ಇಲಿ ಪಾಶಾಣ ಮಾರುವವನ ಜೀವನ ಪ್ರೀತಿ: ನಟರಾಜು ಎಸ್. ಎಂ.

ಜಲ್ಪಾಯ್ಗುರಿಯ ಮಧ್ಯ ಭಾಗದಲ್ಲಿ ಒಂದು ಪುಟ್ಟ ನದಿ ಹರಿಯುತ್ತೆ. ಆ ನದಿಯ ಹೆಸರು ಕರೋಲ. ಬಹುಶಃ ಬೆಂಗಾಲಿಯಲ್ಲಿ ಕರೋಲ ಅಂದರೆ ಹಾಗಲಕಾಯಿ. ಈ ನದಿಗೆ ಅಲ್ಲಲ್ಲಿ ಪುಟ್ಟ ಪುಟ್ಟ ಸೇತುವೆಗಳಿವೆ. ಅಂತಹ ಒಂದು ಪುಟ್ಟ ಸೇತುವೆ ದಿನ್ ಬಜಾರ್ ಮೋಡ್ ಎನ್ನುವ ಜಾಗದ ಬಳಿ ಇದೆ. ದಿನ್ ಬಜಾರ್, ಜಲ್ಪಾಯ್ಗುರಿಯಲ್ಲಿ ವ್ಯಾಪಾರ ವಹಿವಾಟು ನಡೆಯುವ ಒಂದು ಪ್ರಮುಖ ಜಾಗ. ನಾನು ಮನೆಯಿಂದ ಆಫೀಸಿಗೆ ಹೊರಡಬೇಕಾದರೆ ಈ ದಿನ್ ಬಜಾರ್ ಅನ್ನು ದಾಟಿಯೇ ಹೋಗಬೇಕು. ನನ್ನ ಮನೆಯಿಂದ ಆಫೀಸಿಗೆ … Read more

ಮುಂಗಾರು ಮಳೆ ಮತ್ತು ಗಾಳಿಪಟ:ವಾಸುಕಿ ರಾಘವನ್ ಅಂಕಣ

                ಯೋಗರಾಜ್ ಭಟ್ಟರ ಚಿತ್ರಗಳ ಬಗೆಗಿನ ಚರ್ಚೆಗಳು ಯಾವಾಗಲೂ ಸ್ವಾರಸ್ಯಕರವಾಗಿರುತ್ತವೆ. “ಭಟ್ರು ಏನ್ ಸೂಪರ್ ಆಗಿ ಹಾಡುಗಳನ್ನ ಡೈಲಾಗುಗಳನ್ನ ಬರೀತಾರೆ ಗುರೂ, ಸಕ್ಕತ್ತು ತಮಾಷೆಯಾಗಿ ಇರುತ್ತಪ್ಪಾ” ಅನ್ನುವುದರಿಂದ ಹಿಡಿದು “ಭಟ್ರು ಪಿಚ್ಚರಲ್ಲಿ ಅದೇ ಬೇಜವಾಬ್ದಾರಿ ಉಡಾಫೆ ಹೀರೋ, ಸುಮ್ನೆ ಉದ್ದುದ್ದ ಡೈಲಾಗ್ ಹೊಡ್ಕೊಂಡು ಅಲೀತಾ ಇರ್ತಾರಪ್ಪ ಅಷ್ಟೇ, ಛೇ ಅವ್ರು ಬೇರೆ ಥರ ಯಾವುದಾದರೂ ಫಿಲಂ ಮಾಡ್ಬೇಕಪ್ಪಾ” ಅನ್ನುವವರೆಗೂ ಅಭಿಪ್ರಾಯಗಳು ಕೇಳಿಬರುತ್ತವೆ! “ಭಟ್ಟರ ಬೆಸ್ಟ್ ಫಿಲಂ ಯಾವುದು?” … Read more

ರಿಟೈರಾದ ದೇವರು : ಪ್ರಶಸ್ತಿ ಅಂಕಣ

"ದೇವರು ರಿಟೈರಾಗುತ್ತಿದ್ದಾನೆ"!!. ಕೆಲವರಿಗೆ ಈ ಶೀರ್ಷಿಕೆಯೇ ವಿಚಿತ್ರವೆನಿಸಿದರೆ ಉಳಿದವರಿಗೆ ನಾನಿಂದು ಯಾರ ಬಗ್ಗೆ ಹೇಳಹೊರಟಿರುವೆನೆಂದು ಹೊಳೆದಿರಬಹುದು. ಹಾಂ, ಹೌದು . ಹೇಳಹೊರಟಿರುವುದು ಇಂದಷ್ಟೇ ತನ್ನ ಕ್ರಿಕೆಟ್ ಜಗತ್ತಿನ ಎಲ್ಲಾ ಪ್ರಕಾರಗಳಿಂದ ಕ್ರಿಕೆಟ್ ಲೋಕದ ದಿಗ್ಗಜನ ಬಗ್ಗೆ. ದಾಖಲೆಗಳ ಮೇಲೆ ದಾಖಲೆಗಳ ಬರೆಯುತ್ತಾ ಹೋದ ಅವನೆಲ್ಲಾ ದಾಖಲೆಗಳು ಕ್ರಿಕೆಟ್ ಪ್ರಿಯರಿಗೆ ಎರಡರ ಮಗ್ಗಿಯಂತೆ ನೆನಪಲ್ಲಿದ್ದರೂ ದಾಖಲಾಗದ ಹಲವು ಸವಿನೆನಪುಗಳು ಅವನ ಆಟದ ಸುತ್ತ. ಕ್ರಿಕೆಟ್ ಜಗತ್ತಿನ ಬಂಗಾರದ ಮನುಷ್ಯ, ಹೆಸರಲ್ಲೇ ಚಿನ್ನ ಇಟ್ಟುಕೊಂಡಿರೋ ಸಚಿನ್ ಎಂದು ಯಾರಾದರೂ ಅಂದರೂ … Read more

ಬಾಲ್ಯ ವಿವಾಹವೆಂಬ ಪಿಡುಗು:ಅಖಿಲೇಶ್ ಚಿಪ್ಪಳಿ ಅಂಕಣ

 [ನವಂಬರ್ ೧೪ ಮಕ್ಕಳ ದಿನಾಚರಣೆ. ಸ್ವತಂತ್ರ ಲಭಿಸಿ ೬೬ ವರ್ಷಗಳು ಸಂದರೂ ಭಾರತದಲ್ಲಿ ಹಾಗೂ ವಿಶ್ವದಲ್ಲಿ ಅವಧಿಪೂರ್ವ ವಿವಾಹಗಳು ನಡೆಯುತ್ತವೆ. ಮಕ್ಕಳನ್ನು ಮಧುಮಕ್ಕಳನ್ನಾಗಿ ಮಾಡಿ ಅವರ ಜೀವನವನ್ನು ದುರ್ಭರ ಮಾಡುವ ಪದ್ಧತಿಯಿದೆ. ಸರ್ವರಿಗೂ ಸಮಾನ ಶಿಕ್ಷಣ ಲಭಿಸಿದಾಗ ಈ ಅನಿಷ್ಟ ಪದ್ಧತಿ ನಿಲ್ಲಬಹುದು ಎಂಬ ಆಶಾಭಾವನೆಯೊಂದಿಗೆ ಮಕ್ಕಳ ದಿನಾಚರಣೆ ನಿಮಿತ್ತ ಈ ಲೇಖನ]       ಬಾಲ್ಯ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಸುಂದರವಾದ, ಮಧುರವಾದ ಕ್ಷಣಗಳು. ಬಾಲ್ಯವೆಂಬುದು ಪ್ರಕೃತಿಯ ಪ್ರತಿಯೊಂದನ್ನು ಅಚ್ಚರಿಯಿಂದ ಗಮನಿಸುವ ಹಂತ, … Read more

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸ (ಭಾಗ 4): ಗುರುಪ್ರಸಾದ ಕುರ್ತಕೋಟಿ

(ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ)          ಅವತ್ತು ಬೆಳಿಗ್ಗೆ ದಾರ್ಜಿಲಿಂಗ್ ಗೆ ವಿದಾಯ ಹೇಳಿ ಕಾಲಿಮ್ ಪಾಂಗ್‍ಗೆ  ನಮ್ಮ ಸವಾರಿ ಸಾಗಿತ್ತು. ಮಾರ್ಗ ಮಧ್ಯದಲ್ಲಿ ಒಂದು ಅದ್ಭುತ ಜಾಗದಲ್ಲಿ ಟ್ರೆಕ್ಕಿಂಗ್‍ಗೆ ಕರೆದೊಯ್ಯುವುದಾಗಿ ಭರವಸೆ ಕೊಟ್ಟು ನಮ್ಮನ್ನು ಕುತೂಹಲಿಗಳನ್ನಾಗಿರಿಸಿದ್ದ ನಮ್ಮ ನೀ ಮಾ. ನಾವು ಹೊರಟು ಸುಮಾರು ಎರಡು ಗಂಟೆಗಳಾಗಿತ್ತೇನೊ ಲಾಮಾ ಹಟ್ಟಾ ಅನ್ನುವ ಒಂದು ಹಳ್ಳಿಯಲ್ಲಿ ನಮ್ಮ ಗಾಡಿ ನಿಂತಿತು. ಅದು ಮುಖ್ಯ ರಸ್ತೆಯಲ್ಲೇ ಇರುವ ಒಂದು ಹಳ್ಳಿ. ವಿಚಿತ್ರವೆಂದರೆ ಅಲ್ಲಿಂದಲೂ ಕಾಂಚನಜುಂಗಾದ ಮತ್ತೊಂದು … Read more

ಚುಟುಕಗಳು: ಹರ್ಷ ಮೂರ್ತಿ

೧. ವಿರಹ ನೋಡಲು ನಿನ್ನನೆ ಪುನಃ ಕಾಡಿದೆ ಮನಸು ವಿನಃ ಬರಲು ನಾ ನಿನ್ನ ಸನಿಹ ತಡೆದಿದೆ ಈ ವಿರಹ   ೨. ಬೇಸ್ತು ಅದು ಕೂಡ blade ಕಂಪನಿ ಎಂದು ತಿಳಿದು ಬಂದಾಗ ಹಣ ಕಳೆದುಕೊಂಡ ಸ್ನೇಹಿತರ ಕಂಡು ಬಿದ್ದು ಬಿದ್ದು ನಕ್ಕಿದ್ದ ಗುಂಡ ದೊಡ್ಡದಾಗಿ.. ನಂತರ ಬಾಯಿ ಬಡಿದುಕೊಳ್ಳತೊಡಗಿದನು ತಾನೂ ಅಲ್ಲೇ ಹಣ ಇಟ್ಟಿದ್ದು ನೆನಪಾಗಿ!    ೩. ಶುದ್ಧ-ಅಶುದ್ಧ ಶುದ್ಧವಾಗಿದ್ದರೆ  holy.. ಕೆಟ್ಟು ಹೋಗಿದ್ದರೆ  ಪೋಲಿ!    ೪. ತರಲೆ ಪಕ್ಕದ್ಮನೆ ಹುಡುಗಿ … Read more

ಬಾಳವ್ವನ ಬಾಳುವೆ: ನೇಮಿನಾಥ ಬಸವಣ್ಣಿ ತಪಕೀರೆ

ಸಾವಕಾರ್ರ ನಂಗ ಐವತ್ತು ರೂಪಾಯಿ ಕೊಡ್ರಿ ಸಾವಕಾರ್ರ… ಮನೀಗಿ ಅಕ್ಕಿ ತಗೊಂಡು ಹೋಗಬೇಕ್ರಿ ಸಾವಕಾರ್ರ, ಐವತ್ತು ರೂಪಾಯಿ ಕೊಡ್ರಿ ಎಂದು ಅಂಗಲಾಚುತ್ತಿದ್ದ ಸಾರಾಯಿಯ ಅರೆ ನಶೆಯಲ್ಲಿದ್ದ ರಾಮಪ್ಪ. ಸಾವಕಾರ್ರ ಸಿದ್ದಪ್ಪನ ಮುಂದೆ.  ಅಲ್ಲೋ ರಾಮಾ!? ನೀ ಹೀಂಗ ದುಡದಿದ್ದ ರೊಕ್ಕ ಎಲ್ಲ ತಗೊಂಡು ಹೋಗಿ ಶೆರೇದ ಅಂಗಡ್ಯಾಗ ಇಟ್ಟರ ನಿನ್ನ ಹೆಂಡ್ತಿ ಮಕ್ಕಳ ಗತಿ ಏನಾಗಬೇಕೋ ಖೋಡಿ? ದಾರು ಕುಡ್ಯೋದು ಬಿಟ್ಟಬಿಡೋ! ಸಾವಕಾರ್ರ ಸಿದ್ದಪ್ಪ ಬುದ್ಧಿವಾದ ಹೇಳುತಿದ್ದ.  ಏನ್ ಮಾಡಲ್ರೀ ಸಾವಕಾರ್ರ ನಂಗ ಕುಡಿಲಿಕ್ಕಂದ್ರ ನಿದ್ದೀನ ಹತ್ತಂಗಿಲ್ಲ. … Read more

ಸೀರೆ ಎಕ್ಸ್‌ಚೇಂಜ್: ರಶ್ಮಿ.ಆರ್. ಕುಲಕರ್ಣಿ

ಮಹಿಳೆಯರು ಒಂದು ಕಡೆ ಸೇರಿದರೆ ಅವರಲ್ಲಿ ಚರ್ಚಿಸುವ ಮುಖ್ಯವಾದ ವಿಷಯಗಳೆಂದರೆ, ಸೀರೆ ಮತ್ತು ಚಿನ್ನದ ವಡವೆಗಳು,ಚಿನ್ನದ ಬೆಲೆ ಗಗನಕ್ಕೇರಿದ ಮೇಲೆ ಸೀರೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು  ಕೊಡುತ್ತಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಸೀರೆಗೆ ವಿಶಿಷ್ಟವಾದ ಸ್ಥಾನ ನೀಡಲಾಗಿದೆ. ಹಿಂದಿನ ಕಾಲದಲ್ಲಿ ಒಂಭತ್ತು ವಾರಿ ಸೀರೆಗಳಿದ್ದವು,  ಮುಂದೆ ಆರು ವಾರಿ ಸೀರೆಗಳು ಬಂದವು. ಈಗೀಗ ರೆಡಿ ಸೀರೆಗಳು ಮಾರುಕಟ್ಟೆಗೆ ಬಂದಿವೆ. ಸಲ್ವಾರ ಕಮೀಜ,ಸೀರೆ ಜೊತೆಗೆ ಪೈಪೋಟಿಗಿಳಿದರೂ ಕೂಡ ಸೀರೆ ತನ್ನದೇ ಆದ  ಸ್ಥಾನ ಉಳಸಿಕೊಂಡಿದೆ ಎನ್ನುವದಕ್ಕೆ ನಮ್ಮ ಮಹಿಳೆಯರೇ ಸಾಕ್ಷಿ.   … Read more

ಮದ್ಲ ಮನಿ ಗೆದ್ದು, ಆಮ್ಯಾಲೆ ಮಾರ ಗೆದೀಬೇಕು!:ಸುಮನ್ ದೇಸಾಯಿ ಅಂಕಣ

          ಮೊನ್ನೆ ಟಿವ್ಹಿ ಒಳಗ ಒಂದ ಕ್ವಿಜ್ ಶೋ ನೋಡ್ಲಿಕತ್ತಿದ್ದೆ. ಭಾಗವಹಿಸಿದವರು ಸುಮಾರು ೧೬ ರಿಂದ್ ೧೮ ವಯಸ್ಸಿನ ಒಟ್ಟು ಎಂಟ ಮಂದಿ ಇದ್ರು. ನಾಲ್ಕ ಗುಂಪ ಮಾಡಿದ್ರು. ಒಂದ ಗುಂಪಿನ್ಯಾಗ ಇಬ್ಬರು, ಭಾಗವಹಿಸಿದ ಹುಡುಗರ ಪರಿಚಯ ಮಾಡಿಕೊಟ್ಟು, ಪ್ರಶ್ನೆಗಳನ್ನ ಕೇಳಲಿಕ್ಕೆ ಶುರು ಮಾಡಿದ್ರು. ಎಷ್ಟ ಸರಳ ಪ್ರಶ್ನೆ ಅದು," ಕೌರವರ ತಂದೆ ಯಾರು?" ಅದಕ್ಕ ಅವರು ಕೊಟ್ಟ ಉತ್ತರಾ "ಅರ್ಜುನ" ಅಂತ. ಅದನ್ನ ಕೇಳಿ ನಾ ದಂಗ ಬಡಧಂಗ ಕುತಿದ್ದೆ. ನಮ್ಮ … Read more

ಯಮಾಲಯದಲ್ಲಿ ಗಿಜಿ ಗಿಜಿ: ಶ್ರೀಕಾಂತ್ ಮಂಜುನಾಥ್

ಕೊರವಂಗಲ ವಂಶವೃಕ್ಷದಲ್ಲಿ ನವಗ್ರಹಗಳಾದ ಚಿಕ್ಕಪ್ಪ ದೊಡ್ಡಪ್ಪಂದಿರ ಗಂಡು ಮಕ್ಕಳಲ್ಲಿ ನಡೆಯುವ ತಮಾಷೆ ಮಾತುಗಳಿಗೆ ಮಿತಿಯಿಲ್ಲ. ಅಂಥಹ ಸಾಗರದಷ್ಟು ನಡೆದ, ನೆಡೆಯುವ ಚರ್ಚೆಗಳನ್ನು, ವಿಷಯಗಳನ್ನು ಹೆಕ್ಕಿ ಹೆಕ್ಕಿ ಮೆಲುಕು ಹಾಕುತ್ತ ನಮ್ಮ ಭೇಟಿಗಳನ್ನು ಇನ್ನಷ್ಟು ಸುಮಧುರ ಕ್ಷಣಗಳನ್ನಾಗಿ ಮಾಡಿಕೊಳ್ಳುತ್ತೇವೆ. ಒಂಭತ್ತು ಗ್ರಹಗಳು ಪ್ರಚಂಡ ಪ್ರತಿಭೆಗಳು ಒಬ್ಬರಿಗೊಬ್ಬರು, ಒಬ್ಬರಿಂದ ಒಬ್ಬರು, ಒಬ್ಬರಿಗಾಗಿ ಒಬ್ಬರು ಜೊತೆ ನಿಲ್ಲುತ್ತೇವೆ. ನಮ್ಮ  ಹಿಂದಿನ ಹಾಗು ಮುಂದಿನ ಪೀಳಿಗೆಗೆ ಸೇತುವಾಗಿ ನಿಲ್ಲುವ ನಾವುಗಳು ನಮ್ಮ ಮಕ್ಕಳಿಗೆ ಒಂದು  ಸಂಸ್ಕಾರದ ಹಾದಿಯನ್ನು ತೋರಬೇಕು ಅನ್ನುವುದಷ್ಟೇ ನಮ್ಮ ಕಳಕಳಿ. ಇಂತಹ ಒಂದು … Read more

ಸ್ನೇಹ ಭಾಂದವ್ಯ (ಭಾಗ 6): ನಾಗರತ್ನಾ ಗೋವಿಂದನ್ನವರ

ಇಲ್ಲಿಯವರೆಗೆ ಇತ್ತ ರೇಖಾಳ ಮನೆಯಲ್ಲಿ ರಾಧಮ್ಮ ನೋಡ್ರಿ ನಾವು ನಮ್ಮ ರೇಖಾಳಿಗೆ ಮದುವೆ ಮಾಡಬೇಕೂರಿ ಎಂದು ಗಂಡನಿಗೆ ಹೇಳಿದಳು. ಅದಕ್ಕೆ ಶಿವಾನಂದ ಮಾಡೋಣ ಬಿಡು ಈಗ ಅವಳಿಗೇನು ವಯಸ್ಸಾಗಿರೋದು ಎಂದು ಮಾತು ತೇಲಿಸಿದನು. ರೇಖಾಳಿಗೆ ವಾರ್ಷಿಕ ಪರೀಕ್ಷೆಯು ಹತ್ತಿರ ಬಂದಿದ್ದರಿಂದ ಓದುವುದು ಹೆಚ್ಚಾಗಿ ಊರಿಗೆ ಬರಲು ಸಾಧ್ಯವಾಗಲಿಲ್ಲ. ಅವಳು ಸುಧಾಳಿಗೆ ಪರೀಕ್ಷೆಗೆ ಹಾಜರಾಗಲು ಪತ್ರ ಬರೆದಳು. ಅದನ್ನೊದಿದ ಸುಧಾಳಿಗೆ ಗೆಳತಿಗೆ ತನ್ನ ಬಗ್ಗೆ ಇರುವ ಕಾಳಜಿಯನ್ನು ಕಂಡು ರೇಖಾಳ ಬಗ್ಗೆ ಅಭಿಮಾನ ಮೂಡಿತು. ಒಂದು ದಿನ ಅವಳು … Read more

ಸಾಮಾನ್ಯ ಜ್ಞಾನ (ವಾರ 3): ಮಹಾಂತೇಶ್ ಯರಗಟ್ಟಿ

೧. ಕನ್ನಡದ ಮೊದಲ ರಾಜಮನೆತನ ಯಾವುದು? ೨. ಸತತವಾಗಿ ಮೂರು ಅಖಿಲ ಭಾರತದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಏಕೈಕ ಕನ್ನಡಿಗ ಯಾರು..? ಯಾವ ವರ್ಷ? ೩. ಕನ್ನಡ ನಾಡಿನ ಮೊದಲ ಗಣಿತಜ್ಞ ಯಾರು? ೪. ಕರ್ನಾಟಕದಲ್ಲಿ ಸಾವಿರ ಕಂಬಗಳ ಬಸದಿ ಎಲ್ಲಿದೆ? ೫. ಕನ್ನಡದ ಮೊದಲ ಶಿಲ್ಪಿ ಯಾರು? ೬. ಕನ್ನಡದ ಮೊದಲು ಬೆರಳಚ್ಚುವಿನ ಯಂತ್ರವನ್ನು ರೂಪಿಸಿದವರು ಯಾರು? ೭. ಕನ್ನಡದ ಉಪಮಾ ಲೋಲ ಕವಿ ಯಾರು? ೮. ೧೯೩೦ರಲ್ಲಿ ಪ್ರಕಟವಾದ ಗೋವಿಂದಪೈ ಅವರ ಮೊದಲ … Read more

ಹುಡುಗಿ ಕಚ್ಚಿದ್ರೆ ಲೈಫೇ ಊದಿಕೊಳ್ಳುತ್ತೆ: ನಟರಾಜು ಎಸ್. ಎಂ.

ಇತ್ತೀಚೆಗೆ ಒಂದು ದಿನ ಹಾಸಿಗೆಯ ಮೇಲೆ ಮಲಗಿ ವಿರಮಿಸುತ್ತಿದ್ದಾಗ ಒಂದು ಇರುವೆ ಹಾಸಿಗೆಯ ಸುತ್ತ ಮುತ್ತ ಸುಮ್ಮನೆ ಅಡ್ಡಾಡುತ್ತಿದ್ದುದ ನೋಡಿ ಸುಮ್ಮನಾಗಿದ್ದೆ. ಎಲ್ಲೆಲ್ಲೋ ಅಡ್ಡಾಡಿ ಬಂದ ಆ ಇರುವೆ ಕೊನೆಗೆ ಹಾಸಿಗೆಯ ಮೇಲೆ ಚಾಚಿದ್ದ ನನ್ನ ಕೈ ಬೆರಳ ಮೇಲೆ ಹತ್ತಿ ಹರಿದಾಡುತ್ತಿತ್ತು. ಆ ಇರುವೆಯ ಹರಿದಾಡುವಿಕೆಯನ್ನು ಮುಗುಳ್ನಗುತ್ತಾ ನೋಡಿದ ನಾನು ಅದು ನನ್ನ ಬೆರಳನ್ನು ಕಚ್ಚುವಾಗ “ಇರುವೆ ತಾನೆ ಬಿಡು ಕಚ್ಚಲಿ. ಇರುವೆ ಕಚ್ಚಿದರೆ ಹೆಚ್ಚೆಂದರೆ ಕಚ್ಚಿದ ಜಾಗ ಒಂಚೂರು ಉರಿದು ಕೆಂಪಾಗಿ ಒಂದು ಸಣ್ಣ … Read more

ನಂಬಿಕೆ, ಮೂಢನಂಬಿಕೆ: ಅಖಿಲೇಶ್ ಚಿಪ್ಪಳಿ ಅಂಕಣ

ಹೊಸದಾಗಿ ಮದುವೆಯಾಗಿದ್ದ ದಂಪತಿಗಳು ಸಿನಿಮಾ ನೋಡಲು ಹೋಗಿದ್ದರು. ಅದೇನಾಯಿತೋ ಗೊತ್ತಿಲ್ಲ ಹೆಂಡತಿಗೆ ವಿಪರೀತ ತಲೆನೋವು ಶುರುವಾಯಿತು. ಗಂಡನಿಗೆ ಏನು ಮಾಡುವುದು ತಲೆ ಓಡಲಿಲ್ಲ. ಅಷ್ಟರಲ್ಲಿ ಪರಿಚಿತ ಡಾಕ್ಟರು ಅದೇ ಸಿನೆಮಾ ನೋಡಲು ಬಂದ್ದಿದ್ದರು. ಗಂಡ ಹೋಗಿ ಸಂಕೋಚದಿಂದ ಡಾಕ್ಟರಲ್ಲಿ ಅವಲತ್ತುಕೊಂಡ. ಡಾಕ್ಟರ್ ಬುದ್ಧಿವಂತನಿದ್ದ, ಥಿಯೇಟರ್‌ನ ಒಳಗಡೆ ಕತ್ತಲಿತ್ತು, ಗಂಡನಿಗೆ ಗೊತ್ತಾಗದ ಹಾಗೆ ತನ್ನದೆ ಕೋಟಿನ ಒಂದು ಗುಂಡಿಯನ್ನು ಕಿತ್ತು, ಈ ಮಾತ್ರೆಯನ್ನು ಬಾಯಲಿಟ್ಟುಕೊಳ್ಳಲು ಸಲಹೆ ಮಾಡಿದರು. ಹತ್ತು ನಿಮಿಷದಲ್ಲಿ ತಲೆನೋವು ಮಾಯ. ಗಂಡ-ಹೆಂಡತಿ ಸಿನಿಮಾವನ್ನು ಎಂಜಾಯ್ ಮಾಡಿದರು … Read more

ಪುಷ್ಪ: ಈಶ್ವರ ಭಟ್ ಕೆ

ಇತ್ತೀಚೆಗೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಬರುತ್ತಿರುವ ಸುದ್ಧಿಗಳನ್ನು ನೋಡುತ್ತಾ, ನಿರೀಕ್ಷೆಗೂ ಮೀರಿ ಜಗತ್ತು ಬೆಳೆದರೂ ವಾಹಿನಿಗಳಲ್ಲಿ ಸುದ್ಧಿಯೇ ಆಗದ ಒಂದು ಕತೆಯಿದೆ. ನಮ್ಮೂರಿನ ಪುಷ್ಪಕ್ಕ ದಿನ ಕಳೆದಂತೆ ಜನರಿಗೆ ಅಚ್ಚರಿಯೂ ಜನರ ಅನುಕಂಪಕ್ಕೂ ಕಾರಣಳಾಗಿ ಉಳಿದ ಕತೆ. ಈ ಕತೆ ಹೇಳುವ ನನಗೆ ಆಗ ಹದಿನೇಳು ವಯಸ್ಸು, ಈಗ ಇಪ್ಪತ್ತೆಂಟು. ಈ ಪುಷ್ಪಕ್ಕ ಎನ್ನುವ ನನ್ನ ಕತೆಯ ನಾಯಕಿಯ ಪೂರ್ಣ ಹೆಸರು ಪುಷ್ಪಲತ. ಊರು ಎರಡು ಮೂರು ಬೆಟ್ಟಗಳ ನಡುವಿನ ಗ್ರಾಮ. ವಿಶಾಲವಾದ ಗ್ರಾಮದಲ್ಲಿ ಸುಮಾರು ನಲುವತ್ತು ಮನೆಗಳಷ್ಟೇ. … Read more

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೩): ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಟೈಗರ್ ಹಿಲ್ ನ ಸುರ್ಯೋದಯ ನೋಡಿ ಬಂದು ಒಂಭತ್ತು ಗಂಟೆಗೆಲ್ಲಾ ತಯಾರಾಗಿ ಹೋಟೆಲ್ ಹೊರಗೆ ನಿಂತವರ ಮುಖಗಳು ಲವಲವಿಕೆಯಿಂದ ಕಂಗೊಳಿಸುತ್ತಿದ್ದವು. ಯಾಕಂತೀರಾ? ಬೆಂಗಳೂರು ಬಿಟ್ಟ ಮೇಲೆ ಮೊದಲ ಬಾರಿಗೆ ಎಲ್ಲರಿಗೂ ಸ್ನಾನ ಮಾಡುವ ಅವಕಾಶ ಸಿಕ್ಕಿದ್ದು ಅವತ್ತೇ! ತಾನು ಹೇಳಿದ್ದ ಟೈಮಿಗೆ ನಾವು ಸರಿಯಾಗಿ ಬಂದಿಲ್ಲಾ ಅಂತ ನೀಮಾ ಮುಖ ಸಿಂಡರಿಸಿಕೊಂಡಿದ್ದ. ಮೊದಲೇ ಕೆಂಪಗಿದ್ದವನು ಇನ್ನೂ ಕೆಂಪಾಗಿದ್ದ ಏನೇನೋ ಪ್ರಯತ್ನಗಳನ್ನು ಮಾಡಿ ಅವನ ಮುಖದ ಗಂಟುಗಳನ್ನು ಯಶಸ್ವಿಯಾಗಿ ಬಿಡಿಸಿದೆವು. ನೀ ಮಾ ಮೂಕನಾದರೆ ನಮಗೆ ಮಾಹಿತಿಗಳು … Read more

ಕೆಂಗುಲಾಬಿ (ಕೊನೆಯ ಭಾಗ): ಹನುಮಂತ ಹಾಲಿಗೇರಿ

ರಾಜಿಯ ದಾಂಪತ್ಯದ ಬದುಕಿನ ಬಗ್ಗೆ ಶಾರದೆಯ ಮೂಲಕ ದೀಪಾಳಿಗೂ, ದೀಪಾಳ ಮೂಲಕ ನನಗೂ ಗೊತ್ತಾಗುತ್ತಿತ್ತು. ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಶಾರೀಯ ಮೈಯ್ಯ ಮತ್ತು ಮುಖದ ಮೇಲಿನ ಕಳೆ ಮಾಯವಾಗುತ್ತಿರುವುದು ಶಾರದೆಯ ಗಮನಕ್ಕೂ ಬಂದಿತಂತೆ. ರಾಜಿಯ ದಾಂಪತ್ಯದೊಳಗೆ ಹೊಗೆಯಾಡಲಿಕ್ಕೆ ಶುರುವಾಗಿದೆ ಎಂಬುದನ್ನು ಅವಳು ಅರಿತುಕೊಂಡಿದ್ದಳು. ಅಳಿಯ ಕೆಲಸಕ್ಕೆ ಹೋಗೋದನ್ನು ಬಿಟ್ಟು ಪೂರ್ತಿಯಾಗಿ ಕುಡಿತಕ್ಕೆ ಅಂಟಿಕೊಂಡಿದ್ದ. ಕೆಲಸಕ್ಕೆ ಹೋಗು ಅಂತ ರಾಜಿ ಗಂಡನನ್ನು ಒತ್ತಾಯಿಸಿದಾಗ ಆತ ತನ್ನೊಳಗೆ ಅಡಗಿದ್ದ ಲಾವಾರಸಾನ ಹೊರ ಉಕ್ಕಿಸಿದ್ದ. ‘ನಿಮ್ಮಮ್ಮನ್ನ ತಂದ್ಹಾಕು ಅಂತ ಹೇಳು. ಒಬ್ಬ … Read more

ಸಾಲದ ವಿಷಯ (ಕೊನೆಯ ಭಾಗ): ಸೂರಿ ಹಾರ್ದಳ್ಳಿ

(ಇಲ್ಲಿಯವರೆಗೆ) ಈ ಘಟನೆಯ ನಂತರ ನಿಮಗೆ ನನ್ನ ರೂಪ ಅಸಹ್ಯವಾಗಿ ಕಾಣಿಸುತ್ತದೆ. ನಾನು ಎಲ್ಲಾ ದುರ್ಗುಣಗಳ ಘನೀಕೃತ ರೂಪವಾಗಿ, ಕೀಚಕನಾಗಿ, ವೀರಪ್ಪನ್ ಆಗಿ ಕಾಣುತ್ತೇನೆ. ಆದರೆ ಏನೂ ಮಾಡಲಾಗದ ಪರಿಸ್ಥಿತಿ ನಿಮ್ಮದು. ನನ್ನದು ಮೃದು ಹೃದಯ. ಇಲ್ಲ ಎಂದು ಹೇಳಿ ನಿಮ್ಮನ್ನು ಗಾಸಿಗೊಳಿಸಲು ಇಷ್ಟವಿಲ್ಲ. ಅದಕ್ಕಾಗಿ ನಾನು, ’ರೀ, ಗೆಳೆಯನೊಬ್ಬನಿಗೆ ಎರಡು ಲಕ್ಷ ಕೊಟ್ಟಿದ್ದೆ. ಎರಡು ವಾರ ಬಿಟ್ಟು ಕೊಡ್ತೀನಿ ಎಂದು ಹೇಳಿದ್ದಾನೆ. ನೀವು ಎರಡು ವಾರ ಬಿಟ್ಟು ಬನ್ನಿ, ಕೊಟ್ಟರೆ ನಿಮಗೆ ಖಂಡಿತಾ ಹತ್ತು ಸಾವಿರ … Read more

ಸಾಮಾನ್ಯ ಜ್ಞಾನ (ವಾರ 2) : ಮಹಾಂತೇಶ್ ಯರಗಟ್ಟಿ

೧. ಮಹಮದ್ ರಫಿ ಕನ್ನಡ ಚಿತ್ರವೊಂದರಲ್ಲಿ ಹಾಡಿದ್ದಾರೆ. ಆ ಚಿತ್ರ ಯಾವುದು? ೨. ಅಚ್ಚ ಕನ್ನಡದ ಮೊದಲ ಕರ್ನಾಟಕ ದೊರೆ ಯಾರು? ೩. ಒಂದು ವರ್ಷದ ಪಿ.ಯು.ಸಿ ಶಿಕ್ಷಣವನ್ನು ಯಾವ ವರ್ಷದಲ್ಲಿ ೨ವರ್ಷಕ್ಕೆ ಹೆಚ್ಚಿಸಲಾಯಿತು? ೪. ಕರ್ನಾಟಕ ಯಾವ ಜಿಲ್ಲೆಯಲ್ಲಿ ಒಂಟೆಗಳ ಜಾತ್ರೆ ನಡೆಯುತ್ತದೆ? ೫. ಕನ್ನಡದ ಮೊದಲ ನಾಟಕ ಯಾವುದು? ೬. ಅಂಚೆ ಚೀಟಿಯ ಮೇಲೆ ಪ್ರಪ್ರಥಮವಾಗಿ ಮೂಡಿ ಬಂದ ಕನ್ನಡ ಸಾಹಿತಿ ಯಾರು? ೭. ಮ್ಯಾಗ್ಸೆಸೆ ಪ್ರಶಸ್ತಿ ಪಡೆದ (ರಂಗಭೂಮಿ ಸೇವೆಗೆ) ಮೊದಲ ಕನ್ನಡಿಗ … Read more

‘ನಟರಂಗ್’ ಎಂಬ ಅದ್ಭುತ ಮರಾಠಿ ಸಿನಿಮಾ: ಶ್ರೀಧರ ಬನವಾಸಿ

ಇತ್ತೀಚಿನ ದಿನಗಳಲ್ಲಿ ನಾನು ನೋಡಿದ ಕೆಲವು ಸಿನಿಮಾಗಳಲ್ಲಿ ನನ್ನನ್ನು ಅತ್ಯಂತ ಕಾಡಿದ ಸಿನಿಮಾವೆಂದರೆ ಮರಾಠಿಯ ನಟರಂಗ್’ ಚಿತ್ರ. ಸಿನಿಮಾವನ್ನು ಕಳೆದ ಒಂದು ವಾರದಲ್ಲೇ ನಾಲ್ಕೈದು ಬಾರಿ ನೋಡಿಬಿಟ್ಟೆ. ಚಿತ್ರದ ಒಂದೊಂದು ಸನ್ನಿವೇಶಗಳು, ನಾಯಕನ ಅಭಿನಯ, ಸಂಗೀತವು ನೋಡುಗರನ್ನು ಸೆಳೆದುಕೊಂಡು ನೋಡಿಸಿಕೊಂಡು ಹೋಗುತ್ತದೆ. ಅದ್ಭುತ ಹಾಗೂ ಮನಸ್ಸಿಗೆ ತುಂಬಾ ನಾಟುವಂತಹ, ಬದುಕಿಗೆ ತುಂಬಾ ಹತ್ತಿರವಾದಂತಹ ಸಿನಿಮಾ ಅಂತ ಹೇಳಬಹುದು. ಇಡೀ ಸಿನಿಮಾ ನೋಡಿದ ಮೇಲೆ ಯಾರಿಗೇ ಆಗಲಿ ಒಂದು ಅಮೂರ್ತವಾದಂತಹ ಅನುಭವ ನಿಮ್ಮನ್ನು ಕಾಡದೇ ಬಿಡದು. ‘ನಟರಂಗ್’ ಚಿತ್ರದಲ್ಲಿ … Read more

ದೀಪಾವಳಿ: ಪ್ರಶಸ್ತಿ ಅಂಕಣ

ಪೀಠಿಕೆ: ಮುಂಚೆಯೆಲ್ಲಾ ದೀಪಾವಳಿ,ದಸರಾಗಳೆಂದರೆ ಮನೆ ತುಂಬಾ ಜನ. ಎಲ್ಲೇ ಇದ್ದರೂ ವರ್ಷಕ್ಕೊಮ್ಮೆಯಾದರೂ ಹಬ್ಬದ ಸಂದರ್ಭ ಮಕ್ಕಳೆಲ್ಲಾ ತಮ್ಮ ಮೂಲಮನೆಗೆ ಹೋಗೋದು ಪದ್ದತಿ. ಎಲ್ಲಾ ಸೇರಿ ಖುಷಿ ಖುಷಿಯಾಗಿ ಹಬ್ಬ ಆಚರಿಸುತ್ತಿದ್ದ ಖುಷಿಯೇ ಬೇರೆ. ಅವಿಭಕ್ತ ಕುಟುಂಬಗಳೆಲ್ಲಾ ಕಡಿಮೆಯಾಗುತ್ತಿದ್ದಂತೆಯೇ, ಜನರಲ್ಲಿ ಸ್ವಾರ್ಥ, ಅಸೂಯೆಗಳು ಹೆಚ್ಚಾಗುತ್ತಾ ಬರುತ್ತಿದ್ದಂತೆಯೇ, ಹಳ್ಳಿಗಳಿಂದ ಪಟ್ಟಣಗಳತ್ತ ವಲಸೆ ಮುಂದುವರೆದಂತೆಯೇ ಈ ಖುಷಿ, ನಗು ಕಮ್ಮಿಯಾಗುತ್ತಾ ಬರುತ್ತಿದೆ. ಎಂದೂ ಮುಗಿಯದ ಮಕ್ಕಳ ಎಕ್ಸಾಮಿನ ಟೆನ್ಷನ್ನು, ಅವರು ಏನೂ ಮಾಡಿರದಿದ್ದರೂ ಅವರನ್ನು ಯಾಕೆ ಕರೆಯಬೇಕೆಂಬ ಹಳ್ಳಿಯವರ ಬೇಸರವೂ, ನಮಗೆ … Read more

ಅಂತರಂಗದ ಗೆಳೆಯ: ಸುಮನ್ ದೇಸಾಯಿ ಅಂಕಣ

ಸಂಜಿಮುಂದ ದೇವರಿಗೆ ದೀಪಾ ಹಚ್ಚಿ. ಅಂಗಳದಾಗಿನ ತುಳಸಿ ಕಟ್ಟಿ ಮ್ಯಾಲೆ ಕೂತು ಮಕ್ಕಳಿಗೆ ಸಾಯಂಕಾಲದ ಪೂರೋಚಿ(ಸಾಯಂಕಾಲದ ಸ್ತೊತ್ರಗಳು) ಹೇಳಿಕೊಡಲಿಕತ್ತಿದ್ದೆ. ಮೊಬೈಲ್ ರಿಂಗಾಗಿದ್ದು ಕೇಳಿ ಎದ್ದು ಒಳಗ ಹೋದೆ. ಯಾವದೊ ಅಪರಿಚಿತ ನಂಬರ್ ಇತ್ತು. ಅಂಥಾಪರಿ ಏನು ಕೂತುಹಲ ಇಲ್ಲದ ಫೋನ್ ತಗೊಂಡು ಹಲೊ ಅಂದೆ. ಅತ್ಲಾಕಡೆಯಿಂದ ಬಂದ ಧ್ವನಿ ನನ್ನ ಉಸಿರಿಗೆ ಪರಿಚಿತ ಅದ ಅನ್ನೊ ಭಾವನೆ ಬರಲಿಕತ್ತು. ಕ್ಷಣ ಮಾತ್ರ ಆಧ್ವನಿಯ ಒಡತಿ ನನ್ನ ಬಾಲ್ಯದ ಗೆಳತಿ ಜಾನು ದು ಅಂತ ಗೊತ್ತಾತು. ಎಷ್ಟು ವರ್ಷದ … Read more

ದಿ ಬರ್ಡ್ಸ್:ವಾಸುಕಿ ರಾಘವನ್ ಅಂಕಣ

ಹಾರರ್ / ಸಸ್ಪೆನ್ಸ್ ಚಿತ್ರಗಳು ಅಂದಾಕ್ಷಣ ಮೊದಲು ನೆನಪಿಗೆ ಬರುವ ಹೆಸರೇ ಅಲ್ಫ್ರೆಡ್ ಹಿಚ್ಕಾಕ್. ಸುಮಾರು ಐವತ್ತು ಚಿತ್ರಗಳನ್ನು ನಿರ್ದೇಶಿಸಿದ್ದಾರೆ ಇವರು. ಒಂದು ಚಿತ್ರಪ್ರಕಾರದೊಂದಿಗೆ ಒಬ್ಬ ನಿರ್ದೇಶಕ ಈ ಮಟ್ಟಿಗೆ ಗುರುತಿಸಿಕೊಳ್ಳುವುದು ತುಂಬಾನೇ ವಿರಳ. ಇಂಗ್ಲೆಂಡಿನಲ್ಲಿ ಇಪ್ಪತ್ತರ ದಶಕದಲ್ಲೇ ತಮ್ಮ ವೃತ್ತಿಜೀವನ ಆರಂಭಿಸಿದ ಹಿಚ್ಕಾಕ್, ಖ್ಯಾತಿಯ ಉತ್ತುಂಗಕ್ಕೆ ಏರಿದ್ದು ಮಾತ್ರ ಹಾಲಿವುಡ್ಡಿಗೆ ಬಂದ ಮೇಲೆ. ಅವರ ಅತ್ಯುತ್ತಮ ಚಿತ್ರಗಳು 1954ರಿಂದ 1960ರಲ್ಲಿ ಬಂದವು. ಡಯಲ್ ಎಂ ಫಾರ್ ಮರ್ಡರ್, ರೇರ್ ವಿಂಡೋ, ವರ್ಟಿಗೋ, ನಾರ್ತ್ ಬೈ ನಾರ್ತ್ … Read more

ಗಿರೀಶ ಕಾರ್ನಾಡರ ಯಯಾತಿ ನಾಟಕದಲ್ಲಿ ಪಾತ್ರಗಳ ಭಾವಗಳೇರಿಳಿತಗಳು: ದಿವ್ಯ ಆಂಜನಪ್ಪ

'ಯಯಾತಿ'- ನಾಲ್ಕಂಕದ ಸಣ್ಣ ನಾಟಕವಾಗಿ ಕಾಣುವ ನಮಗೆ ಪಾತ್ರಗಳಾರರಲ್ಲಿ ಮನುಷ್ಯನ ವಿರಾಟ ದರ್ಶನವನ್ನು ನೀಡುತ್ತದೆ.  ನಾಟಕದ ಪ್ರಾರಂಭದಲ್ಲಿ ನಟಿಯೊಡನೆ ಸೂತ್ರಧಾರ ಬರುತ್ತಾರೆ. ಪ್ರೇಕ್ಷಕರನ್ನುದ್ದೇಶಿಸಿ ಸೂತ್ರಧಾರ ನಾಟಕದ ಕುರಿತು ಒಂದು ಕುತೂಹಲಭರಿತ ಮುನ್ನುಡಿಯನ್ನು ನೀಡುತ್ತಾನೆ. ಅಂತ್ಯದಲ್ಲಿ ಅವನಾಡುವ ಮಾತು ಪ್ರಸ್ತುತ ಮತ್ತು ಸರ್ವಕಾಲಿಕ ಸತ್ಯವಾಗಿ ನಿಲ್ಲುತ್ತದೆ. " ಒಮ್ಮೊಮ್ಮೆ ದಾರಿಗುಂಟ ಹೋಗುವಾಗ ನಮ್ಮ ದಾರಿ ಒಡೆದು ಎರಡಾಗುವುದಿಲ್ಲವೇ? ನಾವು ಒಂದನ್ನು ಮಾತ್ರ ಆರಿಸಬಹುದು. ಅದರೊಡನೆ ತತ್ಪೂರ್ತ ನಮ್ಮ ಗುರಿಯೂ ಗೊತ್ತಾಗುತ್ತದೆ. ಆದರೆ ನಮ್ಮ ಹಿಂದೆ ಕಿವಿಗಳ ಸನಿಹದಲ್ಲಿ, ಕೇಳದ … Read more

ಚುಟುಕಗಳು: ಗುರುಪ್ರಸಾದ ಹೆಗಡೆ

೧) ಪಾರು  ಕೈ- ಕೊಟ್ಟಳು ಹುಡುಗಿ  ಕಂಗೆಟ್ಟ  ಹುಡುಗ,  ಅಯ್ಯೋ ಎಲ್ಲ ಮುಗಿದೇ  ಹೋಯಿತೆಂದರು ಜನ. – ಹುಡುಗ ಬಚಾವಾಗಿದ್ದ!    ೨) ಜೀವ  ಅಕ್ವೆರಿಯಮ್ಮಿನಿಂದ ಚಿಮ್ಮಿದ  ಮೀನು – ಹೊರಗೆ ಏನು ಇಲ್ಲವೆಂಬ  ಸತ್ಯವ ಅರಿತು ಮತ್ತೆ ನೀರಿಗೆ ಹಾರಿತು.    ೩) ಸೌಂದರ್ಯ ಪ್ರಜ್ಞೆ  ಬ್ಯೂಟಿ – ಪಾರ್ಲರಿನಿಂದ   ಬಂದ ಬೆಡಗಿಯ  ಕೈಯ ಹಿಡಿದು  ಮೊಮ್ಮಗ  ಮನೆಗೆ ಕರೆದೊಯ್ದ.    ೪) ಗಡಿಯಾರ  ವರ್ಷಗಟ್ಟಲೆ ತಿರುಗಿತು  ಗಡಿಯಾರದ ಮುಳ್ಳು, ಎಷ್ಟು ಸುತ್ತಿದರೂ  ತಲುಪಿದ್ದು … Read more

ಸ್ನೇಹ ಭಾಂದವ್ಯ (ಭಾಗ 5): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ಇತ್ತ ಸಂಜೆ ಆಫೀಸಿನಿಂದ ಮನೆಗೆ ಎಂದ ರಾಜೇಶ ತುಂಬಾ ಖುಷಿಯಾಗಿರುವದನ್ನು ಗಮನಿಸಿದ ಪದ್ಮಮ್ಮ ಏನೋ ರಾಜೇಶ ಇವತ್ತು ತುಂಬಾ ಖುಷಿಯಾಗಿದೆಯಲ್ಲೋ ಏನಾದರೂ ಲಾಟರಿ ಹೊಡೆಯಿತೇನೋ ಎಂದಳು. ಆಗ ರಾಜೇಶನಿಗೆ ಬೇಸರವಾಗಿ ಹೋಗಮ್ಮ ನಿನಗ್ಯಾವಾಗಲು ದುಡ್ಡಿನದೇ ಚಿಂತೆ ಎನ್ನುತ್ತಾ ತನ್ನ ರೂಮಿಗೆ ಹೋದ. ಅವನಿಗೆ ಬೇಗ ನಿದ್ದೆ ಬರದೆ ತನ್ನ ಕಾಲೇಜಿನ ದಿನಗಳು ನೆನಪಾದವು. ತನ್ನ ಸಹಪಾಠಿಯಾದ ಸುನಿತಾಳನ್ನು ತುಂಬಾ ಪ್ರೀತಿಸುತ್ತಿದ್ದ. ದಿನಾ ಅವಳನ್ನು ನೋಡುತ್ತಾ ತನ್ನ ಮನದಲ್ಲಿರೋದನ್ನ ಅವಳಿಗೆ ಹೇಳಬೇಕು ಅಂತ ಎಷ್ಟೊಂದು ಬಾರಿ ಪ್ರಯತ್ನಿಸಿದರೂ … Read more