ಕುವೆಂಪು ಯುವ ಮಂಥನ ಲೇಖನ ಸ್ಪರ್ಧೆಗೆ ಆಹ್ವಾನ

ತುಮಕೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಪೀಠ ಹಾಗೂ ಬುಕ್ ಬ್ರಹ್ಮ ಸಂಸ್ಥೆ ಜಂಟಿಯಾಗಿ “ಕುವೆಂಪು: ಯುವ ಮಂಥನ” ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ. ಕುವೆಂಪು ಅವರ ನಾಡು ನುಡಿ ಚಿಂತನೆ, ವೈಚಾರಿಕ ಪ್ರಜ್ಞೆ, ವೈಜ್ಞಾನಿಕ ದೃಷ್ಟಿ, ಅಧ್ಯಾತ್ಮಿಕ ಮನೋಧರ್ಮಗಳನ್ನು ಅರಿಯುವ ಬಗೆಗಳನ್ನು ಈ ಲೇಖನಗಳು ಒಳಗೊಂಡಿರಲಿ. ನಿಯಮಗಳು: ಲೇಖನಗಳು ವಿಮರ್ಶಾತ್ಮಕ ಒಳನೋಟಗಳನ್ನು ಹೊಂದಿರಬೇಕು. 2000 ಪದಗಳನ್ನು ಮೀರದಂತಿರಲಿ. ಲೇಖಕರ ವಯಸ್ಸು 35 ವರ್ಷಗಳನ್ನು ಮೀರದಂತಿರಬೇಕು. ಲೇಖನಗಳು ಎಲ್ಲಿಯೂ ಪ್ರಕಟವಾಗಿರಬಾರದು. ಮೊದಲ ಬಹುಮಾನ 5 ಸಾವಿರ + 3 ಸಾವಿರ … Read more

“ಅವ್ವನೊಂದಿಗಿನ ಬದುಕಿನ ಒಡನಾಟವನ್ನು ಆಪ್ತವಾಗಿ ಮನಬಿಚ್ಚಿ ಹೇಳಿರುವ ಬಯೋಗ್ರಫಿ”: ಎಂ.ಜವರಾಜ್

ಈಚೆಗೆ ಒಂದು ಪುಟ್ಟ ಕೃತಿ ‘ನನ್ನವ್ವನ ಬಯೋಗ್ರಫಿ’ ಓದಿದೆ. ಬಯೋಗ್ರಫಿ – ಜೀವನ ಚರಿತ್ರೆ, ಜೀವನ ಚಿತ್ರ, ಲೈಫ್ ಸ್ಟೋರಿ, ದಿನಚರಿ, ಇದೆಲ್ಲಕ್ಕು ಮೀರಿದ ಆಪ್ತವಾದ ಗಾಢವಾದ ಆತ್ಮಕಥನ ಅನ್ನಬಹುದು. ಆತ್ಮಕಥನದ ಲಕ್ಷಣ- ಇರುವುದನ್ನು ಮತ್ತು ಇದ್ದು ಬದುಕಿದ್ದನ್ನು ಪ್ರಾಮಾಣಿಕವಾಗಿ ಹೇಳುವುದು; ನೋಡಿದ್ದನ್ನು ಕೇಳಿಸಿಕೊಂಡಿದ್ದನ್ನು ಯಥಾವತ್ ದಾಖಲಿಸುವುದು; ಅರ್ಥಾತ್ ‘ಇದ್ದದ್ದು ಇದ್ದ ಹಾಗೆ’! ಸಾಹಿತ್ಯ ಪ್ರಾಕಾರಗಳಲ್ಲಿ ಆತ್ಮಕಥನವೂ ಒಂದು. ಆತ್ಮಕಥನಗಳ ರಚನೆ ಅಷ್ಟು ಸುಲಭವಲ್ಲ. ಅಲ್ಲಿ ಮರೆಮಾಚುವುದಕ್ಕೆ ಅವಕಾಶವಿಲ್ಲ. ಹಾಗೇನಾದರು ಮರೆಮಾಚಿದರೆ ಅದು ಆತ್ಮಕಥನವೇ ಅಲ್ಲ. ಗಾಂಧಿಯ … Read more

ಪಂಜು ಕಥಾ ಸಂಕಲನ ಸ್ಪರ್ಧೆ ಫಲಿತಾಂಶ

ಪಂಜು ದಶಕದ ಸಂಭ್ರಮದ ಪ್ರಯುಕ್ತ ಏರ್ಪಡಿಸಿದ್ದ 2021 ನೇ ಸಾಲಿನ ಪಂಜು ಕಥಾ ಸಂಕಲನ ಪ್ರಶಸ್ತಿಯ ವಿವರ ಈ ಕೆಳಗಿನಂತಿದೆ ಪಂಜು ಕಥಾ ಸಂಕಲನ ಪ್ರಶಸ್ತಿ ಪಡೆದ ಕೃತಿಬಯಲಲಿ ತೇಲುತ ತಾನು: ಅಕ್ಷಯ ಪಂಡಿತ್ ತೀರ್ಪುಗಾರರ ಮೆಚ್ಚುಗೆ ಪಡೆದ ಕೃತಿಗಳು೧. ಅಗ್ಗಷ್ಟಿಕೆ: ರಾಜಶ್ರೀ ಟಿ. ರೈ, ಪೆರ್ಲ೨. ಪೂವಿ: ಮಲ್ಲೇಶ್ ಮಾಲಿಂಕಟ್ಟೆ೩. ದಶಕದ ಕತೆಗಳು: ಟಿ ಎಂ ರಮೇಶ೪. ನೀಲಕುರಿಂಜಿ: ದಾದಾಪೀರ್ ಜೈಮನ್೫. ಮಾರ್ಗಿ: ಲಿಂಗರಾಜ ಸೊಟ್ಟಪ್ಪನವರ ಒಟ್ಟು 25 ಕಥೆಗಾರರು ನಾಡಿನ ಮೂಲೆಮೂಲೆಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. … Read more

“ಉಪ್ಪುಚ್ಚಿ ಮುಳ್ಳು” ವಿಲಕ್ಷಣ, ವಿಕ್ಷಿಪ್ತ, ವಿಚಿತ್ರ ಎನಿಸಿದರೂ ವಿಶಿಷ್ಟ ಕೃತಿ: ಡಾ. ನಟರಾಜು ಎಸ್.‌ ಎಂ.

ಕಳೆದ ವರ್ಷ ಅನಿಸುತ್ತೆ ಸಿರಾ ಸೀಮೆಯ ರಂಗಕರ್ಮಿ ಗೋಮಾರದಹಳ್ಳಿ ಮಂಜುನಾಥ್‌ ರವರು ತಾವು ಇಷ್ಟಪಟ್ಟು ಶುರು ಮಾಡಿರುವ Native nest ಎಂಬ ಯೂ ಟ್ಯೂಬ್‌ ಚಾನೆಲ್‌ ನಲ್ಲಿ ಕವಿತೆಯೊಂದನ್ನು ವಾಚನ ಮಾಡಿದ್ದರು. ಕವಿತೆಯ ಶೀರ್ಷಿಕೆ “ಮೊಲೆ” ಎಂದಾಗಿತ್ತು. ಕವಿಯ ಹೆಸರು ದಯಾ ಗಂಗನಘಟ್ಟ (ದಾಕ್ಷಾಯಿಣಿ). “ಮೊಲೆ” ಅನ್ನುವ ಕವನವನ್ನು ಅದಕ್ಕೂ ಮೊದಲು ಆಶಾ ಜಗದೀಶ್‌ ರವರು ಫೇಸ್‌ ಬುಕ್‌ ನಲ್ಲಿ ಬರೆದಿದ್ದರು. ಎರಡೂ ಕವಿತೆಗಳನ್ನು ನೋಡಿದ್ದ ನನಗೆ ದಯಾ ಗಂಗನಘಟ್ಟ, ಆಶಾ ಜಗದೀಶ್‌ ರವರಿಂದ ಸ್ಫೂರ್ತಿ ಪಡೆದರಾ? … Read more

ಆಡಿ ಬಾ ನನ ಕಂದ ; ಅಂಗಾಲ ತೊಳೆದೇನು!: ಡಾ. ಹೆಚ್ ಎನ್ ಮಂಜುರಾಜ್,

ಮಕ್ಕಳನ್ನು ಕುರಿತು ನಮ್ಮ ಜನಪದರು ಇನ್ನಿಲ್ಲದಂತೆ ಹಾಡಿ ಹರಸಿದ್ದಾರೆ. ಜನವಾಣಿ ಬೇರು; ಕವಿವಾಣಿ ಹೂವು ಎಂದು ಆಚಾರ್ಯ ಬಿಎಂಶ್ರೀಯವರು ಹೇಳಿದಂತೆ, ಜನಪದ ಹಾಡು, ಗೀತ ಮೊದಲಾದ ಸಾಹಿತ್ಯದ ಸೃಷ್ಟಿಕರ್ತರು ಬಹುತೇಕ ಹೆಣ್ಣುಮಕ್ಕಳೇ. ಅದರಲ್ಲೂ ತವರು, ದಾಂಪತ್ಯ, ಬಡತನ, ದೇವರು, ಸೋದರರು, ಗಂಡ, ಗಂಡನಮನೆ ಹೀಗೆ ಜನಪದ ತ್ರಿಪದಿಗಳನ್ನು ಗಮನಿಸಿದರೆ ಸಾಕು, ನಮಗೆ ಅರ್ಥವಾಗುತ್ತದೆ. ಏಕೆಂದರೆ ಭಾರತೀಯ ಕುಟುಂಬ ವ್ಯವಸ್ಥೆ ಹಾಗಿತ್ತು. ಈಗಿನದೆಲ್ಲ ಮೈಕ್ರೋ ಫ್ಯಾಮಿಲಿ ಯುಗ. ಕೂಡು ಕುಟುಂಬ ಮತ್ತು ಹಿರಿಯರ ಯಾಜಮಾನ್ಯಗಳು ನಮ್ಮ ಕೌಟುಂಬಿಕ ಪದ್ಧತಿಯನ್ನು … Read more

ಒಂದು ಪರ್ಸಿನ ಕತೆ…: ಅಮರದೀಪ್

ಆಗಾಗ ನಾವು ಗಂಡಸರು  ಎದೆ ಮೇಲಿನ ಜೇಬು ಮುಟ್ಟಿ ನೋಡಿಕೊಳ್ಳುತ್ತೇವೆ. ಖಾತರಿಯಾದರೆ ಸಮಾಧಾನ; ಮೊಬೈಲ್ ಇದೆ ಅಂತ. ಪ್ಯಾಂಟಿನ ಹಿಂಬದಿಯ ಜೇಬು ಮುಟ್ಟುತ್ತೇವೆ.ಪರ್ಸ್ ಇದೆಯಾ?! ಇಲ್ಲವಾ?!! ಅಂತ.  ಎದೆ  ಜೇಬಿನಲ್ಲಿ ಮೊಬೈಲ್ ಬಿಟ್ಟು ಚೀಟಿ ಚಪಾಟಿ,  ವಿಸಿಟಿಂಗ್ ಕಾರ್ಡ್, ಪೆಟ್ರೋಲ್ ಹಾಕಿಸಿದ ಬಿಲ್ಲು, ಎಟಿಎಂ ನಲ್ಲಿ ದುಡ್ಡು ಡ್ರಾ ಮಾಡಿದ ಪ್ರಿಂಟೆಡ್ ರಸೀತಿ, ಮೆಡಿಕಲ್ ಶಾಪಿಗೆ ಹೋಗಲೆಂದು ಇಟ್ಟುಕೊಂಡ ಡಾಕ್ಟರ್ ಬರೆದುಕೊಟ್ಟ ಗುಳಿಗೆ ಚೀಟಿ.. ಹಾಳು ಮೂಳು ಎಲ್ಲವನ್ನು ತುರಿಕೊಂಡಿರುತ್ತೇವೆ…  ದುಡ್ಡೊಂದನ್ನು ಬಿಟ್ಟು. ಪರ್ಸಿನ ಕತೆಯೂ ಹಾಗೇ… … Read more

ಗ್ರಹಣ: ಡಾ. ವೃಂದಾ ಸಂಗಮ್

ಗ್ರಹಣ ಎಂದರೇನು? ಅಂತ ಐದನೇ ಕ್ಲಾಸಿನೊಳಗ ವಿಜ್ಞಾನದ ವಿಷಯದೊಳಗ ಒಂದು ಪ್ರಶ್ನೆ ಇತ್ತು. ಒಂದು ಆಕಾಶಕಾಯ ಇನ್ನೊಂದು ಆಕಾಶ ಕಾಯದ ನೆರಳಿನಿಂದ ಆಂಶಿಕವಾಗಿ ಇಲ್ಲವೇ ಪೂರ್ಣವಾಗಿ ಅಸ್ಫುಟವಾಗುವಿಕೆಯನ್ನು ಗ್ರಹಣ ಎನ್ನುವರು ಅಂತ ಬಾಯಿಪಾಠಾನೂ ಮಾಡಿಸಿದ್ದಳು, ನಮ್ಮವ್ವ. ಹಿಂದ ನಾವು ಬಾಯಿಪಾಠ ಕಲಿತಿದ್ದು ಈಗಲೂ ನೆನಪಿರತದ, ಮೂರು ವರುಷದ ುದ್ಧಿ ನೂರು ವರುಷದ ತನಕಾಂತ. ಆದರ, ಈಗ ಗ್ರಹಣ ಎಂದರೇನು? ಪ್ರಶ್ನೆ ಮುಂದ ನಿಮ್ಮ ಮಾತಿನಲ್ಲಿ ಬರೆಯಿರಿ ಅಂತ ಇತ್ತು, ನಾನೂ ಹಿಂದ ಮುಂದ ನೋಡಲಿಲ್ಲ, ನಮ್ಮವ್ವ ಬಾಯಿಪಾಠ … Read more

ಕುಗ್ಗಿದಾಗಲೆಲ್ಲಾ ಕಗ್ಗ ಓದಬೇಕು !: ಮನು ಗುರುಸ್ವಾಮಿ

ಹೌದು.. ಮನುಷ್ಯ ಕುಗ್ಗಿದಾಗಲೆಲ್ಲಾ ಮಂಕುತಿಮ್ಮನ ಕಗ್ಗ ಓದಬೇಕು. ಬಹುತೇಕ ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ, ಇರುವಷ್ಟು ಕಾಲ ಸೂರ್ಯನಂತೆ ಬೆಳಗಿ ಮರೆಯಾಗಬೇಕೆಂಬ ಸಂದೇಶವನ್ನು ಸಾರುವಲ್ಲಿ, ಬದುಕಿನ ಅಪರಿಮಿತ ಹೋರಾಟ, ಅನಿರೀಕ್ಷಿತ ಸವಾಲುಗಳನ್ನು ಹೇಗೆ ಎದುರುಗೊಳ್ಳಬೇಕೆಂಬ ವಿಚಾರವನ್ನು ಮನದಟ್ಟು ಮಾಡುವಲ್ಲಿ ಈ ಕೃತಿ ಮಹತ್ವದ ಪಾತ್ರವಹಿಸಿದೆ. ನಾನು, ನನ್ನದೆಂಬ ಭ್ರಮೆಯಲ್ಲಿ ಜೀವನವಿಡೀ ನಡೆದು, ಕೊನೆಗೆ ಎಲ್ಲವನ್ನು ಬಿಟ್ಟು ಮಣ್ಣು ಸೇರುವ ಮನುಷ್ಯನ ನಶ್ವರ ಬದುಕಿನ ಬಗ್ಗೆ ಇಲ್ಲಿನ ಚೌಪದಿಗಳು ಎಳೆ ಎಳೆಯಾಗಿ ತಿಳಿಸಿಕೊಡುತ್ತವೆ. ನಾಲ್ಕು ಸಾಲಿನ ಸಣ್ಣ ಸಣ್ಣ ಪದ್ಯಗಳಿಂದ … Read more

ಆತ್ಮಾನುಬಂಧದ ಸಖಿಯೊಡನೆ ಒಂದು ಸಹೃದಯ ಸಂವಾದ: ವರುಣ್ ರಾಜ್ ಜಿ.

ಕವಿ ಶ್ರೀ ರಾಘವೇಂದ್ರ ಡಿ. ತಳವಾರರ “ಆತ್ಮಾನುಬಂಧದ ಸಖಿ” ಕೃತಿಯ ಕುರಿತು ಇತ್ತೀಚೆಗೆ ತನುಶ್ರೀ ಪ್ರಕಾಶನದಿಂದ ಪ್ರಕಟಣೆಯಾಗಿದ್ದು ಅತ್ಯಲ್ಪ ಕಾಲದಲ್ಲಿಯೇ ಹಲವು ಸಹೃದಯರ ಮನಸ್ಸನ್ನು ಗೆದ್ದಿದೆ. ಈ ಕೃತಿಯು ರೂಪ – ಸ್ವರೂಪ ಮತ್ತು ವಿಷಯ ವ್ಯಾಪ್ತಿಯ ದೃಷ್ಠಿಯಿಂದ ಒಂದು ವಿಶಿಷ್ಟವಾದ ಕೃತಿ ಎನಿಸಿದ್ದು, ಓದುಗರನ್ನು ಎಲ್ಲಿಯೂ ನಿರಾಸೆಗೊಳಿಸದ ಗುಣ ಈ ಕೃತಿಯಲ್ಲಿದೆ. “ಆತ್ಮಾನುಬಂಧದ ಸಖಿ” ಕೃತಿಯ ಕವನದ ಸಾಲುಗಳು ಪದ್ಯದಂತೆ ಓದುವವರಿಂದ ಪದ್ಯವಾಗಿಯೂ, ಗದ್ಯದಂತೆ ಓದುವವರಿಂದ ಗದ್ಯವಾಗಿಯೂ ಓದಿಸಿಕೊಳ್ಳುತ್ತವೆ. ಪದ್ಯದಂತೆ ಹಾಡಿದರೂ ಗದ್ಯದಂತೆ ಓದಿದರೂ ಅರ್ಥ … Read more

ಯವ್ವಾ ಯವ್ವಾ “ಭೂಮಿಯ ಋಣ” ಚಂದ ಕಣವ್ವಾ: -ಡಾ. ನಟರಾಜು ಎಸ್.‌ ಎಂ.

ಒಂದು ಪೇಜಿನ ಕತೆ, ಕವಿತೆ ಕಟ್ಟುವುದು ಸುಲಭ. ಹತ್ತಾರು ಪುಟಗಳ ಕಥೆ, ನೂರಾರು ಪುಟಗಳ ಕಾದಂಬರಿ ಬರೆಯುವುದು ಕಷ್ಟ. ಆ ಕಷ್ಟಕ್ಕೆ ಯುವ ಲೇಖಕರು ತೆರೆದುಕೊಂಡಂತೆ ಯುವ ಲೇಖಕಿಯರು ತೆರೆದುಕೊಂಡಿದ್ದು ಬಹಳ ವಿರಳ. ಆ ಕಾರಣಕ್ಕೆ ಯುವ ಲೇಖಕಿಯರ ಕವಿತೆಗಳು ನಮಗೆ ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷಾಂಕಗಳಲ್ಲಿ ಹೆಚ್ಚಾಗಿ ಓದಲು ಸಿಗುತ್ತವೆ. ಲೇಖಕಿಯರು ಕಥಾಲೋಕಕ್ಕೆ ತೆರೆದುಕೊಳ್ಳಲು ಒಂದಷ್ಟು ಸಮಯ ತೆಗೆದುಕೊಳ್ಳುತ್ತಾರೆ ಎನಿಸುತ್ತದೆ. ಬದುಕಿನ ಅನುಭವಗಳನ್ನು ತುಂಬಾ ಪರಿಣಾಮಕಾರಿಯಾಗಿ ಕಟ್ಟಿಕೊಡುವ ಕೆಲಸ ಅಷ್ಟು ಸುಲಭವಲ್ಲ. ಆ ಸುಲಭವಲ್ಲದ ಕೆಲಸವನ್ನು ಒಂದು … Read more

ಬಂಡಾಯ ಕಾವ್ಯ: ಗೋಲ್ಡನ್ ಅಶು, ಜಬೀವುಲ್ಲಾ ಎಂ. ಅಸದ್, ಪ್ರಶಾಂತ್ ಬೆಳತೂರು

ಗಾಂಧಿ ಮತ್ತು ಅವನ ಖಾಯಿಲೆ ಬಿದ್ದ ಸ್ವಾತಂತ್ರ್ಯ ಭವಿಷ್ಯವಿರದ ಸಾಲಿಯ ಗೋಡೆಗಳುಬದುಕು ಕಟ್ಟುವ ಕನಸು ಕಾಣುತ್ತವೆಹೆಗಲಿಗೆ ಐಡಿ ಕಾರ್ಡಿಲ್ಲದ – ಕೆಂಪು ಶಾಲಿನ ಪೋರಶಾಲೆಗೊರಟ ಒಂಟಿ ಸಾಬರ ಮನೆಯ ಹುಡುಗಿಗೆರಾಮ ನಾಮ ಹೇಳುತ್ತಿದ್ದಆ ಗಟ್ಟಿಗಿತ್ತಿಯೂ ಸುಮ್ಮನಿರಲಿಲ್ಲಬೀದಿ ಮಧ್ಯೆಯೇ ಆಜಾನ್ ಕೂಗಿದಳು ಆಗ –ಕಪ್ಪು ಕೋಮುವಿನ ಹಲಗೆಯ ಮೇಲೆಕಲಿಸುವವ ಸಂವಿಧಾನದ ಕೊಲೆಮಾಡುತ್ತಿದ್ದ ! ಸತ್ಯಕ್ಕೆ ಗಲ್ಲಾದ ಈ ಹೊತ್ತುಹಸಿಮೈಯ್ಯ ಅತ್ಯಾಚಾರಿ ಬಾಲೆಯೊಬ್ಬಳ ಮನೆಯಮುಂದೆ –ಸ್ವತಂತ್ರ್ಯದ ಸಂಭ್ರಮ ಮನೆ ಮಾಡಿತ್ತು ! ಹೌದುನವ ಭಾರತಕ್ಕೆ ಎಪ್ಪತ್ತೈದರಸಂಭ್ರಮ , ಅತ್ಯಾಚಾರಿಗೆ – … Read more

ಪರಿಮಳದ ಪಯಣದಲಿ ಜೀವ ಜೀವನ ಧನ್ಯ: ಡಾ. ಹೆಚ್ ಎನ್ ಮಂಜುರಾಜ್

ಪುಸ್ತಕದ ಹೆಸರು : ಪರಿಮಳಗಳ ಮಾಯೆಲಲಿತ ಪ್ರಬಂಧ ಸಂಕಲನಲೇಖಕಿ : ಶ್ರೀಮತಿ ಆರ್ ಸಮತಾಪ್ರಕಾಶಕರು: ಅಹರ್ನಿಶಿ ಪ್ರಕಾಶನ, ಶಿವಮೊಗ್ಗಮೊದಲ ಮುದ್ರಣ : 2022, ಬೆಲೆ: ರೂ. 140 ಶ್ರೀಮತಿ ಸಮತಾ ಅವರ ಈ ಲಲಿತ ಪ್ರಬಂಧಗಳ ಪುಸ್ತಕವು ಓದಲು ಸಿಕ್ಕಿದ್ದು ನನಗೆ ಆಕಸ್ಮಿಕವಾಗಿ. ಸಮತಾ ಅವರು ನನ್ನ ತಂಗಿಯ ಸಹಪಾಠಿಯಾಗಿದ್ದವರು. ನಿನ್ನೆ ನನ್ನ ಸೋದರಿ ಲಕ್ಷ್ಮಿ ಉರುಫ್ ಪಮ್ಮಿಯ ಮನೆಗೆ ಹೋದಾಗ ಅದೂ ಇದೂ ಮಾತಾಡುವಾಗ ಲೇಖಕಿಯ ವಿಚಾರ ಬಂತು. ಈಕೆ ನನ್ನ ತಂಗಿಯ ಸ್ನೇಹಿತೆ. ನನ್ನ … Read more

‘ಕಾಂತಾರ’ದೊಳಗೊಂದು ಸುತ್ತು: ಶ್ರೀಧರ ಪತ್ತಾರ, ವಿಜಯಪುರ.

ಕಾಡು, ಅದರ ಸುತ್ತಲಿನ ಜಗತ್ತು ಮತ್ತು ಭೂತಕೋಲದ ದೈವದೊಂದಿಗೆ ತಳಕು ಹಾಕಿಕೊಂಡಿರುವ ಕಾಂತಾರ ನೋಡುಗರಿಗೆ ತನ್ನೊಳಗಿನ ಭಾವವನ್ನು ಬಹಳ ಬೇಗನೆ ಬಿಟ್ಟುಕೊಡುವುದಿಲ್ಲ. ಕಾಂತಾರದ ಕತ್ತಲೆ ಬೆಳಕು, ರವ-ನಿರವಯತೆಯ ಚುಂಗುಹಿಡಿದು ಹೊರಟರೆ ಖಂಡಿತವಾಗಿಯೂ ಕಥೆಯ ಕಾಡಿನೊಳಕ್ಕೆ ಪಯಣಿಸುತ್ತೇವೆ. ನೋಡುನೋಡುತ್ತಲೇ ಅದರೊಳಗೆ ಕಳೆದುಹೋಗುತ್ತೇವೆ. ತನ್ನ ವಾದ್ಯ, ತಾಳಮೇಳದ ಸದ್ದುಗದ್ದಲದೊಂದಿಗೆ ನಮ್ಮನ್ನು ಆಗಾಗ ಬೆಚ್ಚಿಬೀಳಿಸುತ್ತ, ಮೈನವಿರೇಳಿಸುವ ಕಾಂತಾರವೆಂಬ ದೃಶ್ಯಕಾವ್ಯ ನಮ್ಮಲ್ಲಿ ನಿಜಕ್ಕೂ ಆಶ್ಚರ್ಯ ಅದ್ಭುತವೆನ್ನಬಹುದಾದ ಭಾವವೊಂದನ್ನು ಹುಟ್ಟುಹಾಕುತ್ತದೆ. ವಿಭಿನ್ನ ಮತ್ತು ವಿಶೇಷ ಎಂದೆನಿಸುವ ಕಾಡೆಂಬ ನಿಗೂಢ ಜಗತ್ತನ್ನು ತೆರೆದಿಡುವ ಕತೆ ನೋಡುಗರನ್ನು … Read more

ಕಲ್ಲು ದೇವರು ದೇವರಲ್ಲ: ಮನು ಗುರುಸ್ವಾಮಿ

ವಿಗ್ರಹಾರಾಧನೆ ಎಂಬುದು ಬಹುತೇಕ ಮೂರ್ತಿ ಪೂಜೆ ಎಂಬ ಅರ್ಥವನ್ನೇ ನೀಡುವಂತದ್ದು. ಜನಪದರಿಂದ ಹಿಡಿದು ಶಿಷ್ಟಪದದವರೆಗೂ ಮೂರ್ತಿ ಪೂಜೆ ಅಸ್ತಿತ್ವದಲ್ಲಿರುವುದನ್ನು ನಾವು ಗಮನಿಸಬಹುದು. ಕೆಲವರು ಕಲ್ಲು, ಮಣ್ಣು, ಮರ, ಲೋಹ ಇತ್ಯಾದಿಗಳನ್ನು ಬಳಸಿ ನಿರ್ಮಿಸಲ್ಪಟ್ಟ ಒಂದು ಆಕೃತಿಗೆ ದೇವರೆಂಬ ಸ್ಥಾನಕೊಟ್ಟು ಆರಾಧಿಸುತ್ತಾ ಬಂದಿದ್ದಾರೆ. ಇನ್ನೂ ಕೆಲವರು ಕಲ್ಲು, ಮಣ್ಣು, ಮರ ಮೊದಲಾದ ಭೌತಿಕ ವಸ್ತುಗಳನ್ನು ದೇವರೆಂದು ಪೂಜಿಸಿತ್ತಾ ಬಂದಿದ್ದಾರೆ. ಭೌತಿಕ ವಸ್ತುಗಳು ಮಾನವನ ನಿತ್ಯ ಜೀವನದಲ್ಲಿ ಅವಶ್ಯಕವಾಗಿರುವುದರಿಂದ ಜನಪದರು ಅದನ್ನೇ ದೇವರೆಂದು ನಂಬಿ ಪೂಜಿಸುತ್ತಾ ಬಂದಿದ್ದಾರೆ ಎಂಬ ಮಾತು … Read more

ಹಿಂದಿ ಚಿತ್ರಕಥಾ ಸಂವಾದದಲ್ಲಿ ಮಾಹಿರರಾಗಿದ್ದ ಕಾದರ್ ಖಾನ್ !: ಎಚ್ಚಾರೆಲ್

ಕಾದರ್ ಖಾನ್ : (೨೨, ಅಕ್ಟೋಬರ್ ೧೯೩೭-೩೧, ಡಿಸೆಂಬರ್, ೨೦೧೮) ನಿಧನರಾದಾಗ ಅವರ ವಯಸ್ಸು : ೮೧ ವರ್ಷವಾಲಿದ್ ಹೆಸರು, : ಅಬ್ದುಲ್ ರೆಹ್ ಮಾನ್ ಖಾನ್,ವಾಲಿದಾರ ಹೆಸರು, ಇಕ್ಬಾಲ್ ಬೇಗಂಹೆಂಡತಿಯ ಹೆಸರು : ಅಜ್ರಾ ಖಾನ್ಪಸ್ಟೂನ್ ಟ್ರೈಬ್, ಸುನ್ನಿ ಜಾತಿಗೆ ಸೇರಿದವರು.ಓದಿದ ಕಾಲೇಜ್ : ಇಸ್ಮೇಲ್ ಯೂಸುಫ್ ಕಾಲೇಜ್, ಬೊಂಬಾಯಿ.ಆಗಿನ ಕಾಲದ ಸಿವಿಲ್ ಇಂಜಿನಿಯರಿಂಗ್ ಶಾಖೆಯಲ್ಲಿ ಸ್ನಾತಕೋತ್ತರ ಪದವೀಧರ ಬೊಂಬಾಯಿನ ಸಾಬು ಸಿದ್ದಿಕಿ, ಇಂಜಿನಿಯರಿಂದ ಕಾಲೇಜ್, ಸಿವಿಲ್ ಇಂಜಿನಿಯರಿಂಗ ಶಾಖೆಯಲ್ಲಿ ಪ್ರೊಫೆಸರ್, (೧೯೭೦-೭೫ ರವರೆಗೆ)ಹಫೀಜ್-ಎ-ಖುರಾನ್ ಎಂದು … Read more

ಪೆಟ್ರಿಕೋರ್‌ ಎಂಬ ಪ್ರೇಮಕಾವ್ಯ: ಡಾ. ನಟರಾಜು ಎಸ್.‌ ಎಂ.

ಒಂದು ಕಾಲದಲ್ಲಿ ಪುಸ್ತಕಗಳ ಕೊಳ್ಳಲು ಕೆಲವೇ ಕೆಲವು ಪುಸ್ತಕದ ಅಂಗಡಿಗಳಿಗೆ ಭೇಟಿ ನೀಡಬೇಕಿತ್ತು. ಈಗ ಮನೆಯಲ್ಲೇ ಕುಳಿತು ಇಷ್ಟದ ಪುಸ್ತಕಗಳನ್ನು ಆನ್‌ ಲೈನ್‌ ನಲ್ಲಿ ಆರ್ಡರ್‌ ಮಾಡಿದರೆ ಪುಸ್ತಕಗಳು ಒಂದೆರಡು ದಿನಗಳಲ್ಲಿ ನಮ್ಮ ಮನೆಗಳ ತಲುಪಿಬಿಡುತ್ತವೆ. ಆನ್‌ ಲೈನ್‌ ನಲ್ಲಿ ಹೋಗಿ ವೆಬ್‌ ಸೈಟ್‌ ಗಳಲ್ಲಿ ವಿವರಗಳನ್ನು ತುಂಬಿ ಪುಸ್ತಕ ಆರ್ಡರ್‌ ಮಾಡುವ ಪ್ರಕ್ರಿಯೆಗಳ ಬದಲು ಕನ್ನಡದ ಮಟ್ಟಿಗೆ ಅತೀ ಸುಲಭವಾಗುವಂತೆ ವಾಟ್ಸ್‌ ಅಪ್‌ ಗಳಲ್ಲಿ ಪುಸ್ತಕದ ಹೆಸರು ಮತ್ತು ವಿಳಾಸಗಳನ್ನು ತಿಳಿಸಿದರೆ ಅತೀ ಕಾಳಜಿಯಿಂದ ಪುಸ್ತಕಗಳನ್ನು … Read more

ನವರಾತ್ರಿ: ಡಾ. ವೃಂದಾ ಸಂಗಮ್ 

ನವರಾತ್ರಿ ಬರತದ ಅಂತ ಸೂಚನಾ ಹೆಂಗ ಅನ್ನೋದು ನೋಡಿದರನ ತಿಳೀತದ. ಶ್ರಾವಣ ಮಾಸ ಹಬ್ಬ- ಹುಣ್ಣವೀ ಸುರಿಮಳಿ. ದಿನಾ ಕಡಬು-ಹೋಳಿಗೆ, ಮಾಡಿ ಮತ್ತ ತಿಂದು ಎರಡೂ ಸುಸ್ತಾಗಿರತದ. ಅಷ್ಟ ಅಲ್ಲ, ಖರ್ಚಂತೂ ಕೇಳಬ್ಯಾಡರೀ, ಮುಗೀದಂಥಾದ್ದು, ಮ್ಯಾಲ ಹೊಲ ಮನೀಯವರಿಗಂತೂ ಕಳೇ-ಕಂಬಳೀ ಅಂತ ಹಗಲೂ ರಾತ್ರೀ ಕೆಲಸಾ. ಅಷ್ಟಲ್ಲದನ ಮ್ಯಾಲ ಜಿಟಿ ಜಿಟಿ ಮಳೀ. ಹಿಂತಾದರಾಗ, ಯಾರನರೇ ಕೇಳರೀ, ನಮ್ಮನಿಯೊಳಗ, ಶ್ರಾದ್ಧ, ಶ್ರಾವಣ ಮಾಸದಾಗ ಬರತಾವ ಅಂತಾರ. ಮತ್ತ ಹಿರೇರೂಂದರ ದೇವರ ಸಮಾನ ಅಂತ ಅವರೂ ತಮ್ಮದೊಂದು ನೆನಪು … Read more

ನ್ಯಾನೋ ಕತೆಗಳು: ಸ್ನೇಹಲತಾ ದಿವಾಕರ್, ಕುಂಬ್ಳೆ.

­­­­­­­­­­­­­­­­­­­­­­­­ ಅನುಭವವೇ ಗುರಿ ಪ್ರೀತಿ                                                                       ಮಗುವನ್ನು ಜಿಗುಟಿದ ಕೈಗಳು ತೊಟ್ಟಿಲನ್ನೂ ತೂಗಿದವು. ನೋಡುವ ಕಂಗಳಿಗೆ ಕಾಣಿಸಿದ್ದು ತೂಗುವತೋಳುಗಳ ಕಾಳಜಿ ಮಾತ್ರ. ಜಿಗುಟಿದ ಉಗುರುಗಳ ಕ್ರೌರ್ಯ ಯಾರ ಕಣ್ಣಿಗೂ ಬೀಳಲಿಲ್ಲ  ಹೊಂದಾಣಿಕೆ ಅವರಿಬ್ಬರದ್ದು ತುಂಬಾ ಹೊಂದಾಣಿಕೆಯ ಸಂಸಾರ. ಅವನು ಪ್ರತೀ ಬಾರಿ ಅದೇ ತಪ್ಪನ್ನು ಮಾಡುತ್ತಾ ಇದ್ದ. ಮತ್ತು ಅವಳು ಎಲ್ಲಾ ಸಲವೂ  ಅದಕ್ಕಾಗಿ ಕ್ಷಮೆ ಕೇಳುತ್ತಲೇ ಹೋದಳು. ಬೆಸ್ಟ್ ಆಕ್ಟರ್ ಮದುವೆಯಾಗಿದ್ದರೂ ಇನ್ನೂ ಸಿನಿಮಾ ರಂಗದಲ್ಲಿ  ಶೋಭಿಸುತ್ತಿರುವ ಅವಳಿಗೆ ಗಂಡ ನೀಡುತ್ತಿರುವ ಪ್ರೋತ್ಸಾಹ ಮತ್ತು ಸ್ವಾತಂತ್ರ್ಯ … Read more

ಸೋಲೆಂಬುದೇ ನಿಜ ಗೆಲುವು !: ಡಾ. ಹೆಚ್ ಎನ್ ಮಂಜುರಾಜ್

ಕಲಿಸು ಗುರುವೇ, ಸೋಲುವುದನು ! ಸೋತು ಸುಖಿಸುವುದನು……..!! ಎಂಬ ಪದ್ಯವೊಂದನು ಹಿಂದೆ ಬರೆದಿದ್ದೆ. ಅದನು ಗಮನಿಸಿದವರು ಕೇಳಿದರು: ಜಗತ್ತಿನಲ್ಲಿ ಎಲ್ಲರೂ ಗೆಲ್ಲಬೇಕೆಂದು ಹೊರಟಿದ್ದಾರೆ; ನೀವೇನಿದು: ಹೀಗೆ ಬರೆದಿದ್ದೀರಿ? ಅದಕೆ ನಾನೆಂದೆ: ಎಲ್ಲರೂ ಗೆಲ್ಲುವುದಾದರೆ ಸೋಲುವವರು ಯಾರು? ಒಬ್ಬರು ಗೆಲ್ಲಲು ಹಲವರು ಸೋಲಲೇಬೇಕಲ್ಲವೆ? ಅಂಥವರ ಪೈಕಿ ನಾನು ಎಂದೆ. ಅವರಿಗೆ ಏನನಿಸಿತೋ? ವಿಚಿತ್ರವಾಗಿ ನೋಡಿದರು. ಲೋಕದಲ್ಲಿ ಗೆಲುವಿಗಾಗಿ ಹಂಬಲಿಸುವವರೇ ಎಲ್ಲ; ಸೋಲುವವರು ಇಲ್ಲವೇ ಇಲ್ಲ! ನಮ್ಮ ಮನೆ, ಮನೆತನ, ಸಂಬಂಧಿಕರು, ಸ್ನೇಹಿತರು, ಶಾಲೆ, ಶಿಕ್ಷಣ, ವ್ಯವಸ್ಥೆ ಅಷ್ಟೇ ಅಲ್ಲ; … Read more

ಮಲೆನಾಡಿನ ಪದವೀಧರ ಯುವಕನ ಜೇನುಕೃಷಿ ಯಶೋಗಾಥೆ: ಚರಣಕುಮಾರ್

ಸಹ್ಯಾದ್ರಿಯ ಶೃಂಗದ ದಟ್ಟಡವಿಯ ಮಧ್ಯಭಾಗದಲ್ಲೊಂದು ಪುಟ್ಟ ಗ್ರಾಮ ಹಕ್ಲಮನೆ. ಉತ್ತರ ಕನ್ನಡ ಜಿಲ್ಲೆ, ಸಿದ್ದಾಪುರ ತಾಲ್ಲೂಕಿನಲ್ಲಿ ಬರುವ ಈ ಹಳ್ಳಿಯಲ್ಲೊಬ್ಬ ಪ್ರಗತಿಪರ ಮತ್ತು ಪದವಿಧರ ಜೇನುಕೃಷಿಕ ಸಂತೋಷ ಹೆಗಡೆ. ಹೆಸರಿನಲ್ಲೇ ಸಂತೋಷ ಎಂದು ಇಟ್ಟುಕೊಂಡಿರುವ ಈ ಸಂತೋಷ ಬಿ.ಕಾಂ ಪದವಿ ಪಡೆದಿದ್ದರೂ ಕೂಡ ಪೇಟೆಯ ಕಡೆ ಮುಖ ಮಾಡಲಿಲ್ಲ. ಆದರೂ ಒಮ್ಮೆ ಬಿ.ಕಾಂ ಮುಗಿದ ಮೇಲೆ ಉದ್ಯೋಗಕ್ಕಾಗಿ ಪೇಟೆಯ ಕಡೆ ಹೊರಟ ಈತನಿಗೆ, ತಾಯಿಯ ಆರೋಗ್ಯದಲ್ಲಿ ಕಾಣಿಸಿಕೊಂಡ ಏರು-ಪೇರು ಮನೆಬಿಟ್ಟು ಹೋಗಲು ಅವಕಾಶ ನೀಡಲೇಇಲ್ಲ. ಹೇಳಿ-ಕೇಳಿ ಇವರದು … Read more

ಕುಟುಂಬವೆಂದರೆ ಒಬ್ಬ ವ್ಯಕ್ತಿಯಲ್ಲ, ಅವನೊಡನೆ ನಿಲ್ಲುವ ಪ್ರಪಂಚವೇ ಕುಟುಂಬ ಎನ್ನುವ “ಅಜ್ಜನ ಕಮೋಡು”: ಡಾ. ನಟರಾಜು ಎಸ್.‌ ಎಂ.

ಈ ತಿಂಗಳ ಮೊದಲ ವಾರದಲ್ಲಿ ಹಾಸನಕ್ಕೆ ಹೋಗಿದ್ದೆ. ನಮ್ಮ ನಡುವಿನ ಅಧ್ಬುತವಾದ ಅನುವಾದಕರಾದ ಜೆವಿ ಕಾರ್ಲೊ ಸರ್‌, ಮೈಸೂರಿನ ಕಥೆಗಾರ ಗೆಳೆಯ ಡಾ. ಗವಿಸ್ವಾಮಿ ಸಿಕ್ಕಿದ್ದರು. ಅವರ ಜೊತೆ ಮಾತನಾಡಿ ಸಂಜೆ ಹಿರಿಯ ಸಾಹಿತಿಗಳಾದ ಹಾಡ್ಲಹಳ್ಳಿ ನಾಗರಾಜು ರವರನ್ನು ಭೇಟಿಯಾದೆ. ಹಾಸನದ ಬಳಿ ಅತ್ತಿಹಳ್ಳಿಯ ತೋಟದ ಮನೆಯಲ್ಲಿ ವಾಸವಿರುವ ಹಿರಿಯರಾದ ನಾಗರಾಜುರವರನ್ನು ಭೇಟಿಯಾದ ದಿನ ಹೊರಗೆ ಸಣ್ಣನೆ ತುಂತುರು ಮನೆ ಹನಿಯುತ್ತಿತ್ತು. ಒಂದೆರಡು ಗಂಟೆ ಅವರೊಡನೆ ಹರಟೆ ಹೊಡೆದು ರಾತ್ರಿ ಊಟ ಮಾಡಿ ವಾಪಸ್ಸು ಬರುವಾಗ ನನ್ನ … Read more

ಪಂಜುವಿಗೆ ನೆರವಾಗಿ

ಸಹೃದಯಿಗಳೇ, ನಿಮಗೆ ತಿಳಿದಂತೆ ಕಳೆದ ಒಂಬತ್ತು ವರ್ಷಗಳಿಂದ ಪಂಜು ಪತ್ರಿಕೆ ಕನ್ನಡದ ಸೇವೆಯಲ್ಲಿ ನಿರತವಾಗಿದೆ. ಪ್ರತಿ ವರ್ಷದ ಹೋಸ್ಟಿಂಗ್‌ ವೆಚ್ಚ, ವೆಬ್‌ ಡೊಮೈನ್‌ ನವೀಕರಣ ವೆಚ್ಚ ಮತ್ತು ಇತರ ವೆಚ್ಚಗಳು ಹೆಚ್ಚತ್ತಲೇ ಹೋಗುತ್ತಿವೆ. ಈ ಎಲ್ಲಾ ವೆಚ್ಚಗಳನ್ನು ಪಂಜು ಇಷ್ಟು ವರ್ಷ ನಿಭಾಯಿಸುತ್ತಲೇ ಬಂದಿದೆ. ಹೆಚ್ಚುತ್ತಿರುವ ತಂತ್ರಜ್ಞಾನಗಳ ಜೊತೆಗೆ ಅವುಗಳಿಗೆ ಹಣ ನೀಡಬೇಕಾದ ಅವಶ್ಯಕತೆ ಕೂಡ ಇರುವುದರಿಂದ ನಿಮಗೆ ಪಂಜುವಿಗೆ ನೆರವಾಗುವ ಮನಸಿದ್ದರೆ ನಿಮಗೆ ಅನಿಸಿದ್ದಷ್ಟು ಹಣವನ್ನು ಪಂಜುವಿಗೆ ಡೊನೇಟ್‌ ಮಾಡಿ. Google pay/ Phone Pay: … Read more

ಮರ ಕಡಿಯುವುದಾಗಲಿ ಅಥವಾ ಅದನ್ನು ಘಾಸಿಗೊಳಿಸುವುದಾಗಲಿ ಮಾಡುವುದು ಬಿಷ್ಣೋಯಿ ಧರ್ಮಕ್ಕೆ ವಿರುದ್ಧವಾದುದ್ದು: ಮಿತಾಕ್ಷರ

ಇತಿಹಾಸದಲ್ಲಿ ನಡೆದ ಅತಿ ಘೋರ ಘಟನೆ ಅದು ನಡೆದದ್ದು ರಾಜಸ್ಥಾನದ ಜೋಧಪುರದಲ್ಲಿ ಅಲ್ಲಿನ ರಾಜ ಅಜಿತ ಸಿಂಹ ತನ್ನ ಅರಮನೆಯ ಸೌಂದರ್ಯ ಹೆಚ್ಚಿಸಲು ತನ್ನ ರಾಜ್ಯದ ಬಿಷ್ಣೋಯಿ ಸಮಾಜದವರೆ ಹೆಚ್ಚಾಗಿದ್ದ ಜೆಹ್ನಾದ್‌ನ ಗ್ರಾಮದಲ್ಲಿ ಸಮೃದ್ಧವಾಗಿ ಬೆಳೆದ ಖೇಜ್ರಿ ವೃಕ್ಷಗಳನ್ನು ಕತ್ತರಿಸಿ ತರುವಂತೆ ಮಂತ್ರಿ ಗಿರಿಧರ ಭಂಡಾರಿಗೆ ಆಜ್ಞೆಪಿಸಿದ. ಸೈನಿಕರೊಡನೆ ಹೊರಟ ಮಂತ್ರಿ ಗ್ರಾಮದಲ್ಲಿ ಮರ ಕಡಿಯಲು ಮುಂದಾದ. ಸುದ್ದಿ ತಿಳಿದು ಮರಗಳನ್ನು ಮಕ್ಕಳಂತೆ ಪೋಷಿಸಿ ಬೆಳೆಸುವ ಅಲ್ಲಿನ ಬಿಷ್ಣೋಯಿ ಸಮಾಜದ ಅಮೃತಾದೇವಿ ಬಿಷ್ಣೋಯಿ ತಕ್ಷಣ ಮರಗಳ ರಕ್ಷಣೆಗೆ … Read more

ಬೆರಗು ಹುಟ್ಟಿಸುವ ಬೇತಾಳ: ರಾಜಶ್ರೀ. ಟಿ. ರೈ. ಪೆರ್ಲ

ಊರ ದೇವರ ಜಾತ್ರೆ ಬಂತು ಎಂದರೆ ಒಂಥರಾ ತನು ಮನದಲ್ಲಿ ಹೊಸ ಹುರುಪು ಹುಟ್ಟಿಕೊಳ್ಳುತ್ತದೆ. ಹಳೇಯ ನೆನಪುಗಳು, ಊರಿಗೆ ಬರುವ ಅಥಿತಿಗಳ ಸ್ವಾಗತದ ತಯಾರಿ. ಅದರಲ್ಲೂ ಧಕ್ಷಿಣ ಕನ್ನಡ ಕಾಸರಗೋಡು ಈ ಭಾಗದಲ್ಲಿ ದೇವಸ್ಥಾನದ ಜಾತ್ರೆಯೆಂದರೆ ಒಂದು ಬಗೆಯ ಸಾಂಸ್ಕøತಿಕ ಉತ್ಸವವೇ ಸರಿ.ಅಲ್ಲಿ ಎಲ್ಲವೂ ಉಂಟು ಎನ್ನುವ ಹಾಗೆ. ಪ್ರತೀ ದಿನ ನಿಗದಿತ ಹೊತ್ತಿಗೆ ನಡೆಯುವ ಪೂಜೆ ಮತ್ತು ಇತರ ನಿತ್ಯ ನೈಮಿತ್ತಿಕ ಕ್ರಿಯೆ ವಿಧಿಯನ್ನು ಬಿಟ್ಟರೆ ಕೆಲವು ಹಬ್ಬದ ಸಮಯಕ್ಕೆ ಸಣ್ಣ ಸಂಭ್ರಮ. ಆದರೆ ಜಾತ್ರೆ … Read more

ಬಡತನಕ್ಕೂ ಸೊಗಸಿದೆ ಎನ್ನುವ ಮುಕ್ಕಾದ ಭಿಕ್ಷಾಪಾತ್ರೆ ಬೌಲ್: ಡಾ. ನಟರಾಜು ಎಸ್.‌ ಎಂ.

ಎಂ ಎಸ್‌ ಮೂರ್ತಿಯವರ ಆಟೋಗ್ರಾಫ್‌ ಇರುವ ಅವರ ಬೌಲ್‌ ಕಾದಂಬರಿ ನನ್ನ ಕೈ ಸೇರಿ ಹತ್ತು ದಿನವಾಗಿರಬಹುದು. ಮೊದಲ ದಿನ ಊರಿನಲ್ಲಿ ಪುಸ್ತಕ ಓದಲು ಕುಳಿತಾಗ ಎರಡು ನಿಮಿಷಕ್ಕೆ ಒಂದು ಪುಟದಂತೆ ಐವತ್ತು ಪುಟಗಳ ಮೊದಲ ಅಧ್ಯಾಯವನ್ನು ಓದಿ ಮುಗಿಸಿದ್ದೆ. ಉಳಿದ ಅ‍ಧ್ಯಾಯಗಳನ್ನು ಬಿಡುವಿದ್ದಾಗ ಓದಿಕೊಂಡು ಇವತ್ತು ಬೆಳಿಗ್ಗೆ ಈ ಪುಸ್ತಕದ ಓದು ಪೂರ್ತಿಯಾಯಿತು. ಒಂದಷ್ಟು ಪುಟಗಳಲ್ಲಿನ ವಿಷಯಗಳು ಅದರಲ್ಲೂ ಗುರುಪರಂಪರೆಯ ಕುರಿತು ಬರೆದ ಅಧ್ಯಾಯಗಳು ಚೂರು confuse ಆದಂತೆ ಅನಿಸಿದ್ದರಿಂದ ಆ ಪುಟಗಳನ್ನು ಮತ್ತೆ ಓದಿಕೊಂಡೆ. … Read more

ಪಂಜು ಕಾವ್ಯಧಾರೆ

ಹಸಿ ರಕ್ತ ಮುಸಿ ಮುಸಿ ನಗುತ್ತಲಿತ್ತುಎಡ ಬಲದ ಭುಜಹತ್ತಿ ಕ್ರೌರ್ಯ ಮೆರೆಯುತ್ತಲಿತ್ತುತಾನು ನಗುತ್ತಲೇ ಪ್ರಶ್ನೆ ಕೇಳುತ್ತಿತ್ತು? ಯಾರೊಳಗೆ ನಾನಿಲ್ಲ ?ನನ್ನ ಬಲ್ಲವರಿಲ್ಲನಿನ್ನೊಳಗಿನ ಅವನಅವನೊಳಗಿನ ನಿನ್ನನಡುವಿನಅಂತರ ಇಷ್ಟೇಅದು ನಾನು! ನಿನ್ನೊಳಗಿನ ನನಗೆನಾನಾ ಮುಖಗಳುನಾನಿದ್ದೆ ನನ್ನಂತೆನೀನೇ ತೊಡಿಸಿದೆಸಿದ್ದಾಂತದ ಸೋಗಿನಲ್ಲಿಧರ್ಮಾಂಧತೆಯ ಮಸಿಯನಾನೇನು ಮಾಡಲಿಕರ್ತವ್ಯ ಮುಗಿಸಿದೆಕಾರಣ ಇಷ್ಟೇಅದು ನಾನು! ಸಿಡಿವುದಷ್ಟೇ ಗೊತ್ತುಗುಂಡಿಗೆಕಡಿಯುವುದಷ್ಟೇ ಗೊತ್ತುಮಚ್ಚಿಗೆಪಾಪ ಅವುಗಳ ತಪ್ಪಿಲ್ಲತಪ್ಪಿಗೆ ತೀರ್ಪಿಷ್ಟೇಅದು ನಾನು ! ಹೆತ್ತವರೋ ಹೊತ್ತವರೋತುತ್ತಿಟ್ಟು ಸಾಕಿದವರೋಯಾರ ಕಣ್ಣೊರೆಸುವೆ ?!ನೀ ಸತ್ತನಂತರಬೇಕೇ ನಿಜ ಕಾರಣ ?ಹ್ಞೂಂ..!ಅದು ನಾನೆಂಬನೀನು ಅಷ್ಟೇ !! ಹಸಿ ರಕ್ತ ಮುಸಿ ಮುಸಿ … Read more

ಗಾಡಿ ಹೋಟೆಲ್: ಎಸ್.ಗಣೇಶ್

ಸದಾಶಿವನಿಗೆ ಒಂದು ದೊಡ್ಡ ಚಟವಿತ್ತು. ತಿನ್ನೋ ಚಟ. ಯಾವಾಗಲೂ ಬಾಯಿ ಆಡ್ತಾನೇ ಇರಬೇಕು. ಅವರು, “ಗಾಡಿ ಹೋಟೆಲ್” ತಿಂಡಿ ಚಪಲ. ಮನೆಯಲ್ಲಿನ ಮೇವು ಹಿಡಿಸುತ್ತಿರಲಿಲ್ಲ. ಹೊರಗಡೆಯ ಯಾವುದೇ ತಿನಿಸು ಬಿಡುತ್ತಿರಲಿಲ್ಲ. ಬೇರೆ ಊರಿಗೆ ಹೋದರೂ.. ರಸ್ತೆ ಬದಿ ಕಾಣುತ್ತಿದ್ದ ಗಾಡಿ ಹೋಟೆಲ್ ಕಡೆಯೇ ಗಮನ. ಊಟದ ವಿಷಯಕ್ಕೆ ಎಷ್ಟೋ ಸಲ, ಮಡದಿ ಗಂಗಾಂಬ ಜೊತೆ ಜಗಳವಾಡಿಕೊಂಡು ಕಳೆದ ವರ್ಷ 12 ಬಾರಿ “ಗಾಡಿ ಹೋಟೆಲ್” ಜೊತೆ 1 ಬಾರಿಗೆ 1 ವಾರದಂತೆ ಸಂಸಾರ ಮಾಡಿದ ರೆಕಾರ್ಡ ಇದೆ. … Read more

ಸೋಲಿಗರ ಜೊತೆ ಒಂದು ದಿನ: ಶೈಲಜೇಷ ಎಸ್.

ಮಳೆಗಾಲದ ಕಾಡು ಹೇಗೆ ಇರುತ್ತದೆ ಎಂದು ನಾನು ಹೇಳ ಬೇಕಿಲ್ಲ ಅಲ್ಲವೇ, ಅಂತ ಒಂದು ಸ್ಥಳ ಚಾಮರಾಜ ಜಿಲ್ಲೆಯ ಬಿಳಿಗಿರಿ ರಂಗನ ಬೆಟ್ಟ. ಸಾಮಾನ್ಯವಾಗಿ ಎಲ್ಲರೂ ಬಾಲ್ಯದಲ್ಲಿ ಪ್ರಯಾಣ ಅಂತ ಹೋಗುತ್ತಿದ್ದದ್ದೆ ವರುಷಕ್ಕೆ ಒಮ್ಮೆಯೋ ಅಥವಾ ಎರಡು ಬಾರಿಯೊ ಅಷ್ಟೆ, ಈಗ ಹಾಗಿಲ್ಲ ಪ್ರತಿವಾರದ ಕೊನೆಯ (weekend) ದಿನಗಳನ್ನು ಪ್ರಯಾಣದ ದಿನಗಳೆಂದೆ ಘೋಷಿಸಬಹುದು ಅಷ್ಟರ ಮಟ್ಟಿಗೆ ಎಲ್ಲರೂ ಪ್ರಯಾಣದಲ್ಲಿ ಇರುವವರೆ. ಕಾಡು, ಮೇಡು, ಚಾರಣ, ತೀರ್ಥಕ್ಷೇತ್ರ, ಪ್ರೇಕ್ಷಣೀಯ ಸ್ಥಳಗಳ, ರೆಸಾರ್ಟ್, ಹೋಮ್ ಸ್ಟೇಗಳು ಹೀಗೆ ಎಲ್ಲೆಲ್ಲೂ ಜನರಿಂದ … Read more

ಪಂಜು ಕಾವ್ಯಧಾರೆ

ಯಾರ ಮಾನಸ್ಯಾಗ ಏನೈತೋ! ಬೊಗಸೆಯಾಗೆ ಏನಿಲ್ಲಕಣ್ಣ ತುಂಬಿ ಕಂಬನಿ ತುಳುಕ್ಯಾವಲ್ಲಯಾರ ಮನಸ್ಯಾಗ ಏನೈತೋಕಾಣದ ಆ ದ್ಯಾವನೆ ಬಲ್ಲ ಹೊರಳ್ಯಾದ ಹಕ್ಕಿ ಮರಳಿ ಗೂಡಿಗೆಹೋಗುವುದಾದರೂ ಹಾರಿ ಎಲ್ಲಿಗೆ?ಹಾರಲಿಕ್ಕ ಇರುವುದು ಆಕಾಸ ದಿಟಬದುಕೆನೆದ್ದರೂ ಭೂಮಿ ಮ್ಯಾಗೆ ಎಲ್ಲಿಂದ ಬಂದಿಯೋಅಲ್ಲಿಗೆ ಹೋಗಾಂವ ನೀಖರೇ ಅಂದ್ರ ನಿನ ಬದ್ಕು ಮೂರು ದಿನದ ಸಂತಿ ಐತಿಖದರಿರಲಿ ತಿಳಕೊಂಡು ಬಾಳು ನೀ ಎಷ್ಟಾಂತ ಹೊರ್ತಿಬವಣೆಗಳ ಮೂಟೆಗಳಇಷ್ಟಲಿಂಗ ಇಟ್ಟಂಗ್ ಆಗತೈತೆಯಾಕೆ ನೀ ಸುಮ್ನೆ ಚಿಂತಿ ಮಾಡ್ತಿ ಎಲ್ಲರೂ ಸಾಯೋವ್ರೆ ಒಂದ್ ದಿವ್ಸಅಮರ ಯಾರಿಲ್ಲ ಈ ಲೋಕದಾಗನೀ ನಡದಂತೆ … Read more