ಪಂಜು ಚುಟುಕ ಸ್ಪರ್ಧೆ: ಅನುಪಮಾ ಎಸ್. ಗೌಡ ಅವರ ಚುಟುಕಗಳು

1) ರಾಮ-ಶಾಮ ಕೃಷ್ಣನನ್ನೇ ಪೂಜಿಸೋ  ಎನ್ನ ಮಡದಿಗೆ  ನಾನೆಂದೂ "ರಾಮ" ಕೈತಪ್ಪಿ ಹೋದ  ನನ್ನ ನನ್ನೊಲವ ರಾಧೆ  ಹೇಳುತಿದ್ದಳು  ನಿನ್ನೊಳಗಿಹನೊಬ್ಬ  "ತುಂಟ ಶಾಮ" …………………… 2) ಹಾಫ್ ಶರ್ಟ್   ಹಾಫ್ ಶರ್ಟ್ ಮೇಲೆ ರಾರಜಿಸುತಿದ್ದ ಹಾರ್ಟ್ ಕಂಡು ಮೌನವಾಗಿ ಕೇಳಿದಳು  ಅರ್ಧಾಂಗಿ  ಯಾರು ಕೊಟ್ಟ  ಗಿಪ್ಟು ಈ ಅಂಗಿ? ………………… 3) ಬಯಕೆ   ಸಿಕ್ಕರೆ ರಾಮನಂಥ ಗಂಡ ಸಿಗಬೇಕೆಂದು ದೇವರಲ್ಲಿ  ಕೋರುವ ಬಯಕೆ..!   ಮೆಲ್ಲೆಗೆ  ಪಿಸುಗುಟ್ಟಿತು ಮನ ಮಾಡ್ಯನು ಶಂಕೆ ಕಾಡಿಗೆ ಅಟ್ಯಾನು  … Read more

ಗಡ್ಡ: ಪ್ರಶಸ್ತಿ ಅಂಕಣ

ಹಾಡ್ತಾ ಹಾಡ್ತಾ ರಾಗ, ನರಳತಾ ನರಳಾತಾ ರೋಗ ಅಂದಗೇನೇ ನೆನಿತಾ ನೆನಿತಾ ನೆನಪು ಅಂತನೂ ಹೇಳ್ಬೋದೇನೋ. ಸುಮ್ನೆ ಎಲ್ಲೋ ಹೊಳೆದ ಎಳೆಯೊಂದು ಕತೆಯಾಗಿಯೋ, ಕವಿತೆಯಾಗಿಯೋ ರೂಪುಗೊಳ್ಳಬಹುದು. ಕೆಲವೊಂದು ಎಳೆಗಳು ನೆನಪಿನಾಳಕ್ಕಿಳಿದು ನೋವ ಅಲೆಗಳನ್ನ ಕೆದಕಬಹುದು. ತನ್ನನ್ನೇ ಹಾಸ್ಯವಾಗಿಸಿ ನಗುವ ಕಡಲಲ್ಲಿ ತೇಲಿಸಲೂಬಹುದು. ಆ ಕ್ಷಣಕ್ಕೆ ಅದೇ ದೊಡ್ಡ ಹಾಸ್ಯ. ಮಿಸ್ಸಾದರೆ ಏನೂ ಇಲ್ಲ.  ತೆರೆಗಳು ಸರಿದಾಗ ಮರಳ ತಡಿಯಲ್ಲಿ ಮೂಡೋ ಚಿತ್ರಗಳಂತೆ.. ಮತ್ತೊಂದು ಅಲೆ ಬಂದು ಅದನ್ನು ತೊಳೆದು ಹಾಕೋ ತನಕ.. ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೋ … Read more

ಫ್ಲಾಪೀ ಬಾಯ್ ಕಂಡ ಕೆಂಪುತೋಟ: ಸಚಿನ್ ಎಂ. ಆರ್.

ಈ ಫ್ಲಾಪೀ ಬಾಯ್‍ಗೆ ಕೆಲಸ ಇಲ್ಲ. ಇದ್ದರೂ ಅವ ಮಾಡೊಲ್ಲ. ಅಂತಹ ಈ ನಿಮ್ಮ ಹುಡುಗ ಹೀಗೆ ಒಂದು ದಿನ ಎಲ್ಲಾ ಬಿಟ್ಟು ಅವನ ಜೀವನದಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮ ಬೆಂಗಳೂರಿನ ಲಾಲ್‍ಬಾಗ್ ಗೆ ಹೊಂಟ. ಅಲ್ಲಿ ಅವನು ಏನೇನು ನೋಡಿದ, ಏನೇನು ಮಾಡಿದ ಅನ್ನುವ ಕುತೂಹಲವಿದ್ದರೆ ಮುಂದೆ ಒದಿ. ಬೆಳಿಗ್ಗೆ ಹತ್ತು ಮೂವತ್ತರ ಸಮಯ. ಒಳಗೆ ಹೋಗುವಾಗ ಒಬ್ಬನೇ ಏಕಾಂಗಿ ಫ್ಲಾಪೀಬಾಯ್, ಆದರೆ ಹೊರಬರುವಾಗ ಅವನ ತಲೆಯಲ್ಲಿತ್ತು ಏನೇನೋ ಆಲೋಚನೆಗಳು, ವಿಚಾರಗಳು ಅವೆಲ್ಲ ಏನು … Read more

ಆಸೆಗಳು ನನ್ನವು ಸಾವಿರಾರು: ವಾಸುಕಿ ರಾಘವನ್

ಜವಹರಲಾಲ್ ನೆಹರು ಅವರ “ಟ್ರಿಸ್ಟ್ ವಿತ್ ಡೆಸ್ಟಿನಿ” ನಮ್ಮ ದೇಶದ ಅತ್ಯಂತ ಪ್ರಸಿದ್ಧ ಭಾಷಣ ಅನ್ಸುತ್ತೆ. ಸುಧೀರ್ ಮಿಶ್ರಾ ಅವರ “ಹಜಾರೋ ಖ್ವಾಹಿಷೇ ಏಸೀ” ಚಿತ್ರ ಶುರುವಾಗುವುದೇ ಈ ಭಾಷಣದ ಧ್ವನಿ ಮುದ್ರಿಕೆಯೊಂದಿಗೆ. “ವಿಧಿಯೊಂದಿಗೆ ನಮ್ಮ ಒಪ್ಪಂದ ಯಾವಾಗಲೋ ಆಗಿದೆ, ಅದರೆಡೆಗೆ ಮುನ್ನುಗ್ಗುವ ಪಣವನ್ನು ಇಂದು ತೊಡೋಣ. ಮಧ್ಯರಾತ್ರಿಯ ಈ ಹೊತ್ತಿನಲ್ಲಿ, ಇಡೀ ಪ್ರಪಂಚವೇ ಮಲಗಿರುವಾಗ, ಭಾರತ ಸ್ವಾತ್ರಂತ್ರ್ಯದೆಡೆಗೆ, ಬೆಳಕಿನೆಡೆಗೆ ಸಾಗುತ್ತದೆ”. ದಾಸ್ಯದಲ್ಲಿ ಸಿಕ್ಕಿ ನರಳುತ್ತಿದ್ದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನ ಇಂಥ ಒಂದು ಭಾಷಣ ಕೇಳಿ … Read more

ಇಬ್ಬರ ಕವನಗಳು: ಸಚಿನ್ ನಾಯ್ಕ್, ಪರಶಿವ ಧನಗೂರು

ಹೀಗೊಂದು ಸಂಜೆ…! ಇಳಿಸಂಜೆಯ ಹೊತ್ತಲ್ಲಿ ತಂಗಾಳಿಯ ಹಂಬಲಕೆ ಮೆಲ್ಲನೆ ತೆರೆದುಕೊಳ್ಳುತ್ತೇನೆ ಕಡುಕಪ್ಪು ಹಾಸಿನ ರಸ್ತೆಯಲ್ಲಿ ಲಯಬದ್ದ ಹೆಜ್ಜೆಗಳೊಂದಿಗೆ… ತಲೆಯ ಮೇಲೆ ಸಾಗುತಿಹ ಅರ್ಧ ಚಂದ್ರನ ಮೊಗದಲ್ಲೂ ನನ್ನದೇ ಒಂಟಿಬಿಂಬ ಕಂಡಾಗ ನಗಬೇಕೆನಿಸಿದರೂ ನಗುಬಾರದವನಂತೆ ಮುಂದೆ ಸಾಗುತ್ತೇನೆ… ಬೆಳದಿಂಗಳಿಗೂ ಪೈಪೋಟಿ ಎಂಬಂತೆ ಬೆಳಗುತಿಹ ಹಳದಿ ಬೀದಿ ದೀಪಗಳು; ತರಗೆಲೆಯು ಸದ್ದು ಮಾಡುವ ಗಾಡ ಮೌನದ ಜೊತೆಗೆ ಹೊಸ ಸಂಭಂದ ಬೆಳೆಸಿ ಹುನ್ನಾರ ನಡೆಸಿದಂತಿದೆ…! ಯಾಕೊ ಕಳೆದು ಹೋದದ್ದೆಲ್ಲಾ ನೆನಪಾಗಿ ಕಣ್ಣಂಚಲಿ ಸಂತಾಪದ ಹನಿಗಳು ಜಾರಿದಾಗ ಎದೆಭಾರ ಕಳಚಿದಂತೆ ಹಗುರ … Read more

ಪಾಕೀಟಿನ್ಮುಂದೆ ಓಸಿ ಪಾಸಿಯೆಲ್ಲ ಪುಟ್ಗೋಸಿ ಇದ್ದಂಗೆ! : ಎಚ್.ಕೆ.ಶರತ್

ಹಾಳೂರಿನ ಫುಲ್‍ಟೈಟು ಪಾರ್ಟಿಗಳಾದ ನೈಂಟಿ, ಫೋರ್‍ಟ್ವೆಂಟಿ ಮತ್ತು ಪಂಟಿ ಕರುಳ ತಳಮಳ ತಾಳಲಾರದೇ ‘ಕಿಕ್ಕೇಶ್ವರ’ ಲಿಕ್ಕರ್ ಶಾಪಿನೆಡೆಗೆ ದಾಪುಗಾಲಿಟ್ಟರು. ನೈಂಟಿ: ಸಿದ್ರಾಮಣ್ಣ ನಮ್ ಕಷ್ಟ ಅರ್ಥ ಮಾಡ್ಕಂದು ಚೀಪ್ ಅಂಡ್ ಬೆಸ್ಟು ಹೆಂಡನಾ ನಮ್ಗೆಲ್ಲ ಕುಡ್ಸೋಕೆ ಹೊಂಟಿತ್ತಪ್ಪ. ಯಾರ್ಯಾರೋ ಸೇರ್ಕಂದು ಅದ್ಕೆ ಕಲ್ಲಾಕ್ಬುಟ್ರು. ಫೋರ್‍ಟ್ವೆಂಟಿ: ಈಗಿರೋ ಸಿಸ್ಟಮ್ಮೇ ಸರ್ಯಾಗೈತೆ ಸುಮ್ಕಿರಪ್ಪ. ಈಗೆಂಗೋ ದಿನಾ ದುಡ್ಕಂದು ಸಂಜೆ ಹೊತ್ ಮಾತ್ರ ಕುಡ್ಕಂದು ನ್ಯಾಯ್ವಾಗಿ ಬದುಕ್ತಿದ್ದೀವಿ. ಚೀಪಾಗಿರೋ ಹೆಂಡನಾ ಮಾರ್ಕೆಟ್ಟಿಗೆ ಬಿಟ್ರೆ ವಾರ್ದಲ್ಲಿ ಮೂರ್ದಿನ ದುಡ್ದು ಏಳ್ದಿನಾನೂ ಕುಡ್ದು ಕಳ್ಳು … Read more

ಯಾರ್ ಮನ ಮುರ್ದ್ ಬುಟ್ಟು ಬಂದ ಬಡ್ಡೈದ ಇವತ್ತು: ಡಾ. ಗವಿ ಸ್ವಾಮಿ

ವಾರದ ಹಿಂದೆ ಒಬ್ಬ ರೈತ ಬಂದಿದ್ದ. ”ನೆನ್ನ ರಾತ್ರ ಅಸು ಈಯ್ತು.. ಇನ್ನೂ ಮ್ಯಾಲ್ಕೇ ಎದ್ದಿಲ್ಲ.. ತಲ ಇಟ್ಬುಟ್ಟದ ಒಂಚೂರ್ ಬಿರ್ರನ್  ಬನ್ನಿ ಸಾ , ಮನಲಿ ಎಮ್ಕ ಬಾಯ್  ಬಡ್ಕಂಡು ಅಳತ್ ಕೂತರ” ಅವನನ್ನು ಬೈಕಿನಲ್ಲಿ ಕೂರಿಸಿಕೊಂಡು ಅವನ ಊರಿಗೆ ಹೊರಟೆ. ಪೂರ್ತಿ ತೆಂಗಿನ ಗರಿಯಲ್ಲಿ ಕಟ್ಟಿದ ಕೊಟ್ಟಿಗೆ ಅದು. ಹಸು ತಲೆಯನ್ನು ಹೊಟ್ಟೆಯ ಮೇಲೆ ನುಲಿದುಕೊಂಡು ಮಲಗಿತ್ತು. ಮೈ ತಣ್ಣಗಿತ್ತು. ಕರು ಹಾಕಿದ ನಂತರ, ಹಸುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ  ‘ಮಿಲ್ಕ್ ಫೀವರ್’ ನ ಲಕ್ಷಣಗಳು ಕಾಣುತ್ತಿದ್ದವು … Read more

ಗುಲಾಬಿ ಟಾಕಿಸ್ – ಅರಕಳಿಯಾದ ಅಂತರಂಗ: ಮಹದೇವ ಹಡಪದ್

ಹೆಣ್ಣಿನ ಸುತ್ತ ಹಾಕಿರುವ ಬೇಲಿಯನ್ನು ಮೀರುವ ಹಂಬಲದ ಕತೆ ಸಿನಿಮಾ ಆಗುವಾಗ ಸಂಕುಚಿತವಾಗಿದೆ. ವ್ಯವಸ್ಥೆಯೇ ಬೇಲಿಯಾಗಿರುವಾಗ ಗುಲಾಬಿ ತನ್ನಿಚ್ಛೆಯಂತೆ ತಾನು ಬದುಕುತ್ತಿದ್ದಳು… ಆಕೆಯೂ ತಲಾಖ್ ಕೊಡಲಾರದ ಗಂಡನಿಗಾಗಿ ಬದುಕಿದ್ದಾಳೆ. ಮಲಮಗನ ಮೇಲಿನ ಹಂಬಲದಲ್ಲಿ ಜೀವಿಸುತ್ತಿದ್ದಾಳೆ. ಹೊಸ ಸಿನಿಮಾಗಳು ಹೇಳುವ ಬಗೆಬಗೆಯ ಕತೆಗಳನ್ನು ನೋಡುವ ಆತುರದಲ್ಲಿದ್ದಾಳೆ. ತೀರ ಸಾಮಾನ್ಯನ ಬದುಕಿನಲ್ಲಿ ಒಂದು ಕಲಾತ್ಮಕ ಆವರಣ ಇದ್ದೆ ಇರುತ್ತದೆ. ಆ ಆವರಣವನ್ನು ಲಿಲ್ಲಿಬಾಯಿಯ ಜೀವನದಲ್ಲಿ ಕಾಣುತ್ತೇವೆ. ಆದರೆ ಗುಲಾಬಿ ಟಾಕೀಸ್ ಸಿನೆಮಾದ ಕೆಲವು (ಶಾಟ್)ಚಿತ್ರಿಕೆಗಳಲ್ಲಿ ಕಾಣಿಸಿದರೂ ಇನ್ನುಳಿದಂತೆ ಅದೊಂದು ಉದ್ಧೇಶಪೂರ್ವಕ … Read more

ಸಿನಿಮಾ ಪ್ಯಾರಡಿಸೋ: ವಾಸುಕಿ ರಾಘವನ್

ಬಾಲ್ಯದಲ್ಲಿ ಸಿನಿಮಾ ನೋಡುವಾಗಿನ ಅನುಭವವೇ ಬೇರೆ ಇತ್ತು. ನನ್ನ ಬೆರಗುಗಣ್ಣಿಗೆ ಸಾಧಾರಣ ಚಿತ್ರಗಳೂ ಅದೆಷ್ಟು ಅಚ್ಚರಿ ಮಾಡಿಸುತ್ತಿದ್ದವು. ಈಗ ಬಹಳ ಸಿನಿಮಾ ನೋಡಿರುವುದರಿಂದಲೋ ಏನೋ, ಸಿನಿಮಾಪ್ರೇಮಿಯೊಡನೆ ಒಬ್ಬ ಸಿನಿಕನೂ ನನ್ನಲ್ಲಿ ಹುಟ್ಟಿದ್ದಾನೆ. ಈಗ ಬೇಕೆಂದರೂ ಆ ಮುಗ್ಧ ಮನಸ್ಥಿತಿ ಸಿಗುವುದಿಲ್ಲ. ಹಾಗಾಗಿ ಹತ್ತರಲ್ಲಿ ಒಂಭತ್ತು ಚಿತ್ರಗಳು ನಿರಾಶೆ ಮೂಡಿಸುತ್ತವೆ. ಆದರೆ ಆ ಒಂದು ಚಿತ್ರ ಇಷ್ಟ ಆಗುತ್ತೆ ನೋಡಿ, ಆ ಖುಷಿಯ ತೀವ್ರತೆ ಬೇರೆಯವರಿಗಿಂತ ಹೆಚ್ಚಾಗಿ ಅನುಭವಿಸುತ್ತೇನೆ! ಈಗಿನ ವಿಮರ್ಶಾತ್ಮಕ ಮನಸ್ಥಿಯಲ್ಲೂ ಮೆಚ್ಚಿಸುವ ಚಿತ್ರಗಳು ಸಾಕಷ್ಟಿವೆ, ಆದರೇ … Read more

ನಾಟಕಕಾರರಾಗಿ ಕುವೆಂಪು (ಭಾಗ-8): ಹಿಪ್ಪರಗಿ ಸಿದ್ದರಾಮ್

ಕಾಡಿನ ಸಂಸ್ಕೃತಿಯಲ್ಲಿ ತನ್ನ ಸೃಜಶೀಲತೆಯನ್ನು ಬೆಳೆಸಿಕೊಂಡ, ವಿದ್ಯೆಯನ್ನು ಅರ್ಜಿಸಿಕೊಂಡ ಏಕಲವ್ಯನು ದ್ರೋಣನನ್ನು ಕಲ್ಪಿತ ಗುರುವನ್ನಾಗಿ ಇಟ್ಟುಕೊಂಡು ಏಕಾಗ್ರತೆಯಿಂದ ವಿದ್ಯೆಯನ್ನು ಗಳಿಸಿದರೂ, ವ್ಯವಸ್ಥೆ ಅದಕ್ಕೆ ಪ್ರತಿಫಲವನ್ನು ಕೇಳುವುದರೊಂದಿಗೆ ಬಲಿ ತೆಗೆದುಕೊಳ್ಳ್ಳುತ್ತದೆ. ಆದರೆ ಇಂತಹ ಅಮಾನುಷ ದೌರ್ಜನ್ಯಗಳಿಗೆ ಮುಂದೊಂದು ದಿನ ತನ್ನ ಪ್ರತಿಕಾರವೊಂದು ಕಾದಿದೆ ಎನ್ನುವ ಧ್ವನಿ/ವಿಚಾರ ತುಂಬ ಶಕ್ತಿಶಾಲಿಯಾದದ್ದು. ಹೀಗಾಗಿ ‘ಶೂದ್ರ ತಪಸ್ವಿ’ ರಂಗಕೃತಿಗಿಂತಲೂ ಭಿನ್ನವಾಗಿ ಕೆಳವರ್ಗದ ಪ್ರತಿಭಟನೆಯ ಇನ್ನೊಂದು ಮಾದರಿ ‘ಬೆರಳ್-ಗೆ-ಕೊರಳ್’ ರಂಗಕೃತಿಯ ಸಂದರ್ಭದಲ್ಲಿ ನಾವು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೇವೆ. ಈ ರಂಗಕೃತಿಯು ಆಗಿನ ಸಂದರ್ಭದಲ್ಲಿ ಆಧುನಿಕ … Read more

ಹಸ್ತ ಬಲಿ: ಚೀಮನಹಳ್ಳಿ ರಮೇಶಬಾಬು

ಹಸ್ತ ಮಳೆ ಕಾಲಿಟ್ಟಾಗಿನಿಂದ ಒಂದು ದಿನವೂ ಮಳೆ ತಪ್ಪಿದ್ದಲ್ಲ. ಮುಂಜಾನೆ ಚಿಕ್ಕ ಚಿಕ್ಕ ಹತ್ತಿಯ ತುಂಡುಗಳಂತೆ ಗಾಳಿಯಲ್ಲಿ ತೇಲುತ್ತಾ ಸಾಗುವ ಮೋಡಗಳು ಬಿಸಿಲು ಏರಿದಂತೆಲ್ಲಾ ಸಾಂದ್ರವಾಗುತಾ, ಸೂರ್ಯ ಪಶ್ಚಿಮದ ಕಡೆ ಜಾರಿದಂತೆಲ್ಲಾ ಹಿಮಾಲಯದ ಬೆಟ್ಟಗಳ ರೀತಿ ಬೃಹದಾಕಾರ ತಳೆದು, ಪಡುವಣದ ಕೆನ್ನೆ ಕೆಂಪಾಗಾಗುತ್ತಿದ್ದಂತೆ ಕನಿಷ್ಠವೆಂದರೆ ಒಂದು ಹದ ಮಳೆಯಾಗುವುದು ಹಸ್ತ ಮಳೆ ಕಾಲಿಟ್ಟ ಗಳಿಗೆಯಿಂದ ನಡೆದು ಬಂದ ಮಾಮೂಲಿ ಕ್ರಿಯೆ. ಇನ್ನು ಅದರ ಸಮಯಪಾಲನೆಯೋ ಖಚಿತವಾಗಿ ಹೆಚ್ಚು ಕಮ್ಮಿ ಅದೇ ವೇಳೆಗೆ ಸುರಿಯುವ ಅದೂ ಕೂಡ ಒಂದು … Read more

ಪಂಜು ಚುಟುಕ ಸ್ಪರ್ಧೆ: ಹುಸೇನ್ ಎನ್. ಅವರ ಚುಟುಕಗಳು

೧.ಒಳಗೊಳಗೇ ಅತ್ತು ಸತ್ತು ಹೋದ ನನ್ನ ಕನಸುಗಳ ಗೋರಿಗೆ ನಿನ್ನ ಹೆಸರಿಟ್ಟಿದ್ದೇನೆ..! —- ೨.ನಿನ್ನೆದುರು ದನಿಯಾಗಲು ಸೋತ ಮಾತುಗಳು ಕಮ್ಮನೆ ಕುಳಿತಿವೆ.. ಮಡುಗಟ್ಟಿದ ಕಣ್ಣೀರಿಗೆ ಜೊತೆಯಾಗಿ..! —- ೩.ನನಗಸೂಯೆ..! ಅವಳನ್ನು ಸೋಕಿ ಹೋಗುವ ತಂಗಾಳಿ ಮೇಲೆ ಅವಳ ಮೈ ಮೇಲೆರಗುವ ಬಿಸಿಲ ಮೇಲೆ ನನಗೊಂದಿಷ್ಟು ಜಾಗ ನೀಡದ ಅವಳ ಮನಸಿನ ಮೇಲೆ ..!   —- ೪. ನಿನ್ನ ಮಾತಿಗಿಂತ ಮೌನವೇ ಎನಗಿಷ್ಟ.. ಮೌನದೊಳು ನೀನಾಡದ ಅದೆಷ್ಟು ಮಾತುಗಳು…!!   —– ೫. ಶಶಿಯಾಗಮನದಿ ಜಿಲ್ಲೆಂದು ಪುಳಕಗೊಂಡಿದೆ … Read more

ದೇವರಿದ್ದಾನೆ: ರಾಶೇಕ್ರ

  ಹಳೇ ಪಿಕ್ಚರಿನ ಕ್ಲೈಮ್ಯಾಕ್ಸು ಸೀನಿನಲಿ ಹೀರೋಯಿನ್ನು ಕಟ್ಟಿದ ಬೇವಿಗೆ ಬೆದರಿ ಅಲ್ಲಾಡುವ ಅದೆಷ್ಟೋ ಗಂಟೆಗಳು ಒಮ್ಮೆಲೇ ಢಣ್ಣೆನ್ನುವಾಗ ದೇವರಿದ್ದಾನೆ.. ಪೂಜಾರಿಯ ಆರತಿ ತಟ್ಟೆಗೆ ಬಿದ್ದ ಒಂದೆರಡು ರೂಪಾಯಿ ಕಾಸು ಠಣ್ಣೆನ್ನುವಾಗ ಕಂಪಿಸಿದ ಕಂಪನದಲಿ ಪೂಜಾರಿಯ ತಮುಲದಲಿ ದೇವರಿದ್ದಾನೆ.. ಬಿಳಿ ಟೊಪ್ಪಿಗೆ ಏರಿಸಿ ಬರಿಗೋಡೆಯ ಎದುರು ಭಕ್ತಿಭಾವದಿಂದ ಇಡೀ ಕಾಯವ ಉಲ್ಟಾ ಮಾಡುವ ಸತತ ಪ್ರಯತ್ನಗಳಲಿ ದೇವರಿದ್ದಾನೆ.. ಧನಾತ್ಮಕ ಚಿಹ್ನೆಯನು ಬರೆಯಲು ಬಾರದವರು ಶಿಲುಬೆಯೆಂದುಕೊಂಡು ದೇವಧೂತನ ಅದಕೆ ಆನಿಸಿ ಮೊಳೆಯೊಡೆವ ಮೂರ್ಖತನದಲಿ ದೇವರಿದ್ದಾನೆ.. ಊರ ನಡುವಿನ ಅರಳೀಕಟ್ಟೆಯ … Read more

ಪೀಜಿ ಪುರಾಣ: ಪ್ರಶಸ್ತಿ ಅಂಕಣ

  ಅ: ಹಾಯ್, ನೀವೆಲ್ಲಿರೋದು ? ಬ: ಬೆಂಗ್ಳೂರು ಅ: ಓ. ಹೌದಾ.. ಬೆಂಗ್ಳೂರಲ್ಲೇನ್ ಮಾಡ್ಕೊಂಡಿದೀರಿ ? ಬ:ಪೀಜಿ ಅ:ಪೀಜಿ ಅಂದ್ರೆ ಪೋಸ್ಟ್ ಗ್ರಾಜುಯೇಷನ್ನಾ ? ಬ:ಅಲ್ಲ ಮಾರ್ರೆ.ಪೇಯಿಂಗ್ ಗೆಸ್ಟು !:-) ಈ ಬೆಂದಕಾಳೂರಿಗೆ ಬಂದು ಬಾಳ ಬೇಳೆ ಬೇಯಿಸ್ಕೊಳೋಕೆ ಶುರು ಮಾಡಿದಾಗಿನಿಂದ ಮೇಲಿನ ಪೀಜಿ PJ ಬೇಜಾರ್ ಬರೋವಷ್ಟು ಕಾಮನ್ನಾಗಿ ಹೋಗಿದೆ 🙁 ಅಲ್ಲ, ಈ ಕಾಲ ಅನ್ನೋದು ನಮ್ಮ ಕಲ್ಪನೆ, ನಂಬಿಕೆಗಳನ್ನೆಲ್ಲಾ ಎಷ್ಟು ಬದಲಾಯಿಸತ್ತೆ ಅಲ್ವಾ ? ಕೆಲವೊಂದು ಸಲ ನಂಬಿಕೆಗಳನ್ನ  ಬುಡಮೇಲೇ ಮಾಡ್ಬಿಡುತ್ತೆ. ನಾವು ಎಷ್ಟೇ ಅಂದ್ಕೊಂಡ್ರೂ … Read more

ಓಡಿ ಹೋಗುವ ಮುನ್ನ ಓದಿ ಹೋಗಿ: ಪ್ರವೀಣ್ ಕುಲಕರ್ಣಿ

ಹಲೋ ಹಲೋ ಥೂ ಈ ಹುಡುಗರು ಸರಿಯಾದ ಟೈಮ್ ಗೆ ಬರೋದು ಇಲ್ಲ ಫೋನ್ ಎತ್ತೋದು ಇಲ್ಲ ಹಲೋ …. ಹಾಂ ಹ..ಲೊ ..ಇನ್ನೂ ಎದ್ದಿಲ್ವ ದಂಡ ಪಿಂಡ ನೀನು..? ಇಲ್ಲಿ ನನಗೆ ಒಂದೊಂದು ನಿಮಿಷ ಉಸಿರು ಕಟ್ತಾ ಇದೆ ಏಳೋ ಬೇಗ .. ಅಯ್ಯೋ ಎದ್ದೆ ತಡಿಯೇ… ಮಾತಾಡಿದ ನಿಮ್ಮ ಅಮ್ಮ ಅಪ್ಪನ ಹತ್ತಿರ ಏನಂತೆ ? ಮರ್ಯಾದೆಯಾಗಿ ಮದುವೆ ಮಾಡಿಕೊಟ್ಟು ದೊಡ್ಡವರು ಅನ್ನಿಸಿಕೊಳ್ತಾರೋ  ಇಲ್ವಾ ಫಿಲ್ಮಲ್ಲಿ ತೋರಿಸೋ ಹಾಗೆ ಇಲ್ಲ ಆಗಲ್ಲ ಅಂದ್ಕೊಂಡು ತಲೆ … Read more

ಬುದ್ಧನ ಬೋಧಿವೃಕ್ಷ ಬಾಡಿದ್ದು: ಅನುರಾಧ ಪಿ. ಸಾಮಗ

ಬುದ್ಧನ ಬೋಧಿವೃಕ್ಷ ಬಾಡುತಿದೆಯಂತೆ..   ಮರ ಮರುಗದು ಇರದುದಕೆ ಪ್ರತಿ ಕೇಳದು ತಾನಿತ್ತುದಕೆ. ನರಗರ್ಥವಾಗದು ನಿಸ್ವಾರ್ಥತೆ, ನಿರ್ಲಿಪ್ತತೆ, ನಿರಾಕಾರತೆ ಮತ್ತು ನಿರ್ಮಮತೆ… ಅವ ಬಯಸುತಾನೆ, ಕೀಳಿ, ಕಿತ್ತು, ಕೆತ್ತಿ, ಕೊನೆಗೆ ಕಡಿದೇ ಬಿಡುತಾನೆ ಖಾಲಿಯಾಗಿಸಿ. ಇಲ್ಲ ಅತಿ ನಂಬುತಾನೆ, ಮೆಚ್ಚಿ, ಮೆಚ್ಚಿಸಿ, ಅಪ್ಪಿಒರಗಿ, ಒಳಗಿಳಿದು, ಆವರಿಸಲ್ಪಟ್ಟು ಕೊನೆಗೆ ತಾನಿಲ್ಲವಾಗುತಾನೆ ಖಾಲಿಯಾಗಿ.   ತನ್ನಂತೆ ಪರರ ಬಗೆದ ನರಮನಸು ಮರಕೂ ಈವೆನೆಂದು ಹೊರಟಿದೆ. ಸಿದ್ಧಾರ್ಥ ಬುದ್ಧನಾದೆಡೆಯ ಮಣ್ಣಿಗೆ ತಾನೆರೆಯತೊಡಗಿದೆ, ನೆಲೆಯ ಬೆಳಗತೊಡಗಿದೆ, ಉದ್ಧಾರಕತೃವ ಉಪಕೃತವಾಗಿಸಿ ತಾನೆತ್ತರಕೇರಬಯಸಿದೆ.   ಅಲ್ಲ…… … Read more

ಜಾರಿ ಹೋಗುವ ಕಾನೂನು: ಸಂದೀಪ ಫಡ್ಕೆ

ಕಾನೂನಿನ ದೃಷ್ಟಿಯಿಂದ ಎಲ್ಲರೂ ಒಂದೇ. ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನಾತ್ಮಕ ವ್ಯವಸ್ಥೆಯಿರುವ ಭಾರತದಲ್ಲಿ ಇದು ಎಷ್ಟು ಸತ್ಯವೆನ್ನುವುದು ಮಾತ್ರ ಪ್ರಶ್ನಾರ್ಥಕ. ಉತ್ತಮ ಆಡಳಿತದ ಸೂತ್ರದಂತಿರಬೇಕಾದ ಕಾನೂನು ಯಾರದೋ ಕೈ ಗೊಂಬೆಯಾಗುತ್ತಿದೆ. ದೆಹಲಿ ಅತ್ಯಾಚಾರ ಪ್ರಕರಣದ ಸಂದರ್ಭ, ಕಾನೂನು ಸಮರಕ್ಕೆ ಒಂದಷ್ಟು ಜನ ಜಮಾಯಿಸಿದ್ದರೆ, ಅವರ ವಿರುದ್ಧ ಕಿಡಿಕಾರುವ ಉದ್ಧಟತನ ಸರ್ಕಾರ ತೋರಿತ್ತು. ಬಹುಕೋಟಿ ಹಗರಣಗಳ ಕಳಂಕ ಹೊತ್ತಿದ್ದರೂ, ನಮ್ಮನ್ನು ಆಳುವ ದೊರೆಗಳು ಅದನ್ನೆಲ್ಲಾ ಸಮರ್ಥಿಸಿಕೊಳ್ಳುತ್ತಾರೆ. ಹೀಗೆ ಕಾನೂನಿರುವುದೇ ಮುರಿಯುವುದಕ್ಕೆ ಎಂದಾದರೆ ಹೊಸ ಕಾನೂನು ಜಾರಿಯಾದರೂ ಊಟಕ್ಕಿಲ್ಲದ … Read more

ಮುಸುಕಿನಿಂದ ಬೆಳಕಿಗೆ: ಮಮತಾ ಕೀಲಾರ್

  ತುಂತುರು ಮಳೆ, ಛಳಿ ಗಾಳಿಯಲ್ಲಿ ಒಂದು ಸಣ್ಣ ಬೆಟ್ಟದ ತಪ್ಪಲಲ್ಲಿರುವ ಕೋಟೆಯಂತಿರುವ ಆಶ್ರಮಕ್ಕೆ ಬಂದು ತಲುಪಿದಳು. ಬಹಳಷ್ಟು ಕೊತುಹಲ,ಅಂಜಿಕೆ ಹಾಗೂ ಏನೋ ಅಸ್ಪಷ್ಟ ತವಕ ಅವಳನ್ನು ಕಾಡುತಿತ್ತು. ಬಹಳ ದಿನಗಳ ಆಸೆ, ಹಲವು ಘರ್ಷಣೆಗಳ ಅಂತ್ಯ ಈ ಪ್ರಯಾಣವಾಗಿತ್ತು.ಅಲ್ಲಿಯ ಹೆಬ್ಬಾಗಿಲಿನತ್ತ ಬಂದಾಗ, ಒಂದು ಕ್ಷಣ ಹಿಂದಿನ ನೆನಪಾಯಿತು. ಧ್ಯಾನ, ಪ್ರಾಣಾಯಾಮ, ಗುರುವಿನ ಭಾವ ಚಿತ್ರ,ಪವಾಡಗಳ ಬಗ್ಗೆ ಪ್ರವಚನ, ಭಜನೆಗಳಲ್ಲಿ ತಲ್ಲೀನವಾದ ಕ್ಷಣಗಳೆಲ್ಲಾ ಕಣ್ಣಮುಂದೆ ಒಮ್ಮೆ ಹಾದು ಹೋದವು. ಅಸಹಾಯಕತೆಗೆ ಅಂತ್ಯ ಹೇಳುವ ಕ್ಷಣ ಬಂತೆಂದು ಹರ್ಷಿಸಿದಳು. … Read more

ಕನ್ನಡ ರಾಜ್ಯೋತ್ಸವದ ದಿನ ಸಿಕ್ಕಿದ ಗೆಳೆತನ: ನಟರಾಜು ಎಸ್ ಎಂ

ಕಳೆದ ವರ್ಷದ ಅಕ್ಟೋಬರ್ ತಿಂಗಳ ಕೊನೆಯ ದಿನ ಅಂತರ್ಜಾಲ ಪತ್ರಿಕೆಯೊಂದರಲ್ಲಿ “ಕರೆಂಟು ಹೊಡೆಸಿಕೊಂಡ ಡಿಎನ್ಯೆಯೂ, ವಿಮಾನ ಹತ್ತಿದ ಕಾರ್ಟೂನೂ..” ಎಂಬ ಲೇಖನ ಓದಲು ಸಿಕ್ಕಿತ್ತು. ಆ ಲೇಖನ ಓದುತ್ತಿದ್ದಂತೆ ಯಾಕೋ ಆ ಲೇಖಕನ ಭಾಷಾ ಶೈಲಿ ಸಿಕ್ಕಾಪಟ್ಟೆ ಇಷ್ಟವಾಯಿತು. ಆ ಲೇಖನಕ್ಕೆ”ತುಂಬಾ ಚಂದದ ಲೇಖನ.. ಶುಭವಾಗಲಿ” ಎಂದು ಪ್ರತಿಕ್ರಿಯೆ ನೀಡಿದ್ದೆ. ನನ್ನ ಪ್ರತಿಕ್ರಿಯೆಗೆ ಧನ್ಯವಾದ ತಿಳಿಸಿದ ಲೇಖಕನಿಂದ ಆ ದಿನವೇ ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಬಂದು ನಾವಿಬ್ಬರು ಫೇಸ್ ಬುಕ್ ಫ್ರೆಂಡ್ಸ್ ಆದೆವು. ಮಾರನೆಯ … Read more

ಮಳೆ, ಕೆರೆ ಮತ್ತು ಕ್ಯಾಬು: ಚೀಮನಹಳ್ಳಿ ರಮೇಶಬಾಬು

ಅದೊಂದು ಜಲಪ್ರಳಯ. ಸಂಜೆ ನಾಲ್ಕು ಗಂಟೆಗೆಲ್ಲಾ ಅಕ್ಷರಶಃ ಕತ್ತಲಾಗಿಬಿಟ್ಟಿತ್ತು. ಸುತ್ತಲೂ ಒತ್ತರಿಸಿ ನಿಂತಿದ್ದ ಕಪ್ಪು ಮೋಡಗಳು ಒಂದು ಗುಹೆಯನ್ನೆ ಸೃಷ್ಟಿಸಿಬಿಟ್ಟಿದ್ದವು. ಬೋರೆಂದು ಸುರಿಯ ಹತ್ತಿದ ಮಳೆಯ ಹನಿಗಳು ಒಂದೇ ಸಮ ರಾತ್ರಿಯೆಲ್ಲಾ ಮುಂದುವರೆಯತೊಡಗಿದವು. ಮಳೆಯ ರಭಸಕ್ಕೆ ವಿದ್ಯುತ್ ಕಡಿತವಾಗಿ ಮಳೆಯ ರೌದ್ರ ನರ್ತನದ ಭೀಕರತೆಯು ಮತ್ತಷ್ಟು ಹೆಚ್ಚಾಗಿ ಇಡೀ ಹಳ್ಳಿ ರಾತ್ರಿ ಏಳು ಗಂಟೆಗೆಲ್ಲಾ ಇದ್ದದ್ದನ್ನು ಉಂಡು ಮುಸುಕೆಳೆದು ಮಲಗಿಬಿಟ್ಟಿತ್ತು. ಅಪ್ಪ “ಈ ಪಾಟಿ ಉಯ್ಯಾಕತ್ತಿದೆ… ಬೆಳಿಗ್ಗೆ ರೋಡಿಗಾಕಿದ ತೆನೇನ ಶಿವನೇ ಕಾಪಾಡ್ಬೇಕು” ಎನ್ನುತ್ತಾ ಮಗ್ಗುಲು ಬದಲಿಸಿದ. … Read more

ಒಂದಾನೊಂದು ಕಾಲದಲ್ಲಿ:ವಾಸುಕಿ ರಾಘವನ್ ಅಂಕಣ

ಸಾಕಷ್ಟು ಸಿನೆಮಾ ಶುರುವಿನಲ್ಲಿ  ಶೀರ್ಷಿಕೆ ತೋರಿಸುವಾಗ ಯಾವುದಾದರೊಂದು ಹಾಡನ್ನು ಹಾಕುತ್ತಾರೆ. ಬಹಳಷ್ಟು ಸಲ ಸಿನಿಮಾದ ಪಾಪ್ಯುಲರ್ ಹಾಡಿರುತ್ತೆ, ಅಥವಾ ಸಿನಿಮಾದಲ್ಲಿ ಎಲ್ಲೂ ಬಳಸಲು ಸಾಧ್ಯವಾಗಿಲ್ಲದ ಹಾಡಿರುತ್ತೆ. ಇದಕ್ಕೆ ಅಪವಾದ ಗಿರೀಶ್ ಕಾರ್ನಾಡ್ ನಿರ್ದೇಶನದ “ಒಂದಾನೊಂದು ಕಾಲದಲ್ಲಿ”. ಚಿತ್ರದ ಆರಂಭದಲ್ಲಿ ಕವಿತಾ ಕೃಷ್ಣಮೂರ್ತಿ ಹಾಡಿರುವ “ಬಿಚ್ಚುಗತ್ತಿಯ ಬಂಟನ ಕಥೆಯ” ಅನ್ನೋ ಹಾಡು ಬರುತ್ತೆ. ಕೇಳಿದ ತಕ್ಷಣ ಹಿಡಿಸಿದ ಹಾಡು ಇದು, ಯಾಕೆ ಇಷ್ಟ ಆಯ್ತು ಗೊತ್ತಾಗಿದ್ದು ಸಿನಿಮಾ ಮುಗಿದ ಮೇಲೆ. ಆ ಹಾಡು ಈ ಚಿತ್ರ ನೋಡಲು ಬೇಕಾದ … Read more

ಸ್ಪಾಟಾಗಿದ್ದರೆ : ಡಾ. ಗವಿಸ್ವಾಮಿ

ಸಂಜೆ ಐದಾಗಿತ್ತು. ಬೈಕಿನಲ್ಲಿ ಊರಿಗೆ ಹೋಗುತ್ತಿದ್ದೆ. ಐವತ್ತರವತ್ತು ಮೀಟರಿನಷ್ಟು ಮುಂದೆ ಗೌರ್ಮೆಂಟ್ ಬಸ್ ಹೋಗುತ್ತಿತ್ತು. ಬಿರುಗಾಳಿ ವೇಗದಲ್ಲಿ ನನ್ನ ಸನಿಹಕ್ಕೇ ಬಂದು ಸೈಡು ಹೊಡೆದು  ಹೋಯ್ತು ಒಂದು ಬೈಕು. ಒಂದು ಕ್ಷಣ ಎದೆ ಝಲ್ಲೆಂದಿತು. ಬಸ್ಸನ್ನೂ ಸೈಡು ಹೊಡೆಯಲು  ಯತ್ನಿಸಿದ ಬೈಕ್ ಸವಾರ. ಎದುರಿಗೆ ಲಾರಿ ಬಂದು ಬಿಡ್ತು. ಸಿಕ್ಕಿಕೊಂಡು ಬಿಟ್ಟಿದ್ದರೆ ಅಲ್ಲೇ ಕತೆಯಾಗಿರುತ್ತಿದ್ದ . ಸಣ್ಣ ಗ್ಯಾಪಿನಲ್ಲಿ ನುಸುಳಿಬಿಟ್ಟ. ಆದರೆ ಅದೇ ಸ್ಪೀಡಿನಲ್ಲಿ ಹೋಗಿ  ಎದುರಿಗಿದ್ದ ಮೈಲಿಗಲ್ಲಿಗೆ ಗುದ್ದಿಸಿಬಿಟ್ಟ! ಕೇವಲ ಐದಾರು ಸೆಕೆಂಡುಗಳಲ್ಲಿ  ಇಷ್ಟೆಲ್ಲಾ  ನಡೆದುಹೋಯ್ತು. … Read more

ಮದಲ ನಾ ಸೆವೆನ್ ಮಂಥ ಬಾರ್ನ ಇದ್ದೇನಿ: ಸುಮನ್ ದೇಸಾಯಿ

ಮಧ್ಯಾಹ್ನ ಮೂರುವರಿ ಆಗಿತ್ತು.  ನಾನು ಮತ್ತ ನಮ್ಮ ತಮ್ಮಾ ಟಿಪಾಯಿ ಮ್ಯಾಲೆ ರಾಶಿಗಟ್ಟಲೆ ಕನ್ಯಾಗೊಳ ಫೋಟೊ ಮುಂದ ಹರವಿಕೊಂಡ ಕುತಿದ್ವಿ. ಮದಲ ಬ್ರಾಹ್ಮಣರಾಗ ಕನ್ಯಾದ ಅಭಾವ ಅದ ಹಂತಾದ್ರೊಳಗ ಇಂವಾ ನಮ್ಮ ತಮ್ಮಂದು ಆರ್ಸೊಣಿಕಿ ಬ್ಯಾರೆ ನೋಡಿ " ಲೇ ಲಗೂನ ಯಾವದ ಒಂದ ಸೆಲೆಕ್ಟ ಮಾಡಿ ಲಗ್ನಾ ಮಾಡಕೊಂಡ ಕಡಿಕ್ಯಾಗ, ಇಲ್ಲಾಂದ್ರ ಎಲ್ಲಿದರ ಒಂದ ಹಿಡಕೊಂಡ ಬಂದ ಮುದ್ರಾ ಹಾಕಿಸಿ ಮನ್ಯಾಗ ಹೋಗಿಸ್ಕೊಬೇಕಾಗ್ತದ ನೋಡ " ಅಂದೆ. ಖರೆನು ಈಗ ಕನ್ಯಾ ಅವ ಅವ ಅನ್ನೊದ್ರಾಗ … Read more

ಪಂಜು ಚುಟುಕ ಸ್ಪರ್ಧೆ: ಡಾ. ಆಜಾದ್ ಐ ಎಸ್ ಅವರ ಚುಟುಕಗಳು

1.    ನಿನ್ನೆ ಮಳೆ ಹನಿ ಅಂಗೈಲಿದೆ ಇನ್ನೂ ನಿನ್ನೇ ನೆನೆದು ಕುಳಿತಿರುವೆ ಇನ್ನೂ ನಿನ್ನೀ ತಪನದ ಬೇಗೆಯಲಿ ಬರಿದೇ ನನ್ನೇ ಮರೆತಿರುವೆ ವರ್ಷಾ ನೀ ಮತ್ತೆ ……………..ಬರದೇ……………..   2.    ಮಿಂಚು-ಹೊಳಪು ಹುಟ್ಟಿದಾಗ ಮಗ ಮಮತೆ ಮಡಿಲಲಿ ಆಡುತಿರುವಾಗ ತುಂಬಿ ಆತಂಕ-ಕಂಬನಿ ಗೆಲುವಿಲ್ಲದಾಗ  ಬೆಳೆದು ಹೆಮ್ಮರ ನಾನು, ಏನೆನ್ನಲಿ ? ಆ ಮಮತಾ ಮಯಿಯ ಕಣ್ಣ ಕನ್ನಡಿ ಬರೆದಂತೆ ಕಂಡಿಲ್ಲ ನನ್ನ ವಯಸಿಗೂ  ……………ಮುನ್ನುಡಿ ……………   3.    ನೀ ನನ್ನ ಮನದನ್ನೆ … Read more

ಸಾರಿ ರೀ.. ಥ್ಯಾಂಕ್ಯೂ: ಪ್ರಶಸ್ತಿ ಅಂಕಣ

ತಪ್ಪು ಮಾಡದೋರು ಯಾರವ್ರೇ, ತಪ್ಪೇ ಮಾಡದವ್ರು ಯಾರವ್ರೇ ಅಂತ ನಮ್ಮ ಜಗ್ಗೇಶ್ ಮಠ ಫಿಲ್ಮಲ್ಲಿ ಕುಣಿದಿದ್ದು ಎಲ್ರಿಗೂ ಗೊತ್ತಿದ್ದೆ. ತಿಳಿದೋ, ತಿಳೀದೆನೋ ಏನಾರೂ ತಪ್ಪು ಮಾಡ್ತಾನೆ ಇರ್ತೀವಿ. ನಮಗೆ ಸರಿಯೆನಿಸಿದ್ದು ಯಾರಿಗೋ ತಪ್ಪೆನಿಸಿ ಅವರ ಮನ ನೋಯಿಸಿರ್ತೀವಿ. ಸುಮ್ಮನೇ ತಪ್ಪೆಣಿಸಿ ಮುಗ್ದ ಮನವನ್ನ ನೋಯಿಸಿರ್ತೀವಿ. ಯಾರೋ ತಪ್ಪು ತಿಳೀಬೋದೆಂದು ತಪ್ಪಾಗಿ ಭಾವಿಸಿ ಹೇಳಬೇಕಾದ ಮಾತು, ಮಾಡಬೇಕಾದ ಕೆಲಸ ಮಾಡದೇ ತಪ್ಪೆಸಗಿರ್ತೀವಿ. ಹೀಗೇ ಹೆಜ್ಜೆ ಹೆಜ್ಜೆಗೆ ತಪ್ಪು, ಕೂತಿದ್ದು-ನಿಂತಿದ್ದು ತಪ್ಪೆಂದು ಕಾಡಿ ಎಷ್ಟೋ ಜೀವಗಳ ಕಣ್ಣೀರಿಳಿಸಿರ್ತೀವಿ. ಕೆಲವೊಮ್ಮೆಯಂತೂ ನಾವು … Read more

ಹೀಗೊಂದು ಕಿಡ್ನಾಪ್:ಪಾರ್ಥಸಾರಥಿ ಎನ್

ಪ್ರಿಯಾ ಸೆಲ್ವರಾಜ್ ಬೆಂಗಳೂರಿನಲ್ಲಿಯೆ ಪ್ರಸಿದ್ದಳಾಗಿದ್ದ ಕ್ರಿಮಿನಲ್ ಅಡ್ವೊಕೇಟ್. ಆಕೆ ಕೊಲೆ ದರೋಡೆಗಿಂತ, ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂದಿಸಿದ ಕೇಸ್ ಗಳನ್ನು ಹ್ಯಾಂಡಲ್ ಮಾಡಿರುವುದೆ ಜಾಸ್ತಿ. ಅದಕ್ಕೆ ಕಾರಣ ಅದರಲ್ಲಿ ಬರುತ್ತಿದ್ದ ಹಣ.  ಆಕೆ ಕೋರ್ಟ್ ನಲ್ಲಿ ಗೆದ್ದ ಕೇಸುಗಳಿಗಿಂತ ಹೊರಗೆ ಸೆಟ್ಲ್ ಮಾಡಿರುವ ಕೇಸ್ ಗಳೆ ಜಾಸ್ತಿ ಇದ್ದವು, ತಾನು ತೆಗೆದುಕೊಂಡ ಕೇಸ್ ಗೆಲ್ಲಲು ಆಕೆ ಎಲ್ಲ ರೀತಿಯಲ್ಲು ಪ್ರಯತ್ನ ಪಡುತ್ತಿದ್ದಳು. ಎದುರು ಪಾರ್ಟಿಯನ್ನು ಹಿಡಿದು ಒಪ್ಪಿಸುವುದು, ಎದುರು ಪಾರ್ಟಿಯ ಲಾಯರ್ ಗಳನ್ನು ಹಣತೋರಿಸಿ ಆಸೆ … Read more