ಮೆಟ್ಟು ಹೇಳಿದ ಕಥಾ ಪ್ರಸಂಗ (ಒಂದು ನೀಳ್ಗಾವ್ಯ): ಎಂ.ಜವರಾಜ್
-೧- ‘ನನ್ನ ಏನಂತ ಅನ್ಕಂಡೆ..’ ಆ ಕಗ್ಗತ್ತಲ ಸರಿ ರಾತ್ರಿಯಲಿ ನನ್ನ ಮೈ ರೋಮ ರೋಮಗಳು ನಿಗುರಿ ನಿಂತವು. ಬೆಕ್ಕಸ ಬೆರಗಿನಲಿ ನಿಂತಲ್ಲೆ ನಿಂತು ಕಣ್ಗಗಲಿಸಿ ಅತ್ತಿತ್ತ ಕಾಲ ಹೆಜ್ಜೆಯ ಸರಿಸಿ ತಿರುಗಿ ಉರುಗಿ ನೋಡಿದೆ ಆ ಕತ್ತಲ ಸಾಮ್ರಾಜ್ಯದಲಿ ಜೀವ ಅಳುಕಿತು. ‘ನಿಂಗ ಏನೂ ಕಾಣೊಲ್ದು..’ ಮತ್ತೆ ಎತ್ತರಿಸಿದ ದನಿ. ದನಿ ಬಂದ ಕಡೆ ನೋಡಿದೆ. ಜೀವ ಇನ್ನಷ್ಟು ಅದುರಿತು. ಸರಕ್ಕನೆ ನಿಂತಲ್ಲೆ ಕುಂತೆ. ‘ಎದ್ರು ಮ್ಯಾಕ್ಕೆ..’ ಸಡನ್ ಎದ್ದವನು ಮತ್ತೆ ಮತ್ತೆ ತಿರುಗಿ … Read more