ಗಜಲ್: ಜಯಶ್ರೀ.ಭ.ಭಂಡಾರಿ

ಗಜಲ್ 1 ಸುಂದರ ವದನ ಇಂದೇಕೆ ಬಾಡಿದೆ ಹೇಳು ಗೆಳತಿಕಣ್ಣುಗಳಲ್ಲಿ ಎಂದಿನ ಕಾವ್ಯ ಕಳೆ ಇಲ್ಲ ಗೆಳತಿ ನೀಳ ನಾಸಿಕ ಅದೇಕೆ ಕೆಂಪಾಗಿದೆ ಹೇಳಲಾರೆಯಾಅಳು ನುಂಗಿ ನಗುವ ಪ್ರಮೇಯ ಯಾಕೆ ಗೆಳತಿ ಹಣೆಯ ಕಾಸಿನಗಲ ಕುಂಕುಮದಲಿ ಸಂಭ್ರಮ ನಗುತ್ತಿಲ್ಲಬಾಗಿದ ಹುಬ್ಬುಗಳಲಿ ಕಾಮನ ಬಿಲ್ಲಿನಂದ ತೋರುತ್ತಿಲ್ಲ ಗೆಳತಿ ತೊಂಡೆಯ ತುಟಿಗಳಲ್ಲಿ ಜೇನು ವಸರುವದು ಕಾಣುತ್ತಿಲ್ಲಕೆನ್ನೆಯಲ್ಲಿ ಗುಲಾಬಿ ರಂಗು ಸೊರಗಿದೆ ಏಕೆ ಹೇಳು ಗೆಳತಿ ಭರವಸೆಯಲ್ಲಿ ಬೆಳಕು ಚೆಲ್ಲುವ ನೀನೇ ಹೀಗಾದರೆ ಹೇಗೆಜುಮಕಿಯ ನಾದದಲ್ಲಿಯೂ ಅದೇಕೊ ಇಂಪಿಲ್ಲ ಗೆಳತಿ ಕಪ್ಪಾದ … Read more

ಡೊಂಟ್ ವರಿ, ಒಮ್ಮೊಮ್ಮೆ ಹೀಗೂ ಆಗುವುದು: ಮಧುಕರ್ ಬಳ್ಕೂರ್

“ಏನ್ ಸರ್ ಸಮಾಚಾರ ? ಮತ್ತೇನ್ ಡ್ಯೂಟಿಗ್ ಹೊರಟ್ರಾ..? ಏನಿಲ್ಲ ಸರ್, ನೀವು ಯಾರನ್ನಾದ್ರು ಲವ್ ಮಾಡಿದೀರಾ..? ಇಲ್ವಾ…? ಹಾಗಿದ್ರೆ ನೀವು ವೇಸ್ಟ್ ಬಿಡಿ ಸಾರ್. ನಾನು ಈ ಪ್ರೀತಿ ಗೀತಿ ಅಂತೆಲ್ಲಾ ಅದೆಷ್ಟು ಸರ್ಕಸ್ ಮಾಡಿದೀನಿ ಗೊತ್ತಾ? ಬಿಡಿ, ನಿಮಗೆಲ್ಲಾ ಅದು ಎಲ್ಲಿ ಅರ್ಥ ಆಗ್ಬೇಕು? ಅನುಭವ ಇದ್ರೆ ತಾನೆ..” ಹಾಗಂತ ಅವನು ವ್ಯಂಗವಾಡುತ್ತಲೇ ಹೋದ. ಜೊತೆಗಿದ್ದವರು ಅದೇ ವ್ಯಂಗದಲ್ಲಿ ಜೋರಾಗಿ ನಗತೊಡಗಿದರು. ಆ ಒಂದು ಕ್ಷಣಕ್ಕೆ ಏನನ್ನಬೇಕೆನ್ನುವುದ ತಿಳಿಯದೆ ಮುಜುಗರಕ್ಕೊಳಗಾಗುತ್ತೀರಿ. ಮೊದಲೇ ಡ್ಯೂಟಿಗೆ ಹೊರಟಿದ್ದೀರಿ. … Read more

ನಾವು ಏನೂ ಅನುಭವಿಸಿದರೂ ಅದು ನಮ್ಮ ಕರ್ಮಫಲವಷ್ಟೆ: ಪೂಜಾ ಗುಜರನ್. ಮಂಗಳೂರು.

ಆವತ್ತು ಅತ್ಮೀಯ ಗೆಳೆಯರೊಬ್ಬರ ಸಂಬಂಧಿಕರ ಸಾವು ನಡೆದಿತ್ತು. ಅವರು ತುಂಬಾ ಬೇಜಾರಿನಲ್ಲಿ ನನ್ನಲ್ಲಿ ಒಂದು ಮಾತು ಹೇಳಿದರು. ಅಲ್ಲ ಏನಾಗುತ್ತಿದೆ ಇಂದು. ಎಲ್ಲಿ ನೋಡಿದರು ಸಾವು, ನೋವು, ಈಗ ಇದ್ದವರು ಮತ್ತೆ ಇಲ್ಲ. ನೋಡ ನೋಡುತ್ತಿದಂತೆ ಎದ್ದು ಹೋಗುತ್ತಿದ್ದಾರಲ್ವ. ಇದೆಂತಹ ಕ್ರೂರ ಸಮಯ,  ಇದನ್ನೆಲ್ಲ ನೋಡುವುದಕ್ಕಾಗಿಯಾ ನಾವಿನ್ನು ಬದುಕಿರೋದು. ಹೀಗೆ ಅವರ ನೋವಿನ ಮಾತುಗಳು ಸಾಗುತ್ತಿದ್ದವು. ಅವರ ಹಣೆಬರಹವೇ ಸರಿ ಇಲ್ಲವೇನೋ ಅದಕ್ಕೆ ವಿಧಿ ಹೀಗೆ ಮಾಡುತ್ತಿದ್ದಾನೆ. ಅಂದಾಗ ನನಗೆ ಏನೂ ಉತ್ತರಿಸಬೇಕೋ ತಿಳಿಯದಾಗಿತ್ತು. ಅಲ್ಲ ನಾವ್ಯಾಕೆ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 78 & 79): ಎಂ. ಜವರಾಜ್

-೭೮- ಆಗ..ಆಗ..ಆಗ ಏನಾಯ್ತು ಅಂದ್ರಾ..‘ಏ…ಯ್…’ಅಂತ ಅಬ್ರುಸ್ತಮರದ ಮ್ಯಾಲಿಂದ ಕೆಳಕಆಗ್ಲೆ ಕಂಡಆ ನೆಳ್ ರೂಪುದುತ್ತಂತ ಬಿದ್ದು ಎಗುರಿಮುಂದ ನಿಂತ್ಗಂಡೂ“ಏ..ಯ್..ಆಗ್ಲೆ ಬಿದ್ದೇಟ್ಗಹೆದ್ರಿ ಹೋಯ್ತಿದ್ದರಿ ಅನ್ಕಂಡಿಆದ್ರ..ಆದ್ರ..ಇಲ್ಲಿಗಂಟು ಬಂದಿದರಿ ಅಂದ್ರನಿಮ್ಮ ಬುಡಗಿದ್ದಾ..ಈ ನೀರಂಜಿ ಬುಡ್ಕೇಹಾರ ಮಾಡ್ದೆ ಬುಡಲ್ಲ” ಈ ಅಯ್ನೋರ್ ಕಾಲುಗಡಗಡ ನಡುಗ್ತಅವ್ರು ನಡ್ಗ ರೀತಿಗನಂಗೂ ಮೈಬಾರ ಆಯ್ತಿರಗಾಯ್ತು ಅಂವಅದೆ, ಎಳುರುಂಡಿ ಮಾದೇವಗರ ಬಡ್ದಿರತರ ನಿಂತನ.. ಅಂವ ನಿಂತಿರ ತರುಕ್ಕಇವ್ನ್ ಮ್ಯಾಗಆಗಿಂದ ಅನ್ಕಂಡದೆಲ್ಲಸರುಕ್ನ ಇಳ್ಕಂಡಗಾಯ್ತು ಈ ಅಯ್ನೋರು ಆಗ್ಗಿಂದ ಈಗ್ಗಂಟುಇಂತೆವ್ನ ಮುಂದಿಟ್ಗಂಡುಯವರ ಮಾಡ್ತಿದ್ರಲ್ಲಾ..ಇಂವ,ಇಂತಾ ಅಡ್ಕಸ್ಬಿ ಪುಕ್ಕುಲ್ನಾ..ತೂ..ಸೂಳಮಗನಾ.. ಅನ್ನುಸ್ತು ಎಳುರುಂಡಿ ಮಾದೇವ ಅಂದ್ರ,ಸುತ್ಮತ್ತು ಏಳೂರೂ … Read more

ಅಮ್ಮ ಅನ್ನೋ ಎರಡು ಅಕ್ಷರ: ದೀಪಾ ಜಿ. ಎಸ್.

ಅಮ್ಮ ಅಂದ್ರೆ ಒಂದು ಜೀವಕ್ಕೆ ಜೀವ ತುಂಬೋ ತ್ಯಾಗಮಯಿನೇ ಅಮ್ಮ. ನಾನು ಈ ಭೂಮಿಗೆ ಕಾಲಿಟ್ಟ ಕ್ಷಣದಿಂದ ಹಿಡಿದು ಇಲ್ಲಿಯವರೆಗೂ ನನ್ನ ಜೀವನದಲ್ಲಿ ಒಂದೊಂದು ಕ್ಷಣ ಒಂದೊಂದು ಕಲಿಕೆಯನ್ನು ಕಳಿಸಿದವಳೇ ಅಮ್ಮ. ನನ್ನ ಮೊದಲನೆಯ ಗುರು, ಮೊದಲನೆಯ ಸ್ನೇಹಿತೆ, ಎಲ್ಲಾನು ಅವಳೇ. ಜೀವನದಲ್ಲಿ ಕಷ್ಟಕ್ಕೆ ಎಡವಿ ಬಿದ್ದಾಗ ಮೊದಲು ನೆನಪಾಗೋದೇ ಅಮ್ಮ. ಅಮ್ಮ ಅನ್ನೋ ಪದದಲ್ಲೇ ಅಮೃತಾನೆ ತುಂಬಿರುವಾಗ ನನ್ನ ಹತ್ತಿರಾನೂ ಸಾವು ಅನ್ನೋ ಪದಾನೇ ಸುಳಿಯೋಲ್ಲ. ಅಮ್ಮ ಅನ್ನೋ ಒಂದು ಜೀವ ಇದ್ರೆ ಸಾಕು ಇಡೀ … Read more

ಹದಿಹರೆಯದ ಮಕ್ಕಳು ಮತ್ತು ಪೋಷಕರು: ಪ್ರವೀಣ ಶೆಟ್ಟಿ, ಕುಪ್ಕೊಡು

ದೃತಿ ಯಾಕೋ ತುಂಬಾ ಕಾಡ್ತಾ ಇದ್ದಾಳೆ. ಹೌದು ದೃತಿ “ದ ಫ್ಯಾಮಿಲಿ ಮ್ಯಾನ್ ವೆಬ್ ಸೀರಿಸ್ ನ ಮುಖ್ಯ ಪಾತ್ರಧಾರಿ ಶ್ರೀಕಾಂತ್ ತಿವಾರಿಯ ಮಗಳು. ತಂದೆ – ತಾಯಿ ಇಬ್ಬರೂ ತಮ್ಮ ತಮ್ಮ ಕೆಲಸಗಳ ನಡುವೆ ಬ್ಯೂಸಿಯಾಗಿರುವಾಗ ಮಕ್ಕಳ ಮೇಲೆ ಗಮನ ಕಡಿಮೆಯಾಗಿ ಮಕ್ಕಳು ಕೆಟ್ಟ ಹಾದಿ ತುಳಿದರೂ ತಂದೆ ತಾಯಿಗೆ ಅದರ ಬಗ್ಗೆ ಕಿಂಚಿತ್ತೂ ಗಮನವಿರುವುದಿಲ್ಲ. ಮಗಳು ಬಾಯ್ ಫ್ರೆಂಡ್ ಎಂದು ಅಲೆಯುತ್ತಿರುವಾಗಲೂ, ಓದುವುದನ್ನು ಬಿಟ್ಟು ಇಡೀ ದಿನ ಮೊಬೈಲ್ ನಲ್ಲಿ ಚಾಟಿಂಗ್ ಮಾಡುವುದನ್ನೂ ಹೆತ್ತವರು … Read more

ನಾನಂತೂ ಆ ಕ್ಷಣ ಯಾವಾಗ ಬರುತ್ತೋ ಅಂತಾ ಕಾಯ್ತಾ ಇದ್ದೀನಿ: ಪರಮೇಶ್ವರಪ್ಪ ಕುದರಿ

ಪ್ರೀತಿಯ ವಿಜಯಾ, ನಾನಿಲ್ಲಿ ಕ್ಷೇಮ, ನಿನ್ನ ಕ್ಷೇಮದ ಬಗ್ಗೆ ತಿಳಿಯುವ ಹಂಬಲ. ಹೇಗಿದ್ದಿಯಾ ವಿಜು? ಅಂದು ನೀ ನನ್ನಿಂದ ಅಗಲಿದ ಮೇಲೆ ತುಂಬಾ ಹೊತ್ತು ನಿನ್ನದೇ ಧ್ಯಾನ – ನಿನದೇ ನೆನಪು ! ನನ್ನ ಜೀವನದ ಕೊನೆಯವರೆಗೂ ನಿನ್ನನ್ನು ನನ್ನ ಬಾಳ ಸಂಗಾತಿಯಾಗಿ ಪಡೆಯುವ ಪರಮ ಇಚ್ಚೆ ನನಗೆ. ನಮ್ಮಿಬ್ಬರ ಪ್ರೇಮದ ಹಾದಿಗೆ ಅದ್ಯಾರೇ ಅಡ್ಡ ಬಂದರೂ, ನಾನು ಜಯಿಸಿ ನಿನ್ನನ್ನು ಪಡೆದೇ ಪಡೆಯುತ್ತೆನೆ ಎಂಬ ಬಲವಾದ ನಂಬಿಕೆ ನನಗಿದೆ ಚಿನ್ನಾ. ನೀನು ಬಡವಿ ನಾನು ಶ್ರೀಮಂತ … Read more

ಗೋರಿಯ ಸುತ್ತ ಸಪ್ತಪದಿ ತುಳಿದಾಗ…: ಶಿವಲೀಲಾ ಹುಣಸಗಿ ಯಲ್ಲಾಪುರ

ಅವಳೊಮ್ಮೆ ನೋಡಿದಾಗ ಕರುಳು ಕಿವುಚಿದ ಅನುಭವ. ದೈವಕ್ಕೊಂದು ಹಿಡಿಶಾಪ ಹಾಕಬೇಕೆನ್ನಿಸಿತು. ಅವನಾದರೋ ಹೇಳ ಹೆಸರಿಲ್ಲದೇ ತರಗಲೆಯಂತೆ ಮಣ್ಣೋಳು ಮಣ್ಣಾಗಿ ಹೋದ. ಗೋರಿ ಮೇಲೊಂದಿಷ್ಟು ಗರಿಕೆ ಹುಲ್ಲು ಬೆಳೆದು ಅವನು ಪುನಃ ಚಿಗುರಿದನೆಂಬ ನಂಬಿಕೆ ಅವಳಲ್ಲಿ. ಪ್ರತಿನಿತ್ಯ ಗೋರಿಗೊಂದು ಹೂ ಇಟ್ಟು ಊದಿನಕಡ್ಡಿ ಹಚ್ಚಿ ಗರಿಕೆ ಹುಲ್ಲು ಕೊಯ್ದಕೊಂಡು ಎರಡು ಮೂರು ಸಲ ಕಣ್ಣಿಗೆ ಒತ್ತಿಕೊಂಡು ಹೀಗೆ ಹುಟ್ಟುವ ಮನಸ್ಸಿದ್ದರೆ ನನ್ಯಾಕೆ ಮದುವೆಯಾದೆ? ದಿಕ್ಕುದಿಸೆಯಿಲ್ಲದೆ ಮರೆಯಾಗಿ ಹೋದಿ ಏಕೆ? ಎಂಬ ಸಂಕಟವನ್ನು ಹೊರ ಚೆಲ್ಲುವ ಅವಳಿಗೆ ಸಂತೈಸುವ ಪರಿವೆಯ … Read more

ಮರಳಿ ಬಂದ ಪತ್ರ: ಅಶ್ಫಾಕ್ ಪೀರಜಾದೆ

ಇಂತಹದ್ದೊಂದು ತಿರುವು ನನ್ನ ಜೀವನದಲ್ಲಿ ಬರಬಹುದೆಂದು ನಾನು ಕನಸು ಮನಸಿನಲ್ಲೂ ಊಹಿಸಿರಲಿಲ್ಲ. ತೃಪ್ತಿದಾಯಕ ಅಖಂಡ ಮೂವತ್ತೈದು ವರ್ಷಗಳ ವೈವಾಹಿಕ ಜೀವನದಲ್ಲಿ ಆಕಸ್ಮಿಕವಾಗಿ ಅಲೆಯೊಂದು ಹುಟ್ಟಿ ಬಂದು ಸುಂದರವಾದ ನನ್ನ ಸಂಸಾರದಲ್ಲಿ ಹೀಗೆ ಹುಳಿ ಹಿಂಡಬಹುದು ಎಂದು ಭಾವಿಸಿರಲಿಲ್ಲ. ಬದುಕಿನ ಈ ಮುಸ್ಸಂಜೆಯಲ್ಲಿ ಹೀಗೆ ಅಪರಾಧಿಯಾಗಿ ಅವಳ ಮುಂದೆ ನಿಲ್ಲಬೇಕಾಗುತ್ತೆ ಎಂದು ನನಗೆ ಯಾವತ್ತಿಗೂ ಅನಿಸಿರಲಿಲ್ಲ. ನನಗಿಂತ ವಯಸ್ಸಿನಲ್ಲಿ ಕೇವಲ ಐದು ವರ್ಷ ಚಿಕ್ಕವಳು ಅವಳು. ಅವಳಿಗೆ ಐವತ್ತೈದು ನನಗೆ ಕೇವಲ ಅರವತ್ತು. ಈ ಅರವತ್ತನೇಯ ವಯಸ್ಸಿನ ಇಳಿ … Read more

ಕಲಿಕೆ v/s ಕುಡಿತ: ಶೈಲಜ ಮಂಚೇನಹಳ್ಳಿ

ಈ ಹಿಂದೆ ನನ್ನ ಪುಟ್ಟ ಕಂಪ್ಯೂಟರ್ ಸೆಂಟರ್‌ಗೆ ಕಂಪ್ಯೂಟರ್ ಕಲಿಯಲೆಂದು ಸುಮಾರು ೨೫ ವರ್ಷದ ಒಬ್ಬ ವ್ಯಕ್ತಿ ಬಂದ, ಈಗ ಆತನ ಹೆಸರು ನೆನಪಿಗೆ ಬರುತ್ತಿಲ್ಲ, ತನ್ನನ್ನು ಪರಿಚಯಿಸಿಕೊಳ್ಳುವಾಗ ಆತ ನನಗೆ ಒತ್ತಿ ಒತ್ತಿ ಹೇಳಿದುದು ನನಗೆ ಕಂಪ್ಯೂಟರ್ ಕಲಿಯಬೇಕೆಂದು ತುಂಬಾ ಆಸೆ ಇದೆ ಎಂದು. ತಾವು ನನಗೆ ಹೇಳಿಕೊಡುವಿರ ಮೇಡಮ್? ಎಂದು ಕೇಳಿದ. ವಯಸ್ಸಿನ ವಯೋಮಿತಿ ಇಲ್ಲದೆ ಎಲ್ಲಾ ವಯಸ್ಸಿನವರಿಗೂ ನಾನು ಕಂಪ್ಯೂಟರ್ ಕಲಿಸುತ್ತಿದ್ದರಿಂದ ಆತನ ಈ ಕೇಳಿಕೆಯಿಂದ ನನಗೆ ಯಾವುದೇ ವಿಶೇಷವೆನಿಸಲಿಲ್ಲ. ನಾನು ಪ್ರತಿಕ್ರಿಯಿಸುವ … Read more

“ಬಸಿದ ಕಣ್ಣೀರ ಭಾಷೆಯೊಳಗಿನ ಮತಂಗ ಕುಲದ ಧ್ಯಾನಸ್ಥ ಪರಂಪರೆಯ ಜೀವ ಕಾರುಣ್ಯದ ಮೋಹಕ ನವಿಲುಗಳ ಹೆಜ್ಜೆ ಗುರುತು!”: ಎಂ.ಜವರಾಜ್

ಆರನಕಟ್ಟೆ ರಂಗನಾಥರ ‘ಕಾರುಣ್ಯದ ಮೋಹಕ ನವಿಲುಗಳೇ’ ಕವಿತೆಗಳ ಆಳವು “ಬೋಧಿಸತ್ವ ಮಾತಂಗನು ತನಗೆ ಸಿಕ್ಕ ಭಿಕ್ಷಾನ್ನವನ್ನು ತೆಗೆದುಕೊಂಡು ಒಂದು ಗೋಡೆಯನ್ನಾಶ್ರಯಿಸಿ ಜಗಲಿ ಮೇಲೆ ಕೂತು ತಿನ್ನ ಹತ್ತಿದ್ದನು.. ಆತನ ಗಮನ ಬ್ರಹ್ಮಲೋಕದಲ್ಲಿತ್ತು. ಉಣ್ಣುತ್ತಿದ್ದ ಬೋಧಿಸತ್ವ ಮಾತಂಗನನ್ನು ರಾಜಭಟರು ಖಡ್ಗದಿಂದ ಕತ್ತರಿಸಿ ಹಾಕಿದರು. ಆ ಚಂಡಾಲನು ಸತ್ತ ಕೂಡಲೆ ಬ್ರಹ್ಮಲೋಕದಲ್ಲಿ ಉದಯಿಸಿದನು. ದೇವತೆಗಳು ಕೋಪಗೊಂಡು ಮೇಧರಾಷ್ಟ್ರದ ಮೇಲೆ ಕೆಂಡದ ಮಳೆಗರೆದರು. ಇಡೀ ರಾಷ್ಟ್ರ ಮತ್ತು ಪರಿಷತ್ತು ಸುಟ್ಟು ನಷ್ಟವಾಯಿತು. ಮೆಜ್ಜಾರಣ್ಯ ಮಾತಂಗಾರಣ್ಯ ಎಂದಾಯಿತು. ಬುದ್ದನು ಹೇಳಿದನು ‘ನಾಯಿಯ ಮಾಂಸವನ್ನು … Read more

ಭಾವನೆಗಳ ರೋಲರ್-ಕೋಸ್ಟರ್: ಅಮೂಲ್ಯ ಭಾರದ್ವಾಜ್‌

“ಅದ್ಯಾಕೋ ನಿದ್ದೆನೆ ಬರ್ತಿಲ್ಲ ಕಣೆ”, ಎಂದು ಶ್ರೀಧರ ಇತ್ತಲಿಂದ ಅತ್ತ ತನ್ನ ಮಗ್ಗಲನ್ನು ಬದಲಿಸಿ ಪಕ್ಕದಲ್ಲಿ ಮಲಗಿದ್ದ ಸೀತಾಳಿಗೆ ಹೇಳಿದ. “ನಂಗೂನು ಅಷ್ಟೆ ರೀ”, ಅವಳು ಅವನ ಕಡೆ ತಿರುಗಿ ಹೇಳಿದಳು. “ಗಂಟೆ ಎಷ್ಟಾಯ್ತು ನೋಡು ಸ್ವಲ್ಪ” ಎಂದು ಕೇಳಿದ. ಸೀತಾ ದೀಪ ಹಚ್ಚಿಕೊಂಡು ಮಂಚದ ಕೆಳಗಿಟ್ಟಿದ್ದ ತನ್ನ ಮೊಬೈಲ್‌ಫೋನನ್ನು ಕೈಗೆತ್ತಿಕೊಂಡು- “ಓಹ್‌ ಆಗ್ಲೇ ೩.೩೦ ಆಗ್ಬಿಟಿದೆ, ಯೋಚ್ನೇಲಿ ಟೈಮಾಗಿದ್ದೇ ಗೊತ್ತಾಗ್ಲಿಲ್ಲ” ಎಂದು ಹುಬ್ಬೇರಿಸಿದಳು. “ಅದೇನ್‌ಯೋಚ್ನೆನೆ ನಿಂಗೆ? ಯಾವಾಗ್ಲು ಏನೋ ತಲೆಗ್‌ ಹಾಕೊತ್ಯಾಪ” ಶ್ರೀಧರನಿಗೆ ವಾಸ್ತವ ಗೊತ್ತಿದ್ದರೂ, … Read more

ಸಿದ್ಧಲಿಂಗಯ್ಯ ಎಂಬ ಬೇಲಿ ಮೇಗಳ ಹೂವು !: ಅಶ್ಫಾಕ್ ಪೀರಜಾದೆ

ಕವಿಯೆಂದರೆ ಹೇಗಿರಬೇಕು ಎನ್ನುವ ಪ್ರಶ್ನೆಗೆ ಇನ್ನೂವರೆಗೂ ಉತ್ತರ ಸಿಕ್ಕಂತಿಲ್ಲ. ತಥಾಗತಿತ ಸಮಾಜದ ಪ್ರತಿನಿಧಿಯಂದು ನಾವು ಭಾವಿಸುವ ಕವಿ ವಾಸ್ತವದಲ್ಲಿ ದೈವೀ ಗುಣಗಳಿಂದ ಕೂಡಿರಬೇಕು. ಗಾಂಧಿಯಂತೆ ಕ್ಷಮಾಗುಣ ಹೊಂದಿದ ಮಹಾತ್ಮನಾಗಿರಬೇಕು. ಪವಾಡ ಪುರಷನೋ.. ಪ್ರವಾದಿಯೋ ಅಥವಾ ಇದಕ್ಕಿಂತ ಮಿಗಿಲಾಗಿ ಸ್ವತಃ ದೇವರೇ ಆಗಿರಬೇಕೆಂದು ಬಯಸುವವರಿದ್ದಾರೆ. ಇನ್ನೂ ಅವನಿಗೆ ಸಂಸ್ಕೃತಿಕ ಲೋಕದ ಪ್ರತಿನಿಧಿ ಎನ್ನುವ ಹಣೆಪಟ್ಟಿ ಅಂಟಿದ ನಂತರವಂತೂ ಮುಗಿಯಿತು. ಅವನಾಡುವ ಒಂದೊಂದು ಮಾತೂ ತುಂಬ ಎಚ್ಚರಿಕೆಯಿಂದಿರಬೇಕಾಗುತ್ತದೆ. ಅವನಿಡುವ ಒಂದೊಂದು ಹೆಜ್ಜೆಗೂ ಸಾವಿರ ಸಲ ವಿಚಾರ ಮಾಡಬೇಕಾಗುತ್ತದೆ. ಅವನು ಸಾವಿರ … Read more

ಒಂದು ಪಲ್ಲವಿ ಎರಡು ಹಾಡು ಹಲವು ಚರಣ ಹಂಸಲೇಖರ ಪದ ಬೀಡು: ಜಯರಾಮ ಚಾರಿ

ಕಳೆದ ವಾರ ನಮ್ಮ ಅಡಕಸಬಿ ಅಡ್ಡದಲ್ಲಿ ಹಂಸಲೇಖರ ಬಗ್ಗೆ ಬರೋಬ್ಬರಿ ಆರು ದಿನಗಳ ಕಾಲ ಕೇವಲ ಅವರ ಸಾಹಿತ್ಯ ಕುರಿತು ಅದನ್ನು ಒಡೆದು ನೋಡುವ ಒಂದು ಸಣ್ಣ ಪ್ರಯತ್ನ ಮಾಡಿದ್ವಿ. ಆದರೆ ಹಂಸಲೇಖ ಬರೆದ ಹಾಡುಗಳ ಸಂಖ್ಯೆ ಕಮ್ಮಿಯಿಲ್ಲ 3500 ಕ್ಕೂ ಹೆಚ್ಚು ಹಾಡು ಬರೆದಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ ಹಂಸಲೇಖ ತಟ್ಟದ ಪದಗಳಿಲ್ಲ, ಅವರು ನಾದಬ್ರಹ್ಮನು ಹೌದು, ಪದಪರಮಾತ್ಮನು ಹೌದು .ಆರು ದಿವಸ ನಡೆಸಿದರು ಎಷ್ಟೋ ಹಾಡುಗಳು ಎಷ್ಟೋ ಸಾಲುಗಳು ಹಾಗೆ ಉಳಿದುಬಿಟ್ಟವು. ಹಂಸಲೇಖರು ಒಂದೇ … Read more

ಕ್ಲಬ್‌ ಹೌಸ್‌ ನಲ್ಲಿ ಒಂದೊಂದು ಸಂಜೆ ಒಂದೊಂದು ಹಂಸಗೀತೆ

ನಾದಬ್ರಹ್ಮ ಹಂಸಲೇಖರವರ ಹುಟ್ಟು ಹಬ್ಬದ ಪ್ರಯುಕ್ತ ಹೊಸ ಆಪ್‌ ಆದ ಕ್ಲಬ್‌ ಹೌಸ್‌ ನಲ್ಲಿ ಅಡ್ಡಕಸಬಿ ಅಡ್ಡ ಎಂಬ ಕ್ಲಬ್‌ ನಲ್ಲಿ ಸಂಜೆ 6.30 ಕ್ಕೆ ಪ್ರತಿದಿನ 23.06.2021 ರವರೆಗೆ ʼಹಂಸಮಯʼ ಎಂಬ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳು ಈ ಕೆಳಗಿನ ಚಿತ್ರದಲ್ಲಿವೆ. ಕ್ಲಬ್‌ ಹೌಸ್‌ ನಲ್ಲಿ ಅಡ್ಡಕಸಬಿ ಅಡ್ಡ ಸೇರಲು ನಿಮ್ಮ ಮೊಬೈಲ್‌ ನಲ್ಲಿ ಕ್ಲಬ್‌ ಹೌಸ್‌ install ಮಾಡಿಕೊಂಡು ಲಾಗಿನ್‌ ಆದ ಮೇಲೆ ಈ ಲಿಂಕ್‌ ಕ್ಲಿಕ್ ಮಾಡಿ

ಮಳೆ ಊರಿನ ಹುಡುಗಿ…: ವೃಶ್ಚಿಕ ಮುನಿ

ನೆನಪಾಗುತ್ತೀಯ ಎಂದು ಪತ್ರ ಬರೆಯುತ್ತಿಲ್ಲ, ಪತ್ರ ಬರೆಯುತ್ತಿರುವುದು ನೆಪವಷ್ಟೆ ನೆನಪಿಗೆ ಉತ್ತರಿಸಲು.ಗೆ..ಮಳೆ ಊರಿನ ಹುಡುಗಿಗೆರಥ ಬೀದಿಯ ಕೊನೆಯ ತಿರುವುಕೆಂಪು ಹೆಂಚಿನ ಮನೆಫೋಸ್ಟ :ಮಳೆಊರು ಇಂದ..ಅಲೆಮಾರಿಯ ನೆಲೆಯಿಂದಖಾಸಾಕೋಣೆಯ ಬಿಸಿಯುಸಿರುಶಾಯಿಯಲ್ಲಿ. ಕ್ಷೇಮ ವಿಚಾರವಾಗಿ ಬರೆದ ಸಾಲುಗಳಲ್ಲಿ ಸಾಕಾಗುವಷ್ಟು ನೆನಪುಗಳಿವೆ. ಜಗದ ಯಾವ ಖಜಾನೆಯಲ್ಲಿ ತುಂಬಿ ಇಡಲು ಆಗದಷ್ಟು ಖಜಾನೆ ಲೂಟಿ ಗೆ ಕಳ್ಳರ ಭಯವಿಲ್ಲ. ನಾನು ನೀನು ಮಾತ್ರ ಜೀವಿತದ ಚಿತ್ರ ಶಾಲೆಯಲ್ಲಿ . ನೋಡು… ನಾನು ಎಷ್ಟು ಪೆದ್ದು ಅಂತಾ …! ಸರಿಯಾದ ಒಕ್ಕಣಿಕ್ಕೆಯನ್ನು ಕೊಟ್ಟು ಬರೆಯಲು ಆಗುವುದಿಲ್ಲ … Read more

ನಿನ್ನ ಕೆಳತುಟಿಯ ಪಕ್ಕ ಇರುವ ಮಚ್ಚೆಯ ಮೇಲಾಣೆ..: ಡಾ. ಪ್ರೀತಿ. ಕೆ. ಎ

ಬೆಳದಿಂಗಳ ನಗುವಿನ ಹುಡುಗಿಯೇ, ಮೊನ್ನೆ ನಿನ್ನನ್ನು ಭೇಟಿಯಾದ ನಂತರ ನಾನು ನಾನಾಗಿ ಉಳಿದಿಲ್ಲ. ನಿನ್ನ ನೆನಪುಗಳನ್ನು ಎಷ್ಟೇ ಕೊಡವಿಕೊಂಡು ಎದ್ದರೂ ಮತ್ತೆ ಮತ್ತೆ ನಿನ್ನೆಡೆಗೇ ವಾಲುತ್ತಿದ್ದೇನೆ. ಮೊದಲಿಗೆ ಇದು ನಿನ್ನೆಡೆಗಿನ ಆಕರ್ಷಣೆಯಷ್ಟೇ ಅಂದುಕೊಂಡಿದ್ದೆ. ಹೆಚ್ಚೆಂದರೆ ಯಾವುದೋ ಗಳಿಗೆಯಲ್ಲಿ ಹುಟ್ಟಿ ಕೆಲವು ದಿನಗಳವರೆಗೆ ಕಾಡಬಹುದಾದ ಮೋಹವೆಂದುಕೊಂಡೆ. ಉಹುಂ.. ನನ್ನೆಣಿಕೆ ತಪ್ಪಾಯಿತು. ನೀನು ನನ್ನನ್ನು ಆವರಿಸಿಕೊಂಡ ಪರಿಗೆ ಬೆರಗಾಗುತ್ತಿರುವಾಗಲೇ ನಿನ್ನ ನೆನಪುಗಳ ಬಂಧದಿಂದ ಬಿಡಿಸಿಕೊಳ್ಳಲು ಹೆಣಗಾಡುತ್ತಿದ್ದೇನೆ. ಯಾರೋ ಗೀಚಿದ ಕವಿತೆಯ ಸಾಲುಗಳಲ್ಲಿ, ಓದಲು ಕೈಗೆತ್ತಿಕೊಂಡ ಕಥೆಯಲ್ಲಿ, ರಫಿಯ ಸಂಗೀತದ ಅಮಲಿನಲ್ಲಿ… … Read more

ನನ್ನ ಪ್ರೀತಿಯೆಂಬ ನಿಷ್ಕಲ್ಮಶ ತೇರಿಗೆ…: ಕಾವ್ಯ ಎಸ್.‌

ನನ್ನ ಆತ್ಮದಂಥವನೇ……. ನಾ ನಿನ್ನೊಳಗಿನ ಅಂತರಾತ್ಮದಲ್ಲಿ ಹುದುಗಲು ಈ ಜನಮದಲ್ಲಿ ಸಾಧ್ಯವಾಗಲಿಲ್ಲ, ಕ್ಷಮಿಸೆಂದು ಕೇಳಲು ಒಳಮನಸ್ಸಿನ ಮುಖವಿಲ್ಲ. ಅರಿವಿರದ ಅವಧಿಯಲ್ಲಿ ನೀ ನನ್ನೊಳಗಿದ್ದಾಗ ನಾ ಅದನ್ನು ಅರಿಯದೇ ಅನಾಥಳಾದೆ. ನೀ ನನ್ನೊಳಗೆ ಅಂತರಂಗ ಬೆಳಗುವ ಆತ್ಮ ಶಕ್ತಿ. ನೀ ಪ್ರತಿಕ್ಷಣದಲ್ಲೂ ಆವಿರ್ಭವಿಸುವ ಬೆಳಕು. ನಿನ್ನ ಬೆಳಕಲ್ಲಿ ಹುಟ್ಟಿದ ಒಂದು ಪುಟ್ಟ ಕಿಡಿ ನಾನು. ನಿನ್ನನ್ನು ನಾ ಅಪ್ಪಿಯಾಗಿ ನನ್ನ ಮನಸ್ಸಿನಲ್ಲಿ ನಿನ್ನಂತೆ ಹಸಿರಿನ ಜಾಗ ಕೊಟ್ಟಿದ್ದೇನೆ. ಇಂದಿನ ಆಗು -ಹೋಗುಗಳ ವಾಸ್ತವಿಕತೆಯ ನೆಲೆಗಟ್ಟನ್ನು ಅರೆಕ್ಷಣ ಮರೆವಿನ ಗುಳಿಗೆಯಂತೆ … Read more

ಬದುಕು ಬರೀ ಇವೇ ಅಲ್ಲ ಎಂದು ನಾ ಬಲ್ಲೆ: ಸಹನಾ ಪ್ರಸಾದ್

ನನ್ನ ನಲ್ಲ, ಪ್ರಿಯತಮ, ಇನಿಯ, ಪ್ರಾಣಸ್ನೇಹಿತ, ಗೆಳೆಯ, ನನ್ನೊಲವೇ, ಜೀವವೇ, ಸ್ಪೂರ್ತಿಯೇ, ಮನದಲ್ಲಿ ಭದ್ರವಾಗಿ ತಳವೂರಿರುವ ಮೂರ್ತಿಯೇ…ಲವ್ ಯೂ…ತುಂಬಾ ತುಂಬಾ… ಉಮ್ಮ್…ನಿನ್ನ ಪ್ರೀತಿಯಲ್ಲಿ ಕೊಚ್ಚಿ ಹೋಗುತ್ತಿರುವ ನಿಮ್ಮ ಮನದನ್ನೆಯ ಪತ್ರ ಬರೀ ಪದಗಳ ಜೋಡನೆಯಲ್ಲ. ಹೃದಯದ ತಂತಿಗಳ ಮಿಡಿತ, ಧಮನಿಗಳಲ್ಲಿ ಸೇರಿ ಹೋಗಿರುವ ನಿಮ್ಮ ಪ್ರೀತಿಯ ತುಡಿತ,ಮನಸ್ಸಿನಲ್ಲಿ ಉಕ್ಕುತ್ತಿರುವ ಭಾವೆನೆಗಳನ್ನು ಪದಪುಂಜದಲ್ಲಿ ಹಿಡಿಯಲು ಮಾಡುತ್ತಿರುವ ಪ್ರಯತ್ನ! ಜೀವನದ ಸೆಲೆ ನೀವು, ಆಮ್ಲಜನಕದ ತರಹ ಅತ್ಯಾವಶ್ಯಕ ನನಗೆ. ನಿಮ್ಮ ಇರುವಿಕೆ ಬಹಳ ಮುಖ್ಯ. ಎದೆಬಡಿತ ನಿಮ್ಮದೇ ರಾಗ, ನಿಮ್ಮದೇ … Read more