ಜೀವವಿರೋಧಿ ಕೀಟನಾಶಕಗಳು:ಅಖಿಲೇಶ್ ಚಿಪ್ಪಳಿ ಅಂಕಣ
ಭದ್ರಾವತಿ ಹುಡುಗಿ ಸಾಗರದ ಜ್ಯೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದಳು. ಪರೀಕ್ಷೆ ಬರೆದು ಫಲಿತಾಂಶ ಬಂದಾಗ ಫೇಲ್ ಆಗಿದ್ದಳು. ಸೀದಾ ಕೀಟನಾಶಕಗಳನ್ನು ಮಾರುವ ಅಂಗಡಿಗೆ ಹೋಗಿ ಫಾಲಿಡಾಲ್ ಬಾಟಲಿ ಕೊಡಿ ಎಂದಳು. ಅಂಗಡಿಯವ ಏನು ಎತ್ತ ವಿಚಾರಿಸದೆ ದುಡ್ಡು ಇಸಿದುಕೊಂಡು ಫಾಲಿಡಾಲ್ ಬಾಟಲಿಯನ್ನು ಕೊಟ್ಟ. ನೆಹರು ಮೈದಾನಕ್ಕೆ ಬಂದವಳು ಯಾರಿಗೂ ಕಾಣಬಾರದೆಂದು ಕೊಡೆ ಬಿಡಿಸಿಕೊಂಡು, ಬಾಟಲಿಯ ಮುಚ್ಚಳವನ್ನು ತೆಗೆದು ಗಟ-ಗಟ ಕುಡಿದೇ ಬಿಟ್ಟಳು. ೫ ನಿಮಿಷದಲ್ಲಿ ಮೈದಾನದಲ್ಲಿ ಬಿದ್ದು ಹೊರಳಾಡುತ್ತಿದ್ದಳು. ಆಟೋದವನು ನೋಡಿದವನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಲಿಲ್ಲ. … Read more