ಚೈತ್ರಳೆಂಬ ಚಿಗುರೆ ಮರಿ ಚಿಗುರಿದ ಹೊತ್ತು: ಷಡಕ್ಷರಿ ತರಬೇನಹಳ್ಳಿ

ಕಳೆದ ಕೆಲವು ತಿಂಗಳುಗಳಿಂದ ನಮ್ಮ ಮನೆಯಲ್ಲಿ ಯಾರು ಮಾತನಾಡಿದರೂ ಅವಳು ಗರ್ಭದರಿಸಿದ ಬಗ್ಗೆಯೇ ಚರ್ಚೆ. ಅವಳು ನಮ್ಮ ಮನೆಗೆ ಬಂದು ಎಷ್ಟು ತಿಂಗಳುಗಳಾದವು? ಆದರೂ ಯಾಕೆ ಅವಳು ಇನ್ನೂ ಮರಿ ಹಾಕಲಿಲ್ಲ? ಎಂಬೆಲ್ಲ ಅನೇಕರ ತೀರದ ಕುತೂಹಲಗಳಿಗೆ ಉತ್ತರವೆಂಬಂತೆ ಅವಳು ಗರ್ಭದರಿಸಿದ ಸೂಚನೆ ನೀಡಿ ನಮ್ಮೆಲ್ಲರ  ಪ್ರಶ್ನೆಗಳಿಗೆ ಉತ್ತರಿಸಿದ್ದಳು. ಅವಳು ನಮ್ಮ ಮನೆಗೆ ಬಂದ ಮೊದಲ ದಿನಗಳ ನೆನಪು ಇನ್ನೂ ಹಸಿರಾಗಿದೆ. ಇವಳ ಅಕ್ಕ ನನ್ನವಳ ತವರೂರಿನಿಂದ ಬಂದ ಶ್ವೇತ ನಮ್ಮ ತೋಟದಲ್ಲಿ ಅಂಡಲೆದು ಹಸಿರುಕ್ಕುವ ಸೊಪ್ಪು … Read more

ಯಾರಪ್ಪನ ಮನೆ ಗಂಟು ಏನ್ ಹೋಗ್ಬೇಕಾಗೈತಿ: ಅಮರ್ ದೀಪ್ ಪಿ.ಎಸ್.

  ಹೈಸ್ಕೂಲ್ ದಿನಗಳಲ್ಲಿ ನಮ್ಮ ಮೇಷ್ಟ್ರು ಒಬ್ಬರಿದ್ದರು. ಬಿಡಿ, ಒಬ್ಬರಲ್ಲ ಬಹಳ ಮಂದಿ ಗುರುಗಳಿದ್ದಾರೆ. ಅವರಲ್ಲಿ ಒಬ್ಬರು ಸಂಕಪ್ಪ ಅಂತಿದ್ದರು. ಈಗ ನಿವೃತ್ತಿಯಾಗಿ ನಮ್ಮೂರಲ್ಲೇ ಇದ್ದಾರೋ ಅವರ ಸ್ವಗ್ರಾಮ ಹಡಗಲಿ ತಾಲೂಕಿನ ಉತ್ತಂಗಿಯಲ್ಲಿದ್ದಾರೋ ಗೊತ್ತಿಲ್ಲ. ಅವರು ನಮ್ಗೆ ಗಣಿತ ವಿಷಯ ತಗಳ್ಳೋರು.  ಆದರೆ ಅವರ ಇಂಗ್ಲೀಷು ಚೆನ್ನಾಗಿತ್ತು.  ಎತ್ತರದ, ಸ್ಥೂಲ ದೇಹವನ್ನು ಹೊತ್ತು ಕ್ಲಾಸ್ ರೂಮಿಗೆ  "ಎ ಸ್ಕ್ವೇರ್ ಪ್ಲಸ್ ಬಿ ಸ್ಕ್ವೇರ್ ಇಸ್ ಇಕ್ವಲ್  ಟು ………. " ಹೇಳುತ್ತಲೇ ಎಂಟ್ರಿ ಕೊಡುತ್ತಿದ್ರು. ಸುಮ್ನೆ ಕುಳಿತೆವೋ … Read more

ಸೀರೆಯ ಪರಿ: ಪದ್ಮಾ ಭಟ್॒

                                 ಅರೆ! ನಾನು ಸೀರೆಯನ್ನು ಉಟ್ಟುಕೊಳ್ಳುವಷ್ಟು ದೊಡ್ಡವಳಾಗಿಬಿಟ್ಟೆನಾ?  ಹೀಗಂತ ಮೊನ್ನೆ ಕಾಲೇಜಿನಲ್ಲಿ ನಡೆದ ನ್ಯಾಶನಲ್ ಸೆಮಿನರ್ ಗೆ ಎಲ್ಲರೂ ಕಂಪಲ್ಸರಿ ಸೀರೆಯನ್ನು ಉಡಲೇಬೇಕೆಂಬ ವಿಚಾರಕ್ಕೆ ಅನಿಸಿತ್ತು.. ಛೇ ನಾ ಸೀರೆ ಉಡಲ್ಲ ನಂಗೆ ಚನ್ನಾಗಿ ಕಾಣೋಲ್ಲ ಅಂತ ಎಷ್ಟೋ ಬಾರಿ sಕನ್ವಿನ್ಸ್ ಮಾಡಲು ಪ್ರಯತ್ನಿಸಿದ್ದೇನಾದ್ದರೂ ಫಲ ಕಂಡಿರಲಿಲ್ಲ. ಆದರೂ ಮನಸ್ಸಿನಲ್ಲಿ ಒಂದು ರೀತಿಯ ಸಂಭ್ರಮ ನನಗಂತ … Read more

ಹಳ್ಳಿಮೇಷ್ಟ್ರು: ಪತ್ರೇಶ್. ಹಿರೇಮಠ್

ಹಳ್ಳಿಮೇಷ್ಟ್ರು ಎಂದಾಕ್ಷಣ ಖ್ಯಾತ ನಟ ರವಿಚಂದ್ರನ್ ಚಲನಚಿತ್ರ ಕಥೆಯೆಂದು ಭಾವಿಸಿದರೆ ತಪ್ಪಾದೀತು. ಇದು ನಮ್ಮ  ಇಡೀ ಊರಿಗೇ ಊರೇ ಬಾಗಿ ಗೌರವಿಸುತ್ತಿದ್ದ ಹಳೆಯ ಪ್ರೀತಿಯ ಮೇಷ್ಟ್ರುಗಳ ವಿಷಯವಿದು. ಶಿಕ್ಷಕರಿಗೆ ದೇಗುಲ ನಿರ್ಮಿಸಿದ ನಾಡ ವಿದ್ಯಾವಂತರು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಹಳ್ಳಿಯ ಹಳೆಯ ಮೇಷ್ಟ್ರುಗಳ ಬದುಕಿನ ಕಥಾ ಸರಮಾಲೆಯಿದು.   ಈಗ ಶಿಕ್ಷಕ ವೃತ್ತಿಯೆಂದರೆ ಬೆಳಿಗ್ಗೆ ಹತ್ತಕ್ಕೆ ಶಾಲೆಗೆ ಹೊರಡುವುದು, ಪ್ರಾರ್ಥನೆ,ಪಾಠ, ಮಾಡುವುದು ಪುನಃ ಸಂಜೆ ಐದಕ್ಕೆ ಮನೆಗೆ ಮರಳುವುದು. ಇದು ಇಂದಿನ ಬಹುತೇಕ ಶಿಕ್ಷಕರ ದಿನಚರಿ. ಈಗಿನ … Read more

ಐ!!! ಇರುವೆ: ಅಖಿಲೇಶ್ ಚಿಪ್ಪಳಿ

ಎಲ್ಲಾ ಕಾಲದಲ್ಲೂ ಇರುವೆಗಳು ಮನುಷ್ಯನಿಗೆ ಉಪದ್ರವಕಾರಿಗಳೇ ಸೈ ಎಂದು ಸಾಮಾನ್ಯ ತಿಳುವಳಿಕೆ. ಸಂಜೆ ದೇವರ ಮುಂದೆ ಹಚ್ಚಿರುವ ದೀಪದ ಹಣತೆ (ಹಿತ್ತಾಳೆಯದ್ದು) ಬೆಳಿಗ್ಗೆ ನೋಡಿದರೆ ಬಣ್ಣ ಬದಲಾಯಿಸಿ ಕಪ್ಪಾಗಿದೆ, ದೀಪ ನಂದಿಹೋಗಿದೆ. ಹಣತೆಯ ಮೇಲೆ ಅಗಣಿತ ಸಂಖೈಯ ಇರುವೆಗಳು. ಬೆಳಿಗ್ಗೆ ಮತ್ತೆ ದೀಪ ಹಚ್ಚುವ ಮುಂಚೆ ಇರುವೆಗಳನ್ನೆಲ್ಲಾ ದೂರ ಓಡಿಸಬೇಕು. ಹಣತೆಯ ಒಳಗೆ ಎಣ್ಣೆಯಲ್ಲಿ ಬಿದ್ದು ಸತ್ತ ಮತ್ತಷ್ಟು ಅಸಂಖ್ಯ ಇರುವೆಗಳು. ಕೈ-ಕಾಲಿಗೆ ಕಚ್ಚುವ ಜೀವಂತ ಇರುವೆಗಳು ಇಷ್ಟಕ್ಕೇ ಮುಗಿಯಲಿಲ್ಲ, ಅಕ್ಕಿ ಡಬ್ಬದ ಬಾಯಿ ತೆಗೆದರೆ ಅಕ್ಕಿಯಲ್ಲೂ … Read more

ಮನೆಯೆ ಮೊದಲ ಪಾಠಶಾಲೆ: ಸುಮನ್ ದೇಸಾಯಿ

ಮೊನ್ನೆ ಗದಗ ಜಿಲ್ಲೆಯ ೬ನೇ ಸಾಹಿತ್ಯ ಸಮ್ಮೆಳನಕ್ಕ ಹೋಗಿದ್ದೆ. ಅಲ್ಲೆ ಮಕ್ಕಳ ಕಾವ್ಯವಿಹಾರ ಅನ್ನೊ ಒಂದು ಮಕ್ಕಳ ಕವಿಗೊಷ್ಠಿ ಎರ್ಪಡಿಸಿದ್ರು. ಮಕ್ಕಳು ಏನ ಕವಿತೆ ಬರಿಬಹುದು ಅಂತ ಕೂತುಹಲದಿಂದ ನೋಡ್ಲಿಕತ್ತಿದ್ದೆ. ವೇದಿಕೆ ಮ್ಯಾಲೆ ಒಂದ ಹತ್ತು ಮಕ್ಕಳಿದ್ರು. ಕವಿಗೊಷ್ಠಿ ಶುರುವಾದ ಮ್ಯಾಲೆ ಅ ಮಕ್ಕಳ ಪ್ರತಿಭೆ ನೋಡಿ ಆಶ್ಚರ್ಯ ಅನಿಸ್ತು. ಒಬ್ಬರಕಿಂತಾ ಒಬ್ಬರು ಸುಂದರವಾದ ಕವನಗಳನ್ನ ರಚಿಸಿದ್ರು. ಆ ಕವನಗಳಳೊಗ ಬೆರಗು, ಸೊಗಸು, ಮತ್ತ ಪ್ರಸ್ತುತ ಸಮಾಜದಲ್ಲಿಯ ಸಮಸ್ಯೆಗಳ ನೆರಳಿತ್ತು. ಮಕ್ಕಳ ಈ ಸೂಷ್ಮ ಗ್ರಹಣ ಶಕ್ತಿ … Read more

ಹೆಸರಿಡದ ಕಥೆಯೊಂದು (ಭಾಗ 2): ಪ್ರಶಸ್ತಿ ಪಿ.

ಇಲ್ಲಿಯವರೆಗೆ ಕೈಯಲ್ಲಿದ್ದ ಕರಗಿದ ಐಸ್ ಕ್ಯಾಂಡಿ ಪಟ್ಟಣಕ್ಕೆ ಬಂದು ಕಳೆದೇ ಹೋಗುತ್ತಿರುವ ಕಾಲದ ಬಗ್ಗೆ, ಇನ್ನೂ ದೊರಕದ ಭದ್ರ ಕೆಲಸದ ನೆನಪ ಹೊತ್ತು ತಂತು. ಬಂದೊಂದು ತಿಂಗಳಿನಲ್ಲೇ ಒಂದು ದಿನವೂ ಬಿಡದೆ ಇಂಟರ್ವ್ಯೂಗಳಿಗೆಂದು ಅಲೆದಿದ್ದರೆ ಏನಾದ್ರೂ ಕೆಲಸ ದಕ್ಕುತ್ತಿತ್ತೇನೋ. ಆದ್ರೆ ದಿನಾ ಅಲೆಯಲು ದುಡ್ಡೆಲ್ಲಿ ? ಕೆಲಸ ಹುಡುಕ್ತಿದಾನೆ ಬೇಕಾಗತ್ತೆ ಅಂತ ಅಪ್ಪ ತಿಳಿದು ಕೊಟ್ಟರೆ ತಾನೆ ಇವನಿಗೆ ದುಡ್ಡು ? ಸ್ನೇಹಿತರತ್ರ ಎಷ್ಟಂತ ಕೇಳೋದು ? ಕಂಡರೆ ಸಾಲ ಕೇಳ್ಬೋದು ಅಂತ ಇವನ ಕಾಲೇಜು ಗೆಳೆಯರೆಲ್ಲಾ … Read more

ಸಾಮಾನ್ಯ ಜ್ಞಾನ (ವಾರ 20): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ೦೩.೦೨.೨೦೧೩ರಂದು ಬಿಡುಗಡೆಯಾದ ಖುಷ್ವಂತನಾಮ ದಿ ಲೆಸೆನ್ಸ್ ಆಫ್ ಮೈ ಲೈಫ್ ಈ ಕೃತಿಯ ಕರ್ತೃ ಯಾರು? ೨.    ವಾರಣಾಸಿ ಯಾವ ನದಿ ದಡದ ಮೇಲಿದೆ? ೩.    ಪ್ರಕೃತಿ ಚಿಕಿತ್ಸೆ ಕುರಿತು ಪುಸ್ತಕ ಬರೆದ ಭಾರತದ ಪ್ರಧಾನಿ ಯಾರು? ೪.    ಟೆನ್ನಿಸ್‌ನಲ್ಲಿ ಗ್ರಾಂಡ್ ಸ್ಲ್ಯಾಮ್ ಟೆನಿಸ್ ಪ್ರಶಸ್ತಿ ಪಡೆದ ಪ್ರಥಮ ಭಾರತೀಯ ಯಾರು? ೫.    ಕಿತ್ತೂರು ಚೆನ್ನಮ್ಮ ಚಿತ್ರದ ನಿರ್ದೇಶಕರು ಯಾರು? ೬.    ೭೪ನೇ ಸಂವಿಧಾನ ತಿದ್ದುಪಡಿಯ ಕಾಯ್ದೆ ಯಾವುದಕ್ಕೆ ಸಂಬಂಧಿಸಿದೆ? ೭.    ೨೦೧೨ ಡಿಸೆಂಬರ್ … Read more

ಓಯಸಿಸ್: ನಿನಾದ (ಭಾಗ 4)

ಇಲ್ಲಿಯವರೆಗೆ ಇತ್ತ ಟೀಂ ಲೀಡರ್ ಹಂಜ್ಹಾ.. ನಿಗೆ ಮೈ ಪರಚಿ ಕೊಳ್ಳುವಂತೆ ಆಯಿತು. ಒಂದು ದಿನ ಸಮಯ ನೋಡಿ ಹೇಳಿ ಬಿಟ್ಟೆ. ನೋಡು ನಾನು  ಎಲ್ಲಿಯೂ ಸಲ್ಲುವೆ. ಹೀಗಾಗಿ ಮಾತ್ರ ನನ್ನ ಇಲ್ಲಿ ವಾಪಸು ಕರೆದರು. ನಿನಗೆ ನೀನ್ ಹೇಳಿದ್ದು  ನೆನಪಿದೆಯ??? ನೀ ಮಾತ್ರ ಇಲ್ಲೇ ಇರು… ಅಂದಾಗ ಅವನ ಮುಖ ನೋಡಬೇಕಿತ್ತು. ಆಗ ನಿನಾದ ೪ ವರ್ಷದ ಕೆಳಗಿನ ಒಂದು ದಿನದ ಕಹಿ ಘಟನೆ ಹೇಳಿದಳು. ಒಂದು ದಿನ ಶುಕ್ರವಾರ, ಮದ್ಯನ್ನ ಸರಿ ಸುಮಾರು ೨ … Read more

ಹರಟೆ ಕಟ್ಟೆಯ ಪದ್ಮಜಾ: ನಾಗರತ್ನಾ ಗೋವಿಂದನ್ನವರ

ಸುಮಾ : ಏನ್ರಿ ಆಶಾ ಇಷ್ಟೊತ್ತಾಯಿತು ಇನ್ನು ಪದ್ಮಜಾರ ಸುದ್ದಿನೇ ಇಲ್ಲಾ.   ಆಶಾ : ಹೌದು ಯಾಕೊ ಏನೋ ಇಷ್ಟೊತ್ತಾಯಿತು ಇನ್ನು ಬಂದಿಲ್ಲ ಅವರಿಲ್ಲ ಅಂದ್ರ ನಮ್ಮ ಹರಟೆ ಕಟ್ಟೆಗೆ ಕಳಾನ ಇರುದುಲ್ಲ ನೋಡ್ರಿ. ಸುಮಾ : ನೀವು ಹೇಳುವುದು ಖರೇ ಅದ ಏನರ ಹೊಸ ಸುದ್ದಿ ಚರ್ಚಾ ಮಾಡಾಕ ಸಿಗ್ತದ ಅಂದ್ರ ಅದು ಅವರಿಂದಾನ ಸಿಗೋದು ಅದಕ ಮತ್ತ ನಾವೆಲ್ಲ ಅವರನ್ನ ಹರಟೆ ಕಟ್ಟೆ ಪದ್ಮಜಾ ಅಂತ ಕರೆಯುದು…. ಹಾ ಹಾ ಹಾ!  ಅಲ್ಲಿ … Read more

ಮರೆಯಾಗುತ್ತಿರುವ ಜಾನಪದ ಸೊಗಡು: ಸುಮನ್ ದೇಸಾಯಿ

  ಇಂದಿನ ದಿವಸಗಳೊಳಗ ನವ್ಯಕಾವ್ಯಗಳ ಆರ್ಭಟಗಳ ಅಡಿಯೊಳಗ ಜಾನಪದ ಕಾವ್ಯಗಳ ಸೊಗಡು ಮರಿಯಾಕ್ಕೊತ ಹೊಂಟದ. ಈ ಜನಪದ ಸಿರಿ ಹೆಚ್ಚಾಗಿ ಹಳ್ಳಿಗೊಳೊಳಗ ನೋಡಲಿಕ್ಕೆ ಸಿಗತದ. ಹಳ್ಳಿಗಳೊಳಗ ಜೀವನ ಶೂರುವಾಗೊದ ಈ ಜನಪದ ಸೊಗಡಿನ ಹಾಡುಗಳಿಂದ. ಹಳ್ಳಿ ಜನರಲ್ಲೆ ಅಕ್ಷರಜ್ಞಾನ ಇಲ್ಲಂದ್ರು ಜೀವನದ ಅನುಭವಗೊಳ ಲಾಲಿತ್ಯವನ್ನ ಪದಕಟ್ಟಿ ಹಾಡುವ ಕಲೆ ಇರ್‍ತದ. "ಮುಂಝಾನೆ ಎದ್ದು ನಾ ಯಾರನ್ನ ನೆನೆಯಲಿ" ಅಂತ ದೈವಿಕ ಭಾವನೆಯಿಂದ ದಿನ ನಿತ್ಯದ ಬದುಕಿನ ಬಂಡಿ ಎಳಿಲಿಕ್ಕೆ ಅನುವಾಗ್ತಾರ. ದೈನಂದಿನ ಕೆಲಸಗಳಿಗೆ ಜಾನಪದದ ಸಾಹಿತ್ಯದ ರೂಪ ಕೊಟ್ಟು … Read more

ಚದುರಂಗ: ಡಾ. ಗವಿಸ್ವಾಮಿ

ಇಂಟರ್ ಕಾಲೇಜ್ ಚೆಸ್ ಪಂದ್ಯಾವಳಿಯ ಅಂತಿಮ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗುವುದರಲ್ಲಿತ್ತು. ಆಗಲೇ ಆಸೀನನಾಗಿದ್ದ ಎದುರಾಳಿಯ ಕೈಕುಲುಕಿ ನನ್ನ ಛೇರಿನ ಮೇಲೆ ಕುಳಿತೆ. ಗಾಂಭೀರ್ಯದ ಉಳಿಯಿಂದ ಕೆತ್ತಿದಂತೆ ಕಾಣುತ್ತಿದ್ದ ಅವನ ಮುಖಚರ್ಯೆ ನನ್ನಲ್ಲಿ ದಿಗಿಲು ಹುಟ್ಟಿಸಿತು. ಸೋಲಿನ ಭಯ ಆವರಿಸಿತು. ನೀನು ಫೈನಲ್ಲಿಗೆ ತಲುಪಿರುವುದೇ ದೊಡ್ಡ ಸಾಧನೆ.. ಯುವ್ ಹ್ಯಾವ್ ನಥಿಂಗ್ ಟು ಲೂಸ್.. ಗೋ ಎಂಡ್ ಎಂಜಾಯ್ ಯುವರ್ ಗೇಮ್ ಎಂದು ನಮ್ಮ ಲೆಕ್ಚರರ್ ಹೇಳಿದ್ದು ಮನಸ್ಸಿನಲ್ಲಿತ್ತು. ಹೌದು.ನಾನು ಕಳೆದುಕೊಳ್ಳುವುದು ಏನೂ ಇರಲಿಲ್ಲ. ಇತರರನ್ನು ಮೆಚ್ಚಿಸುವುದಕ್ಕಾಗಿ … Read more

ಹೋಳಿ ಹಬ್ಬ: ಅಖಿಲೇಶ್ ಚಿಪ್ಪಳಿ

ಹೋಳಿ ಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸುವ ಖುಷಿ ಯುವಕ-ಯುವತಿಯರಲ್ಲಿ ಕಂಡು ಬರುತ್ತಿದೆ. ಕಾಮಣ್ಣನನ್ನು ಸುಡಲು ತಯಾರಿಯಾಗಿದೆ. ಬಣ್ಣಗಳನ್ನು ತಟ್ಟೆಗಳಲ್ಲಿ ಪೇರಿಸಿಟ್ಟಾಗಿದೆ. ಹೋಳಿ ಹಬ್ಬದ ಧಾರ್ಮಿಕ ಆಯಾಮವೇನೇ ಇರಲಿ, ಸಾಂಸ್ಕ್ರತಿಕ ವೈವಿಧ್ಯವೂ ಬದಿಗಿರಲಿ. ಹೋಳಿ ಹಬ್ಬದಿಂದ ಪರಿಸರಕ್ಕೇನು ಪೆಟ್ಟು ಎಂಬುದನ್ನು ನೋಡುವುದಕ್ಕೂ ಮೊದಲು ನಕಾರಾತ್ಮಕ ಭಾವನೆಯನ್ನು ತೋರ್ಪಡಿಸುವಾಗ, ಅಹಂಕಾರವನ್ನು ಸೊಕ್ಕನ್ನು ಮುರಿಯುವ ಮನೋಗತವನ್ನು ವ್ಯಕ್ತಪಡಿಸುವಾಗ ನಾಳೆ ಇದೆ ಹೋಳಿ ಹಬ್ಬ ಎನ್ನುವುದು ರೂಡಿಯಲ್ಲಿದೆ. ಕೆಟ್ಟದ್ದನ್ನು ವೈಭವೀಕರಿಸುವ ಮನೋಭಾವವೂ ಈ ಮಾತಿನಲ್ಲಿದೆ. ಸರ್ಕಾರಗಳಿಗೆ ಭರಪೂರ ಹಣ ಬೇಕು. ಬಲ್ಲಿದರಿಂದ ಹಣ … Read more

ಪತ್ರ ಬರೆಯಲಾ: ಅನಿತಾ ನರೇಶ್ ಮಂಚಿ

ಅದೊಂದು ಕಾಲವಿತ್ತು.. ಅದನ್ನು ಕಾಯುವಿಕೆಯಲ್ಲಿನ ಪರಮ ಸುಖದ ಕಾಲ ಅಂತ ಕರೆದರೂ ಸರಿಯೇ. ಕಾಯುವಿಕೆ  ಅನಿವಾರ್ಯವಾದ ಕಾರಣ ’ತಾಳುವಿಕೆಗಿಂತನ್ಯ ತಪವು ಇಲ್ಲ’ ಎಂದುಕೊಂಡೇ ಎಲ್ಲರೂ ಆ ಸುಖವನ್ನು ಅನುಭವಿಸುತ್ತಿದ್ದರು. ಹೇಳಲಾರದ  ಚಡಪಡಿಕೆ, ಕಣ್ಣೋಟ ದೂರ ದಾರಿಯ ಕಡೆಗೇ.. ಕಾಲುಗಳು ನಿಂತಲ್ಲಿ ನಿಲಲರಿಯದೇ ಅತ್ತಿಂದಿತ್ತ ಇತ್ತಿಂದತ್ತ.. ಕಿವಿಗಳು ಅವನ ಹೆಜ್ಜೆಯ ಸಪ್ಪಳದ ಸದ್ದಿಗಾಗಿ ಹಾತೊರೆಯುತ್ತಾ.. ನಿಜಕ್ಕೂ ಅದು ರಾಮನ ಬರುವಿಕೆಗಾಗಿ ಕಾದಿರುವ  ಶಬರಿಯ ಧ್ಯಾನದಿಂದ ಕಡಿಮೆಯದ್ದೇನು ಅಗಿರಲಿಲ್ಲ.  ಏನಿರಬಹುದು ಇದು ಎಂಬ ಕುತೂಹಲವೇ..  ’ವಸಂತ ಬರೆದನು ಒಲವಿನ ಓಲೆ … Read more

ಮೂರು ಕವಿತೆಗಳು: ಅನಿಲ ತಾಳಿಕೋಟಿ, ಸ್ವರೂಪ್ ಕೆ., ಎಂ.ಎನ್. ನವೀನ್ ಕುಮಾರ್.

ಸಮಾನತೆಗಾಗಿ ರಾಮಕೃಷ್ಣ ಗರ್ಭದ ಕಲ್ಲಾದ ಬುದ್ದ ಬಸವಳಿದು ಬಿದ್ದ ಅಲ್ಲಮ ಮೆಲ್ಲನೆದ್ದು ಹೋದ ಮೋಹನದಾಸನಾಶಿಸುತ್ತ ಅಸುನೀಗಿದ ವಿವೇಕ ಬಾಬಾ ನಿಟ್ಟುಸಿರಿಟ್ಟು ನಡೆದ ಮಳೆ ಸುರಿಯಿತು ಮರುಭೂಮಿಯ ಮೇಲೆ  ಕೊಳೆ ಬೆಳೆಯಿತು ಮನುಜರರಿವಿನೊಳಗೆ ಬರಬೇಕಾದವರೆಲ್ಲಾ ಬಂದು ಹೋದರು ಕೊಡಬೇಕಾದದ್ದೆಲ್ಲಾ ಕೊಟ್ಟು ಕಂಗೆಟ್ಟರು ಎಲ್ಲರನ್ನಟ್ಟಿ ಇನ್ನೂ ನಿಂತಿಹರು ದಾರಿಗೆಟ್ಟವರು. ನ ಹನ್ಯತೆ ಅಸಮಾನತೆ  ಕೊಲ್ಲಬಂದವರೆಲ್ಲಾ ಕಾಲವಾದರೂ ಕಾಲೂರಿಕೊಂಡ ಕೊಳೆತದ ನಾತ ನೈನಂ ಛಿಂದಂತಿ ಶಸ್ತ್ರಾಣಿ ಈ ಜಾತಿಯತೆ ಬದಲಾಗಬೇಕಾದದ್ದು ಬೆಂಕಿ ಗಾಳಿ ಮಳೆಯಲ್ಲ ಮನೆ ಮನೆಗಳಲ್ಲಿ ಮುದುಡಿದ ಮನಗಳು ತೆರೆ … Read more

ತುಂಬಿದ ಕೊಡ… (ಒಂದು ನೈಜಕಥೆಯ ಸುತ್ತ): ಸಂದೇಶ್ ಎಲ್.ಎಮ್.

ಬೆಂಗಳೂರು ಎಂಬ ಕಾಂಕ್ರಿಟ್ ಕಾಡಿನಲ್ಲಿ ಹೆಚ್ಚಿನ ಮಂದಿ ರಜೆ ಅಥವಾ ವಾರಾಂತ್ಯದಲ್ಲಿ  ಕಾಲ ಕಳೆಯಬೇಕೆಂದು ಬಯಸುವುದು ಮನೆಯಲ್ಲಷ್ಟೇ. ದೈನಂದಿನ ಚಟುವಟಿಕೆಗಳಲ್ಲಿ ಟ್ರಾಫಿಕ್, ತಲೆ ಬಿಸಿ, ಕೆಲಸದ ಗಡಿಬಿಡಿ ಇತ್ಯಾದಿ ಜಂಜಾಟಗಳಿಂದ ಬೇಸತ್ತವರಿಗೆ ರಜೆ ಎಂದರೆ ಹಬ್ಬದಷ್ಟೇ ಸಂಭ್ರಮ.  ರಜೆ ಸಿಕ್ಕಮೇಲೆ ಕೇಳಬೇಕೆ? ಹೆಂಡತಿ, ಮಕ್ಕಳು, ಸ್ನೇಹಿತರು, ಉಳಿದ ಕೆಲಸಗಳು, ಅಬ್ಬಾ ಪ್ಲಾನ್ ಮಾಡುವುದೇ ಬೇಡ, ನೀರು ಕುಡಿದಷ್ಟೇ ಸಲೀಸಾಗಿ ಮುಗಿದು ಹೋಗುವಂತದ್ದು. ಇಂತಹ ಸಂತೋಷದ ದಿನಗಳಲ್ಲಿ ನಮ್ಮ ಕವಿ ಮಹಾಶಯರು ತಮ್ಮ ಚೊಚ್ಚಲ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವನ್ನು … Read more

ಬೋಳು ತಲೆಯ ಅಪ್ಪ ಮತ್ತೆರಡು ಪ್ರಸಂಗಗಳು: ಅಮರ್ ದೀಪ್ ಪಿ.ಎಸ್.

ಆ  ಅಂಗಡಿ ತುಂಬಾ ಸಿನೆಮಾ ತಾರೆಯರ ಫೋಟೋಗಳು. ಬಗೆ ಬಗೆ ಸ್ಟೈಲ್ ನಲ್ಲಿ ನಿಂತ ಕಾರು, ಬೈಕು, ಕುದುರೆ ಹೀಗೆ ಒಂದೊಂದು ಸವಾರಿಯಲ್ಲಿ ನಿಂತ, ಓಡಿಸುವ  ಹೀರೋಗಳು. ಇನ್ನು ಹಿರೋಯಿನ್ನುಗಳ ಫೋಟೋಗಳಿಗೆ ಲೆಕ್ಕ ಇಲ್ಲ. ಅಲ್ಲಲ್ಲಿ ಹರಡಿ ಚೆಲ್ಲಾಪಿಲ್ಲಿಯಾದ ದಿನಪತ್ರಿಕೆಗಳ ತುಂಬಾ ಸಹ ಬರೀ ಸಿನೆಮಾಗಳ ಪೋಸ್ಟರ್.  ಕೆಲವೇ ಕೆಲವು ಪುಟಗಳು ಮಾತ್ರ ಪ್ರಾಪಂಚಿಕ ವಿದ್ಯಮಾನವುಳ್ಳದ್ದು ಆಗಿರುತ್ತಿದ್ದವು. ಸುತ್ತಲು ಕನ್ನಡಿಗಳ ಸಾಲು.  ಒಂದು ಮೂಲೆಯಲ್ಲಿ ಮೊದಲೆಲ್ಲ ರೇಡಿಯೋ ಟೇಪ್ ರೆಕಾರ್ಡರ್ ಇರುತ್ತಿದ್ದವು, ಇತ್ತೀಚೆಗೆ ಟಿ. ವಿ. ಗಳು. … Read more

ಹೆಸರಿಡದ ಕಥೆಯೊಂದು (ಭಾಗ 1): ಪ್ರಶಸ್ತಿ ಪಿ.

ಹೇ ಹೋಳಿಗೊಂದಿನ ರಜಾ ಹಾಕಕ್ಕೆ ಹೇಳೇ ಆ ಸೋಮು ಮತ್ತವನ ಗ್ಯಾಂಗಿಗೆ. ಅವ್ರನ್ನೆಲ್ಲಾ ನೋಡಿ ಸಿಕ್ಕಾಪಟ್ಟೆ ಸಮಯ ಆಯ್ತು. ಸಿಗೋಣಂತೆ ಬಣ್ಣದ ಹಬ್ಬದಲ್ಲಿ…ತಮ್ಮೆಂದಿನ ಪಾನಿ ಪುರಿ ಅಡ್ಡಾದಲ್ಲಿ ಫುಲ್ ಜೋಷಲ್ಲಿ ಮಾತಾಡ್ತಾ ಇದ್ಲು ಶ್ವೇತ ತನ್ನ ಗೆಳತಿ ಶಾರ್ವರಿಯೊಂದಿಗೆ. ಬೇರೆಯವ್ರು ರಜಾ ಹಾಕಿದ್ರು ಹಾಕ್ಬೋದೇನೋ ಆದ್ರೆ ಆ ಶ್ಯಾಮಂದೇ ಡೌಟು ಕಣೇ ಅಂದ್ಲು ಶಾರ್ವರಿ.ಡೌಟಾ ? ಯಾಕೆ ಅಂತ ಕಣ್ಣರಳಿಸಿದ್ಲು ಶ್ವೇತ  ಹೋಳಿಗಾ ? ಒಂದಿಡೀ ದಿನಾನಾ ಅಂತಾನೆ . ಒಂದಿನ ಕೆಲಸಕ್ಕೆ ಹೋಗ್ಬೇಡ ಅಂದ್ರೆ ಲಬೊ … Read more

ಓಯಸಿಸ್: ನಿನಾದ (ಭಾಗ 3)

ಇಲ್ಲಿಯವರೆಗೆ ಮಾರನೆ ದಿನ ಲ್ಯಾಂಡ್ ಲಾರ್ಡ್ಗೆ ಫೋನ್ ಮಾಡುವಾಗ ನೀವು  ಬರೋಕೆ ರೆಡಿ ಆದ್ರೆ ಹೇಳಿ. ಇನ್ನು ಒಂದು ವಾರದಲ್ಲಿ ಎಲ್ಲ ದಾಖಲೆಗಳು ಸರಿ ಆಗುತ್ತೆ ಅಂದು ಹೇಳಿದರು. ಬರುವ ವಾರ ಬರೋದು  ಕಷ್ಟ. ಬರುವ ತಿಂಗಳು ಬರುವೆವು ಅಂದು ಹೇಳಿದ ನಿಶಾಂತ್ . ಆದರೆ ಅದೇ ಸಮಯಕ್ಕೆ ನಿಶಾಂತ್ ನ ವೀಸಾ ವಿಷಯ ದುತ್ತನೆ ಎದುರು ಬಂದು ಸಧ್ಯಕ್ಕೆ ಊರು ಬಿಡುವ ಹಾಗೆ ಇರಲಿಲ್ಲ. ಹೀಗಾಗಿ ದೀಪಾವಳಿ ಕಳೆದು ಬರುವುದಾಗಿ ಹೇಳಿದರು. ಈ ನಡುವೆ ಜೈನ್ … Read more

ನಾ ಕ೦ಡ ಹಾಗೆ “ವ೦ಶವೃಕ್ಷ” : ಸುಮತಿ ಮುದ್ದೇನಹಳ್ಳಿ

ಎಸ್.ಎಲ್, ಭೈರಪ್ಪನವರ ಜನಪ್ರಿಯ ಕಾದ೦ಬರಿ ಆಧಾರಿತ ಸಿನೆಮಾ, "ವ೦ಶವೃಕ್ಷ" (1971) ತನ್ನ ಕಾಲಕ್ಕೆ ಹೊಸ ಅಲೆಯ ಚಿತ್ರ. ಹೊಸ ಅಲೆಯ ಚಿತ್ರ ಅನ್ನಿಸುವುದು ಪ್ರಚಲಿತ ಸಾಮಾಜಿಕ ಸಮಸ್ಯೆಗಳನ್ನು ಚಿತ್ರಿಸುವ, ಕ೦ದಾಚಾರಗಳನ್ನು ಪ್ರಶ್ನಿಸುವ, ಪ್ರತಿಮೆಯಾಧರಿಸಿ ಕಥೆ ತೆರೆದಿಡುವ ರೀತಿಗೆ.  ಈ ಬರಹ ಪೂರ್ಣ ಪ್ರಮಾಣದ ವಿಮರ್ಶೆಯಾಗಲು ನಾನು ಭೈರಪ್ಪನವರ ಸ೦ಬ೦ಧಿತ ಕಾದ೦ಬರಿ ಓದಬೇಕಿತ್ತು ಅನ್ನುವುದನ್ನು ಮೊದಲೇ ನಿಮ್ಮಲ್ಲಿ ಒಪ್ಪಿಕೊಳ್ಳುತ್ತೇನೆ, ಕಾದ೦ಬರಿ ಇನ್ನೂ ನನ್ನ ಕೈಗೆ ಸಿಕ್ಕಿಲ್ಲ.  ದೊಡ್ಡ ಕಾದ೦ಬರಿಯೊ೦ದನ್ನು ಸಿನೆಮಾ ಮಾಡಲು ಒಳ್ಳೆಯ ಎಡಿಟರ್ ಬೇಕು: ಕಥೆಯ ಹ೦ದರವನ್ನ … Read more

ಸಾಮಾನ್ಯ ಜ್ಞಾನ (ವಾರ 19): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧.    ೨೦೧೪ ರಲ್ಲಿ ನಡೆಯುವ ಭಾರತದ ಸಾರ್ವತ್ರಿಕ ಚುನಾವಣೆ ಎಷ್ಟನೆಯ ಸಾರ್ವತ್ರಿಕ ಚುನಾವಣೆಯಾಗಿದೆ ? ೨.    ಬಿಹಾರದ ಯಾವ ನದಿಯನ್ನು ಕಣ್ಣೀರಿನ ನದಿ ಎಂದು ಕರೆಯುತ್ತಾರೆ? ೩.    ಭಾರತೀಯ ಜೇನು ಸಂಶೋಧನಾ ಸಂಸ್ಥೆ ಎಲ್ಲಿದೆ? ೪.    ೨೦೧೪ರಲ್ಲಿ ನಡೆದ ಏಷ್ಯಾ ಕಫ್ ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯ ವಹಿಸಿದ ದೇಶ ಯಾವುದು? ೫.    ಜನವರಿ ೩೦ ೨೦೧೩ ರಂದು ಗುಜಾರಾತ್ ಕೆನ್ಸವಿಲ್ ಜಾಲೆಂಜ್ ಗಾಲ್ಫ್ ಟೂರ್ನಿಯ ರಾಯಭಾರಿಯಾದ ಕ್ರಿಕೆಟಿಗ ಯಾರು? ೬.    ಓಡಿಸಾ ರಾಜ್ಯದ ಆಡಳಿತ ಭಾಷೆ … Read more

ಕೋತಿಗಳು ಸಾರ್ ಕೋತಿಗಳು: ಎಂ. ಎಸ್. ನಾರಾಯಣ.

ಕೆಲವು ನಿಜಕ್ಕೂ ಅದ್ಭುತವಾದ ದೃಷ್ಟಾಂತಗಳಿವೆ. ಬಹುಶಃ ಇವು ಪೀಳಿಗೆಯಿಂದ ಪೀಳಿಗೆಗೆ ಮೌಖಿಕವಾಗಿ ಹಸ್ತಾಂತರಗೊಂಡಿರಬಹುದೆಂದು ಭಾವಿಸುತ್ತೇನೆ. ಮನುಕುಲದ ಒಟ್ಟಾರೆ ವಿವೇಕವನ್ನು ಒಳಗೊಂಡಿರುವ ಈ ದೃಷ್ಟಾಂತಗಳಿಗೆ ಜನರನ್ನು ಸ್ಫೂರ್ತಿಸಿಂಚನದಲ್ಲಿ ತೋಯಿಸಿ ಧನಾತ್ಮಕವಾಗಿ ಪ್ರಚೋದಿಸುವ ಅಗಾಧವಾದ ಶಕ್ತಿಯಿರುವುದು ಸುಳ್ಳಲ್ಲ. ಈ ಅಂಕಣದ ಮೂಲಕ ಅಂತಹ ಒಂದೆರಡು ದೃಷ್ಟಾಂತಗಳನ್ನು ಕನ್ನಡದ ಓದುಗರೊಂದಿಗೆ ಹಂಚಿಕೊಳ್ಳಲು ಸಂತಸವಾಗಿದೆ. ಇಲ್ಲಿ ಚರ್ಚಿಸಲಾಗಿರುವ ಪರಿಕಲ್ಪನೆಗಳು ವಿಶೇಷವಾಗಿ ನಮ್ಮ ಯುವ ಜನತೆಗೆ, ತಮ್ಮ ವೃತ್ತಿಜೀವನದ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲು ಮಾರ್ಗದರ್ಶನ ಮಾಡುವ ದಾರಿದೀಪವಾಗಬಹುದು. ಭಾರತದಲ್ಲಿ ಕೋತಿಗಳನ್ನು ಹಿಡಿಯುವ ಸ್ವಾರಸ್ಯಕರವಾದ ಪ್ರಾಚೀನ … Read more

ಅತಿಥಿ ಸಂಪಾದಕೀಯ: ಅನಿತಾ ನರೇಶ್ ಮಂಚಿ

ಮನುಷ್ಯ ಸಂಘ ಜೀವಿ. ಇದರಲ್ಲಿ ಹೆಣ್ಣಾದರೂ ಸರಿ ಗಂಡಾದರೂ ಸರಿ ಬದುಕು ಸಾಗಿಸಬೇಕಾದರೆ ಜೊತೆಯನ್ನು ಬಯಸುವುದು ಸಹಜ. ಬಂಡಿಯ ಎರಡು ಗಾಲಿಗಳಲ್ಲಿ ಯಾವುದು ಮುಖ್ಯವೆಂದು ಹೇಗೆ ಹೇಳಲು ಸಾಧ್ಯವಿಲ್ಲವೋ ಹಾಗೇ ಸ್ತ್ರೀ ಪುರುಷರಿಬ್ಬರಲ್ಲೂ ಯಾರು ಮೇಲು ಯಾರು ಕೀಳು ಎಂದು ಹೇಳುವುದು ಸಾಧ್ಯವಿಲ್ಲ. ಒಬ್ಬರಿಗೊಬ್ಬರು ಪೂರಕವಾಗಿ ನಡೆದರೆ ಬದುಕು ಸೊಗಸು.   ಬದಲಾದ ಕಾಲ ಘಟ್ಟದಲ್ಲಿ  ಸ್ತ್ರೀ ಇನ್ನಷ್ಟು ಹೊಣೆಗಾರಿಕೆಗಳನ್ನು ಹೆಗಲ ಮೇಲೇರಿಸಿಕೊಳ್ಳುತ್ತಾ ನಡೆದಿದ್ದಾಳೆ.ಆ ಹೆಜ್ಜೆಗಳು ನಡೆದಾಡಿದ ದಾರಿ ಹೊಸ ದಿಕ್ಕಿನತ್ತ ಸಾಗಬೇಕಾದರೆ ಸಮಾಜದ ಸಹಕಾರವೂ ಮುಖ್ಯ. … Read more

ಮಹಿಳಾ ದಿನ’ ಅರ್ಥ ಕಳೆದುಕೊಳ್ಳುತ್ತಿರುವಾಗ: ವೀಣಾ ಅನಂತ್

ಮಾರ್ಚ್ ೮,  ಮತ್ತೊಮ್ಮೆ ವಿಶ್ವ ಮಹಿಳಾ ದಿನ ಬಂದಿದೆ. ಮತ್ತೊಮ್ಮೆ ಕನವರಿಕೆಗಳು, ಹೊಸ ಆಶಯಗಳು… ಭಾರತೀಯ ಮಹಿಳೆ ಇಂದು ಪ್ರಗತಿಯತ್ತ ದಾಪುಗಾಲು ಹಾಕುತ್ತಿದ್ದಾಳೆ… ಎಲ್ಲಾ ಕಡೆ ಮಹಿಳೆಯರದೇ ಮೇಲುಗೈ…ಇವೆಲ್ಲಾ ಕೇಳಿ ಬರುವ ಮಾತುಗಳು. ಆದರೆ ನಿಜ ಪರಿಸ್ಥಿತಿ ಬೇರೆಯೇ ಇದೆ. ಹಳೆ ಕನಸುಗಳೆಲ್ಲಾ ದುಃಸ್ವಪ್ನವಾಗಿ ಕಾಡುತ್ತಿರಲು ಹೊಸ ಕನಸುಗಳನ್ನು ಹೆಣೆಯಲು ಯಾಕೋ ಮನಸ್ಸೇ ಬರುತ್ತಿಲ್ಲ. ಇತ್ತೀಚಿಗಿನ ಘಟನೆಗಳನ್ನು ಗಮನಿಸಿದಾಗ ಯಾಕೋ ’ ಮಹಿಳಾ ದಿನ’ ಅರ್ಥ ಕಳೆದುಕೊಂಡಂತೆ ಅನಿಸುತ್ತಿದೆ. ಇತ್ತೀಚೆಗೆ ಅತ್ಯಾಚಾರ, ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಾಗಿವೆ. … Read more

ಹರಳೆಣ್ಣೆ ಡಬ್ಬಿ ಮತ್ತು ಹಳೇ ಪ್ರೇಮ ಪುರಾಣ..!: ರಶ್ಮಿ ಜಿ ಆಳ್ವ

ಪ್ರೀತಿ ಅನ್ನುವ ಎರಡಕ್ಷರವನ್ನು ದ್ವೇಷಿಸುವಂತೆ ಮಾಡಿದ್ದು ನೀನು… ಪ್ರೀತಿ ಅಂದರೆ ಅರಿಯದ ದಿನಗಳವು… ರೋಮಿಯೋ-ಜ್ಯೂಲಿಯೆಟ್, ಲೈಲಾ-ಮಜ್ನು ಪ್ರೀತಿಗಾಗಿ ಸತ್ತರು ಇಷ್ಟೇ ನನಗೆ ಗೊತ್ತಿದ್ದಿದ್ದು. ಆದರೆ ಕಾಲೇಜಿನ ದಿನಗಳಲ್ಲಿ ಲೆಕ್ಚರರೊಬ್ಬರು ತುಂಬಾ ಇಷ್ಟವಾಗಿದ್ದರು. ಅವರು ಮಾಡುತ್ತಿದ್ದ ಪಾಠವೂ ಅಷ್ಟೇ ಆಕರ್ಷಕ. ನಮ್ಮ ಗರ್ಲ್ಸ್ ಕಾಲೇಜ್ ಹೀರೋ ಅವರು. ಅವರು ಮಾಡುತ್ತಿದ್ದ ‘ಡಿಮಿನಿಶಿಂಗ್ ಮಾರ್ಜಿನಲ್ ಯುಟಿಲಿಟಿ’ಯ ಪಾಠ ಇಂದಿಗೂ ಮರೆತಿಲ್ಲ. ಕಾಲೇಜಿನ ಕೊನೆಯ ದಿನಗಳಲ್ಲಿ ಅವರು ನನ್ನ ಆಟೋಗ್ರಾಫ್‌ನಲ್ಲಿ ಬರೆದಿದ್ದು, ‘ಲವ್ಲೀ ಹ್ಯೂಮನ್‌ಬಿಯಿಂಗ್ ವಿತ್ ಮೋಸ್ಟ್ ಎಕ್ಸ್‌ಪ್ರೆಸಿಂಗ್ ಐಸ್’ ಕಣ್ಣಿಗೆ … Read more

ಇತಿ-ಮಿತಿಗಳ ನಡುವೆ ಅಂದು-ಇಂದಿನ ಮಹಿಳೆ: ತೇಜಸ್ವಿನಿ ಹೆಗ್ಡೆ

 ಪ್ರಾಚೀನ ಕಾಲದಿಂದಲೂ (ವೇದ ಕಾಲವನ್ನು ಬಿಟ್ಟು) ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಎಲ್ಲೆಡೆಯಲ್ಲೂ ಸ್ತ್ರೀಯನ್ನು ಎರಡನೆಯ ದರ್ಜೆಯ ಪ್ರಜೆಯೆಂದೇ ಪರಿಗಣಿಸಲಾಗಿದೆ. ಆಯಾ ಕಾಲದಲ್ಲಿ ರಚಿತವಾದ ಧರ್ಮಗ್ರಂಥಗಳನ್ನು ಅನುಸರಿಸಿ ಅಥವಾ ಅವುಗಳಲ್ಲಿ ಪ್ರಸ್ತಾಪಿಸಲ್ಪಟ್ಟ ನಿಯಮಾವಳಿಗಳನ್ನು ತಮಗೆ ಮನಬಂದಂತೇ ತಿರುಪಿ, ಅವುಗಳನ್ನೆಲ್ಲಾ ಹೆಣ್ಣಿನ ಮೇಲೆ ಹೇರಿ ಪಿತೃಪ್ರಧಾನ ಸಮಾಜ ಅವಳನ್ನು ಹಲವು ರೀತಿಯಲ್ಲಿ ನಿರ್ಬಂಧಿಸಿ, ದೌರ್ಜನ್ಯವೆಸಗುತ್ತಲೇ ಬಂದಿದೆ.   ಆದರೆ ಸರಿ ಸುಮಾರು ೫,೦೦೦ ವರುಷಗಳ ಹಿಂದಿನ ವೇದದ ಕಾಲದಲ್ಲಿ ಮಹಿಳೆಯರ ಸ್ಥಿತಿ ಉತ್ಕೃಷ್ಟವಾಗಿತ್ತು ಎನ್ನುವುದಕ್ಕೆ ಸಾಕಷ್ಟು ಪುರಾವೆಗಳಿವೆ. ವೇದಕಾಲದ ಪೂರ್ವಾರ್ಧದಲ್ಲಿ … Read more