ನೀ ಬರುವ ದಾರಿ ತಿರುಗಾ ಮರುಗಾ!:ಹೃದಯಶಿವ ಅಂಕಣ
ಪ್ರೇಮಕವಿಯ ಪ್ರಸನ್ನ ಕಾವ್ಯ ಏಳು ದಶಕಗಳ ಕಾಲ ಕಾವ್ಯಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಕನ್ನಡ ಸಾಹಿತ್ಯ ಪ್ರಿಯರನ್ನು ಅಯಸ್ಕಾಂತದಂತೆ ಸೆಳೆದ ನವಿರುಕವಿ ಕೆ.ಎಸ್.ನರಸಿಂಹಸ್ವಾಮಿಯವರು ನಮ್ಮ ನಡುವಿನ ಜೀವಂತ ಸೆಲೆ. ಇವರು ಜನಿಸಿದ್ದು ಮಂಡ್ಯ ಜಿಲ್ಲೆ ಯ ಕಿಕ್ಕೇರಿಯಲ್ಲಿ ೧೯೧೫ರ ಜನವರಿ ೨೬ ರಂದು, ನಿಧನರಾದದ್ದು ೨೦೦೩ರ ಡಿಸೆಂಬರ್ ೨೭ ರಂದು ಬೆಂಗಳೂರಿನಲ್ಲಿ. ತಮ್ಮ ಸರಳ ಪದಗಳ ಮೂಲಕ ಪ್ರೀತಿಗೆ ಹೊಸ ವ್ಯಾಖ್ಯಾನ ಬರೆದು ಹೃದಯ ಹೃದಯಗಳ ನಡುವೆ ಸೇತುವೆಯಾದರು. ವಾಸ್ತವದ ತಳಪಾಯದ ಮೇಲೆ ನಿಂತು ಕಲ್ಪನೆಯ ಬಾವುಟ ಹಾರಿಸಿದ ಖ್ಯಾತಿ ಇವರದು. … Read more