ಗುರುವಂದನೆ: ಚಂದಕಚರ್ಲ ರಮೇಶ ಬಾಬು

| ಗುರುಃ ಬ್ರಹ್ಮ ಗುರುಃ ವಿಷ್ಣುಃ ಗುರುಃ ದೇವೋ ಮಹೇಶ್ವರಃ|ಗುರುಃ ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ವೇದಕಾಲದಿಂದಲೂ ನಮ್ಮ ಭಾರತದಲ್ಲಿ ಗುರು ಶಿಷ್ಯ ಪರಂಪರೆಯಿಂದಲೇ ವಿದ್ಯೆಯ ಕಲಿಕೆ ಸಾಗಿ ಬಂದಿದೆ. ತನ್ನ ಅರಿವಿಗೆ ಬಂದದ್ದನ್ನೆಲ್ಲವನ್ನೂ ಶಿಷ್ಯನಿಗೆ ಧಾರೆ ಎರೆಯುವ ಗುರು, ಗುರುವಿಗೆ ತನ್ನ ತನು ಮನಗಳಿಂದ ಸೇವೆ ಮಾಡಿ ಅವರ ಜ್ಞಾನವನ್ನು ತಾನು ಪಡೆದು ಮುಂದೆ ತಾನೊಬ್ಬ ಶ್ರೇಷ್ಠ ಗುರುವಾಗಿ ತನ್ನ ಶಿಷ್ಯರಿಗೆ ಜ್ಞಾನ ಹಂಚುವುದು ಇದು ಪರಂಪರೆ. ಇದೇ ರೀತಿಯಲ್ಲಿ ಪ್ರಾಚೀನ … Read more

ಬಂಡಾಯ ಚಿಂತನೆಯ ಒಂದು ಕೃತಿ – “ಹಕೀಮನೊಬ್ಬನ ತಕರಾರು”: ನಾರಾಯಣಸ್ವಾಮಿ ವಿ (ನಾನಿ)

ಹಿಂದಿನ ಕಾಲದ ಕನ್ನಡ ಸಾಹಿತ್ಯದಲ್ಲಿ ಅಂದರೆ ದಾಸ ಸಾಹಿತ್ಯ, ವಚನ ಸಾಹಿತ್ಯ ಪ್ರಾರಂಭವಾದಾಗ ಬಂಡಾಯದ ಸಾಲುಗಳು ಪ್ರಾರಂಭವಾದರೂ ಕೂಡ ಎಂಭತ್ತರ ದಶಕದಲ್ಲಿ ಬಂಡಾಯ ಸಾಹಿತ್ಯ ಉಚ್ಛ್ರಾಯ ಸ್ಥಿತಿಗೆ ಬಂತು ಅಂತಲೇ ಹೇಳಬಹುದು. ಅಂದಿನ ಕಾಲದಲ್ಲಿ ನೆಲೆಯೂರಿನಿಂತಿದ್ದ ಅಸ್ಪೃಶ್ಯತೆ, ಸಮಾನತೆ, ಶೋಷಣೆ ಮುಂತಾದ ವಿಷಯಗಳ ಬಗ್ಗೆ ವಿರೋಧಿಸುತ್ತಾ, ಅನ್ಯಾಯದ ವಿರುದ್ಧ ಲೇಖಕರು ತಮ್ಮ ಬರವಣಿಗೆಯ ಮೂಲಕ ಸಮಾಜದ ಮತ್ತು ಸರ್ಕಾರದ ವಿರುದ್ದ ಹೋರಾಡುವ ಬರಹದ ಮೂಲಕ ಜನರ ಮನೋಭಾವವನ್ನು ತಿದ್ದಲು ಪ್ರಯತ್ನ ಪಡುತ್ತಿದ್ದರು. ಅದರೆ ಇವತ್ತಿನ ದಿನಗಳಲ್ಲಿ ಕನ್ನಡ … Read more

“ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಬ್ಬರು ಸಾಧನೆಯ ಬಿಂಬ-ಪ್ರತಿಬಿಂಬ”: ಚಂದನ ಮಲ್ಲಿಕಾರ್ಜುನ್

ಕಲಿಯುಗದಲ್ಲಿ ವಿದ್ಯಾರ್ಥಿಗಳು ಗುರು-ಶಿಷ್ಯರ ಸಂಬಂಧ ಕೇವಲ ಪುಸ್ತಕದಲ್ಲಿ ಇರುವುದನ್ನು ಬೋಧಿಸುವ ತನಕ ಎಂದು ಭಾವಿಸಿದ್ದಾರೆ. ಆದರೆ ಗುರುಗಳಕ ತಮ್ಮ ವಿದ್ಯಾರ್ಥಿಗಳಲ್ಲಿ ಇಟ್ಟಿರುವ ಪ್ರೀತಿ, ವಿಶ್ವಾಸ ಯಾವುದಕ್ಕೂ ಸಮನಾಗಿರುವುದಿಲ್ಲ. ಶಿಕ್ಷಕರು ಹೇಳುವ ಒಂದು ಸಾಲಿನ ಅರ್ಥ ಮೇಲ್ನೋಟಕ್ಕೆ ಸಾಮಾನ್ಯವಾಗಿರಬಹುದು. ಆದರೆ ಅದರಲ್ಲಿ ನಿಗೂಢ ಅರ್ಥವನ್ನು ತಿಳಿದುಕೊಳ್ಳುವುದು ವಿದ್ಯಾರ್ಥಿಗಳ ಕೈಯಲ್ಲಿರುತ್ತದೆ. ಇದನ್ನು ಅರ್ಥಮಾಡಿಕೊಂಡ ವಿದ್ಯಾರ್ಥಿಗಳ ಜೀವನವು ಕಾಮನ ಬಿಲ್ಲಿನಂತೆ ಸುಂದರವಾಗಿರುತ್ತದೆ. ವಿದ್ಯಾರ್ಥಿಗಳ ಜೀವನವು ಒಂದು ಸುಂದರವಾದ ಬಿಳಿಯ ಹಾಳೆಯ ರೀತಿ. ಅದರ ಮೇಲೆ ಸಣ್ಣ ಕಪ್ಪುಚುಕ್ಕೆ ಬಿದ್ದರು ಅವರ ತಂದೆ … Read more

ಮಕ್ಕಳ ಕವಿತೆಗಳು

ಶ್ರೀ ಗುರುವೇ ಗುರುವೇ ನಿಮಗೆ ನಮನನಿಮ್ಮಿಂದಲೇ ಪಡೆದೆವು ಜ್ಞಾನಜ್ಞಾನದ ದೀಪವನು ಹಚ್ಚಿದಿರಿಅಂಧಕಾರವ ದೂರ ಸರಿಸಿದಿರಿ. ನಿಮ್ಮ ಮಾತುಗಳು ಕೇಳಲುನಮ್ಮಿಂದ ತಪ್ಪುಗಳಾಗದುಕೀಟಲೆ, ಕಿತಾಪತಿಗಳೆಂದಿಗೂನಮ್ಮಿಂದ ಎಂದೆಂದಿಗಾಗದು‌. ತಿಳಿದೋ ತಿಳಿಯದೆಯೋನೋವುಂಟು ಮಾಡಿದ್ದರೆ ನಾವುಕೈಮುಗಿದು, ಶಿರಬಾಗಿ ನಿಮಗೆಕ್ಷಮೆಯ ಕೇಳುವೆವು ನಾವು. ನೀವು ನೀಡಿದ ಶಿಕ್ಷಣವುನಮ್ಮೆಲ್ಲರ ಬದುಕಿಗೆ ಉಸಿರುಪ್ರತಿಕ್ಷಣವೂ ಮರೆಯದೇಸ್ಮರಿಸುವೆವು ನಿಮ್ಮ ಹೆಸರು. ಅಭಿನಂದನಾ ಕೆ ಎಂ ಗೆಲ್ಲುವಿರಿ ನಿಮ್ಮ ದಿನಗಳುಚಲಿಸುತ್ತಿವೆ ಬೇಗಅದಕ್ಕಾಗಿ ಸತತವಿರಲಿನಿಮ್ಮ ಶ್ರಮದ ವೇಗ. ಜೀವನದಲ್ಲಿ ಒಂದೇ ಸಾರಿಬಂದೇ ಬರುತ್ತದೆ ಯೋಗಆಗ ನಿಮಗೆ ಸಮಾಜದಲ್ಲಿಸಿಗುವುದು ಉನ್ನತ ಜಾಗ. ನಿಮ್ಮ ಗುರಿಯೆಂದಿಗೂದೊಡ್ಡ ದೊಡ್ಡದಾಗಿರಲಿಗುರಿ … Read more

ವೃದ್ಧೋಪನಿಷತ್ (6-10): ಡಾ ರಾಜೇಶ್ವರಿ ದಿವಾಕರ್ಲ

6. ವಯಸ್ಸು ಮರಳಿದ ಹಾಡುದಿಗಂತ ರೇಖೆಸ್ವಲ್ಪ ಮಂಜಾಗುತ್ತದೆ.ವರ್ಷಗಳುಎಲೆಗಳಂತೆ ಉದುರೋಗುತ್ತಲಿವೆ.ಸ್ನೇಹಿತರು ಸಾಯುತ್ತಾಸ್ಮೃತಿ ನಕ್ಷತ್ರಗಳಾಗುತ್ತಾರೆದೃಶ್ಯ ಗಳಿಗೆಫ್ರೆಮುಗಳು ಅಮರುತ್ತವೆಲೋಕಮಾರ್ಪಾಡಾಗುತ್ತಲಿದೆಎಂದು ಆರ್ಥವಾಗಿದೆ. ನಮ್ಮ ಮಾತುಗಳಿಗೆಬೇಕಾಗಿರುವ ಉತ್ತರಗಳು ಬರಲ್ಲ.ನಮ್ಮ ಮಾತುಗಳಲ್ಲಿ ಕೆಲವುಚಲಾವಣೆ ಯಾಗದ ನಾಣ್ಯ ಗಳಾಗುತ್ತವೆ. ವಯಸ್ಸು ಮರಳಿದೆ ಶರೀರ ಗಳಿಗೆಪ್ರಾಧಾನ್ಯತೆಗಳು ಅದಲು ಬದಲಾಗುತ್ತವೆ.ಜೀವನ ಮರಣಗಳ ನಡುವೆ ಸ್ಪಷ್ಟವಾದರೇಖೆ ಗಳು ಚೆದರಿಹೋಗುತ್ತವೆ. ದೇಶಗಳ ಗಡಿ ಗಳುಬದಲಾಗುತ್ತವೆಕ್ರಾಂತಿ ಗೆಹೊಸ ಆವಶ್ಯಕತೆ ಗಳುಂಟಾಗುತ್ತವೆ. ಕೆಲವುಸಲ ಸೂರ್ಯನುಸುಸ್ತಾಗಿ ಉದಯಿಸುವುದೇ ಗೊತ್ತಾಗುವುದಿಲ್ಲಆಗ ಬದಲಾವಣೆ ಎಂದರೆಪುರೋಗಮನದ ಪ್ರತೀಕ್ಷೆ.ಈಗ ಬದಲಾವಣೆ ಎಂದರೆಭಯವಾಗುತ್ತದೆ. ಯಾರನ್ನೊಕರೆಯುತ್ತೀವಿವಾಸ್ತವವಾಗಿ ಯಾರನ್ನುಕರಿಯುವುದೋ ತಿಳಿಯದು.ವಯಸ್ಸು ಮೇಲೆ ಬೀಳುತ್ತಲಿದೆಆಕಾಶದಲ್ಲಿ ಮೋಡಗಳು ಹಮ್ಮುಕೊಳ್ಳುತ್ತಲಿವೆ. 7. … Read more

ಎರಡು ತೆಲುಗು ಕವಿತೆಗಳ ಅನುವಾದ

ಕದ ತೆರೆಯಿರಿ ಗಾಳಿಗೆ ಆಹ್ವಾನವಿರಲಿ, ಬೆಳಕಿಗೆ ಪ್ರವೇಶವಿರಲಿ,ಸೆರೆಹಿಡಿದ ಮನದಿ, ಬರಿದೆ ಗತದ ನೆನಪಲಿ,ಕತ್ತಲೆಯ ಗವಿಯಲಿ ಸುಮ್ಮನೆ ಅಲೆಯದಿರಿ.ನೆನಪಿಸಿಕೊಳ್ಳಿ ಬಂದ ದಾರಿಯ ಪಯಣವನು,ಎಲ್ಲ ಭಾವಗಳ ಬಿಡುಗಡೆ ಮಾಡಿ,ಯಾವುದೇ ದ್ವಾರದಿಂದ ಜಾರಿಹೋಗದಿರಿ. ನಿಮ್ಮ ಸತ್ವ ಜಗಕೆ ಕಾಣಲಿ, ಕಿಟಕಿ-ಬಾಗಿಲು ತೆರೆಯಿರಿ,ಬರುವವರು ಬರಲಿ, ಹೋಗುವವರು ಸಾಗಲಿ.ಮುಚ್ಚಿದ ಕಿಟಕಿಗಳ ಹಿಂದೆ ಅಡಗದಿರಿ ನೀವಿಂದು,ಅನಾದಿ ಕಾಲದ ಸ್ವಾತಂತ್ರ್ಯದ ಬೀಗಗಳ ಕಿತ್ತೊಗೆಯಿರಿ. ಮನದ ಕದವ ತೆರೆದಿಡಿ, ತೊಳೆಯಿರಿ ಕಲ್ಮಷಗಳನು,ಮುಖ್ಯದ್ವಾರಗಳು ಸದಾ ತೆರೆದಿರಲಿ ಪೂರ್ಣವಾಗಿ,ಯಾವುದನ್ನೂ ಕಳೆವ ಭಯದ ಭ್ರಮೆಯ ಬಿಡಿ.ಹೃದಯದ ಕೋಣೆಗಳಿಗೆ ಬೀಗ ಹಾಕುವುದು ಸಲ್ಲ, ಅರಿಯಿರಿ. … Read more

ಮಾಸಿದ ಪಟ: ಎಫ್.‌ ಎಂ. ನಂದಗಾವ

ಕ್ರಿಸ್ಮಸ್ ಬಂತಂದ್ರ ನನಗ ನಮ್ಮ ಮನ್ಯಾಗಿದ್ದ ಮಾಸಿದ ಪಟ ನೆನಪಾಗ್ತದ. ಸಣ್ಣಾಂವ ಇದ್ದಾಗ ನಾ ಮಾಡಿದ್ದ ಹಳವಂಡದ ಕೆಲಸ ನೆನಪಾಗಿ ಮನಸ್ಸ ಖಜೀಲ ಆಗ್ತದ. ನನಗ ತಿಳಿವಳಿಕಿ ಬಂದಾಗಿಂದಲೂ, ನಮ್ಮ ಮನೆಯ ದೇವರ ಪೀಠದಾಗ ಅಪ್ಪ ಜೋಸೆಫ್, ಅವ್ವ ಮರಿಯವ್ವ ಮತ್ತು ಬಾಲಯೇಸುಸ್ವಾಮಿ ಅವರ ಪವಿತ್ರ ಕುಟುಂಬದ ಚಿತ್ರಪಟದ ಜೋಡಿ ಒಬ್ಬರು ಸ್ವಾಮಿಗಳ ಚಿತ್ರಪಟಾನೂ ಐತಿ. ಕನ್ನಡ ಸಾಲಿ ಓದ ಮುಗಿಸಿ, ನಾನು ಪ್ಯಾಟಿಯೊಳಗಿನ ಹೈಸ್ಕೂಲ್ ಕಟ್ಟಿ ಏರಿದಾಗ ನನ್ನ ಸಹಪಾಠಿಗಳು ನಮ್ಮ ಮನಿಗೆ ಬಂದಾಗಲೆಲ್ಲಾ, `ಅದೇನೋ, … Read more

ಸಾಂಪ್ರದಾಯಿಕವಾಗಿ ಆಚರಿಸುವ ಪ್ರಾಣಿ ಸ್ಪರ್ಧೆಗಳು, ಪ್ರಾಣಿ ಹಿಂಸೆ ಹಾಗು ಪ್ರಾಣಿ ಕಲ್ಯಾಣದ ಅಗತ್ಯತೆ: ಡಾ. ಕಾವ್ಯ ವಿ.

ಜಲ್ಲಿಕಟ್ಟುಗುಮ್ಮೋಗೂಳಿಯ ಸ್ಪರ್ಧೆ ಹಾಗು ಬುಲ್ ಟೇಮಿಂಗ್ ಎಂದು ಕರೆಯಲ್ಪಡುವ ಜಲ್ಲಿಕಟ್ಟು, ಇದು ತೆಮಿಳುನಾಡಿನ ಸಾಂಪ್ರದಾಯಿಕ ಪೊಂಗಲ್ ಹಬ್ಬದ ಕ್ರೀಡೆಯಾಗಿದೆ. ಈ ಕ್ರೀಡೆಯಲ್ಲಿ ಕಂಗಾಯಾಮ್ ತಳಿಯ ಗೂಳಿಯನ್ನು ಸ್ಪರ್ಧೆಯ ಗುಂಪಿನಲ್ಲಿ ಬಿಡಲಾಗುತ್ತದೆ ಹಾಗು ಓಡುವ ಗೂಳಿಯನ್ನು ನಿಲ್ಲಿಸಲು ಸ್ಪರ್ಧಾಳುಗಳು ಗೂಳಿಯ ಗೂನನ್ನು ಹಿಡಿದುಕೊಳ್ಳಲು ಪ್ರಯತ್ನಿಸುತ್ತಾರೆ. ಇದರ ಜೊತೆಗೆ ಗೂಳಿಯ ಕೊಂಬಿಗೆ ಕಟ್ಟಿದ ಬಾವುಟವನ್ನು ಹಿಡಿದು ಅಂತಿಮ ಗುರಿಯನ್ನು ತಲುಪಬೇಕಿರುತ್ತದೆ. ಕಂಬಳಇದು ದಕ್ಷಿಣ ಕರ್ನಾಟಕದ ತುಳುನಾಡಿನ ಒಂದು ಸಾಂಪ್ರದಾಯಿಕ ಆಟವಾಗಿದ್ದು, ಇದರಲ್ಲ್ಲಿ ದಷ್ಟ ಪುಷ್ಟವಾಗಿ ಸಾಕಿರುವ ಕೋಣಗಳನ್ನು ಕೆಸರು ಭತ್ತದ … Read more

ವೃದ್ಧೋಪನಿಷತ್ (೧-೫): ಡಾ ರಾಜೇಶ್ವರಿ ದಿವಾಕರ್ಲ

ತೆಲುಗು ಮೂಲ: ಡಾ ಎನ್ ಗೊಪಿ ರವರ ವೃದ್ಧೋ ಪನಿಷತ್ ಕನ್ನಡ ಅನುವಾದ: ಡಾ ರಾಜೇಶ್ವರಿ ದಿವಾಕರ್ಲ 1. ವೃದ್ಧನು ವೃದ್ಧನೆಂದರೆಮುದುಕ ನೆಂದಲ್ಲವೃದ್ಧಿಹೊಂದಿದವನೆಂದರ್ಥಅಂತಹ ವೃದ್ಧಿಕಾಲದ ಪುರೋಗಮನದಲಿ ಮಾತ್ರವೆ ಅಲ್ಲ,ಅನುಭವದ ಪರಿಣತಿ ಯಲ್ಲಿಯೂ ಸಹವಯಸು ಕಳೆದಿರುವುದರಲಿ ಮಾತ್ರ ವಲ್ಲಮನಸು ಬೆಳೆದಿರುವುದುರಲ್ಲಿಯೂ ಸಹ,ಶಿಥಿಲವಾಗಿತ್ತಿರುವುದು ಶರೀರವೇ !ಆದರೆಅದು ಸಾಧಿಸಿದ್ದುಕಡಿಮೆಯೇನೂ ಅಲ್ಲ,ಗಿಡ ಹೊಂದಿದಸಾಫಲ್ಯ ವಂತಹುದೇ ಇದೂ ಸಹ.ಇದೊಂದು ಜ್ಞಾನದ ಕುಂಡ.ಜೀವನ ಬಿಗಿಹಿಡಿದ ತತ್ವವೃದ್ಧಾಪ್ಯ ವೆಂದರೆಪೊದೆತುಂಬಿದಅರಣ್ಯ ಯಾನದಲ್ಲಿಹಸಿರು ಹಾದಿಗಳನ್ನುಕೆತ್ತಿದ ಕಂಕಣ ಬದ್ದರುಸಂಸಾರ ಮಹಾ ಸಾಗರದಲ್ಲಿನೆಂದ ಮಮತೆಯ ಮುದ್ದೆಗಳು.ಜೀವನದ ವೇದಿಕೆಯಲ್ಲಿತಂದೆ ತಾಯಿತಾತ, ಗುರುಗಳ ಪಾತ್ರಗಳನ್ನೂನಿರ್ವಹಿಸಿದ ಸಿದ್ಧರುಈದಿನ … Read more

ನಿರ್ಲಿಪ್ತತೆಯಲ್ಲಿ ಹರಿದುಬಂದ ಜೀವಭಾವ “ಬೊಗಸೆ ನೀರು”: ಬಿ.ಕೆ.ಮೀನಾಕ್ಷಿ, ಮೈಸೂರು.

ಪತ್ರಕರ್ತನ ಸತ್ಯಕಥೆ: ಬೊಗಸೆ ನೀರುಲೇಖಕರು: ಅರುಣಕುಮಾರ ಹಬ್ಬುಪ್ರಕಾಶನ: ಸುದರ್ಶನ ಪ್ರಕಾಶನ, ಬೆಂಗಳೂರು. ಬೊಗಸೆ ನೀರನ್ನು ಹೀರಿ ಮುಗಿಸುವಷ್ಟರಲ್ಲಿ ಗಂಗೆಯಲ್ಲಿ ಮಿಂದು ಮಡಿಯಾದಂತಾಯಿತು. ಪದ ಕುಸಿಯೆ ನೆಲವಿಹುದು ಮಂಕುತಿಮ್ಮ ಎಂದು ಡಿವಿಜಿಯವರು ಹೇಳಿದಂತೆ ಪ್ರತಿಸಾರಿ ಮನುಷ್ಯ, ತನ್ನ ಚೈತನ್ಯವನ್ನು ಆತ್ಮಸ್ಥೈರ್ಯವನ್ನು ಕಳೆದುಕೊಂಡಾಗೆಲ್ಲ ಯಾವುದೋ ಒಂದು ದಿವ್ಯಶಕ್ತಿ ಆಸರೆಯಾಗಿ ಒದಗಿಬರುತ್ತದೆ ಎಂಬುದು ಸತ್ಯವಾದ ಮಾತು. ಬದುಕೆಂಬ ಕತ್ತಿಯಲಗಿನ ಮೇಲೆ ನಡೆಯುತ್ತಾ, ಜೀವನವನ್ನು ಸರಿದೂಗಿಸಲು ಸಮತೋಲನಗೊಳಿಸುತ್ತಾ, ಇಡೀ ಜೀವನವನ್ನೇ ಸವೆಸುವುದಿದೆಯಲ್ಲ ಅದಕ್ಕಿಂತ ದೌರ್ಭಾಗ್ಯ ಇನ್ನೊಂದಿಲ್ಲ. ಆದರೆ ಆ ದುರದೃಷ್ಟವನ್ನೇ ತನ್ನ ಪಾಲಿನ … Read more

ಈ ಪ್ರಶ್ನೆಗೆ ಉತ್ತರವೇನು?: ಕೊಡೀಹಳ್ಳಿ ಮುರಳೀ ಮೋಹನ್

ತೆಲುಗು ಮೂಲ: ಸಂಘಮಿತ್ರಕನ್ನಡ ಅನುವಾದ: ಕೊಡೀಹಳ್ಳಿ ಮುರಳೀ ಮೋಹನ್ ದೇರೆಬೈಲು ಐ.ಟಿ. ಹಿಲ್ಸ್, ಟವರ್ ನಂಬರ್ 4, ಹತ್ತನೇ ಮಹಡಿ.ವಿವಿಧ ಕ್ಷೇತ್ರಗಳ ವಿಶ್ವಪ್ರಸಿದ್ಧ ವಿಜ್ಞಾನಿಗಳು ಮತ್ತು ಹಲವಾರು ದೇಶಗಳ ಸರ್ಕಾರಿ ಪ್ರತಿನಿಧಿಗಳಿಂದ ತುಂಬಿರುವ ಸಭಾಂಗಣ. ಇನ್ನೆಷ್ಟು ಹೊತ್ತು? ಇನ್ನು ಐದೇ ನಿಮಿಷ. ಇಡೀ ಜಗತ್ತು ಕಾತರದಿಂದ ಕಾಯುತ್ತಿರುವ ಅದ್ಭುತ ಆವಿಷ್ಕಾರವೊಂದು ಅಲ್ಲಿ ಸಂಭವಿಸಲಿದೆ. ನೋಡುತ್ತಿದ್ದಂತೆ, ವೇದಿಕೆಯ ಮೇಲೆ ತಿಳಿನೀಲಿ ಬಣ್ಣದ ತೆಳುವಾದ ಮಂಜು ಆವರಿಸಿತು. ಕುತೂಹಲಕ್ಕೆ ತೆರೆ ಎಳೆದಂತೆ, ಡಾ. ವಾಣಿ ಅವರ ಐದು ವರ್ಷಗಳ ಕಠಿಣ … Read more

ಹಕ್ಕರಕಿಯೂ, ಸಮೀಕ್ಷೆಯೂ: ಎಫ್.‌ ಎಂ. ನಂದಗಾವ

ʻʻನಾವ್, ಹಕ್ಕರಕಿ ಮಾರೂದಿಲ್ಲರಿ ಸಾವಕಾರರ.ʼʼ ʻʻಯಾಕವ್ವ, ಹಕ್ಕರಕಿ ನೀವ್ಯಾಕ ಮಾರೂದಿಲ್ಲ?ʼʼ ʻʻನಿಮಗ ಕಾಯಿಪಲ್ಲೆ ಬೇಕಲಾ? ಮೆಂತೆ ಪಲ್ಲೆ ಬೇಕೋ? ಪುಂಡಿಪಲ್ಲೆ ಬೇಕೋ, ಸಬ್ಬಸಗಿ ಬೇಕೋ, ರಾಜಗಿರಿ ಬೇಕೋ ತಗೊಳ್ರಿ. ಕೋತಂಬ್ರಿ ಬೇಕಾತು ತಗೊಳ್ರಿ. ಬರಿ ಕರಿಬೇವು ಕೊಡಾಂಗಿಲ್ಲ ನೋಡ್ರಿ.ʼʼ ಸಂತೆ ಮೈದಾನದ ಒಳಗೆ ಎತ್ತರದ ಕಟ್ಟೆಗಳಲ್ಲಿನ ಒಂದು ಕಟ್ಟೆಯಲ್ಲಿ ಕುಳಿತು ಕಾಯಿಪಲ್ಲೆ ಮಾರುತ್ತಿದ್ದ ಸಾಂವತ್ರಕ್ಕ ಹೇಳಾಕ್ಹತ್ತಿದ್ದಳು. ಸಾಂವತ್ರಕ್ಕನ ಹಣಿ ಮ್ಯಾಲ ಮೂರು ಬೆರಳಿನ ವಿಭೂತಿ ಇದ್ದರ, ಕೊರಳಾಗ ತಾಳಿ ಜೋಡಿ ಬೋರಮಾಳ ಮತ್ತು ಅವಲಕ್ಕಿ ಸರಗಳು ಇದ್ದವು. … Read more

ವಾಸು ಸಿಕ್ಕಿದ್ದು…. !!!!: ನಾಗಸಿಂಹ ಜಿ ರಾವ್

ಸಿಂಹಾವಲೋಕನ 5 ಸಮುದಾಯದ ಪುಲಪೇಡಿ ನಾಟಕದ ತಾಲೀಮಿನ ಸಮಯದಲ್ಲಿ ಒಂದು ಘಟನೆ ನಡೆಯಿತು. ನಾನು ಲಿಂಗದೇವರು ಹಳೆಮನೆಯವರ ಜೊತೆ ನನ್ನ ಪಾತ್ರದ ಬಗ್ಗೆ ಮಾಹಿತಿ ಕೇಳುತ್ತಾ ನಿಂತಿದ್ದೆ. ಆಗ ನನಗಿಂತ ಸ್ವಲ್ಪ ದೊಡ್ಡ ಹುಡುಗ ಬಂದು ” ನೀವು ನಾಗಸಿಂಹ ಅಲ್ವ ?? ” ಎಂದು ಕೇಳಿದ, ನನಗೆ ಆಶ್ಚರ್ಯ, ಮೈಸೂರಿಗೆ ಬಂದು ಇನ್ನೂ ನಾಲ್ಕು ತಿಂಗಳು ಆಗಿಲ್ಲ ಯಾರಪ್ಪ ಇವರು ? ನನ್ನ ಹೆಸರು ಇವರಿಗೆ ಹೇಗೆ ಗೊತ್ತು? ಹೌದು ನಾನೆ ನಾಗಸಿಂಹ, ನೀವು ಯಾರು … Read more

ಅವಲಕ್ಕಿ ಎಂಬ ಮಹಾ ಪುರಾಣ: ಡಾ. ವೃಂದಾ ಸಂಗಮ್

ಅವಲಕ್ಕಿಗೆ ಒಂದು ಪುರಾಣ ಅದ. ಅದು ಭವಿಷ್ಯೋತ್ತರ ಪುರಾಣದೊಳಗ ಬರತದ. ನಾವೆಲ್ಲ, ಅವಲಕ್ಕಿ ಪವಲಕ್ಕಿ ಕಾಂಚಣ ಮಿಣಮಿಣ ಎಂಬ ಹಾಡನ್ನ ಮಕ್ಕಳಿದ್ದಾಗಲೇ ಹಾಡತಿದ್ವಿ. ಈಗೀಗ, ಅದಕ್ಕೂ ರಾಮಾಯಣಕ್ಕೂ ನಂಟು ಜೋಡಿಸಿದ್ದೂ ಕೇಳತೇವಿ. ಆದರ, ಅವಲಕ್ಕಿ ಪ್ರಾಚೀನತೆ ಬರೋದು ಮಹಾಭಾರತದಾಗ. ಮತ್ತ ಮುಂದ ಭಾಗವತ ಪುರಾಣದಾಗ, ಅಲ್ಲದ ಹರಿವಂಶದಾಗ. ಊಟಂದ್ರ ಊಟ ಅಲ್ಲ, ತಿಂಡಿ ಅಂದ್ರ ತಿಂಡಿ ಅಲ್ಲ, ಊಟನೂ ಹೌದು, ತಿಂಡಿನೂ ಹೌದು, ಬಹುರೂಪಿ, ನಾನ್ಯಾರು. ಅಂತ ಯಾರರೇ ಕೇಳಿದರ ಅದು ಅವಲಕ್ಕಿ ಅಂತ ಎಲ್ಲಾರಿಗೂ ಗೊತ್ತು. … Read more

ಸುನೀಲರ ತನಗಗಳು: ಬೊಗಸೆಯಲಿ ತುಂ ತುಂಬಿಕೊಂಡ ನದಿ ನೀರ ನೀರವತೆ !: ಡಾ. ಹೆಚ್ ಎನ್ ಮಂಜುರಾಜ್

ಶ್ರೀಯುತ ಸುನೀಲ್ ಹಳೆಯೂರು ಮೂಲತಃ ಸಾಹಿತ್ಯ ಸಹೃದಯಿ. ಬರೀ ಸಹೃದಯಿ ಮಾತ್ರವಲ್ಲ; ಸ್ವತಃ ಕವಿ, ವಿಮರ್ಶಕರು, ವ್ಯಾಖ್ಯಾನಕಾರರು, ಕನ್ನಡ ಪುಸ್ತಕಗಳನ್ನು ಓದಿಸುವ ಸದ್ದಿಲ್ಲದ ಸುದ್ದಿ ಬೇಡದ ಪ್ರಸಾರಕರು, ಬೆಂಗಳೂರಿನ ಕಾರ್ಪೊರೇಟ್ ಮತ್ತು ಕಾರ್ಪೊರೇಟ್ ಅಲ್ಲದ ಎರಡೂ ಕ್ಷೇತ್ರಗಳಲ್ಲೂ ತಮ್ಮದೇ ಆದ ಬರೆಹಗಾರತನದ ಛಾಪನ್ನೊತ್ತಿದವರು. ಆಕಾಶವಾಣಿ, ದೂರದರ್ಶನ, ಪತ್ರಿಕೆಗಳ ಆನ್‌ಲೈನ್ ವಾಹಿನಿಗಳಲ್ಲಿ ತಮ್ಮ ಕಗ್ಗದ ವ್ಯಾಖ್ಯಾನಗಳ ಮೂಲಕ ಮನೆ ಮಾತಾದವರು. ಗೀತ ರಚನಾಕಾರರು. ಮುಖ್ಯವಾಗಿ ತಮ್ಮ ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡತನದ ಕೆಲಸಗಳಿಗೆ ಸಾಮಾಜಿಕ ಮತ್ತು ಸಾಮುದಾಯಿಕ ಆಯಾಮ … Read more

ವಿಭಾವರಿ (ಕೊನೆಯ ಭಾಗ): ವರದೇಂದ್ರ ಕೆ ಮಸ್ಕಿ

ಇತ್ತ ಅನುಪಮಾಳ ಅಳು ನೋಡಲಾಗದೆ ತೇಜಸ್ ಕೂಡ ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಿಸಿದ್ದಾನೆ. ಇದನ್ನು ಕಂಡ ವಿಭಾಳ ಮನಸಲ್ಲಿ ತಲ್ಲಣವಾಗುತ್ತಿದೆ. ನಾನು ತಪ್ಪು ಮಾಡಿದೆ, ಮತ್ತೆ ಮತ್ತೆ ತಪ್ಪೇ ಮಾಡುತ್ತಿದ್ದೇನೆ. ಅಂದು ತೇಜಸ್ನನ್ನು ಬಿಟ್ಟು ಹೋಗಿ ತಪ್ಪು ಮಾಡಿದೆ, ಈಗ ಮತ್ತೆ ಅವನೊಂದಿಗೆ ಬಂದು ಮತ್ತೆ ತಪ್ಪು ಮಾಡಿದ್ದೇನೆ. ಆದರೆ ತೇಜಸ್ನ ಜೊತೆ ಬರದೇ ವಿಧಿ ಇರಲಿಲ್ಲ.. ಈಗ ಏನು ಮಾಡಲಿ.. ಏನು ಮಾಡಲಿ.. ಎಂದು ಚಿಂತೆಯಲ್ಲಿ ಮುಳುಗಿದವಳನ್ನು ಅವಳ ಗೆಳತಿ ವೇದಶ್ರೀ ಬಂದು ಕರೆದುಕೊಂಡು ಹೋಗುತ್ತಾಳೆ. … Read more

ದಿಕ್ಕುಗಳು (ಭಾಗ 6): ಹಟ್ಟಿ ಸಾವಿತ್ರಿ ಪ್ರಭಾಕರಗೌಡ

ಅಜ್ಜಿಯ ಒತ್ತಾಯಕ್ಕೆ ಮಣಿದು ಅನುಶ್ರೀ ಒಂದೆರಡು ತುತ್ತು ತಿಂದಳು. ಇಷ್ಟು ದಿನ ಸತ್ತು ಹೋಗಿರುವ ತಾಯಿಯ ನೆನಪುಗಳು ಬಾಧಿಸುತ್ತಿದ್ದರೂ ತಂದೆ ಇರುವನಲ್ಲ ಅಂತ ಧೈರ್ಯದಿಂದ ಇರಲು ಯತ್ನಿಸುತ್ತಿದ್ದವಳಿಗೆ ತಂದೆ ಇದ್ದೂ ಇಲ್ಲದಂತಾದ ಎಂಬ ಸತ್ಯವನ್ನು ಅರಗಿಸಿಕೊಳ್ಳಲಾಗದೇ ಉಣ್ಣುತ್ತಿದ್ದ ತುತ್ತು ನೆತ್ತಿಗೆ ಹತ್ತಿ ಕೆಮ್ಮತೊಡಗಿದಳು. ಆ ಹೊತ್ತಿಗೆ ಚೈತನ್‌ನ ಬೈಕ್ ಅನುಶ್ರೀಯ ಮನೆಯ ಮುಂದೆ ನಿಂತಿತು. ಸದ್ದು ಕೇಳಿ ಬಾಗಿಲಿಗೆ ಓಡಿದಳು ಜ್ಯೋತಿ. ಯಾರಾಗಿರಬಹುದೆಂದು ಅನು ಚಡಪಡಿಸಿದಳು. ಬೈಕ್ ನಿಲ್ಲಿಸಿ ಚೈತನ್ ಒಳ ಬಂದನು. ವೃದ್ಧಾಶ್ರಮಕ್ಕೆ ಹೋಗದೇ ಸೀದಾ … Read more

ಮಗು, ನೀ ನಗು (ಭಾಗ 5): ಸೂರಿ ಹಾರ್ದಳ್ಳಿ

ಗಾದೆಯೇ ಇದೆಯಲ್ಲ, ಅಜ್ಜಿಗೆ ಅರಿವೆ ಚಿಂತೆ, ಮಗಳಿಗೆ ಅದೇನೋ ಚಿಂತೆ, ಮೊಮ್ಮಗಳಿಗೆ ಕಜ್ಜಾಯ ಚಿಂತೆ, ಎಂದು! ಮೊದಲನೆಯದಂತೂ ಸತ್ಯಸ್ಯ ಸತ್ಯ ಎಂಬುದು ನನಗೆ ಈಗ ಅರಿವಾಗಿದೆ. ಈ ಮಗುವಿನ ಸೇವೆಗೆ ಎಷ್ಟೊಂದು ಬಟ್ಟೆ ಬೇಕಲ್ಲ, ಕಾಲಿಗೆ ಸಾಕ್ಸ್ಗಳು, ಕೈಗೆ ಗವಸುಗಳು, ತಲೆಗೆ ಟೊಪಿ, ಅಂಗಿ, ಸ್ವೆಟರ್, ಡಯಪರ್‌ಗಳು, ಹೀಗೆ ವಿವಿಧ ಗಾತ್ರದವುಗಳು. ದಿನಕ್ಕೆ ಆರೇಳು ಬಾರಿ ಅವನ್ನು ಬದಲಿಸಬೇಕು. ಹೀಗಾಗಿ ಡಜನ್ ಡಜನ್ ಬಟ್ಟೆಗಳು. ಉಚ್ಚೆ ಮಾಡಿದಾಗಲೆಲ್ಲಾ ಅವನ್ನು ತೊಳೆದು ಒಣಗಿಸಬೇಕು. ಹಳೆಯ ಪಂಚೆಗಳನ್ನೆಲ್ಲಾ ಕತ್ತರಿಸಿ ಇಟ್ಟುಕೊಂಡಿದ್ದೇನೆ, … Read more

“ಸಸ್ಯಶಾಸ್ತ್ರದ ಲೋಕದಲ್ಲಿ ಒಂದು ಪ್ರವಾಸ”: ರೋಹಿತ್ ವಿಜಯ್ ಜಿರೋಬೆ

ಮಾನವ ಜೀವನ, ಪ್ರಾಣಿ ಜೀವನ ಹಾಗೂ ಭೂಮಿಯ ಪರಿಸರ ವ್ಯವಸ್ಥೆಯ ಮೂಲವೇ ಸಸ್ಯಗಳು. ಸಸ್ಯವಿಲ್ಲದೆ ಜೀವವೇ ಅಸಾಧ್ಯ ಎಂಬ ಮಾತು ಅತಿಶಯೋಕ್ತಿಯಲ್ಲ. ಏಕೆಂದರೆ ಸಸ್ಯಗಳು ಆಹಾರ, ಆಮ್ಲಜನಕ, ಔಷಧಿ, ವಸ್ತ್ರ, ವಾಸಸ್ಥಾನ ಮತ್ತು ನೂರಾರು ನೈಸರ್ಗಿಕ ಸಂಪತ್ತುಗಳನ್ನು ಒದಗಿಸುತ್ತವೆ. ಈ ಸಸ್ಯಗಳ ಜೀವನ, ರಚನೆ, ವಿಕಾಸ, ಕ್ರಿಯಾಶೀಲತೆ ಹಾಗೂ ಅವುಗಳ ಪರಿಸರ ಸಂಬಂಧಗಳನ್ನು ಅಧ್ಯಯನ ಮಾಡುವ ಶಾಸ್ತ್ರವನ್ನು ಸಸ್ಯಶಾಸ್ತ್ರ ಅಥವಾ ಬೋಟನಿ (Botany) ಎಂದು ಕರೆಯಲಾಗುತ್ತದೆ. “ಬೋಟನಿ” ಎಂಬ ಪದವು ಗ್ರೀಕ್ ಭಾಷೆಯ Botane ಎಂಬ ಪದದಿಂದ … Read more

ಗಿಗ್ ಆರ್ಥಿಕತೆ ಹಾಗೂ ನಿರುದ್ಯೋಗ ನಿವಾರಣೆಗೆ ನವ ದಾರಿ: ನಿಂಗಪ್ಪ ಹುತಗಣ್ಣವರ

ಇಂದಿನ ಜಗತ್ತಿನಲ್ಲಿ ಉದ್ಯೋಗದ ಸ್ವರೂಪದಲ್ಲಿ ದೊಡ್ಡ ಬದಲಾವಣೆ ಸಂಭವಿಸಿದೆ. ಹಿಂದಿನ ದಿನಗಳಲ್ಲಿ ಜನರು ಒಂದು ಸಂಸ್ಥೆಯಲ್ಲಿ ದೀರ್ಘಕಾಲ ಸ್ಥಿರ ಉದ್ಯೋಗ ಮಾಡುವುದು ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ತಂತ್ರಜ್ಞಾನ ಕ್ರಾಂತಿ, ಡಿಜಿಟಲ್ ಪ್ಲಾಟ್ಫಾರ್ಮ್ಗಳ ವಿಸ್ತರಣೆ ಮತ್ತು ಆನ್ಲೈನ್ ಜಗತ್ತಿನ ಪ್ರಭಾವದಿಂದ ಉದ್ಯೋಗದ ಮಾದರಿ ಸಂಪೂರ್ಣವಾಗಿ ಬದಲಾಗಿದೆ. ಈ ಹೊಸ ಉದ್ಯೋಗ ಮಾದರಿಯನ್ನು ಗಿಗ್ ಆರ್ಥಿಕತೆ ಎಂದು ಕರೆಯಲಾಗುತ್ತದೆ. “Gig” ಎಂಬ ಪದವು ಸಂಗೀತ ಕ್ಷೇತ್ರದಲ್ಲಿ ತಾತ್ಕಾಲಿಕ ಪ್ರದರ್ಶನವನ್ನು ಸೂಚಿಸಲು ಬಳಸಲಾಗುತ್ತಿತ್ತು. ಈಗ ಅದನ್ನು ತಾತ್ಕಾಲಿಕ, ಪ್ರಾಜೆಕ್ಟ್ ಆಧಾರಿತ ಅಥವಾ … Read more

ವಿಭಾವರಿ (ಭಾಗ 4): ವರದೇಂದ್ರ ಕೆ ಮಸ್ಕಿ

ಅನುಪಮಾಳ ಅನುರಾಗದಲೆಯಲ್ಲಿ ತೇಜಸ್ ಅನುಪಮಾ ಮಾಧವನ ಒಬ್ಬಳೇ ಮುದ್ದಿನ ತಂಗಿ. ವರ್ಣನಾತೀತ ರೂಪ, ಬೆಳ್ಳನೆಯ ಚರ್ಮ ಇಲ್ಲದೆ ತುಸು ಕಪ್ಪಾದ ಮೈ ಬಣ್ಣ ಹೊಂದಿದ ಕೃಷ್ಣ ಸುಂದರಿ. ಆ ಕಣ್ಣುಗಳನ್ನು ನೋಡುತ್ತಿದ್ದರೆ ನವಿಲೇ ನಾಚಬೇಕು, ತುಂಬಿಕೊ ಂಡ ಗಲ್ಲಗಳನ್ನು ಸ್ಪರ್ಶಿಸಿದರೆ ಕೈಯಲ್ಲಿ ಹೂ ಹಿಡಿದ ಅನುಭವ. ಸುಂದರ ರೂಪಲಾವಣ್ಯದ ಜೊತೆಗೆ ಗುಣವಂತೆ, ಸಂಸ್ಕಾರವ ಂತೆ, ಸಹೃದಯ ಮನಸಿನ ಭಾವನಾತ್ಮಕ ಜೀವಿ, ಒಬ್ಬಳನ್ನು ಪ್ರೇಮಿಸಿ ಅವಳಿಗಾಗಿ ಲಕ್ಷಗಟ್ಟಲೇ ಹಣ ಖರ್ಚು ಮಾಡಿ ಅವಳಿಂದ ಮೋಸಹೋಗಿ ಕುಗ್ಗಿಹೋದವನನ್ನು ಮದುವೆ ಆಗಲು … Read more

ಮಗು, ನೀ ನಗು (ಭಾಗ 4): ಸೂರಿ ಹಾರ್ದಳ್ಳಿ

ಬಂದವರಾರಾದರೂ ಮುಖಕ್ಕೆ ಸೆಂಟೋ, ಪೌಡರೋ ಹಾಕಿದರೆ ಮಗು ಅವರ ಕೈಯಲ್ಲಿ ಇದ್ದರೂ ಇತ್ತ ಮುಖ ತಿರುಗಿಸುತ್ತದೆ. ಅದರೆದುರು ನಾವು ಪರಿಮಳದ ವೆಜೆಟೇಬಲ್ ಪಲಾವೋ, ಬಿರ್ಯಾನಿಯೋ ತಿನ್ನುವಾಗ ಅದು ನಮ್ಮತ್ತ ನೋಡಿದರೆ ನಾವು ಅದಕ್ಕೆ ಕೊಡದೇ ಮೋಸ ಮಾಡುತ್ತಿದ್ದೇವೆ, ಎಂದು ದುಃಖವಾಗುತ್ತದೆ. ‘ನೀನು ದೊಡ್ಡವಳಾಗು ಪುಟ್ಟಿ, ನಂತರ ನಿನಗೆ ಪಲಾವ್, ಪಿಜ್ಜಾ, ಪಾಸ್ತಾ, ಏನು ಬೇಕೋ ಕೊಡಿಸುತ್ತೇವೆ,’ ಎಂದು ಮಾತು ಕೊಡುತ್ತೇನೆ. ನನ್ನ ಗಂಡ ಮಾತ್ರ ಮಗುವಿಗೆ ಈ ಗೊಬ್ಬರಗಳನ್ನೆಲ್ಲಾ ಕೊಡಬೇಡ, ಅವು ಜಂಕ್ ಫುಡ್‌ಗಳು. ಅವೆಲ್ಲಾ ಮೈದಾ … Read more

ಆರಿದ ದೀಪ: ಎಲ್.ಚಿನ್ನಪ್ಪ, ಬೆಂಗಳೂರು

“ಸ್ಮಿತಾ ಹಸ್ಬೆಂಡ್ ಯಾರು ಎನ್ನುತ್ತ, ಡಾಕ್ಟರ್ ಐಸಿಯು ವಾರ್ಡ್ನಿಂದ ಹೊರಕ್ಕೆ ಬಂರರು. “ನಾನೇ ಡಾಕ್ಟರ್” ಎನ್ನುತ್ತ ಮೋಹನ್, ಸೀನಿಯರ್ ಡಾಕ್ಟರ್ ಸೀತಾರಾಂರವರ ಕಂಚಿನ ಕಂಟದ ಕರೆಗೆ ಅವರ ಹತ್ತಿರಕ್ಕೆ ಹೋದ. ಎದುರಿಗೆ ಬಂದು ನಿಂತ ಮೋಹನ್ನ ಮುಖ ನೋಡಿದ ಡಾಕ್ಟರ್, “ನೋಡಿ ಮಿಸ್ಟರ್ ಮೋಹನ್, ನಾವು ನಮ್ಮ ಶಕ್ತಿಮೀರಿ ಪ್ರಯತ್ನಿಸಿದ್ದೇವೆ, ನಿಮ್ಮ ಪತ್ನಿಗೆ ಕೊಡಬೇಕಾದ ಚಿಕಿತ್ಸೆಯನ್ನೆಲ್ಲಾ ಕೊಟ್ಟಿದ್ದೇವೆ, ಮುಂದಿನದು ದೈವೇಚ್ಚೆ. ನಿಮ್ಮ ಪತ್ನಿ ಈಗ ಆಕ್ಸಿಜನ್ನಿಂದ ಉಸಿರಾಡುತ್ತಿದ್ದಾರೆ. ಆಕೆಯ ನಾಡಿ ಮಿಡಿತ ಕ್ಷಣ ಕ್ಷಣಕ್ಕು ಕ್ಷೀಣಿಸುತ್ತಿದೆ. ಇನ್ನು … Read more

‘ಎದೆ ತುಂಬಿ ಹಾಡಿದ ಕವಿ ಜಿ. ಎಸ್ ಶಿವರುದ್ರಪ್ಪ’: ಡಾ. ಸುಶ್ಮಿತಾ. ವೈ.

ನವೋದಯ ಕವಿ ದಿಗ್ಗಜರುಗಳ ಸಾಲಿನಲ್ಲಿ ‘ಬೆಳಕಿನ ಮನೆಯ ಕವಿ’ ಜಿ.ಎಸ್.ಎಸ್ ಅವರದ್ದೂ ಮಹತ್ವದ ಹೆಸರು. ಇವರು ತಮ್ಮ ಹೈಸ್ಕೂಲಿನ ದಿನಗಳಿಂದಲೇ ಚಿಕ್ಕ ಚಿಕ್ಕ ಕವಿತೆಗಳನ್ನು ಬರೆಯುತಿದ್ದರು. ಆನಂತರದಲ್ಲಿ ಗಳಗನಾಥ, ವೆಂಕಟಾಚಾರ್ಯ, ಕುವೆಂಪು, ಅನಕೃ, ಶಿವರಾಮ ಕಾರಂತರ ಬರಹಗಳು ಸಾಹಿತ್ಯದ ಬಗೆಗೆ ಅವರಲ್ಲಿ ಪ್ರೀತಿ, ಆಸಕ್ತಿಯನ್ನು ಹುಟ್ಟಿಸಲು ಕಾರಣವಾದವು. ಅವರು ಕಾಲೇಜಿನ ದಿನಗಳಲ್ಲಿ ಅನುವಾದಿಸಿದ ‘ಥಾಮಸ್ ಗ್ರೇ’ ಕವಿಯ ಕವಿತೆಗೆ ಅಧ್ಯಾಪಕರಾಗಿದ್ದ ಜಿ.ಪಿ ರಾಜರತ್ನಂ ಅವರಿಂದ ಪ್ರಶಂಸೆಯೂ ದೊರಕಿತ್ತು. ಅದು ಪ್ರಕಟವಾಗಿ ಕಾವ್ಯ ರಚನೆಗೆ ಹೊಸ ಹುಮ್ಮಸ್ಸು ದೊರೆಯಿತು. … Read more

ಮಳೆಯ ಜೋಕಾಲಿಯಲಿ ಜೋಗದಲಿ…..: ಬಿ.ಕೆ.ಮೀನಾಕ್ಷಿ, ಮೈಸೂರು.

ಜೋಗ್ನಲ್ಲಿ ಫಾಗ್ ನೋಡಬೇಕೆಂದು ಆಸೆಯಾಗಿ, ಆ ಆಸೆಯನ್ನು ದಮನಿಸಲಾಗದೆ ಮೈಸೂರಿನಿಂದ ಹೊರಟೇ ಬಿಟ್ಟೆವು. ತಾಳಗುಪ್ಪ ರೈಲು ಹತ್ತಿ ಹೊರಟಿದ್ದು. ರಾತ್ರಿ ಹೊತ್ತು, ಸ್ಲೀಪರ್ ಕೋಚು. ಬೇಜಾರು. ಹೊರಗಡೇದೇನೂ ನೋಡೋದಕ್ಕಾಗಲ್ಲ, ಕಣ್ತುಂಬಿಕೊಳ್ಳೋಕಾಗಲ್ಲ! ಅಲ್ಲಾರೀ ನನಗೇನನಿಸುತ್ತದೆ ಅಂದ್ರೆ ಈ ಜನ, ಕಿಟಕಿಯಿಂದ ಆಚೆ ನೋಡುತ್ತಾ ಕೂರದೆ ಅದು ಹೇಗಾದರೂ ನೆಮ್ಮದಿಯಾಗಿ ನಿದ್ರೆ ಮಾಡುತ್ತಾರೆ ಅಂತ?! ನಿಮಗೂ ಈ ತರ ಯೋಚನೆ ಬರುತ್ತದೆ ತಾನೇ? ಹ್ಞಾಂ! ಸರಿಯಾಗಿ ಯೋಚಿಸಿದ್ದೀರಿ. ಸುತ್ತ ಇರೋರೆಲ್ಲ ಗೊರಕೆ ಆಸಾಮಿಗಳೇ. ನಾನಿನ್ನೇನು ಮಾಡಲಿ? ನಾನೂ ಹಾಗೇ ಮುದುಡಿಕೊಂಡೆ … Read more

ನೂಕುನುಗ್ಗಲು – ಕಾಲ್ತುಳಿತ: ಚಂದಕಚರ್ಲ ರಮೇಶ ಬಾಬು

ಜೂನ್ ೩ ತಾರೀಕಿನ ರಾತ್ರಿ ೧೧ ಗಂಟೆ. ಬೆಂಗಳೂರಿನ ಕ್ರಿಕೆಟ್ ತಂಡವೆನಿಸಿದ ರಾಯಲ್ ಛಾಲೆಂಜರ್ಸ್ ಮತ್ತು ದೆಹಲಿಯ ಡಿಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಫೈನಲ್ಸ್ ಪಂದ್ಯದ ಆಖರಿ ಕ್ಷಣಗಳು. ಅಹಮದಾಬಾದಿನಲ್ಲಿ ಕೂತ ಸುಮಾರು ೯೧ ಸಾವಿರ ಪ್ರೇಕ್ಷಕರು, ಟಿವಿ ತೆರೆಗಳಿಗ ಅಂಟಿಕೊಂಡು ಕೂತು ಕಾಯುತ್ತಿದ್ದ ಲಕ್ಷಗಟ್ಟಲೆ ವೀಕ್ಷಕರು ಕಾತರದಿಂದ ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ. ಅಲ್ಲಿಯವರೆಗೆ ಮೂರು ಬಾರಿ ಫೈನಲ್ಸ್ ಗೆ ಬಂದರೂ ಟ್ರೋಫಿ ಗೆಲ್ಲದ ಬೆಂಗಳೂರಿನ ತಂಡ ಕೊನೆಗೂ ಐಪಿಲ್ ಟ್ರೋಫಿಯನ್ನು ಕೈ ವಶಮಾಡಿಕೊಂಡಿತು. ಕೆಲ ಆಟಗಾರರ ಆನಂದ … Read more

ಕಾಕತಾಳೀಯಗಳ ಸರಣಿಯಲ್ಲೇ ಸ್ತ್ರೀ ಪೀಡನೆಗೆ ಮದ್ದು ಅರೆದ ಸು ಫ್ರಂ ಸೋ: ಡಾ. ಅಭಿಲಾಷ ಹೆಚ್ ಕೆ

ಬಹಳ ದಿನಕ್ಕೆ‌ ಒಂದೊಳ್ಳೆ‌ ಫಿಲ್ಮ್ ನೋಡ್ದೆ, ತುಂಬಾ‌ ಕಾಮಿಡಿ‌ ಇದೆ‌ ನಕ್ಕು‌ನಕ್ಕು ಸಾಕಾಯ್ತು ಅಂದ್ರು ಕೆಲವರು. ನಿಜ ನೋಡ್ಲೇಬೇಕಾದ ಸಿನೆಮಾ‌ ನೋಡು‌ ಅಭಿ‌ ಅಂತ ಹಕ್ಕೊತ್ತಾಯ ಮಾಡಿದರು ಗೆಳೆಯರು. ಆದರೆ ಇವರ್ಯಾರು ಸಿನೆಮಾದ ಕಥೆಯ ಸಣ್ಣ ಎಳೆಯನ್ನೂ ಬಿಟ್ಟುಕೊಡಲಿಲ್ಲ. ಫೈನಲಿ‌ ನಾನೂ ಸಿನೆಮಾ ನೋಡಿದೆ. ಸಿನೆಮಾದ ತಾಂತ್ರಿಕ ಮಿತಿಗಳನ್ನು ಕುರಿತು ಹೇಳೋದು ನನ್ನ ಉದ್ದೇಶ ಅಲ್ಲ. ಆ ಕೆಲಸ ಸಿನೆಮಾ ಕ್ಷೇತ್ರದ ಪರಿಣಿತರಿಗೆ ಬಿಟ್ಟದ್ದು. ಒಬ್ಬ ಸಾಮಾನ್ಯ ಸಹೃದಯ ಪ್ರೇಕ್ಷಕಳಾಗಿ ‘ಸು ಫ್ರಂ ಸೋ’ ಸಿನೆಮಾ ನನ್ನಲ್ಲಿ … Read more

ಮಕ್ಕಳ ಹಕ್ಕುಗಳ ಗ್ರಂಥಾಲಯ ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪುಸ್ತಕಗಳ ಪಾತ್ರ: ವಾಣಿ ಚೈತನ್ಯ

ಗ್ರಂಥಾಲಯ ಎಂದರೇನೆಂದು ಕೇಳಿದ್ದೇವೆ, ಮಕ್ಕಳ ಹಕ್ಕುಗಳ ಗ್ರಂಥಾಲಯವೆಂದರೆ ಏನು ಎಂದು ಎಲ್ಲರೂ ಯೋಚಿಸಬಹುದು. ವಿಶ್ವಸಂಸ್ಥೆ ರಚಿಸಿ, ಭಾರತವು ಸಹಿ ಮಾಡಿದ ಮಕ್ಕಳ ಹಕ್ಕುಗಳು ಇರುವುದೇ ಎಲ್ಲರಿಗೂ ಗೊತ್ತಿಲ್ಲದೇ ಇರುವಾಗ, ಮಕ್ಕಳ ಹಕ್ಕುಗಳ ಗ್ರಂಥಾಲಯ ಬಗ್ಗೆ ಸಾರ್ವತ್ರಿಕ ತಿಳುವಳಿಕೆ ಇನ್ನೊಂದು ಹೊಸ ಸವಾಲು. ಸಾಮಾನ್ಯವಾಗಿ ಗ್ರಂಥಾಲಯವೆಂದರೆ, ಪುಸ್ತಕಗಳನ್ನು ಸಂಗ್ರಹಿಸಿ ಇಡುವ ಮನೆ. ಪುರಾತನ ಕಾಲದಿಂದ, ಮಾನವರು ಅನುಭವಿಸಿ ಕಲಿತ, ವಿಜ್ಞಾನಿಗಳು ಪ್ರಯೋಗಗಳಿಂದ ಕಂಡುಕೊಂಡ ಜ್ಞಾನ ಭಂಡಾರಗಳ, ಮಾಹಿತಿಗಳ ಮೂಲ. ಶಾಲೆಗೆ ದಾಖಲಾಗಿ ಪಠ್ಯ ಪುಸ್ತಕಗಳನ್ನು ಓದುವುದೇ ದುಸ್ತರವಾಗಿದ್ದ ಕಾಲದಲ್ಲಿ … Read more

ಅನಾಥ ಭಗವಂತ ನೀ ಅವ್ಯಕ್ತನಾಗು: ನಾಗಸಿಂಹ ಜಿ ರಾವ್

ಸಿಂಹಾವಲೋಕನ 4 ವೇಣುಜೀ ಅವರಿಂದ ರಚಿತವಾದ “ಅನಾಥ ಭಗವಂತ ನೀ ಅವ್ಯಕ್ತನಾಗು” ನಾಟಕವು ಕೇವಲ ಒಂದು ನಾಟಕವಲ್ಲ, ಒಂದು ಸಾಮಾಜಿಕ ಕನ್ನಡಿಯಾಗಿದೆ. ಈ ನಾಟಕವು ಸುಳ್ಳು ಭಕ್ತಿಯನ್ನು, ದೇವರ ಹೆಸರಿನಲ್ಲಿ ವಂಚನೆ ಮಾಡುವವರನ್ನು ಬಯಲಿಗೆ ಎಳೆಯುವ ಗುರಿಯನ್ನು ಹೊಂದಿದ್ದು, ಭಗವಂತನೇ ಭೂಮಿಗೆ ಬಂದರೆ ಎಂಥ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂಬ ಕಥಾಹಂದರದ ಮೂಲಕ ಸಮಾಜದ ಕೊಳಕು ಮುಖವನ್ನು ತೆರೆದಿಡುತ್ತದೆ. ನಾಟಕದ ಕೇಂದ್ರ ಬಿಂದುವಾಗಿರುವ ಭಗವಂತ (ಧೀರನಾಥ -ವಿಷ್ಣು, ನಾಗಭೂಷಣ – ನಾರದ ), ದೀರ್ಘ ನಿದ್ದೆಯಿಂದ ಎದ್ದಾಗ ತನ್ನ … Read more

ವೆಂಕಟೇಶ್ ಸಲೂನ್: ಮಕ್ಕಳ ಹಕ್ಕುಗಳ ಕೋಟೆ !!!!!!: ನಾಗಸಿಂಹ ಜಿ ರಾವ್

ಲಿಂಗರಾಜಪುರಂ ಬಸ್‌ನಿಲ್ದಾಣದ ಬಳಿ ಗದ್ದಲದ ರಸ್ತೆಯೊಂದಿಗೆ, ಒಂದು ಸಣ್ಣ ಹೇರ್ ಕಟಿಂಗ್ ಸಲೂನ್ ಇದೆ. ವೆಂಕಟೇಶ್ವರ ಸಲೂನ್—ಚಿಕ್ಕದಾದರೂ, ಲಿಂಗರಾಜಪುರಂ ಹೃದಯದಲ್ಲಿದೆ. ಅದರ ಮಾಲೀಕ ವೆಂಕಟೇಶ್‌ರವರ ಮುಗುಳುನಗೆ, ಗ್ರಾಹಕರಿಗೆ ಕೇವಲ ಕೂದಲು ಕತ್ತರಿಸುವುದು ಮಾತ್ರವಲ್ಲ ಅದರ ಜೊತೆಗೆ ಸಣ್ಣ ಮಾತುಕತೆಯ ಸಂತೋಷವನ್ನೂ ಒದಗಿಸುತ್ತಿತ್ತು. ಆದರೆ ಈ ಸಲೂನ್‌ ಮುಂದೆ ಕೇವಲ ಕೂದಲು ಕತ್ತರಿಸುವ ಜಾಗವಾಗಿ ಉಳಿಯಲಿಲ್ಲ ; ಇದು ಮಕ್ಕಳ ಹಕ್ಕುಗಳಿಗಾಗಿ, ಮಕ್ಕಳ ರಕ್ಷಣೆಗಾಗಿ ಪ್ರಚಾರ ಮಾಡುವ ಒಂದು ಕಿರು ಕ್ರಾಂತಿಯ ಕೇಂದ್ರ ವಾಯಿತು.ಆಗ ನಾನು, ಚೈಲ್ಡ್ ರೈಟ್ಸ್ … Read more