ಫೋಟೋಗ್ರಾಫಿ: ಸೀಮಾ ಶಾಸ್ತ್ರಿ
ಸೀಮಾ ಶಾಸ್ತ್ರಿಯವರು ಉತ್ತರ ಕನ್ನಡ ಜಿಲ್ಲೆಯ ಸಿರಸಿಯವರು. ಸದ್ಯಕ್ಕೆ ಆಂಧ್ರಪ್ರದೇಶದ ಮದನಪಲ್ಲಿಯ ಫೌಂಡೇಶನ್ ಫಾರ್ ಎಕಾಲಾಜಿಕಲ್ ಸೆಕ್ಯುರಿಟಿ ಸಂಸ್ಥೆಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಫೋಟೋಗ್ರಾಫಿ ಇವರ ನೆಚ್ಚಿನ ಹವ್ಯಾಸ…
ಸೀಮಾ ಶಾಸ್ತ್ರಿಯವರು ಉತ್ತರ ಕನ್ನಡ ಜಿಲ್ಲೆಯ ಸಿರಸಿಯವರು. ಸದ್ಯಕ್ಕೆ ಆಂಧ್ರಪ್ರದೇಶದ ಮದನಪಲ್ಲಿಯ ಫೌಂಡೇಶನ್ ಫಾರ್ ಎಕಾಲಾಜಿಕಲ್ ಸೆಕ್ಯುರಿಟಿ ಸಂಸ್ಥೆಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಫೋಟೋಗ್ರಾಫಿ ಇವರ ನೆಚ್ಚಿನ ಹವ್ಯಾಸ…
ಅಂಗೈ ನೋಡಿಕೊಂಡೆ. ವಾಹ್ ಮೇರೆ ನಸೀಬ್? ಇದೇ ಡಿಶ್ ಕೇಬಲ್ ನನ್ನ ಜೀವನದ ಹೈಸಿಯತ್ ಬದಲಾಯಿಸಿಬಿಡುತ್ತಾ ? ಈಗ ನನ್ನ ಕೈಯಲ್ಲಿ ಹರಿದಾಡುತ್ತಿರುವ ದುಡ್ಡು ನೋಡಿದರೆ ಹಾಗೆ ಅನ್ನಿಸುತ್ತೆ. ಮುಂದೆ ಗೊತ್ತಿಲ್ಲ. ಆದರೆ ಇದೇ ಸ್ಪೀಡಲ್ಲಿ ನಾನೇನಾದರೂ ದುಡ್ಡು ಮಾಡಿದರೆ ಒಂದಿನ ನಾನು ನನ್ನ ಸ್ವಂತಕ್ಕೆ ಮಕಾನ್ ಮಾಡ್ಕೊಬೋದು, ಮತ್ತು ಜೀರ್ಣವಾಗಿಸಿ ಹೂ….. ಮತ್ತೇನಿದೆ ನಿನ್ನ ತಾಕತ್ತಿಗೆ ನನ್ನ ಚೀಲ ತುಂಬಿಸಲು ಎನ್ನುವಂತೆ ಸವುಂಡೆ ಮಾಡದೇ ಸಂಕಟ ನೀಡುವ ಪೇಟ್ ಕಾ ಸವಾಲ್ ಹಮೇಶಾ ಇದ್ದೇ ಇರುತ್ತೆ. … Read more
ಮುಂಜ ಮುಂಜಾನೆ ಒಳ್ಳೆ ಸಕ್ಕರಿ ನಿದ್ದಿಯೊಳಗ ಕನಸ ಕಾಣ್ಲಿಕತ್ತಾಗ ನನ್ನ ಫೋನು ಒದರಲಿಕ್ಕೆ ಶುರು ಹಚ್ಚಿಗೊಂಡು ನನಗ ಒದ್ದು ಎಬ್ಬಿಸ್ತು. ಹೊತ್ತಿಲ್ದ ಹೊತ್ತ್ನ್ಯಗ ಫೋನ್ ಮಾಡಾಂವ್ ಅಂದ್ರ ಪ್ರಶಾಂತ ನ್ನ ಬಿಟ್ಟು ಬ್ಯಾರೆ ಯಾರೂ ಇರ್ಲಿಕ್ಕೆ ಸಾಧ್ಯ ಇಲ್ಲ ಅಂತ ಕನಸಿನ್ಯಾಗನ ಡಿಸೈಡ್ ಮಾಡಿ ಎದ್ದು ನೋಡಿದ್ರ, ಅದು ಅವಂದ ಫೋನು! "ಹೇಳಪಾ…" ಅಂದದ್ದಕ್ಕ, "ಯಾಕ್ರೀ ಸರ್ರ್ ಇನ್ನೂ ಮಲಗಿದ್ರೇನು" ಅಂತ ಹೇಳಿ ನಿದ್ದಿ ಕೆಟ್ಟಿದ್ದಕ್ಕ ಸಿಟ್ಟಿನ್ಯಾಗ ಬುಸಗುಡಕೋತ ಎದ್ದಂವ್ ಗ ಮತ್ತೊಂದಿಷ್ಟು ಸಿಟ್ಟು ಬರ್ಸಿದಾ. "ಇಲ್ಲಪಾ… … Read more
“ಇಲ್ರೀ, ಇದೊಂದ್ ವಿಷ್ಯದಾಗ ತಲಿ ಹಾಕಬ್ಯಾಡ್ರೀ..” “ಸರಿಯವ್ವಾ, ನಿನ್ನ ಬಂಧುಬಳಗ, ಕುಲಸ್ಥರು, ದೈವಸ್ಥರು ಹೇಳಿದ್ದಕ್ಕೇ ನೀ ಒಪ್ಪಿಲ್ಲ. ಇನ್ನು ನನ್ನ ಮಾತಿಗೆ ಒಪ್ಪಿಕ್ಯಂತೀ ಅಂತ ನಾ ಏನೂ ಅನ್ಕಂಡಿಲ್ಲ. ಆದ್ರ ದುರ್ಗಾಶಕ್ತಿ ಅಂತ ಒಬ್ಬಾಕಿ ಅದಾಳ ನೋಡು, ಆಕೀದು ಅಭಿಪ್ರಾಯ ಕೇಳಬೇಕಲ್ಲಾ..” “ಅಂದ್ರ, ದುರುಗಮ್ಮನ ಗುಡೀಮುಂದ, ಪೂಜಾರಪ್ಪನೆದುರಿಗೆ ಹಾರ ಹಿಡ್ಕೊಂಡು ನಿಂದ್ರು ಅಂತ ಹೇಳಾಕ್ಹತ್ತೀರಿ ಹೌದಿಲ್ಲೋ..? ಆತು ಬಿಡ್ರೀ..ನಂಗೇನ್ ಅಭ್ಯಂತರ ಇಲ್ಲ. ನೋಡು ಪೂಜಾರಣ್ಣ, ಇದಾ ಮಂಗಳವಾರ ಹೂವಿನಹಾರ ತಗೊಂಡು ಗುಡಿ ಮುಂದ ಶರಣಾಗ್ತೀನಿ. ಅದೇನ್ ಮಾತು … Read more
ಗುಡುಗುಮ್ಮ ಬಂದ ಹೆಡಿಗೆ ತಂದಾ ಅಕ್ಕಿ ಬ್ಯಾಡಂತೆ ಭತ್ತ ಬ್ಯಾಡಂತೆ ನೀನೇ ಬೇಕಂತೆ!!! ಇಂತದೊಂದು ದಾಟಿಯನ್ನು ಹೇಳಿ ಅಳುವ ಮಕ್ಕಳನ್ನು ಸಂತೈಸುವ ಪ್ರಯತ್ನವನ್ನು ಮಲೆನಾಡಿನ ಹಳ್ಳಿಗಾಡುಗಳಲ್ಲಿ ಕಾಣಬಹುದಿತ್ತು. ನಮಗೂ ಈ ಹಾಡನ್ನು ಹೇಳಿ ಹೆದರಿಸಿ ಸಂತೈಸುತ್ತಿದ್ದದು ನೆನಪು. ಬೇಸಿಗೆ ಬೇಗೆಯಲ್ಲಿ ಬೇಯುತ್ತಾ ಸೂರ್ಯನಿಗೆ ಶಾಪ ಹಾಕುತ್ತಾ, ತಣ್ಣನೆಯ ಪಾನೀಯಗಳನ್ನು ಹೀರುತ್ತಾ, ಮೈಯೆಲ್ಲಾ ಬೆವರು, ನೀರಿದ್ದವರು ಎರೆಡೆರೆಡು ಸ್ನಾನ ಮಾಡುತ್ತಾ, ಮತ್ತೆ ಬೆವರುವ ಪರಿ, ಮಳೆಯಾದರೂ ಬಂದಿದ್ದರೆ ಚೆನ್ನಾಗಿತ್ತು ಎಂದು ಹಂಬಲಿಸುವ ಕೋಟ್ಯಾಂತರ ಮನಸ್ಸುಗಳ ಆರ್ತ ಕೇಳಿ ಮೇಲೇರಿದ … Read more
ಎಸ್.ಎಸ್.ಎಲ್.ಸಿ, ಹಾಗೂ ಪಿ.ಯೂಸಿ ಪರೀಕ್ಷೆಗಳೆಲ್ಲಾ ಮುಗಿದು, ಸಿ.ಇ.ಟಿ ಯೂ ಮುಗಿಯಿತು.. ರಜೆಯೆಲ್ಲಾ ಅರ್ಧ ಖಾಲಿಯಾಗುತ್ತಾ ಬಂತು. ಕಾತರಿಯಿಂದ ಕಾಯುತ್ತಿದ್ದ ಮನಸುಗಳಿಗೆ ಇನ್ನೇನು ರಿಸಲ್ಟಿನ ಭಯ. ಒಂದು ಕಡೆ ತಾನೇ ಇಡೀ ಶಾಲೆಗೆ, ಕಾಲೇಜಿಗೆ ಮೊದಲ ರ್ಯಾಂಕ್ ಬಂದೇ ಬರುತ್ತೇನೆಂಬ ಭರವಸೆಯ ಮನಸ್ಸುಗಳಿದ್ದರೆ, ಇನ್ನೊಂದು ಕಡೆ ಅಯ್ಯೋ ದೇವರೆ ಇದೊಂದು ಸಲ ಪಾಸ್ ಮಾಡಪ್ಪ ಎಂದು ಬೇಡಿಕೊಳ್ಳುವ ಮನಸುಗಳು.. ಬದುಕಿನ ಒಂದೊಂದು ಮೆಟ್ಟಿಲುಗಳನ್ನೇ ಹತ್ತುತ್ತಾ ಹತ್ತುತ್ತಾ ಗುರಿಮುಟ್ಟುವ ತವಕದಲ್ಲಿ ಯುವಜನತೆಯು ದಾರಿಯನ್ನು ಹುಡುಕುತ್ತಿದೆ.. ಆಯ್ಕೆ … Read more
ನಾ ಕಟ್ಟುವದಿಲ್ಲ ನಾ ಕಟ್ಟುವದಿಲ್ಲ….. ತಾಜ್ ಮಹಲ ನಿನ್ನ ಜಾತ್ರೆಯಲ್ಲಿ ತೂಗುವ ತೊಟ್ಟಿಲು ಹರಿದಾಡುವ ಬೊ೦ಬೆ ಸದ್ದು, ಸಿಳ್ಳೆಗಳೆಲ್ಲಾ ನಾನಾಗಿದ್ದರೂ.. ಬದುಕ ಕಚ್ಚೆ ಸಿಗದ ತಿರುಕ ನಾ ಕಟ್ಟುವದಿಲ್ಲ….. ಚಾರ್ ಮಿನಾರ್ ಮನಕೆ ಕ೦ಬದ ಕೊರತೆ ಕೆಸರು ಹಾದಿ ಕಲ್ಲು ಮುಳ್ಳು ಬೆಚ್ಚಿ ಬಿದ್ದಾಗಲೊಮ್ಮೆ ಪ್ರೇರಣೆಯ ಹಣತೆ ನೀನು ದಾರಿಹೋಕ ನಾನು ನಾ ಕಟ್ಟುವದಿಲ್ಲ ಕವಿತೆ ಕೊಸರಾಡುವ ಕಲ್ಪನೆ ಹೆಸರಿಗೂ ಸಿಗದ ನಗು ಉಸಿರಾಟಕ್ಕು ಬಿಗಿದ ನೋವು ಕಟ್ಟಿದ್ದೇನೆ…… ಅಲ್ಲೊ೦ದು ಗೂಡ ನಿನ್ನ ಹೆಸರಿಗೊ೦ದು ನಗು ಕೊಸರಿಗೊ೦ದು … Read more
ಕಾದಂಬರಿಯಾಧಾರಿತ ಚಿತ್ರಗಳೆಂದ್ರೆ ಅವೆಲ್ಲಾ ಕಲಾತ್ಮಕ ಚಿತ್ರಗಳು. ನಿರ್ಮಾಪಕನ ರೊಕ್ಕ ಖಾಲಿ ಮಾಡಿ ನಿರ್ದೇಶಕನಿಗೊಂದು ಅವಾರ್ಡ್ ತರಬಹುದೇ ಹೊರತು ಪ್ರೇಕ್ಷಕರ ಮನಗೆಲ್ಲೋ ಮಾತಿಲ್ಲ ಅನ್ನೋದು ಸಾಮಾನ್ಯ ಜನರ ಮಾತು. ಕನ್ನಡದಲ್ಲಿ ಕಾನೂರು ಸುಬ್ಬಮ್ಮ ಹೆಗ್ಗಡತಿ, ಹಿಂದಿಯಲ್ಲಿ ಪಹೇಲಿಯಂತಹ ಸಿನಿಮಾಗಳು ಸೋತಿದ್ರೂ ಆಗೋಂದೀಗೊಂದು ಕಾದಂಬರಿಯಾಧಾರಿತ ಚಿತ್ರಗಳು ಸಖತ್ ಹಿಟ್ಟಾಗುತ್ತವೆ. ಆ ಸಾಲಲ್ಲಿ ಇಂಗ್ಲೀಷಿನಲ್ಲಿ ನೆನಪಾಗೋದು ಡಾನ್ ಬ್ರೌನಿನ ಐದು ಕಾದಂಬರಿಯಾಧಾರಿತ ಸಿನಿಮಾಗಳು. ಹಿಂದಿಯಲ್ಲಿ ಚೇತನ್ ಭಗತ್. ಅಮೀರ್ ಖಾನಿನ ತ್ರೀ ಈಡಿಯಟ್ಸೆಂಬ ಸಿನಿಮಾ ಬಂದಾಗ ಆ ಸಿನಿಮಾ ಚೇತನ್ ಭಗತ್ತಿನ … Read more
ಪ್ರಶ್ನೆಗಳು:- ೧. ಜವಹರ್ಲಾಲ್ ನೆಹರು ಅವರು ರಾಜಸ್ಥಾನದ ನಾಗೂರ್ನಲ್ಲಿ ಮೊಟ್ಟ ಮೊದಲ ಪಂಚಾಯತಿಯನ್ನು ಉದ್ಘಾಟಿಸಿದ ದಿನ ಯಾವುದು? ೨. ತೆಲುಗು ಸಾಹಿತ್ಯದ ಪ್ರಥಮ ಕಾದಂಬರಿ ಯಾವುದು? ೩. ಗಾಂಧೀ ಸಾಹಿತ್ಯವನ್ನು ಕನ್ನಡಕ್ಕೆ ತಂದವರಲ್ಲಿ ಅಗ್ರಗಣ್ಯರು ಯಾರು? ೪. ಮೊದಲ ಲೋಕಸೇವಾ ಆಯೋಗವು ಭಾರತದಲ್ಲಿ ಸ್ಥಾಪನೆಯಾದ ವರ್ಷ ಯಾವುದು? ೫. ರಾಜ್ಯ ವಿಧಾನ ಸಭೆಯಲ್ಲಿ ೧೯೮೦-೮೧ರಲ್ಲಿ ಆಯವ್ಯಯ ಪತ್ರವನ್ನು ಸಂಪೂರ್ಣವಾಗಿ ಕನ್ನಡದಲ್ಲಿ ಮಂಡಿಸಿದ ಸಚಿವರು ಯಾರು? ೬. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದ ಭಾರತದ ಎರಡನೇಯ ರಾಜ್ಯ … Read more
ಇಲ್ಲಿಯವರೆಗೆ ಚಕ್ರ ತರ್ಕದ ಉದಾಹರಣೆಗಳು ನಿಜಕ್ಕೂ ಬಹಳ ಸ್ವಾರಸ್ಯಕರವಾಗಿರುತ್ತವೆ. ಕೆಲವು ಉದಾಹರಣೆಗಳನ್ನು ನೋಡೋಣ. ೧. ನನ್ನ ಮನೆಯಲ್ಲಿ ನಾನೇ ಯಜಮಾನ, ಹಾಗೆ ಹೇಳಲು ನನಗೆ ನನ್ನ ಹೆಂಡತಿಯ ಅನುಮತಿಯಿದೆ. ೨. ಬೈಬಲ್ಲಿನಲ್ಲಿರುವುದೆಲ್ಲಾ ಸತ್ಯ. ಹಾಗಂತ ಬೈಬಲ್ಲಿನಲ್ಲೇ ಹೇಳಿದೆ. ೩. ಈ ಮುಂದಿನ ಹೇಳಿಕೆ ಸುಳ್ಳು. ಹಿಂದಿನ ಹೇಳಿಕೆ ನಿಜ. ೪. ಸಿಗರೇಟು ಬಿಡುವುದು ಬಲು ಸುಲಭ, ನಾನು ಹಲವಾರು ಬಾರಿ ಬಿಟ್ಟಿದ್ದೇನೆ. ೫. ವೆಂಕನಿಗೆ … Read more
ಮೊನ್ನೆ ಕಾಶಿಯಾತ್ರೆಗೆ ಹೋದಾಗ, ಪಿತೃಕಾರ್ಯ ಮಾಡಿಸಲಿಕ್ಕಂತ ’ಗಯಾ’ ಕ್ಷೇತ್ರಕ್ಕ ಹೋದ್ವಿ. ಅಲ್ಲೆ ದೂರ ದೂರದಿಂದ ಬಂದ ಜನರನ್ನ ನೋಡಿ ಆಶ್ಚರ್ಯ ಆಗಿತ್ತು. ’ಗಯಾ ತೀರ್ಥ’ ಅಂತ ಕರೆಸಿಕೊಳ್ಳೊ ಈ ಕ್ಷೇತ್ರದೊಳಗ ಪಿತೃಗಳನ್ನುದ್ದೇಶಿಸಿ ಶ್ರಾದ್ಧ ದಾನಾದಿಗಳನ್ನ ಮಾಡೊದರಿಂದ ಪಿತೃದೇವತೆಗಳಿಗೆ ಅಕ್ಷಯ ಲೋಕ ಪ್ರಾಪ್ತಿ ಆಗ್ತದ, ಮತ್ತ ಅವರು ಸಂತುಷ್ಟರಾಗಿ ಆಯುರಾರೋಗ್ಯ, ಐಶ್ವರ್ಯಾದಿಗಳನ್ನ ಕೊಡ್ತಾರಂತ ಪ್ರತೀತಿ ಅದ. ಉರಿಯೊ ಬಿಸಿಲೊಳಗ, ’ಗಯೆಯ’ ಆ ಮಹಾಸ್ಮಶಾನದೊಳಗ ಸುತ್ತಲು ಸುಡುವ ಚಿತೆಗಳ ನಡುವ ಕಾಲುರಿ ಸಹಿಸಿಕೊಳ್ತಾ, ಶ್ರಾದ್ಧಾದಿಕರ್ಮಗಳನ್ನ ಮಾಡಲಿಕ್ಕಂತ … Read more
ಈ ಪ್ರೀತಿ ಅನ್ನೋದೆ ಹೀಗೆ ರಾಮಾಯಣದಲ್ಲಿ ಸೀತೆಗೆ ಮಾಯಾ ಜಿಂಕೆಯಾಗಿ ತತ್ ಕ್ಷಣದಲಿ ಸೀತೆ ಅದರಂದಕೆ ಸೋತು ಅದನ್ನು ಪಡೆದೇ ತೀರಬೇಕೆಂಬ ಹುಚ್ಚು ಆಸೆ ಹುಟ್ಟಿದ್ದರಿಂದ ದೊಡ್ಡ ರಾಮಾಯಣವೇ ನಡೆದು ಹೋಯಿತು ಎನ್ನಬಹುದು. ಇಲ್ಲಿ ಮಾಯಾ ಜಿಂಕೆಯ ವಿಷಯ ಯಾಕೆ ಬಂತು ಅಂದರೆ ಈ ಪ್ರೀತಿಯೂ ಒಂದು ಮಾಯೆ ಇದ್ದಂತೆ. ಯಾವ ಸಂದರ್ಭದಲ್ಲಿ ಯಾರ ಜೊತೆ ಈ ಪ್ರೀತಿ ಅಂಕುರಿಸುವುದೋ ಹೇಳಲಾಗುವುದಿಲ್ಲ. ಸಹಜವಾಗಿ ಪ್ರೀತಿ ಹೆಣ್ಣು ಮತ್ತು ಗಂಡು ಈ ಎರಡು ಜೀವಗಳಲ್ಲಿ ಅಂಕುರಿಸುವುದು ಸಾಮಾನ್ಯ. ಮೊದ … Read more
ಫೇಸ್ ಬುಕ್ ಗೆ 2010ರ ಜನವರಿ ತಿಂಗಳಲ್ಲಿ ಸೇರಿದ್ದೆ. ಆ ವರುಷ ಪೂರ್ತಿ ಬೆರಳೆಣಿಕೆಯಷ್ಟು ಗೆಳೆಯರಷ್ಟೇ ನನ್ನ ಫೇಸ್ ಬುಕ್ ಫ್ರೆಂಡ್ ಗಳಾಗಿದ್ದರು. ಆ ಗೆಳೆಯರಲ್ಲಿ ಹೆಚ್ಚಿನ ಗೆಳೆಯರೆಲ್ಲರೂ ನಾನು ಓದಿದ ಕಾಲೇಜುಗಳಲ್ಲಿದ್ದ ಗೆಳೆಯರೇ ಆಗಿದ್ದರು. ಆಗಾಗ ನನ್ನ ವಾಲ್ ನಲ್ಲಿ ಯಾವುದಾದರೂ ಇಂಗ್ಲೀಷ್ ಶುಭಾಷಿತ ಹಾಕಿಕೊಳ್ಳುವುದನ್ನು ಬಿಟ್ಟರೆ 2010 ರ ಕೊನೆಗೆ ಕೈಗೆ ಸಿಕ್ಕ ಹೊಸ ಕ್ಯಾಮೆರಾದ ಫೋಟೋಗಳನ್ನು ಅಪ್ ಲೋಡ್ ಮಾಡುವುದನ್ನು ಕಲಿತ್ತಿದ್ದೆ. ಆ ಫೋಟೋಗಳಿಗೆ ಆಗ ಎಷ್ಟು ಲೈಕ್ ಮತ್ತು ಕಾಮೆಂಟ್ ಬಂದಿವೆ … Read more
ಪಂಚಾಯ್ತಿ ಮೆಂಬರು ದಾಮು ಹೇಳಿದ ಸುದ್ದಿಯನ್ನ ಗೋಳಿಬೈಲಿನ ವೆಂಕಟರಮಣ ಸ್ಟೋರ್ಸಿನ ಕಿಣಿ ಮಾಮ್ ಯಾತಕ್ಕೂ ನಂಬಲಿಲ್ಲ. ಅವರು ದಾಮು ಕೇಳಿದ ಜಾಫಾ ಕೋಲಾ ತೆಗೆದು ಕೊಟ್ಟು, ಅಂಗಡಿಯ ಗಾಜಿನ ಬಾಟಲುಗಳನ್ನ ಸರಿಯಾಗಿ ಜೋಡಿಸಿ, ಧೂಳು ಹೊಡೆದು, ಊದುಬತ್ತಿ ಹಚ್ಚಿ ಅದನ್ನು ಬಾಲಾಜಿಯ ಫೋಟೋಕ್ಕೆ ಮೂರು ಸುತ್ತು ಸುತ್ತಿಸಿ. ನಿಧಾನ ತಮ್ಮ ಕುರ್ಚಿಯ ಮೇಲೆ ಕುಳಿತು, “ಅದೆಂತ ಸಮಾ ಹೇಳು ಮಾರಾಯಾ” ಅಂದರು. ದಾಮು ಜಾಫಾ ಕುಡಿಯುತ್ತಿದ್ದವನು, ಇದಕ್ಕಾಗೇ ಕಾದಿದ್ದವನ ಹಾಗೆ, ಗಂಟಲು ಸರಿ ಮಾಡಿಕೊಂಡ. “ನೋಡಿ … Read more
ಯಾರ ಬಾಯಲ್ಲಿ ನೋಡಿದರೂ ಒಂದೇ ಮಾತು. ಸೆಕೆ-ಸೆಕೆ-ಸೆಕೆ-ಉರಿ. ಮಳೆ ಯಾವಾಗ ಬರುತ್ತೋ? ಇತ್ಯಾದಿಗಳು. ರಾತ್ರಿಯಿಡೀ ನಿದ್ದೆಯಿಲ್ಲ. ವಿಪರೀತ ಸೆಖೆ ಮತ್ತು ಸೊಳ್ಳೆ. ಮೇಲುಗಡೆ ಮತ್ಸ್ಯಯಂತ್ರ ತಿರುಗದಿದ್ದರೆ ನಿದ್ದೆಯಿಲ್ಲ. ಬೆಳಗ್ಗೆ ಎದ್ದಾಗ ಕಣ್ಣೆಲ್ಲಾ ಉರಿ. ಎಷ್ಟು ನೀರು ಕುಡಿದರೂ ಕಡಿಮೆ. ದಾಹ. ವಿಪರೀತ ದಾಹ. ಕಳೆದೆರೆಡು ಮೂರು ದಶಕಗಳಿಂದ ಹವಾಮಾನ ಏರುಪೇರಾಗುತ್ತಿದೆ ಎಂಬ ಕೂಗು ಶುರುವಾಗಿ ಇದೀಗ ಅದೇ ಕೂಗು ಮುಗಿಲು ಮುಟ್ಟುತ್ತಿದೆ. ಊರ್ಧ್ವಮುಖಿಯ ಅವಾಂತರಗಳು ಹೆಚ್ಚಾದಷ್ಟು ವಾತಾವರಣದಲ್ಲಿ ಬಿಸಿಯೇರಿಕೆಯಾಗುತ್ತದೆ. ಒಟ್ಟಾರೆಯಾಗಿ ಭೂಮಿಯ ಬಿಸಿಯನ್ನು ಕಡಿಮೆ ಮಾಡಬೇಕೆಂಬ ಉದ್ಧೇಶದಿಂದ … Read more
ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವಾಗ ವರ್ಷಕ್ಕೆ ಮೂರು ಕಾಲಗಳಿರುತ್ತವೆ, ಮಳೆಗಾಲ ಚಳಿಗಾಲ ಬೇಸಿಗೆಗಾಲ ಎಂದು ಟೀಚರುಗಳು ಹೇಳಿ ಕೊಟ್ಟದ್ದು ನಿಮಗೆ ನೆನಪಿರಬಹುದು. ನಾನಂತೂ ಅದನ್ನೇ ಪರಮ ಸತ್ಯವೆಂದು ತಿಳಿದು ಉರು ಹೊಡೆದಿದ್ದೆ ಮಾತ್ರವಲ್ಲ ಅದನ್ನೇ ಪರೀಕ್ಷೆಗಳಿಗೆ ಬರೆದು ಮಾರ್ಕೂ ಗಿಟ್ಟಿಸಿದ್ದೆ. ಆದರೆ ದಕ್ಷಿಣ ಕನ್ನಡಕ್ಕೆ ಕಾಲಿಟ್ಟ ಮೇಲೆ ತಿಳಿದಿದ್ದು ಸತ್ಯ ಕೂಡಾ ಊರಿಂದೂರಿಗೆ ಬದಲಾಗುತ್ತದೆ ಎಂದು..!! 'ನೋಡಿ ಹಾಗೆ ಹೇಳ್ಬೇಕು ಅಂದ್ರೆ ನಮ್ಮೂರಲ್ಲಿ ಬೇಸಿಗೆ ಕಾಲ ಅಂತಲೇ ಇಲ್ಲ..' 'ಅರ್ರೇ.. ವಾವ್ ಎಷ್ಟು ಚಂದ' ಅಂತ ಟಿಕೆಟ್ … Read more
"ಮಾನವನ ಸ್ವಾರ್ಥಪರ ನಡವಳಿಕೆ-ಆಲೋಚನೆ ತೆರೆದಿಡುವ ಜಾನಪದೀಯ ಕಥಾನಕ" ಪ್ರಪಂಚದ ಮರುಹುಟ್ಟು ಕುರಿತ ಇರುಳಿಗರ ಸೃಷ್ಟಿಪುರಾಣದ ಕಥೆಯನ್ನು ಆಧಾರವಾಗಿಟ್ಟುಕೊಂಡು ರಚಿಸಲ್ಪಟ್ಟ "ಸೋರೆಬುರುಡೆ" ಜಾನಪದೀಯ ನೃತ್ಯನಾಟಕವು ಬೆಂಗಳೂರು ವಿವಿ ಆವರಣದಲ್ಲಿರುವ ಕಲಾಗ್ರಾಮದ ರಂಗಮಂದಿರದಲ್ಲಿ ಪ್ರದರ್ಶನಗೊಂಡು ಕಿಕ್ಕಿರಿದ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ಬೆಂಗಳೂರಿನ ಕೆ.ಎಸ್.ಎಂ.ಟ್ರಸ್ಟ್ ಕಲಾವಿದರು ಪ್ರಸ್ತುತಪಡಿಸಿದ ಈ ನಾಟಕವು, ಮನುಷ್ಯ ತನ್ನ ಅಸ್ತಿತ್ವದ ಉಳಿವಿಗಾಗಿ ಏನೂ ಬೇಕಾದರೂ ಮಾಡಲು ಹಿಂಜರಿಯಲಾರ ಎಂಬ ಸಂದೇಶವನ್ನು ನೀಡಿತು. ಅಲ್ಲದೆ, ಮಾನವನದು ಸದಾ ಸ್ವಾರ್ಥಪರ-ಅನುಕೂಲಸಿಂಧುವೂ ಆದ ವರ್ತನೆ ಮತ್ತು ನಡವಳಿಕೆಯಾಗಿದೆ ಎನ್ನುವುದನ್ನು ನಾಟಕದಲ್ಲಿ ಮನೋಜ್ಞವಾಗಿ … Read more
ಪ್ರಶ್ನೆಗಳು: ೧. ಭಾರತದ ಮೂರು ಪ್ರಾದೇಶಿಕ ಕ್ಷೀರೋದ್ಯಮ ಸಂಶೋಧನೆ ಕೇಂದ್ರಗಳಲ್ಲಿ ಒಂದು ಕರ್ನಾಟಕದಲ್ಲಿದೆ. ಅದು ಎಲ್ಲಿದೆ? ೨. ೧೯೨೪ ರ ಬೆಳಗಾವಿ ಕಾಗ್ರೇಸ್ ಅಧಿವೇಶನದಲ್ಲಿ ಸ್ವಾಗತ ಗೀತೆಯನ್ನು ಹಾಡಿದವರು ಒಬ್ಬ ಖ್ಯಾತ ಹಿಂದೂಸ್ಥಾನಿ ಗಾಯಕಿ. ಈಕೆ ಯಾರು? ೩. ಶಿವಪುರಿ ರಾಷ್ಟ್ರೀಯ ಉದ್ಯಾನ ಎಲ್ಲಿದೆ? ೪. ಮಧ್ಯಪ್ರದೇಶ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ವರ್ಷ ಯಾವುದು? ೫. ಅಗ್ನಿಶಾಮಕದವರು ಬಳಸುವ ರಾಸಾಯಾನಿಕ ಮಿಶ್ರಣ ಯಾವುದು? ೬. ಜೈ ಜವಾನ್ ಜೈ ಕಿಸಾನ್ ಘೋಷಣೆ ಜೊತೆಗೆ ಜೈ ವಿಜ್ಞಾನ್ ಎಂಬುವುದನ್ನು … Read more
(ಇಲ್ಲಿಯವರೆಗೆ) ಯಾಕೋ ಏನೋ ಪುಟ್ಟಿಯನ್ನು ಬಿಡುಗಡೆಗೊಳಿಸಿದ ನಾನೇ ಯಾವುದೋ ಬಂಧನಕ್ಕೆ ಸಿಕ್ಕಿಕೊಂಡಿದ್ದ ಹಾಗೆ ಅನುಭವವಾಗಲಾರಂಭಿಸಿತು. ನನ್ನ ತಲೆಯನ್ನು ಹೊಕ್ಕಿದ್ದ ತರ್ಕವೆಂಬ ಹುಳದ ಗುಂಯ್ಗಾಟ ನಿಲ್ಲುವಂತೆಯೇ ಕಾಣಲಿಲ್ಲ. ನಿಜಕ್ಕೂ ತರ್ಕಶಾಸ್ತ್ರವೊಂದು ಮಹಾ ಸಾಗರ. ಆವರಣದ ಸತ್ಯಾಸತ್ಯತೆಯಲ್ಲಿ ತರ್ಕಶಾಸ್ತ್ರಕ್ಕೆ ಆಸಕ್ತಿ ಇಲ್ಲ. ತರ್ಕವು ಕೇವಲ ಸಾಕ್ಷೀ ಪ್ರಮಾಣ ಕೇಂದ್ರೀಕೃತವಾಗಿರುತ್ತದೆ. ಶುದ್ಧತರ್ಕವಲ್ಲದೆ, ತರ್ಕದೋಷಗಳೆನ್ನಬಹುದಾದ ಅತರ್ಕ, ವಿತರ್ಕ, ಕುತರ್ಕ, ಚಕ್ರತರ್ಕ, ವಕ್ರತರ್ಕ…..! ಎಂದು ಎಷ್ಟೆಲ್ಲಾ ವೈವಿಧ್ಯತೆ ಅನ್ನಿಸಿತು. ಪುಟ್ಟಿಯ ಲೆವೆಲ್ಲಿಗೆ ಇದೆಲ್ಲಾ ಟೂ ಮಚ್ಚೆಂದೂ ಅನಿಸಿತು. ತರ್ಕಶಾಸ್ತ್ರದಂಥಾ ಜಟಿಲವಾದ ವಿಷಯವನ್ನು ಕಠಿಣವಾದ ಭಾಷೆಯಲ್ಲಿ … Read more
ತೇಪೆ ಚಡ್ಡಿ ಮತ್ತು ನಕ್ಷತ್ರ ಶನಿವಾರದ ಬೆಳ್ಳಂಬೆಳಗ್ಗೆ ಒಪ್ಪತ್ತಿನ ಶಾಲೆಗೆ ಹೊಂಟಿದ್ದೆ ಎದುರಿಗೆ ಸಿಕ್ಕ ಜಮೀನ್ದಾರನ ಸೊಕ್ಕಿನ ಹೈದ 'ನಿಂದು ಪೋಸ್ಟ್ ಆಗಿದೆ' ಎಂದ! ನನಗ್ಯಾವ ಲೋಕದವರು ಪತ್ರ ಬರೆವರೆಂದು ನೋಡಿದರೆ ಅವನ ಕಣ್ಣುಗಳು ನೆಟ್ಟಿದ್ದು ಒಡೆದುಹೋಗಿರುವ ನನ್ನ ಚಡ್ಡಿ ಮೇಲೆ! ಹೋದ್ವಾರ ಅವ್ವ ತವರಿಂದ ತಮ್ಮನ ಚಡ್ಡಿ ತಂದು ಇಕ್ಕಿಸಿದ್ದಳು, ಇದೇ ಹಲ್ಕಟ್ ಹೈದ, 'ದೊಗಳೆ ಚಡ್ಡಿ' ಎಂದು ಆಗಲೂ ಛೇಡಿಸಿದ್ದ. ಅಪ್ಪ ಗದ್ದೆಗೆ ಪಲಾಯನಗೈವ ಮೊದಲೇ ಹಿಡಿಯಲೆಂಬಂತೆ ಓಡಿದೆ ಮನೆ ಎದುರು ಏರು ಕಟ್ಟುತ್ತಿದ್ದ … Read more
ನಾವು ಚಿಕ್ಕವರಿದ್ದಾಗ, ರಾತ್ರಿ ಮಲಗುವಾಗ 'ಕಥೆ ಹೇಳಿ' ಎಂದು ಪೀಡಿಸುತ್ತಿದ್ದ ನಮ್ಮಿಂದ ಮುಕ್ತಿ ಪಡೆಯಲು ನನ್ನ ತಂದೆಯಾದಿಯಾಗಿ ನಮ್ಮ ಹಿರಿಯರು ಹೇಳುತ್ತಿದ್ದ ಕೆಲವು ಕಥೆಗಳು. ಈ ಕಥೆಗಳ ವಿಶೇಷವೆಂದರೆ ಒಮ್ಮೆ ನಾವು ಈ ಕಥೇನ ಕೇಳಿದ್ರೆ, ಆ ಕಥೆ ಹೇಳಿದವರ ಹತ್ರ ಮತ್ಯಾವತ್ತೂ ಕಥೆ ಕೇಳೋಕೆ ಹೋಗ್ತಿರ್ಲಿಲ್ಲ! ಇನ್ನು ಮುಂದೆ ಒಂದಾದ ಮೇಲೊಂದರಂತೆ ನಾಲ್ಕು ಕಥೆಗಳು! ಕಥೆಯ ಘಟನೆ ಒಂದು : "ಗುಬ್ಬಚ್ಚಿ ಮತ್ತು ಭತ್ತದ ಕಾಳು" "ಒಂದೂರಲ್ಲಿ ಒಂದು ದೊಡ್ಡ ಕಣ (ಭತ್ತವನ್ನು ಅದರ ಗಿಡದಿಂದ … Read more
ನಸಿಕಲೆ ೫.೩೦ ಗಂಟೆ ಹೊತ್ತದು, ಬಾಗಲಾ ಬಾರಿಸಿದ ಸಪ್ಪಳಕ್ಕ ಎಚ್ಚರಾತು, ಶ್ರೀ ಬಂದ್ಲಂತ ಕಾಣಸ್ತದ ಅಂತ ಹೋಗಿ ಬಾಗಲಾ ತಗದೆ. ನೀರಿಕ್ಷಿಸಿದ ಪ್ರಕಾರ ಆಕಿನ ನಿಂತಿದ್ಲು.ಯಾಕೊ ಭಾಳ ಖಿನ್ನ ಆಗಿತ್ತು ಮುಖಾ.ಪ್ರಯಾಣದ ಆಯಾಸ ಇರಬಹುದು ಅಂತ ಸುಮ್ನಾದೆ. ಅಕಿ ಹೋಗಿ ಮುಖಾ ತೊಳ್ಕೊಂಡ ಬರೊದ್ರಾಗ,ಬಿಸಿ ಬಿಸಿ ಚಹಾ ಮಾಡ್ಕೊಂಡ ಬಂದು ಆಕಿಗೊಂದ ಕಪ್ಪ್ ಕೊಟ್ಟು ನಾನು ಆಕಿ ಮುಂದನ ಕುತೆ.ಆದ್ರು ಯಾಕೊ ಆಕಿ ಎನೊ ಚಿಂತಿ ಮಾಡಲಿಕತ್ತಾಳ ಅನಿಸ್ತು. ಯಾಕಂದ್ರ ನನ್ನ ರೂಮ್ ಮೇಟ್, ಸಹೊದ್ಯೋಗಿ,ನನ್ನ ಜೀವನದ … Read more
ಊರಾಚೆಯ ಒಂದು ನಾಲೆ. ಚಿಕ್ಕಂದಿನಲ್ಲಿ ಈಜು ಬೀಳುತ್ತಿದ್ದ, ಬಟ್ಟೆ ತೊಳೆಯೊ, ಕೆಲವರ ಎಮ್ಮೆ ತೊಳೆಯೋ.. ಹೀಗೆ ಊರ ಎಲ್ಲಾ ಕೊಳೆಗಳ ತೊಳೆಯೋ ಪವಿತ್ರ ಸ್ಥಳವದು ! ಸಂಜೆಯ ಹೊತ್ತಾಗಿದ್ದರಂದ ಬಟ್ಟೆ ತೊಳೆವ ಹೆಂಗಸರು, ಈಜು ಬೀಳೋ ಮಕ್ಕಳೂ,ಎಮ್ಮೆ ತೊಳೆಯೋ ರೈತರೂ ಮನೆ ಸೇರಿದ್ದರೆಂದು ಕಾಣುತ್ತೆ. ನಾಲೆಯ ದಡದಲ್ಲಿ ಕೂತಿದ್ದ ಈತನನ್ನು, ನಾಲೆಯಲ್ಲಿ ಪ್ರತಿಬಿಂಬಿಸುತ್ತಿದ್ದ ಕೇಸರಿ ರವಿಯನ್ನುಳಿದು ಇನ್ಯಾರೂ ಇರಲಿಲ್ಲ. ಆಗಾಗ ಬಂದು ನೇಪಥ್ಯದಲ್ಲಿ ಮರೆಯಾಗುತ್ತಿದ್ದ ಹಕ್ಕಿಗಳ ಸಾಲುಗಳು ಹಾರೋ ಹಕ್ಕಿಯಂತೆ ಸ್ವಚ್ಚಂದವಾಗಿದ್ದ ಹಿಂದಿನ ದಿನಗಳನ್ನು ನೆನಪಿಸುತ್ತಿದ್ದವು. ಒಮ್ಮೆ … Read more
ಜಾಹಿರಾತಿಗೆ ಅಂಕುಶ. . . ಮಾನ್ಯರೆ, ಕೊನೆಗೂ ಆ ದಿನ ಬಂದೇಬಿಟ್ಟಿತು ನೋಡಿ.. .. .. ಸುಳ್ಳು ಮತ್ತು ನಂಬಲಾರ್ಹವಲ್ಲದ ಜಾಹಿರಾತುಗಳನ್ನು ನೀಡಿ ಗ್ರಾಹಕರ ಕಣ್ಣಿಗೆ ಮಣ್ಣೆರಚ್ಚುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸುಲಭವಾಗಿ ಹಣಮಾಡುತ್ತಿರುವ ಬಹುರಾಷ್ಟ್ರೀಯ ಹಾಗೂ ಇತರೆ ಜಾಹಿರಾತು ಕಂಪನಿಗಳಿಗೆ ಕೇಂದ್ರೀಯ ಗ್ರಾಹಕ ರಕ್ಷಣೆ ಮಂಡಳಿಯು ಕೊನೆಗೂ ಅಂಕುಶವನ್ನು ಹಾಕಲು ನಿರ್ಧರಿಸಿರುವುದ ಸಂತೋಷದ ವಿಷಯ. ತಮ್ಮ ಉತ್ಪನ್ನಗಳನ್ನು ಮಾರಾಟಮಾಡಲು ಕಂಪನಿಗಳು ನಾನಾ ಬಗೆಯ ತಂತ್ರಗಳನ್ನು ಬಳಸಿಕೊಳ್ಳುವುದು ಸಾಮಾನ್ಯವಾಗಿದೆ. ಇದಕ್ಕೆ ಇಂಬುಕೊಡುವಂತೆ ವಿವಿಧ ಕ್ಷೇತ್ರಗಳ ದೊಡ್ಡ ದೊಡ್ಡ … Read more
ಅದೊಂದು ಅದ್ಭುತವಾದ ಸಿನೆಮಾ. "ಬೆಂಕಿಯಲ್ಲಿ ಅರಳಿದ ಹೂ " ಬಹುಶಃ 1983 ರಲ್ಲಿ ಬಂದ ಕೆ. ಬಾಲ ಚಂದರ್ ಅವರ ನಿರ್ಧೇಶನದ ಸಿನೆಮಾ ಅದು. ತನ್ನೊಳಗಿನ ವೈಯುಕ್ತಿಕ ಆಸೆ ಮತ್ತು ಬದುಕಿನ ಕನಸು ಗಳನ್ನು ಅದುಮಿಟ್ಟುಕೊಂಡು ತನ್ನ ಕುಟುಂಬದವರ ಹಿತಕಾಗಿಯೇ ತಾನು ತನ್ನ ನಗುವನ್ನು ಜೀವಂತವಾಗಿಟ್ಟು ದುಡಿಯಲು ಸಿಟಿ ಬಸ್ಸು ಹತ್ತುವುದರಲ್ಲೇ ಕೊನೆಗೊಳ್ಳುವ ಸಿನೆಮಾದಲ್ಲಿ ಸುಹಾಸಿನಿ ಎಂಬ ಚೆಲುವೆ ತನ್ನ ಕಣ್ಣಲ್ಲೇ ನಗುವನ್ನು ಮತ್ತು ನಗುವಿನಲ್ಲೇ ದುಃಖವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ನಿಜ ಬದುಕಿನ ಹಲವರ ಸನ್ನಿವೇಶಗಳನ್ನು … Read more
:೧: ಕಮಲಾಬಾಯಿ ನಿರಾಳವಾದರು ಎರಡು ದಿನಗಳಿಂದ ಬಹಳ ತಳಮಳಿಸಿದ್ದರು. ತಾವು ನೋಡಿದ ವಿಷಯ ಮೊದಲು ಯಜಮಾನರಿಗೆ ತಿಳಿಸಿದ್ದರು. ಅವರ ನೀರನ ಪ್ರತಿಕ್ರಿಯೆ ಅವರನ್ನು ನಿರುತ್ಸಾಹಗೊಳಿಸಿದರಲಿಲ್ಲ. ತಪ್ಪು ನಡೆಯುತ್ತಿದೆ ಎಂದು ಗೊತ್ತಿದ್ದೂ ನೋಡುತ್ತ ಸುಮ್ಮನೆ ಕುಳಿತುಕೊಳ್ಳುವ ಜಾಯಮಾನ ಅವರದಲ್ಲ. ಅದರಲ್ಲೂ ತಮ್ಮ ಪ್ರೀತಿಯ ಮಂಗಲಾಳ ಮಗಳು ತಪ್ಪು ಹಾದಿ ತುಳಿಯುತ್ತಿದ್ದಾಳೆ. ಇದರ ಬಗ್ಗೆ ಮಂಗಲಾಳಿಗೆ ಹೇಳಲೇಬೇಕು ಎಂದು ನಿರ್ಧರಿಸಿದರು. ಆಗಿದ್ದಿಷ್ಟೆ… ಎರಡು ದಿನದ ಹಿಂದಿನ ಮಧ್ಯಾಹ್ನ ಕಮಲಾಬಾಯಿ ಅಪಾರ್ಟಮೆಂಟಿನ ಮುಂದಿನ ಲಾನ್ನಲ್ಲಿ ಕುಳಿತಾಗ, ಮುಖ್ಯ ರಸ್ತೆಯ ತಿರುವಿಗೆ ಬೈಕ್ … Read more
ಅತಿಸಾರದಿಂದ ಬಳಲುತ್ತಿರುವ ವ್ಯಕ್ತಿಯೊಬ್ಬ ಚಿತ್ರದುರ್ಗದ ಖಾಸಗಿ (ಹೆಸರು ನೆನಪಿಲ್ಲ) ಆಸ್ಪತ್ರೆಗೆ ದಾಖಲಾಗುತ್ತಾನೆ. ಅಲ್ಲಿನ ತಜ್ಞವೈದ್ಯರು ಒಂದು ವಾರ ಆತನಿಗೆ ಸೂಕ್ತ ಚಿಕಿತ್ಸೆ ನೀಡಿ ಬಿಡುಗಡೆ ಮಾಡುತ್ತಾರೆ. ಅತಿಸಾರದಿಂದ ಬಳಲಿದ ರೋಗಿಗೆ ಹೆಚ್ಚು-ಹೆಚ್ಚು ದ್ರವರೂಪದ ಆಹಾರಗಳನ್ನು ಸೇವಿಸಲು ಹೇಳುತ್ತಾರೆ. ಹಾಗೆಯೇ ಎಳನೀರನ್ನು ಹೆಚ್ಚು ಸೇವಿಸಿ ಎಂದೂ ಸಲಹೆ ನೀಡುತ್ತಾರೆ. ಬಿಡುಗಡೆಯಾಗಿ ಹೋದ ರೋಗಿ ಮೂರನೇ ದಿನಕ್ಕೆ ಮತ್ತೆ ವಾಪಾಸು ಬರುತ್ತಾನೆ. ಈ ಬಾರಿ ಇನ್ನೂ ಹೆಚ್ಚು ಸುಸ್ತಿನಿಂದ ಬಳಲಿರುತ್ತಾನೆ. ಮುಖ ಬಿಳಿಚಿಕೊಂಡಿರುತ್ತದೆ. ಚಿಕಿತ್ಸೆಯಲ್ಲಿ ಏನೂ ವ್ಯತ್ಯಾಸ ಆಗಿರುವುದಿಲ್ಲ ಎಂದು … Read more