ಕನ್ನಡ ಕಲಿಸಿದ ಮಕ್ಕಳು: ವೆಂಕಟೇಶ ಚಾಗಿ

ಆಸಂಗಿಪುರದ ಮಕ್ಕಳು ಎಂದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ತುಂಬಾ ಪ್ರಸಿದ್ಧಿ. ಯಾವುದೇ ಸ್ಪರ್ಧೆಗಳಲ್ಲಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಓದಿನಲ್ಲಿ ಆಸಂಗಿಪುರದ ಮಕ್ಕಳು ಸದಾ ಮುಂದು. ಪ್ರತಿ ಸಾರಿಯೂ ಕ್ರೀಡಾ ಕೂಟಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡೇ ಊರಿಗೆ ಬರುತ್ತಿದ್ದರು. ಆಸಂಗಿಪುರವು ಆ ಊರಿನ ಮಕ್ಕಳಿಂದಲೇ ಪ್ರಸಿದ್ಧಿ ಪಡೆದಿತ್ತು. ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಹೆಸರು ಗಳಿಸಿದ್ದರು. ಇದಕ್ಕೆಲ್ಲಾ ಮೂಲ ಕಾರಣ ಆ ಊರಿನ ಶಾಲೆಯ ಗುರುಗಳು. ಗುರುಗಳ ಮಾರ್ಗದರ್ಶನದಲ್ಲಿ ಶ್ರದ್ಧೆಯಿಂದ ಛಲದಿಂದ ಯಾವುದೇ ಕಾರ್ಯವನ್ನಾಗಲೀ ಅಚ್ಚುಕಟ್ಟಾಗಿ ಮುಗಿಸುತ್ತಿದ್ದರು. ಬೇಸಿಗೆ ರಜೆ ಹತ್ತಿರ ಬರುತ್ತಿದ್ದ ಕಾಲ … Read more

ವಿಭಿನ್ನ ಕಲೆಯ ಪ್ರವೃತ್ತಿಯನ್ನು ವೃತ್ತಿ ಯನ್ನಾಗಿಸಿ ಯಶಸ್ಸು ಕಂಡ ಭರತ್ ಕುಲಾಲ್: ಹರ್ಷಿತಾ ಹರೀಶ ಕುಲಾಲ್

ಹುಟ್ಟಿದ ಪ್ರತಿಯೊಂದು ವ್ಯಕ್ತಿ ಯಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಅದಕ್ಕಾಗಿ ಸೂಕ್ತ ವೇದಿಕೆ ಸಿಕ್ಕಾಗ ಪ್ರದರ್ಶನ ಮಾಡುತ್ತಾರೆ. ಇನ್ನೂ ಕೆಲವರು ಎಲ್ಲ ಕಲೆ ಗೊತ್ತಿದ್ದು ವೇದಿಕೆ ಸಿಗದೆ ವಂಚಿತರಾಗಿರುತ್ತಾರೆ. ಹಾಗೆಯೇ ಹಲವು ಕನಸುಗಳನ್ನು ಹೊತ್ತ ಯುವಕ ತಾನು ವೇದಿಕೆಯಲ್ಲಿ ಪ್ರದರ್ಶನ ನೀಡಿ ಅದರ ಅನುಭವದ ರುಚಿಯಿಂದ ಮುಂದುವರಿದ ಪ್ರತಿಭೆ ಬಾತು ಕುಲಾಲ್.. ಇವರು ಶ್ರೀ ನಾರಾಯಣ ಹಾಗೂ ಶ್ರೀಮತಿ ಸುಂದರಿ ಯವರ ತೃತೀಯ ಪುತ್ರನಾಗಿ. ನಿರಂಜನ್ ಕುಲಾಲ್ ಹಾಗೂ ಯಶವಂತ್ ಕುಲಾಲ್ ಅವರ ಪ್ರೀತಿಯ ತಮ್ಮನಾಗಿ … Read more

ಮಾಯವಾಗುತ್ತಿರುವ ಬರವಣಿಗೆ ಎಂಬ ಭಾಷಾ ಕೌಶಲ!: ಕೆ ಟಿ ಸೋಮಶೇಖರ ಹೊಳಲ್ಕೆರೆ

ವಿಜ್ಞಾನ ತಂತ್ರಜ್ಞಾನದ ಶೀಘ್ರ ಬೆಳವಣಿಗೆಯಿಂದ ಮಾನವನ ಬದುಕು ಎಷ್ಟು ಸುಖಮಯ ಸುಲಭವಾಗುತ್ತದೋ ಅಷ್ಟೇ ಸಂಕೀರ್ಣವೂ ಅವಲಂಬಿಯೂ ಆಕಸ್ಮಿಕವೂ ಅಘಾತಕಾರಿಯೂ ಆಗುವುದರೊಂದಿಗೆ ಏಷ್ಟೋ ಶ್ರೇಷ್ಠ ಕಲೆಗಳ ಅಳಿವಿಗೂ ಹೊಸ ಕಲೆಗಳ ಸೃಷ್ಟಿಗೂ ನಾಂದಿ ಹಾಡಿದೆ! ಆದರೆ ವಿಜ್ಞಾನದ ಪ್ರಗತಿಯ ಓಟದಲ್ಲಿ ನಾವು ಈ ಸಂಕೀರ್ಣತೆಯನ್ನು, ಕಲೆಯನ್ನೂ ಮುಖ್ಯವೆಂದು ಭಾವಿಸುತ್ತಿಲ್ಲ! ಮುಂದೊಂದು ದಿನ ಅದರ ಪ್ರಾಮುಖ್ಯತೆ ಗೊತ್ತಾಗುತ್ತದೆ. ವಿಜ್ಞಾನ ತಂತ್ರಜ್ಞಾನದ ಅಪರಿಮಿತ ಬೆಳವಣಿಗೆಯಿಂದಾಗಿ ಇಂದು ಕ್ಯಾಶ್ಲೆಸ್ ವ್ಯವಹಾರ ಆರಂಭವಾಗಿದೆ! ಇದು ಅದ್ಭುತ ಸಾಧನೆ! ಒಂದು ಕಡೆಯಿಂದ ಮತ್ತೊಂದು ಕಡೆಗೆ ಒಂದು … Read more

ಪಂಜು ಕಾವ್ಯಧಾರೆ

ಗಜಲ್ ಕೊನೆಯುಸಿರವರೆಗೂ ನಿನ್ನದೇ ಹಾಡು ಹಾಡಬೇಕೆಂದಿರುವೆ ಮುಗಿಸಿಬಿಡು ಈ ಜಗದ ಲೆಕ್ಕ ನೆನ್ನೆಗೇ ವಿದಾಯ ಹೇಳಿ ನನ್ನೆಲ್ಲ ತಪ್ಪುಗಳ ಚೀಟಿ ಬರೆದಿಟ್ಟಿರುವೆ ಮುಗಿಸಿಬಿಡು ಈ ಜಗದ ಲೆಕ್ಕ ಪ್ರೀತಿಯ ಯುಗಾದಿ ಮೊಹರಂಗಳು ಈ ಜಗತ್ತಿನಲಿ ಎಲ್ಲಿಯವರೆಗೆ ಒಂದಾಗಲಾರವೋ ಸಾವು ಮೆರೆಯುವುದು ಗಲ್ಲಿಯಲಿ ಸದ್ದಿಲ್ಲದಂತೆ ಬೇವು ಬೆಲ್ಲ ಕೊಟ್ಟಿರುವೆ ಮುಗಿಸಿಬಿಡು ಈ ಜಗದ ಲೆಕ್ಕ ಅಪ್ಪ ಕಣ್ಣು ಅಮ್ಮ ಹೃದಯ ರಕ್ತ ಚರಿತ್ರೆಯಲಿ ದಾಖಲಾಗಿ ಕಣ್ಣೀರಿಗೆ ಬದಲು ರಕ್ತ ಸೋರಿಹುದು ಅಟ್ಟಹಾಸದ ಬೆಂಕಿಗೆ ಆಹುತಿಯಾದ ಆತ್ಮಗಳ ಕ್ಷೇಮ ಕೋರಿರುವೆ … Read more

ಬಾಲಕಿ ನೀಡಿದ ಆ ೫೭ ಸೆಂಟ್‌ಗಳು: ಎಂ.ಎನ್.ಸುಂದರ ರಾಜ್

ಅದೊಂದು ಚರ್ಚ್. ಚರ್ಚಿನಲ್ಲೊಬ್ಬ ಉದಾರವಾದಿ ಪಾದ್ರಿ. ಕೇವಲ ಧರ್ಮಪ್ರಚಾರವಷ್ಟೇ ತನ್ನ ಜೀವನದ ಉದ್ದೇಶವೆಂದು ಭಾವಿಸದವನು. ತನ್ನ ಚರ್ಚಿನ ಸುತ್ತ ಮುತ್ತ ಇದ್ದ ಬಡ ಕೂಲಿ ಕಾರ್ಮಿಕರ ಮನೆಮನೆಗೆ ಹೋಗಿ ಅವರ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕೆಂದು ಪ್ರಚಾರ ಮಾಡುತ್ತಿದ್ದ. ಅಂತಹ ಬಡ ವಿದ್ಯಾರ್ಥಿಗಳಿಗಾಗಿ ಒಂದು ಶಾಲೆಯನ್ನೂ ಸಹ ಚರ್ಚ್ನ ಕೆಳಭಾಗದ ಒಂದು ಪುಟ್ಟ ಕೊಠಡಿಯಲ್ಲಿ ನಡೆಸುತ್ತಿದ್ದ. ಅಲ್ಲಿ ತನ್ನ ಬಿಡುವಿನ ವೇಳೆಯಲ್ಲಿ ಅತ್ಯಂತ ಶ್ರದ್ಧೆ ಮತ್ತು ಪ್ರೀತಿಯಿಂದ ಕಲಿಸುತ್ತಿದ್ದ. ಅವರಿಗೆ ಲಘು ಉಪಹಾರ, ಪುಸ್ತಕ, ಬಟ್ಟೆ ಎಲ್ಲವನ್ನೂ ನೀಡಿ, … Read more

ಕರಾವಳಿಯ ಸೆಖೆಯೂ ಕುಚ್ಚಲು ಗಂಜಿಯೂಟವೂ: ಕೃಷ್ಣವೇಣಿ ಕಿದೂರ್

ಈ ವರ್ಷ ಕಾಡುಮಾವಿನಮರಗಳ ತುಂಬ ಜೋತಾಡುವ ಗೊಂಚಲು ಗೊಂಚಲು ಹಣ್ಣುಗಳು ಬಾಯಲ್ಲಿ ನೀರೂರಿಸುತ್ತವೆ. ಮನೆಯಂಗಳದಲ್ಲಿ ನಿಂತು ಸುತ್ತ ತಿರುಗಿದಾಗ ಆಕಾಶ ಮುಟ್ಟುವ ಹಾಗೆ ಬೆಳೆದ ಕಾಡುಮಾವಿನ ಮರದ ತುಂಬ ಗಾಳಿಗೆ ತೊನೆಯುವ ಅರೆಹಣ್ಣು, ಕಾಯಿಗಳು . ಬಲವಾಗಿ ಬೀಸುವ ಗಾಳಿ ಉದುರಿಸುವ ಹಣ್ಣು ಹೆಕ್ಕಲು ಮಕ್ಕಳ ಸ್ಪರ್ಧೆ.ಈ ದುರ್ಮುಖ ಸಂವತ್ಸರವನ್ನೇ ಅಪರಾಧಿ ಮಾಡಬೇಕೋ ಅಲ್ಲ ವರುಷ ವರುಷಕ್ಕೂ ಬರಡಾಗುವ ಪ್ರಕೃತಿಗೆ ವಿಷಾದಿಸಬೇಕೋ ಅರಿಯದು. ಹೇಳಿ ಕೇಳಿ ನಮ್ಮದು ಅರಬ್ಬಿ ಸಮುದ್ರದ ಪಕ್ಕದ ಊರು. ಕೇರ ನಾಡಿನ ತುಂಬ … Read more

ದೈವತ್ವದ ಪರಿಕಲ್ಪನೆ: ಡಾ. ಹೆಚ್ ಎನ್ ಮಂಜುರಾಜ್, ಮೈಸೂರು

ಬಸವಣ್ಣನವರ ವಚನವೊಂದರ ಸಾಲುಗಳು ಹೀಗಿವೆ: ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನನೆಯೊಳಗಣ ಪರಿಮಳದಂತಿದ್ದಿತ್ತು…… ನೀರೊಳಗೆ ಬೆಂಕಿಯಿದೆ, ಅದರಿಂದಲೇ ವಿದ್ಯುತ್ತು ಹೊರಬರುವುದು. ಆಮೇಲೂ ಆ ನೀರು ನೀರಾಗಿಯೇ ಉಳಿವುದು. ಒಂದರಿಂದ ಇನ್ನೊಂದು ಹೊರಬಂದ ಮೇಲೂ ಅದು ಅದಾಗಿಯೇ ಇರುವ ಚೋದ್ಯವಿದು. ಮುಂದೆ ಬಿಡಲಿರುವ ಹಣ್ಣಿನ ರುಚಿ ಈಗಾಗಲೇ ಚಿಗುರುತ್ತಿರುವ ಸಸಿಯೊಳಗೆ ಹುದುಗಿದೆ. ಮೊಗ್ಗು ಅರಳುವ ಮುಂಚೆಯೇ ಅದರೊಳಗೆ ಪರಿಮಳ ಅಡಗಿರುತ್ತದೆ. ತಾಯಗರ್ಭದೊಳಗೆ ಬೆಳೆಯುತ್ತಿರುವ ಭ್ರೂಣದಲ್ಲೇ ಅದರೆಲ್ಲ ಬೆಳವಣಿಗೆಗೆ ಬೇಕಾದ ಅವಯವಗಳು ಹುದುಗಿರುವಂತೆ, ನವಿಲಿನ ಮೊಟ್ಟೆಯೊಳಗೆ … Read more

ಅಂತರಾಗ್ನಿ (ಭಾಗ ೪): ಕಿರಣ್. ವ್ಹಿ

ಇಲ್ಲಿಯವರೆಗೆ.. ಒಂದು ವಾರದಿಂದ ಅನೂಷಾ ಸರಿಯಾಗಿ ಮಾತನಾಡುತ್ತಿರಲಿಲ್ಲ. ಏನಾಯಿತು ಎಂದು ಕೇಳಿದರೆ ಬಾಯಿ ಸಹ ಬಿಡಲಿಲ್ಲ. ಇಗ್ನೋರ್ ಮಾಡುತ್ತಿದ್ದಾಳೆ ಎಂಬ ಭಾವನೆ ಹರಿಯಲ್ಲಿ ಮೂಡಲಾರಂಭಿಸಿತು. ಮುಂದಿನವಾರ ಊರಿಗೆ ಹೋಗುವ ಯೋಚನೆಯಲ್ಲಿದ್ದ ಹರಿ, ಅದೇ ಶುಕ್ರವಾರದ ರಾತ್ರಿ ಬಸ್ ಹತ್ತಿದ. ಏನಾಗಿದೆಯೋ ಎಂಬ ಚಿಂತೆ ಅವನನ್ನು ಬಹಳವೇ ಕಾಡುತ್ತಿತ್ತು. ರಾತ್ರಿಯಿಡಿ ನಿದ್ರೆ ಮಾಡಲಿಲ್ಲ ಹರಿ. ಏನೇನೋ ಯೋಚನೆಗಳು ಬೆಳಗು ಯಾವಾಗ ಆದೀತು, ಯಾವಾಗ ತಲುಪುತ್ತೇನೊ, ಎನ್ನುವ ಅವಸರ. ಬೆಳಗ್ಗೆ ಏಳರ ಸುಮಾರು ಬೆಂಗಳೂರು ತಲುಪಿದ. ಮನೆಗೆ ಹೋದವನೇ ಫ್ರೆಶ್ … Read more

ರೋಮಾಂಚಕ ಗಣಿತ ! ಶಾಲೆಯಲ್ಲಿ ಇದನ್ನು ಕಲಿಸುವುದಿಲ್ಲ: ಪ್ರವೀಣ್‌ ಕೆ.

ಗಣಿತವನ್ನು ಎಷ್ಟೊಂದು ಎಂಜಾಯ್ ಮಾಡಬಹುದು ಎಂಬುದಕ್ಕೆ ಈ ವಿಡಿಯೋ ನೋಡಿ. ಇದರಲ್ಲಿ ಒಂದೇ ವಿಧಾನದಿಂದ ಹಲವು ರೀತಿಯ ಗಣಿತದ ಸಮಸ್ಯೆಗಳನ್ನು ಹೇಗೆ ಬಿಡಿಸಬಹುದು ಎಂಬುದನ್ನು ತೋರಿಸಿದ್ದೇನೆ ಅದೂ ಕೂಡ 100% ಸರಿಯಾಗಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸಾಗಬೇಕೆಂದರೆ ಇಂಥ ಸುಲಭ, ತ್ವರಿತ ವಿಧಾನಗಳು ಅವಶ್ಯಕ. ನನ್ನ ಚಾನೆಲ್ ಇರುವುದೇ ನಿಮ್ಮನ್ನು ಯಶಸ್ಸಿನತ್ತ ಒಯ್ಯುವುದಕ್ಕಾಗಿ. ಇನ್ನೂ ಇಂಥ ಹಲವಾರು ಅದ್ಭುತ ವಿಧಾನ, ತಂತ್ರಗಳನ್ನು ಮುಂದಿನ ವಿಡಿಯೋಗಳಲ್ಲಿ ಕಾಣಬಹುದು. ನೀವು ಊಹಿಸದಷ್ಟು ಸುಲಭ ವಿಧಾನಗಳಿವು. ವಿಡಿಯೋ ನೋಡಿ, ಆನಂದಿಸಿ, ಇಷ್ಟವಾದರೆ ಚಂದಾದಾರರಾಗಿ, … Read more

ಮಕ್ಕಳ ಕಥೆಗಳ ಆಹ್ವಾನ

ಮಕ್ಕಳ ಕಥೆಗಳ ಆಹ್ವಾನ ರಾಯಚೂರು ತಾಲೂಕು ಘಟಕ ಮಕ್ಕಳ ಸಾಹಿತ್ಯ ಪರಿಷತ್ತು ವತಿಯಿಂದ “ಮಕ್ಕಳ ಕಥೆಗಳ” ಪುಸ್ತಕ ಹೊರತರಬೇಕೆಂದು ನಿರ್ಧರಿಸಿದ್ದು, ಇದೆ ನವೆಂಬರ್ ೧೪ ಮಕ್ಕಳ ದಿನಾಚರಣೆಯ ಸುಸಂದರ್ಭದಲ್ಲಿ ಮಕ್ಕಳ ಪ್ರಪಂಚಕ್ಕೆ ಒಂದು ಉತ್ತಮ ಪುಸ್ತಕವನ್ನು ನವೆಂಬರ್ ೧೪ ರಂದೆ ಒಂದು ಪುಸ್ತಕ ಮಕ್ಕಳ ಕೈ ಸೇರಬೇಕಿದೆ ಕಾರಣ ಆಸಕ್ತ ಕಥಾ ಬರಹಗಾರರು ನೀವು ಬರೆಯುವ ಮಕ್ಕಳ ಕಥೆಯನ್ನು ನವೆಂಬರ್ 4 ರ ಮಧ್ಯೆ ರಾತ್ರಿ ಒಳಗೆ ತಲುಪಿಸಬೇಕು. ▪ಸೂಚನೆಗಳು:- =>ಮಕ್ಕಳ ಕಥೆಯೆ ಆಗಿರಬೇಕು ೫೦೦-600 ಪದಗಳು … Read more

ಕನ್ನಡ ಸಾಹಿತ್ಯವನ್ನು ಓದುವವರು ಯಾರು?: ಕೆ ಟಿ ಸೋಮಶೇಖರ್ ಹೊಳಲ್ಕೆರೆ

ಹಬ್ಬ ಎಂಬುದು ಸಂತೋಷ ಉಂಟುಮಾಡುವ ವಿಷಯ. ಕನ್ನಡದ ಸಾಧನೆ ಸಾರುವ, ಸಾಧನೆಗೆ ಮಣೆ ಹಾಕುವ, ಸಾಧಕರಿಗೆ ಕಿರೀಟವಿಡುವ, ಆಸಕ್ತರಿಗೆ ಪ್ರೋತ್ಸಾಹಿಸುವ, ಕವಿಗೋಷ್ಟಿ, ಸಾಹಿತ್ಯಕ ಚರ್ಚೆ, ಚಿಂತನ, ಮಂಥನದ ಹಬ್ಬವಾಗಬೇಕಿರುವ ಸಾಹಿತ್ಯಸಮ್ಮೇಳನಗಳಲ್ಲಿ ಕನ್ನಡ ಉಳಿಸುವುದು ಹೇಗೆ ಎಂಬ ವಿಷಯ ತಾಲ್ಲೂಕು ಮಟ್ಟದ ಸಮ್ಮೇಳನಗಳಿಂದ ಹಿಡಿದು ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನಗಳವರೆಗೂ ಉದ್ಘಾಟನಾ ಸಭೆಯಿಂದನೇ ಚರ್ಚೆ ಆರಂಭವಾಗಬೇಕಾಗಿರುವ ಸಂದರ್ಭ ಬಂದಿರುವುದು ಕನ್ನಡಿಗರ ದುರದೃಷ್ಟ! ನುಡಿ ಹಬ್ಬದಲ್ಲಿ ಕನ್ನಡದ ಉಳಿಸುವ ಬೆಳೆಸುವ ಬಗ್ಗೆ ಚರ್ಚಿಸಿ ಇದಕ್ಕೆ ಪೂರಕವಾದ ಕೆಲವು ನಿರ್ಣಯಗಳನ್ನು ನುಡಿಹಬ್ಬದ … Read more

ಪಂಜು ಕಾವ್ಯಧಾರೆ ೧

ನಾನು ಕವಿತೆ ಬರೆಯುವುದಿಲ್ಲ… ನಾನು ಕವಿತೆ ಬರೆಯುವುದಿಲ್ಲ… ನನ್ನೊಳಗಿನ ಬನಿಗೆ ದನಿಯಾಗಬೇಕೆಂಬ ಇರಾದೆ ನನಗಿಲ್ಲ. ಕೇವಲ ನನ್ನೊಳಗಿನ ಮಿಸುಗನ್ನು ನಸುಗುನ್ನಿಯನ್ನು ಅಕ್ಷರವಾಗಿಸುತ್ತೇನೆ. ಒಮ್ಮೊಮ್ಮೆ ಅಕ್ಷರಗಳು ಮಾತಾಡುತ್ತವೆ, ಕೆಲವೊಮ್ಮೆ ಹಾಡುತ್ತವೆ, ಮತ್ತೊಮ್ಮೆ-ಮಗದೊಮ್ಮೆ ಕಾಡುತ್ತವೆ. ದುಂಬಾಲು ಬಿದ್ದು ಮುದ್ದು ಮಾಡಿಸಿಕೊಳ್ಳುತ್ತದೆ. ಆಗ್ಗಾಗೆ ಮುಗಿಬಿದ್ದು ಮರುಬರೆಸಿಕೊಳ್ಳುತ್ತದೆ. ಬರೆವಾಗ ತನ್ಮಯಗೊಳಿಸಿ ಮೈಮರೆಸುತ್ತದೆ. ಲಲ್ಲೆಗರೆಯುತ್ತವೆ. ಚೆಲ್ಲುಬಡಿಯುತ್ತವೆ ಎಲ್ಲೆಂದರಲ್ಲಿ ನನ್ನೊಳಗೆ ರಾರಾಜಿಸುತ್ತದೆ. ನನ್ನ ಸೊಂಟಕ್ಕೆ ತುಂಟಮಗುವಾಗಿ, ಪಂಟುಹೊಡೆಯುವ ಲಂಪಟನಾಗಿ, ಉಪಟಳಿಸುವ ಸುಂಟರಗಾಳಿಯಂತೆ ನನ್ನ ಸುತ್ತಲೆ ತಿರುಗುತ್ತವೆ ! ಕನಸಲ್ಲಿ ಕಾಡುತ್ತವೆ ಥೇಟ್ ನನ್ನ ಪ್ರೇಮಿಯಂತೆ ! … Read more

ಕಡು ಪ್ರೀತಿಯ ಎದೆಯಲ್ಲಿ ಮತಾಪು ಸಿಡಿದ ಸದ್ದು: ಅಮರದೀಪ್

ಅದೊಂದು ಸಂಜೆ ಮುಳುಗಿ ಕತ್ತಲಾವರಿಸುತ್ತಿದ್ದಂತೆ ಅವನು ಮನೆಯಲ್ಲಿ ಯಾಕೋ ಇರುಸುಮುರುಸುಂಟಾಗಿ ತೇರು ಬಯಲಲ್ಲಿ ಬಂದು ಕುಳಿತ. ನೋಡಿದರೆ ಮನೆಯಲ್ಲಿ ಲಕ್ಷ್ಮಿ ಪೂಜೆ… ಉಳಿದವರಿಗೆ ದೀಪಾವಳಿ ಹಬ್ಬ. ಈ ಹಬ್ಬಗಳೆಂದರೆ ಇವನಲ್ಲಿ ಖುಷಿಗಿಂತ ಒಂಟಿತನವೇ ಆವರಿಸುತ್ತದೆ. ಮೊದಲಿಂದಲೂ ಅಷ್ಟೇ. ಕಾರಣ ಏನಂತ ಅವನಿಗೂ ಗೊತ್ತಿಲ್ಲ. ಬಹುಶಃ ಚಿಕ್ಕವನಿದ್ದಾಗಿನ ಮನೆಯ ಬಡತನ, ಅವರಿವರಲ್ಲಿ ಕೇಳಿ ಪಡೆದು ಮತಾಪು ಸುಡುವಾಗಿನ ಹಿಂಜರಿಕೆ ಏನೋ ಇರಬಹುದಾ? ಅವನಿಗೂ ಸ್ಪಷ್ಟವಿಲ್ಲ. ಆದರೆ ಬೆಳೆಯುತ್ತಾ ದೇವರು, ದೇವರ ಮನೆ, ಕೈ ಮುಗಿಯುವುದು, ಬೇಡಿಕೊಂಡು ಗಲ್ಲ ಬಡಿದುಕೊಳ್ಳುವುದೆಲ್ಲಾ … Read more

ಜಪ್ತಿ: ಎಂ ಜವರಾಜ್

ಅಪ್ಪನನ್ನು ತಬ್ಬಿಕೊಂಡು ಮಲಗಿದ ರಾತ್ರಿಗಳು ಸಾಕಷ್ಟಿದ್ದವು. ಅವನ ಮಗ್ಗುಲು ಬೆಚ್ಚನೆಯ ಗೂಡಾಗಿತ್ತು. ಒಂದೊಂದು ಸಾರಿ ಆ ಬೆಚ್ಚನೆಯ ಗೂಡು ದುಗುಡದಲಿ ಕನವರಿಸಿ ಕನವರಿಸಿ ನನ್ನನ್ನು ದೂರ ತಳ್ಳುತ್ತ ಮಗ್ಗುಲು ಬದಲಿಸುತ್ತಿತ್ತು. ಅಪ್ಪನನ್ನು ತಬ್ಬಿಕೊಂಡು ಮಲಗಲು ಅಷ್ಟು ಸುಲಭವಾಗಿರಲಿಲ್ಲ. ತಮ್ಮಂದಿರ ಸರದಿಯ ಸಾಲಿತ್ತು. ಒಂದೊಂದು ರಾತ್ರಿ ಒಬ್ಬೊಬ್ಬರಿಗೆ ಎಂದು ನಿಗದಿ ಮಾಡಿದ್ದರಿಂದ ಆ ಸರದಿಯ ಸಾಲಿನ ರಾತ್ರಿ ನನ್ನದಾಗುತ್ತಿತ್ತು. ಉಳಿದವರು ಅವ್ವನ ಮಗ್ಗುಲಲ್ಲಿ ಮಲಗುತ್ತಿದ್ದರು. ನನ್ನದಾದ ಆ ರಾತ್ರಿಗಳು ಅಪ್ಪನ ಪೇಚಾಟ ನರಳಾಟ ನನಗೆ ದಿಗಿಲು ಹುಟ್ಟಿಸುತ್ತಿತ್ತು. ಕರಿಯ … Read more

ಮುಚ್ಚಿಟ್ಟ ಪುಟಗಳು: ಉಮೇಶ ದೇಸಾಯಿ

  “ದಿವ್ಯಾ ಮಗನ ಪ್ರಶ್ನಿ ಕೇಳಿ ತಲಿ ತಿನಬ್ಯಾಡ. ಇದರ ಮಜಾ ತಗೊಳಲಿಕ್ಕೆ ಬಿಡು. ” ಶ್ರೀ ಹೇಳಿದ ಮಾತು ದಿವಾಕರನಿಗೂ ನಾಟಿತು. ಅವನು ಗ್ಲಾಸು ಎತ್ತಿ ಬೀರು ಗುಟಕರಿಸಿದ. ಹಂಗ ನೋಡಿದರ ದಿವಾಕರನ ಉತ್ಸಾಹಕ್ಕ ಅರ್ಥನೂ ಇತ್ತು. ಬರೋಬ್ಬರಿ ಮುವ್ವತ್ತು ವರ್ಷ ಆದಮ್ಯಾಲೆ ಜೀವದ ಗೇಳೆಯನ ಭೇಟಿ ಆಗಿದ್ದ ಅವ. ಗೆಳೆಯ ಅಂದರ ಅಂತಿತಂಹ ಗೆಳೆಯ ಅಲ್ಲ ರಂಗೀಲಾ ವ್ಯಕ್ತಿತ್ವದವ. ದಿವಾಕರನಿಗೆ ಯಾವಾಗಲೂ ಒಂದು ನಿಗೂಢ ವ್ಯಕ್ತಿಹಂಗ ಕಾಣಸತಿದ್ದ ಇವ ಹಿಂಗ ಇವನ ನಡಾವಳಿ ಹಿಂಗ … Read more

ಜಸ್ಟ್ ಮಿಸ್ಸೋ…………: ಗುಂಡುರಾವ್ ದೇಸಾಯಿ

ಇಡೀ ಭೂಮಂಡಲದಲ್ಲಿ ಅತಿ ಪ್ರಾಮಾಣಿಕನಾಗಿ, ಅನ್ಯಾಯ, ಹಿಂಸೆ, ಅಸೂಯೆ, ದ್ವೇಷ, ಮುನಿಸು, ಹೊಗಳಿಕೆ, ತೆಗಳಿಕೆ ಮೊದಲಾದ ರಾಗಗಳತ್ತ ಮುಖವೂ ಮಾಡದೆ ಮರಣವನ್ನಪ್ಪಿದ ಪದ್ದು ಯಮನ ಆಸ್ಥಾನಕ್ಕೆ ಬಂದ. ನಕ್ಕೋತ ಹರಿ ಧ್ಯಾನ ಮಾಡುತ್ತ ಬಂದದ್ದನ್ನು ನೋಡಿ ಯಮನಿಗೆ ಗಾಭರಿ ಮತ್ತು ಆಶ್ಚರ್ಯ ಎರಡು ಆತು. ನನ್ನತ್ರ ಬರೊಷ್ಟಿಗೆ ಕಾಲಿಗೆ ಬಿದ್ದು ‘ನನ್ನನ್ನ ದಯವಿಟ್ಟು ಸ್ವರ್ಗ ಕಳಿಸು ಹಾಂಗೆ ಹಿಂಗೆ ನಿನಗ ಅದೂ ಕೊಡುತಿ ಇದು ಕೊಡಸ್ತಿನಿ, ಭೂಲೋಕಕ್ಕೆ ಹೋದ್ರೆ ನನ್ನ ಬಂಗ್ಲೇಲಿ ಇಳಿಯೊಕೆ ವ್ಯವಸ್ಥ ಮಾಡಸ್ತಿನಿ’ ಅನ್ನೊರೆ … Read more

ಜೀರ್ಣೋದ್ದಾರ: ಸತೀಶ್ ಶೆಟ್ಟಿ ವಕ್ವಾಡಿ.

ಗುತ್ತಿಗೆಪುರದ ಶ್ರೀ ಅನಂತಪದ್ಮನಾಭ ದೇವಸ್ಥಾನ ಇತಿಹಾಸ ಪ್ರಸಿದ್ಧವಾದದ್ದು. ಸುತ್ತಲಿನ ಐದಾರು ಊರುಗಳ ಆರಾಧ್ಯ ದೇವರಾದ ಅನಂತಪದ್ಮನಾಭನನ್ನು ಏಳುನೂರು ವರ್ಷಗಳ ಹಿಂದೆ ಇಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಪ್ರತಿವರ್ಷದ ಮಾರ್ಗಶಿರ ಮಾಸದ ಮೊದಲ ಅಷ್ಟಮಿಯ ದಿನ ಇಲ್ಲಿ ರಥೋತ್ಸವ ಮತ್ತು ಕೃಷ್ಣಾಷ್ಟಮಿಯ ದಿನ ವಿಶೇಷ ಉತ್ಸವದ ಕಾರ್ಯಕ್ರಮವಿರುತ್ತದೆ. ಇದಲ್ಲದೆ ಗಣೇಶೋತ್ಸವ ಮತ್ತು ನವರಾತ್ರಿ ಉತ್ಸವಗಳನ್ನೂ ಆಚರಿಸಲಾಗುತ್ತೆ. ಆವಾಗೆಲ್ಲ ಸುತ್ತಲಿನ ಊರುಗಳ ಸ್ಥಳೀಯ ಪ್ರತಿಭೆಗಳ ಸಾಂಸ್ಕೃತಿಕ ಕಲರವ ರಂಗೆರಿಸುತ್ತವೆ. ಊರಿನವರೆಲ್ಲ ತಮ್ಮ ಗದ್ದೆಗಳ ನಾಟಿ ಮಾಡುವ ಮುನ್ನ ದಿನ ಮತ್ತು ನಾಟಿಯ ಕೊನೆ … Read more

ಹಾಸ್ಟೆಲ್ ಎಳೆಗಳನ್ನು ಬಿಡಿಸುತ್ತ..!: ಶೀಲಾ ಗೌಡರ.

“ಅಪ್ಪಾಜಿ ನನ್ನ ಹಾಸ್ಟೆಲ್ ಗೆ ಸೇರ್ಸು. ನನ್ನ ಗೆಳೆಯರು ಬಹಳಾ ಮಂದಿ ಹಾಸ್ಟೆಲ್ ನಿಂದ ಶಾಲೆಗೆ ಬರ್ತಾರಾ..“ ಇದು ಎರಡು ವರ್ಷದಿಂದ ನನ್ನ ಮಗನ ಗೋಳು. ಹಾಗಂತ ಆತನೇನು ದೊಡ್ಡ ತರಗತಿಯಲ್ಲಿ ಓದುತ್ತಿಲ್ಲ. ಈ ಸಾರಿ ನಾಲ್ಕನೇ ತರಗತಿ. ಅಜ್ಜಿಯ ಊರಿಗೆ ಹೋದಾಗಲೆಲ್ಲ ಅವಳ ಸಂದಕವನ್ನು ತೆಗೆದು “ಅಜ್ಜಿ ನಾ ಮುಂದಿನ ವರ್ಷ ಹಾಸ್ಟೆಲ್ ಹೋಗ್ತೇನಿ. ನೀ ನನಗ ಈ ಸಂದಕ ಕೊಡಬೇಕು ನೋಡು. ಕಿಲಿ ಹಾಕಾಕ ಬರ್ತೇತಿ ಹೌದಿಲ್ಲ. ನಾ ಕಿಲಿಹಾಕಿ ನನ್ನ ಉಡದಾರಕ್ಕ ಹಾಕ್ಕೊಂತೆನಿ. … Read more

ಮಲೆನಾಡಿನ ದೀಪಾವಳಿ: ವೇದಾವತಿ ಹೆಚ್. ಎಸ್.

“ಮಲೆನಾಡು”ಎಂದರೆ ಅದೊಂದು ಸುಂದರವಾದ ವನಸಿರಿಗಳ ನಡುವೆ ಕಂಗೋಳಿಸುವ ಊರೆಂದರೆ ತಪ್ಪಾಗಲಾರದು. ಒಂದೊಂದು ಮನೆಯೂ ಅವರವರ ಜಮೀನುಗಳ ಮಧ್ಯದಲ್ಲಿ ಸುಂದರವಾಗಿ ಕಟ್ಟಿಕೊಂಡು, ಅವರಿಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಂಡು ಜೀವನ ನೆಡೆಸಿಕೊಂಡು ಬಂದಿರುತ್ತಾರೆ. ಅವರಿಗೆ ಅವರದೇ ಆದ ಸಂಪ್ರದಾಯಗಳು ಹಳೆಯ ತಲೆಮಾರಿನಿಂದಲೂ ಬಳುವಳಿಯಾಗಿ ಬಂದಿರುತ್ತದೆ. ದೀಪಾವಳಿ ಹಬ್ಬವನ್ನು ನಮ್ಮ ಮಲೆನಾಡಿನ ಜನರು ಐದು ದಿನಗಳ ಕಾಲ ಸಂಭ್ರಮದಿಂದ ಆಚರಣೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಹಿಂದಿನ ತಲೆಮಾರಿನ ಜನರು ನಡೆಸಿದಷ್ಟು ಆಚರಣೆಗಳು ಇಂದು ಕಡಿಮೆಯಾಗಿದ್ದರೂ, ಅದನ್ನು ಸ್ಪಲ್ಪ ಮಟ್ಟಿಗೆಯಾದರೂ ಇಂದಿನ ತಲೆಮಾರಿನ ಜನರು … Read more

ಗಜ಼ಲ್: ಡಾ. ಗೋವಿಂದ ಹೆಗಡೆ, ಲಕ್ಷ್ಮಿಕಾಂತ ನೇತಾಜಿ ಮಿರಜಕರ

ಗಜ಼ಲ್-೧ ಎಂಥ ಸೋಗುಗಳಲ್ಲಿ ಬದುಕಿದ್ದೇನೆ ಯಾರ ಖುಷಿಗೋ ನುಡಿಯುತ್ತ ಎಂಥ ನೋವಿನಲಿ ಮುಳುಗಿದ್ದೇನೆ ನನ್ನೊಡಲ ನಾನೇ ಬಗೆಯುತ್ತ ಬಂದ ದಾರಿಯಲಿ ಸುರಿದ ಮಂಜು ಮುಂದಕ್ಕೂ ಚಾಚಿ ಮಬ್ಬು ಯಾರಿಗೆ ದೂರು ಹೇಳಿದ್ದೇನೆ ಒಡಕು ತಮಟೆಯ ಬಡಿಯುತ್ತ ಖಚಿತ ಚಹರೆಗಳೇ ಇಲ್ಲದೆ ಹೇಗೋ ಬರೆದಿದ್ದೇನೆ ಚಿತ್ರ ಮುಖ ಮೀಸೆ ಬರಿದೆ ಮೆತ್ತಿದ್ದೇನೆ ಗೆರೆಯ ಎಳೆಯಲು ಸೋಲುತ್ತ ಎಲ್ಲದು ಅಗಣಿತ ಸಂದಣಿಯಲ್ಲಿ ಕಳೆಯಿತು ಒಂಟಿದನಿ ಬರಿದೇ ಸಂತೆ ತಿರುಗಿದ್ದೇನೆ ನನ್ನನೇ ನಾನು ಹುಡುಕುತ್ತ ಕೈ ಕೈ ಹಿಡಿದು ಒಟ್ಟಿಗೆ ನಡೆದೂ … Read more

ಮಾತು ಮದುವೆ ಮಂಟಪದೊಳು ಸಕಲ ಕಾರ್ಯವಾ: ಡಾ. ವೃಂದಾ ಸಂಗಮ

ಸರಸ್ವತಿ ಮನೆಗೆ ಬಂದಾಗ ಏಳೂವರೆ. ಮುಂದಿನ ಹಾಲ್ ನಲ್ಲಿಯೇ ಲಕ್ಷ್ಮಿ ತನ್ನ ತಮ್ಮನನ್ನು ಓದಿಸುತ್ತಿದ್ದಳು. ಅಮ್ಮ ಬಂದಿದ್ದು ಕಂಡೊಡನೇ ಕಾಫಿ ಮಾಡಲು ಎದ್ದಳು. ಸರಸ್ವತಿ ಹತ್ತಿರದಲ್ಲೇ ಇರುವ ಹೆಸರಾಂತ ನರ್ಸಿಂಗ್ ಹೋಂ ಒಂದರಲ್ಲಿ ಹೆಡ್ ನರ್ಸ. ಮೈ ತುಂಬಾ ಕೆಲಸ. ಮನೆಗೆ ಬಂದರೆ ಸಾಕೋ ಸಾಕು ಎನಿಸುತ್ತಿರುತ್ತದೆ. ಈಗ ಮಗಳು ಲಕ್ಷ್ಮಿ ಮನೆಯಲ್ಲೇ ಇರುವುದರಿಂದ ಅವಳಿಗೆ ಮನೆ ಕೆಲಸದಲ್ಲಿ ಸಂಪೂರ್ಣ ವಿನಾಯಿತಿ. ಮಧ್ಯಮ ವರ್ಗದ ಮನೆಯಲ್ಲಿ ಬೇಡಿ ಬಯಸುವಂತಹ ಮಗಳು. ಪಿ ಯು ಸಿ ಯಲ್ಲಿ ಅತ್ಯುತ್ತಮ … Read more

ಪಂಜು ಕಾವ್ಯಧಾರೆ ೨

ಅಮ್ಮ ಎಂದರೆ……. ೧ ನಡೆದ ದಾರಿಯಲಿ ಎಷ್ಟೊಂದು ಹೆಜ್ಜೆಗಳು ಅಲ್ಲೆಲ್ಲೋ ದೂರದಲ್ಲಿ ಸಣ್ಣ- ದೊಡ್ಡ ಹೆಜ್ಜೆಗಳಿವೆ; ಒಂದು ನನ್ನದು ಮತ್ತೊಂದು ಈಗ ಮೃದುಪಾದವೂರುವ ನನ್ನಮ್ಮನದು! ೨ ಅಮ್ಮ ರೊಟ್ಟಿ ಬಡಿವಾಗ ಒಲೆ ಉರಿಯ ಝಳದ ಮುಂದೆ ಲೆಕ್ಕವಿಲ್ಲದಷ್ಟು ತಿನ್ನುತ್ತಿದ್ದೆವು ಈಗ ರೊಟ್ಟ ಬಡಿಲಾರದ ಅಮ್ಮನಿಗೆ ಶೆಟ್ಟರಂಗಡಿಯಿಂದ ಲೆಕ್ಕ ಮಾಡಿ ರೊಟ್ಟಿ ತಂದಿತ್ತರೆ ಮಾತಾಡದ ಅಮ್ಮ ನಗುತ್ತಿದ್ದಾಳೆ! ೩ ಉಡಿಸಿ ಉಣಿಸಿ ಖುಷಿ ಪಟ್ಟ ಅಮ್ಮ ಇದೀಗ ಕೈ ತುತ್ತಿಗೆ ಬಾಯ್ತೆರೆಯುತ್ತಿದ್ದಾಳೆ! ೪ ಕೈ ಹಿಡಿದು ನಡೆ- ನುಡಿ … Read more

ನನ್ನ ಪಾಲಿನ ಮತ್ತೊಂದು ಮಾತೃರೂಪ: ಎಂ.ಎಲ್.ನರಸಿಂಹಮೂರ್ತಿ

ಪ್ರತಿ ಹಬ್ಬಕ್ಕೂ ನಮ್ಮ ಹೊಸ್ತಿಲಲ್ಲಿ ಕೂತು ಅವರ ಹೊಸ್ತಿಲ ಕಡೆ ನೋಡುವುದು ರೂಢಿಯಾಗಿಬಿಟ್ಟಿತ್ತು ನಾನು ಸಹಜವಾಗಿವೇ ತೊದಲು ನುಡಿಗಳನ್ನು ಆರಂಭಿಸಿದಾಗನಿಂದ ಇಲ್ಲಿಯ ವರೆಗೆ ಸೋಮು ಒಮ್ಮೊಮ್ಮೆ ಮಾತ್ರಕ್ಕೆ ನರಸಿಂಹ ಎಂದು ತಾಯ ಪ್ರೀತಿ ಹಂಚಿ ತಾಯಿಯಷ್ಟೆ ಅಕ್ಕರೆಯಿಂದ ನೋಡುಕೊಳ್ಳುವ ಮತ್ತೊಂದು ಮಾತೃಹೃದಯ ನಮ್ಮೂರಲ್ಲಿ ಇದಾರೆ. ನನಗೆ ಎರಡು ವರ್ಷ ವಯಸ್ಸಾಗಿದ್ದಾಗ ಬಾಲ ವ್ಯಾಧಿಯಿಂದಾಗಿ ಸತ್ತು ಹೋಗುತ್ತಿದ್ದನಂತೆ. ಆಗ ನಮ್ಮ ಅಪ್ಪ ಅಮ್ಮ, ಅಜ್ಜ ಅಜ್ಜಿ ಹೇಳಿದ ಜಾಗ, ಕೇಳಿದ ವೈದ್ಯರ ಬಳಿಗೆ , ಸೂಚಿಸಿದ ಮಂತ್ರಗಾರರ ಬಳಿಗೆ … Read more

ನಿಂಗಿ: ಗೀತಾ ಜಿ. ಹೆಗಡೆ, ಕಲ್ಮನೆ

“ಅಮ್ಮಾ ಅಮ್ಮಾ ” ಯಾರಿದು? ಒಂದೆ ಸಮ ಕಿಟಕಿ ಸಂಧಿಯಲ್ಲಿ ಮೂತಿ ಇಟ್ಕಂಡು ಕರೆಯುತ್ತಿರೋದು? ಓಹ್! ಮಾದೇವಿ. ಈ ದಿನ ಬೆಳಗ್ಗೆಯೇ ಬಂದು ಮನೆ ಕೆಲಸ ಮಾಡಿ ಹೋದಳಲ್ಲಾ? ಇನ್ನೂ ಮಧ್ಯಾಹ್ನ ಎರಡೂವರೆಯಷ್ಟೆ. ಈಗ್ಯಾಕೆ ಬಂದ್ಲಪ್ಪಾ ಇವಳು? ಇನ್ನೇನು ರಾಮಾಯಣವೊ ಏನೊ? ಇವಳ ಗೋಳು ಯಾವತ್ತು ಮುಗಿಯುತ್ತೊ? ಸದಾ ಒಂದಲ್ಲಾ ಒಂದು ಗಲಾಟೆ ಕುಡುಕ ಗಂಡನನ್ನು ಕಟ್ಟಿಕೊಂಡು. ಇದ್ದ ಒಬ್ಬ ಮಗನ ಪಾಲನೆ,ಪೋಷಣೆಯ ಜವಾಬ್ದಾರಿಗೆ ನಿಯತ್ತಾಗಿ ಮೂಕ ಎತ್ತಿನಂತೆ ದುಡಿಯುವ ಹೆಣ್ಣು. ಏನು ಹೇಳಿದರೂ ಇಲ್ಲಾ ಅನ್ನದೇ … Read more

ಇಸ್ಪೀಟು ರಾಣಿ: ಜೆ.ವಿ.ಕಾರ್ಲೊ.

ರಶ್ಯನ್ ಮೂಲ: ಅಲೆಕ್ಸಾಂಡರ್ ಪುಷ್ಕಿನ್ ಇಂಗ್ಲಿಷಿನಿಂದ: ಜೆ.ವಿ.ಕಾರ್ಲೊ. ಅಶ್ವದಳದ ಸೇನಾಧಿಪತಿ ನರುಮೋವನ ವಸತಿ ಗೃಹದಲ್ಲಿ ಇಸ್ಟೀಟ್ ಆಟ ಬಹಳ ಜೋರಾಗಿ ನಡೆದಿತ್ತು. ಚಳಿಗಾಲದ ಆ ರಾತ್ರಿ ಹೇಗೆ ಕಳೆಯಿತೆಂದು ಯಾರಿಗೂ ಅರಿವಾಗಲಿಲ್ಲ. ಅವರೆಲ್ಲಾ ಊಟಕ್ಕೆಂದು ಎದ್ದಾಗ ಬೆಳಗಿನ ಜಾವ ಐದಾಗಿತ್ತು! ಗೆದ್ದವರಿಗೆ ಊಟ ರುಚಿಕರವಾಗಿದ್ದರೆ, ಸೋತವರಿಗೆ ಅದೊಂದು ಯಾಂತ್ರಿಕ ಕರ್ಮವಾಯಿತು. ಕೊನೆಗೂ ಶಾಂಫೇನಿನ ಬಾಟಲಿ ಕೈ ಬದಲಾಯಿಸಿದಾಗ ಅವರಲ್ಲಿ ಹೊಸ ಹುರುಪು ತುಂಬಿ ಬಂದಿತು. “ಸುರಿನ್? ಏನಪ್ಪ ನಿನ್ನ ಕತೆ?” ಮನೆಯ ಯಜಮಾನ ನರುಮೊವ್ ಕೇಳಿದ. “ಅಯ್ಯೋ, … Read more

ಗಡಿಯಾರ ರಿಪೇರಿ: ಗುಂಡೇನಟ್ಟಿ ಮಧುಕರ

ನಾನು ಚಿಕ್ಕವನಿದ್ದಾಗ ಅಪ್ಪನಿಂದ ಹಣವನ್ನಿಸಿದುಕೊಂಡು ಗಡಿಯಾರ ರಿಪೇರಿಯನ್ನು ಮಾಡಿಸಿಕೊಂಡು ಬಂದ ಪ್ರಸಂಗವನ್ನು ನಿಮ್ಮ ಮುಂದೆ ಹೇಳಬೇಕಿದೆ. ನನ್ನ ಹಾಗೂ ಗಡಿಯಾರದ ನಡುವೆ ಅನ್ಯೋನ್ಯತೆ ಅದು ಹೇಗೆ ಬೆಸೆದುಕೊಂಡಿತ್ತೊ ಏನೋ, ನಾನು ಚಿಕ್ಕವನಿದ್ದಾಗ ನಮ್ಮೂರಿನಿಂದ ಸಮೀಪದ ಊರಾದ ಬೈಲೂರಿಗೆ ಬಸವಣ್ಣನ ಜಾತ್ರೆಗೆಂದು ಅಪ್ಪನ ಭುಜವನ್ನೇರಿ ಎರಡೂ ಕಾಲುಗಳನ್ನು ಜೋತು ಬಿಟ್ಟು ಅಪ್ಪನ ತಲೆಯನ್ನು ಹಿಡಿದುಕೊಂಡು ಕುಳಿತು ಜಾತ್ರೆಗೆ ಹೋಗಿದ್ದೆ. ಅಂದರೆ ಅಪ್ಪನ ಸವಾರಿ ಮಾಡಿದ್ದೆ. ಆ ಜಾತ್ರೆಗೆ ಹೋದಾಗ ಆಸೆ ಪಟ್ಟು ಅಪ್ಪನಿಂದ ಕೊಡಿಸಿಕೊಂಡದ್ದು ಪುಟ್ಟ ವಾಚನ್ನು. ಅಪ್ಪ, … Read more

ಬಿದ್ದಾಗಲೆಲ್ಲಾ ಎತ್ತಿ ಎಚ್ಚರಿಸಿದ ಅಪ್ಪನೆಂಬ ಧೀಮಂತ: ನಾಗರೇಖಾ ಗಾಂವಕರ

ನನ್ನ ಅಪ್ಪನ ಬಗ್ಗೆ ಬರೆಯಲೇನಿದೆ? ಬದುಕಿನ ಹಾಳೆಯಲ್ಲಿ ಮಕ್ಕಳ ಮುಖದಲ್ಲಿಯ ನಗುವಿಗೋಸ್ಕರ ತೇಯ್ದ ಜೀವನದ ಹಾದಿಯಲ್ಲಿ ಕಂಡುಂಡಿದ್ದು ಸಂಕಟಗಳೇ. ಅದೆಷ್ಟು ಆಪ್ತವಾಗಿತ್ತು ಕೆಲವೊಮ್ಮೆ ಅವರ ಮಾತು, ಪ್ರೀತಿ ತುಂಬಿದ ನೋಟ,ಬಾಲ್ಯದ ಬಿಂಬಗಳು ಜೀವ ರಸವೂಡುವ ಪ್ರತಿಮೆಗಳು. ತಂದೆ ತಾಯಿಯೆಂದರೆ ಭಯಮಿಶ್ರಿತ ಪ್ರೀತಿ. ಅಪ್ಪನೆದುರು ಎದೆ ಸೆಟೆಸಿ ಮಗುವಾಗಿದ್ದಾಗ ಹಠಮಾಡಿ ಕಾಡುತ್ತಿದ್ದ ಅದೇ ನಾನು ಕಿಶೋರಾವಸ್ಥೆಗೆ ಬಂದಂತೆ ಬಾಲ್ಯದ ಹುಡುಗಾಟ ಅಲ್ಪಸ್ವಲ್ಪವೇ ಕಣ್ಮರೆಯಾಗಿತ್ತು. ತಂದೆಯೆದುರು ತಲೆ ಎತ್ತಿ ಮಾತನಾಡಲು ಆಗದ ಸಂಕೋಚ ತಾನೆ ತಾನಾಗಿ ಹುಡುಗಿಯರಲ್ಲಿ ಮೂಡುತ್ತದೆ. ಅದಕ್ಕೂ … Read more

ಕಪ್ಪೆ ಉಚ್ಚೆಯೂ ಬೆಳ್ಳಿ ಕಪ್ಪೆಯೂ. . . : ರಮೇಶ್ ನೆಲ್ಲಿಸರ. ತೀರ್ಥಹಳ್ಳಿ

ಮೀನುಶಿಕಾರಿಯಾಗದೆ ಹದಿನೈದು ದಿನಗಳೇ ಆಗಿ ಹೋಗಿದ್ದವು, ಸಿಕ್ಕ ಒಂದೆರಡು ಸೋಸಲು ಸಾಂಬಾರಿಗೆ ಸರಿಯಾಗಿ, ಅಲ್ಲಿ ಇಲ್ಲಿ ಕೂಲಿಮಾಡಿಕೊಂಡು ರಾಮಯ್ಯ ಹೇಗೋ ಬಿಕನಾಸಿ ಜೀವನದ ಗಾಲಿಯಿರದ ಚಕ್ಕಡಿಯನ್ನು ನೂಕುತ್ತಿದ್ದ ಅಥವಾ ಅದೇ ಇವನನ್ನು ದಿಕ್ಕುದಸೆಯಿಲ್ಲದೆ ಎಳೆಯುತ್ತಿತ್ತು. ನಲವತ್ತು ವರ್ಷದ ಹೆಂಡತಿಗೆ ಮತ್ತು ಐವತ್ತು ವರ್ಷದ ಆತನಿಗೆ ಜನಿಸಿದ ನಾಗನೆಂಬ ಮಗ ಹೇಗೋ ಹುಟ್ಟಿದರಾಯಿತೆಂದು ಹುಟ್ಟಿದಂತಾಗಿ ಐದು ವರ್ಷ ಸರಿದರೂ ನಾಲ್ಕೋ ಐದೋ ಕೆಜಿ ಮಾಂಸವನ್ನು ಎಲುಬು ಚಕ್ಕಳದ ದೇಹದಲ್ಲಿ ಅಲ್ಲಲ್ಲಿ ಅಡಗಿಸಿಟ್ಟುಕೊಂಡು ಒಂದು ಜೀವವಿರಬಹುದೇನೋ ಎಂದು ಅನಿಮಾನಿಸುವಂತೆ ಬದುಕಿದ್ದ. … Read more

ಕಥನ ಕವಿತೆ: ಫಕೀರ

    ಕಲಾಕುಂಜದ ಸಂತೆಯಲ್ಲಿ ಅಕ್ಕಪಕ್ಕ ಕಲಾಚಿತ್ರಗಳು ವರ್ಣಭಿತ್ತಿಗಳು ಎಣಿಕೆಗೆ ಸಿಗದಷ್ಟು ಹಾದಿಗುಂಟ ಮೈಲಿಗಟ್ಟಲೇ ಲಕ್ಷಲಕ್ಷ ಜನವೋ ಜನ ಸಾವಿರಾರು ಚಿತ್ರಕಲಾವಿದರು ತಮ್ಮ ತಮ್ಮ ಕಲ್ಪನೆಯ ಕನಸುಗಳೊಂದಿಗೆ ನಿಂತಿಹರು ಚಿತ್ರಪಟದ ಎದುರು -1- ಬಣ್ಣಗಳು ಅಂದು ಮಾತನಾಡುತ್ತಿವೆ ಚಿತ್ರಪಟಗಳು ಅತ್ತಿಂದತ್ತ ಓಡಾಡುತ್ತಿವೆ ಕಲಾರಸಿಕರ ಮನದೊಳಗೆ ಕಲಾವಿದನ ಕಲ್ಪನೆಯ ಚಿತ್ರಗಳು ಅಂದು ಮಾರಾಟಕ್ಕಿವೆ ಲಕ್ಷೋಪಲಕ್ಷ ಕಂಗಳ ಚಿತ್ತ ಅಕ್ಕಪಕ್ಕದಲಿ ನಿಂತ ಚಿತ್ರಪಟಗಳತ್ತ ಅರಸುತಿವೆ ಎಡಬಿಡದೆ ಕಣ್ಣುಗಳನು ಮಿಟುಕಿಸುತಿವೆ ತಮ್ಮನು ಕೊಳ್ಳುವ ರಸಿಕರತ್ತ ಆಸೆ ಕಂಗಳದಿ ಬೆರಗು ಹುಟ್ಟಿಸುವಂತೆ ಕಲಾವಿದನ … Read more