ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 9): ಎಂ. ಜವರಾಜ್

೯- ಅಯ್ಯಯ್ಯೋ ಬನ್ರಪ್ಪ ಅಯ್ಯಯ್ಯೋ ಬನ್ರವ್ವ ಅಯ್ಯಯ್ಯೋ ಬನ್ರಣ್ಣ ಅಯ್ಯಯ್ಯೋ ಬನ್ರಕ್ಕ ಅಯ್ಯಯ್ಯೋ ಯಾರ್ಯಾರ ಬನ್ನಿ ಈ ಅಯ್ನೋರು  ಆ ನೀಲವ್ವನ ನನ್ನ ಮೆಟ್ದ ಮೆಟ್ಲಿ ತುಳ್ದು ತುಳ್ದು ಜೀವ ತಗಿತಾವ್ನ ಬನ್ನಿ ಬನ್ಬಿ.. ಅಂತಂತ ನಾನ್ ಕೂಗದು ಕೇಳ್ನಿಲ್ವಲ್ಲೊ.. ಆಗ ಜನ ಜಗನ್ ಜಾತ್ರಾಗಿ ಆ ನೀಲವ್ವ  ಅಯ್ಯೋ ಉಸ್ಸೋ ಅನ್ಕಂಡನ್ಕಂಡು ಸುದಾರುಸ್ಕಂಡು ಮೇಲೆದ್ದು  ನಿಂತ ಜನ ನೋಡ್ತ ನೋಡ್ತ ಮೋರಿ ದಾಟಿ ಜಗುಲಿ ಅಂಚಿಗೆ ಕುಂತು ಗೋಳಾಡ್ತ ಗೋಳಾಡ್ತ  ಜಗುಲಿ ಕಂಬ ಒರಗಿದಳಲ್ಲೋ… ‘ಅಯ್ನೋರಾ.. … Read more

ಕ್ಷಮೆ ಮತ್ತು ರಾಜಿ ಸೂತ್ರ ಪ್ರತಿಪಾದಿಸುವ The tempest: ನಾಗರೇಖ ಗಾಂವಕರ

ಆಫ್ರಿಕಾದ ಟ್ಯುನಿಸ್‍ನಲ್ಲಿ ವಿವಾಹಕಾರ್ಯದಲ್ಲಿ ಭಾಗವಹಿಸಿ ಮರಳುತ್ತಿದ್ದ Neapolitansಗಳಾದ [ನೇಪಲ್ಸ್‍ನ ನಿವಾಸಿಗಳು] ಇಟಲಿಯ ನೇಪಲ್ಸ್‍ನ ರಾಜ ಅಲೆನ್ಸೋ ಆತನ ಪುತ್ರ ಫರ್ಡಿನಾಂಡ್, ಸಹೋದರ ಸೆಬಾಸ್ಟಿಯನ್ ಹಾಗೂ ಮಿಲನ್‍ನ ಡ್ಯೂಕ್ ಅಂಟೋನಿಯೋ ಮತ್ತು ಇತರ ಸಂಗಡಿಗರಿದ್ದ ಹಡಗು ಸಮುದ್ರ ಮಧ್ಯೆ ಬಿರುಗಾಳಿಯ ಹೊಡೆತಕ್ಕೆ ನಲುಗಿ ಹೋಗಿದೆ. ಇದಕ್ಕೆ ಕಾರಣ ಪ್ರೊಸ್ಪೆರೋ. ಆತನ ಉದ್ದೇಶವೆಂದರೆ ಅವರೆಲ್ಲಾ ತಾನು ವಾಸವಾಗಿದ್ದ ಆ ನಡುಗಡ್ಡೆಗೆ ಬರುವಂತಾಗಬೇಕು. ಅದಕ್ಕಾಗಿ ಅತ ತನ್ನ ಮಾಂತ್ರಿಕ ವಿದ್ಯೆಯನ್ನು ಬಳಸಿ ಚಂಡಮಾರುತವನ್ನೆಬ್ಬಿಸಿದ್ದಾನೆ. ಇದಕ್ಕೆ ಕಾರಣವಿದೆ. ಆತನಿಗೆ ಅವರಿಂದ ಅನ್ಯಾಯವಾಗಿದೆ. ಮಿಲನ್‍ನ … Read more

ಆಧ್ಯಾತ್ಮಿಕತೆಯ ಆಧುನಿಕ ನೆಲೆ……: ಪ್ರವೀಣ್.ಪಿ

ಆಧುನಿಕತೆಯ ಸುಳಿಯಲ್ಲಿ ಸಿಲುಕಿರುವ ಇಂದಿನ ಸಮಾಜ ವಿಭಿನ್ನತೆಯೊಂದಿಗೆ ಹೊಸ ಬದುಕಿಗೆ ತೆರದುಕೊಳ್ಳಲು ಹವಣಿಸುತ್ತಿದೆ. ಬದಲಾದ ಸಾಮಾಜಿಕ ವ್ಯವಸ್ಥೆಯಲ್ಲಿ ಹೊಸತನದ ಅಲೆಯೊಂದು ಜನರನ್ನ ಬೇರೆ ದಿಕ್ಕಿಗೆ ಸೆಳೆಯುತ್ತಿದೆ. ಮಾರ್ಡನಿಟಿಗೆ ಮಾರುಹೋದ ಜನರು ತಮ್ಮ ಆಲೋಚನೆ ಹಾಗೂ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಲು ಆರಂಭಿಸಿದ್ದಾರೆ. ಪ್ರೀತಿಯು ಆಧುನಿಕತೆಯ ನೆಲೆಯಲ್ಲಿ ನಡೆಯುತ್ತಿದೆ. ಇದರಲ್ಲಿ ಆಧ್ಯಾತ್ಮಿಕ ಕ್ಷೇತ್ರವು ಹೊರತಾಗಿಲ್ಲ. ಆಧ್ಯಾತ್ಮವು ಇಂದು ಉದ್ಯಮಶೀಲತೆಯ ತಳಹದಿಯಲ್ಲಿ ಸಾಗುತ್ತಿದೆ. ಆಚಾರ, ಸಂಪ್ರದಾಯ, ಪೂಜೆ, ಪುನಸ್ಕಾರ, ಸಂಸ್ಕೃತಿ ಎಲ್ಲವೂ ಆಧುನೀಕರಣದೊಂದಿಗೆ ಬೆರೆತು ಹೋಗಿದೆ. ಇದರ ಪರಿಣಾಮ ಹುಡುಗರಲ್ಲಿ ಬೇರೊಂದು … Read more

ಜೀವನ ಕೌಶಲ್ಯಗಳು: ಕೆ ಟಿ ಸೋಮಶೇಖರ್ ಹೊಳಲ್ಕೆರೆ

ತಗ್ಗು ದಿಬ್ಬ ಗುಂಡಿ ಗೊಟರು ಸರೋವರ ಸಂದುಗೊಂದುಗಳಲಿ ಬದುಕಿನಬಂಡಿ ಅಪಾಯಕ್ಕೆ ಸಿಲುಕದಂತೆ ಉಪಾಯವಾಗಿ ಪಾರುಮಾಡಿ ಮುಟ್ಟಬೇಕಾದ ಗುರಿ ತಲುಪುವಂತೆ ಮಾಡುವ ಜೀವನ ಕೌಶಲ್ಯಗಳು ಎಲ್ಲರಿಗೂ ಅವಶ್ಯ ಅಮೂಲ್ಯ! ಬದುಕಿನಲ್ಲಿ ಶಾಲೆ, ಶಾಲೆಯಲ್ಲಿ ಪಠ್ಯಪುಸ್ತಕ, ಪಠ್ಯ ಪುಸ್ತಕದಲ್ಲಿ ಸ್ವಲ್ಪ ಬದುಕು ಇರುವುದು. ಪಠ್ಯಕ್ಕಿಂತ ಪಠ್ಯದಿಂದ ಹೊರಗಡೆಯೇ ಹೆಚ್ಚು ಬದುಕು ವ್ಯಾಪಿಸಿರುವುದು! ಶಾಲೆ, ಪಠ್ಯ ಪುಸ್ತಕ, ಅದರಲ್ಲಿನ ಜ್ಞಾನ ಏಕೆ ಬೇಕು! ಅವಿಲ್ಲದೆ ಬದುಕಲು ಆಗುವುದಿಲ್ಲವೆ? ಆಗುತ್ತದೆ! ಆದರೆ ಪಠ್ಯದಿಂದ ಹೊರಗಿರುವ ಬದುಕನ್ನು ವ್ಯವಸ್ಥಿತವಾಗಿ ಬದುಕುವಂತಾಗಲು, ಈಗ ಇರುವ ಬದುಕನ್ನು … Read more

ಪಂಜು ಕಾವ್ಯಧಾರೆ

ಬಾಲಲೀಲೆಗಳು ಮರಳಬೇಕೆನಿಸುತಿದೆ ಆ ಸಮೃದ್ಧಿಯ ದಿನಗಳಿಗೆ. ನುಗ್ಗಿಬರುತಿವೆ ನೆನೆಪುಗಳ ಬುಗ್ಗೆ, ಮನಸಿಗೆ ಬಂಧನವಿರದ, ಹೃದಯಕೆ ದಣಿವಾಗದಿರದ, ಆ ಮುಗ್ದ ಮುಕ್ತ ರಸವತ್ತಾದ ದಿನಗಳಿಗೆ. ಕಣ್ಣಿಗೆ ಕಟ್ಟಿದಂತಿವೆ ಆ ಆಟ ಪಾಟಗಳು… ಬೀದಿ ಬೀದಿ ಅಲೆದು ಹುಣೆಸೆ ಬೀಜ ಗುಡ್ಡೆಯಾಕಿ ಅಟಗುಣಿ ಆಡಿದ್ದು. ಹಳ ಕೊಳ್ಳಗಳ ಶೋಧಿಸಿ ಕಲ್ಲುತಂದು ಅಚ್ಚಿನಕಲ್ಲು ಆಡಿದ್ದು. ಬಳಪ ಸೀಮೆಸುಣ್ಣ ಸಿಗದೆ ಇದ್ದಲಿನಲಿ ಚೌಕಬಾರ ಬರೆದಿದ್ದು. ಕುಂಟೆಬಿಲ್ಲೆ ಆಡಿ ಕಾಲು ಉಣುಕಿಸಿಕೊಂಡಿದ್ದು. ಕಣ್ಣಾಮುಚ್ಚಾಲೆ ಹಾಡುವಾಗ ಕಣಜದಲಿ ಅಡಗಿ ನೆಲ್ಲಿನ ನವೆಗೆ ದಿನವೆಲ್ಲಾ ಮೈಕೆರೆದುಕೊಂಡಿದ್ದು. ಬರಿಗಾಲಲ್ಲಿ … Read more

ಕೋಳಿ ಮತ್ತು ಕೊರೋನ: ಡಾ. ನಟರಾಜು ಎಸ್. ಎಂ.

ವರ್ಷ ಎರಡು ಸಾವಿರದ ಹದಿಮೂರರ ಡಿಸೆಂಬರ್ ತಿಂಗಳು ಅನಿಸುತ್ತೆ. ಜಲ್ಪಾಯ್ಗುರಿಯಲ್ಲಿ ತುಂಬಾ ಚಳಿ ಇತ್ತು. ಒಂದು ಮುಂಜಾನೆ ಯಾವುದೋ ರೋಗ ಪತ್ತೆ ಹಚ್ಚಲು ನಮ್ಮ ಟೀಮ್ ಜೊತೆ ಕಾರಿನಲ್ಲಿ ಹೊರಟ್ಟಿದ್ದೆ. ನನ್ನ ಜೊತೆ ನನ್ನ ಡಾಟ ಮ್ಯಾನೇಜರ್, ಇಬ್ಬರು ಹೆಲ್ತ್ ವರ್ಕರ್ಸ್ ಮತ್ತು ಡ್ರೈವರ್ ಇದ್ದ. ಹೆಲ್ತ್ ವರ್ಕರ್ ಆಗಿದ್ದ ತೊರಿಕ್ ಸರ್ಕಾರ್ ಗೆ ಅವತ್ತು ತುಂಬಾ ಕೆಮ್ಮಿತ್ತು. ಕೆಮ್ಮಿದ್ದರೂ ಆತ ಮಾರ್ಗ ಮಧ್ಯೆ ಆಗಾಗ ಸಿಗರೇಟ್ ಸೇದುತ್ತಲೇ ಇದ್ದ. ಆತ ಮುಂದೆ ಡ್ರೈವರ್ ಪಕ್ಕ ಕುಳಿತ್ತಿದ್ದ. … Read more

ಕನ್ನಡ v/s ಇಂಗ್ಲಿಷ್ : ಸೂರಿ ಹಾರ್ದಳ್ಳಿ

ನಮ್ಮ ಕಂಪನಿಯಲ್ಲಿ ಕನ್ನಡೇತರರಿಗೆ ಕನ್ನಡ ಪಾಠ ಮಾಡುತ್ತಿದ್ದೆ. ಅಕ್ಷರಗಳ ಮಾಲೆ ಕೊಟ್ಟಾಗ ‘ಓಹ್ ಮೈ ಗಾಡ್,’ ಎಂಬೊಂದು ಉದ್ಗಾರ ಹಿಂದಿನಿಂದ ಬಂತು. ಇಂಗ್ಲಿಷಿನ ಇಪ್ಪತ್ತಾರು ಅಕ್ಷರಗಳು ಸರಿಯೆಂದ ನಮ್ಮವರು ಕನ್ನಡದಲ್ಲಿ ಇಷ್ಟೊಂದು ಅಕ್ಷರಗಳೇ, ಕಲಿಯಲು ಕಷ್ಟ ಎಂದು ಮೂಗು ಮುರಿಯುತ್ತಾರೆ. ಆದರೆ ಚೀನೀ ಭಾಷೆಯಲ್ಲಿ ಸುಮಾರು 43 ಸಾವಿರ ಅಕ್ಷರಗಳಿವೆ ಎಂದರೆ ನಂಬುವಿರಾ? ನಂಬಲೇಬೇಕು. ಆದರೆ ಒಬ್ಬ ವ್ಯಕ್ತಿಯು ಮಾತನಾಡಲು ಮೂರನೆಯ ಒಂದು ಭಾಗ ಮಾತ್ರ ಕಲಿತರೆ ಸಾಕಂತೆ. ಆದರ ಇನ್ನೊಂದು ದುರಂತ ಎಂದರೆ ಅದು ಧ್ವನಿ … Read more

ನಂಬಿಕೆ ದ್ರೋಹ ಮತ್ತು ದ್ವೇಷದ ಕಥಾನಕ- ಹ್ಯಾಮ್ಲೆಟ್: ನಾಗರೇಖ ಗಾಂವಕರ

ಆತ ಪ್ರಿನ್ಸ್ ಹ್ಯಾಮ್ಲೆಟ್ ಕಪ್ಪು ಬಟ್ಟೆ ಧರಿಸಿದ ಆತ ಮಾನಸಿಕವಾಗಿ ದ್ವಂದ್ವ ಸ್ಥಿತಿಯಲ್ಲಿದ್ದಾನೆ. ಅಷ್ಟೇ ಅಲ್ಲ ರೊಚ್ಚಿಗೆದ್ದಿದ್ದಾನೆ. ಕಾರಣ ತಂದೆ ಡೆನ್ಮಾರ್ಕನ ರಾಜ ಹ್ಯಾಮ್ಲೆಟ್ ಸಾವನ್ನಪ್ಪಿದ್ದಾರೆ. ತಾಯಿ ರಾಣಿ ನಾಚಿಕೆಯಿಲ್ಲದೇ ನಿಷ್ಠೆ ಇಲ್ಲದೇ ಮರುವಿವಾಹವಾಗಿದ್ದಾಳೆ. ಅದು ರಾಜಕುಮಾರನಿಗೆ ಇಷ್ಟವಿಲ್ಲ. ಆಕೆ ಹಾಗೆ ಮಾಡಿದ್ದು ತನ್ನ ತಂದೆಗೆ ಮಾಡಿದ ದ್ರೋಹವೆಂದೆನ್ನಿತ್ತದೆ.ಹಾಗಾಗಿ ಆತನ ಒಳಗುದಿ ಕುದಿಯುತ್ತಿರುವುದು ಬರಿಯ ತಂದೆಯ ಸಾವಿನಿಂದಲ್ಲ. ಬದಲಿಗೆ ತಾಯಿಯ ಮರುವಿವಾಹ ಅದೂ ತನ್ನ ಚಿಕ್ಕಪ್ಪ ಕ್ಲಾಡಿಯಸ್ ನೊಂದಿಗೆ ಹಾಗೂ ಆತ ರಾಣಿ ಗೆರ್ಟ್ರೂಡ್ ಳನ್ನು ಮದುವೆಯಾಗಿ … Read more

ಮಾಯಕಾರ: ತಿರುಪತಿ ಭಂಗಿ

ತಮ್ಮ ತಲೆಯಲ್ಲಿ ಅಲ್ಲಲ್ಲಿ ಹುಟ್ಟಿಕೊಂಡ ಬಿಳಿ ಕೂದಲು ನೋಡಿದೊಡನೆ ಅವತ್ತು, ತನ್ನ ವಯಸ್ಸು ದಿನೆದಿನೆ ಮಂಜುಗಡ್ಡೆಯಂತೆ ಕರಗುತ್ತಿದೆ ಎಂಬ ಅರಿವಾಗಿ ಸಾವಕಾರ ಸಿದ್ದಪ್ಪನ ಮನದಲ್ಲಿ ಶೂನ್ಯ ಆವರಿಸಿತು.“ನನಗೆ ಮಕ್ಕಳಾಗಲಿಲ್ಲ, ಆಗುವುದೂ ಇಲ್ಲ, ನಾನೊಬ್ಬ ಎಲ್ಲ ಇದ್ದು, ಏನೂ.. ಇಲ್ಲದ ನತದೃಷ್ಟ, ಕೈಲೆ ಆಗದವನು, ಮಕ್ಕಳನ್ನು ಹುಟ್ಟಿಸಲು ಆಗದ ಶಂಡ ನಾನು…..”ನೂರೆಂಟು ವಿಚಾರಗಳನ್ನು ಮನದಲ್ಲಿ ರಾಶಿ ಹಾಕಿಕೊಂಡು ನೆನೆ-ನೆನೆದು ವ್ಯಥೆಪಟ್ಟ. ಯಾರಿಗೂ ಗೊತ್ತಾಗದಂತೆ ಬೆಂಗಳೂರು, ಕಾರವಾರ, ಕೇರಳ, ಸುತ್ತಾಡಿ ನಾ..ನೀ.. ಅನ್ನುವ ನಂಬರ್ ಒನ್ ವೈದ್ಯರ ಮುಂದೆ ತಾವು … Read more

ನೆನಪಿನಂಗಳದಲ್ಲಿ ಒಂದು ಪುಟ್ಟ ವಾಕ್: ಭಾರ್ಗವಿ ಜೋಶಿ

ಜೀವನದಲ್ಲಿ ನೆನಪುಗಳು ಅಂದರೇನೇ ಸುಂದರ. ಆ ಕ್ಷಣಕ್ಕೆ ಅತಿಯಾದ ನೋವು ಕೊಟ್ಟ ವಿಷಯಗಳು ಸಹ ಇವತ್ತಿಗೆ ನಗು ತರಿಸುತ್ತವೆ. ಅದಕ್ಕೆ ನೆನಪುಗಳು ಅನ್ನೋದು. ಈ ರೀತಿಯ ನೆನಪುಗಳ ಆಗರವೇ ನಮ್ಮ ಬಾಲ್ಯ. ಆ ಬಾಲ್ಯದ ನೆನಪುಗಳೇ ನಮ್ಮ ಇಂದಿನ ಈ ಬಡಿದಾಟದ ಬದುಕಿಗೆ ಆಕ್ಸಿಜನ್ ಅಂದ್ರೆ ತಪ್ಪಾಗಲಾರದು. ಅಂತಹ ಬಾಲ್ಯದ ನೆನಪಿನಂಗಳದಲ್ಲಿ ಒಂದು ಪುಟ್ಟ ವಾಕ್ ಹೋಗೋಣ.. ಕಳೆದು ಹೋದ ದಿನವೇ ಬಾಲ್ಯ ಮರಳಿ ಬರದ ಬದುಕೇ ಬಾಲ್ಯ ಬಿದ್ದ ಗಾಯವು ಕಲೆಯಾಗಿ ನೋವುಗಳೆಲ್ಲ ನಲಿವಾಗಿ ಮಾಸದ … Read more

ಪದ್ಮಜಾ: ಮಲ್ಲಪ್ಪ ಎಸ್.

“ಅಮ್ಮಾ ನನ್ನ ಪೆನ್ಸಿಲ್ ಬಾಕ್ಸ ಎಲ್ಲಿ?” ಅನಿತಾ ಮಾಡು ಹಾರಿ ಹೋಗುವಂತೆ ಕಿರುಚಿದಳು. “ ಅಲ್ಲೇ ಇರಬೇಕು ನೋಡೆ. ನೀನೇ ಅಲ್ವಾ ನಿನ್ನೆ ರಾತ್ರೆ ಜಾಮಿಟ್ರಿ ಮಾಡ್ತಾ ಇದ್ದವಳು?” ಪದ್ಮಜಾ ಒಲೆಯ ಮೇಲೆ ಇದ್ದ ಬಾಣಲೆಯಲ್ಲಿಯ ಒಗ್ಗರಣೆ ಸೀದು ಹೋಗುತ್ತಲ್ಲಾ ಎಂದು ಚಡಿಪಡಿಸುತ್ತಾ ಕೈ ಆಡಿಸಲು ಚಮಚಕ್ಕಾಗಿ ಹುಡುಕಾಡುತ್ತಾ ಬಾಗಿಲಕಡೆ ಮುಖ ಮಾಡಿ ಉತ್ತರಿಸುತ್ತಿದ್ದಳು. “ಅಮ್ಮಾ ನನ್ನ ಇನೊಂದು ಸಾಕ್ಸ ಕಾಣುತ್ತಿಲ್ಲ. ಲೇ ಅನಿ-ಶನಿ ನನ್ನ ಸಾಕ್ಸ ಎಲ್ಲಿ ಬಿಸಾಕಿದ್ದಿಯೇ?” ದಕ್ಷ ಒಂದು ಕಾಲಲ್ಲಿ ಸಾಕ್ಸ ಹಾಕಿ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 8): ಎಂ. ಜವರಾಜ್

-೮- ಸೂರ್ಯ ಮೂಡೊ ಹೊತ್ತು ‘ಕಾ..ಕಾ.. ಕಾ..’ ಕಾಗೆ ಸದ್ದು ಮೈಮುರಿತಾ ಕಣ್ಬುಟ್ಟು ನೋಡ್ದಿ ಅವಳು ಕಸಬಳ್ಳು ತಗಂಡು ಮೂಲ್ ಮೂಲೆನು ಗುಡಿಸೋಳು ಆ ಕಸಬಳ್ಳು ನನಗಂಟು ಬಂದು ಗೂಡುಸ್ತು ಆ ಕಸಬಳ್ಳು ಗೂಡ್ಸ ದೆಸೆಗೆ ನಾನು ಮಾರ್ದೂರ ಬಿದ್ದು ಬೀದೀಲಿ ಒದ್ದಾಡ್ತಿದ್ದಂಗೆ ಸೂರ್ಯ ಕೆಂಪೇರ್ಕಂಡು ಮೇಲೆದ್ದು ನಂಗ ತಾಕಿ ನನ್ ಮೈ ಮುಖ ನೊಚ್ಚಗಾದಂಗಾಯ್ತು. ಆ ಕಸಬಳ್ಳು ಅಲ್ಲಿಗೂ ಬಂದು ನನ್ನ ಇನ್ನಷ್ಟು ದೂರ ತಳ್ತ ತಳ್ತ ಮೋರಿ ಅಂಚಿಗೆ ಬಂದು ನೋಡ್ತಿದ್ದಂಗೆ ‘ಏ.. ನೀಲ … Read more

ಯಮಲೋಕ ಭ್ರಷ್ಟಾಚಾರ ಮುಕ್ತವಾಗಲಿ: ಪಿ.ಕೆ. ಜೈನ್ ಚಪ್ಪರಿಕೆ

ಮರುಜನ್ಮದಲ್ಲಿ ನಾವೇನಾಗ್ತಿವಿ ಅನ್ನೋದು ನಾವು ಮಾಡಿದ ಪಾಪ ಪುಣ್ಯದ ಫಲಕ್ಕೆ ನೇರ ಸಂಬಂಧವಿದೆ ಅಂತಾ ಹೇಳ್ತೀವಿ. ಅದನ್ನೇ ಕರ್ಮಸಿದ್ಧಾಂತ ಅಂತಲೂ ಕರೀತಾರೆ. ಮುಂದಿನ ಜನ್ಮ ಮನುಷ್ಯ ಜನ್ಮವೇ ಆಗಬೇಕು ಅಂತಾದರೆ ಸಿಕ್ಕಾಪಟ್ಟೆ ಪುಣ್ಯ ಸಂಪಾದಿಸಬೇಕು ಅಂತಾ ಹೇಳ್ತಾ ಇರೋದನ್ನು ಕೇಳಿದ್ದೀವಿ. ಹಾಗೆಯೇ ಮುಂದಿನ ಏಳು ಜನ್ಮಗಳು ಮನುಷ್ಯನಲ್ಲದ ಜನ್ಮಗಳಾಗಿರ್ತಾವೆ ಅಂತಾನೂ ಕೇಳಿದ್ದೀವಿ. ಆದ್ರೆ ಇವೆಲ್ಲದರ ನಡುವೆ ಒಂದು ಕನ್ಫ್ಯೂಸನ್ ಮತ್ತು ಉತ್ತರ ಸಿಗದ ಪ್ರಶ್ನೆ ಈ ಕರೊನಾ ವೈರಸ್ ಬಂದಾಗ ಶುರು ಆಯ್ತು…ಎನ್ ಗೊತ್ತಾ…!??? ಪ್ರಸ್ತುತ ಪ್ರಪಂಚದಲ್ಲಿ … Read more

ಸಹಜ ನಗು ಆರೋಗ್ಯದ ಆಗರ!: ಕೆ ಟಿ ಸೋಮಶೇಖರ್ ಹೊಳಲ್ಕೆರೆ

‘ ನಗು ‘ ಎಂಬುದು ಮುಖದಲ್ಲಿ ಪ್ರಕಟವಾಗುವ ಒಂದು ಭಾವ! ಮನಸ್ಸು ಒಳಗಿರುವುದರಿಂದ ಅದರ ನೇರ ಸಾಕ್ಷಾತ್ ದರುಶನ ಕಷ್ಟ. ಮನ ಭಾವಗಳ ಮೂಲಕ ತನ್ನ ಸಾಕ್ಷಾತ್ ದರುಶನ ಮಾಡಿಸುವುದು! ಮುಖದಲ್ಲೆ ಮನದ ಭಾವಗಳು ಮೇಳೈಸುವುದು! ಮುಖದಲ್ಲೆ ಮನ ಬಂದು ನರ್ತಿಸಿ ತನ್ನ ಖುಷಿಯ ಪ್ರಕಟಿಸುವುದು! ದುಃಖವ ಅನಾವರಣಗೊಳಿಸುವುದು. ಮುಖವೆ ಮನದ ಆಡೊಂಬಲ. ಮುಖ ಎಂಬುದು ಆತ್ಮದ ಭಾವಗಳನ್ನು ಪ್ರಕಟಿಸುವ ಜೀವಂತ ಸ್ವಾಭಾವಿಕ ಕಿರು ಪರದೆ! ಮುಖದಲ್ಲೇ ನಗುವೆಂಬ ಅಮೂಲ್ಯ ಆಭರಣ ಮೈದೋರಿ ಮುಖದ ಸೊಗಸು ಹೆಚ್ಚಿಸುವುದು! … Read more

ಪಂಜು ಕಾವ್ಯಧಾರೆ

ಒಂದು ಟೋಪಿಯ ಸುತ್ತ… ಊರ ಕೇರಿಯಿಂದ ಉದ್ದುದ್ದ ಹೆಜ್ಜೆಯನ್ನಿಟ್ಟು ಹೊರಟ ಊರಗೌಡ ಅಂದು ಕಂಡವರ ಕಣ್ಣಿಗೆ ಒಬ್ಬ ಬ್ರಿಟಿಷ ದಂಡನಾಯಕನಂತೆ ಕಾಣುತ್ತಿದ್ದ ಯಾವದೋ ವಸ್ತುಸಂಗ್ರಹಾಲಯದಿಂದ ಹೊತ್ತುತಂದಂತೆ ಬೆತ್ತದಿಂದ ಗೋಲಾಕಾರವಾಗಿ ಹೆಣೆದ ಹಳೆಯ ಟೋಪಿಯೊಂದು ಆತನ ತಲೆಯ ಮೇಲೆ ಕೂತು ಇಡೀ ಪ್ರಪಂಚವನ್ನೇ ಕೊಂದುಬಿಡಬೇಕೆನ್ನುವ ಅವಸರದಲ್ಲಿತ್ತು ಈಗಷ್ಟೇ ಉದಯಿಸಿದ ಆತನ ಕಣ್ಣಲ್ಲಿನ ಕೆಂಪು ಸೂರ್ಯ, ಸೆಟೆದುನಿಂತ ಮೈಮೇಲಿನ ರೋಮಗಳು, ಬಿಳಿಯ ಮೀಸೆ ಕಪ್ಪು ಬಣ್ಣಕ್ಕೆ ಪರಿವರ್ತನೆಯಾಗಿ ಆ ಮೀಸೆಯ ಬುಡದಲ್ಲಿ ಹುಟ್ಟಿಕೊಂಡ ಕೋರೆಹಲ್ಲಿನ ರಕ್ಕಸನಂತೆ ಒರಟು ಧ್ವನಿಯಲ್ಲಿ ನಕ್ಕ…. … Read more

ಶ್ರೇಷ್ಠ ಸಾಹಿತಿ ವಿಲಿಯಂ ಶೇಕ್ಸಪೀಯರ್ ಬದುಕು ಬರಹ ಮತ್ತು ಕಾಲ: ನಾಗರೇಖ ಗಾಂವಕರ

ಜಗತ್ತಿನ ಅತ್ಯಂತ ಶ್ರೇಷ್ಠ ಸಾಹಿತಿ ವಿಲಿಯಂ ಶೇಕ್ಸಪಿಯರ ಎಲ್ಲ ಕಾಲ ದೇಶಗಳಿಗೂ ಪ್ರಶ್ತುತ ಎನ್ನಿಸುವ ಸಾಹಿತ್ಯ ಕೃತಿಗಳ ರಚಿಸುವ ಮೂಲಕ ಸರ್ವಮಾನ್ಯ ಸಾಹಿತಿ ಎಂದೇ ಪ್ರಸಿದ್ಧ. ತನ್ನ ಜೀವನ ಮತ್ತು ಬರವಣಿಗೆಗಳಲ್ಲಿ ಪ್ರೌಢತೆಯನ್ನು ಬಿಂಬಿಸಿದ್ದ ಶೇಕ್ಸಪಿಯರ ಜ್ಞಾನ, ಔದಾರ್ಯ, ನಂಬಿಕೆ, ಯುವ ಪ್ರೇಮದ ತುಡಿತ, ಕ್ಷಮೆ ಹೀಗೆ ಮಾನವ ಸಂವೇದನೆಗಳ ಸುತ್ತ ಹೆಣೆದ ಆತನ ಕೃತಿಗಳು ಲೋಕ ಪ್ರಸಿದ್ಧವಾಗಿವೆ. ಇಂಗ್ಲೀಷ ಸಾಹಿತ್ಯ ಲೋಕದಲ್ಲಿ ಎಲಿಜಬೆತನ್ ಯುಗ ಸುವರ್ಣ ಕಾಲ. ಐತಿಹಾಸಿಕವಾಗಿ ಜ್ಞಾನಪುನರುಜ್ಜೀವನ, ಧಾರ್ಮಿಕ ಸುಧಾರಣೆ, ಭೌಗೋಲಿಕ ಅನ್ವೇಷಣೆಗಳ … Read more

ನೀನು ನೀನೇ ಎಂದವರ ನಡುವೆ: ಅಮರ್ ದೀಪ್

ಸಂಗೀತಕ್ಕೆ ವಯಸ್ಸಿನ ಹಂಗಿಲ್ಲ ಕಲಿಯಲಾಗಲಿ, ಕೇಳಿ ಖುಷಿಪಡಲಾಗಲಿ…. ನಾನಂತೂ ಸಮಯ ಸಿಕ್ಕಾಗಲೆಲ್ಲಾ ಸಂಗೀತವನ್ನು ಆಸ್ವಾದಿಸದೇ ಇರಲಾರೆ.  In fact ನನ್ನ ದು:ಖವನ್ನು ನೀಗಿಸುವುದೂ ಸಂಗೀತವೇ ಮತ್ತು ನನ್ನ ದಟ್ಟ ದರಿದ್ರ, ಸೋಮಾರಿತನದಿಂದ “ಎದ್ದೇಳಾ, ನಿನ್ನ ಸೋಮಾರಿತನಕ್ಕಿಷ್ಟು ಬೆಂಕಿ ಹಾಕ” ಎಂದು ಮತ್ತೆ ಮತ್ತೆ ಪುನಶ್ಚೇತನಗೊಳಿಸುವುದೂ ಸಂಗೀತವೇ…  ಇವತ್ತು, ಬಿಡಿ ಇವತ್ತಲ್ಲ ಸುಮಾರು ಮೂರು ತಿಂಗಳಾಯ್ತೇನೋ ಮಧ್ಯಾಹ್ನ ಊಟಕ್ಕೆ ಹೊರಡಬೇಕೆಂದರೆ ಸಾಕು, ಯಾಕಾದ್ರೂ ಊಟದ ಸಮಯವಾಗುತ್ತೋ? ಯಾವ ಖಾನಾವಳಿಯ ಸೋಡಾ ಹಾಕಿದ ಅನ್ನ ತಿನ್ನಬೇಕೋ… ಹೊಟ್ಟೆ ಕೆಡಿಸಿಕೊಳ್ಳಲು? ಎಂದು … Read more

ಮಳೆಗಾಲ ನಮ್ಮದೂ ಒಂದು ಕತೆ: ಭಾರ್ಗವಿ ಜೋಶಿ

ಅಂದೊಂದು ಸುಂದರ ಸಂಜೆ.. ಸೂರ್ಯನು ಭಾರತದ ಸೌಂದರ್ಯವನ್ನು ಮಿಂಚಿಸಿ ಈಗ ಬೇರೆ ದೇಶಗಳಲ್ಲಿ ಕಣ್ಣುತೆರೆಸುವ ಸರದಿ.. ಸೂರ್ಯ ನಿಧಾನವಾಗಿ ಹೆಜ್ಜೆಯಿಟ್ಟು ದಾಟುತ್ತಿದ್ದ.. ಚಂದ್ರನು ನಾನಿಲ್ಲೇ ಇದ್ದೀನಿ ಅಂತಾ ಮೋಡದ ಮರೆಯಿಂದ ಇಣುಕಿ ಇಣುಕಿ ನೋಡುತ್ತಿದ್ದ. ಅವನ ಬರುವಿಕೆಯನ್ನು ತಡೆಯಲು ಸಫಲವಾದ ಮೋಡಗಳು ಈಗ ನಮ್ಮ ಸಮಯ ಎಂದು ಮಳೆಸುರಿಸಲು ಸಿದ್ಧವಾಗಿದ್ದವು.. ಸಂಧ್ಯಾಕಾಲ, ತಂಪಾದಗಾಳಿ, ಮಸಕು ಬೆಳಕು, ತುಂತುರು ಮಳೆ… ಮನೆಯ ಅಟ್ಟದಮೇಲೆ ಈ ಅಂದವನ್ನು ಅನುಭವಿಸುತ್ತ ನಿಂತಿದ್ದಳು ನಮ್ಮ ಅರುಂದತಿ… (ಭಾಳ್ ದಿವಸದ ಮೇಲೆ ಕರ್ಕೊಂಡು ಬಂದೆ … Read more

ನಾ ಕಂಡ ನಮ್ಮ ನಡುವಿನ ವಿಜ್ಞಾನದ ಸಂಪನ್ಮೂಲ ವ್ಯಕ್ತಿಗಳು: ಎಂ.ಎಲ್.ನರಸಿಂಹಮೂರ್ತಿ, ಮಾಡಪ್ಪಲ್ಲಿ

ಫೆ.೨೦.೨೦೧೬ ರಂದು ಬಾಗೇಪಲ್ಲಿಯ ಗಂಗಮ್ಮ ಗುಡಿ ರಸ್ತೆಯ ಶ್ರೀನಿವಾಸ್ ಮೆಸ್ ಹಿಂಭಾದಲ್ಲಿನ ಶ್ರೀ ವಾಸುದೇವ ಮೂರ್ತಿ ಎಂಬುವರ ಮನೆಗೆ ತೆರಳಿದ್ದೆ. ಏಕೆಂದರೆ 2013ರಲ್ಲಿ ನ್ಯಾಷನಲ್ ಕಾಲೇಜಿನ ನೆಚ್ಚಿನ ಗುರುಗಳಾದ ಬಿ.ಪಿ.ವಿ ಸರ್ ಅವರು ವಾಸುದೇವ ಸರ್ ಅವರ ಕುರಿತು ಒಂದಿಷ್ಟು ವಿಷಯ ತಿಳಿಸಿದ್ದರು. ನಂತರ ಅದೇವರ್ಷ ಜೂನ್ ತಿಂಗಳಲ್ಲಿ ಖುದ್ದಾಗಿ ಗಂಗಮ್ಮ ಗುಡಿ ರಸ್ತೆಯಲ್ಲಿನ ಅವರ ಮನೆಗೆ ಬೇಟಿ ನೀಡಿದಾಗ ಅವರು ಮನೆಯಲ್ಲಿರಲಿಲ್ಲ. ಕೆಲ ದಿನಗಳ ನಂತರ ಅವರ ಮನೆಗೆ ಹೋದಾಗ ಹಳೇ ತಾಮ್ರದ ತಂತಿಯಿಂದ ಯಾವುದೋ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 7): ಎಂ. ಜವರಾಜ್

-೭- ಈ ಅಯ್ನೋರು ಆ ಅವಳೂ ಕುಂತ ಜಾಗ್ದಲ್ಲೆ ಮುಸುಡಿ ಎಟ್ಗಂಡು ಈ ಅಯ್ನೋರ್ ಮೈ ಇನ್ನಷ್ಟು ಕಾಯ್ತಾ ನನ್ ಮೈಯೂ ಕಾದು ಕರಕಲಾಗುತ್ತಾ ಹೊತ್ತು ಮೀರ್ತಾ ಮೀರ್ತಾ ಆ ಅವಳು ಎದ್ದೋಗಿ ಈ ಅಯ್ನೋರೂ ಮೇಲೆದ್ದು ನನ್ನ ಭದ್ರವಾಗಿ ಮೆಟ್ಟಿ ನೆಲಕ್ಕೆ ಎರಡೆರಡು ಸಲ ಕುಟ್ಟಿ  ಅವಳೆಡೆ ಇನ್ನೊಂದು ನೋಟ ಬೀರಿ ಮೆಲ್ಲನೆ ತಿರುಗಿ ಮೋರಿ ದಾಟಿ  ಕಿರು ಓಣಿ ತರದ ಬೀದೀಲಿ  ಗಿರಿಕ್ಕು ಗಿರಿಕ್ಕು ಅಂತನ್ನಿಸಿಕೊಂಡು  ಬಿರಬಿರನೆ ನಡೆದರಲ್ಲೋ… ಆ ಅವಳ ನೋಟಕ್ಕೆ ಈ … Read more

ಕೆಂಪರೋಡ್..!: ತಿರುಪತಿ ಭಂಗಿ

ಕೆ.ಎ-28 ಎಫ್-6223 ಕರ್ನಾಟಕ ಸಾರಿಗೆ ಬಸ್ಸು ಗಾಳಿಯ ಎದೆ ಸೀಳಿಕೊಂಡು ಬಂವ್.. ವ್.. ವ್.. ಎಂದು ರಾಗ ಎಳೆಯುತ್ತ, ಕ್ಯಾಕರಸಿ ಹೊಗೆ ಉಗುಳುತ್ತ, ತಗ್ಗು ದಿನ್ನೆಯಲ್ಲಿ ಜಿಗಿದು, ಕುಣಿದು ದಣಿವರಿಯದೆ, ಚಾಲಕನ ಒತ್ತಡಕ್ಕೆ ಮನಿದು, ಮುನಿದು ‘ನಿಗಿನಿಗಿ’ ಕೆಂಡ ಉಗಳುವ ಸೂರಪ್ಪನ ಕಾಟಾಚಾರ ಸಹಿಸಿಕೊಂಡು ಬಿಜಾಪೂರದತ್ತ ಹೊರಟಾಗ ಬರೊಬ್ಬರಿ ಎರಡು ಗಂಟೆಯಾಗಿ ಮೇಲೆ ಒಂದಿಷ್ಟು ನಿಮಿಷಗಳಾಗಿದ್ದವು. ಖಾಸಗಿ ಬಸ್ಸಿನ ಸುಖಾಸನಗಳ ಮೇಲೆ ತಣ್ಣಗೆ ಕುಳಿತು ಬರಬೇಕೆಂದವನಿಗೆ, ಇದ್ದಕಿದ್ದಂತೆ ತಲೆಯಲ್ಲಿ ಅದೇನು ಸೇರಿಕೊಂಡಿತೋ, ವಿಠಲಸ್ವಾಮಿ ಸರಕಾರಿ ಬಸ್ಸಿನ ಬಾಗಿಲು … Read more

ಅವರೆಲ್ಲಿ, ಇವನೆಲ್ಲಿ…???: ಬಸವರಾಜ ಕಾಸೆ

ಅನಿಲ್ ಮತ್ತು ಸುನೀಲ್ ಕೆಲಸ ಮಾಡುವ ಕಂಪನಿ ಮಾಲೀಕನ ಮಗನ ಅದ್ದೂರಿ ಮದುವೆ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿತ್ತು. ಸರದಿ ಸಾಲಿನಲ್ಲಿ ನಿಂತು ಶುಭಾಶಯ ಕೋರಿದ ನಂತರ ಔತಣಕೂಟಕ್ಕೆ ಆಗಮಿಸಿದರು. ವಿಧ ವಿಧವಾದ ಭಕ್ಷ್ಯ ಭೋಜನಗಳಿಂದ ಕೂಡಿದ ರುಚಿಯ ಪರಿಮಳ ಸುತ್ತಲೂ ಪಸರಿಸಿತ್ತು. ಎರಡು ನಿಮಿಷ ನಿಂತು ನೋಡಿದ ಸುನೀಲಗೆ ಆಶ್ಚರ್ಯ. “ಅರೇ ಅನಿಲ್, ಅಲ್ಲಿ ನೋಡೋ. ರಾಮಣ್ಣ, ಶಾಮಣ್ಣ, ಸೀನ ಎಲ್ಲಾ ಇಲ್ಲೇ ಇದಾರೆ” “ಎಲ್ಲೋ” “ಆ ಕಡೆ ಮತ್ತು ಈ ಕಡೆ ಎರಡು ಕೌಂಟರು ನೋಡೋ” … Read more

ಅವ್ವ ಮತ್ತು ಅಂಗಿ: ಮಹಾಂತೇಶ್. ಯರಗಟ್ಟಿ

ಅಂಗಿ ಅಂದ್ರೇ ಮಾನ ಮುಚ್ಚುತ್ತೆ, ಅಂಗಿ ಅಂದ್ರೇ ನಮ್ಮ ಅಂದ ಹೆಚ್ಚೀಸುತ್ತೆ ,ಅಂಗಿಗೆ ಹಲವಾರು ಬಣ್ಣ, ಅಂಗಿಗೆ ಹಲವಾರು ಗುಣಧರ್ಮ ಇದು ಕೊಳ್ಳುವವನ ಆರ್ಥಿಕತೆಯ ಮೇಲಿನ ಅವಲಂಬನೆ. ಹೀಗೆ ಅಂಗಿಯ ವಿಚಾರ ಬಂದಾಗಲೆಲ್ಲಾ ಹೀಗೆಲ್ಲ ಹೇಳಬಹುದು. ಬಹುಶಃ ನಾನ ಚಿಕ್ಕವನಿದ್ದಾಗಿನಿಂದ ಕೇಳಿದ್ದು ‘ಅ’ ಅಂದ್ರೇ ಅವ್ವ ‘ಅಂ’ ಅಂದ್ರೇ ಅಂಗಿ, ಸರ್ಕಾರಿ ಕನ್ನಡ ಪಾಠ ಶಾಲೆಯ ಪಾಠ ನಿಜ ನೋಡಿ, ಯಾಕಂದ್ರೇ ಕನ್ನಡ ಶಾಲೆಗಳು ಬದುಕುವ ಕಲೆಗಳನ್ನೂ ಕಲಿಸುತ್ತವೆ. ಅವ್ವ ಮತ್ತು ಅಂಗಿ ಯಾವತ್ತು ನಮ್ಮ ಮಾನ … Read more

ಮರೆಲಾಗದ ಮಹಾನುಭಾವರು ತಲ್ಲೂರ ರಾಯನಗೌಡರು: ವೈ. ಬಿ. ಕಡಕೋಳ

“ನಿಮಗೇಕೆ ಕೊಡಬೇಕು ಕಪ್ಪ. ನೀವೇನು ನಮ್ಮ ನೆಂಟರೋ ಬಂಧುಗಳೋ. ನಮ್ಮ ಭೂಮಿಯನ್ನು ಉತ್ತಿ ಬಿತ್ತಿ ಬೆಳೆದವರೋ. ನಿಮಗೇಕೆ ಕೊಡಬೇಕು ಕಪ್ಪ. ” ಎಂಬ ಈ ಸಾಲುಗಳನ್ನು ಬಿ. ಸರೋಜಾದೇವಿ ಹೇಲುವ ಕಿತ್ತೂರು ಚನ್ನಮ್ಮ ಚಲನಚಿತ್ರದ ಈ ಸಂಭಾಷಣೆ ಇಂದಿಗೂ ಕಿತ್ತೂರು ಚನ್ನಮ್ಮ ಚಲನಚಿತ್ರ ವೀಕ್ಷಿಸಿದವರಿಗೆ ರೋಮಾಂಚನೆ ಉಂಟು ಮಾಡುತ್ತವೆ ಅಲ್ಲವೇ. ? ದೇಶಭಕ್ತಿಯ ಕಿಚ್ಚನ್ನು ಹಚ್ಚುವ ಸಾಲುಗಳ ಕತೆಯಾಧಾರಿತ ಕಿತ್ತೂರು ಚನ್ನಮ್ಮ ಚಲನಚಿತ್ರವಾಗಲು ಒಂದು ವ್ಯಕ್ತಿಯ ಶಕ್ತಿ ಬಹಳ ಶ್ರಮಿಸಿದ್ದು. ಕಿತ್ತೂರ ಚನ್ನಮ್ಮ ಚಲನಚಿತ್ರ ನಿರ್ದೇಶಕ ಬಿ. … Read more

ತ್ಯಾಗದಲ್ಲಿ ಅಪರಿಮಿತ ಆನಂದ ಅಡಗಿದೆ!: ಕೆ. ಟಿ. ಸೋಮಶೇಖರ್ ಹೊಳಲ್ಕೆರೆ

 ತ್ಯಾಗ ಎಂಬುದು ಉತ್ತಮ ಮೌಲ್ಯಗಳಲ್ಲಿ ಉತ್ತಮವಾದುದು. ಮಾನವನ ಗುಣಗಳಲ್ಲಿ ಅತಿ ಮುಖ್ಯವಾದುದು. ಮಾನವರೆಲ್ಲರಲ್ಲೂ ಇರಬೇಕಾದಂತಹದ್ದು. ಆದರ್ಶ ವ್ಯಕ್ತಿಗಳಲ್ಲಿ ಹೆಚ್ಚೇ ಇರಬೇಕಾದುದು. ಮಾನವನ ಬದುಕಿಗೆ ಮಾನವತೆಗೆ ಉತ್ತಮ ಸಮಾಜದ ನಿರ್ಮಾಣಕ್ಕೆ ಅವಶ್ಯವಾದುದು. ಬಹಳ ಶ್ರೀಮಂತರು ತ್ಯಾಗಿಗಳಲ್ಲ! ಕೆಲವು ಸಿರಿವಂತರು ತನಗೆ ಅವಶ್ಯವಲ್ಲದ್ದನ್ನು ಯಥೇಚ್ಛವಾಗಿ ಇರುವಂತಹುದನ್ನು ತ್ಯಾಗ ಮಾಡುವರು. ಅದು ತ್ಯಾಗ! ಆದರೆ ತನಗೆ ಅವಶ್ಯವಾಗಿ ಬೇಕಾದುದನ್ನು ಬೇರೊಬ್ಬರ ಕಷ್ಟ ಅಥವಾ ನೋವು ನಿವಾರಣೆಗಾಗಿ ತ್ಯಾಗ ಮಾಡುವುದು ಶ್ರೇಷ್ಠ ತ್ಯಾಗ! ತ್ಯಾಗ ಮಾಡಿದುದನ್ನು ಸ್ವೀಕರಿಸಿದವ ಬಳಸಿಕೊಂಡು ಕಷ್ಟ ನಿವಾರಿಸಿಕೊಂಡು ನಗುಬೀರಿದವನ … Read more

ಪ್ರೇಮ ಕಾವ್ಯಧಾರೆ

ರಾಗ-ರತಿ ಸೋನೆಸೋನೆಯಾಗಿ ಸುರಿವ ಸಂಜೆಮಳೆಗೆ ಕಣ್ಮಿಂಚಿನಲೆ ರಂಗೇರಿದ ರಾಗ-ರತಿ. ಬಾಗಿತಬ್ಬಿ ಬೆಸೆವ ಬಂಧದ ತವಕ ನಸು ಬಾಗಿದ ಬಾನು ತುಸು ಸರಿದ ಭುವಿ ಪ್ರತಿಕ್ಷಣಗಳ ಲೆಕ್ಕವಿಟ್ಟ ವಿರಹದುರಿಯಲ್ಲಿ ಹುಸಿಮುನಿಸು ನಸುಗೋಪ ಕಾದುಕುದ್ದ ಕ್ಷಣಗಳನೆಲ್ಲ ಕಾರಿ ಬಿಡುವ ತವಕ ರಾಜಿಸೂತ್ರದ ಸಂಭ್ರಮ ಕಣ್ಣ ತುದಿಗೇ ಕುಳಿತ ಸಾಂತ್ವ ಕಾಲಜಾರುವ ಮೊದಲೇ ಲೆಕ್ಕ ಕೂಡಿಸುವಾಟ ಸೋಲಬಾರದ ಹಠಕೆ ಸೋತುಗೆಲ್ಲುವ ಪ್ರೀತಿ ತುಟಿಯೊಡೆಯದೆಲೆ ಎದೆಮುಟ್ಟಿದ ಮಾತು ಕಣ್ಣನೋಟದ ಕೂಡುಬೇಟವ ದಾಟಿಬರುವ ಮೈಮರೆತ ಮುಟ್ಟಲಾರದ ಬೇಗುದಿಗೆ ಬಾಗಿ ಸೇರುವ ಬಯಕೆ ಶೃತಿಹಿಡಿದು ಒರತೆಯೊಡೆದು … Read more

ಥ್ಯಾಂಕ್ ಯೂ ಪೋಸ್ಟ್ ಮನ್: ಅಮರದೀಪ್. ಪಿ.ಎಸ್.

ಬರೆಯದ‌ ಪ್ರೇಮದ‌ ಕವಿತೆ ಹಾಡಾಯಿತು… ಎದೆಯಲಿ ನೆನಪಿನ ನೋವು ಸುಖ‌ ತಂದಿತು….. ಪಂಕಜ್‌ ಉಧಾಸ್‌ ಮತ್ತು ಕವಿತಾ ಕೃಷ್ಣಮೂರ್ತಿ ಹಾಡುತ್ತಿದ್ದರು. ನಾನು ಖಾಲಿ‌ ಕೂತ ಸಮಯದಲ್ಲಿ ಹಾಡು ಕೇಳುವುದು ಬಿಟ್ಟರೆ ಯಾವುದಾದರೂ ಪುಸ್ತಕ ನೆನಪಾಗಿ ಹುಡುಕುತ್ತೇನೆ. ಇವತ್ತು ಪುಸ್ತಕ ತಡಕಾಡಲು ಮನಸಾಗಲಿಲ್ಲ… ಹಾಡಿನ ಗುನುಗು ನಾಲಗೆಗೆ ನೆನಪಾಗಿದ್ದೇ ತಡ ಕೇಳುತ್ತಾ ಕುಳಿತೆ. ನಾನು ಡಿಪ್ಲೋಮಾ ಓದುವ ಕಾಲದಲ್ಲೂ ಏನೋ ಗೊತ್ತಿಲ್ಲ. ನನ್ನ ರೂಮೇಟ್ ನಾಗರಾಜ್ (ಡಿಂಗ್ರಿ) ಒಂದು ವಾಕ್ಮನ್ ತಂದಿದ್ದ. ಒಂದಿಷ್ಟು ಕೆಸೆಟ್ ಗಳಿದ್ದವು. ಅದೆಂಥ ಅಡಿಕ್ಷನ್‌ … Read more

ಪ್ರೇಮಿಗಳಿಗೆ ದಿನವಿಲ್ಲ ! ದಿನವೆಲ್ಲಾ !!!!!: ಸತೀಶ್ ಶೆಟ್ಟಿ ವಕ್ವಾಡಿ

” ನಿನ್ನ ಬಿಟ್ಟು ಬದುಕುವ ಶಕ್ತಿ ನನಗಿಲ್ಲ ” ಆಕೆಯ ಬೆರಳಿಗೆ ತನ್ನ ಬೆರಳು ತೂರಿಸಿಕೊಂಡು, ಸಣ್ಣಗೆ ಕಂಪಿಸುತ್ತಿರುವ ಅದರದಿಂದ ಹೊರಬಿದ್ದ ಆತನ ಮಾತು, ಆಕೆಯ ಮೈಮನವನ್ನೆಲ್ಲ ರೋಮಾಂಚನಗೊಳಿಸಿತ್ತು.  “ಹೌದು ಕಾಣೋ ನೀನಿಲ್ಲದ ಬದುಕನ್ನು ನನಗೆ ಊಹಿಸಿಕೊಳ್ಳಲು ಆಗುತ್ತಿಲ್ಲ ” ಜೋರಾಗಿ ಬೀಸುತ್ತಿದ್ದ ಏರಿಕಂಡಿಷನಿನ ಗಾಳಿಯಲ್ಲಿ ಸಣ್ಣನೆ ಬೆವತ್ತಿದ್ದ ಆಕೆ ನುಡಿಯುತ್ತಾಳೆ. ಐಸ್ ಕ್ರೀಮ್ ಪಾರ್ಲರಿನ ಮೂಲೆಯ ಟೇಬಲಿನಲ್ಲಿ ಕುಳಿತ್ತಿದ್ದ ಅವರಿಬ್ಬರ  ಮುಂದಿದ್ದ ಅದೇ ಐಸ್ ಕ್ರೀಮ್ ಪಾರ್ಲರಿನ ಹೆಸರು ಹೊಂದಿರುವ ಸ್ಪೆಷಲ್ ಐಸ್ ಕ್ರೀಮನ್ನು ತನ್ನೊಡಲೊಗೆ … Read more

ಪ್ರೀತಿ…ಹಾಗೆಂದರೇನು!!: ಸಹನಾ ಪ್ರಸಾದ್

ಮಾನಸಳನ್ನು ವರಿಸಲು ಪ್ರಜ್ವಲನಿಗೆ ಸುತರಾಂ ಇಷ್ಟ ಇರಲಿಲ್ಲ. ಮೊದಲನೆಯದಾಗಿ, ಅವಳನ್ನು ನೋಡಿದ ತಕ್ಷಣ ಯಾವ ಭಾವನೆಯೂ ಉದಯಿಸಿರಲಿಲ್ಲ. ಅವನ ಆಫೀಸ್ನಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಹೆಣ್ಣುಗಳ ಹಾಗೆ ಕಂಡಿದ್ದಳು. ಹೇಳಿಕೊಳ್ಳುವಂತಹ ವಿಶೇಷವೇನೂ ಅವಳಲ್ಲಿರಲಿಲ್ಲ. ವಯಸ್ಸು 28 ಆದರೂ ಮುಖದಲ್ಲಿ ಪ್ರೌಢ ಕಳೆ, ವಯಸ್ಸಿಗೆ ಮೀರಿದ ಗಾಂಭೀರ್ಯ..ಎರಡನೆಯದಾಗಿ ಅವನು ಪ್ರೀತಿಸಿದ್ದ ರಮ್ಯಳ ಚಿತ್ರ ಮನಸ್ಸಲ್ಲಿ ಇನ್ನು ಹಸಿಯಾಗಿತ್ತು. ಬೇರೊಬ್ಬನನ್ನು ವರಿಸಿ ಆಸ್ಟ್ರೇಲಿಯಾಗೆ ಹಾರಿದ ಅವಳ ನೆನಪಿನಿಂದ ಇನ್ನೂ ಹೊರಬರಲಾಗಿರಲಿಲ್ಲ. 34 ಹತ್ತಿರ ಬಂದ ವಯಸ್ಸು, ಆಗಲೇ ಬಿಳಿ ಆಗುತ್ತಿರುವ … Read more

ಪ್ರೇಮ: ಕೊಟ್ರೇಶ್ ಕೊಟ್ಟೂರು

ಈ ಪ್ರೀತಿ ಅನ್ನೋದು ಒಂಥರಾ ಹಾವು ಏಣಿಯ ಆಟ. ಮೊದಮೊದಲು ಪ್ರೀತಿ ನಮಗೆ ಗೊತ್ತಿಲ್ಲದೇ, ಪರಿಚಯ ಇಲ್ಲದೇ ಇರೋರ ಮೇಲೆ ಸಡನ್ ಆಗಿ ಹುಟ್ಕೊಳುತ್ತೆ. ನೋಡಿದ ಕೂಡಲೇ ಹುಟ್ಟುವ ಪ್ರೀತಿ ನಿಜವಾ ಅಥವಾ ಇನ್‍ಫ್ಯಾಚುಯೇಷನ್ನಾ ? ತೀವ್ರ ಗೊಂದಲದಲ್ಲೇ ಇರುತ್ತೇವೆ ಅದು ಮಾನಸಿಕವಾ ? ಅಥವಾ ದೇಹದಲ್ಲಾಗುವ ದೈಹಿಕ ಬದಲಾವಣೆಗಳಾ ? ಹಾಗಂತ ಕಂಡ ಕಂಡವರ ಮೇಲೆ ಪ್ರೀತಿ ಹುಟ್ಟುವುದು ನಿಜವಾದ ಪ್ರೀತಿ ಅಲ್ಲವೇ ಅಲ್ಲ. ಈ ಪ್ರೀತಿಯ ಬಗೆಗೆ ಒಂದಷ್ಟು ಗೊಂದಲ ನನ್ನನ್ನು ಈಗಲೂ ಕಾಡಿದೆ. … Read more