ದೋನಿಯ ತಪ್ಪು ಯಾವುದು ?: ರಘು ಕೆ.ಟಿ.

ಭಾರತ ತಂಡಕ್ಕೆ 2011 ರಿಂದ ದೋನಿ ನಾಯಕತ್ವ ವಹಿಸಿಕೊಂಡಾಗಿನಿಂದ ಎಲ್ಲ ಮಾದರಿ ಕ್ರಿಕೆಟ್ನಲ್ಲಿ ಭಾರತವು ಅನೇಕ ಯಶಸ್ವಿಗಳನ್ನು ಗಳಿಸಿ, ವಿಶ್ವ ದರ್ಜೆಯ ತಂಡವಾಗಿ ಹೊರಹೊಮ್ಮಿತು. ದೋನಿ ಮಾಡಿದ ಹಲವಾರು ತಂತ್ರಗಾರಿಕೆ, ಬದಲಾವಣೆಗಳು, ಕೈಗೊಂಡ ನಿರ್ಧಾರಗಳಿಂದ ಭಾರತವು 20-20 ವಿಶ್ವಕಪ್, ವಿಶ್ವಕಪ್-2011 ಸೇರಿದಂತೆ ಎಲ್ಲ ಪ್ರಮುಖ ಪಂದ್ಯಾವಳಿಗಳನ್ನು ಜಯಿಸಿ ವಿಶ್ವ ಖ್ಯಾತಿಯನ್ನು ಗಳಿಸಿತ್ತು. ಆಗ ಎಲ್ಲ ಪತ್ರಿಕಾ ಮಾಧ್ಯಮದವರು, ಹಿರಿಯ ಆಟಗಾರರು ದೋನಿಯ ನಿರ್ಧಾರಗಳಿಗೆ ಬೆಂಬಲ ಮತ್ತು ಶ್ರೇಷ್ಠ ನಾಯಕರೆಂದು ಹಾಡಿ ಹೊಗಳಿದರು. ಆದರೆ ಬಾಂಗ್ಲಾ ದೇಶದ ವಿರುದ್ಧ … Read more

ನಾನೂ ನಾಚಿದೆ, ನಾಚಿಕೆಯೆಂದು ತಿಳಿಯದೆ: ಚೈತ್ರಾ ಎಸ್.ಪಿ.

ಗೆಳೆಯನೊಬ್ಬ ಮೆಸ್ಸೇಜ್ ಮಾಡಿದ್ದ, "ಮದ್ವೆಗೆ ಹುಡುಗನ್ನೇನಾದ್ರು ನೋಡ್ತಾ ಇದಾರೇನೆ ??", "ಇಲ್ಲಪ್ಪಾ", "ಯಾಕೋ??!!"ಎಂದು ಮರು ಪ್ರಶ್ನೆ ಹಾಕಿದ್ದೆ. "ಸುಮ್ನೆ ಕೇಳ್ದೆ, ನಾಚ್ಕೊಂಡ್ಯೇನೇ ??"ಎಂದಿದ್ದ ಆತ. ನನಗೆ ಸಿಕ್ಕಿದ್ದ ಹೊಸ ಗೆಳೆಯ. ನನ್ನ ಬಗ್ಗೆ ಅಷ್ಟು ತಿಳಿದಿರಲಿಲ್ಲ. ನನ್ನ ಹಳೆಯ ಫ್ರಿಂ ಡ್ಸ್ ಅಂತ ಕರೆಸಿಕೊಂಡವರೆಲ್ಲರೂ, " ನೀನೂ ನಾಚ್ಕೊತೀಯೇನೇ ??!! ಹುಡ್ಗೀರ್ ಮಾತ್ರ ಕಣೇ ನಾಚ್ಕೊಳೋದು ", ಅಂತ ಹೇಳ್ತ ಇದ್ರೇ ವಿನಃ ಯಾರೂ ಈ ಥರ ಕೇಳಿರ್ಲಿಲ್ಲ. ಉತ್ತರಿಸುವ ಗೊಂದಲದಲ್ಲಿದ್ದ ನನ್ನ ಭಾವ ಸರಪಳಿ ಇನ್ನೆಲ್ಲೋ … Read more

ಒಳಗೊಂದು ಆರದ ಹಣತೆ ಹಚ್ಚಿಡುವವಳು: ಅನುರಾಧ ಪಿ. ಸಾಮಗ

ಮೊನ್ನೆ ಅಮ್ಮಂದಿರ ದಿನದಂದು ನನ್ನ ಕಂದಮ್ಮ ನನಗೊಂದು ಕಾರ್ಡ್ ಮಾಡಿ ತಂದುಕೊಟ್ಟಾಗ ಕಣ್ಣಲ್ಲಿ ನೀರಾಡಿತ್ತು. ಅವಳಿಗೆ ತೋರಿಸಬಾರದೆಂದು ಕಣ್ತಪ್ಪಿಸಿದರೂ ಬಾಗಿ ಕಣ್ಣೊಳಗಿಣುಕಿ ಖಾತ್ರಿ ಪಡಿಸಿಕೊಂಡವಳೇ, ಇನ್ನೊಂದು ಮುತ್ತಿಕ್ಕಿ "ಐ ಮೀನ್ ಇಟ್ ಅಮ್ಮಾ.." ಅಂದಳು. "ಅಮ್ಮಾ, ನೀನು ಜಗತ್ತಿನ ಎಲ್ಲ ಅಮ್ಮಂದಿರಿಗಿಂತ ಶ್ರೇಷ್ಠ, ನಾನು ನಿನ್ನನ್ನು ತುಂಬಾ ಅಂದರೆ ತುಂಬಾ, ಜಗತ್ತಿನ ಎಲ್ಲದಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ.. " ಇದೇ ಆ ಹಾಳೆಯ ಮೇಲಿದ್ದುದರ ಸಾರಾಂಶ. ಎಲ್ಲ ಮಕ್ಕಳೂ ಬರೆಯುವಂಥದ್ದೇ. ಆದರೆ ಆ ಇನ್ನೊಂದು ಸಾಲು ಓದಿ, ಒಮ್ಮೆ … Read more

ವಿಶ್ವ ಯೋಗ ದಿನ: ಅನಿತಾ ನರೇಶ್ ಮಂಚಿ.

ಅವರ ಹೆಸರು ಪಾರ್ವತೀಪತಿಯೆಂದು ಗೊತ್ತಿದ್ದದ್ದು ಪೋಸ್ಟ್ ಮ್ಯಾನ್ ಮತ್ತು ಅವರು ಕೆಲಸ ಮಾಡುತ್ತಿದ್ದ ಆಫೀಸಿನ ಬಾಸ್ ಇಬ್ಬರಿಗೇ..  ಇವರೂ ಕೂಡಾ ಆ ಹೆಸರನ್ನು ಕೊಂಚ ತಿರುಚಿ ಪರ್ವತ ಪತಿ ಎಂದು ನಗೆಯಾಡುತ್ತಿದ್ದುದು ಪಾರ್ವತೀಪತಿಯವರಿಗೆ ತಿಳಿಯದ ವಿಷಯವೇನೂ ಆಗಿರಲಿಲ್ಲ. ನಮಗಂತೂ ಅವರ ಹೆಸರು ನಾಮ್ ಕೇ ವಾಸ್ತೆ ಮಾತ್ರ ಬೇಕಾಗುವುದರಿಂದ  ನಾವು  ಆ ಹೆಸರನ್ನು ಬಬ್ಬಲ್ ಗಮ್ಮಿನಂತೆ ಅಷ್ಟುದ್ದ ಎಳೆಯದೇ ಪಿ ಪಿ ಎಂದು ಶಾರ್ಟ್ ಆಗಿ ಕರೆಯೋಣ.   ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಈಗ ಹಲವು ವಿಷಯಗಳಲ್ಲಿ … Read more

ಹಿಮಪಾತ: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಇವತ್ಯಾಕೆ ಇಷ್ಟೊಂದು ಬೇಗ ಎಚ್ಚರ ಆಯ್ತು ಅಂತ ಗೊತ್ತಾಗಲಿಲ್ಲ ವೆಂಕಟ್ ಗೆ. ಬೇಗ ಎದ್ದು ಏನು ಮಾಡುವುದೆಂದು ಒಂದು ಕ್ಷಣ ಅವನಿಗೆ ಹೊಳೆಯಲಿಲ್ಲ. ಬೆಂಗಳೂರಿನಲ್ಲಾಗಿದ್ದರೆ ಎದ್ದ ಕೂಡಲೇ ಬಾಗಿಲಿಗೆ ಸಿಗಿಸಿರುತ್ತಿದ್ದ ಪೇಪರ್ ಎತ್ತಿಕೊಂಡು ಓದಬಹುದಿತ್ತು.  ಈ ಪರದೇಶದಲ್ಲಿ ಹಾಗಿಲ್ಲವಲ್ಲ. ಸುದ್ದಿ ತಿಳಿಯಬೇಕೆಂದರೆ  ಒಂದೋ ಟೀವಿ, ಸ್ಮಾರ್ಟ್ ಫೋನ್, ಇಲ್ಲವೇ ಟಚಿಠಿಣoಠಿ ನಲ್ಲೆ ನೋಡಿ ತಿಳಿಯಬೇಕು. ಅವನಿಗೆ ಅಲ್ಲಿಯ ಸ್ಥಳೀಯ ಸುದ್ದಿಯ ತಿಳಿದುಕೊಳ್ಳುವ ಬಗ್ಗೆ ಉತ್ಸಾಹವೇನಿರಲಿಲ್ಲ. ಇಲ್ಲಿನ ಸುದ್ದಿಗಳೂ ಸುದ್ದಿಗಳೇ? ಒಂದು ಸಣ್ಣ ಬಿರುಗಾಳಿ ಬಂದರೇನೇ ಇಡೀ … Read more

ನಾಲ್ವರ ಕವನಗಳು: ವಿನಾಯಕ ಭಟ್, ಇಂದುತನಯ, ಯದುನಂದನ್ ಗೌಡ ಎ.ಟಿ., ಶ್ರೀದೇವಿ ಕೆರೆಮನೆ

ಅದೇ ರಾಗ, ಬೇರೆ ಹಾಡು.. (ಧಾಟಿ: ಚೆಂದುಟಿಯ ಪಕ್ಕದಲಿ; ಚಿತ್ರ: ಡ್ರಾಮ) ಕಂಗಳಲಿ ಕೋರೈಸೊ ಬೆಳದಿಂಗಳಾ ಹೊಳಪ ಚಂದಿರನ ಮೊಗದಲ್ಲೂ ನಾ ಕಾಣೆ; ಅಂಗಳದಿ ನೀ ಬರೆದ ರಂಗೋಲಿಯ ಹಾಗೇ ಬಾಳನ್ನು ಸಿಂಗರಿಸು ಓ ಜಾಣೆ; ಬರೆದಿರುವೆ ಈ ಗೀತೆ ನಿನಗಾಗಿ.. ಮೂಡಿರುವೆ ನೀ ಇದರ ಶೃತಿಯಾಗಿ.. ಹಾಡೋಣವೇ ಒಮ್ಮೆ ಜೊತೆಯಾಗಿ? ಎತ್ತರದಿ ಅರಳಿರುವ ಚಾಚೊ ಕೈಯ್ಯಿಗೆ ಸಿಗದ ಪಾರಿಜಾತದ ಹೂವು ಬಲು ಚಂದವಂತೆ; ನೀ ದೂರ ಸರಿದಂತೆ ನೆನಪುಗಳು ಸನಿಹಾಗಿ ಗಾಢವಾಗುವ ಮೋಹಕೆ ಕೊನೆಯೆಂಬುದುಂಟೆ? ಎಡರುಗಳು … Read more

ತಾಜ್ ಕಥೆ-ಆಗ್ರಾದ ವ್ಯಥೆ: ಅಖಿಲೇಶ್ ಚಿಪ್ಪಳಿ

1990ರ ಜೂನ್ ತಿಂಗಳ ಒಂದು ದಿನ ಮುಂಜಾವು. ಏರ್‍ಪೋರ್ಸ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ಸ್ನೇಹಿತನ ಹೀರೋಹೊಂಡ ಹತ್ತಿ ದೆಹಲಿಯಿಂದ ಆಗ್ರಾ ಹೊರೆಟೆವು. ಈಗ ನೋಡಿದರೆ ಅದೊಂದು ಹುಚ್ಚು ಸಾಹಸವಾಗಿತ್ತು. ಆಗ್ರಾಕ್ಕೆ ಹೋಗುತ್ತಿರುವ ಉದ್ಧೇಶ ಜಗತ್ಪಸಿದ್ಧ ತಾಜ್ ಮಹಲ್ ನೋಡುವುದಾಗಿತ್ತು. ಸುಮಾರು 400 ಕಿ.ಮಿ. ದೂರ ಪಯಣ. ಕೆಳಗಿನ ಕಪ್ಪು ಟಾರೋಡು ಸೂರ್ಯನ ಎಲ್ಲಾ ಶಾಖ ಹೀರಿಕೊಂಡು ನಿಗಿ ನಿಗಿ ಸುಡುತ್ತಿತ್ತು. ಜೊತೆಗೆ ಬಿಸಿಗಾಳಿ. ಬಹುಷ: ಆಗಿನ ವಯಸ್ಸು ಇಂತದೊಂದು ವಿಲಕ್ಷಣ ಸಾಹಸಕ್ಕೆ ಪ್ರೇರಪಿಸಿತೋ ಏನೋ?. ಆಗ್ರಾ ಎಷ್ಟೊತ್ತಿಗೆ ತಲುಪಿಯೇವು? … Read more

ಒಲೆ: ಗುಂಡುರಾವ್ ದೇಸಾಯಿ

ಇತ್ತೀಚಿಗೆ ನಮ್ಮ ದೇವಸ್ಥಾನಕ್ಕೆ ದರ್ಶನಾರ್ಥವಾಗಿ ಬೆಂಗಳೂರಿನಿಂದ ಬಂದಿದ್ದ ದಂಪತಿಗಳಿಗಾಗಿ ನಮ್ಮ ಸಮಿತಿಯ ಹಿರಿಯರೊಬ್ಬರು ರಾತ್ರಿ ಅಡುಗೆ ಸಿದ್ಧ ಮಾಡುತ್ತಿದ್ದರು. ಆ ದಂಪತಿಗಳ ಪುತ್ರಿ ಅನ್ನ ಮಾಡುವುದನ್ನು ಗಾಬರಿಯಿಂದ ಬಿಟ್ಟ ಕಣ್ಣಿನಿಂದ ನೋಡುತ್ತಿದ್ದಳು. ಅದನ್ನು ಗಮನಿಸಿದ ಹಿರಿಯರು ‘ಯಾಕಮ್ಮ ಹಾಗೆ ನೋಡ್ತಾ ಇದ್ದಿಯಾ ಅಡುಗೆ ಮಾಡೋದು ನೋಡಿಲ್ವೆ? ಅಥವಾ ಹಸಿವೆಯಾಗಿದೆಯಾ?’ ಎಂದು ಕೇಳಿದರು. ‘ಅಂಕಲ್ ಅಡಿಗೆ ಈ ರೀತಿ ಮಾಡ್ತಿರಾ? ಅನ್ನ ಅದ್ಹೇಗೆ ಮಾಡ್ತೀರಿ? ವಿಜಲ್ ಕೇಳ್ತಾ ಇಲ್ಲ ಹಿಂಗೂ ಮಾಡಬಹುದಾ?’ ಎಂದು ಪ್ರಶ್ನೆ ಹಾಕಿದಳು ಹೀಗೂ ಉಂಟೆ … Read more

ಸೂರ್ಯಪುತ್ರರ ನೋವಿಗೆ ಇಲ್ಲಿದೆ ಪರಿಹಾರ: ಸಂಗಮೇಶ ಡಿಗ್ಗಿ ಸಂಗಾಮಿತ್ರ

ಹರೆಯದ ವಯಸಲ್ಲಿ ಬೇಗನೆ ಏಳುವದು ಕಷ್ಟಕಣ್ರೀ. ಗಲ್ಲಿಗೇರಿಸುವ ಶಿಕ್ಷೆಯಾದ್ರೂ ಕೊಡಿ ಬೆಳಗ್ಗಿನ ಜಾವದಲ್ಲಿ ಏಳುವ ಕೆಲಸ ಹಚ್ಚಬೇಡಿ. ರಾತ್ರಿ ಮೂರರವರೆಗೆ ಸಿನಿಮಾ, ಮೇಸೆಜು, ವಾಟ್ಸಾಪ್ ಅಂತ ಟೈಮ್‍ತಿಂದು ಮುಸುಕು ಹೊದ್ದು ಮಲಗಿದಾಗ ಜಗದ ಪರಿವೆ ಇಲ್ಲದೆ ಲೋಕದ ಯಾವುದೇ ಚಿಂತೆ ಇಲ್ಲದವರಂಥೇ ನಿದ್ದೆ ಆವರಿಸಿರುತ್ತದೆ. ಬೆಳಗ್ಗೆ ಯಾರಾದ್ರೂ ಮುಸುಕು ಹೊದ್ದು ಮಲಗಿದವನನ್ನು  ಎಚ್ಚರಿಸಿದಾಗ ಎದುರಿನವರ ಕೆನ್ನೆಯ ಮೇಲೆ ಬಿಟ್ಟಿಯಾಗಿ ಬಾಸುಂಡೆ ಮೂಡಿಸುವಷ್ಟು ಸಿಟ್ಟು ಬರುತ್ತದೆ. ಅಲ್ರೀ ನೀವೆ ಹೇಳ್ರೀ… ಬೆಳಗ್ಗಿನ ಜಾವದಲ್ಲಿ ದೀಪಿಕಾ ಪಡುಕೋಣೆ ನಮ್ಮ ಜೊತೆ … Read more

ಕ್ಷೌರ ಸಮಾಚಾರ: ಎಚ್.ಕೆ.ಶರತ್

ತಿಂಗಳಿಗೋ ಎರಡು ತಿಂಗಳಿಗೋ ಒಮ್ಮೆ ಹೇರ್ ಕಟ್ ಮಾಡಿಸುವುದು, ವಾರಕ್ಕೋ ಹದಿನೈದು ದಿನಕ್ಕೋ ಟ್ರಿಮ್ ಅಥವಾ ಶೇವ್ ಮಾಡಿಸೋದು ಅಂದ್ರೆ ಸುಮ್ನೆ ಅಲ್ಲ. ಅನುಭವಿಸಿದವರಿಗೇ ಗೊತ್ತು ಅದರ ಸುಖ-ದುಃಖ. ಬೆಳಿಗ್ಗೆ ಎದ್ದು ಮುಖಕ್ಕೆ ಮತ್ತು ……ಕ್ಕೆ ನೀರು ಹಾಕಿಕೊಂಡು(ಪಾಶ್ಚಿಮಾತ್ಯ ಸಂಸ್ಕøತಿ ಅಳವಡಿಸಿಕೊಂಡವರು ಟಿಶ್ಯೂ ಪೇಪರ್ ಬಳಸಬಹುದು!) ಹೇರ್ ಡ್ರೆಸಸ್ ಎಂಬ ಜಗತ್ತಿನೊಳಗಿನ ಜಗತ್ತಿಗೆ ಪ್ರವೇಶಿಸಿದರೆ ಸಾಕು, ಅಲ್ಲಿ ನಾನಾ ನಮೂನೆಯ ವಿಚಾರಗಳು ಮೈ ಕೊಡವಿ ಮೇಲೇಳುತ್ತವೆ. ಒಬಾಮಾ ನ್ಯೂಸ್‍ನಿಂದಿಡಿದು ಹೊಸ ಲೋಕಲ್ ಲವ್ ಸ್ಟೋರಿಯವರೆಗೆ ಎಲ್ಲವೂ ಮುಕ್ತ … Read more

ಸೂರ್ಯಾಸ್ತ: ಪ್ರಶಸ್ತಿ

ಆಫೀಸಿನ ಗಾಜಿನಾಚೆ ಕಾಣುತ್ತಿದ್ದ ಸಂಜೆಯ ಬಣ್ಣದೋಕುಳಿ ಖುಷಿಯ ಬದಲು ಜಿಗುಪ್ಸೆ ಹುಟ್ಟಿಸಿತ್ತವನಿಗೆ. ಎಷ್ಟು ದಿನವೆಂದು ಹೀಗೆ ಹೊತ್ತುಗೊತ್ತಿಲ್ಲದಂತೆ ಗೇಯುವುದು ? ಒಂದು ದಿನವಾದರೂ ಹೊತ್ತಿಗೆ ಸರಿಯಾಗಿ ಮನೆ ತಲುಪಬೇಕೆಂಬ ಕನಸು ಕನಸಾಗೇ ಉಳಿದುದನ್ನು ಪ್ರತಿದಿನದ ಸೂರ್ಯಾಸ್ತ ಚುಚ್ಚಿ ಚುಚ್ಚಿ ನೆನಪಿಸಿದಂತನಿಸುತ್ತಿತ್ತು ಅವನಿಗೆ.  ಕೆಂಪು, ಕೇಸರಿ, ಅರಿಷಿಣಗಳ ಬಣ್ಣ ಹೊದ್ದ ಮೋಡಗಳು ಒಂದೆಡೆ ಇರಲಾರದೇ ಮದುವೆ ಮನೆಯ ಸುಂದರಿಯರಂತೆ ಅತ್ತಿತ್ತ ಓಡಾಡುತ್ತಿದ್ದರೆ ಬೀಸುತ್ತಿದ್ದ ತಂಗಾಳಿ ಅಲ್ಲೇ ನಿಂತಿದ್ದ ಹೆಣ್ಣೊಬ್ಬಳ ಕೂದಲೊಂದಿಗೆ ಆಟವಾಡುತ್ತಿತ್ತು.  ಮೋಡಗಳ ಮೆರವಣಿಗೆಯಿಂದ ಕೊಂಚ ಕೆಳಗೆ ಕತ್ತು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಾಯಿಗೆ ತಿಳಿದಿದೆಯೇ?  ನನ್ನ ಮಿತ್ರನೊಬ್ಬ ಒಂದು ದೇಶದ ಅಧ್ಯಕ್ಷರನ್ನು ಬೇಟಿ ಮಾಡಲು ಹೋಗಿದ್ದ.  ಆದ್ಯಕ್ಷರ ನಿವಾಸದ ಆವರಣದಲ್ಲಿ ಅವರು ಮಾತನಾಡುತ್ತಾ ಸುತ್ತಾಡುತ್ತಿದ್ದಾಗ ನೋಡಲು ಭಯಂಕರವಾಗಿದ್ದ ದೊಡ್ಡ ನಾಯಿಯೊಂದು ಅಲ್ಲಿಯೇ ಇದ್ದ ಒಬ್ಬ ಹಿಂದೂ ಗುರುವಿನ ಕೌಪೀನವನ್ನು ಕಚ್ಚಿ ಹರಿದದ್ದಲ್ಲದೆ ಜೋರಾಗಿ ಬೊಗಳುತ್ತಾ ಅವನನ್ನು ಒಂದು ಗೋಡೆಯ ಸಮೀಪಕ್ಕೆ ಅಟ್ಟಿಕೊಂಡು ಹೋಯಿತು. ಹುಲಿಗಳನ್ನು ತನ್ನ ನೋಟದಿಂದಲೇ ಪಳಗಿಸುವ ಸಾಮರ್ಥ್ಯ ಉಳ್ಳವನು ಎಂಬುದಾಗಿ ಖ್ಯಾತನಾಗಿದ್ದ ಆ ಗುರುವಿಗೆ ನಾಯಿಗಳನ್ನು ಆ ರೀತಿ ಪಳಗಿಸುವ ಸಾಮರ್ಥ್ಯವಿರಲಿಲ್ಲವಾದ್ದರಿಂದ ಏನಾದರೂ ಮಾಡುವಂತೆ ನನ್ನ … Read more

ಈ ಮನವೆಂಬ ದುಂಬಿಯ ಕರೆದೊಯ್ದು: ಅಜಿತ್ ಭಟ್

ನೀ ಮುಗಿಲಾಗು ನಾ ಕಡಲಾಗುವೆ ಜೊತೆ ಇರದಿದ್ದರೇನಂತೆ ರೆಪ್ಪೆ ತೆರೆದರೆ ನನಗೆ ನೀನು, ನಿನಗೆ ನಾನು.. ಎಲ್ಲಿರುವೆ? ಹೇಗಿರುವೆ? ಎಲ್ಲೋ ಸಾಗಬೇಕಿದ್ದ ಈ ನನ್ನ ಬದುಕನ್ನು ಇನ್ನೆಲ್ಲಿಗೆ ತಂದು ನಿಲ್ಲಿಸಿರುವೆ. ಎಲ್ಲಿಗೆ? ಯಾತಕೆ? ಏನೂ ಕೇಳದೆ ಕಣ್ಮುಚ್ಚಿ ನಿನ್ನ ಹಿಂಬಾಲಿಸಿ ಬಂದೆ ಕಣ್ತೆರೆದು ನೋಡಿದಾಗ ಕವಲು ದಾರಿಯಲ್ಲಿ ನಾ ಒಂಟಿ ಪಯಣಿಗ. ನೀನು ಇನ್ನಾರದೋ ಬದುಕಿನ ಸಾರಥ್ಯವ ಹಿಡಿದಿರುವೆಯ? ಆದರೆ ನನ್ನ ಪರಿಸ್ಥಿತಿ ಗೂಡನ್ನು ತಪ್ಪಿಸಿಕೊಂಡ ಜೇನು ಹುಳುವಿನಂತೆ ಎತ್ತ ಸಾಗಿದರು ಅದು ನನ್ನದಲ್ಲದ ದಾರಿ. ನನ್ನ … Read more

ಸೋಮರಸಕ್ಕೆ ರಾಜಮಾರ್ಗ: ಆದರ್ಶ ಸದಾನ೦ದ ಅರ್ಕಸಾಲಿ

ನಿನ್ನೆ, ಅ೦ದರೆ ಶನಿವಾರ, ಮಾನ್ಸೂನ್ ಮಾಸದ ಮೊದಲ ಶನಿವಾರ, ಅದೇ ತಲೆ ಕೆಟ್ಟು ಹೋಗುವಷ್ಟು ಕೆಲಸ ಇದ್ದ ಶನಿವಾರ, ಊಟ ತಿ೦ಡಿ ನೆಟ್ಟಗೆ ತಿನ್ನದೆ ಸ೦ಜೇವರೆಗೂ ಪೇಶೆ೦ಟ್ಸ್ ನೋಡಿದ ಶನಿವಾರದ ಬಗ್ಗೆ ಬರೆಯುವ ಮುನ್ನ ಕೇರಳದ ಸಾರಾಯಿ ಕಲ್ಚರ್ ಬಗ್ಗೆ ಸ್ವಲ್ಪ ಮುನ್ನುಡಿ ಬರೆಯುವೆ. ಭಾರತದಲ್ಲೇ ಪ್ರತಿ ತಲೆಗ೦ತೆ ಅಧಿಕ ಸಾರಾಯಿ ಕುಡಿಯುವ ಪ್ರ(ಕು)ಖ್ಯಾತಿ ಹೊ೦ದಿದ ಅಕ್ಷರಸ್ತ, ಗಾಡ್ಸ್ ಓನ್ ಲ್ಯಾ೦ಡ ಕೇರಳ. ಆದರೆ ಇಲ್ಲಿ ಕುಡಿತಕ್ಕೆ ಕಡಿವಾಣ ಹಾಕಲೋ ಅಥವಾ ಸಾರಾಯಿ ಮಾರುವದರಿ೦ದ ಬರುವ ಲಾಭವನ್ನು … Read more

ಭೃಂಗದ ಬೆನ್ನೇರಿ…!: ಎಸ್.ಜಿ.ಶಿವಶಂಕರ್

ಎಲ್ಲ ಸರಿಯಾಗಿ ಜೋಡಿಸಿದ್ದೇನೆಯೇ ಎಂದು ಮನು ಮತ್ತೊಮ್ಮೆ ಖಚಿತಪಡಿಸಿಕೊಂಡ. ಸಮಾಧಾನವಾಯಿತು. ಎಲ್ಲ ಸರಿಯಾದರೆ ಇನ್ನು ಹತ್ತು ನಿಮಿಷಗಳಲ್ಲಿ ತನ್ನ ಮುಂದೆ ರೂಪಸಿಯೊಬ್ಬಳು ಜೀವ ತಳೆಯುತ್ತಾಳೆ. ಅದೂ ಎಂತಹ ರೂಪಸಿ ? ತಾನು ಬಯಸಿದಂತವಳು! ತಾನೇ ಹೇಳಿದಂತೆ ರೂಪುಗೊಂಡವಳು!! ಇದನ್ನು ನಂಬುವುದು ಕಷ್ಟ!! ಆದರೆ ಇದು ನಿಜ. ಎಲ್ಲಾ ತನ್ನ ಕಣ್ಣೆದುರೇ ನಡೆದಿದೆ. ಸ್ವತಃ ತಾನೇ ತನ್ನ ಕೈಯಾರೆ ರೂಪಿಸಿದವಳು! ಅವಳಿಗೆ ಜೀವ ಕೊಡುವ ಮುನ್ನ ಒಮ್ಮೆ ಮುಟ್ಟಿ ನೋಡಿದ. ನಿಜಕ್ಕೂ ಅದು ರೋಬೋ ಎಂದು ಹೇಳಲು ಯಾರಿಗೂ … Read more

ಸಚಿವರಿಗೊಂದು ಸನ್ಮಾನ ಮಾಡೋಣವೇ???: ಅಖಿಲೇಶ್ ಚಿಪ್ಪಳಿ

ಮ್ಯಾಗಿಯಲ್ಲಿ ಸತುವಿದೆ, ಕೋಲ್ಗೇಟ್‍ನಲ್ಲಿ ಉಪ್ಪಿದೆ. ಇನ್ನುಳಿದ ಜಂಕ್ ಫುಡ್‍ಗಳಲ್ಲಿ ಯಾವ್ಯಾವ ವಿಷವಿದೆ ಗೊತ್ತಿಲ್ಲ. ಮ್ಯಾಗಿ ಆರೋಗ್ಯಕ್ಕೆ ಹಾನಿಕಾರಕ ಆದ್ದರಿಂದ ಅದಕ್ಕೆ ನಿಷೇಧ ಹೇರಲಾಯಿತು. ದಾಸ್ತಾನಿನಲ್ಲಿದ್ದ ಎಲ್ಲಾ ಮ್ಯಾಗಿ ಉತ್ಪನ್ನಗಳನ್ನು ನೆಸ್ಲೆ ವಾಪಾಸು ಪಡೆದಿದೆ ಎಂದೆಲ್ಲಾ ಸುದ್ಧಿ ಪ್ರತಿ ಪತ್ರಿಕೆಯ ಎಲ್ಲಾ ಪೇಜುಗಳಲ್ಲಿ. ಇದೇ ಹೊತ್ತಿನಲ್ಲಿ ದೇಶದ ರಾಜಧಾನಿಯನ್ನು ಆಳುತ್ತಿರುವ ಆಮ್ ಆದ್ಮಿ ಸರ್ಕಾರದ ಕಾನೂನು ಸಚಿವರ ಪದವಿಯೇ ಫೇಕು ಎಂಬಂತಹ ಮತ್ತೊಂದು ಬ್ರೇಕಿಂಗ್ ಸುದ್ಧಿ. ಪತ್ರಿಕೆಗಳಿಗೆ ಖುಷಿಯೋ ಖುಷಿ. ಇದರ ಜೊತೆಗೆ ಕುಂದಣವಿಟ್ಟಂತೆ ಕೇಂದ್ರ ಕಾನೂನು ಮತ್ತು … Read more

ನಾ ನೋಡಿದ ಸಿನಿಮಾ ಹಮಾರಿ ಅದೂರಿ ಕಹಾನಿ: ಪ್ರಶಸ್ತಿ

ವಿದ್ಯಾ ಬಾಲನ್ ಅಂದ ತಕ್ಷಣ ಕೆಲವರಿಗೆ ಕಹಾನಿ ಚಿತ್ರ ನೆನಪಾದರೆ ಕೆಲವರಿಗೆ ಡರ್ಟಿ ಪಿಕ್ಚರ್ ನೆನಪಾಗಬಹುದು.ಅವೆರಡಕ್ಕೂ ಎಲ್ಲಿಂದೆಲ್ಲಿಯ ಸಂಬಂಧವಯ್ಯಾ ಅಂದ್ರಾ ? ಡರ್ಟಿಪಿಕ್ಚರ್(೨೦೧೨) ಮತ್ತು ಕಹಾನಿ(೨೦೧೩) ಎರಡಕ್ಕೂ ಫಿಲ್ಮಫೇರ್ ಮತ್ತು ಅಂತರರಾಷ್ಟ್ರೀಯ ಭಾರತೀಯ ಸಿನಿಮಾ ಅಕಾಡೆಮಿ, ಸ್ಟಾರ್ ಗಿಲ್ಡ್, ಸ್ಟಾರ್ ಡಸ್ಟ್, ಜೀ ಸಿನಿ ಅವಾರ್ಡುಗಳ ಉತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ ಇವರು. ಸಿನಿಮಾ ರಂಗದಲ್ಲಿರುವವರಿಗೆ ಸಿನಿ ಪ್ರಶಸ್ತಿಗಳು ಬರುವುದು ಸಾಮಾನ್ಯ,ಅದರಲ್ಲೇನಿದೆ ಅಂದ್ರಾ ? ೨೦೧೪ರ ಸಾಲಿನ ಪದ್ಮಶ್ರೀ ಪ್ರಶಸ್ತಿಯೂ ಇವರಿಗೆ ಸಂದಿದೆ. ಗುರು, ಪಾ ಹೀಗೆ … Read more

ಮೂವರ ಕವನಗಳು: ವಾಸುದೇವ ನಾಡಿಗ್, ಜ್ಯೋತಿ ಹೆಗಡೆ, ಗಿರಿಯ

ಶಕುಂತಲೆಯ ಪ್ರಾಯ ಕನ್ನಡಿಯಲಿಕಣ್ಣಿರುಕಿಸುವುದ ಬಿಟ್ಟಿದ್ದಾಳೆ ಮೇನಕೆ ಶಕುಂತಲೆಯ ತನುವಿಡಿ ಅವಳದೇ ಪರಿವಿಡಿ ಬಿಂಕಮರೆತ ಹೂಕಂಪುಗಳೆಲ್ಲ ಕಕ್ಕಾಬಿಕ್ಕಿ ಕೂತು  ಒನಪಿನ ತೊರೆಗಳೆಲ್ಲಾ ಮೋರೆಕೆಳಗೆ ಮಾಡಿವೆ ತಾರೆಗಳ ಮಿನುಗು ಬರಿಸೋಗು ಕುಣಿಯದ ಮಂಕು ನವಿಲು ನಡೆ ಮರೆತ ಆಲಸಿ ಹಂಸ  ಒಣಗಿದ ಗಿಣಿಯ ತುಟಿ ಕುಂದಿದ  ಬೆಳದಿಂಗಳು ಜಡ ಹಿಡಿದ ಅಂದುಗೆ ತೊನೆದಾಡದತೆನೆ ತುಳುಕದಕೊಳ ಪ್ರಾಯ ಬಂದವಳ ಎದುರು ಉಳಿದವು ಮುಪ್ಪು ಅಳಿದವು ಉಪಮೆಗಳು ಕೊರಗಿದವು ರೂಪಕಗಳು ಧ್ವನಿಗಿನ್ನು ಬರಿ ದಣಿವು ಅನಾಥ ಅಲಂಕಾರ ಕಣ್ವರ ಕಣ್ಣೆದುರು  ವಸಂತ ಕಟು … Read more