ಪ್ರತಿಭೆಗಿಂತ ಹುಚ್ಚು ದೊಡ್ಡದು: ವಾಸುಕಿ ರಾಘವನ್ ಅಂಕಣ

ಪ್ರತಿಭೆಗೆ ನಮ್ಮ ದೇಶದಲ್ಲಿ ಸಿಗುವಷ್ಟು ಮಾನ್ಯತೆ ಬಹುಷಃ ಪ್ರಪಂಚದ ಯಾವ ದೇಶದಲ್ಲೂ ಸಿಗಲಿಕ್ಕಿಲ್ಲ. ನನ್ನ ಹೇಳಿಕೆ ನೀವು ದೇಶಾಭಿಮಾನದ ಹೆಮ್ಮೆಯಿಂದ ಬೀಗುವಂತೆ ಮಾಡಿದ್ದರೆ ಕ್ಷಮಿಸಿ, ನಾನು ಅದನ್ನು ವ್ಯಂಗ್ಯವಾಗಿ ಹೇಳಿದೆ. ನೀವು ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾದವರ ಬಗ್ಗೆ ಮಾತಾಡುವಾಗ ಗಮನಿಸಿ, ನಿಮಗೆ ಕೇಳಸಿಗುವುದು ಅವರ “ಟ್ಯಾಲೆಂಟ್” ಅಥವಾ “ಬುದ್ಧಿವಂತಿಕೆ”ಯ ಬಗ್ಗೆ.   “ನೀನು ನಿನಗಿಂತ ಬುದ್ಧಿವಂತರ ಜೊತೆ ಸ್ನೇಹ ಮಾಡಬೇಕು” ಅಂತ ಸದುದ್ದೇಶದಿಂದಲೇ ಹೇಳುವ ಟಿಪಿಕಲ್ ಮಿಡ್ಲ್ ಕ್ಲಾಸ್ ಪೇರೆಂಟ್ಸ್ ಇರಬಹುದು, “ಆಶಾ ಭೋಸ್ಲೆ ಎಂತಹ ಗಿಫ್ಟೆಡ್ … Read more

ಎರಡು ಕವಿತೆಗಳು: ಸಂತೆಬೆನ್ನೂರು ಫೈಜ್ನಟ್ರಾಜ್, ಶ್ರೀಧರ ನಾಯಕ

          ನಾಳೆಯ ಕತೆ        ಸುಮ್ಮನಿರುವುದಕ್ಕಿಂತ  ಏನಾದರೂ ಹೇಳಿ ಬಿಡು ’ನಾಳೆ’ ಬಂದಿತೋ ಇಲ್ಲವೋ…. ಎದಯ ತಲ್ಲಣ ಕಣ್ಣ ನೀರು ಹೃದಯದ ಮಾತು ಗಳ ಮುಚ್ಚಿಡಬೇಡ ’ಇಂದೇ’ ಹೊರಹಾಕು ನಾಳೆ ಕಂಡವರ್‍ಯಾರು?   ಕಳೆದುದ ಹುಡುಕಿಯೇನು ಸುಖ ಗೆಳತಿ; ಎಲ್ಲರೂ ಏನಾದರೊಂದು ಕಳೆದು ಕೊಂಡೇ ಇರ್ತಾರೆ ನನ್ನಂತೆ, ನಿನ್ನಂತೆ! ಇರುವುದ ಕಂಡು ಸುಖಿಸು ’ನಾಳೆ’ ಗಳಿಗೆ ನಿಟ್ಟುಸಿರೇಕೆ? ಏನಾದರೂ ಮಾಡುತಿರು ಎಂಬ ಮಾತಂತೆ ಹಾಡು ಮನದ ಹಾಡು, ಕವಿತೆ … Read more

ಈ ಬಾಳ ಪುಟಗಳಲ್ಲಿ ಭಾಮಿನಿ: ಉಮೇಶ್ ದೇಸಾಯಿ

ಅವ ಬಂದಾಗ ಎದಿರಾಗಬಾರದು ಎಂಬ ಹಿಂಜರಿಕೆ ಇತ್ತು. ಹೀಗಾಗಿಯೇ ನೆವ ಮಾಡಿ ಬಾಜೂ ಮನೆಯ ಶಾಮರಾಯರ ಕಡೆ ಹೋಗಿದ್ದೆ. ವಾಸು ಮಾಮಾನ ಜೊತೆ ಅವನ ಹರಟೆ ಜೋರಾಗಿ ನಡೆದಿತ್ತು. ಸ್ವಲ್ಪ ಅನ್ನುವುದಕ್ಕಿಂತ ಪೂರ್ತಿಯೇ ಬದಲಾಗಿದ್ದ. ಕೂದಲಿಗೆ ಢಾಳಾಗಿ ಬಣ್ಣ ಬಡಿದುಕೊಂಡಿದ್ದ. ಬೊಜ್ಜು ಸ್ವಲ್ಪ ಅತಿ ಅನಿಸುವಂತಿತ್ತು. ಒಬ್ಬನೇ ಬಂದಿದ್ದಾನೆ. ಇದಾಗಲೇ ಶಾಮರಾಯರ ಮನೆಯಲ್ಲಿ ಸುದ್ದಿ ಹಬ್ಬಿತ್ತು. ಪಡಸಾಲೆಯಲ್ಲಿ ಕುಳಿತ ಅವನ ಮುಂದೆ ಹಾದೇ ಅಡಿಗೆ ಮನೆಗೆ ಹೋಗಬೇಕು. ನನ್ನ ನೋಡಿದವನೋ ಇಲ್ಲವೋ ಗೊತ್ತಾಗಲಿಲ್ಲ. ಹರಟೆ ಜೋರಾಗಿತ್ತು. ಗಮನಿಸಿರಲಿಕ್ಕಿಲ್ಲ … Read more

ನೆನಪಿನ ಜೋಕಾಲಿ: ಸುಮನ್ ದೇಸಾಯಿ ಅಂಕಣ

ಎಲ್ಲಾರ ಜೀವನದೊಳಗು ಈ ಬಾಲ್ಯ ಅನ್ನೊದು ಅಮೂಲ್ಯವಾಗಿದ್ದಿರತದ. ಯಾವ ಕಲ್ಮಷ ಇಲ್ಲದ, ನಾಳಿನ ಚಿಂತೆ, ನೋವು ಇಲ್ಲದ ಆಡಿ ಬೆಳದ ಸಮಯ ಅದಾಗಿರತದ. ಈ ಬಾಲ್ಯದೊಳಗ ಏನೆ ಮಾಡಿದ್ರು ಛಂದನ ಇರತದ.” ಬಾರಾ ಖೂನಿ ಮಾಫ” ಅಂತಾರಲ್ಲಾ ಹಂಗ ಎಂಥಾ ಮಂಗ್ಯಾನಾಟಾ ಮಾಡಿದ್ರು ನಡಿತಿರತದ. ಅದರೊಳಗ ಈ ಹತ್ತರಿಂದ ಹದಿನಾರನೇ ವಯಸ್ಸಿನೊಳಗಿನ ಮನಸ್ಸಂತು ಯಾರ ಕೈಗು ಸಿಗದ ಬೀಸೊಗಾಳಿ ಹಂಗಿರತದ ಬಿಂದಾಸಾಗಿ ಆಡಿಕೊಂಡ ಎದುರಿಗೆ ಸಿಕ್ಕಿದ್ದನ ತನ್ನ ತುಂಟಾಟದ ರಭಸಕ್ಕ ನಡುಗಿಸೊ ಹಂಗ. ಬಾಲ್ಯ ಎಷ್ಟು ದಟ್ಟವಾಗಿರತದೊ … Read more

ಚುಟುಕಗಳು: ಗುರುನಾಥ್ ಬೋರಗಿ

   ೧ ನಾನು ನಿನಗೆ  ಪ್ರೀತಿಸುವುದು  ಹೇಗೆಂದು  ಹೇಳಿ ಕೊಟ್ಟೆ. ನೀನದನು  ಇನ್ನೊಬ್ಬನಲಿ  ಪ್ರಯೋಗಿಸಿ ಬಿಟ್ಟೆ   ೨ ಚುಚ್ಚಿ ಗಾಯಗೊಳಿಸುವ  ದರ್ಜಿಯ ಸೂಜಿಗೆ,  ಎರಡನೊಂದಾಗಿಸುವ  ಹಿರಿಗುಣವೂ ಇದೆ.   ೩ ಬಿಳಿ ಕಾಗದ ಮೇಲೆ  ದುಂಡಾಗದೆಯೇ  ಸತಾಯಿಸಿದ ನನ್ನ  ಅಕ್ಷರಗಳು, ನಿನ್ನ ಕೆನ್ನೆ, ತುಟಿ ಮೇಲೆ  ಬರೆದಾಕ್ಷಣವೇ  ಸಾಲು ಮುತ್ತಾದವು    ೪ ಹರಯದ ಅವಸರಕ್ಕೆ ಮೊಳೆತ ಭ್ರೂಣಕೆ, ದವಾಖಾನೆ ದಾದಿಯರ ಕೈಗವುಸುಗಳದ್ದೇ ಭಯ   ೫ ಗೆಳತೀ.. ನನ್ನ ಪಾಲಿಗೆ ; ನಿನ್ನ ನೆನಪುಗಳೇ … Read more

ಕೆಂಗುಲಾಬಿ (ಭಾಗ 14): ಹನುಮಂತ ಹಾಲಿಗೇರಿ

  (ಇಲ್ಲಿಯವರೆಗೆ) ಕಾಲ ಹೀಗೆ ಬರುತ್ತೆ ಅಂತ ಹೇಳಲಿಕ್ಕಾಗುವುದಿಲ್ಲ. ಮದುವೆಯಾಗಿ ವರ್ಷ ತುಂಬಿ ಎರಡನೇ ವರ್ಷಕ್ಕೆ ಕಾಲಿಟ್ಟರಲಿಲ್ಲ. ಇನ್ನೂ ನಾನು ನನ್ನ ಹೆಂಡತಿ ಲಲಿತಾ ಪರಸ್ಪರ ಅರ್ಥ ಮಾಡಿಕೊಳ್ಳುವುದರಲ್ಲಿದ್ದೆವು. ಮದುವೆಯಾದ ತಕ್ಷಣವೇ ನಾನು ನನ್ನ ಹೆಂಡತಿಗೆ ನನ್ನ ಕೆಲಸದ ವಿಷಯ, ಶಾರಿಯ ವಿಷಯಗಳನ್ನು ಮುಕ್ತವಾಗಿ ಹೇಳಿದ್ದೆ. ಅಷ್ಟೇ ಅಲ್ಲದೆ ಅವಳನ್ನು ಶಾರಿಯ ಮನೆಗೆ ಕರೆದುಕೊಂಡು ಹೋಗಿದ್ದೆ ಕೂಡ. ಅಲ್ಲಿ ನಮ್ಮಿಬ್ಬರ ಪ್ರೀತಿ ವಿಶ್ವಾಸವನ್ನು ಗಮನಿಸಿದ ಲಲ್ಲಿ ಅಂದಿನಿಂದ ತಾನು ನನ್ನೊಂದಿಗೆ ನಡೆದುಕೊಳ್ಳುವ ಪದ್ದತಿಯನ್ನೇ ಬದಲಿಸಿದಳು. ಅವಳಲ್ಲಿ ಅನುಮಾನದ … Read more

ಶಿಕ್ಷಕರಿಗೊಂದು ಸೆಲ್ಯೂಟ್: ಪ್ರಜ್ವಲ್ ಕುಮಾರ್

                ಶಿಕ್ಷಕರು ಅಂದ್ರೆ ದೇವರಿದ್ದಂತೆ, ಶಿಕ್ಷಕರು ಎಷ್ಟು ಒಳ್ಳೆಯವರಾಗಿರ್ತಾರೋ ಅವರ ವಿದ್ಯಾರ್ಥಿಗಳೂ ಅಷ್ಟೇ ಒಳ್ಳೆಯವರಾಗಿರ್ತಾರೆ ಅಂತೆಲ್ಲಾ ಕೊರೀತಾ ಕೂತ್ರೆ ಒಂದು ನಕ್ಷತ್ರ ಹುಟ್ಟಿ ಅದು ಕಪ್ಪು ರಂಧ್ರ ಸ್ಥಿತಿ ತಲುಪುವವರೆಗೂ ಕೊರೀಬಹುದು. ಇಂಥವೆಲ್ಲಾ ಬಿಟ್ಟು ಬೇರೆ ಏನಾದ್ರೂ ಹೇಳೋಣಾ ಅಂದ್ರೆ ಅವರನ್ನು ಬಯ್ಯೋದೋ, ಹೊಗಳೋದೋ ಅಥವಾ ಹೀಗೇ ನೆನಪು ಮಾಡ್ಕೊಳ್ತಾ ಇರೋದೋ ಗೊತ್ತಾಗ್ತಿಲ್ಲ.   ಒಂದು ಕಡೆಯಿಂದ ಶುರು ಮಾಡುವುದಾದರೆ ನಾವೆಲ್ಲಾ ಅಂಗನವಾಡಿ ಅಥವಾ ಶಿಶುವಾರಕ್ಕೆ ಹೋಗುವಾಗ … Read more

ಸಾವಿನ ವ್ಯಾಖ್ಯಾನ: ಅಜ್ಜಿಮನೆ ಗಣೇಶ್

ಅಪರೂಪಕ್ಕೆ ಎಂಬಂತೆ ಈ ವರ್ಷ ಶರಾವತಿ ಲಿಂಗನಮಕ್ಕಿ ಅಣೆಕಟ್ಟೆಯನ್ನ ದಾಟಿ ಹರಿಯುತ್ತಿದ್ದಾಳೆ. ಬೇಸಿಗೆಯಲ್ಲಿ ತನ್ನ ಪಾಲಿನ ಹದಿನೈದು ಪರ್ಸೆಂಟ್ ವಿದ್ಯುತ್ ನ್ನ ಶರಾವತಿ ಖಂಡಿತಾ ಕೊಡುತ್ತಾಳೆ. ಇದಕ್ಕೆ ಪೂರಕವಾಗಿ ಕಣಿವೆ ಪ್ರದೇಶದ ವಿದ್ಯುತ್ ತಯಾರಿಕಾ ಯಂತ್ರಗಳು ಸಹ ಕೆಲಸ ಶುರುವಿಟ್ಟುಕೊಡಿದೆ. ನಾಡು ಸಂತೋಷದಲ್ಲಿದೆ, ಸರ್ಕಾರ ತೃಪ್ತಿಯಾಗಿದೆ. ಆದರೆ ಶರಾವತಿಯ ಮಡಿಲಲ್ಲಿ ನಡೆದ ಘಟನೆಯೊಂದು ಮಾತ್ರ ನನ್ನನ್ನ, ಕಳೆದೊಂದು ತಿಂಗಳಿನಿಂದಲೂ, ಬಿಡದೆ ಕಾಡುತ್ತಿದೆ.ಅಲ್ಲಿ ನಡೆದ ಸಾವಿನ ಘಟನೆಯೊಂದು, ನನ್ನನ್ನ ಮರಣ ಚಿಂತನೆಯಲ್ಲಿ ತೊಡಗಿಸಿದೆ.  ಮನಸ್ಸಿನ ಗೂಗಲ್ ನಲ್ಲಿ ಮೃತ್ಯು … Read more

ಹುಟ್ಟು ಹಬ್ಬದ ಶುಭಾಶಯಗಳು ಸರ್: ರೇಣುಕಾ ಶಿಲ್ಪಿ, ಹೂವಿನಹಡಗಲಿ.

ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಆದ ವಿಶಿಷ್ಟ ಕಥನ ಶೈಲಿಯಿಂದ ಜನಪ್ರಿಯರಾಗಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಕತೆಗಾರ ಕುಂ.ವೀರಭದ್ರಪ್ಪ ಅವರಿಗೆ ಇದೇ ಅಕ್ಟೋಬರ್ 1 ರಂದು ಜನ್ಮದಿನದ ಸಂಭ್ರಮ. ಈ ಸುಸಂದರ್ಭದಲ್ಲಿ ‘ಕುಂವೀ ಯವರಿಗೆ ಈ ಕಿರು ಪರಿಚಯಾತ್ಮಕ ಲೇಖನದ ಮೂಲಕ ಶುಭ ಕೋರುವ ಪುಟ್ಟ ಪ್ರಯತ್ನವಿದು. ನಾನು ಮೊದಲ ಬಾರಿ ಅವರನ್ನು ಕಂಡದ್ದು ನನ್ನ ಹೈಸ್ಕೂಲು ದಿನಗಳಲ್ಲಿ. ಸರಿಸುಮಾರು ಹದಿನೈದು ವರ್ಷಗಳ ಹಿಂದೆ, ನನ್ನೂರು ಹೂವಿನಹಡಗಲಿಯಲ್ಲಿ- ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ … Read more

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಭಾಗ 2): ಶಿವು ಕೆ.

(ಇಲ್ಲಿಯವರೆಗೆ) ಮೊದಲ ಭಾರಿಗೆ ಅಲ್ಲಿನ ಲೋಕಲ್ ರೈಲು ನಿಲ್ದಾಣದೊಳಗೆ ಕಾಲಿಟ್ಟಿದ್ದೆ. ಎಷ್ಟೊಂದು ಜನ ಅಂತೀರಿ! ನೂರಾರು ಸಾವಿರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಸಿದ್ದರಾಗಿ ಬರುವ ರೈಲುಗಾಡಿಗಳಿಗೆ ಕಾಯುತ್ತಿದ್ದರು. ಆ ಕ್ಷಣದಲ್ಲಿ ಮಲ್ಲೇಶ್ವರಂ ರೈಲು ನಿಲ್ದಾಣ ನೆನಪಾಯ್ತು. ಸದಾ ಶಾಂತವಾಗಿರುವ ನಮ್ಮ ಮಲ್ಲೇಶ್ವರಂ ರೈಲು ನಿಲ್ದಾಣವೆಲ್ಲಿ! ಗಿಜಿಗುಟ್ಟುವ ಈ ನಿಲ್ದಾಣವೆಲ್ಲಿ! ಖಂಡಿತ ಹೋಲಿಸಕೊಳ್ಳಬಾರದು ಸುಮ್ಮನೆ ಇಲ್ಲಿನ ದೃಶ್ಯಗಳನ್ನು ಕಣ್ತುಂಬಿಕೊಳ್ಳುತ್ತಾ ಆಸ್ವಾದಿಸಬೇಕೆಂದುಕೊಂಡು ಅಭಿಜಿತ್ ಡೆ ಮತ್ತು ಇತರರೊಂದಿಗೆ ನಾನು ರೈಲು ನಿಲ್ದಾಣದ ಪ್ಲಾಟ್ ಫಾರಂ ಕಡೆಗೆ ನಡೆದೆ. ಆಗಲೇ … Read more

ಗಾಂಧಿಯನ್ನು ಕೊಂದವರ್‍ಯಾರು?:ಅಖಿಲೇಶ್ ಚಿಪ್ಪಳಿ ಅಂಕಣ

ಭೌತಿಕವಾದ ಗಾಂಧಿಯನ್ನು ಕೊಂದಿದ್ದು ನಾಥುರಾಮ್ ಗೋಡ್ಸೆ. ಗಾಂಧಿಯನ್ನು ಕೊಂದ ತಾನು ನೇಣಿಗೇರಿ ಸತ್ತ. 600 ಚಿಲ್ಲರೆ ರಾಜರನ್ನು ಹೊಂದಿದ ಪುರಾತನ ಭಾರತವನ್ನು ಒಡೆದಾಳಿ, ಗುಲಾಮಗಿರಿಗೆ ತಳ್ಳಿ ಮೆರೆದಿದ್ದು ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಕರೆಯಲಾಗುವ ಬ್ರೀಟಿಷರ ಹೆಗ್ಗಳಿಕೆ. ದೇಶಾಭಿಮಾನ ಮತ್ತು ಸ್ವಾಭಿಮಾನ ಮೇಳೈಸಿ, ಗುಲಾಮತನಕ್ಕೆ ಒಗ್ಗಿಹೋಗಿದ್ದ ಲಕ್ಷಾಂತರ ಭಾರತೀಯರಿಗೆ ಸ್ವದೇಶಿ, ಸ್ವಾಭಿಮಾನ, ಸ್ವಾತಂತ್ರ್ಯವೆಂಬ ಊರುಗೋಲುಗಳನ್ನು ನೀಡಿ ಎಬ್ಬಿಸಿ ನಿಲ್ಲಿಸಿದವರಲ್ಲಿ ಗಾಂಧಿ ಪ್ರಮುಖರು. ಇದಕ್ಕಾಗಿಯೇ ಗಾಂಧಿಯನ್ನು ಇಡೀ ದೇಶ ರಾಷ್ಟ್ರಪಿತನೆಂದು ಒಪ್ಪಿಕೊಂಡಿದೆ. ಸ್ವಾತಂತ್ರ್ಯ ಪಡೆದ ನಂತರದಲ್ಲಿ ರಚಿತವಾದ ಸರ್ಕಾರಗಳ ಧೋರಣೆಗಳು … Read more

ತೆರೆದ ಮನೆ ಬಾಗಿಲಿಗೊಂದು ಬೆಳಕಿನ ತೋರಣ:ಹೃದಯಶಿವ ಅಂಕಣ

ರಸಋಷಿಯ ರಮ್ಯಲೋಕದೆಡೆಗೆ ಬಾಲ್ಯದಲ್ಲಿ ಆಂಗ್ಲ ಸಾಹಿತ್ಯದ ವ್ಯಾಮೋಹಕ್ಕೊಳಗಾಗಿ ಹಲವು ಆಂಗ್ಲಕವಿತೆಗಳನ್ನು ಬರೆದರೂ ಕ್ರಮೇಣ ಕನ್ನಡ ಸಾಹಿತ್ಯ ಕೃಷಿಗೆ ಕೈ ಹಾಕಿ ಇಂದು ಕನ್ನಡ, ಕರ್ನಾಟಕದಷ್ಟೇ ಪ್ರಾಮುಖ್ಯತೆ ಪಡೆದಿರುವ ಕೆ.ವಿ.ಪುಟ್ಟಪ್ಪನವರು 1904ರಲ್ಲಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದವರು. ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತ ಮಲೆನಾಡಿನೊಂದಿಗೆ ಆಟವಾಡುತ್ತ, ಮೋಹಕ ಮಂಜಿನೊಂದಿಗೆ ಮಾತಿಗಿಳಿಯುತ ಬೆಳೆದ ಇವರು ಮೂಲತಃ ನಿಸರ್ಗದ ಆರಾಧಕರಾಗಿದ್ದರು.  ಪ್ರೌಢರಾಗುತ್ತಾ ಹೃದಯ ವಾಸ್ತವಕ್ಕೆ ತೆರೆದುಕೊಳ್ಳುತ್ತಿದ್ದಂತೆಯೇ ತಮ್ಮ ಅಂತಃಸತ್ವಕ್ಕೆ ಅಕ್ಷರ ರೂಪ ಕೊಡುತ್ತಾ ಹೋದಂಥವರು. ಹೊಸ ತಲೆಮಾರಿನ, … Read more

ನಾನು ಬಡವ?:ಗುರುಪ್ರಸಾದ್ ಕುರ್ತಕೋಟಿ

ಮೂರ್ತಿ ಯಾವುದೋ ಒಂದು ಪುಸ್ತಕದಲ್ಲಿ ಗಹನವಾಗಿ ಮುಳುಗಿದ್ದವರು ನಿಟ್ಟುಸಿರು ಬಿಟ್ಟು ಹೀಗೆ ಅರುಹಿದರು… ಮೂರ್ತಿ: "ಗುರು, ಹಿಂದಿನ ಕಾಲದಲ್ಲಿ ನಮ್ಮ ದೇಶದಲ್ಲಿ ಎಂಥಾ ಸುಭಿಕ್ಷೆ ಇತ್ತಂತೆರೀ… ನಿಮಗೊತ್ತಾ? ಆಗ ವಿಜಯನಗರ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಬಂಗಾರಗಳನ್ನ ತರಕಾರಿಗಳ ತರ ಸಂತೆಲಿ ಮಾರುತ್ತಿದ್ದರಂತೆ!" ಗುರು: "ಹೌದು, ಆದ್ರೆ ಆಗಿನ ಕಾಲಕ್ಕೆ ಈಗಿನ ಕಾಲಕ್ಕೆ ಅಷ್ಟೆಲ್ಲಾ ಡಿಫರನ್ಸು ಇಲ್ಲಾ ಬಿಡ್ರೀ." ಮೂ: "ಅಧೆಂಗ್ರೀಪಾ?" ಗು: "ಈಗ ತರಕಾರಿಗಳನ್ನ ಮುತ್ತು, ರತ್ನ, ಬಂಗಾರಗಳ ರೇಟಿನಲ್ಲಿ ಮಾರ್ತಾರೆ ಅಷ್ಟೆ!!" ಮೂ: "ಹ್ಹ ಹ್ಹ … Read more

ಗಲ್ಲಿ ಕ್ರಿಕೆಟ್ಟು, ಲಗೋರಿ ಹಾಗೂ ಫೆರಾರಿ:ಪ್ರಶಸ್ತಿ ಅಂಕಣ

ಇತ್ತೀಚೆಗೆ ಹಿಂದಿಯ "ಫೆರಾರಿ ಕಿ ಸವಾರಿ" ಅನ್ನೋ ಚಿತ್ರ ನೋಡ್ತಾ ಇದ್ದಾಗ ಯಾಕೋ ಬಾಲ್ಯದ ದಿನಗಳು ಬೇಡವೆಂದರೂ ನೆನಪಾದವು. ಬಾಲ್ಯದ ನೆನೆಪುಗಳೆಂದ ತಕ್ಷಣ ನೆನಪಾಗಿದ್ದು ಶಾಲೆಯ ಮಾಸ್ತರೋ, ತಿಂದ ಏಟುಗಳೋ, ಸುತ್ತಿದ ನೆಂಟರ ಮನೆಗಳೋ, ಅಪ್ಪ-ಅಮ್ಮನ ಬೆಚ್ಚನೆ ಬೈಗುಳ/ಅಪ್ಪುಗೆಗಳೋ ಅಲ್ಲ. ಆ ಸಿನಿಮಾ ನೆನೆಸಿದ್ದು ನಮ್ಮ ಬಾಲ್ಯದ ಲಗೋರಿ, ಗೋಲಿ, ಕ್ರಿಕೆಟ್ಟುಗಳ ನೆನಪುಗಳನ್ನ. MRF, ಬ್ರಿಟಾನಿಯ ಬ್ಯಾಟುಗಳನ್ನ ಟೀವಿಯಲ್ಲಿ ಮಾತ್ರ ನೋಡುತ್ತಾ ನಮ್ಮದೇ ದಬ್ಬೆ (ಅಡಿಕೆ ಮರವನ್ನು ಕೊಯ್ದು ಮಾಡಿದ), ಮರದ ದಿಮ್ಮಿಯ ಬ್ಯಾಟುಗಳಲ್ಲಿ, ಅದೂ ಇಲ್ಲದಿದ್ದಾಗ … Read more

ಅಂದಾಜ್ ಅಪ್ನಾ ಅಪ್ನಾ:ವಾಸುಕಿ ರಾಘವನ್ ಅಂಕಣ

ಸಿನಿಮಾ ವಿಮರ್ಶಕ ರಾಜಾ ಸೇನ್ ಅವರು ಒಂದು ಆರ್ಟಿಕಲ್ ಅಲ್ಲಿ ಹೀಗೆ ಬರೆದಿದ್ದ ನೆನಪು. ಆಮೀರ್ ಖಾನ್ ಅವರ ಈ ಚಿತ್ರ ನೆನಪಿದೆಯಾ ನಿಮಗೆ? ಇದರಲ್ಲಿ ನಾಯಕಿಯನ್ನು ಅತಿಯಾಗಿ ಇಷ್ಟಪಡುವ ನಾಯಕ, ತಲೆಗೆ ಬಲವಾದ ರಾಡ್ ಇಂದ ಪೆಟ್ಟು ತಿಂದು, ತನ್ನ ನೆನಪಿನ ಶಕ್ತಿಯನ್ನು ಕಳೆದುಕೊಳ್ಳುತ್ತಾನೆ. ಇದರಿಂದಾಗಿ ಮುಂದೆ ಚಿತ್ರವಿಚಿತ್ರವಾದ ಘಟನೆಗಳು ಜರುಗಿ, ಅವನನ್ನು ಫಜೀತಿಗೆ ಒಡ್ಡುತ್ತವೆ. ಗೊತ್ತಾಯ್ತಾ? ನೀವೂ “ಘಜಿನಿ” ಅಂದು ಬಿಟ್ರಾ? ಛೆ! ಇದೇ ನೋಡಿ, ಈಗಿನ ನೂರು ಕೋಟಿ ಗಳಿಕೆಯ ಸಾಧಾರಣ ಚಿತ್ರಗಳ … Read more

ಕೆಂಗುಲಾಬಿ (ಭಾಗ 13): ಹನುಮಂತ ಹಾಲಿಗೇರಿ

(ಇಲ್ಲಿಯವರೆಗೆ) ಅವತ್ತು ಪೂರ್ತಿ ನಾನು ರೂಮಿನಲ್ಲಿ ಏಳಲೂ ಆಗದೆ ಮಲಗಲು ಆಗದೆ ಬಿದ್ದುಕೊಂಡಿದ್ದೆ. ಕಿವಿಯಲ್ಲಿ ಶಾರಿಯ ಮಾತುಗಳೆ ಗುಂಯ್ಗುಡುತ್ತಿದ್ದವು. ಒಂದಿಷ್ಟು ಮಂಪರು, ಒಂದಿಷ್ಟು ಅರೆ ಎಚ್ಚರ ಮತ್ತೆ ಮಂಪರು. ಶಾರಿ ಬದುಕಿನ ಗೋಳಿಗೆ ಇತಿಶ್ರೀ ಹಾಡುವುದೆಂತು ಎಂದು ಯೋಚಿಸಿದ್ದೇ ಬಂತು. ಒಮ್ಮೊಮ್ಮೆ ನೆಮ್ಮದಿಯಿಂದ ಇರುವ ನಾನು ಶಾರಿಯ ಗದ್ದಲದಲ್ಲಿ ಯಾಕೆ ಸಿಲುಕಿಕೊಳ್ಳಬೇಕು? ನಾನು ಮೊದಲಿನಂತಾಗಬೇಕಾದರೆ ಶಾರಿಯನ್ನು ಮತ್ತೆ ಭೇಟಿಯಾಗಲೇಬಾರದು ಎನಿಸಿತು. ಆದ್ರೆ ಮನಸ್ಸಿಗೆ ಒಗ್ಗಲಿಲ್ಲ. ವರದಿ ತಯಾರಿಸಿಕೊಂಡು ಬಾ ಎಂದ ರಾಜನ್ ಹೇಳಿದ್ದು ನೆನಪಾಯಿತು. ಈಗ ಆಗಿರೋದನ್ನ … Read more

ಕಾಗಿ ಕಾಗಿ ಕವ್ವಾ…:ಸುಮನ್ ದೇಸಾಯಿ ನಗೆ ಅಂಕಣ

ಮುಂಝಾನೆ ಹತ್ತು ಗಂಟೆ ಸುಮಾರ ನಾ ಆಫೀಸನ್ಯಾಗ ಇದ್ದೆ. ನಮ್ಮ ತಮ್ಮನ ಫೋನ್ ಬಂತು. ಇಗ ಇನ್ನ ಹೊಸದಾಗಿ ಮದುವಿ ಮಾಡಕೊಂಡಾನ. ಮದ್ವಿಕಿಂತಾ ಮದಲ ಯಾವಾಗರೆ ಒಮ್ಮೆ ಫೋನ್ ಮಾಡಾಂವಾ ಈಗೀಗ ಎರಡ ದಿನಕ್ಕ ಒಮ್ಮೆ ಮಾಡತಿದ್ದಾ. ತನ್ನ ಗೋಳ ತೋಡ್ಕೊತಿದ್ದಾ.  ಪಾಪ ಇತ್ಲಾಕಡೆ ಅಮ್ಮ ಮತ್ತ ಅತ್ಲಾಕಡೆ ಹೆಂಡ್ತಿ ಕೈಯ್ಯಾಗ ಸಿಕ್ಕು ’ಧೋಬಿ ಕಾ ಕುತ್ತಾ ನಾ ಘರ್ ಕಾ ನ ಘಾಟ್ ಕ’ ಅನ್ನೊಹಂಗ ಆಗಿತ್ತು ನನ್ನ ತಮ್ಮನ ಬಾಳು. ಆವತ್ತು ಫೋನ್ ಮಾಡಿದಾಗನೂ … Read more

ತುರುಬಿಗೆ ತರುಬಿದ ಮನಸು: ನಾಗರಾಜ ಅಂಗಡಿ

ನಾನು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಕನ್ನಡ ಪಾಠ ಮಾಡುತ್ತಿದ್ದೆ. ಅದು ಚಂದ್ರಶೇಖರ ಕಂಬಾರವರ ಆಹ್ವಾನವೆಂಬ ಪದ್ಯವನ್ನು  ವಿಶ್ಲೇಷಿಸುತ್ತಿರುವಾಗ ಆ ಪದ್ಯದಲ್ಲಿಯ ಒಂದು ಸಾಲು  ಹಳೆಯ ಪ್ರಕೃತಿಯ ತುರುಬು ಜಗ್ಗಿ ಆಚೆಗೆ ನೂಕಿ ಎಂಬುದು ಗಕ್ಕನೆ ನನ್ನ ಮನಸ್ಸು ತರುಣಿಯ ತುರುಬಿಗೆ ವಾಲಿಸಿತು. ಪಾಠವನ್ನು ಮುಗಿಸಿ ಬಂದ ಮೇಲೆ ತುರುಬಿನ ಬಗ್ಗೆಯೇ ಚಿಂತೆಯೇ ಶುರುವಾಯಿತು. ಹಾಗೆ ನೋಡಿದರೆ ಪಂಪನಿಂದ ಹಿಡಿದು ಕುವೆಂಪುವರೆಗೆ ಕೂದಲಿನ ಬಗ್ಗೆ ಬರೆಯದವರೇ ಇಲ್ಲವೆಂದು ಹೇಳಬೇಕು. ನಾರಿಗೆ ಗುಣವೇ ಶೃಂಗಾರವೆಂಬಂತೆ ನಾರಿಗೆ ಕೇಶವೇ ಶೃಂಗಾರವೆಂದು ಹೇಳಬಹುದು. ನಾರಿಗೆ … Read more

ಸೈಬರ್ ಕ್ರಾಂತಿ ಮಾರಕವೇ?: ಸಂದೀಪ ಫಡ್ಕೆ, ಮುಂಡಾಜೆ

ಡಿಜಿಟಲ್ ತಂತ್ರಜ್ಞಾನವನ್ನು ಬಗಲಲ್ಲಿಟ್ಟುಕೊಂಡು ಇಲೆಕ್ಟ್ರಾನಿಕ್ ಮಾಧ್ಯಮ ಮತ್ತು ಸಾಮಾಜಿಕ ತಾಣಗಳು ವಿಶ್ವವನ್ನೇ ಅಂಗೈಯಲ್ಲಿ ತಂದು ಕೂರಿಸಿವೆ. ಎಲ್ಲ ಕ್ಷೇತ್ರಗಳ ವಿದ್ಯಮಾನ ಮತ್ತು ದೈನಂದಿನ ಬದುಕಿನ ಪುಟ-ಪುಟಗಳು ಮುಕ್ತವಾಗಿ ಹರಡಲು ಅನುವು ಮಾಡಿಕೊಟ್ಟಿದೆ. ಇಷ್ಟೇ ಅಲ್ಲದೇ, ವಿವಿಧ ಸಂಘಟನೆಗಳ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡಲೂ ಇವು ಹಿಂಜರಿಯುವುದಿಲ್ಲ. ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲರ ಗಮನ ಸೆಳೆಯುವಂತೆ ಮಾಡುವ ಉದಾರ ಗುಣ ಸೈಬರ್ ಕ್ರಾಂತಿಯ ಬೆನ್ನೆಲುಬು. ವಿವಾದಾತ್ಮಕ ಹೇಳಿಕೆಗಳ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ಮಂದಿಗೆ ಹೇಳಿ ಮಾಡಿಸಿದಂತಿರುವ … Read more

ಗೃಹ ಪ್ರವೇಶ, ಹುಟ್ಟುಹಬ್ಬ, ಸನ್ಮಾನ ಮತ್ತು ಸಂಗೀತದ ಹೊನಲು: ಅಮರ್ ದೀಪ್ ಪಿ.ಎಸ್.

ನಾನು ಇತ್ತೀಚಿಗೆ ಕಂಡಂಥ ಪ್ರಸಂಗವೊಂದನ್ನು ಹಂಚಿಕೊಳ್ಳಬಯಸುತ್ತೇನೆ . ನಿಜ, ಬೇರೆಲ್ಲೋ ಈ ತರಹ ಭಾವನಾತ್ಮಕ ಕಾರ್ಯಕ್ರಮಗಳು ನಡೆದಿರಬಹುದಾದರೂ ನಾನು ವಯುಕ್ತಿಕವಾಗಿ ಇದನ್ನು ಕಂಡದ್ದು ಮಾತ್ರ ನನಗೆ ಹೊಸ ಅನುಭವ .  ಕೊಪ್ಪಳಕ್ಕೆ ಬಂದ  ನಂತರ ಇತ್ತೀಚಿಗೆ ನಾನು ತಬಲಾ ಕಲಿಯಲು ಸೇರಿಕೊಂಡ ಶ್ರೀ ಗವಿಸಿದ್ದೇಶ್ವರ ಮಠದ ಸಂಗೀತ ಪಾಥಶಾಲೆಯಲ್ಲಿ ಸಂಪರ್ಕಕ್ಕೆ ಬಂದ ಹಿರಿಯ ಸ್ನೇಹಿತರಾದ ಶ್ರೀ ಶ್ರೀನಿವಾಸ ಜೋಷಿ ಇವರು ಶಿಕ್ಷಣ ಇಲಾಖೆಯಲ್ಲಿ ಸೇವೆಯಲ್ಲಿದ್ದು,  ಪ್ರಸ್ತುತ ಕೊಪ್ಪಳ ಜಿಲ್ಲಾ ಸಂಸದರಾದ ಶ್ರೀ ಶಿವರಾಮೇಗೌಡ ಇವರ ಬಳಿ ಆಪ್ತ … Read more

ನಿರಂತರತೆಯಲಿ ನಾನೊಂದು…?:ಅವಿನಾಶ್ ಸೂರ್ಯ

ಕೆಲವೇ ಕ್ಷಣದಲ್ಲಿ ಸೂರ್ಯ ಪ್ರತಿ ದಿನದ ಮುಕ್ತಾಯಕ್ಕೆ ಪೂರ್ಣ ವಿರಾಮ ತೆಗೆದುಕೊಳ್ಳುವ ಸಮಯ. ಬೆಳಕು ತನ್ನ ಅಸ್ತಿತ್ವ ಕಳೆದುಕೊಂಡು ಕತ್ತಲೆಯಲ್ಲಿ ಮರೆಯಾಗುವ ವೇಳೆಗೆ, ಮನಸಿನ ಮೂಲೆಯಲ್ಲಿ ಕುಳಿತ ಅನಾಮಿಕನ ಪ್ರಶ್ನೆಯೊಂದು ನೆನಪಾಯಿತು! ಪ್ರಶ್ನೆಗೆ ಉತ್ತರ ಸಿಗುವುದೋ ಇಲ್ಲವೋ? ಇಲ್ಲ ಶಾಶ್ವತವಾಗಿ ಕಾಲದ ಅನಂತತೆಯ ಪಥದಲ್ಲಿ ಎಲ್ಲವೂ ಬದಲಾಗುವುದೋ ಇಲ್ಲವೋ ತಿಳಿಯದು. ಯಾವುದಕ್ಕೂ ಇಲ್ಲಿ ಉತ್ತರ ಪ್ರಶ್ನೆಗಳಿಲ್ಲ. ಅಂದ ಹಾಗೆ ನನ್ನನ್ನು ಪರಿಚಯ ಮಾಡಿಕೊಳ್ಳುವ ವಿಷಯವೇ ಮರೆಯಿತು ನೋಡಿ, ಮಹಾನಗರದ ಒಂದು ಉದ್ಯಾನದಲ್ಲಿ ನಾನೊಂದು ಕುರ್ಚಿ. ಏನಪ್ಪಾ ಕುರ್ಚಿಯದೇನು … Read more

ಎರೆಡು ಕವಿತೆಗಳು:ಅನಿತಾ, ಶಾಂತಿ ಅಪ್ಪಣ್ಣ

ಸಣ್ಣ ತಪ್ಪಿಗಾಗಿ ಎದುರು ನಿಂತು ನೀ ನಿಂದಿಸುವಾಗ ಹೆದರಿದ ನನ್ನ ಮೊಗವ ಕಂಡು ಮೌನ ತಳೆವ ಆ ನಿನ್ನ ಒಲವಿನ ಪರಿ ಚಂದ…   ಮುಸ್ಸಂಜೆಯಲಿ ಮುತ್ತಿಟ್ಟು, ಮರು ಮುತ್ತಿಗಾಗಿ ಕಾಯುವಾಗ ಕೊಡದೆ ನಾ ಕಾಡುವಾಗ, ಹುಸಿಕೋಪಗೊಂಡ ಆ ನಿನ್ನ ಮುದ್ದು ಮೊಗ ಚೆಂದ….   ನಾ ಮಾಡಿದ ಚೇಷ್ಟೆಯನ್ನೆಲ್ಲಾ ಮರೆತು, ನೀ ನನ್ನ ಮಗುವಂತೆ ಎಂದು ಎದೆಗಪ್ಪಿ ಸಂತೈಸುವ ಆ ನಿನ್ನ ಸಹನೆಯ ಗುಣ ಚೆಂದ…   ನಿನ್ನ ಪ್ರೀತಿಯ ನನ್ನೆದುರು ನಿರೂಪಿಸಿ, ಕಾಯುವಾಗ ನನ್ನ ಸಮ್ಮತಿಗಾಗಿ, … Read more

ಆಪರೇಷನ್ ಡೆಂಗ್ಯೂ (ಭಾಗ 2): ನಟರಾಜು ಎಸ್ ಎಂ

ಇಲ್ಲಿಯವರೆಗೆ ಸಿಲಿಗುರಿಯನ್ನು ಎರಡನೇ ಕೋಲ್ಕತ್ತಾ ಎನ್ನುತ್ತಾರೆ. ಸಿಲಿಗುರಿ ಈಶಾನ್ಯ ರಾಜ್ಯಗಳಿಗೆ ಹೆಬ್ಬಾಗಿಲು ಇದ್ದಂತೆ. ಇಂತಹ ಸಿಲಿಗುರಿಯನ್ನು ತಲುಪುತ್ತಿದ್ದಂತೆ ನಾವು ಮಾಡಿದ ಮೊದಲ ಕೆಲಸವೆಂದರೆ ಸಿಲಿಗುರಿಯ ನಕ್ಷೆಯನ್ನು ಒಂದು A4 ಹಾಳೆಯಲ್ಲಿ ಪ್ರಿಂಟ್ ಮಾಡಿಸಿಕೊಂಡೆವು. ಸಿಲಿಗುರಿಯ ನಕ್ಷೆಯನ್ನು ಪ್ರಿಂಟ್ ಮಾಡಿಸಿಕೊಂಡ ಕಾರಣವೇನೆಂದರೆ ಸಿಲಿಗುರಿಗೆ ಸೇರಿದ ಒಟ್ಟು 47 ವಾರ್ಡ್ ಗಳಲ್ಲಿ ನಮ್ಮ ಜಲ್ಪಾಯ್ಗುರಿಗೆ ಸೇರಿದ 14 ವಾರ್ಡ್ ಗಳಲ್ಲಿ ಯಾವ ವಾರ್ಡ್ ಗಳ ಜನರು ಡೆಂಗ್ಯೂ ಜ್ವರದಿಂದ ಹೆಚ್ಚು ಬಳಲುತ್ತಿದ್ದಾರೆ ಎಂಬುದನ್ನು ಮೊದಲು ತಿಳಿಯಬೇಕಿತ್ತು. ನಮ್ಮ ಬಳಿಯಿದ್ದ ಡಾಟಾ … Read more

ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್ ಕಗ್ಗೊಲೆ ವೈಚಾರಿಕತೆಯ ಮೇಲಿನ ಧಾಳಿ: ಜೈಕುಮಾರ್

          ಮೂಢನಂಬಿಕೆ, ಅಂಧಶ್ರದ್ಧೆ, ಕಂದಾಚಾರ ಹಾಗೂ ಜಾತಿ ತಾರತಮ್ಯಗಳ ವಿರುದ್ದ ಮಹಾರಾಷ್ಟ್ರದಲ್ಲಿ ಕಳೆದ ೨೫ ವರ್ಷಗಳಿಂದ ಹೋರಾಟ ಮಾಡುತ್ತಿದ್ದ ಖ್ಯಾತ ವಿಚಾರವಾದಿ ಡಾ: ನರೇಂದ್ರ ದಾಬೋಲ್ಕರ್ ರವರನ್ನು ಎರಡು ವಾರಗಳ ಹಿಂದೆ ಕೊಲೆ ಮಾಡಿರುವುದು ಎಲ್ಲೆಡೆ ಪ್ರತಿಭಟನೆ ಮತ್ತು ಆತಂಕಕ್ಕೆ ಕಾರಣವಾಗಿದೆ. ಅವರು ದಿ: ೨೦.೦೮.೨೦೧೩ ರಂದು ವಾಯುವಿಹಾರಕ್ಕೆ ಹೋಗಿದ್ದಾಗ ಅವರನ್ನು ಸಮಾಜಘಾತುಕ ಶಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮಾಯ, ಮಾಟ, ಮಂತ್ರಗಳಿಂದ ಅವರನ್ನು ಕೊಲ್ಲಲಾಗಿಲ್ಲ! ಡಾ: ನರೇಂದ್ರ ದಾಬೋಲ್ಕರ್ ರವರು ಮೂಲತ: … Read more

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಭಾಗ 1): ಶಿವು ಕೆ.

ಕೊಲ್ಕತ್ತ ವಿಮಾನ ನಿಲ್ದಾಣದ ೩ಎ ಗಾಜಿನ ಬಾಗಿಲಿಂದ ಹೊರಬರುತ್ತಿದ್ದಂತೆ ಸಣ್ಣಗೆ ಮಳೆ.  ನನಗಾಗಿ ಕಾಯುತ್ತಿದ್ದ "ಅಭಿಜಿತ್ ಡೆ" ಹೆಸರಿನ ನನಗಿಂತ ಸ್ವಲ್ಪ ಹೆಚ್ಚೇ ವಯಸ್ಸಿನ, ಹೆಚ್ಚೇ ಗಾತ್ರದ ಮತ್ತು ಜಾಸ್ತಿ ಬೆಳ್ಳಗಿನ ವ್ಯಕ್ತಿಯೊಬ್ಬ, "ಹಾಯ್ ಶಿವುಜೀ, ಕೆಸಾ ಹೇ, ಪ್ಲೇನ್ ನೇ ಕೊಯಿ ಪ್ರಾಬ್ಲಂ ನಂ ತಾ:  ಸಬ್ ಕುಚ್ ಟೀಕ್ ಹೇನಾ," ಎಂದು ನನ್ನನ್ನು ಗಟ್ಟಿಯಾಗಿ ಬಿಗಿದಪ್ಪಿಕೊಂಡನಲ್ಲ, ಅಲ್ಲಿಗೆ ನನ್ನ ಮನಸ್ಸಿನ ಚಿಂತೆಗಳಲ್ಲಿ ಅರ್ಧದಷ್ಟು ದೂರವಾಗಿತ್ತು. ಮೊದಲ ಬಾರಿಗೆ ನನ್ನ ಮಟ್ಟಿಗೆ ತುಂಬಾ  ದೂರದ ಕೊಲ್ಕತ್ತಗೆ … Read more

ಮಳೆ ಎನ್ನುವುದು ಒಂಥರಾ ಆಕ್ಸಿಡೆಂಟ್!: ಹೃದಯಶಿವ ಅಂಕಣ

  ತುಂಟ ಕವಿಯ ಗಾಂಭೀರ್ಯತೆ   ನವ್ಯ ಕಾಲದಲ್ಲಿ ಹೊಸಕಾವ್ಯವೆಂದರೆ ಕೇವಲ ದುರಂತಮಯವಾದದ್ದು, ಕ್ಲಿಷ್ಟವಾದದ್ದು, ಸಿನಿಕತನದ್ದು ಎಂಬಂತಹ ತಿಳುವಳಿಕೆ ರೂಢಿಯಲ್ಲಿತ್ತು. ಉತ್ಸಾಹದಿಂದ ಜೀವಂತ ಕಾವ್ಯ ರಚಿಸಿದ ಬಿ. ಆರ್. ಲಕ್ಷ್ಮಣ್ ರಾವ್ ಕಳೆದ ಮೂರು ದಶಕಗಳಲ್ಲಿ ತಮ್ಮದೇ ಶೈಲಿಯ ಕಾವ್ಯ ರಚಿಸಿದವರು ಎಂದು ಖ್ಯಾತ ವಿಮರ್ಶಕ ನರಹಳ್ಳಿ ಬಾಲಸುಬ್ರಮಣ್ಮ್ಯಂ ಪ್ರಸ್ತಾಪಿಸಿರುತ್ತಾರೆ.   ಹೌದು, ಬಿ.ಆರ್.ಎಲ್. ಮೇರೆಗಳನ್ನು ದಾಟಿ ನಿಂತವರು. ಸಾಹಿತ್ಯ ಸರೋವರದಲ್ಲಿ ತಮ್ಮದೇ ವಿನೂತನ ಶೈಲಿಯ ತರಂಗಗಳನ್ನು ಸೃಷ್ಟಿಸಿದವರು. ಗಂಭೀರ ವಿಷಯಗಳನ್ನು ಸರಳವಾಗಿ ಕಾವ್ಯಕ್ಕೆ ಇಳಿಸಿ ಗಮನ … Read more