ಕನ್ನಡ ಶಾಯಿರಿಗಳು – ಒಂದು ಅವಲೋಕನ: ಪರಮೇಶ್ವರಪ್ಪ ಕುದರಿ

ಕನ್ನಡ ಸಾರಸ್ವತ ಲೋಕವು ಕಥೆ, ಕಾದಂಬರಿ, ನಾಟಕ, ಮಹಾಕಾವ್ಯ, ಕವನ, ಸಣ್ಣ ಕಥೆ, ಹನಿಗವನ ಇನ್ನೂ ಹಲವಾರು ಪ್ರಕಾರಗಳಿಂದ ಶ್ರೀಮಂತವಾಗಿದೆ. ಈ ಶ್ರೀಮಂತ ಪರಂಪರೆಗೆ ಇತ್ತಿಚಿನ ಸೇರ್ಪಡೆ ಎಂದರೆ ಕನ್ನಡ ಶಾಯಿರಿಗಳು. ಬದುಕಿನ ಸಾರವನ್ನು ಕೆಲವೇ ಸಾಲುಗಳಲ್ಲಿ ತೆರೆದಿಡುವ ಪರಿಯನ್ನು ಶಾಯಿರಿ ಎನ್ನಬಹುದು.ಇದನ್ನು ಓದಿಯೇ ಸವಿಯಬೇಕು! ಶಾಯಿರಿ ಎಂಬ ಪದವು ಅರೇಬಿಕ್ ಭಾಷೆಯ “ ಶೇರ್” ಎಂಬ ಪದದ ರೂಪಾಂತರವಾಗಿದೆ. ಶೇರ್ ಪದದ ಅರ್ಥ ಎರಡು ಸಾಲಿನ ಪದ್ಯ ಎಂದಾಗುತ್ತದೆ. ನಮಗೆ ಬಹಳ ಸಂತೋಷವಾದಾಗ, ಮತ್ತು ಬಹಳ … Read more

ತಾನೇ ಕವಿತೆಯಾದ ಕವಿಯ ಕವಿತೆಗಳ ಜಾಡ್ಹಿಡಿದು ನಡೆದಾಗ…..!: ಜಬೀವುಲ್ಲಾ ಎಮ್. ಅಸದ್, ಮೊಳಕಾಲ್ಮುರು.

ಕೃತಿ: ನನ್ನೊಳಗಿನ ಕವಿತೆ (ಕವನ ಸಂಕಲನ – ೨೦೨೦)ಲೇಖಕರು: ಅಷ್ಫಾಕ್ ಪೀರಜಾದೆಪ್ರಕಾಶನ: ಹೆಚ್. ಎಸ್. ಆರ್. ಎ. ಪ್ರಕಾಶನ, ಬೆಂಗಳೂರು.ಬೆಲೆ: ೧೫೦/- “ಕವಿ ಕೊರಳಿಗೆಉರಳಾದ ಕವಿತೆಅದ್ಹೇಗೋಅಮರವಾಗಿತ್ತುಕವಿ ಮಾತ್ರಜಗದ ಬೆಳಕಿಗೆಅಪರಿಚಿತನಾಗಿಯೇಉಳಿದುಬಿಟ್ಟ” ಹೀಗೆಲ್ಲಾ ಸಶಕ್ತವಾದ, ಅರ್ಥಪೂರ್ಣವಾಗಿ ಧ್ವನಿಸುವ ಕವಿತೆ ರಚಿಸುವ ‘ಅಷ್ಫಾಕ್ ಪೀರಜಾದೆ’ ರವರು, ಲೋಕದ ಬೆಳಕಿಗೆ ಅಪರಿಚಿತನಾಗಿ ಕತ್ತಲಲ್ಲೇ ಉಳಿದು ಬಿಡುವ ಕಹಿ ಸತ್ಯವನ್ನು ಕಾವ್ಯದ ಮೂಲಕ ತಮ್ಮ ಮನದಾಳದ ಇಂಗಿತವನ್ನು, ನೋವನ್ನು, ಹತಾಶೆಯನ್ನು, ತಲ್ಲಣವನ್ನು “ನನ್ನೊಳಗಿನ ಕವಿತೆ” ಎಂಬ ಭಾವಪೂರ್ಣ ಕವನ ಸಂಕಲನ ದಲ್ಲಿ ಹಂಚಿಕೊಂಡಿದ್ದಾರೆ. ಬರಹಗಾರನು … Read more

ಹೆಸರಿನಲ್ಲೇನಿದೆ: ಡಾ. ವೃಂದಾ. ಸಂಗಮ್

ಎಂದಿನಂತೆ ಆಫೀಸಿಗೆ ಹೋಗಿ, ಕಂಪ್ಯೂಟರ್ ತೆಗೆಯುತ್ತಿದ್ದೆ, ನಮ್ಮ ದತ್ತಾಂಶ ನಮೂದಕಿ (ಟೈಪಿಸ್ಟ್) ಒಬ್ಬರು ಬಂದವರೇ, ” ಮೇಡಂ, ನಿನ್ನೆ ಪತ್ರಗಳಲ್ಲಿ ಇದೊಂದು ಬಾಕಿ ಇದೆ, ಟೈಪ್ ಆಗಿಲ್ಲ.” ಎಂದರು. “ಯಾಕೆ” ಎಂದೆ. “ಮೇಡಂ, ಅವರ ಹೆಸರು ಚಿಂತಾಮಣಿ ಎಂದಿದೆ, ಶ್ರೀ ಅಂತ ಬರೀಬೇಕೋ, ಶ್ರೀಮತಿ ಅಂತ ಬರೀಬೇಕೋ ತಿಳೀಲಿಲ್ಲ. ಅದು ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಪತ್ರ. ಇಂದೇ ಕೊನೆಯ ದಿನ. ಕಳಿಸಲೇ ಬೇಕು ಇವೊತ್ತು. ಏನು ಬರೀಲಿ, ಶ್ರೀ ಅಥವಾ ಶ್ರೀಮತಿ” ಎಂದು ಕೇಳಿದರು. ಅವರ … Read more

ಶ್ರೀ. ಗಣಪತ್ ಕಾಕೋಡೇಜಿ, ನಮ್ಮ ಕಾಲೋನಿಯ ಭರವಸೆಯ ಪೋಸ್ಟ್ಮನ್ !: ಎಚ್. ಆರ್. ಲಕ್ಷ್ಮೀವೆಂಕಟೇಶ್

ಕಾಕೋಡೆ ಅವರನ್ನು ನಾನು ಸುಮಾರು ೧೦ ವರ್ಷಕ್ಕೂ ಹೆಚ್ಚು ಸಮಯದಿಂದ ಬಲ್ಲೆ ಎಂದರೆ ತಪ್ಪಾಗಲಾರದು. ನಮ್ಮ ಹಿಮಾಲಯ ಕಾಲೋನಿಯ ಭರವಸೆಯ ಪೋಸ್ಟ್ಮನ್ ಎಂದು ಅವರನ್ನು ಕರೆಯಲು ಹಲವು ಕಾರಣಗಳೂ ಇವೆ. ತನ್ನ ವೃತ್ತಿಯಲ್ಲೂ ಕೆಲವು ಮಹತ್ವವೆಂದು ನಾನು ಕರೆಯುವ (ಬೇರೆಯವರಿಗೆ ಇದು ಅಷ್ಟು ಮುಖ್ಯವಾಗಿ ಕಾಣಿಸದೆ ಇರಬಹುದು) ಕಾರ್ಯಗಳನ್ನು ಅವರು ಮಾಡಿದ್ದಾರೆ ಎಂದರೆ ಸುಳ್ಳಲ್ಲ. ಯಾವುದೇ ಕೆಲಸ ತನ್ನದೇ ಆದ ಮಹತ್ವವನ್ನು ಪಡೆದಿದೆ. ಅದನ್ನು ಎಷ್ಟು ಜನ ಗುರುತಿಸುತ್ತಾರೆ ಎನ್ನುವುದು ಮುಖ್ಯ. ವರ್ಷ ೨೦೦೮ ರಲ್ಲಿ ನಾವು … Read more

“ಪರಿಸರ ದಿನ ಎನ್ನುವ ವರ್ಷದ ಶ್ರಾದ್ಧ”: ವೃಶ್ಚಿಕ ಮುನಿ

ಇವತ್ತಿನ ಜಮಾನಾದ ಜನರು ಪರಿಸರ ದಿನಾಚರಣೆ ಎಂದರೆ ವಾಟ್ಸಪ್, ಫೇಸ್ಬುಕ್, ಟ್ವಿಟ್ಟರ್,ಯೂಟುಬ್ ಇನ್ನಾವುದೋ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಗೀಚಿ, ಒಂದಿಷ್ಟು ಎಡಿಟ್ ಪೋಟೋ ಹಾಕಿ ಕೆಳಗೆ ಮೂಲೆಯಲ್ಲಿ ಇರಲಿ ನಮ್ಮದೊಂದು ಅಂತಾ ಫೋಟೋ ಹಾಕಿಕೊಂಡು ಮೆರೆದು ನಾವು ದೊಡ್ಡ ಪರಿಸರ ಪ್ರೇಮಿ ಎಂದು ಬಿಡುತ್ತೇವೆ. ಅವತ್ತು ನೆಟ್ಟು ಸಸಿ ಸಂಜೆಗೆ ಬಾಡಿ ಹೋಗಿರುತ್ತದೆ.ಪ್ರತಿ ವರ್ಷ ನೆಟ್ಟು ಜಾಗದಲ್ಲಿ ಮತ್ತೆ ಮತ್ತೆ ಸಸಿ ನೆಟ್ಟು ಹಲ್ಲು ಕಿಸಿದು ಫೋಟೋ, ಸೆಲ್ಫ್ ತೆಗೆಸಿಕೊಂಡು ಮತ್ತೆ ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿಕೊಂಡು … Read more

ಜಪಾನ್ ಕಾವ್ಯ ಪ್ರಕಾರ ಹೈಕು ಕನ್ನಡಮ್ಮನ ಮಡಿಲಲ್ಲಿ….: ರತ್ನರಾಯಮಲ್ಲ

ಕನ್ನಡ ವಾಗ್ದೇವಿಯ ಭಂಡಾರವನ್ನೊಮ್ಮೆ ಅವಲೋಕಿಸಿದಾಗ ಹಲವಾರು ವಿಸ್ಮಯಗಳು ಸಹೃದಯ ಓದುಗರನ್ನು ಜಿಜ್ಞಾಸೆಗೆ ಹಚ್ಚುತ್ತವೆ. ಅರ್ವಾಚೀನ ಸಾಹಿತ್ಯದ ಮೇಲೆ ಸಂಸ್ಕೃತ ಭಾಷೆಯ ಪ್ರಭಾವವಿದ್ದಂತೆ ಆಧುನಿಕ ಸಾಹಿತ್ಯದ ಮೇಲೆ ಆಂಗ್ಲ ಭಾಷೆಯ ಪ್ರಭಾವವಿರುವುದನ್ನು ಕಾಣುತ್ತೇವೆ. ಅದರಲ್ಲಿ ಜಪಾನಿನ ಕಾವ್ಯ ಕಲೆ ‘ಹೈಕು’ ಕೂಡ ಒಂದು. ಜಪಾನಿನ ಜನಪದ ಲೋಕದಿಂದ ಒಡಮೂಡಿದ್ದ ಹಾಗೂ ಆಸ್ಥಾನದಲ್ಲಿ ನಲೆದಾಡುತಿದ್ದ ಹೈಕುಗೆ ಭವ್ಯವಾದ ದೀರ್ಘ ಪರಂಪರೆಯಿದೆ. ಜಪಾನಿನ ಭಾಷೆ ಚೀನಿಮಯ, ಚಿತ್ರಲಿಪಿ. ನಾವು ನಮ್ಮ ಭಾಷೆಯನ್ನು ಧ್ವನಿ ಮೂಲಕ ಗುರುತಿಸಿದರೆ ಜಪಾನೀಯರು ಚಿತ್ರದ ಮೂಲಕ ಗುರುತಿಸುವರು. … Read more

ಬುದ್ಧ ಧ್ಯಾನದ “ಪ್ಯಾರಿ ಪದ್ಯ” ಗಳು: ಅಶ್ಫಾಕ್ ಪೀರಜಾದೆ

ಚುಟುಕು, ಹನಿಗವನ, ಹನಿಗವಿತೆ, ಹಾಯ್ಕು, ಶಾಯರಿ, ರೂಬಾಯಿ, ಫರ್ದ, ಶೇರ್, ದ್ವಿಪದಿ, ತ್ರಿಪದಿ, ಚೌಪದಿ ಇತ್ಯಾದಿ ಇತ್ಯಾದಿಯಾಗಿ ಕರೆಯಲ್ಪಡುವ ಸಾಹಿತ್ಯದ ವಿವಿಧ ಪ್ರಕಾರಗಳು ಸಾಸಿವೆಯಲ್ಲಿ ಸಾಗರ ಅಡಕಗೊಳಿಸಿದಂತೆ ಅತಿ ಸ್ವಲ್ಪದರಲ್ಲಿ ಬಹಳಷ್ಟು ಹೇಳುವ ಅಭಿವ್ಯಕ್ತಿ ಮಾಧ್ಯಮ. ಇಲ್ಲಿ ಕತೆ, ಕವಿತೆಯಂತೆ ಸ್ವಲ್ಪೂ ಕೂಡ ವಾಚ್ಯತೆಗೆ ಜಾಗವಿರುವುದಿಲ್ಲ. ಹೀಗಾಗಿ ಪ್ರಸ್ತುತ ಅಕ್ಕಡಿ ಸಾಲಿನ ಮೂಲಕ ಶ್ರೇಷ್ಠ ಕವಿಯಾಗಿ ಗುರುತಿಸಿಕೊಂಡಿರತಕ್ಕಂತಹ ಎ. ಎಸ್. ಮಕಾನದಾರ ಅವರ ಇತ್ತೀಚಿನ ಸಂಕಲನ ಮೇಲಿನ ಯಾವುದೇ ಒಂದು ಪ್ರಕಾರಕ್ಕೆ ಬದ್ಧವಾಗಿರದೆ, ಅಷ್ಟೂ ಪ್ರಕಾರಗಳನ್ನು ತನ್ನೊಳಗೆ … Read more

ಬದುಕಿನ ಬಂಧಕ್ಕೆ ಹೆಸರಿನ ಹಂಗು ಯಾತಕ್ಕೆ? : ಪೂಜಾ ಗುಜರನ್. ಮಂಗಳೂರು.

ರಕ್ತ ಸಂಬಂಧಗಳೆಂದರೆ ಒಂದೇ ರಕ್ತ ಹಂಚಿಕೊಂಡು ಜೊತೆಯಾಗಿ ಹುಟ್ಟಿದವರು. ಆದರೆ ಜೊತೆಯಾಗಿ ಹುಟ್ಟದೆಯೂ ಜೊತೆಯಿರುವವರಿಗೆ ಏನು ಅನ್ನುತ್ತಾರೆ. ಅವರನ್ನು ಒಡನಾಡಿಗಳು, ಅನ್ನಬಹುದು. ಒಂದು ಬಾಂಧವ್ಯ ಬೆಳೆಯಲು ಜೊತೆಯಾಗಿಯೇ ಹುಟ್ಟಬೇಕಿಲ್ಲ. ಜೊತೆಯಾಗಿಯೇ ಬದುಕಬೇಕಿಲ್ಲ. ಕೊನೆವರೆಗೂ ಜೊತೆ ಜೊತೆಯಾಗಿ ನಡೆಯುವ ಒಂದೊಳ್ಳೆ ಮನಸ್ಸು ಇದ್ದರೆ ಸಾಕು. ಅವರು ಯಾವತ್ತಿಗೂ ನಮ್ಮೊಳಗೆ ಇರುತ್ತಾರೆ. ಅಲ್ಲಿ ಯಾವುದೆ ಕಟ್ಟುಪಾಡುಗಳ ಹಂಗು ಇರುವುದಿಲ್ಲ. ನಂಬಿಕೆ ವಿಶ್ವಾಸ ಅನ್ನುವ ಚೌಕಟ್ಟಿನ ಒಳಗೆ ಬಾಂಧವ್ಯ ಗಟ್ಟಿಯಾಗುತ್ತದೆ. ಇಲ್ಲಿ ನಾವು ಜೊತೆಯಾಗಿ ಬದುಕಲು ಸಂಬಂಧಗಳಿಗೆ ಹೆಸರಿಡುತ್ತೇವೆ. ಇದು ಯಾರು … Read more

“ಕುಮಾರ” ಹೆಸರಿನ ದೊಡ್ಡ ಮನಸಿನವರು…..”: ಅಮರದೀಪ್

ಬಹುಶ: ನಾನಿದ್ದ ಗೊಂದಲದ ದಿನಗಳಲ್ಲಿ ಇವರಿಬ್ಬರ ಪರಿಚಯ ಸ್ನೇಹವಾಗದಿದ್ದರೆ ಇನ್ನಷ್ಟು ಗೊಂದಲಕ್ಕೆ ಬೀಳುತ್ತಿದ್ದೆನೇನೋ. 1998ರಲ್ಲಿ ವರ್ಗಾವಣೆಗೊಂಡು ನಾನಿದ್ದ ಕಛೇರಿಗೆ ಬಂದವರೊಬ್ಬರು ವಿಹಾರ್ ಕುಮಾರ್. ಎ. ಅಂತ. ಇನಿಷಿಯಲ್ “ಎ” ಅಂದರೆ ಏನೆಂದು ನನಗೂ ಗೊತ್ತಿರಲಿಲ್ಲ. ನಂತರ ತಿಳಿದದ್ದು, ಎ ಅಂದರೆ ಆವುಲ ಅಂತ. ತೆಲುಗಿನಲ್ಲಿ ಆವುಲ ಅಂದರೆ ಆಕಳಂತೆ. ಥೇಟ್ ಆಕಳಂತೆಯೇ ಸ್ವಭಾವದ ವ್ಯಕ್ತಿ ಅವರು. ಬಂದ ಕೆಲವೇ ದಿನಗಳಲ್ಲಿ ನನಗೆ ತುಂಬಾ ಹಳೆಯ ಸ್ನೇಹಿತರಂತಾದರು. ನೋಡಿದರೆ ನನಗೂ ಅವರಿಗೂ ಇಪ್ಪತ್ತೆರಡು ವರ್ಷಗಳ ಅಂತರದ ವಯಸ್ಸು. ಆದರೆ, … Read more

ಕೌದಿ ಕಥೆಗಳು: ಗಂಗಮ್ಮ ಮಂಡಿಗೇರಿ

ರಾಕೇಶ್ ಎಂಬ ಬಾಲಕಿ ತನ್ನ ತಂದೆ ತಾಯಿ ಜೊತೆ ಬಡ ಜೀವನವನ್ನು ನಡೆಸುತ್ತಿದ್ದ. ತಂದೆ ಹೆಸರು ಸುರೇಶ ಮತ್ತು ತಾಯಿ ಸುಮಾ. ಚಿಕ್ಕವನಿದ್ದಾಗ ತಂದೆ-ತಾಯಿ ಎಲ್ಲಾ ಕೊಟ್ಟು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು ಆರೋಗ್ಯವಂತನಾಗಿ ಬೆಳೆದ ಆದರೆ ಅವನಲ್ಲಿ ಯಾವುದೇ ಕೌಶಲ ವಾಗಲಿ ಕಲೆಯಾಗಲಿ ಬರಲಿಲ್ಲ ರಾಕೇಶ ಸೋಮಾರಿಯಾಗಿ ಬೆಳೆಯುವುದನ್ನು ಕಂಡು ತಂದೆ ತಾಯಿಯು ಮನೆಯಲ್ಲೇ ಉಳಿಸಿಕೊಂಡರು. ದಿನಕಳೆದಂತೆ ರಾಕೇಶನಿಗೆ ಬಡತನದ ಬೆಂಕಿ ತಗುಲಿತ್ತು. ಅವನಿಗೆ ಹೊಟ್ಟೆಬಟ್ಟೆಯ ಚಿಂತೆ ಶುರುವಾಯಿತು ಆದರೂ ಅವನು ಊರಿನಲ್ಲಿ ಸೋಮಾರಿಯಾಗಿ ಓಡಾಡುತ್ತಾ ತಿರುಗಾಡುತ್ತಾ ಸಮಯವನ್ನು … Read more

ಪಂಜು ಕಾವ್ಯಧಾರೆ

ಬಡಿತದ ಭಾವ ಅಲೆಗಳು ಎನ್ನೆದೆಯಾಳದಲ್ಲಿ ಜನ್ಮಿಸಿದನೂರಾರು ಬಡಿತದ ಭಾವಗಳುಧರೆಯ ಮಡಿಲಲ್ಲಿ ಚಿಗುರಿದಂತೆಹೊಸ ಹೊಸ ತುಡಿತದ ಕನಸುಗಳುಒಮ್ಮೊಮ್ಮೆ ಕುಸುಮವಾಗಿ ಅರಳಿಮತ್ತೊಮ್ಮೆ ಕಮರಿದ ಕ್ಷಣಗಳು ಒಮ್ಮೊಮ್ಮೆ ಯಾರನ್ನು ಹಂಬಲಿಸಿಅವರಿಗಾಗಿ ನವಜೀವನ ಬಯಸಿಒಲವಿನ ಚೆಲುವಿನ ಕನಸುಗಳು ಮೂಡಿಸಿಮೌನ ನಲಿಯುತ್ತಾ ಹೂವಂತೆ ಅರಳಿದರೆಮತ್ತೊಮ್ಮೆ ಮುಳ್ಳುಗಳಿಂದ ಹೃದಯಪರಚಿಸುಮ್ಮನೆ ಕುಳಿತಂತಾಗುವುದು ಅದು ಕುಂತಲ್ಲಿ ಚಿಂತಿಸುವುದುನನ್ನ ಭವ್ಯಭವಿಷ್ಯದ ಬಗ್ಗೆಒಮ್ಮೊಮ್ಮೆ ಪರದಾಡುವುದುಪಾರಿವಾಹಕ ಸೆಳೆತದ ಬಗ್ಗೆಮತ್ತೊಮ್ಮೆ ಉಗ್ರವಾಗದೆ ಅರಿವುದುಗೋಮುಖ ವ್ಯಾಘ್ರ ದ ಮಾನವರ ಬಗ್ಗೆ ಒಮ್ಮೊಮ್ಮೆ ನನ್ನದೆಯ ಅರಗಿಳಿಯುಸುಮಧುರ ಅಕ್ಷರಗಳನ್ನು ಪೋಣಿಸಿಮಾತಿನ ಮುತ್ತಿನ ಹೊಳೆ ಸುರಿಸಿದರೆಮತ್ತೊಮ್ಮೆ ಮಾಗಿಯ ಕೋಗಿಲೆಯಂತೆಮೂಕಭಾವವನ್ನು ಆವರಿಸಿಕೊಂಡುಅಕ್ಷರಗಳೋತ್ಪತ್ತಿಯನ್ನು … Read more

ಶಿಶು ಗೀತೆ: ನಾಗರಾಜನಾಯಕ ಡಿ.ಡೊಳ್ಳಿನ, ಪರಮೇಶ್ವರಪ್ಪ ಕುದರಿ

ಕತ್ರಿ ಪತ್ರಿ ಛತ್ರಿ ಪುಟ್ಟ ದಿನಾಲು ಓದುವುದು ಖಾತ್ರಿಪೂಜಿಸುವನು ದೇವರಿಗೆ ಎರಿಸಿ ಪತ್ರಿಮಳೆ ಬಂದಾಗ ತರುವನು ಛತ್ರಿ ಪರೀಕ್ಷೆ ಅಂಕಗಳಿಗೆ ಬಿದ್ದರೆ ಕತ್ರಿಅಪ್ಪ ಬಯ್ಯುವುದು ಖಾತ್ರಿಅವ್ವನು ಸಿಟ್ಟಾಗ್ತಾಳೇ ಗೊತ್ರಿ ಅಂದಿನದ ಅಂದಿಗೆ ಓದುವನು ರಾತ್ರಿಅಂಕಗಳು ಹೆಚ್ಚುವುದು ಖಾತ್ರಿಬಾಯಿಗೆ ಹಾಕ್ತಾರೆ ಮೈಸೂರ ಪಾಕ್ ರೀ .. -ನಾಗರಾಜನಾಯಕ ಡಿ.ಡೊಳ್ಳಿನ ಇಷ್ಟ – ಕಷ್ಟ ಸ್ನಾನವ ಮಾಡಲುಬಲು ಇಷ್ಟಬಿಸಿ – ಬಿಸಿ ನೀರಾದರೆಬಲು ಕಷ್ಟ! ಪಾಠವ ಓದಲುಬಲು ಇಷ್ಟಲೆಕ್ಕವ ಮಾಡಲುಬಲು ಕಷ್ಟ! ಮೊಬೈಲ್ ಗೇಮುಬಲು ಇಷ್ಟಕಬಡ್ಡಿ ಖೊ – ಖೋಬಲು … Read more

ಅಮ್ಮಾ ಎಂದರೆ ಏನೋ ಹರುಷವು: ಶಿವಲೀಲಾ ಹುಣಸಗಿ ಯಲ್ಲಾಪುರ

ಸೀರೆಯಂಚ ಹಿಡಿದು ತಪ್ಪೆಗಾಲ ಹಾಕಿ ಸೀರೆಯ ತೊಡರಿಸಿ ಕೊಂಡು ಬಿದ್ದಾಗ ಅಮ್ಮಾ‌ ಎಂದಾಗ ಗಾಬರಿಗೊಂಡು‌ ಜೋರಾಗಿ ಅಳುವ ನನ್ನ ಎತ್ತಿಕೊಂಡು ಎದೆಗಪ್ಪಿಕೊಂಡು ಪೆಟ್ಟಾಯಿತಾ ಮುದ್ದು ಎಂದು ಮುತ್ತಿಡುತ್ತ, ಬಿದ್ದ ಜಾಗವನ್ನೊಮ್ಮೆ ಇನ್ನೊಮ್ಮೆ ಬಡಿದು ಕಣ್ಣೀರು ಒರೆಸುತ್ತ ಎದೆಗವುಚಿ ಎದೆಹಾಲುಣಿಸುವಾಗ ಎಲ್ಲಿಲ್ಲದ ಸಂತಸ. ಅಮ್ಮನಿಗೆ ಅತ್ತು ಕರೆದು ಯಾಮಾರಿಸಿ ಹಾಲು ಕುಡಿವ ಕಾಯಕ ನನಗೆ ಹೊಸದಲ್ಲ. ಐದು ವರುಷ ಕಳೆದರೂ ಅಮ್ಮ ಒಮ್ಮೆಯು ಗದರಿಸಿಲ್ಲ. ಹಾಲುಣಿಸುವುದ ಬಿಟ್ಟಿಲ್ಲ. ಶಾಲೆಗೆ ಹೋಗುವಾಗ ಪುಟ್ಟ ಕಿರುಬೆರಳ ತೋರಿಸುತ್ತ ಪ್ರೀತಿ ಬರುವಷ್ಟು ಮುದ್ದು … Read more

ಕನ್ನಡದ ನವೋದಯ ಸಾಹಿತ್ಯದ ಮೇಲೆ ಡಾ. ಬಿ.ಎಂ. ಶ್ರೀಯವರ ‘ಇಂಗ್ಲೀಷ್ ಗೀತಗಳು’ ಹಾಗೂ ಡಾ. ಹಟ್ಟಿಯಂಗಡಿಯವರ ‘ಆಂಗ್ಲ ಕವಿತಾವಳಿ’ಯ ಪುಸ್ತಕಗಳ ಪ್ರಭಾವ !: ಎಚ್. ಆರ್. ಲಕ್ಷ್ಮೀ ವೆಂಕಟೇಶ್

ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ‘ನವೋದಯ ಸಾಹಿತ್ಯ’ ವೆಂದು ಹೊಸ ಸಾಹಿತ್ಯ ಪ್ರಕಾರದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ, ಛಂದಸ್ಸಿನ ಸಾನೆಟ್, ಮಾದರಿಯ ಪದ್ಯಗಳು … Read more

ಕಾಲಾಯ ತಸ್ಮೈ ನಮಃ: ಪೂಜಾ ಗುಜರನ್ ಮಂಗಳೂರು

“ಸಂಬಂಧಗಳು ಸಮಯವನ್ನು ಬೇಡುತ್ತದೆ.ಸಮಯವಿಲ್ಲದೆ ಸಂಬಂಧಗಳು ಸಾಯುತ್ತದೆ”.. ನಿಜ ಈ ಸುಂದರ ಕ್ಷಣಗಳು ಬದುಕಿಗೆ ಅದೆಷ್ಟು ಮುಖ್ಯವಾಗಿರುತ್ತದೆ. ಈ ಸಮಯ ಅನ್ನುವುದು ಎಂತಹ ಅದ್ಭುತವನ್ನು ಸೃಷ್ಟಿಸಬಲ್ಲದು. ಹಾಗೇ ಎಂದೂ ಅಳಿಯದ ವಿಚಿತ್ರವನ್ನು ಉಳಿಸಬಲ್ಲದು. ಈ ಕ್ಷಣಗಳು ಕಳೆದು ಹೋದರೆ ಮತ್ತೆ ಬರುವುದೇ? ಅದಕ್ಕೆ ಉತ್ತರ ಯಾರಲ್ಲೂ ಇಲ್ಲ. ನಿಜ ಇಲ್ಲಿ ಸಮಯಕ್ಕೆ ತುಂಬಾ ಬೆಲೆ. ಒಂದು ಕ್ಷಣ ಕಳೆದು ಹೋದರು ಅದು ಮತ್ತೆ ಬರಲಾರದು. ಆ ಸಮಯಕ್ಕೆ ಏನು ಆಗಬೇಕು ಅದು ಆಗಿಯೇ ಆಗುತ್ತದೆ. ಕಾಲವನ್ನು ತಡೆಯೋರು ಯಾರು … Read more

ಮತ್ತೆ ಉದಯಿಸಿದ ಸೂರ್ಯ: ವೆಂಕಟೇಶ ಪಿ.ಗುಡೆಪ್ಪನವರ

“ವಿಶ್ವವನ್ನೇ ತಲ್ಲಣಗೊಳಿಸಿ, ಈಗ ನಮ್ಮ ದೇಶಕ್ಕ ಗಂಡಾಂತರ ತಂದ ಕೋರೋನಾ ವೈರಸ್ ಹಾವಳಿಯಿಂದ ನಮ್ಮನ್ನು ರಕ್ಷಣೆ ಮಾಡಲು, ಸರ್ಕಾರ ರಾಜ್ಯದಲ್ಲಿ ಇಂದಿನಿಂದ ಹದಿನಾಲ್ಕು ದಿನಗಳ ವರೆಗೆ ಲಾಕ್‍ಡೌನ್ ಜಾರಿಗೊಳಿಸಿದೆ.ಅತ್ಯಗತ್ಯ ಸಾಮಗ್ರಿಗಳನ್ನು ಸಂಗ್ರಹ ಮಾಡಿಕೊಳ್ಳಿ,ಒಬ್ಬರಿಂದ ಒಬ್ಬರಿಗೆ ಬೇಗ ಹರಡುವ ಈ ವೈರಸ್ ಹೆಚ್ಚಾದರೆ, ಲಾಕ್‍ಡೌನ್ ಅವಧಿ ವಿಸ್ತರಣೆ ಸಹ ಆಗಬಹುದು,ಯಾರೊಬ್ಬರೂ ಯಾವೂದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬಾರದು, ಹೊರಗೆ ಕಾಣಿಸಿಕೊಂಡರೆ ಶಿಕ್ಷೆ ತಪ್ಪಿದಲ್ಲಿ….” ಪೋಲಿಸ್ ಜೀಪ್ ಮೇಲೆ ಹಾಕಿರುವ ಚಿಕ್ಕ ಸ್ಪೀಕರ್‍ದಲ್ಲಿನ ಮಾತುಗಳನ್ನು ಕೇಳಿಸಿಕೊಂಡ ತಿಮ್ಮಪ್ಪ ಮಾಸ್ತರ ಬೆಚ್ಚಿಬಿದ್ದನು. … Read more

ಓದುವ ಹಕೀಕತ್ತಿಗೆ ನೂಕಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುವ ಅಜ್ಜ ನೆಟ್ಟ ಹಲಸಿನ ಮರ”: ಎಂ. ಜವರಾಜ್

ಕನ್ನಡದ ಪ್ರಗತಿಶೀಲ, ನವ್ಯ, ಬಂಡಾಯ ಸಾಹಿತ್ಯಗಳ ನಾನಾ ಸ್ತರಗಳ ಪ್ರಭಾವಗಳ ಪ್ರಗತಿಪರ ಚಿಂತನಶೀಲ ಲೇಖಕ ವ್ಯಾಸರಾಯ ಬಲ್ಲಾಳರು “ನಾನು ಒಂದು ಕಥೆಯೊ ಕಾದಂಬರಿಯೊ ಬರೆಯಲು ಆತುರ ತೋರುವುದಿಲ್ಲ. ಅದು ಒಳಗೆ ಗುದ್ದಿದಾಗ ಬರೆಯಲು ತೊಡಗುವೆ. ಹಾಗೆ ಸಮಯದ ಹೊಂದಾಣಿಕೆಯೂ ಇರಬೇಕು. ಈ ಮುಂಬಯಿ ಜೀವನ ವಿಧಾನಕ್ಕು ಬೆಂಗಳೂರಿನ ಜೀವನಕ್ಕು ವ್ಯತ್ಯಾಸ ಇದೆ. ಬೆಂಗಳೂರಿನ ಜೀವನ ವಿಧಾನಕ್ಕು ಉಡುಪಿಯ ಜೀವನಕ್ಕು ವ್ಯತ್ಯಾಸ ಇದೆ. ಜೊತೆಗೆ ಉಡುಪಿಯ ಜೀವನ ವಿಧಾನಕ್ಕು ಅಂಬಲಪಾಡಿಯ ಜೀವನಕ್ಕು ವ್ಯತ್ಯಾಸವಿದೆ. ಹೀಗೆ ನಾನು ಇಲ್ಲೆಲ್ಲ ಸುತ್ತಾಡಿದ … Read more

ಪ್ರಕೃತಿಯೊಂದಿಗೆ ಅನುಬಂಧ ; ಕೋವಿಡ್ ಗೆ ನಿರ್ಬಂಧ: ಗಾಯತ್ರಿ ನಾರಾಯಣ ಅಡಿಗ

ಅದ್ಭುತ ಮತ್ತು ಅಪೂರ್ವವಾದ ಈ ಭೂಮಂಡಲ ಆನೇಕ ವೈಚಿತ್ರ್ಯಗಳಿಂದ ಕೂಡಿದ ಸಕಲ ಜೀವರಾಶಿಗಳಿಗೂ ಆಶ್ರಯತಾಣವಾಗಿದೆ. ಆದರೆ ಹದಗೆಟ್ಟಿರುವುದು ಕೇವಲ ಮಾನವನಿಂದ ಮಾತ್ರ. ಪ್ರಕೃತಿ ನೀಡುವ ಮೂಲ ಅವಶ್ಯಕತೆಗಳಾದ ನೀರು, ಆಹಾರ, ಗಾಳಿಯನ್ನು ನಂಬಿಕೊಂಡು ಸಕಲ ಚೈತನ್ಯಗಳು ಜೀವನ ನಡೆಸುತ್ತಿವೆ. ಪ್ರಕೃತಿ ಮಾತೆಯೂ ಕೂಡ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸರ್ವಸಂಕುಲಗಳನ್ನು ರಕ್ಷಿಸುತ್ತಿದ್ದಾಳೆ. ಆದರೆ ಇಂದೇಕೋ ಆಕೆ ರೌದ್ರಾವತಾರ ತಾಳಿದಂತಿದೆ. ಮನುಷ್ಯನ ಮಿತಿಮೀರಿದ ಸ್ವಾರ್ಥ ಚಟುವಟಿಕೆಗಳು ಆಕೆಯ ಸಹನೆಯನ್ನು ಕದಡಿವೆ. ಆಧುನಿಕತೆಯ ಮೊರೆಹೊಕ್ಕ ಮಾನವ ತಂಗಾಳಿಯ ವೃಕ್ಷಗಳನ್ನು ಕಡಿದು ಗಗನಚುಂಬಿ … Read more

ಏನಂತ ಸಂಭೋದಿಸಲಿ ನಾ ನಿನ್ನ?: ಮಧು ಅಕ್ಷರಿ

ಏನಂತ ಸಂಭೋದಿಸಲಿ ನಾ ನಿನ್ನ? ಇದೇ ಪ್ರಶ್ನೆಯೊಂದಿಗೆ ಅದೆಷ್ಟು ಪತ್ರಗಳು ನಿನ್ನ ಮನೆಯಂಗಳವನ್ನಿರಲಿ, ಅಂಚೆಪೆಟ್ಟಿಗೆಯ ಮುಖವನ್ನೂ ಕಾಣದೆ, ಹರಿದು ಬರಿದಾಗಿ ಕಸದ ಬುಟ್ಟಿಯಲ್ಲಿ ಮೋಕ್ಷ ಪಡೆದಿವೆಯೋ? ಸಿಕ್ಕಿಬೀಳುವ ಭಯಕ್ಕೆ ಹೆದರಿ, ಅವಶೇಷವನ್ನೂ ಬಿಡದಂತೆ ಸುಟ್ಟು ಸಂಸ್ಕಾರ ಮಾಡಿದ್ದೂ ಆಯ್ತು. ಅಲ್ಲಿಗೆ ಎದೆಯಲ್ಲೋ, ತಲೆಯಲ್ಲೋ, ಅಸಲು ಸರಿಯಾದ ವಿಳಾಸವಿಲ್ಲದೇ, ನನ್ನಲ್ಲಿ ಉದಯಿಸಿದ ನವಿರಾದ ಭಾವನೆಗಳಿಗೆ ಕಾರಣನಾದ ನಿನ್ನ ಪರಿಚಯಿಸುವ ಮೊದಲೇ ಸಂಸ್ಕಾರವಾದದ್ದಾಯಿತು. ಮತ್ತೆ ಕುಳಿತಿರುವೆ ಉಕ್ಕಿಬರುವ ಭಾವಗಳ‌ ಅದುಮಿಡಲಾಗದೇ. ನಿನ್ನೆದೆಗೆ ತಲುಪಿಸಿ ನಿರುಮ್ಮಳವಾಗಿ ಬಿಡುವ ಹಂಬಲದಿಂದ. ವಾಟ್ಸಪ್, ಟಿಂಡರ್, … Read more

ಮಾತಾಡು ಓ ಗೆಳೆಯಾ… ಮಾತಾಡು: ಸಹನಾ ಕಾಂತಬೈಲು

ಮಾತಾಡು ಓ ಗೆಳೆಯಾ… ಮಾತಾಡು ಇದು ನನ್ನ ಮೊದಲ ಪ್ರೇಮ ಪತ್ರ. ನೀನು ನನ್ನ ಜೀವದ ಜೀವವಾದರೂ ನಾನು ನಿನಗೆ ಇದುವರೆಗೆ ಒಂದೂ ಪತ್ರ ಬರೆಯಲಿಲ್ಲ. ಬರೆಯುವ ಅಗತ್ಯವೇ ಬಿದ್ದಿರಲಿಲ್ಲ. ಏಕೆ ಗೊತ್ತ? ನೀನೇ ಆಗಾಗ ನನಗೆ ಫೋನ್ ಮಾಡುತ್ತಿದ್ದೆ. ಮೆಸ್ಸೇಜ್ ಮಾಡುತ್ತಿದ್ದೆ ಮತ್ತು ನನ್ನನ್ನು ತುಂ…….ಬ…… ಪ್ರೀತಿ ಮಾಡುತ್ತಿದ್ದೆ. ನಿನ್ನ ಪ್ರೇಮದಲ್ಲಿ ಮೀಯುತ್ತಿದ್ದ ನನಗೆ ಪತ್ರ ಬರೆಯುವ ಅವಶ್ಯಕತೆಯೇ ಬರಲಿಲ್ಲ. ಈ ವರ್ಷದ ಮುನ್ನಾ ದಿನ ನನಗಿಂತ ಮೊದಲೇ ನೀನು ನನಗೆ ಹೊಸ ವರ್ಷದ ಶುಭಾಶಯ … Read more

ನಾನು ನಿನ್ನ ಹುಚ್ಚು ಪ್ರೇಮಿಯೇ ಆದರೆ…: ಜಗದೀಶ ಸಂ.ಗೊರೋಬಾಳ

ಪ್ರೀತಿಯ ಚಂದ್ರಕಲಾ, ಹುಡುಕುತ್ತಾ ಹೋದ ನನ್ನಂತವನಿಗೆ ನಿನ್ನಂತ ಚೆಲುವೆ ಸಿಕ್ಕಿರಲಿಲ್ಲ.ಎಷ್ಟು ಹುಡುಕಿದರೂ ನನಗೆ ನಿನ್ನಂತ ರೂಪವತಿ ದರ್ಶನವಾಗಿರಲಿಲ್ಲ.ಹೃದಯದ ಬಡಿತ ನಾಟ್ಯವಾಡಿದೆ ಪ್ರೇಮದ ಮೊಗ್ಗು ಚಿಗುರಿದೆಕನಸೊಂದ ಕಟ್ಟಿರುವೆ ಕೊಲ್ಲದಿರು ಗೆಳತಿ ಒಲವ ಸುಧೆಯನು ಹರಿಸು ಬಾ. ನಿನ್ನ ಕಣ್ಣೋಟದ ಬಾಣ ನನಗೆ ತಾಕಿದಾಗಿನಿಂದ ನಾನು ನಿನ್ನ ಸೌಂದರ್ಯವೆಂಬ ಸವಿಯನ್ನು ಸವಿಯುತ್ತಾ ಹುಚ್ಚನಂತಾಗಿದ್ದೇನೆ. ನಿನ್ನ ಬೊಗಸೆ ಕಂಗಳ ಸೌಂದರ್ಯಕ್ಕೆ ಬೇರಿಲ್ಲ ಕಣೆ ಸಾಟಿ. ನನ್ನ ಹೃದಯ ಗೆದ್ದ ಚೆಂದದ ಚೆಲುವೆ ನೀನು. ಸಾವಿರ ಹೂಗಳ ಚೆಲುವು ನಿನ್ನ ಸೌದರ್ಯದ ಮುಂದೆ … Read more

ಪುಟ್ಟ ಕಾಫಿ ಕಪ್ ನಲ್ಲೂ ಕಡಲಷ್ಟು ಸ್ವಾದವಿದೆ: ಕಿರಣ ದೇಸಾಯಿ

ನನ್ನೊಲವಿಗೆ….ಏನೆಂದು ಸಂಬೋಧಿಸಲಿ….? ಜಾನು, ಡಿಯರ್, ಹೃದಯದ ಒಡತಿ.. ಮುದ್ದು ಗೆಳತಿ.. ಪ್ರೇಮಪತ್ರಕೆ ಒಕ್ಕಣೆ ಬೇಕೆ ? ಒಲವಿದ್ದರಷ್ಟೆ ಸಾಕಲ್ಲವೇ.. ? ಹೌದು ಶಾಲೆಯಲ್ಲಿ ಪತ್ರಲೇಖನಗಳ ಕಲಿಸುತ್ತಾರೆ ಅದಕೊಂದಿಷ್ಟು ನಿಯಮಗಳು ಅದಕ್ಕೆ ಮಾರ್ಕ್ಸು ಪ್ರೇಮಪತ್ರಕ್ಕೆನು ನಿಯಮವಿಲ್ಲ ಒಲವು ತುಂಬಿ ಬರೆದ ಪದಗಳೆ ಇಲ್ಲಿ ಅಂಕವನ್ನು ನಿರ್ಧರಿಸುತ್ತವೆ…ಆ ಅಂಕ ಕೊಡುವ “ಸ್ಟ್ರಿಕ್ಟ ಟೀಚರ್” ನನಗಿಗ.. ನನ್ನೊಲವಿನ ಹೋಮವರ್ಕು ನಿನ್ನ ಮುಂದೆ ಹಿಡಿದು ನಿಂತಿರುವೆ ನಿನ್ನ ವಿಧೇಯ ವಿದ್ಯಾರ್ಥಿಯಂತೆ.. ಓದು ಅಂಕನೀಡು… ಹಾಹಾ..ವಿಷಯಕ್ಕೆ ಬರ್ತಿನಿ… ಬೇಸಿಗೆಯ ಬಿಸಿಲಿಗೆ ಮಾಡಿಟ್ಟ ಅಟ್ಟದ ಮೇಲೆ … Read more

ವಂದನೆಗಳು ನಿನಗೆ ವಂದನೆಗಳು: ಲಕ್ಷ್ಮೀಬಾಯಿ ಅಪ್ಪನಗೌಡ ಪಾಟೀಲ

ನಿನ್ನ ಹೃದಯದರಸಿಯ ವಂದನೆಗಳು ನಾನು ನಿನ್ನ ಕುರಿತಾಗಿ ಬರೆದದ್ದು, ಏಳನೇ ತರಗತಿಯಲ್ಲಿ ಓದುತ್ತಿದ್ದಾಗ. ವಯಸ್ಸು ಅಂತಹದ್ದಲ್ಲ ಮನಸ್ಸು ಬಯಸಿರಲಿಲ್ಲ, ಬರೆದ ಸಾಲುಗಳು ನನಗೆ ವಿಚಿತ್ರವೂ, ಬರೆದವಳು ನಾನೇನ? ಎನ್ನುವಂತಿದ್ದವು. ಯಾರ ಕಣ್ಣಿಗೂ ಬೀಳ ಬಾರದು ಎಂದು ಮುಚ್ಚಿ ಮುಚ್ಚಿ ಇಟ್ಟರೂ, ಬರೆದ ಸಾಲುಗಳು ತಾವೇ ತೆರೆದು ಕೊಳ್ಳು ತ್ತಿವೆ ಎನ್ನುವಂತೆ ಭಾಸವಾಗುತ್ತಿತ್ತು. ಗೆಳತಿಯರು ಸುಮ್ಮನೆ ಇದ್ದಾರೆ, ಮುಚ್ಚಿ ಇಟ್ಟದ್ದನ್ನು ಕೆಣಕಿ ತೆಗೆಯುವ ಗಟ್ಟಿಗಿತ್ತಿಯರು. ತೆಗೆದು ಓದಿ ನನ್ನನ್ನು ನಿನ್ನನ್ನು ಹೋಲಿಕೆ ಮಾಡಿ ಜೋಡಿ ಮಾಡಿಬಿಟ್ಟರು. ಅಷ್ಟಕ್ಕೂ ನಿನ್ನನ್ನು … Read more

ಒಲವ ಮುಗಿಲೊಳಗೆ ಪ್ರೀತಿ ನುಡಿದ ಕಾವ್ಯ: ಅನಿತಾ ಪಿ ತಾಕೊಡೆ

ಪ್ರೀತಿಯ ಪುಟ್ಟ… ಬದುಕಿನ ಭಾವಗತಿಯಲಿ ಬಿಡದೆ ಕಾಡುವವನ ಎಂದು ಕಾಣುವೆನೆಂದು ಕಾದುಕೊಂಡಿರುವಾಗ ಅಂದು ಮೊದಲ ಬಾರಿ ನೀನು ಬಳಿಸಾರಿ ಬಂದೆ. ಹಿಂದೆಂದೂ ಮೂಡದ ಒಲವೊಂದು ಅನುವಾದಾಗ, ನಿನ್ನ ಹಿರಿತನವನು ಮರೆತು ನನ್ನ ಮಗುತನವನೇ ಪೆÇರೆದು ಇತಿಮಿತಿಯ ರೇಖೆಗಳಿಂದ ಮುಕ್ತವಾಗಿ ಹಕ್ಕಿ ಹಾಡನು ಮನಬಿಚ್ಚಿ ಹಾಡಿದಾಗಲೆಲ್ಲಾ ನೀನು ಕೇಳುತ್ತಿದ್ದುದೊಂದೇ ‘ಎಲೈ ಮುದ್ದು ಬಂಗಾರಿ ನಾನೆಂದರೆ ನಿನಗ್ಯಾಕೆ ಇಷ್ಟೊಂದು ಪ್ರೀತಿ…’ ಆಗ…ನನ್ನಾಲಯದಲ್ಲಿ ನೀನು ಇನ್ನಷ್ಟು ಪ್ರಕಾಶವಾಗುತ್ತಿದ್ದೆ. ಬೆಳ್ಳನೆ ಹೊಳಪು ಕೇಸರಿ ಕದಪಿನಲಿ ರಂಗು ಮೂಡಿ ನಿನ್ನಿರುವಿನಲಿ ಇನಿತಿನಿತಾಗಿ ಕರಗುತ್ತಲೇ ‘ನಾನೆಂದಿಗೂ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 74 & 75): ಎಂ. ಜವರಾಜ್

-೭೪- ಸೂರ್ಯ ಮುಳುಗ ಹೊತ್ತು ಆ ಆಳು ತ್ವಾಟ್ದಲ್ಲಿ ಓಡಾಡ್ತಿದ್ನಆ ಆಳ್ನೆಡ್ತಿ ತಿಗುನ್ ಗರಿ ಕಟ್ಗಂಟುತಲಮ್ಯಾಲ ಹೊತ್ಗಂಡು ನಡ್ದಂಗಾಯ್ತು ಈ ಅಯ್ನೋರುಆ ಮುಳುಗ ಸೂರ್ಯನ್ ಕಡಕಣ್ಣಾಡುಸ್ತಆ ಆಳ್ಗ ಸನ್ನ ಮಾಡುದ್ರು ಆ ಆಳುಆ ಸನ್ನುಕ್ಕಒಂದೇ ದಾಪ್ಗ ಓಡ್ದ* ಆ ಮಾರ ನನ್ನ ಹದ ಮಾಡಿಈ ಅಯ್ನೋರ್ ಪಾದ್ಗ ಮೆಟ್ಸಿ‘ಹೆಂಗಿದ್ದು ಅಳಿ ಜೋಕಗಿದ್ದವ’ ಅಂತಂದುಒಂದೇಡ್ ತಿಂಗ್ಳೇ ಆಗಿಅವತ್ತಿಂದ ಇವತ್ಗೂಅವುನ್ ಸುಳುವೆ ಕಾಣಿ* ಸೂರ್ಯ ಮುಳುಗಿಕತ್ಲು ಕವಿಕಂಡುಆ ಹೊತ್ಲಿಅದ್ಯಾರ ಹತ್ತಾರ್ ಜನ ಮಾತಾಡ್ತಬೇಲಿ ನೆಕ್ಕಂಡು ಬಂದಂಗಾಯ್ತು ಈ ಅಯ್ನೋರು ನಗ್ತ … Read more

ಪಂಜು ಕಾವ್ಯಧಾರೆ

ನಿನ್ನ ಅಮೃತಬಳ್ಳಿ ಪ್ರೀತಿ ತಟ್ಟಿ ಮಾತಾಡಿಸುವ ಮಾತುಗಳುನನ್ನೊಳಗನ್ನುಮೌನವಾಗಿಸಿಬಿಟ್ವಿವೆತಟ್ಟಿದ್ದು ಎಬ್ಬಿಸಕ್ಕೋ, ಬಗ್ಗಿಸಕ್ಕೋಅದು ನನಗೆ ತಿಳಿಯಬಾರದೂ ಕೂಡನಾನಂತೂ ಮೌನಿಯಾಗಿಯೇ ಇರುವೆ. ಬದುಕಿನ ಬರಗಾಲಕ್ಕೆಒಣಗಿದ ಮನದಲ್ಲಿಮೊಣದೊಲೆಯಷ್ಟು ಬೆಂಕಿಯತ್ತಿದ್ದು ನಿಜ;ಎದುರಿದ್ದಿದ್ದು ಮಂಜುಗಡ್ಡೆಯಾದ ನೀನು ಮಾತ್ರವೇ.ಆ ಅಗ್ನಿಜ್ವಾಲೆಯಲ್ಲಿ ಅನ್ನವನ್ನುಬೇಯಿಸಿಕೊಂಡವರೆಷ್ಟೋ ಕಾಣೆ,ತಣಿಸಿದ್ದು ವರುಣದೇವನತೀರ್ಥವಾದ ನಿನ್ನಕಣ್ಣೀರು. ಮತ್ತೆ ಈ ಮನದನೆಲದೊಳಗೆಪ್ರೀತಿಯ ಬೀಜಗಳನ್ನು ಉತ್ತಿದ್ದೇನೆಅವುಗಳ ಫಸಲಿಗಾಗಿನಿನ್ನ ಪ್ರೇಮದ ಮೀಮಾಂಸೆಯವ್ಯವಸಾಯವನ್ನು ಭರಿಸಿಕೊಳ್ಳಲುಈ ಮನದಮಣ್ಣು ಹಾತೊರೆಯುತ್ತಿದೆ,ಭಾರೀ ಭಾರಿ ಫಸಲಂತೂನನಗೇ ಬೇಡವೆ ಬೇಡಅತೀಯಾಗಿದ್ದು ಮತ್ತೆಅದೇ ದಿಕ್ಕುತಪ್ಪಿದ ಲೋಕದಸಿಂಹಾಸನಕ್ಕೆ ನನ್ನಅಧಿಪತಿಯಾಗಿಸಬಹುದು. -ಸತೀಶ ಜೆ ಜಾಜೂರು(ಸಜಲ) ನನ್ನವನು.. ಇದ್ದರೂ ಇರಬಹುದೇನೋ ಅವಳಂತೆ ಇವನುಪ್ರೀತಿ ,ಪ್ರೇಮಕೆ ಒಂಚೂರು … Read more

ಗಜಲ್

ಗಜಲ್ ಪ್ರೇಮ ಮದಿರೆಯ ನಶೆಗೆ ಸಿಹಿಮುತ್ತುಗಳೇ ಸಾಕ್ಷಿ ಸಾಕಿಮುತ್ತಿನ ಮತ್ತಿಗೆ ಜೋಲಾಡುತ್ತಿರುವ ಅಕ್ಷಿಗಳೇ ಸಾಕ್ಷಿ ಸಾಕಿ ಪ್ರೀತಿ ಪ್ರೇಮಕೂ ಕಾಮದ ರೂಪ ಉಂಟೂ ಲೋಕದಲಿನಮ್ಮಿಬ್ಬರ ಪರಿಶುದ್ಧ ಪ್ರೇಮಕೆ ಈ ರಾತ್ರಿಗಳೇ ಸಾಕ್ಷಿ ಸಾಕಿ ಸೌಂದರ್ಯವ ಆಸ್ವಾದಿಸದೇ ಅನುಭೋಗಿಸುವುದು ಸಲ್ಲದುಹೃದಯಾಂತರಾಳದಲಿ ಮಿಳಿತಗೊಂಡ ಆತ್ಮಗಳೇ ಸಾಕ್ಷಿ ಸಾಕಿ ನಿನ್ನೊಲವ ಸವಿರುಚಿಯ ಉಣಬಡಿಸು ನನ್ನೆದೆಗೆನೀನಿರದ ಅನುಕ್ಷಣಗಳಿಗೆ ವಿರಹಗಳೇ ಸಾಕ್ಷಿ ಸಾಕಿ ಪ್ರೀತಿ ಎಂದರೆ ಬರೀ ದೇಹಾಕರ್ಷಣೆ ಅಲ್ಲ ‘ ಬಾಬಾ ‘ಮನಸ್ಸು ಮನಸ್ಸುಗಳ ಸಮ್ಮೀಲನಗಳೇ ಸಾಕ್ಷಿ ಸಾಕಿ -ಶಿವರಾಜ್.ಡಿ (ಚಳ್ಳಕೆರೆ) ರಾಮನ … Read more

ಶಿಶುಗೀತೆ

ಉಪ್ಪಿಟ್ಟು ಅಮ್ಮನು ಮಾಡಿದ ಉಪ್ಪಿಟ್ಟುಸವಿಯಲು ನಾಲಿಗೆ ಕಾದಿತ್ತುತಟ್ಟೆಯು ಮುಂದಕೆ ಬಂದಿತ್ತುಜೊತೆಯಲಿ ತುಪ್ಪವು ಬೆರೆತಿತ್ತು ಅಮ್ಮನು ನೀಡಿದ ಕೈತುತ್ತುದೇಹಕೆ ಬಂದಿತು ತಾಕತ್ತುನಾಲಿಗೆ ರುಚಿಯನು ನೋಡಿತ್ತುಚಪ್ಪರಿಸುತಲಿ ನಲಿದಿತ್ತು ಗಂಟಲು ಸಂತಸ ತೋರಿತ್ತುಹೊಟ್ಟೆಯು ಆಗ ತುಂಬಿತ್ತುಮನಸಿಗು ಮೆಚ್ಚುಗೆ ಆಗಿತ್ತುಅಮ್ಮನ ರುಚಿಯನು ಹೊಗಳಿತ್ತು ದೇಸು ಆಲೂರು ಇರುವೆ…ಇರುವೆ ಇರುವೆ.. ಇರುವೆಇರುವೆ ನೀ ಎಲ್ಲೆಲ್ಲೂಇರುವೆ ! ಸಕ್ಕರೆ ಡಬ್ಬಿಲೂನೀ ಇರುವೆಬೆಲ್ಲದ ಅಚ್ಚಲೂನೀ ಮೆಲ್ಲಗೆಮೆಲ್ಲುತ ಇರುವೆ ! ದಾರೀಲಿ ಸಾಗುತಲಿರೆಸಾಲು ಸಾಲಾಗಿ ನೀಶಿಸ್ತು ತೋರುತಗಂಭೀರ ನಡೆಯಲಿ ನೀಸಾಗುತ ಇರುವೆ! ಗಾತ್ರದಲಿ ನೀಚಿಕ್ಕವನಾದರೂಕಚ್ಚಿದರೆ ಚುರು – ಚುರುಇರುವೆ … Read more