ಬದುಕಿನ ಆಶಾಕಿರಣ: ಪದ್ಮಾ ಭಟ್

                              ”ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ” ಈ ಸಾಲನ್ನು ಪದೇ ಪದೇ ಕೇಳಬೇಕೆನಿಸಿತ್ತು.. ಮುಂದುವರೆದು ಇರುವುದೆಲ್ಲವ ಬಿಟ್ಟು ಇರದುದರೆಡೆ ತುಡಿವುದೆ ಜೀವನ ಸಾಲೂ ಮತ್ತೊಮ್ಮೆ ಮಗದೊಮ್ಮೆ ಹಾಕಿ ಕೇಳಿಸಿದೆ. ಯಾವ ಮೋಹನ ಮುರಳಿ ಕರೆಯಿತೋ ಹೊಸದಾಗಿ ಕೇಳುವವಳೇನಲ್ಲ. ಆದರೆ ಎಂದಿಗಿಂತಲೂ ಆಪ್ತವೆನಿಸಿತ್ತು ಸಾಲುಗಳು..ಯಾಕೋ ಒಬ್ಬಂಟಿಯಾಗಿ ಕುಳಿತಿದ್ದವಳಿಗೆ ಹಾಡಿನಲ್ಲಿ ಕಳೆದು ಹೋಗುತ್ತಿದ್ದೇನೆ ಎಂಬುವುದು ಅರಿವಾಗದೇ ಇರುವಷ್ಟು ಮುಳುಗಿ ಹೋಗಿದ್ದೆ … Read more

ಮಾವು-ಹಲಸಿನ ಮರ ಉಳಿಸಿದ ಕತೆ: ಅಖಿಲೇಶ್ ಚಿಪ್ಪಳಿ

ಲೋಕಸಭೆಗೆ ಚುನಾವಣೆ ಘೋಷಣೆಯಾಗುವ ಸರಿಯಾಗಿ ೧೨ ದಿನ ಮೊದಲು ಹಾಗೂ ಕೇಂದ್ರ ತೈಲ ಮತ್ತು ಪರಿಸರ ಮಂತ್ರಿ ಅಭಿವೃದ್ಧಿಯ ನೆಪದಲ್ಲಿ ಕಾರುಗಳ ಮೇಲೆ ವಿಧಿಸುವ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ೫ ದಿನಗಳ ನಂತರ ಅಂದರೆ ದಿನಾಂಕ:೨೨-೦೩-೨೦೧೪ರಂದು ಬೆಳಗ್ಗೆ ೯.೩೦ಕ್ಕೆ ಅಪ್ಪಟ ಪೃಥ್ವಿ ಮಿತ್ರರೊಬ್ಬರು ನಿಸ್ತಂತು ದೂರವಾಣಿಗೆ ಕರೆ ಮಾಡಿ ಸಾಗರದಿಂದ ಸಿಗಂದೂರಿಗೆ ಹೋಗುವ ಮಾರ್ಗದಲ್ಲಿರುವ ೨ ಮರಗಳನ್ನು ಅರಣ್ಯ ಇಲಾಖೆಯ ಪರವಾನಿಗೆ ಪಡೆದು ಕಡಿಯುತ್ತಿದ್ದಾರೆ ಬೇಗ ಬನ್ನಿ ಎಂದು ಹೇಳಿದರು. ಬೆಳಗಿನ ಹೊತ್ತು ನಮ್ಮ ಹೊಟ್ಟೆಪಾಡಿನ … Read more

ಕಳ್ಳೆ-ಮಳ್ಳೆ ಕಪಾಟ ಮಳ್ಳೆ: ಸುಮನ್ ದೇಸಾಯಿ

ಮನ್ನೆ ರವಿವಾರ ಮಧ್ಯಾನಾ ಉರಿ ಉರಿ ಬಿಸಲ ಝಳಾ ತಡಕೊಳ್ಳಾರ್ದಕ್ಕ ಬಾಗಿಲಿಗೆ ತಲಿಕೊಟ್ಟ ಮಲಕೊಂಡ್ಡಿದ್ದೆ, ಹಿಂಗ ಜಂಪ ಹತ್ತ್ಲಿಕತ್ತಿತ್ತು ಅಷ್ಟರಾಗ ತಂಪಸೂಸ ಗಾಳಿ ಬಿಸಲಿಕತ್ತು. ಕಣ್ಣ ತಗದು ನೋಡೊದ್ರಾಗ ಮಳಿ ಬರೊಹಂಗಾಗಿ ಜೋರ ಮಾಡ ಹಾಕಿತ್ತು. ಇನ್ನೆನು ಹಿತ್ತಲಕ್ಕ ಹೋಗಿ ಒಣಗಿದ್ದ ಅರಬಿ ತಕ್ಕೊಂಡ ಬರೊದ್ರಾಗ ಹನಿ ಹನಿ ಮಳಿ ಶುರು ಆಗೆಬಿಡ್ತು. ನೋಡ್ ನೋಡೊದ್ರಾಗ ದಪ್ಪ ದಪ್ಪ ಹನಿ ಜೊಡಿ ಆಣಿಕಲ್ಲು ಬಿಳಿಕ್ಕತ್ವು.ಕಣ್ಣ ಮುಚ್ಚಿ ಕಣ್ಣ ತಗಿಯೋದ್ರಾಗ ಅಂಗಳದ ತುಂಬ ಬೆಳ್ಳಗ ಮಲ್ಲಿಗಿ ಹೂವಿನ ರಾಶಿ … Read more

ಮೂರು ಕವಿತೆಗಳು: ಪ್ರಭಾಮಣಿ ನಾಗರಾಜ, ಸಹನಾ ಕಾಂತಬೈಲು, ಶ್ರೀದೇವಿ ಕೆರೆಮನೆ

ಹಬ್ಬದ ಕುರಿ ಕಟ್ಟಲಾಗಿದೆ ಕುರಿಯ ಪಡಸಾಲೆಯಲ್ಲಿ ಇದ್ದಲ್ಲೇ ದೊರೆವ ಸೊಪ್ಪುಸೆದೆ ಬಗೆಬಗೆಯ ಆಹಾರ ಏಕಿಷ್ಟು ಉಪಚಾರ? ಕ್ಷಣಗಣನೆಯಾಗುತಿದೆ ಎಂದರಿಯದ ಬಕರ   ಕಣ್ಣಲ್ಲೇ ಅಳೆವವರ ಅಭಿಮಾನದ ನೋಟ ಏನಿದು ಮನುಜರ  ವಿಕೃತ ಆಟ? ಅಪರಿಚಿತರ ಕಂಡು  ಬೆದರುತಿದೆ ಮುಗ್ದ ‘ಹಬ್ಬಕ್ಕೆ ತಂದ  ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತ್ತಾ…’ ಎಂದೂ ಆರದ ಕಿಚ್ಚಿನ  ನಮ್ಮೀ ಒಡಲೊಳಗಿನ  ಬಡಬಾಗ್ನಿಯ ತಣಿಸಲು ಇನ್ನೆಷ್ಟು ಜೀವಿಗಳ  ಬಲಿಯೋ? ಅತೃಪ್ತ-ತೃಪ್ತತೆಯ  ಅವಿರತ ಓಟದಲಿ ಜಿಹ್ವೆಯದೇ ದರ್ಬಾರು ಬಾಹ್ಯ ಪ್ರೇರಿತ ಕ್ರಿಯೆಗಳಲ್ಲಿಯೇ  ತೊಡಗಿದ … Read more

ಸಾಮಾನ್ಯ ಜ್ಞಾನ (ವಾರ 18): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಚಂದ್ರನ ಮೇಲೆ ಪ್ರಥಮವಾಗಿ ತಲುಪಿದ ಮಾನವನಾರು? ೨.    ಭಾರತಕ್ಕೆ ಸ್ವಾತಂತ್ರ ಬಂದಾಗ ಗಾಂಧೀಜಿಯವರು ಎಲ್ಲಿದ್ದರು? ೩.    ಇಂಟರ್‌ನೆಟ್ಟನ್ನು ಮೊದಲಿಗೆ ಎಲ್ಲಿ ಬಳಸಲಾಯಿತು? ೪.    ಸ್ವತಂತ್ರ ಭಾರತದ ಮೊಟ್ಟ ಮೊದಲ ವಿವಿದ್ದೋದ್ದೇಶ ನದಿ ಕಣಿವೆ ಯೋಜನೆ ಯಾವುದು? ೫.    ಶಂಕರಾಚಾರ್ಯರು ಯಾವ ರಾಜ್ಯದಲ್ಲಿ ಜನಿಸಿದರು? ೬.    ಭಾಗ್ಯಲಕ್ಷ್ಮಿ ಯೋಜನೆ ಎಂದರೇನು? ೭.    ರಾಕ್ಷಸ ಪ್ರವೃತ್ತಿಯ ಅಂಗೂಲಿಮಾಲನ ಮನಪರಿವರ್ತನೆ ಮಾಡಿದವರು ಯಾರು? ೮.    ನಮ್ಮ ರಾಜ್ಯದಲ್ಲಿ ಕರಡಿಗಳಿಗೆ ಸ್ಥಾಪಿಸಿರುವ ರಕ್ಷಣಾಧಾಮ ಎಲ್ಲಿದೆ? ೯.    ವಾತಾವರಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ … Read more

ಹಿಂತಿರುಗಿ ನೋಡಿದಾಗ: ರುಕ್ಮಿಣಿಮಾಲಾ

೧೯೭೪ನೇ ಇಸವಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತನಡ್ಕದಲ್ಲಿರುವ ಸರ್ಕಾರೀ ಪ್ರಾಥಮಿಕ ಶಾಲೆಗೆ ಒಂದನೇ ತರಗತಿಗೆ ಸೇರಿದಾಗ ನನ್ನ ವಯಸ್ಸು ಐದು. ಮನೆಯಿಂದ ಶಾಲೆಗೆ ಒಂದು ಮೈಲಿ ನಡೆದೇ ಹೋಗುತ್ತಿದ್ದುದು. ನಮಗೆ ಮಹಮ್ಮದ್ ಎಂಬ ಶಿಕ್ಷಕರು ಅ ಆ ಇ.. ..  ಕನ್ನಡ ಅಕ್ಷರ ಮಾಲೆ ಕಲಿಸಿದವರು. ಅವರ ಮೇಜಿನಮೇಲೆ ನಾಗರಬೆತ್ತ ಸದಾ ಇರುತ್ತಿತ್ತು. ಒಮ್ಮೆಯೂ ನಾನು ಅದರ ಪೆಟ್ಟಿನ ರುಚಿ ಪಡೆದವಳಲ್ಲ! ಆದರೆ ಏಕೋ ಗೊತ್ತಿಲ್ಲ ಆ ಬೆತ್ತದಮೇಲೆ ನನಗೆ ಬಲು ಕೋಪವಿತ್ತು. ನಮ್ಮ ಮೇಸ್ಟರು … Read more

ಸ್ತ್ರೀ, ಸ್ವಾತ೦ತ್ರ್ಯ, ಸ್ತ್ರೀ ಸ್ವಾತ೦ತ್ರ್ಯ: ರೂಪ ಸತೀಶ್

  ಸ್ಪ್ರಿ೦ಗ್ ಟ್ರೀ ಅಪಾರ್ಟ್ಮೆ೦ಟ್ ರೆಸಿಡೆ೦ಟ್ಸ್ ಅಸೋಸಿಯೇಷನ್ನಿನ ನಿಯಮದ೦ತೆ / ಸರದಿಯ೦ತೆ ಈ ಬಾರಿಯ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು ೪೦೪ ನೇ ಫ್ಲಾಟಿನ ಶಾ೦ತ ಇನಾಮ್ದಾರ್. ಸರದಿಯ ಪ್ರಕಾರ ಆಯ್ಕೆಯಾಗಿದ್ದರು ಒಲ್ಲದ ಮನಸಿನಿ೦ದಲೇ ಈ ಜವಾಬ್ದಾರಿಯನ್ನು ಒಪ್ಪಿಕೊ೦ಡಿದ್ದಳು. ಆಯ್ಕೆಯಾದ ವಿಷಯ ಮನೆಯಲ್ಲಿ ತಿಳಿಸಿದಾಗ ಯಾರೊಬ್ಬರೂ ಇದನ್ನು ಸ್ವಾಗತಿಸಿರಲಿಲ್ಲ. ಬದಲಿಗೆ ಗೇಲಿ ಮಾಡಿ ತಮಾಷೆ ಮಾಡಿದ್ದರು.   ಮು೦ದಿನ ವಾರ ಅ೦ತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅ೦ಗವಾಗಿ ಅಸೋಸಿಯೇಷನ್ನಿನ ಸಧಸ್ಯರೆಲ್ಲರೂ ಸೇರಿ ಒ೦ದು ಕಾರ್ಯಕ್ರಮ ಆಯೋಜಿಸಿಕೊ೦ಡಿದ್ದು, ಅದಕ್ಕಾಗಿ ಶಾ೦ತ ಅಪಾರ್ಟ್ಮೆ೦ಟಿನ ಹೆ೦ಗಸಿರಿಗೆ … Read more

ಛಾಯಾಗ್ರಹಣ: ರಜನಿ ನಿಟ್ಟೆ

ನಾನು ಬೆಂಗಳೂರಿನ ತಂತಜ್ಞಾನ ಸಂಸ್ಥೆಯಲ್ಲಿ ಉದ್ಯೋಗಿ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪುಟ್ಟ ಹಳ್ಳಿ ನಿಟ್ಟೆ ನನ್ನೂರು. ನನಗೂ ಎಲ್ಲರಂತೆ ಬಿಡುವಿನ ವೇಳೆ ಕಳೆಯಲು ಕೆಲವು ಹವ್ಯಾಸಗಳು. ಸುಮಾರು ಐದಾರು ವರ್ಷಗಳಿಂದ ತುಂಬಾ ಆಸಕ್ತಿಯಿಂದ ಬೆಳೆಸಿಕೊಂಡು ಬಂದಿರುವ ಒಂದು ಮುಖ್ಯ ಹವ್ಯಾಸ ಛಾಯಾಗ್ರಹಣ. ಹಾಗೆಂದು ನಾನು ವ್ರತ್ತಿಪರ ಛಾಯಾಗ್ರಾಹಕಿಯೆಂದಾಗಲೀ ಅಥವಾ ಪರಿಣಿತೆ ಎಂದಾಗಲಿ ಅಂದುಕೊಳ್ಳಬೇಡಿ. ಮನಸ್ಸಿಗೆ ಇಷ್ಟವಾದದ್ದನ್ನು ನನಗೆ ತಿಳಿದಂತೆ ಸೆರೆಹಿಡಿಯುವುದಷ್ಟೇ ನನಗೆ ತಿಳಿದಿರುವುದು.    ಛಾಯಾಗ್ರಾಹಕಿಯಾಗಿ ಪ್ರಕೃತಿ ಮತ್ತು ಜನಜೀವನದ ಚಿತ್ರಗಳನ್ನು ಸೆರೆಹಿಡಿಯುವುದು ನನಗೆ ತುಂಬಾ … Read more

ಯುನೈಟೆಡ್ ಬ್ರೇಕ್ಸ್ ಗಿಟಾರ್: ಅಮರ್ ದೀಪ್ ಪಿ.ಎಸ್.

ನಾವು ಪ್ರತಿ ದಿನ ಬೆಳಿಗ್ಗೆ ಎದ್ದು ಹಲ್ಲುಜ್ಜುವುದರ ಟೂತ್ ಪೇಸ್ಟ್ ನಿಂದ ಹಿಡಿದು  ರಾತ್ರಿ ಸೊಳ್ಳೆ ಬತ್ತೀನೋ ಲಿಕ್ವಿಡ್ದೋ  ಹಚ್ಚಿ  ಮಲಗುವವರೆಗೆ ಎಷ್ಟು ಕಂಪನಿಗಳ ಎಷ್ಟು ಸರಕುಗಳನ್ನು ಬಳಸಿರು ತ್ತೇವೆ, ಎಷ್ಟು ಸೇವೆಯನ್ನು ಪಡೆದಿರುತ್ತೇವೆ.  ಯಾವ ಸರಕು/ವಸ್ತು ನಮ್ಮ ಅವಶ್ಯಕತೆಯನ್ನು ಎಷ್ಟರಮಟ್ಟಿಗೆ ಪೂರೈಸಿದೆ? ಯಾವ ಸರಕಿನ ಸರಬರಾಜುದಾರರು ನಮಗೆ ಉತ್ತಮ ಸೇವೆಯನ್ನು ನೀಡಿದ್ದಾರೆ? ಲೆಕ್ಕ ಇಟ್ಟಿರುತ್ತೆವೆಯೇ? ಕೆಲವರು ಇಟ್ಟಿದ್ದರೆ ಇಟ್ಟಿರಬಹುದು, ಅದೂ ಬಹಳ ಕಡಿಮೆ. ಒಂದು ವೇಳೆ ನಾವು ಕೊಂಡ ಸರಕು/ಸೇವೆ ಸರಿಯಾಗಿದ್ದರೆ ಯಾವುದೇ ಸಮಸ್ಯೆ ಇಲ್ಲ. … Read more

ಕೊಡಗಿನಲ್ಲಿ ಪ್ರವಾಸೋಧ್ಯಮ ಮತ್ತು ಮಹಿಳೆ: ಸವಿತಾ ಮಡಿಕೇರಿ

ಪುರಾಣ ಕಾಲದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನವಿತ್ತು. ಒಳ್ಳೆಯ ಗೌರವ ಹಾಗೂ ಬೆಲೆ ಇತ್ತು. ಕ್ರಮೇಣ ಕಾಲ ಬದಲಾದಂತೆ ಮಹಿಳೆಯನ್ನು ಅಡಿಗೆ ಮನೆಗೆ ಸೀಮಿತವಾಗಿಡಲಾಯಿತು. ಮಹಿಳೆ ಎಷ್ಟೇ ಬುದ್ಧಿವಂತಳಾದರೂ ಬೇರೆ ವ್ಯವಹಾರಗಳಲ್ಲಿ ಅವಳಿಗೆ ಪ್ರವೇಶವಿರಲಿಲ್ಲ. ಅವಳಿಗೆ ಹೆಚ್ಚಿನ ವಿದ್ಯಾಭ್ಯಾಸ ದೊರೆಯುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ಮಹಿಳೆಯರು ಅಡಿಗೆ ಮನೆಗೆ ಸೀಮಿತರಾಗಿಲ್ಲ. ಮಹಿಳೆ  ಹೊರಜಗತ್ತಿನಲ್ಲಿ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದಾಳೆ. ಜೊತೆಗೆ ಮನೆ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿದ್ದಾಳೆ. ಪುರುಷರಿಗಿಂತ ಒಂದು ಹೆಜ್ಜೆ ಮುಂದೆಯೇ ಇದ್ದಾಳೆ ಎನ್ನಬಹುದು.ಪ್ರತಿವರ್ಷ ಪರೀಕ್ಷೆಯ ಫಲಿತಾಂಶ ಬಂದಾಗ … Read more

ಯೋಗ ಸಂಜೀವಿನಿ: ಪೂರ್ಣಿಮಾ ಗಿರೀಶ್

ಯೋಗ ಅನ್ನುವುದು ಎಲ್ಲರಿಗೂ ಎಟುಕುವ ವಿದ್ಯೆ. ನಿರಂತರ ಅಭ್ಯಾಸದಿಂದ ಯೋಗವನ್ನು ಕರಗತ ಮಾಡಿಕೊಳ್ಳಲು ಸಾಧ್ಯ. ದಿನದ ೨೪ ಘಂಟೆಗಳಲ್ಲಿ ನಮ್ಮ ದೇಹ ಮತ್ತು ಮನಸ್ಸು ವಿವಿಧ ಕೆಲಸಗಳಲ್ಲಿ, ಯೋಚನೆಗಳಲ್ಲಿ ಲೀನವಾಗಿರುತ್ತದೆ. ಅಗತ್ಯವಾಗಿರುವ ವಿಶ್ರಾಂತಿ ದೊರೆಯದಿದ್ದಾಗ ನಾವು ಮಾಡುವ ಕೆಲಸಗಳು ಪರಿಪೂರ್ಣವಾಗಿರುವುದಿಲ್ಲ ಮತ್ತು ದೇಹ ಅನಾರೋಗ್ಯಕ್ಕೀಡಾಗುವ ಸಾಧ್ಯತೆಗಳು ಬಹಳ. ಯೋಗಭ್ಯಾಸದಲ್ಲಿ ದೀರ್ಘ ಉಸಿರಾಟಕ್ಕೆ ಬಹಳ ಪ್ರಮುಖವಾದ ಸ್ಥಾನವಿದೆ. ದೀರ್ಘ ಉಸಿರಾಟದೊಡನೆ ಮಾಡುವ ಆಸನಗಳಿಂದ ಚಿತ್ತಕ್ಕೆ ಶಾಂತಿ ಮತ್ತು ಸಂಯಮ ದೊರಕಿ ನಮ್ಮ ದಿನನಿತ್ಯದ ಕೆಲಸ ಕಾರ್ಯಗಳನ್ನು ಉತ್ಸಾಹದಿಂದ ಮಾಡಬಹುದಾಗಿದೆ. … Read more

ಒಂದು ಸ್ನೇಹದ ಸುತ್ತ: ಪ್ರಶಸ್ತಿ ಅಂಕಣ

ತೊಳೆಯಬೇಕೆಂದು ನೆನೆಸಿದರೂ ತೊಳೆಯಲಾಗದ ಸೋಮಾರಿತನಕ್ಕೆ ಬಕೆಟ್ಟಲ್ಲೇ ಕೊಳೆಯುತ್ತಿರುವ ಬಟ್ಟೆ, ಉತ್ತರ ದಕ್ಷಿಣಕ್ಕೆ ಮುಖಮಾಡಿರೋ ತನ್ನ ಮೂಲ ಬಣ್ಣ ಬಿಳಿಯೋ, ಹಳದಿಯೋ,  ಸಿಮೆಂಟೋ ಎಂದು ತನಗೇ ಮರೆತು ಹೋದಂತಾಗಿರೋ ಬೂದು ಶೂಗಳಿಂದ ಹೊರಬಿದ್ದು ತನ್ನ ಅಸ್ತಿತ್ವ ಸಾರುತ್ತಿರೋ ಸಾಕ್ಸುಗಳು, ನಾಯಿ ನಾಲಗೆಯಾದಂತಾಗಿ ಕೆಲವೆಡೆ ತಳ ಕಂಡರೂ ಇನ್ನೂ ಮುಕ್ತಿ ಕಾಣದ ಚಪ್ಪಲಿ, ಹೊರಗೆ ಒಣಗಿಸಿ ವಾರವಾದರೂ ತೆಗೆಯದಿದ್ದ ನನ್ನ ಬಟ್ಟೆಗಳಿಂದ ತನ್ನ ಬಟ್ಟೆಗೆ ಜಾಗವಿಲ್ಲವೆಂದು ಸಿಟ್ಟಿಗೆದ್ದ ಗೆಳೆಯ ತಂದು ಒಗೆದಿರೋ ಗುಪ್ಪೆ ಗುಪ್ಪೆ ಬಟ್ಟೆಗಳು, ತರಿಸಿದರೂ ಓದುವುದಿರಲಿ ಮಡಚಿಡಲೂ … Read more

ದ್ವಿಮುಖ ಪರಿಚಯ: ಅನಿತಾ ನರೇಶ್ ಮಂಚಿ

ಇಡ್ಲಿ ಬೇಯಲಿಟ್ಟು ಚಟ್ನಿಗಾಗಿ ಕಾಯಿ ತುರಿಯುತ್ತಲಿದ್ದೆ. ಪಕ್ಕದ ಮನೆಯ ಪಂಕಜಾಕ್ಷಿ ಅಕ್ಕಾ ಅಂತ ಕರೆದಳು. ಅದರ ಮೊದಲೇ ಅವಳ ಕುಮಾರ ಕಂಠೀರವ ಅಡುಗೆ ಮನೆಗೆ ನುಗ್ಗಿ ಎರಡು ಜ್ಯೂಸಿನ ಲೋಟ ನೆಲಕ್ಕೆಸೆದಾಗಿತ್ತು. ಪುಣ್ಯಕ್ಕೆ ಅದು ಅನ್ ಬ್ರೇಕೇಬಲ್ ಗಳಾದ್ದರಿಂದ ಬಿದ್ದ ಲೋಟ ಎತ್ತಿಟ್ಟು ಅವನ ಕೆಲಸಕ್ಕೆ ಬ್ರೇಕ್ ಹಾಕಿದೆ. ಅಕ್ಕಾ ಸ್ವಲ್ಪ ಹೊತ್ತು ಅವನನ್ನಿಲ್ಲಿ ಬಿಟ್ಟು ಹೋಗ್ತೀನಿ.. ಅಂದಳು ಅವಳು.. ನಾನು ಹೂಂ ಅನ್ನುವ ಮೊದಲೇ ಅವಳ ಕುಮಾರ ಕಂಠೀರವ ನನ್ನ ಮುಖ ನೋಡಿ ಕಿಟಾರನೆ ಕಿರುಚಿ … Read more

ಕರ್ನಾಟಕ ರಾಜ್ಯ ಲಾಟರಿ “ಅಂದು ಡ್ರಾ ” ಇಂದಿಗೆ ಬಹು “ಮಾನ “: ಅಮರ್ ದೀಪ್ ಪಿ.ಎಸ್.

ಇಪ್ಪತ್ತೊಂದರ ವಯಸ್ಸಿನ ಹುಡುಗ, ಅವನ ತಮ್ಮ ಮತ್ತವರ ತಾಯಿ  ಆಗತಾನೇ ಆ ಹುಡುಗನ ತಂದೆಯ ಶವ ಸಂಸ್ಕಾರ, ಕ್ರಿಯಾ ಕರ್ಮಗಳನ್ನೆಲ್ಲಾ ಮುಗಿಸಿ ಮನೆಗೆ ಬಂದು ಕುಳಿತಿದ್ದರು. ಎದು ರಿಗಿದ್ದವರಿಗೆ ಆಡಲು ಮಾತುಗಳು ಖಾಲಿ ಖಾಲಿ.  ತಾಯಿ ಮಕ್ಕಳ ಮುಖಗಳನ್ನು ನೋಡುತ್ತಲೇ ಹಂಗೆ ಅವರ ನೆನಪು ವರ್ಷದಿಂದ ವರ್ಷ ಹಿಂದಕ್ಕೆ, ಮೂವತ್ತು ವರ್ಷಗಳ ಹಿಂದಕ್ಕೆ ಜಾರಿದವು…..  ಅದೊಂದು ಪುಟ್ಟ ಗ್ರಾಮ. ಬಿಸಿಲಿಗೂ ಬರಕ್ಕೂ ಮತ್ತೊಂದು ಹೆಸರಾಗಿದ್ದ ಊರದು. ಆ ಊರಿಗೆ ಒಂದೇ ಮುಖ್ಯ ರಸ್ತೆ ಮೂರು ಬಸ್ ನಿಲ್ದಾಣ. … Read more

ಸರ್…. ಡ್ರಾಪ್ ಪ್ಲೀಸ್!!: ಸಂತೋಷ್ ಕುಮಾರ್ ಎಲ್. ಎಮ್.

ಒಂದು  ಸುಮಾರು 15 ವರ್ಷಗಳ ಹಿಂದೆ ಮೈಸೂರಿನಲ್ಲಿ PUC ಓದುತ್ತಿದ್ದ ಸಂದರ್ಭ. ಅಪ್ಪ ನನಗೆ ಕೊಡಿಸಿದ ಸೆಕೆಂಡ್ ಹ್ಯಾಂಡ್ ಬೈಸಿಕಲ್ಲು ಮುರಿದು ಮೂಲೆ ಸೇರಿತ್ತು. ಅದರ ರಿಪೇರಿಗೂ ನೂರು ರೂಪಾಯಿ ಇಲ್ಲದ ಪರಿಸ್ಥಿತಿ. ಕಾಲೇಜು ಶುರುವಾಗುತ್ತಿದ್ದುದೇ ಒಂಭತ್ತು ಗಂಟೆಗೆ. ಮೊದಲ ಪಿರಿಯಡ್ ಮುಂಗೋಪಿ ಮತ್ತು ಮಹಾಸಿಡುಕ ಪ್ರೊಫೆಸರ್ ಸಾಂಬಶಿವಯ್ಯನವರದ್ದು. ಆದ್ದರಿಂದ ಅವರು ಕ್ಲಾಸಿಗೆ ಪ್ರವೇಶವಾಗುವ ಮೊದಲೇ ಎಲ್ಲರೂ ಒಳಗಿರಬೇಕಿತ್ತು. ಲೇಟಾಗಿ ಬಂದವರಿಗೆ ಮರದ ಸ್ಕೇಲಿನ ಬಿಸಿಯೇಟು. ಬರದೆ ಹೋದವರ ಮನೆಗೆ absence report. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ … Read more

ಸಾಮಾನ್ಯ ಜ್ಞಾನ (ವಾರ 17): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಸಂವಿಧಾನದ ಇತಿಹಾಸದಲ್ಲಿ ಎರಡು ಬಾರಿ ಹಂಗಾಮಿಯಾಗಿ ಪ್ರಧಾನಿ ಹುದ್ದೆ ಸ್ವೀಕರಿಸಿದವರು ಯಾರು? ೨.    ನಾವಿಕರ ದಿಕ್ಸೂಚಿಯನ್ನು ಕಂಡುಹಿಡಿದವರು ಯಾರು? ೩.    ಭಾರತದಲ್ಲಿ ಪ್ರಮುಖವಾಗಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಾವುವು? ೪.    ದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಾಸವಾದ ಮೊದಲ ರಾಷ್ಟ್ರಪತಿ ಯಾರು? ೫.    ಹಿಂದೂ ಸ್ತ್ರೀಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಪಾಲಿದೆ ಎಂಬುದನ್ನು ಯಾವ ಕಾಯ್ದೆ ಉಲ್ಲೇಖಿಸುತ್ತದೆ? ೬.    ಮೊದಲ ಪ್ರನಾಳ ಶಿಶುವಿನ ಹೆಸರೇನು? ೭.    ಯಾವ ಗ್ರಹ ಭೂಮಿಯ ಗಾತ್ರ ಮತ್ತು ದ್ರವ್ಯರಾಶಿಗೆ ಬಹುತೇಕ … Read more

ವಿಜ್ಞಾನ ದಿನ: ಅಖಿಲೇಶ್ ಚಿಪ್ಪಳಿ

ಪ್ರತಿವರ್ಷ ಫೆಬ್ರವರಿ ೧೪ರಂದು ಪ್ರೇಮಿಗಳ ದಿನಾಚರಣೆಯನ್ನು ವಿಶ್ವದೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಾರೆ. ಪ್ರೇಮಿಗಳ ದಿನಾಚರಣೆಯನ್ನು ನಿಷೇಧಿಸಬೇಕೆಂಬ ಕೂಗು ಇದೆ. ಪ್ರೇಮಿಗಳ ದಿನಾಚರಣೆಯಿಂದ ಸರಿಯಾಗಿ ೧೪ ದಿನಗಳ ನಂತರ ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತಾರೆ. ದಿ.ಚಂದ್ರಶೇಖರ ವೆಂಕಟ ರಾಮನ್ ಎಂಬ ಭಾರತದ ವಿಜ್ಞಾನಿ ೧೯೨೮ರಲ್ಲಿ ಸಂಶೋಧಿಸಿದ ಬೆಳಕಿನ ?? ಕ್ಕೆ ೧೯೩೦ರಲ್ಲಿ ನೋಬೆಲ್ ಪ್ರಶಸ್ತಿ ಸಿಕ್ಕಿತು. ಭೌತಶಾಸ್ತ್ರದ ಈ ಅಮೋಘ ಸಾಧನೆ ಇವತ್ತಿಗೂ ವಿಜ್ಞಾನ ಕ್ಷೇತ್ರದಲ್ಲೊಂದು ಮೈಲಿಗಲ್ಲು ಎಂದು ದಾಖಲಾಗಿದೆ. ಈ ಮಹಾನ್ ವಿಜ್ಞಾನಿಯ ನೆನಪಿಗಾಗಿ ಭಾರತ ಸರ್ಕಾರ … Read more

ಮೂವರ ಕವಿತೆಗಳು: ರಾಘವೇಂದ್ರ ಹೆಗಡೆಕರ್, ಸಂಗೀತ ರವಿರಾಜ್, ಷಡಕ್ಷರಿ ತರಬೇನಹಳ್ಳಿ

— ಗೋಡೆ — ನನಗಾಗಿ   ಅಗೆದ ಯಾರದೋ ಭೂಮಿಯಲ್ಲಿ ಇನ್ನಾರೋ ಮಲಗಿದ್ದರಂತೆ ಪಾಪ.  ನೆಲದ ಮೇಲೆ ಎಲ್ಲ ಹಂಚಿಕೊಂಡವರು ನಾವು-  ಮಾಡಿ ಭಾಗ . ಗೊತ್ತೇ  ಇರಲಿಲ್ಲ ಇದ್ದರೂ ಇರಬಹುದು  ಇಂಥದೊಂದು ಜಾಗ. ಸಮಾಧಿ ಸ್ತಿತಿಯಲ್ಲಿ  ಅವಿತು ಕುಳಿತವನ  ಗಾಢ ಮೌನದ  ಸದ್ದುಗಳು . ಅರೆ  ಪಕ್ಕದಲ್ಲೇ  ಚಿರ ನಿದ್ರೆಯಲ್ಲಿದ್ದಾಳೆ ಚಿನ್ನದಂತ ಹುಡುಗಿ ಇವಳೇ ಬೆಳಿಗ್ಗೆ ಬೆರಳ ತೋರಿದವಳು  ಸ್ನೇಹದ ಹಸ್ತ ಚಾಚಿ . ಇಲ್ಲಿ ಮಣ್ಣಿನ ಒಳಗೆ ಗೋಡೆಗಳೇ ಇಲ್ಲ . -ರಾಘವೇಂದ್ರ  ಹೆಗಡೆಕರ್ … Read more