ದಯೆಯ ಯಾದೃಚ್ಛ ಕ್ರಿಯೆ (Random act of kindness): ದಿನೇಶ್ ಉಡಪಿ
ಶುಕ್ರವಾರ ಕಾಲೇಜಿನ ಕೆಲಸಕ್ಕೆ ರಜೆ ಹಾಕಿಕೊಂಡು, ಕೆಲವು ಅಗತ್ಯ ಕೆಲಸಕ್ಕಾಗಿ ಕೆ.ಆರ್.ನಗರಕ್ಕೆ ಹೋಗಬೇಕಿತ್ತು. ಬೆಳಗಿನಿಂದಲೇ ಮೋಡ ಕವಿದ ವಾತಾವರಣವಿತ್ತು, ಅತಿಯಾದ ತೇವಾಂಶದ ಕಾರಣ ವಿಪರೀತ ಶೆಕೆಯೂ ಇತ್ತು. ಮಧ್ಯಾಹ್ನದ ಹೊತ್ತಿಗೆ ಎಲ್ಲಾ ಕೆಲಸ ಮುಗಿಸಿಕೊಂಡು ಮೈಸೂರಿನತ್ತ ಹೊರಟೆ. ಬಿಳಿಕೆರೆ ಹತ್ತಿರ ಬರುವಷ್ಟರಲ್ಲಿ ಮಳೆ ಸುರಿಯತೊಡಗಿತು, ಕುಂಭದ್ರೋಣ ಮಳೆ ಅಂತಾರಲ್ಲ ಹಾಗೆ. ಕಾರಿನ ವೈಪರ್ ಪೂರ್ತಿ ವೇಗದಲ್ಲಿ ನೀರನ್ನು ತಳ್ಳುತ್ತಿದ್ದರೂ ರಸ್ತೆ ಕಾಣದಷ್ಟು ಮಳೆ. ಬಹುತೇಕ ಎಲ್ಲ ವಾಹನಗಳೂ ರಸ್ತೆ ಪಕ್ಕ ಹಾಕಿಕೊಂಡು ನಿಂತಿದ್ದರು. ನನ್ನ ಚಿರಪರಿಚಿತ ರಸ್ತೆ … Read more