ಒಂದ್ ರೂಪಾಯ್ ಕೊಡವ್ವ ಸೇಂದಿ ಕುಡಿಯಾಕೆ: ಡಾ. ಗವಿ ಸ್ವಾಮಿ

  ನಾನು ಕಂಡ ಕೆಲವು ವ್ಯಕ್ತಿಗಳ ಬಗ್ಗೆ ಬರೆಯಬೇಕೆನಿಸುತ್ತಿದೆ. ನನಗೆ ಇಂಥವರೇ ನೆನಪಿನಲ್ಲುಳಿಯುತ್ತಾರೆ. ಇವರನ್ನು ನೆನೆವಾಗ ನನ್ನ ನೆಚ್ಚಿನ ಲೇಖಕ ಆಂಟನ್ ಚೆಕೊವ್ ನೆನಪಾಗುತ್ತಾನೆ. ಆತ ಮಾತೃ ಹೃದಯದ ಬರಹಗಾರ.ತನ್ನ ಪಾತ್ರಗಳನ್ನು ತಾಯಿಯಂತೆ ಮುದ್ದು ಮಾಡುತ್ತಾನೆ. ಚೆಕೊವ್ ಬಳ್ಳಿಯಲ್ಲಿ ನಳನಳಿಸುತ್ತಿರುವ ಕುಸುಮಗಳನ್ನು ಮುಟ್ಟುವುದಿಲ್ಲ. ನೆಲದ ಮೇಲೆ ಬಿದ್ದಿರುವ, ದಾರಿಹೋಕರ ಪಾದಗಳಿಗೆ ಸಿಲುಕಿ ನಲುಗುತ್ತಿರುವ ಹೂಗಳನ್ನು ಆಯ್ದು ಅಪ್ಪಿಕೊಳ್ಳುತ್ತಾನೆ . ಕ್ಷಮಿಸಿ, ಚೆಕೊವ್ ನ ನೆನಪಾದಗಲೆಲ್ಲಾ I tend to get carried away.   ನಾನು ಬರೆಯಬೇಕೆಂದಿರುವವರ … Read more

ಮೆರವಣಿಗೆ: ವೀರೇಂದ್ರ ರಾವಿಹಾಳ್

  ಹಿರಿಗೌಡರ ಮಗನ ಮದುವೆಯ ಮೆರವಣಿಗೆಯು ಅತಿ ವೈಭವದಿಂದ ಸಾಗಿ ಹೊರಟಿತ್ತು. ಹೂವಿನಿಂದ ಅಲಂಕೃತವಾದ ರಥದಲ್ಲಿ ನವದಂಪತಿಗಳು ಯುವರಾಜ-ಯುವರಾಣಿಯರಂತೆ ಕಂಗೊಳಿಸುತ್ತಿದ್ದರು. ರಥದ ಮುಂದೆ ಕಿಕ್ಕಿರಿದ ಭಾರಿ ಜನಸಮೂಹ… ಹಿರಿಗೌಡರ ಸಂಬಂಧಿಗಳು, ಗೆಳೆಯರು, ಪುರಜನರು… ಹೀಗೆ ನಭದಲ್ಲಿ ತಾರೆಗಳ ದಿಬ್ಬಣವೇ ಹೊರಟಂತ್ತಿತ್ತು. ಎಡ-ಬಲದ ಉದ್ದಕ್ಕೂ ದೀಪಾಲಂಕೃತ ಸಾಲುಗಳು ಹಿರಿಗೌಡರ ಮಗನ ಮದುವೆಯ ವೈಭವವನ್ನು ಸಾರಿ ಹೇಳುತ್ತಿದ್ದವು. ಮೆರವಣಿಗೆಯ ಮುಂಚೂಣಿಯಲ್ಲಿ ಬೆಂಗಳೂರು ಬ್ಯಾಂಡ್‌ನ ಸಿನಿಮಾ ಹಾಡು ಭರ್ಜರಿಯಾಗಿ ಸಾಗಿತ್ತು. ಇಡೀ ಊರಿಗೆ ಇದೊಂದು ಉತ್ಸವವೆನಿಸಿತ್ತು. ಕೆಲವು ಜನ ಇದನ್ನೆಲ್ಲಾ ನೋಡಿದ್ರೆ … Read more

ನಂ ಸಾಗರ ಜಾತ್ರೆ:ಪ್ರಶಸ್ತಿ ಬರೆವ ಅಂಕಣ

  ನಮ್ಮುರು ಸಾಗರ. ಇಲ್ಲಿ ಪ್ರತೀ ವರ್ಷ ನಡೆಯೋ ಗಣಪತಿ ಜಾತ್ರೆ ಇಲ್ಲಿನ ವಿಶೇಷ. "ಶ್ರೀ ಮಹಾಗಣಪತಿ ಮಹಾಸ್ಯಂದನ ರಥೋತ್ಸವ" ಅಂತ ಅದರ ಪೂರ್ಣ ಹೆಸರು. ಹೆಸರಲ್ಲಿ ಮಾತ್ರ "ಮಹಾ" ಇದೆ, ಇದೇನ್ ಮಹಾ ಅಂತಂದ್ಕೊಳ್ಬೇಡಿ. ಒಂದು ವಾರಕ್ಕಿಂತಲೂ ಹೆಚ್ಚು ನಡೆಯುವ ಈ ಜಾತ್ರೆ ಸಾಗರಿಗರ ಪಾಲಿಗೆ ಒಂದು ದೊಡ್ಡ ಹಬ್ಬದಂತೆಯೇ . ಯುಗಾದಿಯಾಗಿ ನಾಲ್ಕು ದಿನಕ್ಕೆ ಶುರುವಾಗೋ ಈ ಜಾತ್ರೆಗೆ ಯುಗಾದಿಗೆ ಮನೆಗೆ ಬಂದ ಮಕ್ಕಳು, ಅದಾದ ನಂತರ ಬರೋ ಶನಿವಾರವೋ, ಭಾನುವಾರವೋ ಸೇರೋ ದೂರದೂರಿನ … Read more

ಮೂವರ ಕವಿತೆಗಳು:ಸಚಿನ್ ನಾಯ್ಕ್, ಮಮತಾ ಕೀಲಾರ್, ಸಂದೀಪ್ ಫಡ್ಕೆ

  ಮುಸ್ಸಂಜೆಯ ಮರುಕ ಉಸಿರಲ್ಲಿನ ಹಸಿವು ನೀಗಿಸಲಾಗದು ಜೀವ ಜೈತ್ರ ಯಾತ್ರೆ ಮುಗಿಯುವ ತನಕ. ಆದರೆ, ಇಂದು-ನಿನ್ನೆಗಳು ತೋರಿದ ಅಸಹನೆಗೆ ಅಂಜಿ, ನಾಳೆಯೆನ್ನುವ ಕನಸು ಮುರಿದು ಬಿದ್ದಿದೆ. ಇಟ್ಟ ದಿಟ್ಟ ಹೆಜ್ಜೆಗಳೇ ಸಮೀಕರಿಸುತ್ತಿವೆ ರತ್ನಗಂಬಳಿಯ ರಹದಾರಿ, ನಾ ಬಲ್ಲದ ನಾಡಿಗೆ ! ಸೋತು ಸುಣ್ಣವಾದ ತನು-ಮನಗಳ ವಿನಂತಿಗೆ ನೆರವಾಗುವವರು ಕಾಣುತ್ತಿಲ್ಲ. ಇಳಿ ಹೊತ್ತು,ಇಳಿ ವಯಸ್ಸಿಗೆ ಲೇವಡಿ ಮಾಡುತ್ತಿದೆ, ಅಟ್ಟಹಾಸದ ನಗು ಬೀರುತ್ತಿದೆ, ನಾನಿಲ್ಲದ ತೇದಿಗೆ ಕಾತರಿಸುತ್ತಿರುವಂತಿದೆ.   ಸೂರ್ಯ ರಶ್ಮಿಗೆ ಮೈಯೊಡ್ಡುವ ನವಜಾತ ಶಿಶುಗಳ ಕಂಡಾಗ ಒಂದೇ … Read more

ನವೀನ ಕಹಾನಿ: ನವೀನ್ ಮಧುಗಿರಿ

  ಜವಾಬ್ದಾರಿ ಅವನಿಗಿದ್ದದ್ದು ಅವಳೊಬ್ಬಳೇ ಅಕ್ಕ. ತಂದೆ-ತಾಯಿ ಇಲ್ಲದವನನ್ನು, ಅಕ್ಕನೇ ತಂದೆ ತಾಯಿಯಂತೆ ಸಾಕಿ ಸಲಹಿದಳು. ಜೊತೆಗೆ ಓದಿಸಿದಳು. ಅವನಿಗಿದ್ದ  ಆಸೆಯೆಂದರೆ- 'ಅಕ್ಕ ನನಗಾಗಿ ಎಷ್ಟೋಂದು ಕಷ್ಟಪಟ್ಟಿದ್ದಾಳೆ? ಕಷ್ಟದ ನೆರಳೂ ಕೂಡ ನನ್ನನ್ನು ಹಿಂಬಾಲಿಸದಷ್ಟು ಸುಖವಾಗಿ ಬೆಳೆಸಿದ್ದಾಳೆ. ನಾನೂ ಕೂಡ ಕೆಲಸಕ್ಕೆ ಹೋಗುತ್ತಿದ್ದಂತೆಯೇ, ಅಕ್ಕನನ್ನು ಸುಖವಾಗಿ ನೋಡಿಕೊಳ್ಳಬೇಕು. ಒಳ್ಳೆಯ ಅನುಕೂಲಸ್ಥರ ಮನೆಗೇ ಅಕ್ಕನನ್ನು ಸೊಸೆಯಾಗಿ ಕಳಿ ಸಬೇಕು.'   ಅವನಂದುಕೊಂಡಂತೆಯೇ ಒಳ್ಳೆಯ ಕೆಲಸವೂ ಸಿಕ್ಕಿತು. ಉತ್ತಮ ಮನೆತನದ ಸಭ್ಯಸ್ಥ ಹುಡುಗನೊಂದಿಗೇ  ಅಕ್ಕನ  ಮದುವೆಯನ್ನೂ ಮಾಡಿ ಮುಗಿಸಿದ. ಆಗವನ ಗೆಳೆಯ ಹೇಳಿದ- 'ಅಂತೂ ನೀನಂದುಕೊಂಡಂತೆ … Read more

ಮರಣ ಬಾವಿಯೊಳಗೆ ಬದುಕು ಕಟ್ಟಿಕೊಂಡವನ ಕಥೆ: ಶರತ್ ಹೆಚ್. ಕೆ.

  ಬಾವಿ ಆಕಾರದ ಮೃತ್ಯುಕೂಪ. ಅದರೊಳಗೆ ಶರವೇಗದಲ್ಲಿ ಚಲಿಸುವ ಬೈಕು-ಕಾರುಗಳು. ಜೀವ ಪಣಕ್ಕಿಟ್ಟು ಬೈಕು-ಕಾರಿನ ಮೇಲೆ ಕಸರತ್ತು ಮಾಡುತ್ತ ನೋಡುವ ಕಣ್ಣುಗಳಿಗೆ ಬೆರಗಿನ ಗುಳಿಗೆ ಉಣಿಸುವ ಹುಡುಗರು. ಮೃತ್ಯುಕೂಪದ ಮೇಲ್ತುದಿಯಲ್ಲಿ ನಿಂತು ನೋಡುತ್ತಿರುವ ಯಾವನೋ ಕೈಯಲ್ಲಿ ನೋಟು ಹಿಡಿದರೆ, ಕಸರತ್ತು ಮಾಡುತ್ತಲೇ ನೋಟು ಕಸಿದು ಬಾಯಿಗಿಟ್ಟುಕೊಳ್ಳುವ ಆ ಪರಿ… ಅರೆ ಕ್ಷಣ ಎಚ್ಚರ ತಪ್ಪಿದರೂ ಬದುಕಿಗೆ ಪೂರ್ಣವಿರಾಮ ಇಟ್ಟುಕೊಂಡಂತೆ. ಮರಣ ಬಾವಿಯೊಳಗೆ ಬೈಕು ಚಲಾಯಿಸುವ ಹುಡುಗನೊಂದಿಗೆ ಆ ದಿನ ಮಧ್ಯಾಹ್ನವಷ್ಟೇ ಮಾತುಕತೆ ನಡೆಸಿದ್ದೆವು. ಅವನ ಹೆಸರು ಮಹಮ್ಮದ್ … Read more

ಅಳಿಯವಾಂತರಗಳು: ಜಯಪ್ರಕಾಶ ಅಬ್ಬಿಗೇರಿ

‘ಅಳಿಯ’ಎಂದೊಡನೆ ಅವನ ಬಗೆಗೆ ಕುತೂಹಲವಾಗುವುದುಂಟು. ಅಳಿಯ, ಅಳಿಯತನ, ಇವು ಸಂಸಾರಕ್ಕೆ ಸಂಬಂಧಿಸಿದ ಹೊಸ ಪದಗಳಲ್ಲದಿದ್ದರೂ ಕೂಡ ಈ “ಅಳಿಯ” ಎಂಬ ಪದದಲ್ಲಿ  ಹೊಸ ಚೇತನ, ಹೊಸ ಕ್ರಿಯೆ, ಅಡಗಿದೆ ಎಂದೆನಿಸುತ್ತದೆ. ಈ ಅಳಿಯಂದಿರಲ್ಲಿ ಅನೇಕ ಪ್ರಕಾರಗಳುಂಟು. ಅಕ್ಕನ ಮಗ, ಹೆಂಡತಿಯ ತಮ್ಮ, ಮಗಳ ಗಂಡ, ಹೀಗೆ ಅನೇಕ ಅಳಿಯಂದಿರು ನಮಗೆ ಕಾಣಸಿಗುತ್ತಾರೆ. ಇನ್ನು ಕೆಲವರು ಮೊದಲು ಭಾವಿ ಅಳಿಯಂದಿರಾಗಿ ನಂತರ ಸ್ವಂತ ಅಳಿಯಂದಿರಾಗುವುದು ಸಾಮಾನ್ಯವಾಗಿದೆ. ಕೆಲವು ಭಾವಿ ಅಳಿಯಂದಿರು ಮದುವೆಗಿಂತ ಮೊದಲೇ ಬೋರಿಂಗ್ ಅಳಿಯರಾಗಿ ನಂತರ ಸ್ವಂತ … Read more

ಆಸ್ಥಾ: ನನ್ನ ಮೆಚ್ಚಿನ ರೇಖಾಳ ‘ಗೃಹಿಣಿ’ ಪಾತ್ರ:ವಾಸುಕಿ ರಾಘವನ್

  ನಿಮ್ಮ ಡ್ರೀಮ್ ಪಾತ್ರ ಯಾವುದು ಅಂತ ನಟಿಯರನ್ನ ಕೇಳಿ ನೋಡಿ. ಶರಪಂಜರದಲ್ಲಿ ಕಲ್ಪನಾ ಮಾಡಿದ ಪಾತ್ರ ಅಂತಾರೆ. ಇಲ್ಲ ಅಂದ್ರೆ ಜೀವನದಲ್ಲಿ ತುಂಬಾ ಕಷ್ಟ, ನೋವುಗಳನ್ನು ಅನುಭವಿಸೋ ದುರಂತ ಪಾತ್ರ ಅಥವಾ ಯಾವುದಾದರೂ ಪೌರಾಣಿಕ, ಐತಿಹಾಸಿಕ ಪಾತ್ರ ಅಂತಾರೆ. “ಥಿಯೇಟ್ರಿಕ್ಯಾಲಿಟಿ” ಗೆ ತುಂಬಾ ಅವಕಾಶ ಇರೋ ಪಾತ್ರಗಳೇ ಉತ್ತಮ ಪಾತ್ರಗಳು ಮತ್ತು ಆ ಪಾತ್ರಗಳಲ್ಲಿ ಅಭಿನಯಿಸಿದರೆ ಅದು ಆಟೋಮ್ಯಾಟಿಕ್ ಆಗಿ ಒಳ್ಳೆಯ ನಟನೆ ಅನ್ನೋ ತಪ್ಪು ಅಭಿಪ್ರಾಯ ಇದೆ. ನಿಜವಾಗಿ ತುಂಬಾ ಸವಾಲೊಡ್ಡುವ ಪಾತ್ರ ಅಂದರೆ … Read more

ಆಕಾಲಿಕ ಮರಣನ್ನಪ್ಪಿದ ಸಾಹಿತಿ ಶ್ರೀಯುತ ರವಿಮುರ್ನಾಡುರವರ ಕುಟುಂಬಕ್ಕೆ ಅರ್ಥಿಕ ಸಹಾಯದ ಕೋರಿಕೆ

  ಆತ್ಮೀಯರೇ , ಕಳೆದ 27 ಮಾರ್ಚ್ 2013 ರಂದು ಹಠಾತ್ ನಿಧನರಾದ ಕವಿ, ಲೇಖಕ ರವಿ ಮೂರ್ನಾಡ್ ಅವರು ಭಾರತಕ್ಕೆ ಬಂದು ನೆಲೆಸುವ ಕನಸು ಕೊನೆಗೂ ನನಸಾಗಲೇ ಇಲ್ಲ. ಇದೇ ಜೂನ್ ನಂತರ ಭಾರತಕ್ಕೆ ಬಂದು ನೆಲೆಸುವ ಇರಾದೆಯನ್ನು ತನ್ನ ಹಲವು ಆತ್ಮೀಯರೊಂದಿಗೆ ಹಂಚಿಕೊಂಡಿದ್ದ ರವಿ ತಾಯ್ನಾಡ ನೆಲವ ಮತ್ತೆ ತಲುಪುವ ಋಣವನ್ನು ಕಾಣದೇ ದೂರದ ಕ್ಯಾಮರೂನಿನಲ್ಲಿ ಅಸ್ತಂಗತರಾಗಿದ್ದು ವಿಪರ್ಯಾಸ, ವಿಧಿಯಾಟ. ತೀವ್ರ ಬಡತನದಲ್ಲಿದ್ದ ಕುಟುಂಬಕ್ಕೆ ಅವರೊಬ್ಬರೇ ಅಧಾರಸ್ತಂಭವಾಗಿದ್ದರು . ಪುಟ್ಟ ಕುಟುಂಬವೊಂದನ್ನು ಸಾಕಿ ಸಲಹುತ್ತಿದ್ದ … Read more

ಕವಲುದಾರಿ: ಹರ್ಷ ಮೂರ್ತಿ

  ಸಂಜೆಯ ಜಿಟಿಪಿಟಿ ಮಳೆ ಹನಿಯುತ್ತಿತ್ತು. ರಸ್ತೆಯ ಗುಂಡಿಗಳೆಲ್ಲ ನೀರು ತುಂಬಿ ಸಮೃದ್ಧವಾಗಿದ್ದವು, ಅವು ಮೋಟಾರು ವಾಹನಗಳ ಬರುವಿಕೆಗೆ ಕಾಯುತ್ತ ಕೆಸರೆರೆಚಾಟಕ್ಕೆ ಸನ್ನದ್ಧವಾಗಿದ್ದವು. ಗಿಡಮರಗಳೆಲ್ಲವೂ ಮಳೆಯಲ್ಲಿ ತೊಯ್ದು ಹಸುರಿನಿಂದ ಕಂಗೊಳಿಸುತ್ತಿದ್ದವು. ರಸ್ತೆಯಲ್ಲಿ ಜನಸಂಚಾರ ಬಹಳ ವಿರಳವಾಗಿತ್ತು. ಅಲ್ಲೊಂದು ಓಬಿರಾಯನ ಕಾಲದ ಮುರುಕಲು ಬಸ್ ಸ್ಟಾಪ್. ಊರಿಗೆ ಹೊಸ ರಸ್ತೆ ಬಂದ ಮೇಲೆ ಈ ರಸ್ತೆಯಲ್ಲಿ ಊರಿನವರ ಕೆಲ ವಾಹನಗಳ ಬಿಟ್ಟರೆ ಬಸ್ಸುಗಳಾವುವೂ ಓಡುತ್ತಿರಲಿಲ್ಲ. ಹೀಗಾಗಿ ಆ ಬಸ್ ಸ್ಟಾಪನ್ನು ಕೇಳುವರಾರೂ ಇಲ್ಲದೆ ಅವಸಾನದತ್ತ ಸಾಗಿತ್ತು. ಅದೇ ಬಸ್ … Read more

ಪಂಜು ಚುಟುಕ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ಮಂಜುನಾಥ್ ಪಿ. ಅವರ ಹನಿಗವಿತೆಗಳು

ಖುಷಿ ಸಂಜೆ ಸೂರ್ಯನ ಹೆಣದ ಮೆರವಣಿಗೆ ಸಾಗುವಾಗ ಬಾನ ಬೀದಿಯೊಳಗೆ ದುಡಿವ ಜನರ ಗೂಡುಗಳ ದೀಪಗಳಿಗೆ ಉಸಿರು ದಕ್ಕಿ ಪಿಸುಗುಟ್ಟಿ ನಸುನಗುತಾವೆ ಒಳಗೊಳಗೆ.  ಬದುಕು  ದುಡಿಯುವ ಜನರ ಸುಖವು ಕನಸಿನ ತರಹದ್ದು; ಸಂಕಟಗಳ ನತದೃಷ್ಟ ಬದುಕುಗಳಿಗೋ ಹಸಿವಿನ ಸರಹದ್ದು. ಸಹನೆ  ದುಡಿವ ಜನರನ್ನು ನೀವು ಬಿರುಬಿಸಿಲ ಬೆಂಕಿಯಲ್ಲಿ ದಹಿಸಿದರೂ ಸಹಿಸುತ್ತಾರೆ; ಮುಂದೊಮ್ಮೆ  ನೀವೇ ಸುರಿಸುವ ಪ್ರೀತಿ ಮಳೆಗೆ ತೆರೆದುಕೊಳ್ಳುವ ನೆಲವೇ ಆಗುತ್ತಾರೆ! ಸ್ಪಷ್ಟ ಓ ಸೂರ್ಯ, ದುಡಿವ ಜನರ ನೆತ್ತಿಯ ಸುಡುವುದೆಂದರೆ ಯಾಕೆ ನಿನಗೆ ಇಷ್ಟ? ನೀನು … Read more

ಬೆಂಕಿಗೆ ಕೈ ಹಾಕಬಾರದು ಸುಡುತ್ತದೆ ಅಂತ ನಾವಂದರೆ…: ಡಾ. ಗವಿ ಸ್ವಾಮಿ

  ಹಿರಿಯ ಮಿತ್ರರಾದ ಡಾಕ್ಟರ್ .ನಟರಾಜು SM ರವರ ಪುಸ್ತಕ ‘ವಂಡರ್ ಲ್ಯಾಂಡಿನ ಪುಟ್ಟ ರಾಜಕುಮಾರನೂ ಮತ್ತು ಖುಷಿ ನಗರಿಯ ಅವನ ನಲ್ಮೆಯ ಗೆಳತಿಯೂ ‘ ವನ್ನು ಓದಿ ಮುಗಿಸಿದೆ. ಆಶ್ಚರ್ಯವಾಯಿತು ಎಂದರೆ ಸುಳ್ಳಾಗುತ್ತದೆ. ಏಕೆಂದರೆ ಅವರ ಪ್ರತಿಭೆಯ ಝಲಕನ್ನು ಕಾಲೇಜಿನಲ್ಲೇ ನೋಡಿದ್ದೆ. ಕಥೆ, ಕಾದಂಬರಿ, ಆತ್ಮಕಥೆ, ಕವಿತೆ ಇವ್ಯಾವುದರಚೌಕಟ್ಟಿಗೂ ನಿಲುಕದ ಒಂದು ಹೊಸ ಪ್ರಯೋಗ. ಗೆಳೆಯ -ಗೆಳತಿಯ ಪಾತ್ರಗಳು ಕಾಡುತ್ತವೆ. ಮಾದರಿ ಸ್ನೇಹವೆಂದರೆ ಇದೇ ಇರಬಹುದಾ ಅನಿಸುತ್ತದೆ. ಗೆಳತಿ ವಯಸ್ಸಿಗೂ ಮೀರಿದ ಜೀವನಾನುಭವನ್ನುಳ್ಳವಳು. ಗಟ್ಟಿಗಿತ್ತಿ. ಆಕೆಯ … Read more

ಸಂಬಂಧ ಸಂದೇಶಗಳ ಸಂಬಂಧ: ಪ್ರಶಸ್ತಿ ಪಿ.

    ಕಾಳಿದಾಸನ ಮೇಘಸಂದೇಶದಿಂದ ಹಿಡಿದು ಮಾಡರ್ನ್ ಚಾಟಿಂಗಿನಿಂದ ಶುರುವಾದ ಸ್ನೇಹ,ಪ್ರೇಮಗಳವರೆಗೆ ಬಂಧಗಳ ಬೆಸುಗೆಯಲ್ಲಿ ಸಂದೇಶಗಳದ್ದೊಂದು ಪಾತ್ರ ಇದ್ದೇ ಇದೆ. ಎದುರಿಗೆಷ್ಟೇ ಕಿತ್ತಾಡಿದರೂ, ಹೇಳಲಾಗದಿದ್ದರೂ , ಮಾತೇ ಬಿಟ್ಟಿದ್ದರೂ ಯಾವಾಗಲೋ ಕಳಿಸಿದ ಫಾರ್ವರ್ಡ್ ಮೆಸೇಜು ಮತ್ತೆ ಮುರಿದ ಸಂಬಂಧಗಳ ಬೆಸೆದಿದ್ದಿದೆ. ವರ್ಷಗಳವರೆಗೂ ಕಾಡದಿದ್ದವರು ಟ್ರಂಕು ಖಾಲಿ ಮಾಡುವಾಗ ಸಿಕ್ಕ ಮಾಸಿದ ಪತ್ರದಿಂದ ನೆನಪಾಗಿದ್ದಿದೆ. ವರ್ಷಗಳ ಸಾಥಿ ಬೇರ್ಪಡುವಾಗ ಕಳುಹಿಸಿದ "ಮಿಸ್ ಯೂ" ಎಂಬ ಎರಡೇ ಪದದ ಸಂದೇಶ ಎಷ್ಟೋ ಸಮಯ ಕಾಡಿ , ಅಳಿಸಿದ್ದಿದೆ. ಹಲಕಾರಣಗಳಿಂದ ಹಳಸುತ್ತಿರುವ … Read more

ಪ್ರೇಮ ಪತ್ರ: ಗಣೇಶ್ ಖರೆ

  ನವೀನ ಮೇಘನಳ ಪರಿಚಯ ಸುಮಾರು ಆರೇಳು ವರ್ಷಗಳಷ್ಟು ಹಳೆಯದು. ಕಾಲೇಜಿನಿಂದ ಹಿಡಿದು ಕೆಲಸಕ್ಕೆ ಸೇರಿ ಎರಡು ವರ್ಷಗಳಾಗಿದ್ದವು ಇಬ್ಬರು ಜೊತೆಗಿದ್ದು. ನಿಷ್ಕಲ್ಮಶ ಸ್ನೇಹ ಇಬ್ಬರದು. ಇವರಿಬ್ಬರ ಸ್ನೇಹ ನೋಡಿ ಅಸೂಯೆಪಡದವರಿಲ್ಲ. ನಸುಗೆಂಪು ಬಣ್ಣದ ಉತ್ತಮ ಮೈಕಟ್ಟಿನ ಮಧ್ಯಮ ವರ್ಗದ ಸೀದಾ ಸಾದಾ ಹುಡುಗ ನವೀನ, ಹಾಲ್ಗೆನ್ನೆಯ ಎಲ್ಲರ ನೋಟವನ್ನ ಒಮ್ಮೆಲೇ ತನ್ನೆಡೆಗೆ ಸೆಳೆಯುವ ಶ್ರೀಮಂತರ ಮನೆಯ ಹುಡುಗಿ ಮೇಘನ, ಆದರೂ ಮನೆಯ ಶ್ರೀಮಂತಿಕೆ ಅವಳ ಸ್ವಭಾವದಲ್ಲಿರಲಿಲ್ಲ, ಬಹುಷಃ ಇದೆ ಕಾರಣವಿರಬೇಕು ಇವರಿಬ್ಬರ ಸ್ನೇಹ ಇಷ್ಟು ಗಟ್ಟಿಯಾಗಿರಲು. … Read more

ಬೆಳ್ಳಿಮೋಡ: ವಾಸುಕಿ ರಾಘವನ್

  ನಾನು ಪುಟ್ಟಣ್ಣ ಕಣಗಾಲ್ ಅವರ ಸಾಕಷ್ಟು ಚಿತ್ರಗಳನ್ನ ನೋಡಿಲ್ಲ. ನೋಡಿರುವ ಬಹಳಷ್ಟು ಚಿತ್ರಗಳು ಚಿಕ್ಕವನಾಗಿದ್ದಾಗ, ದೂರದರ್ಶನದಲ್ಲಿ ಪ್ರಸಾರ ಆಗ್ತಿದ್ದ ಕಾಲದಲ್ಲಿ, ಜಾಹೀರಾತುಗಳ ನಡುವೆ. ಚಲನಚಿತ್ರ ಒಂದು ಕಲೆ ಎಂಬ ಗ್ರಹಿಕೆ ಶುರು ಆದಮೇಲೆ ನೋಡಿರೋ ಚಿತ್ರಗಳಲ್ಲಿ ಕಾರಣಾಂತರಗಳಿಂದ ಕನ್ನಡ ಚಿತ್ರಗಳ ಸಂಖ್ಯೆ ಕಮ್ಮಿ ಅಂತಾನೆ ಹೇಳ್ಬೇಕು. ಈ ವಿಷಯದ ಬಗ್ಗೆ ನನಗೆ ಬೇಸರ ಇದೆ ಕೂಡ.   ಇದನ್ನು ಬದಲಿಸೋ ಪ್ರಯತ್ನ ಮಾಡ್ತಿದೀನಿ ಇತ್ತೀಚಿಗೆ. ಈ ಪಯಣದಲ್ಲಿ ನನಗೆ ಸಿಕ್ಕ ಪುಟ್ಟಣ್ಣರ ಚಿತ್ರ “ಬೆಳ್ಳಿಮೋಡ”. 1966ರಲ್ಲಿ ಬಿಡುಗಡೆಯಾದ … Read more

ಇಬ್ಬರ ಕವಿತೆಗಳು: ನರಹರಿ ಭಟ್ಟ, ವೈ.ಬಿ. ಹಾಲಬಾವಿ

  ದೂರದೂರಿನ ಚಿಂತೆ…. ಏನಂತರಾಳಗಳು ಏನಗ್ನಿಜ್ವಾಲೆಗಳು ದಾಹಗಳ ಗಾಳಗಳ ನರ್ತನೋನ್ಮಾದಗಳು ಅರ್ಧಸತ್ಯದ ಮೆಲಕು ವಿಶ್ರಾಂತಿ ಬೇಡದೆಯೆ ಪೂರ್ಣಸತ್ಯದ ತಾಣ ಹುಡುಕುತಿಹುದು||೧||   ದೇಹಪಂಜರ ತೊರೆವ ಪ್ರಾಣಪಕ್ಷಿಯ ತವಕ ಹುಟ್ಟುಸಾವಿನಗುಟ್ಟ ಹೊರಗೆಳೆವಯತ್ನ ಒರೆಯಿಂದ ಹೊರಗೆಳೆದ ಕತ್ತಿಯಲಗಿನ ತೆರದಿ ಚರ್ಮಚೀಲದ ಹಂಗು ತೊರೆದು ಹೊರಟಂತೆ||೨||   ಬದುಕು ಭಾವನೆಯೆಲ್ಲ ಕರಗಿ ಸೋರಿದೆ ಹೃದಯ ಕಣ್ಪನಿಯು ಕಾರಣವ ಹುಡುಕ ಹೊರಟಿದೆ ಚೆಲುವ ಸುಪ್ತ ಮನಸಿನಭಾವ ಮುಪ್ಪಾಗಿ ಹಿಂಜುತಿದೆ ಉಪ್ಪೆಲ್ಲ ಕರಗಿ ಗಡಸು ನೀರಾದಂತೆ||೩||   ಅನುಭವದ ಜಾಳೆಲ್ಲ ಕುಸಿದು ಜಾರಿದೆ ಧರೆಗೆ … Read more

ಜಾತಿವ್ಯವಸ್ಥೆಯ ಕಪ್ಪುಕನ್ನಡಕ: ಅನುರಾಧ ಪಿ. ಸಾಮಗ

ಹಲ ದಿನಗಳ ಹಿಂದೆ ಪ್ರಸಿದ್ಧ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಒಂದು ಲೇಖನ ಕಣ್ಸೆಳೆದಿತ್ತು. ಅದು ಪುರಂದರದಾಸರನ್ನು ಕರ್ಣಾಟಕ ಸಂಗೀತದ ಪಿತಾಮಹನೆಂದು ಕರೆಯುವುದರ ವಿರುದ್ಧ ಎತ್ತಿದ ದನಿಯಾಗಿತ್ತು. ಅಲ್ಲಿ ಸಂಗೀತಕ್ಕವರ ಕೊಡುಗೆಯ ಪ್ರಮಾಣವಾಗಲಿ, ಕರ್ಣಾಟಕ ಸಂಗೀತದ ಆ ತಲೆಮಾರುಗಳಿಂದ ಈ ತಲೆಮಾರಿನವರೆಗಿನ ಸಂವಹನದಲ್ಲಿ ಅವರ ಕೆಲಸದ ಪಾತ್ರವೇನು ಎಂಬುದಾಗಲಿ ಲೇಖಕರಿಗೆ ಪ್ರಸ್ತುತವೆನಿಸದೆ, ಪುರಂದರರು ಕೀಳ್ಜಾತಿಯೆನುವ ವ್ಯವಸ್ಥೆಯ ಸದಸ್ಯರಾಗಿರದೆ ಇದ್ದು, ಒಂದು ಸಂಸ್ಕೃತಿಯ ಪಿತಾಮಹನೆನಿಸಿಕೊಂಡದ್ದು ಅವರನ್ನು ಕಾಡಿದಂತಿತ್ತು. ಅದರಲ್ಲಿ ಸ್ಪಷ್ಟವಾಗಿ ಉಲ್ಲೇಖಿತವಾದ ಪುರಂದರರಿಗೊಲಿಯದೆ ಕೃಷ್ಣ ಕನಕನಿಗೊಲಿದಿದ್ದ ಎಂಬ ಪದಗಳೇಕೋ ಬಹಳ ಕಾಡುತ್ತಲೇ … Read more

ಏನೆಂದು ಬರೆಯಲಿ, ಬಾರದ ಅಕ್ಷರ ಎದೆ ಗಾಳಕ್ಕೆ ಸಿಕ್ಕಿ ಮೇಲೆ ಬರದ “ಮೀನು”: ಸ್ಫೂರ್ತಿ ಗೌಡ

ಹೆಣ್ಣು ಒಂದು ಅಕ್ಷರ ಬರೆದರೆ ಅದರ ಹಿಂದೆ ಅದೆಂತದೋ ಇತಿಹಾಸ ಕಂಪನ.. ಪಾಂಡವರು ಮಾಡಿದ ರಾಜಸೂಯದಂತಹ ತನ್ಮಯತೆ…ಹೆಣ್ಣೆಂದರೆ ದೇಹವಲ್ಲ, ನಿನ್ನ ಚೆಲ್ಲಾಟಕ್ಕೆ ಕಿಬ್ಬೊಟ್ಟೆ ಕೊಟ್ಟು ಕರಗಿಸುವವಳಲ್ಲ, ನಿನ್ನ ಅಂತಃಕರಣಕ್ಕೆ ಕುಣಿದು ತಣಿಸುವ ರಮಣಿಯಲ್ಲ, ನಿನ್ನ ದುಖಃಕ್ಕೆ ಎದೆ ಒಡ್ಡಿ ತಲೆ ಸವರುವ ಮುದ್ದಲ್ಲ, ಹೆಣ್ಣು… ತಾಳಿಕಟ್ಟಿದ ಗಂಡಿನ ಬಂಧ ಬಿಟ್ಟು ಚೆನ್ನಮಲ್ಲಿಕಾರ್ಜುನೇ ಗಂಡನೆಂದು ಪೂಜಿಸಿದ ಮಹಾದೇವಿ, ಕಾಣದ ಗೋಕುಲ ನಂದನನಿಗೆ ಹಾತೊರೆದು ತನ್ನ ತನವೆಲ್ಲಾ ಸಮರ್ಪಿಸಿದ ಮೀರಾ, ಭೋಗ ಸುಖವ ಬಿಟ್ಟು ಓಡಿ ಬಂದು ಲಿಂಗಕ್ಕೆ ಶರಣು … Read more

ಡ್ರೀಮ್ ಲೈಫ್ ನ ಡ್ರಿಲ್ ಪಾಸಿಟಿವ್ ಆಗಿರಲಿ: ವೀಣಾ ಭಟ್ ಯಲ್ಲಾಪುರ

ಕಾಲ ಬದಲಾಗಿದೆ. ನಿಜವೇ? ಹೌದೆ? ಬದಲಾದದ್ದು ಕಾಲವೇ? ನಮ್ಮಗಡಿಯಾರವೇ? ಅಥವಾ ನಮ್ಮ ಮನಸ್ಸೇ? ನೋಡುವ ದ್ರಷ್ಟಿಕೋನವೇ ? ವೈಚಾರಿಕತೆಯ ಪರಿಯೇ? ಯಾವುದು ಹಾಗಾದರೆ??! ಕನಸುಗಳೂ ಬದಲಾಗುತ್ತಿರುತ್ತವೆ ಕಾಮನಬಿಲ್ಲಿನಂತೆ. ಹೇಗೆ ಕಾಮನಬಿಲ್ಲು ಮೋಡ, ಮಳೆ, ಸೂರ್ಯಕಿರಣ, ಗಾಳಿಯ ಚಾರಣಗಳಿಗನುಗುಣವಾಗಿ ಆಗಸದಲ್ಲಿ ಕಮಾನು ಕಟ್ಟುವುದೋ ಹಾಗೆ ನಮ್ಮ ಆಧ್ಯತೆ, ಅವಶ್ಯಕತೆಗಳಿಗನುಸಾರವಾಗಿ ಕನಸುಗಳನ್ನು ಕಾಣುತ್ತೇವೆ. ಕಿರಿಯರ ಮನಸ್ಸಂತೂ ಚಂಚಲ. ಟೀನೇಜ್ ಮಧುರ ಯಾತನೆಯ ಮರ್ಕಟ. ಮದ್ಯವಯಸ್ಸು ಸಂಸಾರ-ಸಂತೃಪ್ತಿ ಹೊಂದಿಸಲು ಜಂಜಾಟ. ಲಿಟ್ಲ್ ಪಾಂಡವಾಸ್, ಲಿಟ್ಲ್ ಕೌರವಾಸ್ ಗಳ ಚಕಮಕಿಯ ಚೆಲ್ಲಾಟ, ಸುತ್ತಮುತ್ತ ಭಾಷಣ-ಕೂಟಗಳು, ಫ್ಲೆಕ್ಸ್ , ಬಂಟಿಂಗ್ಸ್ , ಬ್ಯಾನರ್ , … Read more

ಪಂಜು ಚುಟುಕ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಸುಷ್ಮಾ ಮೂಡುಬಿದರೆ ಅವರ ಹನಿಗವಿತೆಗಳು

ಮೌನ ಮಾತಾಗದ ಹೊರತು ಕಂಬನಿಗಳ ತಡೆಯುವರಿಲ್ಲ ಮಾತು ನೀನಾಗದ ಹೊರತು ದುಮ್ಮಾನಕ್ಕೆ ಅಂತ್ಯವಿಲ್ಲ. ಹುಸಿ ನಿರೀಕ್ಷೆಗಳ  ಜೀವಂತಿಕೆ  ಜೀವಂತ ಕನಸುಗಳಿಗೇಕೆ  ಇರುವುದಿಲ್ಲ.. ?  ಅವಳಿಗೆ ಬೆನ್ನು ಮಾಡಿ  ಈತನೊಂದಿಗೆ ಹೊರಡಲು  ಅಣಿಯಾದಾಗ  ಅಮ್ಮನೆಂಬ ಅವಳ  ಕಣ್ಣಿಂದ ಉದುರಿದ್ದು  ನನ್ನೆಡೆಗಿದ್ದ ಅವಳ ಕನಸುಗಳಾ..?! ಹೆಗಲ ಮೇಲೆ ಮಗಳನ್ನು  ಅಂಬಾರಿ ಕೂರಿಸುವ  ಇವನನ್ನು ನೋಡುವಾಗ  ಮನೆಯ ಮೂಲೆಯ  ಒಂಟಿ ಚಾಪೆಯ ಮುದುಕ, ಅಪ್ಪನ ನೆನಪಾಗುತ್ತದೆ..!  ನಾ ಸಿಕ್ಕಿ ನಿನ್ನ ಕಾಡಿಸುವುದಕ್ಕಿಂತ ಸಿಗದೇ ನೀನೇ ಕಾಡಿಸಿಕ್ಕೊಳ್ಳುವುದು ಚಂದ ಅಲ್ಲವೇನೋ..?! ಕಣ್ಣೋಟಕ್ಕೆ , … Read more

ಇಕ್ಕೇರಿಯಲೊಂದು ಸುತ್ತು: ಪ್ರಶಸ್ತಿ ಪಿ.

'ಪಂಜು' ಬಳಗದವರು ಒಂದಂಕಣ ಬರೀತೀರಾ ಅಂದಾಗ ಒಂಥರಾ ಆಶ್ಚರ್ಯ!  ನಾನೂ ಅಂಕಣ ಬರೀಬೋದಾ ಅಂತ. ಪ್ರಯತ್ನ ಮಾಡಿ ನೋಡಿ ಅಂತ ಮತ್ತೆ ಕಾಲ್ ಮಾಡಿದ್ರು. ಸರಿ ನೋಡೋಣ ಅಂದರೂ ಮತ್ತೆ ಬಂದ ಯೋಚನೆ ಒಂದೇ, ಏನು ಬರ್ಯೋದು ?! ಮುಂಚೆಯಿಂದಲೂ ನಮ್ಮ ಗೆಳೆಯರ ಗುಂಪಿಗೆ 'ಕಾಲಿಗೆ ಚಕ್ರ ಕಟ್ಕೊಂಡೋರಾ ನೀವು' ಅಂತನೇ ತಮಾಷೆ ಮಾಡ್ತಿದ್ರು ಉಳ್ದವ್ರು. ಹಾಗಾಗಿ ಅದ್ನೇ ಯಾಕೆ ಬರೀಬಾದ್ರು ಅನುಸ್ತು. ಇನ್ನು ಹೆಚ್ಗೆ ಮಾತಾಡೋ ಬದ್ಲು ನನ್ನ ಕಾಲಿನ ಚಕ್ರ ನಿಮ್ಗೇ ಕೊಡ್ತೀನಿ. ಬನ್ನಿ, … Read more

ಹೀಗೋರ್ವ ಹಸಿರು ಸ್ವಾಮೀಜಿ:ಪ್ರಸಾದ್ ಎಸ್

  ಒಂದು ಸಮೃದ್ದವಾದ ಅರಣ್ಯವನ್ನು ನಾಶ ಮಾಡಲು ಮಾನವನಿಗೆ ಕೇವಲ ಕೆಲವು ಸಮಯ ಸಾಕು. ಆದರೆ ಒಂದು ಸಮೃದ್ದವಾದ ಅರಣ್ಯ ಬೆಳೆಸುವುದು ಒಂದು ಸಾಧನೆಯೇ ಸರಿ, ಅದಕ್ಕೆ ದಶಕಗಳೇ ಬೇಕು. ಅರಣ್ಯವನ್ನು ಬೆಳೆಸುವುದು ಸುಲಭದ ಮಾತಲ್ಲ. ಅದಕ್ಕೆ ಅಗಾಧವಾದ ಪರಿಶ್ರಮ ಬೇಕು, ಸುಮ್ಮನೆ ಒಂದಷ್ಟು ಜಾಗದಲ್ಲಿ ಒಂದಷ್ಟು ಗಿಡಗಳನ್ನು ನೆಟ್ಟು ಬಂದರೆ ಅರಣ್ಯ ಬೆಳೆಯುವುದಿಲ್ಲ.ಅದನ್ನು ಸರಿಯಾಗಿ ಪೋಷಿಸುವುದು ಅತ್ಯಂತ ಮಹತ್ವದ್ದಾಗಿರುತ್ತದೆ .ಈ ಕೆಲಸವನ್ನು ನಮ್ಮ ಸ್ವಾಮೀಜಿ ಅತ್ಯಂತ ಶೃದ್ದೆಯಿಂದ ಮಾಡಿದ್ದಾರೆ. ಆದ್ದರಿಂದಲೇ ಇಂದು ಶಿವನಹಳ್ಳಿಯಲ್ಲಿ ಸಮೃದ್ದವಾದ ನೂರಾರು … Read more

ಎರೆಡು ಕವಿತೆಗಳು:ಅನುರಾಧ ಸಾಮಗ ಹಾಗೂ ಪ್ರೇಮಾಶ್ರೀ

  ಕಣ್ಣೀರಿಗೂ, ಎದೆಯ ಆರ್ದ್ರತೆಗೂ ಒಪ್ಪಿಗೆ ಮುದ್ರೆಯ ಪ್ರಮಾಣ ಪತ್ರವೇ?! ಅವು ತಮ್ಮ ಸಾಬೀತು ಪಡಿಸಬೇಕೇ?.. ಸ್ಪಂದನಕಿಲ್ಲಿ ಜಾತಿಯಗ್ನಿಪರೀಕ್ಷೆಯ ಪಾಡು ನಿಜಭಾವಕೆ ಬಂಜೆಯ ಹೆರಿಗೆಬೇನೆಯ ಪಟ್ಟ   ರಕ್ತಮಾಂಸಗಳೊಂದೇ, ದೇಹಗೂಡೊಂದೇ ವಾಸವಲ್ಲಿ ನೂರಾರು ಹಕ್ಕಿಯಂಥ ಭಾವಗಳಿಗೆ. ಬಣ್ಣ, ಗಾತ್ರ, ಕೂಗಷ್ಟೇ ಬೇರೆಬೇರೆ, ಹಾರಾಟ ಜನ್ಮಸಿದ್ಧಹಕ್ಕು ಹಕ್ಕಿ ಜನ್ಮಕೆ. ನೀ-ನಾನೆಂಬ ನಿರ್ಬಂಧವಿಲ್ಲದ ಸ್ವಚ್ಛಂದ ಚಲನೆ.   ಶೋಷಣೆಗೆದುರು ನಿಂತವರೇ, ಘೋಷಣೆ, ಬಾವುಟದಾಸರೆಯಿರದಲ್ಲೂ, ಯಾವ ಜೀವ-ಬಂಧುವಿನದಾದರೂ, ಹಸಿವೆ-ದಾರಿದ್ರ್ಯಕೆ, ದಮನ-ಅಸಮಾನತೆಗೆ ಸಾವು-ನೋವಿಗೆ ಒಳಗಿಲ್ಲೆಡೆ ಕರಗುತದೆ.. ಅನ್ಯಾಯಕೆ ಒಳಗೆಲ್ಲೆಡೆ ಮರುಗುತದೆ, ದಬ್ಬಾಳಿಕೆಗೆ ಒಳಗೆಲ್ಲೆಡೆ … Read more

ಅಮೊರೆಸ್ ಪೆರ್ರೋಸ್:ವಾಸುಕಿ ರಾಘವನ್

  "ಅಮೊರೆಸ್ ಪೆರ್ರೋಸ್". ನಾನು ನೋಡಿದ ಮೊದಲ ಆಂಗ್ಲೇತರ ವಿಶ್ವಚಿತ್ರಗಳಲ್ಲಿ ಒಂದು. ಚಿತ್ರದ ಮೊದಲ ದೃಶ್ಯವೇ ಒಂದು ಟೆನ್ಸ್ ಕಾರ್ ಚೇಸ್. ಐದು ನಿಮಿಷದೊಳಗೆ ಒಂದು ಭೀಕರ ಕಾರ್ ಅಪಘಾತ ಆಗುತ್ತೆ. ಇದರಿಂದ ಮೂರು ಜನರ ಬದುಕಿನಲ್ಲಿ ಊಹಿಸಲಾಗದ ರೀತಿಯಲ್ಲಿ ಬದಲಾವಣೆಗಳು ಉಂಟಾಗುತ್ತವೆ. ಈ ಮೂರು ಜನರ ಬದುಕು ಅಪಘಾತದ ಮುನ್ನ ಹೇಗಿರುತ್ತೆ, ಹೇಗೆ ಮೂರೂ ಜನರು ಅದೇ ಜಾಗದಲ್ಲಿ, ಅದೇ ಸಮಯದಲ್ಲಿ ಬರುವಂತೆ ಆಗುತ್ತೆ ಹಾಗೂ ಅಪಘಾತದ ನಂತರ ಏನಾಗುತ್ತೆ ಅನ್ನೋದೇ ಚಿತ್ರದ ಕಥೆ. ಈ … Read more

ಯಶಸ್ಸಿನ ಬೆನ್ನು ಹತ್ತಿ:ಪ್ರಸಾದ್ ಕೆ.

  ರಿಚರ್ಡ್ ಬ್ರಾನ್‌ಸನ್! ಈ ಶತಮಾನದ ಓರ್ವ ಯಶಸ್ವಿ ಉದ್ಯಮಿ, ಲೇಖಕ, ಸಾಹಸಿ ಮತ್ತು ವರ್ಜಿನ್ ಸಮೂಹ ಸಂಸ್ಥೆಗಳ ಅಧ್ಯಕ್ಷ. ವಿಶ್ವದಾದ್ಯಂತ ನಾಲ್ಕುನೂರಕ್ಕೂ ಹೆಚ್ಚು ಕಂಪೆನಿಗಳ ಮಾಲೀಕ. ಸಂಗೀತ, ಏರ್ ಲೈನ್ಸ್, ಮೊಬೈಲ್ಸ್ ಸೇರಿದಂತೆ ಹತ್ತು ಹಲವು ಕ್ಷೇತ್ರಗಳಲ್ಲಿ ಮೂವತ್ತಕ್ಕೂ ಹೆಚ್ಚು ದೇಶಗಳಲ್ಲಿ ತನ್ನ ಕಬಂಧಬಾಹುಗಳನ್ನು ವರ್ಜಿನ್ ಸಮೂಹ ಸಂಸ್ಥೆಗಳು ಹಬ್ಬಿಕೊಂಡಿವೆ. ಇವರ ಆತ್ಮಕಥೆ ’ಲೂಸಿಂಗ್ ಮೈ ವರ್ಜಿನಿಟಿ’ ಜಗತ್ತಿನಾದ್ಯಂತ ಕೋಟಿಗಟ್ಟಲೆ ಸಂಖ್ಯೆಯಲ್ಲಿ ಬಿಕರಿಯಾದ ಬಹುಚರ್ಚಿತ ಕೃತಿ. ರಿಚರ್ಡ್ ತನ್ನ ಜೀವನದಲ್ಲಿ ಅನುಭವಗಳಿಂದ ಕಲಿತ ಪಾಠಗಳನ್ನು ’ಸ್ಕ್ರ್ಯೂ … Read more

ತುಮುಲಗಳು ತೀರಿ ಹೋದ ಹೊತ್ತು:ಎಚ್.ಕೆ.ಶರತ್

    ತುಮುಲಗಳು ತೀರಿ ಹೋದ ಹೊತ್ತು… ಭಾವುಕ ಕನ್ನಡಿ ಚೂರಾಯ್ತು. ಮನಸ್ಸು ಮೋಡ ಕವಿದ ಸಂಜೆಯಷ್ಟೇ ನೀರವ. ದೂರದಲ್ಲೆಲ್ಲೋ ಮಳೆ ಹನಿಗಳ ಕಲರವ. ಬರ ಬರಬಾರದಿತ್ತು ಭಾವುಕತೆಗೆ. ಸುಖಾಸುಮ್ಮನೆ ಅಳುವುದರಲ್ಲೂ ಒಂದು ಸುಖ. ಅಕಾರಣವಾಗಿ ನಗೆ ಚೆಲ್ಲಿದಾಗಲೂ ಇಣುಕುವ ದುಃಖ… ಬದುಕು ಕಳೆಗುಂದದಿರಲು ಕಣ್ಣಂಚಲ್ಲಿ ಒಂದಷ್ಟು ನೀರು ಶೇಖರಿಸಿಟ್ಟುಕೊಳ್ಳುವ ಜಾಣ್ಮೆ ಮೊದಲೇ ಮೈಗೂಡಬೇಕಿತ್ತು. ಎರಡು ಬದಿಯ ಮೌನ ಮಾತಾಡುವಷ್ಟು, ಒಂದು ಬದಿಯ ಕದನ ಪದ ಕಕ್ಕಲಾರದು. ಮೌನವಿರಬೇಕಿತ್ತು ಇಬ್ಬರ ನಡುವೆ… ನಮ್ಮಿಬ್ಬರಿಗೂ ಇಷ್ಟವಾದ ಮಾತನಾಡುವ ಸಲುವಾಗಿಯಾದರೂ! … Read more

ಗಿಫ್ಟ್ ಶಾಪ್ ನಲ್ಲೊಂದು ದಿನ: ಸಂತೋಷ್ ಕುಮಾರ್ ಎಲ್.ಎಮ್.

ಪ್ರಪಂಚ ಓಡುತ್ತಿದೆ ಅನ್ನುವ ಭ್ರಮೆಯಲ್ಲಿ ನಾವು! ಪ್ರಪಂಚವೇನೂ ಓಡುತ್ತಿಲ್ಲ, ಅದು ಇದ್ದಲ್ಲೇ ಇದೆ. ಆದರೆ ಮನುಷ್ಯನೆಂಬೋ ಈ ಮನುಷ್ಯ ಮಾಮೂಲಿ ಜೀವನವನ್ನು ಸುಖಾಸುಮ್ಮನೆ ಓಡಿಸುತ್ತಿದ್ದಾನೆ ಎನ್ನುವುದು ತಿಳಿದವರ ಮಾತು. ಅದೇನೇ ಇರಲಿ ಈ ಓಡುತ್ತಿರುವ ಜೀವನದ ಮಧ್ಯೆ ಅದೆಷ್ಟೋ ಮುಗ್ಧರು, ಬಡವರು, ಅಸಹಾಯಕ ಪುಟಾಣಿಗಳು ನಮ್ಮ ಕಾಲಿಗೆ ಎಡವಿದರೂ ನಮಗೆ ಗೊತ್ತೇ ಇಲ್ಲದವರಂತೆ ಮುಂದೆ ಹೋಗುತ್ತಿರುತ್ತೇವೆ. ನಮ್ಮ ಪಕ್ಕದಲ್ಲೇ ರಸ್ತೆಯಲ್ಲಿ ಅಪಘಾತವಾಗಿ ನಮ್ಮ ಅಪ್ಪನ ವಯಸ್ಸಿನ ವ್ಯಕ್ತಿಯೊಬ್ಬ ಬಿದ್ದು ಹೊರಳಾಡುತ್ತಿದ್ದರೆ ಆತನ ಕಡೆಗೆ ಕಣ್ಣಾಯಿಸಿಯೂ ನೋಡದೆ ಆಫೀಸಿನತ್ತ … Read more