Happy 50th anniversary to “ಸಂಸ್ಕಾರ” …: ಆದರ್ಶ ಬಿ. ವಶಿಷ್ಟ

ಹಿಂದಿರುಗಿ ನೋಡಿದಾಗ …  ಹೀಗೆಯೇ ಎಚ್ಚೆಸ್ವಿ ಅವರ "ಅನಾತ್ಮ ಕಥನ " ಓದುತ್ತಾ ಕುಳಿತಿದ್ದೆ. ಯಾವುದೊ ಸಣ್ಣ ಕಥೆಯ ಮಧ್ಯದಲ್ಲಿ ಅವರು ಯು. ಆರ್. ಅನಂತಮೂರ್ತಿಯವರ " ಸಂಸ್ಕಾರ " ಕಾದಂಬರಿಯ ಬಗ್ಗೆ ಉಲ್ಲೇಖಿಸಿದ್ದರು. ತಕ್ಷಣವೇ ಏನೋ ಹೊಳೆದಂತಾಗಿ ಇಂಟರ್ ನೆಟ್ನಲ್ಲಿ ಸಂಸ್ಕಾರ ಮೊದಲು ಬಿಡುಗಡೆ ಆದ ವರ್ಷ ಯಾವುದೆಂದು ಹುಡುಕಿದೆ. ವರ್ಷ ೧೯೬೫ ನೋಡಿದ ಕೂಡಲೇ ಮುಖದಲ್ಲೊಂದು ಮಂದಾಹಾಸ. ' ಅರೆ, ಸಂಸ್ಕಾರ ಮುದ್ರಣಗೊಂಡು ೫೦ ವರ್ಷ ಆಗಿಹೊಯ್ತಾ ?? ' ಎಂದುಕೊಂಡೆ. ತಕ್ಷಣವೇ ಇಂತಹದೊಂದು … Read more

ಹೀಗೊಂದು ಸ್ವ-ವಿಮರ್ಶೆ: ಅಭಿ ಸಾರಿಕೆ

ಬದುಕು ಸುಂದರ ಎನ್ನುವುದು ಎಷ್ಟು ನಿಜವೋ ಸಂಕೀರ್ಣ ಅನ್ನೋದು ಅಷ್ಟೆ ನಿಜ. ಕಣ್ಮುಂದಿರುವ ಭೂಮಿಯ ಬಿಟ್ಟು ಕಾಣದ ಸ್ವರ್ಗಕ್ಕೆ ಹಂಬಲಿಸೋ ಕತ್ತಲು. ನಮ್ಮನ್ನು ಪ್ರೀತಿಸುವ ಹೃದಯವ ಬಿಟ್ಟು ನಮ್ಮತ್ತ ತಿರುಗಿಯೂ ನೋಡದವರನ್ನು ತಿರು ತಿರುಗಿ ನೋಡುವ ಚಪಲ. ಬೇವು ಬೆಲ್ಲ ಕಲೆಸಿ ಬೆಲ್ಲವನ್ನು ಮಾತ್ರ ತಿನ್ನುವಂತ ರೀತಿ ಈ ಬದುಕು, ಯಾರಿಗೂ ಕಷ್ಟ ಬೇಕಿಲ್ಲ,  ಸುಖವನ್ನು ಬಯಸದವರು ಯಾರು ಇಲ್ಲ. ಬಲಪಕ್ಕದಲ್ಲಿರುವನಿಗೆ ಎರಡಂತಸ್ತಿನ ಮನೆ, ಎಡಪಕ್ಕದಲ್ಲಿರುವ ನಿಲ್ಲಲು ಸೂರಿಲ್ಲದ ಭಿಕಾರಿ, ಒಂದಸ್ತಿನ ಮನೆಯಲ್ಲಿರುವ ನಾವು ಎರಡಂತಸ್ತಿರುವನನ್ನು ನೋಡಿ … Read more

ಪುಟ್ಟಿ ಮತ್ತು ದೇವರು: ಅನಿತಾ ನರೇಶ್

ನಮ್ಮ ಪಕ್ಕದ ಮನೆ ಪುಟ್ಟಿಗೆ, ನಮ್ಮ ಮನೆಗೆ ಯಾವಾಗೆಂದರಾವಾಗ ಬರಲು ವೀಸಾ, ಪಾಸ್ಪೋರ್ಟ್ ಏನೂ ಬೇಡ. ಇವತ್ತು ಮಧ್ಯಾಹ್ನ ನನ್ನ ಊಟ ಆಗಿತ್ತಷ್ಟೇ. ಅವಳ ಹೆಜ್ಜೆಯ ಅಂದರೆ ಗೆಜ್ಜೆಯ ಸದ್ದು ಕೇಳಿಸಿತು.  ಒಂದು ಕೈಯಲ್ಲಿ ಕಥೆ ಪುಸ್ತಕ, ಇನ್ನೊಂದು ಕೈಯಲ್ಲಿ ಡ್ರಾಯಿಂಗ್ ಪುಸ್ತಕ ಹಿಡಿದು ‘ಅಕ್ಕಾ ಇವತ್ತು ಎರಡು ಕಥೆ, ಮೂರು ಡ್ರಾಯಿಂಗ್ ಗೊತ್ತಾಯ್ತಾ’ ಎಂದಳು. ನನ್ನದಿನ್ನೂ ಊಟದ ಪಾತ್ರೆಗಳನ್ನು ತೊಳೆಯುವ ಕೆಲಸ ಆಗಿರಲಿಲ್ಲ. ಹಾಗಾಗಿ ಅವಳನ್ನು ಅಲ್ಲೇ ಕಟ್ಟೆಯ ಮೇಲೆ ಕೂರಿಸಿ ಪಾತ್ರೆ ತೊಳೆಯಲು ಕುಳಿತೆ.  … Read more

ಮಂಕಿ ಬ್ಯುಸಿನೆಸ್: ಅಖಿಲೇಶ್ ಚಿಪ್ಪಳಿ

ಮಂಗಳೂರಿನ 800 ಜನ ರೈತರು ಮಂಗಗಳ ಕಾಟದಿಂದ ಬೇಸತ್ತು 2012ರಿಂದ ಬೆಳೆ ಬೆಳೆಯುವುದನ್ನೇ ನಿಲ್ಲಿಸಿದ್ದಾರೆ. ಮಂಗನ ಕಡಿತಕ್ಕೆ ಪರಿಹಾರ ನೀಡುವ ಏಕೈಕ ರಾಜ್ಯ ಉತ್ತರಾಖಂಡ. ಜಮ್ಮು ಜಿಲ್ಲೆಯಲ್ಲಿ ಪ್ರತಿವರ್ಷ 33 ಕೋಟಿ ರೂಪಾಯಿ ಮೊತ್ತದ ಬೆಳೆ ನಾಶ ಮಂಗಗಳಿಂದ. ಹಿಮಾಚಲ ಪ್ರದೇಶದಲ್ಲಿ ಪ್ರತಿವರ್ಷ ಮಂಗಗಳಿಂದ ಆಗುವ ಬೆಳೆ ಹಾನಿ ಮೊತ್ತ 500 ಕೋಟಿ ರೂಪಾಯಿಗಳು. ಮಂಗಗಳ ವಿರುದ್ಧ ಸೆಣೆಸಲು ಆಗ್ರಾ ಸಿಟಿ ಡೆವಲಪ್‍ಮೆಂಟ್ ಅಥಾರಿಟಿ ಪ್ರತಿವರ್ಷ ಖರ್ಚು ಮಾಡುವ ಹಣದ ಮೊತ್ತ 2 ಕೋಟಿ ರೂಪಾಯಿಗಳು. ದೇಶದ … Read more

ಬಂದ್: ಪ್ರಶಸ್ತಿ ಪಿ.

ನಾ ಸಣ್ಣಕ್ಕಿದ್ದಾಗ ಕೇಳಿದೊಂದು ಹಾಡು ನೆನಪಾಗುತ್ತಿದೆ ಯಾಕೋ. ಗಾಂಧಿ ಹೇಳಿಕೊಟ್ಟ ಪಾಠ,ಗುರುವಿಗೆ ತಿರುಮಂತ್ರ ಮಾಟ.ಸತ್ಯಾಗ್ರಹ,ಸ್ಟ್ರೈಕ್, ಸ್ಟ್ರೈಕ್, ಸ್ಟ್ರೈಕ್. ಪೆಟ್ರೋಲ್ ದರ ಹೆಚ್ಚಳವನ್ನು ವಿರೋಧಿಸಿ ಬಂಧ್, ರಸ್ತೆ ಸುರಕ್ಷಾ ಮಸೂಧೆಯನ್ನು ವಿರೋಧಿಸಿ ಬಂದ್. ಕಾವೇರಿ ನೀರು ಬಿಟ್ಟರೆಂದು ಬಂದ್, ಮಹದಾಯಿಗಾಗಿ ಬಂದ್.. ಉಫ್ ! ಹೀಗೆ ತಿಂಗಳಿಗೆರೆಡು ದಿನ ಬಂದ್ ಆಚರಿಸುತ್ತಿರೋದನ್ನ ನೋಡಿ ಕರ್ನಾಟಕವೂ ಕಮ್ಯುನಿಸ್ಟರ ನಾಡಾದ ಕೇರಳದ ಹಾದಿ ಹಿಡಿತಾ ಇದಿಯಾ ಅಂತ ಒಮ್ಮೆಮ್ಮೆ  ದಿಗಿಲಾಗುತ್ತೆ. ದಿನವೊಂದರ ಬಂದಿನಿಂದ ಕೋಟ್ಯಾಂತರ ರೂ ನಷ್ಟವಾಗುತ್ತೆ. ಬಂದ್ಗಳು ಅಸಾಂವಿಧಾನಿಕ, ಬಂದ್ಗಳ … Read more

ಮೂವರ ಕವನಗಳು: ಶಶೀ ತರೀಕೆರೆ, ಜಾನ್ ಸುಂಟಿಕೊಪ್ಪ, ವಲ್ಲಿ ಕ್ವಾಡ್ರಸ್

ಮರುಳನ ಸಾಲುಗಳು ನಿನ್ನ ನೆನಪಿಗಾಗಿ  ಖಾಲಿ ಬೀದಿಯಲ್ಲೂ ಕೈಬೀಸಿ ನಡೆಯೋದು  ಅದೇಷ್ಟು ಹಿತವಾದ ಸಾವು  ನಜ್ಜುಗುಜ್ಜಾದ ಈ ಬದುಕಿಗೆ.. ಬೆಳ್ಳಂಬೆಳಿಗ್ಗೆ ನಿನ್ನದೇ ತಿಳಿಯಾದ ನಿಗೂಢ ಸ್ವಪ್ನವೊಂದು ಥಟಕ್ಕನೆ ಹಾಸಿಗೆಯಿಂದೇಳಿಸುವ ಪರಿ  ಊಹಿಸು ಇನ್ನೆಷ್ಟು ದಿನ… ಚಿಟಿಕೆ ಸದ್ದಿನಷ್ಟಾದರೂ ನಗು ಉಳಿಸಿಕೊಳ್ಳದೆ  ಮುಗ್ಗರಿಸಿರುವ  ಊರುಕೇರಿಗಳ ಮೈಲಿಗಲ್ಲು ಕಟ್ಟಿಕೊಟ್ಟಿತೇ ಇನ್ನೊಂದು ಊರು… ಸುಮ್ಮನೆ ನಿನ್ನಂತೆ ಹ್ಮೂಂ  ಗುಡುವ ಹೂಬನ,ಮರಗಿಡ, ರೈಲು,ಸ್ತಬ್ಧ ಗೋಡೆಯಲ್ಲಿನ ನಿಪುಣ ಗಡಿಯಾರಗಳಿಗೆ  ಹೇಳು ಇದು ಎಷ್ಟರ ಪ್ರಾಯ .. -ಶಶೀ ತರೀಕೆರೆ         … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ತಂದೆ, ಮಗ ಹಾಗು ಕತ್ತೆ ತಂದೆ ಹಾಗು ಮಗ ತಮ್ಮ ಕತ್ತೆಯೊಂದಿಗೆ ನಡೆದುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದರು. ಅದೇ ದಾರಿಯಲ್ಲಿ ಹೋಗುತ್ತಿದ್ದ ಹಳ್ಳಿಯವನೊಬ್ಬ ಹೇಳಿದ, “ನೀವೆಂಥ ಮೂರ್ಖರು. ಕತ್ತೆ ಇರುವುದೇ ಸವಾರಿ ಮಾಡಲೋಸುಗವಲ್ಲವೆ?” ಇದನ್ನು ಕೇಳಿದ ತಂದೆ ಮಗನನ್ನು ಕತ್ತೆಯ ಮೇಲೆ ಕುಳ್ಳಿರಿಸಿದ. ಇಂತು ಅವರು ಪ್ರಯಾಣ ಮುಂದುವರಿಸಿದರು. ಸ್ವಲ್ಪ ಸಮಯದ ನಂತರ ಅವರು ಒಂದು ಗುಂಪಾಗಿ ಹೋಗುತ್ತಿದ್ದ ಕೆಲವರನ್ನು ಸಂಧಿಸಿದರು. ಅವರ ಪೈಕಿ ಒಬ್ಬ ಹೇಳಿದ, “ನೋಡಿ, ನೋಡಿ. ಆ ಯುವಕ ಎಷ್ಟು ಸೋಮಾರಿ! ತನ್ನ … Read more

ಫ್ಲಾಪಿಬಾಯ್ ಮತ್ತು ಲಗೋರಿಬಾಬಾ-5

ಕುರುಸಾಡಿ ದ್ವೀಪದಲ್ಲಿ.. ಕಳೆದ ವಾರ ಶ್ರೀಲಂಕಾದಲ್ಲಿನ ಬೆಳಕಿನ ಮರಗಳ ರಹಸ್ಯ ಬೇಧಿಸಿದ ಫ್ಲಾಪಿಬಾಯ್ ಮತ್ತು ಲಗೋರಿಬಾಬಾ ಮರಳಿ ತಮ್ಮ ಊರಿಗೆ ಬರುವಾಗ ಎರಡು ದಿನಗಳ ಮಟ್ಟಿಗೆ ರಾಮೇಶ್ವರದಲ್ಲಿಯೇ ಉಳಿಯುವ ಅನಿವಾರ್ಯತೆ ಎದುರಾಯ್ತು. ಗುಂಡ್ರುಗೋವಿ ಲಗೋರಿಬಾಬಾ ಮತ್ತು ತುಂಡೈದ ಫ್ಲಾಪಿಗೆ ಅವರು ಎಲ್ಲಿದ್ರೂ ಒಂದೇ! “ಆಯ್ತು” ಅಂತ ಇಬ್ರೂ ಅಲ್ಲಿಯೇ ಹೊಟೇಲೊಂದ್ರಲ್ಲಿ ರೂಮ್ ಮಾಡಿ ಉಳಿದುಕೊಂಡ್ರು. ಟಿವಿ, ಪೇಪರ್, ಪುಸ್ತಕ ಇತ್ಯಾದಿಗಳೆಲ್ಲಾ ಇಬ್ಬರಿಗೂ ಇರೋ ಆಸಕ್ತಿ ಅಷ್ಟಕ್ಕಷ್ಟೆ! ಲಗೋರಿಬಾಬಾಗೆ ಹೆಚ್ಚಿನ ಸಮಯ ಧ್ಯಾನ, ನಿದ್ದೆ, ಭಂಗಿ ಸೇದೋದ್ರಲ್ಲೇ ಕಳೆದೊದ್ರೆ, … Read more

ಮಂಗಳಗೌರಿಯೂ ಫಾರಿನ್ ಸೊಸೆಯೂ: ಪಾರ್ಥಸಾರಥಿ ಎನ್

ಗೆಳೆಯ ಶಿವರಾಜ್ ಮನೆಗೆ ಹೋಗಿ ತುಂಬಾ ದಿನಗಳೆ ಕಳೆದಿದ್ದವು. ಅವನು ಮೊದಲಾದರು ದಿನಾ ಅಂತ ನಮ್ಮ ಮನೆಗೆ ಬರುತ್ತಿದ್ದವರು ಈಗ ರಿಟೈರ್ಡ್ ಆದಮೇಲೆ ಕಾಣಿಸುತ್ತಲೇ ಇಲ್ಲ,  ’ನಾನು ರಿಟೈರ್ಡ್ ಆದ ಮೇಲೆ ತುಂಬ ಎಂಗೇಂಜ್ ಆಗಿ ಬಿಟ್ಟಿದ್ದೀನಿ ಯಾವುದಕ್ಕು ಸಮಯವಿಲ್ಲ ಅಂತ ಅವನ ಗೋಳಾಟ’  ಒಮ್ಮೆ ಮಾತನಾಡಿಸಿಯಾದರು ಬರೋಣ, ಇನ್ನು ನನ್ನ ಮುಖ ಮರೆತೀತು ಎಂದು ಬಾನುವಾರ ಅವರ ಮನೆಗೆ ಹೋದೆ. ಮುಂಬಾಗಿಲು ತೆರೆದಿತ್ತು, ಸೀದಾ ಒಳಗೆ ಹೋದೆ, ಯಾರು ಕಾಣಲಿಲ್ಲ ಅನ್ನುವಷ್ಟರಲ್ಲಿ, ರೂಮಿನಲ್ಲಿ ಸಣ್ಣ ಶಬ್ದ, … Read more

ಸಾಮಾನ್ಯ ಜ್ಞಾನ (ವಾರ 75): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು   1.    ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೆ ಬಂದ ವರ್ಷಯಾವುದು? 2.    ಇತ್ತೀಚಿಗೆ ಭಾರತ ಸರ್ಕಾರದ ಸಾಂಸ್ಕøತಿಕ ಸಲಹಾ ಮಂಡಲಿಯ ಕಾರ್ಯದರ್ಶಿಯಾಗಿ ಆಯ್ಕೆಗೊಂಡವರು ಯಾರು? 3.    ಎರಡು ಬಾರಿ ರಾಷ್ಟ್ರಪತಿಗಳ ಭಾವೈಕ್ಯತಾ ಪ್ರಸಸ್ತಿ ಪಡೆದ ಕನ್ನಡ ಚಲನಚಿತ್ರ ನಿರ್ದೇಶಕ ಯಾರು? 4.    ಅಗ್ನಿದೇವನ ಪತ್ನಿಯ ಹೆಸರೇನು? 5.    ವಿಶ್ವಸಂಸ್ಥೆಯು 2003-2012 ದಶಕವನ್ನು ಯಾವ ದಶಾಬ್ದಿ ಎಂದು ಪ್ರಕಟಿಸಿದೆ? 6.    ವಿಶ್ವದ ಅತ್ಯಂತ ಪುರಾತನ ವಿಶ್ವವಿದ್ಯಾನಿಲಯ ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಕುಲಪತಿ ಯಾರು? 7.    ‘ಕ್ಯೂ’ … Read more

ಗಣಪನೆಂಬ ಅದ್ಭುತ: ಪ್ರಸಾದ್ ಕೆ.

ಕತೆ, ಕವಿತೆ, ಕ್ರೈಮು, ಕಾರ್ಟೂನು, ಸಿನಿಮಾ, ಟೀಕೆ-ಟಿಪ್ಪಣಿ, ಸತ್ವವಿಲ್ಲದ ಸರ್ಕಾರಿ ಪತ್ರಗಳು, ಆಫೀಸಿನ ನೀರಸ ಮಣಭಾರದ ರಿಪೋರ್ಟುಗಳು ಹೀಗೆ ಹಿರಿ, ಕಿರಿ, ಕಿರಿಕಿರಿಯೆನ್ನಿಸುವ ಏನೇನೋ ವಿಷಯಗಳ ಬಗ್ಗೆ ಬರೀತಾ ಬರೀತಾ ಚೌತಿಯ ಗಣೇಶನ ಬಗ್ಗೆ ವಾರದ ವಿಶೇಷ ಪುರವಣಿಗೆ ಬರೆಯುವುದೇ ಒಂದು ಖುಷಿ. ಗಣಪತಿ ಎಂದರೆ ನನಗೆ ಹೊಸ ಜಗತ್ತು ತೆರೆದುಕೊಳ್ಳುತ್ತದೆ. ನನಗೆ ಗಣಪ ಎಂದರೆ ಏನೆಲ್ಲಾ, ಎಷ್ಟೆಲ್ಲಾ… ಅತಿಮಧುರ ಸಂಸ್ಕøತ ಶ್ಲೋಕಗಳನ್ನು ಬದಿಗಿಟ್ಟುಕೊಂಡರೂ ಗಣಪತಿಯೆಂದರೆ ನನ್ನದೇ ಹಲವು ವರ್ಷನ್ನುಗಳು ನನಗೆ. 'ಗಣೇಶ' ಎಂದರೆ ಗಣೇಶನ ಮದುವೆಯ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಹೊಸತಾಗಿ ಮತಾಂತರಗೊಂಡವನು ಒಂದು ಊರಿನಲ್ಲಿ ಒಬ್ಬ ಮುಸಲ್ಮಾನ ಹಾಗು ಒಬ್ಬ ಕ್ರೈಸ್ತಮತೀಯ ಸ್ನೇಹಿತರು ನೆರೆಹೊರೆವಾಸಿಗಳಾಗಿದ್ದರು. ಇವರೀರ್ವರಲ್ಲಿ ಪ್ರತಿಯೊಬ್ಬನಿಗೂ ಇನ್ನೊಬ್ಬನ ಯೋಗಕ್ಷೆಮದ ಕಾಳಜಿ ಇದ್ದದ್ದರಿಂದ ಆರೋಗ್ಯದ ಹಾಗು ಇನ್ನಿತರ ಖಾಸಗಿ ವಿಷಯಗಳ ಕುರಿತು ಆಗಾಗ್ಗೆ ವಿಚಾರವಿನಿಮಯ ಮಾಡಿಕೊಳ್ಳುತ್ತಿದ್ದರು. ಬಲು ಶ್ರದ್ಧೆಯಿಂದ ಇಸ್ಲಾಂ ಮತಾಚರಣೆಗಳನ್ನು ಮಾಡುತ್ತಿದ್ದ ಮುಸಲ್ಮಾನನು ತನ್ನ ಮತದ ಹಿರಿಮೆಯನ್ನು ಬಹುವಾಗಿ ಹೇಳುತ್ತಿದ್ದದ್ದರ ಪರಿಣಾಮವಾಗಿ ಕ್ರೈಸ್ತಮತೀಯನು ಇಸ್ಲಾಂ ಮತಕ್ಕೆ ಮಾತಾಂತರಗೊಂಡನು.  ಮತಾಂತರಗೊಂಡ ಮಾರನೆಯ ದಿನ ಬೆಳಗಿನ ಜಾವದಲ್ಲಿ ಅವನ ಮನೆಯ ಬಾಗಿಲನ್ನು ಯಾರೋ ಜೋರಾಗಿ ಬಡಿಯುತ್ತಿದ್ದದರಿಂದ ಅರೆನಿದ್ದೆಯಲ್ಲಿದ್ದ … Read more

ಒತ್ತಡ ರ(ಸ!)ಹಿತ ಶಿಕ್ಷಣ: ಗುರುಪ್ರಸಾದ್ ಕುರ್ತಕೋಟಿ

"ರೀ ನಿಮ್ಮ ಮಗಳು ಹೋಂ ವರ್ಕ್ ಮಾಡಿಲ್ಲ" ಮಗಳ ಅಮ್ಮ ಕೂಗುತ್ತಿದ್ದಳು! ಆ ದನಿ ನನಗೆ ಅಂತರಿಕ್ಷ ವಾಣಿ ಥರ ಕೇಳುತ್ತಿತ್ತು. ಯಾಕಂದ್ರೆ, ನಮ್ಮ ಕಂಪನಿಯವರು ಇವನು ಸಮಧಾನದಿಂದಿರಲೇ ಕೂಡದು ಅಂತ ನಿರ್ಧರಿಸಿ, ದಯಪಾಲಿಸಿದ್ದ ಬ್ಲ್ಯಾಕ್ ಬೆರ್ರಿ (ವರ್ರಿ ಅಂತಿದ್ರೆ ಇನ್ನೂ ಚೆನ್ನಾಗಿರುತ್ತಿತ್ತೇನೋ) ಎಂಬ ಮೊಬೈಲ್ ನಲ್ಲಿ ಇಮೇಲ್ ಗಳ ಮಧ್ಯೆ ನಾನು ಹುದುಗಿ ಹೋಗಿದ್ದೆ.  ಮೊದಲೆಲ್ಲಾ ನಮ್ಮ ಹಿರಿಯರು ಬೆಳಿಗ್ಗೆ ಎದ್ದ ಕೂಡಲೇ ಅಂಗೈ ನೋಡಿಕೊಂಡು "ಕರಾಗ್ರೆ ವಸತೇ ಲಕ್ಷ್ಮಿ…" ಹೇಳುತ್ತಿದ್ದರೆ ಕಲಿಯುಗದಲ್ಲಿ ನಾವು ಅಂಗೈಯಲ್ಲಿ … Read more

ಕುಕ್ಕೆಯಲ್ಲೊಂದು ಪಂಕ್ಚರ್ ಕತೆ: ಪ್ರಶಸ್ತಿ

ಹಿಂದಿನ ಭಾಗದಲ್ಲಿ ಓದಿದಂತೆ ಟ್ರಿಪ್ಪಿನುದ್ದಕ್ಕೂ ಯೋಗಾಯೋಗಗಳೆಂಬ ನಾಣ್ಯದ ಮುಖಗಳು ಕ್ಷಣಕ್ಷಣಕ್ಕೂ ನಮಗೆ ಮುಖಾಮುಖಿಯಾಗುತ್ತಲೇ ಇದ್ದವು. ಬಿಸಿಲೆಯಲ್ಲಿ ಹಾಸನ ಸಂರಕ್ಷಿತ ಅರಣ್ಯ ಪ್ರದೇಶ ಅನ್ನೋ ಬೋರ್ಡು ಕಂಡಿದ್ದರೂ ಅದರ ಕೆಳಗೆ ಸಣ್ಣಕ್ಕಿದ್ದ ಬಿಸಿಲೆ ವೀವ್ ಪಾಯಿಂಟಿಗೆ ದಾರಿಯೆಂಬ ಬೋರ್ಡು ಕಾಣದೇ ಬಿಸಿಲೆಯ ಮೊದಲ ವೀವ್ ಪಾಯಿಂಟ್ ಮಿಸ್ಸಾಗಿತ್ತು. ಕುಕ್ಕೆಗೆ ಬಂದ ಬಹುತೇಕ ಮಂದಿ ಬಂದೇ ಹೋಗುವ ಗಡಿಮಾರಮ್ಮನ ದೇವಸ್ಥಾನ ಮಿಸ್ಸಾಗೇ ಹೋಗ್ತಿತ್ತೇನೋ ಅಲ್ಲಿನ ಗೇಟು ಹಾಕಿ, ಅದನ್ನ ತೆಗಿಯೋಕೆ ಅಂತ ನಾನು ಕೆಳಗಿಳಿಯದೇ ಹೋಗಿದ್ದರೆ. ಮೊದಲೆರಡು ಪಂಕ್ಚರ್ರುಗಳಾಗದೇ ಹೋಗಿದ್ದರೆ … Read more

ಕೃಷ್ಣ ಪ್ರೇಮದಲ್ಲಿ ನಾವೆಲ್ಲರೂ….: ಅಭಿ ಸಾರಿಕೆ

ಅಚ್ಯುತಮ್, ಕೇಶವಂ ಕೃಷ್ಣ ದಾಮೋದರಂ ಜಾನಕಿವಲ್ಲಭಂ ವಾಸುದೇವಂ ಭಜೇ… ಕೃಷ್ಣ ಎಂಬ ಹೆಸರೇ ಮನಕ್ಕೆ ಒಂದು ರೀತಿಯ ಆನಂದ ತರುತ್ತದೆ, ಕೃಷ್ಣ ಸರ್ವಾಂತರ್ಯಾಮಿ ಅಂದರೆ ಸರ್ವರ ಅಂತರಂಗಗಳಲ್ಲೂ ಅಲೆವವನು, ಅವನಿಲ್ಲದ ಉಸಿರಿಲ್ಲ. 'ಕೃಷ್ಣಂ ವಂದೇ ಜಗದ್ಗುರು' ಕೃಷ್ಣನೇ ಜಗದ ಗುರು, ಜಗದ ಗುರುವಾದ ಕೃಷ್ಣನೇ ನಿನಗೆ ವಂದಿಸುವೆ.  ನಾವೆಷ್ಟೆ ದೇವರನ್ನು ಪೂಜಿಸಿದರು ಆ ಪೂಜೆಯಲ್ಲೊಂದು ಭಯವಿರುತ್ತದೆ. ಆದರೆ ಕೃಷ್ಣನ ವಿಷಯ ಹಾಗಲ್ಲ ಆತನ ಪೂಜಿಸಲು ಭಯ ಪಡಬೇಕಿಲ್ಲ ಪ್ರೇಮ ಮಿಳಿತವಾದ ಭಕ್ತಿಯೊಂದಿದ್ದರೆ ಸಾಕು, ಕೃಷ್ಣನನ್ನು  ನಮಗೆ ಬೇಕಾದ … Read more

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ– 7: ಅಖಿಲೇಶ್ ಚಿಪ್ಪಳಿ

ಕೊನೆಯ ಕಂತು: ವಸ್ತುಗಳು ಇವತ್ತು ಜನರನ್ನು ಆಳುತ್ತಿವೆ. ಟಿ.ವಿ.ಯಲ್ಲಿ ಬರುವ ಪ್ರತಿಯೊಂದು ವಸ್ತುವೂ ಮನುಷ್ಯನಿಗೆ ಅತಿ ಅಗತ್ಯ ಎಂದು ಬಿಂಬಿಸಲಾಗುತ್ತಿದೆ. ಪ್ರತಿಯೊಂದಕ್ಕೂ ಯಂತ್ರಗಳ ಬಳಕೆ ಶುರುವಾಗಿದೆ. ನಿಮ್ಮಲ್ಲಿ ವಾಶಿಂಗ್ ಮಷಿನ್ ಇಲ್ಲ ಅಂದರೆ ನಿಮ್ಮ ಸಾಮಾಜಿಕ ಸ್ತರದಲ್ಲಿ ಒಂದು ಮೆಟ್ಟಿಲು ಕಡಿಮೆಯಾಗುತ್ತದೆ. ಯಂತ್ರಗಳ ಸಂಖ್ಯೆ ನಿಮ್ಮ ಮನೆಯಲ್ಲಿ ಹೆಚ್ಚು-ಹೆಚ್ಚು ಇದ್ದ ಹಾಗೆ ನಿಮ್ಮ ಸಾಮಾಜಿಕ ಸ್ತರ ಸದಾ ಮೇಲ್ಮುಖಿಯಾಗಿಯೇ ಇರುತ್ತದೆ. ಹವಾಮಾನ ಬದಲಾವಣೆಗೂ ಹಾಗೂ ವೈಯಕ್ತಿಕ ಬದುಕಿಗೂ ನೇರ ಸಂಬಂಧವಿದೆ. ನಿಮ್ಮ ಜೀವನಶೈಲಿಯ ಬದಲಾವಣೆಯಿಂದಾಗಿ ನೀವೊಬ್ಬ ಪರಿಸರಸ್ನೇಹಿ … Read more

ಮೂವರ ಕವನಗಳು: ಬಿದಲೋಟಿ ರಂಗನಾಥ್, ರಾಘವ ಹರಿವಾಣಂ, ಕು.ಸ.ಮಧುಸೂದನ್ ನಾಯರ್

ಏಕ ಶೀಲಾ ಬೆಟ್ಟ ನೋಡುತ್ತಲೇ ಇದ್ದೇನೆ ಬೆಳೆಯದೇ ಕೊರಗದೆ ಕರಗದೆ ಜುಮ್ಮನ್ನದೇ ಕೂತಿದೆ ಎದೆಯ ಭಾಗಕ್ಕೆ ಅಂಗಾಲೂರಿ ಸಾಗಿದರೆಷ್ಟೋ ಜನ ನಾನೂ ಕೂಡಿ. ಸಾಯದೆ ಹಿಗ್ಗುತ್ತಿದೆ ಸೊಗಸು ಬಿನ್ನಾಣ. ನನ್ನಿಂದೆ ಬಂದೋದವರ ಬಿಸಿಯುಸಿರ ಪಿಸುನುಡಿ ಏದುಸಿರ ಬಿಚ್ಚು ಮೆದೆ ಜೀವಂತ ಸದಾ… ನರ ಹೊತ್ತ ಬೆಳ್ಳಕ್ಕಿಗಳ ಕೋಮಲ ಪಾದಗಳ ಸ್ಪರ್ಶ ಸೋಕಿ ನಿರಂತರ ಎಚ್ಚರ ರಸಿಕತೆಯಲಿ ಒಳಗೊಳಗೆ ಖುಷಿಯ ಮೈದವಡುತ ಕೂತಿದೆ ಸುಮ್ಮನೆ ಬಿಮ್ಮನೆ ಯಾರು ಹತ್ತಿದರು ಅಪ್ಪಿದರು ಒದ್ದರು  ಬೇಸರವಿಲ್ಲ ಜಗಜಟ್ಟಿ ಮಲ್ಲನಿಗೆ ಬೆತ್ತಲ ಮನಸ … Read more

ಫ್ಲಾಪಿಬಾಯ್ ಮತ್ತು ಲಗೋರಿಬಾಬಾ-4

ಬೆಳಕಿನ ಮರಗಳ ರಹಸ್ಯ     “ಲಗೋರಿಬಾಬಾ ಫ್ರೀ ಇದೀರಾ ಈ ವಾರ? ಸಾಧ್ಯವಾದ್ರೆ ನನ್ನ ಜೊತೆ ಶ್ರೀಲಂಕಾಗೆ ಬನ್ನಿ. ಒಂದು ರಹಸ್ಯದ ಬಗ್ಗೆ ಅಧ್ಯಯನ ಮಾಡಲು ಡಾ.ಕೋವೂರ್ ಜೊತೆ ಹೋಗೋಣ.” ಫ್ಲಾಪಿಬಾಯ್ ಕೇಳಿದ ಲಗೋರಿಬಾಬಾನಿಗೆ.     “ಏನು ರಹಸ್ಯ? ಡಾ. ಕೋವೂರ್ ಅಂದ್ರೆ ಯಾರು? ಸಿಲೋನ್‍ಗೆ ಅವಶ್ಯವಾಗಿ ಹೋಗೋಣ. ನಾನು ಎಲ್ಲಿಗಾದರೂ ಸೈ” ಲಗೋರಿಬಾಬಾ ಪ್ರತ್ಯುತ್ತರಿಸಿದ.     “ಶ್ರೀಲಂಕಾದ ಉತ್ತರ ಭಾಗದಲ್ಲಿ ಮನ್‍ಕುಳಮ್ ಅಂತ ಊರಿದೆ. ಆ ಊರಿನ ಕಾಡಿನ ಬೇಟೆಗೆ ಬೇರೆ ಬೇರೆ ಕಡೆಯಿಂದ … Read more

ಭಾರತದಲ್ಲಿ ಜಾತಿವ್ಯವಸ್ಥೆ: ದ್ಯಾವನೂರ್ ಮಂಜುನಾಥ್

“ಮಳೆಯ ಭರದಿ ತಿಳಿಯ ಮಣ್ಣು ಒಳಗು ಹೊರಗೂ ಏಕವಾಗಿ ಸೋರುತಿಹುದು ಮನೆಯ ಮಾಳಗಿ ಅಜ್ಞಾನದಿಂದ…..” ಇದನ್ನು ಬಗೆಹರಿಸಲು ಬುದ್ಧ ಬಸವಣ್ಣನಂತಹ ಮಹಾತ್ಮರು ಎಲ್ಲಿ ಸೋತರು ಎನ್ನುವ ಪ್ರಶ್ನೆ ನನ್ನಲಿ ಸದಾ ಪ್ರಶ್ನಿಸುತ್ತಿರುವೆ. ಈ ಒಂದು ಪ್ರಶ್ನೆಗೆ ನಮ್ಮ ಬಳಿ ಸ್ಪಷ್ಟವಾದಂತಹ ಉತ್ತರವಿಲ್ಲ ಯಾಕೆಂದರೆ ಭಾರತದಲ್ಲಿ ಜಾತಿವ್ಯವಸ್ಥೆ ಇದೆಯೆ? ಎನ್ನು ಗೊಂದಲದ ಪ್ರಶ್ನೆ ಹುಟ್ಟುತ್ತದೆ. ಇಂದಿನ ನಮ್ಮ ಸಮಾಜ ವಿಜ್ಞಾನಗಳಲ್ಲಿ ನಡೆಯುವ ಪ್ರಭಕಾರಿಯಾದ ಸಂಶೋಧನೆಯಲ್ಲಿ ನೋಡುವಂತಹದ್ದು ಐಡಿಯಾಲಾಜಿಕಲ್ ಸ್ವರೂಪದ್ದೆ ವಿನಃ ಯಾವುದೇ ರೀತಿಯಲ್ಲಿ ವೈಜ್ಞಾನಿಕ ಸ್ವರೂಪದಲ್ಲ.     ಇತ್ತೀಚಿಗೆ … Read more