ಉತ್ತರ-ಅನುತ್ತರ-ನಿರುತ್ತರಗಳ ಜೊತೆಗೊಂದು ಪ್ರತ್ಯುತ್ತರ: ಹೆಚ್ ಎನ್ ಮಂಜುರಾಜ್, ಮೈಸೂರು
ಎಲ್ಲ ಪ್ರಶ್ನೆಗಳಿಗೂ ಉತ್ತರವಿಲ್ಲವೆಂಬುದು ಗೊತ್ತಿದ್ದರೂ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ. ನನ್ನ ಮಟ್ಟಿಗೆ ಪ್ರಶ್ನೆಗಳನ್ನು ಇನ್ನೊಬ್ಬರಿಗೆ ಕೇಳುವುದಲ್ಲ; ನಮ್ಮಲ್ಲಿಯೇ ಕೇಳಿಕೊಳ್ಳುವುದು ಹೆಚ್ಚು ಸರಿ. ಆಗ ಪ್ರಶ್ನೋತ್ತರಗಳೆರಡೂ ನಮ್ಮವೇ ಆಗಿರುತ್ತವೆ. ಇದರಿಂದ ಮೊದಲಿಗಿಂತ ಹೆಚ್ಚು ‘ಎಚ್ಚರ’ದ ಸ್ಥಿತಿಯನ್ನು ಹೊಂದಬಹುದು. ಇರಲಿ. ಆಚಾರ್ಯ ರಜನೀಶರು ಚಾಂಗ್ ತ್ಸು ಕುರಿತು ಕೊಟ್ಟ ಡಿಸ್ಕೋರ್ಸ್- ಪುಸ್ತಕದ ಹೆಸರು ಶೂನ್ಯ ನಾವೆ-ಇದರಲ್ಲೊಂದು ಪ್ರಸಂಗ ಉಲ್ಲೇಖಿತವಾಗಿದೆ: ನಾವೆಯೊಂದರಲ್ಲಿ ಕುಳಿತು ಒಬ್ಬರೇ ವಿಹರಿಸುತ್ತಿರುವಾಗ, ಹಿಂದಿನಿಂದ ಇನ್ನೊಂದು ನಾವೆ ಏಕ್ದಂ ಡಿಕ್ಕಿ ಹೊಡೆದಾಗ ಮನದಲ್ಲುದಿಸುವ ಭಾವ: ವ್ಯಗ್ರತೆ ಮತ್ತು ಅಸಹನೆ. … Read more