿದ್ದರಂದ ಬಟ್ಟೆ ತೊಳೆವ ಹೆಂಗಸರು, ಈಜು ಬೀಳೋ ಮಕ್ಕಳೂ,ಎಮ್ಮೆ ತೊಳೆಯೋ ರೈತರೂ ಮನೆ ಸೇರಿದ್ದರೆಂದು ಕಾಣುತ್ತೆ. ನಾಲೆಯ ದಡದಲ್ಲಿ ಕೂತಿದ್ದ ಈತನನ್ನು, ನಾಲೆಯಲ್ಲಿ ಪ್ರತಿಬಿಂಬಿಸುತ್ತಿದ್ದ ಕೇಸರಿ ರವಿಯನ್ನುಳಿದು ಇನ್ಯಾರೂ ಇರಲಿಲ್ಲ. ಆಗಾಗ ಬಂದು ನೇಪಥ್ಯದಲ್ಲಿ ಮರೆಯಾಗುತ್ತಿದ್ದ ಹಕ್ಕಿಗಳ ಸಾಲುಗಳು ಹಾರೋ ಹಕ್ಕಿಯಂತೆ ಸ್ವಚ್ಚಂದವಾಗಿದ್ದ ಹಿಂದಿನ ದಿನಗಳನ್ನು ನೆನಪಿಸುತ್ತಿದ್ದವು. ಒಮ್ಮೆ … Read more

ಪತ್ರಗಳು: ರಘು ಕೆ.ಟಿ.

ಜಾಹಿರಾತಿಗೆ ಅಂಕುಶ. . .  ಮಾನ್ಯರೆ, ಕೊನೆಗೂ ಆ ದಿನ ಬಂದೇಬಿಟ್ಟಿತು ನೋಡಿ.. .. ..  ಸುಳ್ಳು ಮತ್ತು ನಂಬಲಾರ್ಹವಲ್ಲದ ಜಾಹಿರಾತುಗಳನ್ನು ನೀಡಿ ಗ್ರಾಹಕರ ಕಣ್ಣಿಗೆ ಮಣ್ಣೆರಚ್ಚುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸುಲಭವಾಗಿ ಹಣಮಾಡುತ್ತಿರುವ ಬಹುರಾಷ್ಟ್ರೀಯ ಹಾಗೂ ಇತರೆ ಜಾಹಿರಾತು ಕಂಪನಿಗಳಿಗೆ ಕೇಂದ್ರೀಯ ಗ್ರಾಹಕ ರಕ್ಷಣೆ ಮಂಡಳಿಯು ಕೊನೆಗೂ ಅಂಕುಶವನ್ನು ಹಾಕಲು ನಿರ್ಧರಿಸಿರುವುದ ಸಂತೋಷದ ವಿಷಯ. ತಮ್ಮ ಉತ್ಪನ್ನಗಳನ್ನು ಮಾರಾಟಮಾಡಲು ಕಂಪನಿಗಳು ನಾನಾ ಬಗೆಯ ತಂತ್ರಗಳನ್ನು ಬಳಸಿಕೊಳ್ಳುವುದು ಸಾಮಾನ್ಯವಾಗಿದೆ. ಇದಕ್ಕೆ ಇಂಬುಕೊಡುವಂತೆ ವಿವಿಧ ಕ್ಷೇತ್ರಗಳ ದೊಡ್ಡ ದೊಡ್ಡ … Read more

ತಾಳಿ ಕಟ್ಟಿದ ಶುಭ ವೇಳೆ ….ಕೊರಳಲ್ಲಿ ಅದ್ಯಾವ ಮಾಲೆ?: ಅಮರ್ ದೀಪ್ ಪಿ.ಎಸ್.

ಅದೊಂದು ಅದ್ಭುತವಾದ ಸಿನೆಮಾ.  "ಬೆಂಕಿಯಲ್ಲಿ ಅರಳಿದ ಹೂ "   ಬಹುಶಃ 1983 ರಲ್ಲಿ ಬಂದ ಕೆ. ಬಾಲ ಚಂದರ್ ಅವರ ನಿರ್ಧೇಶನದ ಸಿನೆಮಾ ಅದು.  ತನ್ನೊಳಗಿನ ವೈಯುಕ್ತಿಕ ಆಸೆ ಮತ್ತು ಬದುಕಿನ ಕನಸು ಗಳನ್ನು ಅದುಮಿಟ್ಟುಕೊಂಡು ತನ್ನ ಕುಟುಂಬದವರ ಹಿತಕಾಗಿಯೇ ತಾನು ತನ್ನ ನಗುವನ್ನು ಜೀವಂತವಾಗಿಟ್ಟು ದುಡಿಯಲು ಸಿಟಿ ಬಸ್ಸು ಹತ್ತುವುದರಲ್ಲೇ ಕೊನೆಗೊಳ್ಳುವ ಸಿನೆಮಾದಲ್ಲಿ ಸುಹಾಸಿನಿ ಎಂಬ ಚೆಲುವೆ ತನ್ನ ಕಣ್ಣಲ್ಲೇ ನಗುವನ್ನು  ಮತ್ತು ನಗುವಿನಲ್ಲೇ ದುಃಖವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ.  ನಿಜ ಬದುಕಿನ ಹಲವರ ಸನ್ನಿವೇಶಗಳನ್ನು … Read more

ಬೆಳದಿಂಗಳ ನೋಡ: ಉಮೇಶ್ ದೇಸಾಯಿ

:೧: ಕಮಲಾಬಾಯಿ ನಿರಾಳವಾದರು ಎರಡು ದಿನಗಳಿಂದ ಬಹಳ ತಳಮಳಿಸಿದ್ದರು. ತಾವು ನೋಡಿದ ವಿಷಯ ಮೊದಲು ಯಜಮಾನರಿಗೆ ತಿಳಿಸಿದ್ದರು. ಅವರ ನೀರನ ಪ್ರತಿಕ್ರಿಯೆ ಅವರನ್ನು ನಿರುತ್ಸಾಹಗೊಳಿಸಿದರಲಿಲ್ಲ. ತಪ್ಪು ನಡೆಯುತ್ತಿದೆ ಎಂದು ಗೊತ್ತಿದ್ದೂ ನೋಡುತ್ತ ಸುಮ್ಮನೆ ಕುಳಿತುಕೊಳ್ಳುವ ಜಾಯಮಾನ ಅವರದಲ್ಲ. ಅದರಲ್ಲೂ ತಮ್ಮ ಪ್ರೀತಿಯ ಮಂಗಲಾಳ ಮಗಳು ತಪ್ಪು ಹಾದಿ ತುಳಿಯುತ್ತಿದ್ದಾಳೆ. ಇದರ ಬಗ್ಗೆ ಮಂಗಲಾಳಿಗೆ ಹೇಳಲೇಬೇಕು ಎಂದು ನಿರ್ಧರಿಸಿದರು. ಆಗಿದ್ದಿಷ್ಟೆ… ಎರಡು ದಿನದ ಹಿಂದಿನ ಮಧ್ಯಾಹ್ನ ಕಮಲಾಬಾಯಿ ಅಪಾರ್ಟಮೆಂಟಿನ ಮುಂದಿನ ಲಾನ್‌ನಲ್ಲಿ ಕುಳಿತಾಗ, ಮುಖ್ಯ ರಸ್ತೆಯ ತಿರುವಿಗೆ ಬೈಕ್ … Read more

ತಕರಾರಿನ ತರಕಾರಿ-ತಲೆನೋವಿನ ಎಳನೀರು: ಅಖಿಲೇಶ್ ಚಿಪ್ಪಳಿ

ಅತಿಸಾರದಿಂದ ಬಳಲುತ್ತಿರುವ ವ್ಯಕ್ತಿಯೊಬ್ಬ ಚಿತ್ರದುರ್ಗದ ಖಾಸಗಿ (ಹೆಸರು ನೆನಪಿಲ್ಲ) ಆಸ್ಪತ್ರೆಗೆ ದಾಖಲಾಗುತ್ತಾನೆ. ಅಲ್ಲಿನ ತಜ್ಞವೈದ್ಯರು ಒಂದು ವಾರ ಆತನಿಗೆ ಸೂಕ್ತ ಚಿಕಿತ್ಸೆ ನೀಡಿ ಬಿಡುಗಡೆ ಮಾಡುತ್ತಾರೆ. ಅತಿಸಾರದಿಂದ ಬಳಲಿದ ರೋಗಿಗೆ ಹೆಚ್ಚು-ಹೆಚ್ಚು ದ್ರವರೂಪದ ಆಹಾರಗಳನ್ನು ಸೇವಿಸಲು ಹೇಳುತ್ತಾರೆ. ಹಾಗೆಯೇ ಎಳನೀರನ್ನು ಹೆಚ್ಚು ಸೇವಿಸಿ ಎಂದೂ ಸಲಹೆ ನೀಡುತ್ತಾರೆ. ಬಿಡುಗಡೆಯಾಗಿ ಹೋದ ರೋಗಿ ಮೂರನೇ ದಿನಕ್ಕೆ ಮತ್ತೆ ವಾಪಾಸು ಬರುತ್ತಾನೆ. ಈ ಬಾರಿ ಇನ್ನೂ ಹೆಚ್ಚು ಸುಸ್ತಿನಿಂದ ಬಳಲಿರುತ್ತಾನೆ. ಮುಖ ಬಿಳಿಚಿಕೊಂಡಿರುತ್ತದೆ. ಚಿಕಿತ್ಸೆಯಲ್ಲಿ ಏನೂ ವ್ಯತ್ಯಾಸ ಆಗಿರುವುದಿಲ್ಲ ಎಂದು … Read more

ದೆಲ್ಲಿ ಚಲೋ .. : ಪ್ರಶಸ್ತಿ ಪಿ.

ಹೆಂಗಿದ್ರೂ ರಜೆಯಿದ್ಯಲ್ಲ ಬಾರೋ, ಉತ್ತರ ಭಾರತ ಸುತ್ತಬಹುದು ಅಂತ ಮೀರತ್ತಿನಲ್ಲಿದ್ದ ಮಾವ ಕರೆದಾಗ ದೇಶ ಸುತ್ತಬೇಕೆಂಬ ಬಯಕೆ ಗರಿಗೆದರಿ ನಿಂತಿತ್ತು. ದೇಶ ಸುತ್ತಬೇಕೆಂಬ ಮನ ಚಲೋ ದಿಲ್ಲಿ ಎಂದು ಹೊರಟು ನಿಂತಿತ್ತು. ದೆಲ್ಲಿಗೆಂದು ಹೊರಟಿದ್ದೆಂತು ಹೌದು. ಆದರೆ ಬೆಂಗಳೂರಿಂದ ದಿಲ್ಲಿಗೆ  2,153 ಕಿ.ಮೀಗಳ ಪಯಣ ಸುಲಭದ್ದೇನಲ್ಲ. ಸಣ್ಣವನಿದ್ದಾಗ ನಮ್ಮೂರು ಸಾಗರಕ್ಕೆ ಬರುತ್ತಿದ್ದ ರೈಲನ್ನು ದೂರದಿಂದ ನೋಡುವುದರಲ್ಲೇ ಖುಷಿ ಪಡುತ್ತಿದ್ದ ನನಗೆ ಮುಂದೊಮ್ಮೆ ಅದೇ ರೈಲಿನಲ್ಲಿ ದಿನಗಟ್ಟಲೇ ಪಯಣಿಸುವ ಭಾಗ್ಯ ಸಿಗುತ್ತೆ ಅಂತ ಕನಸಲ್ಲೂ ಅನಿಸಿರಲಿಲ್ಲ. ಯಾಕೆಂದರೆ ದೆಲ್ಲಿಗೆ … Read more

ಮತ್ತೊಂದಿಷ್ಟು ವರುಷ ಸಿಗಲಾರೆಯಾ?: ಪದ್ಮಾ ಭಟ್

                  ಸರಿಯಾಗಿ ಲೆಕ್ಕ ಹಾಕಿದ್ರೆ ಇನ್ನು ಒಂದು ತಿಂಗಳು  ಮಾತ್ರ ನಾ ನಿನ್ ಜೊತೆ ಇರೋದು..ಆಮೇಲೆ  ನೆನಪುಗಳಷ್ಟೆ.. ಏನೇ ಹೇಳು ನಿನ್ನನ್ನು ತುಂಬಾ ಮಿಸ್ ಮಾಡ್ಕೋಳ್ತೀನಿ ಕಣೇ.. ಎಂದು ರೂಂ ಮೇಟ್ ಶ್ರೇಯಾ ಹೇಳುತ್ತಿದ್ದರೆ, ನಾ ನನ್ನ ಪಾಡಿಗೆ ಅಷ್ಟೊಂದು ಲಕ್ಷ್ಯವಿಲ್ಲದೇ ಯಾವುದೋ ಪುಸ್ತಕವನ್ನು ಓದುತ್ತ ಕುಳಿತಿದ್ದೆ.. ಹೂಂ.. ಕಣೇ ನಾನೂ ನಿನ್ ಮಿಸ್ ಮಾಡ್ಕೊಳ್ತೀನಿ ಅಂತಾ ಬಾಯಿಂದ ಮಾತು ಬಂದರೂ ಓದುವ ಪುಸ್ತಕದ ಕಡೆಗೇ … Read more

ಮೂರು ಕವಿತೆಗಳು: ಶಿದ್ರಾಮ ತಳವಾರ್, ವೆಂಕಟೇಶ ನಾಯಕ್, ಲೋಕೇಶಗೌಡ ಜೋಳದರಾಶಿ

ನಾನೊಂದು ಖಾಲಿ ಸೀಸೆ ನಾನೊಂದು ಖಾಲಿ ಸೀಸೆ ಈಗ ನಾ 'ನೊಂದೆ', ಮತ್ತು ತರುವ ಮದಿರೆ ತುಂಬಿಹೆ ನನ್ನೊಳು ಪೂರ್ತಿ, ಬರೀ ಮೈಗಷ್ಟೇ ಮತ್ತು; ಮತ್ತೇನಿಲ್ಲ ದಾಹದಿ ಮದಿರೆಯ ದಾಸರು ಕೊಂಡು ಹೀರಿದರೆಲ್ಲ ನನ್ನೊಳ ಮತ್ತು ; ಮತ್ತೇನೂ ಅಷ್ಟೇ ಮತ್ತೇನಿಲ್ಲ, ದಾಹದಿ ಹೀರಿ ಮೋಹದಿ ಇವರು ಮುತ್ತಿಕ್ಕಿ ಮತ್ತೆಲ್ಲ ಹೀರಿ ಮತ್ತೂ ಮುತ್ತಿಕ್ಕಿ; ಕೊನೆಗೊಮ್ಮೆ ಬಿಸಾಕಿದರೆನ್ನ ಬೀದಿಯಲಿ ಅಷ್ಟೇ ನನ್ನೊಳು ಮತ್ತೇನಿಲ್ಲ, ತೂರಾಡುತಲಿ ಕೂಗಾಡುತಲಿ ಬೈಯುತಲಿ ನನ್ನನೂ; ಬೈಸಿಕೊಳುತಲಿ ತಮ್ಮನೂ ಕಕ್ಕುತಿಹರು ಮನದೊಳಗಣ ಕಿಚ್ಚನು ಇಷ್ಟೇ … Read more

ಸಾಮಾನ್ಯ ಜ್ಞಾನ (ವಾರ 24): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು :  ೧.    ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಆಗಿದ್ದ ಇಬ್ಬರು ಕನ್ನಡಿಗರು ಯಾರು? ೨.    ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ಎಲ್ಲಿದೆ? ೩.    ಗಾಂಧಿ ೧೯೧೯ರಲ್ಲಿ ನವ ಜೀವನ್ ಪತ್ರಿಕೆ ಸಂಪಾದಕೀಯಕ್ಕೆ ಇಳಿದರು. ಯಾವ ಭಾಷೆಯಲ್ಲಿ ಈ ಪತ್ರಿಕೆ ಇದ್ದಿತು? ೪.    ಮಹಿಳೆಯರು ಒಲಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿದ್ದು ಯಾವ ವರ್ಷ? ೫.    ಟೆಲಿಫೋನ್ ಕಂಡು ಹಿಡಿದವರು ಯಾರು? ೬.    ಮೃತ ಸಮುದ್ರ (ಡೆಡ್‌ಸೀ) ಯಾವ ದೇಶದಲ್ಲಿದೆ? ೭.    ಅಮೇರಿಕಾದ ಸಿಲಿಕಾನ್ ವ್ಯಾಲಿ ಎಂಬುದು ಏತಕ್ಕೆ … Read more

ಇಂತಿ: ಬಸವರಾಜು ಕ್ಯಾಶವಾರ

ಪ್ರೀತಿಯ ಚಂದ್ರು,   ಕಳೆದ ಹತ್ತು ವರ್ಷಗಳಿಂದ್ಲೂ ದಿನವೂ ಪುಸ್ತಕ ತೆಗೆದು ಮತ್ತೆ ಮತ್ತೆ ನೋಡ್ತಾನೇ ಇದ್ದೀನಿ, ಆದರೆ ನೀನು ಕೊಟ್ಟ ನವಿಲುಗರಿ ಮರಿ ಹಾಕಿಲ್ಲ. ಆದ್ರೆ ಇವತ್ತಲ್ಲ ನಾಳೆ ಅದು ಮರಿ ಹಾಕುತ್ತೆ ಅಂತ ಕಾಯುತ್ತಿದ್ದೇನೆ. ವಿಶೇಷ ಅಂದ್ರೆ ನಮ್ಮಿಬ್ಬರ ನಡುವೆ ಇದ್ದ ಗೆಳೆತನ ಮಾಗಿ ಪ್ರೇಮದ ಮರಿ ಹಾಕಿದೆ.   ಬೆಂಗಳೂರಿನ ಕಾಂಕ್ರೀಟ್ ಕಾಡಿನಲ್ಲೂ ಹಳ್ಳಿಯ ಆ ಹೈಸ್ಕೂಲಿನ ದಿನಗಳು, ನಮ್ಮಿಬ್ಬರ ಬಾಲ್ಯದ ಸಂತಸದ ಕ್ಷಣಗಳು ಮತ್ತೆ ಮತ್ತೆ ನೆನಪಾಗ್ತಿವೆ. ನನ್ನ ಕೋಣೆ ತುಂಬೆಲ್ಲಾ … Read more

ಸುಖದ ವ್ಯಾಧಿ: ಸುಮನ್ ದೇಸಾಯಿ

ಮುಂಝಾನೆ ನಸುಕಿನ್ಯಾಗ ಮೂಲಿಮನಿ ನಿಂಗವ್ವನ ಕೋಳಿ ಕೂಗಿದ್ದ ಕೇಳಿ ’ಪಾರು’ ಗ ಎಚ್ಚರಾತು. ದಿನಾ ಹಿಂಗ ಒದರಿ ಒದರಿ ತಂಗಳ ನಿದ್ದಿ ಕೆಡಸತಿದ್ದ ಕೋಳಿಗೆ ಹಿಡಿಶಾಪಾ ಹಾಕಿ ಮತ್ತ ಹೊಚಕೊಂಡ ಮಲಗತಿದ್ದ ಪಾರು, ಇವತ್ತ ಹಂಗ ಮಾಡಲಿಲ್ಲ. ಆವತ್ತ ತನ್ನ ಪ್ರೀತಿಯ ಅಕ್ಕನ ಊರಿಗೆ ಹೋಗೊದಿತ್ತು. ಲಗು ಲಗು ಎದ್ದು ಮಾರಿ ತೊಳಕೊಂಡು, ಅಡುಗಿ ಮನಿಗೆ ಬಂದ್ಲು. ಆಗಲೆ ಅವ್ವ ಮಗಳ ಊರಿಗೆ ಬುತ್ತಿಗೆಂತ ರೊಟ್ಟಿ, ಪಲ್ಯಾ, ಸಜ್ಜಿಗಿ ವಡಿ, ಕೆಂಪಖಾರ, ಮೊಸರನ್ನ ಎಲ್ಲಾ ಮಾಡಿ ಮುಗಿಸಿ, … Read more

ತರಾವರೀ ತರ್ಕ ಮತ್ತು ಹಾಸ್ಯ: ಎಂ.ಎಸ್. ನಾರಾಯಣ

‘ತರ್ಕ ಅಂದ್ರೇನಪ್ಪಾ?’ ಎಂದು ಬೆಳಬೆಳಗ್ಗೇನೇ ರಾಗ ಎಳೆದಳು ಮೊದಲ ಪೀಯೂಸಿ ಕಲಿಯುತ್ತಿರುವ ನನ್ನ ಮಗಳು.  ಹಾಗೆಲ್ಲಾ ಅವಳು ಸುಮ್ಮ ಸುಮ್ಮನೆ ಏನನ್ನೂ ಕೇಳುವುದಿಲ್ಲವೆಂದರಿತಿದ್ದ ನಾನು ಓದುತ್ತಿದ್ದ ಪೇಪರಿನಿಂದ ತಲೆಯೆತ್ತದೆ ‘ಯಾಕೇ?’ ಅಂದೆ. ‘ಕನ್ನಡಾ ಮ್ಯಾಮ್ ಅಸೈನ್ಮೆಂಟ್ ಕೊಟ್ಟೀದಾರಪ್ಪ, ತರ್ಕದ ಬಗ್ಗೆ ಎಸ್ಸೆ ಬರ್ಕೊಂಡೋಗ್ಬೇಕು’ ಎಂದುಲಿಯಿತು ಕಾನ್ವೆಂಟಿನಲ್ಲಿ ಕಲಿತ ನನ್ನ ಕನ್ನಡದ ಕಂದ.  ‘ತರ್ಕ ಅಂದ್ರೆ ಲಾಜಿಕ್ಕು ಕಣಮ್ಮಾ’ ಎಂದೊಡನೆ ಅಸಡ್ಡೆಯಿಂದ ‘ಓ, ಲಾಜಿಕ್ಕಾ…?’ ಎಂದವಳೇ ಪ್ರಬಂಧ ಬರೆಯಲು ಸಿದ್ಧತೆ ನಡೆಸತೊಡಗಿದಳು. ಸೀದಾ ಲ್ಯಾಪ್ಟಾಪ್ ತೆಗೆದವಳೇ ಇಂಟೆರ್ನೆಟ್ಟಿನಲ್ಲಿ ‘ಎಸ್ಸೇಸ್ … Read more

ಬೆರಳಿಲ್ಲದ ಹಕ್ಕಿಯೂ. . ಹಕ್ಕಿಯಂತ ಕವಿತೆಯೂ. . :ಸ್ಮಿತಾ ಅಮೃತರಾಜ್

ಪ್ರತಿ ನಿತ್ಯವೂ ನಮ್ಮ ಮನೆಯ ಮುಂದಿನ ಅಂಗಳದಲ್ಲಿ ಕಪ್ಪು ಬಿಳಿ ಬಣ್ಣದ ಎರಡು ಹಕ್ಕಿಗಳು, ಮೇಲೆ ಕೆಳಗೆ ಬಾಲ ಕುಣಿಸುತ್ತಾ, ಅಂಗಳದ ತುಂಬೆಲ್ಲಾ ಅದೂ ಇದೂ ಹೆಕ್ಕುತ್ತಾ ಗಹನವಾಗಿ ಅದೇನೋ ಅಳೆಯುತ್ತಿರುವಂತೆ ತುಂಬಾ ಹೊತ್ತಿನವರೆಗೂ ಓಲಾಡುತ್ತಲೇ ಇರುತ್ತವೆ. ಅದಕ್ಕೇ ಇರಬೇಕು ಆ ಹಕ್ಕಿಗಳಿಗೆ ಭೂಮಿ ತೂಗುವ ಹಕ್ಕಿ ಅಂತ  ಕರೆಯೋದು. ಆ ಜೋಡಿ ಹಕ್ಕಿಗಳಲ್ಲಿ ಒಂದಕ್ಕೆ  ಒಂದು ಕಾಲಿನಲ್ಲಿ ಬೆರಳುಗಳೇ ಇಲ್ಲ. ಹೆಣ್ಣು ಹಕ್ಕಿಯೋ? ಗಂಡು ಹಕ್ಕಿಯೋ? ಗೊತ್ತಿಲ್ಲ. ಪಾಪ! ಅದಕ್ಕೆ ಅಂಗವಿಕಲತೆ. ಆದರೂ ಬರೇ ಪಾದ … Read more

ದೇವರ ಹೆಣ ನಿಮಗೆ ಇಷ್ಟ ಅಲ್ವಾ?: ನಟರಾಜು ಎಸ್. ಎಂ.

ಒಂದೂರಲ್ಲಿ ಒಂದು ಗಟ್ಟಿಮುಟ್ಟಾದ ಆರೋಗ್ಯವಂತ ಹಸು ಕಾಡಿಗೆ ಮೇಯಲು ಹೋಗಿ ಇದ್ದಂಕ್ಕಿದ್ದಂತೆ ಕಾಡಿನಲ್ಲೇ ಸತ್ತು ಹೋಗಿರುತ್ತದೆ. ತನ್ನ ಮಾವನ ರೇಡಿಯೋ ರಿಪೇರಿಯ ಕಲೆಯನ್ನು ಒಬ್ಬ ಹುಡುಗ  ತದೇಕಚಿತ್ತದಿಂದ ನೋಡುತ್ತಾ ಕುಳಿತ್ತಿರುತ್ತಾನೆ. ಯಾರೋ ಬಂದು ಹಸು ಸತ್ತು ಹೋಗಿರುವ ಸುದ್ದಿಯನ್ನು ಆ ಹುಡುಗನ ಮಾವನಿಗೆ ತಿಳಿಸಿದಾಗ ಆ ಹುಡುಗನ ಮಾವ "ಮಗ, ತಗೋಳು ಸೈಕಲ್ ನ." ಎಂದು ಹೇಳಿ ಮನೆ ಒಳಗೆ ಹೋದವನು ಒಂದು ಚೂರಿ, ಮಚ್ಚು, ಕುಡ್ಲು, ಹಾಗು ಎರಡು ಪ್ಲಾಸ್ಟಿಕ್ ಚೀಲದೊಂದಿಗೆ ಮನೆಯಿಂದ ಹೊರಗೆ ಬರುತ್ತಾನೆ. … Read more

ಸುಷ್ಮಾ: ಕುಸುಮ ಆಯರಹಳ್ಳಿ

ಸುಮಾರು ಹನ್ನೆರಡು ವರ್ಷಗಳೇ ಕಳೆದಿರಬೇಕು. ಅದರೂ ಈ ಘಟನೆ ಮಾತ್ರ ನನ್ನ ಮನಸಿನಲ್ಲಿ ಇಂದಿಗೂ ಹಸಿ ಹಸಿಯಾಗಿದೆ. ಹತ್ತನೇ ಕ್ಲಾಸಿನವರೆಗೂ ಚಾಮರಾಜನಗರದ ಅಜ್ಜಿಮನೆಯಲ್ಲಿ ಬೆಳೆದ ನಾನು ಆಗಷ್ಟೇ ಅಪ್ಪ,ಅಮ್ಮನನ್ನೂ, ಸ್ವಂತ ಹಳ್ಳಿಯನ್ನೂ, ಪಿಯುಸಿಯನ್ನೂ ಸೇರಿದ್ದೆ. ಸುತ್ತಮುತ್ತಲ ಹಳ್ಳಿಗಳಿಗೆ ಇದ್ದದ್ದು ಅದೊಂದೇ ದೇವಲಾಪುರದ ಪಿಯು ಕಾಲೇಜು. ಬುದ್ದಿವಂತರೂ, ಒಂದಷ್ಟು ಸಾಹಿತ್ಯಾಸಕ್ತಿಯೂ ಇದ್ದ ಸುತ್ತಲ ಹಳ್ಳಿ ಹುಡುಗ-ಹುಡುಗಿಯರಲ್ಲಿ ತುಂಬ ಜನ ಇದೇ ಬ್ಯಾಚಲ್ಲಿದ್ದರು. ಹೆಚ್ಚೆಂದರೆ 100 ಜನ ವಿಧ್ಯಾರ್ಥಿಗಳಿದ್ದ, ಎರಡೇ ಕ್ಲಾಸಿನ ಆ ಕಾಲೇಜಿನಲ್ಲಿ ನಾವು ಚರ್ಚಾಸ್ಪರ್ಧೆ ಮುಂತಾದವಕ್ಕೆ ದೀಪ … Read more

ಸಂಬಂಧ: ಡಾ. ಗವಿ ಸ್ವಾಮಿ

ಬೆಂಗಳೂರಿನ ಬಿಸ್ಕೆಟ್ ಫ್ಯಾಕ್ಟರಿಯೊಂದರಲ್ಲಿ ಹೆಲ್ಪರ್ ಆಗಿದ್ದ ಇಪ್ಪತ್ತರ ವಯಸ್ಸಿನ ಸ್ವಾಮಿ ತನ್ನ ತಾತ ನಿಂಗಣ್ಣನ ಸಾವಿನ ಸುದ್ದಿ ತಿಳಿದು ಊರಿಗೆ ತಲುಪುವಷ್ಟರಲ್ಲಿ ಮಧ್ಯಾಹ್ನ ಮೂರು ಘಂಟೆಯಾಗಿತ್ತು. ನೆತ್ತಿಯ ಮೇಲೆ ಕಾರ್ಮೋಡಗಳು ಕವಿಯುತ್ತಿದ್ದವು. ಮೂರು ಮಂದಿ ತುರಾತುರಿಯಲ್ಲಿ ನಿಂಗಣ್ಣನನ್ನು ಎತ್ತಿ ತಂದು ಬಿಳಿಪಲ್ಲಕ್ಕಿಯ ಒಳಗೆ ಕೂರಿಸಿದರು. ಅತ್ತಿತ್ತ ವಾಲಾಡುತ್ತಿದ್ದ ಕುತ್ತಿಗೆಗೆ ಮೆಟರೆಕಡ್ಡಿ ಕೊಟ್ಟು ಸರಿ ಮಾಡಿದರು. ಸ್ವಾಮಿ ಒಮ್ಮೆ  ಕೆಳಗೆ ಬಾಗಿ ತಾತನನ್ನು ಕಣ್ತುಂಬಿಕೊಂಡ. ತಾತನ  ಒಟ್ಟು ಆಕಾರದಲ್ಲಿ ಏನೋ ಒಂದು ಕೊರತೆಯಿದೆ ಅನ್ನಿಸಿತು . ಯೆಸ್. ತಾತನ … Read more

ಬಸವಣ್ಣನಿಂದ ಭಗೀರಥನವರೆಗೆ: ಕೆ. ಆರ್. ಹರಿಪ್ರಸಾದ್

ಈ ಶೀರ್ಷಿಕೆ ಓದಿ ಇದೇನಿದು ವಿಚಿತ್ರವಾಗಿದೆ? ಅಂತ ನಿಮಗೆ ಅನ್ನಿಸಿದರೆ, ನಿಮ್ಮ ಅನಿಸಿಕೆ ಸರಿಯಾಗೇ ಇದೆ. ಒಬ್ಬ ಚಾರಿತ್ರಿಕ ಮನುಷ್ಯ, ಮತ್ತೊಬ್ಬ ಪುರಾಣಪುರುಷ. ಇವರಿಗೆ ಹೇಗೆ ಸಂಬಂಧ ಅನ್ನುವ ನಿಮ್ಮ ಪ್ರಶ್ನೆಗೆ ಉತ್ತರವನ್ನು ಒಂದು ಸಾಲಿನಲ್ಲಿ ಹೇಳಲು ಕಷ್ಟ. ಅರ್ಥಾತ್ ನೀವು ಮುಂದೆ ಓದಲೇಬೇಕು. ನಮ್ಮದೊಂದು ಗೆಳೆಯರ ಬಳಗವಿದೆ. ನಾವು ಅದರ ಮೂಲಕ ನಾಟಕ, ಪ್ರತಿಭಟನೆ, ಜಾಥಾ, ಪ್ರಕಟಣೆ ಇತ್ಯಾದಿ ಏನೇನೋ ಮಾಡುತ್ತಿರುತ್ತೇವೆ. ಈ ಏನೇನೋ ಮಾಡುವ ನಮಗೆ ರಂಗಭೂಮಿ ಪ್ರಧಾನ ಮಾಧ್ಯಮ. ಒಮ್ಮೆ ನಾವು ಬಸವಣ್ಣನ … Read more

ರಸವೇ ಜನನ, ವಿರಸವೇ ಮರಣ, ಸಮರಸವೇ ಜೀವನ: ವಿಶ್ವನಾಥ ಕಂಬಾಗಿ

ಬಹುಶಃ ಮನುಷ್ಯನಿಗೆ ಇನ್ನೊಂದೆರಡು ಮೆದುಳುಗಳೇನಾದರು ಇದ್ದಿದ್ದರೆ ಇಡೀ ಪೃಥ್ವಿ  ಎರಡಂತಸ್ತಿನ ಜಗತ್ತಾಗುತ್ತಿತ್ತು. ಯಾವ ಒಂದು  'ಅರಿವು' ಇರದೇ ಇರುವಾಗಿನ ಮನುಷ್ಯ ಪ್ರಾಣಿಯನ್ನು ಊಹಿಸಿಕೊಂಡಾಗ ಕಾಲ, ಸ್ಥಳ ಎರಡೂ ನಿಜಕ್ಕೂ ಶುಭ್ರವಾಗಿದ್ದವೆನೋ? ಎಂದೆನಿಸುತ್ತದೆ. ಆಗ ಮನುಷ್ಯ ಕೂಡ ಇತರೆ ಪ್ರಾಣಿಯಂತೆ ತಾನೂ ಒಂದು ಪ್ರಾಣಿ. ಎಲ್ಲರೊಳೊಂದಾಗಿ ಬದುಕಿದ ಆತ ಎಲ್ಲರಂತೆಯೇ ಬೆಳೆಯುತ್ತಿದ್ದ. ಎಲ್ಲದರ ಮಧ್ಯ ಎಲ್ಲವೂ ಆಗಿದ್ದ ಈ ಪ್ರಾಣಿಯ ಮೆದುಳು ಗಡ್ಡೆಯಲ್ಲಿ ಅದೆಂತಹ ನರಗಳು ಕವಲೊಡೆದು ಬೆಳೆದವೋ! ಆತನ ಇರುವಿಕೆಗೂ ಇತರೇ ಪ್ರಾಣಿಗಳ ಇರುವಿಕೆಯ ಮಧ್ಯ ಒಂದು … Read more

ಆ ..ಊ.. ಔಚ್.. ಗಾಯಬ್: ಅನಿತಾ ನರೇಶ್ ಮಂಚಿ

ಇದ್ದಕ್ಕಿದ್ದಂತೆ ಎಂದು ಹೇಳಲು ಸಾಧ್ಯವಿಲ್ಲದಿದ್ದರೂ  ಯಾವುದೇ ಘನ ಗಂಭೀರ ಕಾರಣಗಳಿಲ್ಲದೆ ನನ್ನ ಬಲದ  ಕೈಯ ತೋರು ಬೆರಳಿನಲ್ಲಿ ನೋವು ಕಾಣಿಸಿಕೊಂಡಿತು. ನೋವು ಎಂದರೆ ಅದೇನು ಅಂತಹ ಸಹಿಸಲಸಾಧ್ಯವಾದ ಭಯಂಕರ ನೋವೇನೂ ಅಲ್ಲ. ಆದರೆ ದಿನವಿಡೀ ನಾನಿದ್ದೇನೆ ಎಂದು ಹಣಕಿ ಇಣುಕಿ ಹೋಗುತ್ತಿತ್ತು. ಹೀಗೆ ನೋವುಗಳು ಎಲ್ಲೇ ಪ್ರಾರಂಭವಾದರೂ ನಾನು ಅದರ ಇತಿಹಾಸವನ್ನು ಕೆದಕಲು ಹೊರಡುತ್ತೇನೆ. ಅವುಗಳ ಹುಟ್ಟು, ಬೆಳವಣಿಗೆಗಳ ಬಗ್ಗೆಯೇ ಕುತೂಹಲ ನನಗೆ. ಹಾಗಾಗಿ ನೋವು ಶುರು ಆದದ್ದು  ಹೇಗೆ, ಯಾವಾಗ, ಎಷ್ಟು ಗಳಿಗೆಗೆ, ಮುಂತಾದವುಗಳಿಗೆ ಉತ್ತರ … Read more

ನಾಲ್ಕು ಕವಿತೆಗಳು: ವೈ.ಬಿ.ಹಾಲಬಾವಿ, ಮೌಲ್ಯ ಎಂ., ಸಾಬಯ್ಯ ಸಿ.ಕಲಾಲ್, ಶೀತಲ್ ವನ್ಸರಾಜ್

ಪ್ರೀತಿ ಬೆರೆಸೋಣ… ಹೇಳುವುದು ಬಹಳಷ್ಟಿದೆ ಏಳುತ್ತಿಲ್ಲ ನಾಲಿಗೆ ಸೀಳಲ್ಪಟ್ಟಿದೆ ಹೊಲಿಯಲ್ಪಟ್ಟಿವೆ ತುಟಿಗಳು ಆದರೂ; ಮಾತಾಡೋಣ ಬಾ ಗೆಳಯ ನಮ್ಮ ಎದೆಗಳಿಂದ ನೂತ ನೋವಿನ ಎಳೆಗಳಿಂದ… ಕೇಳುವುದು ಬಹಳಷ್ಟಿದೆ ಸುರಿದ ಸೀಸ ಇನ್ನೂ ಆರಿಲ್ಲ ಕಿವುಡಾಗಿವೆ ಕಿವಿಗಳು ಪಿಸುಗುಡುತ್ತಿವೆ ಸನಾತನ ಗೋಡೆಗಳು ಆದರೂ; ಆಲಿಸೋಣ ಬಾ ಗೆಳಯ ನಮ್ಮ ಎದೆಬಡಿತದ ಸದ್ದುಗಳಿಂದ… ನೋಡುವುದು ಬಹಳಷ್ಟಿದೆ ಕುರುಡಾಗಿವೆ ಕಣ್ಣುಗಳು ನೆಟ್ಟ ಅವರ ಕ್ರೂರ ನೋಟಗಳಿಂದ ಆದರೂ; ಬೆಸೆಯೋಣ ಬಾ ಗೆಳೆಯ ನಮ್ಮ ಅಂತರಂಗದ ನೋಟಗಳನ್ನು ಎದೆಗೂಡಿನಲ್ಲಿ ಬಚ್ಚಿಟ್ಟ ಕನಸುಗಳಿಂದ… ನಡೆಯುವುದು … Read more

ಸಾಮಾನ್ಯ ಜ್ಞಾನ (ವಾರ 23): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಪ್ರಥಮ ಉಪಗ್ರಹ ಆರ್ಯಭಟವನ್ನು ಯಾವ ದೇಶದ ಉಡವಣಾ ಕೇಂದ್ರದಿಂದ ಹಾರಿಬಿಡಲಾಯಿತು? ೨.    ಪಂಜಾಬ್ ರಾಜ್ಯವಾಗಿ ಆಸ್ತಿತ್ವಕ್ಕೆ ಬಂದ ವರ್ಷ ಯಾವುದು? ೩.    ಸ್ವತಂತ್ರ ಭಾರತದ ಮೊದಲ ಭಾರತೀಯ ಗವರ್ನರ್ ಜನರಲ್ ಯಾರು? ೪.    ಮೊದಲ ಭಾರತ – ಪಾಕ್ ಯುದ್ಧ ನಡೆದಾಗ ಭಾರತದ ಕಮಾಂಡರ್ ಆಗಿ ಸೇವೆಯಲ್ಲಿದ್ದ ಕನ್ನಡಿಗ ಯಾರು? ೫.    ಬನಾರಸ್ ಹಿಂದೂ ವಿಶ್ವವಿದ್ಯಾಲಯ ಎಲ್ಲಿದೆ? ೬.    ೧೯೫೭-೫೮ರ ಅವಧಿಯಲ್ಲಿ ವಿಶ್ವದಾದ್ಯಂತ ವಿಜ್ಞಾನಿಗಳು ಒಟ್ಟುಗೂಡಿ ಭೂಮಿ ಮತ್ತು ಪರಿಸರಗಳ ಅಧ್ಯಯನ ನಡೆಸಿದರು. … Read more

ಹಲೋ ಡಾಕ್ಟರ್: ಅಮರ್ ದೀಪ್ ಪಿ.ಎಸ್.

ಅದೊಂದು ಓಣಿಯಲ್ಲಿ ಆಗಾಗ ವಯಸ್ಸಿನ ಹುಡುಗರ ನಡುವೆ ಹಾಕ್ಯಾಟ, ಜಗಳ ನಡೆಯುತ್ತಿದ್ದವು. ಮತ್ತೇನಿಲ್ಲ, ರಜಾ ದಿನ ಬಂತೆಂದರೆ, ಹಬ್ಬ ಹರಿದಿನಗಳು ಬಂದವೆಂದರೆ, ಇಲ್ಲವೇ ಮದುವೆ ಸೀಜನ್ನು ಇದ್ದರೆ ಹೀಗೆ… ಅಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟು ಆಡುವ ಖಯಾಲಿ ಅವರಿಗೆ. ಅಲ್ಲಿಗೆ ಇಸ್ಪೀಟು ಆಡುವವರು ಮಾತ್ರವೇ ಆಲ್ಲ ಆಡದವರೂ ಸಹ ಇರುತ್ತಿದ್ದರು. ಹಿಂದೆ ಸಾಲ ಕೊಟ್ಟು ಆಡಿಸಲು, ಇಸ್ಪೀಟು  ಆಡಲು ಹುರಿದುಂಬಿಸಿ ಮತ್ತೆ ಮತ್ತೆ ಸಾಲಗಾರರನ್ನಾಗಿಸಲು ಅಷ್ಟೇ.  ಅದಿದ್ದದ್ದೇ ಬಿಡಿ. ಅದಲ್ಲ ನಾನು ಹೇಳುತ್ತಿದ್ದುದು ಹೀಗೆ ಆಡುತ್ತಿದ್ದ ವಯಸ್ಸಿನ … Read more

ಹೆಸರಿಡದ ಕತೆಯೊಂದು (ಭಾಗ 5): ಪ್ರಶಸ್ತಿ ಪಿ.

ಇಲ್ಲಿಯವರೆಗೆ:  ಕಿಟ್ಟಿ-ಶ್ಯಾಮ ಶಾರ್ವರಿ-ಶ್ವೇತರಿಗೆ ಬಾಲ್ಯದಿಂದಲೂ ಸ್ನೇಹ. ಕಿಟ್ಟಿ ಹತ್ತಕ್ಕೆ ಓದು ನಿಲ್ಲಿಸಿ ಗ್ಯಾರೇಜ್ ಸೇರಿದ್ರೆ ಉಳಿದವರೆಲ್ಲಾ ಓದು ಮುಂದುವರೆಸಿ ಬೇರ್ಬೇರೆ ಕೆಲಸ ಹಿಡಿಯುತ್ತಾರೆ. ಕೆಲಸವಿಲ್ಲದ ಶ್ಯಾಮನ ಒದ್ದಾಟದ ದಿನಗಳು ಮುಗಿದು ಕೊನೆಗೂ ಒಂದು ಕೆಲಸವೊಂದು ಸಿಕ್ಕಿದೆ ಅವನಿಗೆ. ಶಾರ್ವರಿಗೆ ಕಾಲೇಜಲ್ಲೇ ಒಂದು ಕಂಪೆನಿಯಲ್ಲಿ ಆಯ್ಕೆಯಾಗಿದ್ದರೆ ಶ್ವೇತ ಬಾನುಲಿ ಉದ್ಘೋಷಕಿಯಾಗುವತ್ತ ಹೆಜ್ಜೆ ಹಾಕುತ್ತಾಳೆ. ಹಿಂಗೆ ಗೆಳೆಯರದ್ದು ಒಂದೊಂದು ದಿಕ್ಕು, ಒಂದೊಂದು ಗುರಿ. ಕಾಲೇಜಲ್ಲಿದ್ದ ಶ್ಯಾಮ-ಶಾರ್ವರಿಯ ನಡುವಿನ ಸಮಾನ ಮನಸ್ಥಿತಿ, ಆಕರ್ಷಣೆಗಳು ಅವರನ್ನು ಬದುಕಿನೋಟದಲ್ಲಿ ಒಂದು ಮಾಡುತ್ತಾ ಅಥವಾ ಬದುಕನ್ನೇ … Read more

ವಿಲನ್ ಆಗ್ಬಿಟ್ರಲ್ಲೋ ರಾಧೇಶ! ಸೀತೇಶ!!: ಅಖಿಲೇಶ್ ಚಿಪ್ಪಳಿ

  [ಈ ಕತೆಯಲ್ಲಿ ಬರುವ ವ್ಯಕ್ತಿಗಳ ಹೆಸರು ಕ್ರಮವಾಗಿ ರಾಧೇಶ ಮತ್ತು ಸೀತೇಶ. ರಾಧೇಶ ಬಂಡವಾಳಶಾಹಿ ಮತ್ತು ಸೀತೇಶ ಹೋರಾಟಗಾರ. ವಾಸ್ತವಿಕತೆಯಿಂದ ತುಂಬಾ ದೂರ ನಿಂತು ಯೋಚಿಸಿದ ಪರಿಣಾಮವಾಗಿ ಇವರಿಬ್ಬರು ಖಳನಾಯಕರಾಗಿದ್ದಾರೆ. ಹೇಗಾದರೂ ಕಾರ್ಯಸಾಧನೆ ಮಾಡಬೇಕೆಂಬ  ಕಾನೂನುಬಾಹಿರವಾದ ಇವರ ಹಠಕ್ಕೆ ಬಲಿಷ್ಟವಾದ ಹಲಸಿನ ಮರ ಬಲಿಯಾಗಿದೆ. ಪೂರ್ಣಪಾಠವನ್ನು ಮುಂದೆ ಓದಿ] ಈ ಹಿಂದೆ “ಮಾವು-ಹಲಸಿನ ಮರವುಳಿಸಿದ ಕತೆ” ಎಂಬ ಲೇಖನವನ್ನು ಬರೆಯಲಾಗಿತ್ತು. ಲೇಖನ ಓದಿದ ನಂತರ ಖಾಸಗಿ ಪೆಟ್ರೋಲ್ ಬಂಕ್ ಮಾಲಿಕ ರಾಧೇಶನ ಮನ:ಪರಿವರ್ತನೆಯಾಗಬಹುದು ಎಂದು ಭಾವಿಸಲಾಗಿತ್ತು. … Read more

ಯಶಸ್ಸಿನ ಗುಟ್ಟು…ಅಧ್ಯವಸಾಯ: ಸುಮನ್ ದೇಸಾಯಿ

ನಾವು ಮಾನವ ಜನ್ಮ ತಳೆದಿದ್ದು ಒಂದೇ ರಾತ್ರಿಯಲ್ಲಲ್ಲ. ಯುಗಯುಗಾಂತರಗಳಲ್ಲಿ ಸುಮಾರು ಎಂಭತ್ನಾಕು ಕೋಟಿ ಜೀವರಾಶಿಯಾಗಿ ಪರಿವರ್ತನೆಯಾಗಿದ್ದೇವೆ,ಈ ಮಾನವ ಜನ್ಮ ಅತ್ಯಂತ ದುರ್ಲಭವಾದುದು. ನಮ್ಮ ಐದು ಬೆರಳುಗಳು ಹೇಗೆ ಸಮನಾಗಿರುವ್ದಿಲ್ಲವೋ ಹಾಗೆಯೇ ಪ್ರತಿ ಮನುಷ್ಯನ ಆಂತರಿಕ ಶಕ್ತಿಯು ಕೂಡಾ ಭಿನ್ನ ವಿಭಿನ್ನವಾಗಿರುತ್ತದೆ. ಭಗವಂತನ ದಿವ್ಯ ಸನ್ನಿಧಿಯಲ್ಲಿ ಏಕನಿಷ್ಠೆಯಿಂದ ಪ್ರಾರ್ಥನೆ ಮಾಡುವದರಿಂದ ನಮ್ಮಲ್ಲಿಯ ಆಂತರಿಕ ಶಕ್ತಿ ದ್ವಿಗುಣವಾಗುವದರ ಜೊತೆಗೆ ದೇಹಕ್ಕೆ ವಿಶೇಷ ಚೈತನ್ಯ ಲಭಿಸುತ್ತದೆ.ಹಾಗಂತ ಬರೀ ಮೂರೂ ಹೊತ್ತು ಭಗವಂತನ ಮುಂದೆ ಮಂಡಿಯೂರಿ ಪ್ರಾರ್ಥಿಸುವದರಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ನಾವುಗಳು … Read more

ಕಾನನದ ನೀರವತೆಯ ನಡುವೆ ರೈಲು ಹಳಿಗಳ ಮೇಲೊಂದು ಪಯಣ (ಕೊನೆಯ ಭಾಗ): ನಿಶಾಂತ್ ಜಿ.ಕೆ.

ಇಲ್ಲಿಯವರೆಗೆ ಆಗ್ಲೇ ನಮ್ಮ ಪಯಣ ಅಥವಾ ನಡಿಗೆ ಸ್ಟಾರ್ಟ ಆಗಿ ೪ ಘಂಟೆಗಳ ಮೇಲಾಗಿತ್ತು ಅನ್ಸುತ್ತೆ, ನಡಿತಾ ಹಾಗೇ ಮುಂದೆ ಹೋದೊರಿಗೆ ಕಣ್ಣಿಗ್ ಬಿತ್ತು ನೋಡಿ ಗೋವಾ ರಾಜ್ಯದ ಭಾಗಕ್ಕೆ ಒಳಪಟ್ಟಿದ್ದ ಒಂದು ಸಣ್ಣ ರೈಲು ನಿಲ್ದಾಣ. ಅಲ್ಲೆ ಹಳಿಗಳ ದುರಸ್ಥಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಇನ್ನೆಷ್ಟು ದೂರ ಎಂದು ವಿಚಾರಿಸಿದಾಗ   ಅವರು ಹೇಳಿದ್ದು ಕೇಳಿ ನಮ್ ಹುಡ್ಗುರೆಲ್ಲಾ ತಕ್ಷಣ ಹೌಹಾರಿ ಉಸ್ಸಪ್ಪಾ ಎಂದ್ರು..ನಾವಿನ್ನು ಆ ರೈಲ್ವೇ ಸ್ಟೇಷನ್ ಇಂದ ಸುಮಾರು ೮ ಕಿ.ಮೀ ಕ್ರಮಿಸಬೇಕಿತ್ತು. … Read more