ಕುಗ್ಗಿದಾಗಲೆಲ್ಲಾ ಕಗ್ಗ ಓದಬೇಕು !: ಮನು ಗುರುಸ್ವಾಮಿ
ಹೌದು.. ಮನುಷ್ಯ ಕುಗ್ಗಿದಾಗಲೆಲ್ಲಾ ಮಂಕುತಿಮ್ಮನ ಕಗ್ಗ ಓದಬೇಕು. ಬಹುತೇಕ ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ, ಇರುವಷ್ಟು ಕಾಲ ಸೂರ್ಯನಂತೆ ಬೆಳಗಿ ಮರೆಯಾಗಬೇಕೆಂಬ ಸಂದೇಶವನ್ನು ಸಾರುವಲ್ಲಿ, ಬದುಕಿನ ಅಪರಿಮಿತ ಹೋರಾಟ, ಅನಿರೀಕ್ಷಿತ ಸವಾಲುಗಳನ್ನು ಹೇಗೆ ಎದುರುಗೊಳ್ಳಬೇಕೆಂಬ ವಿಚಾರವನ್ನು ಮನದಟ್ಟು ಮಾಡುವಲ್ಲಿ ಈ ಕೃತಿ ಮಹತ್ವದ ಪಾತ್ರವಹಿಸಿದೆ. ನಾನು, ನನ್ನದೆಂಬ ಭ್ರಮೆಯಲ್ಲಿ ಜೀವನವಿಡೀ ನಡೆದು, ಕೊನೆಗೆ ಎಲ್ಲವನ್ನು ಬಿಟ್ಟು ಮಣ್ಣು ಸೇರುವ ಮನುಷ್ಯನ ನಶ್ವರ ಬದುಕಿನ ಬಗ್ಗೆ ಇಲ್ಲಿನ ಚೌಪದಿಗಳು ಎಳೆ ಎಳೆಯಾಗಿ ತಿಳಿಸಿಕೊಡುತ್ತವೆ. ನಾಲ್ಕು ಸಾಲಿನ ಸಣ್ಣ ಸಣ್ಣ ಪದ್ಯಗಳಿಂದ … Read more