ಪ್ರಯಾಗದಲ್ಲೊಂದು ಸಂಜೆ: ಕೃಷ್ಣವೇಣಿ ಕಿದೂರ್.
ಪ್ರವಾಸದ ನಿಮಿತ್ತ ಅಲಹಾಬಾದಿಗೆ ಬಂದಿದ್ದೆವು. ಇಲ್ಲಿನ ಸುಪ್ರಸಿದ್ಧ ಪ್ರಯಾಗಕ್ಕೆ ಭೇಟಿ ಕೊಟ್ಟಾಗ ನದಿಯಲ್ಲಿ ತ್ರಿವೇಣಿ ಸಂಗಮ , ಪ್ರಯಾಗ ನೋಡಲು ಉತ್ಸುಕರಾಗಿದ್ದೆವು. ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದ ಪವಿತ್ರ ಸ್ಥಳ ಅದು. ಸಂಜೆಯ ಆರೂವರೆಯ ಸುಮಾರಿಗೆ ತಲುಪಿದೆವು. ಅಲ್ಲಿದ್ದದ್ದು ಒಂದೋ, ಎರಡೋ ದೋಣಿಗಳು. ಅವರಲ್ಲಿ ವಿಚಾರಿಸಿದಾಗ ಒಬ್ಬರು ಬರಲು ಒಪ್ಪಿದರು. ನದೀ ದಡ ನಿರ್ಜನ. ನಾವಿದ್ದ ದೋಣಿ ನೀರಿನಲ್ಲಿ ಸಾಗುವಾಗ ಬಿಳಿಯ ಸೈಬೀರಿಯನ್ ಹಕ್ಕಿಗಳು ಜೊತೆ ಜೊತೆಗೆ ಬರತೊಡಗಿದವು. ಅವಕ್ಕೆ ಬಿಸ್ಕತ್ತು, ಹಣ್ಣು ಕೊಡುವ ಅಭ್ಯಾಸವಾಗಿತ್ತು … Read more