ಜೀವವಿರೋಧಿ ಕೀಟನಾಶಕಗಳು:ಅಖಿಲೇಶ್ ಚಿಪ್ಪಳಿ ಅಂಕಣ

ಭದ್ರಾವತಿ ಹುಡುಗಿ ಸಾಗರದ ಜ್ಯೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದಳು. ಪರೀಕ್ಷೆ ಬರೆದು ಫಲಿತಾಂಶ ಬಂದಾಗ ಫೇಲ್ ಆಗಿದ್ದಳು. ಸೀದಾ ಕೀಟನಾಶಕಗಳನ್ನು ಮಾರುವ ಅಂಗಡಿಗೆ ಹೋಗಿ ಫಾಲಿಡಾಲ್ ಬಾಟಲಿ ಕೊಡಿ ಎಂದಳು. ಅಂಗಡಿಯವ ಏನು ಎತ್ತ ವಿಚಾರಿಸದೆ ದುಡ್ಡು ಇಸಿದುಕೊಂಡು ಫಾಲಿಡಾಲ್ ಬಾಟಲಿಯನ್ನು ಕೊಟ್ಟ. ನೆಹರು ಮೈದಾನಕ್ಕೆ ಬಂದವಳು ಯಾರಿಗೂ ಕಾಣಬಾರದೆಂದು ಕೊಡೆ ಬಿಡಿಸಿಕೊಂಡು, ಬಾಟಲಿಯ ಮುಚ್ಚಳವನ್ನು ತೆಗೆದು ಗಟ-ಗಟ ಕುಡಿದೇ ಬಿಟ್ಟಳು. ೫ ನಿಮಿಷದಲ್ಲಿ ಮೈದಾನದಲ್ಲಿ ಬಿದ್ದು ಹೊರಳಾಡುತ್ತಿದ್ದಳು. ಆಟೋದವನು ನೋಡಿದವನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಲಿಲ್ಲ. … Read more

ಉಪನ್ಯಾಸಕರ ಅಮೂಲ್ಯ ಸಸ್ಯ ಸಂಪತ್ತ ವನ: ಹನಿಯೂರು ಚಂದ್ರೇಗೌಡ

ನಮ್ಮ ನಡುವೆ ಎರಡು ಮಾದರಿಯ ಜನರಿರುತ್ತಾರೆ; ಒಂದು ಮಾದರಿ, ಕೆಲಸ ಮಾಡುವುದರ ಬದಲು ಕೇವಲ ಉಪದೇಶಿಸುವವರು;  ಮತ್ತಿನ್ನೊಂದು ಮಾದರಿ, ಉಪದೇಶಿಸುವುದಷ್ಟೇ ಅಲ್ಲ ಆ ಕೆಲಸವನ್ನು ಸ್ವತಃ ಮಾಡಿ ತೋರಿಸುವವರು. ಮೊದಲನೆ ಸಾಲಿನಲ್ಲಿ ನಿಲ್ಲಬಲ್ಲವರು ಅನೇಕರು ಅನಾಯಾಸವಾಗಿ ನಮಗೆ ದೊರಕುತ್ತಾರೆ. ಆದರೆ, ಎರಡನೆಯ ಮಾದರಿಯ ಜನರು ಸಿಗುವುದು ಬಹಳ ವಿರಳವೇ.  ಅಂಥ ವಿರಳಾತಿ ವಿರಳ ವ್ಯಕ್ತಿಗಳಲ್ಲಿ ರಾಮನಗರ ಜಿಲ್ಲೆ, ಗೊಂಬೆನಗರ ಚನ್ನಪಟ್ಟಣ ತಾಲೂಕಿನ ಎಲೆಭೂಹಳ್ಳಿಯ, ವೃತ್ತಿಯಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿರುವ ಭೂಹಳ್ಳಿ ಪುಟ್ಟಸ್ವಾಮಿ ಒಬ್ಬರು.  ಇವರು ಪ್ರವೃತ್ತಿಯಲ್ಲಿ ಕವಿ, ಸಾಹಿತಿ, … Read more

ನಾಟಕಕಾರರಾಗಿ ಕುವೆಂಪು (ಭಾಗ-15) : ಹಿಪ್ಪರಗಿ ಸಿದ್ದರಾಮ್, ಧಾರವಾಡ

ಆತ್ಮೀಯ ರಂಗಾಸಕ್ತ ಓದುಗಪ್ರಭುಗಳೇ, ನಾವೀಗ ಮಹಾಕವಿ ಷೇಕ್ಸ್ ಪಿಯರ್‍ನ ‘ಹ್ಯಾಮ್ಲೆಟ್’ ನಾಟಕಕೃತಿಯನ್ನು ಯುಗದಕವಿ ಕುವೆಂಪುರವರು ಕನ್ನಡದಲ್ಲಿ ರೂಪಾಂತರವಾಗಿಸುವುದರೊಂದಿಗೆ ಸುದೀರ್ಘವಾಗಿರುವ ರುದ್ರರಸ ಪ್ರಧಾನ ‘ರಕ್ತಾಕ್ಷಿ’ ರಂಗಕೃತಿಯ ಕುರಿತು ಹಿಂದಿನ ಸಂಚಿಕೆಯಿಂದ ನೋಡುತ್ತಿದ್ದೇವೆ. ಅದರ ಮುಂದುವರಿದ ಕಥಾನಕ ನಿಮಗಾಗಿ…   ಸೆರೆಮನೆಯಲ್ಲಿದ್ದ ಬಸವಯ್ಯ ಮತ್ತು ಲಿಂಗಣ್ಣನವರನ್ನು ಬಿಡುಗಡೆ ಮಾಡಲು ಸನ್ಯಾಸಿಯ ಮಾರ್ಗದರ್ಶನದಲ್ಲಿ ಶಿವಯ್ಯ ಮತ್ತು ಹೊನ್ನಯ್ಯ ಯಶಸ್ವಿಯಾಗುತ್ತಾರೆ. ನಂತರ ಅವರನ್ನು ಕಂಸಿ ಮಾರ್ಗವಾಗಿ ಶಿವಮೊಗ್ಗೆಯ ಹತ್ತಿರ ತುಂಗಾತೀರದಲ್ಲಿರುವ ಹೈದರಾಲಿಯ ಬಿಡಾರಕ್ಕೆ ಕಳುಹಿಸುವುದರೊಂದಿಗೆ ತೀಕ್ಷ್ಣಮತಿಯೂ, ಕುಶಲಮತಿಯೂ ಆದ ಸನ್ಯಾಸಿಯೂ ಬಿಡುಗಡೆಯ ವಿಷಯದಲ್ಲಿ … Read more

ಚಂಪಕಮಾಲಾ…!: ಸುಮನ್ ದೇಸಾಯಿ ಬರೆವ ನಗೆ ಅಂಕಣ

ಆವತ್ತ ಆಫೀಸಿಗೆ ಸೂಟಿ ಇತ್ತು. ಎಲ್ಲಾ ಕೆಲಸಾ ಮುಗಿಸಿ ಆರಾಮಾಗಿ ಟಿವ್ಹಿಯೊಳಗ ‘ಅಡಿಗೆ ಅರಮನಿ’ ನೊಡ್ಕೋತ ಕೂತಿದ್ದೆ. ಗಂಗಾವತಿ ಪ್ರಾಣೇಶ ಅವರು ತಮ್ಮ ಹಾಸ್ಯ ಪ್ರಹಸನದೊಳಗ ಹೇಳೋಹಂಗ ಇವರು ಮಾಡಿ ತೋರೆಸೋ ಅಡಗಿಗಿಂತಾ ಅವರ ರೇಷ್ಮಿ ಸೀರಿ, ಹಾಕ್ಕೊಂಡಿದ ದಾಗಿನಾ, ಮಾಡ್ಕೊಂಡ ಮೇಕಪ್, ಹೇರ್ ಸ್ಟೈಲ್ ನ ಮಸಾಲಿಕಿಂತಾ ಖಡಕ ಇದ್ವು. ಯಾವದೋ ಒಂದು ಸೊಪ್ಪಿನ ಸೂಪ್ ಮಾಡೋದ ಹೆಂಗಂತ ಹೇಳಿಕೊಡ್ಲಿಕತ್ತಿದ್ಲು. ಆಕಿ ಖುಲ್ಲಾ ಬಿಟಗೊಂಡ ಕೂದಲಾ ಎಲ್ಲೆ ಆಕಿ ಮಾಡೊ ಸೂಪಿನ ರುಚಿ ನೋಡತಾವೊ ಅನಿಸ್ತಿತ್ತು. … Read more

ಜ್ಞಾನದ ಹರಿವಿನ ಸ್ಥಿತಿಗತಿ. ಏನು? ಎತ್ತ?: ರಕ್ಷಿತ್ ಶೆಟ್ಟಿ

ಒಂದು ಕಾಲವಿತ್ತು. ಬರಹಗಾರರು ಹಗಲಿರುಳೆನ್ನದೇ ಬರೆದು ತಮ್ಮ ಕೃತಿಗಳನ್ನು ಮುದ್ರಿಸಿ ಉರಿ ಮಳೆ ಚಳಿಯಲ್ಲಿಯೂ ಅಲೆದು ಪ್ರತಿಯನ್ನು ಮಾರುತ್ತಿದ್ದರು. ನಾಡು ನುಡಿಗಾಗಿ ಭಾಷೆಯ ಹಲವು ಮಗ್ಗುಲಲ್ಲಿ ಸಾಹಿತ್ಯ ಕೃಷಿ ಮಾಡಿ ಓದುಗರೊಡನೆ ಭಾವನೆಗಳನ್ನು ಬೆಸೆದುಕೊಳ್ಳುತ್ತಿದ್ದ ಸಮಯವದು. ಇಂಗ್ಲೀಷಿನ ಬರಹಗಾರರಿಗೆ ವಿಶೇಷ ಸ್ಕೋಪ್ ಸಿಗುತ್ತಿದ್ದರೂ ಸ್ವಭಾಷೆಯನ್ನು ಕೃತಿಗಳಲ್ಲಿ ಮೈತಾಳಿಸಿಕೊಂಡು ಭಾಷಾ ಸೇವೆ ಮಾಡಿರವುದು ಕೇವಲ ಕನ್ನಡಕ್ಕಷ್ಟೇ ಸೀಮಿತವಲ್ಲದ್ದು. ಅಂದಿನ ಓದು :- ಕೃತಿಯೊಂದನ್ನು ಮನೆಯವರೆಲ್ಲರೂ ಕಿತ್ತಾಡಿಕೊಂಡು ಆದಷ್ಟು ಬೇಗ ಓದುತ್ತಿದ್ದ ಕಾಲವಿತ್ತು. ಕಾಲ ಸಂದರ್ಭವೂ ಪೂರಕವಾಗಿದ್ದುದು ಬೇರೆ ಮಾತು. ವರ್ಷದಲ್ಲಿ ದುಡಿಯೋದನ್ನ ತಿಂಗಳಲ್ಲಿ ದುಡಿಯೋ ಧಾವಂತ ಆಗಿರಲಿಲ್ಲ. ಅನಕ್ಷರತೆಯಿಂದ ಅಕ್ಷರಸ್ಥತೆಯೆಡೆಗೆ … Read more

ಶಾಪ (ಭಾಗ-2):ಪಾರ್ಥಸಾರಥಿ ಎನ್.

[ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ] ಲಕ್ಷ್ಮೀಶನ ಮುಖ ಸ್ವಲ್ಪ ಗಂಭೀರವಾಯಿತು. ಅವನು ಏನು ಉತ್ತರ ಕೊಡುತ್ತಿದ್ದನೋ, ಅಷ್ಟರಲ್ಲಿ ಅವನ ತಂದೆ ಶ್ರೀನಿವಾಸ  ಬಂದನು.   ಒಳಗೆ ಬರುವಾಗಲೇ, "ದಯಮಾಡಿ ಕ್ಷಮಿಸಿ, ಬೇಗಬರುವೆ ಅಂತ ಹೋಗಿ ನಿಮ್ಮನ್ನು ಕಾಯಿಸಿದೆ, ನಿಮಗೆ ತೊಂದರೆಯಾಯಿತು ಅನ್ನಿಸುತ್ತೆ" ಅಂದವನು ಅಲ್ಲೆ ಕುಳಿತಿದ್ದ ಅವನ ಮಗನತ್ತ, ಅವನ ಅಮ್ಮನತ್ತ, ನನ್ನತ್ತ ನೋಡಿ, "ಇವನ ಹತ್ತಿರ ಮಾತನಾಡುತ್ತಿದ್ದಿರಾ, ನಿಮಗೆ ಏನು ಬೇಸರವಾಗಲಿಲ್ಲ ತಾನೆ?" ಅಂದನು ಆತಂಕದಿಂದ. ನಾನು ನಕ್ಕುಬಿಟ್ಟೆ. "ಬನ್ನಿ ಕುಳಿತುಕೊಳ್ಳಿ, ಯಾವ ಆತಂಕವು ಬೇಡ, ನನಗೆ ಯಾವ ಬೇಸರವು ಇಲ್ಲ, … Read more

ಶಿಶು ಗೀತೆ ಮತ್ತು ಚಿತ್ರ

  ನಿಖಿಲ್ ೩ ನೇ ತರಗತಿ ಜಿ ಪಿ ಎಚ್ ಎಸ್ ನಂಜೈಗರಹಳ್ಳಿ     ಕಿಟ್ಟು ಪುಟ್ಟು   ಕಿಟ್ಟು ಪುಟ್ಟು ಇಬ್ಬರು ತುಂಬಾ ಒಳ್ಳೆ ಗೆಳೆಯರು ಅಕ್ಕ-ಪಕ್ಕದ ಮನೆಯ ಹುಡುಗರು   ಒಂದೇ ಊರು ಒಂದೇ ಶಾಲೆ ಅಣ್ಣ-ತಮ್ಮನಂತೆ ಇವರು ತುಂಬಾ ಒಳ್ಳೇ ಹುಡುಗರು   ಕಿಟ್ಟು ಅಮ್ಮ ತಿಂಡಿ ಕೊಡಲು ಪುಟ್ಟು ಜೊತೆಗೆ ಹಂಚಿ ತಿನುವ ಪುಟ್ಟು ಕೂಡ ಅಪ್ಪ ತರುವ ಪೇಟೆ ತಿಂಡಿ ಹಂಚಿ ತಿನುವ ಕಿಟ್ಟು ಜೊತೆಯಲೇ..   ಜೊತೆಗೆ … Read more

ಸ್ನೇಹ ಎಂಬ ನಂದಾದೀಪ: ಮಂಜು ಎಂ. ದೊಡ್ಡಮನಿ

  ಅಲ್ಲಿ ಎಲ್ಲಿಯೂ ಎಳ್ಳಷ್ಟು ನಿಮ್ಮ ತಪ್ಪು ಇರುವುದಿಲ್ಲ, ಇದ್ದರೂ ನೀವು ಬೇಕೆಂದು ತಪ್ಪು ಮಾಡಿರುವುದಿಲ್ಲ ನಿಮ್ಮ ಗಮನಕ್ಕೆ ಬಾರದೆ ಆದ ಸಣ್ಣದೊಂದು ತಪ್ಪನ್ನು ಅವರು ದೊಡ್ಡದಾಗಿಸಿ ನಿಮ್ಮದೇ ತಪ್ಪು ಎನ್ನುವಂತೆ ತಮ್ಮನ್ನು ತಾವು  ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ನಿಮ್ಮೆದುರು ನಿಂತು ಪ್ರತಿಪಾದಿತ್ತಾರೆ, ಇಲ್ಲ ಸಲ್ಲದ ಆರೋಪಗಳನ್ನು ನಿಮ್ಮ ಮೇಲೆ ಹೊರಿಸುತ್ತಾರೆ, ಕಿಂಚಿಂತು ಬೆಲೆ ಕೊಡದೆ ಫುಲ್ ಸ್ಟಾಪ್ ಇಲ್ಲದೆ ಬಡ ಬಡ ಮಾತಾಡಿ, ಬಾಯಿಗೆ ಬಂದಂತೆ ಉವಾಚಿಸುತ್ತಾರೆ, ನೀವು ಎಷ್ಟೇ ಕಾರಣಕೊಟ್ಟರು ಏನೇ ಹೇಳಿದರು ಕೊನೆಗೆ ಸ್ವಾಭಿಮಾನ ಮರೆತು ಮಾಡದ ತಪ್ಪಿಗೆ ಕ್ಷಮೆ ಕೇಳಿದರೂ  ಅವರು ನಿಮ್ಮ  ಯಾವುದೇ justification ಅಥವಾ reason … Read more

ರೌಡಿ ದನ: ಅಖಿಲೇಶ್ ಚಿಪ್ಪಳಿ ಅಂಕಣ

ಸಾಗರದ ವಿನೋಬ ನಗರದ ಒಂದು ಸಣ್ಣ ಮನೆಯಲ್ಲಿ ವಾಸಿಸುತ್ತಿರುವ ಕುಟುಂಬದ ಯಜಮಾನನ ಹೆಸರು ಸೂರಪ್ಪ. ಮನೆ, ಮನೆ ಮುಂದೆ ೧೦ ಅಡಿ ಅಗಲ ೧೦ ಉದ್ದದ ಚಿಕ್ಕದಾದ ಒಂದು ದಿನಸಿ ಅಂಗಡಿ. ಜೀವನೋಪಾಯಕ್ಕೆ. ಹಳೆಯದಾದ ಮನೆಯಾದರೂ ಹಿಂಭಾಗದಲ್ಲಿ ಸಾಕಷ್ಟು ಜಾಗವಿತ್ತು. ಅಪ್ಪನ ಕಾಲದಲ್ಲಿ ಕಟ್ಟಿದ ಮನೆಯಾದ್ದರಿಂದ, ಮುಚ್ಚಿಗೆ, ತೊಲೆ, ದೊಡ್ಡ-ದೊಡ್ಡ ಚಿತ್ತಾರದ ಕಂಬಗಳು, ನಾಗಂದಿಗೆ, ಕಪಾಟು ಎಲ್ಲವಕ್ಕೂ ಮರಗಳ ಬಳಕೆಯಾಗಿದೆ. ಹೀಗೆ ಸಾಗಿ ಹಿಂದುಗಡೆ ಹತ್ತು ಕಾಲ್ನಡೆಗಳನ್ನು ಕಟ್ಟಿಕೊಳ್ಳಲು ಕೊಟ್ಟಿಗೆಯು ಇದೆ. ಸೂರಪ್ಪನವರ ತಂದೆಯ ಕಾಲದಲ್ಲಿ ಕೊಟ್ಟಿಗೆ … Read more

ಕೆಂಗುಲಾಬಿ (ಭಾಗ 5): ಹನುಮಂತ ಹಾಲಿಗೇರಿ

ಹುಬ್ಬಳ್ಳಿಯೊಳಗ ಮಂಡೇ ಬಜಾರಕ ದೊಡ್ಡ ಹೆಸರು. ಅವತ್ತು ಸೋಮವಾರವಾದ್ದರಿಂದ ಮಂಡೇ ಬಜಾರ್‌ನತ್ತ ಹೆಜ್ಜೆ ಬೆಳೆಸಿದೆ. ಇಲ್ಲಿ ೧೦ ರೂ.ಗಳಿಗೆ ಏನಿಲ್ಲ, ಏನುಂಟು. ಒಂದೊಳ್ಳೆಯ ಅಂಗಿ, ಹವಾಯಿ ಚಪ್ಪಲಿ, ಲುಂಗಿ, ಟವೆಲ್ಲು, ಒಳ ಉಡುಪು, ಬಾಂಡೆ ಸಾಮಾನುಗಳು ಏನೆಲ್ಲವನ್ನು ಖರೀದಿಸಬಹುದು. ಆದರೆ ಇವೆಲ್ಲ ಸೆಕೆಂಡ್ ಹ್ಯಾಂಡ್‌ಗಳು, ನಿಜವಾಗಿ ಹೇಳಬೇಕೆಂದರೆ ಜಾತ್ಯತೀತತೆ ಆಚರಣೆಗೆ ಮಂಡೆ ಬಜಾರ್ ಒಂದು ಸಂಕೇತವಿದ್ದಂತೆ. ಇಲ್ಲಿನ ಒಳ ಉಡುಪುಗಳನ್ನು ಮೊದಲ್ಯಾರೋ ಧರಿಸಿರತಾರೆ. ಈಗ ಅದು ಮತ್ಯಾರ ಮೈಗೋ ಅದು ಅಂಟಿಕೊಂಡು ಅವರ ಬೆವರು ವಾಸನೆಗೆ ಹೊಂದಿಕೊಳ್ಳುತ್ತದೆ. … Read more

ಶಾಪ (ಭಾಗ-೧):ಪಾರ್ಥಸಾರಥಿ ಎನ್

ನನಗೆ ಆ ಮನೆಗೆ ಬರುವ ಅಗತ್ಯವೇನಿರಲಿಲ್ಲ. ಊರಹೊರಗಿನ ದುರ್ಗಾ ದೇವಾಲಯದಲ್ಲಿ ಕುಳಿತಿದ್ದ ನನ್ನನ್ನು ಅವನಾಗಿಯೇ ಮಾತನಾಡಿಸಿದ. ಅವನ ಹೆಸರು ಶ್ರೀನಿವಾಸ. "ಎಲ್ಲಿಂದ ಬರುತ್ತಿದ್ದೀರಿ?" ಅವನು ನನ್ನನ್ನು ಕುತೂಹಲದಿಂದ ಪ್ರಶ್ನಿಸಿದ. ಪ್ರಶ್ನೆ ಸರಿಯಾಗಿಯೆ ಇತ್ತು, ಹಾಗಾಗಿ ಉತ್ತರಿಸಿದೆ "ಉತ್ತರದ ಹರಿದ್ವಾರದಿಂದ ಹೊರಟವನು ಹಾಗೆಯೆ ಸುತ್ತುತ್ತ ಬಂದೆ, ಈಗ ನಿಮ್ಮ ಊರಿಗೆ ಬಂದಿರುವೆ". ಮತ್ತೆ ಕುತೂಹಲದಿಂದ ಪ್ರಶ್ನಿಸಿದ, "ರಾತ್ರಿ ಉಳಿಯುವ ಏರ್ಪಾಡು ಹೇಗೆ, ಎಲ್ಲಿ ಇಳಿದುಕೊಳ್ಳುವಿರಿ?" ನನಗೆ ಆ ರೀತಿಯ ಪ್ರಶ್ನೆಗಳು ಕಾಡುತ್ತಲೆ ಇರಲಿಲ್ಲ. ಇರುವೆನು ಎನ್ನುವಾಗ ರಾತ್ರಿಯೇನು, ಹಗಲೇನು, ಮುಂದಿನ … Read more

ನಾನ್-ವೆಜ್ ಬರ್ಥಡೇ ಪಾರ್ಟಿ:ಸುಮನ್ ದೇಸಾಯಿ ಅಂಕಣ

ನನ್ನ ನಾದಿನಿ ರುಕ್ಕುನ ಮಗನ್ನ ಹುಟ್ಟಿದ ಹಬ್ಬದ ಪಾರ್ಟಿಗೆ ಹೋಗಿದ್ದೆ. ಮನಿ ಟೆರೇಸ್ ಮ್ಯಾಲೆನ ಎಲ್ಲಾ ಅರೇಂಜ್ಮೆಂಟ್ ಮಾಡಿದ್ಲು. ಎಲ್ಲಾ ಕಡೆ ಲೈಟಿನ ಸರಾ ಹಾಕಿದ್ರು. ಅದ್ರ ಟೆರೇಸ್ ತುಂಬ ಅಲ್ಲಲ್ಲೇ ಅಲಂಕಾರಕ್ಕಂತ ಪ್ರಾಣಿಗೋಳ ಗೊಂಬಿ ನಿಲ್ಲಿಸಿದ್ರು. ನೋಡಿದ್ರ ಯಾವದೋ ಝೂ ಒಳಗ ಬಂಧಂಗ ಅನಿಸ್ತಿತ್ತು. ಯಾಕೊ ವಿಚಿತ್ರ ಅನಿಸಿದ್ರು, ಸಣ್ಣ ಹುಡುಗರಿಗೆ ಪ್ರಾಣಿ ಅಂದ್ರ ಭಾಳ ಸೇರತಾವ ಅದಕ್ಕ ಇರಬಹುದು ಅಂತ ಅನ್ಕೊಂಡೆ. ಯಾಕಂದ್ರ ನನ್ನ ಮಗಾನೂ ಪ್ರಾಣಿ ಪ್ರಿಯನ ಇದ್ದಾನ. ಸಣ್ಣಾಂವ ಇದ್ದಾಗ ನಮ್ಮತ್ತಿಯವರು … Read more

ಕೆಂಚಣ್ಣನ ತಿಥಿಯೂ… ವಿ.ಸಿ.ಪಿ. ಕಥೆಯೂ…! :ಹೃದಯಶಿವ ಅಂಕಣ

"ಬತ್ತು… ಬತ್ತು… ಬತ್ತು… ಇನ್ನೇನ್ ಬಂದೇ ಬುಡ್ತು… ಅಗೋ ಬತ್ತಾದೆ… ಸದ್ದು ಕೇಳ್ತಾದೆ… ಅಲ್ನೋಡು ಧೂಳು ಏಳ್ತಾದೆ… ಬತ್ತು… ಬತ್ತು.. ಬಂದೇsss ಬುಡ್ತು !  ಆಕು  ಪಾಕು  ವೆತ್ತೆಲೆ  ಪಾಕು  ಅಮಾ  ಡುಮಾಡೇ….  ಅಸ್ಕಿಣಕಣ  ಪಿಸ್ಕಿಣಕಣ ಅಮಾ  ಡುಮಾಡೇ!!"  ಎಂದು  ಎರಡೋ, ಮೂರೋ  ಓದುವ  ವಯಸ್ಸಿನಲ್ಲಿದ್ದ  ನಾವೆಲ್ಲ  ಖುಷಿಯಿಂದ ಸಂಭ್ರಮಿಸುತ್ತಿದ್ದಂತೆಯೇ  ಅತೀ  ಕೆಟ್ಟ  ಮಣ್ಣರೋಡಿನಲ್ಲಿ  ತುಂಬಿದ ಬಿಮ್ಮನ್ಷೆಯಂತೆ  ಏದುಸಿರು  ಬಿಡುತ್ತಾ  ನಮ್ಮೂರಿಗಿದ್ದ  'ಮೂರು  ಗಂಟೆ  ಬಸ್ಸು'  ಮೂರೂವರೆಗೋ, ಮೂರೂ ಮುಕ್ಕಾಲಿಗೋ  ನೇರವಾಗಿ ನಾವಿದ್ದಲ್ಲಿಗೇ  ಬಂದು ನಿಂತು ದೂರದಿಂದ … Read more

ಹೀಗೊಂದು ಪ್ರಸಂಗ: ಗವಿಸ್ವಾಮಿ

ಮೊನ್ನೆ ಬೈಕಿನಲ್ಲಿ ಪಕ್ಕದ ಹಳ್ಳಿಗೆ ಹೊರಟಿದ್ದೆ. ಹೊರಡುವಾಗಲೇ ಸೂಜಿಗಾತ್ರದ ಹನಿಗಳು  ಗಾಳಿಯಲ್ಲಿ ಚದುರಿಕೊಂಡು ಉದುರುತ್ತಿದ್ದವು.  ಜನರ ಓಡಾಟ ಮಾಮೂಲಿನಂತೆಯೇ ಇತ್ತು.ಒಂದು ಮೈಲಿಯಷ್ಟು ಮುಂದೆ ಹೋಗುವಷ್ಟರಲ್ಲಿ  ಸೂಜಿ ಗಾತ್ರದ ಹನಿಗಳು  ದಬ್ಬಳದ ಗಾತ್ರಕ್ಕೆ ತಿರುಗಿದ್ದವು. ಎದುರುಗಾಳಿ ಬೀಸುತ್ತಿದ್ದರಿಂದ  ಹನಿಗಳು ಮುಖವನ್ನು ಅಡ್ಡಾದಿಡ್ಡಿ ಪಂಕ್ಚರ್ ಮಾಡತೊಡಗಿದವು. ಅಲ್ಲೇ ರಸ್ತೆ ಬದಿಯಲ್ಲಿದ್ದ ಹುಣಸೆಮರದಡಿಯಲ್ಲಿ ಗಾಡಿ ನಿಲ್ಲಿಸಿ ಫೇಸ್ ಬುಕ್ ಓಪನ್ ಮಾಡಿದೆ. ನೋಟಿಫಿಕೇಶನ್ ಐಕಾನ್ ಖಾಲಿ ಹೊಡೆಯುತ್ತಿತ್ತು. ಒಂದು ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಸಡನ್ನಾಗಿ ಓಕೆ ಕೊಡುವುದು ಬೇಡ, ನಿಧಾನಕ್ಕೆ ಕನ್ಫರ್ಮ್ ಮಾಡಿದರಾಯಿತು ಎಂದುಕೊಂಡು … Read more

ಆಕ್ಸಿಡೆಂಟ್:ವಾಸುಕಿ ರಾಘವನ್ ಅಂಕಣ

ಶಂಕರ್ ನಾಗ್ ನಿಜಕ್ಕೂ ಸಿನಿಮಾ ವ್ಯಾಕರಣ ಕಲಿತಿದ್ದು ಎಲ್ಲಿ? ಅದು ರಂಗಭೂಮಿಯ ಅನುಭವದಿಂದ ಬಂದ ಸೆನ್ಸಿಬಿಲಿಟಿಯಾ? ಅಥವಾ ಬೇರೆ ದೇಶದ ಚಿತ್ರಗಳನ್ನ ಹೆಚ್ಚಾಗಿ ನೋಡಿ ಆ ಶೈಲಿಯಿಂದ ಪ್ರಭಾವಿತರಾಗಿದ್ರಾ? ನನಗೆ ಗೊತ್ತಿಲ್ಲ! ಆದರೆ ಅವರ ನಿರ್ದೇಶನದ ಚಿತ್ರಗಳಲ್ಲಿ ಒಂದು ವಿಭಿನ್ನವಾದ ಛಾಪು ಇರುತ್ತದೆ. ಅವರ ನಿರ್ದೇಶನದ “ಆಕ್ಸಿಡೆಂಟ್” ನನ್ನ ಮೆಚ್ಚಿನ ಚಿತ್ರಗಳಲ್ಲೊಂದು. ಚಿತ್ರದ ಕಥೆ ಬಹಳ ಸರಳ, ಆದರೆ ಅದನ್ನು ಹ್ಯಾಂಡಲ್ ಮಾಡಿರುವ ಶೈಲಿ ಅದ್ಭುತ. ಮಂತ್ರಿ ಧರ್ಮಾಧಿಕಾರಿಯ ಮಗ ದೀಪಕ್ ತನ್ನ ಗೆಳೆಯ ರಾಹುಲ್ ಜೊತೆ … Read more

ಸಾಮಾಜಿಕ ಸ್ಪಂದನೆ:ಪ್ರಶಸ್ತಿ ಅಂಕಣ

ನಾಳೆಯಿಂದ ಪೆಟ್ರೋಲ್ ದರ  ಮತ್ತೆ ತುಟ್ಟಿ.ಪಾಕಿಸ್ತಾನದಲ್ಲಿ ಅಷ್ಟಿದೆ, ಇನ್ನೆಲ್ಲೋ ಮತ್ತೆಷ್ಟೋ ಇದೆ. ಇಲ್ಲಿ ಮಾತ್ರ ಹೆಚ್ಚೆಂಬ ಮಾತು ಎಲ್ಲರ ಬಾಯಲ್ಲೂ. ಪೆಟ್ರೋಲ್ ದರ ಹೆಚ್ಚಳ, ಪದವೀಧರರಿಗೆ ಹೆಚ್ಚುತ್ತಿರೋ ನಿರೂದ್ಯೋಗ ಸಮಸ್ಯೆ,  ಹೆಚ್ಚುತ್ತಿರೋ ತಲೆಗಂದಾಯ, ಕೆಟ್ಟಿರೋ ರಸ್ತೆ  ಹೀಗೆ ಹುಡುಕ್ತಾ ಹೋದ್ರೆ ನೂರೆಂಟು ಅವ್ಯವಸ್ಥೆಗಳು ಇಲ್ಲಿ. ಭ್ರಷ್ಟ ಅಧಿಕಾರಿಗಳಿಂದ ಹಿಡಿದು ಬೇಜವಬ್ದಾರಿ ಸಹೋದ್ಯೋಗಿಯ ತನಕ , ಅಭಿವೃದ್ಧಿ ಸಹಿಸದ ನೆರೆಯವರಿಂದ ಹೆಜ್ಜೆಹೆಜ್ಜೆಗೂ ಮೂಗು ತಿವಿಯೋ ಜನರ ತನಕ  ಈ ಸಮಾಜದ ಬಗ್ಗೆ ಬಯ್ತಾ ಹೋದ್ರೆ ಅದು ಮುಗಿಯದ ಪಟ್ಟಿ. … Read more

ಕುವೆಂಪುರವರ ಕ್ರಾಂತಿ ಗೀತೆ: ದಿವ್ಯ ಆಂಜನಪ್ಪ

ಏನಾದರೂ ಆಗು, ನೀ ಬಯಸಿದಂತಾಗು, ಏನಾದರೂ ಸರಿಯೇ ಮೊದಲು ಮಾನವನಾಗು – ಎಂಬ ಮಾತಿನಿಂದ ಮಾನವನ ಮಾನವೀಯತೆಯನ್ನು ಕವಿ ಜಾಗೃತಗೊಳಿಸುವ ಪ್ರಯತ್ನವನ್ನು ನಡೆಸಿದ್ದಾರೆ. ಮನುಷ್ಯತ್ವವನ್ನೇ ಮರೆತಂತಹ ರಾಕ್ಷಸ ಕೃತ್ಯಗಳು ತಾಂಡವವಾಡುತ್ತಿರುವ ಕಾಲದಲ್ಲಿ ಇಂತಹ ಕವಿವಾಣಿಗಳು ಆಗಿಂದಾಗ್ಗೆ ಮನುಷ್ಯನ ಕಿವಿ ಮೇಲೆ ಬೀಳುತ್ತಿದ್ದಲ್ಲಿ ಸುಧಾರಣೆ ಕಾರ್ಯ ಸಾಧ್ಯವಾಗುವುದೆನೋ? ಎಂದೆನಿಸುತ್ತದೆ. ಇಂತಹದೇ ಸಂದೇಶ ಹೊತ್ತ ಮನುಜ ಮತಕ್ಕೆ ಒತ್ತನ್ನು ನೀಡಿದ ಅವರ ಕ್ರಾಂತಿಕಾರಿ ಗೀತೆಗಳ "ಅನಿಕೇತನ" ಕವನ ಸಂಕಲನದ "ಗುಡಿ, ಚರ್ಚು ಮಸಜೀದಿಗಳ ಬಿಟ್ಟು ಹೊರ ಬನ್ನಿ….ಎಂಬ ಕ್ರಾಂತಿ ಗೀತೆ. ಕವಿ ತಮ್ಮ ಈ ಗೀತೆಯಲ್ಲಿ ಸರ್ವ ಧರ್ಮ … Read more

ಕೊನೆಗಾಲದ ಕಥೆ ಹೇಳುವ ಚರ್ಚು:ಎಚ್.ಕೆ.ಶರತ್

ಒಂದೂರಿನ ಇತಿಹಾಸದ ಅಸ್ಥಿಪಂಜರದಂತಿರುವ ಚರ್ಚು, ಬರಗಾಲದ ಬವಣೆಯ ಬಿಡಿ ಚಿತ್ರಗಳನ್ನು ಕಟ್ಟಿಕೊಡುವ ಅಣೆಕಟ್ಟೆಯ ಹಿನ್ನೀರು, ವ್ಯವಧಾನ ಮತ್ತು ಧಾವಂತಕ್ಕೆ ರೂಪಕವಾಗಿ ನಿಂತಿರುವ ಸೇತುವೆ ಮತ್ತದರ ಮೇಲೆ ಚಲಿಸುವ ವಾಹನಗಳು, ಇಡೀ ಪರಿಸರಕ್ಕೆ ಸೊಗಸಾದ ಉಡುಗೆ ತೊಡಿಸುತ್ತಿರುವ ಸೂರ್ಯ, ಇರುವ ಅತ್ಯಲ್ಪ ನೀರಲ್ಲೇ ಬದುಕು ಕಟ್ಟಿಕೊಳ್ಳಲು ಬೆವರು ಹರಿಸುತ್ತಿರುವ ಶ್ರಮ ಜೀವಿಗಳು… ಹಾಸನದಿಂದ ಇಪ್ಪತ್ತು ಕಿಲೋ ಮೀಟರ್ ದೂರದಲ್ಲಿರುವ ಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಸೇತುವೆ, ಚರ್ಚಿನ ಅಳಿದುಳಿದ ಭಾಗಗಳು ಮತ್ತು ಹೇಮಾವತಿ ಜಲಾಶಯದ ಹಿನ್ನೀರು ಸೇರಿ ನಿರ್ಮಿಸಿರುವ ಸುಂದರ … Read more

ನಾಟಕಕಾರರಾಗಿ ಕುವೆಂಪು (ಭಾಗ-14) : ಹಿಪ್ಪರಗಿ ಸಿದ್ದರಾಮ್

ಎರಡನೆಯ ಅಂಕದ ಮೊದಲನೆಯ ದೃಶ್ಯದಲ್ಲಿ ಅರಮನೆಯ ಹೆಬ್ಬಾಗಿಲ ಬಳಿ ಕಾವಲು ಕಾಯುತ್ತಾ ನಡುರಾತ್ರಿಯಲ್ಲಿ ಕೆಂಚಣ್ಣನಿರುವಾಗ ಹೊನ್ನಯ್ಯನೊಂದಿಗೆ ರಾಜಕುಮಾರ ಬಸವಯ್ಯ ಆಗಮಿಸುತ್ತಾನೆ. ಆ ಸಂದರ್ಭದ ಮದ್ಯರಾತ್ರಿಯ ಮೌನದಲ್ಲಿ ಬೆಳದಿಂಗಳ ಮಾಯೆಯನು ನೋಡಿ ಬಸವಯ್ಯನ ಮನಸ್ಸು ಸೌಂದರ್ಯೋಪಾಸನೆಯ ವರ್ಣನೆಯನ್ನು ಹೀಗೆ ಮಾಡುತ್ತಾನೆ : ನೋಡಿದೋ ಎಂತಹ ಶಾಂತಿ ಕಡಲಾಡುತಿದೆ ! ಎಂತಹ ಸೊಬಗು ಸುರೆಯಾಗಿಹುದು ಈ ನಮ್ಮ  ತಿರೆಯಲ್ಲಿ ! ಈ ಪ್ರಕೃತಿ ಸೌಂದರ್ಯವೆಮ್ಮನು  ಕೈಬೀಸಿ ಕರೆಯುತಿದೆ ಉತ್ತಮ ಪ್ರಪಂಚಕ್ಕೆ.  ………………………………………………………. ಸತ್ತಮೇಲೆಮೆಗೆ ಪುರಸತ್ತು ; ಆದರೀ ಚೆಲ್ವು ಸಿಗುವುದೇ? … Read more

ವಿಜಯ್ ಹೆರಗು ಅವರ ಚುಟುಕಗಳು

ಕಲೆಗಾರ ಬದುಕುವುದೇ ಒಂದು ಕಲೆ- ನೀನೇ ಕಲೆಗಾರ ಭಾವನೆಗಳು ಹೊರಹೊಮ್ಮಿದರೆ ನೀನೇ ಕವಿ ಸ್ನೇಹ,ಪ್ರೀತಿ ಗಳಿಸಿದರೆ ನೀನೇ ಸಾಹುಕಾರ ಆಸೆ ಇದ್ದರೇ ಬದುಕು ಸಹಜ-ಸುಂದರ ಕಿವುಡು  ನನ್ನೆದೆಯ ಬೇಗುದಿಯ ಹೇಳಿಕೊಳ್ಳಲಿ ಹೇಗೆ? ದೇವರೂ ಕುಳಿತಿಹನು  ಜಾಣ ಕಿವುಡನ ಹಾಗೆ ಕತ್ತಲ ಜಗತ್ತು  ನಮ್ಮನಾಳುವ ನಾಯಕರೇ ಎಲ್ಲಿಹುದು ನಿಮ್ಮ ಚಿತ್ತ  ಸ್ವಲ್ಪ ಗಮನಹರಿಸಿ ನೀವಿತ್ತ  ದುಡ್ಡು ಮಾಡಿದ್ದು,ಸುಳ್ಳು ಹೇಳಿದ್ದು ಸಾಕುಮಾಡಿ ಬಡಜನರ ಬದುಕಿಗೆ ಬುಡ್ಡಿ ದೀಪದಷ್ಟಾದರೂ ಬೆಳಕು ನೀಡಿ ದಂ"ಪತಿ" ಮನೆಗೆ ಲೇಟಾಗಿ ಬಂದಾಗ ಹೆಂಡತಿ ಹಾಕುವಳು ಛೀಮಾರಿ … Read more

ಪುಟ್ಟ ಮತ್ತು ನಾಯಿ ಮರಿ: ವೆಂಕಟೇಶ್ ಮಡಿವಾಳ ಬೆಂಗಳೂರು.

ನಾಯಿ -ಮರಿಯನೊಂದ ಹಾಕಿತು ಮರಿಯ ದೇಹ ನೆಕ್ಕಿ ನೆಕ್ಕಿ ಶುಭ್ರಗೊಳಿಸಿತು ಹಸಿವಿನಿಂದ ಮರಿಯು ಕುಯ್ ಕುಯ್ ಎಂದಿತು ಶ್ವಾನದ್ವಯಕೆ ಹೊಟ್ಟೆ ಈಗ ಚುರ್ ಎಂದಿತು   ದೂರದಲ್ಲಿ ಯಾರೋ ಎಸೆದ ರೊಟ್ಟಿ ಬಂದು ಬಿದ್ದಿತು ರೊಟ್ಟಿ ತಿನ್ನಲೆಂದು ನಾಯಿ ಜಿಗಿಯಿತು ಆಗ ಅಡ್ಡ ಬಂದ ಬಸ್ಸು ಅದರ ಮೇಲೆ ನುಗ್ಗಿತು ಆಗ ತಾನೇ ಜನ್ಮವಿತ್ತ ನಾಯಿ ಮರಣ ಹೊಂದಿತು ಅದೇ ತಾನೇ ಭುವಿಗಿಳಿದ ಮರಿ ಅನಾಥವಾಯಿತು   ನಮ್ಮ ಪುಟ್ಟ ಆ ದೃಶ್ಯ ನೋಡಿದ ಮರಿಯ ತಂದು … Read more

ಮೈಸೂರ್ ಸ್ಯಾಂಡಲ್ ಸೋಪು ಮತ್ತು ಬೆನ್ನುಜ್ಜೋ ಕಲ್ಲು:ನಟರಾಜು ಎಸ್. ಎಂ.

ಮೊನ್ನೆ ಮೈ ಸೋಪು ತೆಗೆದುಕೊಳ್ಳಲೆಂದು ಗೆಳೆಯನೊಬ್ಬನ ಜೊತೆ ಅಂಗಡಿಯೊಂದಕ್ಕೆ ಹೋಗಿದ್ದೆ. ಅಂಗಡಿಯ ಒಳಗೆ ಎರಡೂ ಕಡೆಗಳಲ್ಲಿ ಸೌಂದರ್ಯವರ್ಧಕಗಳನ್ನು ಮಾರಲು ಒಂದಷ್ಟು ಹುಡುಗಿಯರು ಕುಳಿತ್ತಿದ್ದರು. ವಿಧ ವಿಧದ ಕಂಪನಿಗಳ ಲಿಪ್ ಸ್ಟಿಕ್, ನೈಲ್ ಪಾಲಿಶ್, ಡಿಯೋಡರೆಂಟ್, ಶಾಂಪೂ, ಐ ಲೈನರ್ ಇತ್ಯಾದಿ ರಾಶಿ ರಾಶಿ ಸೌಂದರ್ಯವರ್ಧಕಗಳು ಅವರು ಕುಳಿತ್ತಿದ್ದ ಜಾಗದಲ್ಲಿ ಗಾಜಿನ ಕಪಾಟಿನೊಳಗೆ ಅಲಂಕೃತಗೊಂಡಿದ್ದವು. ಅವರೂ ಸಹ ಅದೇ ಕಂಪನಿಗಳ ಸೌಂಧರ್ಯವರ್ಧಕಗಳನ್ನು ಉಪಯೋಗಿಸಿ ವಿಧವಿಧವಾಗಿ ಅಲಂಕೃತಗೊಂಡಿದ್ದರು. ಸುಮ್ಮನಾದರು ಅವರು ಹಚ್ಚಿಕೊಂಡ ಲಿಪ್ ಸ್ಟಿಕ್, ಹಾಕಿಕೊಂಡಿರುವ ಪೌಡರ್ ನೋಡಿದಾಗ ಅವರು … Read more

ಪುಸ್ತಕಗಳ ಲೋಕದಲ್ಲಿ:ಪ್ರಶಸ್ತಿ ಅಂಕಣ

ಮಹಾತ್ಮ ಗಾಂಧಿಯವರ ಮಾತೊಂದು ನೆನಪಾಗ್ತಿದೆ."ಪುಸ್ತಕ ಓದೋ ಹವ್ಯಾಸವುಳ್ಳವನು ಎಲ್ಲಿ ಹೋದರೂ ಖುಷಿಯಾಗಿರಬಲ್ಲ" ಎಂದು. ಚಿಕ್ಕವನಿದ್ದಾಗಿಂದ್ಲೂ ಪುಸ್ತಕ ಒಂದಿದ್ರೆ ಸಾಕು. ಎಲ್ಲಿಗೆ ಬೇಕಾದ್ರೂ ಬರ್ತಾನೆ ಈ ಮಾಣಿ ಅಂತ ನಮ್ಮ ನೆಂಟರೆಲ್ಲಾ ತಮಾಷೆ ಮಾಡೋವಷ್ಟು ಪುಸ್ತಕಗಳ ಪ್ರೀತಿ ನನಗೆ. ನನ್ನ ಅಪ್ಪ, ದೊಡ್ಡಪ್ಪಂದಿರಲ್ಲದೇ, ಅಜ್ಜ, ಮಾವಂದಿರಲ್ಲೂ ಇದ್ದ ಸಾಮಾನ್ಯ ಹವ್ಯಾಸ ಪುಸ್ತಕಪ್ರೀತಿ. ಈ ವಾತಾವರಣದ ಪ್ರಭಾವವೇ ನನ್ನ ಮೇಲೆ ಬಿದ್ದಿರಲೂ ಸಾಕು. ನನ್ನ ಮಾವ ಅಂದಾಕ್ಷಣ ಒಂದು ಮಜೆಯ ಪ್ರಸಂಗ ನೆನಪಾಗುತ್ತೆ. ಅವರ ಬಾಲ್ಯದ ಕಾಲ. ಹಳ್ಳಿಯಲ್ಲಿದ್ದ  ನಮ್ಮಜ್ಜಿ … Read more

ಕನ್ನಡ ಹಾಡು ಬರೆಯಲು ಮದ್ರಾಸಿಗೆ ಹೋದ ಕಥೆಯು: ಹೃದಯಶಿವ ಅಂಕಣ

"ಬಿಳಿ ಕೂದಲಿಗೆ ಬೆಳ್ಳಿ ರೇಟು ಬಂದುಬಿಟ್ಟರೆ ಹೆಂಗಿರುತ್ತೆ ಶಿವಾ?" ಅಂತ ಮುರಳಿಮೋಹನ್ ರವರು ಹೇಳುತ್ತಿದ್ದಂತೆಯೇ ಡ್ರೈವರ್ ಗಕ್ಕನೆ ಗಾಡಿ ಸೈಡಿಗೆ ಹಾಕಿದ. ಕ್ಷಣಹೊತ್ತಿನ ಮೌನದ ನಂತರ ನಾನು, "ಅಣ್ಣತಮ್ಮಂದಿರು ಭಾಗ ಆಗುವ ಸಂದರ್ಭದಲ್ಲಿ ತಂದೆತಾಯಿಗಳು ತಮ್ಮ ಕಡೆಗೇ ಇರಲಿ ಅಂತ ಪಟ್ಟು ಹಿಡೀಬಹುದು ಸಾರ್" ಅಂದೆ. ಒಂದು "ಗೊಳ್ " ಅನ್ನಬಹುದಾದ ಸಾಮೂಹಿಕ ನಗೆಯ ತರುವಾಯ ಎಲ್ಲರೂ ಗಂಭೀರವಾಗಿ ಕಾರಿನಿಂದ ಕೆಳಗಿಳಿದು ಒಬ್ಬರಿಗೊಬ್ಬರು ಗ್ಯಾಪು ಬಿಟ್ಟುಕೊಂಡು ಬೇಲಿಯೆಡೆಗೆ ಮುಖಮಾಡಿ ನಿಂತು ತಂತಮ್ಮ ಲಕ್ಷ್ಯವನ್ನು ತಂತಮ್ಮ ಪ್ಯಾಂಟಿನ ಜಿಪ್ಪಿನತ್ತ … Read more

ಕೆಂಗುಲಾಬಿ (ಭಾಗ 4): ಹನುಮಂತ ಹಾಲಿಗೇರಿ

(ಹಿಂದಿನ ಭಾಗ ಇಲ್ಲಿದೆ) ಅವತ್ತು ಉಜ್ಜಳಪ್ಪನ ಜಾತ್ರಿ ಈ ಮೊದಲಿನಂಗ ಅದ್ದೂರಿಯಾಗಿಯ ನಡೆದಿತ್ತು. ಸುತ್ತು ಊರು ಕೇರಿಯವರೆಲ್ಲ ಸೇರಿದ್ದರು. ದೇವರಿಗೆ ಬಿಡುವ ಹುಡುಗಿರನ್ನು ಉಜ್ಜಳಪ್ಪನ ಮುತ್ಯಾನ ಗುಡಿಯೊಳಗ ಇರೋ ಅಂತಪುರಕ್ಕೆ ಹೋಗಿ ಅಲ್ಲಿ ಹುಡುಗಿಯರ ಗುಪ್ತಾಂಗವನ್ನು ಗಾಯಗೊಳಿಸುವ ಪದ್ದತಿ ಇತ್ತೀಚಿನ ಕೆಲವು ವರ್ಷಗಳಲ್ಲಿ ಕೆಲವು ಪ್ರತಿಭಟನಾಕಾರರ ಪ್ರಯತ್ನದಿಂದಾಗಿ ನಿಂತಿತ್ತಾದರೂ ಹುಡುಗಿಯರನ್ನು ದೇವರಿಗೆ ಬಿಡೋದು ಮತ್ತು ಪ್ರಾಣಿಗಳನ್ನು ಬಲಿ ಕೊಡೋದು ಇನ್ನು ಮುಂದುವರೆದಿತ್ತು. ಅಂದು ಉಜ್ಜಳಪ್ಪನ ಅಣ್ಣ ತಮ್ಮಂದಿರು ಸಂಬಂಧಿಕ ದೇವರುಗಳನ್ನು ಸುತ್ತಲಿನ ಹಳ್ಳಿಯ ಭಕ್ತರು ಪಲ್ಲಕ್ಕಿಗಳಲ್ಲಿ ಹೊತ್ತು ತಂದಿದ್ದರು. … Read more

ಬದಲಾದ ಹುಬ್ಬಳ್ಳಿಯಲ್ಲಿ ಮತ್ತ ನಾಕಹೆಜ್ಜಿ: ಉಮೇಶ್ ದೇಸಾಯಿ

ಹೌದು ಅಗದಿ ಏನು ಬಹಳ ದಿನಾ ಆಗಿರಲಿಲ್ಲ ಹುಬ್ಬಳ್ಳಿಗೆ ಹೋಗಿ. ಅಲ್ಲಿ ಇಲ್ಲಿ ಫೇಸಬುಕ್ಕಿನ ಹುಬ್ಬಳ್ಳಿ ಮಂದಿ ಯಲ್ಲಿ ಅಲ್ಲಿನ ಸುದ್ದಿ ಅಪಡೇಟ್ ಆಗುತ್ತಲೇ ಇತ್ತು. ಈ ಸಲ ಟೈಮಿತ್ತು. ಹಂಗ ಒಬ್ಬಾವನ ಹುಬ್ಬಳ್ಳಿಯೊಳಗ ಸುತ್ತಾಕಿದೆ.. ಅಗದಿ ಎದ್ದುಕಾಣುವ ಬದಲಾವಣಿ  ಆಗಿದ್ದು  ಗೋಕುಲ್ ರೋಡನ್ಯಾಗ ಅಂತ (ಈಗ ಮತ್ತೆ  ಹಳೇ ಹೆಸರಿಂದ ಅದನ್ನ ಕರೀಬೇಕೋ ಬ್ಯಾಡೋ ಗೊತ್ತಾಗವಲ್ತು..).. ಅಲ್ಲಿ  ಏರಪೋರ್ಟ  ಅದ.  ಹಂಗ ಒಂದೆರಡು ಮಾಲ್  ಬಂದಾವ  ಅಂತ,  ಹಂಗ  ಕೆ ಎಫ್ ಸಿ, ಮೆಕ್ ಡೊನಾಲ್ಡು … Read more