ಇಬ್ಬರ ಕವಿತೆಗಳು : ಎಂ.ಎಂಸ್. ಕೃಷ್ಣಮೂರ್ತಿ, ಮೋಹನ್. ಡಿ.

ಇರಲಿರಲಿ ಈ ಗರ್ಭ ಪ್ರಸವಕ್ಕಿನ್ನೂ ಒಂಬತ್ತು ದಿನ ಒಂಬತ್ತು ನಿಮಿಷ ಒಂಬತ್ತು ಘಳಿಗೆಗಳಿವೆಯಂತೆ ಏದುಸಿರು ನಿಟ್ಟಿಸುರಿನೊಂದಿಗೆ ಮಿಳಿತವಾಗಿದೆ ಗರ್ಭ ಕಟ್ಟುವುದು ಒಂದು ಅಮೃತ ಘಳಿಗೆಯಂತೆ ಸತ್ತ ವೀರ್ಯದ ಜೋತೆಗೆ ಒಂದೇ ಒಂದು ಗೆದ್ದ ವೀರ್ಯ ಕಾದು ಕುಳಿತ ಅಂಡಾಣು ಕೂಡುವಿಕೆಗೆ ಮಹೂರ್ತವಿಟ್ಟುಕೊಂಡಿರಬೇಕಂತೆ ಮನಸ್ಸು ಮನಸ್ಸು ಒಂದಾಗಿ ಆದರೆ ನನ್ನದು ಕೊಳಕು ಮನಸ್ಸಿನ, ಅವನ ದೇಹ ಮುಗಿಬಿದ್ದು ತೆವಲು ತಿರಿಸಿಕೊಳ್ಳಲು ತೊಟ್ಟಿಯೊಳಗೆ ಸುರಿವ ಕೊಳಕಿನಂತೆ ಸ್ರವಿಸಿ ಬಿಟ್ಟ ವೀರ್ಯಧಾರೆ ಮನಸ್ಸು, ದೇಹವನ್ನು ಕಿತ್ತು ತಿಂದು ಅತ್ಯಾಚಾರ ಮಾಡಿಟ್ಟುಬಿಟ್ಟ ಆ … Read more

ಅಸ್ತಿತ್ವ : ಪ್ರಸಾದ್.ಡಿ.ವಿ.

ಅದೊಂದು ದೊಡ್ಡ ಬಂಗಲೆ, ಸುಮಾರು ಹತ್ತಿಪ್ಪತ್ತು ವರ್ಷಗಳಿಂದ ಯಾರೂ ವಾಸವಿದ್ದಂತೆ ಕಾಣುವುದಿಲ್ಲ! ಅಲ್ಲಲ್ಲಿ ಗಿಡ ಗಂಟಿಗಳು ಬೆಳೆದು, ಆ ಬಂಗಲೆಗೆ ಭೂತ ಬಂಗಲೆಯಂತಹ ಮೆರುಗು ಕೊಟ್ಟಿದ್ದವು! ಆಗೊಮ್ಮೆ, ಈಗೊಮ್ಮೆ ನರಿಯಂತೆ ಕೂಗುವ ಕಿವಿ ಗಡಚಿಕ್ಕುವ ಸದ್ದುಗಳು, ಭಯವನ್ನು ಉತ್ಪಾದಿಸಿ, ತನುವೊಳಗಿನ ಜೀವ ಹಿಡಿಯಷ್ಟಾಗುವಂತೆ ಮಾಡುತ್ತಿದ್ದವು. ಆ ಬಂಗಲೆ ಊರಿನಿಂದ ಸಾಕಷ್ಟು ದೂರದಲ್ಲಿದ್ದುದ್ದರಿಂದ ಹಾಗೆ ಪಾಳು ಬಿದ್ದಿತ್ತೋ, ಇಲ್ಲ ಆ ಮನೆಯ ವಾರಸುದಾರರೆಲ್ಲಾ ಒಟ್ಟಾಗಿ ಯಮನ ಅತಿಥಿಗಳಾಗಿದ್ದರೋ, ಅಥವಾ ಆ ಬಂಗಲೆಯ ವಾಸ್ತು ಸರಿಯಿಲ್ಲದೆ ಅವಘಡಗಳು ಸಂಭವಿಸಿ ಭೂತ … Read more

ದೇವನೂರು ಪೋಸ್ಟ್ : ಹರಿ ಪ್ರಸಾದ್

ಶ್ರೀ ದೇವನೂರ ಮಹಾದೇವ ಅವರಿಗೆ,   ಆ ದಿನ ನಿಮ್ಮ ಸಂಪಾದಕತ್ವದಲ್ಲಿ ಪ್ರಜಾವಾಣಿ ವಿಶೇಷ ಸಂಚಿಕೆ ತಂದಿದೆ ಅಂತ ಮೈಸೂರಿಂದ ಫೋನ್ ಮಾಡಿದ ಪ್ರಸಾದ್‌ಕುಂದೂರಿಯು  ಹೇಳಿದನು. ಆಗ ನಾನು  ಊರಿನಲ್ಲಿದ್ದೆ. ಕಳೆದ ೧೫ ವರ್ಷಗಳಿಂದ ಊರಿಗೆ ಪರಕೀಯನಾಗಿದ್ದು, ಈಗ ೬ ತಿಂಗಳಿನಿಂದ ಊರಿನವನಾಗಲು ಕಷ್ಟಪಡುತ್ತಿರುವ ಕಾಲದಲ್ಲಿ ನೀವೊಂದು ಸಂಚಿಕೆ ಮಾಡಿದ್ದೀರ ಅನ್ನೋದೆ ಉತ್ಸಾಹವಾಯಿತು. ಇಲ್ಲಿ ಊರಲ್ಲಿದ್ದಾಗ ಕಾಲ, ದಿನಾಂಕಗಳು ಪರಿವೆಗೇ ಬರುವುದಿಲ್ಲ. ಆವತ್ತು ಅಂಬೇಡ್ಕರ್ ಜಯಂತಿ ಅಂತ ಕೂಡ ಮರ್‍ತುಹೋಗಿತ್ತು. ಅಂಬೇಡ್ಕರ್ ಜಯಂತಿ ಅಂದಾಗೆಲ್ಲ ’ಯಾವ ಕುಲವಯ್ಯ … Read more

ಇಬ್ಬರ ಚುಟುಕಗಳು: ಪೂರ್ಣಿಮಾ.ಬಿ., ಮಂಜುನಾಥ್.ಪಿ.

ಅವಳಿಗೆ ಹೇಳಬೇಕೆಂದು ಪೋಣಿಸಿಟ್ಟಿದ್ದ ಒಂದಷ್ಟು ಮಾತುಗಳು ಹೇಳದೆ ಉಳಿದವು. ಅವಳು ಮತ್ತೊಬ್ಬನ ಹೃದಯದ ಮಾತುಗಳನ್ನ ಆಲಿಸಿದಳೆಂದು ತಿಳಿದಾಗ. ತನ್ನದೇ ಚೌಕಟ್ಟು ಎಂದು ನಿರ್ಮಿಸಿಕೊಂಡ ಗೋಡೆಯನ್ನು ತಾನೆ ಕೆಡವಿದಳು ಆಚೆಯಿಂದ ಕೂಗಿದ ಅವನ ಪ್ರೀತಿಯ ದನಿಗೆ. ತಾನು ಪ್ರೀತಿಸಿದವಳು ಗೋರಿ ಸೇರಿದಳೆಂದು ತಿಳಿದಾಕ್ಷಣ ಅವನ ಮನದಲ್ಲಿನ ಅವಳ ಪ್ರೀತಿ ಮತ್ತು ನೆನಪುಗಳು ಉಸಿರಾಡಿದವು. ರಕ್ತದಲ್ಲಿ ಬರೆದುಕೊಟ್ಟ ಪ್ರೇಮ ಪತ್ರಕ್ಕೆ ಬೈದವಳು. ಅವನೇ ರಕ್ತವಾಗಿ ಹರಿದಾಗ ಮೌನ ತಾಳಿದಳು. ನಿನ್ನ ನೆನಪು ನನ್ನಲ್ಲಿ ಸತ್ತುಹೋಗಿದೆ ಎಂದು ಹೇಳ ಹೊರಟವನಿಗೆ ಅವಳ … Read more

ನಂಜು ನುಂಗಿ ನಕ್ಕಾತ : ರಮೇಶ್ ಕುಲಕರ್ಣಿ

ಬೆಳಗಿನ ಜಾವ ಮೂರು ಗಂಟೆಗೆ ಇರಬಹುದು, ನನ್ನ ಸೆಲ್ ಫೋನ್ ವೈಬ್ರೇಶನ್ ಮೋಡಲ್ಲಿ ಪತರಗುಟ್ಟುತ್ತಿತ್ತು. ಕರೆಯನ್ನು ಕಟ್ ಮಾಡಿದರೂ ಆ ಕಡೆಯ ಕರೆ ಬರುತ್ತಲೇ ಇತ್ತು. ಏನೋ ಸಮಸ್ಯೆ ಇರಬಹುದು ಎಂದುಕೊಂಡ ನಾನು ಫೋನನ್ನು ರಿಸೀವ್ ಮಾಡಿ “ಹರಿ ಓಂ..” ಅಂದೆ. ಆ ಕಡೆಯಿಂದ ನನ್ನ ಮಿತ್ರ ಶಶಿಕುಮಾರ್ ಕಂಪಿಸುವ ಧ್ವನಿಯಲ್ಲಿ “ಸರ್ ಸ್ವಲ್ಪ ನಮ್ಮ ಮನೆಹತ್ರ ಬರ್ತೀರಾ? ನಿಮ್ಮ ಹತ್ರ ಮಾತಾಡಬೇಕು, ಬೇಗ ಬನ್ನಿ ಸಾರ್ ಎನ್ನುತ್ತಲೇ ಫೋನ್ ಕರೆಯನ್ನು ಕಟ್ ಮಾಡಿದರು. ನನ್ನ ಆತ್ಮೀಯ … Read more

ತಪ್ಪಿತಸ್ಥರಿಗೆ ಮರಣದಂಡನೆಯೊಂದೇ ಶಿಕ್ಷೆಯೇ? :ರುಕ್ಮಿಣಿ ಎನ್.

ಕಳೆದ ಡಿಸೆಂಬರ್ ನಲ್ಲಿ ನಡೆದ ದೆಹಲಿ ಅತ್ಯಾಚಾರ ಕೇಸು ಎಲ್ಲರ ಮನದಲ್ಲೂ ಹಸಿಗೋಡೆಯ ಮೇಲೆ ಹರಳು ನೆಟ್ಟಂತಿದೆ. ಸುದ್ದಿ ಹರಡುತ್ತಿದ್ದಂತೆ, ಅತ್ಯಾಚಾರಿಗಳ ವಿರುದ್ಧ ಕೇಳಿ ಬಂದ ಮಾತುಗಳು: “ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಬೇಕು”, “ಲಿಂಗ ನಿಷ್ಕ್ರಿಯಗೊಳಿಸಬೇಕು”. ಹೀಗೆ ಮಾಡಿದರೆ ತಪ್ಪಿತಸ್ಥರಿಗೆ ತಮ್ಮ ತಪ್ಪಿನ  ಅರಿವಾಗಬಲ್ಲುದೆ? ತಪ್ಪನ್ನು ತಿದ್ದಿಕೊಳ್ಳಲು ಅವಕಾಶಗಳೇ ಇಲ್ಲವೇ? ಅವರುಗಳು ಮಾಡಿದ್ದು ದೊಡ್ಡ ತಪ್ಪು ನಾನು ಒಪ್ಪುವೆ. ಆದರೆ, ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡದೆ ಮರಣದಂಡನೆ ವಿಧಿಸುವುದು ಅದೆಷ್ಟು ಸರಿ ಎನ್ನುವುದು ನನ್ನ ಪ್ರಶ್ನೆ. ನಮ್ಮ … Read more

ನನ್ನೊಳಗಿನ ಗುಜರಾತ…!!! ಭಾಗ-5 : ಚಿನ್ಮಯ್ ಮಠಪತಿ

ನಾವು ಹುಟ್ಟಿಬಿಟ್ಟಿದ್ದೇವೆ ಮನುಷ್ಯರಾಗಿ. ವೇದ ಪುರಾಣಗಳಲ್ಲಿ ಹಾಡಿ ಹೊಗಳಿದ್ದಾರಲ್ಲವೆ? ಮನುಷ್ಯ ಜನ್ಮ ದೊಡ್ಡದು ಎಂದು?  ಯಾಕೆ, ಪ್ರಪಂಚದೆಲ್ಲ ಪ್ರಾಣಿಗಳಂತೆಯೇ ಒಂದೇ ಪ್ರಾಕೃತಿಕ ರೀತಿ ನೀತಿಗಳಂತೆ ಜನಿತ, ಈ ನಮ್ಮ ಮನುಜ ಕುಲಕ್ಕೆಷ್ಟೇ ಬೇರೆ ಯಾವ ಅನ್ಯ ಜೀವಿಗೂ ಸಿಗದಂತಹ ಮಾನ್ಯತೆ , ಗೌರವ ! ಸೃಷ್ಟಿ ಕರ್ತನಿಂದ ವಿಶೇಷ ಸ್ಪರ್ಶದ ಜೊತೆಗೆ, ಸುಂದರ ಆಕಾರ ಅವತಾರ!.  ಪಾಪ, ದೇವರ ದಡ್ಡತನದಿಂದಲೇ ನಾವು “ಹೋಮೊಶೆಪಿಯ್” ನಿಂದ ಹಲವಾರು ರೂಪ ರೇಶಗಳನ್ನು ದಾಟಿ, ಇವತ್ತು ಯಂತ್ರಮಾನವ (ರೋಬೊಟ್) ಹಂತಕ್ಕೆ ತಲುಪಿದ್ದೇವೆ … Read more

ಗಾಂಧೀಜಿಯವರ ಅಹಿಂಸಾ ತತ್ವ: ರವಿ ತಿರುಮಲೈ

ಆಧುನಿಕ ಪ್ರಪಂಚದ ಚರಿತ್ರೆಯಲ್ಲಿ ಗಾಂಧೀಜಿಯವರ ' ಅಹಿಂಸೆ '  'ಅಸಹಕಾರ' ಮತ್ತು 'ಸತ್ಯಾಗ್ರಹ' ದ ಭಾವನೆ, ಸಿಧ್ಧಾಂತ ಅಥವಾ ತತ್ವಗಳು ಪ್ರಧಾನವಾಗಿ  ಎದ್ದು ಕಾಣುತ್ತವೆ. ಈ ಸಿಧ್ಧಾ೦ತಗಳು , ಭಾರತೀಯರಿಗೆ, ಬ್ರಿಟಿಷರನ್ನು ಭಾರತದಿಂದ ತೊಲಗಿಸಲು ಹೂಡಿದ ಆಂದೋಲನದಲ್ಲಿ, ಸ್ಪೂರ್ತಿ, ಆತ್ಮ ವಿಶ್ವಾಸ ಮತ್ತು ಉತ್ಸಾಹವನ್ನು ತುಂಬಿದ್ದವು.    ಭಾರತದಲ್ಲಿ ಗಾಂಧೀಜಿಯವರು ಅಹಿಂಸಾತ್ಮಕ ಚಳುವಳಿ ಅಥವಾ ಅಂದೋಲನವನ್ನು ಹುಟ್ಟು ಹಾಕುವವರೆಗೆ, ಪ್ರಪಂಚದಲ್ಲಿ ನಡೆದ ಎಲ್ಲಾ ಹೋರಾಟಗಳೂ, ಆಂದೋಲನಗಳೂ, ಮತ್ತು ದಂಗೆಗಳೂ ಹಿಂಸೆಯಿಂದ ಕೂಡಿದ್ದಾಗಿದ್ದವು. ಭಾರತೀಯ ಸ್ವಾತಂತ್ರ ಚಳುವಳಿಯು ಅಹಿಂಸೆಯನ್ನೇ … Read more

ಗರಂ ಹವಾ : ವಾಸುಕಿ ರಾಘವನ್

ನಮ್ಮ ದೇಶಕ್ಕೆ ತುಂಬಾ ದೊಡ್ಡ ಇತಿಹಾಸ ಇದೆ. ಆದರೆ ಅದಕ್ಕೆ ನ್ಯಾಯ ಒದಗಿಸುವಷ್ಟು ಸಂಖ್ಯೆಯಲ್ಲಾಗಲೀ, ಗುಣಮಟ್ಟದಲ್ಲಾಗಲೀ ಚಿತ್ರಗಳು ಬಂದಿಲ್ಲ. ನಮ್ಮವೇ ಚಾರಿತ್ರಿಕ ಘಟನೆಗಳು, ರಾಜಕೀಯ ಸನ್ನಿವೇಶಗಳು, ಪ್ರಸಿದ್ಧ ವ್ಯಕ್ತಿಗಳು ನಮ್ಮ ನಿರ್ದೇಶಕರನ್ನು ಪ್ರೇರೇಪಿಸಿದ್ದು ಕಡಿಮೆ. ನಮ್ಮ ಗಾಂಧಿಯ ಬಗ್ಗೆ ಚಿತ್ರ ಮಾಡಲು ರಿಚರ್ಡ್ ಅಟ್ಟೆನ್ಬರೋ ಬರಬೇಕಾಯ್ತು. ಮಂಗಲ್ ಪಾಂಡೆ, ಭಗತ್ ಸಿಂಗ್, ವಲ್ಲಭಭಾಯ್ ಪಟೇಲ್, ಸುಭಾಷ್ ಚಂದ್ರ ಬೋಸ್ ಎಲ್ಲರ ಬಗ್ಗೆ ಒಂದೋ ಎರಡೋ ಚಿತ್ರಗಳು. ನಮ್ಮಲ್ಲಾಗಿರೋ ಯುದ್ಧಗಳ ಬಗ್ಗೆ ಡಾಕ್ಯುಮೆಂಟರಿ ಥರದಲ್ಲಿ ಒಂದೊಂದು ಚಿತ್ರ ಅಷ್ಟೇ. … Read more

ಹಂಚದ ಹೊರತು ಹರಡುವುದು ಕಷ್ಟ….

ಇತ್ತೀಚೆಗೆ ತುಂಬು ಲೇಖನವೊಂದನ್ನು ಬರೆದು ಎಷ್ಟೋ ದಿನಗಳಾಗಿಬಿಟ್ಟಿದೆ. ಒಂದೆರಡು ಗಂಟೆ ಒಂದೆಡೆ ಕುಳಿತು ಶ್ರದ್ಧೆಯಿಂದ ಬರೆದರೆ ಚಂದವಾದ ಬರಹಗಳನ್ನು ಕಟ್ಟಿಕೊಡುವುದು ಕಷ್ಟದ ಕೆಲಸವೇನಲ್ಲ. ಆದರೆ ಆ ರೀತಿ ಕುಳಿತು ಬರೆಯುವ ಶ್ರದ್ದೆಯನ್ನು ನಮ್ಮದಾಗಿಸಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ನಮ್ಮೊಳಗಿನ ಶ್ರದ್ಧೆ, ಸೃಜನಶೀಲತೆ ಒಂದು ದಿನ ಹಠಾತ್ತನೆ ಮಾಯವಾಗಿ “ಏನು ಬರೆಯೋದು ಏನು ಮಾಡೋದು” ಎಂಬ ಭಾವನೆ ತುಂಬಿದ ಶೂನ್ಯತೆಯ ದಿನಗಳು ನಮ್ಮಲ್ಲಿ ಹುಟ್ಟಿಸಿಬಿಡುತ್ತವೆ. ಕೆಲವು ದಿನಗಳ ಹಿಂದೆ ಆ ರೀತಿ ಶೂನ್ಯತೆ ನನ್ನೊಳಗೆ ಮೂಡಿದ ಒಂದು ದಿನ … Read more

ಹೂಗಂಧವಿನ್ನೂ ಉಳಿದೇ ಇದೆ ಕೈ ಬೆರಳುಗಳಲ್ಲಿ

ನನ್ನ ಮುದ್ದಿನ ಚಿಟ್ಟೆ… ಏನೂ, ದುಪ್ಪಟ್ಟ ಕೊಡವಿ ನೋಡಿಕೊಳ್ಳುತ್ತಿರುವೆಯಾ? ಸಾಕ್ ಸಾಕು ಸುಮ್ನೆ ಅಟ್ಟ ಹತ್ತಿಸಿದೆ. ಆದರೂ ಪತಂಗಕ್ಕೂ ನಿಂಗೂ ತುಂಬಾನೇ ಸ್ವಾಮ್ಯ ಕಣೆ. ನಿನ್ನ ಚೆಲ್ಲುಚೆಲ್ಲಾಟ, ತರಳೆಗಳು ಪತಂಗದ ಬಣ್ಣಗಳಿಗಿಂತಲೂ ಹೆಚ್ಚು ಕಣ್ಣು ಚುಚ್ಚುತ್ತೆ. ಬಿಡು ನೀನೋ ಚಿಟ್ಟೆನ ಮೀರಿಸೋವಷ್ಟ್ ಸುಂದರಿ, ಉಬ್ಬಿಹೋಗಬೇಡ, ಅದು ನನ್ನ ಕಣ್ಣಿಗೆ ಮಾತ್ರ. ಯಾಕಂದ್ರೆ ನನ್ನ ಸ್ನೇಹಿತ ಹೇಳ್ತಿದ್ದ “ಅವಳೇನು ಚನ್ನಾಗಿದಾಳೆ ಅಂತ ಲವ್ ಮಾಡ್ತಿದಿಯೋ” ಅಂತ (ಹ್ಹಿ ಹ್ಹಿ ಹ್ಹಿ…). ಹುಂ.., ಇರಲಿ. ಹ್ಯಾಪಿ ವೆಲೆಂಟೈನ್ಸ್ ಡೇ ಬೀ … Read more

ಪ್ರೀತಿಯೆಂದರೆ…

ಪ್ರೀತಿ ಪ್ರೀತಿಯೆಂಬುದು ಬರಿಯ ಭಾವಗಳೆಂಬ ಅಪ್ಪಳಿಸುವ ಅಲೆಗಳ ಭೋರ್ಗರೆವ ಸಮುದ್ರವಲ್ಲ, ಎಂದೋ ಪೌರ್ಣಿಮೆ-ಅಮಾವಸ್ಯೆಗಳಲಿ ಮಾತ್ರವೇ ಚಂದಿರನಿಗಾಗಿ ಹಾತೊರೆವ ಮೋಹವಲ್ಲ, ಒಡಲಲಿ ಸಾವಿರ ಗುಟ್ಟುಗಳನಿಟ್ಟ, ಒಮ್ಮೆ ಈಜಲೇ ಬೇಕೆಂಬ ಕುತೂಹಲವಲ್ಲ, ಶಾಂತತೆಯ ತೋರಿಕೆಯಲಿ ಒತ್ತಡವ ತನ್ನೂಳಗೆ ಬಚ್ಚಿಟ್ಟು, ಕಡೆಗೆ ಸುನಾಮಿಯೆಬ್ಬಿಸುವ ಭಯಂಕರತೆಯಲ್ಲ, ಸಿಹಿನದಿಗಳ, ಕರಗುವ ಹಿಮವನೆಲ್ಲವ ಕಬಳಿಸಿ ವಿಸ್ತಾರವಾಗುತಲಿ, ತೀರವ ಕೊರೆವ ಸ್ವಾರ್ಥವಲ್ಲ, ಎಂದಿಗೂ ಉಪ್ಪೇ ಆಗಿರುವ, ಕುಡಿಯಲೇ ಆಗದ ಜಲವಲ್ಲ, ದಿನವೂ ರವಿಯೊಡನೆ ಸರಸವಾಡುತಲಿ, ರೂಪ-ನೋಟಗಳಲಿ ಕಣ್ಸೆಳೆಯುವ ಆಕರ್ಷಣೆಯಲ್ಲ, ದಡದ ಮರಳಿನ ಮೇಲೆ ಗಿಚಿ ಮರೆಯಾದ ಹೆಸರಲ್ಲ, … Read more

ನಾರಾಯಣ-ಸುಧಾ ಮೂರ್ತಿ ಕಾಲ ಇದಲ್ಲ

  ನಾಲ್ವರು ವಿಭಿನ್ನ ವಯೋಮಾನದವರ ಜೊತೆ ಪಂಜುವಿನ ಪ್ರೇಮಿಗಳ ದಿನದ ವಿಶೇಷ ಸಂಚಿಕೆಗಾಗಿ ನಡೆಸಿದ ಮಾತುಕತೆಯ ತುಣುಕುಗಳು ಇಗೋ ಸಹೃದಯಿಗಳೇ ನಿಮಗಾಗಿ..   ಪಂಜು ಪ್ರೀತಿ ಬಗ್ಗೆ ನಿಮ್ಮ ಅಭಿಪ್ರಾಯವೇನು? ರುಕ್ಮಿಣಿ ನಾಗಣ್ಣವರ ಎರಡು ಮನಗಳ ನಡುವಿನ ಅನನ್ಯ ಭಾವ, ನಾನೇ ನೀನು ನೀನೇ ನಾನು ಎನ್ನುವ ಅಪೂರ್ವ ಬಂಧನ. ಹೃದಯ ಸಂಗಮಗಳ ಸೇತುವೆ ಈ ಪ್ರೀತಿ.. ಪ್ರೀತಿ ಹೃದಯಗಳ ಭಾವಗೀತೆ.. ಪಂಜು ಈ ವಿಶೇಷ ದಿನದಲ್ಲಿ ಏನಾದರು ಸಂದೇಶ ಹೇಳಲು ಬಯಸ್ತೀರ? ರುಕ್ಮಿಣಿ ನಾಗಣ್ಣವರ ನವ … Read more

ಪ್ರೇಮೋತ್ಸವದ ನೆಪದಲ್ಲಿ (ಪ್ರೀತಿಯಿಂದ ಪ್ರೀತಿಯ ವಿಮರ್ಶೆ…..)

ಪ್ರೀತಿ ಎಂದರೇನು….? ಪ್ರೀತಿ ಎಲ್ಲಿದೆ….? ಪ್ರೀತಿ ಹೇಗಿದೆ….? ಪ್ರೀತಿ ಏಕೆ ಬೇಕು….? ಇಂದಿನ ಕಾಲದಲ್ಲಿ ಪ್ರೀತಿಯ ಸ್ಥಿತಿಗತಿ ಏನು…..? ಹೀಗೆ ಪ್ರೀತಿ ಎಂದರೆ ನಮ್ಮ ಮನಸ್ಸಿನಲ್ಲಿ ಅದೆಷ್ಟು ಪ್ರಶ್ನೆಗಳು, ದ್ವಂದ್ವಗಳು ಕಾಡುತ್ತದೆಯಲ್ಲವೆ…..! ಪ್ರೀತಿ ಎಂದರೆ  ವಿಶ್ಲೇಷಣೆ ಅವರವರ ಬಾವಕ್ಕೆ, ಭಕುತಿಗೆ, ಖುಷಿಗೆ ಬಿಟ್ಟದ್ದು.. ಕೆಲವರ ಪ್ರಕಾರ ಪ್ರೀತಿ ಎಂದರೆ…… ಕವಿಗಳಿಗೆ ಕಾವ್ಯಕ್ಕೆ ಸ್ಪೂತಿ, ಪತ್ರಿಕೆಗಳಿಗೆ ಸುದ್ದಿ, ಸಿನಿಮಾದವರಿಗೆ ಬರಿದಾಗದ ಕಥಾ ಸಂಪತ್ತು, ಇಂದಿನ  ಹುಡುಗ, ಹುಡುಗಿಯರಿಗೆ ಜಾಲಿ, ಟೈಂ ಪಾಸ್, ಕೆಲವರಿಗೆ ಸೆಕ್ಸ್ , ಇನ್ನೂ ಕೆಲವರಿಗೆ … Read more

ಪ್ರೀತಿಯ ಹಾದಿ….

ಯೌವ್ವನ ನೂರಾರು ಕನಸುಗಳ ಸುಂದರ ಲೋಕ. ಇಂಥ ಲೋಕದಲ್ಲಿ ಹತ್ತಾರು ಬಗೆಯ ಕನಸುಗಳನ್ನು  ನನಸಾಗಿಸಿಕೋಳ್ಳಲು ಇರುವ ಬಯಕೆ ಅಧಮ್ಯ. ಹಾಗೇ ಬಯಕೆಗಲು ಹೆಚ್ಚಾಗಿ ಬಯಲಾಗುವುದು ತಾರುಣ್ಯದಲ್ಲೇ ಅಲ್ಲವೇ, ಯೌವ್ವನ ತುಂಬೊ ತುಳುಕುತ್ತಿರುವ ಈ ಹಂತದಲ್ಲಿ ಎಲ್ಲವೂ ತನ್ನ ಮೂಗಿನ ನೇರಕ್ಕೆ ನಡೆಯಬೇಕು ಎನ್ನುವ ಮನೋಸ್ಥಿತಿ.ಜೀವನವನ್ನು ಸಮಾಜವನ್ನು ಗಡಿಗಳ ಮೀರಿ ಗ್ರಹಿಸುವುದಕ್ಕೆ ಆಗ ತಾನೇ ಸಿದ್ದವಾಗಿರುವ ಮನಸ್ಸು. ಊಹೆ, ಆಲೋಚನೆಗಳೆಲ್ಲವೂ ರಂಗುರಂಗಾಗಿ ಕಾಣಿಸಿಕೊಂಡು ಎಲ್ಲದರಲ್ಲೂ ಆವೇಶದ ಭರಾಟೆ ಸಾಗುತ್ತಿರುತ್ತದೆ. ಪ್ರಪಂಚವನ್ನೇ ಎದುರಿಸುವ ದೋರಣೆ, ಯಾವುದೋ ಸಾಹಸ ಮಾಡಬೇಕೆಂಬ ಆತುರ, … Read more

ಪ್ರೀತಿ ಎಂದರೇನು …! ಕಾಮವೋ…? ಸ್ವಾರ್ಥವೋ…? ಪ್ರೇಮವೋ…..?

ನಾನು ಪದವಿ ಕಾಲೇಜಿಗೆ ಸೇರಿ ಬೆಂಗಳೂರಿಗೆ ಹೊಸದು. ಮೊದಲ ಬಾರಿ ಮಹಾನಗರದ ದರ್ಶನವಾದ್ದರಿಂದ ಸ್ವಲ್ಪ ಖುಷಿಯ ಜೊತೆಗೆ ಭಯವೂ ಆಗುತ್ತಿತ್ತು. ನಮ್ಮ ಕಾಲೇಜು ಕಬ್ಬನ್ ಪಾರ್ಕ್ ಸಮೀಪದಲ್ಲೇ ಇದ್ದುದರಿಂದ ಆಗಾಗ ವಿರಾಮದ ವೇಳೆಯಲ್ಲಿ ಸುತ್ತಾಡಲು ಕಬ್ಬನ್ ಪಾರ್ಕಿಗೆ ಸ್ನೇಹಿತರೆಲ್ಲ ಹೊರಡುತ್ತಿದ್ದೆವು. ಹೋದಾಗಲೆಲ್ಲ ನಮಗೆ ಯುವಕ ಯುವತಿ ಜೋಡಿಗಳೇ ಹೆಚ್ಚಾಗಿ ಕಾಣಸಿಗುತ್ತಿದ್ದರು. ತೀರಾ ಹಳ್ಳಿಯವರೇ  ಆಗಿದ್ದ ನಮ್ಮ ಗುಂಪಿನವರು ಇವರು ಪ್ರೇಮಿಗಳೊ….? ಕಾಮಿಗಳೊ…? ಇವರ ತೆವಲಿಗೆ ಈ ಸಾರ್ವಜನಿಕ ತಾಣವೆ ಬೇಕೆ ಎಂದು ಅಣುಕಿಸುತ್ತೆದ್ದೆವು. ಹಾಗಾದರೆ ಪ್ರೀತಿ ಎಂದರೇನು? … Read more

ಪ್ರೀತಿ

ಮನಕ್ಕೆ ಸಿಗದದ್ದು, ಸಿಕ್ಕಾಗ ದಕ್ಕದದ್ದು, ಮರೆತಾಗ ನೆನೆದದ್ದು, ಬಯಸಿದಾಗ ಪಲಾಯನವಾದದ್ದು, ನಾ ಮುಂದೆ ನೆಡೆದಾಗ ಹಿಂದೆ ಅತ್ತದ್ದು……… ಬಹಳಷ್ಟು ಜನರ ಪ್ರೀತಿಯ ಅನುಭವ ಇವಿಷ್ಟೇ ಆಗಿರುತ್ತದೆ. ಹೌದಾದರೆ ಲೈಕ್ ಒತ್ತಿ, ಇಲ್ಲವಾದರೆ ಕಾಮೆಂಟ್ ಮಾಡಿ ಎಂದರೆ, ಕಾಮೆಂಟಿಗಿಂತ ಲೈಕ್ಸ್ ಹೆಚ್ಚಾಗಿರುತ್ತದೆ ಎಂಬುದು ನನ್ನ ನಂಬಿಕೆ. ಅದೇನೇ ಇರಲಿ, ಪ್ರೀತಿ' ಎಂಬ ಭಾವವೇ ಮಧುರ, ವಿಸ್ಮಯ. ಪ್ರೀತಿಗೆ ವಯಸ್ಸಿನ ಪ್ರಶ್ನೆ ಇಲ್ಲ. ಪ್ರೀತಿಯಲ್ಲಿ ಎಲ್ಲರೂ ಟೀನೇಜರೇ,,,,:-)) ಈ ಪ್ರೀತಿಯ ಕಲ್ಪನೆ, ಕನಸುಗಳು ಹುಟ್ಟುವುದೇ ಹದಿಹರೆಯಗಳಲ್ಲಿ. ಅಂದರೆ ಹೈಸ್ಕೂಲ್-ಕಾಲೇಜಿನ ದಿನಗಳಲ್ಲಿ, … Read more

ಅಮಾವಾಸ್ಯೆಯ ಕತ್ತಲಲ್ಲಿ ಬೆಳದಿಂಗಳು ಸುರಿದಂತೆ

ಮೊನ್ನೆ ಸಂಕ್ರಾತಿ ಹಬ್ಬದ ದಿನ ಗವಿ ಗಂಗಾಧರೇಶ್ವರ ದೇವಸ್ಥಾನದ ಅಂಗಳದಲ್ಲಿ ನಿಂತು ಗಾಳಿಗೆ ಹಾರಿ ಹಾರಿ ನಿನ್ನ ಕೆನ್ನೆಗೆ ಮುತ್ತಿಕ್ಕುತ್ತಿದ್ದ ಕೂದಲನ್ನು ಪದೇ ಪದೇ  ಹಿಂದಕ್ಕೆ ಸರಿಸುತ್ತಿದ್ದಾಗಲೇ ನಿನ್ನನ್ನು ನಾನು ನೋಡಿದ್ದು. ಮರುಕ್ಷಣವೇ ನನ್ನ ಮನಸಿನ ಮನೆಯ ತುಂಬೆಲ್ಲ ಒಲವ ಶ್ರಾವಣದ ಸಂಭ್ರಮ ಶುರುವಾಗಿ ಹೋಗಿತ್ತು.  ಹನುಮಂತನ ಬಾಲದಂತಿದ್ದ ಕ್ಯೂ ಬಿಸಿಲಲ್ಲಿ ಬೆವರಿಳಿಸುತ್ತಿದ್ದರೆ ದೇವರ ದರ್ಶನ ಬೇಡ ಎನಿಸುತ್ತಿತ್ತು. ಇನ್ನೊಂದಿಷ್ಟು ಹೊತ್ತು ನೋಡಿ ಮನೆಗೆ ಹೊರಟು ಬಿಡೋಣ..  ಅಂದುಕೊಳ್ಳುತ್ತಿದ್ದವನ ಮುಂದೆ ಜಗತ್ತಿನ ಸೌಂದರ್ಯವೆಲ್ಲ ಹೆಣ್ಣಾಗಿ ರೂಪ ಪಡೆದಿದೆಯೇನೋ … Read more