ಆ ..ಊ.. ಔಚ್.. ಗಾಯಬ್: ಅನಿತಾ ನರೇಶ್ ಮಂಚಿ

ಇದ್ದಕ್ಕಿದ್ದಂತೆ ಎಂದು ಹೇಳಲು ಸಾಧ್ಯವಿಲ್ಲದಿದ್ದರೂ  ಯಾವುದೇ ಘನ ಗಂಭೀರ ಕಾರಣಗಳಿಲ್ಲದೆ ನನ್ನ ಬಲದ  ಕೈಯ ತೋರು ಬೆರಳಿನಲ್ಲಿ ನೋವು ಕಾಣಿಸಿಕೊಂಡಿತು. ನೋವು ಎಂದರೆ ಅದೇನು ಅಂತಹ ಸಹಿಸಲಸಾಧ್ಯವಾದ ಭಯಂಕರ ನೋವೇನೂ ಅಲ್ಲ. ಆದರೆ ದಿನವಿಡೀ ನಾನಿದ್ದೇನೆ ಎಂದು ಹಣಕಿ ಇಣುಕಿ ಹೋಗುತ್ತಿತ್ತು. ಹೀಗೆ ನೋವುಗಳು ಎಲ್ಲೇ ಪ್ರಾರಂಭವಾದರೂ ನಾನು ಅದರ ಇತಿಹಾಸವನ್ನು ಕೆದಕಲು ಹೊರಡುತ್ತೇನೆ. ಅವುಗಳ ಹುಟ್ಟು, ಬೆಳವಣಿಗೆಗಳ ಬಗ್ಗೆಯೇ ಕುತೂಹಲ ನನಗೆ. ಹಾಗಾಗಿ ನೋವು ಶುರು ಆದದ್ದು  ಹೇಗೆ, ಯಾವಾಗ, ಎಷ್ಟು ಗಳಿಗೆಗೆ, ಮುಂತಾದವುಗಳಿಗೆ ಉತ್ತರ … Read more

ನಾಲ್ಕು ಕವಿತೆಗಳು: ವೈ.ಬಿ.ಹಾಲಬಾವಿ, ಮೌಲ್ಯ ಎಂ., ಸಾಬಯ್ಯ ಸಿ.ಕಲಾಲ್, ಶೀತಲ್ ವನ್ಸರಾಜ್

ಪ್ರೀತಿ ಬೆರೆಸೋಣ… ಹೇಳುವುದು ಬಹಳಷ್ಟಿದೆ ಏಳುತ್ತಿಲ್ಲ ನಾಲಿಗೆ ಸೀಳಲ್ಪಟ್ಟಿದೆ ಹೊಲಿಯಲ್ಪಟ್ಟಿವೆ ತುಟಿಗಳು ಆದರೂ; ಮಾತಾಡೋಣ ಬಾ ಗೆಳಯ ನಮ್ಮ ಎದೆಗಳಿಂದ ನೂತ ನೋವಿನ ಎಳೆಗಳಿಂದ… ಕೇಳುವುದು ಬಹಳಷ್ಟಿದೆ ಸುರಿದ ಸೀಸ ಇನ್ನೂ ಆರಿಲ್ಲ ಕಿವುಡಾಗಿವೆ ಕಿವಿಗಳು ಪಿಸುಗುಡುತ್ತಿವೆ ಸನಾತನ ಗೋಡೆಗಳು ಆದರೂ; ಆಲಿಸೋಣ ಬಾ ಗೆಳಯ ನಮ್ಮ ಎದೆಬಡಿತದ ಸದ್ದುಗಳಿಂದ… ನೋಡುವುದು ಬಹಳಷ್ಟಿದೆ ಕುರುಡಾಗಿವೆ ಕಣ್ಣುಗಳು ನೆಟ್ಟ ಅವರ ಕ್ರೂರ ನೋಟಗಳಿಂದ ಆದರೂ; ಬೆಸೆಯೋಣ ಬಾ ಗೆಳೆಯ ನಮ್ಮ ಅಂತರಂಗದ ನೋಟಗಳನ್ನು ಎದೆಗೂಡಿನಲ್ಲಿ ಬಚ್ಚಿಟ್ಟ ಕನಸುಗಳಿಂದ… ನಡೆಯುವುದು … Read more

ಸಾಮಾನ್ಯ ಜ್ಞಾನ (ವಾರ 23): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಪ್ರಥಮ ಉಪಗ್ರಹ ಆರ್ಯಭಟವನ್ನು ಯಾವ ದೇಶದ ಉಡವಣಾ ಕೇಂದ್ರದಿಂದ ಹಾರಿಬಿಡಲಾಯಿತು? ೨.    ಪಂಜಾಬ್ ರಾಜ್ಯವಾಗಿ ಆಸ್ತಿತ್ವಕ್ಕೆ ಬಂದ ವರ್ಷ ಯಾವುದು? ೩.    ಸ್ವತಂತ್ರ ಭಾರತದ ಮೊದಲ ಭಾರತೀಯ ಗವರ್ನರ್ ಜನರಲ್ ಯಾರು? ೪.    ಮೊದಲ ಭಾರತ – ಪಾಕ್ ಯುದ್ಧ ನಡೆದಾಗ ಭಾರತದ ಕಮಾಂಡರ್ ಆಗಿ ಸೇವೆಯಲ್ಲಿದ್ದ ಕನ್ನಡಿಗ ಯಾರು? ೫.    ಬನಾರಸ್ ಹಿಂದೂ ವಿಶ್ವವಿದ್ಯಾಲಯ ಎಲ್ಲಿದೆ? ೬.    ೧೯೫೭-೫೮ರ ಅವಧಿಯಲ್ಲಿ ವಿಶ್ವದಾದ್ಯಂತ ವಿಜ್ಞಾನಿಗಳು ಒಟ್ಟುಗೂಡಿ ಭೂಮಿ ಮತ್ತು ಪರಿಸರಗಳ ಅಧ್ಯಯನ ನಡೆಸಿದರು. … Read more

ಹಲೋ ಡಾಕ್ಟರ್: ಅಮರ್ ದೀಪ್ ಪಿ.ಎಸ್.

ಅದೊಂದು ಓಣಿಯಲ್ಲಿ ಆಗಾಗ ವಯಸ್ಸಿನ ಹುಡುಗರ ನಡುವೆ ಹಾಕ್ಯಾಟ, ಜಗಳ ನಡೆಯುತ್ತಿದ್ದವು. ಮತ್ತೇನಿಲ್ಲ, ರಜಾ ದಿನ ಬಂತೆಂದರೆ, ಹಬ್ಬ ಹರಿದಿನಗಳು ಬಂದವೆಂದರೆ, ಇಲ್ಲವೇ ಮದುವೆ ಸೀಜನ್ನು ಇದ್ದರೆ ಹೀಗೆ… ಅಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟು ಆಡುವ ಖಯಾಲಿ ಅವರಿಗೆ. ಅಲ್ಲಿಗೆ ಇಸ್ಪೀಟು ಆಡುವವರು ಮಾತ್ರವೇ ಆಲ್ಲ ಆಡದವರೂ ಸಹ ಇರುತ್ತಿದ್ದರು. ಹಿಂದೆ ಸಾಲ ಕೊಟ್ಟು ಆಡಿಸಲು, ಇಸ್ಪೀಟು  ಆಡಲು ಹುರಿದುಂಬಿಸಿ ಮತ್ತೆ ಮತ್ತೆ ಸಾಲಗಾರರನ್ನಾಗಿಸಲು ಅಷ್ಟೇ.  ಅದಿದ್ದದ್ದೇ ಬಿಡಿ. ಅದಲ್ಲ ನಾನು ಹೇಳುತ್ತಿದ್ದುದು ಹೀಗೆ ಆಡುತ್ತಿದ್ದ ವಯಸ್ಸಿನ … Read more

ಹೆಸರಿಡದ ಕತೆಯೊಂದು (ಭಾಗ 5): ಪ್ರಶಸ್ತಿ ಪಿ.

ಇಲ್ಲಿಯವರೆಗೆ:  ಕಿಟ್ಟಿ-ಶ್ಯಾಮ ಶಾರ್ವರಿ-ಶ್ವೇತರಿಗೆ ಬಾಲ್ಯದಿಂದಲೂ ಸ್ನೇಹ. ಕಿಟ್ಟಿ ಹತ್ತಕ್ಕೆ ಓದು ನಿಲ್ಲಿಸಿ ಗ್ಯಾರೇಜ್ ಸೇರಿದ್ರೆ ಉಳಿದವರೆಲ್ಲಾ ಓದು ಮುಂದುವರೆಸಿ ಬೇರ್ಬೇರೆ ಕೆಲಸ ಹಿಡಿಯುತ್ತಾರೆ. ಕೆಲಸವಿಲ್ಲದ ಶ್ಯಾಮನ ಒದ್ದಾಟದ ದಿನಗಳು ಮುಗಿದು ಕೊನೆಗೂ ಒಂದು ಕೆಲಸವೊಂದು ಸಿಕ್ಕಿದೆ ಅವನಿಗೆ. ಶಾರ್ವರಿಗೆ ಕಾಲೇಜಲ್ಲೇ ಒಂದು ಕಂಪೆನಿಯಲ್ಲಿ ಆಯ್ಕೆಯಾಗಿದ್ದರೆ ಶ್ವೇತ ಬಾನುಲಿ ಉದ್ಘೋಷಕಿಯಾಗುವತ್ತ ಹೆಜ್ಜೆ ಹಾಕುತ್ತಾಳೆ. ಹಿಂಗೆ ಗೆಳೆಯರದ್ದು ಒಂದೊಂದು ದಿಕ್ಕು, ಒಂದೊಂದು ಗುರಿ. ಕಾಲೇಜಲ್ಲಿದ್ದ ಶ್ಯಾಮ-ಶಾರ್ವರಿಯ ನಡುವಿನ ಸಮಾನ ಮನಸ್ಥಿತಿ, ಆಕರ್ಷಣೆಗಳು ಅವರನ್ನು ಬದುಕಿನೋಟದಲ್ಲಿ ಒಂದು ಮಾಡುತ್ತಾ ಅಥವಾ ಬದುಕನ್ನೇ … Read more

ವಿಲನ್ ಆಗ್ಬಿಟ್ರಲ್ಲೋ ರಾಧೇಶ! ಸೀತೇಶ!!: ಅಖಿಲೇಶ್ ಚಿಪ್ಪಳಿ

  [ಈ ಕತೆಯಲ್ಲಿ ಬರುವ ವ್ಯಕ್ತಿಗಳ ಹೆಸರು ಕ್ರಮವಾಗಿ ರಾಧೇಶ ಮತ್ತು ಸೀತೇಶ. ರಾಧೇಶ ಬಂಡವಾಳಶಾಹಿ ಮತ್ತು ಸೀತೇಶ ಹೋರಾಟಗಾರ. ವಾಸ್ತವಿಕತೆಯಿಂದ ತುಂಬಾ ದೂರ ನಿಂತು ಯೋಚಿಸಿದ ಪರಿಣಾಮವಾಗಿ ಇವರಿಬ್ಬರು ಖಳನಾಯಕರಾಗಿದ್ದಾರೆ. ಹೇಗಾದರೂ ಕಾರ್ಯಸಾಧನೆ ಮಾಡಬೇಕೆಂಬ  ಕಾನೂನುಬಾಹಿರವಾದ ಇವರ ಹಠಕ್ಕೆ ಬಲಿಷ್ಟವಾದ ಹಲಸಿನ ಮರ ಬಲಿಯಾಗಿದೆ. ಪೂರ್ಣಪಾಠವನ್ನು ಮುಂದೆ ಓದಿ] ಈ ಹಿಂದೆ “ಮಾವು-ಹಲಸಿನ ಮರವುಳಿಸಿದ ಕತೆ” ಎಂಬ ಲೇಖನವನ್ನು ಬರೆಯಲಾಗಿತ್ತು. ಲೇಖನ ಓದಿದ ನಂತರ ಖಾಸಗಿ ಪೆಟ್ರೋಲ್ ಬಂಕ್ ಮಾಲಿಕ ರಾಧೇಶನ ಮನ:ಪರಿವರ್ತನೆಯಾಗಬಹುದು ಎಂದು ಭಾವಿಸಲಾಗಿತ್ತು. … Read more

ಯಶಸ್ಸಿನ ಗುಟ್ಟು…ಅಧ್ಯವಸಾಯ: ಸುಮನ್ ದೇಸಾಯಿ

ನಾವು ಮಾನವ ಜನ್ಮ ತಳೆದಿದ್ದು ಒಂದೇ ರಾತ್ರಿಯಲ್ಲಲ್ಲ. ಯುಗಯುಗಾಂತರಗಳಲ್ಲಿ ಸುಮಾರು ಎಂಭತ್ನಾಕು ಕೋಟಿ ಜೀವರಾಶಿಯಾಗಿ ಪರಿವರ್ತನೆಯಾಗಿದ್ದೇವೆ,ಈ ಮಾನವ ಜನ್ಮ ಅತ್ಯಂತ ದುರ್ಲಭವಾದುದು. ನಮ್ಮ ಐದು ಬೆರಳುಗಳು ಹೇಗೆ ಸಮನಾಗಿರುವ್ದಿಲ್ಲವೋ ಹಾಗೆಯೇ ಪ್ರತಿ ಮನುಷ್ಯನ ಆಂತರಿಕ ಶಕ್ತಿಯು ಕೂಡಾ ಭಿನ್ನ ವಿಭಿನ್ನವಾಗಿರುತ್ತದೆ. ಭಗವಂತನ ದಿವ್ಯ ಸನ್ನಿಧಿಯಲ್ಲಿ ಏಕನಿಷ್ಠೆಯಿಂದ ಪ್ರಾರ್ಥನೆ ಮಾಡುವದರಿಂದ ನಮ್ಮಲ್ಲಿಯ ಆಂತರಿಕ ಶಕ್ತಿ ದ್ವಿಗುಣವಾಗುವದರ ಜೊತೆಗೆ ದೇಹಕ್ಕೆ ವಿಶೇಷ ಚೈತನ್ಯ ಲಭಿಸುತ್ತದೆ.ಹಾಗಂತ ಬರೀ ಮೂರೂ ಹೊತ್ತು ಭಗವಂತನ ಮುಂದೆ ಮಂಡಿಯೂರಿ ಪ್ರಾರ್ಥಿಸುವದರಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ನಾವುಗಳು … Read more

ಕಾನನದ ನೀರವತೆಯ ನಡುವೆ ರೈಲು ಹಳಿಗಳ ಮೇಲೊಂದು ಪಯಣ (ಕೊನೆಯ ಭಾಗ): ನಿಶಾಂತ್ ಜಿ.ಕೆ.

ಇಲ್ಲಿಯವರೆಗೆ ಆಗ್ಲೇ ನಮ್ಮ ಪಯಣ ಅಥವಾ ನಡಿಗೆ ಸ್ಟಾರ್ಟ ಆಗಿ ೪ ಘಂಟೆಗಳ ಮೇಲಾಗಿತ್ತು ಅನ್ಸುತ್ತೆ, ನಡಿತಾ ಹಾಗೇ ಮುಂದೆ ಹೋದೊರಿಗೆ ಕಣ್ಣಿಗ್ ಬಿತ್ತು ನೋಡಿ ಗೋವಾ ರಾಜ್ಯದ ಭಾಗಕ್ಕೆ ಒಳಪಟ್ಟಿದ್ದ ಒಂದು ಸಣ್ಣ ರೈಲು ನಿಲ್ದಾಣ. ಅಲ್ಲೆ ಹಳಿಗಳ ದುರಸ್ಥಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಇನ್ನೆಷ್ಟು ದೂರ ಎಂದು ವಿಚಾರಿಸಿದಾಗ   ಅವರು ಹೇಳಿದ್ದು ಕೇಳಿ ನಮ್ ಹುಡ್ಗುರೆಲ್ಲಾ ತಕ್ಷಣ ಹೌಹಾರಿ ಉಸ್ಸಪ್ಪಾ ಎಂದ್ರು..ನಾವಿನ್ನು ಆ ರೈಲ್ವೇ ಸ್ಟೇಷನ್ ಇಂದ ಸುಮಾರು ೮ ಕಿ.ಮೀ ಕ್ರಮಿಸಬೇಕಿತ್ತು. … Read more

ಲೇಖನಗಳ ಆಹ್ವಾನ

ಸಹೃದಯಿಗಳೇ,  "ಅಸ್ಪೃಶ್ಯತೆ" ಕುರಿತ ನಿಮ್ಮ ಅನುಭವಗಳನ್ನು, ಚಿಂತನೆಗಳನ್ನು, ಕತೆ, ಕವಿತೆ, ಲೇಖನಗಳ ರೂಪದಲ್ಲಿ ಪಂಜುವಿಗೆ ಕಳುಹಿಸಿಕೊಡಿ.. ನಿಮ್ಮ ಬರಹಗಳು ದಿನಾಂಕ 11.04.2014 ರ ಒಳಗೆ ನಮಗೆ ತಲುಪಲಿ. ನಮ್ಮ ಈ ಮೇಲ್ ವಿಳಾಸ editor.panju@gmail.com, smnattu@gmail.com ಪಂಜು ಬಳಗದ ಪರವಾಗಿ ನಟರಾಜು

ನಾಯಿ ನಕ್ಕಿದ್ದು ಯಾಕೆ?!: ಗುರುಪ್ರಸಾದ ಕುರ್ತಕೋಟಿ

ಹೊಟ್ಟೆ ಹಸಿವೆಯಿಂದ ಗುರುಗುಡುತ್ತಿತ್ತು. ಯಾಕಿವತ್ತು ಇನ್ನೂ ತಟ್ಟೆಯ ಸಪ್ಪಳವೇ ಇಲ್ಲಾ? ನಾಲಿಗೆ ಹೊರ ಚಾಚಿ, ಮುಚ್ಚಿರುವ ತಲಬಾಗಿಲನ್ನೊಮ್ಮೆ ದಿಟ್ಟಿಸಿ ನೋಡುತ್ತಾ, ತಲೆಯ ಮೇಲೆ ಸುಡುತ್ತಿರುವ ಸೂರ್ಯನ ಶಾಖವನ್ನು ತಾಳಲಾರದೇ ತನ್ನ ಗೂಡಿನೆಡೆಗೆ ಕುಂಯ್ ಗುಡುತ್ತಾ ರಾಜಾ ವಾಪಸ್ಸಾದ. ಗೂಡಿನಲ್ಲಿ ತಾಪ ಇನ್ನೂ ಜಾಸ್ತಿಯಿತ್ತು. ತಾನು ಆ ಮನೆಯನ್ನು ಸೇರಿದ್ದು ಚಿಕ್ಕ ಕುನ್ನಿಯಾಗಿದ್ದಾಗ. ತನ್ನ ಅಮ್ಮ ಟ್ರಕ್ಕಿನಡಿಯಲ್ಲಿ ಸಿಕ್ಕಿ ಸತ್ತು ತಾನು ತಬ್ಬಲಿಯಾದಾಗ, ಮುದ್ದಾಗಿದ್ದೆನೆಂದೋ ಅಥವಾ ಮುಂದೆ ಮನೆ ಕಾಯುವೆನೆಂದೋ ತನ್ನನ್ನು ಮನೆಗೆ ತಂದು ಸಾಕಿದ್ದು ಈ ಮನೆಯ … Read more

ಚುಟುಕಗಳು: ಮಂಜು ಎಂ. ದೊಡ್ಡಮನಿ

1 ಒಲವಿನ ನೋಟಿಗೆ ಕನಸುಗಳ ಚಿಲ್ಲರೆ ಕೊಟ್ಟ ಹುಡುಗಿ.. ನನ್ನ ಹೃದಯವನೆಂದು ಕ್ರಯಕ್ಕೆ ಪಡೆಯುತ್ತಿಯ..? 2 ನಿನ್ನೆದುರು ನಾ ಹಾಕುವ ಕಣ್ಣಿರಿಗೆ ಬೆಲೆ ಸಿಗದಿದ್ದರೂ ಚಿಂತೆಯಿಲ್ಲ ಆ ಕಣ್ಣುಗಳ ಕಣ್ಣಿರಿಗೆ ನೀನೆಂದು ಕಾರಣಳಾಗಬೇಡ..! 3 ನನ್ನೆದೆಗೆ ಗುಂಡಿಡುವ ಮೊದಲು ಗುರಿಯನ್ನೊಮ್ಮೆ ಸರಿಯಾಗಿ ನೋಡು ಗುಂಡುಗಳು ನಿನ್ನೆದೆಯ ಹೊಕ್ಕಾವು..! 4 ಸಾಧನೆಗಳ ಸಾಧಕರ ಜೀವನವ ಓದುವಾಗ ಬೆನ್ನುಡಿಯಲ್ಲಿ ಸಿಕ್ಕಿದ್ದು ; ಬರೀ ನೋವು ಸಂಕಟ ಬಡತನ ಮತ್ತು ಅವಮಾನಗಳ ಬೃಹತ್ ಗಂಟು..! 5 ನನ್ನ ಹೃದಯದ ಗೋಡೆಗಳಿಗೆ ನೀನೆ … Read more

ಹೀಗೊಂದು ಪ್ರಲಾಪ: ಅಖಿಲೇಶ್ ಚಿಪ್ಪಳಿ

ಮೊನ್ನೆ ಮುಂಜಾನೆ ಗಣ್ಯರೊಬ್ಬರು ಕೆಲಸದ ಮೇಲೆ ನೋಡಲು ಬರುವವರಿದ್ದರು, ಗಣ್ಯರಿಗೆ ಒತ್ತಡಗಳಿರುತ್ತವೆ ಹಾಗೂ ಸರಿಯಾದ ಸಮಯಕ್ಕೆ ಬರಲು ಸಾಧ್ಯವಾಗದಿರುವುದು ಅಚ್ಚರಿಯ ವಿಷಯವಲ್ಲ. ೫-೧೦ ನಿಮಿಷದಲ್ಲಿ ಬರುತ್ತಾರೆ ಎಂಬುದನ್ನು ಗಣ್ಯರ ಸಹಾಯಕ ಜಂಗಮವಾಣಿಯ ಮುಖಾಂತರ ತಿಳಿಸುತ್ತಿದ್ದ. ಸರಿ ಮತ್ತೇನು ಮಾಡಲು ತೋಚದೆ, ರಸ್ತೆಗೆ ಬಂದು ನಿಂತೆ. ಮುಂಜಾನೆಯ ಹಕ್ಕಿಗಳ ಕಲರವದ ನಡುವೆ ನಾನೇನು ಕಡಿಮೆಯೆಂಬಂತೆ ಪುಟ್ಟ ಇಣಚಿಯೊಂದು ನಿರ್ಕಾಯ್ ಮರವನ್ನು ಜಿಗಿ-ಜಿಗಿದು ಏರುತಿತ್ತು. ನಗರದ ಹೊಲಸನ್ನು ಸ್ವಚ್ಚ ಮಾಡುವ ಪ್ರಯತ್ನದಲ್ಲಿ ಕಾಗೆಗಳ ಸಂತತಿ ಮಗ್ನವಾಗಿದ್ದವು. ಕೈವಾರದಿಂದ ಗೀರಿದಷ್ಟು ಕರಾರುವಕ್ಕಾದ … Read more

ಸಾಮಾನ್ಯ ಜ್ಞಾನ (ವಾರ 22): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಸಂವಿಧಾನದ ಯಾವ ತಿದ್ದುಪಡಿಯಲ್ಲಿ ಮತದಾನದ ವಯಸ್ಸು ೨೧ ರಿಂದ ೧೮ಕ್ಕೆ ವರ್ಷಕ್ಕೆ ಇಳಿಸಲಾಯಿತು? ೨.    ರಾಜಾಸಂಸಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿದೆ? ೩.    ಜಾರ್ಖಂಡ್ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ವರ್ಷ ಯಾವುದು? ೪.    ರಾಮನಾಥ ಅಂಕಿತವಿಟ್ಟು ವಚನಗಳನ್ನು ಬರೆದ ವಚನಕಾರ ಯಾರು? ೫.    ಭಾಷಾವಾರು ಪ್ರಾಂತ್ಯಗಳ ಮೇರೆಗೆ ಸ್ಥಾಪನೆಗೊಂಡ ಮೊದಲ ಭಾರತೀಯ ರಾಜ್ಯ ಯಾವುದು? ೬.    ಗೋಬರ್ ಗ್ಯಾಸ್‌ನಲ್ಲಿರುವ ಅನಿಲ ಯಾವುದು? ೭.    ಮೊದಲ ಬಾರಿಗೆ ಭೂಮಿಯ ಮೇಲೆ ಕಾಣಿಸಿಕೊಂಡ ಸಸ್ಯಜಾತಿ ಯಾವುದು? ೮.   … Read more

ಆಧುನಿಕ ಮಹಿಳೆಯರು ಶಿಲುಬೆಗೇರುವ ಪರಿ: ಶ್ರೀದೇವಿ ಕೆರೆಮನೆ

ನಾನು ಸೀತೆಯಷ್ಟು ಸಹಿಷ್ಣು, ಸರ್ವ ಸಹನೆಯವಳಲ್ಲ. ಅವಶ್ಯಕತೆ ಉಂಟಾದಲ್ಲಿ ನಾನು ವಿಪ್ಲವ ಮಾಡ ಬಲ್ಲೆ… ಪ್ರತಿ ಹಿಂಸೆಯನ್ನೂ ಮಾಡಬಲ್ಲೆ. ಕಳೆದ ಎರಡು ತಿಂಗಳಿಂದ ಡಾ. ಪ್ರತಿಭಾ ದೇವಿಯವರು ಬರೆದ, ಮೂತಿದೇವಿ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ’ಯಾಜ್ಞಸೇನಿ’ ಕೃತಿಯನ್ನು ಗೌತಮ ಗಾಂವಕರರು ನನ್ನ ಕೈಗಿಟ್ಟಾಗಿನಿಂದ ಕನಿಷ್ಟ ಸಾವಿರ ಸಲ ಈ ವಾಕ್ಯವನ್ನು ಓದಿದ್ದೇನೆ. ಆಸ್ವಾದಿಸಿದ್ದೇನೆ. ಒಳಗೊಳಗೇ ಈ ವಾಕ್ಯವನ್ನು ಮಥಿಸಿದ್ದೇನೆ, ಈ ವಾಕ್ಯವನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನವನ್ನೂ ಮಾಡಿದ್ದೇನೆ. ಬಹುಶಃ ಮಹಿಳಾ ವಾರಾಚರಣೆಯ ಈ ಸಂದರ್ಭದಲ್ಲಿ ಈ ಮಾತು ಕೇವಲ … Read more

ಕಾನನದ ನೀರವತೆಯ ನಡುವೆ ರೈಲು ಹಳಿಗಳ ಮೇಲೊಂದು ಪಯಣ (ಭಾಗ 1): ನಿಶಾಂತ್ ಜಿ.ಕೆ.

ನಡೆದೂ ನಡೆದೂ ಸುಸ್ತಾಗಿತ್ತು ಆಗಲೇ ಸುದೀರ್ಘ ಐದು ಘಂಟೆಗಳ ಕಾಲದ ದುರ್ಗಮ ಹಾದಿ ಸವೆದು ಹೋಗಿತ್ತು, ಅಬ್ಬಾ ಇನ್ನು ನಡೆಯಲಾಗುವುದಿಲ್ಲ ಎಂದು ಏದುಸಿರು ಬಿಡುತ್ತಾ ಕೂತಾಗ ಮೈ ತಾಗಿದ ತಣ್ಣನೆಯ ಮುತ್ತಿನಂತ ಮಂಜಿನ ಹನಿ ಸ್ಪೂರ್ತಿ ನೀಡಿ ಮತ್ತೆ ಮುಂದಡಿಯಿಡಲು ಸಹಕರಿಸಿತ್ತು. ಹಾಗೆಯೇ ಇನ್ನು ಸ್ವಲ್ಪ ದೂರ ಕ್ರಮಿಸಿದ ನಂತರ ಸಿಕ್ಕ ಸೌಂದರ್ಯದ ಗಣಿ ಆರು ಘಂಟೆಗಳ ಕಾಲದ ಹಿಂದಿನ ದುರ್ಗಮ ಹಾದಿಯಲ್ಲಿ ಸಾಗಿದ ಆಯಾಸವನ್ನೆಲ್ಲಾ ಮರೆಸಿ ಎಲ್ಲರನ್ನು ಮಂತ್ರಮುಗ್ದರನ್ನಾಗಿಸಿತ್ತು.  ಅಯ್ಯೋ ಇದೇನಿದು ಕಥೆ ಸ್ಟಾರ್ಟ್ ಮಾಡೋಕು … Read more

ಹೆಸರಿಡದ ಕತೆಯೊಂದು (ಭಾಗ 4): ಪ್ರಶಸ್ತಿ ಪಿ.

ಇಲ್ಲಿಯವರೆಗೆ ಧನಸಂಪಾದನೆಯಲ್ಲಿ ಮಧ್ಯಮ ವರ್ಗವೂ, ಧಾರಾಣತನದಲ್ಲಿ ಕಡುಬಡವರೂ ಆಗಿದ್ದ ಕುಟುಂಬವೊಂದರಲ್ಲಿ ಹುಟ್ಟಿದ ಮೇಧಾವಿ ಶ್ಯಾಮ. ಧನಸಂಪಾದನೆಯಲ್ಲಿ ಬಡವರಾಗಿದ್ದರೂ ಹೃದಯ ವೈಶಾಲ್ಯತೆಯಲ್ಲಿ ಶ್ರೀಮಂತರಾಗಿದ್ದ ಕುಟುಂಬದಲ್ಲಿ ಹುಟ್ಟಿದವ ಶ್ಯಾಮನ ಚಡ್ಡೀ ದೋಸ್ತ ಕಿಟ್ಟಿ. ಕಿಟ್ಟಿ ಹೈಸ್ಕೂಲಿಗೇ ವಿದ್ಯೆಗೆ ಶರಣು ಹೊಡೆದು ಪೇಟೆಯ ಗ್ಯಾರೇಜು ಸೇರಿದ್ರೆ ಶಾಲೆಯ ಟಾಪರ್ರಾಗಿದ್ದ ಶ್ಯಾಮ ಮುಂದೆ ಓದೋ ಛಲದಿಂದ ಡಿಗ್ರಿವರೆಗೂ ಮುಟ್ಟಿದ್ದ. ಡಿಗ್ರಿಯಲ್ಲಿ ಶ್ಯಾಮನ ಕಣ್ಣಿಗೆ ಬಿದ್ದ ಹುಡುಗಿ ಶಾರ್ವರಿ. ಇಬ್ಬರ ಹಲವು ವಿಚಾರಧಾರೆಗಳು ಹೊಂದುತ್ತಿದ್ದರಿಂದ್ಲೋ ಏನೋ ಇಬ್ಬರಲ್ಲೂ ಏನೋ ಆಕರ್ಷಣೆ.. ಅದು ಪ್ರೀತಿಯೆಂದಲ್ಲ. ಏನೋ … Read more

ಕಾಲದ ಚಕ್ರವು ತಿರುಗುವುದೊ ಜ್ವಾಕಿ,, ಮುಪ್ಪೆಂಬ ಶೈಶವ ಬರುವುದೊ ನಕ್ಕಿ: ಸುಮನ್ ದೇಸಾಯಿ

    ರವಿವಾರ ಸಂಜಿಮುಂದ ವಾಕಿಂಗ್‌ಗೆಂತ ಪಾರ್ಕಿಗೆ ಹೋಗಿದ್ದೆ. ಅಲ್ಲೆ ಒಂದ ಬೆಂಚಿನ ಮ್ಯಾಲೆ ವಯಸ್ಸಾದ ಇಬ್ಬರು ಅಜ್ಜಾ-ಅಜ್ಜಿ ಕೂತಿದ್ರು. ದಿನಾ ನೋಡತಿದ್ದೆ ಅವರನ್ನ. ಅವರನ್ನ ನೋಡಿ ಒಂಥರಾ ಖುಷಿನು ಆಗತಿತ್ತು. ಇಳಿವಯಸ್ಸಿನ್ಯಾಗ ಒಬ್ಬರಿಗೊಬ್ಬರು ಜೊಡಿಯಾಗಿ ದಿನಾ ಈ ಹೊತ್ತಿನ್ಯಾಗ ಆ ಪಾರ್ಕಿಗೆ ಬರತಿದ್ರು. ಅವತ್ತ ಅವರನ್ನ ಮಾತಾಡ್ಸಬೇಕನಿಸಿ ಹತ್ರ ಹೋಗಿ ಮಾತಾಡಿಸಿದೆ. ನಾ ಹಂಗ ಅವರ ಹತ್ರ ಹೋಗಿ ಮಾತಾಡ್ಸಿದ್ದು ಆ ದಂಪತಿಗಳಿಗೆ ಭಾಳ ಖುಷಿ ಆತು. ಹತ್ರ ಕೂಡಿಸಿಕೊಂಡು ಭಾಳ ಅಂತಃಕರಣದಿಂದ ಮಾತಾಡ್ಸಿದ್ರು. ಅವರ … Read more

ಹೆಂಡತಿಯೊಬ್ಬಳು ಮನೆಯೊಳಗಿಲ್ಲದಿದ್ದರೆ: ಅಮರ್ ದೀಪ್ ಪಿ.ಎಸ್.

ಆಗಾಗ ಹೆಂಡತಿಯಾದವಳು ತವರಿಗೆ ಹೋಗಿ ಬರುತ್ತಿರಬೇಕು. ಮನೆಯ ದಿನನಿತ್ಯ ನಡೆಯುವ ಚಟುವಟಿಕೆಗಳಿಗೆ ಗಂಡನಾದವನು ಕಣ್ತೆರೆದಂತಾಗುತ್ತೆ. ಅಡುಗೆ ಕಸ, ಮುಸುರೆ, ದೇವರ ಪೂಜೆ, ಸಂಜೆ ಮುಂದೆ ದೀಪ ಹಚ್ಚುವುದು ಎಲ್ಲಾ ಕಡೆ ಗಮನ ಹರಿಸಿದಂತಾಗುತ್ತದೆ. ಹೆಂಡತಿ ಹೋದ ಮೊದ ಮೊದಲ ದಿನಗಳಲ್ಲಿ ಹುಮ್ಮಸ್ಸಿನ ಸ್ನಾನ,  ಸ್ನಾನದ ಮಧ್ಯೆ ಹಳೇ ಹಳೇ ನೆನಪುಗಳ ಹಾಡುಗಳು. ಹಳೆಯ ಹುಡುಗಿಯು ಹಲ್ಲು ಕಾಣದಂತೆ ನಕ್ಕ ನಗೆಯ ಪುಳಕ. ಹೊರ ಬರುತ್ತಿದ್ದಂತೆಯೇ ರಜೆಯನ್ನು ಎಲ್ಲಿ ಹೇಗೆ ಆಚರಿಸುವುದು? ಯಾರು ಜೊತೆಯಿರಬೇಕು? ಯಾರಿಗೆ ಫೋನು ಮಾಡಬೇಕು? … Read more

ಎಂದೆಂದಿಗೂ ಬೆಳಗುತಿರಲಿ ನನ್ನೊಡಲ ಮಿಹಿರ: ಸಂಗೀತ ರವಿರಾಜ್

ನನ್ನ ಒಲವೆ ಹೇಳೇ ಚೆಲುವೆ ಪ್ರೀತಿಯೊಂದೆ ಗೆಲ್ಲದೇ ನಾನು ನೀನು ಕೂಡಿ ಕಳೆದ ಬದುಕೆ ನಮ್ಮ ಕಾಯದೇ ಕೊಡಲು ಕೊಳ್ಳಲು ಒಲವು ಬಿಟ್ಟು ಬೇರೆ ಉಂಟೆ ಬಾಳಲಿ ಕೊಟ್ಟದೆಷ್ಟೋ ಪಡೆದದೆಷ್ಟೋ ನಮ್ಮ ನಂಟೆ ಹೇಳಲಿ ಜಯತೀರ್ಥ ಎಂಬುವರ ಕವಿವಾಣಿಯನ್ನು ನಾನು ಡೈರಿಯಲ್ಲಿ ಬರೆದಂದಿನಿಂದ ಅದೆಷ್ಟು ಬಾರಿ ಓದುತ್ತಿರುತ್ತೇನೋ ನನಗೆ ತಿಳಿಯದು. ಬೆಟ್ಟದಷ್ಟು ಇಷ್ಟಪಟ್ಟ ಈ ಸಾಲುಗಳಿಂದ ನನ್ನ ಹೃದಯಕ್ಕೆ ಏನೋ ಅರಿವಾಗದ ಆಪ್ತತೆ ಮತ್ತು ಕಕ್ಕುಲತೆ. ಇದಕ್ಕೊಂದು ಬಲವಾದ ಕಾರಣವಿದೆ. ನನ್ನ ಮದುವೆಯ ಆಮಂತ್ರಣ ಪತ್ರಿಕೆಗೆ ಪತ್ರಕರ್ತ … Read more

ಹೊಟ್ಟೆ ಪಾಡು !!: ಸಂತೋಷ್ ಗುರುರಾಜ್

ಸುಮಾರು ವರ್ಷಗಳಿಂದಲೂ, ಎಂದರೆ ಭಾರತಕ್ಕೆ ಸ್ವತಂತ್ರ ಪೂರ್ವದಿಂದಲೂ ಮತ್ತು ಸ್ವತಂತ್ರ ಬಂದ ಮೇಲೆಯೂ ಸಹ ಆಗಿನ ಬಹುತೇಕ ಜನರು ತಮ್ಮ ಹೊಟ್ಟೆ ಪಾಡಿಗಾಗಿ ಪರೆದಾಡುವ ಪರಿಸ್ಥಿತಿ ಇತ್ತು ಎಂದು ನಾವು ಓದಿದ ಅಥವಾ ಕೇಳಿದ ಚರಿತ್ರೆ ಇಂದ ತಿಳಿಯುತ್ತದೆ. ಆದರೆ ಇಂದಿನ ಹೊಟ್ಟೆ ಪಾಡಿಗೂ ಮತ್ತು ಅಂದಿನ ಹೊಟ್ಟೆ ಪಾಡಿಗೂ ಬಹಳಷ್ಟು ವ್ಯತ್ಯಾಸವಿದೆ. ಆಗಿನ ಕಾಲದಲ್ಲಿ ಜನ ತಮ್ಮ ಹೊಟ್ಟೆಗೆ ಎರಡು ಹೊತ್ತು ಗಂಜಿ ಸಿಕ್ಕರೆ ಸಾಕು ಎನ್ನುವ ಹೊಟ್ಟೆಪಾಡು ಆದರೆ ಈಗಿನ ಜನ ಹೊಟ್ಟೆಯ ಸುತ್ತು … Read more

ಹಬ್ಬದ ದಿನದ ತಳಮಳ: ಪದ್ಮಾ ಭಟ್

                    ಹಬ್ಬಕ್ಕೆ ಬತ್ತಿಲ್ಯ? ಬಾರೇ.. ಎರಡು ದಿನಾ ಆದ್ರೂ ಬಂದು ಹೋಗು ಎಂದು ಅಮ್ಮ ಫೋನ್ ಮಾಡಿ ಹೇಳಿದಾಗ, ಇಲ್ಲವೆನ್ನಲು ಮನಸ್ಸು ಒಪ್ಪದಿದ್ದರೂ, ಅನಿವಾರ್‍ಯವಾಗಿ ಮನಸ್ಸನ್ನು ಒಪ್ಪಿಸಲೇಬೇಕಾಗಿತ್ತು.. ಇಲ್ಯೆ.. ಈಗ ಬತ್ನಿಲ್ಲೆ, ಮುಂದಿನ ತಿಂಗಳು ಬತ್ತೆ .. ಎಂದು ಹೇಳಿ ಫೋನ್ ಇಟ್ಟಿದ್ದೆ.. ಹಬ್ಬಕ್ಕೂ ಊರಿಗೂ ಅದ್ಯಾವ ನಂಟೋ ಕಾಣೆ.. ಹಬ್ಬದ ದಿನ ಊರನ್ನು ಬಿಟ್ಟು ಬೇರೆಲ್ಲಿಯೇ ಇದ್ದರೂ, ಪರಿಪೂರ್ಣವೆಂದೆನಿಸುವುದೇ ಇಲ್ಲ..ಏನಾದರೂ ಪುಸ್ತಕ ಓದೋಣವೆಂದು ಕುಳಿತೆನಾದರೂ, … Read more

ಕನ್ನಡವೇ ನಿತ್ಯ: ಸ್ಮಿತಾ ಅಮೃತರಾಜ್

ನಾವು ಎಲಿಮೆಂಟರಿ ಶಾಲೆಗೆ ಹೋಗುವ ಹೊತ್ತಿಗೆ ಅಲ್ಲೊಂದು ಇಲ್ಲೊಂದರಂತೆ ಅಕ್ಕಪಕ್ಕದ ಊರುಗಳಲ್ಲಿ  ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಗಳು ಹಣಕಿ ಹಾಕುತ್ತಿದ್ದವಷ್ಟೆ. ಉಳ್ಳವರು ಹಾಗು  ತಮ್ಮ ಮಕ್ಕಳನ್ನು ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಗೆ  ಸೇರಿಸಬೇಕೆಂಬ ಮಹಾತ್ಕಾಂಕ್ಷೆ ಹೊತ್ತ ಹೆತ್ತವರ ಮಕ್ಕಳಿಗೆ ಮಾತ್ರ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ನೊಳಕ್ಕೆ ಹೊಕ್ಕು ಲಯ ಬದ್ಧವಾಗಿ ಇಂಗ್ಲೀಷ್ ಪ್ರಾರ್ಥನೆಯನ್ನು  ಉಸುರುವ ಭಾಗ್ಯ. ನಾವೆಲ್ಲಾ ಬರೇ ಕಾಲಿನಲ್ಲಿ. ಹೆಚ್ಚೆಂದರೆ ಹವಾಯಿ ಚಪ್ಪಲನ್ನು ತೊಟ್ಟು ಬಲು ದೂರದಿಂದ ನಡೆದು ಕೊಂಡೇ ಬರುವಾಗ,  ಅವರುಗಳೆಲ್ಲಾ ಗರಿ ಗರಿ … Read more

ಮಾರ್ಚ್ ತಿಂಗಳು, ವಿಶ್ವ ಅರಣ್ಯ ಮತ್ತು ಜಲ ದಿನ: ಅಖಿಲೇಶ್ ಚಿಪ್ಪಳಿ

ಮಾರ್ಚ್ ತಿಂಗಳೆಂದರೆ ಹಣಕಾಸಿನ ವರ್ಷ ಮುಗಿಯುವ ತಿಂಗಳು. ಭೂಮಿಯ ಮೇಲೆ ಬದುಕುವ ಎಲ್ಲಾ ಜನರು ಹಣದ ಮೇಲೆ ಅವಲಂಬಿತರಾಗಿದ್ದಾರೆ. ಯಾವ ಬ್ಯಾಂಕಿಗೆ ಹೋದರು ಎಲ್ಲರೂ ಬ್ಯುಸಿ ಮತ್ತು ಬಿಸಿ. ಲೆಕ್ಕಪರಿಶೋಧಕರಿಗೆ ಕೈತುಂಬಾ ಕೆಲಸ. ಸರ್ಕಾರದ ಛಪ್ಪನ್ನಾರು ಇಲಾಖೆಗಳು ಮಾರ್ಚ್ ಕೊನೆಯ ಹಂತದಲ್ಲಿ ಬ್ಯುಸಿ ತನ್ಮಧ್ಯೆ ಚುನಾವಣೆಯ ಕಾವು ವಾತಾವರಣದ ಕಾವು ಸೇರಿ ಜನಜೀವನ ಅಸ್ತ್ಯವಸ್ತವಾಗಿದೆ. ಮಾರ್ಚ್ ತಿಂಗಳಲ್ಲೇ ಕುಡಿಯುವ ನೀರಿನ ಸಮಸ್ಯೆ ದುತ್ತೆಂದು ಉದ್ಬವಿಸಿದೆ. ಮಾರ್ಚ್ ತಿಂಗಳ 21ನೇ ತಾರೀಖು ವಿಶ್ವ ಅರಣ್ಯ ದಿನ. ಈ ತಿಂಗಳಲ್ಲಿ … Read more

ಮೊದಲ ಸಲಾ: ಅನಿತಾ ನರೇಶ್ ಮಂಚಿ

 ಏನೇ ಹೇಳಿ.. ಜೀವನದಲ್ಲಿ  ಮೊದಲ ಸಲ ಎನ್ನುವುದು ಪ್ರತಿಯೊಬ್ಬನ ಮನಸ್ಸಿನಲ್ಲಿಯೂ ವಿಶೇಷವಾಗಿಯೇ ನೆನಪಿರುತ್ತದೆ. ಮೊದಲ ಸಲ ಶಾಲೆಯ ಮೆಟ್ಟಿಲು ಹತ್ತಿದ್ದು, ಮೊದಲ ಸಲ ತಪ್ಪು ಮಾಡಿ ಶಿಕ್ಷೆ ಅನುಭವಿಸಿದ್ದು, ಮೊದಲ ಸಲ ಯಾರಿಗೂ ಕಾಣದಂತೆ ಅಮ್ಮನ ಸೀರೆ ಉಟ್ಟದ್ದು, ಹುಡುಗರಾದರೆ ಸೊಂಟದಿಂದ ಜಾರುವ ಭಯವಿದ್ದರೂ ಅಪ್ಪನ ಪಂಚೆಯನ್ನುಟ್ಟು ದೊಡ್ಡವನಾದಂತೆ ಮೆರೆದದ್ದು, ಇಷ್ಟೇ ಏಕೆ ಮೊದಲ ಸಲ ಯಾರೊಡನೆಯೋ ಕಣ್ಣೋಟ ಕೂಡಿದ್ದು, ಕನಸಾಗಿ ಕಾಡಿದ್ದು.. ಯಾವುದನ್ನೇ ಹೇಳಲಿ ಮೊದಲ ಸಲ ಎನ್ನುವುದು ನಮಗೆ ನೆನಪಾದಂತೆ ಮನಸ್ಸಿಗೆ ಮುದ ನೀಡುವುದಂತೂ … Read more

ರಸ್ತೆ ಅಪಘಾತವೂ ಪರಿಹಾರದ “ಮಾರ್ಗ” ವೂ: ಅಮರ್ ದೀಪ್ ಪಿ.ಎಸ್.

ಆಗತಾನೇ ರಾಜಣ್ಣ ಹಳೇ ಹಗರಿಬೊಮ್ಮನಹಳ್ಳಿ ದಾಟಿ ರಸ್ತೆಯ ಎಡಕ್ಕಿರುವ ಧಾಭಾದಲ್ಲಿ ಏಕಾಂತದ   ಮೇಜಿನ ಮೇಲೆ ಗ್ಲಾಸಿನಿಂದ ಬ್ಲೆಂಡರ್ ಸ್ಪ್ರೈಡ್  ಕೊನೆಯ ಸಿಪ್ಪು ಗುಟುಕರಿಸಿ ಕೆಳಗಿಟ್ಟು ಇನ್ನೇನು ಎದ್ದೇಳಬೇಕು, ಆಗ ರಾಜಣ್ಣನ ಫೋನು ರಿಂಗಣಿಸಿತು. ದೇವಾ  ಕರೆ ಮಾಡಿದ್ದ.  ಆಗ ಸಮಯ ರಾತ್ರಿ ಹನ್ನೊಂದುವರೆ ಆಗಿತ್ತು.  ದ್ವನಿಯಲ್ಲಿ ಗಾಬರಿ ಇತ್ತು. "ಅಣ್ಣಾ, ನನ್ನ ಡ್ರೈವಿಂಗ್ ಲೈಸೆನ್ಸ್ ಇದ್ದ ವಾಲೆಟ್ ಕಳೆದು ಹೋಗಿದೆ."  ಅಂದ. ನಿಶೆಯಲ್ಲಿ ರಾಜಣ್ಣ ಧಾಭಾದ ಹೊರಗೆ ಬರುತ್ತಾ "ಈಗೇನ್ ಹೊಸಾದು ಕೊಡುಸ್ಲೆನಲೇ"  ಎಂದು ಗದರಿ … Read more

ಅಲ್ಲೂರಿಯ ಒಡಲುರಿ ಇನ್ನೂ ಆರಿಲ್ಲ…!: ಅಜ್ಜಿಮನೆ ಗಣೇಶ್

ನಮಗೆ ನೀರು ಬೇಡ, ರಸ್ತೆ ಬೇಡ, ಮನೆಯೂ ಬೇಡ, ಸ್ವಾತಂತ್ರ್ಯದ ಗುರುತಿನ ಒಂದೇ ಒಂದು ಪತ್ರ ಬೇಡ. ನಿಮ್ಮ ಸವಲತ್ತುಗಳು ನಿಮಗೆ ಇರಲಿ. ನಮ್ಮನ್ನ ಬದುಕಲು ಬಿಡಿ. ಕಾಡು ಕಾಯುವವರು ನಾವು ನಮಗೆ ಸಾಮಾಜಿಕ ನ್ಯಾಯ ಕೊಡಿ. ಹಸಿರುಟ್ಟ ಹಾಡಿಯಲ್ಲಿ, ನೆಮ್ಮದಿಯ ಬದುಕಿಗಾಗಿ ಹಾತೊರೆಯುತ್ತಿರುವ ಆದಿವಾಸಿಗಳ ಅಹವಾಲಿದು..ಬದಕಲು ಬಿಡಿ ಅಂತ ಅಂಗಲಾಚುತ್ತಿರುವ ಪರಿಯಿದು…ದೊಡ್ಡ ಗೌಡರ ಬಾಗಿಲಿಗೆ ನಮ್ಮ ಎಲುಬಿನ ತ್ವಾರಣಾ. ಶೋಷಣೆ ವಿರುದ್ಧದ  ಈ ಹಾಡು ಮಲೆನಾಡ  ಮಡಿಲೊಳಗೆ ಹರಡಿದ ಕಾಡು ದರಲೆ ಮೇಲೆ ನೆತ್ತರ ಹರಿಸಿದ್ದು, … Read more