ಎರಡು ಪ್ರೇಮ ಕವನಗಳು: ಸುಮಿತ ಮೇತ್ರಿ, ನವೀನ್ ಮಧುಗಿರಿ

ರಾಧೆ… ನನ್ನ ನೆನಪಿಗಾಗಿ ನವಿಲು ಗರಿಯನೊಂದನಿಟ್ಟುಕೊ ನಿಂಗೆ ಬೇಸರವಾದಾಗ ನಿನ್ನ ಮಡಿಲಾಗಿ ಮನದ ಮಿದುವಾಗಿ ನಿನಗೆ ಚೈತನ್ಯ ತಂದೇನು ರಾಧೆ… ನನ್ನ ನೆನಪಿಗಾಗಿ ಕೊಳಲನೊಂದಿಟ್ಟುಕೊ ನಿಂಗೆ ನೋವಾದಾಗ ನಿನ್ನ ಇನಿಯನಾಗಿ ಇನಿಯನ ಒಡಲಾಗಿ ನಿನಗೆ ನಲಿವು ತಂದೇನು ರಾಧೆ… ನನ್ನ ನೆನಪಿಗಾಗಿ ಮುಡಿಗೆ ಹೂವಂದನಿಟ್ಟುಕೊ ನಿಂಗೆ ಹಿತವಲ್ಲದ ಸಮಯದಿ ನಿನ್ನ ಗೆಳಯನಾಗಿ ಹಿತೈಸಿಯಾಗಿ ನಿನಗೆ ಆತ್ಮಸಖನಾದೆನು. –ಸುಮಿತ ಮೇತ್ರಿ, ಹಲಸಂಗಿ                         ಬಿಳಿಹಾಳೆಯ … Read more

ಖಾಲಿ ಕಿಸೆಯ ರಾಜಕುಮಾರನಿಗೆ ಕಾಗದದ ಮೇಲೆ ಮನದಾಕ್ಷರ: ಹೇಮಾ ಎಸ್.

ಮುದ್ದು ರಾಜಕುಮಾರ…. ಪ್ರೀತಿಯ ಹೊರತಾಗಿ ನಿನ್ನಿಂದ ನನಗೆ ಯಾವ ನಿರೀಕ್ಷೆಗಳು ಇಲ್ಲ. ನೀನು ಸಿರಿವಂತನಲ್ಲ ಎಂಬ ಸತ್ಯವು ಗೊತ್ತಾದ ಮೇಲೆಯೇ ನಾನು ನಿನ್ನನ್ನು ಮೆಚ್ಚಿದ್ದು. ನಿನ್ನನ್ನು ಪ್ರೀತಿಸಿದ್ದು. ನಿನ್ನಲ್ಲಿ ನನಗೆ ತುಂಬಾ ಇಷ್ಟವಾದ ಗುಣವೇನು ಗೊತ್ತಾ? ನೀನು ಇರುವುದನ್ನ ಇರುವಂತೆಯೇ ಹೇಳಿಬಿಡುತ್ತೀಯ. ಯಾವ ಮಾತಿಗೂ ಕೂಡ  ಸುಳ್ಳು ಕಪಟತೆಗಳ ಬಣ್ಣ ಲೇಪಿಸುವುದಿಲ್ಲ. ಸುಳ್ಳು ಸುಳ್ಳೇ ಆಡಂಬರದ ಮಾತುಗಳನ್ನಾಡಿ ಒಂದು ಹೆಣ್ಣಿನ ಮನವೊಲಿಸಿಕೊಳ್ಳುವ ಪ್ರಯತ್ನವನ್ನು ನೀನು ಮಾಡಲಿಲ್ಲ. ಮಾಡುವುದಿಲ್ಲ. ಇರುವುದರಲ್ಲಿಯೇ ಸಂತೃಪ್ತಿಯಿಂದ ಬದುಕುವ ನಿನಗೆ ಸೋತುಬಿಟ್ಟೆ. ನಾ ನಿನ್ನ … Read more

ಪ್ರೇಮ ಪ್ರೀತಿ ಇತ್ಯಾದಿ: ಶಮ್ಮಿ ಸಂಜೀವ್

ಹೂವೊಂದು ಬಳಿಬಂದು  ತಾಕಿತು ಎನ್ನೆದೆಯಾ  ಏನೆಂದು  ಕೇಳಲು  ಹೇಳಿತು ಜೇನಂಥ ಸವಿನುಡಿಯಾ …  ಎದೆ ತುಂಬಾ ಭಾವಗಳ ಧಾರೆ ಇತ್ತು…ಮೊದಲ ಪ್ರೇಮ ಪತ್ರಕ್ಕೆ ಅದೆಷ್ಟು ನಾಚಿಕೆಯ ಘಮವಿತ್ತು …ಕಾಲ ಓಡಿತು ..ಪ್ರೀತಿ ಪ್ರೇಮಕ್ಕೆ ಬೇರೆಯದೇ ಹೆಸರಿತ್ತು!! ಆಗಷ್ಟೇ ಅರಳಿದ ಹೂವೊಂದರ ಜೇನ  ಹೀರುವ ಮುನ್ನ ಪಿಸುನುಡಿಯಿತು ದುಂಬಿ .."ನೋವು ಮಾಡೋದಿಲ್ಲ ..ನಿನ್ನ ಪರಾಗ ಜೇನು ನನಗೆ..ನಿನ್ನ ಕಾಯಾಗಿಸಿ ಹಣ್ಣಾಗಿಸುವ ಜೀವನ ಪ್ರೀತಿ ನಿನಗೆ!!" ಅಂಜಲಿಲ್ಲ ಅಳುಕಲಿಲ್ಲ ತನ್ನ ಜೇನ ಒಡಲನ್ನ ಒಮ್ಮೆಗೆ ತೆರೆದು ಅರ್ಪಿಸಿ ಕೊಂಡಿತು .. … Read more

ಎದ್ದೇಳು ಮಂಜುನಾಥ”ನೂ “ಹ್ಯಾಪಿ ಡೇಸ್” ನ ಅಮಲಿನವನೂ: ಅಮರ್ ದೀಪ್ ಪಿ. ಎಸ್.

ನನ್ನೊಬ್ಬ  ಹಳೆಯ ಗೆಳೆಯ ನೆನಪಾದ. ಇತ್ತೀಚಿಗೆ ನಾನು ಕಂಡ ಹೊಸ ಹುಡುಗನ ಅತಿಯಾದ ಆತ್ಮವಿಶ್ವಾಸವೋ ಅಹಮಿಕೆಯೋ ಒಟ್ಟಿನಲ್ಲಿ ಬೇಜಾರು ತರಿಸಿತು. ಪ್ರತಿ ದಿನ ಬಂದು ನಗು ನಗುತ್ತಾ, ಹಳೆಯ, ಕಿಶೋರನದೋ, ರಫಿ ಸಾಹೇಬರದೋ ಇಲ್ಲಾ ಮುಖೇಶನದೋ ಹಾಡನ್ನು ಗುನುಗುತ್ತಾ, ತನಗೆ ತಿಳಿದ ತಿಳಿ ಹಾಸ್ಯದ ಮಾತನ್ನೂ ಬಿಂದಾಸ್ ಆಗಿ  ಹೇಳುತ್ತಾ ನಾಲಗೆ ಮೇಲೆ ಬಹಳ ಹೊತ್ತು ರುಚಿ ಆರದಂತಿರುವ ಚಹಾ ಅಥವಾ ಕಾಫಿ ಕೊಟ್ಟು ಹೋಗುವ ವಿಷ್ಣು ಈಗತಾನೇ ಕೊಟ್ಟು ಹೋದ ಕಾಫಿ ಹೀರುತ್ತಿದ್ದೆ.  ಒಂದಕ್ಕೊಂದು ತಾಳೆಯಿಲ್ಲದ … Read more

ಕನಸಿನ ಹೊತ್ತು: ಪದ್ಮಾ ಭಟ್

                       ಒಂದೇ ಸಮನೆ ಹರಿಯುವ ನದಿಯಲ್ಲಿ ಬಿಟ್ಟ ಕಾಗದದ ದೋಣಿ.. ಎತ್ತ ಪಯಣಿಸಬೇಕೆಂಬುದೇ ಗೊತ್ತಿಲ್ಲದ ಗೊಂದಲದ ನಡುವೆ ಒಂದೇ ಸಮನೆ ನಕ್ಕು ನಗಿಸುವ ನಾನು ಮತ್ತು ನೀನು. ಬಿಚ್ಚಿಕೊಂಡ ಭರವಸೆಗಳನೆಲ್ಲ ಒಂದೆಡೆ ಒಟ್ಟುಗೂಡಿಸಿ ಕಾಪಾಡುವ ತವಕ..ನಿನ್ನ ಕಣ್ಣಿನಲಿ ಹರಿಯುವ ಸಂತಸದ ಹೊನಲಿನಲಿ ನಾನೂ ಸೇರಿಹೋಗುವ ನಲುಮೆ.. ಓಹ್ ಇದೆಲ್ಲ ಕನಸು ಎಂದು ಎದ್ದ ಕೂಡಲೇ ಗೊತ್ತಾಗಿತ್ತು..ನೀನು ಎಂಬುವವನೇ ಇಲ್ಲದವನ ಬಗೆಗೆ ಇಲ್ಲ ಸಲ್ಲದ … Read more

ಲಕ್ಷ್ಮಣ ರೇಖೆ: ಅಖಿಲೇಶ್ ಚಿಪ್ಪಳಿ

ಜಗತ್ತಿನ ಶ್ರೇಷ್ಠ ಗ್ರಂಥಗಳಲ್ಲಿ ರಾಮಾಯಣವು ಒಂದು. ರಾಮಾಯಣ-ಮಹಾಭಾರತವು ಸಮಕಾಲೀನ ರಾಜಕಾರಣಕ್ಕೆ ಹೊಂದಿಕೊಳ್ಳುವಂತೆ ರಚಿತವಾಗಿದೆ. ಆಗೆಲ್ಲಾ ಮಂತ್ರ-ತಂತ್ರಗಳಿಂದ ತಯಾರಿಸಲಾದ ಬಾಣ-ಬಿಲ್ಲುಗಳನ್ನು ಕವಿ ತನ್ನ ಕಲ್ಪನೆಗೆ ರೆಕ್ಕೆ ಕಟ್ಟಿ ಹಾರಿ ಬಿಟ್ಟು ಏನೇನೋ ಅಸಾಧ್ಯವಾದುದನ್ನು ಸೃಷ್ಟಿಸಿ ರಂಜಿಸಿದ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಒಬ್ಬ ವ್ಯಕ್ತಿ ಹೇಗಿರಬಾರದು ಎಂಬ ಸಂದೇಶವನ್ನು ಬೀರುವ ಹಲವು ಘಟನೆಗಳಿವೆ. ರಾವಣನಂತಹ ಪರಮ ದೈವಭಕ್ತ ಯ:ಕಶ್ಚಿತ್ ಸೀತೆಗಾಗಿ ತನ್ನ ರಾಜ್ಯ, ಮಕ್ಕಳು, ಬಂಧುಗಳು ಕಡೆಗೆ ತನ್ನ ಪ್ರಾಣವನ್ನು ಕಳೆದುಕೊಂಡ. ರಾಮ ವಾಲಿಯನ್ನು ಕೊಂದ ಬಗೆಯನ್ನು ವಿದ್ವಾಂಸರು ಹೇಗೆ … Read more

ಚೈಲ್ಡ್ ಲೇಬರ್: ಕ್ರಾಕ್ ಬಾಯ್

        ನವೆಂಬರ್ ತಿಂಗಳ ಚುಮು ಚುಮಿ ಚಳಿಯಲ್ಲಿ ಮಲೆನಾಡಿನಿಂದ ತಂದ ಕೊಟ್ಟೆ ಕಂಬಳಿಯ ಒಳಗೆ ಬೆಚ್ಚಗೆ ಮಲಗಿ ಸುಖ ನಿದ್ರೆಯಲ್ಲಿ ತೇಲುತ್ತಿದ್ದೆ, ಮಲಗಿದ್ದವನನ್ನು ಬಡಿದೆಬ್ಬಿಸುವಂತೆ ಒಂದೇ ಸಮನೆ ನನ್ನ ಮೊಬೈಲ್ ಕೂಗಿಕೊಳ್ಳತೊಡಗಿತು, ಈ ಹಾಳ್ ಮೊಬೈಲು ನನ್ ನಿದ್ದೆ ಹಾಳ್ ಮಾಡಕ್ಕೇ ಇರದೇನೋ ಅನ್ನೋವಷ್ಟು ಸಿಟ್ಟು ಬಂದಿತ್ತು ಆ ಮೊಬೈಲ್ ಮೇಲೆ, ಕೋಪದಿಂದ ಅದರ ಕಡೆಗೆ ತೀಕ್ಷ್ಣ ದೃಷ್ಠಿಯನ್ನು ಬೀರಿ ಅದನ್ನು ಕೈಗೆತ್ತಿಕೊಂಡು, ಬಡ್ಕೋತಿದ್ದ ಅಲಾರಾಂ ಅನ್ನು ಆಫ್ ಮಾಡಿಟ್ಟೆ,  ಟೈಂ ಆಗ್ಲೇ … Read more

ಕಾಲೇಜಿನ ಆ ದಿನಗಳು: ಸುಮನ್ ದೇಸಾಯಿ

ನೆನಪುಗಳ ಹಾರದ ಗುಚ್ಛವನ್ನು ಹೇಂಗ ಬಿಡಸಬೇಕೊ ತಿಳಿಯಂಗಿಲ್ಲ,.. ಯಾವ ಎಳಿ ಹಿಡದರು ಇದ ಮೊದಲು ಇದ ಮೊದಲು ಅನಿಸ್ತದ. ಹೀಂಗ ಒಂದ ದಿನಾ ಸಂಜಿ ಮುಂದ ಮನಿ ಹತ್ರ ನ ಇದ್ದ ಪಾರ್ಕಿಗೆ ವಾಕಿಂಗ ಹೋಗಿದ್ದೆ. ನನ್ನ ಮಗ ಮತ್ತು ಮಗಳು ಆಟ ಆಡಲಿಕತ್ತಿದ್ರು, ಸ್ವಲ್ಪ ಹೊತ್ತು ಅವರ ಜೊತಿಗೆ ಆಡಿ ಬಂದು ಅಲ್ಲೇ ಇದ್ದ ಒಂದು ಬೇಂಚ್ ಮ್ಯಾಲೆ ಕುತೆ. ಎಷ್ಟು ಛಂದ ಬಾಲ್ಯ ಅಲ್ಲಾ? ಯಾವ ಕಪಟತನ ಇರಂಗಿಲ್ಲಾ.ಎಷ್ಟ ಹಿತಾ ಇರತದ ಗತಿಸಿಹೊದ ನೆನಪುಗಳನ್ನು … Read more

ಸಾಮಾನ್ಯ ಜ್ಞಾನ (ವಾರ 14): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಅತಿದೊಡ್ಡ ಸಾರ್ವಜನಿಕ ಹಾಗೂ ಪ್ರಪಂಚದಲ್ಲೇ ಅತೀ ಹೆಚ್ಚು ಶಾಖೆಗಳನ್ನು ಒಳಗೊಂಡ ಬ್ಯಾಂಕ್ ಯಾವುದು? ೨.    ಕೊಯ್ನಾ ಅಣೆಕಟ್ಟು ಯಾವ ರಾಜ್ಯದಲ್ಲಿದೆ? ೩.    ಸತ್ಯ ಶೋಧಕ ಸಮಾಜವನ್ನು ಯಾರು ಸ್ಥಾಪಿಸಿದರು? ೪.    ಚೆಸ್ ಗ್ರ್ಯಾಂಡ್ ಮಾಸ್ಟರ ಪದವಿ ಪಡೆದ ಬಾರತದ ಮೊದಲ ಆಟಗಾರ ಯಾರು? ೫.    ಮೊದಲ ಬಾರಿಗೆ ಭಾರತದಲ್ಲಿ ಸಿಮೆಂಟಿನ ಉತ್ಪಾದನೆ ಪ್ರಾರಂಭವಾದ ಸ್ಥಳ ಯಾವುದು? ೬.    ಹೆಚ್ಚು ಕಾರ್ಖಾನೆಗಳನ್ನು ಹೊಂದಿರುವ ರಾಜ್ಯ ಯಾವುದು? ೭.    ಬಿಜಾಪುರದ ಗೋಲಗುಮ್ಮಟ ಪ್ರಪಂಚದಲ್ಲಿ ಎಷ್ಟನೇಯ ದೊಡ್ಡ … Read more

ಕಲಿಕೆ ಮತ್ತು ಶಿಕ್ಷಣ: ನಾರಾಯಣ ಎಂ.ಎಸ್.

      ಬೆಳಗಿನ ಕಾಫಿಯೊಂದಿಗೆ ಭಾನುವಾರದ ವೃತ್ತ ಪತ್ರಿಕೆ ಓದುವ ಮಜವೇ ಬೇರೆ ಎಂದುಕೊಳ್ಳುತ್ತಾ ಪೇಪರ್ ಕೈಗೆತ್ತಿಕೊಂಡೆ. “ಖಾಸಗೀ ಕಾಲೇಜುಗಳಲ್ಲಿನ್ನು ಸರ್ಕಾರೀ ಸೀಟುಗಳಿಲ್ಲ, ವೃತ್ತಿ ಶಿಕ್ಷಣ ವಿದ್ಯಾರ್ಥಿಗಳಿಗೆ ಬರೆ” ಎಂಬ ತಲೆಬರಹ ನೋಡಿ ಗಾಬರಿಯಾಯಿತು. ವಿದ್ಯಾರ್ಥಿಗಳಿಗೆ ಎಲ್ಲಿಯ ಬರೆ, ಬರೆಯೇನಿದ್ದರೂ ವಿದ್ಯಾರ್ಥಿಗಳ ಪೋಷಕರಿಗೆ ತಾನೆ, ಎಂದು ಕೊಳ್ಳುತ್ತಾ ಲೇಖನದ ವಿವರಗಳತ್ತ ಕಣ್ಣಾಡಿಸಿದೆ. ನಿಯಮಗಳಲ್ಲಿ ಈಗ ಮಾಡಲಾಗುತ್ತಿರುವ ಬದಲಾವಣೆಯಿಂದ ಪ್ರಸಕ್ತ ನಲವತ್ತೈದು ಸಾವಿರವಿರುವ ವಾರ್ಷಿಕ ಶುಲ್ಕ ಮುಂದಿನ ವರುಷದಿಂದ ಕನಿಷ್ಟ ಮೂರು ಪಟ್ಟು ಹೆಚ್ಚುವುದಾಗಿ ಬರೆದಿದ್ದರು. ಹಾಗಾಗಿ … Read more

ಮೂವರ ಕವಿತೆಗಳು: ನಾಗರಾಜ್ ಹರಪನಹಳ್ಳಿ, ವೀಣಾ ರಾಘವೇಂದ್ರ, ಮಂಜು ಹಿಚ್ಕಡ್

          ಕಾವ್ಯ ದಕ್ಕುವತನಕ  ಬೆಕ್ಕಿನಂತೆ ಹೆಜ್ಜೆ ಇಟ್ಟು ಬಂದವರು ಚಿಟ್ಟೆಯಂತೆ ಸುಳಿದು ಮಾಯವಾದವರು ಮನದ ಹಾಳಾದ ಭಾವನೆಗಳಿಗೆ ಅಕ್ಷರ ರೂಪದಲ್ಲಿ ಸಿಗದವರು ಹೇಗೆ ಬರೆಯುವುದು ಇದನೆಲ್ಲಾ ಕವಿತೆಯಲಿ   ಇದ್ದು ಇಲ್ಲದಂತೆ ಸುಳಿದು ಅಳಿದುಹೋಗುವ ಕನಸುಗಳಿಗೆ ಏನು ಹೇಳುವುದು ಕಾಡಿಬೇಡಿದ ಹೆಜ್ಜೆ ಗುರುತುಗಳೇ ಇಲ್ಲ ಅಲ್ಲಿಯ ಆ ಕ್ಷಣಗಳ ನೇವರಿಕೆಗಳ ಸಲ್ಲಾಪಗಳ  ಹಿಡಿದು ತಂದು ಬಿತ್ತಬೇಕೆಂದು ಕೊಂಡಿದ್ದೆ ಅವು ಕವಿತೆಯಾಗಿ ಮೊಳೆಯಲಿ ಅಂದು ಕೊಂಡಿದ್ದೆ ಆದರೆ………..   ಹಗಲುಗಳು ಜಾರಿ ಹೋಗುತ್ತಿವೆ … Read more

ಗೆಳೆಯನಿಗೊಂದು ಪತ್ರ: ಜಯಪ್ರಕಾಶ್ ಪುತ್ತೂರು

ಪ್ರೀತಿಯ ಗೆಳೆಯನಿಗೆ ನಿನ್ನ ಗೆಳೆಯನ ನಮಸ್ಕಾರ. ಹೇಗಿದ್ದಿಯಾ ಎಂದು ಕೇಳುವುದಿಲ್ಲ, ಇತ್ತಿಚೆಗೆ ನಿನ್ನಲ್ಲಾದ ಕೆಲವು ಬದಲಾವಣೆಗಳನ್ನು ಗಮನಿಸಿಯೇ ಈ ಪತ್ರ ಬರೆಯುತ್ತಿದ್ದೇನೆ. ಬದುಕೇ ಮುಗಿದುಹೋಯಿತು ಎಂಬಂತೆ ಆತ್ಮಹತ್ಯೆಗೆ ಪ್ರಯತ್ನಿಸಿದಿಯಂತೆ? ಯಾಕೊ ನನ್ನ ಗೆಳೆಯ ನೀನು ಸದಾ ಜೀವನೋತ್ಸಾಹದ ಬಗ್ಗೆ ಮಾತನಾಡುತ್ತಿದ್ದವನು, ನಿನಗೆ ಜೀವನದ ಮೇಲೆ ಬೇಸರವೇ? ನಂಬೋಕೆ ಆಗ್ತಾ ಇಲ್ಲ ಕಣೋ. ಆದ್ರೂ ನಂಬಲೇಬೇಕು, ನಿನ್ನ ಇತ್ತಿಚೆಗಿನ ಬದಲಾದ ಮನೋಸ್ಥಿತಿಯನ್ನು. ಅಲ್ಲಾ ಕಣೋ ನೀನು ಪ್ರೀತಿಸಿದ ಹುಡುಗಿ ನಿನಗೆ ಸಿಗಲಿಲ್ಲ ಎಂಬ ಒಂದೇ ಕಾರಣಕ್ಕೆ ಈ ನಿರ್ಧಾರವೇ? … Read more

ಬರೆಯೋ ಮೂಡಿನ ಹಿಂದೆ: ಪ್ರಶಸ್ತಿ ಪಿ.

ತುಂಬಾ ದಿನವಾಗಿಬಿಟ್ಟಿದೆ. ಏನೂ ಬರೆದಿಲ್ಲ . ಹೌದಲ್ಲಾ ? ಏನಾದರೂ ಬರಿಬೇಕು.  ಹೌದು. ಏನು ಬರಿಯೋದು ? ಬೆಂಗಳೂರು ಬಿಂಟಿಸಿಯಲ್ಲಿನ ಕನ್ನಡ ಪ್ರೇಮದ ಬಗ್ಗೆ ಬರೆಯಲಾ ? ಬನವಾಸಿಗೆ ಹೋದ ನೆನಪುಗಳ ಬಗ್ಗೆ ಬರೆಯಲಾ ? ಬರುತ್ತಿರೋ ಪ್ರೇಮಿಗಳ ದಿನದ ನೆನಪಿಗೆ ಕೈಕೊಟ್ಟ ಪ್ರೀತಿಗಳ ಬಗ್ಗೆ ಬರೆಯಲಾ ? ಮೈಕ್ರೋಸಾಫ್ಟಿನ ಮೂರನೇ ಸಿ.ಇ.ಓ ಸತ್ಯಣ್ಣನ ಬಗ್ಗೆ ಬರೆಯಲಾ ? ಟೀವಿಯಲ್ಲೆಲ್ಲಾ ಸುತ್ತಾಡುತ್ತಿರೋ ನಮೋ-ರಾಗಾ ಅಲೆಯ ಬಗ್ಗೆ ಬರೆಯಲಾ .. ಬರೆಯಬಹುದಾದದ್ದು , ಬರೆಯಲಾಗದ್ದು, ಬರೆಯಬಾರದ್ದು ನೂರೆಂಟು ವಿಷಯಗಳಿವೆಯಲ್ಲಾ. … Read more

ಸಸ್ಯ ಪ್ರೇಮಿ: ಅನಿತಾ ನರೇಶ್ ಮಂಚಿ

ಮನೆ ಮಂದಿಯೆಲ್ಲಾ ಔತಣಕ್ಕೆಂದು ಹೊರ ಹೋಗಿದ್ದರು. ಅದ್ಯಾಕೋ ಮನೆಯಲ್ಲಿ ಯಾರೂ ಇಲ್ಲದಿದ್ದರೆ ಹಾಡುವ ಉಮೇದು,  ನಾಟಕದ ಡೈಲಾಗುಗಳನ್ನು ದೊಡ್ಡದಾಗಿ  ಹೇಳುವ ಉತ್ಸಾಹ ನನ್ನೊಳಗಿನಿಂದ  ಉಕ್ಕಿ ಬರುತ್ತದೆ. ಯಾಕೆಂದರೆ ನನ್ನ ಹಾಡು ಕೂಡಾ ’ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ’ ಅನ್ನುವ ಮಾದರಿಯದ್ದು. ಇವತ್ತಂತೂ ಯಾವ ಹಾಡು ಕೂಡಾ ಎರಡು ಗೆರೆಯಷ್ಟುದ್ದಕ್ಕೆ ನೆನಪಿಗೇ ಬರಲಿಲ್ಲ. ಕೊನೆಗೆ  ’ಯಾವ ಹಾಡ ಹಾಡಲೀ.. ಎಂದು ಯೋಚಿಸುವಾಗಲೇ ಮುಂದಿನ ಲೈನ್ ನೆನಪಿಗೆ ಬಂದು ’ಯಾವ ಹಾಡಿನಿಂದ ನಿಮಗೆ ನೆಮ್ಮದಿಯನು ನೀಡಲೀ..’  ಅಂತ ಧ್ವನಿ … Read more

ಗುರು ಪರಂಪರೆಯ ಸಂಗೀತ ಕಲೆ ಮತ್ತು ಶಿಷ್ಯ ವೃಂದ: ಅಮರ್ ದೀಪ್ ಪಿ. ಎಸ್.

"ಸ ರಿ ಗ ಮ ಪ ದ ನಿ  ಸಾವಿರದ ಶರಣು …… "ಎಂದು ಅಣ್ಣಾವ್ರು ಹಾಡುತ್ತಿದ್ದರೆ ನಾನು ಆ ಹಾಡನ್ನು ಬಹಳ ಇಷ್ಟಪಟ್ಟು ಕೇಳುತ್ತಿದ್ದೆ.  ಬರೀ  ಹಾಡಲ್ಲ, ಆ ಚಿತ್ರವನ್ನೂ ಅಷ್ಟೇ ಇಷ್ಟಪಟ್ಟು ನೋಡಿದ್ದೆ. ಅದು  ಅದ್ಭುತ ಸಂಗೀತ ಶಕ್ತಿ ಗಾಯಯೋಗಿ ಪಂಡಿತ್  ಶ್ರೀ ಪಂಚಾಕ್ಷರಿ ಗವಾಯಿಗಳ ಕುರಿತು ತಯಾರಿಸಿದ ಚಿತ್ರ. ಅವರ ಜೀವನಗಾಥೆಯ  ಒಂದು ಪವಾಡ ಸೃಷ್ಟಿ ಕಣ್ಣ ತುಂಬಿಕೊಳ್ಳುತ್ತದೆ. ಅದು ಚಲನಚಿತ್ರದ ಮಾತಾಯಿತು. ವಾಸ್ತವವಾಗಿ  ಈ ಮಾತು ಗದುಗಿನ ಶ್ರೀ ವೀರೇಶ್ವರ ಆಶ್ರಮದಲ್ಲಿ … Read more

ಇಲ್ಲಿ ಮೈಲಿಗೆಯಾದ ಮಂತ್ರಿ ಅಲ್ಲಿ ಕಾರ್ಪೊರೇಟ್‌ಗಳ ಕಣ್ಮಣಿ: ಅಖಿಲೇಶ್ ಚಿಪ್ಪಳಿ ಅಂಕಣ

ಲೋಕಸಭೆ ಚುನಾವಣೆ ಹತ್ತಿರ ಬಂದೇ ಬಿಟ್ಟಿದೆ. ಕಾರ್ಪೋರೇಟ್ ಲಾಬಿಗೆ ಮಣಿಯುವ ಸರ್ಕಾರಗಳು ಲಾಬಿಗೆ ಅನುಕೂಲ ಮಾಡಿಕೊಡುವಲ್ಲಿ ತಮ್ಮ ಅತಿಸಹಕಾರವನ್ನು ನೀಡುತ್ತವೆ. ಪರಿಸರದ ಬಗ್ಗೆ ವೈಯಕ್ತಿಕವಾಗಿ ಸ್ವಲ್ಪ ಬದ್ಧತೆ ತೋರಿದ್ದ ಜೈರಾಂ ರಮೇಶ್‌ರನ್ನು ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಕಿತ್ತು ಹಾಕಿ ಜಯಂತಿ ನಟರಾಜ್‌ರನ್ನು ತಂದು ಕೂರಿಸಿದರು. ಪಕ್ಷ ಸಂಘಟಿಸುವ ನೆವದಲ್ಲಿ ಜಯಂತಿ ನಟರಾಜ್‌ರಿಂದ ರಾಜಿನಾಮೆ ಕೊಡಿಸಿ ಇಂಧನ ಮಂತ್ರಿಯಾದ ವೀರಪ್ಪ ಮೊಯ್ಲಿಗೆ ಹೆಚ್ಚುವರಿ ಖಾತೆಯಾಗಿ ಅರಣ್ಯ ಮತ್ತು ಪರಿಸರ ಇಲಾಖೆಯ ಜವಾಬ್ದಾರಿಯನ್ನು ನೀಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ … Read more

ಬಾದಾಮಿಯ ಬನಶಂಕರಿ ಜಾತ್ರಿ ಸಂಭ್ರಮ: ಸುಮನ್ ದೇಸಾಯಿ

      'ಬನದಹುಣ್ಣಿಮಿ’ ಮುಂದ ಬನಶಂಕರಿ ಜಾತ್ರಿ ಭಾಳ ದೊಡ್ಡ ಪ್ರಮಾಣದಾಗ ಆಗತದ, 1 ತಿಂಗಳ ತನಕಾ ಇರ್ತದ,ಎಲ್ಲೆಲ್ಲಿಂದೊ ಜನಾ ಬರ್ತದ,ನೋಡಬೇಕ ಆ ಛಂದಾನ, ಸುತ್ತಮುತ್ತಲ ಹಳ್ಳ್ಯಾಗಿನ ಮಂದಿ ಬಂಡಿ ಕಟಗೊಂಡ ಜಾತ್ರಿ ಮಾಡಲಿಕ್ಕೆ ಬರತಾರ. ಬಂಡಿಯೊಳಗ ವ್ಯವಸ್ಥಾ ಹೆಂಗಿರತದ ಗೊತ್ತೇನ ಈಗಿನ ನಿಮ್ಮ ವಿಮಾನದಾಗ ಹೊದ್ರು ಅದರಷ್ಟ ಆರಾಮ ಅನಸಂಗಿಲ್ಲ, ಬಂಡ್ಯಾಗ ಮೆತ್ತಗ ಹುಲ್ಲ ಹಾಸಿ ಮ್ಯಾಲೆ ಜಮಖಾನಿ ಹಾಸಿ ಕುಡಲಿಕ್ಕೆ ಎಷ್ಟ ಮಸ್ತ ಮೆತ್ತಗ ಹಾಸಿಗಿ ಮಾಡಕೊಂಡಿರತಾರ ಮತ್ತ ಅಡಗಿ ಮಾಡಲಿಕ್ಕೆ ಎನೇನು … Read more

ಮೂವರ ಕವಿತೆಗಳು: ವೆಂಕಟೇಶ್ ನಾಯಕ್, ಜಯಾ ನಾಣಯ್ಯ, ದೇಶಾಂಶ ಹುಡಗಿ

ಭಿತ್ತಿ ಚಿ(ಪ)ತ್ರ ಹಚ್ಚುವವರು ರಾತ್ರಿಯಿಡಿ ಕೈಯಲ್ಲಿ ಮೈದಾ ಅಂಟು ಎಳೆದೆಳೆದು ಕಿತ್ತೆಸೆವ ಭಿತ್ತಿಯ ನಂಟು ಗಂಟು ಕಟ್ಟುವ ಸಾಮ್ರಾಜ್ಯ ದೊಳಗೆ ತೇಪೆ ಹಚ್ಚಿ ಹಳತಿನ ಎದುರಲಿ ಹೊಸ ತೇಪೆಯ ತೆರೆಯೊಳಗೆ ದ್ವಿಚಕ್ರ ಕಾಲ ಋತುಮಾನ ಕಾಲಿನಲಿ ತುಳಿದು ತರುವ ಹೊಸತನ ಭಿತ್ತಿ ಚಿ(ಪ)ತ್ರ ಹಚ್ಚುವವರು ಮಾಸಿದ ಭಿತ್ತಿಗೆ ಬಣ್ಣದ ಕಾಗದ ಹಚ್ಚುವವರು ಕಿತ್ತೆಸೆಯಲಾಗದು ಕೆಲವರಂಟಿಸಿದ ಕಾಗದ ಕಣ್ಣೀರಿನಲಿ ಅದ್ದರೂ ಬಿಡದ ಅಂಟು ಈ ವರೆಗೆ ತಿಳಿದಿಲ್ಲ ದೂರವಾದರೂ ಉಳಿದಿದೆ ಸ್ಮೃತಿ ಪಟಲದಲಿ ನೆಂಪು ಹಲವಾರು ಕಾಗದಗಳಂಟಿದೆ ಮನದ … Read more

ಸೂರ್ಯಾಸ್ತವನರಸುತ್ತಾ (ಭಾಗ 2): ಪ್ರಶಸ್ತಿ ಪಿ.

ಬಿಡಲೇ ಆಗದಂತೆ ಉರಿಯುತ್ತಿದ್ದ ಕಣ್ಣುಗಳು, ಕೈ ಕಾಲುಗಳೆಲ್ಲಾ ಹಗ್ಗದಿಂದ ಜಗ್ಗಿದಂತೆ. ಎದ್ದೇನೆಂದರೂ ಏಳಲಾಗದಂತೆ ಧಿಮ್ಮೆನ್ನುತ್ತಿರುವ ತಲೆ.. ಎಲ್ಲಿದ್ದೇನೆಂದು ಅರಿವಿಗೆ ಬರಲು ಸ್ವಲ್ಪ ಹೊತ್ತೇ ಬೇಕಾಯಿತು. ಕಣಿವೆಯೊಂದರ ಸೂರ್ಯಾಸ್ತ ನೋಡಬೇಕೆಂದು ಹೊರಟ ಗೆಳೆಯರ ಗುಂಪಿನ ಉದ್ದೇಶ ಸೂರ್ಯಾಸ್ತಕ್ಕಷ್ಟೇ ಸೀಮಿತವಾಗದೇ ಮುಳುಗುರವಿಯ ದೃಶ್ಯಕಾವ್ಯಕ್ಕೆ ಇನ್ನೊಂದಿಷ್ಟು ರಂಗು ಹಚ್ಚುವಂತೆ ಪಾನ ಗೋಷ್ಟಿಯಲ್ಲಿ ತೊಡಗಿತ್ತು. ಈ ಪಾನವೆಂಬುದು ಪೌರುಷದ, ಸ್ಟೇಟಸ್ಸಿನ ಸಂಕೇತವೆಂಬ ಭಾವ ಗುಂಪಿನ ಗೆಳೆಯರದ್ದು ! ಕುಡಿಯದವರನ್ನು ಹೀಯಾಳಿಸುತ್ತಾ ಎಷ್ಟು ಬಾಟಲ್ ಏರಿಸುತ್ತೇವೆ ಅನ್ನುವುದರ ಮೇಲೆ ತಮ್ಮ "ಕೆಪ್ಯಾಸಿಟಿ"ಯ ಗುಣಗಾನ ಮಾಡುವುದರಲ್ಲಿ … Read more

ಸಾಮಾನ್ಯ ಜ್ಞಾನ (ವಾರ 13): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಬ್ರಹ್ಮ ದೇವಾಲಯವಿರುವ ಭಾರತದ ಏಕೈಕ ರಾಜ್ಯ ಯಾವುದು? ೨.    ವಿಶ್ವ ಪರಂಪಯ ಪಟ್ಟಿಗೆ ಸೇರಿದ ಕರ್ನಾಟಕ ಸ್ಥಳಗಳು ಯಾವುವು? ೩.    ಹಸಿರು ಕ್ರಾಂತಿ ಪ್ರಾರಂಭಿಸಿದ ಪ್ರಥಮ ರಾಜ್ಯ ಯಾವುದು? ೪.    ಭಾರತದಿಂದ ಹೊಗೆಸೊಪ್ಪು ಆಮದು ಮಾಡಿಕೊಳ್ಳುವ ದೇಶಗಳು ಯಾವುವು? ೫.    ಟಾಟಾ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇರುವ ರಾಜ್ಯ ಯಾವುದು? ೬.    ಏ ಗ್ರಾಮರ್ ಆಫ್ ದಿ ಕರ್ನಾಟಕ ಲಾಂಗ್ವೇಜ್ ಕೃತಿಯ ಕರ್ತೃ ಯಾರು? ೭.    ಏಕಲವ್ಯನ ವ್ಯಾಖ್ಯಾನವನ್ನು ಆಧರಿಸಿ ರಚಿಸಿದ ಪೈಯವರ … Read more

ಗೊಂಜಾಳ ಮಾರೊ ಹುಡುಗ: ಸುಮನ್ ದೇಸಾಯಿ ಅಂಕಣ

ಎಷ್ಟೊ ವರ್ಷಗಳ ಮ್ಯಾಲೆ ಅಜ್ಜಿ ಊರಿಗೆ ಬಂದಿದ್ದೆ. ಖುಷಿ ಆಗಿತ್ತ ಆಕಿಗೆ ನನ್ನಕಿಂತಾ, ಮರಿಮೊಮ್ಮಕ್ಕಳನ್ನ ನೋಡಿ. ನನ್ನ ಮದವಿ ಆದಮ್ಯಾಲೆ ಬಂದಿದ್ದೇನ ಇಲ್ಲಾ ನಾನು. ಆಡಿಬೆಳೆದ ಊರಿನ ಮಣ್ಣಿನ ವಾಸನಿಗೆ ಮನಸು ಅರಳಿತ್ತು. ನನಗ ಅಜ್ಜಿ ಊರಾಗ ಭಾಳ ಮಂದಿ ಗೇಳತ್ಯಾರ ಇದ್ರು. ಎಷ್ಟು ನಕ್ಕು ನಲಿತಿದ್ವಿ ದಿನಾಪೂರ್ತಿ. ವಾಪಸ್ ಊರಿಗೆ ಹೋಗಬೇಕಾದ್ರ ಮುಂದಿನ ಸರತೆ ಬರೊತನಕಾ ಆಗೊವಷ್ಟು ಖುಷಿಯ ಕ್ಷಣಗಳ ನೆನಪಿನ ದೊಡ್ಡ ಗಂಟನ್ನ ಮನಸಿನ್ಯಾಗ ಹೊತಗೊಂಡ ಹೋಗ್ತಿದ್ದೆ. ಅದನ್ನೆಲ್ಲಾ ಈಗ ನೆನಪ ಮಾಡಕೊಂಡ್ರ ಎಷ್ಟ … Read more

ಬೇಸರಗಳೇಕೆ ಹೀಗೆ ?: ಪದ್ಮಾ ಭಟ್

                       ಬೆಳಗಾಗಿ ಏಳುವುದರೊಳಗೆ, ಹೆಸರೇ ಇಲ್ಲದ ಬೇಸರಗಳು..ಇಷ್ಟದ ಗೆಳತಿಯೇ ಫೋನ್ ಮಾಡಲಿ, ಹತ್ತಿರದವರೇ ವಿಶ್ ಮಾಡಲಿ ಪ್ರತಿಕ್ರಿಯೆ ಸರಿಯಾಗಿ ಕೊಡಲು ಮನಸ್ಸಿಲ್ಲದ ಮನಸು.. ದಿನವೇ ಬೇಸರವಾ? ಅಥವಾ ನಾನೇ ನನಗೆ ಬೇಸರವಾಗಿಬಿಟ್ಟಿದ್ದೇನಾ? ಎಂಬ ಪ್ರಶ್ನೆಗೆ ಉತ್ತರ ಹುಡುಕುವುದು ಎಲ್ಲಿ ಎಂದು ಯೋಚಿಸಬೇಕಷ್ಟೆ..ಯಾವುದೋ ಖುಷಿಯ ವಿಷಯಕ್ಕೂ ಮನಸ್ಸು ಹಗುರವಾಗದ ಸ್ಥಿತಿಯೋ, ಇಷ್ಟದ ಹಾಡಿಗೆ ಮನಸೋಲದೇ ಇರುವ ಬೇಸರವೋ ಅರಿಯದ ಸ್ಥಿತಿಗೆ ಒಂದಷ್ಟು ಬೇಡದೇ ಇರುವ … Read more

ಬೆಳಗಿನ ಜಾವದ ಪ್ರಾಶಸ್ತ್ಯ ಓದು, ಸಕ್ಕರೆ ನಿದ್ದೆಯ ಸೋಗಲಾಡಿತನ: ಅಮರ್ ದೀಪ್ ಪಿ. ಎಸ್.

"ಬೇಗ ಮಲಗು ಬೇಗ ಏಳು"… ನಾಳೆ ಮಾಡುವುದನ್ನು ಇಂದೇ ಮಾಡು ಇಂದು ಮಾಡುವುದನ್ನು ಈಗಲೇ ಮಾಡು" ವಿದ್ಯೆಗೆ ವಿನಯವೇ ಭೂಷಣ" "ಕೈ ಮುಗಿದು ಒಳಗೆ ಬಾ" ಈ ಎಲ್ಲಾ ಮಾತು ಗಳನ್ನು ನಮ್ಮ ಶಾಲಾ ದಿನಗಳಲ್ಲಿ ದಿನಂಪ್ರತಿ ನಾವು ಬರೆಯುತ್ತಿದ್ದ ಕಾಪಿ ರೈಟಿಂಗ್ ಗಳು, ಮತ್ತು ಎಲ್ಲ ವನ್ನೂ ಹೇಳಿದಂತೆ ಬರೆಯಲು, ಬರೆದಂತೆ ರೂಢಿಸಿಕೊಳ್ಳಲು,  ಜೀವನದಲ್ಲಿ ಅಳವಡಿಸಿಕೊಳ್ಳಲು ಮಾಸ್ತರರು ಬೋಧಿಸುತ್ತಿದ್ದ ಬಗೆ.  ಚಿಕ್ಕಂದಿನಿಂದಲೇ ಕೆಲ ತಂದೆತಾಯಿ ಶಿಸ್ತು ಬದ್ಧವಾಗಿ ಬೆಳೆಸಿ ಮಕ್ಕಳನ್ನು ಅಣಿಗೊಳಿಸಿರುತ್ತಾರೆ. ಅದೇ ರೂಢಿ ಅವರನ್ನು … Read more

ಸವಾಲುಗಳಿವೆ – ಪರಿಹಾರವೂ ಇದೆ: ಅಖಿಲೇಶ್ ಚಿಪ್ಪಳಿ ಅಂಕಣ

ಬೇಸಿಗೆ ಶುರುವಾಗುತ್ತಿದೆ. ಸೆಕೆ, ಬಾಯಾರಿಕೆ ಹೆಚ್ಚಾಗುತ್ತದೆ. ಸೆಕೆ ತಡೆಯಲು ಫ್ಯಾನ್ ಮತ್ತು ಏರ್‌ಕಂಡೀಷನ್‌ಗಳು ಬೇಕು. ಬಾಯಾರಿಕೆ ತಣಿಸಲು ತಂಪು ಪಾನೀಯಗಳ ಹಿಂಡು-ಹಿಂಡು ಅಂತಾರಾಷ್ಟ್ರೀಯ ಕಂಪನಿಗಳು ನಿಂತಿವೆ. ಟಿ.ವಿ.ಗಳಲ್ಲಿ ತುಂಡುಡುಗೆಯ ತರುಣಿಯರು ಮಾದಕವಾಗಿ ಓಲಾಡುತ್ತಾ ನೀವು ನಮ್ಮ ಕಂಪನಿಯ ಪಾನೀಯವನ್ನೇ ಸೇವಿಸಿ ಎಂದು ಜಬರ್‌ದಸ್ತು ಮಾಡುತ್ತಾರೆ. ಮನುಷ್ಯನ ಶಕ್ತಿಯ ಹಸಿವಿಗೆ ಇಡೀ ಭೂಮಂಡಲ ತಲ್ಲಣಿಸುತ್ತಿದೆ. ಪ್ರತ್ಯಕ್ಷವಾಗಿ-ಪರೋಕ್ಷವಾಗಿ ನೂರಾರು ಪ್ರಬೇಧಗಳು ಅಳಿವಿನಂಚಿಗೆ ಬಂದು ನಿಂತಿವೆ. ಅಮೇರಿಕಾದಲ್ಲಿ ಚಳಿಯಿಂದ ಜನ ಅತೀವ ತೊಂದರೆಗೊಳಗಾದರೆ, ಪ್ರಾಣಿ-ಪಕ್ಷಿಗಳು ಪುತು-ಪುತುನೆ ಉದುರಿ ಸಾಯುತ್ತಿವೆ. ಹವಾಮಾನ ವೈಪರೀತ್ಯವೇ … Read more

ಗಣತಂತ್ರ ದಿನ: ಪ್ರಶಸ್ತಿ ಪಿ.ಸಾಗರ

ಗಣತಂತ್ರ ದಿನದ ಶುಭಾಶಯಗಳು !.  ಓ. ಧನ್ಯವಾದಗಳು. ಅಂದಂಗೆ ನಂಗೆ ಗಿಫ್ಟೆಲ್ಲಿ ?  ಗಿಫ್ಟಾ? ನಿಂಗಾ? ಯಾಕೆ ? !!! ಇದೊಳ್ಳೆ ಕತೆ ಆಯ್ತು. ಹುಟ್ಟಿದಬ್ಬಕ್ಕೆ, ಮದುವೆ ವಾರ್ಷಿಕೋತ್ಸವಕ್ಕೆ, ಸ್ನೇಹಿತರ ದಿನಕ್ಕೆ, ಅಪ್ಪಂದಿರ ದಿನಕ್ಕೆ, ಮಕ್ಕಳ ದಿನಕ್ಕೆ, ಪ್ರೇಮಿಗಳ ದಿನಕ್ಕೆ ಅಂತ ವರ್ಷವೆಲ್ಲಾ ಗಿಫ್ಟ್ ಗಿಫ್ಟಂರ್ತೀಯ. ನನ್ನ ದಿನಕ್ಕೊಂದು ಗಿಫ್ಟ್ ಕೊಡಕ್ಕಾಗಲ್ವಾ ?  ಓ,ಹೌದಲ್ವಾ ? ಇಷ್ಟು ವರ್ಷ ಈ ತರ ಯೋಚ್ನೇನೆ ಮಾಡಿರ್ಲಿಲ್ಲ. ಏನು ಬೇಕು ಗಿಫ್ಟು ನಿಂಗೆ ?  ಯಾವತ್ತೂ ಅದು ಸಿಕ್ಕಿಲ್ಲ, ಇದು … Read more

ಹೋರಿ ತಂದ ಕಥೆ: ಅಶೋಕ್ ಕುಮಾರ್ ವಳದೂರ್ (ಅಕುವ)

  "ಸುಧೀರಣ್ಣ ತೀರಿ ಕೊಂಡ" ಅಮ್ಮನ ಫೋನ್ ಬಂದಾಗ ತುಂಬಾ ಸಂಕಟ ಪಟ್ಟಿದ್ದೆ. ಬೇಸಾಯವನ್ನು ಪ್ರೀತಿಸಿದ ವ್ಯಕ್ತಿತ್ವ ಅದು.ಬಿಸಿಲು ಮಳೆಗಳು ಎಂದೂ ಆತನನ್ನು ಮುಟ್ಟಿದ್ದಿಲ್ಲ. ಚಳಿ ತಟ್ಟಿದ್ದಿಲ್ಲ. ಅದು ಮನೆಯ ಬೇಸಾಯದ ಕೋಣಗಳೇ ಆಗಲೀ ಕಂಬಳದ ಕೋಣಗಳೇ ಆಗಲಿ ಈತನಿಗೆ ಬಗ್ಗದೆ ಇರಲಿಲ್ಲ. ಕಂಬಳದ ಕೋಣನ ಕೊಂಬು ತಲೆಯ ನೆತ್ತಿಗೆ ಇರಿದಾಗ ರಕ್ತ ಹೋದದ್ದು ತಿಳಿಯಲಿಲ್ಲ. ಲೇಪದಲ್ಲೇ ಗುಣವಾದ ಗಾಯ ಮತ್ತೆ ಒಳಗೊಳಗೆ ಇಳಿದದ್ದು ಗೊತ್ತಾಗಲಿಲ್ಲ. ಮೊದ ಮೊದಲು ತಲೆನೋವಿದ್ದ ಅವರು ಮಣಿಪಾಲ ಆಸ್ಪತ್ರೆ ಸೇರಿದಾಗ ಪರಿಸ್ಥಿತಿ … Read more