ಎರೆಡು ಕವಿತೆಗಳು:ಅನುರಾಧ ಸಾಮಗ ಹಾಗೂ ಪ್ರೇಮಾಶ್ರೀ
ಕಣ್ಣೀರಿಗೂ, ಎದೆಯ ಆರ್ದ್ರತೆಗೂ ಒಪ್ಪಿಗೆ ಮುದ್ರೆಯ ಪ್ರಮಾಣ ಪತ್ರವೇ?! ಅವು ತಮ್ಮ ಸಾಬೀತು ಪಡಿಸಬೇಕೇ?.. ಸ್ಪಂದನಕಿಲ್ಲಿ ಜಾತಿಯಗ್ನಿಪರೀಕ್ಷೆಯ ಪಾಡು ನಿಜಭಾವಕೆ ಬಂಜೆಯ ಹೆರಿಗೆಬೇನೆಯ ಪಟ್ಟ ರಕ್ತಮಾಂಸಗಳೊಂದೇ, ದೇಹಗೂಡೊಂದೇ ವಾಸವಲ್ಲಿ ನೂರಾರು ಹಕ್ಕಿಯಂಥ ಭಾವಗಳಿಗೆ. ಬಣ್ಣ, ಗಾತ್ರ, ಕೂಗಷ್ಟೇ ಬೇರೆಬೇರೆ, ಹಾರಾಟ ಜನ್ಮಸಿದ್ಧಹಕ್ಕು ಹಕ್ಕಿ ಜನ್ಮಕೆ. ನೀ-ನಾನೆಂಬ ನಿರ್ಬಂಧವಿಲ್ಲದ ಸ್ವಚ್ಛಂದ ಚಲನೆ. ಶೋಷಣೆಗೆದುರು ನಿಂತವರೇ, ಘೋಷಣೆ, ಬಾವುಟದಾಸರೆಯಿರದಲ್ಲೂ, ಯಾವ ಜೀವ-ಬಂಧುವಿನದಾದರೂ, ಹಸಿವೆ-ದಾರಿದ್ರ್ಯಕೆ, ದಮನ-ಅಸಮಾನತೆಗೆ ಸಾವು-ನೋವಿಗೆ ಒಳಗಿಲ್ಲೆಡೆ ಕರಗುತದೆ.. ಅನ್ಯಾಯಕೆ ಒಳಗೆಲ್ಲೆಡೆ ಮರುಗುತದೆ, ದಬ್ಬಾಳಿಕೆಗೆ ಒಳಗೆಲ್ಲೆಡೆ … Read more