ಸಮಾಜವಾದಿ ಕ್ಯೂಬಾದ ವೈದ್ಯಕೀಯ ಕ್ರಾಂತಿ; ಜಗತ್ತಿಗೇ ಮಾದರಿ: ಜೈಕುಮಾರ್ ಹೆಚ್.ಎಸ್.

ಬೆಂಗಳೂರಿನಷ್ಟು ಜನಸಂಖ್ಯೆ ಹೊಂದಿರುವ ಪುಟ್ಟ ದೇಶ ಕ್ಯೂಬಾ ವೈದ್ಯಕೀಯ ರಂಗದಲ್ಲಿ ಮಾಡುತ್ತಿರುವ ಹೊಸ ಆವಿಷ್ಕಾರಗಳು ಮತ್ತು ಅದರ ವಿಶಿಷ್ಟ ಆರೋಗ್ಯ ವ್ಯವಸ್ಥೆಯ ಕಾರ್ಯಕ್ಷಮತೆ ಪ್ರತಿದಿನ ಸುದ್ದಿಯಲ್ಲಿವೆ. ಅಲ್ಲಿಯ ಜನರ ಜೀವಿತಾವಧಿ ಸುಮಾರು 78 ವರ್ಷ ಮತ್ತು ಅಲ್ಲಿನ ಹಲವು ಆರೋಗ್ಯ ಸೂಚ್ಯಂಕಗಳು ಅಭಿವೃದ್ಧಿ ಹೊಂದಿದ ದೇಶಗಳ ಮಟ್ಟದಲ್ಲಿದೆ. ಭೂಕಂಪ, ಚಂಡಮಾರುತ, ಇತ್ಯಾದಿ ವಿಪತ್ತಿನ ಕಾಲದಲ್ಲಿಯಂತೂ ವಿಶ್ವದಾದ್ಯಂತ ಕ್ಯೂಬಾದ ವೈದ್ಯರು ತಮ್ಮ ಅನುಪಮ ಸೇವೆಯಿಂದ ಮೇಲ್ಪಂಕ್ತಿಯಲ್ಲಿದ್ದಾರೆ. ಮಿಷನ್ ಐ ಹೆಸರಿನ ಕಾರ್ಯಕ್ರಮದಡಿ ಇತರೆ ದೇಶಗಳಲ್ಲಿ ಸುಮಾರು 35 ಲಕ್ಷ … Read more

ಸೋಮರಸಕ್ಕೆ ರಾಜಮಾರ್ಗ- ೨: ಆದರ್ಶ ಸದಾನ೦ದ ಅರ್ಕಸಾಲಿ

  ಸರ್ಕಾರಿ ಮದ್ಯದಂಗಡಿಯಿ೦ದ ಕೈಯಲ್ಲಿ ಬಾಟಲಿ ಹಿಡಿದುಕೊಂಡು ಹೊರಬಿದ್ದಾಗ ಮಳೆರಾಯ ಕರುಣೆತೋರುತ್ತಾ ತನ್ನ ವಿರಾಟರೂಪದಿ೦ದ ಸೌಮ್ಯರೂಪಧಾರಿಯಾಗಿದ್ದ. ಕೆಲವರು ತಮ್ಮ ಬಾಟಲಿಗಳನ್ನು ರದ್ದಿಪೇಪರನಲ್ಲಿ ಸುತ್ತಿದ್ದರೆ, ಕೆಲವರು ತಮ್ಮ ಟವೇಲ್ ನಲ್ಲಿ ಬಚ್ಚಿಟ್ಟಿದ್ದರು, ಇವರಡೂ ದೊರಕದ ಹಲವರು, ತ೦ತಮ್ಮ ಲು೦ಗಿಗಳಲ್ಲಿ ಆಶ್ರಯ ಕೊಟ್ಟು ಸ್ಮಗ್ಲರ್ ಗಳ ತರ ಹೊರಹೋಗುತ್ತಿದ್ದರು. ಸುಮ್ಮನೆ ಕೈಯಲ್ಲಿ ಹಿಡಿದುಕೊ೦ಡು ಹೋಗಿದ್ದರೆ ಅಷ್ಟೇನೂ ಸ೦ಶಯ ಬರುತ್ತಿರಲಿಲ್ಲವೇನೋ , ಆದರೆ ಬಾಟಲಿಗಳಿಗೆ ನೋಡುಗರ ದೃಷ್ಟಿ ತಾಕಬಾರೆನ್ನುವ ನೈತಿಕ ಹೊಣೆಗಾರಿಕೆಯೋ ಇಲ್ಲಾ ಸಮಾಜದಲ್ಲಿ ತಮ್ಮ ಇಮೇಜ್ ಗೆ ಮಡಿವಂತಿಕೆ ಮನಸ್ಥಿತಿಯಿರುವವರ … Read more

ವಾಸ್ತವಕ್ಕೆ ಮುಖಮಾಡದ ಸಾವುಗಳು: ರಾಘವೇಂದ್ರ ತೆಕ್ಕಾರ್

ಕಳೆದೆರಡು ವಾರದ ಎರಡು ದಿನಗಳಲ್ಲಿ ಎರಡು ಡೆತ್ ನೋಟ್ಗಳನ್ನು ನೋಡಿದೆ of course ಸಾವನ್ನು ಕೂಡ. ವಯಸ್ಸು ಆಜುಬಾಜು 24 ರಿಂದ 28ರ ಮಂದಿ. ಮಹಿಳೆ ಒಳಗೊಂಡಂತೆ ಮತ್ತೋರ್ವ. ಇಬ್ಬರು ವಿವಾಹಿತರು. 2ರಿಂದ 3 ವರುಷದ ದಾಂಪತ್ಯ ಜೀವನ ಇವರುಗಳದ್ದು. ನಾವೆಲ್ಲರೂ ಪ್ರೇಮಿಗಳು ಸಂಗಾತಿಗಳಾಗಲು ಸಾದ್ಯವಿಲ್ಲ ಮನೆಯವರು ಒಪ್ಪಲ್ಲ ಜಾತಿ ಸಮಸ್ಯೆ ಇತ್ಯಾದಿ ಇತ್ಯಾದಿ ಗಳಿಂದಾಗಿ ಆತ್ಮಹತ್ಯೆಗೆ ಶರಣಾಗುವದನ್ನು ಕೇಳಿಯೆ ಇರುತ್ತೇವೆ. ಆದರೆ ಇವಕ್ಕೆ ಹೊರತಾದದ್ದು ಮೇಲೆ ತಿಳಿಸಿದ ಎರಡು ಸಾವುಗಳು.ಕಾರಣ ಕೌಟುಂಬಿಕ ಕಲಹ, ಜೀವನದಲ್ಲಿ ಜಿಗುಪ್ಸೆ. … Read more

ನಾನು ಮತ್ತು ಅವನು……: ಚೈತ್ರಾ ಎಸ್.ಪಿ.

ಬದುಕಿನಲ್ಲಿ ಎಲ್ಲವನ್ನು ಸೀರಿಯಸ್ ಆಗಿ ತಗೋಳೋ ನಾನು ಕೆಲವೊಂದು ಸೀರಿಯಸ್ ವಿಚಾರಗಳನ್ನ ತಮಾಷೆಯಾಗಿ ತಗೊಂಡು ನನ್ನನ್ನ ಅದ್ಯಾವುದೋ ಲೋಕಕ್ಕೆ ಲಾಕ್ ಮಾಡ್ಕೊಂಡಿದ್ದೀನಿ ಅನ್ನಿಸ್ತಾ ಇದೆ. ಬೇಡವೆಂದರೂ ಮತ್ತೆ ಹಚ್ಚಿಕೊಂಡೆ. ಪ್ರೀತಿಯೆಂಬ ಮಾಯೆಯೊ, ಸಂತೋಷವೋ ಅಲ್ಲ ಕೊರಗೋ !! ಯಾವುದೋ ಒಂದು ಭಾವಕ್ಕೆ ಮಣಿದೆ. ಪ್ರೀತಿಸಿದೆ, ಮುದ್ದಿಸಿದೆ, ಗೋಳಾಡಿದೆ, ಕಣ್ಣೀರಾದೆ.  ನನ್ನೆಲ್ಲ ಹುಚ್ಚಾಟಗಳನ್ನು ತಿದ್ದಿ ಬುದ್ದಿ ಹೇಳಿ ಒಂದು ರೂಪ ಕೊಟ್ಟು, ಪ್ರೀತಿಯ ಧಾರೆಯೆರೆದು ನನ್ನನ್ನು ಧಾರೆಯೆರೆಸಿಕೊಳ್ಳಲಾರೆನೆಂಬ ದುಃಖದ ಕೂಪಕ್ಕೆ ತನ್ನನ್ನು ತಾನೇ ತಳ್ಳಿಕೊಂಡ ಆ ಜೀವಕ್ಕೆ ನಾ … Read more

ನಾನೋದಿದ ಹೊತ್ತುಗೆ ಪೆರುವಿನ ಪವಿತ್ರ ಕಣಿವೆಯಲ್ಲಿ: ಪ್ರಶಸ್ತಿ

ಬೇಸಿಗೆರಜೆ ಮತ್ತು ಚಳಿಗಾಲದ ರಜೆ ಬಂತು ಅಂದ್ರೆ ಎಲ್ಲಿಲ್ಲದ ಖುಷಿ ನಂಗೆ. ಅಜ್ಜಿ ಮನೆ, ದೊಡ್ಡಪ್ಪನ ಮನೆ ಅಂತ ಒಂದು ಕಡೆ ಇಂದ ಹೊರಟ್ರೆ ಅಲ್ಲಿಂದ ಹತ್ತಿರ ಇರ್ತಿದ್ದ ಮತ್ತೊಂದು ಮಾವನ ಮನೆ, ಅಲ್ಲಿಂದ ಮತ್ತೊಂದು ಚಿಕ್ಕಪ್ಪನ ಮನೆ ಅಂತ ಸುಮಾರಷ್ಟು ಕಡೆ ತಿರುಗಿ ರಜಾ ಮುಗಿಯೋ ಹೊತ್ತಿಗೆ ಮನೆ ತಲುಪುತ್ತಿದ್ದೆ. ದಿನಾ ಮನೆಗೆ ಫೋನ್ ಮಾಡಿ ಎಲ್ಲಿದ್ದೀನಿ ಅಂತ ಹೇಳ್ಬೋಕು ಅನ್ನೋದನ್ನ ಬಿಟ್ರೆ ಬೇರ್ಯಾವ ನಿರ್ಬಂಧಗಳೂ ಇಲ್ಲದ ಸ್ವಚ್ಛಂದ ಹಕ್ಕಿಯ ಭಾವವಿರುತ್ತಿದ್ದ ದಿನಗಳವು. ಮನೆ ಬಿಟ್ಟು … Read more

ಮೂವರ ಕವನಗಳು: ಕು.ಸ.ಮಧುಸೂದನ್, ಶ್ರೀಮಂತ್.ಎಮ್.ವೈ, ವೆಂಕಟೇಶ ನಾಯಕ್, ಮಂಗಳೂರು

ಇವತ್ತಿನ ಕವಿತೆಗಳು. 1. ಇವತ್ತಿನ ರಾತ್ರಿ ಮುಗಿದು ಹೋಗೋದ್ರೊಳಗೆ ಚುಕ್ಕಿಗಳೆಲ್ಲ ಲೆಕ್ಕ ಚುಕ್ತಾ ಮಾಡಿ ಪುಸ್ತಕ ಮುಚ್ಚೋದ್ರೊಳಗೆ ಚಂದ್ರ ಪಾಳಿ ಮುಗಿಸಿ  ಖೋಲಿ ಸೇರೋದ್ರೊಳಗೆ ಬಿಲ ಬಿಟ್ಟ ಹಾವು ಇಲಿ ಬಲಿ ನುಂಗಿ ನೊಣೆದು ತೇಗೋದ್ರೊಳಗೆ ಗಿಡುಗನಂತವನು ಗಿಣಿಯಂತೋಳ ಜೊತೆ ಸುರತ ನಡೆಸಿ ಸ್ಖಲಿಸಿ ಬಿಡೋದ್ರೊಳಗೆ ಸೂರ್ಯ ಅನ್ನೋ ಮೂಧೇವಿ ಬೆಳೆಗ್ಗೆ ಬಂದು  ಬ್ಯಾಟರಿ ಹಾಕಿ ಬೆಳಕ ಹರಿಸೋದ್ರೊಳಗೆ ತಿಕ ಸುಟ್ಟ ಬೆಕ್ಕು ಮುಂಜಾನೆ ಮಿಯಾಂವ್ ಅಂತ ಹಿಮ್ಮಡಿ ನೆಕ್ಕೋದ್ರೊಳಗೆ ಹೀಗೇ ಸುಮ್ಮ ಸುಮ್ಮನೇ ಸತ್ತು ಹೋಗಿಬಿಡಬೇಕು … Read more

ಕಾಡು (ವ) ದಿಟ್ಟೆಯರು!!: ಅಖಿಲೇಶ್ ಚಿಪ್ಪಳಿ

ಲೋಕಾಯುಕ್ತ ಕಚೇರಿಯಲ್ಲೇ ಲಂಚಾವತಾರ. ರೈತರ ಸರಣಿ ಆತ್ಮಹತ್ಯೆಗಳು. ರೈತನ ಪಾಲಿಗೆ ಕಬ್ಬಿನ ಬೆಳೆ ಕಬ್ಬಿಣದ ಶೂಲವಾಗಿ ಪರಿಣಮಿಸಿದ್ದು, ತನ್ಮಧ್ಯೆ ಮಳೆ ಕೊರತೆಯಿಂದ ಉಂಟಾಗಬಹುದಾದ ಬರಗಾಲದ ಛಾಯೆ. ಕ್ರಿಕೇಟ್ ಆಟಕ್ಕೆ ಸಂಬಂಧಿಸಿದಂತೆ ಲಲಿತ್ ಮೋದಿಯ ವೀಸಾಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಮತ್ತು ರಾಜಾಸ್ಥಾನದ ಮಹಿಳಾ ಮುಖ್ಯಮಂತ್ರಿಯ ಮೇಲೆ ಬಂದ ಗಂಭೀರ ಆರೋಪ. ವ್ಯಾಪಂ ಹಗರಣದ ಸರಣಿ ಸಾವುಗಳು. ಒಟ್ಟಾರೆ ಋಣಾತ್ಮಕ ಅಂಶಗಳೇ ಹೆಚ್ಚು. ಈ ಮಧ್ಯದಲ್ಲೂ ಅನೇಕ ಮಹಿಳೆಯರು ಭೂಆರೋಗ್ಯದ ಕುರಿತು ಚಿಂತಿಸಿ, ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. … Read more

ಋಣಮುಕ್ತವಲ್ಲದ ಬದುಕು ನಮ್ಮದು: ಗಾಯತ್ರಿ ಬಡಿಗೇರ

                  ತಂದೆ ತಾಯಿ ನಾವ ಹುಟ್ಟಿದಮ್ಯಾಗ ತುಸು ಖರ್ಚು ಮಾಡಿ ಹೆಸರಿಟ್ಟಿರಂಗಿಲ್ರಿ. ಹುಟ್ಟಿದ ಜಾತಕ ತಗಸಿ ಅದು ಇದು ಅಂತಾ ಪಾಪಾ ಬಾಳ ತಿರಗ್ಯಾಡಿ ಬಂಗಾರದಂಗ ಹೆಸರ ಇಟ್ಟಿರತಾರ.. ನಾವ ದೀಡ ಪಂಡಿತ್ರ ಅದೀವಿ ಅಲ್ಲ. ‘ಅಂದ ಅನಸ್ಕೊದ ಚಂದಗೇಡಿಂತ’ ಹಂಗ ಎತ್ತಾಗರ ಪತ್ತಾಗರ ಅರ್ಧಂಬರ್ಧಾ ಹೆಸರ ಕರಕೋತ ನಾಯಿ, ನರಿ, ಹಂದಿ, ಮಗಾ, ಮಚ್ಚಾ, ಮಾಮಾ, ಮಾಮಿ ಅದು ಇದು ಸುಡಾಗಾಡ ಸಂತಿ ವಟ್ಟ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕಪ್ಪೆಗಳು ಕಪ್ಪೆಗಳ ಗುಂಪೊಂದು ಕಾಡಿನ ಮೂಲಕ ಎಲ್ಲಿಗೋ ಪಯಣಿಸುತ್ತಿದ್ದಾಗ ಅವುಗಳ ಪೈಕಿ ಎರಡು ಕಪ್ಪೆಗಳು ಒಂದು ಆಳವಾದ ಗುಂಡಿಯೊಳಕ್ಕೆ ಬಿದ್ದವು. ಉಳಿದ ಕಪ್ಪೆಗಳು ಗುಂಡಿಯ ಮೇಲೆ ಸುತ್ತಲೂ ನಿಂತು ಗುಂಡಿ ಎಷ್ಟು ಆಳವಿದೆ ಎಂಬುದನ್ನು ಅಂದಾಜಿಸಿದವು. ತದನಂತರ ಗುಂಡಿಯೊಳಕ್ಕೆ ಬಿದ್ದ ದುರದೃಷ್ಟವಂತ ಕಪ್ಪೆಗಳಿಗೆ ಅವು ಎಂದೆಂದಿಗೂ ಹೊರಬರಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಹೇಳಿದವು. ಆ ಎರಡು ಕಪ್ಪೆಗಳು ಈ ಹೇಳಿಕೆಯನ್ನು ನಿರ್ಲಕ್ಷಿಸಿ ಗುಂಡಿಯಿಂದ ಹೊರಕ್ಕೆ ಹಾರಲು ಪ್ರಯತ್ನಿಸತೊಡಗಿದವು.   ಆ ಗುಂಡಿಯೊಳಗೇ ಸಾಯುವುದು ಖಚಿತವಾದ್ದರಿಂದ ವೃಥಾ ಶ್ರಮ … Read more

ಹೆಸರಿಲ್ಲ: ಸಖ್ಯಮೇಧ (ವಿಶ್ವನಾಥ ಗಾಂವ್ಕರ್)

ಸಾಲು ಅಡಿಕೆ ಮರಗಳು ಮುರಿದು ಬೀಳುತ್ತವೇನೋ ಎಂಬಂತೆ ತೂಗುತ್ತಿದ್ದವು  ಬೀಸುಗಾಳಿಗೆ… ಹುಚ್ಚುಗಾಳಿಯು ತರಗೆಲೆಗಳನ್ನು ಧೂಳನ್ನು ಹೊತ್ತು ತರುತ್ತಿತ್ತು… ತೋಟದಾಚೆ ಬಹುದೂರ ಕಾಣುವ ಬೆಟ್ಟದಲ್ಲಿ ಮಳೆ ಸುರಿಯುವುದು ಅಸ್ಪಷ್ಟವಾಗಿ ಕಾಣುತ್ತಿತ್ತು… ಇನ್ನೇನು ಇಲ್ಲೂ ಮಳೆಯಾಗುತ್ತದೆ.. ತಂಪು ಗಾಳಿ ಬೀಸತೊಡಗಿದೆ.. ಮೋಡ ಕವಿದ ಮಲೆನಾಡ ಕತ್ತಲು… ಅವಳೂ ಮಳೆಗಾಗಿಯೇ ಕಾದಿದ್ದಾಳೆ… ಮಳೆಗಾಗಿ ಎನ್ನುವುದಕ್ಕಿಂತ ಮಳೆಯೊಡನೇ ಒತ್ತಿ ಬರುವ ಅವನ ನೆನಪುಗಳಿಗಾಗಿ…ಕಳೆದ ಮಳೆಗಾಲದಲ್ಲಿ ಅವನ ಜೊತೆಯಾಗಿ ಸವಿದ ಮಲೆನಾಡ ಮಳೆಯ ಸವಿನೆನಪು ಮಾತ್ರ ಅವಳ ಪಾಲಿಗೆ ಉಳಿದಿರುವುದು.. ಅವಳ ಹಾಗೂ ಅವನ ಅಭಿರುಚಿಗಳಲ್ಲಿ … Read more

ವಿದ್ಯೆ ಮತ್ತು ಸಹೃದಯಿಗರು: ರಾಘವೇಂದ್ರ ತೆಕ್ಕಾರ್

“ಇದು ಸುಮಾರು 2002 ನೆ ಇಸವಿಯ ಘಟನೆಗಳು……” ಬಹುರಾಷ್ಟ್ರೀಯ ಕಂಪೆನಿಯೊಂದು ತನ್ನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಂದರ್ಶನವೊಂದನ್ನು ನಗರದ ಪ್ರತಿಷ್ಟಿತ ಹೋಟೇಲ್ ಒಂದರಲ್ಲಿ ಕರೆದಿತ್ತು. ಸೂಟು ಬೂಟಲ್ಲಿ ಖಡಕ್ ಇಸ್ತರೀ ಬಟ್ಟೆಗಳ ಮೇಳೈಕೆಗಳ ಜೊತೆ ಕೈಯಲ್ಲಿ ಒಂದೀಟುದ್ದದ ಫೈಲ್ ಹಿಡಿದು ಇದ್ದ ಬದ್ದ ಕಾಗದ ಪತ್ರವನ್ನು ತುಂಬಿ ಸರತಿಯಲ್ಲಿ ಸಂದರ್ಶನವನ್ನು ಎದುರುಗೊಳ್ಳಲು ತಲೆ ಮೇಲೆ ಆಕಾಶ ಉದುರಿಸಿಕೊಂಡಂತೆ ನಿಂತವರ ಮಧ್ಯದಲ್ಲಿ…….. ಕಾಲಿಗೆ ಪ್ಯಾರಗಾನ್ ಹವಾಯಿ ಚಪ್ಪಲ್ ಸಿಗಿಸಿಕೊಂಡು ದೊಗಲೆ ಪ್ಯಾಂಟ್ ಜೋಬಲ್ಲಿ ಒಂದು ಪೆನ್ … Read more

ಕಂಕಣ ನಾಡು ನುಡಿಗಾಗಿ: ಯದುನಂದನ್ ಗೌಡ ಎ.ಟಿ.

     ಹೆಸರೇ ಸೂಚಿಸುವಂತೆ "ಕಂಕಣ" ಎನ್ನುವುದು ಕನ್ನಡಿಗರಿಂದ, ಕನ್ನಡಕ್ಕಾಗಿ ಜನ್ಮ ತಾಳಿರುವ ಒಂದು ಕನ್ನಡಪರ ಬಳಗ. ಖ್ಯಾತ ಚಲನಚಿತ್ರ ಸಾಹಿತಿ “ಕವಿರಾಜ್” ಈ ತಂಡದ ಸಾರಥಿಯಾಗಿದ್ದು ಸುಮಾರು 150 ಸ್ವಯಂ ಪ್ರೇರಿತ ಕನ್ನಡಿಗ ಸದ್ಯಸರು ಈ ಬಳಗದಲ್ಲಿದ್ದಾರೆ.  ಇತ್ತೀಚೆಗೆ ಕರ್ನಾಟಕದಲ್ಲಿ, ಅದರಲ್ಲೂ ನಮ್ಮ ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯ ಜೀವನದಲ್ಲಿ ಕನ್ನಡ ಬಳಕೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಸಾಗಿದೆ. ಶಾಪಿಂಗ್ ಮಾಲ್ ಗಳು, ಅಂಗಡಿಗಳು, ಹೋಟೆಲ್ ಗಳು, ಬ್ಯಾಂಕ್ ಗಳು, ಬಸ್ ನಿಲ್ದಾಣಗಳು ಮುಂತಾದ ಸ್ಥಳಗಳಲ್ಲಿ ಕನ್ಮಡಿಗರೇ … Read more

ಜಲ್ದಿ ಪ್ಯಾಕ್ ಮಾಡು: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಭಾರತದ ಪ್ರವಾಸದಲ್ಲಿದ್ದ ಜಾನ್ ನಿಂದ ಬಂದ ಸಂದೇಶ ವೆಂಕಟ್ ಗೆ ಗರಬಡಿಸಿತ್ತು. ಅಮೆರಿಕಾದ ಪ್ರವಾಸವನ್ನು ಮೊಟಕುಗೊಳಿಸಿ ಕೂಡಲೇ ವಾಪಸ್ಸು ಬರುವಂತೆ ಒಂದೇ ಸಾಲಿನ ಆದೇಶ ಹೊರಡಿಸಿದ್ದ ಅ ಪತ್ರ ಗತಕಾಲದಲ್ಲಿ ಚಾಲ್ತಿಯಿದ್ದ ಟೆಲಿಗ್ರಾಂ ನಂತೆ ಅವನಿಗೆ ಹೈ ವೋಲ್ಟೇಜ್ ಶಾಕ್ ಕೊಟ್ಟಿತ್ತು! ಅವನಿಗೆ ಆಶ್ಚರ್ಯವಾಗಿದ್ದೆಂದರೆ ಆ ಇಮೇಲ್ ಇವನ ಬಾಸ್ ಸುಧೀರ್ ನಿಂದ ಬರದೆ ಜಾನ್ ಕಡೆಯಿಂದ ಬಂದಿದ್ದು. ಸುಧೀರ್ ಗೆ ಕರೆ ಮಾಡಿ ಕೇಳಲು ಅವನು ತನ್ನ ಸ್ಥಾನಕ್ಕೆ ರಾಜಿನಾಮೆ ಕೊಟ್ಟ ವಿಷಯ ಗೊತ್ತಾಯಿತು. … Read more

ಇದು ಎಂತಾ ಲೋಕವಯ್ಯ: ಅನಿತಾ ನರೇಶ್ ಮಂಚಿ

ನಮ್ಮ ಮನೆಗೇ ಕಂಪ್ಯೂಟರ್ ಬರುವವರೆಗೆ ಕಂಪ್ಯೂಟರ್ ಎಂಬುದನ್ನು ಅತೀ ಸಮೀಪದಲ್ಲಿ ನೋಡಿಯೇ ಗೊತ್ತಿರಲಿಲ್ಲ.  ಮನೆಗೆ ಕಾಲಿಟ್ಟ ಹೊಸದರಲ್ಲಿ ಅದನ್ನು ಮುಟ್ಟಿದರೆ ಎಲ್ಲಿ ಹೊಗೆ ಏಳುವುದೋ, ಎಲ್ಲಿ ಬಾಂಬ್ ಬ್ಲಾಸ್ಟ್ ಆಗುವುದೋ ಎನ್ನುವಷ್ಟು ಭಯ. ಮಗ ಅದರ ಕೀ ಪ್ಯಾಡನ್ನು ಟಕ ಟಕನೆ ಒತ್ತಿದೊಡನೆ ‘ಕುಲ್ ಜಾ ಸಿಮ್ ಸಿಮ್’ ಎಂದು ಹೇಳಿದಂತಾಗಿ  ಹೊಸ ಲೋಕದ ಬಾಗಿಲು ತೆರೆದುಕೊಳ್ಳುವುದನ್ನು ಸುಮ್ಮನೆ ಕುಳಿತು ನೋಡುವುದೇ ಸಂಭ್ರಮ.  ಕೆಲವು ದಿನಗಳಲ್ಲಿ ಎದುರಿನ ಕುರ್ಚಿಯ ಮೇಲೆ ಕುಳಿತು ಮೆಲ್ಲನೆ ಅದರೊಂದಿಗೆ ಕುಶಲೋಪರಿ ನಡೆಸುವಷ್ಟು … Read more

ಪಂಜು ಕಾವ್ಯಧಾರೆ

ನಿರುತ್ತರ ನನ್ನೊಳಗೆ ಕಾಡುವ ತುಮುಲಗಳಿಗೆ ಅಂಕುಶವಿಟ್ಟು, ಹೊರ ನಡೆಯುವ ವೇಳೆ, ಯಾರದೋ ನಿರ್ದಯೆಯಿಂದ ಮುಳ್ಳಿನ ಹಾಸಿಗೆಯ ಮೇಲೆ  ಪವಡಿಸಿದ ಅನುಭವ;  ನಡುಗುಡ್ಡೆಯಲ್ಲಿ ಜೀವ ಸೆರೆಯಿಟ್ಟು, ನನ್ನ ಹೊಸಕಿ, ಬಿಸುಡಿದ್ದಾರೆ. ಅಶೀಲ ಕಲ್ಮಶ ಒಳ ಹೊಕ್ಕಿದೆ. ರಸ್ತೆಯುದ್ದಕ್ಕೂ ಪ್ರತಿಭಟನಾಕಾರರು. ಗೂಟದ ಕಾರುಗಳು ನುಸುಳುತ್ತಿವೆ ನಾನಿರುವೆಡೆ. ಆರಕ್ಷಕರು, ಈರಕ್ಷಕರು ಒಂದಾಗಿದ್ದಾರೆ. ಪ್ರಭಾವಳಿಯಂತೆ ನಿಂತಂತಿದೆ ಬೆನ್ನ ಹಿಂದೆ. ನತದೃಷ್ಟೆಯೆಂದರೆ ನಾನೇ ಇರಬೇಕು. ಅನಾಮಧೇಯಳಾಗಿ ಜನರ ಬಾಯಲ್ಲಿ ಹರಿದಾಡುತ್ತಿದೆ ವಿಕೃತ ಕೃತ್ಯ. ಬದುಕುವಾಸೆಗೆ ಬೆಲೆಕೊಟ್ಟು, ಕಾಡುವ ಆ ರಾತ್ರಿಯ ಕರಿ ಛಾಯೆಯಿಂದ ಬೇರ್ಪಟ್ಟು, … Read more

ಬಾ ಮಳೆಯೆ ಬಾ….: ಸಂಗಮೇಶ ಡಿಗ್ಗಿ ಸಂಗಾಮಿತ್ರ

ಮೂರುಸಂಜೆ ಸಮಯ. ಭೂಮಿಯನ್ನು ಅಪ್ಪಿ ತಬ್ಬಿಕೊಳ್ಳಲು ಮಳೆ ಹನಿಗಳು ಪೈಪೋಟಿಗೆ ಬಿದ್ದಂತೆ ತಾಮುಂದು ನಿ ಮುಂದು ಎಂದು ಧರಣಿಯ ಕೆನ್ನೆಗೆ ಮುತ್ತಿಕ್ಕುತ್ತವೆ. ಕಾದು ಸುಡುವ ಹಂಚಾಗಿದ್ದ ಭೂಮಿಗೆ ತಣ್ಣನೆಯ ಬಟ್ಟೆಯನ್ನು ಹೊದಿಸಿದ ಅನುಭವ. ಊರ ತುಂಬ ಪಸರಿಸಿದ ಮಣ್ಣ ಸುವಾಸನೆಗೆ ಪಾರಿಜಾತದ ಘಮವು ಸಪ್ಪೆಯಾಗಿದೆ. ಯಾವ ಸೀಮೆಯ, ಯಾವ ಊರಿನ, ಯಾವ ಕೇರಿಯ ನೀರು ಆವಿಯಾಗಿ, ಹೆಪ್ಪುಗಟ್ಟಿ, ಮೋಡವಾಗಿ ಕರಗಿ ನೀರಾಗಿ ಪರಿಚಯವಿಲ್ಲದ ಜಾಗದಲ್ಲಿ ನಾಚಿಕೆ ಪಟ್ಟುಕೊಳ್ಳದೆ ಜಂಬವಿಲ್ಲದೆ ಸುರಿಯುವ ಅಮೃತಘಳಿಗೆಗೆ ಮಣ್ಣಿನೊಳಗೆ ಅಡಗಿ ಕುಳಿತ ಬೀಜ, … Read more

ನೇರಳೆ ಹಣ್ಣು: ಪ್ರಶಸ್ತಿ

ಸಣ್ಣವರಿದ್ದಾಗ ಜೂನ್ ಜುಲೈ ಅಂದ್ರೆ ನೆನ್ಪಾಗ್ತಿದ್ದಿದ್ದು ಹಸಿರೋ ಹಸಿರು. ಉಧೋ ಅಂತ ಸುರಿಯುತ್ತಿದ್ದ ಮಳೆಯಲ್ಲೊಂದು ಛತ್ರಿ ಹಿಡಿದು ಹಸಿರ ಹುಲ್ಲ ಮಧ್ಯದ ದಾರಿಯಲ್ಲಿ ಪಚಕ್ ಪಚಕ್ ಅಂತ ನೀರು ಹಾರಿಸ್ತಾ ನಡೀತಿದ್ರೆ ಗಮನವೆಲ್ಲಾ ದಾರಿ ಬದಿಯ ಕುನ್ನೇರಲೆ ಗಿಡಗಳ ಮೇಲೇ. ದೊಡ್ಡ ನೇರಳೇ ಮರದಿಂದ ಬಿದ್ದು ರಸ್ತೆಯಲ್ಲೆಲ್ಲಾ ಹಾಸಿ ಹೋದ ನೇರಲೇ ಹಣ್ಣುಗಳಲ್ಲಿ ಒಂದಿಷ್ಟು ಆರಿಸಿ ತಿಂದ, ಸಂಜೆ ಬಂದು ಇನ್ನೊಂದಿಷ್ಟು ಕೊಯ್ಯೋ ಪ್ಲಾನಿದ್ದರೂ ಕಣ್ಣಿಗೆ ಬಿದ್ದ ಕುನ್ನೇರಲೇ ಹಣ್ಣುಗಳು ಕರೆಯದೇ ಬಿಡುತ್ತಿರಲಿಲ್ಲ. ಮಳೆಗಾಲವೆಂದರೆ ತೋಟದಲ್ಲಿ ಕಾಣುತ್ತಿದ್ದ … Read more

ಬೆಳೆದಿದೆ ನೋಡಾ ಬೆಂಗಳೂರು ನಗರ!!!: ಅಖಿಲೇಶ್ ಚಿಪ್ಪಳಿ

ಹಿಂದಿನ ಭಾನುವಾರ ಸಾಗರದಲ್ಲಿನ ಸ್ವಸಹಾಯ ಗುಂಪಿನ ವಾರ್ಷಿಕ ಸಭೆ ಕರೆದಿದ್ದರು. ಪೇಟೆಯಲ್ಲಿ ತರಕಾರಿ ಬೆಳೆಯುವ ಬಗ್ಗೆ ಮಾಹಿತಿ ನೀಡಿ ಎಂಬುದು ಅವರ ಕೋರಿಕೆ. ವಾಯುಭಾರ ಕುಸಿತದಿಂದಾಗಿ ಅಂದು ಜೋರು ಮಳೆಯಿತ್ತು, ಕರೆಂಟು ಇರಲಿಲ್ಲ. ಅದೊಂದು ಸುಮಾರು 50-60 ಜನರಿರುವ ಚಿಕ್ಕ ಸಭೆ.  ಸಭೆಯ ವಿಧಿ-ವಿಧಾನಗಳು ಮುಗಿದ ಮೇಲೆ ಮಾತಿಗೆ ಶುರುವಿಟ್ಟುಕೊಂಡಿದ್ದಾಯಿತು. ಆ ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಮೂಲತ: ಕೃಷಿ-ಕುಟುಂಬದವರೇ ಆಗಿದ್ದರು. ನಿಮ್ಮ ವಂಶವಾಹಿನಿಯಲ್ಲೇ ಕೃಷಿ-ತೋಟಗಾರಿಕೆಗೆ ಬೇಕಾಗುವ ಅಂಶವಿದೆ ಆದ್ದರಿಂದ ತರಕಾರಿ ಬೆಳೆಯುವ ಬಗ್ಗೆ ಆಮೇಲೆ ಮಾತನಾಡೋಣ ಎಂದು, … Read more

ಮಾಸದ ಸೋಣೆ – ಶ್ರಾವಣದ ಸೋಣೆ ಆರತಿ: ಬೆಳ್ಳಾಲ ಗೋಪಿನಾಥ ರಾವ್

ಆಶಾಢ ಕಳೆದರೆ ಬರುವುದೇ ಶ್ರಾವಣ ಮಾಸ. ಆಗಾಗ್ಗೆ ಹನಿ ಹನಿದು ಒಮ್ಮೊಮ್ಮೆ ಬೀಡು ಭಿರುಸಾಗಿ ಬೀಳೋ ಮಳೆ ಕೂಡಾ ವಾತಾವರಣವನ್ನು ಆಮೋದ ಕಣವನ್ನಾಗಿ ಮಾಡಿ ಇಡೀ ಭೂರಮೆಯೇ ಹಸಿರುಟ್ಟು ಕಂಗೊಳಿಸೊ ಕಾಲವನ್ನಾಗಿ ಪರಿವರ್ತಿಸಿ ಬಿಡುತ್ತೆ, ಅದರ ಜತೆ ಸಂಘ ಜೀವಿ ಮಾನವನಿಗೂ ತನ್ನ ಸಹೃದಯತೆಯ ಸಂಚಲನೆಯ ಪಾಠ ಹೇಳೊಕೊಡೊದರಲ್ಲಿರುವ ವಸುಂಧರೆ…ಪ್ರಕೃತಿಯ ಮರ ಗಿಡ ಬಳ್ಳಿಗಳು ನಲಿ ನಲಿದು ಪ್ರತಿ ಕ್ಷಣವನ್ನು ಸವಿಯುತ್ತಾ ನಮ್ಮೆಲ್ಲರನ್ನೂ ಇವರೆಲ್ಲರ ಋಣಿಯನ್ನಾಗಿಸಿ ಬಿಡುತ್ತವೆ. ನೋಡಿದಷ್ಟೂ ಉದ್ದಕ್ಕೆ ಕಣ್ಮನ ತಣಿಸುವ ಹಸಿರು ಉಲ್ಲಾಸ ನೀಡುತ್ತದೆ. … Read more