ಸ್ಮಾರ್ಟ್ವಾಚು ಮತ್ತು ಹಳದಿ ಮೀನು: ಡಾ. ವಿಶ್ವನಾಥ ಎನ್ ನೇರಳಕಟ್ಟೆ
ನೆರಳಿನಲ್ಲಿದ್ದ ಬಂಡೆಗಲ್ಲಿನ ಮೇಲೆ ನೀಳವಾಗಿ ಮೈಚಾಚಿದ್ದ ಸೋಂಪ ದಿಗ್ಗನೆ ಒಂದೇಸಲಕ್ಕೆಎದ್ದುಕುಳಿತ. ಒಳಸೇರಿದ್ದ ದಿವ್ಯಾಮೃತ ಇದುವರೆಗೂ ಬೇರೆ ಯಾವಯಾವುದೋ ಲೋಕದಲ್ಲಿ ತನ್ನನ್ನು ಸುತ್ತಾಡಿಸುತ್ತಿತ್ತು. ಈಗದು ವೈಜಯಂತೀ ಹೊಳೆಯ ತೀರಕ್ಕೆ ಒಗೆದಿದೆ ಎಂದುಕೊಂಡ. ಒಂದು ಹಳೆಯ ಪಂಚೆ ಅವನ ಕೆಳಮೈಯ್ಯನ್ನು ಅರ್ಧಂಬರ್ಧವಾಗಿ ಆವರಿಸಿತ್ತು. ಮೇಲ್ಗಡೆ ಇದ್ದದ್ದು ಬಗೆಬಗೆಯ ಶೂನ್ಯಾಕೃತಿಗಳಿಗೆ ಜೀವಂತ ಸಾಕ್ಷಿ ಎನಿಸಿದ್ದ ಬನಿಯನ್ನು. ಅಂಗಿ ಅಲ್ಲೇ ಆ ಬಂಡೆಗಲ್ಲಿನ ಹಿಂದೆ ಬಿದ್ದಿತ್ತು. ಏನೋ ಸದ್ದು ಕೇಳಿದಂತಾಯಿತಲ್ಲ! ಅದರಿಂದಲೇ ಅಲ್ಲವೇ ತನಗೆ ಎಚ್ಚರ ಆದದ್ದು!ಎಂದುಕೊಂಡ ಅವನು. ಯಾರೋ ನೀರಿಗೆ ಹಾರಿದ … Read more