ವಿಸ್ತೀರ್ಣದಲ್ಲಿ ಕರ್ನಾಟಕಕ್ಕಿಂತ ಸ್ವಲ್ಪವೇ ಚಿಕ್ಕದಾದ ದಕ್ಷಿಣ ಏಷ್ಯಾದ ಪುಟ್ಟ ರಾಷ್ಟ್ರ ಕಾಂಬೋಡಿಯಾ. ಕಾಂಬೋಡಿಯಾದ ಜನಸಂಖ್ಯೆ ಒಂದು ಕೋಟಿ ಎಂಬತ್ತು ಲಕ್ಷ. ಅದರಲ್ಲಿ ಸುಮಾರು ಒಂದು ಲಕ್ಷ ಜನರು ತೇಲುವ ಗ್ರಾಮಗಳಲ್ಲಿ ವಾಸಿಸುತ್ತಾರೆ. ಕಾಂಬೋಡಿಯಾದಲ್ಲಿ ಏಳುನೂರು ತೇಲುವ ಗ್ರಾಮಗಳಿವೆಯೆಂದು ಹೇಳಲಾಗುತ್ತಿದೆ. ಕಾಂಬೋಡಿಯಾಕ್ಕೆ ಬರುವ ಪ್ರಯಾಣಿಕರಿಗೆ ವಿಶ್ವದ ಅತಿ ಹೆಚ್ಚು ವಿಸ್ತೀರ್ಣದ ಅಂಗೋರವಾಟ್ ದೇವಾಲಯ ಹೇಗೋ, ಹಾಗೆಯೇ ತೇಲುವ ಗ್ರಾಮಗಳು ಕೂಡಾ ಆಕರ್ಷಣೆಯ ಕೇಂದ್ರಗಳು. ಲಕ್ಷಾಂತರ ಜನರನ್ನು ಬಲಿ ಪಡೆದ ಪೋಲ್ಪಾಟ್ರಂತಹ ಸರ್ವಾಧಿಕಾರಿಯನ್ನು ಕಂಡ ಕಾಂಬೋಡಿಯವನ್ನು ನೋಡಬೇಕೆಂದು ಬಹಳ ವರ್ಷಗಳಿಂದ […]
Author: editor
ಡಾ.ಜಿ.ಎನ್.ಉಪಾಧ್ಯರ ಸಮೀಕ್ಷೆಯಲ್ಲರಳಿದ ಡಾ.ಜನಾರ್ದನ ಭಟ್ ಅವರ “ವಾಙ್ಞಯ ವಿವೇಕ”: ಅನುಸೂಯ ಯತೀಶ್
ಡಾ. ಜನಾರ್ದನ ಭಟ್ ನಮ್ಮೊಳಗಿನ ಸಂವೇದನಾಶೀಲ ಲೇಖಕರು. ಇವರು ಯಾವುದೇ ಸಾಹಿತ್ಯ ಪ್ರಕಾರಗಳಿಗೆ ಅಂಟಿಕೊಳ್ಳದೆ ಸೃಜನ ಮತ್ತು ಸೃಜನೇತರ ಎರಡು ಪ್ರಕಾರಗಳಲ್ಲೂ ತಮ್ಮನ್ನು ಅವಿರತ ತೊಡಗಿಸಿಕೊಂಡು ಧಣಿವರಿಯದೆ ಸಾಹಿತ್ಯಾರಾಧನೆಯಲ್ಲಿ ತೊಡಗಿರುವ ಬಹುಶ್ರುತ ವಿದ್ವಾಂಸರು. ಬಹುಭಾಷಾ ಪ್ರವೀಣರಾದ ಇವರು ಕಥೆ, ಕಾದಂಬರಿ, ವೈಚಾರಿಕ ಕೃತಿಗಳು, ಅಂಕಣಗಳು, ವಿಮರ್ಶೆ, ಮಕ್ಕಳ ಸಾಹಿತ್ಯ, ಇಂಗ್ಲೀಷ್ ಸಾಹಿತ್ಯ ರಚನೆಯ ಜೊತೆಗೆ ಹಲವಾರು ಕೃತಿಗಳ ಸಂಪಾದನೆ ಕೂಡ ಮಾಡಿ ಆಡು ಮುಟ್ಟದ ಸೊಪ್ಪಿಲ್ಲ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಸುಮಾರು ನಾಲ್ಕು ದಶಕಗಳಿಂದ ಕನ್ನಡ ಸಾಹಿತ್ಯದ […]
ಸಂವಿಧಾನದ ಮಹತ್ವವನ್ನು ಸಾರುವ ಮನೋಜ್ಞ ಸಿನಿಮಾ – 19.20.21: ಚಂದ್ರಪ್ರಭ ಕಠಾರಿ
ಹರಿವು, ನಾತಿಚರಾಮಿ, ಆಕ್ಟ್ 1978 ಸಿನಿಮಾಗಳಿಂದ ಸಂವೇದನಾಶೀಲ ನಿರ್ದೇಶಕರೆಂದು ಗುರುತಿಸಲ್ಪಟ್ಟಿರುವ ಮಂಸೋರೆಯವರ ಹೊಸ ಸಿನಿಮಾ-19.20.21. ಟೈಟಲ್ ಸೇರಿದಂತೆ ಹಲವು ಕುತೂಹಲಗಳೊಂದಿಗೆ ಅವರು ಸಿನಿಮಾವನ್ನು ತೆರೆಗೆ ತಂದಿದ್ದಾರೆ. ಹಾಗೆ ತರುವಾಗ ಹಲವು ಸವಾಲುಗಳನ್ನು ತಮ್ಮ ಸಿನಿಮಾ ತಯಾರಿಕೆಯ ಅನುಭವದಿಂದ, ಪ್ರತಿಭಾವಂತಿಕೆಯಿಂದ ನಿಭಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಲ್ಲಿರುವ ಕುತ್ಲೂರು ಗ್ರಾಮದಲ್ಲಿ ಶತಮಾನಗಳಿಂದ ಬದುಕಿರುವ ಆದಿವಾಸಿ ಬುಡಕಟ್ಟು ಜನಾಂಗವಾದ ಮಲೆಕುಡಿಯರನ್ನು, ಸರ್ಕಾರ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಯೋಜನೆಯನ್ನು ಜಾರಿ ಮಾಡಿ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ, ಆಳುವ ಪ್ರಭುತ್ವದಿಂದ ನಡೆದ ದೌರ್ಜನ್ಯಗಳ […]
ನೀಚನ ಸಾವು: ಮಂಜು ಡಿ ಈಡಿಗೆರ್
ಓದೋಕ್ಕೆ ಅಂತ ರೂಮ್ ಮಾಡ್ಕೊಂಡು ಕೊಪ್ಪಳ ದಲ್ಲೇ ಇದ್ದೆ. ದಿನ ಬೆಳಗ್ಗೆ ರನ್ನಿಂಗು ವರಮಪ್ಪು ವರ್ಕೌಟು ಮಾಡೋದು ನನ್ನ ದಿನ ನಿತ್ಯದ ಅಭ್ಯಾಸ ಆಗಿತ್ತು. ಹಾಗಾಗಿ ದಿನ ಬೆಳಗ್ಗೆ ಸ್ಟೇಡಿಯಂಗೆ ಪ್ರಾಕ್ಟೀಸ್ ಗೆ ಹೋಗ್ತಾ ಇದ್ದೆ. ಸಂಡೇ ಪ್ರಾಕ್ಟೀಸ್ ಮುಗಿಸಿಕೊಂಡು ರೂಮ್ಗೆ ಬಂದೆ. ನನ್ನ ರೂಮಿನ ಪಕ್ಕ ಮನೆ ಖಾಲಿ ಆಗಿತ್ತು, ಅದಕ್ಕೆ ಯಾರೋ ಹೊಸಬರು ಬಂದಾಗೆ ಇತ್ತು. ನನ್ನ ರೂಮು ಮತ್ತೆ ಅವರ ಮನೆ ಎರಡು ಪಕ್ಕದಲೆ ಇರುವುದರಿಂದ ಯಾರು ಎಂದು ಗಮನಿಸಬೇಕಾಯಿತು. ಮನೆ ಇಂದ […]
ನಾ ಕಂಡಂತೆ: ಶೀತಲ್
ನಾನು ಈ ಮನೆಗೆ ಬಂದು ಈಗ ನಾಲ್ಕು ವರ್ಷವಾಯಿತು. ಮನೆಯೆಂದರೆ ಅಬ್ಬಾ! ಇವರ ಮನೆಯಂತೆ ಯಾವ ಮನೆಯೂ ಇಲ್ಲ ಆ ಲೇಔಟ್ ನಲ್ಲಿ ಎಂದು ಆಗಾಗ ಕೆಲಸದಾಕೆ ಸುಗುಣ ಮನೆಯೊಡತಿ ವೈದೇಹಿ ಯವರ ಬಳಿ ಹೇಳುವುದನ್ನು ಕೇಳಿದ್ದೇನೆ. ಇವರ ಮನೆಯಲ್ಲದೆ ನಾನು ಯಾವ ಮನೆಗೂ ಹೋಗುವ ಹಾಗಿಲ್ಲವಲ್ಲ ಹಾಗಾಗಿ ನನ್ನ ಸ್ವಂತ ಅಭಿಪ್ರಾಯವಲ್ಲ ಇದು. ಇವರ ಮನೆಯಿಂದ ಎದುರು ಕಾಣುವ ಎರಡು ಮನೆಗಳು, ಹಾಗೆ ಬಲಗಡೆಗೆ, ಇವರ ಮನೆಯ ಹೂದೋಟ ದಾಟಿದರೆ ಕಾಣುವ ಮನೆ ಕೂಡ ಇವರ […]
ಬೈಸಿಕಲ್ ಥೀವ್ಸ್ ವಿಮರ್ಶೆ: ಕಿರಣ್ ಕುಮಾರ್ ಡಿ
‘ಬೈಸಿಕಲ್ ಥೀವ್ಸ್’ ೧೯೪೮ರಲ್ಲಿ ಇಟಾಲಿಯನ್ ಭಾಷೆಯಲ್ಲಿ ತೆರೆಕಂಡ ಚಲನಚಿತ್ರ. ಇಟಾಲಿಯಲ್ಲಿ “ಲಾದ್ರಿ ದಿ ಬೈಸಿಕ್ಲೆಟ್” ಹೆಸರಿನಲ್ಲಿ ತೆರೆಕಂಡಿತು. ಚಲನಚಿತ್ರದ ಕಥೆಯನ್ನು ಸಿಸೇರ್ ಜವಟ್ಟಿನಿಯವರು ೧೯೪೬ರಲ್ಲಿ ಪ್ರಕಟಗೊಂಡ “ಲಾದ್ರಿ ದಿ ಬೈಸಿಕ್ಲೆಟ್” ಕಾದಂಬರಿಯಿಂದ ಅಳವಡಿಸಿಕೊಂಡು ಬರೆದಿದ್ದಾರೆ. ಈ ಚಲನಚಿತ್ರವನ್ನು ವಿಟ್ಟೋರಿಯಾ ಡಿ ಸಿಕಾ ಅವರು ನಿರ್ದೇಶಿಸಿದ್ದಾರೆ. ಈ ಚಲನಚಿತ್ರ ೨ನೇ ವಿಶ್ವಯುದ್ಧದ ನಂತರ ತೆರೆಕಂಡಿದ್ದು. ೨ನೇ ವಿಶ್ವಯುದ್ಧ ಮುಗಿದ ಮೇಲೆ ಇಟಾಲಿಯಲ್ಲಿ ಎದುರಾದ ಉದ್ಯೋಗದ ಸಮಸ್ಯೆಯನ್ನು ಮತ್ತು ಬಡತನವನ್ನು ಹಲವಾರು ಪಾತ್ರದ ಮೂಲಕ ಹೇಳುತ್ತದೆ ಈ ಚಲನಚಿತ್ರ. ಚಲನಚಿತ್ರದ […]
“ನೇರ ವ್ಯಕ್ತಿತ್ವ ಶಕ್ತಿಯೇ…?? “: ರೇಖಾ ಶಂಕರ್.
ಆತ್ಮೀಯ ಓದುಗರೇ, ನಾನಿವತ್ತು ಹೇಳ್ತಿರೊ ವಿಷ್ಯ ಅಂದ್ರೆ ನೇರ ವ್ಯಕ್ತಿತ್ವದ ಬಗ್ಗೆ, ಅದೇ ಇದ್ದಿದ್ದು ಇದ್ದಂಗೆ ಹೇಳುದ್ರೆ ಎದ್ ಬಂದ್ ಎದೆಗೆ ಒದ್ರಂತೆ ಅಂತ ಗಾದೆ ಹೇಳ್ತಾರಲ್ಲ. ಅದೇ ವಿಷಯ…., ಅದಕ್ಕೆ ನೇರ ನುಡಿಯ ವ್ಯಕ್ತಿತ್ವ ಅಂತ್ಲೂ ಹೇಳ್ಬೌದು. ನೋಡೋಕೆ ಮನುಷ್ಯ ಒಂದೆ ಥರ ಕಾಣ್ತಿದ್ರೂ ಅವನಲ್ಲಿ ಇರೊ ಗುಣ ಸ್ವಭಾವಗಳು ವಿಭಿನ್ನವಾಗಿರತ್ತೆ, ಅವ ನಡೆಯೊ ಹಾದಿ ಆಡುವ ಮಾತು ತನ್ನ ನೋಡುವ ನೋಟ ಒಟ್ಟಾರೆ ತನ್ನ ಬದುಕುವ ಶೈಲಿಯನ್ನೆ ವಿಭಿನ್ನವಾಗಿಟ್ಕೊಂಡಿರ್ತಾನೆ. ” ಲೋಕೊ ಭಿನ್ನ ರುಚಿಃ […]
ನಾಸಿಕ ಪುರಾಣ: ಡಾ.ವೃಂದಾ ಸಂಗಮ್,
ನಾಸಿಕದಾಗ ಅಂತ ನಮ್ಮ ಶೀನೂ ಮಾಮಾ ಮಾತು ಶುರು ಮಾಡಿದರೂಂದರ, ನಾವೆಲ್ಲಾ, ಮೂಗಿನ ಮೇಲೊಂದು ಬೆರಳಿಟ್ಟುಕೊಂಡು ಕೂತಿರಬೇಕು. ಯಾಕಂದರ ನಮ್ಮ ಶೀನೂ ಮಾಮಾ ಅಂದರ ಅಸಾಧಾರಣ ವ್ಯಕ್ತಿ. ಹಂಗಂತ, ಭಾಳ, ಭಾಳ ಸಾಧನಾ ಮಾಡ್ಯಾರ ಅಂತಲ್ಲ. ಸೀದಾ ಹಾದಿಯವರಲ್ಲ. ಸೊಟ್ಟ ಮೂಗಿನವರು. ಅಂದರ, ಹೀಂಗ, ಮಾತು ಶುರು ಮಾಡಿದಾಗ, ನಾವು ಯಾವ ರೀತಿ ವಿಚಾರ ಮಾಡಿದರೂ, ಇವರು ಈ ವಿಷಯದ ಹರಟಿ ಪ್ರಾರಂಭಿಸಬಹುದು ಅಂತ ಒಂದು ಅಂದಾಜು ಇಟ್ಟಕೊಂಡಿದ್ದರ, ಅದನ್ನೆಲ್ಲಾ, ಮುರದು, ಹೊಸಾ ದಾರಿಯೊಳಗೇನೇ ಹರಟೀ ಪ್ರಾರಂಭ […]
ಶಿವಧ್ಯಾನ: ಡಾ. ರಶ್ಮಿ ಕಬ್ಬಗಾರ
ಅಲ್ಲಿಗೆ ಹೋದ ಮೇಲೆ ಗೊತ್ತಾದದ್ದುನಮ್ಮೂರ ಶಿವ ಎಷ್ಟು ಸಿಂಪಲ್ಲು ಅಂತ !ಶಿವರಾತ್ರಿಯೋ- ಮಡಿಹುಡಿ ನೈವೇದ್ಯದತಲೆಬಿಸಿ ಎಳ್ಳಷ್ಟೂ ಇರದಶುದ್ಧ ಪ್ರೀತಿಯ ಸಮಾವೇಶವೇ ಸರಿಯೆನ್ನಿ ಆ ದಿನ ಯಾವ ಹೊಳೆಯೂ ಆದೀತು ಪಕ್ಕದಲ್ಲೊಂದು ಶಿಲೆಯಿದ್ದರಲ್ಲಿ ಶಿವರಾತ್ರಿ ನೀರೆಲ್ಲವೂ ಗಂಗೆ’ ಕಲ್ಲ ತಲೆಮೇಲೊಂದಿಷ್ಟು ಅಭಿಷೇಕಗೈದುನಿರುಮ್ಮಳವಾಗಿ ಬನ್ನಿ ಮನೆಗೆ’- ಹಿರಿಯರ ನುಡಿ ನಮ್ಮಜನ ಊರು-ಕೇರಿಯ ಗೆಳೆಯರನ್ನಸಹಜೀವಗಳನ್ನ ಕೂಡಿಸಿ,ಗೂಡ್ಸು, ಲಾರಿ ತುಂಬಿಕೊಂಡುಗಲ್ಲದ ಗೌಜುಗಳೊಂದಿಗೆಶಿವರಾತ್ರಿ ಪಿಕ್ ನಿಕ್ ಹೋಗಿದ್ದುಂಟು. ಪ್ರತಿವರ್ಷವೂ- ಮುಂದಿನ್ವರ್ಷ ನಿನ್ನ ಮುದ್ದಾಂ ಕರಕೊಂಡ್ಹೋಗ್ತೆವೇ ಅಂತ್ಹೇಳಿ ಕೈಕೊಟ್ಟು ಓಡಿದ ಅಕ್ಕ, ಅಣ್ಣ, ಚಿಕ್ಕಮ್ಮನ ನೆನೆದು,ಚಳ್ಳೇಪಿಳ್ಳೆಗಳಾದ […]
ಪಂಜು ಕಾವ್ಯಧಾರೆ
ಮಾನದಂಡ ! ಮಿಥಿಲಾಪುರದೊಳಗೆ ಪಂದ್ಯ;ಸೀತೆಗೆ ಸ್ವಯಂವರ….ಹರಧನುವ ಮುರಿಯುವುದೇಮಾನದಂಡ !ರಾಮ ಮುರಿದ; ಸೀತೆ ಒಲಿದಳುನಂತರದ ವಿಚಾರವೀಗ ಬೇಡ ! ಪಾಂಚಾಲನಂದನೆ ದ್ರೌಪದಿ;ಸ್ವಯಂವರದಿ ಗೆದ್ದವನ ಮಡದಿ !ಮತ್ಸ್ಯಯಂತ್ರವ ಭೇದಿಸುವುದೇಮಾನದಂಡ !ಪಾರ್ಥ ಬಾಣ ಹೂಡಿದ; ದ್ರೌಪದಿ ಒಲಿದಳುನಂತರದ ವಿಚಾರವೀಗ ಬೇಡ ! ಅಷ್ಟೋ ಇಷ್ಟೋ ಓದಿದ ಹೆಣ್ಣು,ಸ್ವಯಂವರ ಅನ್ನಬಹುದೆ ಇದನು ?‘ಸರ್ಕಾರಿ ನೌಕರಿ’ಯೇಮಾನದಂಡ !ಸಂ(ಗಿಂ)ಬಳ ತಂದವನ ಹುಸಿನಗೆಗೆ ಒಲಿದಾಳುನಂತರದ ಬದುಕು ? ಈಗ ಬೇಡ ! ಜನಕರಾಜನ ಮಗಳಿಗೆವನವಾಸ ವರವಾಯ್ತು;ದ್ರುಪದ ರಾಜನ ಮಗಳು ಬದುಕುಐವರ ಪಾಲಾಯ್ತು ! ಅತಿ ಆಸೆ ಪಟ್ಟಷ್ಟೂ […]
ನಾಲ್ವರ ಗಝಲ್ಗಳು: ಶಿವರಾಜ್. ಡಿ., ಜಯಶ್ರೀ ಭ ಭಂಡಾರಿ., ಜೊನ್ನವ, ರೇಣುಕಾ ಕೋಡಗುಂಟಿ
ಗಝಲ್. ನಾನು-ನೀನು ಅವನು-ಇವನು ಬೇರೆ-ಬೇರೆಯಿಲ್ಲ ನಾವು ಒಂದೇರಾಮ-ರಹೀಮ ಕೃಷ್ಣ-ಕರೀಮ ಭೇದ-ಭಾವವಿಲ್ಲ ನಾವು ಒಂದೇ ಸ್ವರ್ಗ ನರಕ ಪಾಪ ಪುಣ್ಯವೆಲ್ಲ ಮನುಜನ ಕರ್ಮದ ಫಲಗಳುಜಗತ್ತಿನ ಧರ್ಮ ಗ್ರಂಥಗಳ ಸಾರಗಳಲಿ ಭೇದವಿಲ್ಲ ನಾವು ಒಂದೇ ಆಲಯ ಬಯಲಾಗಿ ಬಯಲಲಿ ಬೆಳಕಾಗಿ ಬಾಳಬೇಕು ಮನುಜಮನುಷ್ಯ ಮನುಷ್ಯತ್ವದಲಿ ಮೇಲು-ಕೀಳುಗಳಿಲ್ಲ ನಾವು ಒಂದೇ ಅಜ್ಞಾನದ ತಮವಳಿದು ವಿಜ್ಞಾನದಿ ಮೌಡ್ಯವಳಿಯಲಿಜ್ಞಾನಜ್ಯೋತಿ ಬೆಳಗಲು ತರ-ತಮಗಳಿಲ್ಲ ನಾವು ಒಂದೇ ಜಾತಿ,ಧರ್ಮಗಳ ಗೋಡೆ ಕಟ್ಟಿ ವಿಶ್ವಗುರು ಆಗಲು ಹೊರಟಿದ್ದಾರೆ ಶಿವುಪರಿಶುದ್ಧ ಪ್ರೀತಿಗೆ ಕಾರುಣ್ಯದ ಮನಸಿಗೆ ಜಾತಿ-ಧರ್ಮಗಳಿಲ್ಲ ನಾವು ಒಂದೇ -ಶಿವರಾಜ್. […]
ಬರೆ: ಲಿಂಗರಾಜ ಸೊಟ್ಟಪ್ಪನವರ
ಆಡಿದ ಮಾತುಗಳೆಲ್ಲ ಮರೆತು ಹೋದವುಉಳಿದ ಮಾತುಗಳನುನೀನೆ ಆಡಬೇಕು ಈ ಬರೆ ಮೇಲೆ ಕೈ ಆಡಿಸುನಿನಗೆ ಏನಾದರೂ ದಕ್ಕಬಹುದುಪದ ನಾದ ನೋವುರಕ್ತ ಕೀವುಬಿರಿತ ಚರ್ಮ ಒಡೆದ ಮಾಂಸ ಖಂಡತೆರೆದ ಎದೆ ಗೂಡುಈ ಎಲ್ಲವನು ಪದ ಮಾಡಿ ಹಾಡಿಕೋ ಹಂಚುಬೇಕಿದ್ದರೆ ಮಾರಿಕೋ ತಾಕಬಹುದು ಎಲುಬಿನ ಹಂದರನೆತ್ತರ ವಾಸನೆಸಿಗದೇ ಹೋಗಬಹುದು ಹೆಣಗಳ ಲೆಕ್ಕಗುಳಿಬಿದ್ದ ಕಣ್ಣುಗಳಲಿ ಒಮ್ಮೆ ಇಳಿದು ಹೋಗುನೀನು ಗತಕೆ ಸರಿದು ಹೋಗುಚರಿತೆಯ ಚರ್ಮ ಸುಲಿದ ಕಥನಗಳಲ್ಲಿ ನಾನುಸಿಕ್ಕೆ ಸಿಗುತ್ತೇನೆಒಂದು ವಿನಂತಿ ಇಷ್ಟೇಇಷ್ಟು ಕಾಲವಾದ ನಂತರವಾದರೂ ಸರಿನೀನು ಯಾರು? ಎಂದು ಮಾತ್ರ […]
ಪ್ರೀತಿ ಹುಟ್ಟೀತು ಹೇಗೆ?: ಎಂ ನಾಗರಾಜ ಶೆಟ್ಟಿ
ಹುಟ್ಟು, ಬಣ್ಣ, ಬಟ್ಟೆಗಳ ಗುರುತಿನಲ್ಲಿತಿನ್ನುವ ಅನ್ನ, ಇರುವ ಜಾಗ, ಮಾಡುವ ಕೆಲಸಅವರಿವರಲ್ಲಿ ಹಂಚಿ,ಮುಟ್ಟದೆಯೇ ದೂರ ನಿಲ್ಲುವಲ್ಲಿಪ್ರೀತಿ ಹುಟ್ಟೀತು ಹೇಗೆ? ಮನೆಗೊಬ್ಬ ದೇವನ ಮಾಡಿಇಲ್ಲಿಗಿಂತ ಅಲ್ಲಿಯೇ ಸರಿಯೆಂದು ಹಾಡಿಇಂದಿನದಕ್ಕೆ ಅಂದಿನ ಕಾರಣ ಗಂಟು ಹಾಕಿತೊತ್ತುಗಳಾಗಿಸಿದವರ ನಡುವೆಪ್ರೀತಿ ಹುಟ್ಟೀತು ಹೇಗೆ? ಮನಸ್ಸುಗಳ ಸುಟ್ಟು ಬೂದಿ ಮಾಡಿಶಾಖದ ಸುತ್ತ ಕುಣಿವವರಕರಕಲು ಎದೆಗಳಲ್ಲಿಪ್ರೀತಿ ಹುಟ್ಟೀತು ಹೇಗೆ? ಅವನು ನಾನೆಂದು, ನಾನು ಅವನೆಂದುಅವನೂ ಅವಳೂ ಒಂದೇ ಎಂದುನಮ್ಮನ್ನು ನಾವೇ ಅರಿಯದೆಪ್ರೀತಿ ಹುಟ್ಟೀತು ಹೇಗೆ? -ಎಂ ನಾಗರಾಜ ಶೆಟ್ಟಿ
ಪೋಲಿ ಹುಡುಗ: ವಿದ್ಯಾ ಗಾಯತ್ರಿ ಜೋಶಿ
ಭಾರತಿ ಮತ್ತು ಆರತಿಇಬ್ಬರದೂ ಬಾರಿ ಪ್ರೀತಿ ದೇಹ ಎರಡು ಅತ್ಮ ಒಂದೇಅಂತ ಎಲ್ಲರೂ ಅನ್ನುವುದೇ ದಿನವೂ ಒಬ್ಬ ಹುಡುಗಮುಗುಳ್ನಗುತ್ತಿದ್ದ ಕಾಲೇಜಲಿ ಪಾಠ ಕೇಳುವಾಗ ಆರತಿಗೆ ಹಿಡಿಸಿದ ಪೋರಕಾರಣ ಆತ ಭಾರೀ ಸುಂದರ ಭಾರತಿಗೆ ಹೇಳಿದಳು ಗುಟ್ಟುಭಾರತಿ ನೋಡಿದಳು ದುರುಗುಟ್ಟಿ ಅಂದಳು “ಆತ ನೋಡೋದು ನಿನ್ನನ್ನುಪ್ರೀತಿ ಮಾಡೋದು ನನ್ನನ್ನು!” ಹುಡುಗ ಬಂದನು ಇವರ ಹತ್ತಿರಹೆಚ್ಚಾಯ್ತು ಹುಡುಗಿಯರ ಕಾತರ ಕೇಳಿದರು “ಪ್ರೀತಿಸುವೆ ಯಾರನ್ನ?ನನ್ನನ್ನ ಇಲ್ಲಾ ಇವಳನ್ನ?” ಸುಂದರ ಅಂದ”ನಕ್ಕಿದ್ದು ನೋಡಿ ನಿಮ್ಮಿಬ್ಬರನ್ನನಾ ಪ್ರೀತಿಸುವದು ನಿಮ್ಮಿಬ್ಬರಲ್ಲಿ ಒಬ್ಬಳ ಅಕ್ಕನ್ನ!” -ವಿದ್ಯಾ ಗಾಯತ್ರಿ […]
ದೇವದೂತ ನನ್ನಪ್ಪ: ಶಕುಂತಲಾ ಪ್ರ. ಬರಗಿ
ಈ ಜಗವ ತೋರಲೆಂದೇ ಬಂದ ದೇವದೂತಈ ಜಗವ ತೋರಿ ತಾನೊಬ್ಬನೆ ದೂರ ನಿಂತನನ್ನಪ್ಪ ಈ ಜಗವ ತೋರಿಸಲು ಕರೆತಂದವಎನ್ನ ಕರೆದು ಜಗವ ತೋರಿ ಸುಮ್ಮನೆ ನಿಂತುಬಿಟ್ಟವ. ಈ ಜಗದ ಪೈಪೋಟಿ, ಅಂಕು ಡೊಂಕುನಾವು -ಅವರು -ಇವರು ಎಂಬುದನ್ನೇ ತಿಳಿಸದೆ ಸುಮ್ಮನೆ ನಿಂತುಬಿಟ್ಟವಅವನು ಈ ಭೂಮಿಗೆ ಕರೆತಂದ ಅಷ್ಟೇ,ಈ ಜಗವ ಏನೆಂದು ತಿಳಿಸಲಿಲ್ಲ ಎನಗೆ ಈ ಭೂಮಿಯ ಆಕಾಶದಲ್ಲಿ ಹಾರಾಡುವ ರೆಕ್ಕೆಯಾಗಿರೆಕ್ಕೆ ಕೊಟ್ಟು ಹಾರಲು ಹಚ್ಚಿ ದೂರ ನಿಂತವಅಪ್ಪನ ರೆಕ್ಕೆಗಿರುವ ಶಕ್ತಿಯೇ ನನ್ನೊಳಗೆ ಇದೆಅಪ್ಪನ ರೆಕ್ಕೆಗಿರುವ ಬಲವೇ ನನ್ನೊಳಗೆ […]
ಪಿಸು ಮಾತು: ಶ್ರೀವಲ್ಲಭ ಕುಲಕರ್ಣಿ
ಎಲ್ಲೆಲ್ಲೂ ನೀರವ ಮೌನತಾಳಲಾರೆ ನಾ ವೇದನೆಬಳಿ ಒಮ್ಮೆ ನೀ ಬಂದುತೀರಿಸುವೆಯ ಮನದ ಕಾಮನೆ ಕಣ್ಣು ರೆಪ್ಪೆ ಆಲಂಗಿಸಿಕಳೆದಿವೆ ದಿನ ಸಾವಿರನೆಮ್ಮದಿಯ ತಾಣ ಹುಡುಕುತದಾಟಿರುವೆ ಸಪ್ತ ಸಾಗರ ಮನವೆಂದೋ ಕೊಟ್ಟಾಗಿದೆಈ ತನುವೂ ಎಂದಿಗೂ ನಿನಗೇನೀರವ ಈ ಮೌನದಲಿಸಖಿ ಗೀತದ ಜೊತೆಗೆ ಕದ್ದು ನೋಡದಿರು ಹೀಗೆಕಣ್ಣಂಚಿನಲಿ ಕೊಲ್ಲದಿರು ಹಾಗೆಬಂದು ಬಿಡು ಸುಮ್ಮನೇಪ್ರೇಮ ಲೋಕವೇ ನಮ್ಮನೆ ರಂಗೇರಲಿ ಮಾತಿನಾ ರಂಗೋಲಿಮುದ್ದಾದ ನಮ್ಮೀ ಸಾಂಗತ್ಯದಲಿಮೌನಕೂ ಪದವುಂಟುಅದಕಿದೆ ಪಿಸು ಮಾತಿನಾ ನಂಟು! -ಶ್ರೀವಲ್ಲಭ ಕುಲಕರ್ಣಿ
“ದೇವರ ಹೊಲ”ದಲ್ಲಿ ಭರ್ಜರಿ ಫಸಲು: ಡಾ. ನಟರಾಜು ಎಸ್ ಎಂ
ಮಂಜಯ್ಯ ದೇವರಮನಿ ಅವರ “ದೇವರ ಹೊಲ” ಪುಸ್ತಕ ನನ್ನ ಕೈ ಸೇರಿ ಒಂದು ತಿಂಗಳ ಮೇಲೆ ಒಂದು ವಾರವಾಗಿತ್ತು. ಸುಮಾರು ದಿನಗಳ ಹಿಂದೆ ನೂರಾ ಐವತ್ತಕ್ಕೂ ಹೆಚ್ಚು ಜನರಿಗೆ ಕೃತಜ್ಙತೆ ಅರ್ಪಿಸಿರುವ ಮಂಜಯ್ಯ ಅವರ ಮೊದಲ ಮಾತುಗಳನ್ನು ಅವರ ಈ ಪುಸ್ತಕದಲ್ಲಿ ಓದಿದ್ದೇನಾದರೂ ಇಡೀ ಪುಸ್ತಕವನ್ನು ಓದಲು ಯಾಕೋ ಸಾಧ್ಯವಾಗಿರಲಿಲ್ಲ. ನಿನ್ನೆ ಭಾನುವಾರ ಬಿಡುವು ಮಾಡಿಕೊಂಡು ಇಡೀ ದಿನ ಒಂದೊಂದೇ ಕತೆಗಳನ್ನು ಓದುತ್ತಾ ಓದುತ್ತಾ ಮಂಜಯ್ಯ ಅವರ ಕಥನ ಕಲೆಗೆ ಬೆರಗಾಗಿ ಹೋದೆ. “ದೇವರ ಹೊಲ” ಪುಸ್ತಕವು […]
ತೇರ ಹಳ್ಳಿಯ ಸಿನಿಮಾ ತೇರು: ಎಂ ನಾಗರಾಜ ಶೆಟ್ಟಿ
ʼಸಿನ್ಮಾ ಚೆನ್ನಾಗಿತ್ತು, ದರ್ಶನ್ ಸಿನ್ಮಾನೂ ತೋರ್ಸ್ಬೇಕಿತ್ತು” ಆರು ವರ್ಷದ ಪೋರ ಹೇಳಿದ ಮಾತು. ಈ ಮಾತಲ್ಲಿ ಸತ್ಯವಿದೆ. ಆರೇನು, ಅರವತ್ತರ ವಯಸ್ಸಿನವರೂ ಒಂದೇ ಬಗೆಯ, ರಂಜನೆಯ ಸಿನಿಮಾಗಳನ್ನು ನೋಡುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಇದಕ್ಕಿಂತ ಭಿನ್ನವಾದ, ಸಾಮಾಜಿಕ ಅರಿವು ಮೂಡಿಸುವ, ಬುದ್ದಿಯನ್ನು ಕೆಣಕುವ, ಕಟು ವಾಸ್ತವವನ್ನು ತಿಳಿಸುವ ಚಿತ್ರಗಳ ಬಗ್ಗೆ ಅರಿವು ಮೂಡಿಸಬೇಕು. ನಮ್ಮ ಪಠ್ಯಕ್ರಮದಲ್ಲಿ ಅದಕ್ಕೆ ಅವಕಾಶವಿಲ್ಲ. ಸಿನಿಮಾ ಹಬ್ಬಗಳು, ಸಿನಿಮೋತ್ಸವಗಳು ಸ್ವಲ್ಪ ಮಟ್ಟಿಗೆ ಈ ಕೊರತೆಯನ್ನು ನೀಗಿಸುತ್ತವೆ. ಅವು ಸಿನಿಮಾ ನೋಡುವ, ಅರ್ಥ ಮಾಡಿಕೊಳ್ಳುವ, ವಿಶ್ಲೇಷಿಸುವ […]
ಭಾರತದ ಸ್ವಾತಂತ್ಯ್ರ ಹುತಾತ್ಮ ಕವಿ ಅಶ್ಫಾಖ್ ಉಲ್ಲಾಖಾನ್ ಪುಸ್ತಕದ ಆಯ್ದ ಭಾಗ: ಜೆ ಕಲೀಂ ಬಾಷ
ಹಿಂದಿ ಮೂಲ: ಎಂ ಐ ರಾಜಸ್ವಿ ಕನ್ನಡಕ್ಕೆ: ಜೆ ಕಲೀಂ ಬಾಷ ಕಾಕೋರಿ ಕಾಂಡ ಸಣ್ನ ಸಣ್ಣ ಪ್ರಯತ್ನಗಳಿಂದಾದ ಅಸಫಲತೆಗಳಿಂದ ರಾಂ ಪ್ರಸಾದ್ ಬಿಸ್ಮಿಲ್ ಹಾಗೂ ಅವರ ಮಿತ್ರರ ಮನಸ್ಸು, ಈ ತರಹದ ವಿಧಿ ವಿಧಾನಗಳಿಂದ ಬೇಸರಗೊಂಡಿತ್ತು. ಆದರೂ ಸಹ ಅವರ ಮನದಲ್ಲಿನ್ನೂ ದೇಶ ಭಕ್ತಿಯ ಸಾಗರದ ಅಲೆಗಳು ಹೊಯ್ದಾಡುತ್ತಿದ್ದವು. ದಬ್ಬಾಳಿಕೆಯ ಬ್ರಿಟಿಷ್ ಸರ್ಕಾರದ ಸವಾಲನ್ನು ಎದುರಿಸುವಲ್ಲಿ ದೇಶಭಕ್ತರ ಕೊರತೆ ಇಲ್ಲ ಎಂಬುದನ್ನು ಸಾಬೀತು ಪಡಿಸಲು ಕ್ರಾಂತಿಕಾರಿಗಳು ಸಿದ್ಧರಿದ್ದರು. ಆದ್ದರಿಂದ ಕ್ರಾಂತಿಕಾರಿಗಳು ತಮ್ಮ ದಳವನ್ನು ಸಂಘಟಿಸುವಲ್ಲಿ ನಿರತರಾದರು. […]
ಸಂಕ್ರಮಣ: ಡಾ. ವೃಂದಾ ಸಂಗಮ್
ಎಲ್ಲಾ ಕತೀಗಳೂ ಸಹ ಒಂದೂರಾಗ, ಅಂತ ಶುರುವಾಗೋ ಹಂಗ, ಹರಟೆಗಳು ಮಾತ್ರ ನಮ್ಮೂರಾಗ ಅಂತ ಶುರುವಾಗತಿರಬೇಕು. ನಮ್ಮೂರಾಗ ಅಷ್ಟ ಅಲ್ಲ, ನಾವು ಸಣ್ಣವರಿದ್ದಾಗ, ಅಂತನೂ ಇರತಾವ. ಯಾಕಂದರ, ಸಣ್ಣವರಿದ್ದಾಗ ಇದ್ದ ಕುತೂಹಲ, ಗಳಿಸಿದ ವಿಶೇಷ ಅನುಭದಷ್ಟು ಮುಂದಿನ ಜೀವನದಾಗ ಇರೋದಿಲ್ಲ. ಹಬ್ಬ ಹರಿದಿನಗಳ ನೆನಪಂತೂ ಬಾಲ್ಯದ ಅನುಭವಕ್ಕಿಂತಾ ಮುಂದ ಯಾವುದೂ ನೆನಪಿರೋದಿಲ್ಲ. ಮತ್ತ, ಅದನ್ನ ಹಂಚಿಕೊಳ್ಳೋದರಾಗೂ ಇರತದ. ಹಂಗನ ಇದು ಸಂಕ್ರಮಣ ಹಬ್ಬ. ಸಂಕ್ರಮಣ ಅಂದರ, ಇರೋ ಹನ್ನೆರಡು ರಾಶಿಗಳೊಳಗ, ಪ್ರತಿಯೊಂದು ರಾಶಿಯೊಳಗ ಸೂರ್ಯ ಚಲಸತಾನ, ಅಂದರ […]
ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪನವರ ಕಾವ್ಯ ಒಂದು ಅಧ್ಯಯನ: ಸಂತೋಷ್ ಟಿ
ಕನ್ನಡ ಸಾರಸ್ವತ ಲೋಕದ ಕೇಂದ್ರಬಿಂದುವಾಗಿ ಸಾಹಿತ್ಯದ ವಿವಿಧ ಜ್ಞಾನಶಿಸ್ತುಗಳನ್ನು ಬೆಳಗಿಸಿದ ಹಣತೆ ಜಿ.ಎಸ್.ಶಿವರುದ್ರಪ್ಪನವರು. 1926 ಫೆಬ್ರವರಿ 7ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರಿನಲ್ಲಿ ಜನಿಸಿದರು. ತಂದೆ ಶಾಂತವೀರಪ್ಪˌತಾಯಿ ವೀರಮ್ಮ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 1949ರಲ್ಲಿ ಬಿ.ಎ ಅನರ್ಸ್ ಪದವಿˌ1953ರಲ್ಲಿ ಎಂ.ಎ ಪದವಿ ಪಡೆದರು. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸುವರ್ಣ ಪದಕಗಳನ್ನು ಪಡೆದಿರುವರು.1960ರಲ್ಲಿ ಕುವೆಂಪು ಅವರ ಮಾರ್ಗದರ್ಶನದಲ್ಲಿ ಸೌಂದರ್ಯ ಸಮೀಕ್ಷೆ ಎಂಬ ಸಂಶೋಧನಾ ಪ್ರೌಢಪ್ರಬಂಧ ಮಂಡಿಸಿ ಪಿಎಚ್ ಡಿ ಡಾಕ್ಟರೇಟ್ ಪದವಿ ಪಡೆದರು. ವ್ರತ್ತಿಜೀವನವನ್ನು 1949ರಲ್ಲಿ ಆರಂಭಿಸಿದ ಇವರು […]
ಯುವ ಮಂದಿಯಲ್ಲಿ ತಂತ್ರಜ್ಞಾನ ಶಿಕ್ಷಣದ ಕೊರತೆ: ಕಿರಣ್ ಕುಮಾರ್ ಡಿ
ಯುವ ಪೀಳಿಗೆಯನ್ನು ದೇಶದ ಶಕ್ತಿ ಎಂದು ಹೇಳುತ್ತಾರೆ. ಅನೇಕ ಮಹನೀಯರು ಯುವ ಸಮೂಹವನ್ನು ದೇಶದ ಭವಿಷ್ಯ ಎಂದು ಕರೆದಿದ್ದಾರೆ. ದೇಶ ಕಟ್ಟಲು ಈ ಯುವಸಮೂಹ ಬಹಳ ದೊಡ್ಡ ಪಾತ್ರವನ್ನು ನಿಭಾಯಿಸುತ್ತಾರೆ. ನಮ್ಮ ದೇಶದ ಸಂಪತ್ತನ್ನು ಹೆಚ್ಚಿಸಲು ಈ ಯುವಸಮೂಹ ಬಹಳ ಶ್ರಮ ವಹಿಸುತ್ತಾರೆ. ನಮ್ಮ ದೇಶದ ಒಂದಿಷ್ಟು ಯುವಸಮೂಹ ಬಹಳಷ್ಟು ಸಾಧನೆ ಮತ್ತು ಅವಿಷ್ಕಾರಗಳನ್ನು ಮಾಡ್ಡಿದ್ದಾರೆ. ನಮ್ಮ ದೇಶದ ಜನಸಂಖ್ಯೆ ೧೩೦ ಕೋಟಿ ಅದರಲ್ಲಿ ಯುವಸಮೂಹ ೬೦ ಕೋಟಿಗೂ ಹೆಚ್ಚು. ಈ ಎಲ್ಲಾ ಯುವ ಮಂದಿಯಲ್ಲಿ ಎಷ್ಟು […]
ಯಾವುದೇ ಸಮಸ್ಯೆಯಿಂದಲೂ ಹೊರ ಬರುವ ಮಾರ್ಗ: ಕೆ. ಶ್ರೀನಿವಾಸ ರೆಡ್ಡಿ
ಬದುಕಿನಲ್ಲಿ ಪರಿವರ್ತನೆಯೆಂಬುದು ನಿರಂತರವಾಗಿದೆ. ಈ ಪರಿವರ್ತನೆಗಳು ಸವಾಲುಗಳನ್ನು ನಾವು ಬಹುತೇಕ ಸಮಸ್ಯೆಗಳು ಎಂತಲೇ ಪರಿಗಣಿಸುತ್ತೇವೆ. ಆದ್ದರಿಂದಲೇ ನಾವು ಅದರಿದ ಬಳಲುವುದು ಕುಗ್ಗಿಹೋಗುವುದೇ ಇದೆ. ಇದರಿಂದ ನಮಗೆ ಮತ್ತೂ ಹಾನಿಯಾಗುತ್ತದೆ. ಸವಾಲನ್ನು ಎದುರಿಸಲು ಅಗತ್ಯವಾಗಿರುವ ಸಂಪನ್ಮೂಲಗಳನ್ನು ನಾವು ದುರ್ಬಲಗೊಳಿಸಿಕೊಳುತ್ತೇವೆ. ಈಗ ನಾವು ಮಾಡುವುದಾದರೂ ಏನು? ಗಮನಿಸಿದರೆ ಇಲ್ಲಿ ಎಲ್ಲವೂ ಫಲಿತಾಂಶಗಳೇ ಆಗಿವೆ. ನಮ್ಮ ದೃಷ್ಟಿಯಲ್ಲಿ ಸೋಲೆಂದರೆ ನಾವು ಅಂದುಕೊಂಡದ್ದು ಆಗದಿರುವುದು. ಸಮಸ್ಯೆಯೆಂದರೆ ನಾವು ಅದನ್ನು ಎದುರಿಸಲಾರವೇನೋ ಇದರಿದ ನಮಗೆ ಹಾನಿಯೇ ಆಗುವುದೇನೋ ಹಾನಿಯಾದರೆ ಏನು ಮಾಡುವುದು ಎಂಬ ಊಹೆ […]
ನೆನಪು: ಕೆ. ನಲ್ಲತಂಬಿ
ತಮಿಳಿನಲ್ಲಿ: ವಣ್ಣನಿಲವನ್ಕನ್ನಡಕ್ಕೆ: ಕೆ. ನಲ್ಲತಂಬಿ “ಹೋಗಲಿಕ್ಕೆ ಒಂದು ಗಂಟೆ, ಬರಲಿಕ್ಕೆ ಒಂದು ಗಂಟೆ. ಅಲ್ಲಿ ಅಣ್ಣನ ಮನೆಯಲ್ಲಿ ಹತ್ತು ನಿಮಿಷ ಆಗುತ್ಯೇ? ಈಗ ಗಂಟೆ ಹತ್ತೂವರೆ ಆಗಲಿದೆ. ಎರಡು ಎರಡುವರೆಯೊಳಗೆ ಬಂದು ಬಿಡಬಹುದು. ಹೋಗಿ ಹಣ ತೆಗೆದುಕೊಂಡು ಬಾ” ಎಂದ ಸೆಲ್ಲಚ್ಚಾಮಿ. ಸರೋಜಳಿಗೆ ಏನು ಮಾಡಬೇಕೆಂದು ತಿಳಿಯಲಿಲ್ಲ. ಅಲ್ಲಿ ಕಲ್ಲಿಡೈಕುರುಚ್ಚಿ ರಾಮಸಾಮಿಯನ್ನು ನೆನಪು ಮಾಡಿಕೊಂಡರೆ ವಾಕರಿಕೆ ಬರುತ್ತದೆ.“ನಾನು ಅಂಗಡಿಯನ್ನು ನೋಡಿಕೊಳ್ಳುತ್ತೇನೆ. ನೀವು ಹೋಗಿ ಕೇಳಿ ತೆಗೆದುಕೊಂಡು ಬನ್ನಿ” ಎಂದಳು ಸರೋಜ. “ಅದು ಗೊತ್ತಿಲ್ಲವೇನು. ನಾನು ನಿನ್ನನ್ನು ಹೋಗಲು […]
ಗ್ರೀಸ್ಮನ್: ಡಾ. ಶಿವಕುಮಾರ ಡಿ.ಬಿ
ಅಂದು ಜಯಣ್ಣ ಎಂದಿನಂತೆ ಇರಲಿಲ್ಲ. ಕೊಂಚ ವಿಷಣ್ಣನಾಗಿ ಕೂತಿದ್ದ. ಅವನ ತಲೆಯಲ್ಲಿ ಮಗಳ ಶಾಲಾ ಶುಲ್ಕ, ಮನೆಗೆ ಬೇಕಾಗಿರುವ ದಿನಸಿ ಪದಾರ್ಥಗಳಿಗೆ ಯಾರ ಬಳಿ ಹಣಕ್ಕಾಗಿ ಅಂಗಲಾಚುವುದು? ಎಂಬ ಚಿಂತೆ ಆವರಿಸಿತ್ತು. ಇತ್ತೀಚೆಗೆ ಯಾಕೋ ಮೊದಲಿನಂತೆ ಲಾರಿಗಳು ಟ್ರಕ್ ಲಾಬಿಯಲ್ಲಿ ಸರಿಯಾಗಿ ನಿಲ್ಲುತ್ತಿರಲಿಲ್ಲ. ಹೀಗಾಗಿ ಲಾರಿಗಳಿಗೆ ಗ್ರೀಸ್ ತುಂಬುವ ಕೆಲಸವು ಸರಿಯಾಗಿ ನಡೆಯದೆ ಸಂಸಾರದ ನಿರ್ವಹಣೆ ಕಷ್ಟವಾಗಿತ್ತು. ಅದರಲ್ಲೂ ಜಯಣ್ಣನ ಅಕ್ಕಪಕ್ಕದ ವೃತ್ತಿಸ್ನೇಹಿತರೇ ಅವನಿಗೆ ಪೈಪೋಟಿಯಾಗಿ ನಿಂತಿದ್ದರು. ಲಾರಿ ತಮ್ಮ ಮುಂದೆ ನಿಲ್ಲುವುದೇ ತಡ ತಾ ಮುಂದು, […]
ಸಲೀಮ ಭಾರತಿ ಅವರ “ಕಾರ್ಲ್ ಮಾರ್ಕ್ಸ್ ಜೀವನ ಪರಿಚಯ” ಒಂದು ಮರು ಓದು.: ಅಶ್ಫಾಕ್ ಪೀರಜಾದೆ.
ಕಮ್ಯೂನಿಸಂ : ಎಲ್ಲ ಸ್ವತ್ತೂ ಸಮುದಾಯಕ್ಕೆ ಸೇರಿದುದೆಂದೂ ಪ್ರತಿಯೊಬ್ಬ ವ್ಯಕ್ತಿಯೂ ಶಕ್ತ್ಯನುಸಾರವಾಗಿ ದುಡಿದು ಆವಶ್ಯಕತೆಗೆ ಅನುಸಾರವಾಗಿ ಪ್ರತಿಫಲ ಪಡೆಯಬೇಕೆಂದೂ ಪ್ರತಿಪಾದಿಸುವ ತತ್ತ್ವ (ಸಾಮ್ಯವಾದ).ಮಾರ್ಕ್ಸ್ ಮತ್ತು ಎಂಗೆಲ್ಸ್ ರಿಂದ ಪ್ರಪ್ರಥಮವಾಗಿ ಶಾಸ್ತ್ರೀಯವಾಗಿ ಪ್ರತಿಪಾದಿತವಾದ ಈ ತತ್ತ್ವಕ್ಕೆ ವೈಜ್ಞಾನಿಕ ಸಮಾಜವಾದವೆಂದೂ ಹೆಸರಿದೆ. (ವಿಕಿಪಿಡಿಯಾ) ಕಾಲ ಎಂಬುದು ಎಂದಿಗೂ ನಿಂತ ನೀರಲ್ಲ. ಸದಾ ಹರಿಯುತ್ತಲೇ ಇರುವ ಮಹಾ ಪ್ರವಾಹ. ಹಲವಾರು ತಿರುವು, ಹಲವಾರು ಘಟ್ಟಗಳು ಮತ್ತು ಪಲ್ಲಟಗಳು ಸಂಭವಿಸುತ್ತಲೇ ಹೊಸ ಹೊಸ ಸಾಮಾಜಿಕ, ರಾಜಕೀಯ, ಸಾಹಿತ್ಯಿಕ ಸಿದ್ಧಾಂತಗಳು, ಆಯಾಮಗಳು ಕೊನೆಗೆ ಒಂದು […]
ಜಾದು ಕಾರ್ಯಕ್ರಮ: ಹೆಚ್. ಶೌಕತ್ ಆಲಿ ಮದ್ದೂರು
ಒಂದು ದಿನ ಶಾಲೆಗೆ ಒಬ್ಬ ಜಾದುಗಾರ ಬಂದ. ಬಂದವನೇ ಅದು ಇದು ಎನ್ನದೆ ಸೀದಾ ತನ್ನ ಪರಿಚಯ ಮಾಡಿಕೊಂಡ “ಎಲ್ಲರಿಗೂ ನಮಸ್ಕಾರ ನನ್ನ ಹೆಸರು ರಾಜ, ನಾನು ಮನರಂಜನೆಗಾಗಿ ಜಾದು ಮಾಡುತ್ತೇನೆ. ಶಾಲೆಯ ಮಕ್ಕಳಿಗೆ ಒಂದು ಅವಧಿ ಬಿಡುವು ಮಾಡಿಕೊಡಿ ಹಾಗೆ ಮಕ್ಕಳನ್ನು ಒಂದು ಕಡೆ ಸೇರಿಸಿ, ನಾನು ನಿಮ್ಮಿಂದ ಏನನ್ನು ನಿರೀಕ್ಷಿಸುವುದಿಲ್ಲ ದಯಮಾಡಿ ಅವಕಾಶ ಮಾಡಿಕೊಡಿ ಮೇಡಂ “ಎಂದು ಮುಖ್ಯ ಶಿಕ್ಷಕಿಯಲ್ಲಿ ಬೇಡಿಕೊಂಡಾಗ ಮುಖ್ಯ ಶಿಕ್ಷಕಿ ಕೆಲವು ಶರತ್ತುಗಳನ್ನು ಹೇಳಿ ಸಮಯ ಒಂದು ಅವಧಿ ಮಾತ್ರವೇ […]
ಬೆತ್ತಲೆ ಒಂದು ಸುಂದರವಾದ ಸ್ಥಿತಿ ಎನ್ನುವ “ಅತ್ತರ್”: ಡಾ. ನಟರಾಜು ಎಸ್ ಎಂ
ತಮ್ಮ “ಬೇರು” ಕೃತಿಗಾಗಿ ಕೇಂದ್ರ ಯುವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಗೆಳೆಯ ಶ್ರೀಧರ ಬನವಾಸಿಯವರು ಕಳೆದ ವಾರ ತಮ್ಮ ಪಂಚಮಿ ಪ್ರಕಾಶನದಿಂದ ಹೊರ ತಂದಿರುವ ಕೆ ನಲ್ಲತಂಬಿಯವರ ಹೊಚ್ಚ ಹೊಸ ಕೃತಿ “ಅತ್ತರ್” ಅನ್ನು ಕಳುಹಿಸಿಕೊಟ್ಟಿದ್ದರು. ಸಾಹಿತ್ಯ ಲೋಕದಲ್ಲಿ ಹೆಸರು ಮಾಡಿರುವ ಗೆಳೆಯ ಶ್ರೀಧರ್ ತಮ್ಮ ಪ್ರಕಾಶನ ಸಂಸ್ಥೆಯಿಂದ ನಲವತ್ತೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. “ಅತ್ತರ್” ಇವರ ಸಂಸ್ಥೆ ಪ್ರಕಟಿಸಿರುವ ಕೆ ನಲ್ಲತಂಬಿಯವರ ಮೊದಲ ಪುಸ್ತಕ. ಕೆ ನಲ್ಲತಂಬಿಯವರು ಅನುವಾದ ಕ್ಷೇತ್ರದಲ್ಲಿ ತುಂಬಾ ಹೆಸರು ಮಾಡಿರುವವರು. […]
ಪಂಜು ಕಾವ್ಯಧಾರೆ
ನಿನ್ನ ಸಂಧಿಸಿದ ಕುರಿತು ಒಂದಿನಿತೂ ಕಾಣಿಸದಕತ್ತಲೆಯ ಪ್ರಖರತೆಯಲ್ಲಿನಿನ್ನ ಸಂಧಿಸಿದ ಕುರಿತು… ಈರ್ವರ ಭೋರ್ಗರೆವ ಮೌನಗಳುಡಿಕ್ಕಿ ಹೊಡೆದು..ಗುಡುಗೂ.. ಸಿಡಿಲೂ..!ಅಂತಿಪ್ಪ ಕಾಲದ ನೆತ್ತಿಯನ್ನುತುಸುವೇ ನೇವರಿಸುತ್ತಾತೇವದ ಅರಿವಾಗಿ ನಿಂತೆ..ತೇಲು ಮೋಡವ ಹೊತ್ತನಿನ್ನ ಕಣ್ಣು ಹನಿಸಿದ್ದು ಇರಬಹುದೇಅನಿಸಿ ಒಂದಷ್ಟು ನಿಟ್ಟುರಿಸು.. ನಿನ್ನ ಮುಂಗುರುಳ ಗಾಳಿಗೆ ತಾಕಿಸದ್ದಿಲ್ಲದ ಮಾತುಗಳ ಪಟ ಪಟ ಸದ್ದು..ಬಯಲು ಆಗಸದ ತಾರೆಗಳು ನಮ್ಮ ಕಂಡಾವುಎಂಬ ನಾಚಿಕೆ ತುಸು ಹೆಚ್ಚು ನನಗೇ.. ಗಳಿಗೆಗಳು ಉರುಳಿದವು..ಸೂರ್ಯನ ಟಾರ್ಚು ಮೊಗದ ಮೇಲೆ ನೇರಾ..ಎಲ್ಲಿದ್ದೇನೆ ನಾನು ಅಂದುಕೊಳ್ಳುವಷ್ಟರಲ್ಲೇನೀನೆಲ್ಲಿ ಮಂಗ ಮಾಯ …? ಹಾ.. ಅಲ್ನೋಡು ಸುಟ್ಟು […]