ಮರೆವು: ವೆಂಕಟೇಶ್ ಪ್ರಸಾದ್

ಹಿ೦ದಿನ ದಿನ ಅಲರಾ೦ ಇಡಲು ಮರೆತ ತಪ್ಪಿಗೆ ಇ೦ದು ತಡವಾಗಿ ಏಳುವ೦ತಾಗಿತ್ತು.ಎದ್ದವನೇ ದೈನ೦ದಿನ ಕೆಲಸ ಕಾರ್ಯಗಳನ್ನು ಪೂರೈಸಿ ಆಫೀಸಿಗೆ ಹೊರಟು ಈ ಮರೆವಿಗೆ ಶಪಿಸುತ್ತಾ ಬಸ್ ಹತ್ತಿದ ನ೦ತರವೇ ಧೀರ್ಘವಾಗಿ ಉಸಿರು ತೆಗೆದುಕೊ೦ಡದ್ದು. ಅತ್ತ ತಿರುಗಿದರೆ ಕ೦ಡಕ್ಟರ್ ಟಿಕೆಟ್ ಟಿಕೆಟ್ ಎ೦ದು ನಿ೦ತಿದ್ದ. ಪಾಸ್ ತೋರಿಸೋಣ ಕಿಸೆ ಬ್ಯಾಗ್ ತಡಕಾಡಿದರೆ ಎಲ್ಲಿದೇ?? ಪಾಸ್ ಮನೆಯಲ್ಲೇ ಮರೆತಿದ್ದೆ. ಮತ್ತೆ ಮರೆವಿಗೊ೦ದಷ್ಟು ಶಾಪ ಹಾಕಿ ಪೂಒರ್ತಿ ಬಸ್ ಚಾರ್ಜ್ ಕೊಟ್ಟು ಕಿಟಕಿಯತ್ತ ಮುಖ ಮಾಡಿದೆ.  ಈ ಮರೆವಿನ ವಿಷಯ ಬ೦ದಾಗ … Read more

ಒಂದಿಷ್ಟು ಪುಟ್ಟ ಕತೆಗಳು:ಸುಚಿತ್ರ ಕೆ. ಕಾವೂರು.

ಎರಡು ಕೋಮಿನ ಜನರ ನಡುವೆ ಜಗಳ ಆರಂಭವಾಗಿತ್ತು..  ಕಾರಣ ತಮ್ಮ ಧರ್ಮದ ಭಿತ್ತಿ ಪತ್ರ ಅಂಟಿಸಿ ಅಪ ಪ್ರಚಾರ ಮಾಡಿದರೆಂದು… ಒಂದು ಆಡು ಬಂದು ಆ ಭಿತ್ತಿಪತ್ರವನ್ನು ನಿಧಾನವಾಗಿ ಹರಿದು ಮೆಲ್ಲತೊಡಗಿತು..  ***** ಅಣ್ಣ ತನ್ನ ತಂಗಿಯ ಗಂಡನ ಮನೆಯ ಪರಿಸ್ಥಿತಿ ಬಗ್ಗೆ ಹೆಂಡತಿ ಜೊತೆ ಹೇಳಿ ವ್ಯಥೆ ಪಡುತ್ತಿದ್ದ…ಆದರೆ ಹೆಂಡತಿ ತನ್ನ ಮನೆಯಲ್ಲಿ ನರಕ ಅನುಭವಿಸುವುದ ಕಂಡೂ ಕಾಣದಂತೆ ನಟಿಸುತ್ತಿದ್ದ. ***** ಅಮ್ಮ ನಿನ್ನ ಸೊಸೆಯನ್ನು ಹದ್ದುಬಸ್ತಿನಲ್ಲಿಡು ಇಲ್ಲಾಂದ್ರೆ ನಿನ್ನ ಮೂಲೆಗೆ ಹಾಕಿಯಾಳು ಎಂದು ಅತ್ತೆಯನ್ನು … Read more

ಶರಧಿಯ ದಡದಲ್ಲಿ ಪ್ರೀತಿಯ ಕನಸು:ಪದ್ಮಾ ಭಟ್ ಇಡಗುಂದಿ

ಮುಸ್ಸಂಜೆಯ ಸೂರ್ಯನ ಅಂತಿಮ ಹೊತ್ತು, ಕೆಂಪು ಕಿರಣ ಮೊಗದಲ್ಲಿ ಬೀಳುತ್ತಿರಲು, ಬೇಡವೆಂದರೂ ಕಂಗಳು ಮುಚ್ಚಿದವು. ಅದೇ ತಾಮುಂದು ತಾಮುಂದೆ ಎಂದು ಓಡಿ ಬರುತ್ತಿರುವ ಅಲೆಗಳು. ಸಮುದ್ರದಂಡೆಯ ಮೇಲೊಂದು ಪುಟ್ಟ ಸ್ವರ್ಗಲೋಕ.. ಹಕ್ಕಿಗಳ ಇಂಚರಕ್ಕೆ ಧ್ವನಿಯಾಗುವ ಹೃದಯಗೀತೆ. ಕನಸುಗಳನೆಲ್ಲ ಬಿಚ್ಚಿ ಹರವಿ ಹಾಕಿಕೊಂಡ ಕಂಗಳಿಗೆ ನಕ್ಷತ್ರದಂತಹ ಹೊಳಪು. ಯೌವನದ ಬೆಚ್ಚಗಿನ ಕನಸುಗಳು. ತಂಪು ತಂಗಾಳಿ ಮಿಶ್ರಿತ ಆ ಇಳಿಸಂಜೆಯಲ್ಲಿ ತುಸು ಬೆಳಕು ಕಂಡಂತೆ ಮತ್ತಷ್ಟು ಸೊಗಸು. ಸಿಹಿತನದಲ್ಲಿ ಬೊಂಬಾಯಿ ಮಿಠಾಯಿ ಮಾರುವವನ ಗಾಡಿಯ ಗಂಟೆಯ ಸದ್ದು… ಇತ್ತ ಇನ್ನೊಂದು … Read more

ಸಾಮಾನ್ಯಜ್ಞಾನ ಪ್ರಶ್ನೋತ್ತರಗಳು: ಮಹಂತೇಶ್ ಯರಗಟ್ಟಿ

ಪ್ರಶ್ನೆಗಳು : ೧.    ನಡೆದಾಡುವ ವಿಶ್ವಕೋಶ ಎಂದು ಕರೆಸಿಕೊಳ್ಳುವ ಕನ್ನಡದ ಲೇಖಕರು ಯಾರು? ೨.    ಅತೀ ಹೆಚ್ಚು ತೆಂಗು ಉತ್ಪಾದಿಸುವ ರಾಜ್ಯ ಯಾವುದು? ೩.    ಉಪಲಬ್ಧವಿರುವ ಕನ್ನಡದ ಮೊದಲ ಶಾಸನ ಯಾವುದು? ೪.    ೧೯೮೩ರಲ್ಲಿ ಯಶವಂತ ಚಿತ್ತಾಲರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೫.    ಪಾರ್ಸಿ ಧರ್ಮದ ಸಂಸ್ಥಾಪಕರು ಯಾರು? ೬.    ಕನ್ನಡದ ಜಾನಪದ ಕ್ಷೇತ್ರದಲ್ಲಿ ಪ್ರಥಮ ಡಾಕ್ಟರೇಟ್ ಪದವಿ ಪಡೆದವರು ಯಾರು? ೭.    ಮೊಟ್ಟ ಮೊದಲು ಕಂಡು ಹಿಡಿದ ಕೃತಕ ದಾರ … Read more

ಅತಿಥಿ ಸಂಪಾದಕರ ನುಡಿ

ನಮಗೆ ನಾಳೆಗಳಿಲ್ಲ, ಏಕೆಂದರೆ ಈ ನೆಲದಲ್ಲಿ ಮಕ್ಕಳಿಗೆ ನಾವು ಭವಿಷ್ಯ ಉಳಿಸುತ್ತಿಲ್ಲ. ಮಹಾಮಾರಿಯೊಂದರಂತೆ ಈ ದಿನಗಳನ್ನು ಸಂಪೂರ್ಣವಾಗಿ ಆವರಿಸಿಕೊಂಡಿರುವ ’ ಮಕ್ಕಳ ಮೇಲಿನ ದೌರ್ಜನ್ಯ’ ಎನ್ನುವ ಮನೋಭಾವದೆಡೆಗೆ ನನ್ನ ಧಿಕ್ಕಾರವಿರಿಸಿಯೇ ಈ ಸಂಚಿಕೆಯನ್ನು ನಿಮ್ಮ ಮುಂದೆ ಇರಿಸಲಾಗಿದೆ. ಜಗತ್ತಿನ ಯಾವ ಮಗುವಿನ ಯಾವುದೇ ನೋವಿಗೂ ಕುಳಿತಲ್ಲೇ ಮಮ್ಮಲ ಮರುಗುವ, ಮಾತ್ರವಲ್ಲ ಮಕ್ಕಳ ಕಣ್ಣೀರು ಒರೆಸಲು ತನ್ನ ಕೈಲಾದಷ್ಟು ಕೆಲಸವನ್ನೂ ಮಾಡುವ ಪಪ್ಪನ ಮಗಳಾಗಿ ಇಂತಹ ವಿಷಯದ ಬಗ್ಗೆ ಸಂಚಿಕೆಯ ಸಂಪಾದಕತ್ವ ನನ್ನ ಪಾಲಿಗೆ ಬಂದದ್ದನ್ನು ಹೆಮ್ಮೆಯಿಂದಲೇ ಸ್ವೀಕರಿಸಿ … Read more

ಮಕ್ಕಳು, ಲೈಂಗಿಕ ದೌರ್ಜನ್ಯ ಮತ್ತು ಕಾನೂನು: ಅಂಜಲಿ ರಾಮಣ್ಣ

ಅಂತರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ದೇಶವು ಸಹಿ ಹಾಕಿ ದಶಕಗಳೇ ಸಂದಿವೆ. ಆದರ ಪ್ರಕಾರ ಮತ್ತು ನಮ್ಮ ಸಂವಿಧಾನದ ಮೂಲ ಆಶಯದಂತೆ ಮಕ್ಕಳ ಸಂರಕ್ಷಣೆ ನಮ್ಮ ಮೂಲಭೂತ ಕರ್ತವ್ಯವೇ ಆಗಿದೆ. ಅದಕ್ಕಾಗಿ ಸರ್ಕಾರಗಳು ಹಲವಾರು ವಿಶೇಷ ಕಾನೂನುಗಳನ್ನು ರಚಿಸಿರುವುದು ಮಾತ್ರವಲ್ಲ ಹಲವಾರು ಯೋಜನೆಗಳನ್ನೂ ರೂಪಿಸಿ ಜಾರಿಗೆ ತಂದಿವೆ. “ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ” ಎಂಬ  ದೂರದೃಷ್ಟಿಯಿಂದ  ಇಲಾಖೆಯ ನೀತಿ, ಯೋಜನೆಗಳು ಮತ್ತು ಕಾರ್ಯಕ್ರಮಗಳು ಮಕ್ಕಳ ಪರಿಪೂರ್ಣ ಅಬಿವೃದ್ಧಿಗಾಗಿ ಹೆಚ್ಚು ಒತ್ತು ನೀಡುತ್ತಿದ್ದು, ಇದರಲ್ಲಿ ಮಕ್ಕಳ … Read more

ಮಕ್ಕಳ ಬಾಳಿನ ಬೆಳಕಿನ ಪಂಜು ಆಗೋಣ: ನಟರಾಜು ಎಸ್. ಎಂ.

ಒಂದು ಭಾನುವಾರ ಬೆಳಿಗ್ಗೆ ಗೆಳತಿಯೊಡನೆ ಫೋನಿನಲ್ಲಿ ಮಾತನಾಡುತ್ತಿದ್ದಾಗ ಆಕೆ  "  ಇವತ್ತು ಒಂದು ನ್ಯೂಸ್ ನೋಡಿದೆ. ನಾಲ್ಕು ವರ್ಷದ ಹುಡುಗಿಯನ್ನು ಹತ್ತು ವರ್ಷದ ಹುಡುಗ ಅತ್ಯಾಚಾರ ಮಾಡಿದ್ದಾನೆ. ಆ ನ್ಯೂಸ್ ನೆನೆಸಿಕೊಂಡರೆ ಭಯ ಆಗುತ್ತೆ ಜೊತೆಗೆ ನಾವು ಯಾವ ಲೋಕದಲ್ಲಿ ಬದುಕುತ್ತಿದ್ದೇವೆ ಅಂತ ಅನಿಸುತ್ತೆ." ಎಂದು ಹೇಳಿ ಮೌನ ತಾಳಿದಳು. ಅವಳ ಮಾತುಗಳ ಕೇಳಿ ಮನಸ್ಸು ಒಂದು ಶೂನ್ಯ ಭಾವಕ್ಕೆ ಶರಣಾಗಿತ್ತು. ಕಾಕತಳೀಯವೆಂಬಂತೆ ಅಚನಕ್ಕಾಗಿ ಆ ದಿನವೇ ಜಿಲ್ಲಾ ಮಟ್ಟದ "ಮಕ್ಕಳ ಮೇಲಿನ ದೌರ್ಜನ್ಯ ತಡೆ" ಕುರಿತ … Read more

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಸಾಧ್ಯವೇ ? ಸಾಧುವೇ ?: ರಜನಿ ಆಚಾರ್ಯ

"Every soul is born divine" ಎನ್ನುತ್ತಾರೆ ವಿವೇಕಾನಂದರು. ಈ ಜಗತ್ತಿನಲ್ಲಿ ಹುಟ್ಟುವ ಪ್ರತಿ ಜೀವಿಯೂ ದೈವೀಕತೆಯ ಅಡಕಮುದ್ರೆಯೇ. ಆದರೆ ಆ ದೈವೀಕತೆಯ ರಾಗ ಸುಶ್ರಾವ್ಯವಾಗಿ ಹೊರಹೊಮ್ಮಿಸಲು ಪ್ರತಿ ಜೀವಿಯೂ ಅದಮ್ಯ ಆತ್ಮವಿಶ್ವಾಸದೊಂದಿಗೆ ಶೃತಿ ಸೇರಿಸಲೇಬೇಕು. ಅದಕ್ಕೆ ಮೊದಲ ಮೆಟ್ಟಿಲೇ ಬಾಲ್ಯ. ಪ್ರತಿ ಮಗುವಿನ ಮನಸ್ಸು ಬಾಲ್ಯದಲ್ಲೇ ಸರ್ವಾಂಗೀಣ ಅಭಿವೃದ್ಧಿ ಹೊಂದಿದರೆ ಮಾತ್ರ ಆ ಮಗು ಮುಂದೆ ಒಂದು ಆರೋಗ್ಯಕರ ಮನಸ್ಸನ್ನು ಹೊಂದಿ ದೈವೀಕತೆಯನ್ನು ಸಾಧಿಸುವೆಡೆ  ಎಡೆಯಿಡಬಲ್ಲದೇನೊ ಹಾಗೂ ಪ್ರಸ್ತುತ ಸಮಾಜದ ಸರ್ವತೋಮುಖ ಬೆಳವಣಿಗೆಯ ಕಣ್ಣುಗಳಾಗಿ ರಾಷ್ಟ್ರದ … Read more

ನಾನ್ಯಾವ ಜಾತಿ?: ಹೃದಯಶಿವ

ಅದೇಕೋ ನೆನಪಾಗುತ್ತಿದೆ. ಐದಾರು ವರ್ಷಗಳ ಹಿಂದೆ ನಾನು ಕಂಡ ಆ ನಾಲ್ವರು ಯುವಕರ ತಂಡ. ನನ್ನನ್ನು ಭೇಟಿ ಮಾಡಲು ಬಂದಿದ್ದರು. ಎಲ್ಲರೂ ಹೆಚ್ಚು ಕಮ್ಮಿ ಇಪ್ಪತ್ತು-ಇಪ್ಪತ್ತೆರಡರ ವಯೋಮಾನದವರು. ಅವರಿವರ ಕೈ ಕಾಲು ಹಿಡಿದು ನಾಲ್ಕು ಕಾಸು ಎತ್ತಿ ಬೆಂಗಳೂರಿನಲ್ಲಿ ತಮ್ಮ ಜಾತಿ ಹೆಸರಿನಲ್ಲಿ ಪುಟ್ಟದೊಂದು ಕಚೇರಿ ಆರಂಭಿಸಿದ್ದವರು. ಚಿಗುರುಮೀಸೆ, ಪ್ರಶಾಂತ ಕಣ್ಣು, ಚೇತೋಹಾರಿ ಮುಖದ ಉತ್ಸಾಹಿ ಹುಡುಗರು. ಕನಕಪುರ, ಮಳವಳ್ಳಿ, ಬನ್ನೂರು ಕಡೆ ಇಂಥವರು ಸಿಗುತ್ತಾರೆ. ಯಾರಿಗೂ ಪುಸ್ತಕಗಳ ನಂಟು ಇದ್ದಂತ್ತಿಲ್ಲ. ನನ್ನನ್ನು ಕಾಣಲೆಂದು ಬಂದರು. "ಈ … Read more

ಮಾನಸಿಕ ಆರೋಗ್ಯಕ್ಕೆ ಬೇಕು ಮಕ್ಕಳ ಹಕ್ಕುಗಳು: ಡಾ. ವಿನಯ ಎ.ಎಸ್.

ಮಕ್ಕಳ ಶೋಷಣೆ ಹಿಂಸೆ ಮತ್ತು ದಬ್ಬಾಳಿಕೆಗೆ ಮುಖ್ಯ ಕಾರಣವೆಂದರೆ ಅವರುಗಳನ್ನು  ವ್ಯಕ್ತಿಗಳೆಂದು ಗುರುತಿಸಿ  ಅವರಿಗೂ ತಮ್ಮದೇ ಅದ ಭಾವನೆಗಳಿರುತ್ತವೆಂದು ಅರಿಯದೆ ಇರುವುದು. ತಾಯಿ ತಂದೆಯರೂ ಸೇರಿದಂತೆ ಬಹಳ ಕಡೆ ಏಟು ಸಿಟ್ಟು ಹಿಂಸೆ ಮಾನಸಿಕ ಒತ್ತಡಕ್ಕೆ ಒಳಗಾಗುವ ಅದರಿಂದ ತಮ್ಮ ಮಾನಸಿಕ ಸಮತೋಲನ ಕಳೆದುಕೊಂಡ ಮಕ್ಕಳು ಒರಟಾಗಿ ಬಿಟ್ಟೂ ಅಗೌರವದಿ೦ದ, ಬದುಕಿನೆಡೆಗೆ ನಿರ್ಭಿಡೆಯಿಂದ ವರ್ತಿಸತೊಡಗುತ್ತಾರೆ. ಈ ಪರಿಸ್ಥಿಗೆ ಸಮಾಜದ ನಾವೆಲ್ಲಾ ಹೊಣೆಗಾರರು. ಮಕ್ಕಳನ್ನು ಪ್ರೀತಿ ಅನುಕಂಪ ಗೌರವದಿ೦ದ ಕಾಣುವುದು ನಮ್ಮ ಕರ್ತವ್ಯ. ಹಾಗೆಯೇ ಅವರಿಗೆ ಹಕ್ಕುಗಳ ಬಗ್ಗೆ … Read more

ವಿದೇಶದಲ್ಲಿ ಮಕ್ಕಳ ಹಕ್ಕುಗಳು- ಸ್ಥಿತಿಗತಿ: ಶಶಿ ರಾವ್

ಆಸ್ಟ್ರೇಲಿಯಾ ಮದುವೆಯನ್ನು ಒಂದು ಬಂಧನವೆಂದು ಅಷ್ಟಾಗಿ ಇಷ್ಟಪಡದ ದೇಶ. ಇಲ್ಲಿ ಮಗುವಿಗಾಗಿ ಮದುವೆಯೇ ಆಗಬೇಕಿಲ್ಲ, ಸಾಮಾನ್ಯವಾಗಿ ಇಲ್ಲಿನ ಜನ ಡಿಫ್ಯಾಕ್ಟೋ ಅಥವಾ ಬರಿಯ ಪಾರ್ಟನರ್ಸ್ ಆಗಿಯೇ ಬಹಳಷ್ಟು ವರ್ಷ ಜೊತೆಯಲ್ಲಿ ಕಳೆಯುತ್ತಾರೆ. ಸರಿ ಸುಮಾರು ೪/೫ ವರ್ಷಗಳ ನಂತರ ಕೂಡುಜೀವನದಲ್ಲಿ ಬೇಸರ ಬಂದೊಡನೆ ಪರಸ್ಪರ ಒಪ್ಪಂದದಿಂದಲೋ, ಕಚ್ಚಾಡುತ್ತಲೋ ಬೇರೆಯಾಗುತ್ತಾರೆ. ಈ ಮಧ್ಯೆ ಒಂದೆರಡು ಮಕ್ಕಳ ಹೆತ್ತಿರುತ್ತಾರಾದ್ದರಿಂದ ಆ ಮಕ್ಕಳನ್ನು ಒಂದು ವಸ್ತುವಿನಂತೆ ಪರಿಗಣಿಸಿ ಅವುಗಳ ಲಾಲನೆ ಪಾಲನೆ, ಬೆಳೆಯುವ ಸ್ಥಳ, ಯಾರೊಡನೆ ಬೆಳೆಯ ಬೇಕೆಂಬುದೆಲ್ಲ ಪರಸ್ಪರ ಚರ್ಚೆಯಿಂದಲೋ … Read more

ಮಕ್ಕಳ ಸಹಾಯಕ್ಕೆ ಸದಾ ಸಿದ್ದ ನಾವು ಮತ್ತು 1098: ರೂಪ ಸತೀಶ್

ಸೌಮ್ಯ : ಅಪ್ಪನ ಕುಡಿತಕ್ಕೆ, ಸಾಲಗಳಿಗೆ ಬಲಿಯಾಗಿ ನಗರದಲ್ಲಿ ಮನೆಕೆಲಸಕ್ಕಿರುವ ೮ ವರುಷದ ಬಾಲಕಿ.  ರಾಜು : ಹೆತ್ತವರ ಆರನೇ ಕುಡಿ, ವಯಸ್ಸು ೧೧! ತನ್ನೂರ ಬಿಟ್ಟು ನಗರಕ್ಕೆ ಬಂದು ಯಾವುದೋ ಟೀ ಅಂಗಡಿಯಲ್ಲಿ ಕೆಲಸಕ್ಕಿದ್ದಾನೆ.  ದೀಪ : ತಾನು ಕಲಿಯುತಿದ್ದ ಶಾಲೆಯ ಶಿಕ್ಷಕನಿಂದಲೇ ಲೈಂಗಿಕ ದೌರ್ಜ್ಯನಕ್ಕೊಳಗಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಪಡೆಯುತ್ತಿರುವ ಮುಗುದೆ.  ರವಿ : ಪರೀಕ್ಷೆಯಲ್ಲಿ ಕಡಿಮೆ ಅಂಕಗಳ ಪಡೆದ ಕಾರಣ ಅಮ್ಮ ಬೈದಳೆ೦ದು, ಸಮಾಜದ ಒತ್ತಡಕ್ಕೆ ಮಣಿದು ಆತ್ಮಹತ್ಯೆಗೆ ಶರಣಾದ ೧೪ ವರುಷದ ಬಾಲಕ.  ಚೈತ್ರ … Read more

ಮಕ್ಕಳ ಹಕ್ಕುಗಳ ಬಗ್ಗೆ ಸಾಮಾನ್ಯರ ತಿಳುವಳಿಕೆ ಏನು ?

          ಶ್ರೀಮತಿ ವೀಣಾ ಶಿವಣ್ಣ ಹೇಳುತ್ತಾರೆ, “ನನಗೆ ತಿಳಿದ ಮಟ್ಟಿಗೆ ಮಕ್ಕಳಿಗೆ ತಾವು ಬದುಕಲು ಬೇಕಾಗುವ ಒಳ್ಳೆಯ ಸೌಕರ್ಯ (ಊಟ, ಬಟ್ಟೆ, ಮಲಗಲು ಬೆಚ್ಚನೆಯ ಹಾಸಿಗೆ, ಆಟಿಕೆಗಳು), ಅವರು ಪಡೆದುಕೊಳ್ಳುವ ವಿದ್ಯಾಭಾಸ ಹಾಗೂ ಆರೋಗ್ಯ ಚೆನ್ನಾಗಿರಿಸಲು ಬೇಕಾಗುವ ವೈದ್ಯಕೀಯ ವ್ಯವಸ್ಥೆಯನ್ನು ಮಕ್ಕಳ ಹಕ್ಕುಗಳು ಎನ್ನಬಹುದು. ಹಾಗೆಯೇ ಮಕ್ಕಳು ಯಾವುದೇ ರೀತಿಯ ದೌರ್ಜನ್ಯ, ದುರುಪಯೋಗ, ಪಕ್ಷಪಾತದಿಂದ ರಕ್ಷಣೆ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ ಎನ್ನುವುದನ್ನು ಓದಿ ತಿಳಿದುಕೊಂಡಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾಗುವ … Read more

ವಾಸ್ತವದಲ್ಲಿ ನಮ್ಮ ಮಕ್ಕಳು: ನಾಗಸಿಂಹ ಜಿ. ರಾವ್

''ಭಾರತದ ಶೇಖಡಾ ೮೦% ಮಕ್ಕಳು ಕಂಪ್ಯೂಟರ್ ಶಿಕ್ಷಣ ಪಡೆಯುತ್ತಿದ್ದಾರೆ. ನಮ್ಮ ದೇಶದಲ್ಲಿನ ಮಕ್ಕಳ ಮೇಲಾಗುವ ದೌರ್ಜನ್ಯ, ಶೋಷಣೆಗೆ ವಿರುದ್ದವಾಗಿ ಕಠಿಣ ಕಾನೂನು ಇರುವುದರಿಂದ ಮಕ್ಕಳ ಮೇಲಾಗುವ ಅಪರಾಧಗಳು, ಕಿರುಕುಳಗಳು ದಿನದಿಂದ ದಿನಕ್ಕೆ ಕಮ್ಮಿಯಾಗುತ್ತಿದೆ, ಕಡ್ಡಾಯ ಹಾಗು ಉಚಿತ ಶಿಕ್ಷಣ ಜಾರಿ ಮಾಡಿರುವುದರಿಂದ ೬ ರಿಂದ ೧೪ ವರುಷದೊಳಗಿನ ಮಕ್ಕಳೆಲ್ಲರೂ ಶಾಲೆಯಲ್ಲೇ ಇರುವುದರಿಂದ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಮಕ್ಕಳ ಮೇಲಾಗುವ ಲೈಂಗಿಕ ಕಿರುಕುಳ ಕಮ್ಮಿಯಾಗಿದೆ" ಈ ಎಲ್ಲಾ ಅದ್ಬುತ ವಿಚಾರಗಳು ನಮ್ಮ ದೇಶ ವಿಶ್ವ ಸಂಸ್ಥೆಗೆ ೨೦೧೧ರಲ್ಲಿ … Read more

ಟಿ.ವಿ. ಶೋಗಳಲ್ಲಿ ನಮ್ಮ ಮಕ್ಕಳು: ಅಸ್ತಿತ್ವ ಲೀಗಲ್ ಟ್ರಸ್ಟ್

ಒಂಭತ್ತು ವರ್ಷದ ಆ ಮಗು ಆಫೀಸಿನೊಳಗೆ ಬಂದಾಗ ವಿದ್ಯುತ್ ಸಂಚಾರವಾದಂತೆ ಪಟ ಪಟ ಮಾತಾಡುತ್ತಾ ಸುತ್ತ ತಿರುಗುತ್ತಿದ್ದಳು. ಆ ಹುಡುಗಿ ಸಿನಿಮಾ ನಟನೆಗಾಗಿ ರಾಜ್ಯಪ್ರಶಸ್ತಿ ಪಡೆದ ಪುಟಾಣಿ ಪ್ರತಿಭೆ ಅದು ‘ನಾಳೆ ಶೂಟಿಂಗ್ ಇದೆ. ನನ್ನದೇ ಮೇನ್ ರೋಲ್. ಐದು ಕಾಸ್ಟ್ಯೂಂ ಬದಲಾಯಿಸಬೇಕು. ಅಪ್ಪಾ ಸಾಕಾಗ್ಹೋಗತ್ತೆ. ಪರವಾಗಿಲ್ಲ, ಮೇನ್ ರೋಲ್ ಅಂದ್ರೆ ಇದೆಲ್ಲ ಇದ್ದೇ ಇರುತ್ತಲ್ವಾ?.. ಹೀಗೆ ಆ ಮಗು ಏನೇನೋ ಮಾತಾಡ್ತಿತ್ತು. ಆ ವಯಸ್ಸಿಗೆ ಏನನಿಸುತ್ತೆ ಮತ್ತು ಏನು ಮಾತಾಡಬೇಕು ಅನ್ನೋ ಅರಿವೂ ಇಲ್ಲದ ವಯಸ್ಸು. … Read more

ಅಣ್ವಾಸುರನ ಬೂದಿ ಮತ್ತು ವಿಶ್ವ ಅಣು ಪರೀಕ್ಷೆ ವಿರೋಧಿ ದಿನಾಚರಣೆ: ಅಖಿಲೇಶ್ ಚಿಪ್ಪಳಿ

ಆಧುನಿಕ ಮಾನವನ ಯೋಚನೆಗಳು, ವರ್ತನೆಗಳು ಎಲ್ಲವೂ ಸ್ವಾರ್ಥದಿಂದ ಕೂಡಿದೆ. ತಕ್ಷಣದ ಲಾಭಕ್ಕಾಗಿ ಏನು ಮಾಡುವುದಕ್ಕೂ ತಯಾರು. ಒಟ್ಟಾರೆ ಬಹುಸಂಖ್ಯಾತರ ಆಲೋಚನೆಗಳು ಸದ್ಭುದ್ದಿಯಿಂದ ಕೂಡಿದೆ ಎನಿಸುವುದಿಲ್ಲ. ಮೊನ್ನೆ ಸ್ನೇಹಿತರೊಬ್ಬರು ಕಾಫಿ ಕುಡಿಯೋಣ ಬನ್ನಿ ಎಂದು ಕರೆದರು. ಅರ್ಧರ್ಧ ಕಾಫಿ ಕುಡಿದು ಮುಗಿಯುವಷ್ಟರಲ್ಲಿ ಮಳೆ ಬಂತು. ಅದೂ ಮಳೆಗಾಲ ಶುರುವಾದ ಮೇಲೆ ತುಂಬಾ ಅಪರೂಪಕ್ಕೆ ಬಂದ ಮಳೆ. ಕಾಫಿಗೆ ಕರೆದೊಯ್ದ ಸ್ನೇಹಿತರಿಗೆ ಅಸಹನೆ ಶುರುವಾಯಿತು. ಥೂ! ಎಂತಾ ಮಳೆ ಮಾರಾಯ್ರೆ?. ಇವರಿಗೆ ಕಾಫಿ ಕುಡಿದ ತಕ್ಷಣ ತಮ್ಮ ಕೆಲಸಕ್ಕೆ ಹೋಗಬೇಕಿತ್ತು. … Read more

ಚುಟುಕಗಳು: ಶ್ರೀನಿಧಿ ಟಿ.ಕೆ., ವಿನೋದ್ ಕುಮಾರ್

1.     'ಮತ್ತೆ ಹೆಣ್ಣು' ಏನಿದು ದನಿಯಲ್ಲಿ ಸೋಲು?       ಯಾವ ಅರ್ಥದಲ್ಲಿ ನಾ ಗ೦ಡಾಗಿದ್ದರೆ ಮೇಲು?       ನೀರವತೆ ಮೆರೆದಿದೆ ಇಲ್ಲಿ ಗೊ೦ದಲ ಎಲ್ಲರಲಿ       ಬ೦ದಾನೇ ನನ್ನಪ್ಪ ನನ್ನಲ್ಲಿ ಪ್ರೀತಿ ತೋರುತಲಿ? 2.     ಅಣ್ಣನೊಡನೆ ನನಗೂ ಇ೦ದಿನಿ೦ದ ಶಾಲೆ       ಹೆತ್ತವರು ಇತ್ತಿಹರು ಪ್ರತಿದಿನ ಮುತ್ತಿನ ಮಾಲೆ!       ಎಲ್ಲದರಲೂ ನನಗೆ ಸಿಕ್ಕಿದೆ ಅಣ್ಣನ ಸಮಪಾಲು … Read more

ಅಡುಗೆ ಮನೆ ಪುರಾಣ: ಅನಿತಾ ನರೇಶ್ ಮಂಚಿ

ಅಡುಗೆ ಮನೆ ಆದ್ರೇನು ಹೂವಿನ ಕುಂಡ ಇಟ್ರೆ ಬೇಡ ಅನ್ನುತ್ತದೆಯೇ? ಒಂದು ಕಿಟಕಿ ಹೂವಿನ ಕುಂಡದಿಂದ ಅಲಂಕೃತಗೊಂಡಿದ್ದರೆ ಇನ್ನೊಂದು ಬದಿಯ ಕಿಟಕಿ ಕರೆಂಟ್ ಹೋದರೆ ಕೈಗೆ ಪಕ್ಕನೆ ಸಿಗಬೇಕಾಗಿರುವ ಎಣ್ಣೆಯ ಕಾಲು ದೀಪದಿಂದ ಕಂಗೊಳಿಸುತ್ತಿತ್ತು. ಸ್ಟವ್ವಿನ  ಒಂದು ಪಕ್ಕದ ಶೆಲ್ಫಿನಲ್ಲಿ ಅಡುಗೆಗೆ ಅಗತ್ಯವಾದ ಸಾಂಬಾರ ಪದಾರ್ಥಗಳು,ಇನ್ನೊಂದು ಕಡೆ ಸೌಟಿನಿಂದ ಹಿಡಿದು ಚಮಚದವರೆಗೆ ಚಾಕುವಿನಿಂದ ಹಿಡಿದು ಕತ್ತಿಯವರೆಗೆ ಸಿಗುವಂತಿತ್ತು. ಕೆಳಭಾಗದ ನಾಲ್ಕು ಕಪಾಟುಗಳಲ್ಲಿ ಈಳಿಗೆ ಮಣೆ ಮೆಟ್ಟುಗತ್ತಿ, ಪಾತ್ರೆಗಳು, ಬೇಗ ಹಾಳಾಗದಿರುವ ತರಕಾರಿಗಳಾದ ಆಲೂಗಡ್ಡೆ ಈರುಳ್ಳಿಗಳು ಆಟವಾಡುತ್ತಿದ್ದವು. ವರ್ಷಪೂರ್ತಿಯ … Read more

ಮಕ್ಕಳಲ್ಲಿ ಸಾಮಾಜಿಕ ಅರಿವು ಮೂಡಿಸುವಲ್ಲಿ ನಮ್ಮದಿರಲಿ ಜವಾಬ್ದಾರಿ !: ವಿದ್ಯಾಶಂಕರ ಹರಪನಹಳ್ಳಿ

"ಅಪ್ಪಾ! ರೆಡ್ ಸಿಗ್ನಲ್… ನೀ ಗಾಡಿ ನಿಲ್ಸ್ಲೇ ಇಲ್ಲಾ!", "ಅಪ್ಪಾ ರಸ್ತೆ ಮಧ್ಯದಲ್ಲಿ ಕ್ರಾಸ್ ಮಾಡಬೇಡ… ಝಿಬ್ರಾ ಕ್ರಾಸಿಂಗ್ ಬಳಸಬೇಕು…", "ಅಮ್ಮಾ! ಕಸ ಪಕ್ಕದ ಖಾಲಿ ಸೈಟಿಗೆ ಹಾಕಬಾರದು, ನಮ್ ಟೀಚರ್ ಹೇಳಿದ್ದಾರೆ ಡಸ್ಟ್ ಬಿನ್ನಲ್ಲಿ ಹಾಕು!", "ಟಿವಿ ನೋಡಬೇಡ ಅಂತಿರಾ, ಮತ್ತೆ ನೀವು ಮಾತ್ರ ನೋಡಬಹುದಾ?", "ಅಪ್ಪಾ ಹೆಲ್ಮೆಟ್ ಹಾಕ್ಕೋ… ಪೊಲೀಸ್ ಹಿಡಿತಾರೆ!"… ಹೀಗೆ ಮಕ್ಕಳ ಪ್ರಶ್ನೆಗಳು ಮುಗಿಯುವುದೇ ಇಲ್ಲ. ಅವರ ಬಹುತೇಕ ಪ್ರಶ್ನೆಗಳು ದೊಡ್ಡವರ, ತಂದೆತಾಯಂದಿರ ನಿರ್ಲಕ್ಷಕ್ಕೆ ಒಳಗಾಗುವುದೇ ಹೆಚ್ಚು. ವಸ್ತುಸ್ಥಿತಿ ಹೀಗಿರುವಾಗ ಮಕ್ಕಳಲ್ಲಿ … Read more