ಅಚ್ಯುತನ ಅರಸುತ್ತಾ: ಪ್ರಶಸ್ತಿ
ಅಚ್ಯುತರಾಯ ದೇವಾಲಯ, ವಿಠಲ ದೇವಾಲಯ, ಮಾತಂಗಪರ್ವತಕ್ಕೆ ದಾರಿ ತೋರೋ ಮಾರ್ಗದರ್ಶಿ ಫಲಕ ಏಕಶಿಲಾ ನಂದಿಯ ಬುಡದಲ್ಲಿ ಕಾಣುತ್ತಿತ್ತು. ರಾಮಾಯಣದಲ್ಲಿ ಬರೋ ಮಾತಂಗಪರ್ವತ(ಹಂಪಿ ಕಥಾನಕದ ಮೊದಲಭಾಗದಲ್ಲಿ ಹೇಳಿದಂತೆ)ಇದೇ ಎಂದು ಓದಿದ್ದ ನಾವು ಅದಕ್ಕೆ ಭೇಟಿ ನೀಡಬೇಕೆಂಬ ಆಸೆಯಿಂದ ಅತ್ತ ಹೆಜ್ಜೆ ಹಾಕಿದೆವು.ಮೂರು ದಿನವಾದ್ರೂ ಇಲ್ಲಿರೋ ಜಾಗಗಳನ್ನೆಲ್ಲಾ ಸುತ್ತೇ ಹೋಗಬೇಕೆಂದು ಬಂದಿದ್ದ ನಮಗೆದುರಾಗಿದ್ದೊಂದು ಪ್ರವೇಶದ್ವಾರ.ಕ್ರೇನುಗಳಿಲ್ಲದ ಕಾಲದಲ್ಲಿ ಆ ಪಾಟಿ ಭಾರದ ಕಲ್ಲುಗಳನ್ನು ಅಷ್ಟು ಮೇಲಕ್ಕೆ ಸಾಗಿಸಿ ಎರಡಂಸ್ತಿನ ಪ್ರವೇಶದ್ವಾರಗಳನ್ನು, ಹಜಾರಗಳನ್ನು ಕರಾರುವಕ್ಕಾಗಿ ಕಟ್ಟಿದ್ದಾದರೂ ಹೇಗೆಂದು ಕುತೂಹಲ ಮೂಡಿಸೋ ಇಂಥಾ ದ್ವಾರಗಳು, … Read more