ಕೆಂಗುಲಾಬಿ (ಭಾಗ 4): ಹನುಮಂತ ಹಾಲಿಗೇರಿ

(ಹಿಂದಿನ ಭಾಗ ಇಲ್ಲಿದೆ) ಅವತ್ತು ಉಜ್ಜಳಪ್ಪನ ಜಾತ್ರಿ ಈ ಮೊದಲಿನಂಗ ಅದ್ದೂರಿಯಾಗಿಯ ನಡೆದಿತ್ತು. ಸುತ್ತು ಊರು ಕೇರಿಯವರೆಲ್ಲ ಸೇರಿದ್ದರು. ದೇವರಿಗೆ ಬಿಡುವ ಹುಡುಗಿರನ್ನು ಉಜ್ಜಳಪ್ಪನ ಮುತ್ಯಾನ ಗುಡಿಯೊಳಗ ಇರೋ ಅಂತಪುರಕ್ಕೆ ಹೋಗಿ ಅಲ್ಲಿ ಹುಡುಗಿಯರ ಗುಪ್ತಾಂಗವನ್ನು ಗಾಯಗೊಳಿಸುವ ಪದ್ದತಿ ಇತ್ತೀಚಿನ ಕೆಲವು ವರ್ಷಗಳಲ್ಲಿ ಕೆಲವು ಪ್ರತಿಭಟನಾಕಾರರ ಪ್ರಯತ್ನದಿಂದಾಗಿ ನಿಂತಿತ್ತಾದರೂ ಹುಡುಗಿಯರನ್ನು ದೇವರಿಗೆ ಬಿಡೋದು ಮತ್ತು ಪ್ರಾಣಿಗಳನ್ನು ಬಲಿ ಕೊಡೋದು ಇನ್ನು ಮುಂದುವರೆದಿತ್ತು. ಅಂದು ಉಜ್ಜಳಪ್ಪನ ಅಣ್ಣ ತಮ್ಮಂದಿರು ಸಂಬಂಧಿಕ ದೇವರುಗಳನ್ನು ಸುತ್ತಲಿನ ಹಳ್ಳಿಯ ಭಕ್ತರು ಪಲ್ಲಕ್ಕಿಗಳಲ್ಲಿ ಹೊತ್ತು ತಂದಿದ್ದರು. … Read more

ಬದಲಾದ ಹುಬ್ಬಳ್ಳಿಯಲ್ಲಿ ಮತ್ತ ನಾಕಹೆಜ್ಜಿ: ಉಮೇಶ್ ದೇಸಾಯಿ

ಹೌದು ಅಗದಿ ಏನು ಬಹಳ ದಿನಾ ಆಗಿರಲಿಲ್ಲ ಹುಬ್ಬಳ್ಳಿಗೆ ಹೋಗಿ. ಅಲ್ಲಿ ಇಲ್ಲಿ ಫೇಸಬುಕ್ಕಿನ ಹುಬ್ಬಳ್ಳಿ ಮಂದಿ ಯಲ್ಲಿ ಅಲ್ಲಿನ ಸುದ್ದಿ ಅಪಡೇಟ್ ಆಗುತ್ತಲೇ ಇತ್ತು. ಈ ಸಲ ಟೈಮಿತ್ತು. ಹಂಗ ಒಬ್ಬಾವನ ಹುಬ್ಬಳ್ಳಿಯೊಳಗ ಸುತ್ತಾಕಿದೆ.. ಅಗದಿ ಎದ್ದುಕಾಣುವ ಬದಲಾವಣಿ  ಆಗಿದ್ದು  ಗೋಕುಲ್ ರೋಡನ್ಯಾಗ ಅಂತ (ಈಗ ಮತ್ತೆ  ಹಳೇ ಹೆಸರಿಂದ ಅದನ್ನ ಕರೀಬೇಕೋ ಬ್ಯಾಡೋ ಗೊತ್ತಾಗವಲ್ತು..).. ಅಲ್ಲಿ  ಏರಪೋರ್ಟ  ಅದ.  ಹಂಗ ಒಂದೆರಡು ಮಾಲ್  ಬಂದಾವ  ಅಂತ,  ಹಂಗ  ಕೆ ಎಫ್ ಸಿ, ಮೆಕ್ ಡೊನಾಲ್ಡು … Read more

ಸರಕ್ಕ ಸರಿತಲ್ಲ – ಪರಕ್ಕಂತ್ ಹರಿತಲ್ಲ……: ಸುಮನ್ ದೇಸಾಯಿ ಅಂಕಣ

                        ಮೊನ್ನೆ ಸಂಜಿಮುಂದ ನನ್ನ ಗೆಳತಿ ಕವ್ವಿ(ಕವಿತಾ) ಬಂದಿದ್ಲು. ಹಿಂಗ ಅದು ಇದು ಮಾತಾಡಕೋತ ತಮ್ಮ ತಮ್ಮಂದು ಮದವಿ ಘಟ್ಟಿ ಆದ ಸುದ್ದಿ ಹೇಳಿದ್ಲು.ಆಕಿ ತಮ್ಮಂದು ಕನ್ಯಾ ಆರಿಸೊದ್ರಾಗ ಭಾಳ ತಕರಾರ ಅವ ಅಂತ ಕೇಳಿದ್ದೆ. ಅಂತು ಇಂತು ನಿಶ್ಚೆ ಆತಲ್ಲಾ ಅಂತ " ಅಯ್ಯ ಛೋಲೊ ಆತಲ್ಲಾ ಪಾರ್ಟಿ ಯಾವಾಗಲೇ" ಅಂದೆ. ಅದಕ್ಕ ಆಕಿ "ಹೋಗ ನಮ್ಮವ್ವ ಎಲ್ಲಿ ಪಾರ್ಟಿ … Read more

ನಾಟಕಕಾರರಾಗಿ ಕುವೆಂಪು (ಭಾಗ-13) : ಹಿಪ್ಪರಗಿ ಸಿದ್ದರಾಮ್, ಧಾರವಾಡ

ರಕ್ತಾಕ್ಷಿ (1932) ನಾಟಕ ಕುರಿತ ಲೇಖನದ ಮುಂದುವರಿದ ಭಾಗ ಕೃತಿಯ ಆರಂಭದ ದೃಶ್ಯವು ಹ್ಯಾಮ್ಲೆಟ್ ಕೃತಿಯ ಆರಂಭವನ್ನು ನೆನಪಿಸುತ್ತದೆ. ಮೊದಲ ಅಂಕದ ಮೊದಲ ದೃಶ್ಯದಲ್ಲಿ ಹಾಲು ಚೆಲ್ಲಿದ ಬೆಳದಿಂಗಳ ರಾತ್ರಿಯಲ್ಲಿ ಕೆಳದಿ ಅರಮನೆಯ ಹೆಬ್ಬಾಗಿಲ ಬಳಿ ಕೆಂಚಣ್ಣನು ಭಯಗೊಂಡವನಂತೆ ಕಾವಲು ತಿರುಗುತ್ತಿದ್ದಾನೆ. ಹಿಂದಿನ ರಾತ್ರಿ ಆತ ಕಾವಲು ತಿರುಗುತ್ತಿದ್ದಾಗ ತೀರಿಕೊಂಡ ದೊರೆ ಬಸಪ್ಪನಾಯಕರಂತೆ ಕಾಣುವ ಭೂತವನ್ನು ಕಂಡು ತತ್ತರಿಸಿ ಮರುದಿನ ಬಿದನೂರಿನ ರಾಜಕುಮಾರ ಬಸವಯ್ಯನ ಆಪ್ತಮಿತ್ರ ಹೊನ್ನಯ್ಯನಿಗೆ ಹೇಳಿದ್ದಾನೆ. ಅದರ ಸತ್ಯಾಸತ್ಯತೆಯನ್ನು ಪರಿಕ್ಷಿಸಲು ಈ ದಿನ ತಾನೇ … Read more

ದೇವರು ಮೆಚ್ಚಿದ ಭಕ್ತ: ಸುಬ್ರಹ್ಮಣ್ಯ ಹೆಗಡೆ

ಅದೊಂದು ಊರು, ಆ ಊರಿನಲ್ಲಿ ಒಂದು ದೇವಸ್ಥಾನ. ಆ ದೇವಸ್ಥಾನಕ್ಕೆ ಒಬ್ಬ ದೇವರು. ಎಲ್ಲಾ ಊರುಗಳ ಎಲ್ಲ ದೇವರುಗಳಂತೆ ಭಕ್ತಗಣಗಳಿಂದ ಸೇವೆ ಮಾಡಿಸಿಕೊಂಡು, ಹಣ್ಣು ಕಾಯಿಗಳನ್ನು ತನ್ನ ಹೆಸರಿನಲ್ಲಿ ಅರ್ಪಿಸಿ ಭ(ಭಂ)ಜಿಸುತ್ತಿರುವ ಜನಸಮೂಹವನ್ನು ಕಂಡು ಒಳಗೊಳಗೆ ನಗುತ್ತಿರುವ ಸರ್ವಜ್ಞ, ಸರ್ವಾಂತರ್ಯಾಮಿ, ಸರ್ವಶಕ್ತ ಆತ. ಎಲ್ಲವೂ ಹೀಗೇ ಇರಲು, ಕಾಲಚಕ್ರ ಸುಮ್ಮನೇ ಉರುಳುತ್ತಿರಲು, ದೇವನಿಗೆ ಒಂದು ದಿನ ಜಗಜ್ಜನಿತವಾದ ತನ್ನ ಮಾಮೂಲು ಮೂಕ ಧಾಟಿಯನ್ನು ಮೀರಿ ತನ್ನೂರಿನ ಒಬ್ಬ ಶ್ರೀಸಾಮಾನ್ಯನ ಬಳಿ ಒಂದಿಷ್ಟು ಸಮಯ ಕಳೆಯುವ ಮನಸ್ಸು ಮೂಡಿತು. … Read more

ಕುಲೆಶೋವ್ ಪ್ರಯೋಗ:ವಾಸುಕಿ ರಾಘವನ್ ಅಂಕಣ

ನನ್ನ ಪ್ರಕಾರ “ಛಾಯಾಗ್ರಹಣ” ಮತ್ತು “ಸಂಕಲನ” ಸಿನಿಮಾವನ್ನು ಬೇರೆಲ್ಲ ಕಲಾಪ್ರಕಾರಗಳಿಗಿಂತ ವಿಭಿನ್ನವಾಗಿಸುತ್ತವೆ. ತೆರೆಯ ಮೇಲೆ ಇಡೀ ಮರುಭೂಮಿಯನ್ನು ಒಮ್ಮೆಲೇ ಸೆರೆಹಿಡಿಯಬಹುದು, ಅಥವಾ ಕಣ್ಣಂಚಿನ ಒಂದೇ ಒಂದು ಹನಿಯನ್ನು ತೋರಿಸಬಹುದು. ಇದು ಸಿನಿಮಾ ಛಾಯಾಗ್ರಹಣದ ಶಕ್ತಿ! ಸಿನಿಮಾ ಸಂಕಲನ ಕೂಡ ಅಷ್ಟೇ, ಹಲವಾರು ಶಾಟ್ ಗಳನ್ನು ಒಟ್ಟುಗೂಡಿಸಿದಾಗ, ಸೀನಿಗೆ ಒಂದು ಅರ್ಥ, ಸಿನಿಮಾಗೆ ಒಂದು ದಿಕ್ಕು ಸಿಗುತ್ತದೆ. ನನಗೆ ಸಿನಿಮಾ ಸಂಕಲನದ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ. ನಿಜಕ್ಕೂ ಸಂಕಲನ ಹೇಗೆ ಮಾಡುತ್ತಾರೆ ಅಂತ ಒಂದು ಸಲವೂ ನೋಡಿಲ್ಲ. ಗೊತ್ತಿಲ್ಲದಿರುವಾಗ … Read more

ಮೂವರ ಕವಿತೆಗಳು: ಅಪಿ೯ತ ಮೇಗರವಳ್ಳಿ, ಪ್ರಭಾಕರ ತಾಮ್ರಗೌರಿ, ಗುರುನಾಥ ಬೋರಗಿ

  ಶಿಕ್ಷೆ-ಬದುಕು ಹಾಸಿಗೆಯ ಸುಕ್ಕಿನಲಿ ಸಿಕ್ಕಿ  ಉಕ್ಕಿ ಹರಿಯದೆ ಹರಯ ಕಳಚಿ  ಬಿಳಿ ಕೂದಲು ಇಣುಕಿ  ಮುಖದಲ್ಲಿ ಸುಕ್ಕು ಮೂಡುವ ಮುನ್ನ  ಕಿಂಚಿತ್ತಾದರೂ ವಂಚಿಸಬೇಕೆನಿಸಿತು          ವಂಚನೆಯ ಪ್ರಕರಣಕ್ಕೆ ಶಿಕ್ಷೆಯುಂಟು ಪೋಲಿಸರಿದ್ದಾರೆ ಜೈಲುವಾಸ ಗ್ಯಾರಂಟಿ ಅವಮಾನ, ತಲೆತಗ್ಗಿಸಬೇಕು ಯೋಚಿಸಲೇಬೇಡ ಸುಮ್ಮನಿದ್ದುಬಿಡು.   ಜೋರಾಗಿ ಗಹಗಹಿಸಿದೆ ಶಿಕ್ಷೆ-ಪೋಲಿಸು-ಜೈಲು ಮಾನ-ಅವಮಾನ ಮತ್ತು ತಲೆತಗ್ಗಿಸಬೇಕು. ಯೋಚಿಸಲೇಬೇಡ, ಸುಮ್ಮನೆ ಇದ್ದುಬಿಡು.   ಗೆರೆಯೆಳೆಯುವುದೇ ಇರಬೇಕು ಜಗತ್ತಿನ ಪುರಾತನ ಮದ್ಯ ಬರಿ ಘಾಟಿಗೇ ಅಮಲು ನಶೆಯಲ್ಲಿ ಗೀರಿದ್ದೆಲ್ಲಾ ಲಕ್ಷ್ಮಣರೇಖೆಗಳೇ  ದಾಟಿದರೆ … Read more

ವಿಶ್ವದೆಲ್ಲೆಡೆ ಹರಡುತ್ತಿರುವ ಅಮೇರಿಕಾ ಬೇಹುಗಾರಿಕೆಯ ಜಾಲಬಂಧ: ಜೈಕುಮಾರ್

ಅಮೇರಿಕಾದ ಕ್ರಮ ಪ್ರಜಾಪ್ರಭುತ್ವಕ್ಕೆ ಅಪಾಯ : ಎಡ್ವರ್ಡ್ ಸ್ನೋಡೆನ್, ಮಾಜಿ ಸಿಐಎ ಉದ್ಯೋಗಿ “ನಾನು ಮತ್ತೆ ಮನೆಗೆ ತೆರಳುತ್ತೇನೆಂಬ ಭರವಸೆಯಿಲ್ಲ. ತಮ್ಮ ಹೆಸರಿನಲ್ಲಿ ಸರ್ಕಾರಗಳು ನಡೆಸುತ್ತಿರುವ ಕೃತ್ಯಗಳನ್ನು ಜನತೆಗೆ ತಿಳಿಸುವುದಷ್ಟೇ ನÀನ್ನ ಉದ್ದೇಶ. ನನಗೆ ರೂ. 1 ಕೋಟಿ ಸಂಬಳ, ಒಳ್ಳೆಯ ಗೆಳತಿ, ಹವಾಯಿ ದ್ವೀಪದಲ್ಲೊಂದು ಐಷಾರಾಮಿ ಮನೆ ಮತ್ತು ಆತ್ಮೀಯ ಬಂಧುವರ್ಗದವರೆಲ್ಲರೂ ಇದ್ದು ಆರಾಮ ಜೀವನ ನಡೆಸಬಹುದು. ಆದರೆ, ಇವೆಲ್ಲವನ್ನೂ ನಾನು ತ್ಯಾಗ ಮಾಡಲು ಸಿದ್ದನಿದ್ದೇನೆ. ಏಕೆಂದರೆ, ಅಮೇರಿಕಾ ವಿಶ್ವದಾದ್ಯಂತ ರಹಸ್ಯವಾಗಿ ನಿರ್ಮಿಸುತ್ತಿರುವ ಬೇಹುಗಾರಿಕಾ ವ್ಯವಸ್ಥೆಯು … Read more

ಪಂಜು ಚುಟುಕ ಸ್ಪರ್ಧೆ: ಸ್ಫೂರ್ತಿ ಗೌಡ ಅವರ ಚುಟುಕಗಳು

1.ನಿರ್ಲಿಪ್ತತೆ ನಿನ್ನ ನೆನಪಿಲ್ಲ ಗಾಳಿ ಗಂಧವಿಲ್ಲ ನಿದ್ದೆಯಲಿ ಕರಗಿಸುವ ಮೋಹವಿಲ್ಲ ನಿರ್ಲಿಪ್ತತೆ!! ಯಾರೋ ಕೂಗಿದರು ಕಲ್ಲು ಹೃದಯ =========================== 2. ವ್ರತ ಗೆದ್ದ ಸ್ವಯಂವರದಲ್ಲಿ ಹಂಚಿದ ಅಣ್ಣತಮ್ಮಂಗೆ ಸಮಕಾಣವ್ವ ಐದು ಬೆರಳು ನಿನ್ನವೇ ಕುಂತಿಯ ಉಸಿರು ಇದೇ ಗರತಿಯ ವ್ರತವೇ? =========================== 3. ಉಪವಾಸ ಏಕಾದಶಿ ಉಪವಾಸ ದ್ವಾದಶಿ ಉಪವಾಸ ಸಿಕ್ಕಿತೋ ಪುಣ್ಯಫಲ? ಹರಕು ಬಟ್ಟೆ ಮುರುಕು ತಟ್ಟೆ ಪ್ರತ್ಯಹಂ ಉಪವಾಸ ಯಾರಾದರು ಇವನಿಗೆ ಕೊಡಿಸಿ ಆ ನಿಮ್ಮ ಪುಣ್ಯ ಫಲ! =========================== 4. ಉಳುಮೆಯಿಲ್ಲ ಒಲವಿನ … Read more

ಕಾನು ಕುರಿಮರಿ: ಅಖಿಲೇಶ್ ಚಿಪ್ಪಳಿ

ಫೋಟೊದಲ್ಲಿರುವ ಊರ್ಧ್ವಮುಖಿ ಯಾರೆಂದು ನಿಮಗೆ ಸುಲಭವಾಗಿ ಅರ್ಥವಾಗಿರಬಹುದು. ಅದೇ ಲೇಖನ ಬರೆಯುವ ಮನುಷ್ಯ – ಅಖಿಲೇಶ್ ಚಿಪ್ಪಳಿ. ಆದರೆ, ಎತ್ತಿಕೊಂಡಿರುವ ಆ ಚಿಕ್ಕ, ಸುಂದರ ಪ್ರಾಣಿ ಯಾವುದೆಂದು ಗೊತ್ತಾ? ಇದರ ಹಿಂದಿನ ಕತೆಯೇ ಈ ವಾರದ ಸರಕು. ವನ್ಯಜೀವಿ ಹತ್ಯೆ ಅಂದರೆ ಪ್ರತಿಷ್ಟಿತ ಬೇಟೆ ಎಂಬ ಅಮಾನವೀಯ ಕಾರ್ಯ ಜನಪ್ರಿಯವಾದ ಕಾಲವೊಂದಿತ್ತು. ರಾಜ-ಮಹಾರಾಜರು ತಮ್ಮ ತಿಕ್ಕಲು ತೆವಲಿಗೋಸ್ಕರ ಕಾಡಿನ ಪ್ರಾಣಿಗಳನ್ನು ಹತ್ಯೆ ಮಾಡುತ್ತಿದ್ದರು. ರಾಮಾಯಣದಂತಹ ಪುರಾಣ ಗ್ರಂಥಗಳಲ್ಲೂ ಬೇಟೆಯ ಬಗ್ಗೆ ಉಲ್ಲೇಖಗಳಿವೆ. ಸೀತೆ ಬಂಗಾರದ ಜಿಂಕೆ ಬೇಕು … Read more

ಚುಕ್ಕಿ-ಚಂದ್ರಮ: ನವೀನ್ ಮಧುಗಿರಿ

ಕನಸಿನಲ್ಲಿ ನಾನು ತುಂಬಾ  ಉದ್ದ ಬೆಳೆದೆನು! ಚುಕ್ಕಿ ಚಂದ್ರರೆಲ್ಲ ನನ್ನ  ಕೈಯ್ಯ ಹತ್ತಿರ!   ಚಂದಮಾಮ ಕೆನ್ನೆ ಸವರಿ  ಮುತ್ತು ಕೊಟ್ಟನು  ಚುಕ್ಕಿ ತಾರೆ ನನ್ನ ಜೊತೆ  ಒಳ್ಳೆ ಗೆಳೆಯರಾದರು    ಅರ್ಧ ಚಂದ್ರನ ಮೇಲೆ ನಾನು  ಜಾರುಬಂಡಿ ಆಡಿದೆ  ಚುಕ್ಕಿ ತಾರೆಗಳ ಜೊತೆ  ತುಂಬಾ ಮಾತನಾಡಿದೆ    ಅಲ್ಲೂ ಒಂದು ಊರು ಇತ್ತು  ಅಲ್ಲಿ ಜಾತ್ರೆ ನಡೀತಿತ್ತು  ಚಂದಮಾಮ ಕೈಯ್ಯ ಹಿಡಿದ  ನಾನು ಊರು ಸುತ್ತಿದೆ    ಕಡಲೆ ಮಿಟಾಯಿ ಕೊಬ್ಬರಿ ಮಿಟಾಯಿ  ಬೆಂಡು ಬತ್ತಾಸು … Read more

ಅಣ್ಣಾವ್ರ ಜೊತೆ ಒಂದು ಬೆಳಗ್ಗೆ: ಹೃದಯಶಿವ

ಗುರುಕಿರಣ್ ರನ್ನು ನಾವೆಲ್ಲಾ ಸಾಮಾನ್ಯವಾಗಿ ಗುರೂಜಿ ಅಂತೀವಿ. ಇಂಥ ಗುರೂಜಿ ಒಂದು ಬೆಳಗ್ಗೆ ತಮ್ಮ ಜೊತೆ ನನ್ನನ್ನೂ ಆಕಾಶ್ ಆಡಿಯೋಗೆ ಕರೆದುಕೊಂಡು ಹೋಗಿದ್ದರು. ಆಗಿನ್ನೂ ಒಂದೇ ಒಂದು ಹಾಡು ಸೈತ ಸಿನಿಮಾಗೆ ಬರೆದಿರಲಿಲ್ಲ ನಾನು. ಚಿತ್ರಗೀತೆ ಬರೆಯುವುದರ ಕುರಿತು ಆಗಷ್ಟೇ ಕಲಿಕೆಯ ಹಂತದಲ್ಲಿದ್ದ ನನಗೆ ರೆಕಾರ್ಡಿಂಗ್ ಸಂದರ್ಭದಲ್ಲಿ ಸ್ಟುಡಿಯೋ ಒಳಗೆ ಜರುಗುವ ವಿದ್ಯಮಾನಗಳ ಬಗ್ಗೆ ತೀರಾ ಕುತೂಹಲವಿತ್ತು. ಗಾಯಕ/ಗಾಯಕಿ ಬಂದು ಸಾಹಿತಿಯ ಮುಖೇನ ಸಾಹಿತ್ಯವನ್ನು ತಮ್ಮ ಡೈರಿಯಂಥ ಪುಸ್ತಕದಲ್ಲಿ ಬರೆದುಕೊಳ್ಳುವುದು, ನಂತರ ಟ್ರ್ಯಾಕ್ ಕೇಳುವುದು, ಟ್ಯೂನಿಗನುಗುಣವಾಗಿ ತಾವು … Read more

ಮಳೆ-ಮಳೆ: ಅಖಿಲೇಶ್ ಚಿಪ್ಪಳಿ

ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಮಳೆಯಾಗುತ್ತಿದೆ. ಭಾರಿ ಮಳೆಯನ್ನು ನೋಡದಿರುವ ಈಗಿನ ಯುವಕರು ಇದೇನು ಮಳೆ ಎಂದು ಒಂಥರಾ ತಾತ್ಸಾರ ಮಾಡುತ್ತಾರೆ. ಕಳೆದ ಬಿರುಬೇಸಿಗೆಯಲ್ಲಿ ನೀರಿಗಾಗಿ ಅನುಭವಿಸಿದ ಎಲ್ಲಾ ಕಷ್ಟಗಳನ್ನು ಆರಿದ್ರಾ ಮತ್ತು ಪುನರ್ವಸು ಮಳೆಗಳು ಮರೆಸಿವೆ. ಹೂಳು ತುಂಬಿದ ಡ್ಯಾಂಗಳು ತುಂಬಿದರೆ ನಮಗೆ ಬೊನಸ್ಸು ಸಿಗುತ್ತದೆ ಎಂದು ಕೆ.ಪಿ.ಸಿಯವರು ಮನಸ್ಸಿನಲ್ಲಿ ಮಂಡಿಗೆ ತಿನ್ನುತ್ತಿದ್ದಾರೆ. ಹೈಸ್ಕೂಲು ಓದಲು 80ರ ದಶಕದಲ್ಲಿ ನಮ್ಮ ಊರಿನಿಂದ ಸಾಗರಕ್ಕೆ ಬರಬೇಕಾಗಿತ್ತು. ಗ್ರಾಮಾಂತರ ಬಸ್ಸುಗಳು ಇರದಿದ್ದ ಆ ಕಾಲದಲ್ಲಿ, ಸೈಕಲ್ಲಿನ ಭಾಗ್ಯವಿಲ್ಲದ ನಾವು ನಡದೇ … Read more

ಪರಕಾಯ ಪ್ರವೇಶದ ಒಂದು ಪ್ರಸಂಗ: ಶೈಲಜಾ

ಮನ ಕಲಕ್ಕಿತ್ತು. ನಿತ್ಯವೂ ದಿನಪತ್ರಿಕೆಯಲ್ಲಿ ಹೆಣ್ಣುಮಕ್ಕಳ ಮಾನಪಹರಣವಾಗುವ ಸುದ್ದಿಯನ್ನು ಓದುತ್ತ ಇದಕ್ಕೆಲ್ಲ ಪರಿಹಾರವೇ ಇಲ್ಲವೆ ಎಂದು ನನ್ನೊಳಗೇ ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಹುಟ್ಟುತ್ತಲೇ ಇದ್ದವು. ಮನಸ್ಸಮಾಧಾನ ಕದಡಿ ಹೋಗಿತ್ತು. ಕೊಂಚ ಉಪಶಮನವಾಗಲೆಂದು ಅಮ್ಮನ ಬಳಿಯಲ್ಲಿದ್ದ “ಪಾಂಡವ ಪ್ರತಾಪ” ತಂದು ಓದತೊಡಗಿದೆ. ಹಾಗಂತ ಇಡೀ ದಿನ ಓದಲು ಕುಳಿತರಾಗುತ್ತದೆಯೆ! ಕರ್ತವ್ಯ ಕೈಬೀಸಿ ಕರೆಯಿತು! ಪುಸ್ತಕ ಬದಿಗಿಟ್ಟು ಕೆಲಸವನ್ನೆಲ್ಲಾ ಮುಗಿಸುವ ಹೊತ್ತಿಗೆ ರಾತ್ರಿ ಗಂಟೆ  ಹತ್ತು!  ಸರಿ, ಇನ್ನು ಮಲಗಿದಿದ್ದರೆ ನಾಳೆ ಏಳಲು ಕಷ್ಟವಾಗುವುದು,  ಬೆಳಿಗ್ಗೆ ಬೇಗ ಎದ್ದು ಬೇಗ … Read more

ಕೆಂಗುಲಾಬಿ (ಭಾಗ 3): ಹನುಮಂತ ಹಾಲಿಗೇರಿ

(ಹಿಂದಿನ ಭಾಗ ಇಲ್ಲಿದೆ) ಶಾಲೆಯಲ್ಲಿ ಇರುವಷ್ಟು ಹೊತ್ತು ಅಕ್ಕನ ಧ್ಯಾನದಲ್ಲಿರುತಿದ್ದ ನಾನು ಶಾಲೆ ಬಿಟ್ಟೊಡನೆ ಅಕ್ಕನೊಂದಿಗೆ ಆಟದಲ್ಲಿ ಸೇರಿಕೊಂಡು ಬಿಡುತಿದ್ದೆ. ಆಗ ಅದೆಷ್ಟೊಂದು ಬಗೆಯ ಆಟಗಳು ಆಡುತ್ತಿದ್ದೆವು. ನಮ್ಮ ಕೇರಿಯಲ್ಲಿ ನನ್ನ ವಾರಿಗೆಯ ಹುಡುಗರಿಗೆಲ್ಲ ನನ್ನಕ್ಕಳೆ ಲೀಡರು. ಅಂಡ್ಯಾಳು, ಮಣಿಪತ್ತು, ಚಕ್ಕಾದೋನಿ, ಹುಲಿಮನಿಯಾಟ, ಲಗೋರಿ, ಕುಂಟಲಿಪ್ಪಿ ಹಿಂಗ ರಗಡ ಆಡ್ತಿದ್ದಿವಿ. ಒಮ್ಮೊಮ್ಮೆ ಗಂಡ ಹೆಂಡತಿ ಆಟದೊಳಗ ಅಕ್ಕ ನಾನು ಗಂಡ ಹೆಂಡತಿಯಾಗಿದ್ದು ನೆನಸ್ಕೊಂಡ್ರ ಈಗಲೂ ನಗು ಬರತೈತಿ. ಹಿಂಗ ಒಂದು ದಿನ ಅಕ್ಕನ ಕೂಡ ಆಟ ಆಡಬೇಕೂಂತ … Read more

ಚೆಲುವೆಯ ನೋಟ ಚೆನ್ನಾ, ಒಲವಿನ ಮಾತು ಚೆನ್ನಾ..: ಸುಮನ್ ದೇಸಾಯಿ ಅಂಕಣ

ಮೊನ್ನೆ ರವಿವಾರ ಮುಂಝಾನೆ ನಮ್ಮ ತಮ್ಮ  ಹಾಡ ಹಾಡಕೊತ ಗಿಡಕ್ಕ ನೀರ ಹಾಕಲಿಕತ್ತಿದ್ದಾ. ಆ ಹಾಡು ಏನಂದ್ರ " ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋತಿಯ ಕಾಟಾ, ಹೆಂಡತಿಯೊಬ್ಬಳು ಜೊತೆಯಲಿ ಇದ್ದರೆ ಹಳಸಿದ ಅನ್ನದ ಊಟಾ…" ಅಂತ ಹಾಡಕೊತ ತನ್ನಷ್ಟಕ್ಕ ತಾನ ನಗಲಿಕತ್ತಾಗ ಹಿಂದ ಯಾರೊ ನಿಂಥಂಗ ಅನಿಸಿ ಹೊಳ್ಳಿ ನೋಡಿದ್ರ ಟೊಂಕದ ಮ್ಯಾಲೆ ಕೈ ಇಟಗೊಂಡ ಉರಿ ಉರಿ ಮಾರಿಮಾಡಕೊಂಡ ತನ್ನ ನೋಡಲಿಕತ್ತ ಹೆಂಡತಿನ್ನ ನೋಡಿ ಒಂದ ಘಳಿಗಿ ಎದಿ ಝಲ್ಲಂದು ಹಂಗ ಸುಮ್ನ ನಿಂತಾ. ಆಕಿ … Read more

ಬದುಕು: ಪ್ರಶಸ್ತಿ ಅಂಕಣ

ಮಳೆಯೆಂದ್ರೆ ಘೋರ ಮಳೆ. ಮಾರಿಕೊಪ್ಪೆಗೆ ತನ್ನ ಮೋರೆ ತೋರಿಸಲೂ ಬೇಸರಿಸಿದ ರವಿ ಮನೆಯೊಳಗೆ ಬೆಚ್ಚಗೆ ಮಲಗಿದ್ದಾನಾ ಎಂಬ ಭ್ರಮೆ ಮೂಡಿಸುವಂತಹ ವಾತಾವರಣ. ಊರ ಮುಂದೊಂದು ಮಾರಿಗುಡಿಯಿಂದ ಹಳ್ಳಿಗೆ ಮಾರಿಕೊಪ್ಪ ಎಂಬ ಹೆಸರು ಬಂತೇ ಅಥವಾ ಮುಳುಗಡೆಯ ವೇಳೆ ಆ ಊರ ಜನರೆಲ್ಲಾ ತಮ್ಮ ಪಿರ್ತಾರ್ಜಿತ ಜಮೀನನ್ನು ಮಾರಿ ಇಲ್ಲಿಗೆ ಗುಳೆ ಬಂದಿದ್ದರಿಂದ ಇಂತಾ ಹೆಸರೇ ಎಂದು ಅಲ್ಲಿನ ಈಗಿನ ತಲೆಮಾರಿನವರಿಗೆ ತಿಳಿದಿಲ್ಲ. ಅದೇ ಮಾರಿಗುಡಿಯ ಮುಂದೆ ಒಂದೈದು ಅಡಿ ದೂರದಲ್ಲೊಬ್ಬ ಬೋರಲು ಬಿದ್ದಿದ್ದಾನೆ. ಮಾರಿಗುಡಿಯ ಎದುರಿಗೆ ಹುಗಿದಿದ್ದ … Read more

ಗೌರಿ ಗಣೇಶ:ವಾಸುಕಿ ರಾಘವನ್

ನಿಜಕ್ಕೂ ಒಳ್ಳೆಯ ಸಿನಿಮಾ ಅಂದರೆ ಯಾವುದು? ಅದನ್ನು ಅಳೆಯಲು ಬೇಕಿರುವ ಮಾನದಂಡಗಳು ಯಾವುವು? ಈ ಪ್ರಶ್ನೆಗೆ ನಿಖರವಾದ ಉತ್ತರ ನನ್ನಲ್ಲಿಲ್ಲ.  ಆದರೆ ಒಂದು ಮಾತ್ರ ಹೇಳಬಲ್ಲೆ. ನೀವು ನೋಡಿದ ಒಂದು ಚಿತ್ರ ಎಷ್ಟೋ ವರ್ಷಗಳಾದ ಮೇಲೂ ನಿಮ್ಮ ನೆನಪಿನಲ್ಲಿ ಉಳಿದಿದದ್ದರೆ, ಅದು ಒಳ್ಳೆಯ ಚಿತ್ರ! ನಾನು ಗೆಳೆಯ ಬೆಳ್ಳೂರ್ ಮನೆಗೆ ಮೊದಲ ಸಲ ಹೋಗ್ತಿದ್ದೆ. ಮನೆಯ ವಿಳಾಸ, ಡೈರೆಕ್ಷನ್ ಎಲ್ಲಾ ಕೇಳಿಕೊಂಡು ಸರಿಯಾಗಿ ಬಂದು ತಲುಪಿದೆ. ಅಪಾರ್ಟ್ ಮೆಂಟ್ ನಂಬರ್ ಏನು ಅಂತ ಕೇಳಿದಾಗ “ನೂರಾ ಎರಡು” … Read more