ಪಂಜು ಕಾವ್ಯಧಾರೆ

ಆಗ – ಈಗನೀವು ಕರೆ ಮಾಡುತ್ತಿರುವ ಚಂದಾದಾರರು.. ಆಗನನ್ನ ನಿನ್ನ ನಡುವೆ ಸಂಬಂಧ ಸೃಷ್ಟಿಸಿದ್ದು ಈಈ ಸೆಲ್ ಫೋನ್ ಗೆಳತಿಈಗನನ್ನ ನಿನ್ನ ನಡುವಿನ ಮೌನಕ್ಕೆ ಕಾರಣವುಈ ಸೆಲ್ ಫೋನ್ ಗೆಳತಿತವಕಿಸುವ ಮನಸಿಗೆ ಸಮಾಧಾನವನ್ನ ನೀಡುವುದೇಈ ಸೆಲ್ ಫೋನ್ ಗಳತಿ….. ಆಗಮಾತನಾಡಲು ಮಾತುಗಳು ಸಾಲುತ್ತಿರಲಿಲ್ಲಇರುವ ಡಾಟಾ ಪ್ಯಾಕ್ ಸಾಲುತ್ತಿರಲಿಲ್ಲಪದೆ ಪದೆ ಚಾರ್ಜ್ರಿಗೂ ಅಂಟಿಕೊಂಡಿರುತ್ತಿದ್ದೆಟೈಪಿಸಿ ಟೈಪಿಸಿ ಬೆರಳುಗಳಿಗೆ ನೋವು ತಿಳಿಯುತ್ತಿರಲಿಲ್ಲದಿನ ಘಂಟೆ ಲೆಕ್ಕೆ ಮರತೆಹೋಗಿದ್ದುವುಕುಳಿತು ನಿಂತು ಅಡ್ಡಬಿದ್ದು ಕೆಳದರೂ ಸಮಯ ಸಾಲುತ್ತಿರಲಲ್ಲಿ ಈಗಮಾತನಾಡಲು ಮಾತುಗಳೆ ಇಲ್ಲಇರುವ ಡಾಟಾ ಪ್ಯಾಕ್ ಖಾಲಿ … Read more

ವ್ಯಾಘ್ರತೀರ್ಥ ಮತ್ತು ಕೆಂಚಿ ಕಟ್ಟೆ: ಜಗದೀಶ ಸಂ.ಗೊರೋಬಾಳ

ಭುವನೇಶ್ವರದಿಂದ ಇನ್ನೂರೈವತ್ತು ಮೈಲು ದೂರದಲ್ಲಿ ವ್ಯಾಘ್ರತೀರ್ಥವೆಂಬ ಪುಟ್ಟ ಹಳ್ಳಿ. ಆ ಹಳ್ಳಿಯಲ್ಲಿ ಇರುವುದೇ ಬೆರಳೆಣಿಕೆಯಷ್ಟು ಮನೆಗಳು. ಇರುವ ಮನೆಗಳಲ್ಲೂ ದುಡಿವ ಶಕ್ತಿ ಇರುವವರೆಲ್ಲ ಸಮೀಪದ ನಗರಗಳಿಗೆ ವಲಸೆ ಹೋಗಿದ್ದರು. ಬರಗಾಲದ ಬಾದೆಯಿಂದ ಬೆಂದ ಕುಟುಂಬಗಳು ಇತ್ತ ಹಳ್ಳಿಯನ್ನೂ ಬಿಡದೆ ಗತಕಾಲದ ವೈಭವವನ್ನು ನೆನೆಯುತ್ತಾ ದಿನಕಳೆಯುತ್ತಿದ್ದವು. “ಹಿಂದೆ ಈ ಊರಲ್ಲಿ ಭಯಂಕರವಾದ ಕಾಡಿತ್ತು. ಕಾಡಿನಲ್ಲಿ ಕ್ರೂರಮೃಗಗಳಿದ್ದವು. ಅಲ್ಲಲ್ಲಿ ನೀರಿನ ಹೊಂಡಗಳೂ ಸಾಕಷ್ಟಿದ್ದವು. ಊರಾಚೆ ಇರುವ ದೊಡ್ಡ ಹೊಂಡವೇ ವ್ಯಾಘ್ರತೀರ್ಥ. ಇದಕ್ಕ ಆ ಹೆಸರು ಬರಲು ಕಾರಣ ಯಾವಾಗಲೂ ಈ … Read more

ಮರೆಯಲಾಗದ ಮದುವೆ (ಭಾಗ 13): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ -೧೨- ಚಿನ್ನಪ್ಪ ಮತ್ತು ಅಯ್ಯರ್ ಮುಂಜಾನೆ ಬೇಗನೆದ್ದು ನಿತ್ಯಕರ್ಮಗಳನ್ನು ಮುಗಿಸಿ ಉಪಹಾರ ಸೇವಿಸಿ ಗೂಡೂರಿಗೆ ಹೊರಟಾಗ ಅಯ್ಯರ್ ಭಾವುಕರಾದರು. ಅಯ್ಯರ್ ಕಣ್ಣಲ್ಲಿ ನೀರಾಡಿದ್ದು ಕಂಡು ಚಿನ್ನಪ್ಪನ ಹೆಂಡತಿಗೆ ಮುಜುಗರವಾಗಿ ಕಸಿವಿಸಿಗೊಂಡಳು. ಅಯ್ಯರ್ ಚಿನ್ನಪ್ಪನ ಮಗುವನ್ನೆತ್ತಿಕೊಂಡು ಮುತ್ತಿಕ್ಕಿ ತಮ್ಮ ಮನದಾಳದಿಂದ ಒಮ್ಮೆ ಹೆಂಡತಿ ಮಗುವಿನೊಂದಿಗೆ ತಮ್ಮ ಮನೆಗೆ ಬರಬೇಕೆಂದು ಚಿನ್ನಪ್ಪನಿಗೆ ಆಗ್ರಹಮಾಡಿ ಹೇಳಿದರು. ರಾತ್ರಿ ಚಿನ್ನಪ್ಪನ ಋಣ ತೀರಿಸಲಾಗದಿದ್ದರೂ ಪಡೆದ ಉಪಕಾರಕ್ಕೆ ಪ್ರತಿಯಾಗಿ ಏನಾದರೂ ಮಾಡಬೇಕೆಂದುಕೊಂಡದ್ದು ನೆನಪಾಗಿ ಒಂದು ಕಾಗದದಲ್ಲಿ ಅವನ ವಿಳಾಸ ಬರೆದುಕೊಡುವಂತೆ ಚಿನ್ನಪ್ಪನಿಗೆ ಹೇಳಿದರು. … Read more

ಕಳೆದು ಹೋಗುವ ಸುಖ (ಭಾಗ 1): ಡಾ. ಹೆಚ್ಚೆನ್ ಮಂಜುರಾಜ್

ಗುರುತಿಸಿಕೊಳ್ಳುವುದಕಿಂತ ಕಳೆದು ಹೋಗುವುದೇ ಈ ಅಖಂಡ ವಿಶ್ವದ ಮೂಲತತ್ತ್ವವಾಗಿದೆ ಅಥವಾ ಗುರುತಿಸಿಕೊಂಡ ಮೇಲೆ ಕಳೆದು ಹೋಗುವುದೇ ಸೃಷ್ಟಿಯ ನಿಯಮವಾಗಿದೆ. ಅದು ಆಕಾಶಕಾಯವೇ ಇರಲಿ, ಜೀವಸೃಷ್ಟಿಯೇ ಇರಲಿ, ಮಾನವ ನಿರ್ಮಿತ ತತ್ತ್ವಸಿದ್ಧಾಂತಗಳೇ ಇರಲಿ, ಪದವಿ-ಪ್ರತಿಷ್ಠೆ-ಹುದ್ದೆ-ಅಧಿಕಾರ-ಅಂತಸ್ತು-ಸಾಧನೆಗಳೇ ಇರಲಿ ಎಲ್ಲವೂ ಕಾಲ ಕ್ರಮೇಣ ಕಳೆದು ಹೋಗುತ್ತವೆ ಮತ್ತು ಹಾಗೆ ಕಳೆದು ಹೋಗಬೇಕು. ಹಳತು ನಶಿಸುತಾ, ಹೊಸತು ಹುಟ್ಟುತಿರಬೇಕು. ‘ನಿದ್ದೆಗೊಮ್ಮೆ ನಿತ್ಯ ಮರಣ; ಎದ್ದ ಸಲ ನವೀನ ಜನನ’ ಎಂದಿಲ್ಲವೇ ಕವಿನುಡಿ. ಅಂದರೆ ಅಸ್ತಿತ್ವವು ವ್ಯಕ್ತಿತ್ವವನ್ನು ಹೊಂದಿದ ಮೇಲೆ ಸಾವು ಶತಸಿದ್ಧ ; … Read more

ಟೆನಿಸನ್‍ನ ಎರಡು ಕವಿತೆಗಳು: ನಾಗರೇಖಾ ಗಾಂವಕರ

ಗ್ರೀಕ ಮಹಾಕವಿ ಹೋಮರನ ಒಡೆಸ್ಸಿಯಲ್ಲಿ ಬರುವ ದಿ ಗ್ರೇಟ್ ಗ್ರೀಕ್ ಹೀರೋ Ithacaದ ರಾಜ ಒಡಿಸೆಸ್ ಅಥವಾ ಯೂಲಿಸಿಸ್‍ನ ಸಮುದ್ರಯಾನದ ರೋಚಕ ಅನುಭವದ ಕಥೆಯನ್ನೆ ಹಾಡುವ ಟೆನಿಸನ್‍ನ “ದಿ ಲೋಟಸ್ ಇಟರ್” ಕವಿತೆ ಮೊದಲು ಪ್ರಕಟವಾದದ್ದು 1832ರಲ್ಲಿ. ಟ್ರೋಜನ್ ಯುದ್ಧದ ನಂತರ ಯೂಲಿಸಿಸ್ ತನ್ನ ಗ್ರೀಕ್ ಸೈನಿಕರೊಂದಿಗೆ ಮರಳಿ ನಾಡಿಗೆ ವಾಪಸಾಗುತ್ತಿದ್ದ ದಾರಿಯಲ್ಲಿ ಮಾರ್ಗಮಧ್ಯೆ ಭೀಕರ ಬಿರುಗಾಳಿಗೆ ಸಿಕ್ಕು ತತ್ತರಿಸತೊಡಗಿದರು. ಜಲಮಾರ್ಗದ ಉದ್ದಗಲಕ್ಕೂ ಅಲೆದಾಡಿದರು. ಒಂಬತ್ತು ದಿನಗಳು ಹಾಗೂ ಹೀಗೂ ಸುತ್ತಿ ಸುಳಿದು ಹತ್ತನೇಯ ದಿನ ನಡುಗಡ್ಡೆಯೊಂದು … Read more

ಈ ಪಟ್ಟಣಗಳಿಗೆ ಏನಾಗಿದೆ?: ಗೌರಿ ಚಂದ್ರಕೇಸರಿ.

ಬಾಲ್ಯದಲ್ಲಿ ನಾವು ಕಂಡುಂಡ ಪಟ್ಟಣಗಳು ಈಗಿನಂತಿರಲಿಲ್ಲ. ಥೇಟ್ ಆದಿ ಕವಿ ಪಂಪ ಬನವಾಸಿಯನ್ನು ಬಣ್ಣಸಿದ ರೀತಿಯಲ್ಲಿ ಕಾಣಿಸುತ್ತಿದ್ದವು. ಹಸಿರುಡುಗೆ ತೊಟ್ಟ ಪ್ರಕೃತಿ, ಕೀ ಕೀ ಎನ್ನುವ ಹಕ್ಕಿಗಳ ಕಲರವದೊಂದಿಗೆ ತೆರೆದುಕೊಳ್ಳುತ್ತಿದ್ದ ಬೆಳಗು, ಮನೆ ಮನೆಯ ಮುಂದೆಯೂ ಬೃಂದಾವನ, ಅಲ್ಲಿ ಚುಕ್ಕೆ ಇಟ್ಟು ರಂಗೋಲಿ ಎಳೆಯುತ್ತಿರುವ ಹೆಂಗಳೆಯರು, ರೇಡಿಯೋದಿಂದ ಹೊರ ಹೊಮ್ಮುತ್ತಿದ್ದ “ಈ ಮಣ್ಣು ನಮ್ಮದು ಈ ಗಾಳಿ ನಮ್ಮದು, ಕಲಕಲನೆ ಹರಿಯುತಿಹ ನೀರು ನಮ್ಮದು” ಎಂಬಂತಹ ಹಾಡುಗಳು, ಬೀದಿ ನಲ್ಲಿಗಳಲ್ಲಿ ನೀರು ಹಿಡಿಯುತ್ತ ನಿಂತ ಗಂಡಸರು, ಹೆಂಗಸರು, … Read more

ಸಂಬಂಧಗಳು: ವೈ. ಬಿ. ಕಡಕೋಳ

ಆ ದಿನ ಎಂದಿನಂತಿರಲಿಲ್ಲ. ವಿಜಯ ಪೂರ್ಣ ಆಯಾಸಗೊಂಡಿದ್ದ. ಮನೆಯಲ್ಲಿ ಕುಟುಂಬದ ಎಲ್ಲ ಸದಸ್ಯರಿಗೂ ಇವರ ಆರೋಗ್ಯದ ಕುರಿತು ಚಿಂತೆ ಆರಂಭವಾಗಿತ್ತು. ತಮ್ಮ ಪುಟ್ಟ ಹಳ್ಳಿಯಲ್ಲಿನ ವೈದ್ಯರು ‘ನಿಮೋನಿಯ’ ಆಗಿದೆ ಎಂದು ಮೂರು ದಿನಗಳ ಕಾಲ ಸೈಲಾಯಿನ್ ಹಚ್ಚಿದ್ದರು. ಆರೋಗ್ಯ ಬಿಗಡಾಯಿಸತೊಡಗಿತು. ಪಕ್ಕದ ಶಹರಕ್ಕೆ ಹೋದರೆ ಅವರು ಕೋವಿಡ್ ಟೆಸ್ಟ ಮಾಡಿಸಿಕೊಂಡು ಬರಲು ಸೂಚಿಸಿದರು. ಅಲ್ಲಿ ‘ನೆಗೆಟಿವ್’ ಬಂದರೂ ‘ನ್ಯೂಮೇನಿಯ’ ಇದೆ ಎಂದು ಗೊತ್ತಾದ ಮೇಲೂ ತಮ್ಮ ಆಸ್ಪತ್ರೆಯಲ್ಲಿ ಸೌಲಭ್ಯಗಳು ಇಲ್ಲ ನಗರ ಪ್ರದೇಶದ ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 49 & 50): ಎಂ. ಜವರಾಜ್

-೪೯-ಬೆಚ್ಚಿದೆಬೆಚ್ಚಿ ಅಂಗಾತ ಕೆಳಕ್ಕೆ ಬಿದ್ದೆದಡದಡದಡಗುಟ್ಟೊ ಗುಡುಗಿಗೆ.‘ಹ್ಹಹ್ಹಹ್ಹಹ್ಹ…ಅನ್ನೊ ಗಹಗಹಿಸೊ ನಗುವೊಂದು.ಅದುರಿದೆ ನಡುಗಿದೆಸೊಂಯ್ಯನೆ ಎರಗಿದ ಮಿಂಚಿಗೆಕಣ್ಣು ಕುಕ್ಕಿತುತಲೆ ಎತ್ತಿದೆಎದುರಿಗೆ ಬೀದೀಲಿಬೆಂಕಿಯ ಜ್ವಾಲೆ ಆಳೆತ್ತರಕೆ‘ಹ್ಹಹ್ಹಹ್ಹ..’ ಮೆಟ್ಟಿನ ನಗು ನನಗೆ ದಿಕ್ಕು ತೋಚದಾಯ್ತುಈ ಮೆಟ್ಟಿನ ಕತೆಎಲ್ಲೊ ಆಗಿ ಎಲ್ಲೊ ಹೋಯ್ತಿದೆ ಈ ಮೆಟ್ಟು‘ಅಲ್ಲಈ ಮಿಂಚ್ಗಈ ಗುಡುಗ್ಗಬೆಚ್ಚಿ ನಡ್ಗದೇನ’ಅಂತ ಹಂಗಿಸೋ ಹಾಗೆ ಅಂತು ನಾನು,‘ನಿನ್ ಕತೆನೆ ಅರ್ಥ ಆಗ್ತಿಲ್ಲಎಲ್ಲೊ ಹೋಗಿ ಎಲ್ಲೊ ಬಂದನಾ ಬೆಚ್ಲುಬಾರ್ದು ಬೆದುರ್ಲುಬಾರ್ದು’ಅಂತಂದೆ.ಅದ್ಕ ಅದು‘ನೀನು ಬೆಚ್ಚಿ ಬೆದ್ರದ ಆಡ್ನಿಲ್ಲಇನ್ನು ಏನಿಲ್ಲ ಯತ್ತಿಲ್ಲಈಗ್ಲೆ ಬೆಚ್ಚದ ಬೆದ್ರದಾ ಅಂದ್ರೇನಾ’ಅಂತ ಮುಲಾಜಿಲ್ದೆ ಕಿಚಾಯ್ಸದಾ..ಥೂ ಅನ್ಸಿ ನಾನೂ … Read more

ಒತ್ತಡಮುಕ್ತ ಜೀವನ ಸಾಧ್ಯವೇ ?: ಗಾಯತ್ರಿ ನಾರಾಯಣ ಅಡಿಗ

ಇಂದಿನ ವಿಜ್ಞಾನ ತಂತ್ರಜ್ಞಾನ ಯುಗದಲ್ಲಿ ಒತ್ತಡಯುಕ್ತ ಜೀವನವನ್ನು ನಾವು ನಮಗೆ ಅರಿವಿಗೆ ಬಂದೋ ಬಾರದೆಯೋ ಅದನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದೇವೆ. ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದೇವೆ. ಸ್ವಲ್ಪ ಹೊತ್ತು ಕುಳಿತು ಕಾಫಿ ಹೀರಲು ನಮ್ಮಲ್ಲಿ ಸಮಯವಿಲ್ಲ. ತಂದೆ – ತಾಯಿ, ಬಂಧು – ಬಳಗವನ್ನು ಹತ್ತಿರದಿಂದ ಮಾತನಾಡಲು ನಮ್ಮ ಉದ್ಯೋಗ ಬಿಡುತ್ತಿಲ್ಲ. ಮೊಬೈಲ್ ನಲ್ಲಿ ನಾವು ಗಂಟೆಗಟ್ಟಲೆ ವ್ಯವಹರಿಸುತ್ತೇವೆ. ಆದರೆ ನಮ್ಮ ಮಕ್ಕಳ ಜೊತೆ, ಅವರ ಆಸಕ್ತಿ – ಅಭಿರುಚಿಗಳೊಂದಿಗೆ ಬೆರೆಯುವ ಆಸ್ಥೆ ನಮಗಿಲ್ಲ. ಅವರ ಅನುಭವಗಳನ್ನು ನಮ್ಮೊಡನೆ … Read more

ಹಗಲು ದರೋಡೆಕೋರರು…: ಗುರುಪ್ರಸಾದ ಕುರ್ತಕೋಟಿ

ನಾನು ಮದ್ಯಾಹ್ನ ಮಲಗೋದೇ ಅಪರೂಪ. ಆದರೂ ಅವಕಾಶ ಸಿಕ್ಕಾಗ ಬಿಡೋಲ್ಲ. ನಾನು ಹಾಗೆ ಮಲಗಿದಾಗ ನನ್ನ ಫೋನಿಗೆ ನನ್ನ ಮೇಲೆ ತುಂಬಾ ಅಸೂಯೆ! ಅವತ್ತೂ ಬೊಬ್ಬೆ ಹೊಡೆದು ನನ್ನ ಬಡಿದೆಬ್ಬಿಸಿತ್ತು. ನಮ್ಮ “ಬೆಳೆಸಿರಿ”ಯಲ್ಲಿ ಕೆಲಸ ಮಾಡುತ್ತಿದ್ದವ ಮಾಡಿದ ಫೋನ ಅದು. ಕಟ್ ಮಾಡಿದರೂ ಮತ್ತೆ ಮತ್ತೆ ಮಾಡತೊಡಗಿದ. ಒಂದಿಷ್ಟು ತರಕಾರಿಗಳ ಡೆಲಿವರಿ ಮಾಡಲು ನನ್ನ ಸ್ಕೂಟರ್ ನಲ್ಲಿ ಯೆಲಹಂಕಾದ ಬಳಿಯ ಒಂದು ಅಪಾರ್ಟ್ಮೆಂಟ್ ಗೆ ಹೋಗಿದ್ದ. ಆಗ ತಾನೇ ಜೋಂಪು ಹತ್ತಿದ್ದ ಬ್ರಾಹ್ಮಣನ ನಿದ್ದೆ ಭಂಗ ಮಾಡುವುದು … Read more

ಬರಹ – ನೂರು ನೂರು ತರಹ: ಡಾ. ಹೆಚ್ಚೆನ್ ಮಂಜುರಾಜ್

ಇತ್ತೀಚೆಗೆ ನನ್ನ ಪರಿಚಿತರೊಬ್ಬರು ‘ಬರೆಯುವುದು ಹೇಗೆ?’ ಎಂದು ಕೇಳಿಬಿಟ್ಟರು. ಇದುವರೆಗೂ ಇಂಥ ಪ್ರಶ್ನೆಯೊಂದನು ನಾನು ಕೇಳಿರಲೂ ಇಲ್ಲ; ಕೇಳಿಕೊಂಡಿರಲೂ ಇಲ್ಲ. ಅಚ್ಚರಿಯೆಂದರೆ ಏನೂ ಮಾತಾಡದೆ ಸುಮ್ಮನೆ ನಕ್ಕುಬಿಟ್ಟೆ. ಆಮೇಲನಿಸಿತು, ಗಂಭೀರನಾದೆ. ಇದು ಬರೆಹವೊಂದು ಉದಿಸುವ ಮುಹೂರ್ತ. ಅದನೇ ಬರೆದು ಬಿಡೋಣ ಎಂದು ಕುಳಿತು ಬರೆಯುತ್ತ ಹೋದೆ. ಈ ಬರೆಹ ಜನಿಸಿತು. ಅಂದರೆ ಬರೆಹದ ಪ್ರಾಥಮಿಕ ಲಕ್ಷಣವೇ ಕುಳಿತು ಬರೆಯುತ ಹೋಗುವುದು ಅಷ್ಟೇ. ಪರೀಕ್ಷೆಯಲ್ಲಿ ಮೂರು ಗಂಟೆಗಳ ಕಾಲ ಬರೆಯುತ್ತೇವೆ. ಹೇಗದು ಸಾಧ್ಯವಾಯಿತು? ಏಕಾಗ್ರತೆ, ಉದ್ದೇಶ, ಮನೋಭಾವ ಮತ್ತು … Read more

ದಯೆಯ ಯಾದೃಚ್ಛ ಕ್ರಿಯೆ (Random act of kindness): ದಿನೇಶ್ ಉಡಪಿ

ಶುಕ್ರವಾರ ಕಾಲೇಜಿನ ಕೆಲಸಕ್ಕೆ ರಜೆ ಹಾಕಿಕೊಂಡು, ಕೆಲವು ಅಗತ್ಯ ಕೆಲಸಕ್ಕಾಗಿ ಕೆ.ಆರ್.ನಗರಕ್ಕೆ ಹೋಗಬೇಕಿತ್ತು. ಬೆಳಗಿನಿಂದಲೇ ಮೋಡ ಕವಿದ ವಾತಾವರಣವಿತ್ತು, ಅತಿಯಾದ ತೇವಾಂಶದ ಕಾರಣ ವಿಪರೀತ ಶೆಕೆಯೂ ಇತ್ತು. ಮಧ್ಯಾಹ್ನದ ಹೊತ್ತಿಗೆ ಎಲ್ಲಾ ಕೆಲಸ ಮುಗಿಸಿಕೊಂಡು ಮೈಸೂರಿನತ್ತ ಹೊರಟೆ. ಬಿಳಿಕೆರೆ ಹತ್ತಿರ ಬರುವಷ್ಟರಲ್ಲಿ ಮಳೆ ಸುರಿಯತೊಡಗಿತು, ಕುಂಭದ್ರೋಣ ಮಳೆ ಅಂತಾರಲ್ಲ ಹಾಗೆ. ಕಾರಿನ ವೈಪರ್ ಪೂರ್ತಿ ವೇಗದಲ್ಲಿ ನೀರನ್ನು ತಳ್ಳುತ್ತಿದ್ದರೂ ರಸ್ತೆ ಕಾಣದಷ್ಟು ಮಳೆ. ಬಹುತೇಕ ಎಲ್ಲ ವಾಹನಗಳೂ ರಸ್ತೆ ಪಕ್ಕ ಹಾಕಿಕೊಂಡು ನಿಂತಿದ್ದರು. ನನ್ನ ಚಿರಪರಿಚಿತ ರಸ್ತೆ … Read more

ಕೋವಿಡ್ ಕಲಿಸಿದ ಪಾಠ: ಗೀತಾ ಜಿ ಹೆಗಡೆ ಕಲ್ಮನೆ.

ಮೊನ್ನೆ ಒಂದಿನ ಸಾಯಂಕಾಲ ಆಗುತ್ತಿದ್ದಂತೆ ಗಂಟಲು ಸ್ವಲ್ಪ ಉರಿ, ನೆಗಡಿಯಾಗುವಾಗ ಆಗುತ್ತಲ್ಲಾ ಹಾಗೆ ಒಂದು ರೀತಿಯ ಇರಿಟೇಷನ್. ಉಸಿರಾಟದಲ್ಲಿ ಸ್ವಲ್ಪ ಕಷ್ಟ ಅಂದರೆ ಬಾಯಿ ತೆರೆದು ಉಸಿರಾಡಬೇಕು ಅನಿಸುವಷ್ಟು. ಸಂಜೆ ದೀಪ ಹಚ್ಚಿ ಸ್ವಲ್ಪ ಭಗವತ್ಗೀತೆ ಪಾರಾಯಣ ಮಾಡುವ ರೂಢಿ. ಎಂದಿನಂತೆ ಸರಾಗವಾಗಿ ಓದಲು ಆಗುತ್ತಿಲ್ಲ. ಸ್ವರವೇ ಹೊರಗೆ ಬರ್ತಿಲ್ಲ. ಅಯ್ಯೋ ಶಿವನೇ….ಇದೆನಾಯಿತು ನನಗೆ? ಪಕ್ಕನೆ ಕೊರೋನಾ ಸಿಂಟೆಮ್ಸ ಹೀಗೀಗೆ ಇರುತ್ತದೆ ಎಂದು ಟೀವಿಯಲ್ಲಿ ಪೇಪರಲ್ಲಿ ವಾಲಗ ಊದುತ್ತಿದ್ದದ್ದು ಜ್ಞಾಪಕ ಬಂತು ನೋಡಿ…. ಸೋಫಾದಲ್ಲಿ ಕೂತವಳು ಸಣ್ಣಗೆ … Read more

ಮರೆಯಲಾಗದ ಮದುವೆ (ಭಾಗ 12): ನಾರಾಯಣ ಎಮ್ ಎಸ್

“ಸಾರ್… ರೈಲ್ವೇಸಿಂದ ಫೋನು, ಅದ್ಯಾವ್ದೋ ಕಾವ್ಲೀ ಅನ್ನೋ ಸ್ಟೇಷನ್ನಲ್ಲಿ ಯಾವ್ದೋ ವಯ್ಸಾಗಿರೋರ ಹೆಣಾ ಸಿಕ್ಕಿದ್ಯಂತೇ…ಈಗ್ಲೇ ಯಾರಾರೂ ಬಾಡಿ ಐಡೆಂಟಿಫೈ ಮಾಡಕ್ಕೋಗ್ಬೇಕಂತೆ” ರಿಸೆಪ್ಷನ್ ಕೌಂಟರಿನಿಂದ ಯಾವನೋ ಅವಿವೇಕಿ ಗಟ್ಟಿಯಾಗಿ ಕಿರುಚಿದ್ದ. ಲಾಬಿಯಿಡೀ ನೀರವ ಮೌನ ಆವರಿಸಿತು. ಪಾಪ ಸೀತಮ್ಮನವರ ಹೊಟ್ಟೆ ತಳಮಳಗುಟ್ಟಿತು. ಮೆಲ್ಲನೆ ತಮ್ಮ ಎಡಕುಂಡೆಯನ್ನೆತ್ತಿ ಸುಧೀರ್ಘವಾಗಿ ’ಠುಯ್ಯ್…………………’ ಎಂದು ತಾರಕಸ್ಥಾಯಿಯಲ್ಲಿ ಸದ್ದು ಹೊರಡಿಸಿ ಕಣ್ಣು ತೇಲಿಸಿಬಿಟ್ಟರು. ಮೊಮ್ಮಗ ಕಣ್ಣನ್ ಕಣ್ಣರಳಿಸಿ ಸುರುಳಿಯಾಗಿಸಿದ ಅಂಗೈಯನ್ನು ಬಾಯಿನ ಸುತ್ತ ಹಿಡಿದು ’ಠುಯ್ಯ್…………………’ ಎಂದು ನಕಲು ಮಾಡಿ ಪಕಪಕನೆ ನಕ್ಕ. ಇದರಿಂದ … Read more

ಸೂಲಂಗಿಯ ಕತೆ-ವ್ಯಥೆ: ಸುಂದರಿ. ಡಿ

ಅದೊಂದು ದಿನ ಜಮೀನಿನಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿತ್ತು, ಹೋಗಿ ನೋಡುವಾಸೆ! ಏಕೆಂದರೆ ಕಬ್ಬು ಬಿತ್ತನೆಯ ಸಮಯದಲಿ ಖುಷಿಯಿಂದಲೇ ನಾನೊಂದಷ್ಟು ನಾಟಿ ಮಾಡಿದ್ದೆ. ಅದೇ ಪ್ರತಿ ದಿನದ ಕಾಯಕವಾದರೆ ಅದು ಈ ಮಟ್ಟದ ಖುಷಿ ಕೊಡಲಾರದು. ಆಗೊಮ್ಮೆ – ಈಗೊಮ್ಮೆ ಜಮೀನಿನ ಮುಖ ನೋಡಿ ಬರುವ ನಮ್ಮನ್ನು ಮರೆತು, ಉಳುವವರೇ ವಾರಸುದಾರರೆಂದು ಜಮೀನು ಎಲ್ಲಿ ತಪ್ಪು ತಿಳಿದೀತೆಂದು ಭಾವಿಸಿ ಅದರ ನಿಜವಾದ ವಾರಸುದಾರರು ನಾವೆಂದು ನೆನಪು ಮಾಡುವ ಸಲುವಾಗಿ ಹೋಗುವ ನಮ್ಮಂಥ ಮಧ್ಯಮವರ್ಗದ ಜನಗಳಿಗೆ ನಿತ್ಯದ ಕಾಯಕವಾಗಿ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 47 & 48): ಎಂ. ಜವರಾಜ್

-೪೭-ಈ ಅಯ್ನೋರುಈ ಆಳುನ್ ಗುಟ್ಟ ಕಂಡಿರ್ನಿಲ್ಲಸಂದಲಿಈ ಆಳಾಡ್ದ ಮಾತ್ಗಅಯ್ನೋರ್ ತಿಕುದ್ ಸಂದಿಲೆಇರಂಗಾಯ್ತು ‘ಏ ಬಲ ಇಲ್ಲಿ’ತಲ ಕೆರಿತಾ‘ಅಯ್ನೋರಾ’ ಅನ್ತ ಬಂದರಾತ್ರ ಎಂಟೆಂಟುವರೆ ಗಂಟ್ಯಾಗಿತ್ತು.‘ಅದೇನ್ಲ ನಾ ಅನ್ಕಂಡಂಗೆಕಡ್ಡಿ ಮುರ್ದಾಗಿ ಅನ್ಕಡಾ’‘ಆ ಕಾಲುನ್ ಮಗಂವ್ನಲ್ಲಪರ್ಶುರಾಗಿ ಮಿಲ್ತವ್ಶಿವ್ಲಿಂಗಪ್ಪೋರ್ ಜೊತ್ಗ ನಿಂತಿದ್ನಆ ಶಿವ್ಲಿಂಗಪ್ಪೋರು,‘ಏ ಕಾಲುನ್ ಮಗ್ನೆನಿಮ್ಮಯ್ನೋರು ಗೆದ್ದರಾ’ ಅಂದ್ರುಅದ್ಕ ಪರ್ಶು‘ನಾ ಮಾತಾಡಗಿದ್ದ ಬುದ್ದಿಸೋಲ್ಲಿ ಅಂತಾನೆ ನಾನುಅದ್ರ ಗೆಲ್ಲದೆ ಆವಯ್ಯಬುದ್ದಿ ನೀವೆಲ್ಲ ಕೈಕಟ್ಟುದ್ರಏನಾರ ಮಾಡ್ಬೇದು’ಅಂದ ಅಯ್ನೋರಾಅದ್ಕ ಆ ಶಿವ್ಲಿಂಗಪ್ಪೋರು‘ಎಲಕ್ಷನು ಕಸ್ಟ ಕಣಆದ್ರ ಒಂದ್ ಕೆಲ್ಸ ಮಾಡು’ಅಂದ್ರು ಅದ್ಕ ಈ ಪರ್ಶು‘ಹೇಳ್ಬದ್ದಿ ನೀವು ಕಾಲ್ಲಿತೋರುದ್ದ ಕಣ್ಗೊತ್ತಿ … Read more

‘ಪಾಠವೂ ಮುಖ್ಯ, ಪ್ರಾಣವೂ ಮುಖ್ಯ’: ಬೀರೇಶ್ ಎನ್ ಗುಂಡೂರ್

ಈ ವಯಸ್ಸಿಗೆನೇ ಮೊಬೈಲ್ ಅಬ್ಯಾಸ ಇರಲೇಬಾರದು. ಮಕ್ಳು ಕೆಟ್ಟೋಗ್ತವೆ. ಕಣ್ಣು ಹಾಳಾಗ್ತವೆ. ಅಂತಿದ್ದ ಪಾಲಕರೆಲ್ಲಾ ಈಗ ಅದೇ ಮಕ್ಕಳನ್ನು ಹಿಡಿದು ಮೊಬೈಲ್ ಕೊಟ್ಟು ಹೊಡ್ಡು ಬಡ್ಡು ಕೂರಿಸುತಿದ್ದಾರೆ. ಪರದೆಯ ಮೇಲೆ ಇಟ್ಟ ದೃಷ್ಟಿ ಸ್ವಲ್ಪ ಕದಲಿದರೆ ಸಾಕು, ನೀನು ಸರಿಯಾಗಿ ಕಲಿಯುತ್ತಿಲ್ಲ. ಫೀಸ್ ಕಟ್ಟಿದಿವಿ. ಕಲಿಲಿಲ್ಲ ಅಂದ್ರೆ ಅಷ್ಟೇ ಈ ವರ್ಷ, ಅಂತ ರಾಗ ಹಾಡುತಿದ್ದಾರೆ. ಮಕ್ಕಳಿಗೆ ಇದೊಂತರ ವಿಚಿತ್ರ ಅನಿಸುತಿದ್ದೆ. ಇಷ್ಟು ದಿವಸ ಮೊಬೈಲ್ ಕೇಳಿದರೆ ಕಣ್ಣು ಬಿಡುತಿದ್ದವರು…ಈಗ ಅದೇ ಮೊಬೈಲ್ ಕೊಟ್ಟು ದಿಟವಾಗಿ ನೋಡು, … Read more

ಗಿರಿಕನ್ಯೆಯ ಗುನುಗು: ಗೀತಾ ಪ್ರಸನ್ನ

ಅಣ್ಣಾವ್ರ ಗಿರಿಕನ್ಯೆ ಬರ್ತಿತ್ತು ಇವತ್ತು. ಎಷ್ಟ್ ಚೆಂದದ ಜೋಡಿ.. ಚೆನ್ನ ಚೆಲುವೆ. ಜಯಮಾಲಾ ಎಳೇ ಬಳ್ಳಿ, ಅಣ್ಣಾವ್ರ ಕರಿಷ್ಮಾ – ಇಬ್ಬರ ಜೋಡಿ ಆಹಾ.. ಆ ಎವರ್ ಗ್ರೀನ್ ಹಾಡುಗಳು. “ನಗು ನಗುತಾ ನೀ ಬರುವೆ.. ನಗುವಿನಲೆ ಮನ ಸೆಳೆವೆ.. “ ಆಹಾ ಎಂಥಾ ಮುದ. ದೋಣಿಯಲ್ಲಿ ಇಬ್ಬರ ರೋಮ್ಯಾನ್ಸ್!! ಈ ದೋಣಿ ಸೀನ್ ನೋಡಿ ಸೀದಾ ಕಾಲೇಜು ದಿನಕ್ಕೆ ಹೋಯ್ತು ನೆನಪು. ಅಣ್ಣಾವ್ರು ಹುಟ್ಟು ಹಾಕ್ತಾ ಇದ್ರೆ, ಚೆಲುವೆ ಎಳೇ ಬಳ್ಳಿ ಹಾಗೆ ಮರಕ್ಕೆ ಹಬ್ಬಿಕೊಳ್ಳೋ … Read more

ಪಂಜು ಕಾವ್ಯಧಾರೆ

ಮಳೆ – ಇಳೆ ಮಳೆಯ ಹನಿಗೆ ಇಳೆಯು ನಡುಗಿದೆಎದೆಯ ಗೂಡಿಗೆ ಮನವು ಮಿಡಿದಿದೆಹಸಿರು ತೋರಣವ ತೊಳೆದು ಬೆಳಗಿದೆಮನಕೆ ಮುದವ ತಂದು ಹಿತವಾಗಿದೆ ಬೀಸುವ ತಂಗಾಳಿ ನಿನ್ನ ನೆನಪಿಸಿದೆತೋಳು ಬಯಸಿ ಕೈಬೀಸಿ ಕರೆದಿದೆಬಂದು ಸೇರುವ ಬಯಕೆ ಮನದಲಿ ನೆಟ್ಟಿದೆಪಿಳಿಪಿಳಿಸುತ ಕಣ್ಣದೃಷ್ಟಿ ನಿನ್ನತ್ತಲೇ ನಾಟಿದೆ. ನೆನಪು ಬರಿಸುತ ತಿಳಿಗಾಳಿ ಚೇಡಿಸುತಿದೆಮಳೆಯ ಹನಿಯೂ ಸಾತ್ ನೀಡುತಿದೆಬಾ ಎನ್ನ ಬಳಿಗೆ ಹೇ… ಜೀವ ಒಲವೆಮೋಡ ಸರಿದು ಬಾನು ಭೂಮಿ ಒಂದಾಗಿವೆ. ನಿನ್ನಿಧ್ವನಿ ಕೇಳದೆ ಕರ್ಣಪಟಲವೇ ಮಂಕಾಗಿದೆನಿನ್ನಿನಿಯನ ಮನವು ಕಾದು ಕಾದು ಸೋತಿದೆಕಣ್ಣ ಕಾಂತಿಯಲೇ … Read more

ದೊಡ್ಡೂರು ಮತ್ತು ಅವಲಕ್ಕಿ: ಗುರುಪ್ರಸಾದ ಕುರ್ತಕೋಟಿ

ನಾನು ಬೆಳೆದ ಲಕ್ಷ್ಮೇಶ್ವರ (ಈಗಿನ ಗದಗ ಜಿಲ್ಲೆ) ನಾನಾ ಕಾರಣಗಳಿಂದ ನನಗೆ ಇಷ್ಟ. ಅದೊಂದು ಐತಿಹಾಸಿಕ ಮಹತ್ವವುಳ್ಳ ಊರು. ಅದರ ಸುತ್ತಲೂ ತುಂಬಾ ಹಳ್ಳಿಗಳು ಇವೆ. ಅದರಲ್ಲೇ ಕಳಶಪ್ರಾಯವಾದ ಹಳ್ಳಿಯ ಹೆಸರು ದೊಡ್ಡೂರು. ಅದೊಂದು ಚಿಕ್ಕ ಹಳ್ಳಿ ಆದರೂ ಹೆಸರು ಮಾತ್ರ ದೊಡ್ಡೂರು. ಒಂದು ಕಾಲದಲ್ಲಿ ಆ ಪ್ರದೇಶದಲ್ಲಿ ಅದೇ ದೊಡ್ಡ ಊರಾಗಿತ್ತೋ ಏನೋ. ಒಟ್ಟಿನಲ್ಲಿ ನನ್ನ ತಲೆಯಲ್ಲಿ ಹಳ್ಳಿಗಳ ಬಗ್ಗೆ ಒಂದು ವಿಶಿಷ್ಟ ಗೌರವ ಹುಟ್ಟಿಸಿ, ಕೃಷಿ ಬಗ್ಗೆ ನನ್ನ ತಲೆಯಲ್ಲಿ ಆಳವಾಗಿ ಬೀಜ ಬಿತ್ತಿದ … Read more

ಕಾಂತಾಸಮ್ಮಿತ: ಸುಂದರಿ ಡಿ

ಅದೊಂದು ಸಂಜೆ ಸ್ನೇಹಿತೆಯ ಮನೆಗೆ ಹೋಗಲೇಬೇಕಾಯಿತು, ಕಾರಣ ಬಹಳ ಕಾಲ ಸಬೂಬು ಹೇಳಿ ಸಾಕಾಗಿ ಆ ದಿನ ಅವಳ ಮನೆಯ ಬಳಿಯೇ ಹೋಗುವಾಗ ಅವಳ ಕಣ್ಣಲ್ಲಿ ಬಂಧಿಯಾದ ಮೇಲೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಕುಳಿತು ಆತಿಥ್ಯ ಸ್ವೀಕರಿಸಿಯೂ ಆಯಿತು. ಯಾರದೋ ಮನೆಗೆ ಹೋಗೋಣವೆಂದು ಕರೆದಳು. ಹೋಗಲು ಮನಸಿಲ್ಲ, ಕಾರಣ ಆಗಲೇ ಸಂಜೆಯಾಗಿತ್ತು, ಜೊತೆಗೆ ಯಾರದೋ ಮನೆಗೆ ನಾನೇಕೆ ಹೋಗುವುದು? ಹಾಗಾಗಿ ಬೇಡವೆಂದು ನಿರಾಕರಿಸಿದೆ. ಆದರೆ ಆಕೆ ಟಪ್ಪರ್‍ವೇರ್ ಡಬ್ಬಿ ಖರೀದಿಸುತ್ತಿದ್ದಳು ಅದನ್ನು ನೋಡಿ ನಾನು ಅಸ್ತು ಎನ್ನಬೇಕಿತ್ತು, ಕಾರಣ … Read more

ಡಾರ್ಕ್‍ವೆಬ್: ಸಾಮಾನ್ಯರಿಗೆ ನಿಲುಕದ ನಕ್ಷತ್ರ: ಚಾರು ಮಂಜುರಾಜ್

ನಮಗಿಷ್ಟವಾದುದನ್ನು ಆನ್‍ಲೈನ್‍ನಲ್ಲಿ ತರಿಸಿಕೊಳ್ಳುವಾಗಲೋ ಸ್ನೇಹಿತರಿಗಾಗಿ ಉಡುಗೊರೆಗಳನ್ನು ಕೊಳ್ಳುವಾಗಲೋ ಗೂಗಲ್‍ನಲ್ಲಿ ಕಾಣುವ ಪುಟಗಳು ಸರ್‍ಫೇಸ್ ವೆಬ್. ಅಂದರೆ ನಾವು ಗೂಗಲ್‍ನಲ್ಲಿ ಜಾಲಾಡುವಾಗ ಅದರಲ್ಲಿ ತೆರೆದುಕೊಳ್ಳುವ ಪ್ರತಿಯೊಂದು ಪುಟವೂ ಇಂಥ ಸರ್‍ಫೇಸ್ ವೆಬ್ಬೇ! ದಿನನಿತ್ಯ ನಾವು ಅಂತರ್ಜಾಲದೊಂದಿಗೆ ವ್ಯವಹರಿಸುವಾಗ ಕೇವಲ ಶೇಕಡ ಒಂದರಷ್ಟು ಮಾತ್ರ ಮಾಹಿತಿಯನ್ನು ಎಕ್ಸ್‍ಪ್ಲೋರ್ ಮಾಡುತ್ತಿರುತ್ತೇವೆ. ಉಳಿದ ಶೇಕಡ 96 ರಿಂದ 99 ರಷ್ಟು ಮಾಹಿತಿಗಳು ಡೀಪ್‍ವೆಬ್ ಮತ್ತು ಡಾರ್ಕ್‍ವೆಬ್‍ಗಳಲ್ಲಿ ಅಡಗಿರುತ್ತವೆ. ಎರಡಂತಸ್ತಿನ ಕಟ್ಟಡವೊಂದರಲ್ಲಿ ಮೇಲೆ ಕಾಣುವುದೇ ನಾವು ಜಾಲಾಡುವ ತಾಣಗಳು, ಆನಂತರದ್ದು ಡೀಪ್‍ವೆಬ್. ಅದರ ಕೆಳಗಿರುವುದೇ … Read more

ಬದುಕು ಮಾಯದ ಆಟ…: ಪಿ.ಎಸ್.ಅಮರದೀಪ್.

ಇದೇನ್  ಕಾಕಾ, ಯಾಕೆ ಹೀಗೆ ಮಾಡಿದ್ರಿ?  ಏನಿತ್ತು ಅಂಥ ಅವಸರ.  ಇನ್ನೂ ಒಂದಿಷ್ಟು ಹುಡುಗರಿಗೆ ದುಡಿಯುವ ದಾರಿ ತೋರಿಸಿ ಅವರಿಗೆ ಜೀವನ‌ದ ಪಾಠ ಹೇಳಿಕೊಡವುದು ಬಾಕಿ ಇತ್ತು.  ದಿನದ ಇಪ್ಪತ್ನಾಲ್ಕು ಗಂಟೆಗಳನ್ನು ಅದೇಗೆ‌ ದುಡಿಸಿಕೊಳ್ಳುವುದು‌ ಎನ್ನುವುದರ ಬಗ್ಗೆ ನಿಮ್ಮಿಂದ ನೋಡಿ ನಮ್ಮಂಥವರಿಗೆ ಕಲಿಯುವುದೂ ಇತ್ತು.  ಬಹಳ ಆತುರ ಪಟ್ಟು ಹೊರಟಿರಿ… ಮೊದಲೆಲ್ಲಾ ನೀವು ಪಕ್ಕಾ ಪ್ಲಾನ್ ಮಾಡುತ್ತಿದ್ದಿರಿ.. ಯಾವ ವಯಸ್ಸಿನಲ್ಲಿ ಎಷ್ಟು ಕಷ್ಟ‌ಪಡಬೇಕು, ಎಷ್ಟು ದುಡಿಯಬಹುದು, ಏನೆನೆಲ್ಲಾ ಕೆಲಸ ಮಾಡಲು ನಮಗೆ ಅವಕಾಶ ಇವೆ.. ಯಾರೆಲ್ಲಾ ಏನೇನು‌ ಕೆಲಸ ಮಾಡಬಲ್ಲರು? ಯಾರಿಂದ ಯಾವ ಮತ್ತು  ಎಷ್ಟು ಕೆಲಸ ಪಡೆಯಬಹುದು ಹೀಗೆ…  ಅದ್ಯಾಕೆ … Read more

ಮರೆಯಲಾಗದ ಮದುವೆ (ಭಾಗ 11): ನಾರಾಯಣ ಎಮ್ ಎಸ್

-೧೧- ಗಂಡಿನಮನೆಯವರನ್ನು ಸ್ವಾಗತಿಸಲೆಂದು ಈಗಾಗಲೇ ರೈಲ್ವೇಸ್ಟೇಷನ್ನಿಗೆ ಬಂದಿದ್ದ ಕೃಷ್ಣಯ್ಯರ್ ಮಕ್ಕಳಾದ ಶೇಖರ್ ಮತ್ತು ಮೋಹನ್ ತಮ್ಮ ಪತ್ನಿಯರೊಂದಿಗೆ ಅಯ್ಯರ್ ಕುಟುಂಬದವರಿಗಾಗಿ ಕಾಯುತ್ತಿದ್ದರು. ಸುಮಾರು ನಾಲ್ಕು ಘಂಟೆಹೊತ್ತಿಗೆ ತಿರುವಾರೂರಿನ ರೈಲು ವಿಶಾಖಪಟ್ಟಣ ಸ್ಟೇಷನ್ನಿಗೆ ಬಂದು ತಲುಪಿತು. ಜೋತುಮೋರೆ ಹಾಕಿಕೊಂಡು ಒಲ್ಲದ ಮನಸ್ಸಿನಿಂದ ಯಾಂತ್ರಿಕವಾಗಿ ಒಬ್ಬೊಬ್ಬರೇ ರೈಲಿನಿಂದಿಳಿಯುತ್ತಿದ್ದ ಗಂಡಿನ ಮನೆಯವರನ್ನು ಕಂಡ ಶೇಖರ್ ಮತ್ತು ಮೋಹನರಿಗೆ ಎಲ್ಲವೂ ಸರಿಯಿಲ್ಲವೆಂಬ ಸುಳಿವು ಮೇಲ್ನೋಟಕ್ಕೇ ಸಿಕ್ಕಿಹೋಯಿತು. ಅತಿಥಿಗಳ ಲಗೇಜುಗಳನ್ನು ಒತ್ತಾಯದಿಂದ ಕೆಳಗಿಳಿಸಿಕೊಳ್ಳುವಾಗ ಹೆಂಗಸರು ಸಣ್ಣಗೆ ಅಳುತ್ತಿದ್ದುದು ಗಮನಿಸಿ ಏನೋ ಎಡವಟ್ಟಾಗಿರಬೇಕೆಂದು ಗಾಬರಿಯಾಯ್ತು. ಸುಬ್ಬುವನ್ನು … Read more

ಹೆಬ್ಬಲಸು : ಅಪರೂಪದ ಕಾಡುಹಣ್ಣು: ಚರಣಕುಮಾರ್ ಮತ್ತು ಡಾ. ಶ್ರೀಕಾಂತ್ ಗುಣಗಾ

ಹೆಬ್ಬಲಸು : ಅಪರೂಪದ ಕಾಡುಹಣ್ಣುArtocarpus hirsutus Lam.ಕುಟುಂಬ: ಮೊರೇಸಿ ವಿತರಣೆ: ಭಾರತೀಯ ಮೂಲದ ಬೃಹದ್ಧಾಕಾರದ ವೃಕ್ಷ ಪಶ್ಚಿಮ ಘಟ್ಟದ ನಿತ್ಯಹರಿಧ್ವರ್ಣ ಮತ್ತು ಅರೆ-ನಿತ್ಯಹರಿಧ್ವರ್ಣ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಪರಿಚಯ: ನೇರವಾಗಿ ಬೆಳೆಯುವ ಎತ್ತರದ ಮರ. ಕಂದು ಬಣ್ಣದ ತೊಗಟೆ. ತೊಗಟೆಯ ಮೇಲೆ ಸಣ್ಣ ವಾತರಂದ್ರಗಳು. ಗಾಯವಾದ ತೊಗಟೆಯಿಂದ ಹೊರಸೂಸುವ ಹಾಲಿನಂತ ಅಂಟು ಸೊನೆ. ಅಗಲವಾದ ಹುರುಬುರುಕಿನ ಎಲೆಗಳು ಕಡು ಹಸಿರಿನಿಂದ ಕೂಡಿವೆ. ಎಲೆಗಳ ಮೇಲೆ ಅಚ್ಚಾಗಿ ಮೂಡಿರುವ ನರಗಳಿವೆ. ಗಂಡು ಮತ್ತು ಹೆಣ್ಣು ಹೂವುಗಳು ಬೇರೆ ಬೇರೆಯಾಗಿರುತ್ತವೆ. … Read more

‘ನುಡಿಯೊಳಗಾಗಿ ನಡೆಯದಿದ್ದರೆ ಮೆಚ್ಚ …: ಡಾ. ಹೆಚ್ಚೆನ್ ಮಂಜುರಾಜ್

ಮೋಸ ವಂಚನೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ನನ್ನನ್ನು ತುಂಬ ಕಾಡುವುದು ಆತ್ಮವಂಚನೆ ಎಂಬುದು. ಅಂದರೆ ನಮ್ಮನ್ನು ನಾವೇ ವಂಚಿಸಿಕೊಳ್ಳುವ ವೈಖರಿಯೇ ಕಂಗೆಡಿಸುವ ವಿಚಾರ. ಆತ್ಮವಂಚನೆಯನ್ನೇ ರೂಢಿಸಿಕೊಂಡವರು ಕ್ರಮೇಣ ಬಂಡತನವನ್ನು ಬೆಳೆಸಿಕೊಂಡು ಸಂವೇದನಾಶೂನ್ಯರಾಗುವರೋ? ಅಥವಾ ಸಂವೇದನಾಶೀಲತೆ ಕಡಮೆಯಾದ ಮೇಲೆ ಆತ್ಮವಂಚನೆಗೆ ಇಳಿಯುತ್ತಾರೋ? ಸದಾ ಗೊಂದಲ ನನಗೆ. ನಾವೆಲ್ಲ ಒಂದಲ್ಲ ಒಂದು ಸಲ, ಒಂದಲ್ಲ ಒಂದು ದಿನ ಇಂಥ ಆತ್ಮವಂಚನೆಗೈದವರೇ! ಮನುಷ್ಯರಾದ ಮೇಲೆ ಇದೆಲ್ಲ ಮಾಮೂಲು ಎಂದು ಕೈ ತೊಳೆದುಕೊಂಡು ಬಿಡದೇ ಸೀರಿಯಸ್ಸಾಗಿ ಯೋಚಿಸಿದಾಗ ನನಗೆ ಹೊಳೆದದ್ದು: ಇದೊಂದು ಮನೋಬೇನೆ … Read more

ತಡವಾಗಿ ಬಿದ್ದ ಮಳೆ: ನಂದಾದೀಪ, ಮಂಡ್ಯ

ಪುಸ್ತಕ ಯಾವುದೇ ಇರಲಿ ಮೊದಲು ಪುಸ್ತಕದ ಶೀರ್ಷಿಕೆ ಓದುಗರನ್ನ ಸೆಳೆಯಬೇಕು.. ಅಲ್ಲಿಗೆ ಆ ಪುಸ್ತಕ ಅರ್ಧ ಗೆದ್ದಂತೆಯೇ ಸರಿ..! ಆ ವಿಷಯದಲ್ಲಿ ಲೇಖಕರಾದ ಸಂತೋಷಕುಮಾರ್ ಮೆಹಂದಳೆಯವರು ಎಂದಿಗೂ ರಾಜಿಯಾದವರಲ್ಲ ಎನಿಸುತ್ತದೆ..!ಜೊತೆಗೆ ಅವರ ಪುಸ್ತಕ ಓದುಗನನ್ನು ತನ್ನೊಳಗೆ ಲೀನವಾಗಿಸಿಕೊಳ್ಳುತ್ತದೆ ಎಂಬುದಕ್ಕೆ ನಾ ಹಿಂದೆ ಓದಿದ್ದ ಅಘೋರಿಗಳ ಲೋಕದ ಪುಸ್ತಕದ ಬಗ್ಗೆ ಬರೆದಾಗಲೇ ಹೇಳಿದ್ದೆ ಎಂದರೆ ತಪ್ಪಾಗಲಾರದು. ತಡವಾಗಿ ಬಿದ್ದ ಮಳೆ ಮೊದಲು ಆಕರ್ಷಿಸಿದ್ದು ಶೀರ್ಷಿಕೆಯೇ.. ಅದೇ ಕುತೂಹಲದಿಂದ ಓದಲು ಶುರು ಮಾಡಿದ ನಾನು ಒಂದೇ ಗುಕ್ಕಿಗೆ ಓದಿ ಮುಗಿಸಿದೆ.. … Read more