ಅಬ್ಬಾ…..ಆ ದಿನಗಳು: ಸರ್ವಮಂಗಳ ಜಯರಾಂ

ಹೆಣ್ಣು ಗರ್ಭ ಧರಿಸಿ 9 ತಿಂಗಳು ತನ್ನ ಉದರದಲ್ಲಿ ಮಗುವನ್ನು ಪೋಷಿಸಿ ಸುರಕ್ಷಿತವಾಗಿ ಭುವಿಗೆ ತರುವಲ್ಲಿನ ಪ್ರಕ್ರಿಯೆ ಆ ದಿನಗಳಲ್ಲಿ ಆಕೆಯ ಅನುಭವಗಳು ಹೇಳತೀರದು, ಯಾವುದೇ ಆಹಾರ ಪದಾರ್ಥಗಳನ್ನು ಕಂಡರೂ ಅದರಲ್ಲೂ ಎಣ್ಣೆ ಪದಾರ್ಥಗಳು , ಬೋಂಡಾ, ಬಜ್ಜಿ ಕರಿಯುವಾಗ, ಸಾಂಬಾರಿಗೆ ಬೇಳೆ ಬೇಯಿಸುವಾಗ ಹೊಟ್ಟೆ ತೊಳಸಿದಂತಾಗಿ ವಾಂತಿ ಉಮ್ಮಳಿಸಿ ಬಂದು ಊಟದ ಮೇಲೆ ವಿರಕ್ತಿ ಬಂದುಬಿಡುತ್ತದೆ ತಟ್ಟೆಯಲ್ಲಿ ಊಟ ಇಟ್ಟುಕೊಂಡು ಕುಳಿತೆವೆಂದರೆ ಹಿಂದೆಯೇ ಎದ್ದು ಹೋಗಿ ವಾಂತಿ ಮಾಡಿ ಬರಬೇಕಾಗುತ್ತದೆ. ಏಕೆಂದರೆ ಊಟದ ವಾಸನೆ ಮೂಗಿಗೆ … Read more

ಸಮಾಜಮುಖಿ ಯುವ ಪ್ರಬಂಧ ಸ್ಪರ್ಧೆಗೆ ಲೇಖನಗಳ ಆಹ್ವಾನ

ಕನ್ನಡದ ಹೊಸ ಪೀಳಿಗೆಯ ಆಲೋಚನೆ ಮತ್ತು ಬರವಣಿಗೆಯನ್ನು ಉದ್ದೀಪಿಸುವ ಉದ್ದೇಶದಿಂದ ಬೆಂಗಳೂರಿನ ಸಮಾಜಮುಖಿ ಪ್ರಕಾಶನ 16 ರಿಂದ 32 ವಯಸ್ಸಿನ ಯುವಕ-ಯುವತಿಯರಿಗಾಗಿ ‘ಯುವ ಪ್ರಬಂಧ ಸ್ಪರ್ಧೆ’ ಏರ್ಪಡಿಸಿದೆ. ಆಯ್ಕೆಯಾದ ಐದು ಪ್ರಬಂಧಗಳಿಗೆ ತಲಾ ರೂ.5,000 ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಲಾಗುವುದು. 10 ಉತ್ತಮ ಪ್ರಬಂಧಗಳು ಸಮಾಜಮುಖಿ ಪತ್ರಿಕೆಯ ನವೆಂಬರ್ 2023ರ ಸಂಚಿಕೆಯಲ್ಲಿ ಪ್ರಕಟವಾಗಲಿವೆ. ಕರ್ನಾಟಕದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಭಾಷಿಕ, ರಾಜಕೀಯ ಕ್ಷೇತ್ರದಲ್ಲಿನ ಬದಲಾವಣೆ ಗುರುತಿಸುವ ಅಥವಾ ಬದಲಾವಣೆ ಬಯಸುವ ಪ್ರಬಂಧವಾಗಿರಬೇಕು. ಪ್ರಬಂಧ 1,600 … Read more

ಗೆಸ್ಟ್ ಫ್ಯಾಕಲ್ಟಿ: ಪ್ರಶಾಂತ್ ಬೆಳತೂರು

ಸರಗೂರು ಪಟ್ಟಣಕ್ಕೆ ಹೊಂದಿಕೊಂಡಂತಿರುವ ನಿಲುವಾಗಿಲಿನ ನಮ್ಮ ಚೆಲುವಕೃಷ್ಣನು ಬಾಲ್ಯದಿಂದಲೂ ಓದಿನಲ್ಲಿ ಮುಂದಿದ್ದವನು. . ! ಆದರೆ ರಾಯರ ಕುದುರೆ ಬರುಬರುತ್ತಾ ಕತ್ತೆಯಾಯಿತು ಎನ್ನುವ ಹಾಗೆ ಅದೇಕೋ ಎಸ್. ಎಸ್. ಎಲ್. ಸಿ. ಯಲ್ಲಿ ಅವನು ಗಾಂಧಿ ಪಾಸಾದ ಕಾರಣ ಅನಿವಾರ್ಯವೆಂಬಂತೆ ಪಿಯುಸಿಯಲ್ಲಿ ಕಲಾವಿಭಾಗಕ್ಕೆ ದಾಖಲಾಗಬೇಕಾಯಿತು. ಅಲ್ಲೂ ಕೂಡ ಆರಕ್ಕೇರದ ಮೂರಕ್ಕಿಳಿಯದ ಅವನ ಸರಾಸರಿ ಅಂಕಗಳು ಶೇ ೪೦ ಕೂಡ ದಾಟಲಿಲ್ಲ. . ! ಪದವಿ ಕೂಡ ಇದರ ಮುಂದುವರಿದ ಭಾಗದಂತೆ ಮುಕ್ತಾಯಗೊಂಡಿತ್ತು. . ! ಮುಂದೇನು ಎಂದು … Read more

ಹೊಸ ತಲೆಮಾರುಗಳ ತಲ್ಲಣಗಳ ಗುಚ್ಛ “ಕಾಜೂ ಬಿಸ್ಕೆಟ್”: ಡಾ. ನಟರಾಜು ಎಸ್ ಎಂ

ಗೋಡಂಬಿಯು ನನ್ನ ಇಷ್ಟದ ಡ್ರೈ ಫ್ರೂಟ್ ಆದ ಕಾರಣಕ್ಕೂ, ಅದರ ಸ್ವೀಟ್ ನೆಸ್ ನ ಕಾರಣಕ್ಕೂ “ಕಾಜು ಬಿಸ್ಕೆಟ್” ಎಂಬ ಒಂದೊಳ್ಳೆ ಟೈಟಲ್ ಇರುವ ಪುಸ್ತಕ ಕಣ್ಣಿಗೆ ಬಿದ್ದಾಗ ಒಂತರಾ ಆಕರ್ಷಣೀಯ ಅನಿಸಿತು. ಲೇಖಕರು ಪುಸ್ತಕ ಕೊಳ್ಳಲು ಲಿಂಕ್ ಗಳನ್ನು ಎಫ್ ಬಿ ಯಲ್ಲಿ ನೀಡಿದ್ದರಾದರೂ ಚೆಕ್ ಔಟ್ ಮಾಡುವ ವೇಳೆ ಪುಸ್ತಕದ ಬೆಲೆಗಿಂತ ಹೆಚ್ಚು ಹಣ ಕೊಡಬೇಕಾದ ಕಾರಣಕ್ಕೆ ಪರಿಚಯವಿರುವ ಪುಸ್ತಕ ಮಾರಾಟಗಾರರಿಂದ ಪುಸ್ತಕ ತರಿಸಿಕೊಂಡೆ. “ಕಾಜೂ ಬಿಸ್ಕೆಟ್’ ಕಿರಣ್ ಕುಮಾರ್ ಕೆ ಆರ್ ರವರ … Read more

ಪಂಜು ಕಾವ್ಯಧಾರೆ

ನಿನಗೆಂದೇ ಮುಡಿಪಿಟ್ಟ ಕನಸುಗಳಿವು… ನಿನಗೆಂದೇ ಮುಡಿಪಿಟ್ಟ ಕನಸುಗಳಿವುಮೌನದ ಜಾಡಿಯೊಳಗಿಟ್ಟು ಕಾಯುತಿರುವೆಒಲವಿನ ಅಗ್ನಿಸ್ಪರ್ಶದಿಂದವುಗಳನುನನಸು ಮಾಡುತ ಬದುಕಿ ಬಾಳಬೇಕು ಹರೆಯ ತಂದೆಸೆದ ಚೆಲುವಿನ ಸುರಹೊನ್ನೆತೆರೆಯುತ ತನ್ನೆಲ್ಲ ಕಂಪ ಸೂಸುತಲಿಧರೆಯ ಸಿರಿಯಂತೆ ಬದುಕ ತುಂಬುತಲಿಮರೆಯಲಾಗದಂತಹ ಚಣಗಳಾಗಬೇಕು ಕಬ್ಬಿನೊಳಗಾ ಸಿಹಿ ರಸದೊಳಿರುವಂತೆತಬ್ಬಿದಂತೆ ಲತೆತರುವನೆಳಸಿ ಅದುವೇಹಬ್ಬಲಿಬ್ಬರೊಳಗವಿತು ಕುಳಿತಂತೆ ಪ್ರೀತಿಇಬ್ಬರೊಳಗೂ ಹದವಾಗಿ ಪ್ರೇಮ ಅರಳಬೇಕು ಎಲ್ಲರೊಳಗೊಂದಾಗಿರುತೆಲ್ಲವನು ಸ್ವೀಕರಿಸಿಇಲ್ಲಸಲ್ಲದ ನೆವವ ಪ್ರೀತಿಗೆಂದೆಳಸಿ ನಿನ್ನನಲ್ಲನಾಗುತಲಿರಲು ಹೃದಯದೊಳಗೊಲುಮೆನಿಲ್ಲದೆಯೆ ನಿತ್ಯದಿ ಜಿನುಗಬೇಕು -ಸಚಿನ್‌ಕುಮಾರ ಬ.ಹಿರೇಮಠ ನಾನಾಗಲಾರೆ ನಿನ್ನಂತೆ ನಾನಾಗಬೇಕೇಖಂಡಿತ ಇಲ್ಲನಿನ್ನ ಸುಳ್ಳು ನನಗೆ ಬೇಕಿಲ್ಲಸುಳ್ಳಿನ ಅರಮನೆ ನನಗಲ್ಲಕನಸುಗಳ ಹಾರ ಬೇಡವೇ ಬೇಡಹುಸಿನಗೆಯ … Read more

ಗಝಲ್: ಸುಜಾತಾ ರವೀಶ್, ಜೊನ್ನವ (ಪರಶುರಾಮ ಎಸ್ ನಾಗೂರ್)

ಗಝಲ್ ಸುಡುವ ಸಂಕಟ ಎದೆಯ ಹಿಂಡಲು ಮನಸು ಮುರಿಯದೇ ಸಖಾಕಾಡುವ ನೆನಪು ಹೃದಯ ದಹಿಸಲು ಕಂಬನಿ ಸುರಿಯದೇ ಸಖಾ ಮಿಡಿವ ಕರುಳಿದು ಕಾಲನ ತಿವಿತಕೆ ಗುರಿಯಾದ ಕಥೆ ಹೇಳಲೇತುಡಿವ ಜೀವವ ಸತತ ನೋಯಿಸಿರೆ ವೇದನೆ ಇರಿಯದೇ ಸಖಾ ನುಡಿವ ಮಾತದು ಚುಚ್ಚುವ ಶರವಾಗಿ ವಿಷವ ಲೇಪಿಸಿದೆ ನೋಡುಹಾಡುವ ಕೋಗಿಲೆ ಗೋಣನು ಕೊಯ್ದಿರೆ ಒಡಲು ಉರಿಯದೇ ಸಖಾ ಬಾಡುವ ಹೂವಿದು ಸೌರಭ ಸೂಸಿದೆ ಸಾರ್ಥಕ್ಯ ಲಭಿಸಿದೆ ಜಗದೆನೋಡುವ ಕಣ್ಣಲ್ಲಿ ಮಾತ್ಸರ್ಯ ಇಣುಕಿರೆ ಬೆಸುಗೆ ಹರಿಯದೇ ಸಖಾ ನೀಡುವ ಕೈಗಳು … Read more

ನಾಲ್ಕು ಕಿರುಗತೆಗಳು- ಎಂ ನಾಗರಾಜ ಶೆಟ್ಟಿ

ಗೌರವ ಮುನೀರ್​ಮಂಗಳೂರಲ್ಲಿ ಕಾರ್ಯಕ್ರಮವೊಂದಕ್ಕೆ ಬರಲೇ ಬೇಕೆಂದು ಒತ್ತಾಯ ಮಾಡಿದ್ದರಿಂದ ನಾವು ಮೂವರು ಗೆಳೆಯರು ಕಾರಲ್ಲಿ ಹೊರಟಿದ್ದೆವು. ಕಾರು ನನ್ನದೇ. ದೀರ್ಘ ಪ್ರಯಾಣದಿಂದ ಸುಸ್ತಾಗುತ್ತದೆ, ಡ್ರೈವಿಂಗ್ ಮಾಡುತ್ತಾ ಗೆಳೆಯರೊಂದಿಗೆ ಹರಟುವುದು ಕಷ್ಟವೆಂದು ಡ್ರೈವರ್​ಗೆ ಹೇಳಿದ್ದೆ. ಆತ ಪರಿಚಿರೊಬ್ಬರ ಖಾಯಂ ಡ್ರೈವರ್​. ಕೊಹ್ಲಿ ಸ್ಟೈಲಲ್ಲಿ ದಾಡಿ ಬಿಟ್ಟಿದ್ದ ಹಸನ್ಮುಖಿ ಯುವಕ.ಅವನನ್ನು ಗಮನಿಸಿದ ಗೆಳೆಯರೊಬ್ಬರು, “ಕ್ರಿಕೆಟ್​ನೋಡುತ್ತೀಯಾ?” ವಿಚಾರಿಸಿದರು.“ಬಿಡುವಿದ್ದಾಗ ನೋಡುತ್ತೇನೆ ಸಾರ್​, ಕಾಲೇಜಲ್ಲಿ ಕ್ರಿಕೆಟ್​ಆಡುತ್ತಿದ್ದೆ”“ಕಾಲೇಜಿಗೆ ಹೋಗಿದ್ದಿಯಾ?” ಆಶ್ಚರ್ಯ ವ್ಯಕ್ತಪಡಿಸಿದ ಮತ್ತೊಬ್ಬ ಗೆಳೆಯ “ಏನು ಓದಿದ್ದೆ?” ಕೇಳಿದರು.“ಬಿಎಸ್ಸಿ ಆಗಿದೆ ಸಾರ್”​ಕೂಲಾಗಿ ಹೇಳಿದ.“ನಿಮ್ಮ ಭಾಷಣಕ್ಕೆ ಇಲ್ಲೇ … Read more

ನಾಲ್ಕಾರು ನ್ಯಾನೋ ಕತೆಗಳು: ವೃಶ್ಚಿಕ ಮುನಿ (ಪ್ರವೀಣಕುಮಾರ ಸುಲಾಖೆ)

ಗಂಜಿ ಕತೆ ತೀರಾ ದೊಡ್ಡದಾಗಿರದೆ ನಾಲ್ಕೈದು ಸಾಲುಗಳಲ್ಲಿ ಕತೆ ಆಶಯವನ್ನು ಪರಿಣಾಮಕಾರಿಯಾಗಿ ಬಿಂಬಿತವಾಗಿದ್ದರೆ ಅದು ಮನಸಿಗೆ ಇಳಿದು ಬಹುಕಾಲ ಉಳಿಯುತ್ತದೆ ಎನ್ನುವ ತತ್ವ ನಂಬಿ ಇಂತಹ ಎರಡು ದಿನಗಳಿಂದ ಕತೆ ಬರೆಯಲು ಒದ್ದಾಡುತ್ತಿದ್ದ ಹೊಸ ಕತೆಗಾರನಿಗೆ ಹೇಗೋ ಎರಡು ಬಾರಿ ತನ್ನ  ನೆಚ್ಚಿನ ಜಾಗಕ್ಕೆ ಹೋಗಿ ಕುಳಿತು ಬರೆಯಲು ಪ್ರಯತ್ನಿಸುತ್ತಿದ್ದ, ಒಂದೇ ಒಂದು ಸಾಲು ಹೊರಬಂದಿರಲಿಲ್ಲ. ಆದರೆ ಪಕ್ಕದ ಮನೆಯ ರಂಗವ್ವ ಮನೆಗೆ ಬಂದು ಎರಡು ದಿನ ಆಯಿತು ಯಾವುದೇ ಕೆಲಸ ಇಲ್ಲ. ಊಟಕ್ಕೆ ಸರಿಯಾಗಿ ದಿನಸಿಯೂ … Read more

ದೃಶ್ಯಕಾವ್ಯವಾಗಿ ಗಮನ ಸೆಳೆಯುವ ಸಿನಿಮಾ-ಕೋಳಿ ಎಸ್ರು: ಚಂದ್ರಪ್ರಭ ಕಠಾರಿ

ತಮ್ಮ ಚೊಚ್ಚಲ ನಿರ್ದೇಶನದ ʼಅಮ್ಮಚ್ಚಿಯೆಂಬ ನೆನಪುʼ ಸಿನಿಮಾದ ಸುಮಾರು ನಾಲ್ಕು ವರುಷಗಳ ನಂತರ ಚಂಪಾ ಪಿ ಶೆಟ್ಟಿಯವರು ʼಕೋಳಿ ಎಸ್ರುʼ ಸಿನಿಮಾವನ್ನು, ಏಪ್ರಾನ್‌ ಪ್ರೊಡಕ್ಷನ್‌ ನಿರ್ಮಾಣದಲ್ಲಿ ತೆರೆಗೆ ತಂದಿದ್ದಾರೆ. ಸಾರ್ವಜನಿಕರಿಗೆ ಚಿತ್ರಮಂದಿರದಲ್ಲಿ ಇನ್ನೂ ಬಿಡುಗಡೆಯಾಗುವ ಮುಂಚೆಯೇ ಕೋಳಿ ಎಸ್ರು, ದೇಶ ವಿದೇಶಗಳಲ್ಲಿ ಜರುಗುತ್ತಿರುವ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಳ್ಳುತ್ತ, ಹಲವು ಪ್ರಶಸ್ತಿಗಳನ್ನು ಪಡೆದು ಸಿನಿಪ್ರಿಯರಲ್ಲಿ ಕುತೂಹಲ ಉಂಟು ಮಾಡುತ್ತಿದೆ. ಚಂಪಾ ಪಿ ಶೆಟ್ಟಿಯವರ ಮೊದಲ ಚಿತ್ರವು ವೈದೇಹಿಯವರು ಬರೆದ ಕತೆಯನ್ನಾಧರಿಸಿದ್ದರೆ, ಕೋಳಿ ಎಸ್ರು ಕಾ.ತ. ಚಿಕ್ಕಣ್ಣ ಅವರ ʼಹುಚ್ಚೇರಿಯ ಎಸರಿನ … Read more

ಮೂರು ಕವಿತೆಗಳು: ಶಕುಂತಲಾ ಬರಗಿ

ಹಠ ತೊಟ್ಟಿದ್ದೇನೆ ಮನುಷ್ಯಳಾಗಿ ಇರುವ ಆಸೆಗಾಗಿಮಾತು ಮಾತಿಗೂ ಚಲ್ಲು ಚಲ್ಲು ಆಡುವವರ ಮಧ್ಯೆಡೌಲು ಡೌಲು ನಡತೆ ಇರುವವರ ಮಧ್ಯೆಈ ಹೈಲು ಫೈಲು ಮಂದಿ ನಡುವೆನನ್ನತನದ ಹೋರಾಟಕ್ಕೆ ಬದ್ಧಳಾಗಿದ್ದೇನೆ. ಅಂಕುಡೊಂಕು ನೂರು ಒನಪಿಗೆಚುಚ್ಚುವ ಕೊಂಕುಮಾತುಗಳ ನಡುವೆಮಂಕು ಕವಿದ ನೂರು ಪ್ರಶ್ನೆಗೆನಾನು ಮೌನ ತವಸಿಯಾಗಿದ್ದೇನೆ ಸವಾಲು, ಜವಾಬುಗಳ ಝೇಂಕಾರದಲ್ಲಿಸ್ಪರ್ಧೆ, ಪೈಪೋಟಿಗಳ ಆಳದಲ್ಲಿಕೊಂಕು-ಡೊಂಕುಗಳ ವ್ಯವಸ್ಥೆಯಲ್ಲಿಶಾಂತವಾಗಿ ಸೋಲಿಸುತ್ತೇನೆ ಅವರಿವರನ್ನು ಒಪ್ಪದ ತಪ್ಪಿದ ವ್ಯವಸ್ಥೆಯ ಭಂಜನದಲ್ಲಿಒತ್ತಿದ ಬಿತ್ತಿದ ಉಳು ಗೊಬ್ಬರದಲ್ಲಿಅಸತ್ಯದ, ಅಧರ್ಮದ ಲೋಕದಲ್ಲಿಮನುಷ್ಯಳಾಗೇ ಇರುವ ಹಠ ತೊಟ್ಟಿದ್ದೇನೆ. ದೀಪಾವಳಿ ಮಾಡಬೇಕೆಂದಿದ್ದೇನೆ ದೀಪಾವಳಿ ಮಾಡಬೇಕೆಂದಿದ್ದೇನೆಎನ್ನ ಮನವನೊಮ್ಮೆ … Read more

ಮಾಮನ್ನನ್‌ ಎನ್ನುವ ಕಹಿ ಮದ್ದು: ಎಂ ನಾಗರಾಜ ಶೆಟ್ಟಿ

`ಸಿನಿಮಾ ಬಿಡುಗಡೆಯಾದ ಎರಡನೇ ವಾರದಲ್ಲಿ ಚಿತ್ರ ನೋಡುವುದು ಮತ್ತು ಅದರ ಬಗ್ಗೆ ಬರೆಯುವುದು ಕಷ್ಟದ ಕೆಲಸ. ಆಗಲೇ ಹಲವರು ಅದರ ಬಗ್ಗೆ ಬರೆದು-ಹೇಳಿ ಬಿಟ್ಟಿರುತ್ತಾರೆ. ಅವರ ಅಭಿಪ್ರಾಯಗಳು ನಮ್ಮ ತಲೆಯಲ್ಲೂ ನೆಲೆಗೊಂಡು ಬಿಟ್ಟಿರುತ್ತವೆ. ಅದರಿಂದ ಹೊರಬರಲು ಸಾಕಷ್ಟು ತಿಣುಕಬೇಕು. ಕೆಲವು ವಿಮರ್ಶೆಗಳು ಖಂಡಿಸಲೆಂದೇ ಹುಟ್ಟಿಕೊಳ್ಳುತ್ತವೆ! ಕೆಲವರಿಗೆ ಸಿನಿಮಾದ ಅಂತ್ಯವನ್ನು ಹೇಳುವ ಆತುರ. ಇದರಿಂದ ಚಿತ್ರದ ರಸಾಸ್ವಾದನೆಗೆ ಖಂಡಿತ ಧಕ್ಕೆಯಾಗುತ್ತದೆ. ʼಮಾಮನ್ನನ್‌ʼ ನೋಡಿದಾಗ ನನಗೂ ಅದೇ ಆಯಿತು. ಪುಣ್ಯವಶಾತ್‌ ನೋಡುವಂತಿಲ್ಲವೆಂದು ಯಾರೂ ಹೇಳಿರಲಿಲ್ಲ. ʼಪೆರಿಯೇರುಂ ಪೆರುಮಾಳ್‌ʼ ʼಕರ್ಣನ್‌ʼ ಚಿತ್ರದ … Read more

ಆಗಸ್ಟ್ ಹದಿನೈದು: ಎಫ್.ಎಂ.ನಂದಗಾವ್

ಜುಲೈ ಕಳೆಯಿತು ಅಂದರೆ, ಅದರ ಹಿಂದೆಯೇ, ಆಗಸ್ಟ್ ತಿಂಗಳು ಬರುತ್ತಿದೆ. ಅದರೊಂದಿಗೆ ಆಗಸ್ಟ್ ಹದಿನೈದು ಬರುತ್ತದೆ. ಆಗಸ್ಟ್ ಹದಿನೈದು ನಮ್ಮ ದೇಶ ಬ್ರಿಟಿಷರ ದಾಸ್ಯದಿಂದ ಬಿಡುಗಡೆ ಹೊಂದಿ ಸ್ವತಂತ್ರ ದೇಶವಾದ ದಿನ. ದೇಶದ ಪ್ರಜೆಗಳೆಲ್ಲರೂ ಸಂಭ್ರಮಿಸುವ ದಿನ. ಆದರೆ ನನ್ನ ಪಾಲಿಗದು ಸಿಹಿಕಹಿಗಳ ಸಂಗಮ. ಕಹಿ ಮತ್ತು ಸಿಹಿಗಳ ಹುಳಿಮಧುರ ಸವಿ ನೆನಪುಗಳ ಮಾವಿನ ಬುಟ್ಟಿಗಳನ್ನು ಹೊತ್ತು ತರುವ ದಿನ. ಅಂದು ಒಂದು ದಿನವೆಲ್ಲಾ ಪೊಲೀಸ್ ಠಾಣೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೆ. ಮಾಡದ ತಪ್ಪಿಗೆ, ಅವಮಾನವನ್ನು ಅನುಭವಿಸಬೇಕಾಯಿತು. ಆದರೆ, … Read more

ಕಾವ್ಯ ದೀವಿಗೆ ಕೃತಿ ಲೋಕಾರ್ಪಣೆ

. ವಿಚಾರ ಮಂಟಪ ಬಳಗದ ವತಿಯಿಂದ ವರುಣ್‌ರಾಜ್‌ ಜಿ ಮತ್ತು ಧನುಷ್‌ ಎಚ್‌ ಶೇಖರ್‌ ಇವರು ಸಂಪಾದಿಸಿರುವ ʼಕಾವ್ಯದೀವಿಗೆʼ ಕವನ ಸಂಕಲನವು ಲೋಕಾರ್ಪಣೆಗೆ ಸಿದ್ಧವಾಗಿದೆ. ಕೃತಿಯನ್ನು ಹಾಸನದ ʼಸ್ಪಂದನ ಸಿರಿʼ ಪ್ರಕಾಶನವು ಪ್ರಕಟಿಸುತ್ತಿದ್ದು, ಇದೇ ಭಾನುವಾರ ದಿನಾಂಕ: ೨೫.೦೬.೨೦೨೩ ರಂದು ಹಾಸನದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ೧೨ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ʼಕಾವ್ಯದೀವಿಗೆʼ ಕವನ ಸಂಕಲನವು ನಾಡಿನ ವಿವಿಧ ಪ್ರದೇಶಗಳ ಒಟ್ಟು ೬೨ ಯುವ ಬರಹಗಾರರ ಬರಹಗಳನ್ನೊಳಗೊಂಡ ಕೃತಿಯಾಗಿದ್ದು, ಯುವ ಬರಹಗಾರರ … Read more

ಕಸೂತಿಯಾಗದ ದಾರದುಂಡೆ! ಪುಸ್ತಕ ವಿಮರ್ಶೆ: ಪೂರ್ಣಿಮಾ ಕಮಲಶಿಲೆ

ಉಡುಪಿ ಜಿಲ್ಲೆಯ ಕೋಟದ ರೇವತಿ ಶೆಟ್ಟಿ ಯವರ ಪ್ರಥಮ ಕಥಾಸಂಕಲನದ ಹೆಸರು *ಕಸೂತಿಯಾಗದ ದಾರದುಂಡೆ*. ಹೆಸರೇ ಅದೆಷ್ಟು ಧ್ವನಿಪೂರ್ಣ! ದಾರದುಂಡೆ ಎಂದರೆ ಬೆಸೆಯುವಿಕೆಯ ದ್ಯೋತಕ. ಅದೂ ಕಣ್ಮನ ತಣಿಸುವ ಸೂಕ್ಷ್ಮ ಕಸೂತಿಯಾಗಿ ಆ ದಾರದೆಳೆಗಳು ಅರಳಿದರೆ, ಆ ಕುಸುರಿ ಅದೆಷ್ಟು ಚೆಂದ ಅಲ್ವಾ? ಪ್ರತಿ ವಸ್ತುವಿಗೂ, ವ್ಯಕ್ತಿಗೂ ತಾನೊಂದು ಉತ್ಕೃಷ್ಟ ಪ್ರತಿಮೆಯಾಗಬೇಕು, ತನ್ನಿಂದ ಏನಾದರೊಂದು ಸಾಧನೆಯಾಗಬೇಕು ಎಂಬ ಆಸೆ ಸಹಜ. ಆದರೆ ಎಲ್ಲವೂ, ಎಲ್ಲರೂ ಆ ಗುರಿ ಮುಟ್ಟಲು ಸಾಧ್ಯವಿಲ್ಲ. ಕೆಲವರು ಅಸಾಧ್ಯವನ್ನು ಸಾಧ್ಯವಾಗಿಸಿಕೊಳ್ಳಲು ಪಟ್ಟಪಾಡು, ಮಾಡುವ … Read more

ಟ್ರಂಕು ತಟ್ಟೆಯೊಳಗೆ ಏನೇನಿದೆ? ಡಾ. ನಟರಾಜು ಎಸ್ ಎಂ

ದಲಿತ ವಿದ್ಯಾರ್ಥಿ ನಿಲಯಗಳಿಗೆ ಒಂದು ವಿಶಿಷ್ಟವಾದ ಇತಿಹಾಸವಿದೆ. ಒಂದು ಕಾಲಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟಕ್ಕೆ ಸೀಮಿತವಾಗಿದ್ದ ಸಮಾಜ ಕಲ್ಯಾಣ ಇಲಾಖೆಯ ದಲಿತರ ಹಾಸ್ಟೆಲ್ ಎಂಬ ಪರಿಕಲ್ಪನೆ ಇವತ್ತು ಅನೇಕ ಹಳ್ಳಿಗಳಿಗೂ ಪಸರಿಸಿದೆ. ಆ ಪ್ರತೀ ಹಾಸ್ಟೆಲ್ ಗಳ ಹುಟ್ಟು ಮತ್ತು ಧ್ಯೇಯ ಶಿಕ್ಷಣ ಪಡೆಯಲು ಬರುವ ವಿದ್ಯಾರ್ಥಿಗಳ ಸಲಹುವುದು ಆಗಿತ್ತಾದರೂ ಅನೇಕರು ಸಂಘಟಿತರಾಗಲು, ಹೋರಾಟದ ಮನೋಭಾವವನ್ನು ರೂಪಿಸಿಕೊಳ್ಳಲು ಸಹ ಆ ಹಾಸ್ಟೆಲ್ ಗಳು ಪ್ರತ್ಯಕ್ಷವಾಗಿ‌ ಮತ್ತು ಪರೋಕ್ಷವಾಗಿ ಸಹಕರಿಸಿವೆ ಎನ್ನಬಹುದು. ಹಾಸ್ಟೆಲ್ ಗಳ ಕಾರಣಕ್ಕೆ ವಿದ್ಯಾಭ್ಯಾಸ … Read more

ದೃಷ್ಟಿ ಬೊಟ್ಟು: ಜ್ಯೋತಿ ಕುಮಾರ್. ಎಂ(ಜೆ. ಕೆ.)

ಒಂದಾನೊಂದು ಕಾಲದಲ್ಲಿ, ಒಂದೂರಿನಲ್ಲಿ ಒಂದು ಉತ್ತಮಸ್ಥ ಕೂಡು ಕುಟುಂಬದಲ್ಲಿ ಒಂದು ಗಂಡು ಮಗುವಿನ ಜನನವಾಯಿತು. ಯಪ್ಪಾ!ಎಂತಹ ಸ್ಫುರದ್ರೂಪಿ ಅಂದರೆ ನೋಡಲು ಎರಡು ಕಣ್ಣು ಸಾಲದು. ಅವನು ಹುಟ್ಟಿನಿಂದಲೆ, ಕುರೂಪವನ್ನು ಹೊತ್ತು ತಂದಿದ್ದ. ಗಡಿಗೆ ಮುಖ, ಗೋಲಿಯಂತ ಮುಖದಿಂದ ಹೊರಗಿರುವ ಕಣ್ಣುಗಳು, ಆನೆ ಕಿವಿ, ಮೊಂಡು ಡೊಣ್ಣೆ ಮೂಗು, ಬಾಯಿಯಿಂದ ವಿಕಾರವಾಗಿ ಹೊರ ಚಾಚಿದ ದವಡೆ, ಕೈ ಕಾಲು ಸಣ್ಣ, ಹೊಟ್ಟೆ ಡುಮ್ಮ. ಕೆಂಡ ತೊಳದಂತಹ ಮಸಿ ಕಪ್ಪು ಬಣ್ಣ.  ಹೆತ್ತವರಿಗೆ ಹೆಗ್ಗಣ ಮುದ್ದು, ಇಂತಿಪ್ಪ ರೂಪದಿ ಹುಟ್ಟಿದ … Read more

ಸಮಾಜಮುಖಿ ಕಥಾಪ್ರಶಸ್ತಿ ಪ್ರದಾನ ಮತ್ತು ಕಥಾಸಂಕಲನ ಬಿಡುಗಡೆ

‘ಸಮಾಜಮುಖಿ ವಾರ್ಷಿಕ ಕಥಾಸ್ಪರ್ಧೆ-2023’ ರಲ್ಲಿ ಬಹುಮಾನಿತರಾದ ಐವರು ಹಾಗೂ ಮೆಚ್ಚುಗೆ ಪಡೆದ ಹದಿನೈದು ಕಥೆಗಾರರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 10.06.2023, ಶನಿವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಸಾಹಿತ್ಯ ಪರಿಷತ್ತು ಆವರಣದ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ “ಮುಝಫರ್ ಮತ್ತಿತರ ಇಪ್ಪತ್ತು ಕಥೆಗಳು” ಕೃತಿಯ ಜನಾರ್ಪಣೆ ಜರುಗಲಿದೆ. ಸಾಹಿತಿ, ತಂತ್ರಜ್ಞಾನಿ ವೈ.ಎನ್.ಮಧು, ಸಾಮಾಜಿಕ ಮಾಧ್ಯಮ ತಜ್ಞೆ ಚೈತ್ರಿಕಾ ನಾಯ್ಕ್ ಹರ್ಗಿ ಹಾಗೂ ಖ್ಯಾತ ನಾಟಕಕಾರರಾದ ಜಯರಾಮ್ ರಾಯಪುರ ಅವರು ಅತಿಥಿಗಳಾಗಿ … Read more

ತೇಜಸ್ವಿ ಹೆಸರಲ್ಲಿ ʼಡೇರ್‌ ಡೆವಿಲ್‌ ಮುಸ್ತಾಫʼ: ಎಂ ನಾಗರಾಜ ಶೆಟ್ಟಿ

           ಪೂರ್ಣಚಂದ್ರ ತೇಜಸ್ವಿಯವರ ʼಡೇರ್‌ ಡೆವಿಲ್‌ ಮುಸ್ತಾಫಾ” ಕತೆಯನ್ನು ಸಿನಿಮಾ ಮಾಡುತ್ತಾರೆಂದು ತಿಳಿದಾಗ ಆಶ್ಚರ್ಯವಾಗಿತ್ತು. ʼಡೇರ್‌ ಡೆವಿಲ್‌ ಮುಸ್ತಾಫಾ” ವ್ಯವಸ್ಥೆಯನ್ನು ಕೀಟಲೆಗಣ್ಣಿಂದ ನೋಡುವ, ಸಂಘರ್ಷಕ್ಕೆ ಅನುವಿಲ್ಲದ, ಸಾಮಾನ್ಯವೆನ್ನಿಸುವ ಕತೆ. ಇದು ಸಿನಿಮಾಕ್ಕೆ  ಹೊಂದುತ್ತದೆಂದು ಅನ್ನಿಸಿರಲಿಲ್ಲ. ಕೊನೆಗೆ ಆಗಿದ್ದೂ ಹಾಗೆಯೇ! ನಿರ್ದೇಶಕ ಶಶಾಂಕ್‌ ಸೊಗಾಲ್‌ ಕತೆಯ ಹೆಸರನ್ನು, ಪಾತ್ರಗಳ ಹೆಸರನ್ನು, ಕತೆಯ ಕೆಲವು ಅಂಶಗಳನ್ನು ಬಳಸಿಕೊಂಡು ತನ್ನದೇ ಚಿತ್ರ ಮಾಡಿದ್ದಾರೆ. ಅವರ ಕಲ್ಪನಾ ಶಕ್ತಿ ಮೆಚ್ಚುವಂತದ್ದೇ! ಅತ್ತ ಮುನ್ಸಿಪಾಲಿಟಿಯೂ ಅಲ್ಲದ, ಇತ್ತ ಗ್ರಾಮ ಪಂಚಾಯತಿಗೂ ಸೇರದ ಪುಟ್ಟ ಪಟ್ಟಣವೊಂದರ … Read more

ಚುನಾವಣೆ ಬಂತು ಚುನಾವಣೆ: ಡಾ.ವೃಂದಾ ಸಂಗಮ್

“ಮೇಡಂ, ನಿಮಗೆ ಬಂತಾ” ಅನ್ನುವ ಪ್ರಶ್ನೆ ಸಹೋದ್ಯೋಗಿಗಳಿಂದ ಬಂದರೆ, “ಛೇ ಛೇ ಇದೆಂಥಾ ಅಸಹ್ಯ,” ಎಂದು ಕೊಳ್ಳಬೇಡಿ. ಇದು ಚುನಾವಣೆ ಸಮಯದಲ್ಲಿ ಸರ್ಕಾರಿ ನೌಕರರ ಅತೀ ಸಾಮಾನ್ಯ ಪ್ರಶ್ನೆ. ನಿಮ್ಮನ್ನೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಿದ್ದಾರೆಯೇ, ಯಾವ ಮತಕ್ಷೇತ್ರ ಎಂಬ ನಿಯೋಜನಾ ಆದೇಶ ನಿಮಗೆ ಬಂತಾ ಎಂಬ ಕುಶಲ ವಿಚಾರಣೆ ಅಷ್ಟೇ ಇದು.  ಇನ್ನೇನು ಚುನಾವಣೆ, ಮುಂದಿನ ವರುಷ ಎಂದಾಗಲೇ, ಈ ಚುನಾವಣೆಯ ಬಿಸಿ ಸರ್ಕಾರಿ ನೌಕರರಿಗೆ ತಟ್ಟುತ್ತದೆ. ಮತದಾರರಿಗೆ ಚುನಾವಣೆ ಅಂದರೆ, ಒಂದು ದಿನ, ಅದೂ ಮತದಾನ … Read more

ದೋರುಗಾಯಿ ಹಣ್ಣಾದ ಹೊತ್ತು ಗೊತ್ತು!: ಡಾ. ಹೆಚ್‌ ಎನ್‌ ಮಂಜುರಾಜ್‌

‘ತುಂಬ ಸಿಹಿಯೂ ಅಲ್ಲದ, ತೀರ ಒಗರೂ ಅಲ್ಲದ ಪನ್ನೇರಳೆ ಹಣ್ಣಿನ ಗುಣ ಲಲಿತ ಪ್ರಬಂಧದ ಗುಣಕ್ಕೆ ಹತ್ತಿರ. ಲಲಿತ ಪ್ರಬಂಧಗಳಲ್ಲಿ ನಗು, ಅಳು, ಚಿಂತನೆ ಎಲ್ಲವೂ ಮೇಳೈಸಿರುತ್ತವೆ. ಅಲ್ಲದೆ ಪನ್ನೇರಳೆ ಗುಂಪು ಗುಂಪಾಗಿದ್ದು ಕೂಡಿ ಬಾಳುವ ಆಶಯವನ್ನು ಸಮರ್ಪಕವಾಗಿ ಸಂಕೇತಿಸುತ್ತದೆ. ಈ ಎಲ್ಲ ಕಾರಣಗಳಿಂದ ಪನ್ನೇರಳೆ ಎಂಬ ಹೆಸರು ಇಲ್ಲಿ ಸೂಕ್ತವಾಗಿ ಕಂಡಿದೆ’ ಎಂಬುದು ಪ್ರಬಂಧಕಾರರ ಮಾತು. ಇಲ್ಲಿಯ ಎಲ್ಲವನೂ ಓದಿದ ಮೇಲೆ ಅರ್ಥವಾಗುವಂಥದು. ಇದರಲ್ಲಿರುವ ಹನ್ನೆರಡು ಪ್ರಬಂಧಗಳಲ್ಲೂ ಇಂಥ ಸಹಬಾಳ್ವೆ ಮತ್ತು ಸಾಮರಸ್ಯಗಳ ಚಿತ್ರಣ ಹೃದ್ಯವಾಗಿ … Read more

ನೆಲದ ಘಮಲಿನ ʼಸಿನಿಹಬ್ಬʼ: ಎಂ ನಾಗರಾಜ ಶೆಟ್ಟಿ

   ʼನೆಲದ ದನಿಗಳ ಹುಡುಕಾಟʼ ಇದು ಈ ಬಾರಿಯ ʼಸಿನಿಹಬ್ಬʼದ ವಿಷಯ. ಡಾ ಬಿ ಆರ್‌ಅಂಬೇಡ್ಕರ್‌ವಿದ್ಯಾರ್ಥಿಗಳ ಕಲ್ಯಾಣ ಸಂಘ, ಕೃಷಿ ಮಹಾವಿದ್ಯಾಲಯ, ಧಾರವಾಡ ಹಾಗೂ ಮನುಜಮತ ಸಿನಿಯಾನ ಸಹಯೋಗದಲ್ಲಿ ಧಾರವಾಡದಲ್ಲಿ ಎರಡು ದಿನಗಳ ʼಸಿನಿಹಬ್ಬʼ ಮೇ 20 ಮತ್ತು 21ರಂದು ಜರಗಿತು. ನೆಲದ ದನಿಗಳ ಹುಡುಕಾಟಕ್ಕೆ 542 ಹೆಕ್ಟೇರುಗಳ ವಿಶಾಲ ಹಸಿರು ಪ್ರದೇಶದಲ್ಲಿ ಹರಡಿಕೊಂಡಿರುವ ಕೃಷಿ ಮಹಾವಿದ್ಯಾಲಯದ ಆವರಣಕ್ಕಿಂತ ಸೂಕ್ತವಾದ ಜಾಗ ಇಲ್ಲವೇನೋ ಎನ್ನುವಂತಿತ್ತು ಸಿನಿಹಬ್ಬದ ಜಾಗ. ಮೇ 20 ರ ಮುಂಜಾನೆ ಆಹ್ಲಾದಕರ ವಾತಾವರಣದಲ್ಲಿ ʼಸಿನಿಹಬ್ಬʼ … Read more

ಇಂದಿನ ಯುವಕರಲ್ಲಿ ಹೆಚ್ಚಾಗುತ್ತಿರುವ ಮನೋಬಲದ ಕೊರತೆ: ವಿಜಯ್ ಕುಮಾರ್ ಕೆ.ಎಂ.

ಮನುಷ್ಯನಿಗೆ ದೈಹಿಕ ಬಲದ ಅವಶ್ಯಕತೆ ಎಷ್ಟಿದೆಯೋ ಅಷ್ಟೇ ಮಟ್ಟದ ಮನೋಬಲದ ಅತ್ಯವಶ್ಯಕತೆಯು ಬೇಕಿದೆ.ಆದರೆ ಇತ್ತೀಚಿನ ದಿನಗಳಲ್ಲಿ ಈ ಮನೋಬಲದ ಅತಿಯಾದ ಕೊರತೆ ನಮ್ಮ ಯುವ ಸಮುದಾಯದಲ್ಲಿ ಹೆಚ್ಚುತ್ತಿರುವುದು ಯುವ ಪೀಳಿಗೆಯ ಭವಿಷ್ಯವನ್ನು ಚಿಂತೆಗೀಡು ಮಾಡುವಂತಿದೆ.ತಮ್ಮ ಆಯ್ಕೆಗಳಲ್ಲಾಗಲಿ, ನಿರ್ಧಾರಗಳಲ್ಲಾಗಲಿ ತೀರ್ಮಾನ ತೆಗೆದುಕೊಳ್ಳ ಬೇಕಾದ ತಮ್ಮ ಚಿತ್ತವನ್ನು ಗೊಂದಲಕ್ಕೆ ಸಿಲುಕಿಸಿ ಪೇಚಾಡುವ ಸ್ಥಿತಿಗೆ ತಲುಪಿರುವಲ್ಲಿ ಅವರ ಮನಸ್ಥಿತಿಯ ಶಕ್ತಿ ಎಷ್ಟರ ಮಟ್ಟಕ್ಕಿದೆ? ಎಂಬ ಪ್ರಶ್ನೆಯನ್ನು ಹುಟ್ಟು ಹಾಕದೆ ಇರದು. ಹಾಗಾದರೆ ಮನೋಬಲ ಎಂದರೆ ಏನು?ಅದಿಲ್ಲದೆ ಆಗಬಹುದಾದ ತೊಡಕುಗಳಾದರೂ ಏನು? ಎನುವಾಗ. … Read more

ಅಮೆರಿಕವೆಂಬ ಮಾಯಾಲೋಕ: ಡಾ. ಹೆಚ್ ಎನ್ ಮಂಜುರಾಜ್

ಅಮೆರಿಕದ ಅರಿಜ಼ೊನಾ ರಾಜ್ಯದ ಒಂದು ನಗರದಲ್ಲಿರುವ ತಮ್ಮ ಮಗ ಮತ್ತು ಸೊಸೆಯನ್ನು ನೋಡಿ ಬರಲೆಂದು ಹೋದ ಲೇಖಕಿ ಅಲ್ಲಿಯ ಜನಜೀವನ ಮತ್ತು ಸಮಾಜೋ ಸಾಂಸ್ಕೃತಿಕ ಪಲ್ಲಟಗಳನ್ನು ತಮ್ಮದೇ ಆದ ವಿಶಿಷ್ಟ ರೀತಿಯಲಿ ಗುರುತಿಸಿ ಹಾಸ್ಯಮಯ ಶೈಲಿಯಲಿ ಲಲಿತ ಪ್ರಬಂಧಗಳನ್ನಾಗಿಸಿದ್ದಾರೆ. ಇಂಥ ಒಟ್ಟು ನಲವತ್ತೊಂದು ಬರೆಹಗಳು ವಿಧ ವಿಧವಾದ ವಸ್ತುವೈವಿಧ್ಯ ಮತ್ತು ಆಡುಮಾತಿನ ಲಯದಲ್ಲಿ ಅಭಿವ್ಯಕ್ತಗೊಂಡಿವೆ. ವಾಸ್ತವವಾಗಿ ಇದನ್ನು ಅವರು ಪ್ರವಾಸ ಕಥನ ಎಂದೇ ಕರೆಯಬಹುದಾಗಿತ್ತು. ಈ ಮಾತನ್ನು ಮುನ್ನುಡಿಕಾರರೂ ಹೇಳಿದ್ದಾರೆ. ಒಂದೆರಡು ಬರೆಹಗಳು ಅವರು ಅಮೆರಿಕಕ್ಕೆ ಹೋಗುವ … Read more

ಅಮ್ಮನಾಗಿ ನಾನು……: ಶಿಲ್ಪಾ ಎಂ. ಕುಕನೂರ್‌

ಕಳೆದ ವಾರವಷ್ಟೇ ಅಂತಾರಾಷ್ಟ್ರೀಯ ತಾಯಂದಿರ ದಿನಾಚರಣೆಯನ್ನು ಆಚರಿಸಲಾಯಿತು. ಇದು ಪಾಶ್ಚಿಮಾತ್ಯಾ ಸಂಪ್ರದಾಯ ನಾವೇಕೆ ಆಚರಿಸಬೇಕು ಎನ್ನುವ ಮನೋಭಾವ ಕೆಲವರಲ್ಲಿರಬಹುದು. ಆದರೆ ನಮ್ಮ ಭಾರತೀಯ ಪರಂಪರೆಯಲ್ಲೂ ಋಷಿಮುನಿಗಳು ಮಾತೃದೇವೋಭವ ಎಂದು ಹೇಳಿ ತಾಯಿಯನ್ನು ದೇವರಿಗೆ ಹೋಲಿಸಿದ್ದಾರೆ. ಭಾರತದಲ್ಲಿಂದು ಆಧುನಿಕತೆ ಹೆಚ್ಚಾದಂತೆಲ್ಲ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ತಂತ್ರಜ್ಞಾನ ಯುಗದಲ್ಲಿ ನಾಗರಿಕ ಸಮಾಜ ಹೆಚ್ಚು ಶಿಕ್ಷತರಾದಂತೆಲ್ಲ ಭಾವನಾರಹಿತ ಜೀವಿಗಳಾಗಿ ಬದುಕುತ್ತಿದ್ದಾರೆ, ಸಂಭಂದಗಳ ಮೌಲ್ಯಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಬೆಳೆಯುವ ಮಕ್ಕಳಿಗೆ, ಯುವ ಪೀಳಿಗೆಗೆ ಒಂದು ಆದರ್ಶಪ್ರಾಯ ಮಾರ್ಗದರ್ಶನದ ತಳಹದಿ ಒದಗಿಸುವ ಸಲುವಾಗಿ … Read more

ನಿಂದನೆಗೆ ವಂದನ ; ಜೀವನ ಪಾವನ: ಡಾ. ಹೆಚ್ ಎನ್ ಮಂಜುರಾಜ್

ಪುಸ್ತಕದ ಹೆಸರು : ವನಸುಮ(ಸಮಾಜ ಸೇವಕ ಶ್ರೀ ಕೆ ಆರ್ ಲಕ್ಕೇಗೌಡರ ಜೀವನ ಕಥನ)ಸಂಪಾದಕರು: ಡಾ. ದೀಪುಪ್ರಕಾಶಕರು: ಶ್ರೀ ಸಾಯಿ ಸಾಹಿತ್ಯ, ಬೆಂಗಳೂರುಮೊದಲ ಮುದ್ರಣ: 2023ಒಟ್ಟು ಪುಟಗಳು: 196, ಬೆಲೆ: ರೂ. 200 ಇದೊಂದು ವಿಶಿಷ್ಟ ಕಥನ. ಕೆ ಆರ್ ನಗರ ತಾಲೂಕಿನ ಕಾಟ್ನಾಳು ಗ್ರಾಮದ ಶ್ರೀ ಕೆ ಆರ್ ಲಕ್ಕೇಗೌಡರು ರೈತಾಪಿ ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಶ್ರಮ ಪಟ್ಟು ವಾರಾನ್ನ ಮಾಡಿ ವಿದ್ಯಾರ್ಜನೆಯಿಂದ ಮೇಲೆ ಬಂದು ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ … Read more

ಮೂರು ಕವನಗಳು: ಮಮತಾ ಚಿತ್ರದುರ್ಗ

ಅವನುಜೇನೊಳಗಿನ ಸಿಹಿ ಅವನುಹೂವಳಗಿನ ಮೃದು ಅವನುಗಾಳಿಯೊಳಗಿನ ಗಂಧ ಅವನುಮೋಡದೊಳಗಿನ ಬೆಳಕು ಅವನುತಾರೆಯೊಳಗಿನ ಹೊಳಪು ಅವನುನೀರಿನೊಳಗಿನ ಅಲೆಯ ಪುಳಕ ಅವನುಚಿತ್ರದೊಳಗಿನ ಬಣ್ಣ ಅವನುಪತ್ರದೊಳಗಿನ ಭಾವ ಅವನುಇಬ್ಬನಿಯೊಳಗಿನ ತೇವ ಅವನುಕಣ್ಣೊಳಗಿನ ನೋಟ ಅವನುಹಬ್ಬದೊಳಗಿನ ಸಡಗರ ಅವನುಬೆಟ್ಟದೊಳಗಿನ ತನ್ಮಯ ಅವನುಎಲೆಯೊಳಗಿನ ಹಸಿರು ಅವನುಚೈತ್ರದೊಳಗಿನ ಚಿಗುರು ಅವನುಭಾವನೆಗಳ ಯಾನಕ್ಕೆ ಗಮ್ಯ ಅವನುಸಂಗೀತದ ನಾದದೊಳಗಿನ ಸೌಮ್ಯ ಅವನುನನ್ನ ಧ್ವನಿಯ ಶಬ್ದ ಅವನುನನ್ನ ಕಣ್ಣಲಿ ಬೆರಗು ಅವನುನನ್ನವನು…! ಸುಗಂಧ ದ್ರವ್ಯವದು ಹೂಗಳ ಗೋರಿಒಣಗಿದ ಹೂಗಳ ಎದೆಯ ಭಾರದ ಮಾತಿನ ಸಾರ.ದೇವರ ಮುಡಿಯಲ್ಲಿದ್ದುಹೆಣದ ಅಡಿಯಲ್ಲಿದ್ದುಸೈನಿಕನ ಸಮಾಧಿ ಮೇಲಿದ್ದುಬಾವುಟದ … Read more

ಸಂಡಿಗ್ಯೋಪಾಖ್ಯಾನ: ಡಾ.ವೃಂದಾ ಸಂಗಮ್

ಕನ್ನಡದಾಗ ಋತು ಮಾನ ಮತ್ತ ಋತು ಸಂಹಾರ ಅಂತ ಒಂದು ಶಬ್ದ ಅದ. ಅಂದರ, ಋತುಗಳನ್ನ ಮಾನಕ ಅಂದರ ಅಳತೀ ಮಾಡೋದು ಅಥವಾ ಋತುಗಳನ್ನ ಲೆಕ್ಕ ಹಾಕೋದು ಅಂತನೋ ಇರಬೇಕು. ಇನ್ನ ಕಾಳಿದಾಸ ಅಂದಕೂಡಲೇ ನೆನಪಾಗೋದು ಋತು ಸಂಹಾರ. ಎಲ್ಲಾ ಬಿಟ್ಟು ಈ ಋತುಗಳನ್ಯಾಕೆ ಸಂಹಾರ ಮಾಡಬೇಕೋ ರಾಕ್ಷಸರ ಹಂಗ ಅನ್ನಬ್ಯಾಡರೀ. ನನಗೂ ಗೊತ್ತಿಲ್ಲ. ಆದರ, ವಸಂತ ಋತು ಬಂದಾಗಲೇ ಮಾವು ಹಣ್ಣಾಗಿ, ರಸ ತುಂಬಬೇಕು, ಮಲ್ಲಿಗೆ ಹೂವರಳಿ ಘಮ ಚಲ್ಲಬೇಕು ಎಂದು ಯಾರು ತಿಳಿಸುವರೋ ತಿಳೀಲಿಲ್ಲ … Read more

ಬೇಸರವಾಗದಿರಲಿ ಬೇಸಿಗೆ ರಜೆ: ವಿಜಯ್ ಕುಮಾರ್ ಕೆ. ಎಂ.

ಅದೊಂದಿತ್ತು ಕಾಲ ಬೇಸಿಗೆ ರಜೆ ಎಂದರೆ ಭಾವನೆಗಳ ಸಮಾಗಮ, ಬಂಧುಗಳ ಸಮ್ಮಿಲನ ಇಂದಿರುವ ಈ ಕಾಲ ಬೇಸಿಗೆ ಶಿಬಿರಗಳ, ತಾಪಮಾನದ ತಾಪತ್ರಯಗಳ ಸಂಕಲನ. ಹೌದು ಮಿತ್ರರೇ, 90ರ ದಶಕದ ನಂತರ ಬೇಸಿಗೆ ರಜೆ ಎಂಬುದು ಮಕ್ಕಳ ಮತ್ತು ಪೋಷಕರ ಮನಸ್ಸಿನಲ್ಲಿ ಮಹತ್ತರ ಬದಲಾವಣೆ ತಂದಿರುವುದು ನಮಗೆಲ್ಲಾ ತಿಳಿದ ವಿಚಾರವೇ ಸರಿ. ಆದರೂ ಈ ಕಾಲಘಟ್ಟಕ್ಕೆ ಹೊಂದುಕೊಳ್ಳುವುದಕ್ಕಿಂತಲು ಅಂದಿನ ಕಾಲಘಟ್ಟದ ಸಮಯ ಸಂದರ್ಭಗಳನ್ನು ಈ ಸಮಯಕ್ಕೆ ಅರ್ಥೈಸುವುದೇ ಬಹುಮುಖ್ಯ ಕಾರ್ಯವಾಗಿದೆ. ಅಂದೆಲ್ಲಾ ಬೇಸಿಗೆ ರಜೆ ಬಂತೆಂದರೆ ಕುಟುಂಬ ಕುಟುಂಬಗಳ … Read more

ಎರಡು ಧರ್ಮಗಳಿಗೆ ಒಂದೇ ಗುಡಿ (ಕಾಂಬೋಡಿಯಾ ಭಾಗ-3): ಎಂ ನಾಗರಾಜ ಶೆಟ್ಟಿ

ಇಲ್ಲಿಯವರೆಗೆ ನಾವು ಉಳಿದುಕೊಂಡಿದ್ದ ಹೋಟೆಲಲ್ಲಿ ಉಪಾಹಾರ ಮುಗಿಸಿ ಹೊರಗೆ ಬರುವಾಗ ರಾ ತಯಾರಾಗಿ ನಿಂತಿದ್ದ. ಸಮಯಕ್ಕೆ ಸರಿಯಾಗಿ ಅವನು ಬಂದಿದ್ದರಿಂದ ಖುಷಿಯಾಯಿತು. ಹಿಂದಿನ ದಿನದ ಹಣ ಪೂರ್ತಿ ತೆಗೆದುಕೊಂಡಿದ್ದರಿಂದ ಬರುತ್ತಾನೋ, ಇಲ್ಲವೋ ಎನ್ನುವ ಸಣ್ಣ ಅನುಮಾನವಿತ್ತು. ಕಾರು ಹತ್ತುವ ಮುನ್ನ, ಇತಿಹಾಸ್‌ ಪಕ್ಕದ ಶಾಪಿನಿಂದ ನೀರಿನ ಬಾಟಲುಗಳನ್ನು ಕೊಂಡ. ಅವನ ಹತ್ತಿರವಿದ್ದ ರಿಯಲ್‌ಗಳು ಮುಗಿದಿತ್ತು. ಅವನು ಕೊಟ್ಟ 20 ಡಾಲರ್‌ಗೆ ಅಂಗಡಿಯಾಕೆ ಚಿಲ್ಲರೆ ಕೊಟ್ಟಳು. ಸಿಯಾಮ್‌ ರೀಪ್‌ನಿಂದ ಸ್ವಲ್ಪ ದೂರ ಹೋದ ಕೂಡಲೇ ಅಂಗೋರ್‌ವಾಟ್‌ನ ಗೋಪುರಗಳು ಕಾಣುತ್ತವೆ. … Read more

ಜೀವನಾನುಭವದ ಕಂದೀಲು”ಬಾಳನೌಕೆಗೆ ಬೆಳಕಿನ ದೀಪ”: ಜ್ಯೋತಿ ಕುಮಾರ್. ಎಂ(ಜೆ. ಕೆ.)

ಹಡಗಿನಲ್ಲಿ ಪಯಣಿಸುವವರಿಗೆ ಬೇಕು ದಿಕ್ಸೂಚಿ. ದಡದ ಕಡೆ ಬರುವವರಿಗೆ ಬೇಕು ಲೈಟ್ ಹೌಸ್. ಜೀವನದಲ್ಲಿ ಸರಿ ದಾರಿಯಲ್ಲಿ ಹೋಗುವವರಿಗೆ ಬೇಕು ಹಿರಿಯರ ಅನುಭವ ಮತ್ತು ಅನುಭಾವದ ಹಿತ ನುಡಿಗಳು. ಕತ್ತಲೆಯನ್ನು ಓಡಿಸಲು ಬೇಕು ಕಂದೀಲು. ಅಂದರೆ ಕಂದೀಲು ಇರುವೆಡೆ ಕತ್ತಲು ಇರದು. ಆದರೆ ಜೀವನದಲ್ಲಿಯೇ ಕತ್ತಲು ಬಂದು ಬದುಕು ಪೂರ್ತಿ ಕತ್ತಲೆಯಲ್ಲಿ ಸವೆಸುವಂತಾದರೆ ಕೈ ಹಿಡಿದು ನಡೆಸುವವರು ಯಾರು? ದಾರಿ ತೋರಿಸುವವರು ಯಾರು? ದೀಪದ ಬುಡದಲ್ಲಿಯೇ ಕತ್ತಲು ಇದ್ದರೆ ಜ್ಯೋತಿ ತನ್ನನ್ನು ತಾನು ಸುಟ್ಟು ಕೊಂಡು ಜಗವನ್ನು … Read more