ನಿತ್ಯೋತ್ಸವ ಮತ್ತು ನಾನು : ಉಷಾ ನರಸಿಂಹನ್

ಬದುಕಿನಲ್ಲಿ ಎಲ್ಲದಕ್ಕು ಮೊದಲೆಂಬುದಿರುತ್ತದೆ. ಭಾವಗೀತೆ ಕೇಳುವುದಕ್ಕು… ಸಾವಿರದೊಂಬೈನೂರ ಎಂಬತ್ತನೆ ಇಸವಿ. ನಮ್ಮ ಮನೆಗೆ ನಿತ್ಯೋತ್ಸವ ಕ್ಯಾಸೆಟ್ ತಂದರು. ಎಲ್ಲರ ಸಮಕ್ಷಮ ಟೇಪ್ ರೆಕಾರ್ಡರ್ ನಲ್ಲಿ ಹಾಕಿದರು. ನಾನು ಭಾವಗೀತೆಗಳನ್ನು ಕೇಳಿದ ಮೊದಲ ಬಾರಿಯದು. ಕವಿಯೇ ಕಾವ್ಯಸಾರಾಂಶ ಹೇಳಿದ ಪರಿ ಅನನ್ಯ. ಮನೋಜ್ಞ ಸಾಹಿತ್ಯ, ಸಂತುಲಿತ ರಾಗಸಂಯೋಜನೆ, ರತ್ನಮಾಲಾಪ್ರಕಾಶ್ ಅವರ ಮಧುಸಿಂಚಿತ ನುಣ್ದನಿ, ಮೈಸೂರು ಅನಂತಸ್ವಾಮಿ ಅವರ ಭಾವಪೂರ್ಣಗಾಯನ… ನಾನು ಹಾಡಿಗೆ ಪರವಶವಾದ ಮೊದಲ ಸಲವದು. ಬದುಕಿನಲ್ಲಿ ವಸಂತ ಅಡಿಯಿಡುತ್ತಿದ್ದ ರಮ್ಯಕಾಲದಲ್ಲಿದ್ದೆ! ನವಿರು, ಪುಳಕ, ತವಕಗಳಿಗೆ ಹಾತೊರೆಯುತ್ತಿದ್ದ ಮೈ … Read more

ವರ್ತಮಾನದಲ್ಲಿ ಬುದ್ಧ-ಬಸವ-ಬಾಬಾಸಾಹೇಬರು ಕುರಿತು ಸ್ವರಚಿತ ಬರಹಗಳ ಆಹ್ವಾನ

ಸಾಮಾಜಿಕ ಪರಿವರ್ತನ ಚಳುವಳಿಗಾರರ ಸ್ಮರಣೆಯಲ್ಲಿ ಗಣಕರಂಗ, ಧಾರವಾಡ ಆಯೋಜಿಸುವ ಸಾಮಾಜಿಕ ಶಾಂತಿ-ಮೈತ್ರಿಗಾಗಿ, ಬುದ್ಧ-ಬಸವ-ಬಾಬಾಸಾಹೇಬ(ತ್ರಿಬಿ) ನೆನಪಿನ ಕವಿಗೋಷ್ಠಿ-22ರಲ್ಲಿ, 2564ನೇ ಬುದ್ಧ ಪೂರ್ಣಿಮೆಯ ಪ್ರಯುಕ್ತ, “ವರ್ತಮಾನದಲ್ಲಿ ಬುದ್ಧ-ಬಸವ-ಬಾಬಾಸಾಹೇಬರು” ಕುರಿತು ಸ್ವರಚಿತ ಕವನ/ಪ್ರಬಂಧಗಳನ್ನು ಆಹ್ವಾನಿಸಲಾಗಿದೆ. ಕವನ/ಪ್ರಬಂಧ ಕಳಿಸಲು ಕೊನೆಯ ದಿನಾಂಕ: 24-05-2020 ಕಳಿಸಬೇಕಾದ ಇ-ಮೇಲ್ : ganakaranga@gmail.com ಆಸಕ್ತರ ಗಮನಕ್ಕೆ : 1.ಹೊಸತನದ ಪರಿಕಲ್ಪನೆಯ ಎಲ್ಲಿಯೂ ಪ್ರಕಟವಾಗಿರದ ಕನಿಷ್ಟ 30-35 ಸಾಲುಗಳ ಮಿತಿಯುಳ್ಳ ಸ್ವರಚಿತ ಕವನ ಅಥವಾ ಕನಿಷ್ಟ ಐದು ಪುಟಗಳಿಗೆ ಮೀರದಂತಿರುವ 1500 ಪದಗಳ ಮಿತಿಯಲ್ಲಿರುವ ಟೈಪಿಸಿದ ಪ್ರಬಂಧವನ್ನು ಕಳಿಸಬೇಕು. … Read more

ಕಾರ್ಮಿಕರ ಅಳಲು: ಸುನಿತಾ. ಎಸ್. ಪಾಟೀಲ

ಎಲ್ಲರೂ ಮಾಡುವುದು ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎಂಬ ಪದವನ್ನು ನಾವೆಲ್ಲರೂ ಕೇಳಿದ್ದೇವೆ. ಕೇಳಿ ತಲೆದೂಗಿದ್ದೇವೆ. ನಾವೆಲ್ಲಾ ಒಂದಲ್ಲಾ ಒಂದು ಉದ್ಯೋಗ ಮಾಡುತ್ತೇವೆ ಹಣಗಳಿಸುತ್ತೇವೆ. ಹೊಟ್ಟೆ ಮತ್ತು ಬಟ್ಟೆಗಾಗಿ ಸಂಪಾದನೆ ಮಾಡುತ್ತೇವೆ ಹಾಗಾದರೆ ನಮ್ಮ ಉದ್ಯೋಗದ ಉದ್ದೇಶ ಇಷ್ಟೇನಾ? ಹೊಟ್ಟೆ ತುಂಬಲು ದುಡಿಯುವುದು ಕಣ್ತುಂಬಾ ನಿದ್ದೆ ಮಾಡುವುದು, ಕೆಲಸಗಳು ಪ್ರಾರಂಭಿಸುವಾಗ ಬಹು ಕಷ್ಟವೆನಿಸುತ್ತದೆ ನಿಜ, ಆದರೆ ಒಂದು ಕಡೆ ಸಿದ್ದಯ್ಯ ಪುರಾಣಿಕರು ಹೇಳುವಂತೆ ‘ಸುಲಭವಾದದ್ದೆಲ್ಲಾ ಶುಭಕರವಲ್ಲ; ಕಷ್ಟವಾದದೆಲ್ಲ ಕಷ್ಟಪರವಲ್ಲ, ಎಂದು ಭಾವಿಸಿ, ಪ್ರಾರಂಭದಲ್ಲಿ ಕಷ್ಟವೆನಿಸಿದರೂ ಪರಿಣಾಮದಲ್ಲಿ ಫಲಪ್ರದವಾಗಿರುತ್ತದೆ ಎಂಬ … Read more

ಅಂತರ್ಜಾಲ ಬಳಸಿ ಪಾಠಬೋಧನೆ: ವೈ. ಬಿ. ಕಡಕೋಳ

ಕೊರೋನಾ ಬಂದಿದ್ದರಿಂದ ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಪರಿವರ್ತನೆಗೆ ನಾಂದಿಯಾಗಿದೆ. ಅದು ಅಂತರ್ಜಾಲ ಬಳಸಿ ಮನೆಯಿಂದಲೇ ಪಾಠವನ್ನು ಬೋಧನೆ ಮಾಡುವ ಮೂಲಕ ಎಲ್ಲರೂ ಈಗ ಅಂತರ್ಜಾಲ ಬಳಸುವ ಅನಿವಾರ್ಯತೆ ಎದುರಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಣದಲ್ಲಿ ಟೆಲಿ ಎಜುಕೇಶನ್ ಈಗಾಗಲೇ ಸೀಮಿತ ಶಾಲೆಗಳಿಗೆ ಬಂದಿತ್ತು. ಅಲ್ಲಿ ಕಂಪ್ಯೂಟರ ಮತ್ತು ಅಂತರ್ಜಾಲ ಸೌಕರ್ಯ ಬ್ಯಾಟರಿ ಇತ್ಯಾದಿ ಪರಿಕರಗಳನ್ನು ನೀಡಲಾಗಿತ್ತು. ಆ ರೀತಿ ವೇಳಾಪಟ್ಟಿಯ ಮೂಲಕ ಪಾಠಬೋಧನೆ ಕೂಡ ಸಾಗಿತ್ತು. ಹಾಗೆಯೇ ಹಲವಾರು ಸಭೆಗಳು ತರಭೇತಿಗಳು ಕೂಡ ಅಂತರ್ಜಾಲ ಬಳಸಿ ಸೆಟ್ ಲೈಟ್ … Read more

ಲಾಕ್ಡೌನ್, ಬೇರೆಬೇರೆ ದೃಷ್ಟಿಕೋನಗಳಿಂದ: ಸಹನಾ ಪ್ರಸಾದ್

ಸೀನ್ ೧: ಸೀತೆ: ಏನ್ರೀ ಇದು, ಎಷ್ಟು ಸಲ ಹೇಳಬೇಕು ನಿಮಗೆ. ಒದ್ದೆ ಟವೆಲು ಮಂಚದ ಮೇಲೆ ಹಾಕಬೇಡಿ ಅಂತ. ಒಗೆಯೊ ಬಟ್ಟೆ ವಾಶಿಂಗ್ ಮಶೀನಿಗೆ ಹಾಕಿ, ನೆಲದ ಮೇಲೆ ಬಿಸಾಡಬೇಡಿ. ಅಬ್ಬಾ, ಹೇಳಿ ಹೇಳಿ ಸುಸ್ತಾಯ್ತು! ರವಿ: ಅಯ್ಯೊ, ಹೋಗೆ. ಮದುವೆ ಆಗಿ ೧೫ ವರುಷ ಆದ್ರೂ ಅದೇ ರಾಗ ಹಾಡ್ತೀಯಲ್ಲ. ಹೊಸದೇನೂ ಸಿಗಲಿಲ್ಲವಾ? ಸೀ: ಅಲ್ಲ ರೀ, ಇಷ್ಟು ವರುಷ ಆದ್ರೂ ನೀವು ಬದಲಾಗಿಲ್ಲವಲ್ಲ. ಅದೇ ತಪ್ಪುಗಳು ಮಾಡ್ತಾ ಇದ್ರೆ ನಾ ಅದನ್ನೇ ಹೇಳಬೇಕಾಗುತ್ತೆ … Read more

ಪಂಜು ಕಾವ್ಯಧಾರೆ

ಅಪ್ಪನು ಯಾಕೋ ಹಿಂದಿದ್ದಾರೆ! ಅಮ್ಮ ಒಂಬತ್ತು ತಿಂಗಳು ಹೊತ್ತರೆ, ಅಪ್ಪ ಇಪ್ಪತ್ತೈದು ವರ್ಷ ಹೊತ್ತರೂ, ಯಾಕೋ ಅಪ್ಪ ಅಮ್ಮನಿಗಿಂತ ಹಿಂದಿದ್ದಾರೆ. ಮನೆಯಲ್ಲಿ ವೇತನ ಪಡೆಯದೆ ಅಮ್ಮ, ತನ್ನ ಸಂಪಾದನೆಯೆಲ್ಲ ಮನೆಗೆ ಖರ್ಚು ಮಾಡುವ ಅಪ್ಪ. ಇಬ್ಬರ ಶ್ರಮವೂ ಸಮಾನವಾದರು ಅಪ್ಪ ಯಾಕೋ ಹಿಂದಿದ್ದಾರೆ. ಏನು ಬೇಕೋ ಅದು ಪಾಕ ಮಾಡುವ ಅಮ್ಮ , ಏನು ಬೇಕೋ ಅದು ಕೊಡಿಸುವ ಅಪ್ಪ, ಇಬ್ಬರ ಪ್ರೀತಿಯೂ ಸಮಾನವೆಯಾದರೂ ಅಮ್ಮನಿಗೆ ಬಂದ ಹೆಸರಿಗಿಂತ ಅಪ್ಪ ಯಾಕೋ ಹಿಂದಿದ್ದಾರೆ. ಎದೆ ಮೇಲಿನ ಅಚ್ಚೆಯಲ್ಲಿ … Read more

ಲಾಟರಿ ಟಿಕೇಟು: ಜೆ.ವಿ.ಕಾರ್ಲೊ

ಲಾಟರಿ ಟಿಕೇಟು -ಆಂಟನ್ ಚೆಕೊವ್ ಅನುವಾದ: ಜೆ.ವಿ.ಕಾರ್ಲೊ ರಾತ್ರಿ ಊಟ ಮುಗಿಯುತ್ತಿದ್ದಂತೆಯೇ ಕೈಯಲ್ಲಿ ಪತ್ರಿಕೆಯನ್ನು ಹಿಡಿದು ಇವಾನ್ ಡಿಮಿಟ್ರಿಚ್ ಸೋಫಾದ ಮೇಲೆ ಮೈಚೆಲ್ಲಿದ. ವರ್ಷಕ್ಕೆ ಸಾವಿರದಿನ್ನೂರು ರೂಬಲುಗಳನ್ನು ದುಡಿಯುತ್ತಿದ್ದ ಅವನ ಸಂಸಾರ ನೌಕೆ ಯಾವುದೇ ವಿಘ್ನಗಳಿಲ್ಲದೆ ಸುಗಮವಾಗಿ ಸಾಗುತ್ತಿತ್ತು. “ನಾನಿವತ್ತು ಪತ್ರಿಕೆಯನ್ನು ನೋಡುವುದನ್ನೇ ಮರೆತು ಬಿಟ್ಟೆ..” ಊಟದ ಮೇಜನ್ನು ಸ್ವಚ್ಛಗೊಳಿಸಲು ಬಂದಿದ್ದ ಅವನ ಹೆಂಡತಿ ಹೇಳಿದಳು. “ಹಾಗೇ ಲಾಟರಿ ಫಲಿತಾಂಶ ಬಂದಿದೆಯಾ ನೋಡಿ.” ಎಂದಳು. ಡಿಮಿಟ್ರಿಚ್ ಪತ್ರಿಕೆಯ ಪುಟಗಳನ್ನು ತಿರುವುತ್ತಾ, “ಬಂದಿದೆ ಕಣೆ. ನೀನ್ಯಾವಾಗ ಲಾಟರಿ ಟಿಕೆಟ್ … Read more

ಬೆಂಗಳೂರಿನ ಬಸ್ಸಿನ ಸ್ವಗತಗಳು: ಶ್ರೀಕೊಯ

ಪ್ರಾರಂಭ. ನಾನು ಎಂದರೆ ? ಯಾರು ? ಇಗೋ ಈಗ ಹೇಳುತ್ತೇನೆ ಕೇಳಿ. ನಿಮ್ಮನ್ನು ಈ ಮಹಾ ನಗರಿಯಲ್ಲಿ ನಿಮಗೆ ಬೇಕಾದ ಸ್ಥಳಕ್ಕೆ ಹೊತ್ತೊಯ್ಯುವ ಬಸ್ಸು “ನಾನು” . ನನ್ನನ್ನು ನೀವು ’ ಬಸ್ಸಪ್ಪ’, ’ ಬಸ್ಸಣ್ಣ’ , ’ಬಂಧು’ ಎಂದೇ ಕರೆಯಬಹುದು. ನೀವು ಯಾವುದೇ ರೀತಿಯಲ್ಲಿ ಕರೆದರೊ ನನಗೆ ಬೇಸರವಿಲ್ಲ, ಏಕೆಂದರೆ ನೀವೆಲ್ಲರೊ ನನ್ನನ್ನು ದಿನವೂ ನಡೆಸಿಕೊಳ್ಳುವುದಕ್ಕಿಂತ ಅದೇ ವಾಸಿ ಎನಿಸುತ್ತದೆ. ನಾನು ಸಾಮಾನ್ಯನಲ್ಲ ಎಂಬುದು ನಿಮಗೆ ಈ ಬರಹದ ಕೊನೆಗೆ ತಿಳಿಯುತ್ತದೆ. ಬೆಂದಕಾಳೂರೆಂಬ ಒಂದು … Read more

ಸೋಲು: ಗಿರಿಜಾ ಜ್ಞಾನಸುಂದರ್

ಸಪ್ಪೆ ಮೊರೆ ಹಾಕಿಕೊಂಡು ಬರುತ್ತಿದ್ದ ಪ್ರೀತಿಯನ್ನು ಪಕ್ಕದ ಮನೆ ಆಂಟಿ “ಏನ್ ಪುಟ್ಟಿ! ರಿಸಲ್ಟ್ ಏನಾಯ್ತು? ಯಾವಾಗ್ಲೂ ಫಸ್ಟ್ ಬರ್ತಿದ್ದೆ ಅಲ್ವಾ. ಈಸಲ ಏನು? ಸ್ವೀಟು ಕೊಡ್ಲಿಲ್ಲ?” ಸುಮ್ಮನೆ ತಲೆ ತಗ್ಗಿಸಿ ಅಲ್ಲಿಂದ ಹೊರಟು ಬಂದಿದ್ದಳು. ಶಾಲೆಯಲ್ಲಿ ಎಲ್ಲದರಲ್ಲೂ ಮುಂದಿದ್ದ ಹುಡುಗಿ. ಇಡೀ ಶಾಲೆಗೆ ೧೦ನೇ ತರಗತಿಯಲ್ಲಿ ಎರಡನೇ ಸ್ಥಾನದಲ್ಲಿ ಪಾಸಾಗಿದ್ದವಳು. ಅವರಪ್ಪ ಅದಕ್ಕಾಗಿ ತಮ್ಮ ಸುತ್ತಮುತ್ತಲಿನ ಮನೆಗಳಿಗೆಲ್ಲ ಒಂದೊಂದು ಸ್ವೀಟ್ ಡಬ್ಬವನ್ನೇ ಹಂಚಿದ್ದರು. ತಮ್ಮ ಶಾಲೆಯಿಂದ ಬೇರೆ ಶಾಲಿಗಳಿಗೂ ಬಹಳಷ್ಟು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ತಂದುಕೊಟ್ಟವಳು. … Read more

ಬೇಸಿಗೆಯ ಸಂಡಿಗೆ ಹಪ್ಪಳವೆಂಬ ಮತ್ತೊಂದು ಸಂಭ್ರಮ..!!: ರಾಜೇಶ್ವರಿ ಲಕ್ಕಣ್ಣವರ

ಬೇಸಿಗೆಯ ಬಿಸಿಲು ನೆತ್ತಿಯನ್ನು ಕಾವಲಿಯಂತೆ ಕಾಯಿಸುತ್ತಿದೆ ನಿಜ. ಆದರೆ ಬೇಸಿಗೆಯ ಬಿಸಿಲು ಬಂದರೆ ಮಾತ್ರ ಅಜ್ಜಿಗೆ ಹಾಗೂ ಅಮ್ಮನಿಗೆ ಸಂಭ್ರಮ. ತರೇವಹಾರಿ ತಿಂಡಿಗಳನ್ನು ಬೇಸಿಗೆಯಲ್ಲಿ ತಯಾರಿಸಿ ವರ್ಷಪೂರ್ತಿ ಕಾಪಿಟ್ಟುಕೊಳ್ಳಬಹುದಲ್ಲ ಎಂಬ ಸಂತೋಷವೇ ಅವರ ಮೊಗದಲ್ಲಿ ಮನೆ ಮಾಡಿರುತ್ತದೆ. ಮಳೆಗಾಲದಲ್ಲಿ ಜೋರು ಮಳೆಗೆ, ಬೀಸುವ ಚಳಿಗೆ, ಹಬ್ಬದೂಟಗಳಿಗೆ ಹಪ್ಪಳ, ಸಂಡಿಗೆ, ಚಿಪ್ಸ್, ಮುಂತಾದವುಗಳು ಬೇಕೆ ಬೇಕೆಂಬುದು ಅವರಿಗಲ್ಲದೆ ಮತ್ಯಾರೂ ತಾನೇ ಅಷ್ಟೊಂದು ಚೆನ್ನಾಗಿ ಅರಿಯಲು ಸಾಧ್ಯ. ಇಂತಹ ತಿಂಡಿಗಳನ್ನು ತಯಾರಿಸಲು ಮಳೆಗಾಲ ಹಾಗೂ ಚಳಿಗಾಲ ಪ್ರಾಶಸ್ತ್ಯವಾದ ಸಮಯವಲ್ಲವೆಂದು ಗೊತ್ತಿರುವದರಿಂದ … Read more

ಬಂಧಗಳು, ಸಂಬಂಧಗಳು. ಸತ್ಯ… ಆದರೆ ಶಾಶ್ವತ ಅಲ್ಲ… : ಭಾರ್ಗವಿ ಜೋಶಿ

ಬದುಕಿನ ದೋಣಿಯ ಪಯಣದಲ್ಲಿ ಹಲವಾರು ರೀತಿಯ ಬಂಧಗಳು, ಸಂಬಂಧಗಳು ಬೆಸೆದಿರುತ್ತವೆ. ಕೆಲವು ಗಟ್ಟಿಯಾಗಿ ಬೇರೂರಿರುತ್ತವೆ ನಮ್ಮ ಮನಸಲ್ಲಿ ಮತ್ತು ಜೀವನದಲ್ಲಿ. ಕೆಲವು ಹೀಗೆ ಬಂದು ಹಾಗೆ ಹೋಗಿ ಬಿಡುತ್ತವೆ. ಹುಟ್ಟಿದಾಗ ಜೊತೆಯಲ್ಲಿ ಬಂದ ಸಂಬಂಧಗಳನ್ನು ರಕ್ತ ಸಂಬಂಧಗಳು ಎನ್ನುತ್ತೇವೆ. ಅವು ಎಂದಿಗೂ ಮಾಸದವು. ಬೇಕಾಗಲಿ, ಬೇಡವಾಗಲಿ ಮುಗಿಯದ ಅನುಬಂಧ ಅದು. ಯಾವುದೊ ಕೋಪ, ಬೇಜಾರು ಏನೇ ಬಂದ್ರು ಮತ್ತೆ ಸ್ವಲ್ಪ ಸಮಯಕ್ಕೆ ತಾನಾಗೇ ಎಲ್ಲ ಮರೆತು ಬೆಸೆವಂತೆ ಮಾಡುತ್ತದೆ. ಕೆಲವು ಸಂಬಂಧಗಳು ಎಂದೂ ಬೆಸೆಯದ ಹಾಗೆ ದ್ವೇಷ … Read more

ಕತ್ತಲು ಬೆಳಕಿನ ಹೊಯ್ದಾಟದಲ್ಲಿ ತೆರೆದ ಪತ್ರ ಪುಟಗಳು: ಪಿ.ಎಸ್. ಅಮರದೀಪ್.

ಮೂರು ದಿನದ ಹಿಂದೆ ಮನೆಯಲ್ಲಿ ಬೀಳುವ ಎಳೆ ಬಿಸಿಲಿಗೆ ಕುಳಿತ ಮಗನ ಮುಖದ ಮೇಲೆ ಕಿರಣಗಳು ಫಳಫಳಿಸುತ್ತಿದ್ದವು. ಅವನ ಮುಂದೆ ಫೈಬರ್ ಛೇರ್ ನೊಳಗೆ ಇಣುಕುವ ತುಂಡು ತುಂಡು ಚೌಕಾಕಾರದ ಕತ್ತಲು ಅವನ ಮುಖದ ಮೇಲಿತ್ತು. ತಕ್ಷಣವೇ ಕ್ಯಾಮೆರಾ ತೆಗೆದುಕೊಂಡು ಫೋಟೋ ಕ್ಲಿಕ್ಕಿಸಿದೆ. ಬ್ಯಾಕ್ ಟು ಬ್ಯಾಕ್ ನನಗೆ ಕತ್ತಲು ಬೆಳಕಿನ ಚಿತ್ರ ತೆಗೆವ ನನ್ನ ಕುತೂಹಲದ ಕಡೆ ಗಮನ ತೇಲಿತು. ಯಾಕೆ ನಾನು ಈ ಕತ್ತಲು ಬೆಳಕಿನ ಚಿತ್ರಗಳ ಸೆಳೆತಕ್ಕೆ ಬಿದ್ದೆ? ಯಾವಾಗಿನಿಂದ ಈ ಫೋಟೋ … Read more

ಕೈಯಲ್ಲಿ ಏಳು ಡಾಲರ್ ಹಿಡಿದು ಸ್ವಾಮೀಜಿ ಹೊರಟೇ ಬಿಟ್ಟರು : ಅಭಿಜಿತ್. ಎಮ್

ಇಸ್ಕಾನ್(ISKCON). ಈ ಸಂಸ್ಥೆಯ ಹೆಸರು ನೀವೆಲ್ಲರೂ ಕೇಳಿರಬಹುದು. ಇಂದು ಹೊರದೇಶಗಳಲ್ಲಿಯೂ ಹಿಂದೂ ಮಂದಿರಗಳಿವೆ ಎಂದರೆ, ಅದಕ್ಕೆ ಇಸ್ಕಾನ್ ಸಂಸ್ಥೆಯ ಕೊಡುಗೆ ಅಪಾರ. ಆದರೆ ಈ ಸಂಸ್ಥೆಯ ಸ್ಥಾಪಕರ ಬಗ್ಗೆ ಭಾರತದಲ್ಲಿಯೇ ತಿಳಿದಿರುವವರ ಸಂಖ್ಯೆ ಬಹಳ ಕಡಿಮೆ. ನೀವು ಯಾವುದಾದರೂ ದೇವಸ್ಥಾನಕ್ಕೆ ಹೋದಾಗಲೋ ಅಥವಾ ಜಾತ್ರೆಗಳಲ್ಲಿಯೋ ಅಥವಾ ಪುಸ್ತಕ ಮೇಳಗಳಲ್ಲಿಯೋ ಖಾದಿ ತೊಟ್ಟು, ತಲೆ ಹಿಂದೆ ಜುಟ್ಟು ಇರಿಸಿ, ಹಣೆ ಮೇಲೆ ಗಂಧದ ತಿಲಕವನ್ನು ಇಟ್ಟುಕೊಂಡು ಶ್ರೀಮದ್ ಭಗವದ್ಗೀತೆ ಗ್ರಂಥವನ್ನು ಮಾರಾಟ ಮಾಡುತ್ತಿರುವುದನ್ನು ನೀವು ಗಮನಿಸಿರಬಹುದು. ಇವರ ಎಲ್ಲಾ … Read more

ಉರಿಯುವ ಒಲೆಯೂ ಮತ್ತು ಹೊಳೆಯುವ ನಕ್ಷತ್ರವೂ ! : ಈರಮ್ಮ ಹಾವರಗಿ

ಈ ಬದುಕು ಕೇವಲ ಅನಿಶ್ಚಿತತೆಗಳ ನಡುವೆಯೇ ಕಳೆದು ಹೋಗಿ ಬಿಡುತ್ತದೆನೋ ಎಂಬ ಜಿಜ್ಞಾಸೆ ಮೂಡುತ್ತಿದೆ. ಏನನ್ನು ಸಾಧಿಸಲಾಗದೆ, ಅಂದುಕೊಂಡಂತೆ ಬದುಕಲಾಗದೆ ಜೀವನ ವ್ಯರ್ಥವಾದರೆ ಹೇಗೆ ? ಎಂಬ ನನ್ನ ಮನದ ದುಗುಡವನ್ನು ಹೇಳುವುದಕ್ಕೂ ಆಗದ ಪರಿಸ್ಥಿತಿ. ಹೆಣ್ಣಾಗಿ ಹುಟ್ಟಿದ್ದಕ್ಕೆ ಹೆಮ್ಮೆ ಪಡುತ್ತೇನೆ, ಜೊತೆಗೆ ಮದುವೆ,ಮಕ್ಕಳು, ಸಂಸಾರವೆಂಬ ಸಮಾಜದ ಕಟ್ಟು ಪಾಡುಗಳಿಗೆ ಹೆದರಿದ್ದೇನೆ. ಹಾಗಂತ ನಾನು ಅದನ್ನೆಲ್ಲ ವಿರೋಧಿಸುತ್ತಿಲ್ಲ. ನಮ್ಮ ಕನಸುಗಳಿಗೆ ಬೆಲೆ ಕೊಡದೆ ಹೆಣ್ಣನ್ನು ದ್ವಿತೀಯ ದರ್ಜೆಯ ಪ್ರಜೆಯನ್ನಾಗಿ ನೋಡಲಾಗುತ್ತಿದೆ, ಚಿಕ್ಕ ವಯಸ್ಸಿನಲ್ಲಿಯೆ ಮದುವೆ ಮಾಡಲಾಗುತ್ತಿದೆ. ನಮ್ಮ … Read more

ಸುಂದರ ಬದುಕಿನ ಸುಖಾಂತ ನಾಟಕ-As You Like It: ನಾಗರೇಖಾ ಗಾಂವಕರ

ಶೇಕ್ಸಪಿಯರ ರಿನೈಜಾನ್ಸ್ ಕಾಲದ ಶ್ರೇಷ್ಟ ನಾಟಕಕಾರ. ಇಂಗ್ಲೆಂಡಿನಲ್ಲಿ ಕ್ವೀನ ಎಲಿಜಬೆತ್ ಆಳ್ವಿಕೆಯ ಕಾಲ ಅದು. ಆತ ಬರೆದ As You Like It ರೋಮ್ಯಾಂಟಿಕ ಕಾಮೆಡಿ. ಗೊಲ್ಲ ಅಥವಾ ದನಗಾಯಿ ಸಂಪ್ರದಾಯದ ಕಾಲ್ಪನಿಕ ರಮಣೀಯ ಗ್ರಾಮೀಣ ಸೊಬಗನ್ನು ಕಟ್ಟಿಕೊಡುತ್ತ ಗೊಲ್ಲ ಜನಾಂಗದ ವೈಭವೀಕೃತ ಬದುಕನ್ನು ವಿಫುಲವಾಗಿ ತನ್ನ ಕಾವ್ಯದಲ್ಲಿ ವಿಜೃಂಬಿಸುತ್ತಾನೆ ಶೇಕ್ಸಪಿಯರ್. ರೋಮ್ಯಾಂಟಿಕ ಕಾಮೆಡಿಗಳಲ್ಲಿ ಪ್ರೇಮ ಪ್ರಮುಖವಾದ ಆಶಯ. ಇಟಲಿಯ ಡ್ಯೂಕ್ ಸಿನಿಯರ್ ತನ್ನ ಸ್ವಂತ ಸಹೋದರನ ಕರಾಮತ್ತಿಗೆ ಬಲಿಯಾಗಿ ರಾಜ್ಯಭ್ರಷ್ಟನಾಗಿ ಆರ್ಡನ್ ಕಾಡಿನಲ್ಲಿ ತನ್ನ ಸಂಗಡಿಗರೊಂದಿಗೆ … Read more

ನಾ..ನೀ.. ಕೇವಲ ಎರಡಕ್ಷರವಲ್ಲ: ಹೆಚ್. ಷೌಕತ್ ಆಲಿ, ಮದ್ದೂರು

ಯುವಕವಿ ಪ್ರಕಾಶ ಶಿವಲಿಂಗಪ್ಪ ಡೆಂಗಿಯವರು ವೃತ್ತಿಯಲ್ಲಿ ವೈದ್ಯರಾಗಿದ್ದು ಪ್ರವೃತ್ತಿಯಲ್ಲಿ ಒಬ್ಬ ಪ್ರಜ್ಞಾವಂತ ಕವಿಯಾಗಿ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡುತಲಿದ್ದಾರೆ. ಇವರ ಪ್ರತಿಭೆಗಳನ್ನು ಪೋಟೋಗ್ರಾಪಿಯಲ್ಲಿ, ಕಲಾಚಿತ್ರಗಳ ಸಂಗ್ರಹದಲ್ಲಿ, ನಿಸರ್ಗದ ಮಡಿಲಲ್ಲಿ ವಿಹರಿಸುವ ಪ್ರವಾಸಪ್ರಿಯರಾಗಿ, ಪುಸ್ತಕಗಳನ್ನು ಸಂಗ್ರಹಿಸುವುದರಲ್ಲಿ ಕಾವ್ಯವಾಚನ ಜತೆಯಲ್ಲಿ ಗಾಯನ ಪ್ರೀತಿಯಲ್ಲಿ ತಮ್ಮನ್ನೂ ತೊಡಗಿಸಿಕೊಂಡು ತಮ್ಮದೇ ಆದ ಲೋಕದಲ್ಲಿ ವಿಹರಿಸುವ ಮನೋವಿಕಾಸದ ಉತ್ತಮ ಸ್ನೇಹಿತ. ಪ್ರಸ್ತುತ ‘ನಾ..ನೀ’ ಕೇವಲ ಎರಡಕ್ಷರವಲ್ಲ ಕವಿತ ಸಂಕಲನ ಪ್ರಕಾರ ಡಂಗಿಯವರ ದ್ವೀತಿಯ ಕೃತಿಯಾಗಿದ್ದು ಅನುಭವಿಸಿದ ಅಥವಾ ಕಣ್ಣ ಮುಂದೆ ಹಾದು ಹೋಗುವ … Read more

ಕದಡುವ ನೆನಪುಗಳ ನಡುವೆಯೂ ಕಾಡುವ ಖಾಲಿತನ: ನಂದಾದೀಪ, ಮಂಡ್ಯ

ಕಿಟಕಯಿಂದಾಚೆ ಹೆಪ್ಪುಗಟ್ಟಿದ ಭಾನು, ಗೂಡು ಸೇರಿದ ಹಕ್ಕಿ, ಅಲ್ಲೊಂದು ಇಲ್ಲೊಂದು ಬೀಳುವ ಹನಿಗಳ ಕಂಡು ಖಾಲಿಯಾದ ಸಂತೆ, ನೀರವ ರಸ್ತೆ, ಇದೆಲ್ಲದರ ಜೊತೆಗೆ ಸಾವಿರ ನೆನಪುಗಳ ರಾಶಿ ಹಾಕಿಕೊಂಡು ಕೂತಿದ್ದರೂ ಮನದೊಳಗೆ ಆವರಿಸಿದ ಮೌನ, ಸಾವಿರ ಮಾತಿದ್ದರೂ ಮೌನದೊಂದಿಗೆ ಹೊಂದಿಕೊಂಡ ಖಾಲಿತನದ ಬದುಕು.. ಬದುಕು ಖಾಲಿತನ ಎನಿಸುವುದು ಒಂದು ಇಷ್ಟವಾದ ಬಾಂಧವ್ಯವೊಂದು ನಿರಾಶೆ ಮಾಡಿದಾಗ, ರಪರಪನೆ ಬಿದ್ದ ಮಳೆಗೆ ಎಲೆಗಳು ಉದುರಿದಂತೆ ಕನಸುಗಳು ಕಂಬನಿಯಲ್ಲಿ ಜಾರಿಹೋದಾಗ, ಆದರೆ ಹೇಳಿಕೊಳ್ಳಲು ಪದಗಳು ಇರುವುದಿಲ್ಲ.. ಅನುಭವಿಸಲು ಅಸಾಧ್ಯವೆನ್ನುವ ನೋವೊಂದು ಕಾಡುವಾಗ, … Read more

ನೈಸರ್ಗಿಕ ಸಂಪನ್ಮೂಲಗಳ ಬಳಕೆ: ಎಂ.ಎಚ್.ಮೊಕಾಶಿ

ಭೂಮಿಯು ಸೌರವ್ಯೂಹದ ನವಗ್ರಹಗಳಲ್ಲಿ ಒಂದು ವಿಶಿಷ್ಟ ಗ್ರಹವಾಗಿದೆ. ಇದರಲ್ಲಿ ಗಾಳಿ, ನೀರು, ಬೆಳಕು, ಮಣ್ಣು, ತೇವಾಂಶ ಮೊದಲಾದವುಗಳು ಜೀವಿಗಳು ವಾಸಿಸಲು ಅನುಕೂಲವಾದ ವಾತಾವರಣದ ಆವಾಸವನ್ನು ಸೃಷ್ಟಿಸಿವೆ. ಇದುವರೆಗಿನ ಸಂಶೋಧನೆಯಿಂದ ಸೌರವ್ಯೂಹದಲ್ಲಿ ಏಕಕೋಶ ಸೂಕ್ಷ್ಮ ಜೀವಿಯಾದ ಅಮೀಬಾದಿಂದ ಹಿಡಿದು ಜೀವವಿಕಾಸದ ಶೃಂಗದಲ್ಲಿರುವ ಮಾನವನವರೆಗಿನ ಜೀವಿಗಳಿರುವ ಏಕೈಕ ಗ್ರಹವೆಂದರೆ ಭೂಮಿಯೊಂದೇ ಆಗಿದೆ. ಭೂಮಿಯು ಅನೇಕ ನೈಸರ್ಗಿಕ ಸಂಪನ್ಮೂಲಗಳ ಆಗರ. ಸಾಮಾನ್ಯವಾಗಿ ಮಾನವನ ಅಭಿವೃದ್ಧಿಗಾಗಿ ಮಾನವರ ಉತ್ಪಾದನಾ ಕ್ರಿಯೆಗಳಲ್ಲಿ ಬಳಕೆಯಾಗುವ ನೈಸರ್ಗಿಕ ಪದಾರ್ಥಗಳನ್ನೆಲ್ಲಾ ನೈಸರ್ಗಿಕ ಸಂಪನ್ಮೂಲಗಳೆನ್ನುವರು. ಗಾಳಿ, ನೀರು, ಸೂರ್ಯನರಶ್ಮಿ, ಅರಣ್ಯ, … Read more

ಮುಗುಳ್ನಗೆಯ ಸರದಾರ: ಕೊಳ್ಳೇಗಾಲ ಶರ್ಮ

ಜಾಣಜಾಣೆಯರು ಮೋನಾಲಿಸಾ. ಈ ಹೆಸರು ಯಾರಿಗೆ ಗೊತ್ತಿಲ್ಲ? ಸೌಂದರ್ಯಕ್ಕೆ ಪ್ರತೀಕ ಎನ್ನುವ ಹೆಸರು ಇದು. ಸೌಂದರ್ಯಕ್ಕಿಂತಲೂ ಮುಗುಳ್ನಗೆಗೆ ಹೆಸರು. ಮೋನಾಲಿಸಾಳ ನಗು ಅತ್ಯಂತ ಸುಂದರವಾದದ್ದು ಎನ್ನುವ ಪ್ರತೀತಿ ಇದೆ. ಕವಿಗಳು ತಮ್ಮ ಮನದನ್ನೆಯರ ನಗುವನ್ನು ಈ ಇಟಲಿಯ ಹೆಣ್ಣಿನ ನಗುವಿಗೆ ಹೋಲಿಸುತ್ತಾರೆ. ಈಕೆ ಕ್ಲಿಯೋಪಾತ್ರಾಳಂತೆ ಯಾರೋ ರಾಣಿಯೂ ಅಲ್ಲ, ವೀನಸ್ಸಿನಂತೆ ಅಪ್ಸರೆಯೂ ಆಲ್ಲ. ವಾಸ್ತವವಾಗಿ ಮೊನಾಲೀಸಾ ಯಾರು ಎನ್ನುವುದೇ ಇನ್ನೂ ನಿಗೂಢ. ಆದರೆ ಅವಳ ಚಿತ್ರ ಮಾತ್ರ ಜಗತ್ಪ್ರಸಿದ್ಧ. ಹೀಗೆ ಸಾಮಾನ್ಯ ಹೆಣ್ಣೊಬ್ಬಳನ್ನು ಜಗತ್ಪ್ರಸಿದ್ದಳನ್ನಾಗಿ ಮಾಡಿ, ಮುಗುಳ್ನಗುವಿಗೆ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 17 & 18): ಎಂ. ಜವರಾಜ್

-೧೭- ಬಾಗಿಲು ಕಿರುಗುಟ್ಟಿತು ನನ್ನ ದಿಗಿಲು ಕಿರುಗುಟ್ಟಿದ‌ ಬಾಗಿಲ ಕಡೆಗೋಯ್ತು. ಅಯ್ನೋರು ಬಗ್ಗಿ ಹೊಸಿಲ ಮೇಲೆ ಕಾಲಿಟ್ಟು ಆಚೀಚೆ ನೋಡ್ತ ಬೀಡಿ ತಗ್ದು ತುಟಿಗಿಟ್ಟು ಕಡ್ಡಿ ಗೀರಿ ಬೀಡಿ ಮೊನೆಗೆ ಹಚ್ಚಿ ಅದೇ ಕಡ್ಡಿ ಬೆಳಕಲ್ಲಿ ನನ್ ಕಡೆ ತಿರುಗಿ ಆ ಬೆಳಕು ನನ್ ಮೇಲೂ ಬಿದ್ದು ಅಯ್ನೋರು ಹೊಸಿಲು ದಾಟಿ ನನ್ನ ಮೆಟ್ಟಿ ಬಲಗೈಲಿ ಸೂರು ಹಿಡಿದು ಎಡಗೈಲಿ ಬೀಡಿ ಹಿಡಿದು ಸೇದ್ತಾ ಹೊಗೆ ಬಿಡ್ತಾ ಇರೋವತ್ಲಿ ಒಳಗೆ ಸವ್ವಿ ಗುಕ್ಕಗುಕ್ಕನೆ ದುಮುಗುಡುತ ಅಳ್ತಾ ಇರೋದು … Read more

ಶೃತಿ ನೀ ಮಿಡಿದಾಗ (ಕೊನೆಯ ಭಾಗ): ವರದೇಂದ್ರ.ಕೆ ಮಸ್ಕಿ

ಇತ್ತ ಮನೆಯಲ್ಲಿ ಅಕ್ಕ ನಳಿನಿ ಕಡೆಯಿಂದ ಒಂದು ವಿಷಯ ಬಂತು. ಭಾವನ ತಮ್ಮ ನಿತಿನ್ ಅಮೇರಿಕಕ್ಕೆ ಹೋಗಿದ್ದ, ಇಂಜಿನಿಯರ್ ಕೆಲಸ, ಕೈತುಂಬಿ ಹಂಚಬಹುದಾದಷ್ಟು ಸಂಬಳ. ವಿದ್ಯಾವಂತ ಬುದ್ಧಿವಂತ. ನೋಡೋಕೆ ಸ್ಫುರದ್ರೂಪಿ, ಒಳ್ಳೆಯ ಮೈಕಟ್ಟು, ಸದಾ ಮುಗುಳ್ನಗೆಯ ಸರದಾರ, ನಿರಹಂಕಾರಿ, ಮಿತ ಮಾತುಗಾರ, ನಿಷ್ಕಲ್ಮಷ ಹೃದಯವಂತ, ಅಪ್ಪಟ ಬಂಗಾರದ ಗುಣವಂತ. ನಮ್ಮ ಶೃತಿಗೆ ತಕ್ಕುದಾದ ಜೋಡಿ; ಎಂದು ಅಕ್ಕ, ನಿತಿನ್ ಗೆ ಶೃತೀನ ತಂದುಕೊಳ್ಳೊ ವಿಚಾರ ಎತ್ತಿಬಿಟ್ಟಳು. ಇದ್ದಕ್ಕಿದ್ದ ಹಾಗೆ ಎರಗಿ ಬಂದ ವಿಷಯ ಶೃತಿ ಮನಸ್ಸಿಗೆ ತಳಮಳ … Read more

ಕರ್ನಾಟಕದ ಗಾಂಧಿ ಹರ್ಡೇಕರ್ ಮಂಜಪ್ಪ: ವೈ. ಬಿ. ಕಡಕೋಳ

ನಾವೆಲ್ಲ ಬಸವಜಯಂತಿ ಬಂದಾಗ ಬಸವಣ್ಣನವರ ಬದುಕಿನ ವ್ಯಕ್ತಿತ್ವ ಕುರಿತು ಮಾತನಾಡುತ್ತೇವೆ. ಹಾಗಾದರೆ ಈ ಬಸವ ಜಯಂತಿ ಆಚರಣೆ ಮೊದಲು ಮಾಡಿದವರ ನೆನಪನ್ನು ಈ ಸಂದರ್ಭದಲ್ಲಿ ನೆನೆಯುವುದು ಸೂಕ್ತವಲ್ಲವೇ. ? ಹರ್ಡೆಕರ ಮಂಜಪ್ಪನವರು ದಾವಣಗೇರೆಯಲ್ಲಿದ್ದಾಗ ಶ್ರೀಮನ್ ನಿರಂಜನ ಪ್ರಣವ ಸ್ವರೂಪಿ ಶ್ರೀ ಮೃತ್ಯುಂಜಯ ಮಹಾಸ್ವಾಮಿಗಳ ಒಡನಾಟ ಅಲ್ಲಿನ ಮಠದಲ್ಲಿ ಭಜನಾಸಂಘ ಮಾಡಿ ಪ್ರತಿ ಸೋಮವಾರ ಭಜನೆ ಮಾಡುವುದನ್ನು 26-6-1911 ರಲ್ಲಿ ಆರಂಭಿಸುತ್ತಾರೆ. ಹಾಗೆಯೇ ಶ್ರಾವಣ ಮಾಸೋಪನ್ಯಾಸಮಾಲಾ ಕಾರ್ಯಕ್ರಮ ಕೂಡ ಮಾಡುತ್ತಾರೆ. ನಂತರ 1913 ರಲ್ಲಿ ವೈಶಾಖ ಶುದ್ಧ ರೋಹಿಣಿ … Read more

ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ ..?: ಕೆ ಟಿ ಸೋಮಶೇಖರ್ ಹೊಳಲ್ಕೆರೆ.

ಭಕ್ತಿಯೇ ತುಂಬಿತುಳುಕಬೇಕಿರುವ ಭಗವಂತನ ಸನ್ನಿಧಿಯಲ್ಲಿ ಮಧ ಮತ್ಸರ ಲೋಬ ವಿಷಯಾದಿಗಳು ತುಂಬಿ ತುಳುಕುತ್ತಿರಬೇಕಾದರೆ ಅಲ್ಲಿ ಭಗವಂತ ನೆಲೆಸಲು ಹೇಗೆ ಸಾಧ್ಯ? ಸುಳ್ಳು ಕಪಟಗಳು ನನ್ನಲ್ಲಿ ನೆಲೆಸಲು ನಾನೇ ಆಶ್ರಯ ನೀಡಿ ಭಗವಂತ ನನ್ನಲ್ಲಿ ನೆಲೆಸಲು ಆಗದಂತೆ ನಾನೇ ಮಾಡಿದೆನಲ್ಲಾ ಎಂಬ ವಿಷಾದದ ದನಿಯೊಂದಿಗೆ ಕೆಳಗಿನ ಬಸವಣ್ಣನವರ ವಚನ ಕೊನೆಯಾಗುತ್ತದೆ. ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯಲ್ಲಿ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ ತನುವಿನಲ್ಲಿ ಹುಸಿ ತುಂಬಿ, ಮನದೊಳಗೆ ವಿಷಯತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲಾ ಕೂಡಲಸಂಗಮದೇವಾ … Read more

ಪಂಜು ಕಾವ್ಯಧಾರೆ

ಹೆದ್ದಾರಿ ಹೊದ್ದು ಮಲಗಿದವರು. ಬೆವತ ಚಂದಮಾಮನಂತ ಮೊಗದಿಂದ ಕಮಲೆಲೆಯಿಂದ ಜಾರುವ ಹನಿಯಂತೆ ಬೆವರಹನಿಗಳು ಸಾಲುಗಟ್ಟಿವೆ.! ಸಮನಾಂತರವಾಗಿ ಜೊಲ್ಲುರಸವೂ ತುಟಿಯಂಚಿಂದ ಜೋಗದಂತೆ ಸುರಿದು ತಲೆದಿಂಬಾಗಿ ಮಡಿಚಿಟ್ಟ ಮೆತ್ತನೆಯ ಅಮ್ಮನ ಸೀರೆ ಒದ್ದೆಯಾಗಿದೆ.!! ಗುಡಾರವು ನಾಲ್ದೆಸೆಯ ಗೂಟಗಳಿಗೆ ಬಿಗಿದಪ್ಪಿಕೊಂಡಿದೆ. ಬೀಸುವ ಗಾಳಿಯನ್ನು ನಿರ್ಭಂದಿಸಿ ಬೆರಗು ಮೂಡಿಸಿದೆ.! ಅಮ್ಮ ಕಣ್ಣುಬ್ಬುಗಳಿಗೆ ಕೈಯಡ್ಡಿ ಗುಡಾರದ ದ್ವಾರದಲ್ಲಿ ಸಿರಿವಂತರ ಸಿಂಗರಿಸಿ ಕಪಾಟಿನಲ್ಲಿಡುವ ಅಲಂಕಾರದ ವಸ್ತುಗಳ ಮಾರಾಟ ಮಾಡುತ್ತಿದ್ದಾಳೆ.!! ಅದು ರಾಜಪಥ ಇಬ್ಬದಿಯುದ್ದಕ್ಕೂ ಸುಂದರ ಮರಗಳ ಸಾಲು, ಪ್ರತಿ ಕ್ಷಣವೂ ರಾಜಾರಥಗಳ ಪಯಣ ನೋಡಲು ಇಕ್ಕಣ್ಣುಗಳು … Read more

ಕೆಂಪು ನೆರಳು!: ಎಸ್.ಜಿ.ಶಿವಶಂಕರ್

ವಾಸುದೇವರಿಗೆ ಗಾಢ ನಿದ್ರೆ. ಅಂತಾ ನಿದ್ರೆಯನ್ನು ಎಂದೂ ಮಾಡಿಲ್ಲ ಎನ್ನಿಸುವ ನಿದ್ರೆ. ಮೂರು ದಿನದಿಂದ ನಿದ್ರೆಯಿಲ್ಲದೆ ಹೈರಾಣಾಗಿದ್ದಕ್ಕೋ ಏನೋ..ಗಾಢ ನಿದ್ರೆ ಅವರಿಸಿತ್ತು! ಅಸ್ತಿತವನ್ನೇ ಮರೆಸಿದ ನಿದ್ರೆ! ದೇಹದ ಅರಿವಿಲ್ಲದ ನಿದ್ರೆ! ದೇಹದ ಭಾರವೇ ಇರಲಿಲ್ಲ! ತನಗೆ ಶರೀರವೇ ಇಲ್ಲ-ಎನ್ನುವಷ್ಟು ಹಗುರ, ನಿರಾಳ ಭಾವನೆ! ತಾನು ಬದುಕಿರುವೆನೋ? ಇಲ್ಲವೋ? ಜಾಗ, ಜಾವಗಳ ಅರಿವೇ ಇಲ್ಲದ ವಿಚಿತ್ರ ಹೊಚ್ಚ ಹೊಸ ಅನುಭವ! ಇಂತದು ಹಿಂದೆಂದೂ ಆಗಿರಲೇ ಇಲ್ಲ! ಎಲ್ಲಿರುವೆ? ಸಮಯ ಎಷ್ಟು? ಹಗಲೋ? ರಾತ್ರಿಯೋ? ಎಚ್ಚರವೇ ಇಲ್ಲ ಎಂದರೆ ಅದು … Read more

ಸಾಫಲ್ಯ: ಉಮೇಶ್‌ ದೇಸಾಯಿ

ಅದು ಅಖಿಲ ಭಾರತ ಮಟ್ಟದ ಸಂಗೀತದ ಅಂತಿಮ ಕಾರ್ಯಕ್ರಮ. ಕನ್ನಡದ ಆ ವಾಹಿನಿ ಅನೇಕ ವರ್ಷಗಳಿಂದ ಈ ಸ್ಫರ್ಧೆ ಏರ್ಪಡಿಸುತ್ತ ಬಂದಿದೆ. ಇಂದು ಅಂತಿಮ ಸುತ್ತು. ಎಲ್ಲ ಸ್ಫರ್ಧಿಗಳಲ್ಲೂ ವಿಚಿತ್ರ ತಳಮಳ ಈಗಾಗಲೇ ಈ ವಾಹಿನಿಯ ಈ ಅಂತಿಮಸ್ಫರ್ಧೆಯ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಂತೆಯೇ ಇತರೇ ಸುದ್ದಿವಾಹಿನಿಗಳಲ್ಲಿ ಈ ಕುರಿತು ಅನೇಕ ಚರ್ಚೆಗಳಾಗಿವೆ…ಯಾರು ಗೆಲ್ಲಬಹುದು ಪ್ರಶಸ್ತಿಯನ್ನು ಈ ಕುರಿತಾಗಿ ಅಲ್ಲಲ್ಲಿ ಬೆಟಿಂಗ್ ಕೂಡ ನಡೆಯುತ್ತಿದೆ ಎಂಬ ಸುದ್ದಿಯೂ ಅನೇಕ ವಾಹಿನಿಗಳಲ್ಲಿ ಹರಿದಾಡುತ್ತಿತ್ತು. ಸ್ಫರ್ಧಿಗಳಲ್ಲಿ ತಳಮಳವಿತ್ತು ನಿಜ ಅಂತೆಯೇ … Read more

ತಲಾಖ್: ಸಿದ್ದರಾಮ ತಳವಾರ, ದಾಸ್ತಿಕೊಪ್ಪ.

ಊರಿನ ಮುಂಭಾಗದಲ್ಲೇ ಶತಮಾನಗಳಷ್ಟು ಹಳೆಯದಾದ ಹುಣಸೀಮರದ ಬುಡದಲ್ಲಿ ಪೇಚು ಮಾರಿ ಹಾಕಿಕೊಂಡು ತಲೆ ಮೇಲೆ ಕೈ ಹೊತ್ತು ಕೂತ ಕರವೀರನನ್ನು ಸಮಾಧಾನ ಮಾಡಲು ಯಾರೊಬ್ಬರೂ ಮುಂದೆ ಬರಲಿಲ್ಲ. ಅಷ್ಟಕ್ಕೂ ಅಲ್ಲೇನಾಗಿತ್ತು ಎಂದು ಅದಾರಿಗೂ ಸ್ಪಷ್ಟವಾಗಿ ಗೊತ್ತಾಗಿರಲಿಲ್ಲ. ಎಲ್ಲರ ಮುಖದಲ್ಲೂ ಭಯ, ಸಂಶಯ, ಆಶ್ಚರ್ಯ, ಸಂದೇಹವೇ ಮನೆ ಮಾಡಿದಂತಿತ್ತು. ಆಗಷ್ಟೇ ಕಚೇರಿಯಿಂದ ಬಂದ ಮಂಜನಿಗೆ ಇದಾವುದರ ಪರಿವೆಯೂ ಇರಲಿಲ್ಲವಾದರೂ ಅಲ್ಲಿ ಏನೋ ಒಂದು ದುರ್ಘಟನೆ ಜರುಗಿರಬಹುದೆಂಬ ಗುಮಾನಿಯಂತೂ ಮಂಜನ ತಲೆಯಲ್ಲಿ ಓಡುತ್ತಿತ್ತು. “ ಹಾಂ,, ನನ್ ಮಗಳು ಅಂಥಾದ್ದೇನು … Read more

ಭಾರತ ಭಾಗ್ಯವಿಧಾತನಿಗೊಂದು ಸಲಾಂ: ನಾಗರಾಜನಾಯಕ ಡಿ.ಡೊಳ್ಳಿನ

ಇತ್ತ ಧಾರವಾಡದ ಕೆ.ಸಿ.ಡಿ ಮೈದಾನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅವರ ಭಾರತ ಭಾಗ್ಯವಿಧಾತ ಕಾರ್ಯಕ್ರಮ ಧ್ವನಿ ಬೆಳಕು ಎಲ್ಲ ಕಲಾಪ್ರಕಾರಗಳನ್ನೊಳಗೊಂಡ ಕಾರ್ಯಕ್ರಮ ಉತ್ತಮವಾಗಿ ಮೂಡಿಬರುತ್ತಿತ್ತು. ಆ ಅದ್ಧೂರಿ ಸೆಟ್, ಝಗಮಗಿಸುವ ಬೆಳಕು, ಹಿನ್ನೆಲೆ ಧ್ವನಿ, ಗೊರವರ ಕುಣಿತ, ಪುರವಂತಿಕೆ, ಯಕ್ಷಗಾನ, ಗೀಗಿ ,ತಮಾಷಾ ,ಡೊಳ್ಳು ಇನ್ನಿತರ ಕಲಾಪ್ರಕಾರಗಳ ಕಾರ್ಯಕ್ರಮ ಅದ್ಭುತವಾಗಿದ್ದ ಈ ಕಾರ್ಯಕ್ರಮ ನೋಡುತ್ತಿದ್ದಂತೆಯೇ ನನ್ನ ಮನಸ್ಸು 2008 ರಲ್ಲಿ ಬುದ್ಧವಿಹಾರದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಅಂತರ ಮಹಾವಿದ್ಯಾಲಯದ ಶಿಬಿರದ ಘಟನೆಗಳತ್ತ ಮನಸ್ಸು … Read more

ಗೃಹ ಬಂಧನದ ಸದ್ಬಳಕೆ: ಸೂರಿ ಹಾರ್ದಳ್ಳಿ

ಕೊರೋನಾ ಮಾರಿಯಿಂದಾಗಿ ಭಾರತದಲ್ಲಿ ಲಾಕ್‍ಡೌನ್ ಅನುಭವಿಸಬೇಕಾಗಿ ಬಂದಿದೆ. ನಾಲ್ಕು ಗೋಡೆಗಳ ನಡುವೆ ಬಂಧಿಯಾಗಿರಬೇಕಾಧ ಇಂತಹ ಸಂದರ್ಭಗಳಲ್ಲಿಯೂ ನಮ್ಮ ಸಮಯವನ್ನು ಹೇಗೆ ಉಪಯೋಗಿಸಿಕೊಳ್ಳಬಹುದು ಎಂಬುದಕ್ಕೆ ಕೆಲ ಟಿಪ್ಸ್‍ಗಳು ಇಲ್ಲಿವೆ. ನಿಮ್ಮ ಸಂಬಂಧಿಕರ, ಗೆಳೆಯರ, ಶತ್ರುಗಳ ಹೆಸರಿನ ಪಟ್ಟಿ ಮಾಡಿ. ಅವರ ವಿಳಾಸಗಳು, ದೂರವಾಣಿ ಸಂಖ್ಯೆಗಳು, ಇ-ಮೈಲ್ ಐಡಿಗಳು, ಇವನ್ನೆಲ್ಲಾ ಸಂಗ್ರಹಿಸಿ ನಿಮ್ಮ ಕಂಪ್ಯೂಟರಿನಲ್ಲಿ ಅಥವಾ ಪುಸ್ತಕಗಳಲ್ಲಿ ಬರೆದಿಡಿ. ಅರೆರೆ, ಇವರ ಸಂಖ್ಯೆ ಇಷ್ಟೊಂದಿದೆಯೇ ಎಂಬ ಅಚ್ಚರಿ ನಿಮಗಾಗಿಯೇ ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಅವಶ್ಯಕ ಕೆಲಸಗಳಿಗೆ ಬೇಕಾದವರ ಹೆಸರನ್ನು … Read more

ಇಳಾ ಕಾದಂಬರಿ: ಚಂದ್ರು ಪಿ ಹಾಸನ್

ಕರೋನಾದ ಹಿನ್ನೆಲೆಯಲ್ಲಿ ರಜೆಯೊಂದಿಗೆ ಮಜಾ ಮಾಡುತ್ತಿದ್ದ ಸಂದರ್ಭದಲ್ಲಿ , ದಿನದ ಕೆಲಕಾಲ ಸಾಹಿತ್ಯದಲ್ಲಿ ಒಲವು ಮೂಡುತ್ತಿತ್ತು. ಇಂದಿನ ಸಾಹಿತ್ಯಾಸಕ್ತಿಯ ಆ ಕಾಲದಲ್ಲಿ ನನ್ನ ಹಿತಚಿಂತಕರು, ಮಾರ್ಗದರ್ಶಕರು ಆದಂತಹ ಶ್ರೀಮತಿ ವಾಣಿ ಮಹೇಶ್ ರವರು ಒಮ್ಮೆ ಪರಿಚಯಿಸಿದ ಪುಸ್ತಕ ಶ್ರೀಮತಿ ಶೈಲಜಾ ಹಾಸನ ಇವರ ಇಳಾ ಕಾದಂಬರಿಯನ್ನು ಓದಿದೆ ಎಂದು ಹೇಳಲು ಹರ್ಷಿಸುತ್ತೇನೆ. ಸಕಲ ಸದ್ಗುಣಗಳನ್ನು ತನ್ನಲ್ಲಿ ತುಂಬಿಕೊಂಡಿರುವ ಭೂಮಿಯಂತೆ, ಒಂದು ಹೆಣ್ಣಿನ ಕಥೆ ಇಳಾ. ತನ್ನ ತಂದೆಯ ಸಾವಿನಿಂದ ಕೃಷಿ ಜಗತ್ತಿಗೆ ತಿಳಿಯಬೇಕಾದ ಇಳಾ ತಂದೆಯನ್ನು ದೂಷಿಸದೆ … Read more