ಮಕ್ಕಳೆದುರಿ​ಗೆ ಮತ್ತು ಮಕ್ಕಳಾಗುವ ಮುನ್ನ: ಅಮರ್ ದೀಪ್ ಪಿ.ಎಸ್.

ಹಳ್ಳಿಗಳಲ್ಲಿ ಹಿಂದೆ ವೈದ್ಯರಿಗಿಂತ ಅನುಭವಸ್ಥರಾಗಿ ಸೂಲಗಿತ್ತಿಯರು ಗರ್ಭಿಣಿ ಹೆಂಗಸರಿಗೆ ಮನೆಯಲ್ಲೇ ನಾರ್ಮಲ್ ಹೆರಿಗೆ ಮಾಡಿಸಿ ಕೂಸು ಬಾಣಂತಿಯನ್ನು ಎರೆದು ನೀರು ಹಾಕಲು ಬರುತ್ತಿದ್ದರು.    ಹೊರಗೆ ಗಂಡ, ಉಳಿದವರು ಕಾತರದಿಂದ ಕಾಯುತ್ತಿದ್ದರೆ, ಒಳಗೆ ಗರ್ಭಿಣಿ ಹೆಂಗಸು ನೋವು ತಿನ್ನುತ್ತಿರುತ್ತಾಳೆ.   ಒಂದು ಕ್ಷಣ ನೋವು ತಿನ್ನುವ ಸದ್ದು ನಿಂತಿತೋ? ಮತ್ತೊಂದು ಕೂಗು ಕೇಳುತ್ತದೆ.  ಈಗ ಹುಟ್ಟಿದ್ದು ಹೆಣ್ಣೋ? ಗಂಡೋ? ಎನ್ನುವ ಕಾತರ.   ಹೊರಗಡೆ ಬಂದ ಮೊದಲ ಹೆಂಗಸು ಮಗು ಯಾವುದೆಂದು ತಿಳಿಸಿ ಮತ್ತೆ ಒಳ ನಡೆಯುತ್ತಾಳೆ. … Read more

ಕನಸು: ದಿವ್ಯ ಆಂಜನಪ್ಪ

'ಕನಸು', ಕೇಳಲೆಷ್ಟು ಸುಮಧುರ!. ಕನಸೆಂಬುದು ಯಾರಿಗಿಲ್ಲ? ಎಲ್ಲರಿಗೂ ಒಂದಲ್ಲ ಒಂದು ರೀತಿಯ ಕನಸು ಹುಟ್ಟುತ್ತಾ ಕಾಡುತ್ತಲೇ ಇರುವುದು. ಕನಸು ಕಾಣದ ಮನಸ್ಸು ಸಾಧ್ಯವೇ? ಇಲ್ಲವೇ ಇಲ್ಲ. ಹಾಗೇನಾದರೂ ಇದ್ದಿದ್ದರೆ ಬದುಕಲಿ ಸೊಗಸೇ ಇರುತ್ತಿರಲಿಲ್ಲ. ಬದುಕು ಎಂದಾಗ ಅದರೊಳಗಿನ ಸೋಲು ಗೆಲುವುಗಳು ನಮ್ಮೆದುರು ಬಂದು ನಿಲ್ಲುತ್ತವೆ. ಈ ಸೋಲು ಗೆಲುವುಗಳು ಎಂಬ ಅಂಶಗಳು ಹುಟ್ಟಿಕೊಳ್ಳಲೂ ಮತ್ತೂ ಈ ಕನಸುಗಳೇ ಕಾರಣ. ಆದರೂ ಎಲ್ಲರೂ ಕನಸಿನ ದಾಸರೇ. ''ಬೆಳಕೇ ಇಲ್ಲದ ದಾರಿಯಲಿ ನಾನು ನಡೆಯಬಲ್ಲೆ; ಕನಸೇ ಇಲ್ಲದ ದಾರಿಯಲಿ ಹೇಗೆ … Read more

ಮೂರು ಕವಿತೆಗಳು: ಕಡಲ ಬೇಟೆಗಾರ, ರಮೇಶ್ ನೆಲ್ಲಿಸರ, ದಿನೇಶ್ ಚನ್ನಬಸಪ್ಪ

ಅವಳೆಂದರೆ,,, ಅದ್ಯಾವುದೋ ಒಂದು ಹೊತ್ತಿನ ಮೌನ, ಮತ್ತೆಲ್ಲಿಂದಲೋ ತೂರಿ ಬಂದ ನಿಲ್ಲದ ಮಾತು,, ಮಚ್ಚೆಯ ಜೊತೆಜೊತೆಗೆ ಚೆಲುವಿನ ಗುಳಿಕೆನ್ನೆ, ಮರೆತಾಗ ಹೆಚ್ಚಾಗೇ ನೆನಪಾಗೊ ಏನೋ ಒಂದು ಗುರುತು. ಅವಳೆಂದರೆ,,, ಹಾಳಾದ ಸಂಜೆಯನೇ ರಂಗೇರಿಸೊ ಬೆಳಕು, ಮತ್ತನ್ನೆ ಬಗಲಲ್ಲೇ ಎತ್ತಿಟ್ಟುಕೊಂಡು ಬೀಸೋ ತಂಗಾಳಿ,, ನಿಧಾನ ಗತಿಯಲಿ ಏರಿಇಳಿಯೊ ರಂಗು, ಕಡಲಿನೆದೆಮೇಲೆ ಪ್ರತಿಫಲಿಸೋ ಅರೆನೀಲಿಮೋಡದ ಸಂದಿಗೊಂದಿಯ ಬಿಳಿ. ಅವಳೆಂದರೆ,,, ತುಂತುರು ಮತ್ತೆ ಚಳಿ ಹಿಡಿಸೊ ಆಷಾಡದ ಮಳೆ,, ನೆನೆವಾಗ ಕಾರಣವಿರದೇ ಮನಸೊಳಗೆ ಮೂಡೋ ಸಂಭ್ರಮ, ಜ್ವರದಮೂಲಕ ಕಾಡುವ ಹೊಸ ರಗಳೆ. … Read more

ಜಾತ್ರಿ ಜೊತಿಗಿನ ನೆನಪಿನ ಬುತ್ತಿ (ಭಾಗ 2): ನಾರಾಯಣ ಬಾಬಾನಗರ

ಇಲ್ಲಿಯವರೆಗೆ ರೊಕ್ಕಾ ಕಳಕೊಂಡ ಸುದ್ದಿ ಓದಾಕ ರೆಡಿಯಾಗಿ ಬಂದು ನೀವು ಕುಂತದ್ದ ರೀತಿ ನೋಡಿದರ…ನನ್ನ ಮ್ಯಾಲೆ ಎಷ್ಟು ಕನಿಕರ ನಿಮಗೈತಿ ಅನ್ನೂದು ತೋರಿಸಿಕೊಡತೈತಿ…ಹೋಗಲಿ ಬಿಡ್ರಿ…ಈ ಸಲ ‘’ಖರೇ ಖರೋ’’(ಈ ಶಬ್ದದ ಅರ್ಥ ದಯವಿಟ್ಟು ಡಿಕ್ಸನರಿಯೊಳಗ ಹುಡುಕಬ್ಯಾಡ್ರಿ,ನಿಮಗ ತಿಳದರ ಸಾಕು-ಅರ್ಥ ಹುಡುಕಿ ಅನರ್ಥ ಆಗುದು ಬ್ಯಾಡಂತ ನನ್ನ ಆಶೆ)ನನ್ನ ರೊಕ್ಕ ಹೆಂಗ ಹೋತು ಅನ್ನೂದು ಹೇಳೇ ಹೇಳತೀನಿ ನನ್ನನ್ನ ದಯವಿಟ್ಟು ನಂಬ್ರಲ್ಯಾ…. ಹಂಗ ನಮ್ಮ ಪಟಾಲಮ್ ಆ ಇಬ್ಬರೊಳಗಿನ ಹುಡುಗರೊಳಗ ಒಬ್ಬನ ಮುಂದ ಹೋಗಿ ನಿಂತಿವಿ.ಆ ಹುಡುಗ ಶುರು … Read more

ಮೌನ ಕ್ಯಾನ್ವಾಸಿನಲ್ಲೊಂದು ಕುಸುರಿ – ಬಾರನ್: ಸಚೇತನ ಭಟ್

ಮಧ್ಯ ಪ್ರಾಚ್ಯದ ವಿಶಿಷ್ಟ ದೇಶ ಇರಾನ್, ಸಿನಿಮಾ ಜಗತ್ತಿನಲ್ಲಿ ತನ್ನದೇ ಆದ ಮಹತ್ವದ ಸ್ಥಾನ ಪಡೆದಿದೆ. ಇರಾನಿನ ಭಾಷೆಯಾದ ಪರ್ಷಿಯಾ ಭಾಷೆಯಲ್ಲಿ ತಯಾರಾಗುವ ಸಿನಿಮಾಗಳಿಗೆ, ಅಲ್ಲಿನ ಪ್ರಸಿದ್ಧ ಜಮಖಾನದ ಸೂಕ್ಷ್ಮ ಕುಸುರಿ ಕೆಲಸದ ಪ್ರಭಾವವಿದೆ. ಜಗತ್ತಿನ ೩೦ ಪ್ರತಿಶತ ಜಮಾಖಾನಗಳು ಇರಾನಿ ಜನರ ಪಳಗಿದ ಕುಸುರಿಯಲ್ಲಿ ನೇಯಲ್ಪಡುತ್ತವೆ ಹಾಗೂ ಜಮಖಾನದೆಡೆಯಲ್ಲೆ ಬೆಳೆದ ಇರಾನಿನ ಸಿನಿಮಾ ಜಗತ್ತು,  ಜಮಖಾನದ ಕುಸುರಿಯಷ್ಟೇ ಅದ್ಭುತವಾದ ಚೆಂದನೆಯ ಆಪ್ತವಾದ ಮೆತ್ತಗಿನ ಮೋಹಕವಾದ ಸರಳವಾದ ಕಲಾಕೃತಿಯನ್ನು  ಪರದೆಯಲ್ಲಿ ಮೂಡಿಸಿಬಿಡುತ್ತದೆ.  ಇರಾನಿ ಸಿನಿಮಾಗಳ ಜೀವಾಳವೆಂದರೆ ಸರಳತೆ … Read more

ಸ್ವಚ್ಛ ಭಾರತ ಮತ್ತು ನಾವು : ಪ್ರಶಸ್ತಿ

ಎರಡು ವಾರದ ಹಿಂದೆ. ಆಫೀಸಿಂದ ಮನೆಗೆ ನಡ್ಕೊಂಡು ಬರ್ತಾ ಇದ್ದೆ. ಐಟಿಪಿಎಲ್ಲಿನ್ ಗ್ರಾಫೈಟ್ ಸಿಗ್ನಲ್ಲಿಂದ ಕುಂದಲಹಳ್ಳಿ ಗೇಟಿಗೆ ಬರೋ ರಸ್ತೆ. ಎಡಭಾಗದ ಫುಟ್ಪಾತಲ್ಲಿ ಬರ್ತಿದ್ದೋನಿಗೆ ಏನೋ ಚಿತ್ತಾರ ಬರೆದ ಹಾಗೆ ಕಾಣ್ತು ಗೋಡೆ ಮೇಲೆ. ಹೌದು. ಸಖತ್ತಾದ ಚಿತ್ರ(ಚಿತ್ರ ೧). ಅಕ್ಟೋಬರ್ ಎರಡನೇ ತಾರೀಖಿಂದ ಶುರುವಾದ ಸ್ವಚ್ಛ ಭಾರತ ಅಭಿಯಾನದ ಪ್ರಭಾವವಾ ಇದು ಅನಿಸ್ತು. ಹ್. ಒಂದೆರಡು ದಿನ ಚೆನ್ನಾಗಿ ಇಟ್ಟಿರ್ತಾರೆ. ಒಂದ್ನಾಲ್ಕು ದಿನ ಆಗ್ಲಿ.ಮತ್ತೆ ಇದೇ ತರ ಆಗಿರತ್ತೆ. ಬದಲಾಗಬೇಕಿದ್ದುದು ಜನರ ಮನೋಭಾವ. ಒಬ್ರಿಬ್ರು ಹಿಂಗೆ … Read more

ನಾಟ್ಯೋತ್ಪತ್ತಿ: ಕೆ.ಪಿ.ಎಂ.ಗಣೇಶಯ್ಯ

ಭವದ್ಭಿಃ ಶುಚಿಭಿರ್ಭೂತ್ವಾ ತಥಾವಹಿತಮಾನಸೈಃ|  ಶ್ರೂಯತಾಂ ನಾಟ್ಯವೇದಸ್ಯ ಸಂಭವೋ ಬ್ರಹ್ಮನಿರ್ಮಿತಃ| -ನಾಟ್ಯಶಾಸ್ತ್ರ  ನಾಟ್ಯದ ಉತ್ಪತ್ತಿ ಎಂಬುದು ಹೇಗಾಯ್ತು? ನಾಟ್ಯ ವಿಶಾರದ ಭರತಮುನಿಯನ್ನು ಆತ್ರೇಯ ಮೊದಲಾದ ಋಷಿಗಳು ಪ್ರಶ್ನಿಸಿದರು. ಪೂರ್ವದಲ್ಲಿ ಸ್ವಾಯಂಭುವ ಮನ್ವಂತರದಲ್ಲಿ ಕೃತಯುಗ ಮುಗಿದು ವೈವಸ್ವತ ಮನ್ವಂತರದ ತ್ರೇತಾಯುಗ ಆರಂಭವಾಗುವ ಮಧ್ಯಂತರದಲ್ಲಿ ಜನರು ಕಾಮಲೋಭಗಳಲ್ಲಿ ಅಸಭ್ಯರಾಗಿ ವರ್ತಿಸುತ್ತಿದ್ದರು. ಇಂದ್ರನನ್ನು ಮುಂದೆ ಮಾಡಿಕೊಂಡ ದೇವತೆಗಳು ಬ್ರಹ್ಮನಲ್ಲಿಗೆ ಬಂದು ವೇದಗಳು ಶೂದ್ರಜಾತಿಗಳಿಗೆ ನಿಷಿದ್ಧವಾದುದರಿಂದ ಎಲ್ಲ ಜಾತಿ (ವರ್ಣ)ಗಳಿಗೆ ಲಭ್ಯವಾಗುವಂತಹ ಐದನೆಯ ವೇದವನ್ನು ರಚಿಸುವಂತೆ ಭಿನ್ನವಿಸಿದರು. ಅದರಂತೆ ಬ್ರಹ್ಮನು ಋಗ್ವೇದದಿಂದ ಸಂಭಾಷಣೆಗಳಿಂದ ಕೂಡಿದ … Read more

ಅಜ್ಜಿಯ ಕತೆ: ಪದ್ಮಾ ಭಟ್, ಇಡಗುಂದಿ.

                 ಒಂದಾನೊಂದು ಕಾಲದಲ್ಲಿ ಒಂದೂರಲ್ಲಿ.. ಎಂದೇ ಆರಂಭವಾಗುತ್ತಿದ್ದ ಅಜ್ಜಿಯ ಕತೆಯು ಯಾವುದೋ ನೀತಿ ಪಾಠದೊಂದಿಗೋ ಜೀವನ ಮೌಲ್ಯಗಳೊಂದಿಗೋ ಮುಗಿಯುತ್ತಿದ್ದವು. ದಿನದ ಎಲ್ಲಾ ಚಟುವಟಿಕೆಗಳಲ್ಲಿ ಕತೆಯೂ ಸಹ ಒಂದಾಗಿತ್ತು. ರಾಮಾಯಣ ಮಹಾಭಾರತದಂತಹ ಪಾತ್ರಗಳು ಮಕ್ಕಳ ಪಾಲಿನ ಹೀರೋಗಳಾಗಿರುತ್ತಿದ್ದವು. ಅಜ್ಜಿ ಅಜ್ಜಿ ಕತೆ ಹೇಳಜ್ಜಿ ಎಂದ ಕೂಡಲೇ ಒಂದು ಚೂರೂ ಬೇಸರ ಮಾಡಿಕೊಳ್ಳದೆ ಹೇಳುತ್ತಿದ್ದಳು. ಇಡೀ ದಿನವೂ ಯಾವುದೋ ಕೆಲಸಗಳಿಂದಲೋ ಅಥವಾ ಇನ್ಯಾವುದರಿಂದಲೋ ಬ್ಯೂಸಿಯಾಗಿರುತ್ತಿದ್ದ ಅಜ್ಜಿಗೂ ಮೊಮ್ಮಕ್ಕಳಿಗೆ ಕತೆ ಹೇಳುವುದೆಂದರೆ … Read more

ಒಂಟಿ ಬದುಕಿನ ದುರಂತ: ಅಖಿಲೇಶ್ ಚಿಪ್ಪಳಿ

ಆಂಡ್ಯಾಯ್ಡ್, ಲ್ಯಾಪ್‍ಟಾಪ್, ವೈಫೈ ಇವತ್ತು ಏನೆಲ್ಲಾ ಇವೆ. ಪ್ರಪಂಚವೇ ಅಂಗೈಲಿದೆ. ಕುಳಿತಲ್ಲೇ ಏನೂ ಬೇಕಾದರೂ ಮಾಡಬಹುದಾದ ಕಾಲ. ಆನ್‍ಲೈನ್‍ಲ್ಲೇ ಆರ್ಡರ್ ಮಾಡಿ ಬೇಕಾದ್ದನ್ನು ಪಡೆಯುವ ಕಾಲ. ನೆಂಟರಿಷ್ಟರಿಲ್ಲದೆ, ಬಂಧು-ಬಳಗವಿಲ್ಲದೆ, ಸ್ನೇಹಿತರ ಹಂಗಿಲ್ಲದೆ ಬದುಕಿಬಾಳಬಹುದಾದ ಕಾಲ. ಇಂತಹ ಸನ್ನಿವೇಶದಲ್ಲೇ ನಿಗೂಢ ರೀತಿಯಲ್ಲಿ ಸಾವಿಗೀಡಾಗಿ, 6 ವರ್ಷಗಳವರೆಗೂ ಯಾರ ಗಮನಕ್ಕೂ ಬಾರದೆ ಅಜ್ಞಾತವಾಗಿ ಕೊಳೆತು ಹೋದ ಒಂದು ಹೆಂಗಸಿನ ಕತೆಯಿದು. ಪಿಯಾ ಫಾರೆನ್‍ಕೋಫ್, 45 ವರ್ಷದ ಈ ಮಹಿಳೆ ಕುಟುಂಬದಿಂದ ಪರಿತ್ಯಕ್ತ ವiಹಿಳೆಯಾಗಿದ್ದಳು,  ತಂದೆ-ತಾಯಿಯಿಂದ ಬೇರೆಯಾಗಿದ್ದ ಪಿಯಾಳಿಗೆ ಮದುವೆಯಾಗಿರಲಿಲ್ಲ. ಅದೊಂದು … Read more

ಸಾಮಾನ್ಯ ಜ್ಞಾನ (ವಾರ 51): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಕರ್ನಾಟಕದ ಗತವೈಭವ ಕೃತಿಯ ಕರ್ತೃ ಯಾರು? 2.    ಕರ್ನಾಟಕದಲ್ಲಿ ಪ್ರಥಮ ಏಕೀಕರಣ ಸಮ್ಮೇಳನ ನಡೆದ ಸ್ಥಳ ಯಾವುದು? 3.    ಕರ್ನಾಟಕ ಏಕೀಕರಣ ಮಹಾಸಮಿತಿಯ ಪ್ರಥಮ ಅಧ್ಯಕ್ಷರು ಯಾರು? 4.    ಅಂಕೋಲಾ ಉಪ್ಪಿನ ಸತ್ಯಾಗ್ರಹದ ಪ್ರಮುಖ ಪಾತ್ರದಾರಿ ಯಾರು? 5.    ಅರ್ಕೇಶ್ವರ ಲಿಂಗ ಇದು ಯಾರ ಅಂಕಿತನಾಮವಾಗಿದೆ? 6.    ವಿಂಗ್ಸ್ ಆಫ್ ಫೇರ್ ಕೃತಿಯ ಕರ್ತೃ ಯಾರು? 7.    ಭೌಗೋಳಿಕವಾಗಿ ವಿಶ್ವದಲ್ಲಿ ಹೆಚ್ಚು ಭೂ ಪ್ರದೇಶವನ್ನು ಹೊಂದಿರುವ ಭೂ ಖಂಡ ಯಾವುದು? 8.    ಮೌರ್ಯ ಸಾಮ್ರಾಜ್ಯದಲ್ಲಿ … Read more

ದೇಹವೆಂಬೋ ಮೋಟುಗೋಡೆಯ ಮೀರಿ..: ಮೌಲ್ಯ ಎಂ.

                                                       ಕವಿತೆ ಆತ್ಮದ ನಾದ. ಅದ್ಯಾಕೆ ದೇಹದ ಮೇಲೆಯೇ ಉರುಳಿಸುತ್ತಾರೋ.? ಅಂಗಾಂಗಕ್ಕೂ, ಅಂತರಂಗಕ್ಕೂ ಪರದೆ ತೀರ ಕಲಸಿ ಹೋಗುವಷ್ಟು ತೆಳುವಾ..? ಯಾಕೆ ಈವತ್ತಿನ ಪದ್ಯಗಳು ಕೇವಲ Anotomical description ಗಳಾಗುತ್ತಿವೆ? ಲಜ್ಜೆ ಈವತ್ತಿನ ದಿನಮಾನಕೆ ಒಂದು ಅನಗತ್ಯ ಸಂಗತಿಯೇ? ಅಥವಾ … Read more

ಶಂಕರ್ ನಾಗ್ ಇನ್ನು ಬದುಕ್ಕಿದ್ದಾರೆ: ಮುಕುಂದ್ ಎಸ್..

"ನಲಿವ ಗುಲಾಬಿ ಹೂವೇ…" ಎಂದು ಪಕ್ಕದಲ್ಲಿದ್ದ ಗೆಳೆಯ ಒಂದೇ ಸಾಲನ್ನು ಮಂತ್ರದಂತೆ ಪಠಿಸುತ್ತಿದ್ದ. ನಾನು ಅವನನ್ನು ಎಚ್ಚರಿಸಿ, "ಕೇಳಿಸಿಕೊಳ್ಳೋ, ಶಂಕರಣ್ಣನ ಹೆಂಡ್ತಿ ಮಾತಾಡ್ತಿದ್ದಾರೆ" ಎಂದೆ. ಅವನಿಗೆ ನನ್ನ ಮಾತು, ಅರುಂಧತಿನಾಗ್ ರವರ ಮಾತು ಎರಡೂ ಬೇಡವಾಗಿತ್ತು. ಅವನಿಗೆ ಶಂಕರ್ ನಾಗ್ ನೆನಪು ಆ ಸಂಜೆಗೆ ಸಾಕಾಗಿತ್ತು. ಅಂತಹ ಸುಂದರ ಸಂಜೆಯಲ್ಲಿ ಡಿವಿಸ್ ಕಾಲೇಜಿನಲ್ಲಿ ಹುಡುಗ-ಹುಡುಗಿಯರನ್ನು ಉದ್ದೇಶಿಸಿ, "ಆ ಹುಡುಗನ ಹೆಸರಲ್ಲಿ ಒಂದು ರಂಗಮಂದಿರವನ್ನು ಕಟ್ಟಬೇಕು. ನನ್ನ ಹತ್ತಿರ ಯೋಜನೆ ತಯಾರಾದ ಮೇಲೆ ಮತ್ತೆ ನಿಮ್ಮ ಮುಂದೆ ಬಂದು, … Read more

ಹೋಳಿಗೆಯೂ … ಹಳೇ ಪೇಪರ್ರೂ ..: ಅನಿತಾ ನರೇಶ್ ಮಂಚಿ

ಚಿಕ್ಕಮ್ಮ ಬಂದು ಗುಟ್ಟಿನಲ್ಲಿ ಎಂಬಂತೆ ನನ್ನನ್ನು ಕರೆದು ಹೋಳಿಗೆ ಕಟ್ಟು ಕಟ್ಟಿಡ್ತೀಯಾ.. ಎಂದಳು. ಚಿಕ್ಕಪ್ಪನ ಕಡೆಗೆ ನೋಡಿದೆ. ಐವತ್ತು, ಮತ್ತೊಂದು ಹತ್ತು  ಎಂಬಂತೆ ಸನ್ನೆ ಮಾಡಿದರು.  ಸರಿ .. ನಮ್ಮ ಬಳಗ ಸಿದ್ದವಾಯ್ತು. ಈ ರಹಸ್ಯ ಕಾರ್ಯಕ್ಕೆಂದೇ ಒಂದು ಪುಟ್ಟ ಕೋಣೆಯಿತ್ತು. ನಾವಲ್ಲಿಗೆ ಸೇರಿ  ಕಾಲು ಚಾಚಿ ಕುಳಿತುಕೊಂಡೆವು.  ಅಲ್ಲೇ ಇದ್ದ ಚಿಕ್ಕಪ್ಪನ ಮಗ ನಮ್ಮ ಸಹಾಯಕ್ಕೆ ಸಿದ್ಧನಾದ.  ಪೇಪರ್ , ಪ್ಲಾಸ್ಟಿಕ್ ಕವರ್, ಹೋಳಿಗೆಯ ಗೆರಸೆ ತಂದಿಡು ಎಂದೆವು.  ಎಲ್ಲವೂ ಒಂದೊಂದಾಗಿ ನಮ್ಮೆದುರು ಪ್ರತ್ಯಕ್ಷವಾಯಿತು.   … Read more

ನೊಬೆಲ್ ಪ್ರಶಸ್ತಿ – ೨೦೧೪: ಜೈಕುಮಾರ್. ಹೆಚ್. ಎಸ್.

ಭೌತವಿಜ್ಞಾನ: ನೀಲಿ ವರ್ಣದ ಬೆಳಕು ಆವಿಷ್ಕಾರ ಮಾಡಿದ ವಿಜ್ಞಾನಿಗಳಿಗೆ ಕಡಿಮೆ ವಿದ್ಯುತ್‌ನಿಂದ ಹೆಚ್ಚಿನ ಬೆಳಕು ನೀಡುವ ದೀಪಗಳಿಗಾಗಿ ಶೋಧನೆ ನಿರಂತರವಾಗಿ ನಡೆಯುತ್ತಲೇ ಇದೆ. ೨೦ ನೇ ಶತಮಾನದಲ್ಲಿ ಇನ್‌ಕ್ಯಾಂಡಿಸೆಂಟ್ ಎಂದು ಕರೆಯಲಾಗುವ ಬಲ್ಬ್ ಗಳದೇ ಪಾರುಪತ್ಯ. ಇಂದಿಗೂ ನಮ್ಮ ಬಹುತೇಕ ಮನೆಗಳಿಂದ ಇವು ಕಣ್ಮರೆಯಾಗಿಲ್ಲ. ಇದರಲ್ಲಿ ಟಂಗಸ್ಟನ್ ಫಿಲಮೆಂಟ್ ಇದ್ದು, ಫಿಲಮೆಂಟ್ ಕಾದ ನಂತರ ಬೆಳಕನ್ನು ನೀಡಲಾರಂಭಿಸುತ್ತವೆ. ಆಮೇಲೆ ಟ್ಯೂಬ್‌ಲೈಟ್ (ಪ್ಲೋರೋಸೆಂಟ್) ದೀಪಗಳು ಬಂದವು. ಇದರಲ್ಲಿ ಪಾದರಸದ ಅನಿಲದ ಬಾಷ್ಪಗಳು ವಿದ್ಯುತ್ ಸರಬರಾಜಿನಿಂದ ಕಾದು ರಂಜಕದ ಕೋಟಿಂಗ್‌ನ್ನು … Read more

ನಿಮ್ಮ ಗಮನಕ್ಕೆ…

ಅದ್ವೈತ ಪ್ರಕಾಶನ, ಬೆಂಗಳೂರು ಇವರು ಪ್ರಥಮ ಬಾರಿಗೆ ಕನ್ನಡ ಕವಿತೆಗಳ ಆಂಡ್ರಾಯ್ಡ್ ಆ್ಯಪ್ ಒಂದನ್ನು ಅಭಿವೃದ್ದಿ ಮಾಡಿದ್ದಾರೆ. ಈ ಆಂಡ್ರಾಯ್ದ್ ಆ್ಯಪ್ ಅನ್ನು ಗೂಗಲ್ ಸ್ಟೋರ್ಸ್ ನಲ್ಲಿ ಉಚಿತವಾಗಿ ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಆ್ಯಪ್ ನಲ್ಲಿ 25 ಕನ್ನಡ ಕವಿಗಳ ಸುಮಾರು 75 ಕವಿತೆಗಳು ಓದಲು ಸಿಗುತ್ತವೆ. ಈ ಕವಿತೆಗಳಿಗೆ ಪೂರಕವಾಗುವಂತೆ ಉತ್ತಮ ರೇಖಾಚಿತ್ರಗಳು ಸಹ ಈ ಆ್ಯಪ್ ನಲ್ಲಿ ನೋಡಲು ಲಭ್ಯವಿವೆ.  ವಿದ್ಯಾಶಂಕರ್ ಹರಪನಹಳ್ಳಿಯವರ ನೇತೃತ್ವದಲ್ಲಿ ಮೂಡಿಬಂದಿರುವ ಈ ಪ್ರಾಜೆಕ್ಟ್ ಗೆ ಸಂಬಂಧಿಸಿದಂತೆ ಮಾಹಿತಿ … Read more

ಇಂಗು ತೊಂಡೆ ಇದ್ದರೆ…: ಮಾಲಾ

ಅಂಗಡಿಯಿಂದ ತರಕಾರಿ ತರುವುದು ಬಲು ಸುಲಭ. ಕೈಯಲ್ಲಿ ದುಡ್ಡಿದ್ದರೆ ಸಾಕು. ಆದರೆ ತರಕಾರಿ ಬೆಳೆಯುವುದು ಅಷ್ಟು ಸುಲಭದ ಕೆಲಸವಲ್ಲ. ನಮ್ಮ ಹಿತ್ತಲಲ್ಲಿ ತರಕಾರಿ ಬೆಳೆಯಲು ಎಷ್ಟೋ ಸಲ ನಾನೂ ಪ್ರಯತ್ನಿಸಿದ್ದೆ. ಹಳ್ಳಿಯಿಂದ ಪೇಟೆಗೆ ಬಂದ ನಾನು ಕೆಲವಾರು ವರ್ಷ ಮಣ್ಣಿನ ನಂಟು ಬೆಳೆಸಿದ್ದೆ. ಬೀನ್ಸ್, ಬೆಂಡೆ, ಬದನೆ ಬೀಜ ಹಾಕಿ ಅದು ಸಸಿಯಾಗಿ ಅರಳಿ ನಿಂತಾಗ ಸಂಭ್ರಮಿಸಿದ್ದೆ. ಕೇವಲ ಒಂದೆರಡು ಕಾಯಿ ಬಿಟ್ಟು ಅದನ್ನೇ ಖುಷಿಯಿಂದ ಅಡುಗೆ ಮಾಡಿ ತಿಂದದ್ದು ಇತ್ತು. ನಾವೇ ಬೆಳೆದ ತರಕಾರಿ ತಿನ್ನುವಾಗ … Read more

“ಭವಿಷ್ಯ”ದ ಜಗುಲಿಕಟ್ಟೆ​ಯಲ್ಲಿ ಅನಿರೀಕ್ಷಿತ​ವಾಗಿ ಕುಳಿತು: ಅಮರ್ ದೀಪ್ ಪಿ.ಎಸ್.

ತಮಾಷೆ ಅನ್ನಿಸಿದರೂ ಕಿವಿಗೆ ಬಿದ್ದ ಒಂದು ಪ್ರಸಂಗ ಹೇಳಿಬಿಡುತ್ತೇನೆ.  ಒಂದಿನ ಸಂಜೆ ಪೂರ್ಣ ಬೆಳಕಿಲ್ಲದ  ದೊಡ್ಡ ಅಂಕಣದ ಕೋಣೆಯಲ್ಲಿ ಅಲ್ಲೊಂದು ಇಲ್ಲೊಂದು ದೀಪ ಹಚ್ಚಿಟ್ಟಂತಿದ್ದ  ಬೆಳಕಲ್ಲಿ  ಕುಳಿತು ಗುಸು ಗುಸು ಮಾತಾಡುವ ಮಂದಿ ಮಧ್ಯೆ ಅತ್ತಿಂದಿತ್ತ ತಿರುಗುವ ಹುಡುಗನೊಬ್ಬ. ಮಾತಾಡುವ ಗುಂಪಿನಲ್ಲಿ ಒಬ್ಬ ಧಡೂತಿ ಮನುಷ್ಯನೊಬ್ಬ   ಹುಡುಗನನ್ನು ಕರೆದು "ಏನ್ ತಮ್ಮಾ ನಿನ್ ಹೆಸ್ರು?" ಕೇಳಿದ.   ಈ ಹುಡುಗ "ಬಿರಾದರ" ಅಂದ.  "ಸರಿ, ಈ  ತುಂಡು ಪೇಪರ್ ಮೇಲೆ ನಿನ್ ಹೆಸ್ರು ಬರ್ದು ಸೈನ್ … Read more

ವಿದ್ಯಾರ್ಥಿಗಳ ಭವಿಷ್ಯವನ್ನು ಮಾರಕಗೊಳಿಸುತ್ತಿರುವ ಮಾದಕ ವಸ್ತುಗಳು: ಸುವರ್ಣ ಶಿ. ಕಂಬಿ

  "ಇಂದಿನ ಮಕ್ಕಳೇ ನಾಳಿನ ಪ್ರಜೆಗಳು", "ಇಂದಿನ ಯುವಕರೇ ನಾಳಿನ ನಾಗರಿಕರು" ಎನ್ನುವ ಮಾತು ಸತ್ಯ. ವಿದ್ಯಾರ್ಥಿಗಳು ನಮ್ಮ ದೇಶದ ಸಂಪತ್ತು. ನಮ್ಮ ದೇಶದ ಭವಿಷ್ಯ ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ವಿದ್ಯಾರ್ಥಿಗಳ ಕೈಯಲ್ಲಿದೆ. ಯುವಶಕ್ತಿ ದೇಶದ ಶಕ್ತಿಯಾಗಿದೆ. ನಾಡಿನ ಆಸ್ತಿಯಾದ ಈ ವಿದ್ಯಾರ್ಥಿಗಳನ್ನು ಸನ್ಮಾರ್ಗದೆಡೆಗೆ ಒಯ್ಯುವ ಗುರುತರ ಜವಾಬ್ದಾರಿ ತಂದೆ-ತಾಯಿ, ಶಿಕ್ಷಕರ, ಸಮಾಜದ, ಸರಕಾರದ ಮೇಲಿದೆ. ಇದು ಆಧುನಿಕ ಯುಗ. ಮನುಷ್ಯ ವೈಜ್ಞಾನಿಕ, ವೈಚಾರಿಕ, ತಂತ್ರಜ್ಞಾನ, ವೈದ್ಯಕೀಯ ಮುಂತಾದವುಗಳಿಗೆ ಸಂಬಂಧಿಸಿದಂತೆ ತುಂಬಾ ಮುಂದುವರೆದಿದ್ದಾನೆ. ಅನೇಕ ಸಂಶೋಧನೆಗಳನ್ನು … Read more

ಜಾತ್ರಿ ಜೊತಿಗಿನ ನೆನಪಿನ ಬುತ್ತಿ…: ನಾರಾಯಣ ಬಾಬಾನಗರ

ಜಾತ್ರೆ ಅಂದರ..ನಿಮಗೆ ಏನ ನೆನಪಾಗತೈತಿ?ಹಿಂಗ ನಿಮಗ ಯಾರರ ಕೇಳಿದರ..ಮಿಠಾಯಿ ಮಾರುವ ಅಂಗಡಿ,ಫುಗ್ಗಾ ಮಾರುವವನು ಬಲೂನಿಗೆ ಗಾಳಿ ತುಂಬುವ ಮುಖ,ಆಟಿಕಿ ಸಾಮಾನುಗಳನ್ನು ಹರಡಿಕೊಂಡು ಕುಳಿತ ಅಜ್ಜಿ,ಬಣ್ಣದ ಶರಬತ್ ಮಾರಕೋತ ನಿಂತವನ ಕೂಗು,ಎಣ್ಣಿಯೊಳಗ ಭಜಿ ಕರಕೋತ ಕುಂತವಳು ಒಂದ ಕೈಯಿಂದ ಕಡಾಯಿಯೊಳಗ ಭಜಿ ಕರೀತಿದ್ದರ ಇನ್ನೊಂದ ಕೈಯಿಂದ ಹಂಗ ಹಣೀ ಮ್ಯಾಲಿಂದ ಕೆಳಗ ಇಳೀತಿದ್ದ ಬೆವರನ್ನ ಒರಿಸಿಕೊಂತ ಕುಂತ ಚಿತ್ರಗಳು….ಅಬ್ಬಾ ಜನ ಜಂಗುಳಿ!! ಅಂಥಾದರಾಗ ಅವ್ವನ ಜೊತಿ ಜಾತ್ರಿಗಿ ಬಂದ ಪುಟ್ಟ ಪೋರಿ ತನ್ನ ಅವ್ವಳಿಂದ ತಪ್ಪಿಸಿಕೊಂಡು ರೊಯ್ಯನೆ ಅಳಕೋತ … Read more