ಕಂಕಣ ಅಭಿಯಾನ: ಶೋಭಾ ಕೆ.ಎಸ್. ರಾವ್

ನಾಡು ನುಡಿಗಾಗಿ ಕಂಕಣತೊಟ್ಟ ಯುವ ಮನಸುಗಳ ಬಳಗವೇ ಕಂಕಣ.ಇದರ ರೂವಾರಿ ಚಿತ್ರ ಸಾಹಿತಿ ಕವಿರಾಜ್. ಜಯನಗರದ ಖಾದಿಮ್ಸ್ ನಲ್ಲಿ ಪಾದರಕ್ಷೆಗಳನ್ನು ಕೊಳ್ಳಲು ಹೋದಾಗ ಅಲ್ಲಿಯ ಸಿಬ್ಬಂದಿಗಳ ಅನ್ಯ ಭಾಷೆಯ ವ್ಯವಹಾರ ಮತ್ತು ಕನ್ನಡದ ಬಗೆಗಿನ ನಿರ್ಲಕ್ಷ್ಯ ಅವರನ್ನು ಕೇವಲ ರೊಚ್ಚಿಗೇಳಿಸಲಿಲ್ಲ, ಚಿಂತನೆಗೂ ಹಚ್ಚಿತು. ತನ್ನ ನೆಲದಲ್ಲಿಯೇ ಕನ್ನಡ ನಿಧಾನವಾಗಿ ಕಡಿಮೆಯಾಗುತ್ತಿರುವುದಕ್ಕೆ ಕಾರಣಗಳು ಹಲವಾರಾದರು ಮುಖ್ಯ ಕಾರಣ ಕನ್ನಡಿಗರ ಹಿಂಜರಿಕೆ ಹಾಗೂ ಆತ್ಮವಿಶ್ವಾಸದ ಕೊರತೆ ಎಂಬುದನ್ನು ಮನಗಂಡ ಅವರು ಸಮಾನ ಮನಸ್ಕರಿಗೆ ಕರೆ ನೀಡಿ ಚರ್ಚಿಸಿ ರೂಪುಗೊಂಡಿದ್ದೆ "ಕಂಕಣ". … Read more

ಅರ್ಥವೆಂಬ ಭ್ರಮೆಯ ಚೌಕಟ್ಟು: ಸಚೇತನ

ಹಿಂದಿನ ವಾರ ಇದೇ ಅಂಕಣದಲ್ಲಿ, ನೀಯೊರಿಯಲಿಸ್ಟಿಕ್ ಸಿನಿಮಾಗಳ ಬಗ್ಗೆ ಚರ್ಚಿಸಿದ್ದೆವು. ನೈಜತೆಗೆ ಅತೀ ಹತ್ತಿರವಾಗಿರುವ ಈಸಿನಿಮಾ ಪ್ರಕಾರಗಳ ಬಗ್ಗೆ ಇರುವ ದೊಡ್ಡ ಆರೋಪವೆಂದರೆ ನೀಯೊರಿಯಲಿಸ್ಟಿಕ್, ರಿಯಲಿಸ್ಟಿಕ್  ಅಥವಾ ಆರ್ಟ್ ಸಿನಿಮ ಎನ್ನುವ ವಿಭಾಗದ ಸಿನಿಮಾಗಳು ಅರ್ಥವಾಗಲಾರವು ಎಂದು.  ಬರಹದಲ್ಲಿ ರಿಯಲಿಸ್ಟಿಕ್ ಎನ್ನುವದನ್ನ ವೈಭವೀಕರಣ ಇಲ್ಲದ ಎಲ್ಲ ಸಿನಿಮಾಕ್ಕೆ ಪರ್ಯಾಯ ಪದವಾಗಿ  ಬಳಸಲಾಗುವದು.    ಸಿನಿಮಾ ಎನ್ನುವದು ಪಾತ್ರ ಮತ್ತು ಅದರೊಟ್ಟಿಗಿನ ಇತರ ಅನೇಕ ಪಾತ್ರಗಳ ನಡುವಿನ ಕಾರ್ಯ, ಮಾತು, ಘಟನೆ, ಭಾವನೆ ಇವುಗಳ ಸರಮಾಲೆ.  ಸರಪಳಿಯ ಕೊಂಡಿಗಳಂತೆ … Read more

ಧರ್ಮ, ಧರ್ಮಾಂಧತೆ ಮತ್ತು ಊಟ: ಪ್ರಶಸ್ತಿ

ಟೈಟಲ್ ನೋಡಿ ಇದೇನಪ್ಪಾ ? ಕ್ಯಾಲೆಂಡರ್ ಹೊಸವರ್ಷ ಅಂತ ಯದ್ವಾತದ್ವಾ ಏರ್ಸಿದ್ದು ಇನ್ನೂ ಇಳಿದಿಲ್ವಾ ಅಂತ ಅಂದ್ಕಂಡ್ರಾ ? ಹಂಗೇನಿಲ್ಲ. ಹೊಸವರ್ಷ ಅಂದ್ರೆ ಯುಗಾದಿ ಅನ್ನೋ, ಎಣ್ಣೆಯನ್ನೋದ್ನ ತಲೆಗೆ ಹಾಕಿದ್ರೂ ತಲೆಗೇರಿಸಿಕೊಳ್ಳದ ಒಂದಿಷ್ಟು ಜನರ ಮಧ್ಯದಿಂದ ಬಂದಂತ ಮಾತುಗಳ ಸಂಗ್ರಹವಿದು. ಧರ್ಮವನ್ನೋದು ಅಫೀಮು, ಮೂಢನಂಬಿಕೆಗಳ ಸಂಗ್ರಹವನ್ನೋ ಬುದ್ಧಿಜೀವಿಗಳ, ಅವರಿಗೆ ಬುದ್ಧಿ ಬಿಟ್ಟು ಬೇರೆಲ್ಲಾ ಇದೆಯೆಂದು ಲೇವಡಿ ಮಾಡೋ ಬಣ್ಣಗಳ ನಡುವೆ ನಿಂತು ನೋಡಿದ ನೋಟಗಳಿವು. ಅಂತದ್ದೇನಿದೆ ಇದ್ರಲ್ಲಿ ಅಂದ್ರಾ ? ಲೇಖನದ ಬಗ್ಗೆ ಯಾವುದೇ ಪೂರ್ವಾಗ್ರಹಗಳಿಲ್ಲದೆ ಸುಮ್ಮನೇ … Read more

ಮನಸಿದ್ದರೆ ಮಾರ್ಗ: ಸುರೇಶ್ ಮಡಿಕೇರಿ

  ಮನುಷ್ಯ ಅಂದ ಮೇಲೆ ಅವನಿಗೆ ಹವ್ಯಾಸ ಎನ್ನುವುದು ಇದ್ದೇ ಇರುತ್ತದೆ. ಹವ್ಯಾಸ ಅಂದ ಮೇಲೆ ಸಾಧಾರಣವಾಗಿ ಅದು ಒಳ್ಳೆಯ ಹವ್ಯಾಸವಾಗಿರುತ್ತದೆ. ಆ ಹವ್ಯಾಸಗಳು ಜೀವನಕ್ಕೆ ಹೊಸ ಚೇತನವನ್ನು, ಜೀವನೋಲ್ಲಾಸವನ್ನು ತಂದು ಕೊಡುತ್ತದೆ. ಆದರೆ ನಮ್ಮಲ್ಲಿ  ಕೆಲವು ಚಟಗಳಿರುತ್ತವೆ. ಈ ಚಟ ಅನ್ನೋದು ಹೆಚ್ಚಾಗಿ ಬಹಳ ಕೆಟ್ಟದ್ದೇ ಆಗಿರುತ್ತದೆ. ಸುಖಿ ಮಾನವ ಫ್ಯಾಶನ್‌ಗಾಗಿ ಆರಂಭಿಸುವ ಈ ಚಟಗಳು ಮುಂದೆ ಅವನನ್ನೇ ದಾಸನನ್ನಾಗಿ ಮಾಡಿಬಿಡುತ್ತವೆ. ಆತನ ಜೀವನದ ಉತ್ಸಾಹ, ಉಲ್ಲಾಸಗಳು ಅವನಿಂದ ದೂರವಾಗುತ್ತವೆ. ಅದು ಮಧ್ಯಪಾನ ಸೇವನೆಯಾಗಿರಬಹುದು, ಧೂಮಪಾನವಾಗಿರಬಹುದು, … Read more

ಮೂವರ ಕವಿತೆಗಳು: ಲಕ್ಷ್ಮೀಶ ಜೆ.ಹೆಗಡೆ, ನವೀನ್ ಮಧುಗಿರಿ, ಅಕುವ

ಆತ್ಮ ಸೌಂದರ್ಯ ಕಣ್ಣು ಮಾತ್ರ ಕಂಡರೆ ಸಾಕೇ ಆತ್ಮಕ್ಕೂ ಕಾಣಬೇಡವೇ ಸೌಂದರ್ಯ ರಸಾನುಭೂತಿಯಲಿ ದೇಹ ತೇಲುವುದು ಆತ್ಮ ಪರಿತಪಿಸಿ ನರಳುವುದು ಹಲವು ರೀತಿಯ ನೂರಾರು ಲಹರಿ ಅನಂತಾನಂತ ಈ ಸೌಂದರ್ಯದ ಪರಿ ಕಣ್ಣಿಗೆ ಕಾಣುವುದು ಸಹಸ್ರ ರೀತಿ ಆತ್ಮಾನುಭವದಲಿರುವುದು ಒಂದೇ ಲಹರಿ ದೇಹ ಸೌಂದರ್ಯಕೆ ಮರುಳಾಗುವರು ಆತ್ಮೋನ್ನತಿಯಿಲ್ಲದೆ ನರಳುವರು ನಯನ ನೋಡುವುದು ಲೌಕಿಕ ಸೌಂದರ್ಯ ಆತ್ಮಕ್ಕೆ ಕಾಣುವುದು ಭವ ಮೀರಿದ್ದು ಮಾತ್ರ ಆತ್ಮ ಸಿಕ್ಕಿದ್ದು ವಿಶ್ವತೋಮುಖನಿಂದ ದೇಹ ಲಭಿಸಿದ್ದು ಪ್ರಕೃತಿ ಪುರುಷರಿಂದ ದೇವನೊಬ್ಬ ಆತ್ಮರೂಪಿ ಹಲವು ನಾಮಗಳಿಂದಾತ … Read more

ತಿರಸ್ಕಾರ (ಭಾಗ 5): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ…) ಅವಳು ತನ್ನೊಟ್ಟಿಗಿದ್ದಾಳೆ ಎಂದು ಹ್ಯಾನ್ಸನಿಗೆ ಖಾತ್ರಿಯಾಯ್ತು. ಈ ಸಂಗತಿ ಅವನನ್ನು ನಿರಾಶೆಯ ಮಡಿಲಿಂದ ಮೇಲೆತ್ತಲು ನೆರವಾಯಿತು. ಆನ್ನೆಟ್ ಮತ್ತೊಬ್ಬನ ಪ್ರೇಮದಲ್ಲಿರುವ ಸಂಗತಿ ಅವನಿಗೆ ಜೀರ್ಣಿಸಿಕೊಳ್ಳುವುದು ಕಷ್ಟವಾಯಿತು. ಅದೃಷ್ಟವಶಾತ್ ಅವನ ಪ್ರತಿಸ್ಪರ್ಧಿ ಜರ್ಮನಿಯಲ್ಲಿ ಯುದ್ಧಕೈದಿಯಾಗಿದ್ದ. ಮಗು ಜನಿಸುವ ಮೊದಲೇ ಅವನಿಗೆ ಬಿಡುಗಡೆಯಾಗದಿದ್ದರೆ ಸಾಕೆಂದು ಅವನು ಭಗವಂತನಿಗೆ ಮೊರೆಯಿಟ್ಟ. ಮಗು ಜನಿಸಿದ ನಂತರ ಆನ್ನೆಟ್ ಬದಲಾದರೂ ಆದಳೇ. ಈ ಹುಡುಗಿಯರನ್ನು ಅರ್ಥಮಾಡಿಕೊಳ್ಳುವುದೇ ಕಷ್ಟ. ಊರಿನಲ್ಲಿ ಅವನಿಗೆ ಗೊತ್ತಿದ್ದ ಜೋಡಿಯೊಂದು ಎಷ್ಟೊಂದು ಅನ್ಯೋನ್ಯವಾಗಿತ್ತೆಂದರೆ, ಅವರಿಗೆ ಒಬ್ಬರನ್ನೊಬ್ಬರು ಬಿಟ್ಟು ನೋಡಲು ಸಾಧ್ಯವೇಯಿರಲಿಲ್ಲ. … Read more

ದೊಡ್ಡ ಕಿವಿಯ ಮೊಲ – ಆಕಾಶ ಗುಬ್ಬಿಗಳ ಧರಣಿ: ಅಖಿಲೇಶ್ ಚಿಪ್ಪಳಿ

(ಪಶ್ಚಿಮಘಟ್ಟಗಳ ಸ್ಥಿತಿ-ಗತಿ-೩ನೇ ಭಾಗದ ಪ್ರಕಟಣೆ ೧ ವಾರ ಮುಂದೆ ಹೋಗಿದೆ. ಅಡಚಣೆಗಾಗಿ ಕ್ಷಮಿಸಿ ಎಂದು ಮೊದಲಿಗೆ ಕೇಳಿಕೊಳ್ಳುತ್ತಾ. . . ಸಹೃದಯಿ ಓದುಗರು ದಯಮಾಡಿ ಸಹಕರಿಸಬೇಕು). ಸರಣಿ ಲೇಖನಗಳನ್ನೂ ಅದರಲ್ಲೂ ಗಾಡ್ಗಿಳ್ ಮತ್ತು ರಂಗನ್ ವರದಿಯನ್ನು ಭಾವಾನುವಾದ ಮಾಡುವಾಗ ನಮ್ಮ ಸ್ವಂತ ಯೋಚನೆಗಳಿಗೆ ಹೆಚ್ಚಿನ ಅವಕಾಶವಿರುವುದಿಲ್ಲ. ಈ ಸರಣಿ ಇನ್ನೂ ನಾಲ್ಕಾರು ವಾರ ಮುಂದುವರೆಯುವ ಸಂಭವ ಇರುವುದರಿಂದ, ಸ್ಥಳೀಯ ಕೆಲವು ಘಟನೆಗಳು ಅಕ್ಷರ ರೂಪ ಪಡೆಯದೇ ಹೋಗಬಹುದು ಎಂಬ ಆತಂಕದಿಂದ ಈ ಕೆಳಕಂಡ ಘಟನೆಗಳನ್ನು ದಾಖಲಿಸುವ ಪ್ರಯತ್ನವಾಗಿದೆ.  … Read more

ಸಾಮಾನ್ಯ ಜ್ಞಾನ (ವಾರ 60): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಎಲ್ಲಿದೆ? ೨.    ಏಷಿಯನ್ (ASEAN) ನ ವಿಸ್ತೃತ ರೂಪವೇನು? ೩.    ಮುಕ್ತೇಶ್ವರ ಗಿರಿಧಾಮ ಯಾವ ರಾಜ್ಯದಲ್ಲಿದೆ? ೪.    ಅಮೇರಿಕಾದ ಛಾಯಾ ಚಿತ್ರ ಸೊಸೈಟಿಯ ಫಿಲೋಶಿಪ್ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಯಾರು? ೫.    ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಕಛೇರಿ ಎಲ್ಲಿದೆ? ೬.    ಅತ್ಯಂತ ಕಡಿಮೆ ಪ್ರಮಾಣದ ಬಾವಿ ನೀರಾವರಿ ಸೌಲಭ್ಯವನ್ನು ಹೊಂದಿರುವ ಕರ್ನಾಟಕದ ಜಿಲ್ಲೆ ಯಾವುದು? ೭.    ಉಂಚಳ್ಳಿ ಜಲಪಾತ ಇದು … Read more

ಕೆ.ಎಸ್.ಎನ್.ನುಡಿ ನಮನ..: ಶೋಭಾ ಶಂಕರ್

ಡಿಸೆಂಬರ್ ೨೮ ನಾಡಿನ ಜನತೆ ಎಂದಿಗೂ ಮರೆಯಲಾರದಂಥ ದಿನ.ಈಗಾಗಲೇ ಡಿ.೨೮ ಎಂದಾಕ್ಷಣ ನಮ್ಮ ಮನಸ್ಸಿನ ಮುಂದೆ ಕೆ.ಎಸ್.ಎನ್. ಅವರ ಭಾವಚಿತ್ರ ಕಣ್ಣ ಮುಂದೆ ಮೂಡಿರಬೇಕಲ್ಲ? ನಿಜ!! ಕೆ.ಎಸ್.ಎನ್. ಅಂದು ಅನಂತವಾಗಿ ಚಿರನಿದ್ರೆಗೆ ಜಾರಿದ ದಿನ. ನರಸಿಂಹಸ್ವಾಮಿಯವರು ತಮ್ಮ ಪ್ರೇಮಕವಿತೆಗಳ ಮೂಲಕ ಕನ್ನಡಿಗರ ಮನದಲ್ಲಿ ಅಚ್ಛಳಿಯದ ಸ್ಥಾನ ಪಡೆದುಕೊಂಡಿದ್ದಾರೆ .ದಾಂಪತ್ಯ-ಪ್ರೇಮವನ್ನು ಅಮರಗೊಳಿಸಿ, ’ಮೈಸೂರು ಮಲ್ಲಿಗೆ’ಯ ಕವಿ ಎಂದೇ ಚಿರಪರಿಚಿತರಾಗಿದ್ದವರು ನಮ್ಮೆಲ್ಲರ ಒಲವಿನ ಕವಿ ಕೆ.ಎಸ್.ಎನ್. ಅವರ ವಾರಿಗೆಯವರು ಕಾವ್ಯವಲ್ಲದೇ, ಬೇರೆ ಪ್ರಕಾರಗಳ ಸಾಹಿತ್ಯಕೃಷಿಯಲ್ಲಿ ತೊಡಗಿಕೊಂಡರೂ, ನರಸಿಂಹಸ್ವಾಮಿಯವರು ಮಾತ್ರ ಕಾವ್ಯಕನ್ನಿಕೆಯನ್ನೇ … Read more

ತಂತು: ಎಸ್.ಎಲ್.ಭೈರಪ್ಪನವರ ಕಾದಂಬರಿಯ ಬಗ್ಗೆ ಒಂದು ಅನಿಸಿಕೆ, ಟಿಪ್ಪಣಿ: ಸಂತೋಷ್ ಕುಮಾರ್ ಎಲ್.ಎಂ.

  ಬಸವನಪುರ ಎಂಬ ಊರಿನ ಪುರಾತನ ಚನ್ನಕೇಶವ ದೇವಾಲಯದಲ್ಲಿದ್ದ ದೊಡ್ಡ ಸರಸ್ವತಿಯ ವಿಗ್ರಹ ಕಳುವಾಗಿರುತ್ತದೆ. ಗ್ರಾಮದವರು ಇದರ ಬಗ್ಗೆ ಗಮನ ಹರಿಸುವುದಿಲ್ಲ. ಇದೇ ಊರಿನಲ್ಲಿ ಹುಟ್ಟಿ ತನ್ನ ಸ್ವಂತ ಪರಿಶ್ರಮದಿಂದ ದೊಡ್ಡ ಇಂಗ್ಲೀಷ್ ಪತ್ರಿಕೆಯೊಂದರಲ್ಲಿ ಸಂಪಾದಕನಾಗಿರುವ ರವೀಂದ್ರನಿಗೆ ಈ ಸುದ್ದಿ ತಲುಪುತ್ತದೆ. ತನ್ನ ಹುಟ್ಟೂರು ಎಂಬ ಕರುಳಬಳ್ಳಿಯ ಮಮತೆಯಿಂದ ಬೇರಾರನ್ನು ಕಳುಹಿಸಲು ಮನಸ್ಸಾಗದೇ ತಾನೇ ಹುಟ್ಟೂರಿಗೆ ಬರುತ್ತಾನೆ. ಈ ವಿಷಯದ ಮೂಲ ಹುಡುಕುತ್ತಿರುವಾಗಲೇ ತನ್ನ ತಾತ ವೆಂಕಟಸುಬ್ಬಯ್ಯನವರು ಊರಿಗೆ ದಾನವಾಗಿ ಕಟ್ಟಿಸಿಕೊಟ್ಟಿದ್ದ ಆಸ್ಪತ್ರೆಯ ಫಲಕವನ್ನು ಯಾರೋ ತೆಗೆದು … Read more

ಸುಟ್ಟ ಊರ ಹೊರಗಿನ ಹನುಮಪ್ಪನ ಹಿಂದೆ ಬಿದ್ದು: ಅಮರ್ ದೀಪ್ ಪಿ.ಎಸ್.

ರಾತ್ರಿ ಸುಮಾರು ಒಂಭತ್ತು ಮುಕ್ಕಾಲರ ಸಮಯಕ್ಕೆ ವೇದಿಕೆಯಲ್ಲಿ ಕಲಾವಿದರೆಲ್ಲರಿಗೂ ಸನ್ಮಾನ ಮಾಡಿದರು.   ಆ ಐದು ದಿನದ ನಾಟಕೋತ್ಸವದ  ಕೊನೆಯ ದಿನವಾದ ಅಂದು ಆ ಕಾರ್ಯಕ್ರಮದ ರುವಾರಿಗಳಿಗೆ ಅಭಿನಂದಿಸಲಾಯಿತು.  ಮುಕ್ತಾಯಕ್ಕೂ ಮುನ್ನ ಆ ನಾಟಕದ ಕತೃವನ್ನು ಸನ್ಮಾನಿಸಲಾಗಿತ್ತು.   ಅಂತಿಮವಾಗಿ ಆಯೋಜಕರು ಆ ನಾಟಕದ ರಚನೆ ಮಾಡಿದ ಲೇಖಕನಿಗೆ ಮೈಕನ್ನು ಹಸ್ತಾಂತರಿಸಿದರು.   ಲೇಖಕ ಮೂಲತ: ತಾನು ಬರೆದ ಸಣ್ಣ ಕತೆಯೊಂದನ್ನು ಆಧರಿಸಿ ಅದೇ ಕತೆಗೆ ನಾಟಕದ ರೂಪಕ ಲೇಪಿಸಿ ರಚಿಸಿದ ನಾಟಕದ ಅಂದಿನ ಪ್ರದರ್ಶನದ ನಂತರ … Read more

ಟೆಲಿವಿಷನ್: ಬಂಡವಾಳಶಾಹಿಯ ಹೊಸ ಆಯುಧ: ಕು.ಸ.ಮಧುಸೂದನ್ ನಾಯರ್

ಇವತ್ತು ಟೆಲಿವಿಷನ್ ಕೇವಲ ಒಂದು ಸಂವಹನಾ ಮಾಧ್ಯಮವಾಗಿ ಉಳಿದಿಲ್ಲ. ಬದಲಿಗೆ ಅದೊಂದು ಉದ್ಯಮವಾಗಿ ಬೆಳೆಯುತ್ತ,ಬಂಡವಾಳಶಾಹಿ ಶಕ್ತಿಗಳ ಕೈಯಲ್ಲಿನ ಒಂದು ಪ್ರಬಲ ಅಸ್ತ್ರವಾಗಿ ಪರಿವರ್ತನೆಯಾಗಿ ವಿಶ್ವದ ಅರ್ಥವ್ಯವಸ್ಥೆಯನ್ನು ನಿಯಂತ್ರಿಸುವ ಮಟ್ಟಕ್ಕೆ ಬೆಳೆದು ನಿಂತಿದೆ.  ವಸಾಹತುಶಾಹಿಯ ಮೂಲಭೂತಗುಣವೇ ಅಂತಾದ್ದು. ಆಯಾ ಕಾಲಘಟ್ಟದಲ್ಲಿ ಅನ್ವೇಷಿಸಲ್ಪಡುವ ವೈಜ್ಞಾನಿಕ ಉಪಕರಣಗಳನ್ನು ತನ್ನ ಹಿತಾಸಕ್ತಿಗಳಿಗನುಗುಣವಾಗಿ ಬಳಸಿಕೊಳ್ಳುವಲ್ಲಿ ಅದನ್ನು ಮೀರಿಸುವವರಿಲ್ಲ. ಇತಿಹಾಸವನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿದರೆ ಈ ಸತ್ಯ ಅರ್ಥವಾಗುತ್ತದೆ. ಹದಿನಾಲ್ಕು ಹದಿನೈದನೇ ಶತಮಾನದಲ್ಲಿ  ಅನ್ವೇಷಿಸಲ್ಪಟ್ಟ ನಾವಿಕರ ದಿಕ್ಸೂಚಿ, ಇದಕ್ಕೊಂದು ಅತ್ಯುತ್ತಮ ಉದಾಹರಣೆ. ದಿಕ್ಸೂಚಿಯ ಅನ್ವೇಷಣೆಯ ನಂತರ … Read more

ಪಾತ್ರಗಳು ಎಂದರೆ ಯಾರು ?: ಸಚೇತನ

ಸಿನಿಮಾದ ತೆರೆಯ ಮೇಲೆ ಬಣ್ಣ ಹಚ್ಚಿ ಮುಖವಾಡವೊಂದವನ್ನು ಮೆತ್ತಿಕೊಂಡು, ಕೃತಕವಾದ ಪಾತ್ರ ಸ್ವರೂಪಿ ಭಾವಗಳನ್ನು ಆವಾಹಿಸಿಕೊಂಡು, ಸಿದ್ಧ ಸನ್ನಿವೇಶಗಳಿಗೆ, ಪ್ರಮಾಣಬದ್ಧವಾಗಿ ಅಭಿನಯಿಸುವದೇ ? ಪಾತ್ರ ಎಲ್ಲಿಯೋ ಇರುವಂತದ್ದಲ್ಲ, ನಮ್ಮ ನಿಮ್ಮ ನಡುವಿನಿಂದಲೇ ಎದ್ದು ಬಂದಂತಹ  : ಮುಂದಿನ ಮನೆಯ ಕಾಲೇಜಿನ ಹುಡುಗಿ, ಕಳ್ಳೆ  ಕಾಯಿ ಮಾರುತ್ತಿರುವ ಬಿಹಾರಿ ಹುಡುಗ, ಸಿಗ್ನಲ್ಲುಗಳಲ್ಲಿ ಬಲೂನು ಮಾರುತ್ತಿರುವ ಪೋರಿ, ಸರಕ್ಕನೆ ಸಿಂಬಳ ಒಳಗೆಳೆದುಕೊಳ್ಳುವ ಚಿಕ್ಕ ಬಾಲಕ,  ಮಸಾಲೆ ದೋಸೆ ತಿಂದು ಟೀ ಗೆ ಕಾಯುತ್ತಿರುವ ಪಕ್ಕದ ಟೇಬಲ್ ನ ಜೋಡಿ, ಗ್ಯಾಸ್ … Read more

ಹೃದಯದ ಬೀದಿಯಲ್ಲಿ: ಸಚಿನ್ ನಾಯ್ಕ ಅಂಕೋಲ

ಹೃದಯದ ಬೀದಿಯಲ್ಲಿ ಮಿಂಚತೆ ಹಾದು ಹೋದ ನಿನಗಾಗಿ….                                                       ನಿನ್ನವನಿಂದ…. ಸೂರ್ಯನನ್ನೇ ನುಂಗಿ ಬಿಟ್ಟ ಇಳಿಸಂಜೆಯ ನೀರವತೆ, ಹಸಿರೆಲೆಯ  ಮೈಸೋಕಿ ಮೆಲ್ಲನೆ ಹರಿಯುವ ತಂಗಾಳಿ ಹೆಪ್ಪುಗಟ್ಟಿ ಎದೆಯಲ್ಲಿ ಸಣ್ಣನೆ ನೋವು, ದೂರದಲ್ಲೆಲ್ಲೋ ಗುನುಗುವ ಹಾಡು ಯಾವ ಮೋಹನ ಮುರಳಿ ಕರೆಯಿತೋ, … Read more

ಯುರೇಕಾ..! ಯುರೇಕಾ..!! : ಎಸ್.ಜಿ.ಶಿವಶಂಕರ್

’ರೀ…’ ಅಲೆಅಲೆಯಾಗಿ ತೇಲಿಬಂದು ವಿಶ್ವನ ಕರ್ಣಪಟಲದ ಮೇಲೆ ಪ್ರಹರಿಸಿದುವು-ಶಬ್ದ ತರಂಗಗಳು! ತೂಕಡಿಸುತ್ತಿದ್ದ ವಿಶ್ವ ಮೆಟ್ಟಿ ಬಿದ್ದ!! ನಿದ್ರೆ ಹಾರಿತು! ಬಿ.ಪಿ ಏರಿತು! ಅದು ತನ್ನ ಜೀವನ ಸಂಗಾತಿ ವಿಶಾಲೂ ದನಿಯೆಂದು ತಿಳಿದು. ಆ ಕ್ಷಣ ಏನು ಮಾಡಬೇಕೆಂದು ತೋಚದೆ ಅವಾಕ್ಕಾದ. ಆ ದನಿಯಲ್ಲಿನ ಭಾವ ಅರ್ಥ ಮಾಡಿಕ್ಕೊಳ್ಳಲು ಪ್ರಯತ್ನಿಸಿದ. ಮೊದಲಿಗೆ ದನಿ ಬಂದ ದಿಕ್ಕು ಗುರುತಿಸಲು ಪ್ರಯತ್ನಿಸಿದ. ಅದು ಮನೆಯ ಹಿಂಭಾಗದಿಂದ ಬಂತು ಎಂಬುದನ್ನು ಯಶಸ್ವಿಯಾಗಿ ಗುರುತಿಸಿದ. ನಂತರ ಆ ದನಿಯಲ್ಲಿ ಆತಂಕವಿದೆಯೆ..? ಗಾಬರಿಯಿದೆಯೆ..? ಇಲ್ಲಾ ಸಹಜವಾದ … Read more

ಚಳಿಗೆ ಮುರುಟಿದ ಮನಕ್ಕೊಂದು ಹೊದಿಕೆ ಹೊಚ್ಚುತ್ತಾ: ಪ್ರಶಸ್ತಿ

ಚಳಿಯೆಂದ್ರೆ ವಿಪರೀತ ಚಳಿ ಕಣೋ ಬೆಂಗ್ಳೂರಲ್ಲಿ ಅಂದ್ರೆ ದೆಲ್ಲೀಲಿ ಕೂತ ಫ್ರೆಂಡು ನಗ್ತಾ ಇದ್ದ. ಅಲ್ಲಿ ಅಬ್ಬಬ್ಬಾ ಅಂದ್ರೆ ಹದಿನೆಂಟೂ ಇಪ್ಪತ್ತೋ ಆಗಿರಬಹುದಷ್ಟೆ. ಅಷ್ಟಕ್ಕೇ ಚಳಿಯೆನ್ನೋ ನೀನು ಇಲ್ಲಿನ ಮೈನಸ್ಸುಗಳಿಗೆ ಬಂದ್ರೆ ಸತ್ತೇ ಹೋಗಬಹುದೇನೋ ಅಂದ. ಅರೆ ಹೌದಲ್ವಾ ಅನಿಸ್ತು. ಊರಲ್ಲಿ ಎರಡು ಕಂಬಳಿ, ಮೂರು ಕಂಬಳಿ ಚಳಿಯಂತ ಹೇಳುತ್ತಿದ್ದ, ಸ್ವೆಟರಿಲ್ಲದೆ ಹೊರಗಲ್ಲ ಮನೆಯೊಳಗೂ ಕೂರಲಾಗದಿದ್ದ ನಮ್ಮೂರೆಲ್ಲಿ ಬೆಳಗ್ಗೆ ಎಂಟಕ್ಕೇ ಆಫೀಸಿಗೆ ಬರೋ ಪರಿಸ್ಥಿತಿಯಿದ್ರೂ ಸ್ವೆಟರುಗಳೆಲ್ಲಾ  ಧೂಳು ಹೊಡೆಯುತ್ತಿರುವ ಬೆಂಗಳೂರೆಲ್ಲಿ ಅಂತನೂ ಒಮ್ಮೆ ಅನಿಸಿದ್ದು ಸುಳ್ಳಲ್ಲ.ಇಷ್ಟರ ಮಧ್ಯೆವೂ … Read more

ಮೂವರ ಕವಿತೆಗಳು: ರಘುನಂದನ ಹೆಗಡೆ, ಬಿ. ಸಿ. ಪ್ರಮೋದ, ಗಿರಿ

ನೀನಿಲ್ಲದ ಗೋಕುಲದ ಬೇಸರ ನಿನ್ನ ತುಟಿಯಂಚಿನ ಕೊಳಲಾಗುವೆ ಬಿಸಿಯುಸಿರ ಪುಳಕದಿ ರಾಗವಾಗುವೆ ಅನುರಾಗದ ರವಳಿಯ ತೇಲಿ ಬಿಡು ಶ್ಯಾಮ ಯಮುನಾ ತೀರದಿ ಹಾಡಾಗಿ ಹರಿಯಲಿ ಪ್ರೇಮ ನನ್ನೆದೆಯ ರಾಗ ಕೇಳು ಸಾಕು ಮಾಡೊ ವಿರಹಿ ಬಾಳು ನಿಂತೆ ಇದೆ ಜೀವ ಗೋಕುಲದಲ್ಲಿ ಜೀವಾಮೃತವಿದೆ ಎದೆಯಲ್ಲಿ ದ್ವಾರಕೆ, ಮಧುರೆಗಳು ಸಾಕು ಬಾ ನನ್ನೊಲವ ಬೃಂದಾವನಕೆ ಗೋಧೂಳಿ ದೀಪ ಮನದಲ್ಲಿ ಒಮ್ಮೆ ಹರಿವ ಯಮುನೆ ಕಣ್ಣಲ್ಲಿ ಇನ್ನೊಮ್ಮೆ ಗಿರಿಯ ಭಾರ ಎದೆಯಲ್ಲಿ  ಕಾಯುತ್ತ ನಿಂತೆ ಇದೆ ಜೋಕಾಲಿ ಯಾರಿಗೆ ಹೇಳಲೋ … Read more

ಹೊಸ ವರುಷದಿ ಹೊಸ ಮನಸು: ಪದ್ಮಾ ಭಟ್

                   ಹೊಸ ವರುಷವು ಪ್ರತೀ ವರುಷವೂ ಬರುತ್ತದೆ.. ಕಳೆದು ಹೋದ ಹಳೆಯ ವರುಷದ ನೆನಪಿನಲಿ ನವ ವರುಷವನ್ನು ಸ್ವಾಗತಿಸುತ್ತ, ಹೊಸ ಕನಸುಗಳನು ಬಿಚ್ಚಿಡಲು ಶುರು ಮಾಡಿರುತ್ತೇವೆ.. ಪ್ರತೀ ಸಲದಂತೆ ಈ ಸಲವೂ ಏನಾದರೂ ಹೊಸದಾದ ಪ್ಲ್ಯಾನ್ ಮಾಡಬೇಕು.. ಹೊಸ ಯೋಜನೆಗಳು ಹೊಸ ವರುಷದಿಂದಲೆ ಜಾರಿಗೆ ಬರಲೆಂಬ ಕಟುವಾದ ನಿರ್ಧಾರವನ್ನೂ ತೆಗೆದುಕೊಂಡು ಬಿಟ್ಟಿರುತ್ತೇವೆ.. ಅದೇ ಹಳೆಯ ಕೆಟ್ಟ ಚಟಗಳನ್ನು ಬಿಡಬೇಕು ಎಂತಲೋ, ಹೊಸದಾದ ಕೆಲಸವನ್ನು ಶುರು ಮಾಡಿಕೊಳ್ಳಬೇಕೆಂತೋ, … Read more

ನಾಟಿಯ ಪದಗಳು: ಹನಿಯೂರು ಚಂದ್ರೇಗೌಡ

ಜನಪದರ ಕಾಯಕಶಕ್ತಿಯೇ ಜಾನಪದ ಸಾಹಿತ್ಯಸೃಷ್ಟಿಗೆ ಮೂಲಕಾರಣವಾದುದು. ಕಾಯಕದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿರುವ ಕಾರಣದಿಂದಲೇ ಜಾನಪದ ಸಾಹಿತ್ಯ ಹೆಚ್ಚೆಚ್ಚು ಬೆಳೆಯುತ್ತಾ ಬಂದು, ಅದೀಗ ಸಂಪೂರ್ಣವಾಗಿ ಏಕಕಾಲದಲ್ಲಿ ಯಾರೊಬ್ಬನು ಮುಟ್ಟಲಾಗದ ಬೃಹದ್ ರಾಶಿಯಾಗಿದೆ. ಇಂತಹ ಜಾನಪದ ರಾಶಿಯಲ್ಲಿ ಕೃಷಿಹಾಡು, ಹಸೆಹಾಡು, ಸೋಬಾನೆಹಾಡು, ದೇವರಮೇಲಿನಹಾಡು, ಮಳೆಹಾಡು, ಕಳೆಕೀಳುವಾಗಿನಹಾಡು, ಮಗುಹುಟ್ಟಿದಹಾಡು, ಯಾರೋ ಸತ್ತರೆಹಾಡು, ಹಬ್ಬಕ್ಕೊಂದುಹಾಡು, ಹರುಷಕ್ಕೊಂದುಹಾಡು, ದುಃಖಕ್ಕೊಂದುಹಾಡು, ಸರಸಕ್ಕೊಂದುಹಾಡು, ವಿರಸಕ್ಕೊಂದುಹಾಡು, ಕೀಟಲೆಗೊಂದುಹಾಡು, ಕಿಚಾಯಿಸಲೊಂದುಹಾಡು, ಚುಡಾಯಿಸಲೊಂದುಹಾಡು, ರೇಗಿಸಲೊಂದುಹಾಡು, ಪ್ರಸ್ತಕ್ಕೊಂದುಹಾಡು, ಹೆಣ್ಣು,ಗಂಡನ ಮನೆಗೆ ಹೋಗುವಾಗೊಂದುಹಾಡು, ತವರುಮನೆಗೆ ಬರುವಾಗೊಂದುಹಾಡು, ಮಡಿಲುತುಂಬುವಾಗೊಂದುಹಾಡು, ಬಾಣಂತಿಗೊಂದುಹಾಡು, ಗರ್ಭಿಣಿಗೊಂದುಹಾಡು, ಮದುವಣಗಿತ್ತಿಯನ್ನು ಕರೆದೊಯ್ಯುವಾಗೊಂದುಹಾಡು, ಮನೆತುಂಬಿಸಿಕೊಳ್ಳವಾಗೊಂದುಹಾಡು, … Read more