ನಾಟಕಕಾರರಾಗಿ ಕುವೆಂಪು (ಭಾಗ-18) : ಹಿಪ್ಪರಗಿ ಸಿದ್ದರಾಮ್, ಧಾರವಾಡ
ಬಲಿದಾನ (1948) : ಆತ್ಮೀಯ ಓದುಗಪ್ರಭುಗಳೇ, ಹಿಂದಿನ ಸಂಚಿಕೆಯಲ್ಲಿ ಮಹಾಕವಿಗಳ ‘ಬಲಿದಾನ’ ರಂಗಕೃತಿಯ ಎರಡು ದೃಶ್ಯಾವಳಿಗಳ ಕುರಿತು ತಿಳಿದುಕೊಂಡಿದ್ದೇವೆ. ಆರಂಭದ ದೃಶ್ಯದಲ್ಲಿ ಹಾಳುಬಿದ್ದ ಕತ್ತಲುಗವಿದಿರುವ ಕಾಳಿಕಾ ಮಂದಿರದಲ್ಲಿ ಭರತಸುತನು ನೋವು-ನಿರಾಶೆ-ಹತಾಶೆ ಭಾವಗಳಿಂದ ಮಲಗಿಕೊಂಡಿರುವಾಗ ಭಾರತಾಂಬೆಯು ಪ್ರತ್ಯಕ್ಷಳಾಗಿ, ಪರಿಚಯಿಸಿಕೊಂಡು ತನಗೊದಗಿರುವ ಸ್ಥಿತಿಯನ್ನು ವಿವರಿಸುತ್ತಾಳೆ. ತನ್ನನ್ನು ಈ ಬಂಧನದ ಸಂಕೋಲೆಗಳಿಂದ ಬಿಡಿಸಬೇಕಾದರೆ ಅದರ ಕೀಲಿಕೈ ಮಿತ್ರರಾಗಿ ಆಗಮಿಸಿ ಆಕ್ರಮಿಸಿಕೊಂಡಿರುವವರ ಹತ್ತಿರವಿದೆ. ಅದನ್ನು ತೆಗೆದುಕೊಂಡು ಬರಲು ಹೇಳುತ್ತಾಳೆ. ಅದರಂತೆ ಭರತಸುತನು ಹೊರಡುತ್ತಾನೆ. ಮುಂದಿನ ದೃಶ್ಯದಲ್ಲಿ ಹಾಳುಬಿದ್ದ ಕಾಳಿಕಾ … Read more