ಭಾಗಿರಥಿ:ಪಾರ್ಥಸಾರಥಿ ಎನ್

ಗಂಗೋತ್ರಿಯ ಹೋಟೆಲ್ 'ಮಂದಾಕಿನಿ'  ಕೊಠಡಿಯ ಕಿಟಿಕಿಯಿಂದ ಒಮ್ಮೆ ಹೊರಗಡೆ   ನೋಡಿದೆ,  ಹಸಿರು ಬೆಟ್ಟಗಳ ಸಾಲು.  ಕೊರೆಯುವ ಚಳಿ . ಬೆಂಗಳೂರಿನಂತಲ್ಲದೆ ಅಲ್ಲಿಯದೆ ಆದ ಸಂಸ್ಕೃತಿ , ಜನಗಳು,   ಮನೆಗಳು, ರಸ್ತೆ ಎಲ್ಲವು ಹೊಸ ಲೋಕವೊಂದನ್ನು ನನ್ನೊಳಗೆ ಸೃಷ್ಟಿಸಿತ್ತು. "ದ ಗ್ರೇಟ್ ಹಿಮಾಲಯನ್ ಟ್ರಕ್ಕಿಂಗ್ ಅಸೋಸಿಯೇಷನ್"  ನನ್ನ ಹಲವು ವರ್ಷಗಳ ಕನಸಿಗೆ ನಿಜ ರೂಪ ಕೊಡಲು ಸಿದ್ದವಾಗಿದ್ದ ಸಂಸ್ಥೆ.  ಚಿಕ್ಕವಯಸಿನಿಂದಲು ಬೆಟ್ಟಗುಡ್ಡ ಏರುವದರಲ್ಲಿ ಎಂತದೊ ಆಸಕ್ತಿ. ಹೈಸ್ಕೂಲಿನ ಎನ್ ಸಿ ಸಿ ಸಹ ಅದಕ್ಕೆ ಪೂರಕವಾಗಿತ್ತು. ಕಾಲೇಜಿನ … Read more

ಬಸ್ ಸ್ಟ್ಯಾಂಡ್ ಬದುಕು:ಗವಿಸ್ವಾಮಿ

ಸಂಜೆ ಏಳಾಗಿತ್ತು. ಮಳೆ ಬೀಳುವ ಎಲ್ಲಾ ಮುನ್ಸೂಚನೆಗಳೂ ಕಾಣುತ್ತಿದ್ದವು. ಆದರೂ, ಒಂದು chance ತೆಗೆದುಕೊಂಡು ಊರಿನತ್ತ ಬೈಕ್ ಸ್ಟಾರ್ಟ್ ಮಾಡಿದೆ. ಎರಡು ಮೂರು ಕಿಮೀ ಮುಂದೆ ಹೋಗುವಷ್ಟರಲ್ಲಿ ಟಪ್ ಟಪ್ ಟಪ್ ಟಪ್ ಅಂತ ಚುಚ್ಚತೊಡಗಿದವು ದಪ್ಪ ದಪ್ಪ ಹನಿಗಳು. ಮುಂದೆ ಹೋದಂತೆ ಮಳೆಯ ರಭಸ ಇನ್ನೂ ಹೆಚ್ಚಾಯಿತು. ಹೇಗೋ ಸಹಿಸಿಕೊಂಡು ಒಂದು ಮೈಲಿಯಷ್ಟು ಮುಂದೆ ಹೋಗಿ ಹಳ್ಳಿಯೊಂದರ  ಬಸ್ ಸ್ಟ್ಯಾಂಡ್ ತಲುಪಿಕೊಂಡೆ. ಅಲ್ಲಾಗಲೇ ಐದಾರು ಬೈಕುಗಳು ನೆನೆಯುತ್ತ ನಿಂತಿದ್ದವು.  ಬಸ್ ಸ್ಟ್ಯಾಂಡ್ ಅಕ್ಷರಷಃ ಹೌಸ್ಫುಲ್ಲಾಗಿತ್ತು. ಆಗ ತಾನೆ … Read more

ಈ ತು ಮಾಮ ತಂಬ್ಯೆನ್:ವಾಸುಕಿ ರಾಘವನ್

ನೀವು ತುಂಬಾ ಮಡಿವಂತರಾ? ನಿಮ್ಮ ಭಾವನೆಗಳು ಸುಲಭವಾಗಿ ಹರ್ಟ್ ಆಗ್ತವಾ? ನಿಮಗೆ "ನೈತಿಕತೆ" ಕನ್ನಡಕ ಬಿಚ್ಚಿಟ್ಟು ಪ್ರಪಂಚವನ್ನ ನೋಡೋ ಅಭ್ಯಾಸಾನೇ ಇಲ್ವಾ? ಹಂಗಿದ್ರೆ ಈ ಚಿತ್ರ ನಿಮಗಲ್ಲ ಬಿಡಿ. ಈ ಆರ್ಟಿಕಲ್ ಕೂಡ ನಿಮಗೆ ಸರಿಹೋಗಲ್ಲ! ನೀವು ಈ ಗುಂಪಿಗೆ ಸೇರಿಲ್ವಾ? ಹಾಗಾದ್ರೆ ಇನ್ನೇನ್ ಯೋಚ್ನೆ ಇಲ್ಲ, ಬನ್ನಿ ಈ ಫಿಲ್ಮ್ ಬಗ್ಗೆ ಮಾತಾಡೋಣ! ಆಲ್ಫೊನ್ಸೋ ಕ್ವಾರೋನ್ ನಿರ್ದೇಶನದ "ಈ ತು ಮಾಮ ತಂಬ್ಯೆನ್" ("ನಿನ್ನ ಅಮ್ಮ ಕೂಡ") 2001ರಲ್ಲಿ ಬಿಡುಗಡೆಯಾದ ಮೆಕ್ಸಿಕನ್ ಚಿತ್ರ. "ಕಮಿಂಗ್ ಆಫ್ … Read more

ಐಸ್ ಕ್ರೀಂ ನೆನಪುಗಳಲ್ಲಿ..:ಪ್ರಶಸ್ತಿ

ಸಣ್ಣವನಿದ್ದಾಗ ಬೆಂಗಳೂರು ಎಂದರೆ ಉದ್ಯಾನನಗರಿ ಎಂಬ ಹೆಮ್ಮೆಯಿತ್ತು. ಎರಡು ಬಾರಿ ಬಂದಾಗಲೂ ಇಲ್ಲಿದ್ದ ತಣ್ಣನೆಯ ಹವೆ ಖುಷಿ ನೀಡಿತ್ತು. ಆದರೆ ಈಗ.. ಬೆಂಗಳೂರು ಅಕ್ಷರಶ: ಬೇಯುತ್ತಿದೆ. ಸುಡ್ತಿರೋ ಬಿಸಿಲಲ್ಲಿ, ಆಗಾಗ ಬಂದು ಫೂಲ್ ಮಾಡೋ ಮಳೆಯಿದ್ರೂ ಯಾಕೋ ಕಾಡೋ ಐಸ್ ಕ್ರೀಂ ನೆನಪುಗಳು.. ನೆನಪಾದಾಗೆಲ್ಲಾ ನಗಿಸೋ ಬಿಸಿ ಐಸ್ ಕ್ರೀಂ :-).. ಹೀಗೆ ಸುಡ್ತಿರೋ ಸೆಖೆಗೊಂಚೂರು ತಣ್ಣನೆ ನೆನಪುಗಳು ..    ಬಾಲ್ಯಕ್ಕೂ ಐಸಿಗೂ ಸಖತ್ ನಂಟಿದೆ 🙂 ಐಸ್ ಕ್ರೀಂ ಗಿಂತಲೂ ಮುಂಚೆ ನೆನಪಾಗೋದು ಐಸ್ … Read more

ವ್ಯೂಹ:ಬೆಳ್ಳಾಲ ಗೋಪಿನಾಥ ರಾವ್

  ೧. ಸಂಶಯ ೧೦.೦೪.೨೦೧೨  "ಮಂಜೂ ನನ್ನ ಡೈರಿ ತೆಗೆದ್ಯಾ…….???" "ಇಲ್ಲ ಸರ್, ನಾನ್ಯಾಕೆ ನಿಮ್ ಡೈರಿ ತೆಗೀಲಿ ಸಾರ್.." "ಅಲ್ಲಪ್ಪಾ .. ಇಲ್ಲೇ ಮೇಜಿನ ಮೇಲೇ ಇಟ್ಟಿದ್ದೆ, ನೀನೇನಾದರೂ ನೋಡಿದ್ಯಾ ಅಂತ ಕೇಳಿದ್ದೆ ಅಷ್ಟೆ. ಅದು ಬೇಕೇ ಬೇಕು ಎಲ್ಲಾ ಡಿಟೈಲ್ಸ್ ಬೇರೆ ಅದರಲ್ಲೇ ಬರೆದಿಟ್ಟಿದ್ದೆ. ಇನ್ನು ಸೀನಿಯರ್ ಕಲ್ಲೂರಾಮ್ ಕರೆದ್ರೆ ಮುಗ್ದೇ ಹೋಯ್ತು ನನ್ನ ಕಥೆ. ಎಲ್ಲಾದರೂ ಸಿಕ್ಕಿದ್ರೆ ಹೇಳು ಆಯ್ತಾ." ಕರೆಕರೆ ವಾಣಿ ಗುರ್ರ್ರೆಂತು. ಹೋಮ್ ಮಿನಿಸ್ಟರ್.ಅರ್ಥಾತ್ ನನ್ನ ಧರ್ಮ ಪತ್ನಿ… "ಏನ್ರೀ..??" "ಆಯ್ತು…. … Read more

ರೋಗ ಯಾವುದೆಂದು ಕೇಳುವ ವ್ಯವಧಾನವಿಲ್ಲದಿದ್ದರೂ…:ಶರತ್ ಎಚ್ ಕೆ

ಮೊನ್ನೆ ಬೆಳಿಗ್ಗೆ ಆಗಷ್ಟೇ ತಿಂಡಿ ತಿಂದು ಮನೆಯವರೆಲ್ಲ ಟೀವಿ ನೋಡುತ್ತ, ಪೇಪರ್ ಓದುತ್ತಾ ಕುಳಿತಿದ್ದೆವು. ಗೇಟ್ ತೆರೆದ ಸದ್ದಾಯಿತು. ಯಾರೆಂದು ನೋಡಿದರೆ ಚರಂಡಿ ಶುಚಿಗೊಳಿಸುವ ಮತ್ತು ಹೂದೋಟದ ಕಳೆ ಕೀಳುವ ಕೆಲಸ ಮಾಡುವ ಹುಡುಗ. ಅವನು ಈ ಹಿಂದೆ ಒಂದೆರಡು ಬಾರಿ ನಮ್ಮ ಮನೆ ಹೂದೋಟದ ಕಳೆ ಕಿತ್ತಿದ್ದ. ’ಕೆಲಸ ಇದ್ಯ’ ಅಂತ ಕೇಳ್ದ. ಬಾಗಿಲು ತೆರೆದ ಅಮ್ಮ ’ಇಲ್ಲ ಹೋಗಪ್ಪ’ ಅಂತೇಳಿ ಒಂದೇ ಮಾತಲ್ಲಿ ಅವನನ್ನು ಸಾಗಾಕಲು ಮುಂದಾದರು. ತಕ್ಷಣವೇ ಬಾಗಿಲು ಹಾಕಿದರು. ’ಅಮ್ಮ ತಿಂಡಿ … Read more

ಹುಚ್ಚು ಪ್ರೀತಿ:ದಿವ್ಯ ಆಂಜನಪ್ಪ

  ಹುಚ್ಚು ಖೋಡಿ ಮನಸು ಅದು ಹದಿನಾರರ ವಯಸು ಮಾತು ಮಾತಿಗೇಕೋ ನಗು ಮರು ಘಳಿಗೆಯೇ ಮೌನ ಕನ್ನಡಿ ಮುಂದಷ್ಟು ಹೊತ್ತು ಬರೆಯದಿರುವ ಕವನ… (ಹೆಚ್.ಎಸ್. ವೆಂಕಟೇಶ್ ಮೂರ್ತಿ)   ಹುಚ್ಚು ಪ್ರೀತಿ ಎಂದಾಕ್ಷಣ ಬಿ.ಆರ್.ಛಾಯಾರವರು ಹಾಡಿದ ಈ ಸಾಲುಗಳು ನೆನಪಾಗುತ್ತದೆ. ಎಷ್ಟು ಅರ್ಥಪೂರ್ಣ ಹಾಗೂ ಸತ್ಯ. ಮಾತು ಮಾತಿಗೂ ನಗು, ಸದಾ ಕಾಲ ಖುಷಿ, ಅದೇಕೋ ಮೌನ, ತನ್ನಂದವ ತಾನೇ ನೋಡಿ ನಲಿವ ಮನಸ್ಸು, ಹೇಗೆ ಕಾಣುವೆನೋ ತಿಳಿಯಲು ಕನ್ನಡಿ ಮುಂದಷ್ಟು ಹೊತ್ತು ಕಳೆವ, ಮನದಲ್ಲೇ … Read more

ಅಪರೂಪಕ್ಕೊಂದ್ ಮದ್ವಿಗಿ ಹೋಗಿದ್ನಿರಿ (ಭಾಗ-೩):ರುಕ್ಮಿಣಿ ಎನ್.

ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ ಮನಸಿಗೆ ಹೌಸಿ ತರು ಮಲ್ನಾಡ್ ಸೀಮಿ ಅಲ್ಲ ಬಟ್ಟಾ ಬಯಲ್ ಸೀಮಿ ರೀ ನಮ್ದು. ದಾರಿ ಆಚಿಕ್-ಇಚಿಕ್ ಪೀಕ್ ಜಾಲಿ ಗಿಡಗೋಳ್, ಅಲ್ಲೆಟ್ ಇಲ್ಲೆಟ್ ಹಸಿ ಬಿಸಿ ಬೆಳದ್ ನಿಂತ ಬಂಬಲಕ್ಕಿ, ಹಂಗ ಬಂದಕ್ಯಾಸ್ ಸೊಡ್ಡನ್ ಮಕಕ್ಕ ಬಡದ್ ನೆತ್ತಿ ಸುಟ್ಟ ಹೋಗ್ತೈತೆನೋ ಅನ್ನು ಸುಡು-ಸುಡು ಬಿಸಲ್. ಕೆಂಡ್ ಉಡ್ಯಾಗಿಟ್ಕೊಂಡ್ ಬೀಸೂ ಬಿರುಗಾಳಿ, ಉರಿ ಉರಿ ಝಳ. ಗಾಳಿ ಪದರಿನ್ಯಾಗ್ ಕಟ್ಕೊಂಡ್ ಬರು ಹಾಳ್ ಮಣ್ಣ ಮಕದ ಮ್ಯಾಲ್ ಮನಿ … Read more

ಭಾವಕ್ಕೆ ಜೊತೆಯಾಗೋ ಭಾವ:ಭಾಗ್ಯ ಭಟ್

ಅದೆಲ್ಲೋ ಇದ್ದು ಮುಖವನ್ನೂ ನೋಡದಿರೋರ ಮಧ್ಯ ಸುಂದರ ಸ್ನೇಹವೊಂದು ಹೆಮ್ಮರವಾಗಿ ಬೆಳೆಯೋದು ಸಾಧ್ಯವೇ ಅನ್ನೋ ಅವಳ ಪ್ರಶ್ನೆಗೆ ನೇರಾ ನೇರಾ ಉತ್ತರ ಸಿಕ್ಕಿತ್ತು ಅವತ್ತು … "ಗೆಳತಿ, ಆತ್ಮೀಯತೆ ಬೆಳೆಯೋಕೆ ಇಂತದ್ದೆ ಸ್ಥಳ ಬೇಕೆಂದಿಲ್ಲ. ನನ್ನ ನಿನ್ನ ಈ ಸ್ನೇಹ ಎದುರು ಕೂತು ಮುಖ ನೋಡಿ ಮಾತಾಡಿಲ್ಲ ! ಗಂಟೆಗಟ್ಟಲೇ ಹರಟಿಲ್ಲ. ತೋಳಲ್ಲಿ ಮುಖ ಹುದುಗಿಸಿ ಅತ್ತಿಲ್ಲ….ಸಾಹಿತ್ಯವನ್ನು ಬಿಟ್ಟು ಬೇರೆ ಯಾವ ವೈಯಕ್ತಿಕ ಮಾತನ್ನೂ ಆಡಿರದ ಸ್ನೇಹ ಇದು! ಆದರೂ ಎದುರು ಬದುರು ಕೂತು ಮಾತಾಡಿದ,ಒಟ್ಟಿಗೆ ಕೂತು ಹರಟಿದ, ಕಣ್ಣಂಚಿನ ಕಣ್ಣೀರ ಒರೆಸಿದ ನನ್ನ ತುದಿಬೆರಳ ಸ್ನೇಹಕ್ಕಿಂತ … Read more

ಕವಿತೆಗಳು:ನವೀನ್ ಮಧುಗಿರಿ ಹಾಗೂ ಎನ್.ಕೃಷ್ಣಮೂರ್ತಿ

ನಾನು ಕವಿಯಲ್ಲ ಪ್ರೇಮಿ..!   ನಿನ್ನಷ್ಟಕ್ಕೆ ನೀನು ಹೊಸೆ  ನನ್ನಿಷ್ಟಕ್ಕೆ ನಾನು ಬರೆವೆ!  ನಿನ್ನದು ಚಿಂತನ ಕಾವ್ಯ  ನನ್ನದು ಒಲವಿನ ಪದ್ಯ    ಮುಂದಿನ ಚರಣಗಳಿಗೆ ನಿನ್ನದು  ಪದಗಳ ಹುಡುಕಾಟದ ಪರದಾಟ  ನನ್ನದೇನಿಲ್ಲ ಪೂರಾ ಪದ್ಯವೂ  ಎದೆಯಾಳದಿಂದ ಬಂದ ಖುಷಿ-ಕಣ್ಣೀರುಗಳ ಸಮ್ಮಿಲನ    ನೀನು ಬರೆಯುವುದೆಲ್ಲ ನಿನಗೋ? ಕೃತಿಗಳ ಸಂಖ್ಯೆಗೋ? ಜನರಿಗೋ? ಜನಪ್ರಿಯತೆಗೋ? ಗೊತ್ತಿಲ್ಲ! ನಾನು ಬರೆಯುವುದು ಮಾತ್ರ ಬರೀ ನನಗೆ  ನನ್ನ ಕಣ್ಣೀರು-ಖುಷಿಗೆ.. ಅವಳ ಮರೆಯಬಾರದೆಂಬ ಕಾಳಜಿಗೆ!   ನಿನ್ನ ಕವಿತೆಗಳನ್ನೋದಿ ಮೆಚ್ಚಿಕೊಂಡದ್ದು  ಬೆನ್ನುತಟ್ಟಿದ್ದು ಬರೀ ಸಾಹಿತ್ಯ … Read more

ಪಂಜು ಚುಟುಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಡಂಕಿನ್ ಝಳಕಿ ರವರ ಚುಟುಕಗಳು

ರೋಷ   ಗಾಂಧಿಯಬುರುಡೆಯ ಮೇಲೆ   ಕೂತು ಕಾಗೆಯೊಂದು   ಕುಕ್ಕುತ್ತಿತ್ತು ರೋಷದಲಿ   ಬಳಿಸಾರಿ ಕೇಳಿದೆ ಏತಕ್ಕೆಂದು.   “ಮೂರ್ಖನಿವನು, ಗುಡಿಸಿಬಿಟ್ಟ   ಕೊಳಚೆ ಪ್ರದೇಶವನು   ಸಾಯಬೇಕಾಗಿದೆ ಹಸಿವಿನಿಂದ ನಾವಿನ್ನು”,   ಎಂದಿತು ನೊಂದು.   ಯಾರಿಗೆ?   ದುಂಬಿಗಳೆಲ್ಲಾ   ಮಲಗಿದ ಮೇಲೆ   ರಾತ್ರಿರಾಣಿ ಮೆಲ್ಲಗೆ   ವದ್ದೆ ಕನಸುಗಳ   ಕಂಪ ಚೆಲ್ಲಿ   ಕರೆವುದಾದರೂ   ಯಾರಿಗೆ? ದೃಷ್ಟಿ   ಬೈಬಲ್ ಪ್ರಾರ್ಥನೆ ನಡೆಯುತ್ತಿತ್ತು…   “ಒಂದು ಹಣ್ಣಿಗಾಗಿ … Read more

10k ಓಟ: ಪ್ರಶಸ್ತಿ ಅಂಕಣ

  ಹಿಂದಿನ ವರ್ಷ ಇದೇ ಸಮಯ. ಬೆಂಗಳೂರಿಗೆ ಕಾಲಿಟ್ಟ ಹೊಸತು. ಗೆಳೆಯರ ಬಾಯಲ್ಲಿ  10k 10k 10k.. ಎಂಬ ಝೇಂಕಾರ.. ಯಾರಾದ್ರೂ ಓಡ್ರಪ್ಪ, ಇದು ನನ್ನಿಂದೆಂತೂ ಆಗದ ಕೆಲಸ ಅಂತ ನನ್ನ ಭಾವನೆ. ಹಾಗಾಗಿ ಯಾರೇ ಈ ಬಗ್ಗೆ ಮಾತಾಡಕ್ಕೆ ಬಂದ್ರೂ ನಾನು ಇದ್ದ ಬುದ್ದಿಯನ್ನೆಲ್ಲಾ ಉಪಯೋಗಿಸಬೇಕಾಗಿ ಬಂದ್ರೂ ಉಪಯೋಗಿಸಿ ಅಲ್ಲಿಂದ ಎಸ್ಕೇಪ್ 🙂 ದಿನಾ ಬೆಳಬೆಳಗ್ಗೆ ಎದ್ದು ಓಡೋದಂದ್ರೆ ಏನು ಹುಡುಗಾಟನ ? ಬೆಂಗ್ಳೂರಿಗೆ ಬಂದ ಮೇಲೆ ಆಲಸ್ಯವೇ ನಾನು ಅಂತಾಗಿದ್ದೋನು ಮತ್ತೆ ಎದ್ದು ಓಡೋ … Read more

ಮುಂಬೈಗೆ ಕಿರಣ್ ಳ ಪ್ರೇಮಪತ್ರ: ವಾಸುಕಿ ರಾಘವನ್

  ಜಾಗಗಳೂ ಕೂಡ ಪಾತ್ರಗಳಾದಾಗ ಚಿತ್ರಗಳಿಗೆ ಇನ್ನೊಂದು ಆಯಾಮ ಸೇರಿಕೊಳ್ಳುತ್ತದೆ. “ನಾಗರಹಾವು” ಚಿತ್ರದ ಚಿತ್ರದುರ್ಗ, “ಕಹಾನಿ” ಚಿತ್ರದ ಕೋಲ್ಕೊತ, “ಸತ್ಯ”ದ ಮುಂಬೈ, “ಗಾಡ್ ಫಾದರ” ನ ಸಿಸಿಲಿ – ಈ ಎಲ್ಲಾ ಚಿತ್ರಗಳಲ್ಲೂ ಆ ಜಾಗಗಳೇ ಒಂದು ಪಾತ್ರವಾಗಿವೆ.  ಇದಕ್ಕೆ ಹೋಲಿಸಿದರೆ, ಜಾಗವನ್ನೇ ಪ್ರಮುಖ ಪಾತ್ರವಾಗಿ ಇಟ್ಟುಕೊಂಡು ತೆಗೆದಿರುವ ಚಿತ್ರಗಳು ಕಡಿಮೆ. ಕಿರಣ್ ರಾವ್ ನಿರ್ದೇಶನದ “ಧೋಬಿ ಘಾಟ್” ಅಂತಹ ಒಂದು ಅಪರೂಪದ ಚಿತ್ರ. ಇದು ಮುಂಬೈಗೆ ಆಕೆ ಬರೆದಿರುವ ಪ್ರೇಮಪತ್ರ! ಚಿತ್ರದಲ್ಲಿ ನಾಲ್ಕು ಎಳೆಗಳಿವೆ.  ಅರುಣ್ … Read more

ನಾಟಕಕಾರರಾಗಿ ಕುವೆಂಪು (ಭಾಗ-4):ಹಿಪ್ಪರಗಿ ಸಿದ್ದರಾಮ್

  ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ. ಈ ಮೊದಲಿನ ದೃಶ್ಯಗಳಲ್ಲಿ ಕೌರವಕುಲೇಂದ್ರನ್, ಕುರುಪತಿ, ಕೌರವೇಂದ್ರ, ಕುರುಚಕ್ರವರ್ತಿ, ದುರ್ಯೋಧನನೆಂದು ಪಾತ್ರಗಳ ಸಂಭಾಷಣೆಗಳಲ್ಲಿ ಉಲ್ಲೇಖವಾಗುತ್ತಿದ್ದ ಪಾತ್ರವು ರಂಗದಲ್ಲಿ ಬರುವುದರೊಂದಿಗೆ ನಾಟಕವು ಉತ್ತುಂಗಸ್ಥಿತಿಗೇರಿ ಕಳೆಕಟ್ಟಲಾರಂಭಿಸುವುದು ಆರನೇಯ ದೃಶ್ಯದಿಂದ, ರಣಭೂಮಿಯ ಕರಾಳತೆಯು ತುಂಬಿಕೊಂಡಿರುವ ವೈಶಂಪಾಯನ ಸರೋವರದ ದಡದಲ್ಲಿ ಕತ್ತಲೆ ಕವಿದಿರುವಾಗ ಗದಾಯುದ್ಧದಲ್ಲಿ ಕೃಷ್ಣನ ಕುತಂತ್ರದ ಫಲವಾಗಿ ಭೀಮನಿಂದ ತೊಡೆಮುರಿದುಕೊಂಡು ವಿಷಾದದ ನೋವಿನೊಂದಿಗೆ ನೆಲಕ್ಕುರುಳಿರುವ ಅಷ್ಟಾದಶಾಕ್ಷೋಹಿಣೀ ಒಡೆಯನಾಗಿ ಮೆರೆದಾಡಿದ್ದ ಚಕ್ರವರ್ತಿ ದುರ್ಯೋಧನ ಮಹಾರಾಜರು ದೇಸಿಗನಂತೆ ಹೊರಳಾಡುತ್ತಿದ್ದಾರೆ. ‘ಎಲವೋ ಅಗಸ್ತ್ಯ ನಕ್ಷತ್ರವೇ…’ಎಂಬರ್ಥದಲ್ಲಿ ಇದ್ದರೂ ಇಲ್ಲದವನಂತೆ … Read more

ಡಿಪೋ ಅಕ್ಕಿ: ಹನಿಯೂರು ಚಂದ್ರೇಗೌಡ

  "ನ್ಯಾಯಬೆಲೆ ಅಂಗಡಿ" ಎಂಬೀ ಮೂರಕ್ಷರದ ಬೋರ್ಡಿನತ್ತ ಗಮನವಹಿಸಿದರೆ, ನನ್ನ ಮನವು ಪುಲಕಿತಗೊಳ್ಳುತ್ತದೆ. ಚನ್ನಪಟ್ಟಣ ತಾಲೂಕು ಬಹುತೇಕವಾಗಿ ಮಳೆಯನ್ನಾಶ್ರಯಿಸಿದ, ಅಲ್ಲಲ್ಲಿ ಕೊಂಚ ಪಂಪ್ ಸೆಟ್ಟನ್ನಾಶ್ರಯಿಸಿದ ಬೇಸಾಯ ಪದ್ದತಿಯನ್ನು ಹೊಂದಿದೆ. ಇಂಥ ತಾಲೂಕಿನ ನಮ್ಮನ್ನೂ ಸೇರಿಸಿ ಎಷ್ಟೋ ಜನರಿಗೆ ಅನ್ನದ ಆಸರೆಯಾಗಿದ್ದು ಮಾತ್ರ ಈ ಸೊಸೈಟಿಯ ಅಕ್ಕಿಯೇ. ನಾನು ಚಿಕ್ಕವನಾಗಿದ್ದಾಗ ನನ್ನ ಅಪ್ಪ-ಅವ್ವನ ಜತೆಯಲ್ಲಿ ತಿಂಗಳಿಗೊಂದಾವರ್ತಿ ಬರುತ್ತಿದ್ದ ಈ ಅಕ್ಕಿಯನ್ನು ತರಲು ಡಿಪೋ ಅಥವಾ ಸೊಸೈಟಿಗೆ ಹೋಗುತ್ತಿದ್ದದ್ದು, ಅದನ್ನು ನಾನೇ ಬಹಳ ಉತ್ಸಾಹದಿಂದ ಹೊತ್ತು ತರುತ್ತಿದ್ದದ್ದು ಈಗಲೂ ಪುಳಕಗೊಳಿಸುವ … Read more

ನಮ್ಮಪ್ಪನೇ ಈಗ ಸೊಸೈಟಿಯ ಅಧ್ಯಕ್ಷ: ಡಾ. ಗವಿ ಸ್ವಾಮಿ

  ನಮ್ಮ ಸಂಪಾದಕರ  ಟೈಮ್ ಲೈನನ್ನು ಜಾಲಾಡುತ್ತಿದ್ದೆ. ಅರೆ, ಡಿಪೋ ಅಕ್ಕಿಯ ಬಗ್ಗೆ ಲೇಖನ ಕಳಿಸಬೇಕಂತೆ ಪಂಜು ವಿಶೇಷ ಸಂಚಿಕೆಗಾಗಿ! ಛೇ ನಾನು ಇದನ್ನು ಮೊದಲೇ ಗಮನಿಸಬಾರದಿತ್ತಾ. ಇನ್ನೊಂದೇ ದಿನ ಬಾಕಿ ಇದೆ. 18ಕ್ಕೆ ಡೆಡ್ ಲೈನ್. ಬರೆಯಲೇಬೇಕು.  ಏನಾದರೂ ಬರೆಯಲೇಬೇಕು. ಆ ಹಕ್ಕು ನನಗಿದೆ. ಬಹುಶಃ ಡಿಪೋ ಅಕ್ಕಿಯ ಬಗ್ಗೆ  ಅಧಿಕಾರಯುತವಾಗಿ ಮಾತನಾಡುವ ಹಾಗು ಬರೆಯುವ ಹಕ್ಕು ಇರುವುದು ಅದರ ರುಚಿ ನೋಡಿದವರಿಗೆ ಮಾತ್ರ! ಅವರಲ್ಲಿ ನಾನೂ ಒಬ್ಬ . ಅದಕ್ಕೇ ಹೇಳಿದ್ದು ನನಗೆ ಹಕ್ಕಿದೆ … Read more

ಗಿರೀಶ ಕಾಸರವಳ್ಳಿ ಮತ್ತು ಚಲನಚಿತ್ರಗಳು: ಮಹದೇವ ಹಡಪದ್

  ಮನುಷ್ಯ ಪ್ರೀತಿ, ಮಾನವೀಯ ಅನುಕಂಪ, ಪರಿಸರ ಕಾಳಜಿ, ದೇಶ-ಭಾಷೆ, ಸಂಬಂಧಗಳು, ಸಮಾಜದ ಓರೆ-ಕೋರೆ, ತೊಡುಕು-ಕೆಡುಕಗಳನ್ನು ತನ್ನ ಹೊಟ್ಟೆಯಲ್ಲಿಟ್ಟುಕೊಂಡಿರುವ ಕಲುಷಿತ ಸಾಮಾಜಿಕ ಆವರಣ, ಆ ಆವರಣದ ನಡುವೆ ಬದುಕಿಗಾಗಿ ಹಂಬಲಿಸುವ, ಮನಮಿಡಿಯುವ ಮುಗ್ಧತೆ, ನ್ಯಾಯಕ್ಕಾಗಿ ಹೋರಾಡುವ, ಇರುವಿಕೆಯನ್ನು ಮುಟ್ಟಿನೋಡಿಕೊಳ್ಳುವ ಪಾತ್ರಗಳು… ಇಂಥ ಅನುಭವವನ್ನು ಗಾಢವಾಗಿ ಕಟ್ಟಿಕೊಡುವ ಶಕ್ತಿ ಕಾಸರವಳ್ಳಿಯವರ ಎಲ್ಲಾ ಸಿನೆಮಾಗಳ ಆವರಣದಲ್ಲಿದೆ. ಕತೆ, ಘಟನೆಯ ಓಘದಲ್ಲಿ ಪಾತ್ರಗಳು  ಅನಾವರಣಗೊಳ್ಳುವ ಬಗೆಯನ್ನು ಸಮರ್ಥವಾಗಿ ಚಿತ್ರದ ಚೌಕಟ್ಟಿನಲ್ಲಿಟ್ಟಿರುವ ಹಲವು ಚಿತ್ರಗಳ ಗೊಂಚಲು  ಕನ್ನಡದಲ್ಲಿ ಬಂದಿವೆ. ಅವೆಲ್ಲವವೂ ಮೂಲ ಆಕರವಾಗಿ … Read more

ಹಣಬು ಸುಡುವುದು: ರಾಜೇಂದ್ರ ಶೆಟ್ಟಿ

ಹತ್ತು ವರ್ಷಗಳು! ಹೇಗೆ ಕಳೆದು ಹೋದವು. ಅಂದು, ಇಂತಹದೇ ಬಸ್ಸಿನಲ್ಲಿ ಮುಂಬಾಯಿಗೆ ಓಡಿ ಹೋಗಿದ್ದೆ. ಇಂದು ರಜಾದಲ್ಲಿ ಹಿಂದೆ ಬರುತ್ತಿದ್ದೇನೆ. ಈ ಹತ್ತು ವರ್ಷಗಳಲ್ಲಿ ಊರಲ್ಲಿ ಏನೇನು ಆಗಿದೆಯೋ, ಯಾರು ಇದ್ದಾರೋ, ಯಾರು ಇಲ್ಲವೋ ಯಾರಿಗೆ ಗೊತ್ತು. ಇಷ್ಟೊಂದು ದಿನಗಳಲ್ಲಿ ಊರಿಗೆ ಪತ್ರವನ್ನೇ ಬರೆದಿಲ್ಲ. ಊರಿಗೆ ಬರುವುದು ಸಹ ಯಾರಿಗೂ ಗೊತ್ತಿಲ್ಲ. ಜೀವನದಲ್ಲಿ ಎಷ್ಟೊಂದು ತಿರುವುಗಳು! ಅಪ್ಪನ ಕಿಸೆಯಿಂದ ಹಣ ತೆಗೆದಿದ್ದೆ –ಐಸ್ ಕ್ಯಾಂಡಿ ತಿನ್ನಲು. ಅದು ಕಳ್ಳತನವೆಂದು ಅಪ್ಪ ಎಷ್ಟು ಹೊಡೆದಿದ್ದ. ಆವಾಗ ನನ್ನ ವಯಸ್ಸಾದರೂ … Read more

ನವೀನ ಕಹಾನಿ: ನವೀನ್ ಮಧುಗಿರಿ

ದೇವರ ದರ್ಶನ  ದೇವರಲ್ಲಿ ನನಗೆನಂಬಿಕೆಯಿಲ್ಲವಾದ್ದರಿಂದ, ಬೆಳಗೆದ್ದ ಕೂಡಲೇ ದೇವರ ಮುಖ ನೋಡಬೇಕು. ಬಲಕ್ಕೆ ಏಳಬೇಕು ಎಂಬೆಲ್ಲಾ ಯಾವ ನಿಯಮ ಮತ್ತು ಕಟ್ಟುಪಾಡುಗಳು ನನಗಿಲ್ಲ. ಇವತ್ತು ನಾನು ಮೇಲೆದ್ದಿದ್ದೇ  ಎಡಮಗ್ಗುಲಿನಲ್ಲಿ! ಎದ್ದು ಕೂತು ಕಣ್ ಬಿಡುವ ವೇಳೆಗೆ ಕಣ್ಣೆದುರಿಗಿದ್ದ ಅಮ್ಮಾ ಹೇಳಿದಳು- "ದೇವರ ಮುಖ ನೋಡು" ನಾನೆಂದೆ- "ಅಮ್ಮಾ, ನೀನೇ ನನ್ನ ದೇವರು!" ಭಾವುಕಳಾದ ಅಮ್ಮಾ ತನ್ನೆರಡೂ ಕೈಗಳಲ್ಲಿ ನನ್ನ ಕೆನ್ನೆ ಸವರಿ ನೆಟಿಗೆ ತೆಗೆದಳು!! ದೃಷ್ಟಿ-ಸೃಷ್ಟಿ  "ಮಾಂಸಾಹಾರಗಳನ್ನ ಯಾರು ಕೊಟ್ಟರೂ ತಿನ್ನಬೇಡ. ಎಲ್ಲಿಯೂ ತಿನ್ನಬೇಡ. ಅದು ನಮ್ಮ ಮನೆ ದೇವರಿಗೆ … Read more

ಮಳೆಯಲ್ಲಿ ಇಳೆಯ ತೊರೆದವಳು: ರಾಮಚ೦ದ್ರ ಶೆಟ್ಟಿ

ಮಳೆ ಜೊರ್ರನೆ ಸದ್ದು ಮಾಡುತ್ತ ಕ೦ಡಕ೦ಡಲ್ಲಿ ಬೀಳತೊಡಗಿತ್ತು….ಎಲ್ಲೆಲ್ಲು ಮಳೆ ಧಾರಾಕಾರ ಮಳೆ….ಅಲ್ಲಿ ಗಾಳಿಯಲ್ಲಿ ತೇಲಾಡುತ್ತ ಓಲಾಡುತ್ತ ನಶೆಯೇರಿದ ಕುಡುಕನ೦ತೆ ಬುವಿಯ ದಾರಿ ಹಿಡಿದು ಅವುಗಳು.. ಮಳೆಹನಿಗಳು ನಡೆದುಬರುತ್ತಿರುವ ನೋಟ ಮೋಹಕವಾಗಿತ್ತು..ಮಲೆನಾಡಿನಲ್ಲಿ ಈ ತರದ ಮಳೆ, ಮಳೆಗಾಲದಲ್ಲಿನ ಈ ತರದ ವಾತಾವರಣ ಹೊಸದೆ..? ಮನದಲ್ಲೆ ಕೇಳಿಕೊ೦ಡನವನು..ಈ ಪ್ರಶ್ನೆಯು ಹೊಸದಲ್ಲ..ಕಳೆದು ಹೋದ ಮಳೆಗಾಲದಲ್ಲೆಲ್ಲ ಮೂಡಿದ್ದು೦ಟು. !ಎದುರಿನ ಆಗು೦ಬೆ ಬೆಟ್ಟ ತನ್ನ ಅಗಾಧವಾದ ರೂಪರಾಶಿಯನ್ನು ಮಳೆಯ ಹಿ೦ದೆ ಮರೆಮಾಚಿದ್ದು ಅಸ್ಪಷ್ಟತೆಯ ದೃಷ್ಟಿ ನೋಟದ ಮೂಲಕ ಅರಿವಿಗೆ  ಬರುತ್ತಿದೆ..ನಿನ್ನೆ ಆಗು೦ಬೆಯ ರಸ್ತೆಯಲ್ಲಿ ದೊಡ್ಡ … Read more

ಮೂವರ ಕವಿತೆಗಳು: ಹನುಮಂತ ಹಾಲಿಗೇರಿ, ನಾಗರಾಜ್ ಹರಪನಹಳ್ಳಿ, ಅಕ್ಷತಾ ಕೃಷ್ಣಮೂರ್ತಿ

ಮತ್ತೊಂದು ಗೋಮುಖ ಓ ಜನರೆ ನನಗೂ ಬಯಕೆಗಳಿವೆ, ಬಯಕೆ ಬೆಂಕಿಯ ಬೇಗೆ ತಾಳಲಾರೆ,  ಒಮ್ಮೆ ಅನುಭವಿಸಲು ಬಿಡಿ ನಿಮಗೆ ದಮ್ಮಯ್ಯ ಅಂತಿನಿ   ಅನ್ನದೆ ವಿಧಿಯಿಲ್ಲ, ಪ್ರತಿಭಟನೆಯ ದಾರಿ ಕಾಣದ, ಮತಿ ಇರದ ಮಾತು ಬಾರದ, ದನ ನಾನು ಹುಟ್ಟಿದಾಗ ತಾಯಿ ಕೆಚ್ಚಲಿಗೆ ಬಾಯಿ ಹಾಕಿದರೆ ಜಗ್ಗಿ ಕಟ್ಟಿದಿರಿ ತೊರೆ ಬಿಟ್ಟ  ತಾಯ ಕೆಚ್ಚಲ ಬಕೇಟಿಗೆ ಬಸಿದಿರಿ ಮುಸು ಮುಸು ಮುಸುಗುಟ್ಟಿ ಮೌನವಾದಳು ನನ್ನ ಮೂಕ ತಾಯಿ ನನ್ನ ಪಾಲದು ನನಗೆ ಕೊಡಿ ಎಂದು ಹಕ್ಕಿನ ಮಾತಾಡಿಲಿಲ್ಲ … Read more

ಮರೆಯಲಾಗದ ಚಿಕ್ಕಾತಿಚಿಕ್ಕ ಪಾತ್ರಗಳು:ವಾಸುಕಿ ರಾಘವನ್

  “ಪೂರೇ ಪಚಾಸ್ ಹಜಾರ್” ಮೂರೇ ಪದಗಳು! ಹೇಳಿದವನು ಮಕಿಜಾನಿ ಮೋಹನ್ ಅಲಿಯಾಸ್ ಮ್ಯಾಕ್ ಮೋಹನ್. ಸಾಮಾನ್ಯವಾಗಿ ಖಳನಾಯಕನ ಚೇಲಾ ಪಾತ್ರಗಳಿಂದ ನಮಗೆ ಪರಿಚಿತನಾಗಿರುವ ಆತ ನಟಿಸಿರುವ ಇನ್ನೂರಕ್ಕೂ ಹೆಚ್ಚು ಚಿತ್ರಗಳ ತೂಕ ಒಂದಾದರೆ, ಈ ಪಾತ್ರದ್ದೇ ಒಂದು. ಇದು ಪೋಷಕ ಪಾತ್ರ ಅಂತಲೂ ಹೇಳಲಾಗದಷ್ಟು ಚಿಕ್ಕಾತಿಚಿಕ್ಕ ಪಾತ್ರ. ಆದರೆ ಇವತ್ತಿಗೂ ಗಬ್ಬರ್ ಸಿಂಗ್ ಎಷ್ಟು ಫೇಮಸ್ ಆಗಿದ್ದಾನೋ ಮೂರೇ ಪದ ಹೇಳಿರುವ ಸಾಂಭಾ ಕೂಡ ಅಷ್ಟೇ ಫೇಮಸ್! “ಮೇರೆ ಸಪ್ಪನೋ ಕೀ ರಾಣಿ ಕಬು ಆಯೇಗಿ … Read more

ಪಂಜು ಚುಟುಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಮಾಲಿನಿ ಭಟ್ ರವರ ಚುಟುಕಗಳು

  ೧.)   ಹುಚ್ಚುಮನಸು ಕಂಡೂ ಕಾಣದ ಮನದ ಚಿತ್ತದಲ್ಲಿ ಸುಪ್ತವಾಗಿ ಕದಡಿ ನಿಂತಿದೆ, ಯಾರು ಕೇಳದಂತಹ ಕಲ್ಪನೆ ರೂಪ ನೀಡಲಾಗದೆ ಅವಿತಿದೆ.   ೨.)ಸ್ವಾರ್ಥ ಜೀವನದ ಪ್ರತಿಕ್ಶಣನು ಬಯಸುತ್ತೇವೆ ನಮಗಾಗಿ ಒಂದು ಜೀವ ಇರಬೇಕು ಆದರೆ ಯಾವ ಸಮಯವು ಯೋಚಿಸುವುದಿಲ್ಲ ಬೇರೆಯವರಿಗಾಗಿ ನಾವು ಇರಬೇಕು   ೩) ಬದುಕಲ್ಲಿ ದುಃಖವೋ ಸುಖವೋ ಏನುಂಟು ಏನಿಲ್ಲ ಹೇಳಲಾಗದ ಚಿತ್ರಿಸಲಾಗದ ಒಗಟನ್ನು ಬಿಡಿಸುವ ಪರಿ ಏನು?   ೪) ಕಣ್ಣು ಕಾಣದಾದಾಗ ಎಷ್ಟು ವೈಭವ ಇದ್ದರೇನು ಮನಸು ಸೋತಾಗ … Read more

ನಾಟಕಕಾರರಾಗಿ ಕುವೆಂಪು (ಭಾಗ-3):ಹಿಪ್ಪರಗಿ ಸಿದ್ದರಾಮ್

  ಹೆಣ್ಣಿನ ಆತ್ಮವಿಶ್ವಾಸ, ಛಲ ಮತ್ತು ಅಸಾಧ್ಯವಾದುದನ್ನು ಸಾಧ್ಯಮಾಡುವ ಶಕ್ತಿಯ ದ್ಯೋತಕವಾದ ಮಹಾಕವಿ ಕುವೆಂಪುರವರ ‘ಯಮನ ಸೋಲು’ ರಂಗಕೃತಿಯಲ್ಲಿ ಪ್ರೇಮಾನುರಾಗವು ಧರ್ಮವನ್ನು ಮೀರಿದುದು ಎಂಬ ಮಾತನ್ನು ಸಾಧಿಸುವುದರೊಂದಿಗೆ ಪ್ರೇಮಮಯಿಯಾದ ಸಾವಿತ್ರಿಗೆ ಯಮರಾಯನು ಸೋತಿದ್ದು ಆಶ್ಚರ್ಯಕರ ಸಂಗತಿಯಲ್ಲ ಎನ್ನುವ ಆಶಾಭಾವದ ನುಡಿಯೊಂದಿಗೆ, ಇಲ್ಲಿ ಯಮರಾಯನ ಸೋಲು ಹೆಣ್ಣಿನ ಆತ್ಮವಿಶ್ವಾಸದ ಮೂಲಕ ಸಾಧ್ಯ ಎಂಬ ವಿಚಾರವನ್ನು ಮಹಾಕವಿಗಳು ಪ್ರಸ್ತುತಪಡಿಸಿರುವುದನ್ನು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೇವೆ. ಈಗ ಮಹಾಕವಿಗಳ ರಂಗಯಾತ್ರೆಯಲ್ಲಿಯ ಮತ್ತೊಂದು ಪೌರಾಣಿಕ ರಂಗಕುಸುಮ ಮತ್ತು ಕಳೆದ ಶತಮಾನದಲ್ಲಿ ಅನೇಕ ವೃತ್ತಿನಾಟಕ ಕಂಪನಿಯ … Read more

ಪ್ರೇಕ್ಷಕ-ಪರಿಣಾಮ : ಮಹದೇವ ಹಡಪದ್

ಉಪದೇಶ, ಸಂದೇಶ, ನೀತಿಯನ್ನು ಹೆಳಬೇಕಾದ್ದು ಕಲೆಯ ಉದ್ಧೇಶವೆಂದೂ ಅದೇ ವಿಧಾನದಲ್ಲಿಯೇ ಪ್ರದರ್ಶನಗಳು ಆಸ್ವಾದನೆಗೆ ಸಿಕ್ಕಬೇಕೆಂದು ಬಯಸುವುದು ಸಾಮಾನ್ಯವಾಗಿ ಎಲ್ಲ ವಯೋಮಾನದ ಪ್ರೇಕ್ಷಕರಲ್ಲೂ ಇದ್ದೆ ಇರುತ್ತದೆ. ಈ ಜನಪ್ರಿಯ ಬೇಡಿಕೆಯೂ ಆಯಾ ವಯಸ್ಸಿಗನುಗುಣವಾದ ರೀತಿಯಲ್ಲಿ ವ್ಯಕ್ತಗೊಳ್ಳುತ್ತದೆ. ಹುಸಿ ಮೌಲ್ಯಗಳನ್ನ ಬಿತ್ತರಿಸುವುದನ್ನು ಪ್ರೇಕ್ಷಕ ಬಯಸುತ್ತಾನೆಂದು ರುಚಿ ಬದಲಿಸುವ ಪ್ರಯತ್ನ ಮಾಡದಿರುವುದು ತಪ್ಪು. ಕನ್ನಡದ ಚಿತ್ರರಂಗ ಚರಿತ್ರೆಯಲ್ಲಿ ಹೊಸ ಅಲೆಯ ಸಿನೆಮಾಗಳಲ್ಲಿ ಮೊತ್ತಮೊದಲಿನದು ಎಂದು ಗುರುತಿಸಲಾಗುವ “ಸಂಸ್ಕಾರ”ದ ಯಶಸ್ಸಿಗೆ ಕಾರಣರಾದ ಅದೆ ಜನ ಈಗ ಆ ಶೈಲಿಯ ಸಿನೆಮಾಗಳನ್ನು ನೋಡಲಾರರೆಂದು ಹೇಳುವುದಾದರು … Read more

ಸಾಹಸ-ಸಾವುಗಳ ನಡುವಣ ಚಾರಣ..: ಪ್ರಶಸ್ತಿ ಅಂಕಣ

  ನೀರಿದ್ದಲ್ಲೆಲ್ಲಾ ಹೋಗದಾದ್ರೆ ಹೋಗ್ಲೇಬೇಡ ಅನ್ನೋ ಅಮ್ಮ, ಹುಡುಗ್ರು.. ಏನೋ ಆಸೆ ಪಟ್ತಿದಾರೆ ಸೇಫಾಗಿ ಹೋಗ್ಬರ್ಲಿ ಬಿಡು ಅನ್ನೋ ಅಪ್ಪ, ಹುಚ್ಚುಕೋಡಿ ಮನಸು.. ಇದು ಹದಿನಾರರ ವಯಸು ಎಂಬೋ ಕವಿವಾಣಿಯ ತರಹದ ಹುಚ್ಚು ಮನಸಿನ ಸ್ವಲ್ಪ ಹೆಚ್ಚೇ ಧೈರ್ಯದ , ರೋಚಕ ಕನಸುಗಳ ಹುಡುಗರು… ಯಾವುದೇ ಚಾರಣ ಅಂದಾಗ ಈ ಮೂರು ಚಿತ್ರಗಳು ಮನಸ್ಸಿಗೆ ಬಂದೇ ಬರುತ್ತೆ. ಚಾರಣದಲ್ಲಿ ಸಾಹಸ ಮತ್ತು ಸಾವುಗಳ ನಡುವೆ ಕೂದಲೆಳೆಯ, ಕೆಲವಕ್ಷರಗಳ ವ್ಯತ್ಯಾಸವಷ್ಟೇ. ಕುಮಾರಪರ್ವತದಿಂದ ಕೊಡಚಾದ್ರಿಯವರೆಗಿನ ಚಾರಣಗಳಲ್ಲಿ, ಜಲಪಾತದ ಜಾರುಗಳಲ್ಲಿ, ನೀರ … Read more