editor
ಬೆಳದಿಂಗಳ ಬಾಲೆ: ಸುಬ್ರಹ್ಮಣ್ಯ ಹೆಗಡೆ
೧. ಪ್ರತೀ ದಿನದಂತೆ, ಕೋರಮಂಗಲದ ನಮ್ಮ ಮನೆಯಿಂದ ಬನಶಂಕರಿಯ ಕಾಲೇಜಿಗೆ ಹೊರಟವನು ಹಾಗೇ JP ನಗರದ ವೈಷ್ಣವಿಯ ಮನೆಯ ಕಡೆಗೆ ಗಾಡಿಯನ್ನು ತಿರುಗಿಸಿದೆ, ಅದೇನೂ ಕಾಲೇಜಿಗೆ ಹೋಗುವ ದಾರಿಯಲ್ಲಿ ಇಲ್ಲದಿದ್ದರೂ, ವೈಷ್ಣವಿ ಇಷ್ಟು ಹೊತ್ತಿಗೆ ಕಾಲೇಜು ಬಸ್ ನ್ನು ಹಿಡಿಯಲು ಮನೆಯಿಂದ ಹೊರಟಾಗಿರುತ್ತದೆ ಎಂದು ತಿಳಿದಿದ್ದರೂ. ಪ್ರೀತಿಸಿದ ವ್ಯಕ್ತಿ ಇದ್ದ ಜಾಗ ಎಂಬ ವಿಷಯ ಇದೆಯಲ್ಲಾ, ಅವಳು ನಡೆದ ದಾರಿಯ ಘಮ ಇಲ್ಲೇ ಹಬ್ಬಿದೆ ಎಂಬ ಭ್ರಮಾಭರಿತ ಸೊಗಸು ಮಾತಿನ ಅಗತ್ಯವಿಲ್ಲದೇ, ಕಾಲದೇಶಗಳ ಹಂಗಿಲ್ಲದೇ, ವ್ಯಕ್ತವಾಗುವ … Read more
ಕುಂಡೆಕುಸ್ಕ ಬಂತು: ಅಖಿಲೇಶ್ ಚಿಪ್ಪಳಿ
ಹವಾಮಾನ ಬದಲಾವಣೆಯ ಪರಿಣಾಮವೋ ಏನೋ ಮಲೆನಾಡಿನಲ್ಲಿ ಇನ್ನೂ ಮಳೆ ಬಿಟ್ಟಿಲ್ಲ. ಮೇಲಿಂದ ಮೇಲೆ ಚಂಡಮಾರುತಗಳು ರುಧ್ರನರ್ತನಗೈಯುತ್ತಿವೆ. ಪ್ರಕೃತಿವಿಕೋಪಕ್ಕೆ ಸಿಕ್ಕ ಮಾನವನ ಬದುಕು ಮೂರಾಬಟ್ಟೆಯಾಗಿದೆ. ಸ್ವಯಂಕೃತಾಪರಾಧವೆನ್ನಬಹುದೆ? ಮಳೆಗಾಲ ಕ್ಷೀಣವಾಗಿ ನಿಧಾನವಾಗಿ ಚಳಿ ಹೆಜ್ಜೆಯ ಮೇಲೆ ಹೆಜ್ಜೆಯಿಡುತಾ ಬರುವಾಗಿನ ಸಂಭ್ರಮ ಮತ್ತು ಅದರ ಮಜ ಬೇರೆ. ತೆಳ್ಳಗಿನ ಇಬ್ಬನಿ ಎಲೆಗಳ ಮೇಲೆ ಹುಲ್ಲಿನ ಮೇಲೆ, ಜೇಡದ ಬಲೆಯಲ್ಲಿ ಮುತ್ತು ಪೋಣಿಸಿದಂತೆ ಅತ್ಯಾಕರ್ಷಕವಾಗಿ ತೋರುತ್ತದೆ. ಚಳಿಗಾಲದ ಮುಂಜಾವಿನ ಸೊಗಸನ್ನು ಅನುಭವಿಸಿದವನೇ ಧನ್ಯ. ಸೂರ್ಯವಂಶಿಗಳಿಗೆ ಈ ಭಾಗ್ಯವಿಲ್ಲ. ಇವರೆದ್ದು ವಾತಾವರಣದ ಸಂಪರ್ಕಕ್ಕೆ ಬರುವ … Read more
ಕಾಗೆ ಪಕ್ಷ! ಕೋಗಿಲೆ ಪಕ್ಷ!! : ಎಸ್.ಜಿ.ಶಿವಶಂಕರ್
ಅಲೆಅಲೆಯಾಗಿ ತೇಲಿ ಬಂತು ಕೋಗಿಲೆಯ ಮಧುರ ಸ್ವರ. ಕೇಳುತ್ತಲೇ ವಿಶಾಲೂ ಮುಖ ಅರಳಿತು, ಮಂದಹಾಸ ಮಿನುಗಿತು. ಉಲ್ಲಸಿತಗೊಂಡಳು! ಪೇಪರಿನಿಂದ ತಲೆ ಎತ್ತಿ ಸ್ವರ ಬಂದ ದಿಕ್ಕನ್ನು ಗುರುತಿಸಲು ಪ್ರಯತ್ನಿಸಿದಳು. ’ದರಿದ್ರ, ಮತ್ತೆ ಬಂದು ವಕ್ಕರಿಸಿತು’ ವಿಶ್ವ ಶಪಿಸಿದ! ವಿಶಾಲೂ ಬೆಚ್ಚಿದಳು! ಇಂತವರೂ ಇರ್ತಾರ? ಅಚ್ಚರಿಪಟ್ಟಳು! ಕೋಗಿಲೆಯ ಇಂಪಾದ ರಾಗವನ್ನು ದರಿದ್ರ ಎಂದು ಭಾವಿಸ್ತಾರಾ..? ಬೆಳ್ಳಂಬೆಳಿಗ್ಗೆ ಗಡ್ಡ ಮೀಸೆಗಳಿರುವ ಜಾಗದಲ್ಲಿ ಚೂರುಚೂರೇ ಬೆಳೆದು ’ನೀನು ಮುದುಕನಾಗುತ್ತಿರುವೆ’ ಎಂಬುದನ್ನು ಜಗಜ್ಜಾಹೀರು ಮಾಡಲು ಹವಣಿಸುತ್ತಿದ್ದ ಬಿಳಿಕೂದಲುಗಳನ್ನು ನಿರ್ದಯದಿಂದ ಬೋಳಿಸುವ, ನವನಾಗರೀಕ ಭಾಷೆಯಲ್ಲಿ … Read more
ಕಾಲೇಜ್ ಕಹಾನಿ: ಪ್ರಶಸ್ತಿ ಅಂಕಣ
ನೀರವ ರಾತ್ರಿ. ಜೀವನವೇ ಜಿಗುಪ್ಸೆಯಾಗಿ , ಮನಶ್ಯಾಂತಿಯನ್ನು ಹುಡುಕಿ ಅಲೆಯುತ್ತಿರೋ ಅಲೆಮಾರಿಯಂತೆ ಒಬ್ಬ ಕೆರೆಯನ್ನೇ ದಿಟ್ಟಿಸುತ್ತಾ ಅದರ ದಡದಲ್ಲಿ ಕುಳಿತಿದ್ದ. ಬೆಳದಿಂಗಳ ರಾತ್ರಿ. ಕೆರೆಯ ಅಲೆಗಳಲ್ಲಿ ಪ್ರತಿಬಿಂಬಿಸುತ್ತಿದ್ದ ಚಂದ್ರನ ಬಿಂಬ ನೋಡುತ್ತಿದ್ದರೆ ಆಗಸದ ಆ ಶಶಿ ಈತನಿಗೆ ಸಾಂತ್ವನ ಹೇಳಲೆಂದೇ ಭುವಿಗಿಳಿದು ಬಂದು ಕೆರೆಯಲ್ಲಿ ಈಜಾಡುತ್ತಿದ್ದಾನೇನೋ ಅನಿಸುತ್ತಿತ್ತು. ರೋಹಿಣೀಪತಿ ಪ್ರಭೆಯ ರಾತ್ರಿ ಸಭೆಗೆ ಆಗಮಿಸಿದ್ದ ತಾರೆಗಳೆಲ್ಲಾ ಮಿಂಚುತ್ತಾ ಆಗಸದಲ್ಲಿ ಚಿತ್ರ ವಿಚಿತ್ರ ಆಕೃತಿಗಳನ್ನು ಮೂಡಿಸುತ್ತಿದ್ದವು. ಸೃಷ್ಟಿಕರ್ತನ ಚುಕ್ಕಿಯಾಟಕ್ಕೋ , ರಂಗೋಲಿಗೋ ಅಂಗಳವಾದಂತಿದ್ದವು. ತಂಗಾಳಿಗೆ ಗತ್ತು ಬಂದಂತೆ ಕೊಂಬೆಗಳನ್ನು … Read more
ಆತ್ಮಹತ್ಯೆ; ಒಂದು ಚಿಂತನೆ: ದಿವ್ಯಾ ಆಂಜನಪ್ಪ
ಇತ್ತೀಚೆಗೆ ನಾಲ್ಕನೇ ತರಗತಿಯಲ್ಲಿ ವಿಜ್ಞಾನ ಪಾಠವೊಂದರ ಕುರಿತು ಚರ್ಚಿಸುತ್ತಿದ್ದ ಸಮಯ. ಪಾಠದ ಹೆಸರು "ಮಣ್ಣು". ಮಕ್ಕಳಿಗೆ ಮಣ್ಣು ಹೇಗಾಯಿತು? ಮಣ್ಣಿನ ರಚನೆ, ಮಣ್ಣಿನ ಉಪಯೋಗಗಳನ್ನು ಹೇಳುವಾಗ, ಇಂಧನವಾದ ಕಲ್ಲಿದ್ದಲು ಕುರಿತು ಚರ್ಚೆ ಬೆಳೆಯಿತು. ಹಾಗಾಗಿ ಪಾಠಕ್ಕೆ ಹೊರತಾಗಿದ್ದು ಹೆಚ್ಚಿನ ಮಾಹಿತಿಯೆಂದೇ ತಿಳಿದು ವಿಷಯಾಂತರವಾದರೂ ಸರಿಯೇ ಎಂದು ಅದರ ಬಗ್ಗೆಯೂ ಮಾಹಿತಿ ನೀಡುತ್ತಿದ್ದೆ. ಈಗಿನ ಶಿಕ್ಷಣ ಕ್ರಮದಲ್ಲಿ ವಿಷಯಾಂತರ ಎಂಬ ಮಾತಿಲ್ಲ. ಕನ್ನಡ ಪಾಠದಲ್ಲಿ ವಿಜ್ಞಾನದ ವಿಷಯಾಂಶ ಬಂದರೂ ಅದನ್ನು ಭೋದಿಸಿಯೇ ಮುಂದೆ ನಡೆಯಬೇಕು. ಮಕ್ಕಳಲ್ಲಿ ಯಾವುದೊಂದು ಪ್ರಶ್ನೆಯೂ … Read more
ಸ್ನೇಹ ಭಾಂದವ್ಯ (ಭಾಗ 2): ನಾಗರತ್ನಾ ಗೋವಿಂದನ್ನವರ
(ಇಲ್ಲಿಯವರೆಗೆ…) ಮರುದಿನ ಎಂದಿನಂತೆಯೆ ಗೆಳತಿಯರಿಬ್ಬರು ಅಂದುಕೊಂಡಂತೆಯೇ ಅದೇ ಮಾವಿನ ಮರದ ಕೆಳಗೆ ಭೇಟಿಯಾದರು. ಆಗ ರೇಖಾಳೆ ಮಾತಿಗಾರಂಭಿಸಿದಳು. ಏ ಸುಧಾ ಈಗಾಗಲೇ ಕಾಲೇಜ್ ಅಡ್ಮೀಷನ್ ಶುರು ಆಗಿ ನಾಲ್ಕೈದು ದಿನಗಳಾಗಿವೆ. ಇನ್ನು ಹತ್ತು ದಿನದೊಳಗಾಗಿ ನಾವು ಪಟ್ಟಣಕ್ಕೆ ಹೋಗಿ ಅಡ್ಮೀಷನ್ ಮಾಡಿಸಿ ಬರಬೇಕು. ಇಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಹೌದು ಕಣೆ ರೇಖಾ ಆದಷ್ಟು ಬೇಗ ಈ ಕೆಲಸ ಮಾಡಬೇಕು. ಇಲ್ಲದಿದ್ದರೆ ನಾವು ಕಾಲೇಜನ್ನ ಮರೆತು ಮನೆಯಲ್ಲಿದ್ದ ಬಿಡಬೇಕಾಗುತ್ತದೆ ಎಂದಳು. ಈಗೇನು ಮಾಡೋದು ಅಂತ ಮೊದಲು ಹೇಳು ಸುಧಾ … Read more
ಕಾಕ ಸ್ಪರ್ಷ: ಸುಮನ್ ದೇಸಾಯಿ ಅಂಕಣ
ಮುಂಝಾನಿಂದ ಯಾಕೊ ಮನಸ್ಸು ಭಾಳ ತಳಮಳಸ್ಲಿಕತ್ತಿತ್ತು. ಇವತ್ತ ಆಂವಾ ಬರಾಂವ ಇದ್ದಾ. ಯಥಾಪ್ರಕಾರ ಕೈ ತಮ್ಮ ಕೆಲಸಾ ಮಾಡಲಿಕತ್ತಿದ್ವು. ಆದ್ರ ಮನಸ್ಸು ಮಾತ್ರಾ ಆಂವನ್ನ ನೆನಿಕೊಳ್ಳಿಕತ್ತಿತ್ತು. ಆಂವಗ ಇಷ್ಟ ಆಗೊ ಅಡಿಗಿ ಎಲ್ಲಾ ಮಾಡಿದ್ದೆ. ಆಂವಗ ನನ್ನ ಕೈ ಅಡಿಗಿ ಅಂದ್ರ ಭಾಳ ಸೇರತದ. ಊರಾಗ ಇದ್ದಾಗ ಎಷ್ಟ ಹೊತ್ತಾದ್ರು , ಹಸಿವ್ಯಾದ್ರು ಹೊರಗ ಏನು ತಿನ್ನಲಾರದ ಉಪವಾಸ ಮನಿಗೆನ ಊಟಕ್ಕ ಬರತಿದ್ದಾ. ನನ್ನ ಮುಂದ ಕೂಡಿಸಿಕೊಂಡು ನನ್ನ ಜೋಡಿ ಸರಸವಾಡಕೊತ ಊಟಾ ಮಾಡೊದಂದ್ರ ಆಂವಗ ಭಾಳ … Read more
ಕೆಲವು ಚಿಕ್ಕ ಪದ್ಯಗಳು: ಉರ್ಬಾನ್ ಡಿ’ಸೋಜ, ಮೇಗರವಳ್ಳಿ ರಮೇಶ್
ಚುಟುಕ -೧ ಪ್ರೇಮಿಕಾ ನಿನ್ನೆಯವರೆಗೆ ಸಿಹಿ ಮಾತುಗಳನ್ನಾಡದ ನನ್ನ ನಲ್ಲೆ ಇ೦ದಿನಿ೦ದ ಅದನ್ನೇ ಮಾತಾನಾಡುತ್ತಿದ್ದಾಳೆ… ನಿನ್ನೆ ನಮ್ಮ ಮೊದಲ ರಾತ್ರಿ ಅವಳು ಜೇನು ಕುಡಿದಿದ್ದಾಳೆ. ಚುಟುಕ:೨ – ಬುದ್ದಿ ಅವರು ಇವರು ಜಾರಿ ಬಿದ್ದಾಗ ನಕ್ಕವಳು ತಾನು ಬಿದ್ದಾಗ ಅವರು ಇವರು ನಕ್ಕಾಗ ಸಿಡಿಮಿಡಿಗೊ೦ಡಳು. ಚುಟುಕ:೩ – ನಗು ಮಗಳು ನಕ್ಕಾಗ … Read more
ಒಲವ ಒಳಗಣ ಮಥನ: ಸಂತೆಬೆನ್ನೂರು ಫೈಜ್ನಟ್ರಾಜ್
ನಿನ್ನ ಕಣ್ಣ ಕಡಲಲೀ…………… ನನ್ನ ಬಾಳಿದು ಬೆಳಗಲಿ, ಸರಿದು ಹೋಗೋ ಭಾವದಿ ಪ್ರೀತಿ ದೋಣಿ ತೇಲಲಿ……………………. ಇಡೀ ಪದ್ಯದಿ ಇದೊಂದು ಚರಣ ಅಲ್ವೇ ನಿಮ್ಮೆಡೆಗೆ ತಿರುಗುವಂತೆ ಮಾಡಿದ್ದು ನಿಮ್ಮ ವಿಳಾಸ ಪ್ರಕಟವಾಗಿದ್ದ ಸಾಪ್ತಾಹಿಕದಿಂದಲೇ ಪಡೆದು ನಿಮ್ಮ ಈ ಕವಿತೆಗಾಗಿ ಹಂಬಲಿಸಿ ಅಭಿನಂದನೆ ತಿಳಿಸಿದ್ದು. ಕಾಣದ ನಿಮ್ಮ ಕಾಣುವ ಬರಹದ ತನಕ ತಂದು ನಿಲ್ಲಿಸಿದ್ದು ತಿಂಗಳಿಗೆರಡರಂತೆ ನಮ್ಮ-ನಿಮ್ಮ ಪತ್ರ ವಿನಿಮಯ ಭಾವ ಬಂಧುರದ ತನಕ ತಂದು ನಿಲ್ಲಿಸಿದೆ ಕೊನೆಗೆ ಈ ಪತ್ರ ತಾನತೆ ಎಲ್ಲಿ ಒರೆಗೆ ? ನಿಮ್ಮೆಲ್ಲಾ … Read more
ಮೂವರ ಕವಿತೆಗಳು: ಜಾನ್ ಸುಂಟಿಕೊಪ್ಪ, ಉಷಾಲತಾ, ಜೊ. ಸಿ. ಸಿದ್ದಕಟ್ಟೆ
ಬೇಡದ ಜೀವ ಹಸಿದ ಕತ್ತಲು ಲೊಚಗುಟ್ಟುತ್ತದೆ ಹೊಸೆದ ಬಿರುಸು ಬಂಧನಕ್ಕಾಗಿ,.. ಬಿಸಿಯುಸಿರು ಅಸ್ತವ್ಯಸ್ತವಾಗುತ್ತದೆ ಕ್ರೌರ್ಯ ಕಂಡ ಗೋಡೆಗಳಿಗಾಗಿ… ಏದುಸಿರು…ಅಸಹನೆ ಸಾಕ್ಷಿಯಾಗುತ್ತದೆ ನಿಗೂಢ ಮೌನವಾಗಿ…. ಬಗಲಲಿ ಮಲಗಿದ ಮೊದಲ ಕೂಸಿಗೂ ಆಗಲೆ ಮೊಳಕೆಯೊಡೆದ ಮುಗ್ಧ ಪಿಂಡಕ್ಕೂ ಏನು ಅಂತರ,,!? ಉತ್ತರವಿಷ್ಟೇ- ಕೆಲವೊಮ್ಮೆ ತೊಟ್ಟಿಲು ತೂಗುತ್ತದೆ, ಕೆಲವೊಮ್ಮೆ…. ತೊಟ್ಟಿ ತುಂಬುತ್ತದೆ.,… ಮೊಳಕೆಯೊಡೆದ ಪಿಂಡ ಕೆಂಪು ಕೆಂಪಾಗಿ ತೊಟ್ಟಿಕ್ಕುತ್ತದೆ… ಕಾಣದ ಜೀವದ ಮೌನರೋಧನಕೆ ಹೊಸದೊಂದು ನ್ಯಾಪ್ಕಿನ್ ಕೆಂಪಾಗುತ್ತದೆ…. –ಜಾನ್ ಸುಂಟಿಕೊಪ್ಪ. ಕೊನೆ ಎಂದು … Read more
ಕೆಂಗುಲಾಬಿ (ಭಾಗ 16): ಹನುಮಂತ ಹಾಲಿಗೇರಿ
(ಇಲ್ಲಿಯವರೆಗೆ) ಜನನಿಬಿಡ ಮಾರುಕಟ್ಟೆಯಲ್ಲಿ ರಸ್ತೆಯ ಎರಡು ಬದಿಗೆ ಶಾರದೆಗಾಗಿ ಕಣ್ಣು ಹಾಯಿಸುತ್ತಾ ನಡೆದಿದ್ದಾಗ ದೀಪಾಳ ಹಿಂದಿನಿಂದ ದೊಡ್ಡ ಹೊಟ್ಟೆಯ ಮುದಿ ಹೆಂಗಸೊಂದು ಧಾವಿಸಿ ಮುಂದೆ ಬಂದಿತು. ನಾವಿಬ್ಬರು ಒಂದು ಕ್ಷಣ ದಂಗುಗೀಡಾದೆವು. ಸ್ವಲ್ಪ ಹೊತ್ತಿನಲ್ಲಿ ದೀಪಾ ಸಾವರಿಸಿಕೊಂಡು ಆ ಮುದಿ ಮಹಿಳೆಯನ್ನು ಸಮಾಧಾನಿಸಿಕೊಂಡು ಬಾಗಿಲು ಮುಚ್ಚಿದ ಅಂಗಡಿ ಮುಂಗಟ್ಟೆಯ ಹತ್ತಿರಕ್ಕೆ ಕರೆದುಕೊಂಡು ಬಂದಳು. ಮುಂಗಟ್ಟೆ ಮೇಲೆ ಕುಳಿತು ನಿಮಿಷಗಳೇ ಉರುಳಿದ್ದರೂ ಆ ಮುದಿ ಹೆಂಗಸು ಜೋರಾಗಿ ಉಸಿರಾಡುತ್ತಲೆ ಇತ್ತು. ಆಕೆ ತಡಬಡಾಯಿಸುತ್ತಲೇ ಬಯ್ಯಲು ಬಾಯ್ತೆರೆದಳು. … Read more
ಥ್ಯಾಂಕ್ಯೂ ಫಾರ್ ಸ್ಮೋಕಿಂಗ್: ವಾಸುಕಿ ರಾಘವನ್ ಅಂಕಣ
ಜನರನ್ನ ನಗಿಸೋದು ಕಷ್ಟ. ಯಾವುದೋ ಒಂದಷ್ಟು ಜೋಕುಗಳನ್ನ ಹೇಳಿ ಒಂದೈದು ನಿಮಿಷ ನಗಿಸಿಬಿಡಬಹುದು. ಆದರೆ ಎರಡು ಮೂರು ಗಂಟೆಗಳ ಚಿತ್ರದುದ್ದಕ್ಕೂ ನಗಿಸುವುದು ಸುಲಭವಲ್ಲ. ಕಾಮಿಡಿ ಚಿತ್ರಗಳ ಒಂದು ವಿಭಾಗ ಸಟೈರ್ ಅಥವಾ ವಿಡಂಬನೆ. ಒಂದು ಗಂಭೀರವಾದ ವಿಷಯ ತೆಗೆದುಕೊಂಡು, ಎಲ್ಲೂ ಸಿಲ್ಲಿ ಅನ್ನಿಸದಂತೆ, ವ್ಯಂಗ್ಯವನ್ನು ಹದವಾಗಿ ಬೆರೆಸಿ, ಹುಳುಕುಗಳನ್ನು ಎತ್ತಿತೋರಿಸುವ ಕೆಲಸ ಇನ್ನೂ ಕಷ್ಟದ್ದು. ವಿಡಂಬನೆ ಅಂದಾಗ ಹೆಚ್ಚು ಕಂಡುಬರುವುದು ರಾಜಕೀಯ, ಮೂಢನಂಬಿಕೆ, ಸಾಮಾಜಿಕ ಸಮಸ್ಯೆಯ ವಿಷಯಗಳ ಬಗ್ಗೆ. “ಡಾರ್ಕ್ ಕಾಮಿಡಿ” (ಕನ್ನಡದಲ್ಲಿ ಇದಕ್ಕೆ ಸಮಾನವಾದ ಪದ … Read more
ಸಂಸ್ಕೃತಿ: ನೇಮಿನಾಥ ತಪಕೀರೆ
ಪುರಾತನ ಇತಿಹಾಸ, ಅನನ್ಯವಾದ ಭೌಗೋಳಿಕ ರಚನೆ, ವೈವಿಧ್ಯಮಯವಾದ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು, ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆಯ ರಾಷ್ಟ್ರಗಳ ಪ್ರಭಾವಗಳು ಇವೆಲ್ಲ ಒಟ್ಟುಗೂಡೆ ಭಾರತೀಯ ಸಂಸ್ಕೃತಿಯನ್ನು ಅನನ್ಯವಾಗಿಸಿವೆ. ಸಿಂಧು ಕಣಿವೆಯ ನಾಗರಿಕತೆ ಅಥವಾ ಅದಕ್ಕೂ ಪೂರ್ವದಲ್ಲಿಯೇ ಆರಂಭಗೊಂಡ ಭಾರತೀಯ ಭವ್ಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಶಾಧಾರಣ ವಿಕಸನವನ್ನು ಕಂಡಿತು. ಸದನಂತರದಲ್ಲಿ ಬೌದ್ಧ, ಜೈನಧರ್ಮಗಳ ಉನ್ನತಿ ಮತ್ತು ಅವನತಿ, ಮುಸ್ಲಿಂ ಆಳ್ವಿಕೆ, ಯುರೋಪಿಯನ್ನರ ವಸಾಹತು ಆಳ್ವಿಕೆ ಈ ಸಂಸ್ಕೃತಿಯ ವಿಕಸನಕ್ಕೆ ಇನ್ನಷ್ಟು ಇಂಬು ನೀಡಿತು. ವೈವಿಧ್ಯಮಯವಾಗಿಸಿತು. … Read more
ಸ್ನೇಹ ಭಾಂದವ್ಯ (ಭಾಗ 1): ನಾಗರತ್ನಾ ಗೋವಿಂದನ್ನವರ
ಶಿವಮೊಗ್ಗ ಜಿಲ್ಲೆಯಲ್ಲಿರುವ ಅಗಸವಳ್ಳಿ ಇದೊಂದು ಪ್ರಕೃತಿಯ ಮಧ್ಯ ಇರುವ ಸುಂದರವಾದ ಹಳ್ಳಿ. ಈ ಹಳ್ಳಿಯಲ್ಲಿ ಮಧ್ಯಮ ಕುಟುಂಬದಲ್ಲಿ ಜನಿಸಿರುವ ಇಬ್ಬರು ಹುಡುಗಿಯರ ಕತೆ ಇದು. ಮೊಬೈಲ್ ಬಳಕೆ ಇನ್ನು ಆರಂಭವಾಗಿರದ ಸಮಯವದು. ಹಾಳಾದ ಕರೆಂಟು ಯಾವಾಗಂದ್ರೆ ಆವಾಗ ಕೈಕೊಟ್ಟು ಬಿಡುತ್ತದೆ ಎಂದು ಅಡುಗೆ ಮನೆಯಲ್ಲಿದ್ದ ರಾಧಮ್ಮ ಗೊಣಗುತ್ತಿದ್ದಳು. ಹಾಲಿನಲ್ಲಿ ಕುಳಿತಿದ್ದ ಶಿವಾನಂದನಿಗೆ ಇದು ಕಿರಿಕಿರಿ ಎನಿಸಿತು. ಏನೇ ನಿನ್ನದು ಬೇಗ ದೀಪಾ ಹಚ್ಚಬಾರದೇನೆ ಎಂದು ಹೆಂಡತಿಗೆ ಹೇಳಿದ. … Read more
ವನ್ಯಾಪಘಾತಗಳು ಮತ್ತು ಪರಿಹಾರ: ಅಖಿಲೇಶ್ ಚಿಪ್ಪಳಿ ಅಂಕಣ
ಮೊನ್ನೆ ಕೇರಳದ ಮುಖ್ಯಮಂತ್ರಿ ಚಾಂಡಿ ಬಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಒಂದು ಮನವಿಯನ್ನು ಸಲ್ಲಿಸಿದರು. ಕರ್ನಾಟಕ-ಕೇರಳದ ಮಧ್ಯೆ ಸಂರಕ್ಷಿತ ವನ್ಯಪ್ರದೇಶದಲ್ಲಿ ಹಾದು ಹೋಗುವ ಹೈವೇಯಲ್ಲಿ ರಾತ್ರಿ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕು ಎಂಬುದು ಮನವಿಯ ಸಾರಾಂಶ. ಕರ್ನಾಟಕದ ಮುಖ್ಯಮಂತ್ರಿಗಳು ಸಧ್ಯಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕರ್ನಾಟಕದ ಮುಖ್ಯಮಂತ್ರಿಗಳ ಈ ನಿಲುವು ಸಂತೋಷದ ವಿಚಾರವೇ ಸೈ. ಜನಸಂಖ್ಯೆ ಬೆಳೆದ ಹಾಗೆ ಪಟ್ಟಣಗಳು ನಗರಗಳಾಗುತ್ತವೆ. ಹಳ್ಳಿಗಳು ಪೇಟೆಯ ಸ್ವರೂಪ … Read more
ತಾನೊಂದು ಬಗೆದರೆ: ಮಮತಾ ಕೀಲಾರ್
ರಾಜೇಶನದು ಸುಂದರ ದಾಂಪತ್ಯ.ಮನ ಮೆಚಿದ್ದ ಮಡದಿ ಸ್ವಾತಿ. ಒಳ್ಳೆಯ ಉದ್ಯೋಗದಿಂದಾಗಿ ಕೈತುಂಬಾ ಸಂಬಳ, ಕಾರು ಬಂಗಲೆ ಎಲ್ಲ ಇದ್ದ ಶ್ರೀಮಂತ ಜೀವನ. ಕೊರತೆಯೊಂದೆ ಮದುವೆಯಾಗಿ ಹತ್ತು ವರುಷ ಕಳೆದರೂ ಅವರ ಹೆಸರು ಹೇಳೋ ವಂಶದ ಕುಡಿ ಮೂಡದಿರುವದು. ಸ್ವಾತಿಗಾದರೋ ಮಕ್ಕಳುಎಂದರೆ ಪಂಚಪ್ರಾಣ. ದಿನಾಲೂ ಸಾಯಂಕಾಲ ತಮ್ಮ ಮನೆಯಿದಿರು ಇರುವ ಉದ್ಯಾನದಲ್ಲಿ ಆಡುವ ಮಕ್ಕಳನ್ನು ಕಿಟಕಿಯಿಂದ ಗಂಟೆಗಟ್ಟಲೇ ನೋಡುತ್ತಾ ಮೈಮರೆಯುತ್ತಿದ್ದಳು. ಆದರೂ ರಾಜೇಶನ ಮನಸ್ಸಿಗೆ ಬೇಸರವಾಗಬಾರದೆಂದು ತನ್ನ ನೋವನ್ನು ಅಡಗಿಸಿ ಸತ್ತ ನಗುವಿಗೆ ಜೀವತುಂಬೊ ಪ್ರಯತ್ನ ಮಾಡುತ್ತಿದ್ದಳು. ಮಡದಿಯನ್ನು … Read more
ಘಾತ: ಬೆಳ್ಳಾಲ ಗೋಪಿನಾಥ ರಾವ್
ತಲೆ ಎತ್ತಿ ನೋಡಿದರು ಮೇಜರ್ ಮತ್ತೊಮ್ಮೆ ಸರಿ ಪಡಿಸಿಕೊಳ್ಳುತ್ತಾ ಕನ್ನಡಕದೊಳಗಿಂದ ಮಿಲಿಂಡ್ ನನ್ನು. ಏನ್ ಸಾರ್ ಅರ್ಜೆಂಟ್ ಆಗಿ ಬರ ಹೇಳಿದಿರಿ, ವಿಷಯ ಸೀರಿಯಸ್ ಎಂತ ಗೊತ್ತಾಯ್ತು. ನಿನ್ನೆ ಒಂದು ಪೈಲ್ ಕಳಿಸಿದ್ದೆ ಸಿಕ್ಕಿತಾ, "ಹೌದು ಮಂಜು ಕೊಟ್ಟ ಸಂಜೆ, ಅದನ್ನು ಓದಿದೆ, . ಅದು ನಿಮ್ಮ ಕಾಲೊನಿಯ ಮುನ್ನೂರು ಭವನಗಳ ಸಮುಚ್ಚಯ ( ಫ್ಲಾಟ್ ಗಳ) ವಾರ್ಷಿಕ ದುರಸ್ತಿ ಮತ್ತು ಸುಣ್ಣ ಬಣ್ಣಗಳ ಕಾರ್ಯಗಳ ಹತ್ತು ಲಕ್ಷದ ಕಾಂಟ್ರಾಕ್ಟ್ ಎಗ್ರಿಮೆಂಟ್ … Read more
ಮೂವರ ಕವಿತೆಗಳು: ಮಂಜುನಾಥ್ ಪಿ., ವಿಶ್ವನಾಥ್ ಎಂ., ಅನುಪಮಾ ಎಸ್. ಗೌಡ.
ಹರಿಯುವ ನದಿ ಅದೆಲ್ಲೋ ಉಗಮ ಮೈದುಂಬಿಕೊಳ್ಳುತ್ತ ಕೈ-ಕಾಲು ಮೂಡಿಸಿಕೊಳ್ಳುತ್ತ ಸಾಗುವ ದಾರಿಯನ್ನು ಮಾಡಿಕೊಳ್ಳುತ್ತ ಸುಗಮ ಹಠಕ್ಕೆ ಬಿದ್ದು ಅನುಸಂಧಾನವೊಂದನ್ನು ಉಳಿಸಿಕೊಳ್ಳುವಂತೆ…. ಸವೆಸುವ ದಾರಿ ಶಿಶುವಿನ ಹಾಡೆ? ಸಹಿಸಬೇಕು ಮಧ್ಯೆ ಮತ್ತೆ ಹಾಕಿದರೆ ಕಟ್ಟೆಯ ತಡೆಗೋಡೆ? ಆದರೂ ಹರಿಯಬೇಕೆನ್ನುವ ಧಾವಂತ ನಿರಂತರ ಒಳಗೊಳಗೆ ಅದುವೆ ಆದ್ಯಂತ…. ಕಟ್ಟೆಯಲ್ಲಾದರೂ ಎಷ್ಟೆಂದು ಇರಬಹುದು ಒಂದಿಲ್ಲ ಒಂದು ದಿನ ತುಂಬಿ ಧುಮ್ಮಿಕ್ಕಲೇಬೇಕು ನಿಧಾನಕ್ಕಾದರೂ ಗೋಡೆ ಒಡೆದಾದರೂ… ಸತ್ಯ ಯಾವತ್ತೂ ಹೀಗೆಯಲ್ಲವೆ?! ’ಸ್ಥಾವರ’ಕ್ಕೆ … Read more
ಕೆಂಗುಲಾಬಿ (ಭಾಗ 15): ಹನುಮಂತ ಹಾಲಿಗೇರಿ
(ಇಲ್ಲಿಯವರೆಗೆ) ಇಳಿಸಂಜೆಯ ಹೊತ್ತು ನಾನು ಮತ್ತು ದೀಪಾ ಮೆಜೆಸ್ಟಿಕ್ ಹತ್ತಿರಕ್ಕೆ ಬಂದಿದ್ದೆವು. ಶಾರಿ ಇಲ್ಲಾದರೂ ಸಿಗಬಹುದೆ ಎಂಬ ದೂರದ ನಿರೀಕ್ಷೆಯೊಂದಿಗೆ. ಅಲ್ಲೆಲ್ಲ ಅಸಂಖ್ಯಾತ ದಂಧೆಯ ಮಹಿಳೆಯರು. ಯಾರೋ ದೀಪಾಳ ಹೆಸರು ಹಿಡಿದು ಕೂಗಿದಂತಾಯಿತು. ಹಿಂದೆ ತಿರುಗಿ ನೋಡಿದರೆ ಬಾಯ್ತುಂಬ ನಗುತ್ತಾ ಒಬ್ಬಾಕೆ ಹತ್ತಿರ ಬಂದು ದೀಪಾಳ ಮುಂದೆ ಬಂದು ನಿಂತಳು. ದೀಪಾ ಕೂಡ ಅವಳನ್ನು ಮೀರಿಸುವಂತೆ ನಕ್ಕು ಆತ್ಮೀಯತೆಯಿಂದ ಅವಳ ಕೈ ಹಿಡಿದುಕೊಂಡಳು. ‘ಇವಳು ಮಂಜುಳಾ ಅಂತ. ನಮ್ಮ ಸಂಸ್ಥೆಯಿಂದ ಆರೋಗ್ಯ ಕುರಿತು ತರಬೇತಿ … Read more
ಕಿಂಗ್ ಆಫ್ ಕಾಮಿಡಿ: ವಾಸುಕಿ ರಾಘವನ್ ಅಂಕಣ
ಅದ್ಭುತ ನಟರೇ ಹಂಗೆ. ತುಂಬಾ ಸಾಮಾನ್ಯವಾದ ಸಿನಿಮಾದಲ್ಲಿ ಕೂಡ ತಮ್ಮ ಛಾಪನ್ನು ಮೂಡಿಸುತ್ತಾರೆ. ಸಾಧಾರಣತೆಯ ಮಧ್ಯೆಯೂ ತಮ್ಮ ಉತ್ಕೃಷ್ಟತೆಯಿಂದ ಎದ್ದು ಕಾಣುತ್ತಾರೆ. ರಾಬರ್ಟ್ ಡಿನಿರೋ ಅಂತಹ ಒಬ್ಬ ಅಪ್ರತಿಮ ಕಲಾವಿದ. “ಕಿಂಗ್ ಆಫ್ ಕಾಮಿಡಿ” ನನ್ನ ಪ್ರಕಾರ ಹೇಳಿಕೊಳ್ಳುವಂತಹ ಚಿತ್ರ ಅಲ್ಲದಿದ್ದರೂ, ಕೇವಲ ಡಿನಿರೋ ನಟನೆಯನ್ನು ಸವಿಯಲು ನಾನು ಎಷ್ಟೋ ಬಾರಿ ಈ ಚಿತ್ರವನ್ನು ನೋಡಿದ್ದೀನಿ. 1983ರಲ್ಲಿ ಬಿಡುಗಡೆಯಾದ ಮಾರ್ಟಿನ್ ಸ್ಕಾರ್ಸೆಸೆ ನಿರ್ದೇಶನದ ಚಿತ್ರ “ಕಿಂಗ್ ಆಫ್ ಕಾಮಿಡಿ”. ಅಭಿಮಾನಿಗಳ ಮನಸ್ಥಿತಿ, ಅವರ ಹುಚ್ಚು, ಅವರ ಅತಿರೇಕಗಳ … Read more
ನೆನಪಿನಾಳದಿಂದ (ವಿಷ್ಣು ಸಂದರ್ಶನ): ಗುಂಡೇನಹಟ್ಟಿ ಮಧುಕರ್ ಕುಲಕರ್ಣಿ
ವಿಷ್ಣುವರ್ಧನ ಅವರೊಂದಿಗೆ ನಡೆಸಿದ ಸಂದರ್ಶನ ಸುಮಾರು ಹತ್ತು ವರ್ಷಗಳ ಹಿಂದಿನದ್ದು. ನಾನು ಅವರೊಂದಿಗೆ ಮಾತನಾಡಬೇಕೆಂದು ಕುಳಿತಿದ್ದಾಗ ಅವರು ಸಂಪೂರ್ಣವಾಗಿ ಆಧ್ಯತ್ಮಿಕದತ್ತ ವಾಲಿದ್ದು ಅವರ ಮಾತುಗಳಿಂದ ಗೊತ್ತಾಗುತ್ತಿತ್ತು. ಪ್ರತಿಯೊಂದು ವಿಷಯದ ಬಗ್ಗೆ ಹೇಳುವಾಗಲೂ ಪರಮಾತ್ಮನ ಆಶಿರ್ವಾದ ಇದ್ದರೆ ಆಗುತ್ತದೆ. ಎಲ್ಲವೂ ಅವನದ್ದು ನನ್ನೇನೂ ಇಲ್ಲ ಎಂದು ಆಕಾಶದೆಡೆ ಕೈ ಮಾಡಿ ತೋರಿಸುತ್ತಿದ್ದರು. ಸರಳಜೀವಿ ಸ್ನೇಹ ಜೀವಿ ಎಂಬುದು ಅವರೊಂದಿಗೆ ನಾನು ಮಾತನಾಡಿದ ಮಾತುಕತೆಯಿಂದಾಗಿ ನನ್ನ ಮನಸ್ಸಿಗೆನ್ನಿಸಿತು. ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಬಂದಿದ್ದ ಕ್ಯಾಮರಾಮನ್ ನಿಜವಾಗಿಯೂ ಕ್ಯಾಮರಾಮನ್ ಆಗಿರಲಿಲ್ಲ. ಯಾವುದೋ … Read more
ದಾಸಶ್ರೇಷ್ಠ ಪುರಂದರದಾಸರು: ರಶ್ಮಿ ಕುಲಕರ್ಣಿ
ದಾಸ ಸಾಹಿತ್ಯವು ಕನ್ನಡ ಸಾಹಿತ್ಯದಲ್ಲಿ ತನ್ನದೇ ಆದ ಸ್ಥಾನಮಾನವನ್ನು ಹೊಂದಿರುವುದು 12ನೇ ಶತಮಾನದಿಂದ 19ನೇ ಶತಮಾನದವರೆಗೆ ಅನೇಕ ದಾಸರು ಪದಗಳನ್ನು ರಚಿಸಿದ್ದಾರೆ. ವಿಜಯದಾಸರು,ಗೋಪಾಲದಾಸರು,ಜಗನ್ನಾಥದಾಸರು,ಕನಕದಾಸರು,ಹೀಗೆ ಇನ್ನೂ ಅನೇಕ ದಾಸರು ದೇವರನ್ನು ಸ್ತುತಿಸುತ್ತ ಕೊಂಡಾಡುತ್ತ ಹಲವಾರು ಪದಗಳನ್ನು ರಚಿಸಿದ್ದಾರೆ. ಇವರಲ್ಲಿ ಪುರಂದರದಾಸರು ಶ್ರೇಷ್ಠರೆನಿಸಿಕೊಂಡಿದ್ದಾರೆ. "ದಾಸರೆಂದರೆ ಪುರಂದರದಾಸರಯ್ಯಾ…….."ಎಂದು ಸ್ವತಃ ಗುರು ವ್ಯಾಸರಾಯರಿಂದಲೇ ಕೊಡಾಡಿಸಿಕೊಂಡ ಹಿರಿಮೆ ಇವರದು. ದೇವತೆಗಳಲ್ಲಿ ಸಂಗೀತ ವಿಶಾರದ ನಾರದ ಮಹರ್ಷಿಗಳ ಅವತಾರವೇ ಪುರಂದರದಾಸರೆಂಬ ಪ್ರತೀತಿಯೂ ಇದೆ. ಶಾಲಿವಾಹನ ಶೆಕೆ 1858 ರಲ್ಲಿ ಮಹಾರಾಷ್ಟ್ರದ ಪಂಡರಪುರದ ಹತ್ತಿರದ ಗ್ರಾಮವೊಂದರಲ್ಲಿ ಬ್ರಾಹ್ಮಣ … Read more
ಅನಿರೀಕ್ಷಿತ: ಪ್ರಶಸ್ತಿ ಅಂಕಣ
ನಗರದ ದೊಡ್ಡ ಆಸ್ಪತ್ರೆ ಎಂದೇ ಖ್ಯಾತ ಜಗರಾಂ ಆಸ್ಪತ್ರೆಯ ಡಾ|| ಜಗರಾಂಗೆ ರಾತ್ರಿ ನಿದ್ದೆಯಲ್ಲೆಲ್ಲಾ ಏನೋ ಕಸಿವಿಸಿ. ನಿದ್ದೆಯಲ್ಲೆಲ್ಲಾ ಮೈಮೇಲೆ ಬಿದ್ದಂತೆ ಬಂದು ಕಾಡಿದ ದುಸ್ವಪ್ನಗಳಿಂದ ನಾಳೆ ಏನೋ ಗಂಡಾಂತರ ಕಾದಿದೆ ಎಂದೇ ಅಂಜಿಕೆ ಶುರುವಾಯ್ತು. Dreams are modified versions of memory ಎನ್ನುತ್ತಾರೆ. ಅಂದರೆ ನಾವು ನೋಡಿದ್ದು, ಯೋಚಿಸಿದ್ದೇ ರೂಪಾಂತರವಾಗಿ ಕನಸಾಗುತ್ತೆ ಅಂತ.. ಆದರೆ ತಾವು ನೋಡದ್ದು ಯಾಕೆ ಕನಸಾಗ್ತಿದೆ ಅಂತ ನಿದ್ದೆ ಬಾರದೇ ಎದ್ದು ಕುಳಿತ ಜಗರಾಂ ಯೋಚಿಸುತ್ತಾ ಕುಳಿತು ,ಕುಳಿತಲ್ಲಿಯೇ ತೂಕಡಿಸಿ … Read more
ವ್ಯವಸಾಯ ಎಂದರೆ: ಚೇತನ್ ಹೊನ್ನವಿಲೆ
ಕುಂಟೆಯ ಮೇಲೆ ಕೂತು, ಎತ್ತಿನ ಬಾಲ ಮುರಿದು, ' ಹೋಯ್ ' ಎಂದು ಅಬ್ಬರಿಸುವಾಗ, ಕುಂಟೆಯ ಅಲುಗಿಗೆ ತಗಲುವ ಮಣ್ಣಿನ ಎಂಟೆಗಳನು ಒಡೆದು ಪುಡಿ ಮಾಡುತ್ತಾ ಓಟ ಕೀಳುವ..' ಎತ್ತುಗಳ ಸ್ಟೇರಿಂಗು ಹಿಡಿದರೆ… ಅದೊಂತರ ರೋಲರ್ ಕೋಸ್ಟರ್ ರೈಡಿನ ಅನುಭವ. ದೂರದ ಊರಿನಲ್ಲಿ ಆದ ಬಸ್ಸಿನ ಹಾರನ್ನು ಕೇಳಿ, ಊಟದ ನೆನಪಾಗಿ, ಬಾಳೆಎಲೆ-ಅಡಿಕೆಆಳೆ ಕುಯ್ದು, ಸಣ್ಣಗೆ ಹರಿಯುವ ಕಾಲುವೆಯ ಪಕ್ಕದಲ್ಲಿಯೇ ಕುಳಿತು, ಸಾರು ಚೆಲ್ಲಿರುವ ಡಬ್ಬಿಯನ್ನು ಉಗುರಿನ ಕೈಯಲ್ಲಿ ತೆಗೆದು, ಒಂದಕ್ಕೊಂದು ಅಂಟಿಕೊಂಡು ಚಪ್ಪಟೆಯಮ್ತಾಗಿರುವ ಮುದ್ದೆಯನ ಬಿಡಿಸಿ … Read more
ಶೀಗೀ ಹುಣ್ಣಿಮಿ ಮುಂದಾ | ಸೋಗಿನಾ ಚಂದ್ರಮ: ಸುಮನ್ ದೇಸಾಯಿ ಅಂಕಣ
ನಮ್ಮ ಪಾರಂಪರಿಕ ಪಧ್ಧತಿಗೊಳು ಮರಿಯಾಗಿ ಹೋಗಲಿಕತ್ತ ಈ ದಿನಮಾನಗಳೊಳಗ ಎಲ್ಲೋ ಒಂದ ಕಡೆ ಮಿಣುಕ ಮಿಣುಕಾಗಿ ಕಾಣಸಿಗತಾವ ಅಂದ್ರ ಅದು ಹಳ್ಳಿಗಳೊಳಗ ಮಾತ್ರ. ನಮ್ಮ ಉತ್ತರ ಕರ್ನಾಟಕದ ಹಳ್ಳಿಗೊಳೊಳಗ ಇಂಥಾ ಭಾಳಷ್ಟು ಆಚರಣೆಗಳವ. ನೆರೆಹೊರೆಯವರು ಕೂಡಿ ಭಾಳ ಸಂತೋಷದಿಂದ ಆಚರಿಸ್ತಾರ. ವಿಶೇಷತಃ ಹೆಣ್ಣು ಮಕ್ಕಳು ಆಚರಿಸೊ ಪಧ್ಧತಿಗಳೆ ಭಾಳ ಇರತಾವ. ಶಹರದೊಳಗಾದ್ರ ಹೆಣ್ಣು ಮಕ್ಕಳಿಗೆ, ಓದು, ಕಲೆ, ನೌಕರಿ, ಮಹಿಳಾ ಮಂಡಳ, ಸಮಾಜಸೇವೆ, ರಾಜಕೀಯ ಅಂತೆಲ್ಲಾ ತಮ್ಮನ್ನ ತಾವು ತೊಡಗಿಸಿಕೊಂಡಿರತಾರ. ಇನ್ನ ಮನೊರಂಜನೆಗೆ ಅಂತ ಸಿನೇಮಾ, … Read more
ದೀಪ..!!: ಸಚಿನ್ ಎಂ. ಆರ್.
ದೀಪ..!! ಕತ್ತಲೆಯ ಬಾಳಲ್ಲಿ ನೀನಾಗುವೆಯಾ ದೀಪ…? ಅರಸುತಿದೆ ಮನವು ಮುಗ್ಧತೆಯ ಪಾಪಾ.. ಹಳೆಯ ನೋವೆಲ್ಲವೂ ಘನಘೋರ ಶಾಪ.. ಬೇಡ ನನಗಾವುದೇ ಅನುಕಂಪದ ತಾಪ.. ದೀಪದ ಬುಡದಲ್ಲಿ ಕತ್ತಲೆ… ಕತ್ತಲೆಯ ಮೇಲೊಂದು ದೀಪ… ನನ್ನ ಬಾಳಿನ ಕತ್ತಲೆಗೆ ನೀನಾಗುವೆಯಾ ದೀಪ.. ನಂದದಾ ದೀಪ.. ಹುಡುಕುತಿದೆ ಮನವು ಬೆಳಕು ಕರೆದ ಎಡೆಗೆ.. ಕಿಡಿಗೇಡಿ ಬುದ್ಧಿಗೆ, ನನಬಾಳು ಒಡೆದ ಗಡಿಗೆ… ದುಡುಕಿದ ಮನಕೆ ಬೇಕೊಂದು ಭಾವ.. ಮಡಿದ ಮನಸಿಗೆ ಕೊಡುವೆಯಾ ಜೀವ…!! ಹಾಳಾದ ಮನಸು ಈ ಲೆವೆಲ್ಗೆ ಕವನ ಗೀಚ್ಕೊಂಡು, ಬಡಬಡಾಯಿಸಿಕೊಂಡು … Read more