ಒಂದ್ ಡೇ ವಿತ್ ಗಣಪ!: ರೂಪ ಮಂಜುನಾಥ
ಆ ದಿನ ಭಾದ್ರಪದ ಶುಕ್ಲದಾ ಚೌತಿ! ಬೆಳಗಿನಿಂದಲೇ ಮುದ್ದು ವಿನಾಯಕನನ್ನು ಸ್ವಾಗತಿಸಲು ಸಂಭ್ರಮದಿಂದ ಮಿಂದುಮಡಿಯನುಟ್ಟು, ದೇವರ ಮನೆಯ ಮಾಡಿ ಅಚುಕಟ್ಟು, ಪೂಜಾ ಸಲಕರಣೆಗಳನ್ನು ಜೋಡಿಸಿಟ್ಟು, ಹೂ ಬಿಡಿಸಿಟ್ಟು, ಫಲತಾಂಬೂಲ ನೈವೇದ್ಯಕಿಟ್ಟೂ, ಗಣಪನಿಗೆ ಒಳ್ಳೆಯ ಪೀಠವಿಟ್ಟೂ, ಅಡಿಗೆಮನೆಗೆ ಹೆಜ್ಜೆಯಿಟ್ಟು, ನಮ್ಮ ಈಶಣ್ಣನ ಮಗ ಗಣಪ್ಪನ ಜೊತೆಗೆ ನಮ್ಮಮನೆಯಲಿರುವ ಗಣಪ್ಪನಿಗೆ( ನನ್ ಮಗನೂ ಸ್ವಲ್ಪ ಠೊಣಪನೇ) ಇಷ್ಟವಾಗುವ ಅಡಿಗೆಯ ತಯಾರಿಯಲ್ಲಿದ್ದೆ. ಅಪ್ಪ ಮಕ್ಕಳು ಎದ್ದುಸ್ನಾನ ಮಾಡಿ ಪೂಜೆ ಮಾಡಲು ಸಿದ್ದವಾದರು. ನಮ್ಮ ಟ್ಯಾಬ್ ಗುರುಗಳನ್ನ “ ಸ್ವಾಮಿ ಬರ್ತೀರಾ”?ಅಂದಿದ್ದೇ ತಡ … Read more