ಕುವೆಂಪುರವರ ಸೂರ್ಯಗೀತೆ; ಆನಂದಮಯ ಈ ಜಗಹೃದಯ: ದಿವ್ಯ ಆಂಜನಪ್ಪ
ಆನಂದಮಯ ಈ ಜಗಹೃದಯ……… ಕುವೆಂಪುರವರ ಸೂರ್ಯಗೀತೆಗಳಲ್ಲಿ ಪ್ರಸಿದ್ಧವಾದ ಈ ಗೀತೆಯೂ ಒಂದು. ಕವಿಗಳು ಈ ಜಗತ್ತಿನ ಎಲ್ಲಾ ಆಗೂ-ಹೋಗುಗಳ ಮೂಲವು 'ಶಿವ'ನೆಂದು ಭಾವಿಸುತ್ತಾರೆ. ಹಸುರಿನಿಂದ ನಳನಳಿಸುವ ಸಹ್ಯಾದ್ರಿಯಂತಹ ಬೆಟ್ಟಗಳು-ಅರಣ್ಯಗಳು. ಭೋರ್ಗರೆವ ಸಾಗರ, ನೀಲಿ ಆಕಾಶ, ಧುಮ್ಮಿಕ್ಕುವ ಜಲಧಾರೆ, ಸೋನೆ ಮಳೆ, ಹಕ್ಕಿಗಳ ಚಿಲಿಪಿಲಿ, ಮೋಡಗಳ ಘರ್ಜನೆ, ಹಾಡುವ ಕೋಗಿಲೆಗಳ ಕಂಠ ಸಿರಿ- ಹೀಗೆ ಪ್ರಕೃತಿಯ ಪ್ರತೀ ಸೌಂದರ್ಯದಲ್ಲೂ ಶಿವನ ಹೃದಯವು ವಿಸ್ತರಿಸಿದೆ ಎಂದು ಕವಿ ಉನ್ಮತ್ತರಾಗಿ ಹಾಡಿದ್ದಾರೆ. ಪ್ರಕೃತಿಯಲ್ಲಿ ಸಾಧಾರಣವಾಗಿ ಸಂಭವಿಸುವ ಸೂರ್ಯೋದಯ ಚಂದ್ರೋದಯವೂ ದೇವನ ದಯೆ … Read more