ಒಲೆ: ಗುಂಡುರಾವ್ ದೇಸಾಯಿ

ಇತ್ತೀಚಿಗೆ ನಮ್ಮ ದೇವಸ್ಥಾನಕ್ಕೆ ದರ್ಶನಾರ್ಥವಾಗಿ ಬೆಂಗಳೂರಿನಿಂದ ಬಂದಿದ್ದ ದಂಪತಿಗಳಿಗಾಗಿ ನಮ್ಮ ಸಮಿತಿಯ ಹಿರಿಯರೊಬ್ಬರು ರಾತ್ರಿ ಅಡುಗೆ ಸಿದ್ಧ ಮಾಡುತ್ತಿದ್ದರು. ಆ ದಂಪತಿಗಳ ಪುತ್ರಿ ಅನ್ನ ಮಾಡುವುದನ್ನು ಗಾಬರಿಯಿಂದ ಬಿಟ್ಟ ಕಣ್ಣಿನಿಂದ ನೋಡುತ್ತಿದ್ದಳು. ಅದನ್ನು ಗಮನಿಸಿದ ಹಿರಿಯರು ‘ಯಾಕಮ್ಮ ಹಾಗೆ ನೋಡ್ತಾ ಇದ್ದಿಯಾ ಅಡುಗೆ ಮಾಡೋದು ನೋಡಿಲ್ವೆ? ಅಥವಾ ಹಸಿವೆಯಾಗಿದೆಯಾ?’ ಎಂದು ಕೇಳಿದರು. ‘ಅಂಕಲ್ ಅಡಿಗೆ ಈ ರೀತಿ ಮಾಡ್ತಿರಾ? ಅನ್ನ ಅದ್ಹೇಗೆ ಮಾಡ್ತೀರಿ? ವಿಜಲ್ ಕೇಳ್ತಾ ಇಲ್ಲ ಹಿಂಗೂ ಮಾಡಬಹುದಾ?’ ಎಂದು ಪ್ರಶ್ನೆ ಹಾಕಿದಳು ಹೀಗೂ ಉಂಟೆ … Read more

ಸೂರ್ಯಪುತ್ರರ ನೋವಿಗೆ ಇಲ್ಲಿದೆ ಪರಿಹಾರ: ಸಂಗಮೇಶ ಡಿಗ್ಗಿ ಸಂಗಾಮಿತ್ರ

ಹರೆಯದ ವಯಸಲ್ಲಿ ಬೇಗನೆ ಏಳುವದು ಕಷ್ಟಕಣ್ರೀ. ಗಲ್ಲಿಗೇರಿಸುವ ಶಿಕ್ಷೆಯಾದ್ರೂ ಕೊಡಿ ಬೆಳಗ್ಗಿನ ಜಾವದಲ್ಲಿ ಏಳುವ ಕೆಲಸ ಹಚ್ಚಬೇಡಿ. ರಾತ್ರಿ ಮೂರರವರೆಗೆ ಸಿನಿಮಾ, ಮೇಸೆಜು, ವಾಟ್ಸಾಪ್ ಅಂತ ಟೈಮ್‍ತಿಂದು ಮುಸುಕು ಹೊದ್ದು ಮಲಗಿದಾಗ ಜಗದ ಪರಿವೆ ಇಲ್ಲದೆ ಲೋಕದ ಯಾವುದೇ ಚಿಂತೆ ಇಲ್ಲದವರಂಥೇ ನಿದ್ದೆ ಆವರಿಸಿರುತ್ತದೆ. ಬೆಳಗ್ಗೆ ಯಾರಾದ್ರೂ ಮುಸುಕು ಹೊದ್ದು ಮಲಗಿದವನನ್ನು  ಎಚ್ಚರಿಸಿದಾಗ ಎದುರಿನವರ ಕೆನ್ನೆಯ ಮೇಲೆ ಬಿಟ್ಟಿಯಾಗಿ ಬಾಸುಂಡೆ ಮೂಡಿಸುವಷ್ಟು ಸಿಟ್ಟು ಬರುತ್ತದೆ. ಅಲ್ರೀ ನೀವೆ ಹೇಳ್ರೀ… ಬೆಳಗ್ಗಿನ ಜಾವದಲ್ಲಿ ದೀಪಿಕಾ ಪಡುಕೋಣೆ ನಮ್ಮ ಜೊತೆ … Read more

ಕ್ಷೌರ ಸಮಾಚಾರ: ಎಚ್.ಕೆ.ಶರತ್

ತಿಂಗಳಿಗೋ ಎರಡು ತಿಂಗಳಿಗೋ ಒಮ್ಮೆ ಹೇರ್ ಕಟ್ ಮಾಡಿಸುವುದು, ವಾರಕ್ಕೋ ಹದಿನೈದು ದಿನಕ್ಕೋ ಟ್ರಿಮ್ ಅಥವಾ ಶೇವ್ ಮಾಡಿಸೋದು ಅಂದ್ರೆ ಸುಮ್ನೆ ಅಲ್ಲ. ಅನುಭವಿಸಿದವರಿಗೇ ಗೊತ್ತು ಅದರ ಸುಖ-ದುಃಖ. ಬೆಳಿಗ್ಗೆ ಎದ್ದು ಮುಖಕ್ಕೆ ಮತ್ತು ……ಕ್ಕೆ ನೀರು ಹಾಕಿಕೊಂಡು(ಪಾಶ್ಚಿಮಾತ್ಯ ಸಂಸ್ಕøತಿ ಅಳವಡಿಸಿಕೊಂಡವರು ಟಿಶ್ಯೂ ಪೇಪರ್ ಬಳಸಬಹುದು!) ಹೇರ್ ಡ್ರೆಸಸ್ ಎಂಬ ಜಗತ್ತಿನೊಳಗಿನ ಜಗತ್ತಿಗೆ ಪ್ರವೇಶಿಸಿದರೆ ಸಾಕು, ಅಲ್ಲಿ ನಾನಾ ನಮೂನೆಯ ವಿಚಾರಗಳು ಮೈ ಕೊಡವಿ ಮೇಲೇಳುತ್ತವೆ. ಒಬಾಮಾ ನ್ಯೂಸ್‍ನಿಂದಿಡಿದು ಹೊಸ ಲೋಕಲ್ ಲವ್ ಸ್ಟೋರಿಯವರೆಗೆ ಎಲ್ಲವೂ ಮುಕ್ತ … Read more

ಸೂರ್ಯಾಸ್ತ: ಪ್ರಶಸ್ತಿ

ಆಫೀಸಿನ ಗಾಜಿನಾಚೆ ಕಾಣುತ್ತಿದ್ದ ಸಂಜೆಯ ಬಣ್ಣದೋಕುಳಿ ಖುಷಿಯ ಬದಲು ಜಿಗುಪ್ಸೆ ಹುಟ್ಟಿಸಿತ್ತವನಿಗೆ. ಎಷ್ಟು ದಿನವೆಂದು ಹೀಗೆ ಹೊತ್ತುಗೊತ್ತಿಲ್ಲದಂತೆ ಗೇಯುವುದು ? ಒಂದು ದಿನವಾದರೂ ಹೊತ್ತಿಗೆ ಸರಿಯಾಗಿ ಮನೆ ತಲುಪಬೇಕೆಂಬ ಕನಸು ಕನಸಾಗೇ ಉಳಿದುದನ್ನು ಪ್ರತಿದಿನದ ಸೂರ್ಯಾಸ್ತ ಚುಚ್ಚಿ ಚುಚ್ಚಿ ನೆನಪಿಸಿದಂತನಿಸುತ್ತಿತ್ತು ಅವನಿಗೆ.  ಕೆಂಪು, ಕೇಸರಿ, ಅರಿಷಿಣಗಳ ಬಣ್ಣ ಹೊದ್ದ ಮೋಡಗಳು ಒಂದೆಡೆ ಇರಲಾರದೇ ಮದುವೆ ಮನೆಯ ಸುಂದರಿಯರಂತೆ ಅತ್ತಿತ್ತ ಓಡಾಡುತ್ತಿದ್ದರೆ ಬೀಸುತ್ತಿದ್ದ ತಂಗಾಳಿ ಅಲ್ಲೇ ನಿಂತಿದ್ದ ಹೆಣ್ಣೊಬ್ಬಳ ಕೂದಲೊಂದಿಗೆ ಆಟವಾಡುತ್ತಿತ್ತು.  ಮೋಡಗಳ ಮೆರವಣಿಗೆಯಿಂದ ಕೊಂಚ ಕೆಳಗೆ ಕತ್ತು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಾಯಿಗೆ ತಿಳಿದಿದೆಯೇ?  ನನ್ನ ಮಿತ್ರನೊಬ್ಬ ಒಂದು ದೇಶದ ಅಧ್ಯಕ್ಷರನ್ನು ಬೇಟಿ ಮಾಡಲು ಹೋಗಿದ್ದ.  ಆದ್ಯಕ್ಷರ ನಿವಾಸದ ಆವರಣದಲ್ಲಿ ಅವರು ಮಾತನಾಡುತ್ತಾ ಸುತ್ತಾಡುತ್ತಿದ್ದಾಗ ನೋಡಲು ಭಯಂಕರವಾಗಿದ್ದ ದೊಡ್ಡ ನಾಯಿಯೊಂದು ಅಲ್ಲಿಯೇ ಇದ್ದ ಒಬ್ಬ ಹಿಂದೂ ಗುರುವಿನ ಕೌಪೀನವನ್ನು ಕಚ್ಚಿ ಹರಿದದ್ದಲ್ಲದೆ ಜೋರಾಗಿ ಬೊಗಳುತ್ತಾ ಅವನನ್ನು ಒಂದು ಗೋಡೆಯ ಸಮೀಪಕ್ಕೆ ಅಟ್ಟಿಕೊಂಡು ಹೋಯಿತು. ಹುಲಿಗಳನ್ನು ತನ್ನ ನೋಟದಿಂದಲೇ ಪಳಗಿಸುವ ಸಾಮರ್ಥ್ಯ ಉಳ್ಳವನು ಎಂಬುದಾಗಿ ಖ್ಯಾತನಾಗಿದ್ದ ಆ ಗುರುವಿಗೆ ನಾಯಿಗಳನ್ನು ಆ ರೀತಿ ಪಳಗಿಸುವ ಸಾಮರ್ಥ್ಯವಿರಲಿಲ್ಲವಾದ್ದರಿಂದ ಏನಾದರೂ ಮಾಡುವಂತೆ ನನ್ನ … Read more

ಈ ಮನವೆಂಬ ದುಂಬಿಯ ಕರೆದೊಯ್ದು: ಅಜಿತ್ ಭಟ್

ನೀ ಮುಗಿಲಾಗು ನಾ ಕಡಲಾಗುವೆ ಜೊತೆ ಇರದಿದ್ದರೇನಂತೆ ರೆಪ್ಪೆ ತೆರೆದರೆ ನನಗೆ ನೀನು, ನಿನಗೆ ನಾನು.. ಎಲ್ಲಿರುವೆ? ಹೇಗಿರುವೆ? ಎಲ್ಲೋ ಸಾಗಬೇಕಿದ್ದ ಈ ನನ್ನ ಬದುಕನ್ನು ಇನ್ನೆಲ್ಲಿಗೆ ತಂದು ನಿಲ್ಲಿಸಿರುವೆ. ಎಲ್ಲಿಗೆ? ಯಾತಕೆ? ಏನೂ ಕೇಳದೆ ಕಣ್ಮುಚ್ಚಿ ನಿನ್ನ ಹಿಂಬಾಲಿಸಿ ಬಂದೆ ಕಣ್ತೆರೆದು ನೋಡಿದಾಗ ಕವಲು ದಾರಿಯಲ್ಲಿ ನಾ ಒಂಟಿ ಪಯಣಿಗ. ನೀನು ಇನ್ನಾರದೋ ಬದುಕಿನ ಸಾರಥ್ಯವ ಹಿಡಿದಿರುವೆಯ? ಆದರೆ ನನ್ನ ಪರಿಸ್ಥಿತಿ ಗೂಡನ್ನು ತಪ್ಪಿಸಿಕೊಂಡ ಜೇನು ಹುಳುವಿನಂತೆ ಎತ್ತ ಸಾಗಿದರು ಅದು ನನ್ನದಲ್ಲದ ದಾರಿ. ನನ್ನ … Read more

ಸೋಮರಸಕ್ಕೆ ರಾಜಮಾರ್ಗ: ಆದರ್ಶ ಸದಾನ೦ದ ಅರ್ಕಸಾಲಿ

ನಿನ್ನೆ, ಅ೦ದರೆ ಶನಿವಾರ, ಮಾನ್ಸೂನ್ ಮಾಸದ ಮೊದಲ ಶನಿವಾರ, ಅದೇ ತಲೆ ಕೆಟ್ಟು ಹೋಗುವಷ್ಟು ಕೆಲಸ ಇದ್ದ ಶನಿವಾರ, ಊಟ ತಿ೦ಡಿ ನೆಟ್ಟಗೆ ತಿನ್ನದೆ ಸ೦ಜೇವರೆಗೂ ಪೇಶೆ೦ಟ್ಸ್ ನೋಡಿದ ಶನಿವಾರದ ಬಗ್ಗೆ ಬರೆಯುವ ಮುನ್ನ ಕೇರಳದ ಸಾರಾಯಿ ಕಲ್ಚರ್ ಬಗ್ಗೆ ಸ್ವಲ್ಪ ಮುನ್ನುಡಿ ಬರೆಯುವೆ. ಭಾರತದಲ್ಲೇ ಪ್ರತಿ ತಲೆಗ೦ತೆ ಅಧಿಕ ಸಾರಾಯಿ ಕುಡಿಯುವ ಪ್ರ(ಕು)ಖ್ಯಾತಿ ಹೊ೦ದಿದ ಅಕ್ಷರಸ್ತ, ಗಾಡ್ಸ್ ಓನ್ ಲ್ಯಾ೦ಡ ಕೇರಳ. ಆದರೆ ಇಲ್ಲಿ ಕುಡಿತಕ್ಕೆ ಕಡಿವಾಣ ಹಾಕಲೋ ಅಥವಾ ಸಾರಾಯಿ ಮಾರುವದರಿ೦ದ ಬರುವ ಲಾಭವನ್ನು … Read more

ಭೃಂಗದ ಬೆನ್ನೇರಿ…!: ಎಸ್.ಜಿ.ಶಿವಶಂಕರ್

ಎಲ್ಲ ಸರಿಯಾಗಿ ಜೋಡಿಸಿದ್ದೇನೆಯೇ ಎಂದು ಮನು ಮತ್ತೊಮ್ಮೆ ಖಚಿತಪಡಿಸಿಕೊಂಡ. ಸಮಾಧಾನವಾಯಿತು. ಎಲ್ಲ ಸರಿಯಾದರೆ ಇನ್ನು ಹತ್ತು ನಿಮಿಷಗಳಲ್ಲಿ ತನ್ನ ಮುಂದೆ ರೂಪಸಿಯೊಬ್ಬಳು ಜೀವ ತಳೆಯುತ್ತಾಳೆ. ಅದೂ ಎಂತಹ ರೂಪಸಿ ? ತಾನು ಬಯಸಿದಂತವಳು! ತಾನೇ ಹೇಳಿದಂತೆ ರೂಪುಗೊಂಡವಳು!! ಇದನ್ನು ನಂಬುವುದು ಕಷ್ಟ!! ಆದರೆ ಇದು ನಿಜ. ಎಲ್ಲಾ ತನ್ನ ಕಣ್ಣೆದುರೇ ನಡೆದಿದೆ. ಸ್ವತಃ ತಾನೇ ತನ್ನ ಕೈಯಾರೆ ರೂಪಿಸಿದವಳು! ಅವಳಿಗೆ ಜೀವ ಕೊಡುವ ಮುನ್ನ ಒಮ್ಮೆ ಮುಟ್ಟಿ ನೋಡಿದ. ನಿಜಕ್ಕೂ ಅದು ರೋಬೋ ಎಂದು ಹೇಳಲು ಯಾರಿಗೂ … Read more

ಸಚಿವರಿಗೊಂದು ಸನ್ಮಾನ ಮಾಡೋಣವೇ???: ಅಖಿಲೇಶ್ ಚಿಪ್ಪಳಿ

ಮ್ಯಾಗಿಯಲ್ಲಿ ಸತುವಿದೆ, ಕೋಲ್ಗೇಟ್‍ನಲ್ಲಿ ಉಪ್ಪಿದೆ. ಇನ್ನುಳಿದ ಜಂಕ್ ಫುಡ್‍ಗಳಲ್ಲಿ ಯಾವ್ಯಾವ ವಿಷವಿದೆ ಗೊತ್ತಿಲ್ಲ. ಮ್ಯಾಗಿ ಆರೋಗ್ಯಕ್ಕೆ ಹಾನಿಕಾರಕ ಆದ್ದರಿಂದ ಅದಕ್ಕೆ ನಿಷೇಧ ಹೇರಲಾಯಿತು. ದಾಸ್ತಾನಿನಲ್ಲಿದ್ದ ಎಲ್ಲಾ ಮ್ಯಾಗಿ ಉತ್ಪನ್ನಗಳನ್ನು ನೆಸ್ಲೆ ವಾಪಾಸು ಪಡೆದಿದೆ ಎಂದೆಲ್ಲಾ ಸುದ್ಧಿ ಪ್ರತಿ ಪತ್ರಿಕೆಯ ಎಲ್ಲಾ ಪೇಜುಗಳಲ್ಲಿ. ಇದೇ ಹೊತ್ತಿನಲ್ಲಿ ದೇಶದ ರಾಜಧಾನಿಯನ್ನು ಆಳುತ್ತಿರುವ ಆಮ್ ಆದ್ಮಿ ಸರ್ಕಾರದ ಕಾನೂನು ಸಚಿವರ ಪದವಿಯೇ ಫೇಕು ಎಂಬಂತಹ ಮತ್ತೊಂದು ಬ್ರೇಕಿಂಗ್ ಸುದ್ಧಿ. ಪತ್ರಿಕೆಗಳಿಗೆ ಖುಷಿಯೋ ಖುಷಿ. ಇದರ ಜೊತೆಗೆ ಕುಂದಣವಿಟ್ಟಂತೆ ಕೇಂದ್ರ ಕಾನೂನು ಮತ್ತು … Read more

ನಾ ನೋಡಿದ ಸಿನಿಮಾ ಹಮಾರಿ ಅದೂರಿ ಕಹಾನಿ: ಪ್ರಶಸ್ತಿ

ವಿದ್ಯಾ ಬಾಲನ್ ಅಂದ ತಕ್ಷಣ ಕೆಲವರಿಗೆ ಕಹಾನಿ ಚಿತ್ರ ನೆನಪಾದರೆ ಕೆಲವರಿಗೆ ಡರ್ಟಿ ಪಿಕ್ಚರ್ ನೆನಪಾಗಬಹುದು.ಅವೆರಡಕ್ಕೂ ಎಲ್ಲಿಂದೆಲ್ಲಿಯ ಸಂಬಂಧವಯ್ಯಾ ಅಂದ್ರಾ ? ಡರ್ಟಿಪಿಕ್ಚರ್(೨೦೧೨) ಮತ್ತು ಕಹಾನಿ(೨೦೧೩) ಎರಡಕ್ಕೂ ಫಿಲ್ಮಫೇರ್ ಮತ್ತು ಅಂತರರಾಷ್ಟ್ರೀಯ ಭಾರತೀಯ ಸಿನಿಮಾ ಅಕಾಡೆಮಿ, ಸ್ಟಾರ್ ಗಿಲ್ಡ್, ಸ್ಟಾರ್ ಡಸ್ಟ್, ಜೀ ಸಿನಿ ಅವಾರ್ಡುಗಳ ಉತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ ಇವರು. ಸಿನಿಮಾ ರಂಗದಲ್ಲಿರುವವರಿಗೆ ಸಿನಿ ಪ್ರಶಸ್ತಿಗಳು ಬರುವುದು ಸಾಮಾನ್ಯ,ಅದರಲ್ಲೇನಿದೆ ಅಂದ್ರಾ ? ೨೦೧೪ರ ಸಾಲಿನ ಪದ್ಮಶ್ರೀ ಪ್ರಶಸ್ತಿಯೂ ಇವರಿಗೆ ಸಂದಿದೆ. ಗುರು, ಪಾ ಹೀಗೆ … Read more

ಮೂವರ ಕವನಗಳು: ವಾಸುದೇವ ನಾಡಿಗ್, ಜ್ಯೋತಿ ಹೆಗಡೆ, ಗಿರಿಯ

ಶಕುಂತಲೆಯ ಪ್ರಾಯ ಕನ್ನಡಿಯಲಿಕಣ್ಣಿರುಕಿಸುವುದ ಬಿಟ್ಟಿದ್ದಾಳೆ ಮೇನಕೆ ಶಕುಂತಲೆಯ ತನುವಿಡಿ ಅವಳದೇ ಪರಿವಿಡಿ ಬಿಂಕಮರೆತ ಹೂಕಂಪುಗಳೆಲ್ಲ ಕಕ್ಕಾಬಿಕ್ಕಿ ಕೂತು  ಒನಪಿನ ತೊರೆಗಳೆಲ್ಲಾ ಮೋರೆಕೆಳಗೆ ಮಾಡಿವೆ ತಾರೆಗಳ ಮಿನುಗು ಬರಿಸೋಗು ಕುಣಿಯದ ಮಂಕು ನವಿಲು ನಡೆ ಮರೆತ ಆಲಸಿ ಹಂಸ  ಒಣಗಿದ ಗಿಣಿಯ ತುಟಿ ಕುಂದಿದ  ಬೆಳದಿಂಗಳು ಜಡ ಹಿಡಿದ ಅಂದುಗೆ ತೊನೆದಾಡದತೆನೆ ತುಳುಕದಕೊಳ ಪ್ರಾಯ ಬಂದವಳ ಎದುರು ಉಳಿದವು ಮುಪ್ಪು ಅಳಿದವು ಉಪಮೆಗಳು ಕೊರಗಿದವು ರೂಪಕಗಳು ಧ್ವನಿಗಿನ್ನು ಬರಿ ದಣಿವು ಅನಾಥ ಅಲಂಕಾರ ಕಣ್ವರ ಕಣ್ಣೆದುರು  ವಸಂತ ಕಟು … Read more

ತೆರೆದ ಕಿಟಕಿ: ಜೆ.ವಿ.ಕಾರ್ಲೊ

ಮೂಲ: ‘ಸಕಿ’ (ಹೆಚ್.ಹೆಚ್.ಮನ್ರೊ) ಅನುವಾದ: ಜೆ.ವಿ.ಕಾರ್ಲೊ ‘ಇನ್ನೇನು ಚಿಕ್ಕಮ್ಮ ಬರೋ ಹೊತ್ತಾಯ್ತು ಮಿಸ್ಟರ್ ನಟ್ಟೆಲ್. ಅಲ್ಲೀವರೆಗೂ ನೀವು ನನ್ನ ಕೊರೆತ ಕೇಳಲೇ ಬೇಕು. ಬೇರೆ ದಾರಿಯೇ ಇಲ್ಲ!’ ಎಂದಳು ಹುಡುಗಿ. ಅವಳಿಗೆ ಹದಿನಾಲ್ಕೋ, ಹದಿನೈದು ಆಗಿದ್ದಿರಬಹುದು. ವಯಸ್ಸೇ ಅಂತಾದ್ದು. ಚುರುಕಾಗಿದ್ದಳು. ಕಣ್ಣುಗಳಲ್ಲಿ ತುಂಟತನ, ಆತ್ಮವಿಶ್ವಾಸ ಭರಪೂರು ಎದ್ದು ಕಾಣುತ್ತಿತ್ತು. ಹುಡುಗಿಯ ದೃಷ್ಟಿಯಲ್ಲಿ ತೀರಾ ಮಂಕಾಗದಂತೆ ಏನಾದರೂ ಆಸಕ್ತಿ ಕೆರಳುವಂತಾದ್ದು ಹೇಳಲು ಅವನು ಮಾತುಗಳಿಗಾಗಿ ತಡಕಾಡಿದ. ಮನೋವ್ಯಾಕುಲತೆಯಿಂದ ಬಳಲುತ್ತಿದ್ದ ಅವನು ಈಗಷ್ಟೇ ಚೇತರಿಸಿಕೊಂಡಿದ್ದು, ವೈಧ್ಯರ ಸಲಹೆ ಮೇರೆಗೆ ವಿಶ್ರಮಿಸಿಕೊಳ್ಳಲು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಗುರಿಯೇ ಇಲ್ಲ ಫಕೀರರ ಗುಂಪೊಂದು ತಮ್ಮ ಗುರುಗಳ ಆಜ್ಞಾನುಸಾರ ಮಾಂಸ ತಿನ್ನುತ್ತಿರಲಿಲ್ಲ, ಧೂಮಪಾನ ಮಾಡುತ್ತಿರಲಿಲ್ಲ. ಇದನ್ನು ತಿಳಿದ ವ್ಯಕ್ತಿಯೊಬ್ಬ ಆ ಜ್ಞಾನಿಗಳ ಪಾದಗಳ ಬಳಿ ಕುಳಿತುಕೊಳ್ಳಲೋಸುಗ ಆ ಜ್ಞಾನಿಗಳು ಅವರು ಒಟ್ಟಾಗಿ ಸೇರುವ ತಾಣಕ್ಕೆ ಹೋದ. ಅಲ್ಲಿದ್ದವರೆಲ್ಲರೂ ೯೦ ವರ್ಷಕ್ಕೂ ಹೆಚ್ಚಿನ ವಯಸ್ಸಿನವರಾಗಿದ್ದರು. ಅಲ್ಲಿ ತಂಬಾಕಿನ ಸುಳಿವೂ ಇರಲಿಲ್ಲ, ಮಾಂಸದ ಸುಳಿವೂ ಇರಲಿಲ್ಲ. ಹೋದಾತನಿಗೆ ಬಲು ಆನಂದವಾಯಿತು. ಅವರು ನೀಡಿದ ಹುರುಳಿ-ಮೊಸರಿನ ಸೂಪ್‌ನ ರುಚಿ ಆಸ್ವಾದಿಸುತ್ತಾ ಮಾಲಿನ್ಯರಹಿತ ವಾಯು ಸೇವನೆ ಮಾಡುತ್ತಾ ಅಲ್ಲಿ ಕುಳಿತ. ಕನಿಷ್ಠಪಕ್ಷ … Read more

ಚಲನಚಿತ್ರ ಅಭಿನಯ – ನಿರ್ದೇಶನ ಕಾರ್ಯಾಗಾರ

"ಸೃಷ್ಟಿ ದೃಶ್ಯಕಲಾ ಮಾಧ್ಯಮ ಅಕಾಡೆಮಿ" ಯು ಪ್ರತಿ ವರ್ಷದಂತೆ ಈ ಸಲವೂ 2015, ಜೂನ್ 21 ರಿಂದ ಚಲನಚಿತ್ರ ಮತ್ತು ದೂರದರ್ಶನಕ್ಕೆ ಸಂಬಂಧಿಸಿದಂತೆ  ಕಥೆ, ಚಿತ್ರಕಥೆ, ಸಂಭಾಷಣೆ, ಛಾಯಾಗ್ರಹಣ, ಸಂಕಲನ, ನಿರ್ದೇಶನ ಮತ್ತು ಅಭಿನಯ ಕುರಿತು 5 ತಿಂಗಳು ಅವಧಿಯ ವಾರಾಂತ್ಯದ ಉಚಿತ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಿದೆ. ತರಗತಿಗಳು ಪ್ರತಿ ಭಾನುವಾರ ನಡೆಯುತ್ತವೆ.   ತರಬೇತಿಗಳನ್ನು ‘ಸೃಷ್ಟಿ ಆಪ್ತ ರಂಗಮಂದಿರ, 12ನೇ ಕ್ರಾಸ್, ರಾಮಮಂದಿರ ರಸ್ತೆ, ಓಲ್ಡ್ ಏರಪೋರ್ಟ ರಸ್ತೆ, ದೊಮ್ಮಲೂರು, ಬೆಂಗಳೂರು ಇಲ್ಲಿ ನಡೆಸಲಾಗುತ್ತದೆ. ಆಸಕ್ತರು … Read more

ಪ್ರೌಢಶಾಲಾ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕಾರ್ಯಾಗಾರ: ಶ್ರೀಮತಿ. ಶಾರದ. ಎಚ್.ಎಸ್

ದಿನಾಂಕ 13.06.2015ರಂದು ಸರ್ಕಾರಿ ಪ್ರೌಢಶಾಲೆ, ಕುಕ್ಕರಹಳ್ಳಿಯಲ್ಲಿ ಮೈಸೂರು ದಕ್ಷಿಣ ವಲಯ ಮತ್ತು ಮೈಸೂರು ತಾಲ್ಲೂಕಿನ ಆಯ್ದ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಬೋಧಿಸುವ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕುರಿತಂತೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ, ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಆರ್.ಪೂರ್ಣಿಮ ಅವರು ಇಡೀ ಕಾರ್ಯಾಗಾರವನ್ನು ನಡೆಸಿಕೊಡುವ ಜವಾಬ್ದಾರಿಯನ್ನು ಹೊತ್ತಿದ್ದರು. ಸುಪ್ರಸಿದ್ಧ ನಾಟಕಕಾರ ಶೇಕ್ಸ್‍ಪಿಯರ್‍ನ ಜನಪ್ರಿಯ ಉಕ್ತಿ  “ಜೀವನವೆಂಬೀ ನಾಟಕರಂಗದಿ  ಪಾತ್ರಧಾರಿಗಳು ಗಂಡು ಹೆಣ್ಣುಗಳು, … Read more

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-2015' ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 31.  ವಿ.ಸೂ; ಯಾವುದೇ … Read more

ರುಕ್ಮಿಣಿಯಾಗದಿದ್ದರೂ ಭಾಮೆಯಾದರೂ ಆಗುತ್ತಿದ್ದೆನೇನೋ: ಲಹರಿ

ಇಂಥದೇ ಒಂದು ಅರೆಬರೆ ಬೆಳಕಿರುವ ಸಂಜೆಯಲ್ಲಲ್ಲವಾ ನೀ ಸಿಕ್ಕಿದ್ದು ನಂಗೆ? ಇನ್ನೂ ಹೆಚ್ಚು ಕೆಂಪಗಿದ್ದ ಸೂರ್ಯ ಮುಳುಗುವ ಹೊತ್ತಲ್ಲೇ ನನ್ನ ಮನಸ್ಸಿನೊಳಗೆ ನಡೆದು ಬಂದಿದ್ದು ನೀನು.. ನಂತರದ್ದೆಲ್ಲಾ ಪ್ರೀತಿಯದ್ದೇ ಪ್ರವಾಹ! ನನ್ನ ಕನಸುಗಳ ಪ್ರಪಂಚದಲ್ಲಿ ನೀ ಕೃಷ್ಣನಾದರೆ , ನಿನ್ನ ನವಿಲುಗರಿಯ ಬದುಕಿನಲ್ಲಿ ರಾಧೆಯಾಗಿದ್ದೆ ನಾ! ರಾಧಾ-ಕೃಷ್ಣರು ಎಂದೂ ಸೇರುವುದಿಲ್ಲವೆಂಬ ಸತ್ಯ ತಿಳಿದಿದ್ದರೆ ಅಂದೇ ರುಕ್ಮಿಣಿಯಾಗುತ್ತಿದ್ದೆನೇನೋ… ಪ್ರೀತಿಸುವುದೊಂದೇ ಗೊತ್ತಿತ್ತು ಈ ಹೃದಯಕ್ಕೆ. ಕಡುನೀಲಿ ಬಣ್ಣದ ಶರ್ಟ್ ತೊಟ್ಟು ಕೈಯಲ್ಲೊಂದು ಸಿಗರೇಟ್ ಹಿಡಿದವನ ನೋಡಿದಾಗ ನನ್ನೊಳಗೊಂದು ಹೂಕಂಪನ ಮೂಡಿತ್ತು.೧೯೯೬ರ … Read more

ಕಗ್ರಾಸ ಹಿಡಿದ ಹೊತ್ತಲ್ಲಿ….: ಮಹಾದೇವ ಹಡಪದ

ನವಿಲುತೀರ್ಥದ ಈ ಮೂಲೆಯ ಹಳ್ಳಿಗೂ ಆ ಧಾರವಾಡ ಶಹರಕ್ಕೂ ಎಲ್ಲಿಂದೆಲ್ಲಿಯ ನಂಟು..?  ಅಪೂಟ ಮಳೆ ಹೋದಾಗಿನಿಂದ ಒಂದಳತಿ ನೆತ್ತಿ ಮ್ಯಾಗಳ ಸೂರ್ಯ ಇನ್ನೇನು ಬ್ಲಾಸ್ಟ ಆಗ್ತಾನೇನೋ ಅನ್ನೋ ಹಂಗ ಉರಿತಿದ್ದ. ರಸ್ತಾದ ಮ್ಯಾಲ ಬಿಸಿಲಗುದುರೆ ಅವಸರ ಮಾಡಿ ಓಡುತ್ತಿದ್ದರಿಂದ ಎಳೆಬಿಸಿಲು ರಣಹೊಡೆಧಂಗ ಹೊಡಿತಿತ್ತು. ಬಸ್ಸಿನ ಓಟವೂ, ನಿದ್ದಿಗೆಟ್ಟ ಹಸಿವು ಒಂದನಮೂನಿ ಕಸಾರಕಿ ಬಂದವರಂಗ ಹೊಟ್ಟಿಯಳಗ ಸುಳ್ಳಿ ಸುತ್ತುತ್ತಿದ್ದರಿಂದ – ಇದ್ದಬಿದ್ದದ್ದೆಲ್ಲ ಬಾಯಿಗೆ ಬಂದಂತಾಗಿ ವ್ಯಾ..ಕ ಎಂದು ಕಿಟಕಿಯೊಳಗ ಕಾರಿಕೊಂಡಳು. ಆಗ ಫ್ರೆಶ್ ಆಗಿ ಬಸ್ ಹತ್ತಿದವರ ಗರಿಗರಿ … Read more