editor
ಹಿರೋಶಿಮಾ ನಾಗಸಾಕಿಯ ದುರಂತ ಭಾರತದಲ್ಲಿ ಮರುಕಳಿಸದಿರಲಿ: ಮಂಜುಳ ಎಸ್.
ಬಂಡಾವಾಳವನ್ನು ಮಾತ್ರ ಕೇಂದ್ರವಾಗಿಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಅರ್ಥವ್ಯವಸ್ಥೆಯನ್ನು, ನಿಯಂತ್ರಣದಲ್ಲಿಟ್ಟುಕೊಳ್ಳಲು ಆರಂಭಿಸಿದಾಗಿನಿಂದ ಪರಿಸರ ಮತ್ತು ಪರಿಸರಕ್ಕೆ ಸೇರಿದ ಕೆಲವು ಜನಸಮುದಾಯಗಳು ಜಾಗತಿಕ ಮಟ್ಟದಲ್ಲಿ ಚರ್ಚೆಯ ವಸ್ತುವಾಗಿವೆ. ಪರಿಸರಕ್ಕೆ ನಾವು ಸೇರಿದವರಲ್ಲ, ಪರಿಸರ ನಮಗೆ ಸೇರಿದ್ದು ಎಂದು ಅಲ್ಪಸಂಖ್ಯಾತರಾದ ಬಂಡವಾಳಶಾಹಿಗಳು ಪರಿಸರವನ್ನು ಮತ್ತು ಪರಿಸಕ್ಕೆ ಸೇರಿದ ಕೆಲವು ಜನ ಸಮುದಾಯಗಳನ್ನು ವಿಕೃತವಾಗಿ ಮನಬಂದಂತೆ ದುಡಿಸಿಕೊಳ್ಳುತ್ತಲೇ ಬಂದಿದ್ದಾರೆ. ಈ ದುಡಿಸಿಕೊಳ್ಳುವ ಪ್ರಕ್ರಿಯೆಯ ಪರಿಣಾಮವನ್ನು ಯಾಕೆ ಪರಿಸರವನ್ನೇ ನಂಬಿ, ಪರಿಸರದ ಜೊತೆಯಲ್ಲಿಯೇ ಬದುಕುತ್ತಿರುವವರು ಮತ್ತು ಬಹು ಸಂಖ್ಯಾತರಾದ ಜನ ಸಾಮಾನ್ಯರೇ ಅನುಭವಿಸುತ್ತಿರುವುದು…? ಇದು … Read more
ಮುಂದುವರೆದ ರೈತರ ಆತ್ಮಹತ್ಯೆಗಳು ಸಾವಿನ ಮನೆಯ ತಲ್ಲಣಗಳು: ಎನ್. ಕವಿತಾ
(ಇಡೀ ರಾಜ್ಯದಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆ ಮಂಡ್ಯ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಭೇಟಿ ಕೊಟ್ಟು, ಅನ್ನದಾತನ ಸಾವಿಗೆ ಕಾರಣಗಳೇನು? ಸಾವಿನ ನಂತರ ರೈತನ ಕುಟುಂಬ ಸದಸ್ಯರು ಬದುಕಲು ಯಾವ ರೀತಿ ಪಾಡು ಪಡುತ್ತಿದ್ದಾರೆ? ಆ ಕುಟುಂಬಗಳಿಗೆ ಸರ್ಕಾರಗಳು ಮತ್ತು ಸಮಾಜ ಯಾವ ರೀತಿ ಸ್ಪಂದಿಸಿವೆ? ಮಾಧ್ಯಮಗಳ ಸ್ಪಂದನೆ ಯಾವ ರೀತಿಯಿದೆ? ಇತ್ಯಾದಿ ಕುರಿತಂತೆ ಉತ್ತರ ಕಂಡುಕೊಳ್ಳಲು ಯತ್ನಿಸಲಾಗಿದೆ). ಒಕ್ಕಲಾ ಕೇರ್ಯಾಗ ಮಳೀರಾಯ ಮಕ್ಕಳ ಮಾರ್ಯಾರ ಮಳೀರಾಯ! ಒಕ್ಕಲಾ ಕೇರ್ಯಾಗ ಮಕ್ಕಳ ಮಾರಿ … Read more
ಜಾಗತಿಕ ಹವಾಗುಣ ಜಾಥಾ: ಅಖಿಲೇಶ್ ಚಿಪ್ಪಳಿ
ನವಂಬರ್ 30 2015ರಿಂದ ಡಿಸೆಂಬರ್ 11 2015ರ ವರೆಗಿನ ಜಾಗತಿಕ ಹವಾಗುಣ ಶೃಂಗಸಭೆ ಪ್ಯಾರಿಸ್ನಲ್ಲಿ ನಡೆಯಲಿದೆ. 190 ವಿಶ್ವನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ, ಜೊತೆಗೆ ವಿಜ್ಞಾನಿಗಳು, ಹೂಡಿಕೆದಾರರು, ವಿವಿಧ ಕ್ಷೇತ್ರಗಳ ತಜ್ಞರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಭೂಮಿಯ ಮೇಲಿನ ಚರಾಚರಗಳ ಭವಿಷ್ಯದ ದೃಷ್ಟಿಯಿಂದ ಈ ಸಭೆ ಅತ್ಯಂತ ಮಹತ್ವ್ತದ ಸಭೆಯಾಗಲಿದೆ ಎಂದು ತರ್ಕಿಸಲಾಗಿದೆ. ಈ ಸಭೆಯಲ್ಲಿ ಕೈಗೊಳ್ಳುವ ಜಾಗತಿಕ ನಿರ್ಣಯಗಳು ಭೂಮಿಯ ಆರೋಗ್ಯದ ಸೂಚ್ಯಂಕವನ್ನು ಬದಲಿಸಲಿವೆ ಎಂದು ಭಾವಿಸಲಾಗಿದೆ. ಈ ಹಿಂದೆ ಇದೇ ತರಹದ 20 ಶೃಂಗಸಭೆಗಳು … Read more
ಕಡ್ಲೆಕಾಳು ಗಣೇಶನಿಗೆ ಜೈ ಎನ್ನುತ್ತಾ: ಪ್ರಶಸ್ತಿ
ಏಕಶಿಲಾ ನಂದಿಯ ಬಳಿಯಿದ್ದ ಸೈಕಲ್ ಪಡೆದ ನಾವು ಹಂಪಿಬಜಾರಿನ ಮೂಲಕ ಹಂಪಿ ಬಸ್ಟಾಂಡವರೆಗೆ ಬಂದೆವು. ಇಲ್ಲೇ ಹತ್ತಿರದಲ್ಲಿರೋದ್ರಿಂದ ಕಡ್ಲೆಕಾಳು ಗಣೇಶ ಮತ್ತು ಹೇಮಕೂಟದಲ್ಲಿರೋ ದೇಗುಲಗಳನ್ನು ನೋಡೋಣ ಅಂತ ಸೈಕಲ್ ಅತ್ತ ತಿರುಗಿಸಿದೆವು. ಘಂಟೆ ನಾಲ್ಕಾಗುತ್ತಾ ಬಂದಿದ್ದರೂ ಮಧ್ಯಾಹ್ನದ ಊಟ ಮಾಡಿಲ್ಲವೆಂಬ ಚಿಂತೆ ಕಾಡುತ್ತಿರಲಿಲ್ಲ. ಬಾಡಿಗೆ ಸೈಕಲ್ ತಗೊಂಡಿದ್ರೂ ನಡೆದಾಟದಲ್ಲೇ ಅರ್ಧದಿನ ಕಳೆದಾಗಿದೆ. ಮುಂದಿನ ಸ್ಥಳಗಳನ್ನಾದರೂ ಸೈಕಲ್ಲಲ್ಲಿ ನೋಡಬೇಕೆಂಬ ಬಯಕೆ ಆಲೋಚನೆ ಮೂಡುತ್ತಿತ್ತು. ಆ ಆಲೋಚನೆಯಲ್ಲೇ ಕಡ್ಲೆಕಾಳು ಗಣೇಶ ದೇವಸ್ಥಾನಕ್ಕೆ ಸಾರೋ ಏರುಹಾದಿಯಲ್ಲಿ ಸೈಕಲ್ ಓಡಿಸಿದೆವು. ಸೈಕಲ್ಲಿನ ಬಂಪರ್ … Read more
ಹೊಂಗೆ ಮರದ ನೆರಳಿನಲ್ಲಿ: ಅನಿತಾ ನರೇಶ್ ಮಂಚಿ
ಸಾಮಾಜಿಕ ಜಾಲ ತಾಣದಲ್ಲಿ ಒಂದೇ ಬಗೆಯ ವಿಷಯಗಳ ಒಲುಮೆಯ ಆಧಾರದಲ್ಲಿ ಹಲವಾರು ಗುಂಪುಗಳು ನಿತ್ಯವೂ ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಕೆಲವೊಂದು ಅಲ್ಪಾಯುಷ್ಯದಲ್ಲೇ ಕಾಲನರಮನೆಯನ್ನು ಸೇರಿದರೆ ಇನ್ನು ಕೆಲವು ನಮ್ಮ ಸಮ್ಮಿಶ್ರ ಸರಕಾರಗಳನ್ನು ನೆನಪಿಸುತ್ತವೆ. ತಾವೂ ಏನೂ ಧನಾತ್ಮಕ ವಿಷಯಗಳನ್ನು ನೀಡದೇ, ನೀಡುವವರ ಬಗ್ಗೆಯೂ ಮೆಚ್ಚುಗೆಯ ಮಾತನ್ನಾಡದೇ ಕೇವಲ ಕಾಲೆಳೆಯುವುದನ್ನೇ ಉದ್ಯೋಗವಾಗಿಸಿಕೊಂಡಂತವು. ಮತ್ತೆ ಹಲವು ಹೊಸಾ ಅಗಸ ಬಟ್ಟೆ ಒಗೆದಂತೆ ಮೊದ ಮೊದಲು ಶುಭ್ರವಾಗಿಯೂ, ಸ್ವಚ್ಚವಾಗಿಯೂ ಕಾಣುತ್ತಿರುತ್ತವೆ. ದಿನ ಕಳೆದಂತೆ ಕೊಳಕುಗಳೇ ಉಳಿದು, ಅಲ್ಲಿಂದ ಹೊರ ಬೀಳುವ ದಾರಿಗಾಗಿ ಚಡಪಡಿಸುವಂತಾಗುತ್ತದೆ. … Read more
ಹೇ ನನ್ನ ಕನಸಿನ ಕೂಸೆ…: ಮಂಜುನಾಥ ಗುಡ್ಡದವರ
ಹೇ ಕನಸಿನ ಕೂಸೆ… ಕುಶಲವೇ..? ಕ್ಷೇಮವೇ..? ಸೌಖ್ಯವೇ..? ಎಲ್ಲಿರುವೇ..? ಹೇಗಿರುವೇ..? ಇನ್ನೂ ಏನೇನೊ ಸಾವಿರ ಮಾಮೂಲಿ ಪ್ರಶ್ನೆಗಳು. ಆದರೆ ನಿನ್ನ ಕುಶಲೋಪರಿಯ ವರದಿ ತಿಳಿಯಲು ನಿನ್ನಿಂದ ಒಂದು ಪತ್ರವು ಇಲ್ಲ, ನಾ ಮೌನಿಯಾದಾಗ ರಚ್ಚೆ ಹಿಡಿದು ಕೆನ್ನೆ ಹಿಂಡಿ, ಕಣ್ಣ ಮಿಟುಕಿಸಿ ಯಾಕೋ ಕೂಸೆ.. ಏನಾಯ್ತು..? ಎನ್ನುವ ಆ ನಿನ್ನ ಸಿಹಿ ಸಾಂತ್ವಾನವು ಇಲ್ಲ. ಯಾಕಾಯ್ತು ಕೂಸೆ ಹೀಗೆ..? ಎಲ್ಲದಕ್ಕೂ ದೇವರಿದ್ದಾನೆ, ಆಗುವುದೆಲ್ಲಾ ಒಳ್ಳೆಯದಕ್ಕೆ ಕಣೋ ಅಂತ ನನ್ನ ಅನುಮಾನಗಳಿಗೆ ನಂಬಿಕೆಯ ನೀರೆರೆದು, ನೀನೇಕೆ ಬತ್ತಿ … Read more
ಮೂವರ ಕವನಗಳು: ನಂದನ್ ಜಿ, ರನ್ನ ಕಂದ, ಸಿಪಿಲೆನಂದಿನಿ
ತಾರೆ ಬದುಕು ನೆನಪಿನಾ ಜೋಳಿಗೆಯ ಸರಕು ಆ ನೆನಪಿಗೂ ಬೇಕಿದೆ ಆಸರೆ ಮಿನುಗುವುದೇ ಮಿಂಚಿ ಮರೆಯಾದ ಆ ತಾರೆ.. ಹೊಳೆಯುವುದೇ ಮಿಂಚಿ ಮರೆಯಾದ ಆ ತಾರೆ.. ನೆನಪಿನಾ ಬಾಣಲೆಗೆ ಹಾಕಿದಳು ಒಲವೆಂಬ ಒಗ್ಗರಣೆ ಹಾಳಾಗಿದೆ ಹೃದಯ.. ಸರಿಪಡಿಸಲಾರದು ಯಾವುದೇ ಗುಜರಿ ಸಲಕರಣೆ ಅಂದು ಮನತಣಿಸಿದ್ದ ಹಾವ-ಭಾವ ಮಾತುಗಳ ಸಮ್ಮಿಲನ ಇಂದೇಕೊ ಕಾಡುತಿದೆ ಖಾಲಿ ನೀರವತೆಯ ಮೌನ ಶುರುವಾಗಿದೆ ಅವಳೊಂದಿಗಿನ ಆ ನೆನಪುಗಳ ಪ್ರಹಾರ.. ಮನದ ಪಡಸಾಲೆಯಲ್ಲೆಲ್ಲೋ ನಿರಂತರ ಮರುಪ್ರಸಾರ. ಕತ್ತಲಲ್ಲಿ ಮುದುಡಿದ್ದ ಮನಸಿಗೆ ನಗುವೆಂಬ ಲಾಟೀನು ಹಿಡಿದು … Read more
ಚಿಂತೆ ಬಿಡಿ..ರಿಲ್ಯಾಕ್ಸ್ ಪ್ಲೀಸ್..: ಬಿ.ರಾಮಪ್ರಸಾದ್ ಭಟ್
ನೀವು ಸದಾ ಲವಲವಿಕೆಯಿಂದ, ಅತ್ಯುತ್ಸಾಹದಿಂದ ಇರಲು ಬಯಸುವುದು ನಿಜವೇ ಆದರೆ ವೃಥಾ ಚಿಂತಿಸುವುದನ್ನು ಕೈ ಬಿಡಬೇಕು. ಒಂದು ವೇಳೆ ಯಾವುದೇ ರೋಗಕ್ಕೆ ತುತ್ತಾದಾಗಲೂ ಸಹ ಕಳವಳಗೊಳ್ಳದೆ 'ಅಯ್ಯೋ ಈ ರೋಗ ಬಂದಿದೆಯಲ್ಲಪ್ಪಾ,ಏನು ಮಾಡುವುದು? ಹೇಗೆ? ವಾಸಿಯಾಗುವುದೋ ಇಲ್ಲವೋ?' ಎಂದು ಪೇಲವ ಮುಖ ಮಾಡಿಕೊಂಡು ಚಿಂತೆಗೀಡಾಗದೆ ನೆಮ್ಮದಿಯಾಗಿ ಸಾವಧಾನ ಚಿತ್ತದಿಂದ ಇದ್ದರೆ ಆ ನೆಮ್ಮದಿಯ ಭಾವನೆಯೇ ನಮ್ಮ ದೇಹದ ಜೀವಕೋಶಗಳ ಮೇಲೆ ಪ್ರಭಾವ ಬೀರಿ ನಮ್ಮ ರೋಗಗಳನ್ನು ಕಡಿಮೆಗೊಳಿಸುವುದು. ಅಲ್ಲದೆ ಆರೋಗ್ಯದಲ್ಲಿನ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುತ್ತದೆ. ಪ್ರತಿಯೊಬ್ಬ ಮನುಷ್ಯನ … Read more
ನಿರಂತರ ಪ್ರಕಾಶನದ ಹೊಸ ಪುಸ್ತಕ ಹಾಗೂ ಸೀಡಿ ‘ಹಾರೋಣ ಬಾ’ ಕುರಿತು
ನಿರಂತರ ಪ್ರಕಾಶನ ಮೈಸೂರಿನ ನಿರಂತರ ಪ್ರಕಾಶನ ಕಳೆದ 20 ವರ್ಷಗಳಿಂದ ರಂಗಭೂಮಿ,ಸಾಹಿತ್ಯ, ಜಾನಪದ ಕ್ಷೇತ್ರಗಳಲ್ಲ್ಲಿ ಕೆಲಸ ಮಾಡುತ್ತಿದೆ. ನಮ್ಮ ಎಚ್ಚರದ, ಕನಸಿನ ಸಮಯಗಳಲ್ಲಿ ಚಳುವಳಿಗಳಷ್ಟೇ ಪ್ರಮುಖವಾಗಿ ಪುಸ್ತಕಗಳೂ ಆವರಿಸಿವೆ. ಕಲಿಸಿವೆ ಓದುಗನೊಬ್ಬ ಸಮಾಜದ ಜತೆಗೆ ನೇರವಾಗಿ ಮುಖಾಮುಖಿಯಾಗುವ ಇಂಥ ಸನ್ನಿವೇಶ ಸೃಷ್ಟಿಸುವÀÀ ಹೊಣೆ ನಮ್ಮೆಲ್ಲರದ್ದು. ಪುಸ್ತಕ ಪ್ರಕಟಣೆ ಎನ್ನುವುದು ನಮ್ಮ ಇಂಥಹ ಚಟುವಟಿಕೆಗಳ ವಿಸ್ತರಣೆ ಎಂಬುದು ನಮ್ಮ ನಂಬಿಕೆ. ಜನ ಸಾಂಸ್ಕøತಿಕ ಪರಂಪರೆಯ ಕುರಿತ ಉತ್ತಮ, ಚಿಂತನಶೀಲ ಪುಸ್ತಕಗಳ ಪ್ರಕಟಣೆ ನಮ್ಮ ಆಶಯ. ಈ ಹಿನ್ನೆಲೆಯಲ್ಲಿ ಕೆಲಸ … Read more
ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ
ವಿದ್ವಾಂಸನೂ ಸೂಫಿಯೂ ಒಬ್ಬ ವಿದ್ವಾಂಸ ಸೂಫಿಯೊಬ್ಬನಿಗೆ ಹೇಳಿದ, “ನಮ್ಮ ತಾರ್ಕಿಕ ಪ್ರಶ್ನೆಗಳು ನಿಮಗೆ ಅರ್ಥವೇ ಆಗುವುದಿಲ್ಲವೆಂಬುದಾಗಿ ನೀವು ಸೂಫಿಗಳು ಹೇಳುತ್ತೀರಿ. ಅಂಥ ಒಂದು ಪ್ರಶ್ನೆಯನ್ನು ನೀವು ಉದಾಹರಿಸಬಲ್ಲಿರಾ?” ಸೂಫಿ ಹೇಳಿದ, “ಖಂಡಿತ. ಅದಕ್ಕೊಂದು ಉದಾಹರಣೆ ನನ್ನ ಹತ್ತಿರ ಇದೆ. ನಾನೊಮ್ಮೆ ರೈಲಿನಲ್ಲಿ ಪಯಣಿಸುತ್ತಿದ್ದೆ. ಆ ರೈಲು ಏಳು ಸುರಂಗಗಳ ಮೂಲಕ ಹಾದುಹೋಯಿತು. ಆ ವರೆಗೆ ರೈಲಿನಲ್ಲಿ ಪಯಣಿಸದೇ ಇದ್ದ ಹಳ್ಳಿಗಾಡಿನವನೊಬ್ಬ ನನ್ನ ಎದುರು ಕುಳಿತಿದ್ದ. ರೈಲು ಏಳು ಸುರಂಗಗಳನ್ನು ದಾಟಿದ ನಂತರ ಅವನು ನನ್ನ ಭುಜ ತಟ್ಟಿ … Read more
ಸಾಮಾನ್ಯ ಜ್ಞಾನ (ವಾರ 81): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. 1975ರಲ್ಲಿ ನವಮಂಗಳೂರು ಬಂದರನ್ನು ಉದ್ಘಾಟಿಸಿದವರು ಯಾರು? 2. ಬಿಎಆರ್ಸಿ (BARC) ನ ವಿಸ್ತøತರೂಪವೇನು? 3. ಪ್ರಸಿದ್ಧ ಏಕಾಂಬರೇಶ್ವರದೇವಾಲಯಎಲ್ಲಿದೆ? 4. ತಾಳಬ್ರಹ್ಮ ಎಂದುಯಾರನ್ನುಕರೆಯುತ್ತಾರೆ? 5. 2008ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಆತಿಥ್ಯ ವಹಿಸಿದ ದೇಶಯಾವುದು? 6. ಸೌದಿ ಅರೇಬಿಯಾದರಾಜಧಾನಿ ಯಾವುದು? 7. ಮಯೂರವರ್ಮನದಂಡಯಾತ್ರೆಯನ್ನು ಸೂಚಿಸುವ ಶಾಸನ ಯಾವುದು? 8. ಭಾರತದಲ್ಲಿ ಮ್ಯಾಂಗನೀಸ್ ನಿಕ್ಷೇಪದಲ್ಲಿ 2ನೇ ಸ್ಥಾನದಲ್ಲಿರುವರಾಜ್ಯಯಾವುದು? 9. 1977-1982ರ ಅವಧಿಯ ಭಾರತದರಿಸರ್ವ್ ಬ್ಯಾಂಕಿನಗವರ್ನರ್ಯಾರಾಗಿದ್ದರು? 10. ಅಕೌಸ್ಟಿಕ್ಸ್ ಇದುಯಾವುದರಇದುಯಾವುದರಕುರಿತುಅಧ್ಯಯನವಾಗಿದೆ? 11. ಗಾಳಿಯ ವೇಗವನ್ನು ಅಳೆಯುವ ಮಾನಯಾವುದು? 12. ‘ಮೆಕ್ಕಾ’ … Read more
ಹಿಮಾಲಯದಲ್ಲೊಂದು ಸೈಕಲ್ ಪಯಣ: ಡಾ. ಸುಪ್ರಿಯಾ ಸಿಂಗ್
ಹಿಮಾಚಲ ಪ್ರದೇಶದ ಮನಾಲಿಯಿಂದ ಜಮ್ಮು ಕಾಶ್ಮೀರದ ಲೇಹ್, ಲಡಾಖ್ಗೆ ಸೈಕಲ್ ಪಯಣ ಮಾಡುವುದು, ವಿಶ್ವದ ಅತ್ಯಂತ ಕಠಿಣ ಮತ್ತು ಸಾಹಸದ ಪಯಣಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಹಿಮಾಲಯದ ಸೌಂದರ್ಯ ಸವಿಯುತ್ತ ಸಾಗುವ ಪಯಣ ಸಂತೋಷ ನೀಡುವುದು ನಿಜ, ಆದರೆ ಸೈಕಲ್ ಸವಾರನ ಕೌಶಲ್ಯ, ತಾಳ್ಮೆ ಮತ್ತು ಧೈರ್ಯವನ್ನು ಪರೀಕ್ಷಿಸುವಲ್ಲಿ ರಸ್ತೆಗಳು ಮೊದಲು. ಕೆಲವಡೆ ಚೆನ್ನಾಗಿರುವ ರಸ್ತೆಗಳಿದ್ದರೆ, ಅನೇಕ ಕಡೆ ಕಚ್ಚಾ … Read more
ಹಾಳು ಕೃಷಿಕನೊಬ್ಬನ ಸ್ವಗತ: ಅಮರ್ ದೀಪ್ ಪಿ.ಎಸ್.
ಅದೊಂದು ಎಂಟು ದೊಡ್ಡ ಅಂಕಣದ ಮನೆ. ನಮ್ಮಪ್ಪ ಆ ಊರಿನ ಆದರ್ಶ ಶಿಕ್ಷಕ. ಆತನ ಶಿಷ್ಯಂದಿರು ರಾಜ್ಯವಲ್ಲದೇ ದೇಶ, ವಿದೇಶಗಳಲ್ಲೂ ಹೆಸರು ಗಳಿಸಿದ ಸುಶಿಕ್ಷಿತರು. ಅಷ್ಟೇಕೇ, ನಮ್ಮ ಮನೆಯಲ್ಲೇ ನಾಲ್ಕೂ ಜನ ಮಕ್ಕಳಲ್ಲಿ ಮಾಸ್ಟರ್ ಡಿಗ್ರಿ ಮಾಡಿ ಉಪನ್ಯಾಸಕ, ಎಂಜನೀಯರ್, ಮತ್ತಿತರ ವೃತ್ತಿಗಳಲ್ಲಿದ್ದುಕೊಂಡು ಅಪ್ಪನ ಹೆಸರಿಗೆ ಗರಿ ಮೂಡಿಸಿದವರು. ನಾನು ಸಿವಿಲ್ ಎಂಜನೀಯರ್ ಪದವೀಧರ. ಈಗ್ಗೆ ಇಪ್ಪತ್ತೈದು ವರ್ಷಗಳ ಹಿಂದೆ ಹಳ್ಳಿಯ ಕನ್ನಡ ಮಾಧ್ಯಮದ ನಾನು ಸಿವಿಲ್ ಎಂಜನೀಯರಿಂಗ್ ಮಾಡಿ ರಾಜ್ಯದ ಪ್ರಮುಖ ನಗರಗಳಲ್ಲಿ ದುಡಿದು, ನನ್ನ … Read more
ರೈತರ ಸಾವಿಗೆ ಪೂರಕವಾಗಿವೆಯೇ ನಮ್ಮ ಅಭಿವೃದ್ಧಿ ಯೋಜನೆಗಳು….?: ಮಂಜುಳ ಎಸ್.
ದೇಶದಲ್ಲಿ ನೀರಿಗೆ, ಅನ್ನಕ್ಕೆ ಬರವಿರುವಂತೆಯೇ, ಅನ್ನದಾತನ ಆತ್ಮಹತ್ಯೆಗಳು ಸಹ ಬರವಿಲ್ಲದಂತೆ ಪ್ರತಿ ರಾಜ್ಯ, ಜಿಲ್ಲೆಗಳಲ್ಲಿ ಸ್ಪರ್ಧಾತ್ಮಕವಾಗಿ ನಡೆಯುತ್ತಿವೆ. ಕೃಷಿಯಲ್ಲಿ ಅವೈಜ್ಞಾನಿಕ ಪದ್ದತಿಯನ್ನು ಬಳಸುತ್ತಿರುವುದು, ಸಾಲ ಮಾಡುತ್ತಿರುವುದು, ಮದುವೆ ಸಮಾರಂಭಗಳಿಗೆ ಹೆಚ್ಚು ದುಂದು ವೆಚ್ಚ ಮಾಡುತ್ತಿರುವುದೇ ರೈತರ ಸರಣಿ ಆತ್ಮಹತ್ಯೆಗಳಿಗೆ ಕಾರಣವಾಗುತ್ತಿದೆ ಎಂದು ನಮ್ಮ ಸರ್ಕಾರಗಳು ಅಮಾನವೀಯವಾಗಿ ಉತ್ತರಿಸುತ್ತಾ ಒಂದಿಷ್ಟು ಪರಿಹಾರ ಧನವನ್ನು ನೀಡಿ, ಸಂತ್ರಸ್ತ ಕುಟುಂಬಗಳಿಗೆ ಆ ಕ್ಷಣಕ್ಕೆ ಸಮಾಧಾನ ಪಡಿಸುತ್ತಿವೆ. ರೈತರ ಸರಣಿ ಆತ್ಮಹತ್ಯೆಗಳು ನೆನ್ನೆ ಮೊನ್ನೆಯದಲ್ಲ, … Read more
ಗಾಳಿಪಟದ ಘಟಕೆಷ್ಟು ನೆತ್ತರ ಅಭಿಷೇಕ!!!: ಅಖಿಲೇಶ್ ಚಿಪ್ಪಳಿ
[ಪ್ರತಿವರ್ಷದ ಆರಂಭದಲ್ಲಿ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಗುಜರಾತಿನಲ್ಲಿ ನಡೆಯುವ ಗಾಳಿಪಟದ ಹಬ್ಬದಲ್ಲಿ ನಡೆಯುವ ಹಿಂಸೆಯ ಕುರಿತಾದ ಲೇಖನವಿದು. ಮಾನವ ತನ್ನ ಮನರಂಜನೆಗಾಗಿ ಏನೆಲ್ಲಾ ಅವಘಡಗಳನ್ನು ಮಾಡುತ್ತಾನೆ ಎಂಬುದರ ಕುರಿತು ಬೆಳಕು ಚೆಲ್ಲುವ ಪ್ರಯತ್ನ] ಈಗೊಂದು 25 ವರ್ಷಗಳ ಹಿಂದೆ ಗಾಳಿಪಟ ಹೆಸರು ಕೇಳಿದೊಡನೆ ಆಗಿನ ಮಕ್ಕಳ ಮುಖ ಮೊರದಗಲವಾಗುತ್ತಿತ್ತು. ಮನೆಯ ಹಿರಿಯರಿಗೆ ಬೆಳಗಿನಿಂದ ಕಾಡಿ-ಬೇಡಿ ಮಾಡಿದರೆ ಸಂಜೆ 4ರ ಹೊತ್ತಿಗೆ ಗಾಳಿಪಟ ತಯಾರಾಗುತ್ತಿತ್ತು. ಗಾಳಿ ಬಂದಂತೆಲ್ಲಾ ಮೇಲೇರುವ ಗಾಳಿಪಟವನ್ನು ಆಕಾಶದೆತ್ತರಕ್ಕೇರಿಸಲು ವಿಶಾಲವಾದ ಖಾಲಿ ಜಾಗದ ಅಗತ್ಯವಿತ್ತು. ಮಲೆನಾಡಿನಲ್ಲಿ … Read more
ಅರಿಶಿಣ ಬುರುಡೆ ಹಕ್ಕಿ: ಹರೀಶ್ ಕುಮಾರ್, ಪ. ನಾ. ಹಳ್ಳಿ.
ಅರಿಶಿಣ ಬುರುಡೆ ಹಕ್ಕಿ ಹಳದಿ ದೇಹ, ಕಪ್ಪು ರೆಕ್ಕೆಯ ಆಕರ್ಷಕ ವರ್ಣ ಸಂಯೋಜನೆ ಹೊಂದಿರುವ ಅರಿಶಿಣ ಬುರುಡೆ ಹಕ್ಕಿಯು ಸದಾ ಕಾಲ ಶುಭ್ರವಾಗಿದ್ದು, ಚಟುವಟಿಕೆಯಿಂದ ಕೂಡಿರುತ್ತದೆ, ಸಂಘ ಜೀವನ ಬಯಸುವ ಈ ಹಕ್ಕಿಯು ಚಿಕ್ಕ-ಚೊಕ್ಕ ಸಂಸಾರವನ್ನು ಬಹಳ ಪ್ರೀತಿಸುವ ಪ್ರವೃತ್ತಿ ಹೊಂದಿದೆ.ಈ ಹಕ್ಕಿಗೆ ಸುವರ್ಣ ಹಕ್ಕಿ, ಮಂಜಲಕ್ಕಿ, ಹೊನ್ನಕ್ಕಿ, ಪಿಪೀಲಾಯ ಮುಂತಾದ ಹೆಸರುಗಳೂ ಇವೆ. ತನ್ನದೇ ಆದ ಒನಪು, ವಯ್ಯಾರ ಹಾಗೂ ಗಾಂಭೀರ್ಯ ಹೊಂದಿರುವ ಈ ಹಕ್ಕಿಗೆ ಮದುವಣಗಿತ್ತಿ ಎಂಬ ಹೆಸರಿನಿಂದಲೂ ಕರೆಯುವುದುಂಟು. ಅರಿಶಿಣ ಬುರುಡೆಯು ಒರಿಯಲ್ … Read more
ಮೂವರ ಕವನಗಳು: ವಸಂತ ಬಿ ಈಶ್ವರಗೆರೆ, ದಿವ್ಯ ಆಂಜನಪ್ಪ, ಆಶಿತ್
ನನ್ನವಳಿಗೆ ಮೊಬೈಲ್ ಸಂದೇಶದ ಕವನಗಳು. ನನ್ನ ಭಾವನೆಯ ಮುಟ್ಟಿಸಿ ಪ್ರೇಮದ ಸಾಲುಗಳು…! 1. ಬೆಳದಿಂಗಳ ರಾತ್ರಿಯಲಿ, ಹೊಳೆವ ಬಾನಂಗಳದ ಎರೆಡು ನಕ್ಷೇತ್ರಗಳು ಆಗೋಣವೇ..? ಧರೆ ನಮ್ಮ ಸುತ್ತ, ಗ್ರಹ ಮಂಡಲ ನಮ್ಮ ಸುತ್ತ, ನೋಡುತ ಪ್ರೀತಿಯ ಮಾಡೋಣ, ಪಥ ಬದಲಿಸದಂತೆ ಜೊತೆ ಸಾಗೋಣ..! . 2. ಎದೆಯೊಳಗಿನ ನೋವು, ಹೃದಯದೊಳಗಿನ ಮಾತು, ನನ್ನ ಎದೆಗೆ ತಲೆ ಇಟ್ಟಾಗಲೇ ಮರೆತೆ. ನಗು ಈಗ ಮೊಗದೊಳಗೆ, ಪ್ರೀತಿಯ ಹೊಳೆ, ನಿನ್ನ ಈ ದಿನಗಳ ಒಳಗೆ, ಇಷ್ಟು ಸಾಕಲ್ಲವೇ ನಾ ಬಂದ … Read more
ನೀಲಿ: ತಿರುಪತಿ ಭಂಗಿ
ಮೊದಲ ಕೋಳಿ ಕೂಗಿತು. “ಅಯ್ಯೋ ಬೆಳಕ ಆತು. ಇಂದ ಬ್ಯಾರೆ ಅಮವಾಸಿ ಐತಿ ಹಾರಿಗೆಡಿಲಿ, ಈ ನಿದ್ದಿ ಒಂದ ನನಗ ದೆವ್ವ ಕಾಡಿದಂಗ ಕಾಡ್ತೈತಿ ನೋಡ, ಅಮವಾಸಿ ಅಡಗಿ ಮಾಡಬೇಕಾದ್ರ ಸೂರ್ಯಾ ನೆತ್ತಿ ಮ್ಯಾಲ ಬರ್ತಾನ” ಎಂದು ಗಡಬಡಿಸಿ ಹಾಸಗಿಯಿಂದ ಮ್ಯಾಲೆದ್ದು ನೀಲವ್ವ ಕಣ್ಣುಜ್ಜತೊಡಗಿದಳು. ತನ್ನ ಮಗ್ಗಲ ಮಲಿಗಿದ್ದ ಲಕ್ಕಪ್ಪ ಇನ್ನ … Read more