ಧರ್ಮೊದಕ: ಚಂದಕಚರ್ಲ ರಮೇಶ ಬಾಬು
ಬೆಂಗಳೂರಿನಿಂದ ಹೊರಟು, ಹಂಪಿ ಎಕ್ಸ್ ಪ್ರೆಸ್ಸಿನಲ್ಲಿ ಹೊಸಪೇಟೆಗೆ ತಲುಪಿದ್ದೆ. ಅಲ್ಲಿಂದ ಹಂಪಿಗೆ ಹೊರಡುವುದಿತ್ತು. ರೈಲಿನ ಹೆಸರು ಹಂಪಿ ಎಕ್ಸ್ ಪ್ರೆಸ್ ಅಂತ ಇದ್ದರೂ ಅದು ಹಂಪಿಗೆ ಹೋಗುವುದಿಲ್ಲ. ಹಂಪಿಗೆ ನಿಲ್ದಾಣವೇ ಇಲ್ಲ. ಹೆಸರು ಮಾತ್ರ ಉಳಿದುಕೊಂಡಿದೆ. ಹೊಸಪೇಟೆಯಿಂದ ಹಂಪಿಗೆ ಅರ್ಧಗಂಟೆಗೊಂದು ಬಸ್ಸಿದೆ. ಹಾಗಾಗಿ ಬಸ್ ಸ್ಟಾಂಡಿನ ಎದುರಿನಲ್ಲಿರುವ ಉಡುಪಿ ಹೋಟೆಲಿಗೆ ಹೋಗಿ ಬೆಳಗಿನ ಪೆಟ್ರೋಲ್ ಹಾಕೋಣವೆಂದು ಹೊರಟೆ. ರೈಲಿನಲ್ಲಿ ಕಾಲು ನೀಡಿ ನಿದ್ರೆ ಮಾಡಿದ್ದರೂ, ಇನ್ನೂ ಪ್ರಯಾಣದ ದಣಿವು ಮಾತಾಡುತ್ತಿತ್ತು. ಹೋಟೆಲಿಗೆ ಹೋಗಿ ಸರ್ವರನಿಗೆ ಕಾಫಿ ಕೊಡಲು … Read more