ಮೂವರ ಕವಿತೆಗಳು: ಗಿರಿ, ರಘುನಂದನ ಹೆಗಡೆ, ಪಾ.ಮು.ಸುಬ್ರಮಣ್ಯ ಬ.ಹಳ್ಳಿ.

ಕಾಡುವ ನೆನಪಿನ ಹಿಂದೆ ನೂರೊಂದು ಚಡಪಡಿಕೆ ಒಂದೊಂದು ತಿರುವಲು ನಿನ್ನ ನಗುವಿನ ಪಳೆಯುಳಿಕೆ ಕಂಡೂ ಕಾಣದೆ ಕತ್ತಲಿನ ಮೂಲೆಯಲಿ ಕಂಪಸೂಸಿದ ನಿನ್ನ ಬೆಳದಿಂಗಳಂತ ನಸುನಗೆ ಸುಮ್ಮನೆ ಪ್ರೇಮಿಸುತಿದ್ದ ನನ್ನ ಕವಿಯನಾಗಿ ಮಾಡಿದ್ದು ನೀನಾ? ನಿನ್ನ ನೆನಪಾ? ಹೇಳು, ದಯವಿಟ್ಟು ಹೇಳು ಕನಸಲಿ ಬಂದು ಕನವರಿಸುವಂತೆ ಮಾಡಿದ್ದು ನೀನಾ? ನಿನ್ನ ಮುಂಗುರಳಾ? – ಗಿರಿ         ಮೂಲ ಮರೆತವನ ಹುಡುಕಾಟ ಅಂಗಳದಿಂದ ಹತ್ತು ಹೆಜ್ಜೆ ಎತ್ತಿಟ್ಟರೆ ನೆರಳು ಬಿಸಿಲು ಆಟವಾಡುವ ಮನೆ ಉಸ್ಸೆಂದು ಹಗುರಾಗಿ … Read more

ತಿರಸ್ಕಾರ (ಭಾಗ 2): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ) … ಹುಡುಗಿ ಅವನಿಗೆ ಒಂದು ಮುತ್ತು ಕೊಟ್ಟಿದ್ದರೆ ಅವನು ಸುಮ್ಮನೇ ಹೊರಟುಹೋಗಿ ಈ ಅನಾಹುತ ಜರುಗುತ್ತಿರಲಿಲ್ಲವೇನೋ? ನೆಲಕ್ಕುರುಳಿದ್ದ ರೈತನ ಮೇಲೆ ಅವನ ದೃಷ್ಟಿ ಹರಿದು ಅವನಿಗೆ ನಗು ಬಂದಿತು. ಹಾಗೆಯೇ ಹೆಂಗಸಿನೆಡೆಗೆ ನೋಡಿದಾಗ ಅವಳಿನ್ನೂ ಕಂಪಿಸುತ್ತಿದ್ದಳು. ಹುಡುಗಿಯ ನಂತರ ತನ್ನ ಸರದಿ ಎಂದು ಅವಳು ಭಾವಿಸಿರಬೇಕು! ಯಾಕೆ ಹೆಂಗ್ಸೇ ಅಳ್ತಾ ಇದ್ದೀಯಾ? ಇದು ಇವತ್ತಲ್ಲ ನಾಳೆ ಜರುಗಲೇ ಬೇಕಿತ್ತು. ಅವನು ಹಿಂಬದಿಯ ಜೇಬಿನಿಂದ ಪರ್ಸನ್ನು ಹೊರತೆಗೆದು, ತೆಗೋ ಇದರಲ್ಲಿ ನೂರು ಫ್ರಾಂಕುಗಳಿವೆ. ನಿನ್ನ ಮಗಳಿಗೊಂದು ಡ್ರೆಸ್ … Read more

ಘಟ್ಟ ಉಳಿಸುವ ವರದಿಗೆ ಅಗ್ನಿಸ್ಪರ್ಷ: ಅಖಿಲೇಶ್ ಚಿಪ್ಪಳಿ

ಭಾನುವಾರ ರಜಾದಿನ. ಬಂಧುಗಳೊಬ್ಬರ ಮನೆಯಲ್ಲಿ ಅದೇನೋ ವಿಶೇಷ ಕಾರ್ಯಕ್ರಮವಿತ್ತು, ಮುಗಿಸಿಕೊಂಡು ಬರುವಾಗ ಸಂಜೆ ೫ ಗಂಟೆ. ಪೇಟೆ ಸುಮಾರು ೫ ಕಿ.ಮಿ. ದೂರವಿತ್ತು. ಬರುವ ರಸ್ತೆಯಲ್ಲಿ ವಿಪರೀತ ಹೊಗೆ ತುಂಬಿಕೊಂಡಿತ್ತು. ನಮ್ಮ ಮುಂದೆ ಸಾಗುತ್ತಿದ್ದ ಕಾರು ಮುಂದೆ ರಸ್ತೆ ಕಾಣದೆ ನಿಂತಿತ್ತು. ನೋಡಿದರೆ, ರಸ್ತೆಯ ಪಕ್ಕದ ಕಾಡಿಗೆ ಬೆಂಕಿ ಹಚ್ಚಿದ್ದರು. ಗಾಳಿಯಿಲ್ಲದ ಕಾರಣ ಹೊಗೆ ನಿಧಾನಕ್ಕೆ ಮೇಲ್ಬಾಗದ ರಸ್ತೆಯಲ್ಲಿ ತುಂಬಿಕೊಂಡು ರಸ್ತೆಯನ್ನೇ ಬಂದ್ ಮಾಡಿ ಹಾಕಿತ್ತು. ಅಪಾಯವೇನು ಇರಲಿಲ್ಲವಾದರೂ, ರಸ್ತೆಯೇ ಕಾಣುತ್ತಿರಲಿಲ್ಲ. ಬೈಕಿನಲ್ಲಿ ಮುಂದೆ ಸಾಗಿದವನಿಗೆ ಉಸಿರು … Read more

ಬರವಣಿಗೆಯ ಶನಿವಾರವೂ ಜೋಗಿಯವ್ರ ಕಾಲಂಬರಿಯೂ: ಪ್ರಶಸ್ತಿ.ಪಿ.

ಕನಸೊಳಗೊಂದು ಕನಸು, ಅದರೊಳಗೆ ಮತ್ತೊಂದು, ಅದರೊಳಗೆ ಇನ್ನೊಂದು ಕನಸು. ಹೀಗೆ ಕನಸೊಳಗೆ ಕನಸ ಬಿತ್ತುತ್ತಲೇ ವಾಸ್ತವ ಕನಸುಗಳ ಪರಿವೆಯಿಲ್ಲದೇ ಕಥೆ ಕಟ್ಟುತ್ತಾ  ಸಾಗುವ ಸಿನಿಮಾವೊಂದಿದೆ ಇಂಗ್ಲೀಷಲ್ಲಿ,inception ಅಂತ. ವಾಸ್ತವ ಕನಸುಗಳ ಅರಿವಿಲ್ಲದಂತೆ ಸಾಗುವ ಅದಮ್ಯ ಪರಿಯದು. ಅದೇ ತರ ವಿಮರ್ಶೆಯ ಬಗ್ಗೆ ವಿಮರ್ಶೆ ಬರದ್ರೆ ? ಕತೆಗಾರನೊಬ್ಬನ ಕತೆ ಹುಟ್ಟಿದ ಬಗ್ಗೆಯೇ, ಕಥಾಸಂಕಲನದಲ್ಲಿ ಬಂದ ಕತೆಗಳ ಬಗ್ಗೆಯೇ ಒಂದು ಕತೆ ಬಂದ್ರೆ ? ಪಂಪಕಾವ್ಯದಲ್ಲಿ ಬರುವ ಕರ್ಣನ ಬಾಯಲ್ಲಿ ಬರುವ ಭಾನಾಮತಿಯ ದ್ಯೂತದ ಪ್ರಸಂಗದ ಬಗ್ಗೆ ಬರೆದ … Read more

ಬದುಕ್ ಸಾಯ್ರಿ: ಪ್ರವೀಣ್ ಎಸ್ ಕುಲಕರ್ಣಿ

    ಥತ್ತೇರಿಕೆ…!ಮತ್ತೆ ಫೇಲಾಗ್ ಬಿಟ್ನಾ. . ಚೆನ್ನಾಗೆ ಬರೆದಿದ್ನಲ್ಲ. . ಯಾಕೋ ಈ ದೇವರದು ಅತಿಯಾಯ್ತು. . ನನ್ನ ಸುಖವಾಗಿ ಬದುಕಲು ಬಿಡಲೇಬಾರದು ಅಂತ ಇದ್ರೆ ಯಾಕ್ ಹುಟ್ಟಿಸಿದ್ನೋ, ಮನೆಗೆ ಹೋಗಿ ಏನು ಮುಖ ತೋರಿಸೋದು. . . ಏನು. . . ?ಮತ್ತೆ ಲಾಸಾ. . . ಸರ್ಯಾಗ್ ನೋಡಿ ಹೇಳೋ, ಈ ಸಲಾ ಹೆಚ್ಚು ಕಮ್ಮಿ ಆದ್ರೆ ನಾನಷ್ಟೇ ಅಲ್ಲಾ ಅಪ್ಪ ಅಮ್ಮ ಹೆಂಡ್ತಿ ಮಕ್ಕಳು ಎಲ್ರೂ ಸೇರಿ ನೇಣು ಹಾಕ್ಕೋಬೇಕಾಗುತ್ತೆ. . … Read more

ನೆಮ್ಮದಿಯೆಂಬುದೊಂದು ಭಾವ..: ಪದ್ಮಾ ಭಟ್

ಮಧ್ಯಾಹ್ನದ ಬಿಸಿಲಿನಲ್ಲಿ , ಛತ್ರಿ ಹಿಡಿದು ಒಂದಷ್ಟು ದೂರ ಸಾಗಿದ್ದೆ. ರಸ್ತೆ ಬದಿಯಲ್ಲಿ ಟೆಂಟು ಹಾಕಿಕೊಂಡು , ಅರ್ಧ ಹರಿದ ಬಟ್ಟೆಯಲ್ಲಿದ್ದ ಹೆಂಗಸೊಬ್ಬಳು ರೊಟ್ಟಿ ಸುಡುತ್ತಿದ್ದರೆ,  ಪಕ್ಕದಲ್ಲಿಯೇ ಇದ್ದ ಮರಳು ರಾಶಿಯಲ್ಲಿ ಅವಳ ಇಬ್ಬರು ಮಕ್ಕಳು ಆಟವಾಡುತ್ತಿದ್ದರು.. ಆ ನಗುವು ಬಡತನವನ್ನೆಲ್ಲಾ ಮರೆಮಾಚಿತ್ತು. ಖುಷಿಯಿಂದಿರಲು ದುಡ್ಡು  ಬೇಕೆಂಬುದಿಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳುವಂತಿತ್ತು.. ಸ್ವಲ್ಪ ಹೊತ್ತು ಅಲ್ಲಿಯೇ  ನಿಂತು ನೋಡುತ್ತಿದ್ದವಳಿಗೆ ಎಲ್ಲಾ ಇದ್ದೂ ಖುಷಿಯಿಂದಿರಲು ಸಾಧ್ಯವಿಲ್ಲ.. ಏನೂ ಇಲ್ಲದೇ ಇರುವ ಇವರು ಅದೆಷ್ಟು ನಗುತ್ತಿದ್ದಾರಲ್ಲ ಎಂದೆನಿಸಿದ್ದು ಸುಳ್ಳಲ್ಲ.  … Read more

ಸಾಮಾನ್ಯ ಜ್ಞಾನ (ವಾರ 55): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ದ.ರಾ.ಬೇಂದ್ರೆಯವರಿಗೆ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಕೃತಿ ಯಾವುದು? ೨.    ನ್ಯಾಕೋ (NACO)ನ ವಿಸ್ತೃತ ರೂಪವೇನು? ೩.    ಚಲಿಸುತ್ತಿರುವ ವಾಹನಗಳ ವೇಗವನ್ನು ಕಂಡು ಹಿಡಿಯಲು ಬಳಸುವ ಸಾಧನ ಯಾವುದು? ೪.    ಧರ್ಮೇಶ್ವರಾ ಇದು ಯಾರ ಅಂಕಿತನಾಮವಾಗಿದೆ? ೫.    ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೬.    ಬರ್ಲಾಂಗ ಇದು ಯಾವ ರಾಜ್ಯದ ನೃತ್ಯ ಶೈಲಿಯಾಗಿದೆ? ೭.    ಧನುರ್ವಾಯು ರೋಗ ಬರಲು ಕಾರಣವಾಗುವ ಬ್ಯಾಕ್ಟೀರಿಯಾ ಯಾವುದು? ೮.    ಭಾರತದ ರಾಷ್ಟ್ರಪತಿ … Read more

ಸಂತೆಯೊಳಗೊಂದು ಸುತ್ತು: ಅನಿತಾ ನರೇಶ್ ಮಂಚಿ

ಸಂತೆ ಅಂದರೆ ಅದೇನೋ ಆಕರ್ಷಣೆ. ನಮಗೆ ಬೇಕಿರಲಿ ಬೇಡದೇ ಇರಲಿ ಸುಮ್ಮನೆ ಸಂತೆ ಸುತ್ತುವುದಿದೆಯಲ್ಲಾ ಅದರಷ್ಟು ಆನಂದ ನೀಡುವ ಕೆಲಸ ಇನ್ನೊಂದಿಲ್ಲ. ಅದೂ ಊರಲ್ಲೇ ನಡೆಯುವ ಉತ್ಸವಕ್ಕೆ ಸೇರುವ ಅಪಾರ ಜನಸ್ತೋಮದ ನಡುವೆ ಕಣ್ಮನ ಸೆಳೆಯುವ ವಸ್ತು ತಿನಿಸುಗಳನ್ನು ಮಾರುವ ಸಂತೆಯ ಅಂಗಡಿಗಳು ಅಂದ ಮೇಲೆ ದೇಹವು ಮನೇಯೊಳಗೇ ನಿಲ್ಲಲು ಅದೇನೂ ಕೊರಡಲ್ಲ ತಾನೆ?! ಚಪ್ಪಲಿ ಮೆಟ್ಟಿಕೊಂಡು ಹೊರಟೇ ಬಿಡುತ್ತದೆ.  ಸಂತೆಯ ಗಮ್ಮತ್ತು ಏನಿದ್ದರೂ ಹಗಲು ಸರಿದು ಇರುಳಿನ ಅಧಿಪತ್ಯ ತೊಡಗಿದಾಗಲೇ  ಚೆಂದ.  ಬಗೆ ಬಗೆಯ ದೀಪಾಲಂಕಾರದಲ್ಲಿ … Read more

ಮಾನ್ ಫ್ರಂ ದಿ ಅರ್ಥ್: ಸಚೇತನ

  ಮನುಷ್ಯ…   ದ್ವಂದ್ವ…  ಅತೀ ಪುರಾತನ ಕಾಲದಿಂದಲೂ ಮನುಷ್ಯನನ್ನು ಕಾಡುತ್ತಿರುವ ದ್ವಂದ್ವ ' ಮನುಷ್ಯನೆಂದರೆ ಯಾರು ?" ಸ್ಥಿತಿ ಗತಿ ಮಿತಿ ಪರಿಮಿತಿ. ಎಲ್ಲವನ್ನು ಎಲ್ಲ ಕಾಲದಲ್ಲಿಯೂ ಕಾಡಿದ ಪ್ರಶ್ನೆ. ' ಮನುಷ್ಯ'  ಮನುಷ್ಯನ ಉಗಮವಾಗಿ, ಅಭ್ಯುದಯವಾಗಿ ಪ್ರಾಣಿಗಳ೦ತಿದ್ದ ಮನುಷ್ಯ ಕಾಲ ಕ್ರಮೇಣ ಕ್ರೋ ಮ್ಯಾಗ್ನನ್  ಆಗಿ ತನ್ನನ್ನು ತಾನು ನಾಗರೀಕತೆಯ ಅಚ್ಚಿನಲ್ಲಿ ಎರಕಗೊಳಿಸುತ್ತ ಬಂದಂತೆ, ಮನುಷ್ಯನ ರೂಪವೂ ಬದಲಾಯಿತು: ದೈಹಿಕವಾಗಿ ಮಾನಸಿಕವಾಗಿ. ದೇಹದ ಸ್ನಾಯುಗಳ ಮಾಂಸಖಂಡಗಳ  ಜೊತೆಗೆ  ಮನಸ್ಸಿನ ಬೆಳವಣಿಗೆಯಾದಂತೆ ಸಂಕುಲಗಳೊಂದು, ವರ್ಣಗಳೊಂದು ಕಡೆ … Read more

ಗೋಪಾಲಾ …. ಗೋಪಾಲಾ…: ಅಮರ್ ದೀಪ್ ಪಿ.ಎಸ್.

ಬಳ್ಳಾರಿಯ ಕಾಳಮ್ಮ ಬೀದಿಯಿಂದ ಪಶ್ಚಿಮಕ್ಕೆ ಬಂದರೆ, ರಾಜರಾಜೇಶ್ವರಿ ಸಿನೆಮಾ ಥೀಯೇಟರ್.   ಮುಂದೆ ಮೋತಿ ವೃತ್ತ. ಥೀಯೇಟರ್ ಎದುರಿಗೆ ಬಹುಮಹಡಿ ಹೋಟಲ್ಲೊಂದರ ಕಾಮಗಾರಿ ನಡೆಯುತ್ತಿದೆ.  ಸಂಜೆ ಸಿನೆಮಾ ನೋಡಿ ಹೊರ ಬಂದವರು, ಸೆಕೆಂಡ್ ಷೋಗೆ ಹೋಗುವವರ ಜಂಗುಳಿ.  ಕತ್ತಲಲ್ಲಿ ಎದ್ದು ಕಾಣುವಂಥ ಮಲ್ಲಿಗೆಯ ಸರ ತಲೆಯಿಂದ ಎಳೆದು ಎದೆ ಮೇಲೆ ಬಿಟ್ಟುಕೊಂಡು ಒಂದೊಂದೇ ಪಕ್ಕಳೆಯನ್ನು ಕಿತ್ತುತ್ತಾ, ಮುಸುತ್ತಾ ಆಕರ್ಷಿಸುವ ಒಂದಿಷ್ಟು ನಿತ್ಯ ಮುತ್ತೈದೆಯರು.   ಅಲ್ಲಲ್ಲಿ ಕಣ್ಣಾಡಿಸುತ್ತಲೇ ತಿರುಗುವ ವಿಟರು. ಗದ್ದಲದಲ್ಲೇ ಕೈ ಚಳಕ ತೋರಿಸಿ ಜೇಬು … Read more

ಅಡುಗೆಯ ಅವಾಂತರಗಳು: ಸ್ಮಿತಾ ಅಮೃತರಾಜ್

ಅಡುಗೆ ಮಾಡುವುದರಲ್ಲಿ ನಮ್ಮ ಗೃಹಿಣಿಯರು ಎಷ್ಟೇ ಪಳಗಿದರೂ, ಪರಿಣಿತಿಯನ್ನು ಪಡೆದುಕೊಂಡರೂ ಕೆಲವೊಮ್ಮೆ ಗಡಿಬಿಡಿಯಲ್ಲಿ ಅಡುಗೆ ತಯಾರು ಮಾಡುವಾಗ ಎಡವಟ್ಟಾಗಿ ಪಾಕವೇ ಬದಲಾಗಿ ಹೊಸ ರುಚಿಯೇ ಉದ್ಭವಗೊಳ್ಳುವಂತಹ ಪರಿಸ್ಥಿತಿಗಳು ಬಂದೊದಗಿ ಬಿಡುತ್ತದೆ. ಬಹುಷ; ಇದಕ್ಕೆ ಯಾವ ಮನೆಯಾಕೆಯೂ ಹೊರತಾಗಿಲ್ಲ ಅನ್ನಿಸುತ್ತೆ.  ಮೊದ ಮೊದಲೆಲ್ಲಾ ತೀರಾ ಸಾಂಪ್ರದಾಯಿಕ ಅಡುಗೆಗಳು. ಹಾಗಾಗಿ ಇಂತಿಂತ ಖಾದ್ಯಕ್ಕೆ ಇಂತಿಂತದೇ ರುಚಿ ದಕ್ಕುತ್ತದೆ ಅಂತ ಕರಾರುವಕ್ಕಾಗಿ ಹೇಳಿ ಬಿಡಬಹುದಾಗಿತ್ತು. ಅಡುಗೆ ಮಾಡುವಾಗ ಸಾಕಷ್ಟು ಏಕಾಗ್ರತೆಯನ್ನು ಮೈಗೂಡಿಸಿ ಕೊಳ್ಳಬೇಕಾಗಿತ್ತು. ಮನಸ್ಸು ಕೊಂಚ ವಿಚಲಿತವಾಗಿ ಹಾಕುವ ಸಾಮಾಗ್ರಿ ತುಸು … Read more

ಪ್ರೀತಿ, ಪ್ರೇಮ, ಪ್ರಣಯ: ಗಣೇಶ್ ಖರೆ

೧. ನನಗಾಗ ಹದಿನೆಂಟು, ಅವಳಿಗೋ ಹದಿನೈದಿರಬಹುದು. ನೋಡಲು ಸುರಸುಂದರಿ. ಇನ್ನೇನು ಬೇಕು ಪ್ರೇಮಾಂಕುರವಾಗಲು? ನಮ್ಮ ಪ್ರೇಮಕ್ಕೆ ಕೆಲ ವರುಷಗಳೇ ಕಳೆದವು, ಅವಳಿಗೂ ನನ್ನ ಮೇಲೆ ಪ್ರೀತಿಯಿತ್ತು, ನನ್ನ ನೋಡಿದಾಗೆಲ್ಲ ಅವಳು ಬೀರುವ ಮುಗುಳ್ನಗೆಯೇ ಅದಕ್ಕೆ ಸಾಕ್ಷಿ. ಒಬ್ಬರಿಗೊಬ್ಬರು ಎಂದೂ ಪ್ರೇಮದ ಪ್ರಸ್ತಾಪವನ್ನು ಮಾಡಲಿಲ್ಲ. ಕೊನೆಗೆ ನಾನೇ ಮಡಿದೆ, ಅವಳಿಗೆ ಗುಲಾಬಿ ಕೊಟ್ಟಾಗ ನನಗೆ ವಯಸ್ಸು ಇಪ್ಪತ್ತೈದು. ಗುಲಾಬಿ ಪಡೆದು ನಾಚಿ ನಡೆದಿದ್ದಳು, ಅವಳ ಸಮ್ಮತಿ ಕಣ್ಣಲ್ಲೇ ವ್ಯಕ್ತಪಡಿಸಿದ್ದಳು. ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಅವಳಿಗೆ ಗುಲಾಬಿ ಅರ್ಪಿಸುತ್ತಿದ್ದೇನೆ. … Read more

ಮೂವರ ಕವಿತೆಗಳು

 ನನ್ನ ಅಪ್ಪ ಅಪ್ಪ ಶಬ್ದ ಕೇಳಿದಾಗ ನೆನಪಾಗುವ, ಮೊದಲ ಪ್ರಿಯ ದೇವರು ನೀವು, ನನ್ನ ಬಾಳ ಬಲಹೀನ ಕ್ಷಣಗಳ ಮಳೆಗೆ, ಬಲಿಷ್ಟವಾದ ಆಸರೆಯ ಕೊಡೆ ನೀವು, ನನ್ನ ಎದೆಯ ವೈಭವ ಗೋಪುರದ, ಹೆಮ್ಮೆಯ ಸುವರ್ಣ ಕಳಸವು ನೀವು, ನನ್ನ ಜೀವನದ ಹುಡುಕಾಟದ ಗುರಿ, ನಿಮ್ಮ ಮೊಗದ ಚಿರು ನಗುವಿನಲ್ಲಿ ಅಡಗಿರುವುದು, ನಿಮ್ಮ ಕರುಣೆಯ ಆಳವನು ಹೇಗೆ ಅರಿಯಲಿ, ಅದು ನನಗೆ ಚಿದಂಬರ ರಹಸ್ಯವಾಗಿದೆ. –ಬಿ.ಸಿ.ಪ್ರಮೋದ. ಎಮ್.ಟೆಕ್. ಎನ್.ಐ.ಟಿ.ಕೆ. ಸುರತ್ಕಲ.           ಅವಳು….??? … Read more

ತಿರಸ್ಕಾರ (ಭಾಗ 1): ಜೆ.ವಿ.ಕಾರ್ಲೊ, ಹಾಸನ

ಮೂಲ: ಡಬ್ಲ್ಯು. ಸಾಮರ್ಸೆಟ್ ಮ್ಹಾಮ್. ಕನ್ನಡಕ್ಕೆ: ಜೆ.ವಿ.ಕಾರ್ಲೊ, ಹಾಸನ (ಬ್ರಿಟಿಶ್ ಲೇಖಕ ಡಬ್ಲ್ಯು. ಸಾಮರ್ಸೆಟ್ ಮ್ಹಾಮ್ (೧೮೭೪-೧೯೬೫) ಹುಟ್ಟಿದ್ದು ಪ್ಯಾರಿಸಿನಲ್ಲಿ. ತನ್ನ ಕುಟುಂಬದ ಸಂಪ್ರದಾಯದಂತೆ ಅವನು ವೃತ್ತಿಯಲ್ಲಿ ವಕೀಲನಾಗಬೇಕಿತ್ತು. ಹುಟ್ಟಿನಿಂದಲೇ ತೊದಲುವಿಕೆಯ ಕಾರಣಗಳಿಂದ ಅವನು ವಕೀಲನಾಗಲಿಲ್ಲ. ಹತ್ತು ವರ್ಷಗಳಲ್ಲೇ ಅನಾಥನಾದ್ದರಿಂದ ಅವನನ್ನು ಅವನ ಚಿಕ್ಕಪ್ಪ ಇಂಗ್ಲೆಂಡಿನಲ್ಲಿ ಸಾಕಿದರು. ಅವನು ಕಲಿತದ್ದು ವೈಧ್ಯ ಶಿಕ್ಷಣವಾದರೂ ಅವನ ಆಸಕ್ತಿ ಸಾಹಿತ್ಯದಲ್ಲಿತ್ತು. ಲೇಖಕನಾಗಿ ಹೆಸರು, ಹಣ ಗಳಿಸಲು ಅವನಿಗೆ ಬಹಳಷ್ಟು ವರ್ಷಗಳೇ ಹಿಡಿದವು. ಕಾದಂಬರಿಕಾರನಾಗಿ, ಸಣ್ಣ ಕತೆಗಾರನಾಗಿ ಹೆಸರುಗಳಿಸುವ ಮೊದಲು ಅವನು … Read more

ಹೋಳಿ ಹುಣ್ಣಿಮೆಯ ಬಣ್ಣ,ಬಣ್ಣ ನೆನಪುಗಳು…!: ನಾರಾಯಣ ಬಾಬಾನಗರ

ಇಲ್ಲಿಯವರೆಗೆ ‘’ಹೋಗಿ ಹೋಗಿ ಈಗ್ಯಾಕ ಹೋಳಿ ಹುಣ್ಣಿವಿ ನೆಪ್ಪ ತಗದಾನ ಈ ಆಸಾಮಿ..’’ಅಂತ ಮನಸಿನ್ಯಾಗ ಗೊಣಗಬ್ಯಾಡ್ರಿ…ನನಗೂ ಗೊತ್ತೈತಿ ಹೋಳಿ ಹುಣ್ಣಿವಿ ಬರೂದು ಇನ್ನಾ ಭಾಳ ಮುಂದ ಐತೆನ್ನೂದು.ಹುಸೇನಿ ನೆನಪಾದ ಕೂಡಲೆ ಅಂವಾ ಭಾಗವಹಿಸಿದ ಹೋಳಿ ಹುಣ್ಣಿವಿ ನೆನಪಾಗತೈತಿ…ಅದರ ಹಿಂದ್ಹಿಂದ್ಹ ಹೋಳಿ ಹುಣ್ಣಿವಿಯ ನೆನಪುಗಳು ಕುಣಕೋತ ಮನದಾಗ ತೇಲಿ ಹೋಗತಾವ… ಹೋಳಿ ಹುಣ್ಣಿವಿ ಹಿಂದಿನ ಅಮಾಸಿ(ಆ ಅಮಾಸಿಗಿ ಏನಂತ ಹೆಸರೈತೋ…ನೆನಪಾಗೊಲ್ಲತು…ಅದನ್ನ ಕಾಮಣ್ಣನಿಗೆ ಬಿಟ್ಟು ಬಿಡೂಣಂತ)ಕಳದು ಚಂದ್ರಾಮನೆಂಬೋ ಚಂದ್ರಾಮ ಯಾವಾಗ ಮುಗಿಲಿನಾಗ ಹಣಿಕಿ ಹಾಕಿದನೋ,ಹಲಿಗಿಗಳು ಹೊರ ಬಂದು ಸಪ್ಪಳಾ ಮಾಡಾಕ … Read more

ನಶೆಯ ನಿಶೆಯಲ್ಲಿ: ಪ್ರಶಸ್ತಿ.ಪಿ,

ಕಿಟಕಿಯ ಕಂಬಿಗಳಿಗೆ ಒಣಗಿಸಿದ ಕರ್ಚೀಪು, ಟವೆಲುಗಳ ಸಂದಿಯಿಂದಲೇ ಇಣುಕಿದ್ದ ಸೂರ್ಯ, ಬಂಡೆಗಳ ಬಿರುಕಲ್ಲೇ ಅರಳೋ ನ್ಯಗ್ರೋಧದಂತೆ. ಅಲಾರಮ್ಮನ್ನೇ ಮೂರು ಬಾರಿ ಮಲಗಿಸುತ್ತಿದ್ದ ಆ ಮಲಗುವೀರನ ಕಷ್ಟಪಟ್ಟು ಎಬ್ಬಿಸುತ್ತಿದ್ದ ನಿತ್ಯದ ಆ ಸೂರ್ಯರಶ್ಮಿಗಳಿಗೂ ಅಂದ್ಯಾಕೋ ಆತ ಮಲಗಿದ್ದ ಪರಿ ಕಂಡು ಅಯ್ಯೋ ಪಾಪ ಅನಿಸಿತ್ತು. ರಾತ್ರಿಯ ಚಳಿಗೋ, ಬಿದ್ದ ಕೆಟ್ಟ ಕನಸಿಗೋ ನಡುಗಿ, ಕಾಲುಗಳ ನಡುವೆ ಕೈಯಿಟ್ಟು ಮುದುರಿ ಮಲಗಿರೋ ಮಗುವ ಕಂಡು ಕರಗಿದ ತಾಯಿಯ ಅಂತಃಕರಣದಂತಾಗಿತ್ತು ರವಿಯ ಕಿರಣಗಳ ಕತೆಯಿಂದು. ಈತನ ರೂಮ ಹೊಕ್ಕ ಅವು ನಿತ್ಯದಂತೆ … Read more

ಎಲ್ಕ್ ಎಂಬ ಸಾರಂಗದ ದುರಂತ ಕತೆ: ಅಖಿಲೇಶ್ ಚಿಪ್ಪಳಿ

ಆಸ್ಟ್ರೇಲಿಯಾದ ಪ್ರಧಾನಿ ಟೋನಿ ಅಬಾಟ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಭಾಯಿ-ಭಾಯಿ ಎಂದು ಪರಸ್ಪರ ಹೊಗಳಿಕೊಳ್ಳುತ್ತಾ ಉಭಯದೇಶಗಳ ಸಂಬಂಧವೃದ್ಧಿಗೆ ಅಡಿಪಾಯ ಹಾಕುತ್ತಿರುವ, ಪರಮಾಣು ಒಪ್ಪಂದಕ್ಕೆ ಕೈಜೋಡಿಸುತ್ತಾ, ಯುರೇನಿಯಂ ಆಮದಿಗೆ ಸಹಿ ಹಾಕುತ್ತಿರುವ ಮೂರು ದಿನ ಮೊದಲು ಅಮೆರಿಕಾದ ನಾರ್ತ್ ಕ್ಯಾರೋಲಿನ ರಾಜ್ಯದ ಗ್ರೇಟ್ ಸ್ಮೋಕಿ ಮೌಂಟೇನ್ ರಾಷ್ಟ್ರೀಯ ಅಭಯಾರಣ್ಯದ ಸಾರಂಗವೊಂದನ್ನು ಅಲ್ಲಿನ ಅಧಿಕಾರಿಗಳೇ ಗುಂಡಿಟ್ಟು ಕೊಂದರು. ಆ ಗುಂಡಿನ ಸದ್ದು ಸುದ್ದಿಯಾಗಲಿಲ್ಲ. ಅಕ್ಟೋಬರ್ ೨೦ ೨೦೧೪ರ ದಿನದಂದು ಹವ್ಯಾಸಿ ಛಾಯಾಚಿತ್ರಗ್ರಾಹಕನಾದ ಜೇಮ್ಸ್ ಯಾರ್ಕ್ ಎಂಬಾತ ಇದೇ … Read more

ಡೆಸರ್ಟ್ ಫ್ಲವರ್’ ಇಂಗ್ಲಿಷ್ ಚಲನಚಿತ್ರ ಪ್ರದರ್ಶನ ಮತ್ತು ಉಪನ್ಯಾಸ

ಸಹಮತ ಫಿಲಮ್ ಸೊಸಯಟಿ ಮಂಗಳೂರು ಮತ್ತು ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನವಂಬರ್ 30ರ ಭಾನುವಾರ ಮಧ್ಯಾಹ್ನ 2.00 ಗಂಟೆಯಿಂದ 6.00 ಗಂಟೆ ತನಕ ಮಂಗಳೂರು ಉರ್ವಸ್ಟೋರ್ ನಲ್ಲಿರುವ ಸಾಹಿತ್ಯ ಸದನದಲ್ಲಿ ಸೋಮಾಲಿಯನ್ ರೂಪದರ್ಶಿ ವಾರೀಸ್ ಡೇರಿಯ ಆತ್ಮಕತೆಯಾಧಾರಿತ .' ಡೆಸರ್ಟ್ ಫ್ಲವರ್' ಇಂಗ್ಲಿಷ್ ಚಲನಚಿತ್ರ ಪ್ರದರ್ಶನ ಮತ್ತು ಉಪನ್ಯಾಸ ಏರ್ಪಡಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕವಿ ಡಾ. ಅನುಪಮ ಎಚ್ ಎಸ್ .ಮತ್ತು ಮಂಗಳೂರಿನ ಚಿಂತಕ ಡಾ.ಬಿ.ಎಸ್ ಕಕ್ಕಿಲ್ಲಾಯ ಚಲನಚಿತ್ರದ … Read more

ಸಾಮಾನ್ಯ ಜ್ಞಾನ (ವಾರ 54): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಪರಮ್ – ೧೦೦೦೦ ಎಂಬ ಸೂಪರ್ ಕಂಪ್ಯೂಟರನ್ನು ವಿನ್ಯಾಸ ಮಾಡಿದ ದೇಶ ಯಾವುದು? ೨.    ವನಮಹೋತ್ಸವವನ್ನು ಆರಂಭಿಸಿದವರು ಯಾರು? ೩.    ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳು ಕಂಡು ಬರುವ ಜಿಲ್ಲೆ ಯಾವುದು? ೪.    ಗೊರುಚ ಇದು ಯಾರ ಕಾವ್ಯನಾಮವಾಗಿದೆ? ೫.    ನ್ಯಾಷನಲ್ ಇನ್ಸ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸ್‌ಸ್ ಕಾಲೇಜು ಕರ್ನಾಟಕದಲ್ಲಿ ಎಲ್ಲಿದೆ? ೬.    ನಾಟಿ ಎಂಬ ಜಾನಪದ ನೃತ್ಯ ಶೈಲಿ ಯಾವ ರಾಜ್ಯದಲ್ಲಿ ಕಂಡು ಬರುತ್ತದೆ? ೭.    ಪ್ರಪಂಚದ ಚಿಕ್ಕ … Read more