ಪಂಜು ಕಾವ್ಯಧಾರೆ
ಮೂಕರೋಧನೆ ವರುಷದಿಂದ ವರುಷಕ್ಕೆಹೆಚ್ಚಿದೆ ನೇಸರನ ತಾಪಉರಿಬಿಸಿಲಿಗೆ ನಲುಗಿತಾಳ್ಮೆಯ ತಾಯಿಗೆ ಬಂದಿದೆ ಕೋಪ || ಬರದ ನೆಲದಲ್ಲಿ ಜಲವಿಲ್ಲಉಳುವ ಯೋಗಿಗೆ ಒಲವಿಲ್ಲನಿಸರ್ಗದೊಳಂತೂ ಚೆಲುವಿಲ್ಲಸೃಷ್ಟಿ ಸಂಕುಲಕ್ಕೆ ಉಳಿವಿಲ್ಲ || ಅಳಿಯುತಿದೆ ಪಾವನದ ಎಲರುಬಣಬಣಗುಟ್ಟುತಿದೆ ಹಸಿರಿನ ಉಸಿರುಒಡಲ ಕ್ಷಾಮಕೆ ವೈದ್ಯನಾರುಖಗ ಮೃಗಗಳಿಗೆ ಎಲ್ಲಿದೆ ಸೂರು? || ಗೋಳಿನ ಬಾಳೊಳಗೂ ನೀನಾದೆ ಮಾನ್ಯತೆಸಜೆಯಾದರೂ ಧರೆಯೂಡಿದೆ ನಿನಗೆ ಧನ್ಯತೆಪ್ರತಿಯೊಂದಕ್ಕೂ ನಿನ್ನದೇ ಮಾರ್ನುಡಿಬೆಲೆಯಿಲ್ಲದ ಹೊತ್ತಿಗೆಗೆ ಬೇಕಿಲ್ಲ ಮುನ್ನುಡಿ || -ಕ.ಲ.ರಘು. ಮೆಟ್ಟಿನ ಹುಡುಗ ಹತ್ತಲ್ಲದ ಹೊತ್ತಿನಲ್ಲೂಹೊಲಿಯುತ್ತಿದ್ದಾನೆ… ತಿಕ್ಕುತ್ತಿದ್ದಾನೆ …ಕಂಡವರ ಕೆರ ಹಿಡಿದ ಶೂಗಳನ್ನು.ಉರಿಬಿಸಿಲಿಗೆ ಮೈಯ್ಯೊಡ್ಡಿ,ಹರಕು ಮುರುಕಿನ … Read more