ಮೂವರ ಕವಿತೆಗಳು: ವಿಲ್ಸನ್ ಕಟೀಲ್, ವಾಮನ ಕುಲಕರ್ಣಿ, ಅಕ್ಷಯ ಕಾಂತಬೈಲು
ಅಸ್ಪೃಶ್ಯರು ಎಲೆಗಳುದುರಿದ ಒಣ ಕೊಂಬೆಗೆ ಜೋಡಿ ಬಾವಲಿ ಜೋತು ಬಿದ್ದಂತೆ ಎದ್ದು ಕಾಣುವ ನಿನ್ನ ಪಕ್ಕೆಲುಬುಗಳಿಗೆ ಬತ್ತಿ ಹೋದ ಸ್ಥನಗಳು ನನ್ನ ಬೆರಳುಗಳೂ ಅಂತೆಯೇ ಎಲುಬಿನ ಚೂರುಗಳಿಗೆ ತೊಗಲುಡಿಸಿದಂತೆ ಮಾಂಸಲವೇನಲ್ಲ ನಮ್ಮಿಬ್ಬರ ಮಿಲನ ರಮ್ಯವಲ್ಲ; ನವ್ಯ ಮಾಂಸಖಂಡಗಳ ಪ್ರಣಯದಾಟವಲ್ಲ ಅದು, ಮೂಳೆ-ತೊಗಲಿನ ಸಂಘರ್ಷ! *** ವಿದ್ಯುತ್ತಂತಿ ಸ್ಪರ್ಶಿಸಿ ಸತ್ತ ಬಾವಲಿಯ ರೆಕ್ಕೆಯನ್ನು ತೆಂಗಿನ ಚಿಪ್ಪಿಗೆ ಬಿಗಿದು ಕಟ್ಟಿ ರಚಿಸಿದ ಪುಟ್ಟ ಡೋಲು ಬಾರಿಸುತ್ತಿದ್ದಾನೆ ನನ್ನ ಮುದ್ದು ಮಗ ಸವೆದ ಪಕ್ಕೆಲುಬುಗಳಂತಿರುವ ಚೋಟುದ್ದ ಬೆತ್ತಗಳಿಂದ ಬಾವಲಿಯ ರೆಕ್ಕೆಗೆ ಬಡಿಯುವಾಗ … Read more